Tag: Sri Lanka

  • ಶ್ರೀಲಂಕಾ ಕ್ರಿಕೆಟಿಗನಿಗೆ 1 ವರ್ಷ ನಿಷೇಧ ವಿಧಿಸಿದ ಐಸಿಸಿ

    ಶ್ರೀಲಂಕಾ ಕ್ರಿಕೆಟಿಗನಿಗೆ 1 ವರ್ಷ ನಿಷೇಧ ವಿಧಿಸಿದ ಐಸಿಸಿ

    ದುಬೈ: ಶ್ರೀಲಂಕಾ ತಂಡದ ಆಫ್ ಸ್ಪಿನ್ ಆಲ್‌ರೌಂಡರ್ ಅಖಿಲ ಧನಂಜಯ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 1 ವರ್ಷ ನಿಷೇಧ ವಿಧಿಸಿದೆ.

    ಅನುಮಾನಾಸ್ಪದ ಬೌಲಿಂಗ್ ಸಾಬೀತಾದ ಕಾರಣದಿಂದ ಐಸಿಸಿ ಈ ನಿರ್ಧಾರವನ್ನ ಕೈಗೊಂಡಿದ್ದು, ಸ್ವತಂತ್ರ ವಿಶ್ಲೇಷಣೆ ನಡೆದ ಬಳಿಕ ಈ ತೀರ್ಮಾನವನ್ನು ಪ್ರಕಟಿಸಿದೆ.

    ಕಳೆದ ತಿಂಗಳು ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದ ವೇಳೆ ಅನುಮಾನಾಸ್ಪದ ಬೌಲಿಂಗ್ ಆರೋಪ ಕೇಳಿ ಬಂದಿತ್ತು. ಪರಿಣಾಮ ಆಗಸ್ಟ್ 23ರಂದು ಚೆನ್ನೈನಲ್ಲಿ ಅಖಿಲ ಧನಂಜಯ ಐಸಿಸಿ ವಿಚಾರಣೆಗೆ ಹಾಜರಾಗಿದ್ದರು. ಈ ವಿಚಾರಣೆಯಲ್ಲಿ ಅನುಮಾನಾಸ್ಪದ ಬೌಲಿಂಗ್ ಶೈಲಿ ಕಂಡು ಬಂದ ಹಿನ್ನೆಲೆಯಲ್ಲಿ ಮಂಡಳಿ ನಿಷೇಧವನ್ನು ವಿಧಿಸಿದೆ.

    2 ವರ್ಷದ ಅವಧಿಯಲ್ಲಿ 2 ಬಾರಿ ಅನುಮಾಸ್ಪದ ಬೌಲಿಂಗ್ ಆರೋಪ ಕೇಳಿ ಬಂದ ಕಾರಣದಿಂದ ಅಖಿಲ ಧನಂಜಯ ವಿರುದ್ಧ ವಿಚಾರಣೆ ನಡೆಸಲಾಗಿತ್ತು. ನಿಷೇಧದ ಸಮಯದಲ್ಲಿ ಆಟಗಾರನಿಗೆ ತನ್ನ ಬೌಲಿಂಗ್ ಶೈಲಿಯಲ್ಲಿನ ತಪ್ಪುಗಳನ್ನು ತಿದ್ದಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಅವಧಿ ಅಂತ್ಯವಾದ ಬಳಿಕ ಮತ್ತೊಮ್ಮೆ ಧನಂಜಯ ಬೌಲಿಂಗ್ ವಿಚಾರವಾಗಿ ಐಸಿಸಿ ಮಂಡಳಿಯನ್ನು ಸಂಪರ್ಕಿಸಬಹುದಾಗಿದೆ. ಈ ಹಿಂದೆ 2018 ಡಿಸೆಂಬರ್ ತಿಂಗಳಿನಲ್ಲಿ ಧನಂಜಯ ಬೌಲಿಂಗ್ ಮೇಲೆ ನಿಷೇಧ ವಿಧಿಸಲಾಗಿತ್ತು. ಆ ಬಳಿಕ 2013 ಜನವರಿಯಲ್ಲಿ ನಿಷೇಧ ತೆರವುಗೊಳಿಸಲಾಗಿತ್ತು.

  • ‘ಆಡೋದಾದ್ರೆ ಆಡಿ ಇಲ್ಲ ಅಂದ್ರೆ ಬೇಡ’ – ಲಂಕಾ ತಂಡಕ್ಕೆ ಪಾಕ್ ಸಂದೇಶ

    ‘ಆಡೋದಾದ್ರೆ ಆಡಿ ಇಲ್ಲ ಅಂದ್ರೆ ಬೇಡ’ – ಲಂಕಾ ತಂಡಕ್ಕೆ ಪಾಕ್ ಸಂದೇಶ

    ಲಾಹೋರ್: ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಂದಿನ ಶ್ರೀಲಂಕಾ ವಿರುದ್ಧದ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ನಡೆಸಲು ನಿರಾಕರಿಸಿದ್ದು, ಆ ಮೂಲಕ ಟೂರ್ನಿ ಆಡಿದರೆ ಪಾಕ್‍ನಲ್ಲಿ ಆಡಿ ಇಲ್ಲ ಬೇಡ ಎಂಬ ಸಂದೇಶವನ್ನು ನೀಡಿದೆ.

    ಪಾಕಿಸ್ತಾನದಲ್ಲಿ ನಡೆಲಿರುವ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಲು ಶ್ರೀಲಂಕಾ ಕೆಲ ಆಟಗಾರರು ನಿರಾಕರಿಸಿದ್ದರು. ಅಲ್ಲದೇ ಕ್ರಿಕೆಟ್ ಬೋರ್ಡ್ ಗೆ ಶ್ರೀಲಂಕಾ ಸರ್ಕಾರ ಕೂಡ ಟೂರ್ನಿಯ ಸಂದರ್ಭದಲ್ಲಿ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಎಚ್ಚರಿಕೆ ನೀಡಿತ್ತು. ಪರಿಣಾಮ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ನಡೆಸುವ ಸಲಹೆಯನ್ನು ಪಾಕ್‍ಗೆ ನೀಡಿತ್ತು. ಇದನ್ನು ಓದಿ:  ಪಾಕ್ ಸಚಿವರ ಹೇಳಿಕೆಗೆ ಶ್ರೀಲಂಕಾ ಟಾಂಗ್

    ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಸಲಹೆಯನ್ನು ತಿರಸ್ಕರಿಸಿರುವ ಪಿಸಿಬಿ, ತಟಸ್ಥ ಸ್ಥಳದಲ್ಲಿ ಟೂರ್ನಿ ಆಯೋಜಿಸುವ ಸಲಹೆಯನ್ನು ತಳ್ಳಿ ಹಾಕಿದೆ. ಒಂದೊಮ್ಮೆ ಈ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಿದರೆ ಮುಂದಿನ ದಿನಗಳಲ್ಲೂ ಇದೇ ರೀತಿಯ ಒತ್ತಡವನ್ನು ವಿದೇಶಿ ತಂಡಗಳಿಂದ ಎದುರಿಸಬಹುದು ಎಂಬ ಚಿಂತೆ ಪಿಸಿಬಿಗೆ ತಲೆ ನೋವು ತಂದಿದೆ. ಅಲ್ಲದೇ ಶ್ರೀಲಂಕಾ ಕ್ರಿಕೆಟ್ ಟೂರ್ನಿಯ ಬೆನ್ನಲ್ಲೇ ಪಾಕ್ ಪ್ರೀಮಿಯರ್ ಲೀಗ್ ಆರಂಭವಾಗಲಿದೆ. ಇಲ್ಲಿಯೂ ವಿದೇಶಿ ಆಟಗಾರರು ಭಾಗವಹಿಸಿಸುವುದು ಕಷ್ಟಸಾಧ್ಯ ಎನ್ನಲಾಗಿದೆ. ಇದನ್ನು ಓದಿ: ಭಾರತದ ಒತ್ತಡಕ್ಕೆ ಮಣಿದು ಲಂಕಾ ಕ್ರಿಕೆಟ್ ಆಟಗಾರರು ಬರುತ್ತಿಲ್ಲ – ಪಾಕ್ ಸಚಿವ

    ಶ್ರೀಲಂಕಾ ತಂಡದ ಪ್ರಮುಖ ಆಟಗಾರರು ಟೂರ್ನಿಯಲ್ಲಿ ಭಾಗವಹಿಸಲು ನಿರಾಕರಿಸಿದ ಪರಿಣಾಮ ಬೋರ್ಡ್ ಸ್ಟಾರ್ ಆಟಗಾರರು ಇಲ್ಲದ ಹೊಸ ಆಟಗಾರರ ತಂಡವನ್ನು ಪ್ರಕಟಿಸಿತ್ತು. ಪಾಕ್ ನ ಕರಾಚಿ ಹಾಗೂ ಲಾಹೋರಿನಲ್ಲಿ ತಲಾ 3 ಏಕದಿನ ಹಾಗೂ ಟಿ20 ಪಂದ್ಯಗಳ ವೇಳಾಪಟ್ಟಿ ನಿಗದಿಯಾಗಿದೆ. ಸೆ.27 ರಿಂದ ಆ.9ರ ವರೆಗೂ ಟೂರ್ನಿ ನಡೆಯಲಿದೆ.

    ಶ್ರೀಲಂಕಾ ಆಟಗಾರರು ಪಾಕ್ ಟೂರ್ನಿಯಲ್ಲಿ ಆಡಲು ನಿರಾಕರಿಸುತ್ತಿದಂತೆ ಪಾಕ್ ಸಚಿವ ಫವಾದ್ ಹುಸೇನ್ ಚೌಧರಿ ಭಾರತ ಕ್ರೀಡಾ ಸಚಿವಾಲಯದ ವಿರುದ್ಧ ಕಿಡಿಕಾರಿ, ತಮ್ಮ ರಾಜಕೀಯ ಕುತಂತ್ರ ಬುದ್ಧಿಯನ್ನು ತೋರಿಸಿದ್ದರು. ಆದರೆ ಪಾಕ್ ಸಚಿವರ ಹೇಳಿಕೆಗೆ ತಿರುಗೇಟು ನೀಡಿದ್ದ ಶ್ರೀಲಂಕಾ ಆಟಗಾರರ ಈ ನಿರ್ಧಾರಕ್ಕೆ, ಪಾಕಿಸ್ತಾನವೇ ಕಾರಣ ಎಂದು ಟಾಂಗ್ ನೀಡಿದ್ದರು.

  • ಪಾಕ್ ಸಚಿವರ ಹೇಳಿಕೆಗೆ ಶ್ರೀಲಂಕಾ ಟಾಂಗ್

    ಪಾಕ್ ಸಚಿವರ ಹೇಳಿಕೆಗೆ ಶ್ರೀಲಂಕಾ ಟಾಂಗ್

    ಕೊಂಲಬೋ: ಪಾಕಿಸ್ತಾನದ ವಿರುದ್ಧದ ಕ್ರಿಕೆಟ್ ಸರಣಿಯಲ್ಲಿ ಶ್ರೀಲಂಕಾ ಕ್ರಿಕೆಟಿಗರು ಭಾಗವಹಿಸದಿರಲು ಭಾರತ ಕಾರಣ ಎಂದು ಆರೋಪ ಮಾಡಿದ್ದ ಪಾಕ್‍ಗೆ ಶ್ರೀಲಂಕಾ ಕ್ರೀಡಾ ಸಚಿವರು ತಿರುಗೇಟು ನೀಡಿದ್ದು, ಆಟಗಾರರು ಸರಣಯಿಂದ ಹಿಂದೆ ಸರಿಯಲು ನೀವೇ ಕಾರಣ ಎಂದು ಹೇಳಿದ್ದಾರೆ.

    ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಟೂರ್ನಿಯಲ್ಲಿ ನಾವು ಆಡಲ್ಲ ಎಂದು ಶ್ರೀಲಂಕಾದ ಕೆಲ ಆಟಗಾರ ಹೇಳಿದ್ದರು. ಈ ವಿಚಾರವಾಗಿ ಟ್ವೀಟ್ ಮಾಡಿ ಕುತಂತ್ರಿ ಬುದ್ಧಿ ತೋರಿದ್ದ ಪಾಕ್ ಸಚಿವ ಫವಾದ್ ಹುಸೇನ್ ಚೌಧರಿ ಲಂಕಾ ಆಟಗಾರ ಈ ನಿಲುವಿಗೆ ಭಾರತ ಕಾರಣ ಎಂದು ಆರೋಪ ಮಾಡಿದ್ದರು.

    ಪಾಕ್ ಸಚಿವರ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಶ್ರೀಲಂಕಾ ಕ್ರೀಡಾ ಸಚಿವ ಹರಿನ್ ಫರ್ನಾಂಡೊ, ನಮ್ಮ ದೇಶದ ಆಟಗಾರರು ತೆಗೆದುಕೊಂಡಿರುವ ನಿರ್ಧಾರದ ಮೇಲೆ ಭಾರತ ಯಾವುದೇ ರೀತಿಯ ಪ್ರಭಾವ ಬೀರಿಲ್ಲ. ನಮ್ಮ ಆಟಗಾರ ನಿಲುವಿಗೆ ಪಾಕಿಸ್ತಾನವೇ ಕಾರಣ. 2009 ರಲ್ಲಿ ಆದ ಘಟನೆಯನ್ನು ಮುಂದೆ ಇಟ್ಟಿಕೊಂಡು ಪಾಕಿಸ್ತಾನದಲ್ಲಿ ಟೂರ್ನಿ ಆಡಲು ಕೆಲ ಆಟಗಾರರು ಸಮ್ಮತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಹರಿನ್, ಪಾಕಿಸ್ತಾನದಲ್ಲಿ ಆಡಬಾರದೆಂದು ಶ್ರೀಲಂಕಾದ ಆಟಗಾರರನ್ನು ಭಾರತ ಪ್ರಭಾವಿಸಿದೆ ಎಂಬುದರಲ್ಲಿ ಸತ್ಯವಿಲ್ಲ. 2009ರ ಘಟನೆಯ ಆಧಾರದ ಮೇಲೆ ಸಂಪೂರ್ಣವಾಗಿ ನಾವು ಆಡುವುದಿಲ್ಲ ಎಂದು ಕೆಲವರು ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಗೌರವಿಸಿ ನಾವು ಪಾಕ್‍ನಲ್ಲಿ ಆಟವಾಡಲು ಸಿದ್ಧರಿರುವ ಆಟಗಾರರನ್ನು ಆಯ್ಕೆ ಮಾಡಿದ್ದೇವೆ. ನಮ್ಮಲ್ಲಿ ಇರುವ ಆಟಗಾರಲ್ಲಿ ಒಳ್ಳೆಯ ಮತ್ತು ಶಕ್ತಿಯೂತ ತಂಡವನ್ನು ಆಯ್ಕೆ ಮಾಡಿದ್ದೇವೆ ಮತ್ತು ಪಾಕಿಸ್ತಾನದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಭರವಸೆ ಇದೆ ಎಂದು ಟ್ವೀಟ್ ಮಾಡಿದ್ದಾರೆ.

