Tag: Sri Lanka

  • ಅತೃಪ್ತ ಶಾಸಕರು ಪಕ್ಷ ಬಿಡುತ್ತಾರೆ ಅನಿಸ್ತಿದೆ: ಜಿ.ಪರಮೇಶ್ವರ್

    ಅತೃಪ್ತ ಶಾಸಕರು ಪಕ್ಷ ಬಿಡುತ್ತಾರೆ ಅನಿಸ್ತಿದೆ: ಜಿ.ಪರಮೇಶ್ವರ್

    – ಜಿ.ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಶ್ರೀಲಂಕಾ ಮಾಜಿ ರಾಷ್ಟ್ರಪತಿ

    ಬೆಂಗಳೂರು: ಅತೃಪ್ತ ಶಾಸಕರು ಕಳೆದ ಮೂರು ಸಿಎಲ್‍ಪಿ ಸಭೆಗೂ ಹಾಜರಾಗಲಿಲ್ಲ. ಹೀಗಾಗಿ ಅವರು ಪಕ್ಷ ಬಿಡುತ್ತಾರೆ ಅಂತ ಅನಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.

    ಇಲ್ಲಿನ ಸದಾಶಿವನಗರದ ನಿವಾಸದಲ್ಲಿ ಶ್ರೀಲಂಕಾ ಮಾಜಿ ರಾಷ್ಟ್ರಪತಿ ಮಹಿಂದಾ ರಾಜಪಕ್ಸೆ ಅವರನ್ನು ಭೇಟಿಯಾಗಿ ಬಳಿಕ ಮಾತನಾಡಿದ ಅವರು, ಸಿಎಲ್‍ಪಿ ಸಭೆಗೆ ಗೈರಾದ ಶಾಸಕರ ಅನರ್ಹತೆ ಮಾಡುವ ಕುರಿತು ಈಗಾಗಲೇ ತೀರ್ಮಾನ ಮಾಡಲಾಗಿದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಅವರನ್ನು ಹೊರತುಪಡಿಸಿ ಬೇರೆ ಶಾಸಕರು ಪಕ್ಷವನ್ನು ಬಿಡುವುದಿಲ್ಲ ಎಂದು ತಿಳಿಸಿದರು.

    ಅತೃಪ್ತ ಶಾಸಕರನ್ನು ಹೊರತಾಗಿ ನಮ್ಮ ಪಕ್ಷದ ಬೇರೆ ಶಾಸಕರ ಜೊತೆಗೆ ಬಿಜೆಪಿಯವರು ಮಾತನಾಡಿರಬಹುದು. ಆದರೆ ಅವರಲ್ಲಿ ಪಕ್ಷಬಿಡುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಅತೃಪ್ತರ ಬಗ್ಗೆ ಚರ್ಚೆ ನಡೆಸಿದ್ದಾರೆ. ಅವರು ಬೆಂಗಳೂರಿಗೆ ವಾಪಸ್ ಬಂದು ಏನು ಕ್ರಮ ಕೈಗೊಳ್ಳಬೇಕು ಅಂತ ತಿಳಿಸಲಿದ್ದಾರೆ ಎಂದರು.

    ಶ್ರೀಲಂಕಾ ಮಾಜಿ ಅಧ್ಯಕ್ಷರ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಡಿಸಿಎಂ, ಮಹಿಂದಾ ರಾಜಪಕ್ಸೆ ಅವರು ಐಟಿ ಹಾಗೂ ಸ್ಟಾರ್ಟ್ ಅಪ್‍ಗಳ ಬಗ್ಗೆ ಮಾಹಿತಿ ಪಡೆದರು. ಇದನ್ನು ಬಿಟ್ಟು ಬೇರೆ ಯಾವುದೇ ರಾಜಕೀಯ ಅಥವಾ ಒಪ್ಪಂದಗಳ ಕುರಿತು ಚರ್ಚೆ ಮಾಡಲಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲಾದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಭಾರತದೊಂದಿಗೆ ಶ್ರೀಲಂಕಾ ಕೂಡ ವೇಗವಾಗಿ ಬೆಳವಣಿಗೆ ಹೊಂದಬೇಕು ಎನ್ನುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ ಎಂದರು.

    ನನ್ನ ಅಧಿಕಾರ ಅವಧಿಯಲ್ಲಿ ಹಲವು ಯೋಜನೆ ಜಾರಿಗೆ ತಂದಿದ್ದೆ. ಆದರೆ ಈಗ ದೇಶದ ಅಭಿವೃದ್ಧಿ ಕುಂಠಿತವಾಗಿದೆ ಅಂತ ಮಹಿಂದಾ ರಾಜಪಕ್ಸೆ ಬೇಸರ ವ್ಯಕ್ತಪಡಿಸಿದರು. ಅವರು ಮತ್ತೆ ಅಧಿಕಾರಕ್ಕೆ ಬರಬಹುದು ಎನ್ನುವ ವಿಶ್ವಾಸವಿದೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

    ಹೆಬ್ಬಾಳ ಪ್ಲೈ ಓವರ್ ನಿರ್ಮಾಣ ಯೋಜನೆಯಲ್ಲಿ ಸ್ವಲ್ಪ ಬದಲಾವಣೆ ಮಾಡುತ್ತಿದ್ದೇವೆ. ಪ್ಲಾನ್ ಸಿದ್ಧವಾದ ಮೇಲೆ ಸಾರ್ವಜನಿಕರು ಹಾಗೂ ಆ ಭಾಗದ ಜನರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಕೆಲವರು ವಿರೋಧ ಮಾಡುತ್ತಾರೆ ಅಂದ್ರೆ ಯೋಜನೆಯನ್ನು ಬಿಡುವುದಕ್ಕೆ ಆಗಲ್ಲ. ಯೋಜನೆಯಲ್ಲಿ ಲೋಪ ಇದ್ದರೆ ಹೇಳಲಿ ಸರಿಪಡಿಸುತ್ತೇವೆ. ಈ ಯೋಜನೆಯನ್ನು ಅನೇಕರು ಸ್ಟೀಲ್ ಬ್ರಿಡ್ಜ್ ಅಂತ ಕರೆಯುತ್ತಿದಾರೆ. ಆದರೆ ಅದು ಸ್ಟೀಲ್ ಬ್ರೀಡ್ಜ್ ಅಲ್ಲ. ಚಾಲುಕ್ಯ ಸರ್ಕಲ್‍ನಿಂದ ಹೆಬ್ಬಾಳ ಸಂಪರ್ಕಿಸುವ ಪ್ಲೈ ಓವರ್ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

    ಬಜೆಟ್ ಬಗ್ಗೆ ಬಿಸಿ ಪಾಟೀಲ್ ಅಸಮಧಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜಿ.ಪರಮೇಶ್ವರ್ ಅವರು, ನಾವು ಬಜೆಟ್‍ನಲ್ಲಿ 224 ಕ್ಷೇತ್ರಕ್ಕೂ ಯೋಜನೆ ಹಂಚುವುದಿಲ್ಲ. ಕಾರ್ಯಕ್ರಮ ಘೋಷಿಸುತ್ತೇವೆ ಅವರ ಕ್ಷೇತ್ರಕ್ಕೆ ಅನ್ವಯವಾಗುತ್ತದೆ. ರಸ್ತೆ ಕೆರೆ ಅಭಿವೃದ್ಧಿಗೆ ಹಲವು ಕಾರ್ಯಕ್ರಮ ಘೋಷಿಸಿದ್ದಾರೆ. ಅದು ಅವರ ಕ್ಷೇತ್ರಕ್ಕೂ ಅನ್ವಯವಾಗಲಿದೆ. ಎಲ್ಲನ್ನೂ ಬಜೆಟ್‍ನಲ್ಲೇ ಘೋಷಿಸಬೇಕಂತ ಏನು ಇಲ್ಲ. ಯಾವುದೇ ಶಾಸಕರಿಗೆ ಅಸಮಧಾನವಿದ್ದರೆ ನಮಗೆ ಹೇಳಲಿ. ಅವರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಕೊಡುವುದಕ್ಕೆ ಸಂಪ್ಲಿಮೆಂಟರಿ ಬಜೆಟ್‍ನಲ್ಲಿ ಅವಕಾಶವಿದೆ ಎಂದು ತಿಳಿಸಿದರು.

