Tag: Sri Lanka

  • ಡ್ರೆಸ್ಸಿಂಗ್ ರೂಮಿನಲ್ಲಿ ಟೀಂ ಇಂಡಿಯಾ ಸಂಭ್ರಮ – ಅದ್ಭುತ ಗೆಲುವು ಎಂದ ದ್ರಾವಿಡ್

    ಡ್ರೆಸ್ಸಿಂಗ್ ರೂಮಿನಲ್ಲಿ ಟೀಂ ಇಂಡಿಯಾ ಸಂಭ್ರಮ – ಅದ್ಭುತ ಗೆಲುವು ಎಂದ ದ್ರಾವಿಡ್

    ಕೊಲಂಬೋ: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾದ ಜಯ ಅದ್ಭುತ ಗೆಲುವು ಎಂದು ಕೋಚ್ ರಾಹುಲ್ ದ್ರಾವಿಡ್ ಬಣ್ಣಿಸಿದ್ದಾರೆ.

    3 ವಿಕೆಟ್‍ಗಳ ರೋಚಕ ಗೆಲುವಿನ ನಂತರ ಡ್ರೆಸ್ಸಿಂಗ್ ರೂಮಿನಲ್ಲಿ ಸಂಭ್ರಮ ಮನೆ ಮಾಡಿತ್ತು. ಈ ವೇಳೆ ಆಟಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಶ್ರೀಲಂಕಾ ಉತ್ತಮವಾಗಿ ಆಟವಾಡಿತು. ನಾವು ಅತ್ಯುತ್ತಮವಾಗಿ ಚಾಂಪಿಯನ್ ತಂಡದಂತೆ ಪ್ರತಿಕ್ರಿಯಿಸಿದ್ದೇವೆ. ನೀವೆಲ್ಲರೂ ಚೆನ್ನಾಗಿ ಆಡಿದ್ದೀರಿ. ಅದ್ಭುತ ಗೆಲುವು ಎಂದು ಹೇಳಿ ತಂಡವನ್ನು ಹೊಗಳಿದ್ದಾರೆ.

    ಇನ್ನೂ ಒಂದು ಪಂದ್ಯ ಇರುವಂತೆ ಸರಣಿ ಗೆದ್ದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ದ್ರಾವಿಡ್ ಟ್ರೆಂಡಿಂಗ್ ಆಗಿದ್ದಾರೆ. ಕ್ರಿಕೆಟ್ ಅಭಿಮಾನಿಗಳು ದ್ರಾವಿಡ್ ಅವರ ಕೋಚ್ ಶೈಲಿಯನ್ನು ಮೆಚ್ಚಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

    2 ವಿಕೆಟ್ ತೆಗೆದು 69 ರನ್ ಹೊಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ದೀಪಕ್ ಚಹರ್ ರಾಹುಲ್ ದ್ರಾವಿಡ್ ಅವರ ಬಗ್ಗೆ ಮಾತನಾಡಿ, ಭಾರತ ಎ ತಂಡದಲ್ಲಿ ಆಡುತ್ತಿದ್ದಾಗ ರಾಹುಲ್ ದ್ರಾವಿಡ್ ಏಳನೇ ಕ್ರಮಾಂಕದಲ್ಲಿ ನನ್ನ ಸಾಮಥ್ರ್ಯವನ್ನು ಗುರುತಿಸಿದ್ದರು ಎಂದು ಉಲ್ಲೇಖಿಸಿದ್ದರು. ಇದನ್ನೂ ಓದಿ : ಸಹ ಆಟಗಾರನ ಫುಟ್‍ಬಾಲ್ ಆಟಕಂಡು ನೆಲದಲ್ಲಿ ಹೊರಳಾಡಿ ನಕ್ಕ ಕೊಹ್ಲಿ

    ಪಂದ್ಯದ ಸಮಯದಲ್ಲೇ ದೀಪಕ್ ಚಹರ್ ಅವರ ಸಹೋದರ ರಾಹುಲ್ ಚಹರ್ ಅವರಿಗೆ ದ್ರಾವಿಡ್ ಸಲಹೆ ನೀಡುತ್ತಿದ್ದ ಫೋಟೋಗಳು ಸಹ ವೈರಲ್ ಆಗುತ್ತಿದೆ. ಸಾವಿರ ಪದಗಳಲ್ಲಿ ಹೇಳುವುದನ್ನು ಒಂದು ಚಿತ್ರ ಹೇಳುತ್ತದೆ. ದ್ರಾವಿಡ್ ಟೀಂ ಇಂಡಿಯಾದ ಕೋಚ್ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

    ಭಾರತ ತಂಡವನ್ನು ಯಾವುದೇ ಕಾರಣಕ್ಕೂ ಕಡಿಮೆ ಅಂದಾಜು ಮಾಡಬೇಡಿ ಎಂದು ಆಸ್ಟ್ರೇಲಿಯಾ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಈ ಹಿಂದೆ ಹೇಳಿದ ಮಾತು ಮತ್ತೆ ನಿಜವಾಗಿದೆ ಎಂದು ಜನ ಹೇಳುತ್ತಿದ್ದಾರೆ

    https://twitter.com/arun_vatsa12/status/1417755157127852033

    ಗೆಲ್ಲಲು 276 ರನ್ ಗಳ ಗುರಿಯನ್ನು ಪಡೆದ ಭಾರತ ಸೂರ್ಯ ಕುಮಾರ್ ಯಾದವ್, ದೀಪಕ್ ಚಹರ್ ಅವರ ಅರ್ಧಶತಕದಿಂದ 49.1 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 277 ರನ್ ಹೊಡೆದು ಜಯಗಳಿಸಿತು.

    193 ರನ್ ಗಳಿಸಿದ್ದಾಗ ಸೂರ್ಯಕುಮಾರ್ ಯಾದವ್ 7ನೇಯವರಾಗಿ ಔಟಾದಾಗ ಭಾರತ ಸೋಲಿನತ್ತ ಮುಖಮಾಡಿತ್ತು. ಆದರೆ ಮುರಿಯದ 8ನೇ ವಿಕೆಟಿಗೆ ದೀಪಕ್ ಚಹರ್ ಮತ್ತು ಭುವನೇಶ್ವರ್ ಕುಮಾರ್ 84 ಎಸೆತಗಳಲ್ಲಿ 84 ರನ್ ಜೊತೆಯಾಟವಾಡಿ ಭಾರತ ಸರಣಿ ಗೆಲ್ಲುವಂತೆ ಮಾಡಿದರು.

    https://twitter.com/anshuman7345/status/1417742743485308928

    ಇದಕ್ಕೂ ಮೊದಲು 6ನೇ ವಿಕೆಟಿಗೆ ಸೂರ್ಯಕುಮಾರ್ ಯಾದವ್ ಮತ್ತು ಕೃನಾಲ್ ಪಾಂಡ್ಯ 44 ರನ್ ನಂತರ 7ನೇ ವಿಕೆಟಿಗೆ ಕೃನಾಲ್ ಪಾಂಡ್ಯ ಮತ್ತು ಚಹರ್ 49 ರನ್ ಜೊತೆಯಾಟವಾಡಿ ಪಂದ್ಯವನ್ನು ಭಾರತದತ್ತ ತಿರುಗಿಸಿದರು.