    2009 ರಲ್ಲಿ ನಡೆದ ಘಟನೆಯನ್ನು ಆಧಾರವಾಗಿಟ್ಟುಕೊಂಡು ಶ್ರೀಲಂಕಾ ಕ್ರಿಕೆಟ್ ಟಿ20 ತಂಡದ ನಾಯಕ ಲಸಿತ್ ಮಾಲಿಂಗ, ಏಕದಿನ ತಂಡದ ನಾಯಕ ದಿಮುತ ಕರುಣಾರತ್ನೆ ಸೇರಿದಂತೆ 10 ಆಟಗಾರರು ಪಾಕಿಸ್ತಾನ ಪ್ರವಾಸದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಕ್ರಿಕೆಟ್ ಮಂಡಳಿಗೆ ಮಾಹಿತಿ ನೀಡಿ ಭದ್ರತಾ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಆಟಗಾರರ ಈ ತೀರ್ಮಾನದಿಂದ ಪಾಕಿಸ್ತಾನಕ್ಕೆ ಭಾರೀ ಹಿನ್ನಡೆಯಾಗಿತ್ತು. ಪಾಕ್ ಸಚಿವ ಭಾರತ ವಿರುದ್ಧ ಟ್ವೀಟ್ ಮಾಡಿ ಈಗ ಪೆಟ್ಟು ತಿಂದಿದ್ದಾರೆ.

    ಪಾಕ್ ಸಚಿವ ಹೇಳಿದ್ದೇನು?
    ಪಾಕಿಸ್ತಾನದಲ್ಲಿ ಟೂರ್ನಿ ಆಡಿದರೆ ಶ್ರೀಲಂಕಾ ಆಟಗಾರನ್ನು ಐಪಿಎಲ್ ನಿಂದ ಹೊರ ಹಾಕುತ್ತೇವೆ ಎಂದು ಭಾರತ ಲಂಕಾ ಆಟಗಾರರ ಮೇಲೆ ಒತ್ತಡ ಹಾಕುತ್ತಿದೆ ಎಂದು ನಮಗೆ ಮಾಹಿತಿ ಬಂದಿದೆ. ಈ ರೀತಿ ಮಾಡುತ್ತಿರುವುದು ಭಾರತ ಕ್ರೀಡಾಧಿಕಾರಿಗಳ ನೀಚ ಕೃತ್ಯ ಎಂದು ಪಾಕ್‍ನ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಹುಸೇನ್ ಚೌಧರಿ ಟ್ವೀಟ್ ಮಾಡಿದ್ದರು.

    ಭಯೋತ್ಪಾದಕ ದಾಳಿ: 2009 ರ ಮಾರ್ಚ್‍ನಲ್ಲಿ ಪಾಕಿಸ್ತಾನದ ಲಹೋರಿನ ಗಡಾಫಿ ಮೈದಾನದಲ್ಲಿ ಪಾಕಿಸ್ತಾನ ಮತ್ತು ಲಂಕಾ ತಂಡಗಳ ನಡುವೆ ಪಂದ್ಯ ನಡೆಯುತ್ತಿತ್ತು. ಈ ವೇಳೆ 12 ಮಂದಿ ಭಯೋತ್ಪಾದಕರು ಶ್ರೀಲಂಕಾ ಆಟಗಾರರು ತೆರಳುತ್ತಿದ್ದ ಬಸ್ಸಿನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ 8 ಮಂದಿ ಪೊಲೀಸರು ಸಾವನ್ನಪ್ಪಿ 6 ಮಂದಿ ಗಾಯಗೊಂಡಿದ್ದರು. ಈ ವೇಳೆ ಶ್ರೀಲಂಕಾ ಕ್ರಿಕೆಟ್ ತಂಡದ ಸಹಾಯಕ ಸಿಬ್ಬಂದಿಯೂ ಗಾಯಗೊಂಡಿದ್ದರು.

    ಆ ಬಳಿಕ 2017 ಶ್ರೀಲಂಕಾ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಆದರೆ ಈ ಭಾರಿಯ ಪಾಕ್ ಸರಣಿ ಆಡಲು ಕೆಲ ಆಟಗಾರರು ನಿರಾಕರಿಸಿದ್ದಾರೆ. ಸೆಪ್ಟೆಂಬರ್ 27, 29 ಮತ್ತು ಅಕ್ಟೋಬರ್ 3 ರಂದು ಕರಾಚಿಯಲ್ಲಿ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 5, 7 ಮತ್ತು 9 ರಂದು ಲಾಹೋರ್‍ನಲ್ಲಿ 3 ಟಿ-20 ಪಂದ್ಯಗಳು ನಡೆಯಲಿದೆ.

  • ಭಾರತದ ಒತ್ತಡಕ್ಕೆ ಮಣಿದು ಲಂಕಾ ಕ್ರಿಕೆಟ್ ಆಟಗಾರರು ಬರುತ್ತಿಲ್ಲ – ಪಾಕ್ ಸಚಿವ

    ಭಾರತದ ಒತ್ತಡಕ್ಕೆ ಮಣಿದು ಲಂಕಾ ಕ್ರಿಕೆಟ್ ಆಟಗಾರರು ಬರುತ್ತಿಲ್ಲ – ಪಾಕ್ ಸಚಿವ

    ಕೊಲಂಬೋ: ಪಾಕಿಸ್ತಾನದ ವಿರುದ್ಧ ನಿಗದಿಯಾಗಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಲು ಶ್ರೀಲಂಕಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರರು ನಿರಾಕರಿಸಿದ್ದಾರೆ ಎಂದು ಸೋಮವಾರ ಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದ್ದು, ಇದರ ಬೆನ್ನಲ್ಲೇ ಈ ಬೆಳವಣಿಗೆಗೆ ಕಾರಣ ಭಾರತವೇ ಎಂದು ಪಾಕಿಸ್ತಾನದ ಸಚಿವ ಫವಾದ್ ಹುಸೇನ್ ದೂರಿದ್ದಾರೆ.

