Tag: Sri ramulu

  • ಖಾತೆ ಬದಲಾವಣೆ ಮಾಡುವಂತೆ ಸಿಎಂ ನನಗೆ ಸೂಚಿಸಿದ್ದಾರೆ: ಸುಧಾಕರ್

    ಖಾತೆ ಬದಲಾವಣೆ ಮಾಡುವಂತೆ ಸಿಎಂ ನನಗೆ ಸೂಚಿಸಿದ್ದಾರೆ: ಸುಧಾಕರ್

    – ಆರೋಗ್ಯ ಸಚಿವರಾಗಿ ಸುಧಾಕರ್
    – ರಾಮುಲುಗೆ ಸಮಾಜ ಕಲ್ಯಾಣ ಇಲಾಖೆ

    ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ದಿಢೀರ್ ಬೆಳವಣಿಗೆಯಾಗಿದ್ದು, ಇಂದಿನಿಂದ ಆರೋಗ್ಯ ಸಚಿವರಾಗಿ ಕೆ. ಸುಧಾಕರ್ ಅವರು ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ. ಈ ಹಿಂದೆ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಅವರು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನು ಹೊತ್ತುಕೊಳ್ಳಲಿದ್ದಾರೆ.

    ಈ ಸಂಬಂಧ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಆರೋಗ್ಯ ಇಲಾಖೆ ವಹಿಸಿಕೊಂಡು ಕೊರೊನಾ ನಿಯಂತ್ರಣ ಸೇರಿದಂತೆ ಮಹತ್ವದ ಬದಲಾವಣೆ ತರುವಂತೆ ಹಾಗೂ ರಾಜ್ಯದ ಜನರಿಗೆ ಉತ್ತಮ ಆರೋಗ್ಯ ನೀಡುವ ನಿಟ್ಟಿನಲ್ಲಿ ಕ್ರಾಂತಿಕಾರಕ ಕೆಲಸ ಮಾಡಬೇಕು ಅಂತ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನನಗೆ ಸೂಚನೆ ನೀಡಿದ್ದಾರೆ. ಸಿಎಂ ಅವರಿಗೆ ಧನ್ಯವಾದ ಹೇಳ್ತೀನಿ. ಅವರ ನಂಬಿಕೆ ಉಳಿಸಿಕೊಳ್ಳುವಂತಹ ಕೆಲಸ ಮಾಡ್ತೀನಿ. ಶಕ್ತಿ ಮೀರಿ ಪ್ರಾಮಾಣಿಕ ಕೆಲಸ ಮಾಡ್ತೀನಿ. ಪಕ್ಷದ ಎಲ್ಲಾ ನಾಯಕರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

    ಶ್ರೀರಾಮುಲು ಜೊತೆ ಮಾತಾಡಿದ್ದೇನೆ. ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡ್ತೀವಿ. ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಂದೇ. ಇದೊಂದು ದೊಡ್ಡ ಹೊಣೆ. ಹೊಸ ಜವಾಬ್ದಾರಿಯನ್ನ ವಿಶ್ವಾಸದಿಂದ ತೆಗೆದುಕೊಳ್ತೀನಿ. ಮೊದಲ ದಿನ ಮೈಸೂರಿನಲ್ಲಿ ಸಭೆ ಮಾಡ್ತಿದ್ದೇನೆ. ದಸರಾ ಸಿದ್ಧತೆ ಮತ್ತು ಒಂದು ವಾರದಿಂದ ಕೊರೊನಾ ಹೆಚ್ಚಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ಮಾಡ್ತೀನಿ. ಖಾಸಗಿ ಆಸ್ಪತ್ರೆಗಳ ಜೊತೆಯೂ ಸಭೆ ಮಾಡ್ತೀನಿ. ಕೆಲ ಆಸ್ಪತ್ರೆಗಳಿಗೂ ಭೇಟಿ ಕೊಡ್ತೀನಿ. ಕೊರೊನಾ ನಿಯಂತ್ರಣ ತರುವ ಕೆಲಸ ಮಾಡ್ತೀವಿ ಎಂದರು.

    ಶ್ರೀರಾಮುಲಿಗೆ ಬೇಸರ ಇಲ್ಲ. ನಾನು ಅವರ ಜೊತೆ ಮಾತಾಡಿದ್ದೇನೆ. ಸಮಾಜ ಕಲ್ಯಾಣ ಇಲಾಖೆ ದೊಡ್ಡ ಇಲಾಖೆ. ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡೋ ಇಲಾಖೆ. ಅವರು ಮೊದಲು ಅದೇ ಇಲಾಖೆ ಕೇಳಿದ್ರು ಅಂತ ಕೇಳಿದ್ದೇನೆ. ಹೀಗಾಗಿ ಅವರಿಗೆ ಯಾವುದೇ ಅಸಮಾಧಾನ ಇಲ್ಲ ಅಂತ ಭಾವಿಸಿದ್ದೇನೆ ಎಂದು ತಿಳಿಸಿದರು.