  • 8ನೇ ವಿಕೆಟಿಗೆ 84 ರನ್ ಜೊತೆಯಾಟ – ರೋಚಕ ಜಯ, ಭಾರತಕ್ಕೆ ಸರಣಿ

    8ನೇ ವಿಕೆಟಿಗೆ 84 ರನ್ ಜೊತೆಯಾಟ – ರೋಚಕ ಜಯ, ಭಾರತಕ್ಕೆ ಸರಣಿ

    – ಒಂದು ಪಂದ್ಯ ಇರುವಂತೆಯೇ ಸರಣಿ ಜಯ
    – ದೀಪಕ್ ಚಹರ್, ಸೂರ್ಯಕುಮಾರ್ ಯಾದವ್ ಚೊಚ್ಚಲ ಅರ್ಧಶತಕ

    ಕೊಲಂಬೋ: ಸೋಲಿನತ್ತ ಮುಖ ಮಾಡಿದ್ದ ಟೀಂ ಇಂಡಿಯಾ ಮೂರು ವಿಕೆಟ್‍ಗಳಿಂದ ಎರಡನೇ ಪಂದ್ಯವನ್ನು ಕೊನೆಯ ಓವರಿನಲ್ಲಿ ರೋಚಕವಾಗಿ ಜಯಗಳಿಸಿದೆ. ಈ ಮೂಲಕ ಇನ್ನು ಒಂದು ಪಂದ್ಯ ಇರುವಂತೆಯೇ ಏಕದಿನ ಸರಣಿಯನ್ನು ಗೆದ್ದುಕೊಂಡಿದೆ.

    ಗೆಲ್ಲಲು 276 ರನ್ ಗಳ ಗುರಿಯನ್ನು ಪಡೆದ ಭಾರತ ಸೂರ್ಯ ಕುಮಾರ್ ಯಾದವ್, ದೀಪಕ್ ಚಹರ್ ಅವರ ಅರ್ಧಶತಕದಿಂದ 49.1 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 277 ರನ್ ಹೊಡೆದು ಜಯಗಳಿಸಿತು.

    193 ರನ್ ಗಳಿಸಿದ್ದಾಗ ಸೂರ್ಯಕುಮಾರ್ ಯಾದವ್ 7ನೇಯವರಾಗಿ ಔಟಾದಾಗ ಭಾರತ ಸೋಲಿನತ್ತ ಮುಖಮಾಡಿತ್ತು. ಆದರೆ ಮುರಿಯದ 8ನೇ ವಿಕೆಟಿಗೆ ದೀಪಕ್ ಚಹರ್ ಮತ್ತು ಭುವನೇಶ್ವರ್ ಕುಮಾರ್ 84 ಎಸೆತಗಳಲ್ಲಿ 84 ರನ್ ಜೊತೆಯಾಟವಾಡಿ ಭಾರತ ಸರಣಿ ಗೆಲ್ಲುವಂತೆ ಮಾಡಿದರು.

    ಇದಕ್ಕೂ ಮೊದಲು 6ನೇ ವಿಕೆಟಿಗೆ ಸೂರ್ಯಕುಮಾರ್ ಯಾದವ್ ಮತ್ತು ಕೃನಾಲ್ ಪಾಂಡ್ಯ 44 ರನ್ ನಂತರ 7ನೇ ವಿಕೆಟಿಗೆ ಕೃನಾಲ್ ಪಾಂಡ್ಯ ಮತ್ತು ಚಹರ್ 49 ರನ್ ಜೊತೆಯಾಟವಾಡಿ ಪಂದ್ಯವನ್ನು ಭಾರತದತ್ತ ತಿರುಗಿಸಿದರು.

    ಭಾರತದ ಪರ ಸೂರ್ಯಕುಮರ್ ಯಾದವ್ 53 ರನ್(44 ಎಸೆತ, 6 ಬೌಂಡರಿ), ಮನೀಷ್ ಪಾಂಡೆ 37 ರನ್(31 ಎಸೆತ, 3 ಬೌಂಡರಿ) ಹೊಡೆದು ಔಟಾದರು. ದೀಪಕ್ ಚಹರ್ ಔಟಾಗದೇ 69 ರನ್(82 ಎಸೆತ, 7 ಬೌಂಡರಿ, 1 ಸಿಕ್ಸರ್), ಭುವನೇಶ್ವರ್ ಕುಮಾರ್ ಔಟಾಗದೇ 19 ರನ್(28 ಎಸೆತ, 2 ಬೌಂಡರಿ) ಹೊಡೆದರು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ಶ್ರೀಲಂಕಾ ಆವಿಷ್ಕಾ ಫೆರ್ನಾಂಡೋ 50 ರನ್(71 ಎಸೆತ, 4 ಬೌಂಡರಿ, 1 ಸಿಕ್ಸರ್), ಮಿನೋದ್ ಭನುಕಾ 36 ರನ್(42 ಎಸೆತ, 6 ಬೌಂಡರಿ), ಧನಂಜಯ ಡಿಸಿಲ್ವಾ 32 ರನ್(45 ಎಸೆತ, 1 ಬೌಂಡರಿ), ಚರಿತ್ ಅಸಲಂಕಾ 65 ರನ್(68 ಎಸೆತ, 6 ಬೌಂಡರಿ) ಹೊಡೆದರೆ ಕೊನೆಯಲ್ಲಿ ಚಮಿಕಾ ಕರುಣರತ್ನೆ 44 ರನ್(33 ಎಸೆತ, 5 ಬೌಂಡರಿ) ಹೊಡೆದ ಪರಿಣಾಮ ತಂಡ 275 ರನ್ ಗಳಿಸಿತು.

    ಭಾರತ ಇತರೇ ರೂಪದಲ್ಲಿ 21 ರನ್( ಲೆಗ್‍ಬೈ 6, ನೋಬಾಲ್ 2, 13 ವೈಡ್) ಬಿಟ್ಟುಕೊಟ್ಟಿತ್ತು. ಶುಕ್ರವಾರ ಮೂರನೇ ಹಾಗೂ ಕೊನೆಯ ಪಂದ್ಯ ಕೊಲಂಬೋದಲ್ಲಿ ನಡೆಯಲಿದೆ.

  • ಸಚಿನ್, ಸೆಹ್ವಾಗ್ ಬಳಿಕ ಆರಂಭಿಕನಾಗಿ ಶಿಖರ್ ಧವನ್ ನೂತನ ಮೈಲಿಗಲ್ಲು

    ಸಚಿನ್, ಸೆಹ್ವಾಗ್ ಬಳಿಕ ಆರಂಭಿಕನಾಗಿ ಶಿಖರ್ ಧವನ್ ನೂತನ ಮೈಲಿಗಲ್ಲು

    ಕೊಲಂಬೋ: ಭಾರತ ಕ್ರಿಕೆಟ್ ತಂಡದ ನಾಯಕ ಶಿಖರ್ ಧವನ್ ಏಕದಿನ ಕ್ರಿಕಟ್‍ನಲ್ಲಿ ಆರಂಭಿಕನಾಗಿ 10 ಸಾವಿರ ರನ್ ಬಾರಿಸುವ ಮೂಲಕ ನೂತನ ಮೈಲಿಗಲ್ಲು ಸಾಧಿಸಿದ್ದಾರೆ.

    ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಧವನ್ 86ರನ್(95 ಎಸೆತ, 6 ಬೌಂಡರಿ, 1 ಸಿಕ್ಸ್) ಸಿಡಿಸಿ ಮಿಂಚಿದ್ದರು. ಇದೇ ಪಂದ್ಯದಲ್ಲಿ 10,000ರನ್ ಮೈಲಿಗಲ್ಲು ನೆಟ್ಟಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಸುನಿಲ್ ಗವಾಸ್ಕರ್ ಹಾಗೂ ರೋಹಿತ್ ಶರ್ಮಾ ಬಳಿಕ ಆರಂಭಿಕನಾಗಿ 10 ಸಾವಿರ ರನ್ ಸಿಡಿಸಿದ ಭಾರತದ 5 ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಈ ಪಂದ್ಯದಲ್ಲಿ ಮೊದಲ ಬಾರಿಗೆ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದ ಧವನ್ ಶ್ರೀಲಂಕಾ ವಿರುದ್ಧ 1000 ರನ್ ಪೂರೈಸಿ ಸಂಭ್ರಮಪಟ್ಟರು. ಅದಾದ ಬಳಿಕ ಏಕದಿನ ಕ್ರಿಕೆಟ್‍ನಲ್ಲಿ 6,000 ರನ್ ಸಿಡಿಸಿದ 10 ಆಟಗಾರ ಎಂಬ ಹಿರಿಮೆಗೆ ಪಾತ್ರರಾದರು. ಇದನ್ನೂ ಓದಿ: ಹುಟ್ಟುಹಬ್ಬದಂದೇ ಟೀಂ ಇಂಡಿಯಾ ಕ್ಯಾಪ್ ಧರಿಸಿದ ಇಶಾನ್ ಕಿಶನ್

    ಏಕದಿನ ಕ್ರಿಕೆಟ್‍ನಲ್ಲಿ ಈವರೆಗೆ ಭಾರತ ತಂಡದ ಆಟಗಾರರರಾದ ಸಚಿನ್ ತೆಂಡೂಲ್ಕರ್ 18,426ರನ್, ವಿರಾಟ್ ಕೊಹ್ಲಿ 12,169ರನ್, ಸೌರವ್ ಗಂಗೂಲಿ 11,363ರನ್, ರಾಹುಲ್ ದ್ರಾವಿಡ್ 10,889ರನ್, ಎಂ.ಎಸ್ ಧೋನಿ 10,773ರನ್, ಮೊಹಮ್ಮದ್ ಅಜರುದ್ದೀನ್ 9,378ರನ್, ರೋಹಿತ್ ಶರ್ಮಾ 9,205ರನ್, ಯುವರಾಜ್ ಸಿಂಗ್ 8,701 ಮತ್ತು ವಿರೇಂದ್ರ ಸೆಹ್ವಾಗ್ 8,273ರನ್ ಇದೀಗ ಧವನ್ 6,063 ಸಿಡಿಸಿದ್ದಾರೆ. ಅದಲ್ಲದೆ ಅತೀ ವೇಗವಾಗಿ 6,000ರನ್ ಸಿಡಿಸಿದ ಎರಡನೇ ಆಟಗಾರನಾಗಿ ಧವನ್ ಗುರುತಿಸಿಕೊಂಡಿದ್ದಾರೆ.


    ಧವನ್ 140 ಇನ್ನಿಂಗ್ಸ್‍ಗಳಿಂದ 6,000 ರನ್ ಪೂರೈಸಿದರೆ, ವಿರಾಟ್ ಕೊಹ್ಲಿ 136 ಇನ್ನಿಂಗ್ಸ್ ಗಳಿಂದ 6,000ರನ್ ಚಚ್ಚಿದ್ದಾರೆ. ಉತ್ತಮ ಫಾರ್ಮ್‍ನಲ್ಲಿರುವ ಗಬ್ಬರ್ ಸಿಂಗ್ ಖ್ಯಾತಿಯ ಧವನ್ ಮುಂದಿನ ಟಿ20 ವಿಶ್ವಕಪ್‍ನಲ್ಲಿ ಭಾರತ ತಂಡದ ಆರಂಭಿಕ ಸ್ಥಾನ ಭದ್ರಪಡಿಸಿಕೊಳ್ಳುವ ಇರಾದೆಯಲ್ಲಿದ್ದಾರೆ.

  • ಹುಟ್ಟುಹಬ್ಬದಂದೇ ಟೀಂ ಇಂಡಿಯಾ ಕ್ಯಾಪ್ ಧರಿಸಿದ ಇಶಾನ್ ಕಿಶನ್

    ಹುಟ್ಟುಹಬ್ಬದಂದೇ ಟೀಂ ಇಂಡಿಯಾ ಕ್ಯಾಪ್ ಧರಿಸಿದ ಇಶಾನ್ ಕಿಶನ್

    ಕೊಲಂಬೋ: ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ ತಂಡದ ಪರ ಮೊದಲ ಏಕದಿನ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಸ್ಥಾನ ಸಂಪಾದಿಸುವ ಮೂಲಕ ಇಶಾನ್ ಕಿಶನ್ ತನ್ನ ಹುಟ್ಟುಹಬ್ಬದಂದೇ ಟೀಂ ಇಂಡಿಯಾ ಪರ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ.

    ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ಆರಂಭವಾಗಿದೆ. ಭಾರತ ತಂಡದ ಪರ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಭಾರತ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಈಗಾಗಲೇ ಭಾರತ ಪರ ಟಿ20 ತಂಡದಲ್ಲಿ ಕಾಣಿಸಿಕೊಂಡು ಉತ್ತಮ ಪ್ರದರ್ಶನ ತೋರಿರುವ ಈ ಇಬ್ಬರು ಆಟಗಾರರು ಏಕದಿನ ಪಂದ್ಯದಲ್ಲಿ ಯಾವರೀತಿ ಪ್ರದರ್ಶನ ತೋರಲಿದ್ದಾರೆ ಎಂಬ ಕೂತುಹಲ ಅಭಿಮಾನಿಗಳಲ್ಲಿ ಮೂಡಿದೆ.

    ಸೂರ್ಯಕುಮಾರ್ ಯಾದವ್ ಐಪಿಎಲ್‍ನಲ್ಲಿ 108 ಪಂದ್ಯವಾಡಿ 2,197 ರನ್ ಸಿಡಿಸಿದ್ದಾರೆ. ಇಂದು ನಿರೀಕ್ಷೆಯಂತೆ ಭಾರತ ತಂಡದ ಪರ ವಂಡೇ ಕ್ಯಾಪ್ ತೊಟ್ಟಿದ್ದಾರೆ. ಇದನ್ನೂ ಓದಿ: ಫ್ಯಾಬಿಯನ್ ಅಲೆನ್ ಫ್ಯಾಬುಲಸ್ ಕ್ಯಾಚ್ – ಫಿಂಚ್‍ಗೆ ಪಂಚ್

    ಇಂದು 23ನೇ ವರ್ಷಕ್ಕೆ ಕಾಳಿಟ್ಟ ಇಶಾನ್ ಕಿಶನ್ ತಂಡದ ನಾಯಕ ಶಿಖರ್ ಧವನ್ ಅವರಿಂದ ಕ್ಯಾಪ್ ಪಡೆದುಕೊಂಡರು. ಇಶಾನ್ ಐಪಿಎಲ್‍ನಲ್ಲಿ 56 ಪಂದ್ಯದಿಂದ 1,284 ರನ್ ಸಿಡಿಸಿದ್ದಾರೆ.

    ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ಕ್ ಗೆದ್ದು ಬ್ಯಾಟಿಂಗ್ ಆಯ್ದುಗೊಂಡಿದ್ದು, 40 ಓವರ್‍ ಗಳ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 186 ರನ್ ಗಳಿಸಿ ಬ್ಯಾಟಿಂಗ್ ಮುಂದುವರಿಸುತ್ತಿದೆ.

  • ಲಂಕಾ ಪ್ರವಾಸ- ದಾಖಲೆ ಬರೆಯುವ ತವಕದಲ್ಲಿ ಭುವಿ

    ಲಂಕಾ ಪ್ರವಾಸ- ದಾಖಲೆ ಬರೆಯುವ ತವಕದಲ್ಲಿ ಭುವಿ

    ಕೊಲಂಬೋ: ಭಾರತ ಹಾಗೂ ಶ್ರೀಲಂಕಾ ನಡುವಿನ ಚುಟುಕು ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿರುವ ಭುವನೇಶ್ವರ್ ಕುಮಾರ್ ಹಲವು ದಾಖಲೆಗಳನ್ನು ಬರೆಯಲು ಸಜ್ಜಾಗಿದ್ದಾರೆ.

    ಕಳೆದ ಎರಡು ವರ್ಷಗಳಿಂದ ಸತತ ಗಾಯದಿಂದಾಗಿ ಭಾರತ ತಂಡದಿಂದ ಪದೇ ಪದೇ ಹೊರಗುಳಿಯುತ್ತಿದ್ದ ಭುವನೇಶ್ವರ್ ಕುಮಾರ್ ಇದೀಗ ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ ತಂಡದಲ್ಲಿ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಈ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡದ ಖಾಯಂ ನಾಯಕ ವಿರಾಟ್ ಕೊಹ್ಲಿ ಸಹಿತ ಹಿರಿಯ ಆಟಗಾರರು ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದಾಗಿ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

    ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಭುವನೇಶ್ವರ್ ಮುಂದಿನ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಸ್ಥಾನ ಭದ್ರ ಪಡಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. ಇದರೊಂದಿಗೆ ವೈಯಕ್ತಿಕವಾಗಿ ಹಲವು ದಾಖಲೆಗಳ ಸನಿಹದಲ್ಲಿ ಭುವಿ ಇದ್ದಾರೆ. ಇದನ್ನೂ ಓದಿ: ಸಹಆಟಗಾರನಿಗೆ ಕನ್ನಡ ಮೇಷ್ಟ್ರಾದ ಗೌತಮ್

    ಭಾರತ ತಂಡದಲ್ಲಿರುವ ಸ್ವಿಂಗ್ ಸ್ಪೇಷಲಿಸ್ಟ್ ಎನಿಸಿಕೊಂಡಿರುವ ಭುವಿ ಚೆಂಡನ್ನು ಎರಡೂ ಕಡೆಗೆ ಸ್ವಿಂಗ್ ಮಾಡುವುದರಲ್ಲಿ ಎತ್ತಿದ ಕೈ. ಈಗಾಗಲೇ ಭಾರತ ತಂಡದ ಪರ ಆಡಿ, 117 ಏಕದಿನ ಪಂದ್ಯದಿಂದ 138 ವಿಕೆಟ್, 48 ಟಿ2ಂ ಪಂದ್ಯಗಳಿಂದ 45 ವಿಕೆಟ್ ಮತ್ತು ಟೆಸ್ಟ್ ಕ್ರಿಕೆಟ್‍ನಲ್ಲಿ 21 ಪಂದ್ಯಗಳಿಂದ 63 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

    ಇದೀಗ ಲಂಕಾ ವಿರುದ್ಧ 3 ಏಕದಿನ ಮತ್ತು 3 ಟಿ20 ಪಂದ್ಯಗಳು ನಡೆಯಲಿದೆ ಈ ಸರಣಿಯಲ್ಲಿ ಕೆಲ ಮೈಲಿಗಲ್ಲಿನತ್ತ ಭುವಿ ಚಿತ್ತ ನೆಟ್ಟಿದ್ದಾರೆ. ಏಕದಿನ ಮಾದರಿಯಲ್ಲಿ ಈಗಾಗಲೇ 138 ವಿಕೆಟ್ ಪಡೆದಿರುವ ಭುವಿ ಇನ್ನೂ 12 ವಿಕೆಟ್ ಪಡೆದರೆ 150 ವಿಕೆಟ್ ಕಿತ್ತ ಸಾಧನೆ ಮಾಡಲಿದ್ದಾರೆ. ಈ ಮೂಲಕ 150 ವಿಕೆಟ್ ಕಿತ್ತ ಭಾರತದ 14ನೇ ಅಟಗಾರ ಎಂಬ ಮೈಲಿಗಲ್ಲಿನ ಸನಿಹದಲ್ಲಿದ್ದಾರೆ.

    ಟಿ20 ಕ್ರಿಕೆಟ್‍ನಲ್ಲಿ ಬೆಸ್ಟ್ ಬೌಲರ್ ಎನಿಸಿಕೊಂಡಿರುವ ಭುವಿ ಈಗಾಗಲೇ 45 ವಿಕೆಟ್ ಕಬಳಿಸಿದ್ದಾರೆ. ಇನ್ನೂ 5 ವಿಕೆಟ್ ಕಿತ್ತರೆ ವಿಕೆಟ್‍ಗಳ ಅರ್ಧಶತಕ ದಾಖಲಿಸಲಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‍ನಲ್ಲಿ 50 ವಿಕೆಟ್ ಕಿತ್ತ ಭಾರತ ಎರಡನೇ ವೇಗಿ ಎನಿಸಿಕೊಳ್ಳಲಿದ್ದಾರೆ. ಈಗಾಗಲೇ ಜಸ್ಪ್ರೀತ್ ಬೂಮ್ರಾ 50 ವಿಕೆಟ್ ಕಿತ್ತ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

    ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಮತ್ತು ಟಿ20 ಸರಣಿ ಜುಲೈ 13 ರಂದು ಪ್ರಾರಂಭಗೊಳ್ಳಲಿದೆ.

  • ಶ್ರೀಲಂಕಾಗೆ ಹಾರಿದ ಧವನ್ ನೇತೃತ್ವದ ಟೀಂ ಇಂಡಿಯಾ

    ಶ್ರೀಲಂಕಾಗೆ ಹಾರಿದ ಧವನ್ ನೇತೃತ್ವದ ಟೀಂ ಇಂಡಿಯಾ

    ಮುಂಬೈ: ಶ್ರೀಲಂಕಾ ವಿರುದ್ಧದ ನಿಗದಿತ ಓವರ್‍ ಗಳ ಪಂದ್ಯಾಟಕ್ಕಾಗಿ ಶಿಖರ್ ಧವನ್ ನೇತೃತ್ವದ 20 ಸದಸ್ಯರ ಭಾರತ ತಂಡ ಶ್ರೀಲಂಕಾಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದೆ.