    ಎನ್‍ಜಿಟಿ ಬಫರ್ ಜೋನ್ ವಿಚಾರವಾಗಿ ಮಾತನಾಡಿ ಅವರು, ಎನ್‍ಜಿಟಿ ಆದೇಶ ಪಾಲಿಸುವುದು ಕಷ್ಟ. ಕೆರೆ ಹಾಗೂ ರಾಜಕಾಲುವೆಯಿಂದ 75 ಮೀಟರ್ ಜಾಗ ಬಿಟ್ಟು ಮನೆ ಕಟ್ಟಿಕೋಬೇಕು. ಇಡೀ ದೇಶದಲ್ಲಿ ಬೆಂಗಳೂರಿಗೆ ಮಾತ್ರ ಎನ್‍ಜಿಟಿ ಆದೇಶ ನೀಡಲಾಗಿದ್ದು, ಇದರಿಂದಾಗಿ 36 ಸಾವಿರ ಮನೆಗಳನ್ನು ಒಡೆಯಬೇಕಾಗುತ್ತದೆ. ಆದೇಶ ಪಾಲನೆ ಮಾಡಿದರೆ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.

    ಬಫರ್ ಜೋನ್ ನಿಯಮ ಬದಲಾಯಿಸುವ ಅಗತ್ಯವಿದೆ. ಕೆರೆಗಳಿಗೆ ಹಾಗೂ ರಾಜಕಾಲುವೆಗೆ ಬೇರೆ ಬೇರೆ ನಿಯಮ ಮಾಡುವ ಅಗತ್ಯವಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿರುವೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟಾರ್ಗೆಟ್ ಮಾಡಿದ ಲಸಿತ್ ಮಾಲಿಂಗಾ ಪತ್ನಿ – ಕ್ರಿಕೆಟ್ ಬೋರ್ಡ್ ಮೊರೆ ಹೋದ ತಿಸಾರ ಪೆರೆರಾ

    ಟಾರ್ಗೆಟ್ ಮಾಡಿದ ಲಸಿತ್ ಮಾಲಿಂಗಾ ಪತ್ನಿ – ಕ್ರಿಕೆಟ್ ಬೋರ್ಡ್ ಮೊರೆ ಹೋದ ತಿಸಾರ ಪೆರೆರಾ

    ಕೊಲಂಬೊ: ಶ್ರೀಲಂಕಾ ತಂಡದ ವೇಗದ ಬೌಲರ್ ಲಸಿತ್ ಮಾಲಿಂಗಾ ಪತ್ನಿ ಹಾಗೂ ಆಲ್‍ ರೌಂಡರ್ ತಿಸಾರ ಪೆರೆರಾರ ನಡುವಿನ ಸಾಮಾಜಿಕ ಜಾಲತಾಣದ ಕದನ ಹೆಚ್ಚಾಗಿದ್ದು, ಸದ್ಯ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡುವಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಪೆರೆರಾ ಪತ್ರ ಬರೆದು ಮನವಿ ಮಾಡಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆ ಮಾಲಿಂಗಾ ಪತ್ನಿ ತಾನ್ಯಾ ಪೆರೆರಾ ಫೇಸ್‍ಬುಕ್ ಖಾತೆಯಲ್ಲಿ ತಿಸಾರರನ್ನು ಟಾರ್ಗೆಟ್ ಮಾಡಿ ಪೋಸ್ಟ್ ಪ್ರಕಟಿಸಿದ್ದರು. ಇದರಲ್ಲಿ ತಿಸಾರ ಪೆರೆರಾ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಶ್ರೀಲಂಕಾದ ಕ್ರೀಡಾ ಸಚಿವರನ್ನು ಭೇಟಿಯಾಗಿದ್ದರು ಎಂದು ಬರೆದುಕೊಂಡಿದ್ದರು.

    ತಾನ್ಯಾರ ಈ ಪೋಸ್ಟ್ ಗೆ ತಿರುಗೇಟು ನೀಡಿದ್ದ ತಿಸ್ಸಾರ ಪೆರಾರ, ಕ್ಯಾಲೆಂಟರ್ ವರ್ಷದಲ್ಲಿ ತಾವು ಮಾಡಿದ ಸಾಧನೆಗಳ ಪಟ್ಟಿ ಮಾಡಿ ತಂಡದಲ್ಲಿ ಸ್ಥಾನ ಪಡೆಯಲು ತಮ್ಮ ಉತ್ತಮ ಪ್ರದರ್ಶನವೇ ಕಾರಣ ಎಂದು ಟಾಂಗ್ ನೀಡಿದ್ದರು. ಇದರ ಬಳಿಕವೂ ತಾನ್ಯಾ ಅವರು, ತಿಸಾರರನ್ನು ಟಾರ್ಗೆಟ್ ಮಾಡಿ ಮತ್ತೊಂದು ಪೋಸ್ಟ್ ಮಾಡಿದ್ದರು.

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಉಂಟಾಗುತ್ತಿರುವ ಚರ್ಚೆಗೆ ಬ್ರೇಕ್ ಹಾಕಲು ಮುಂದಾಗಿರುವ ತಿಸಾರ ಪೆರೆರಾ ಶ್ರೀಲಂಕಾ ಕ್ರಿಕೆಟ್ ಬೋರ್ಡಿನ ಸಿಇಒ ಆಶ್ಲೇ ಡಿ ಸಿಲ್ವಾ ಅವರಿಗೆ ಪತ್ರ ಬರೆದಿದ್ದಾರೆ. ಕೆಲವರ ವೈಯಕ್ತಿಕ ದ್ವೇಷಕ್ಕೆ ತಂಡದ ಸಾಮರಸ್ಯ ಹಾಳಾಗುತ್ತಿದೆ. ಇಡೀ ದೇಶಕ್ಕೆ ನಾವು ನಗುವ ವಸ್ತುವಾಗಿದ್ದೇವೆ ಎಂದು ತಿಳಿಸಿ ಪ್ರಕರಣದಲ್ಲಿ ಮಧ್ಯಪ್ರವೇಶದ ಮಾಡುವಂತೆ ಮನವಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • 2011ರ ವಿಶ್ವಕಪ್ ಗೆಲುವಿನ ಹಿಂದಿನ ರಹಸ್ಯ ಬಿಚ್ಚಿಟ್ಟ ಧೋನಿ

    2011ರ ವಿಶ್ವಕಪ್ ಗೆಲುವಿನ ಹಿಂದಿನ ರಹಸ್ಯ ಬಿಚ್ಚಿಟ್ಟ ಧೋನಿ

    ಮುಂಬೈ: 2011ರ ವಿಶ್ವಕಪ್ ಪೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕರಾಗಿದ್ದಎಂಎಸ್ ಧೋನಿ ತಮ್ಮ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿ ಕಣಕ್ಕೆ ಇಳಿದಿದ್ದು ಪ್ರತಿಯೊಬ್ಬ ಅಭಿಮಾನಿಗೆ ತಿಳಿದಿರುವ ಸಂಗತಿ. ಆದರೆ ಅಂದಿನ ಶ್ರೀಲಂಕಾ ತಂಡದ ವಿರುದ್ಧದ ಪಂದ್ಯದ ಗೆಲುವಿಗೆ ಮತ್ತೊಂದು ಪ್ರಮುಖ ಕಾರಣದ ಬಗ್ಗೆ ಎಂಎಸ್ ಧೋನಿ ತಿಳಿಸಿದ್ದಾರೆ.

    ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಂದು ಭಾರತ 275 ರನ್ ಗಳ ಗುರಿಹೊಂದಿತ್ತು. ಆದರೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರು ಬೇಗ ಔಟಾದರು. ಈ ವೇಳೆ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ಜೋಡಿಯಾಗಿ 83 ರನ್ ಗಳ ಕೊಡುಗೆ ನೀಡಿದ್ದರು. ಆದರೆ 22ನೇ ಓವರ್ ಬಳಿಕ ಶ್ರೀಲಂಕಾ ತಂಡ ಮೇಲುಗೈ ಸಾಧಿಸುವ ಸೂಚನೆ ಸಿಕ್ಕಿತ್ತು. ಅದ್ದರಿಂದ ವಿರಾಟ್ ಕೊಹ್ಲಿ ಔಟಾಗುತ್ತಿದಂತೆ ಧೋನಿ ಬ್ಯಾಟಿಂಗ್ ಇಳಿದಿದ್ದರು.

    ಭಾರತ 48.2 ಓವರ್ ಗಳಲ್ಲಿ ಧೋನಿ, ಗಂಭೀರ್ ಅವರ ಉತ್ತಮ ಆಟದಿಂದಾಗಿ ಜಯಗಳಿಸಿತ್ತು. ಧೋನಿ ಸಿಕ್ಸರ್ ಸಿಡಿಸಿ ಗೆಲುವು ತಂದಿದ್ದರು. ಈ ಕುರಿತು ಮಾತನಾಡಿರುವ ಧೋನಿ, ಶ್ರೀಲಂಕಾ ಆಟಗಾರರಾದ ಮುತ್ತಯ್ಯ ಮುರಳೀಧರನ್ ಹಾಗೂ ನುವಾನ್ ಕುಲಶೇಖರ್ ರಂತಹ ಆಟಗಾರರೊಂದಿಗೆ ಐಪಿಎಲ್‍ನಲ್ಲಿ ಆಡಿದ್ದ ಅನುಭವ ನನಗೆ ಸಹಕಾರಿ ಆಯಿತು. ಆ ಸಂದರ್ಭದಲ್ಲಿ ಮುರಳೀಧರನ್ ಬೌಲಿಂಗ್ ಮಾಡುತ್ತಿದ್ದರು. ಚೆನ್ನೈ ಪರ ಆಡುತ್ತಿದ್ದ ವೇಳೆ ಅವರೊಂದಿಗೆ ಸಾಕಷ್ಟು ಸಮಯ ಆಡಿದ್ದೆ. ಅದ್ದರಿಂದಲೇ ಸುಲಭವಾಗಿ ರನ್‍ಗಳಿಸಲು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ.

    ಪಂದ್ಯದಲ್ಲಿ ಗೌತಮ್ ಗಂಭೀರ್ 3 ರನ್ ಗಳಿಂದ ಶತಕ ವಂಚಿತರಾದರು. ಆದರೆ ಧೋನಿ ಪಂದ್ಯದ ಅಂತಿಮ ಕ್ಷಣದವರೆಗೂ ಬ್ಯಾಟಿಂಗ್ ನಡೆಸಿ ಗೆಲುವಿಗೆ ಕಾರಣರಾಗಿದ್ದರು. ಧೋನಿ ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿದ ಬಳಿಕವೂ ಕೊಹ್ಲಿಗೆ ಸಾಕಷ್ಟು ಬಾರಿ ಸಲಹೆ ನೀಡುತ್ತಾ ತಂಡ ಗೆಲುವಿಗೆ ಕಾರಣರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶ್ರೀಲಂಕಾದ ಮಾಜಿ ಕ್ರಿಕೆಟಿಗ ಅರ್ಜುನ್ ರಣತುಂಗಾ ಬಂಧನ!

    ಶ್ರೀಲಂಕಾದ ಮಾಜಿ ಕ್ರಿಕೆಟಿಗ ಅರ್ಜುನ್ ರಣತುಂಗಾ ಬಂಧನ!

    ಕೊಲೊಂಬೊ: ಶೂಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಪೆಟ್ರೋಲಿಯಂ ಸಚಿವ ಅರ್ಜುನ್ ರಣತುಂಗಾರನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ.

    ಗುಂಡು ಹಾರಿಸಿ ವ್ಯಕ್ತಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ರಣತುಂಗಾರನ್ನು ಕೊಲೊಂಬೊ ಅಪರಾಧ ವಿಭಾಗದ ಮುಖ್ಯಸ್ಥರು ಬಂಧಿಸಿದ್ದು, ಶೀಘ್ರವೇ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

    ಏನಿದು ಪ್ರಕರಣ?
    ಮಂತ್ರಿ ಸ್ಥಾನ ಕಳೆದುಕೊಂಡ ನಂತರವೂ ಅರ್ಜುನ್ ರಣತುಂಗಾ ಭಾನುವಾರ ತಮ್ಮ ಕಚೇರಿಗೆ ಪ್ರವೇಶಿಸಲು ಯತ್ನಿಸಿದ್ದರು. ಇದನ್ನು ತಡೆಯಲು ಮುಂದಾದ ರಾಜಪಕ್ಸೆ ಬೆಂಬಲಿಗರ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ, ರಣತುಂಗಾ ಅವರ ಗನ್ ಮ್ಯಾನ್ ಗಳು ಏಕಾಏಕಿ ಫೈರಿಂಗ್ ನಡೆಸಿದ್ದರು. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದ.

    ಕಳೆದ ಶನಿವಾರ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಸರ್ಕಾರ ಹಾಗೂ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿ, ಮಹಿಂದಾ ರಾಜಪಕ್ಸೆಯವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದರು. ನೂತನ ಪ್ರಧಾನಿ ಆಯ್ಕೆಯಾದ ಬೆನ್ನಲ್ಲೇ ಶ್ರೀಲಂಕಾದಲ್ಲಿ ರಾಜಕೀಯ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಅಲ್ಲದೇ ಹಳೆಯ ಸಚಿವರ ಪ್ರವೇಶಕ್ಕೆ ರಾಜಪಕ್ಸೆ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಂತರಾಷ್ಟ್ರೀಯ ಅಂಗವಿಕಲ ಕ್ರೀಡಾಪಟುವಿನ ಸೂರಿನ ಕಥೆ ಕರುಣಾಜನಕ!

    ಅಂತರಾಷ್ಟ್ರೀಯ ಅಂಗವಿಕಲ ಕ್ರೀಡಾಪಟುವಿನ ಸೂರಿನ ಕಥೆ ಕರುಣಾಜನಕ!

    ಹುಬ್ಬಳ್ಳಿ: ಅಂತರಾಷ್ಟ್ರೀಯ ಅಂಗವಿಕಲ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಪರ ಆಟವಾಡಿ, ದೇಶಕ್ಕೆ ಕೀರ್ತಿ ತಂದುಕೊಟ್ಟ ಪಟುವಿಗೆ ಸೂರು ಇಲ್ಲದಂತಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಬೂಸಪೇಟೆ ನಿವಾಸಿ ಮಹೇಶ್ ಅಗಲಿ ಇಂತಹ ಪರಿಸ್ಥಿತಿಯಲ್ಲಿ ಬದುಕು ಕಳೆಯುತ್ತಿದ್ದಾರೆ.