    ಸಿಎಂ ಇಂದು ಆದೇಶ ಮಾಡೋದಾಗಿ ತಿಳಿಸಿದ್ದಾರೆ. ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದೇನೆ. ಆದೇಶ ಬಂದ ಕೂಡಲೇ ನಾಳೆಯೇ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿ ಮುಂದಿನ ಕೆಲಸ ಮಾಡ್ತೀನಿ. ಆರೋಗ್ಯ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿಲ್ಲ. ಈಗಾಗಲೇ ಸದನದಲ್ಲಿ ಈ ಬಗ್ಗೆ ಹೇಳಿದ್ದೇನೆ. ಇನ್ನೂ ಇಲಾಖೆ ಚಾರ್ಜ್ ತಗೊಂಡಿಲ್ಲ. ಇಲಾಖೆ ಚಾರ್ಜ್ ತೆಗೆದುಕೊಂಡ ಕೂಡಲೇ ಇಲಾಖೆ ಅಧ್ಯಯನ ಮಾಡಿ ಮುಂದಿನ ಕ್ರಮ ತಗೋತೀನಿ ಎಂದು ಹೇಳಿದರು.

    ಇಲಾಖೆ ವಹಿಸಿಕೊಂಡು ನನ್ನ ಮೊದಲ ಆದ್ಯತೆ ಕೊರೊನಾ ನಿಯಂತ್ರಣ ಮಾಡೋದು. ಸಾವಿನ ಪ್ರಮಾಣ ಕಡಿಮೆ ಮಾಡೋದು ನನ್ನ ಗುರಿ. ಜನರಿಗೆ ಸುಲಭವಾಗಿ ಚಿಕಿತ್ಸೆ ಸಿಗುವಂತೆ ಕ್ರಮ ತೆಗೆದುಕೊಳ್ಳೋದು ನನ್ನ ಗುರಿ ಅಂದ್ರು.

    ಇದೇ ವೇಳೆ ಶ್ರೀರಾಮುಲು ಗಮನಕ್ಕೆ ತಂದು ಖಾತೆ ಬದಲಾವಣೆ ಮಾಡಲಾಗಿದೆಯಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಸುಧಾಕರ್, ಅದನ್ನ ಸಿಎಂಗೆ ನೀವು ಕೆಳಬೇಕು. ಬಯಸದೇ ಬಂದ ಭಾಗ್ಯ ಅನ್ನೋದಕ್ಕಿಂತ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಂದೇ. ಈಗ ಅ ಜವಾಬ್ದಾರಿ ನನಗೆ ಕೊಟ್ಟಿದ್ದಾರೆ. ಸದನ್ನ ಸಮರ್ಪಕವಾಗಿ ನಿಭಾಯಿಸುತ್ತೇನೆ ಎಂದು ಭರವಸೆ ನೀಡಿದರು.

  • ಆರೋಗ್ಯ ಸಚಿವ ಶ್ರೀರಾಮುಲು ಸಂಪೂರ್ಣ ಗುಣಮುಖ

    ಆರೋಗ್ಯ ಸಚಿವ ಶ್ರೀರಾಮುಲು ಸಂಪೂರ್ಣ ಗುಣಮುಖ

    -ನಾಳೆಯಿಂದ ಸಾರ್ವಜನಿಕ ಸೇವೆಗೆ

    ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಂಪೂರ್ಣ ಗುಣಮುಖರಾಗಿದ್ದು, ನಾಳೆಯಿಂದ ಸಾರ್ವಜನಿಕ ಸೇವೆಗೆ ಮರಳಲಿದ್ದಾರೆ. ಆಗಸ್ಟ್ 16ರಂದು ಬೌರಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸಚಿವರು 10 ದಿನ ಹೋಂ ಕ್ವಾರಂಟೈನ್ ನಲ್ಲಿದ್ದರು.