    ಶ್ರೀಲಂಕಾ ಕ್ರಿಕೆಟ್ ಟಿ20 ತಂಡದ ನಾಯಕ ಲಸಿತ್ ಮಾಲಿಂಗ, ಏಕದಿನ ತಂಡದ ನಾಯಕ ದಿಮುತ ಕರುಣಾರತ್ನೆ ಸೇರಿದಂತೆ 10 ಆಟಗಾರರು ಪಾಕಿಸ್ತಾನ ಪ್ರವಾಸದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಕ್ರಿಕೆಟ್ ಮಂಡಳಿಗೆ ಮಾಹಿತಿ ನೀಡಿ ಭದ್ರತಾ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಆಟಗಾರರ ಈ ತೀರ್ಮಾನದಿಂದ ಪಾಕಿಸ್ತಾನಕ್ಕೆ ಭಾರೀ ಹಿನ್ನಡೆಯಾಗಿತ್ತು. ಆದರೆ ಆಟಗಾರರ ಸ್ಪಷ್ಟನೆಯ ನಡುವೆಯೂ ಪಾಕ್ ತನ್ನ ರಾಜಕೀಯ ಕುತಂತ್ರಿ ಬುದ್ಧಿಯನ್ನು ಪ್ರದರ್ಶಸಿದ್ದು, ಆಟಗಾರರಿಗೆ ಭಾರತ ಬ್ಲ್ಯಾಕ್‍ಮೇಲ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

    ಇತ್ತ ಶ್ರೀಲಂಕಾ ಕ್ರಿಕೆಟ್ ಮಂಡಳಿ ಕೂಡ ಟೂರ್ನಿಯಲ್ಲಿ ಭಾಗವಹಿಸುವ ತೀರ್ಮಾನವನ್ನು ಕೈಗೊಳ್ಳುವ ಕುರಿತು ಆಟಗಾರರ ನಿರ್ಧಾರವೇ ಅಂತಿಮ ಎಂದು ಹೇಳಿತ್ತು. ಆದರೆ ಶ್ರೀಲಂಕಾ ಆಟಗಾರರು ಟೂರ್ನಿಯಲ್ಲಿ ಭಾಗವಹಿಸಲು ಭಾರತ ಕಾರಣ ಎಂದಿರುವ ಪಾಕ್ ಸಚಿವ ಫವಾದ್ ಹುಸೇನ್, ಶ್ರೀಲಂಕಾ ಕ್ರಿಕೆಟ್ ಆಟಗಾರರಿಗೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದು, ಪಾಕ್ ಟೂರ್ನಿಯಿಂದ ಹೊರ ನಡೆಯದಿದ್ದರೆ ಮುಂದಿನ ಐಪಿಎಲ್ ಟೂರ್ನಿಯಿಂದ ಹೊರಗೆ ಹಾಖುವುದಾಗಿ ಬೆದರಿಕೆ ಹಾಕಿದೆ. ಇದು ಭಾರತ ಕ್ರೀಡಾ ಸಚಿವಾಲಯದ ಅತ್ಯಂತ ನೀಚ ಕೃತ್ಯ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

    2017 ರಲ್ಲಿ ತಿಸಾರಾ ಪರೇರಾ ನಾಯಕತ್ವ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಆ ಬಳಿಕ ಶ್ರೀಲಂಕಾದೊಂದಿಗೆ ಉತ್ತಮ ಕ್ರಿಕೆಟ್ ಸಂಬಂಧ ಸುಧಾರಿಸುವ ನಿರೀಕ್ಷೆಯಲ್ಲಿತ್ತು. ಮುಂದಿನ ನಿಗದಿತ ಕ್ರಿಕೆಟ್ ಟೂರ್ನಿ ಸೆ.27 ರಿಂದ ಆರಂಭವಾಗಲಿದ್ದು, ತಲಾ 3 ಪಂದ್ಯಗಳ ಟಿ2 ಹಾಗೂ ಏಕದಿನ ಕ್ರಿಕೆಟ್ ಪಂದ್ಯಗಳು ಕರಾಚಿ ಹಾಗೂ ಲಾಹೋರಿನಲ್ಲಿ ನಡೆಯಲಿದೆ. ಉಳಿದಂತೆ 2 ಟೆಸ್ಟ್ ಪಂದ್ಯಗಳ ಅವಧಿ ನಿಗದಿಯಾಗಬೇಕಿದೆ.

    ಯಾರೂ ಬರುತ್ತಿಲ್ಲ: ಮಾರ್ಚ್ 03, 2009 ಪಾಕಿಸ್ತಾನದಲ್ಲಿ ಶ್ರೀಲಂಕಾ ಕ್ರಿಕೆಟ್ ಆಟಗಾರರ ಮೇಲೆ ಭಯೋತ್ಪಾದಕ ಪಡೆ ದಾಳಿ ನಡೆಸಿತ್ತು. ಇದಾಗಿ 10 ವರ್ಷಗಳು ಕಳೆದರೂ ಕೂಡ ಪಾಕಿಸ್ತಾನದಲ್ಲಿ ಮತ್ತೆ ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳನ್ನು ಆರಂಭಿಸಲು ಹರಸಾಹಸ ಪಡುತ್ತಿದೆ.

    ಸುಮಾರು 12 ಮಂದಿಯ ಭಯೋತ್ಪಾದಕರ ತಂಡ ಶ್ರೀಲಂಕಾ ಕ್ರಿಕೆಟಿಗರು ಹಾಗೂ ಅಂಪೈರ್ ಗಳ ಮೇಲೆ ಲಹೋರಿನ ಗಢಾಪಿ ಕ್ರೀಡಾಂಗಣದ ಬಳಿ ಗುಂಡಿನ ದಾಳಿ ನಡೆಸಿತ್ತು. ಪರಿಣಾಮ ಘಟನೆಯಲ್ಲಿ 8 ಪೊಲೀಸರು ಸಾವನ್ನಪ್ಪಿದ್ದರೆ, 6 ಮಂದಿ ಗಾಯಗೊಂಡಿದ್ದರು. ಈ ವೇಳೆ ಶ್ರೀಲಂಕಾ ತಂಡಕ್ಕೆ ಇಂಗ್ಲೆಂಡ್‍ನ ಬೇಲಿಸ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಉಗ್ರರು ಸಿಡಿಸಿದ್ದ ಗುಂಡು ಬಸ್ ಗ್ಲಾಸ್ ಸೀಳಿತ್ತು. ಪರಿಣಾಮ ಗಾಜಿನ ಚುರು ತಂಡದ ಸಹಾಯಕನಾಗಿದ್ದ ಫಾಬ್ರ್ರಾಸ್ ಎಂಬವರ ಭುಜಕ್ಕೆ ಹೊಕ್ಕಿತ್ತು. ಇಂದಿಗೂ ಘಟನೆಯನ್ನು ನೆನೆದರೆ ಫಾಬ್ರ್ರಾಸ್ ಬೆಚ್ಚಿ ಬೀಳುತ್ತಾರೆ.