    ಮಹೇಶ್ ಅಗಲಿ ಅವರು ಕೆಲವು ದಿನಗಳ ಹಿಂದೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಆಯೋಜಿಸಿದ್ದ ಅಂಗವಿಕಲ ಅಂತರಾಷ್ಟ್ರೀಯ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಪರ ಆಟವಾಡಿ, ಟೂರ್ನಿ ಗೆದ್ದು ಭಾರತಕ್ಕೆ ಹೆಮ್ಮೆ ತಂದು ಕೊಟ್ಟಿದ್ದಾರೆ. ಮನೆ ತಲುಪಿ ಕಪ್ ಗೆದ್ದ ಸಂಭ್ರಮ ಆಚರಿಸುವ ಆಸೆಯೊಂದಿಗೆ ಮನೆಗೆ ಬರುತ್ತಿದ್ದ ಮಹೇಶ್‍ಗೆ ನಿರಾಸೆ ಕಾದಿತ್ತು.

    ಮನೆಗೆ ತಲುಪುವ ಹತ್ತು ನಿಮಿಷಗಳ ಹಿಂದೆ ಮಳೆಯಿಂದಾಗಿ ಮನೆಯ ಅರ್ಧಭಾಗ ಕುಸಿದು ಬಿದ್ದಿತ್ತು. ಇದನ್ನು ನೋಡಿದ ಮಹೇಶ್ ಅವರಿಗೆ ಆಕಾಶವೇ ಕಳಚಿ ಬಿದ್ದಂತಾಗಿತ್ತು. ಚಿಕ್ಕ ವಯಸ್ಸಿನಲ್ಲಿ ಅಪಘಾತದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿರುವ ಮಹೇಶ್, ಚಿಕ್ಕಪ್ಪನ ಆಶ್ರಯದಲ್ಲಿ ಜೀವನ ನಡೆಸುತ್ತಿದ್ದಾರೆ.

    ಪರಿಶ್ರಮದಿಂದ ಅಂಗವಿಕಲ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಸಾಧನೆ ಮಾಡಿದ್ದು, ಭಾರತಕ್ಕೆ ಟ್ರೋಫಿ ತಂದುಕೊಟ್ಟಿದ್ದಾರೆ. ಆದರೆ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಇರುವಷ್ಟು ಪ್ರೋತ್ಸಾಹ ಅಂಗವಿಕಲ ಕ್ರಿಕೆಟ್‍ಗೆ ಇಲ್ಲದಿರುವ ಕಾರಣ ಸರ್ಕಾರವಾಗಲಿ ಸಂಘ ಸಂಸ್ಥೆಗಳಿಂದಾಗಲಿ ಇವರಿಗೆ ಸಹಾಯ ಸಿಕ್ಕಿಲ್ಲವಂತೆ. ಬದುಕಿನ ಸವಾಲುಗಳ ನಡುವೆ ನಾನು ಸಾಧಿಸಿಯೇ ತೀರುತ್ತೇನೆ ಎನ್ನುತ್ತಿರುವ ಈ ಪ್ರತಿಭೆಗೆ ಸೂರು ನಿರ್ಮಿಸಿಕೊಳ್ಳಲು ಸಹಾಯ ಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/EWMcTLstB3Q

  • ಏಷ್ಯಾಕಪ್: ಗೆಲುವಿನ ಬೆನ್ನಲ್ಲೇ ಬಾಂಗ್ಲಾಗೆ ಅಘಾತ!

    ಏಷ್ಯಾಕಪ್: ಗೆಲುವಿನ ಬೆನ್ನಲ್ಲೇ ಬಾಂಗ್ಲಾಗೆ ಅಘಾತ!

    ದುಬೈ: ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಕ್ರಿಕೆಟ್ ಮೊದಲ ಪಂದ್ಯದಲ್ಲಿ ಬಾಂಗ್ಲಾ ತಂಡ ಶ್ರೀಲಂಕಾ ವಿರುದ್ಧ 137 ರನ್ ಭರ್ಜರಿ ಜಯಗಳಿಸಿದೆ. ಆದರೆ ಈ ಪಂದ್ಯದಲ್ಲಿ ತಮಿಮ್ ಇಕ್ಬಾಲ್ ಗಾಯಗೊಂಡಿದ್ದು, 6 ವಾರಗಳ ಕಾಲ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.

    ಬಾಂಗ್ಲಾ ಪರ ಆರಂಭಿಕನಾಗಿ ಕಣಕ್ಕೆ ಇಳಿದ ಇಕ್ಬಾಲ್ ಬ್ಯಾಟಿಂಗ್ ವೇಳೆ ತಮ್ಮ ಬೆರಳಿಗೆ ಗಾಯವಾದ ಕಾರಣ ಪೆವಿಲಿಯನ್‍ಗೆ ಮರಳಿದ್ದರು. ಆದರೆ ಪಂದ್ಯದ 47ನೇ ಓವರ್‍ನಲ್ಲಿ ಅನಿವಾರ್ಯವಾಗಿ ಮತ್ತೆ ಮೈದಾನಕ್ಕೆ ಬಂದ ಇಕ್ಬಾಲ್ ಒಂದೇ ಕೈಯಲ್ಲಿ ಬ್ಯಾಟ್ ಬೀಸಿದ್ದರು. ಇಕ್ಬಾಲ್ ಒಂದು ಕೈಯಲ್ಲಿ ಬ್ಯಾಟಿಂಗ್ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ.

    ಒಂದೇ ಕೈಯಲ್ಲಿ ಬ್ಯಾಟಿಂಗ್ ನಡೆಸಿದ್ದು ನಿಜಕ್ಕೂ ಅಭಿನಂದನಾರ್ಹ, ಆತನ ಧೈರ್ಯಕ್ಕೆ ಮೆಚ್ಚಲೇಬೇಕು ಎಂದು ಹಲವರು ಟ್ವೀಟ್ ಮಾಡಿದ್ದಾರೆ. 46.5 ಓವರ್‍ಗೆ 9ನೇ ವಿಕೆಟ್ ಪತನಗೊಂಡ ಬಳಿಕ ಒಂದೇ ಕೈಯಲ್ಲಿ ಇಕ್ಬಾಲ್ ಬ್ಯಾಟಿಂಗ್ ನಡೆಸಿದರೆ ಇತ್ತ ಮುಸ್ತಾಫಿಜರ್ ರಹೀಮ್ 32 ರನ್ ಸಿಡಿಸಿ ಮಿಂಚಿದರು. ಬಾಂಗ್ಲಾ ಅಂತಿಮವಾಗಿ 49.3 ಓವರ್ ಗಳಲ್ಲಿ 261 ರನ್ ಗಳಿಗೆ ಆಲೌಟ್ ಆಗಿದ್ದರೆ ಇಕ್ಬಾಲ್ 2 ರನ್ ಗಳಿಸಿ ಔಟಾಗದೇ ಉಳಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾ 2 ರನ್ ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು ಈ ವೇಳೆ ಕ್ರಿಸ್‍ಗೆ ಬಂದ ಮುಷ್ಫಿಕರ್ ರಹೀಮ್ 150 ಎಸೆತಗಳಲ್ಲಿ 144 ರನ್ (11ಬೌಂಡರಿ, 4 ಸಿಕ್ಸರ್) ಸಿಡಿಸಿ ತಂಡ ಮೊತ್ತ ಗಳಿಸಲು ಕಾರಣರಾದರು. ರಹೀಮ್‍ಗೆ ಉತ್ತಮ ಸಾಥ್ ನೀಡಿದ ಮೊಹಮ್ಮದ್ ಮಿಥುನ್ 63 ರನ್ ಗಳಿಸಿ ಮಿಂಚಿದರು. ಗೆಲ್ಲಲು 262 ರನ್ ಗುರಿ ಪಡೆದ ಶ್ರೀಲಂಕಾ ಯಾವುದೇ ಪ್ರತಿರೋಧ ತೋರದೆ ಕೇವಲ 124 ರನ್‍ಗಳಿಗೆ ಅಲೌಟ್ ಆಯಿತು.