    ಇದೀಗ ಗುಣಮುಖರಾಗಿರುವ ಬಗ್ಗೆ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಆತ್ಮೀಯರೆ ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನ ಪರೀಕ್ಷೆ ನೆಗೆಟಿವ್ ಬಂದಿದೆ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ ಮರುಳುತ್ತೇನೆ. ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

    ಈ ಸಂದರ್ಭದಲ್ಲಿ, ಸಹಕಾರ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೂ ಮತ್ತು ಸಂಪುಟದ ಸಹೋದ್ಯೋಗಿಗಳಿಗೂ ಹಾಗೂ ನನ್ನ ಆರೋಗ್ಯಕ್ಕಾಗಿ ಶುಭ ಹಾರೈಸಿದ ಬಂಧುಗಳು, ಸ್ನೇಹಿತರು, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ಮತ್ತೊಮ್ಮೆ ಹೃದಯದಪೂರ್ವಕ ಧನ್ಯವಾದಗಳನ್ನು ಸಚಿವರು ತಿಳಿಸಿದ್ದಾರೆ.

    ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸಚಿವರು ಆಗಸ್ಟ್ 9ರಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

  • ಜನೌಷಧಿ ಕೇಂದ್ರಗಳಲ್ಲಿ ಮಾಸ್ಕ್ ವಿತರಣೆ: ಶ್ರೀರಾಮುಲು

    ಜನೌಷಧಿ ಕೇಂದ್ರಗಳಲ್ಲಿ ಮಾಸ್ಕ್ ವಿತರಣೆ: ಶ್ರೀರಾಮುಲು

    ಬೆಂಗಳೂರು: ಸಿಲಿಕಾನ್ ಸಿಟಿಯ ವ್ಯಕ್ತಿಗೆ ಕೊರೊನಾ ವೈರಸ್ ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಫುಲ್ ಆಲರ್ಟ್ ಆಗಿದೆ.

    ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಫೀಲ್ಡಿಗಿಳಿದು ಪರಿಶೀಲನೆ ನಡೆಸುತ್ತಿದ್ದಾರೆ. ಮಾಸ್ಕ್ ಗೆ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆಯೂ ಮಾಹಿತಿ ಪಡೆದಿರುವ ಸಚಿವ ಶ್ರೀರಾಮುಲು ಜನೌಷಧಿ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಸ್ಕ್ ವಿತರಿಸಲಾಗುವುದು ಎಂದು ಹೇಳಿದರು.

    ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಶ್ರೀರಾಮುಲು ದಿಢೀರ್ ಪರಿಶೀಲನೆ ನಡೆಸಿದ್ರು. ಕೊರೊನಾ ವೈರಸ್ ಪತ್ತೆ ಹಚ್ಚುವ ಕೇಂದ್ರಗಳನ್ನ ಪರಿಶೀಲನೆ ಮಾಡಿದ್ರು. ಇದೇ ವೇಳೆ ವಿಮಾನ ಪ್ರಯಾಣಿಕರ ತಪಾಸಣೆ ಕಾರ್ಯವನ್ನು ಖುದ್ದು ಪರಿಶೀಲನೆ ನಡೆಸಿದ್ರು.

    ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊರೊನಾ ವೈರಸ್ ಬಗ್ಗೆ ಯಾರೂ ಭಯ ಭೀತರಾಗೋದು ಬೇಡ. ಈಗಾಗಲೇ ಏರ್‌ಪೋರ್ಟಿನಲ್ಲಿ ಮಾಸ್ಕ್ ವಿತರಣೆ ಮಾಡುತ್ತಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ, ಜನೌಷಧಿ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

    450 ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕಿನ ವ್ಯಕ್ತಿಯು ಅಮೆರಿಕದಿಂದ ಬಂದಿದ್ದು, ಅವರು ಓಡಾಡಿದ ಟ್ಯಾಕ್ಸಿ, ಅವರ ಅಕ್ಕಪಕ್ಕದವರು ಹಾಗೂ ಕುಟುಂಬದವರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ರಾಜ್ಯ ಸರ್ಕಾರ ಈ ವೈರಸ್ ಅನ್ನು ಎದುರಿಸಲು ಸಮರ್ಥವಾಗಿದೆ ಎಂದರು.

  • ಸುದೀಪ್‍ರನ್ನು ಭೇಟಿ ಮಾಡಿದ ಶಾಸಕ ಶ್ರೀರಾಮುಲು

    ಸುದೀಪ್‍ರನ್ನು ಭೇಟಿ ಮಾಡಿದ ಶಾಸಕ ಶ್ರೀರಾಮುಲು

    ಬೆಂಗಳೂರು: ಇಂದು ಬಿಜೆಪಿ ಶಾಸಕ ಶ್ರೀರಾಮುಲು, ನಟ ಸದೀಪ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಸರ್ಕಾರದ ನಾಲ್ಕು ವರ್ಷದ ಸಾಧನೆಯುಳ್ಳ ಪುಸ್ತಕವನ್ನು ಸುದೀಪ್ ಅವರಿಗೆ ನೀಡಿದ್ದಾರೆ.