    ಇದಾದ ಬಳಿಕ 2015ರ ವರೆಗೂ ಮತ್ತೆ ಲಾಹೋರ್ ಸ್ಟೇಡಿಯಂನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿರಲಿಲ್ಲ. ಆದರೆ 2015ರಲ್ಲಿ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಮೊಂಡು ಧೈರ್ಯ ಮಾಡಿ ಕ್ರಿಕೆಟ್ ಆಡಲು ಮುಂದಾಗಿತ್ತು, ಆದರೆ ಅಂದು ಕೂಡ ಪಂದ್ಯ ನಡೆಯುವ ವೇಳೆ ಸ್ಟೇಡಿಯಂ ಹೊರ ಭಾಗದಲ್ಲಿ ಉಗ್ರ ಮಾನವ ಬಾಂಬ್ ಸ್ಫೋಟಿಸಿ ಓರ್ವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬಲಿ ಪಡೆದಿದ್ದ. ಈ ಘಟನೆ ಮತ್ತೆ ಉಗ್ರರ ತವರು ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಲು ಆಸುರಕ್ಷಿತ ಎಂಬುವುದು ಖಚಿತವಾಯ್ತು. ಪರಿಣಾಮ ಐಸಿಸಿ ಕ್ರಿಕೆಟ್ ಟೂರ್ನಿಗಳನ್ನು ಏರ್ಪಡಿಸುವ ಅವಕಾಶವನ್ನು ಪಾಕಿಸ್ತಾದಿಂದ ಕಿತ್ತುಕೊಂಡಿತ್ತು.

    2011ರ ದಾಳಿ ಬಳಿಕ ಪಾಕಿಸ್ತಾನದಲ್ಲಿ ಇದುವರೆಗೂ 12 ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳು ಮಾತ್ರ ನಡೆಸಿದ್ದು, ಇದರಲ್ಲಿ 9 ಸಮಿತಿ ಪಂದ್ಯಗಳಾಗಿವೆ. ಪ್ರಮುಖವಾಗಿ ಜಿಂಬಾಬ್ವೆ 5 ಪಂದ್ಯ, ವೆಸ್ಟ್ ಇಂಡೀಸ್/ ವರ್ಲ್ಡ್ ಇಲೆವೆನ್ ಮತ್ತು ಶ್ರೀಲಂಕಾ 1 ಪಂದ್ಯದಲ್ಲಿ ಮಾತ್ರ ಆಡಿದೆ.

    ಕೊನೆಯದಾಗಿ ಒತ್ತಡದ ಮೇಲೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಪಾಕ್‍ನ ಕರಾಚಿ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ತಂಡ 3 ಟಿ20 ಪಂದ್ಯಗಳನ್ನು ಆಡಿದೆ. ಆದರೆ ಇದರ ಬೆನ್ನಲ್ಲೇ ನಡೆಯಬೇಕಿದ್ದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಸರಣಿಯನ್ನು ಆಡಲು ಎರಡು ರಾಷ್ಟ್ರ ನಿರಾಕರಿಸಿತ್ತು.

  • ನಾಲ್ಕು ಬಾಲ್‍ನಲ್ಲಿ 4 ವಿಕೆಟ್ ಪಡೆದ  ಮಾಲಿಂಗ ವಿಶ್ವದಾಖಲೆ

    ನಾಲ್ಕು ಬಾಲ್‍ನಲ್ಲಿ 4 ವಿಕೆಟ್ ಪಡೆದ ಮಾಲಿಂಗ ವಿಶ್ವದಾಖಲೆ

    ಕೊಲಂಬೊ: ಶ್ರೀಲಂಕಾದ ಅನುಭವಿ ವೇಗಿ ಲಸಿತ್ ಮಾಲಿಂಗ ಅವರು ಸತತ ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್ ಪಡೆದು ಚುಟುಕು ಪಂದ್ಯದಲ್ಲಿ ಹೊಸ ದಾಖಲೆ ಮಾಡಿದ್ದಾರೆ.

    ಶುಕ್ರವಾರ ಪಲ್ಲಕೆಲೆಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಟಿ-20 ಪಂದ್ಯದಲ್ಲಿ, ಲಸಿತ್ ಮಾಲಿಂಗ ಮ್ಯಾಚ್‍ನ ಮೂರನೇ ಓವರ್ ನಲ್ಲಿ ಕಿವೀಸ್‍ನ ನಾಲ್ಕು ಆಟಗಾರರನ್ನು ಒಂದೇ ಓವರ್ ನಲ್ಲಿ ಔಟ್ ಮಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ.

    ಪಂದ್ಯದ ಮೂರನೇ ಓವರ್ ಬೌಲ್ ಮಾಡಲು ಬಂದ ಮಾಲಿಂಗ್ ಆ ಓವರ್ ನ ಮೂರನೇ ಎಸೆತದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಕೊಲಿನ್ ಮುನ್ರೊವನ್ನು ಬೌಲ್ಡ್ ಮಾಡುವ ಮೂಲಕ ಮೊದಲ ವಿಕೆಟ್ ಪಡೆದರು. ನಂತರ 4 ನೇ ಎಸೆತದಲ್ಲಿ ಹಮೀಶ್ ರುದರ್‍ಫೋರ್ಡ್ ಅವರನ್ನು ಎಲ್‍ಬಿಡಬ್ಲ್ಯು ಬಲೆಗೆ ಬೀಳಿಸಿದರು. ನಂತರ ಬಂದ ಕಾಲಿನ್ ಡಿ ಗ್ರ್ಯಾಂಡ್‍ಹೋಮ್ ಮಾಲಿಂಗ್ ಅವರ 5ನೇ ಎಸೆತದಲ್ಲಿ ಬೌಲ್ಡ್ ಆದರು. ಓವರ್ ನ ಕೊನೆಯ ಬಾಲ್‍ನಲ್ಲಿ ಅನುಭವಿ ಆಟಗಾರ ರಾಸ್ ಟೇಲರ್‍ ರನ್ನು ಔಟ್ ಮಾಡುವ ಮೂಲಕ ಈ ಸಾಧನೆ ಮಾಡಿದರು.

    https://twitter.com/avulasunil/status/1169999036985643009

    ಇದೇ ಪಂದ್ಯದಲ್ಲಿ ಇನ್ನೊಂದು ಸಾಧನೆ ಮಾಡಿರುವ ಲಸಿತ್ ಮಾಲಿಂಗ ಅವರು, ಕೊಲಿನ್ ಮುನ್ರೊ ಅವರನ್ನು 3 ನೇ ಎಸೆತದಲ್ಲಿ ಬೌಲ್ಡ್ ಮಾಡುವ ಮೂಲಕ ವಿಶ್ವದಲ್ಲೇ ಅಂತಾರಾಷ್ಟ್ರೀಯ ಟಿ-20 ಪಂದ್ಯದಲ್ಲಿ ನೂರು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಖ್ಯಾತಿ ಪಡೆದರು. ಇವರನ್ನು ಬಿಟ್ಟರೆ ಈ ಪಟ್ಟಿಯಲ್ಲಿ 98 ವಿಕೆಟ್ ಪಡೆದ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಎರಡನೇ ಸ್ಥಾನದಲ್ಲಿ ಇದ್ದಾರೆ.

    ಒಂದೇ ಓವರ್ ನಲ್ಲಿ 4 ವಿಕೆಟ್ ಕಿತ್ತು ದಾಖಲೆ ಬರೆದ ಮಾಲಿಂಗ, ತಾನು ಬೌಲ್ ಮಾಡಿದ ಐದನೇ ಓವರ್‍ ನಲ್ಲಿ ಕೀವೀಸ್ ಆಟಗಾರ ಟಿಮ್ ಸೀಫರ್ಟ್ ಅವರನ್ನು ಔಟ್ ಮಾಡಿ 5 ವಿಕೆಟ್ ಪಡೆಯುವ ಮೂಲಕ ತನ್ನ ವೃತ್ತಿ ಜೀವನದಲ್ಲಿ ಟಿ-20 ಮಾದರಿಯಲ್ಲಿ ಎರಡು ಬಾರಿ ಒಂದು ಪಂದ್ಯದಲ್ಲಿ ಐದು ವಿಕೆಟ್ ಪಡೆದ ಸಾಧನೆ ಮಾಡಿದರು.