    ಈ ಕುರಿತು ಟ್ವಿಟ್ಟರ್‍ ನಲ್ಲಿ ಟ್ವೀಟ್ ಮಾಡುವ ಮೂಲಕ ಬಿಸಿಸಿಐ ಭಾರತ ತಂಡಕ್ಕೆ ಶುಭ ಹಾರೈಸಿದೆ. ಶ್ರೀಲಂಕಾ ಪ್ರವಾಸದಲ್ಲಿರುವ ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸುತ್ತಿದ್ದು, ಕನ್ನಡಿಗ ರಾಹುಲ್ ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಈಗಾಗಲೇ ಭಾರತ ತಂಡ ಮುಂಬೈನಲ್ಲಿ ಕ್ವಾರಂಟೈನ್ ಮುಗಿಸಿ ಇಂದು ಶ್ರೀಲಂಕಾಗೆ ಪ್ರವಾಸ ಕೈಗೊಂಡಿದೆ. ಇದನ್ನೂ ಓದಿ: ಐಪಿಎಲ್ ಬಳಿಕ ಯುಎಇನಲ್ಲಿ ಟಿ20 ವಿಶ್ವಕಪ್ ಫಿಕ್ಸ್?

    ಭಾರತ ಕ್ರಿಕೆಟ್ ತಂಡದ ಖಾಯಂ ನಾಯಕ ವಿರಾಟ್ ಕೊಹ್ಲಿ ಸಹಿತ ಹಿರಿಯ ಆಟಗಾರರು ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದಾಗಿ ಹೊಸ ಪ್ರತಿಭೆಗಳನ್ನೊಳಗೊಂಡ ಭಾರತ ತಂಡ ಶ್ರೀಲಂಕಾಗೆ ತೆರಳಿದೆ. ಬಳಿಕ ಅಲ್ಲಿ ಕೆಲ ದಿನ ಕ್ವಾರಂಟೈನಲ್ಲಿದ್ದು ಅಭ್ಯಾಸ ಅರಂಭಿಸಲಿದೆ. ಇದನ್ನೂ ಓದಿ: ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ 

    ಐಪಿಎಲ್‍ನಲ್ಲಿ ಅಬ್ಬರಿಸಿದ್ದ ಯುವ ಬ್ಯಾಟ್ಸ್‌ಮ್ಯಾನ್ ಗಳಾದ ದೇವದತ್ ಪಡಿಕ್ಕಲ್ ಮತ್ತು ಋತುರಾಜ್ ಗಾಯಕ್ವಾಡ್ ತಂಡ ಸೇರಿಕೊಂಡಿದ್ದಾರೆ. ಐಪಿಎಲ್‍ನಲ್ಲಿ ಅಬ್ಬರದ ಬ್ಯಾಟಿಂಗ್‍ಗೆ ಹೆಸರುವಾಸಿಯಾದ ಎಡಗೈ ಬ್ಯಾಟ್ಸ್‌ಮ್ಯಾನ್ ನಿತೀಶ್ ರಾಣಾ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. 2 ಜೋಡಿ ಸಹೋದರರಾದ ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ ಮತ್ತು ದೀಪಕ್ ಚಹರ್, ರಾಹುಲ್ ಚಹರ್, ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆ ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್‍ಗೆ ಪಾದಾರ್ಪಣೆ ಮಾಡಿದ್ದ ಎಡಗೈ ವೇಗದ ಬೌಲರ್ ಚೇತನ್ ಸಕಾರಿಯಾ ತಂಡಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಭಾರತ ತಂಡದ ಪರ ಆಡುವ ಅವಕಾಶ ಸಿಕ್ಕಂತಾಗಿದೆ. ಆಲ್‍ರೌಂಡರ್ ಕೃಷ್ಣಪ್ಪ ಗೌತಮ್, ಸ್ಪಿನ್ನರ್ ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ವೇಗಿ ನವದೀಪ್ ಸೈನಿ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ.

    ಶ್ರೀಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಮತ್ತು 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಕೊರೊನಾ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಪಂದ್ಯಗಳು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕದಿನ ಪಂದ್ಯಗಳು ಜುಲೈ 13, 16 ಮತ್ತು 18 ರಂದು ನಡೆಯಲಿದ್ದು, ಟಿ20 ಪಂದ್ಯಗಳು ಜುಲೈ 21, 23 ಮತ್ತು 25 ರಂದು ನಡೆಯಲಿದೆ.

    ಭಾರತ ತಂಡ
    ಶಿಖರ್ ಧವನ್ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಪೃಥ್ವಿ ಶಾ, ದೇವದತ್ತ್ ಪಡಿಕ್ಕಲ್, ಋತುರಾಜ್ ಗಾಯಕ್ವಡ್,ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಜುವೇಂದ್ರ ಚಹಲ್, ರಾಹುಲ್ ಚಹರ್, ದೀಪಕ್ ಚಹರ್, ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ನವದೀಪ್ ಸೈನಿ, ಚೇತನ್ ಸಕರಿಯಾ

    ನೆಟ್ ಬೌಲರ್
    ಅರ್ಷ್‍ದೀಪ್ ಸಿಂಗ್, ಸಾಯಿ ಕಿಶೋರ್, ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಸಿಮಾರ್ಜೀತ್ ಸಿಂಗ್ ಆಯ್ಕೆಯಾಗಿದ್ದಾರೆ.

  • ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

    ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

    ಮುಂಬೈ: ಶ್ರೀಲಂಕಾ ವಿರುದ್ಧ ನಿಗದಿತ ಓವರ್‍ಗಳ ಪಂದ್ಯಾಟಕ್ಕೆ ಭಾರತ ತಂಡ ಪ್ರಕಟವಾಗಿದೆ. ತಂಡವನ್ನು ಆರಂಭಿಕ ಆಟಗಾರ ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಇಬ್ಬರು ಕನ್ನಡಿಗರಾದ ಮನೀಶ್ ಪಾಂಡೆ, ಕೆ.ಗೌತಮ್ ಮತ್ತು ದೇವದತ್ ಪಡಿಕ್ಕಲ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

    ಮುಂಬರುವ ಜುಲೈ ತಿಂಗಳಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಇತರೆ ಹಿರಿಯ ಆಟಾಗರರು ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದ ಹೊಸ ಪ್ರತಿಭೆಗಳನ್ನೊಳಗೊಂಡ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡವನ್ನು ಪ್ರಕಟಿಸಿದೆ. ಅನುಭವಿ ಆಟಗಾರ ಶಿಖರ್ ಧವನ್ ಗೆ ತಂಡದ ನಾಯಕತ್ವ ನೀಡಲಾಗಿದೆ. ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ. ಇದನ್ನೂ ಓದಿ:ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್!

    ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಲಂಕಾ ಪ್ರವಾಸಕ್ಕೆ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಐಪಿಎಲ್‍ನಲ್ಲಿ ಅಬ್ಬರಿಸಿದ್ದ ಯುವ ಬ್ಯಾಟ್ಸ್‌ಮ್ಯಾನ್ ಗಳಾದ ದೇವದತ್ ಪಡಿಕ್ಕಲ್ ಮತ್ತು ಋತುರಾಜ್ ಗಾಯಕ್ವಾಡ್ ತಂಡ ಸೇರಿಕೊಂಡಿದ್ದಾರೆ. ಐಪಿಎಲ್‍ನಲ್ಲಿ ಅಬ್ಬರದ ಬ್ಯಾಟಿಂಗ್‍ಗೆ ಹೆಸರುವಾಸಿಯಾದ ಎಡಗೈ ಬ್ಯಾಟ್ಸ್‌ಮ್ಯಾನ್ ನಿತೀಶ್ ರಾಣಾ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. 2 ಜೋಡಿ ಸಹೋದರರಾದ ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ ಮತ್ತು ದೀಪಕ್ ಚಹರ್, ರಾಹುಲ್ ಚಹರ್, ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆ ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್‍ಗೆ ಪಾದಾರ್ಪಣೆ ಮಾಡಿದ್ದ ಎಡಗೈ ವೇಗದ ಬೌಲರ್ ಚೇತನ್ ಸಕಾರಿಯಾ ತಂಡಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಭಾರತ ತಂಡದ ಪರ ಆಡುವ ಅವಕಾಶ ಸಿಕ್ಕಂತಾಗಿದೆ. ಆಲ್‍ರೌಂಡರ್ ಕೃಷ್ಣಪ್ಪ ಗೌತಮ್, ಸ್ಪಿನ್ನರ್ ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ವೇಗಿ ನವದೀಪ್ ಸೈನಿ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: 2007ರ ಟಿ20ಗೆ ನಾನು ನಾಯಕನಾಗುವ ನಿರೀಕ್ಷೆ ಹೊಂದಿದ್ದೆ, ಆದರೆ ಧೋನಿ ಆಯ್ಕೆಯಾದ್ರು – ಯುವಿ

    ಶ್ರೀ ಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಮತ್ತು 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಕೊರೊನಾ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಪಂದ್ಯಗಳನ್ನು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕದಿನ ಪಂದ್ಯಗಳು ಜುಲೈ 13, 16 ಮತ್ತು 18 ರಂದು ನಡೆಯಲಿದ್ದು, ಟಿ20 ಪಂದ್ಯಗಳು ಜುಲೈ 21, 23 ಮತ್ತು 25 ರಂದು ನಡೆಯಲಿದೆ. ಇದನ್ನೂ ಓದಿ: ಕೊಹ್ಲಿಗೆ ಓರ್ವ ನ್ಯೂಜಿಲೆಂಡ್ ಬೌಲರ್‌ನಿಂದ ಕಂಟಕವಿದೆ ಎಂದ ಬಾಲ್ಯದ ಕೋಚ್

    ಭಾರತ ತಂಡ
    ಶಿಖರ್ ಧವನ್ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಪೃಥ್ವಿ ಶಾ, ದೇವದತ್ತ್ ಪಡಿಕ್ಕಲ್, ಋತುರಾಜ್ ಗಾಯಕ್ವಡ್,ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಜುವೇಂದ್ರ ಚಹಲ್, ರಾಹುಲ್ ಚಹರ್, ದೀಪಕ್ ಚಹರ್, ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ನವದೀಪ್ ಸೈನಿ, ಚೇತನ್ ಸಕರಿಯಾ

    ನೆಟ್ ಬೌಲರ್
    ಅರ್ಷ್‍ದೀಪ್ ಸಿಂಗ್, ಸಾಯಿ ಕಿಶೋರ್, ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಸಿಮಾರ್ಜೀತ್ ಸಿಂಗ್ ಆಯ್ಕೆಯಾಗಿದ್ದಾರೆ.

  • ದ್ರಾವಿಡ್ ಈಗ ಟೀಂ ಇಂಡಿಯಾದ ಕೋಚ್

    ದ್ರಾವಿಡ್ ಈಗ ಟೀಂ ಇಂಡಿಯಾದ ಕೋಚ್

    ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಗ್ರೇಟ್ ವಾಲ್ ಖ್ಯಾತಿಯ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಜುಲೈನಲ್ಲಿ ನಡೆಯುವ ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಪಂದ್ಯಗಳಿಗೆ ಭಾರತ ತಂಡದ ಕೋಚ್ ಆಗಿ ನೇಮಕವಾಗಿದ್ದಾರೆ.

    ದ್ರಾವಿಡ್ ಈ ಹಿಂದೆ 2014ರಲ್ಲಿ ಭಾರತ ತಂಡದ ಬ್ಯಾಟಿಂಗ್ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಅದಾದ ಬಳಿಕ ಇದೀಗ ಮತ್ತೆ ಭಾರತ ತಂಡಕ್ಕೆ ಸೇವೆಗೈಯುವ ಅವಕಾಶ ಸಿಕ್ಕಿದ್ದು ಅದು ಕೂಡ ತಂಡದ ಮುಖ್ಯ ಕೋಚ್ ಆಗಿ ಅವಕಾಶ ಸಿಕ್ಕಿದೆ.

    ಶ್ರೀಲಂಕಾ ಸರಣಿಗೆ ಭಾರತ ತಂಡದ ಕೋಚ್ ಆಗಿ ದ್ರಾವಿಡ್ ಅವರು ಆಯ್ಕೆಯಾಗುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

    ಭಾರತ ತಂಡದ ಈಗಿನ ಕೋಚ್ ರವಿಶಾಸ್ತ್ರಿ, ಭರತ್ ಅರುಣ್ ಮತ್ತು ವಿಕ್ರಮ್ ರಾಥೋರ್ ಅವರು ಇಂಗ್ಲೆಂಡ್‍ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಭಾರತ ತಂಡದ ಕೋಚ್‍ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಡುವೆ ಭಾರತದ ಇನ್ನೊಂದು ತಂಡವನ್ನು ಶ್ರೀಲಂಕಾ ಪ್ರವಾಸಕ್ಕೆ ಕಳುಹಿಸಿಕೊಡಲು ಬಿಸಿಸಿಐ ತೀರ್ಮಾನಿಸಿದೆ. ಈ ತಂಡಕ್ಕೆ ದ್ರಾವಿಡ್ ಅವರನ್ನು ತಂಡದ ಮುಖ್ಯ ತರಬೇತುದಾರರಾಗಿ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

    ಶ್ರೀಲಂಕಾ ಪ್ರವಾಸಕ್ಕೆ ಭಾರತದ ಯುವ ತಂಡವನ್ನು ಕಳುಹಿಸಿಕೊಡಲು ನಿರ್ಧರಿಸಿದ್ದು, ದ್ರಾವಿಡ್ ಈ ತಂಡದ ಕೋಚ್ ಆಗಿ ಕೆಲಸ ನಿರ್ವಹಿಸಲಿದ್ದಾರೆ. ಅವರು ಈ ಹಿಂದೆ ಅಂಡರ್-19 ತಂಡದ ಕೋಚ್ ಆಗಿದ್ದರಿಂದಾಗಿ ಯುವ ಆಟಗಾರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಮತ್ತು ಆಟಗಾರರು ಕೂಡ ದ್ರಾವಿಡ್‍ರೊಂದಿಗೆ ಉತ್ತಮ ಒಡನಾಟ ಹೊಂದಿರುವುದರಿಂದಾಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