    ಜೆ.ಪಿ.ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತೆರಳಿರುವ ಶ್ರೀರಾಮುಲು, ರಾಯಚೂರು ಅಥವಾ ಬಳ್ಳಾರಿ ಕ್ಷೇತ್ರದಿಂದ ನಿಲ್ಲುವಂತೆ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು ಮತ್ತು ರಾಜುಗೌಡ ಪರವಾಗಿ ಪ್ರಚಾರ ಮಾಡಿದ್ರು. ಬಳ್ಳಾರಿ, ರಾಯಚೂರು ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಹುಡುಕಾಟ ನಡೆಸಿದ್ದು, ಶ್ರೀರಾಮುಲು ಅವರು ಗೆಳೆಯ ಸುದೀಪ್ ಮುಂದೆ ಚುನಾವಣೆಗೆ ನಿಲ್ಲುವಂತೆ ಪ್ರಸ್ತಾವನೆಯನ್ನು ಸಲ್ಲಿಸಿದಾರಂತೆ.

    ಸುದೀಪ್ ಬಿಜೆಪಿ ನೀಡಿರುವ ಆಫರ್ ತಿರಸ್ಕರಿಸುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸುದೀಪ್ ಅವರಿಗೆ ಎಲ್ಲ ಪಕ್ಷಗಳಿಂದಲೂ ಟಿಕೆಟ್ ನೀಡುವ ಭರವಸೆಯನ್ನು ನೀಡಲಾಗಿತ್ತು. ಆದರೆ ಸುದೀಪ್ ರಾಜಕೀಯ ಪ್ರವೇಶಿಸಲು ಹಿಂದೇಟು ಹಾಕಿದ್ದರು.

    ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ನಾಯಕರು ಹಿರಿಯ ಗಾಯಕಿ ಲತಾ ಮಂಗೇಶ್ಕರ್ ನಿವಾಸಕ್ಕೆ ತೆರಳಿ ಮೋದಿ ಸರ್ಕಾರದ ಸಾಧನೆಯ ಕಿರು ಹೊತ್ತಿಗೆಯನ್ನು ನೀಡಿ ಬಂದಿದ್ದರು. ಈ ಬಗ್ಗೆ ಲತಾ ಮಂಗೇಶ್ಕರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡಿಕೊಂಡು `ಎಲ್ಲ ನಾಯಕರನ್ನು ಭೇಟಿಯಾಗಿದ್ದು ಖುಷಿ ತಂದಿದೆ’ ಎಂದು ಬರೆದುಕೊಂಡಿದ್ದರು.

    ಲೋಕಸಭಾ ಚುನಾವಣೆ ಪ್ರಚಾರದ ಕೆಲಸದಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರು ಈಗಾಗಲೇ ತೊಡಗಿಕೊಂಡಿದ್ದು, ನಟಿ, ನಟಿ, ಉದ್ಯಮಿಗಳಿಗೆ ಎನ್‍ಡಿಎ ಸರ್ಕಾರದ ಸಾಧನೆ ತಿಳಿಸುವ ಕಿರು ಹೊತ್ತಿಗೆಯನ್ನು ನೀಡುತ್ತಿದ್ದಾರೆ.