    2006ರಲ್ಲಿ ಇಂಗ್ಲೆಂಡ್ ವಿರುದ್ಧ ಟಿ-20 ಮಾದರಿಗೆ ಮೊದಲು ಪಾದಾರ್ಪಣೆ ಮಾಡಿದ ಮಾಲಿಂಗ ಅವರು, ಇಲ್ಲಿಯವರೆಗೆ 76 ಟಿ-20 ಪಂದ್ಯಗಳನ್ನು ಆಡಿದ್ದು, 19.0 ಸರಾಸರಿಯಲ್ಲಿ ಒಟ್ಟು 104 ವಿಕೆಟ್ ಪಡೆದಿದ್ದಾರೆ. ಇದರ ಜೊತೆಗೆ 226 ಏಕದಿನ ಪಂದ್ಯಗಳನ್ನು ಆಡಿರುವ ಮಾಲಿಂಗ ಒಟ್ಟು 338 ವಿಕೆಟ್‍ಗಳನ್ನು ಪಡೆದಿದ್ದಾರೆ. ತನ್ನ ಡೆಡ್ಲಿ ಯಾರ್ಕರ್ ಮೂಲಕ ಹೆಸರುವಾಸಿಯಾಗಿರುವ ಮಾಲಿಂಗ 30 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 101 ವಿಕೆಟ್ ಪಡೆದು ಮಿಂಚಿದ್ದಾರೆ.

    ಶುಕ್ರವಾರ ಪಲ್ಲಕೆಲೆಯಲ್ಲಿ ನಡೆದ ಅಂತಿಮ ಟಿ-20 ಪಂದ್ಯದಲ್ಲಿ ಲಸಿತ್ ಮಾಲಿಂಗ್ ಅವರ ಮಾರಕ ಬೌಲಿಂಗ್ ದಾಳಿಗೆ ನಲುಗಿದ ನ್ಯೂಜಿಲೆಂಡ್ ಶ್ರೀಲಂಕಾ ನೀಡಿದ 125 ರನ್‍ಗಳ ಸಾಧಾರಣ ಗುರಿ ಬೆನ್ನಟ್ಟಲಾಗದೆ 88 ರನ್‍ಗಳಿಗೆ ಆಲ್‍ಔಟ್ ಆಯಿತು. ಈ ಮೂಲಕ ಈ ಪಂದ್ಯವನ್ನು 37 ರನ್‍ಗಳ ಅಂತರದಿಂದ ಶ್ರೀಲಂಕಾ ಗೆದ್ದುಕೊಂಡಿತು.

  • ಕಡಿಮೆ ಪಂದ್ಯದಲ್ಲಿ ಸಚಿನ್ ದಾಖಲೆ ಸರಿಗಟ್ಟಿದ ಕಿವೀಸ್ ವೇಗಿ ಸೌಥಿ

    ಕಡಿಮೆ ಪಂದ್ಯದಲ್ಲಿ ಸಚಿನ್ ದಾಖಲೆ ಸರಿಗಟ್ಟಿದ ಕಿವೀಸ್ ವೇಗಿ ಸೌಥಿ

    ಗಾಲೆ: ನ್ಯೂಜಿಲೆಂಡ್ ವೇಗದ ಬೌಲರ್ ಟಿಮ್ ಸೌಥಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸಚಿನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಸೌಥಿ ಲಂಕಾ ಸ್ಪಿನ್ನರ್ ಧನಂಜಯ ಡಿ ಸಿಲ್ವಾ ಬೌಲಿಂಗ್‍ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತೆಂಡುಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ.

    ಈ ಸಿಕ್ಸ್ ನೊಂದಿಗೆ ಸೌಥಿ ಟೆಸ್ಟ್ ಕ್ರಿಕೆಟ್‍ನಲ್ಲಿ 67 ಸಿಕ್ಸ್ ಹೊಡೆದ ಸಚಿನ್ ಜೊತೆಯಲ್ಲೇ ಸ್ಥಾನ ಹಂಚಿಕೊಂಡಿದ್ದಾರೆ. ಇನ್ನು ಎರಡು ಸಿಕ್ಸ್ ಹೊಡೆದರೆ ಯೂನಸ್ ಖಾನ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.

    ಸಚಿನ್ ತೆಂಡುಲ್ಕರ್ 329 ಇನಿಂಗ್ಸ್ ನಲ್ಲಿ 69 ಸಿಕ್ಸ್ ಹೊಡೆದಿದ್ದರೆ, ಸೌಥಿ ಕೇವಲ 89 ಇನಿಂಗ್ಸ್ ಗಳಲ್ಲಿ 69 ಸಿಕ್ಸ್ ಹೊಡೆದಿರುವುದು ವಿಶೇಷ. ಈ ಮೂಲಕ ಟೆಸ್ಟ್ ಕ್ರಿಕೆಟ್‍ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿ 17ನೇ ಸ್ಥಾನ ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಯೂನುಸ್ ಖಾನ್ 213 ಇನ್ನಿಂಗ್ಸ್ ಆಡಿ 70 ಸಿಕ್ಸ್ ಹೊಡೆದಿದ್ದಾರೆ.

    ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಬ್ರೆಂಡನ್ ಮೆಕ್ಲಮ್ ಟೆಸ್ಟ್ ಕ್ರಿಕೆಟ್‍ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ 107 ಸಿಕ್ಸರ್ ಸಿಡಿಸಿ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಮಾಜಿ ವಿಕೆಟ್ ಕೀಪರ್ ಆ್ಯಡಂ ಗಿಲ್‍ಕ್ರಿಸ್ಟ್ 176 ಇನ್ನಿಂಗ್ಸ್ ನಿಂದ 100 ಸಿಕ್ಸ್ ಸಿಡಿಸಿದ್ದಾರೆ. ನಂತರದ ಸ್ಥಾನದಲ್ಲಿ ವೆಸ್ಟ್ ಇಂಡೀಸಿನ ಕ್ರಿಸ್ ಗೇಲ್(98), ದಕ್ಷಿಣ ಆಫ್ರಿಕಾದ ಜ್ಯಾಕ್ ಕ್ಯಾಲಿಸ್(97), ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್(91) ಇದ್ದಾರೆ.

    ಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟಿಮ್ ಸೌಥಿ 14 ರನ್(19 ಎಸೆತ,1 ಸಿಕ್ಸರ್) ಹೊಡೆದು ರನೌಟ್ ಆಗಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ 23 ರನ್(62 ಎಸೆತ, 1 ಬೌಂಡರಿ) ಹೊಡೆದು ಸ್ಟಂಪ್ ಔಟ್ ಆಗಿದ್ದಾರೆ.

    ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 249 ರನ್ ಗಳಿಗೆ ಆಲೌಟ್ ಆಗಿದ್ದರೆ, ಶ್ರೀಲಂಕಾ 267 ರನ್ ಗಳಿಗೆ ಆಲೌಟ್ ಆಗಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ನ್ಯೂಜಿಲೆಂಡ್ ಮೂರನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಬ್ಯಾಟಿಂಗ್ ನಡೆಸುತ್ತಿದೆ.

  • ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ದಾಖಲೆ ಬರೆದ ಬುಮ್ರಾ

    ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ದಾಖಲೆ ಬರೆದ ಬುಮ್ರಾ

    ಲಂಡನ್: ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಶಮಿ ದಾಖಲೆಯನ್ನು ಸರಿಗಟ್ಟಿದ್ದಾರೆ.

    ಕರುಣಾರತ್ನೆ ಅವರ ವಿಕೆಟ್ ಪಡೆಯುವ ಮೂಲಕ ಬುಮ್ರಾ ಟೀಂ ಇಂಡಿಯಾ ಪರ ವೇಗವಾಗಿ 100 ವಿಕೆಟ್ ಪಡೆದ ಶಮಿ ಜೊತೆ ಗುರುತಿಸಿಕೊಂಡರು.

    ಪಂದ್ಯದಲ್ಲಿ ಸತತ 9 ಡಾಟ್ ಬಾಲ್‍ಗಳನ್ನು ಬೌಲ್ ಮಾಡಿದ ಬುಮ್ರಾ ಇನ್ನಿಂಗ್ಸ್ ನ 4ನೇ ಓವರಿನಲ್ಲಿ ಕರುಣಾರತ್ನೆ ಧೋನಿ ಅವರಿಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಪಂದ್ಯದಲ್ಲಿ ಕುಶಾಲ್ ಪೆರೆರಾ ವಿಕೆಟ್ ಪಡೆದ ಬುಮ್ರಾ ಶ್ರೀಲಂಕಾ ತಂಡಕ್ಕೆ ಡಬಲ್ ಅಘಾತ ನೀಡಿದರು.

    57 ಪಂದ್ಯಗಳಲ್ಲಿ 100 ವಿಕೆಟ್ ಸಾಧನೆ ಮಾಡಿರುವ ಬುಮ್ರಾ ಭಾರತ ಪರ ವೇಗವಾಗಿ ಈ ಸಾಧನೆ ಮಾಡಿದ 2ನೇ ಬೌಲರ್ ಎನಿಸಿಕೊಂಡರು. ಈ ಹಿಂದೆ ಮೊಹಮ್ಮದ್ ಶಮಿ 56 ಪಂದ್ಯಗಳಲ್ಲಿ 100 ವಿಕೆಟ್ ಪಡೆದಿದ್ದರು. ಉಳಿದಂತೆ ಪಟ್ಟಿಯಲ್ಲಿ 65 ಪಂದ್ಯಗಳಿಂದ ಜಹೀರ್ ಖಾನ್, 67 ಪಂದ್ಯಗಳಿಂದ ಅಜಿತ್ ಅಗರ್ಕರ್, 98 ಪಂದ್ಯಗಳಿಂದ ಶ್ರೀನಾಥ್ ಹಾಗೂ 59 ಪಂದ್ಯಗಳಿಂದ ಇರ್ಫಾನ್ ಪಠಾಣ್ 100 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

    2019 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ಕೊನೆಯ ಲೀಗ್ ಪಂದ್ಯವನ್ನು ಆಡುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇತ್ತ ಸೆಮಿ ಫೈನಲ್‍ಗೆ ಆರ್ಹತೆ ಪಡೆದಿರುವ ಟೀಂ ಇಂಡಿಯಾ ಎರಡು ಬದಲಾವಣೆಗಳೊಂದಿಗೆ ಆಡುತ್ತಿದ್ದು, ಜಡೇಜಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

  • ವಿಶ್ವಕಪ್ 2019: ಸೋಲಿನೊಂದಿಗೆ ಕೆಟ್ಟ ವಿಶ್ವದಾಖಲೆ ಬರೆದ ಟೀಂ ಇಂಡಿಯಾ

    ವಿಶ್ವಕಪ್ 2019: ಸೋಲಿನೊಂದಿಗೆ ಕೆಟ್ಟ ವಿಶ್ವದಾಖಲೆ ಬರೆದ ಟೀಂ ಇಂಡಿಯಾ

    ಲಂಡನ್: 2019ರ ವಿಶ್ವಕಪ್ ಟೂರ್ನಿಯಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡಿ ಗೆಲುವಿನೊಂದಿಗೆ ಮುನ್ನಗುತ್ತಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಸೋಲಿನೊಂದಿಗೆ ಕೆಟ್ಟ ದಾಖಲೆಗೆ ಬರೆದಿದೆ.

    ಇಂಗ್ಲೆಂಡ್ ವಿರುದ್ಧ 31 ರನ್ ಅಂತರದಲ್ಲಿ ಸೋಲುಂಡ ಭಾರತ ಈ ಬಾರಿಯ ವಿಶ್ವಕಪ್ ನಲ್ಲಿ ಮೊದಲ ಸೋಲುಂಡಿತ್ತು. ಇದರೊಂದಿಗೆ ಇದುವರೆಗೂ 972 ಏಕದಿನ ಪಂದ್ಯಗಳನ್ನು ಆಡಿರುವ ಭಾರತ 54.66 ಸರಾಸರಿಯಲ್ಲಿ 505 ಪಂದ್ಯಗಳನ್ನು ಗೆದ್ದರೆ, 418 ಪಂದ್ಯಗಳಲ್ಲಿ ಸೋಲುಂಡಿದೆ. ಉಳಿದಂತೆ 40 ಪಂದ್ಯಗಳು ರದ್ದಾದರೆ, 9 ಪಂದ್ಯಗಳು ಟೈ ಆಗಿದೆ.

    ಸದ್ಯ ಇಂಗ್ಲೆಂಡ್ ವಿರುದ್ಧ ಸೋಲಿನೊಂದಿಗೆ 418 ಪಂದ್ಯಗಳಲ್ಲಿ ಸೋಲುಂಡಿರುವ ಟೀಂ ಇಂಡಿಯಾ ಅತಿ ಹೆಚ್ಚು ಏಕದಿನ ಪಂದ್ಯಗಳಲ್ಲಿ ಸೋಲುಂಡ ತಂಡಗಳ ಪಟ್ಟಿಯಲ್ಲಿ ಶ್ರೀಲಂಕಾದದೊಂದಿಗೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಕೆಟ್ಟ ದಾಖಲೆಯನ್ನು ನಿರ್ಮಿಸಿದೆ.

    ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮಂಗಳವಾರ ಬಾಂಗ್ಲಾದೇಶವನ್ನು ಎದುರಿಸಲಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಳ್ಳುವ ಸಿದ್ಧತೆಯಲ್ಲಿದೆ.

  • ಬಾಂಬ್ ದಾಳಿಯ ಬಳಿಕ ಶ್ರೀಲಂಕಾಗೆ ಭೇಟಿ ನೀಡಿದ ಮೊದಲ ವಿದೇಶಿ ನಾಯಕ ಮೋದಿ

    ಬಾಂಬ್ ದಾಳಿಯ ಬಳಿಕ ಶ್ರೀಲಂಕಾಗೆ ಭೇಟಿ ನೀಡಿದ ಮೊದಲ ವಿದೇಶಿ ನಾಯಕ ಮೋದಿ

    ಕೊಲಂಬೊ: ಈಸ್ಟರ್ ಭಾನುವಾರದ ವೇಳೆ ಭಯೋತ್ಪಾದಕರು ದಾಳಿ ಮಾಡಿದ್ದ ಶ್ರೀಲಂಕಾದ ಚರ್ಚ್ ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಭೇಟಿ ನೀಡಿ ಮೃತರಿಗೆ ಗೌರವ ನಮನ ಸಲ್ಲಿಸಿದ್ದಾರೆ.