    ಈ ಹಿಂದೆ ಒಂದೇ ಕೈಯಲ್ಲಿ ಬ್ಯಾಟಿಂಗ್ ನಡೆಸಿದ್ದ ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ಅಂದು ಪ್ರಶಂಸೆಗೆ ಕಾರಣರಾಗಿದ್ದರು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ಪಡೆದಿರುವ ತಮಿಮ್ ಇಕ್ಬಾಲ್ ಮುಂದಿನ 6 ವಾರಗಳ ಕಾಲ ವಿಶ್ರಾಂತಿ ಪಡೆಯವ ಸಾಧ್ಯತೆ ಇದೆ. ಇದರೊಂದಿಗೆ ಬಾಂಗ್ಲಾ ತಂಡ ಇಕ್ಬಾಲ್ ಅನುಪಸ್ಥಿತಿಯಲ್ಲಿ ಟೂರ್ನಿ ಮುಂದುವರೆಯುವ ಅನಿವಾರ್ಯ ಎದುರಿಸಲಿದೆ. ಕಳೆದ ಕೆಲ ದಿನಗಳ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧ ಟೂರ್ನಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಕ್ಬಾಲ್ ಸರಣಿಯಲ್ಲಿ 3 ಶತಕ, ಸಿಡಿಸಿ ಮಿಂಚಿದ್ದರು. ಸದ್ಯ ಬಾಂಗ್ಲಾಪರ ಇಕ್ಬಾಲ್ ಹೆಚ್ಚು (6307) ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?

    ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?

    ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದ್ದು ಕರ್ನಾಟಕದಲ್ಲಿ 80ರ ಗಡಿ ದಾಟಿದೆ. ಪೆಟ್ರೋಲ್ ದರ ಭಾರತದಲ್ಲಿ ಮಾತ್ರ ಏರಿಕೆಯಾಗುತ್ತಿದೆಯೋ? ಬೇರೆ ಕಡೆ ಏರಿಕೆಯಾದರೆ ಎಷ್ಟು ರೂ. ಇದೆ ಎನ್ನುವ ಪ್ರಶ್ನೆ ಮೂಡುವುದು ಸಹಜ. ಹೀಗಾಗಿ ಇಲ್ಲಿ ಅಮೆರಿಕ, ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಇಂಗ್ಲೆಂಡ್ ದೇಶಗಳ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನೀಡಲಾಗಿದೆ.

    ಅಮೆರಿಕದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 0.54 ಡಾಲರ್(53.88 ರೂ.), ಇದ್ದರೆ ಡೀಸೆಲ್ ಬೆಲೆ 0.83 ಡಾಲರ್(58.9 ರೂ.) ಇದೆ. ಅಮೆರಿಕ ವಿಶ್ವದ ಪೆಟ್ರೋಲ್ ಉತ್ಪದನಾ ರಾಷ್ಟ್ರಗಳಲ್ಲಿ ಒಂದಾಗಿದ್ದು, ಪ್ರತಿದಿನ 14.86 ದಶಲಕ್ಷ ಬ್ಯಾರಲ್(ವಿಶ್ವದ 15.3%) ಕಚ್ಚಾ ತೈಲವನ್ನು ಉತ್ಪಾದನೆ ಮಾಡುತ್ತಿದೆ. ಒಪೆಕ್ ರಾಷ್ಟ್ರಗಳ ಅತಿ ಹೆಚ್ಚು ಉತ್ಪಾದನೆ ಮಾಡುವ ಸೌದಿ ಅರೇಬಿಯಾ ಪ್ರತಿ ದಿನ 12.39 ದಶಲಕ್ಷ ಬ್ಯಾರಲ್ ತೈಲವನ್ನು ಉತ್ಪಾದನೆ ಮಾಡುತ್ತಿದೆ. ಇದನ್ನು ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಪಾಕಿಸ್ತಾನದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 112.8 ಪಾಕಿಸ್ತಾನ ರೂ.(ಭಾರತದ 65.2 ರೂ.) ಇದ್ದರೆ, ಡೀಸೆಲ್ ಬೆಲೆ 106.57 ಪಾಕಿಸ್ತಾನ  ರೂ.( ಭಾರತದ 106.57 ರೂ.) ಇದೆ.

    ಭಾರತದಲ್ಲಿ ಪ್ರತಿದಿನ ತೈಲ ಬೆಲೆ ಪರಿಷ್ಕರಣೆ ಆಗುತ್ತಿದ್ದರೆ ಶ್ರೀಲಂಕಾದಲ್ಲಿ ಪ್ರತಿ ತಿಂಗಳ 10 ರಂದು ತೈಲ ಬೆಲೆ ಪರಿಷ್ಕರಣೆಯಾಗುತ್ತದೆ. ಕೆಲ ಸಮಯದ ಹಿಂದೆ ಶ್ರೀಲಂಕಾ ಈ ನೀತಿಯನ್ನು ಅಳವಡಿಸಿದ್ದು ಪ್ರಸ್ತುತ ಈಗ ಒಂದು ಲೀಟರ್ ಪೆಟ್ರೋಲ್ ಬೆಲೆ 157 ಶ್ರೀಲಂಕಾ ರೂಪಾಯಿ(ಭಾರತದ 69.14 ರೂ.) ಇದ್ದರೆ, ಡೀಸೆಲ್ ಬೆಲೆ 118 ಶ್ರೀಲಂಕಾ ರೂಪಾಯಿ(51.9 ರೂ.) ಇದೆ.

    ನೇಪಾಳದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 111 ನೇಪಾಳಿ ರೂ.(ಭಾರತದ 71.25 ರೂ.) ಇದ್ದರೆ ಡೀಸೆಲ್ ಬೆಲೆ 95 ನೇಪಾಳಿ ರೂ.(59.43 ರೂ.) ಇದೆ.

    ಅತಿ ಹೆಚ್ಚು ಕಚ್ಚಾ ತೈಲವನ್ನು ಆಮದು ಮಾಡುವ ದೇಶಗಳ ಪೈಕಿ 2017ರಿಂದ ಚೀನಾ ಮೊದಲ ಸ್ಥಾನ ಪಡೆದಿದ್ದು ಪ್ರತಿ ಲೀಟರ್ ಪೆಟ್ರೋಲ್ ಗೆ 7.57 ಯುವಾನ್(78.95 ರೂ.) ಇದ್ದರೆ ಡೀಸೆಲ್ ಬೆಲೆ 6.76 ಯುವಾನ್(70.49 ರೂ. ಇದೆ). ಪ್ರತಿ ದಿನ ಚೀನಾ 8.4 ದಶಲಕ್ಷ ಬ್ಯಾರಲ್ ತೈಲ ಅಮದು ಮಾಡಿಕೊಳ್ಳುತ್ತಿದೆ. ಅಮೆರಿಕ ವಾಣಿಜ್ಯ ಸಮರ ಆರಂಭಿಸಿದ ಬಳಿಕ ಚೀನಾ ಕರೆನ್ಸಿ ಡಾಲರ್ ಮುಂದೆ ದುರ್ಬಲವಾಗುತ್ತಿದ್ದು ತೈಲ ಬೆಲೆ ಏರತೊಡಗಿದೆ.