  • ಅನ್ಯ ಪಕ್ಷಗಳ ಶಾಸಕರು ಬಿಜೆಪಿ ಬರ್ತೀವಿ ಅಂದ್ರೆ ಸ್ವಾಗತಿಸುತ್ತೇವೆ: ಶ್ರೀರಾಮುಲು

    ಅನ್ಯ ಪಕ್ಷಗಳ ಶಾಸಕರು ಬಿಜೆಪಿ ಬರ್ತೀವಿ ಅಂದ್ರೆ ಸ್ವಾಗತಿಸುತ್ತೇವೆ: ಶ್ರೀರಾಮುಲು

    ಗದಗ: ಅನ್ಯ ಪಕ್ಷಗಳ ಶಾಸಕರು ಬಿಜೆಪಿ ಬರ್ತೀವಿ ಅಂದರೆ ಖಂಡಿತವಾಗಿ ಸ್ವಾಗತಿಸುತ್ತೇವೆ. ಸ್ವಯಂ ಪ್ರೇರಣೆಯಿಂದ ಬಂದರೆ ಬೇಡ ಅನ್ನೋ ಮಾತೇ ಇಲ್ಲ ಅಂತ ಬಿಜೆಪಿ ಮುಖಂಡ, ಶಾಸಕ ಬಿ. ಶ್ರೀರಾಮುಲು ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾರನ್ನೂ ಸಂಪರ್ಕಿಸಲು ಮುಂದಾಗುತ್ತಿಲ್ಲ. ಸಮ್ಮಿಶ್ರ ಸರ್ಕಾರದ ಬೆಳವಣಿಗೆಗಳನ್ನು ಸುಮ್ಮನೆ ಗಮನಿಸುತ್ತಾ ಇದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲ ಶಾಸಕರು ಸ್ವಯಂ ಪ್ರೇರಣೆಯಿಂದ ಬಿಜೆಪಿಗೆ ಬಂದಿದ್ದರು. ಕಾಂಗ್ರೆಸ್‍ನವರು ಅದನ್ನು ಆಪರೇಶನ್ ಕಮಲ ಎಂದು ಬಿಂಬಿಸಿದರು. ಈಗ ಪಕ್ಷೇತರ ಶಾಸಕರನ್ನು ಬಲವಂತವಾಗಿ ಅವರೇ ಹೊತ್ತೊಯ್ಯದರಲ್ಲ ಅದಕ್ಕೆ ಏನಂತ ಕರೆಯಬೇಕು ಅಂತ ಪ್ರಶ್ನೆ ಮಾಡಿದ್ರು.

    ರಾಜ್ಯದಲ್ಲಿ ಮಳೆಯಿಂದ ಜನರು ತತ್ತರಿಸಿದ್ದಾರೆ. ಆದ್ರೆ ಕುಮಾರಸ್ವಾಮಿ ಸರ್ಕಾರ ಜನರ ಸಮಸ್ಯೆ ಕೇಳುತ್ತಿಲ್ಲ. ಇನ್ನೂ ಅಧಿಕಾರ ಮತ್ತು ಕುರ್ಚಿ ಕಸರತ್ತು ನಡೆಸುತ್ತಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

    ಎಚ್.ಕೆ. ಪಾಟೀಲ್ ಶಾಸಕರಾಗಿ ಆಯ್ಕೆ ಪ್ರಶ್ನಿಸಿ ಸಿಬಿಐಗೆ ದೂರು ನೀಡಲು ನಿರ್ಧರಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಕಡಿಮೆ ಅಂತರದಲ್ಲಿ ಸೋತಿದ್ದಾರೆ. ಎಚ್.ಕೆ ಪಾಟೀಲ್ ಬೋಗಸ್ ಮತ ಹಾಕಿಸಿ ಜಯಗಳಿಸಿದ್ದಾರೆ. ಈ ಕುರಿತು ಈಗಾಗಲೇ ರಾಜ್ಯ ಹಾಗೂ ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಶ್ರೀರಾಮುಲು ಹೇಳಿದರು.

    ಗದಗ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಎಚ್.ಕೆ.ಪಾಟೀಲ್ ಸ್ಪರ್ಧೆ ಮಾಡಿದ್ದರು. ಇತ್ತ ಬಿಜೆಪಿ ಅಭ್ಯರ್ಥಿಯಾಗಿ ಅನಿಲ್ ಮೆಣಸಿನಕಾಯಿ ಚುನಾವಣಾ ಕಣಕ್ಕೆ ಇಳಿದಿದ್ದರು. ಎಚ್.ಕೆ.ಪಾಟೀಲ್ 77,699 ಮತಗಳನ್ನು ಪಡೆದಿದ್ದರೆ, ಅನಿಲ್ ಮೆಣಸಿನಕಾಯಿ 75,831 ಮತಗಳನ್ನು ಪಡೆದುಕೊಂಡಿದ್ದರು. ಎಚ್.ಕೆ.ಪಾಟೀಲ್ 1,868 ಅಲ್ಪಮತಗಳ ಮುನ್ನಡೆಯಲ್ಲಿ ಗೆಲುವುನ್ನು ತಮ್ಮದಾಗಿಸಿಕೊಂಡು ಶಾಸಕರಾಗಿ ಆಯ್ಕೆಯಾಗಿದ್ದಾರೆ.