    ರಾಹುಲ್ ದ್ರಾವಿಡ್ ಅವರು 2019ರಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಭಾರತದ ಅಂಡರ್-19 ತಂಡ, ಭಾರತ ಎ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಇದರೊಂದಿಗೆ ಭಾರತ ಯುವ ಆಟಗಾರರಿಗೆ ಉತ್ತಮವಾದ ಮಾರ್ಗದರ್ಶನ ನೀಡಿ ಭಾರತ ತಂಡವನ್ನು ಬಲಿಷ್ಠವಾಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

    ಶ್ರೀಲಂಕಾ ಸರಣಿಗಾಗಿ ಭಾರತ ತಂಡವನ್ನು ಈ ತಿಂಗಳ ಅಂತ್ಯಕ್ಕೆ ಆಯ್ಕೆ ಮಾಡವ ನಿರೀಕ್ಷೆ ಇದ್ದು, ಈ ಸರಣಿಯಲ್ಲಿ 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಯುವ ಭಾರತ ತಂಡ ಆಡಲಿದೆ. ಜುಲೈ 13ರಿಂದ ಸರಣಿ ಆರಂಭಗೊಳ್ಳಲಿದೆ.

    ಭಾರತದ ಇನ್ನೊಂದು ತಂಡ ಇಂಗ್ಲೆಂಡ್‍ನಲ್ಲಿ ನಡೆಯಲಿರುವ ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನಲ್ಲಿ ಕಾಣಿಸಿಕೊಳ್ಳಲಿದೆ. ಈ ತಂಡವನ್ನು ಈಗಾಗಲೇ ಬಿಸಿಸಿಐ ಪ್ರಕಟಿಸಿದ್ದು ಈ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ.

  • ವಿಚ್ಛೇದಿತೆಯೆಂದು ವೇದಿಕೆ ಮೇಲೆಯೇ ಮಿಸಸ್ ಶ್ರೀಲಂಕಾ ವಿಜೇತೆ ಕಿರೀಟ ಕಸಿದ್ರು!

    ವಿಚ್ಛೇದಿತೆಯೆಂದು ವೇದಿಕೆ ಮೇಲೆಯೇ ಮಿಸಸ್ ಶ್ರೀಲಂಕಾ ವಿಜೇತೆ ಕಿರೀಟ ಕಸಿದ್ರು!

    ಕೋಲಂಬೋ: ಶ್ರೀಲಂಕಾದ ಫೇಮಸ್ ಮಿಸಸ್ ಶ್ರೀಲಂಕಾ ಸೌಂದರ್ಯ ಸ್ಪರ್ಧೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ವಿಜೇತೆ ತಲೆಯ ಮೇಲಿದ್ದ ಕಿರೀಟವನ್ನು ಕಸಿದುಕೊಂಡಿರುವ ಘಟನೆ ನಡೆದಿದೆ.

    ಭಾನುವಾರ ರಾತ್ರಿ ಮಿಸಸ್ ಶ್ರೀಲಂಕಾ ಸೌಂದರ್ಯ ಸ್ಪರ್ಧೆಯಲ್ಲಿ ವೇದಿಕೆ ಮೇಲೆ ವಾಕ್ ಮಾಡಿ ಪುಷ್ಪಿಕಾ ಡಿ ಸಿಲ್ವಾ ಮಿಸಸ್ ಶ್ರೀಲಂಕಾ ವಿಜೇತೆಯಾಗಿ ಕಿರೀಟ ಧರಿಸಿದರು. ಆದರೆ ಕೆಲವೇ ಕ್ಷಣಗಳಲ್ಲಿ 2019ರ ಶ್ರೀಲಂಕಾದ ವಿಜೇತೆ ವಲ್ರ್ಡ್ ಕರೋಲಿನ್ ಜೂರಿ, ನಿಯಮದ ಪ್ರಕಾರ ವಿಚ್ಛೇದಿತ ಮಹಿಳೆಯರು ಸ್ಪರ್ಧೆ ಭಾಗವಹಿಸುವಂತಿಲ್ಲ. ಎಂದು ಪುಷ್ಪಿಕಾ ಡಿ ಸಿಲ್ವಾ ತಲೆ ಮೇಲೆ ಧರಿಸಿದ್ದ ಕಿರೀಟವನ್ನು ಕಸಿದುಕೊಂಡಿದ್ದಾರೆ.

    ಕೂಡಲೇ ಪುಷ್ಪಿಕಾ ಡಿ ಸಿಲ್ವಾ ಅವರು ಕೂಡಲೇ ಸ್ಥಳದಿಂದ ಹೊರಟು ಹೋದರು. ಆದರೆ ಭಾನುವಾರ ನಡೆದ ಈ ಘಟನೆ ವೇಳೆ ತಲೆಯ ಮೇಲಿದ್ದ ಕಿರೀಟವನ್ನು ಎಳೆದಾಗ ತಮ್ಮ ತಲೆಗೆ ಪೆಟ್ಟಾಗಿರುವುದಾಗಿ ಪುಷ್ಪಿಕಾ ಡಿ ಸಿಲ್ವಾ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ಸ್ಪರ್ಧೆಯ ಆಯೋಜಕರು ಕೂಡ ಪುಷ್ಪಿಕಾ ವಿಚ್ಛೇದಿತಾ ಮಹಿಳೆಯಲ್ಲ. ಹಾಗಾಗಿ ಅವರ ಕಿರೀಟವನ್ನು ಹಿಂದಿರುಗಿಸಬೇಕು ಎಂದು ತಿಳಿಸಿದ್ದರು. ಇದೀಗ ಮಂಗಳವಾರ ಕಿರೀಟವನ್ನು ಮತ್ತೆ ಪುಷ್ಪಿಕಾ ಡಿ ಸಿಲ್ವಾರವರಿಗೆ ಹಿಂದಿರುಗಿಸಲಾಗಿದೆ.

  • ಕ್ಷೇತ್ರ ರಕ್ಷಣೆಗೆ ಅಡ್ಡಿ, ಗುಣತಿಲಕ ಔಟ್‌ – ವಿಂಡೀಸ್‌ ವಿರುದ್ಧ ಅಭಿಮಾನಿಗಳ ಕಿಡಿ

    ಕ್ಷೇತ್ರ ರಕ್ಷಣೆಗೆ ಅಡ್ಡಿ, ಗುಣತಿಲಕ ಔಟ್‌ – ವಿಂಡೀಸ್‌ ವಿರುದ್ಧ ಅಭಿಮಾನಿಗಳ ಕಿಡಿ

    – ವಿವಾದಕ್ಕೆ ಕಾರಣವಾದ ಔಟ್‌ ನಿರ್ಧಾರ
    – ಗುಣತಿಲಕ ಬಳಿ ಕ್ಷಮೆ ಕೇಳಿದ ಪೊಲಾರ್ಡ್‌

    ಆ್ಯಂಟಿಗುವಾ: ವೆಸ್ಟ್‌ಇಂಡೀಸ್‌ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಬ್ಯಾಟ್ಸ್‌ಮನ್ ಧನುಷ್ಕಾ ಗುಣತಿಲಕ ಔಟ್‌ ನಿರ್ಧಾರ ಈಗ ವಿವಾದಕ್ಕೆ ಕಾರಣವಾಗಿದೆ.