    ಯುರೋಪಿಯನ್ ದೇಶಗಳ ಪೈಕಿ ಇಂಗ್ಲೆಂಡ್ ಅತಿ ಹೆಚ್ಚು ತೆರಿಗೆಯನ್ನು ತೈಲದ ಮೇಲೆ ವಿಧಿಸಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 5.91 ಪೌಂಡ್(119.9 ರೂ.) ಇದ್ದರೆ ಡೀಸೆಲ್ ಬೆಲೆ 6.03 ಪೌಂಡ್(121.8 ರೂ.) ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಂಡರ್ 19 ಟೆಸ್ಟ್ – ದ್ವಿಶತಕ ಸಿಡಿಸಿ ದಾಖಲೆ ಬರೆದ ಪವನ್ ಶಾ

    ಅಂಡರ್ 19 ಟೆಸ್ಟ್ – ದ್ವಿಶತಕ ಸಿಡಿಸಿ ದಾಖಲೆ ಬರೆದ ಪವನ್ ಶಾ

    ಕೊಲಂಬೊ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೀಂ ಇಂಡಿಯಾ ಅಂಡರ್-19 ಟೆಸ್ಟ್ ಪಂದ್ಯದಲ್ಲಿ ಪವನ್ ಶಾ ಅಕರ್ಷಕ 282 ರನ್ ಸಿಡಿಸಿ ಭಾರತದ ಪರ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

    ಶ್ರೀಲಂಕಾ ವಿರುದ್ಧ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಪವನ್ ಶಾ 282 ರನ್(332 ಎಸೆತ, 33 ಬೌಂಡರಿ, 1 ಸಿಕ್ಸರ್) ಸಿಡಿಸಿದ್ದಾರೆ. ಈ ಮೂಲಕ ವಿಶ್ವ ಕ್ರಿಕೆಟ್ ನ ಅಂಡರ್ 19 ಟೆಸ್ಟ್ ನಲ್ಲಿ ಅತಿ ಹೆಚ್ಚು ರನ್ ಸಿಡಿಸಿದ 2ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದರು. ಈ ಪಟ್ಟಿಯಲ್ಲಿ ಆಸೀಸ್ ಆಟಗಾರ ಸಿ ಪೀಕೆ ಮೊದಲ ಸ್ಥಾನದಲ್ಲಿ ಇದ್ದು, ಭಾರತದ ವಿರುದ್ಧವೇ ಪೀಕೆ ಅಜೇಯ 304 ರನ್ ಗಳಿಸಿದ್ದರು. ಇನ್ನು ಟೀಂ ಇಂಡಿಯಾ ಪರ ಗೌತಮ್ ಗಂಭೀರ್ (212), ಚೇತೇಶ್ವರ ಪೂಜಾರ ಮತ್ತು ಅಭಿನವ್ ಮುಕುಂದ್ (205ರನ್) ದ್ವಿಶತಕ ಸಿಡಿಸಿದ ಪ್ರಮುಖ ಆಟಗಾರರಾಗಿದ್ದಾರೆ.

    ಶ್ರೀಲಂಕಾ ವಿರುದ್ಧ ಟೆಸ್ಟ್ ಪಂದ್ಯದ ವೇಳೆ ಪವನ್ ಶಾ ಅವರಿಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ನೀಡಲಾಗಿತ್ತು. ಆರಂಭಿಕರಾಗಿ ಕಣಕ್ಕೆ ಇಳಿದ ಅಥರ್ವ 177ರನ್ (172 ಎಸೆತ, 20 ಬೌಂಡರಿ, 3 ಸಿಕ್ಸರ್) ಹೊಡೆದರು. ಇವರಿಬ್ಬರ ಅಮೋಘ ಆಟದ ನೆರವಿನಿಂದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ ಎಂಟು ವಿಕೆಟ್ ನಷ್ಟಕ್ಕೆ ಬರೋಬ್ಬರಿ 613 ರನ್ ಗಳಿಸಿದೆ.

    ಅಂಡರ್ 19 ಟೆಸ್ಟ್ ದ್ವಿಶತಕ :
    ಪವನ್ ಶಾ – 282 ರನ್ (2018)
    ಶ್ರೀವಾಸ್ತವಾ – 220 ರನ್ (2007)
    ಗೌತಮ್ ಗಂಭೀರ್ – 212 ರನ್ (2001)
    ಚೇತೇಶ್ವರ ಪೂಜಾರ – 21 ರನ್ (2005)
    ಅಭಿನವ್ ಮುಕುಂದ್ – 205 ರನ್ (2007)
    ವಿನಾಯಕ್ ಮಾನೆ – 201 ರನ್ (2001)

  • ತಂದೆ ದಾರಿಯನ್ನೇ ತುಳಿದ ಪುತ್ರ ಅರ್ಜುನ್ ತೆಂಡೂಲ್ಕರ್

    ತಂದೆ ದಾರಿಯನ್ನೇ ತುಳಿದ ಪುತ್ರ ಅರ್ಜುನ್ ತೆಂಡೂಲ್ಕರ್

    ನವದೆಹಲಿ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಅಂಡರ್ 19 ಯೂತ್ ಟೆಸ್ಟ್ ಪಂದ್ಯದ ಬ್ಯಾಂಟಿಂಗ್ ಅರ್ಜುನ್ ಕೂಡ ರನ್ ಖಾತೆ ತೆಗೆಯಲು ವಿಫಲರಾಗಿದ್ದು, ತಂದೆ ಸಚಿನ್ ತೆಂಡೂಲ್ಕರ್ ರಂತೆ ತಮ್ಮ ವೃತ್ತಿ ಜೀವನದ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

    ಕೊಲಂಬೊದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ಬೌಲರ್ ಶಶಿಕಾ ದುಲ್ಶನ್ ಬೌಲಿಂಗ್ ನಲ್ಲಿ ಅರ್ಜುನ್ ಶೂನ್ಯಕ್ಕೆ ಔಟಾದರು. ಇದಕ್ಕೂ ಮುನ್ನ ಅರ್ಜುನ್ 11 ಎಸೆತಗಳನ್ನು ಎದುರಿಸಿದರೂ ಸಹ ರನ್ ಖಾತೆ ತೆಗೆಯಲು ವಿಫಲರಾಗಿ ನಿರಾಸೆ ಮೂಡಿಸಿದರು.