  • ಜನಾರ್ದನ ರೆಡ್ಡಿ ವೇದಿಕೆ ಏರಿದ್ರೆ ನಂಗೆ ವಾಟ್ಸಪ್ ಮಾಡಿ: ಮುರಳೀಧರ್ ರಾವ್

    ಜನಾರ್ದನ ರೆಡ್ಡಿ ವೇದಿಕೆ ಏರಿದ್ರೆ ನಂಗೆ ವಾಟ್ಸಪ್ ಮಾಡಿ: ಮುರಳೀಧರ್ ರಾವ್

    ಮಡಿಕೇರಿ: ಜನಾರ್ದನ ರೆಡ್ಡಿ ಬಿಜೆಪಿ ಲೀಡರ್ ಅಲ್ಲ. ಒಂದು ವೇಳೆ ಅವರು ವೇದಿಕೆ ಏರಿದರೆ ನನಗೆ ವಾಟ್ಸಪ್ ಮಾಡಿ ಎಂದು ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನಾರ್ದನರೆಡ್ಡಿ ಬಿಜೆಪಿಯ ತಾರಾ ಪ್ರಚಾರಕರಲ್ಲ. ರೆಡ್ಡಿ ಕೋರ್ಟ್ ನಿಂದ ನಿರಾಪರಾಧಿ ಆಗೋವರೆಗೂ ಬಿಜೆಪಿಗೆ ಎಂಟ್ರಿಯಿಲ್ಲ. ಜನಾರ್ದನ ರೆಡ್ಡಿ ಬಿಜೆಪಿ ಪರ ಪ್ರಚಾರಕ್ಕೂ, ನಮಗೂ ಸಂಬಂಧವಿಲ್ಲ ಎಂದು ಅವರು ತಿಳಿಸಿದರು.

    ಶಾಸಕ ಸೋಮಶೇಖರ್ ರೆಡ್ಡಿ 20 ವರ್ಷಗಳಿಂದ ಪಕ್ಷದಲ್ಲಿದ್ದಾರೆ, ಶ್ರೀರಾಮುಲು, ಸೋಮಶೇಖರ್ ರೆಡ್ಡಿಯವರನ್ನ ಸಿದ್ದರಾಮಯ್ಯ ಅವಮಾನಿಸೋದು ಯಾಕೆ? ಜನಾರ್ದನ ರೆಡ್ಡಿಯಿಂದಾಗಿಯೇ ಇವರು ಯಾರು ನಾಯಕರಾದವರಲ್ಲ, ಬಿಜೆಪಿಯ ಯಾವುದೇ ವೇದಿಕೆಯನ್ನ ಜನಾರ್ದನ ರೆಡ್ಡಿ ಏರಲ್ಲ, ಒಂದು ವೇಳೆ ಅವರು ವೇದಿಕೆ ಏರಿದರೆ ನನಗೆ ವಾಟ್ಸಪ್ ಮಾಡಿ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುರುಳೀಧರ್ ರಾವ್ ಹೇಳಿದರು.

    ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದರು. ಟಿಪ್ಪು ಯಾರು ಎನ್ನುವುದು ಕೊಡಗಿನವರಿಗೆ ಗೊತ್ತಿದೆ. ಅದರೂ ಟಿಪ್ಪು ಜಯಂತಿ ತಂದು ಅನೇಕ ಘಟನೆಗಳಿಗೆ ಕಾರಣವಾಗಿದ್ದಾರೆ ಎಂದು ದೂರಿದರು.

    ಮೋದಿ, ಅಮಿತ್ ಶಾ ಹೊರಗಿನನವರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಹಾಗಾದರೆ ರಾಹುಲ್ ಗಾಂಧಿ ಎಲ್ಲಿಂದ ಬಂದಿದ್ದಾರೆ? ದೇವಾಲಯ, ಮಠಗಳ ಸಂರಕ್ಷಣೆ, ಮಲೆನಾಡು-ಕರಾವಳಿ ಭಾಗದ ರಕ್ಷಣೆ ನಮ್ಮ ಪ್ರಮುಖ ಅಜೆಂಡಾ. ಎರಡು ದಿನಗಳಲ್ಲಿ ನಮ್ಮ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ಈ ಬಾರಿ ನಾವು 150ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಬದಾಮಿಯಲ್ಲಿ ಶ್ರೀರಾಮುಲುಗೆ ಟಾಂಗ್ ಕೊಡಲು ಸಿಎಂ ಮಾಸ್ಟರ್ ಪ್ಲಾನ್