    ನಡೆದಿದ್ದು ಏನು?
    ಕೀರಾನ್ ಪೊಲಾರ್ಡ್ ಎಸೆದ ಇನ್ನಿಂಗ್ಸ್‌ನ 22ನೇ ಓವರ್‌ನ ಮೊದಲ ಎಸೆತದಲ್ಲಿ ಗುಣತಿಲಕ ಒಂಟಿ ರನ್ ಕಸಿಯಲು ಮುಂದಾಗಿದ್ದರು. ಈ ವೇಳೆ ಪೊಲಾರ್ಡ್‌ ವೇಗವಾಗಿ ಬಾಲ್‌ ಹಿಡಿಯಲು ಮುಂದಕ್ಕೆ ಬರುತ್ತಿದ್ದರು. ಪೊಲಾರ್ಡ್‌ ಬರುತ್ತಿರುವುದನ್ನು ಗಮನಿಸಿದ ಗುಣತಿಲಕ ಒಂದು ರನ್‌ ಓಡುವ ನಿರ್ಧಾರದಿಂದ ಹಿಂದಕ್ಕೆ ಸರಿದು ಮರಳಿ ಸ್ಟ್ರೈಕ್‌ನತ್ತ ಹಿಂದಕ್ಕೆ ಓಡಿದ್ದಾರೆ. ಓಡುವ ಸಂದರ್ಭದಲ್ಲಿ ಗುಣತಿಲಕ ಚೆಂಡಿನ ಮೇಲೆ ಕಾಲಿಟ್ಟಿದ್ದಾರೆ. ಕಾಲಿನ ಹಿಂಬದಿಗೆ ತಾಗಿದ ಚೆಂಡು ಕೀಪರ್‌ನತ್ತ ಸಾಗಿದೆ.

    https://twitter.com/ImKanup/status/1370085333530857472

    ಬಾಲ್‌ ಹಿಡಿಯಲು ಗುಣತಿಲಕ ಅಡ್ಡಿಯಾದ ಕಾರಣ ರನೌಟ್‌ ಪ್ರಯತ್ನ ವಿಫಲಗೊಂಡಿತು. ಇದರಿಂದ ಸಿಟ್ಟಾದ ಪೊಲಾರ್ಡ್‌ ಕ್ಷೇತ್ರ ರಕ್ಷಣೆಗೆ ಅಡ್ಡಿ ಪಡಿಸಿದ ಕಾರಣ ನೀಡಿ ಅಂಪೈರ್‌ ಬಳಿ ಔಟ್‌ ನೀಡಲು ಮನವಿ ಮಾಡಿದರು.

    ಫೀಲ್ಡ್‌ ಅಂಪೈರ್‌ ಜೋ ವಿಲ್ಸನ್‌ ಮೂರನೇ ಅಂಪೈರ್‌ಗೆ ತೀರ್ಪನ್ನು ನೀಡುವ ಮೊದಲು ಸಾಫ್ಟ್‌ ಸಿಗ್ನಲ್‌ ಔಟ್‌ಎಂದು ತೀರ್ಪು ನೀಡಿದ್ದರು. ರಿಪ್ಲೇ ವೇಳೆ ಗುಣತಿಲಕ ಉದ್ದೇಶಪೂರ್ವಕವಾಗಿ ಚೆಂಡಿಗೆ ಅಡ್ಡಿ ಪಡಿಸಿರುವುದು ಸ್ಪಷ್ಟವಾಗಿ ಕಾಣದೇ ಇದ್ದರೂ ಫೀಲ್ಡ್‌ ಅಂಪೈರ್‌ ಔಟ್‌ ತೀರ್ಮಾನ ನೀಡಿದ ಹಿನ್ನೆಲೆಯಲ್ಲಿ ಮೂರನೇ ಅಂಪೈರ್‌ ಔಟ್‌ ಎಂದು ತೀರ್ಪು ನೀಡಿದರು.

    ಉದ್ದೇಶಪೂರ್ವಕವಾಗಿ ಯಾವುದೇ ತಪ್ಪು ಎಸಗದಿದ್ದರೂ ಫೀಲ್ಡಿಂಗ್‌ಗೆ‌ ಅಡ್ಡಿಯಾಗಿದ್ದಾರೆ ಎಂಬ ಐಸಿಸಿ ನಿಯಮದನ್ವಯ ಅಂಪೈರ್ ಔಟ್ ತೀರ್ಪು ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಹತ್ವದ ಪಂದ್ಯದಲ್ಲಿ ಅಂಪೈರ್‌ಗಳಿಂದ ಈ ರೀತಿಯ ತೀರ್ಪುಗಳು ಪ್ರಕಟವಾದರೆ ಗೆಲ್ಲುವ ತಂಡ ಸೋಲಬಹುದು ಎಂದು ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಂಡೀಸ್‌ ಆಟಗಾರರು ಕ್ರೀಡಾ ಸ್ಪೂರ್ತಿ ಮರೆತು ಆಡಿದ್ದಾರೆ ಎಂದು ಕ್ರಿಕೆಟ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    https://twitter.com/ShuvoAlHossain/status/1370076093613404160

    ಕ್ಷಮೆಯಾಚಿಸಿದ ಪೊಲಾರ್ಡ್‌: ಪಂದ್ಯ ಮುಗಿದ ಬಳಿಕ ಪೊಲಾರ್ಡ್‌ ಧನುಷ್ಕಾ ಗುಣತಿಲಕ ಅವರ ಬಳಿ ಕ್ಷಮೆಯಾಚಿಸಿದ್ದಾರೆ. ಪಂದ್ಯ ನಡೆಯುವಾಗ ಈ ವಿಚಾರ ತಿಳಿದಿರಲಿಲ್ಲ. ರಿಪ್ಲೇ ನೋಡುವಾಗ ನೋಡಿದ ಬಳಿಕವಷ್ಟೇ ನಾನು ಅಡ್ಡಿ ಮಾಡಿಲ್ಲ ಎನ್ನುವುದು ಅವರ ಗಮನಕ್ಕೆ ಬಂದಿದೆ ಎಂದು ಗುಣತಿಲಕ ಹೇಳಿದ್ದಾರೆ.

    ವಿಂಡೀಸ್‌ಗೆ ಜಯ : ವಿಂಡೀಸ್ ಮೊದಲ ಏಕದಿನ ಪಂದ್ಯದಲ್ಲಿ ಎಂಟು ವಿಕೆಟ್ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 49 ಓವರ್‌ಗಳಲ್ಲಿ 232 ರನ್‌ಗಳಿಗೆ ಆಲೌಟ್‌ ಆಗಿತ್ತು. ಆರಂಭಿಕ ಆಟಗಾರ ಶಾಯ್‌ ಹೋಪ್‌ ಅವರ 110 ರನ್‌ಗಳ ನೆರವಿನಿಂದ ವಿಂಡೀಸ್‌ 2 ವಿಕೆಟ್‌ ನಷ್ಟಕ್ಕೆ 236 ರನ್‌ ಹೊಡೆದು ಜಯಗಳಿಸಿತು.