    ಈ ಪಂದ್ಯದಲ್ಲೇ ಅರ್ಜುನ್ ತಮ್ಮ ಮೊದಲ ವಿಕೆಟ್ ಪಡೆದ ಸಾಧನೆಯನ್ನು ಮಾಡಿರುವ ಅರ್ಜುನ್, ತಮ್ಮ ಬೌಲಿಂಗ್ ನ 12 ಎಸೆತಗಳಲ್ಲಿ ಶ್ರೀಲಂಕಾ ಆಟಗಾರ ಕಮಿಲ್ ಮಿಶ್ರಾರನ್ನು ಎಲ್‍ಬಿ ಬಲೆಗೆ ಕೆಡವಿ ಮೊದಲ ವಿಕೆಟ್ ಪಡೆದು ಮಿಂಚಿದ್ದರು. ಇದಕ್ಕೂ ಮುನ್ನ ತಮ್ಮ ಮೊದಲ ಎಸೆತದ ರನ್ ಆಫ್ ಮಾಡುವ ವೇಳೆ ಅರ್ಜುನ್ ಎಡವಿದ್ದರು. ಅಂದಹಾಗೇ ಅರ್ಜುನ್ ಎಡಗೈ ವೇಗಿಯಾಗಿದ್ದು, ಇನ್ ಸ್ವೀಂಗ್ ಮಾಡುವ ಕೌಶಲ್ಯ ಹೊಂದಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 11 ಓವರ್ ಬೌಲ್ ಮಾಡಿರುವ ಅರ್ಜುನ್ 33 ರನ್ ನೀಡಿ 1 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 2 ಮೆಡಿನ್ ಓವರ್ ಗಳು ಸಹ ಸೇರಿದೆ.

    1989 ರ ವೇಳೆ 16 ವರ್ಷದ ಸಚಿನ್ ಕೂಡ ತಮ್ಮ ಏಕದಿನ ಪಂದ್ಯದ ಪಾದಾರ್ಪಣೆ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗಿದ್ದರು. ಪಾಕ್ ಬೌಲರ್ ವಕಾರ್ ಯೂನಿಸ್ ಬೌಲಿಂಗ್ ನಲ್ಲಿ ಸಚಿನ್ ವಿಕೆಟ್ ಒಪ್ಪಿಸಿದ್ದರು.

    ಟೀಂ ಇಂಡಿಯಾ ಅಂಡರ್ 19 ತಂಡದಲ್ಲಿ 18 ವರ್ಷದ ಅರ್ಜನ್ ಮೊದಲ ಬಾರಿಗೆ ಸ್ಥಾನ ಪಡೆದಿದ್ದರು. ಬಳಿಕ ಶ್ರೀಲಂಕಾ ಸರಣಿ ತರಬೇತಿ ಶಿಬಿರಕ್ಕೆ ಹಾಜರಾಗಿದ್ದರು. ಟೀಂ ಇಂಡಿಯಾ ಸದ್ಯ ಶ್ರೀಲಂಕಾ ವಿರುದ್ಧ ಯೂತ್ ಟೆಸ್ಟ್ ಟೂರ್ನಿಯಲ್ಲಿ 2 ಪಂದ್ಯಗಳನ್ನು ಆಡಲಿದೆ. ಬಳಿಕ 2 ಪಂದ್ಯಗಳ ಏಕದಿನ ಟೂರ್ನಿಯಲ್ಲಿ ಭಾಗವಹಿಸಲಿದೆ.

    https://twitter.com/KSKishore537/status/1019143288685776896?

  • ಶ್ರೀರಾಮನ ಚರಿತ್ರೆ ತಿಳಿಯಲು ಹಳಿಯಲ್ಲಿ ಓಡಲಿದೆ ಶ್ರೀರಾಮಾಯಣ ಎಕ್ಸ್‌ಪ್ರೆಸ್‌: ಈ ರೈಲಿನ ವಿಶೇಷತೆ ಏನು? ಪ್ಯಾಕೇಜ್ ಎಷ್ಟು?

    ಶ್ರೀರಾಮನ ಚರಿತ್ರೆ ತಿಳಿಯಲು ಹಳಿಯಲ್ಲಿ ಓಡಲಿದೆ ಶ್ರೀರಾಮಾಯಣ ಎಕ್ಸ್‌ಪ್ರೆಸ್‌: ಈ ರೈಲಿನ ವಿಶೇಷತೆ ಏನು? ಪ್ಯಾಕೇಜ್ ಎಷ್ಟು?

    ನವದೆಹಲಿ: ರಾಮನಿಂದಾಗಿ ಪ್ರಸಿದ್ಧಿ ಹೊಂದಿರುವ ಪ್ರಮುಖ ಸ್ಥಳಗಳ ಪ್ರವಾಸಕ್ಕಾಗಿಯೇ ಭಾರತೀಯ ರೈಲ್ವೇ ಇಲಾಖೆಯ ಪ್ರವಾಸೋದ್ಯಮ ನಿಗಮ ವಿಶೇಷ `ಶ್ರೀರಾಮಾಯಣ ಎಕ್ಸ್‌ಪ್ರೆಸ್‌’ ರೈಲು ಓಡಿಸಲು ಮುಂದಾಗಿದೆ.

    ಶ್ರೀರಾಮನ ಬಗ್ಗೆ ತಿಳಿಯುವುದಕ್ಕಾಗಿ ಭಾರತೀಯ ರೈಲ್ವೇ ಇಲಾಖೆ ತನ್ನ ಪ್ರವಾಸೋದ್ಯಮ ಯೋಜನೆಯಡಿ ಈ ಪ್ರವಾಸವನ್ನು ಆರಂಭಿಸಲಿದೆ. ಈ ರೈಲು ಅತ್ಯಾಧುನಿಕ ವ್ಯವಸ್ಥೆಗಳನ್ನು ಒಳಗೊಂಡಿದ್ದು, 800 ಆಸನಗಳನ್ನು ಹೊಂದಿದೆ. ಈ ರೈಲಿನಲ್ಲಿ ಶ್ರೀರಾಮನ ಬದುಕಿನ ಅಧ್ಯಾಯಗಳೊಂದಿಗೆ ತಳುಕು ಹಾಕಿಕೊಂಡಿರುವ ಪ್ರಮುಖ ಸ್ಥಳಗಳ ಭೇಟಿಗೆ ಅವಕಾಶ ಕಲ್ಪಿಸಿದೆ. 16 ದಿನಗಳಲ್ಲಿ ದೇಶದ ಪ್ರಮುಖ ಪುಣ್ಯಕ್ಷೇತ್ರಗಳನ್ನು ಸಂಪರ್ಕಿಸುತ್ತದೆ. ಈ ವರ್ಷದ ನವೆಂಬರ್ ನಲ್ಲಿ ದೆಹಲಿಯ ಸಫರ್ ಜಂಗ್ ರೈಲ್ವೇ ನಿಲ್ದಾಣದಿಂದ ಮೊದಲ ಪ್ರಯಾಣ ಆರಂಭವಾಗಲಿದೆ. ಇದನ್ನು  ಓದಿ: ಸೀತೆಯ ಜನ್ಮ ಸ್ಥಳದಿಂದ ಅಯೋಧ್ಯೆಗೆ ಬಸ್: ನೇಪಾಳದಲ್ಲಿ ಮೋದಿ ಚಾಲನೆ

    ಈ ಪ್ರವಾಸದಲ್ಲಿ ಊಟ, ವಸತಿ, ಯಾತ್ರಾ ಸ್ಥಳಗಳ ಪ್ರಯಾಣ, ಸುತ್ತಲಿನ ಪ್ರವಾಸಿ ತಾಣಗಳ ಭೇಟಿಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಸಿಗರಿಗೆ ಅಗತ್ಯ ನೆರವು ಹಾಗೂ ವ್ಯವಸ್ಥೆ ಗಮನಿಸಲು ಟೂರ್ ಮ್ಯಾನೇಜರ್ ಗಳನ್ನು ಸಹ ಇದಕ್ಕಾಗಿ ನಿಯೋಜಿಸಲಾಗಿದೆ.