    ಚರ್ಚ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 11 ಭಾರತೀಯರು ಸೇರಿದಂತೆ ಸುಮಾರು 250 ಜನರು ಸಾವನ್ನಪ್ಪಿದ್ದರು. ಈ ದಾಳಿಯ ಬಳಿಕ ಶ್ರೀಲಂಕಾಗೆ ಭೇಟಿ ನೀಡಿದ ಮೊದಲ ವಿದೇಶಿ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರಾಗಿದ್ದಾರೆ.

    ಶ್ರೀಲಂಕಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಬಂಡಾರನಾಯಿಕೆ ಅವರು ಸಕಲ ಸರ್ಕಾರಿ ಗೌರವದೊಂದಿಗೆ ಸ್ವಾಗತಿಸಿದರು. ಅಲ್ಲಿಂದ ಕೊಚ್ಚಿಕಾಡ್‍ನ ಸೈಂಟ್ ಆಂಥೊನಿ ಚರ್ಚ್ ಗೆ ಭೇಟಿ ನೀಡುವ ಮೂಲಕ ಮೋದಿ ಅವರು ಶ್ರೀಲಂಕಾ ಪ್ರವಾಸವನ್ನು ಆರಂಭಿಸಿದ್ದಾರೆ.

    ಉಗ್ರರ ದಾಳಿಗೆ ಮೃತಪಟ್ಟ ನಾಗರಿಕರಿಗೆ ಚರ್ಚ್ ನಲ್ಲಿ ಹೂಗುಚ್ಛ ಇಟ್ಟು, ನಮನ ಸಲ್ಲಿಸಿದರು. ಟ್ವೀಟ್ ಮೂಲಕವೂ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಬಳಿಕ ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರನ್ನು ಭೇಟಿ ನೀಡಿ, ಮಾತುಕತೆ ನಡೆಸಿದರು.

    ಈ ಮಧ್ಯೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ ಅವರು, ಮೂರು ವರ್ಷದಲ್ಲಿ ಶ್ರೀಲಂಕಾಗೆ ಇದು ನನ್ನ ಮೂರನೇ ಭೇಟಿ. ನಿಮ್ಮ ಅಭೂತಪೂರ್ವ ಸ್ವಾಗತಕ್ಕೆ ನಾನು ಮಾರುಹೋಗಿದ್ದೇನೆ. ನಿಮ್ಮ ಸ್ನೇಹವನ್ನು ಭಾರತವು ಎಂದಿಗೂ ಮರೆಯುವುದಿಲ್ಲ. ನಿಮ್ಮೊಂದಿಗೆ ಭಾರತ ಸದಾಕಾಲ ಇರುತ್ತದೆ ಎಂದು ಹೇಳಿದ್ದಾರೆ.

    ಕಳೆದ 10 ದಿನಗಳಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಜೊತೆಗಿನ ಎರಡನೇ ಭೇಟಿ ಇದಾಗಿದೆ. ಭಯೋತ್ಪಾದನೆ ವಿರುದ್ಧ ಹೋರಾಡಲು ಅವರು ಬೆಂಬಲ ನೀಡಿದ್ದಾರೆ. ಒಟ್ಟಾಗಿ ಉಗ್ರರನ್ನು ಮಟ್ಟ ಹಾಕುವ ನಿರ್ಧಾರಕ್ಕೆ ಮುಂದಾಗಿದ್ದೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

    ಶ್ರೀಲಂಕಾಗೆ ಭೇಟಿ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮೈತ್ರಿಪಾಲ ಸಿರಿಸೇನ ಅವರು ಮೊದಲು ಆಹ್ವಾನ ನೀಡಿದ್ದರು. ಮಾಜಿ ಅಧ್ಯಕ್ಷ ಮತ್ತು ಪ್ರತಿಪಕ್ಷ ನಾಯಕ ಮಹೀಂದ್ರ ರಾಜಪಕ್ಸೆ ಅವರನ್ನು ಮೋದಿ ಭೇಟಿ ಮಾಡಿದ್ದಾರೆ.

  • ಮೋದಿ ವಿದೇಶಿ ಪ್ರವಾಸ – ಮಾಲ್ಡೀವ್ಸ್, ಶ್ರೀಲಂಕಾಗೆ ಭೇಟಿ

    ಮೋದಿ ವಿದೇಶಿ ಪ್ರವಾಸ – ಮಾಲ್ಡೀವ್ಸ್, ಶ್ರೀಲಂಕಾಗೆ ಭೇಟಿ

    ನವದೆಹಲಿ: ಸತತ 2ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾದ ನರೇಂದ್ರ ಮೋದಿ ಶನಿವಾರ ತಮ್ಮ ಮೊದಲ ವಿದೇಶ ಪ್ರವಾಸ ಆರಂಭಿಸಲಿದ್ದಾರೆ.

    2ನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ವಿದೇಶಿ ಪ್ರವಾಸ ಕೈಗೊಳ್ಳುತ್ತಿದ್ದು, ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಗೆ ಮೊದಲು ಭೇಟಿ ನೀಡಲಿದ್ದಾರೆ. ಆ ಬಳಿಕ ಚರ್ಚ್ ಮೇಲಿನ ಉಗ್ರರ ದಾಳಿಗೆ ನಲುಗಿದ ಶ್ರೀಲಂಕಾಗೆ ಮೋದಿ ಭಾನುವಾರ ಭೇಟಿ ನೀಡಲಿದ್ದಾರೆ. ತಮ್ಮ ವಿದೇಶಿ ಪ್ರವಾಸ ಬಗ್ಗೆ ಮಾತನಾಡಿರುವ ಮೋದಿ ಅವರು ಈ ಭೇಟಿಯಿಂದ ನೆರೆ ರಾಷ್ಟ್ರಗಳೊಂದಿಗೆ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದ್ದಾರೆ.

    ವಿದೇಶಿ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಕೇರಳದ ಗುರುವಾಯೂರು ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಇತ್ತ ಭಾನುವಾರ ಬೆಳಗ್ಗೆ ಶ್ರೀಲಂಕಾಗೆ ತೆರಳಿರುವ ಮೋದಿ ಅವರು ಸಂಜೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ.

    ಮೇ 30ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಅಂದು ಬಿಮ್ ಸ್ಟೆಕ್ ರಾಷ್ಟ್ರಗಳಿಗೆ ಆಹ್ವಾನ ನೀಡಿದ್ದರು. ಈ ಬಿಮ್ಸ್ ಸ್ಟೆಕ್ಸ್ ದೇಶಗಳಲ್ಲಿ ಮಾಲ್ಡೀವ್ಸ್ ಇಲ್ಲದ ಕಾರಣ ಮೋದಿ ಮೊದಲ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗಿದೆ. ಉಳಿದಂತೆ ಮೇ 30 ರಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಸೇನಾ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.