    ಬದಾಮಿಯಲ್ಲಿ ಶ್ರೀರಾಮುಲುಗೆ ಟಾಂಗ್ ಕೊಡಲು ಸಿಎಂ ಮಾಸ್ಟರ್ ಪ್ಲಾನ್

    ಬಾಗಲಕೋಟೆ: ಮೊದಲ ಬಾರಿಗೆ ಉತ್ತರ ಕರ್ನಾಟಕದ ಬದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಸಿದ್ದರಾಮಯ್ಯ ಹೇಗಾದ್ರೂ ಮಾಡಿ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮ ಎದುರಾಳಿ ಬಿಜೆಪಿಯ ಶ್ರೀರಾಮುಲು ಅವರನ್ನು ಅಧಿಕ ಮತಗಳ ಅಂತರದಿಂದ ಸೋಲಿಸಲು ಸಹ ಸಿಎಂ ರಾಜ್ಯ ನಾಯಕರ ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಬದಾಮಿಯಲ್ಲೂ ಗೆಲುವು ಅಷ್ಟೊಂದು ಸುಲಭವಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ 30 ಸಾವಿರಕ್ಕೂ ಅಧಿಕ ನಾಯಕ ಸಮುದಾಯ ಮತಗಳಿರುವ ಕ್ಷೇತ್ರದ ಜವಾಬ್ದಾರಿಯನ್ನು ಸತೀಶ್ ಜಾರಕಿಹೊಳಿ ಅವರಿಗೆ ನೀಡಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.

    ನಾಯಕರ ಮತಗಳು ಶ್ರೀರಾಮಲುಗೆ ಸಾಲಿಡ್ ಆಗಬಹುದು ಎನ್ನುವ ಕಾರಣದಿಂದ ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರಾದ ಸತೀಶ್ ಜಾರಕಿಹೊಳಿಗೆ ಕ್ಷೇತ್ರ ಜವಾಬ್ದಾರಿ ನೀಡುವ ಮೂಲಕ ತಿರುಗೇಟು ಕೊಡಲು ಸಿಎಂ ಪ್ಲಾನ್ ಮಾಡಿದ್ದಾರೆ. ಕುರುಬ ಮತ್ತು ನಾಯಕರ ಮತಗಳು ಹೆಚ್ಚು ಪಡೆದ್ರೆ ಗೆಲುವು ಸುಲುಭವಾಗಬಹುದು ಎಂಬುವುದು ಸಿಎಂ ಲೆಕ್ಕಾಚಾರ ಎನ್ನಲಾಗಿದೆ. ಈ ಸಂಬಂಧ ಮಂಗಳವಾರ ರಾತ್ರಿ ಬದಾಮಿ ಪಟ್ಟಣದ ಹೊರವಲಯದಲ್ಲಿರುವ ಕೃಷ್ಣ ಹೆರಿಟೇಜ್‍ನಲ್ಲಿ ಸತೀಶ್ ಜಾರಕಿಹೊಳಿ ಜೊತೆ ಸಿಎಂ ಮಾತುಕತೆ ಮಾಡಿದ್ದಾರೆ.

    ಸಿಎಂ ಪ್ಲಸ್, ಮೈನಸ್ ಏನು?
    ಬಾದಾಮಿಯಲ್ಲಿ ಕುರುಬ ಸಮುದಾಯದ 46 ಸಾವಿರ ಮತದಾರರು ಇದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಸಹಾಯ ಆಗಬಹುದು. ಸಿದ್ದರಾಮಯ್ಯ ಕಾಂಗ್ರೆಸ್‍ನ ನೇತೃತ್ವ ವಹಿಸಿ ಮುಖ್ಯಮಂತ್ರಿ ಅಭ್ಯರ್ಥಿ ಆಗಿರುವುದು.

    ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ ಮತಗಳು ಕೂಡ ನಿರ್ಣಾಯಕವಾಗಿವೆ. ಕಾಂಗ್ರೆಸ್‍ನಲ್ಲಿ ಇಬ್ಬರು ಟಿಕೆಟ್ ಆಕಾಂಕ್ಷಿಗಳ ಆಂತರಿಕ ಕಲಹ. ಬದಾಮಿ ಸ್ಪರ್ಧೆ ಬಗ್ಗೆ ಕಡೆ ಕ್ಷಣದವರೆಗೂ ಗೊಂದಲ ಸೃಷ್ಟಿಯಾಗಿದ್ದು ಸ್ವಲ್ಪ ಹಿನ್ನಡೆಯಾಗಬಹುದು.

    ಶ್ರೀರಾಮುಲು ಪ್ಲಸ್, ಮೈನಸ್ ಏನು?
    ವಾಲ್ಮೀಕಿ ಸಮುದಾಯದ 13 ಸಾವಿರ ಮತಗಳು, ಎಸ್ ಟಿ ಸಮುದಾಯದ 25,000 ಮತಗಳು ನಿರ್ಣಾಯಕವಾಗಿವೆ. ಪ್ರತ್ಯೇಕ ಲಿಂಗಾಯತ ಧರ್ಮ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಪ್ರಬಲವಾಗಿರುವ ಕಾರಣ ಶ್ರೀರಾಮುಲು ಅವರಿಗೆ ಸಹಾಯವಾಗಬಹುದು.