    ಎಲ್ಲಿಂದ, ಎಲ್ಲಿಗೆ ಸಾಗುತ್ತದೆ?
    ವಿಶೇಷ ರೈಲು ದೆಹಲಿಯಿಂದ ಹೊರಟು ಮೊದಲಿಗೆ ಅಯೋಧ್ಯೆಯಲ್ಲಿ ತಲುಪುತ್ತದೆ. ಅಲ್ಲಿನ ಹುಮಾನ್ ಗುಡಿ, ರಾಮಕೋಟ್ ಹಾಗೂ ಕನಕ್ ದೇವಾಲಯ ಹಾಗೂ ರಾಮಾಯಣದಲ್ಲಿ ಪ್ರಸ್ತಾಪವಾಗುವ ಇತರ ಪ್ರಮುಖ ಸ್ಥಳಗಳ ಸುತ್ತಾಟದಲ್ಲಿ ನಂತರ ನಂದಿಗ್ರಾಮ, ಸೀತಾಮಡಿ, ಜನಕಪುರ್, ವಾರಾಣಾಸಿ, ಪ್ರಯಾಗ್, ಶೃಂಗವೇರ್ ಪುರ , ಚಿತ್ರಕೂಟ, ನಾಸಿಕ್, ಹಂಪಿ ಹಾಗೂ ರಾಮೇಶ್ವರಕ್ಕೆ ಬಂದು ತಲುಪಲಿದೆ.

    ಶ್ರೀಲಂಕ್ಕೂ ಹೋಗಬಹುದು:
    ಭಾರತ ಅಲ್ಲದೇ ಶ್ರೀಲಂಕಾಕ್ಕೂ ಪ್ರವಾಸದ ಮೂಲಕವೇ ಹೋಗಬಹುದು. ರಾಮೇಶ್ವರದಿಂದ ಪ್ರಯಾಣ ಮುಂದುವರಿಸುವ ಪ್ರಯಾಣಿಕರು ವಿಮಾನದ ಮೂಲಕ ಶ್ರೀಲಂಕಾಕ್ಕೆ ತೆರಳಬಹುದು. ಶ್ರೀಲಂಕಾದಲ್ಲಿ ಬರುವ ಕ್ಯಾಂಡಿ, ಕೊಲಂಬೋ ಹಾಗೂ ನಿಗೊಂಬೊ ಸ್ಥಳಗಳಿಗೆ ಭೇಟಿ ನೀಡಲಾಗುತ್ತದೆ.

    ಶ್ರೀರಾಮಾಯಣ ಎಕ್ಸ್‌ಪ್ರೆಸ್‌ನ ಪ್ಯಾಕೇಜ್ ಎಷ್ಟು?
    ಈ ವಿಶೇಷ ರೈಲಿನಲ್ಲಿ ಪ್ರವಾಸಕ್ಕೆ ಒಬ್ಬ ವ್ಯಕ್ತಿಗೆ ನವದೆಹಲಿಯಿಂದ ರಾಮೇಶ್ವರದವರೆಗೆ 15,120 ರೂ. ನಿಗದಿ ಮಾಡಲಾಗಿದ್ದು, ರಾಮೇಶ್ವರಂದಿಂದ ಶ್ರೀಲಂಕಾಕ್ಕೆ ತೆರಳುವ ಪ್ರವಾಸಿಗರು ಪ್ರತ್ಯೇಕವಾಗಿ 36,970 ಪಾವತಿಮಾಡಬೇಕಾಗುತ್ತದೆ. ಇದರಲ್ಲಿ ವಿಮಾನ ಪ್ರಯಾಣ ಶುಲ್ಕ ಸೇರಿದಂತೆ ಊಟ, ವಸತಿ ಹಾಗೂ ಪ್ರವಾಸಿ ತಾಣಗಳ ಭೇಟಿಯ ಪ್ಯಾಕೇಜನ್ನು ಭಾರತೀಯ ರೈಲ್ವೇ ಇಲಾಖೆಯೇ ಒದಗಿಸಲಿದೆ.

    `ಶ್ರೀರಾಮಾಯಣ ಎಕ್ಸ್‌ಪ್ರೆಸ್‌’ ಒಟ್ಟು 16 ದಿನಗಳಲ್ಲಿ ತನ್ನ ಯಾತ್ರೆಯನ್ನು ಪೊರೈಸಲಿದ್ದು, ಮೊದಲನೇ ಪ್ರಯಾಣವನ್ನು ನವೆಂಬರ್ 14 ರಿಂದ ಪ್ರಾರಂಭಗೊಳಿಸುತ್ತದೆ. ಶ್ರೀ ರಾಮಾಯಣ ಎಕ್ಸ್‌ಪ್ರೆಸ್‌ ಪ್ಯಾಕೇಜ್ ಪ್ರಯಾಣವನ್ನು ಭಾರತೀಯ ರೈಲ್ವೆ ಇಲಾಖೆ ತನ್ನ ವೆಬ್‍ಸೈಟ್‍ ನಲ್ಲಿ ಪ್ರಕಟಿಸಿದೆ. ಕೇಂದ್ರ ರೈಲ್ವೇ ಸಚಿವರಾದ ಪಿಯೂಷ್ ಗೋಯಲ್ ರವರು ನೂತನ ಶ್ರೀ ರಾಮಾಯಣ ಎಕ್ಸ್‍ಪ್ರೆಸ್ ಕುರಿತು ಕಿರು ಮಾಹಿತಿಯನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

    ಏನಿದು ರಾಮಾಯಣ ಸರ್ಕ್ಯೂಟ್?
    ಧಾರ್ಮಿಕ ಪ್ರವಾಸಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾರತ ಪ್ರವಾಸೋದ್ಯಮ ಇಲಾಖೆ ಧಾರ್ಮಿಕ ಕೇಂದ್ರಗಳ ನಡುವೆ ಸಂಪರ್ಕ ಸಾಧಿಸಲು ವಿಶೇಷ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದೆ. ಇದರಲ್ಲಿ ರಾಮಾಯಣ ಸರ್ಕ್ಯೂಟ್ ಒಂದಾಗಿದ್ದು, ಇದರ ಅಡಿಯಲ್ಲಿ ರಾಮಾಯಣ ಕಥೆಗೆ ಸಂಬಂಧಿಸಿದ 15 ಪ್ರವಾಸಿ ಜಾಗಗಳನ್ನು ಸಂಪರ್ಕಿಸುವ ಮೂಲಕ ಅಭಿವೃದ್ಧಿಪಡಿಸಲಾಗುತ್ತದೆ.

    ಉತ್ತರಪ್ರದೇಶದ ಅಯೋಧ್ಯೆ, ನಂದಿ ಗ್ರಾಮ್, ಶೃಂಗವೇರ್ ಪುರ ಮತ್ತು ಚಿತ್ರಕೂಟ, ಬಿಹಾರದ ಸೀತಾಮಡಿ, ಬಕ್ಸರ್ ಮತ್ತು ದರ್ಭಂಗಾ, ಮಧ್ಯಪ್ರದೇಶದ ಚಿತ್ರಕೂಟ, ಒಡಿಶಾದ ಮಹೇಂದ್ರ ಗಿರಿ, ಛತ್ತೀಸ್‍ಗಢದ ಜಗದಾಲ್ ಪುರ, ಮಹಾರಾಷ್ಟ್ರದ ನಾಸಿಕ್ ಮತ್ತು ನಾಗ್ಪುರ, ತೆಲಂಗಾಣದ ಭದ್ರಾಚಲಮ್, ಹಾಗೂ ತಮಿಳುನಾಡಿನ ರಾಮೇಶ್ವರಂ, ಕರ್ನಾಟಕದ ಹಂಪಿ ರಾಮಾಯಣ ಸರ್ಕ್ಯೂಟ್ ನಲ್ಲಿದೆ.

    ವಿಶೇಷ ರೈಲಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿ: www.irctctourism.com