    ಸಿದ್ದರಾಮಯ್ಯ ಮುಖ್ಯಮಂತ್ರಿ ಅಭ್ಯರ್ಥಿ ಜೊತೆಗೆ ಕುರುಬ ಸಮುದಾಯದ ಮತದಾರರು ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಿಜೆಪಿಯಲ್ಲಿ ಕಡೆ ಕ್ಷಣದವರೆಗೂ ಆಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಮೂಡಿದ್ದು ಹಿನ್ನಡೆಯಾಗಬಹುದು.

  • ನನ್ನ ಮೇಲೆ ಕಲ್ಲು ತೂರಾಟ ಮಾಡಿದವರಿಗೆ ಒಳ್ಳೆಯದಾಗಲಿ, ದೂರು ನೀಡಲ್ಲ: ಶ್ರೀರಾಮುಲು

    ನನ್ನ ಮೇಲೆ ಕಲ್ಲು ತೂರಾಟ ಮಾಡಿದವರಿಗೆ ಒಳ್ಳೆಯದಾಗಲಿ, ದೂರು ನೀಡಲ್ಲ: ಶ್ರೀರಾಮುಲು

    ಚಿತ್ರದುರ್ಗ: ಇಂದಿನಿಂದ ಪ್ರಚಾರ ಆರಂಭಿಸಿದ್ದೇನೆ. ಆದ್ರೆ ಇವತ್ತು ಬೆಳಗ್ಗೆ ನಡೆದ ಘಟನೆ ನೋವು ತಂದಿದೆ. ನಾನು ಯಾವುದೇ ಸ್ವಾರ್ಥ ಇಟ್ಟುಕೊಳ್ಳದೇ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೇನೆ ಎಂದು ಸಂಸದ ಶ್ರೀರಾಮುಲು ಹೇಳಿದ್ದಾರೆ. ಇದನ್ನೂ ಓದಿಬಿಜೆಪಿ ಭಿನ್ನಮತೀಯರಿಂದ ಶ್ರೀರಾಮುಲು ಕಾರಿಗೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್

    ಕೊಂಡ್ಲಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ತಿಪ್ಪೇಸ್ವಾಮಿಯವರು ಅವರ ಬೆಂಬಲಿಗರ ಮೂಲಕ ಗಲಾಟೆ ಮಾಡಿಸಿದ್ದಾರೆ. ಇದೂ ಪ್ರಚೋದನಾಕಾರಿ ಗಲಾಟೆಯಾಗಿದ್ದು, ನನ್ನ ಮೇಲೆ ಕಲ್ಲು ತೂರಾಟ ಮಾಡಿದವರಿಗೆ ಒಳ್ಳೆಯದಾಗಲಿ. ಪ್ರಚೋದನೆ ಮಾಡುವವರಿಗೆ ದೇವರು ನೋಡಿಕೊಳ್ಳುತ್ತಾನೆ. ನಾನು ಯಾವುದೇ ದೂರು ನೀಡುವುದಿಲ್ಲ ಎಂದು ತಿಳಿಸಿದರು.

    ನಾನು ಬೆನ್ನು ತೋರಿಸಿ ರಾಜಕಾರಣ ಮಾಡಿಲ್ಲ. ತಿಪ್ಪೇಸ್ವಾಮಿಯವರು ಅವರ ದಾರಿ ಅವರು ನೋಡಿಕೊಳ್ಳಲಿ. ಇನ್ನು ಮೇಲೆ ನಮಗೂ ಅವರಿಗೂ ಸಂಬಧವಿಲ್ಲ. ಈ ರೀತಿ ಘಟನೆಯಾದ ನಂತರ ಮೃದುಧೋರಣೆ ತಳೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ನಾನು ಗೆದ್ದೆ ಗೆಲ್ಲುವೆ. ಮೊಳಕಾಲ್ಮೂರು ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ. ನಾನು ರಾಜೀನಾಮೆ ನೀಡಿ ಸ್ಪರ್ಧೆ ಮಾಡುವುದಿಲ್ಲ. ನನ್ನ ಹಾಗೂ ಯಡಿಯೂರಪ್ಪ ರಾಜೀನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ. ಗೆದ್ದ ನಂತರವೇ ರಾಜೀನಾಮೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.