Tag: Sri ramulu

  • ಬಿಜೆಪಿ ಅಧಿಕಾರಕ್ಕೆ ಬಂದ್ರೆ ವಿವಾಹ ಖಾತೆ ಸಚಿವರ ಹುದ್ದೆ ಸೃಷ್ಟಿಸ್ತೀವಿ: ಶ್ರೀರಾಮುಲು

    ಬಿಜೆಪಿ ಅಧಿಕಾರಕ್ಕೆ ಬಂದ್ರೆ ವಿವಾಹ ಖಾತೆ ಸಚಿವರ ಹುದ್ದೆ ಸೃಷ್ಟಿಸ್ತೀವಿ: ಶ್ರೀರಾಮುಲು

    ಬಳ್ಳಾರಿ: ಮದುವೆ ಮಾಡೋಕೆ ಲಕ್ಷಾಂತರ ರೂಪಾಯಿ ಹಣ ಬೇಕು. ಆದ್ರೆ ಸರ್ಕಾರಿ ಖರ್ಚಿನಲ್ಲೇ ಸಾಮೂಹಿಕ ಮದುವೆ ಮಾಡಿಸೋ ಭಾಗ್ಯವನ್ನು ಬಿಜೆಪಿ ಜಾರಿಗೆ ತರೋದಾಗಿ ಸಂಸದ ಶ್ರೀರಾಮುಲು ಹೇಳಿದ್ದಾರೆ.

    ಅಷ್ಟೆ ಅಲ್ಲ ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಾಮೂಹಿಕ ಮದುವೆ ಮಾಡಿಸೋಕೆ ವಿವಾಹ ಖಾತೆ ಸಚಿವರ ಹುದ್ದೆ ಸೃಷ್ಟಿ ಮಾಡ್ತಾರಂತೆ. ಇದು ವಿಶೇಷ, ವಿಚಿತ್ರವಾದ ಯೋಜನೆಯಾದ್ರೂ ಬಡವರನ್ನು ಸೆಳೆಯಲು ಸಂಸದ ಶ್ರೀರಾಮುಲು ಇಂಹದ್ದೊಂದು ಐಡಿಯಾ ಮಾಡಿದ್ದಾರೆ.

    ಬಳ್ಳಾರಿಯಲ್ಲಿಂದು ಸಂಸದ ಶ್ರೀರಾಮುಲು ನೇತೃತ್ವದಲ್ಲಿ 19 ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು. 56 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭ ಉದ್ದೇಶಿಸಿ ಮಾತನಾಡಿದ ಶ್ರೀರಾಮುಲು, ಬಡವರ ಮದುವೆಯನ್ನು ಸರ್ಕಾರಿ ಖರ್ಚಿನಲ್ಲೇ ಮಾಡಿಸುವ ಮಹತ್ವಾಕಾಂಕ್ಷೆ ಹೊಂದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸಾಮೂಹಿಕ ವಿವಾಹ ಖಾತೆ ಸಚಿವ ಸ್ಥಾನವನ್ನು ಸೃಷ್ಟಿಸಿ ಆ ಮೂಲಕ ಬಡವರ ಮದುವೆಗಳನ್ನು ಸರ್ಕಾರಿ ಖರ್ಚಿನಲ್ಲೇ ಮಾಡಿಸುತ್ತೇವೆ ಅಂದ್ರು.

    ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳುವ ಕಾರ್ಯ ಮಾಡುವ ಯೋಜನೆ ರೂಪಿಸುವುದಾಗಿ ಶ್ರೀರಾಮುಲು ಹೇಳಿದ್ರು.

  • ರಾಜ್ಯ ಬಿಜೆಪಿಯಲ್ಲಿ ಮಿಂಚಿನ ಸಂಚಲನ- ನಮ್ಗೂ ಟಿಕೆಟ್ ಬೇಕು ಅಂತಿರೋ ಸಂಸದರು

    ರಾಜ್ಯ ಬಿಜೆಪಿಯಲ್ಲಿ ಮಿಂಚಿನ ಸಂಚಲನ- ನಮ್ಗೂ ಟಿಕೆಟ್ ಬೇಕು ಅಂತಿರೋ ಸಂಸದರು

    ಬೆಂಗಳೂರು: ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳೆಯದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ನಮಗೂ ಟಿಕೆಟ್ ಬೇಕು ಅಂತಾ ಕೆಲ ಸಂಸದರು ಕ್ಯೂ ನಿಲ್ತಿದ್ದಾರೆ.

    ಸಂಸತ್ತಿನಿಂದ ವಿಧಾನಸಭೆಗೆ ಬರಲು ಸಂಸದರು ಪ್ಲಾನ್ ಮಾಡಿದ್ದಾರೆ. ಕ್ಷೇತ್ರ ಹುಡುಕಿದ್ದೇವೆ, ನಮಗೂ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿ ಅಂತ ಕೆಲ ಸಂಸದರು ಬಿಜೆಪಿ ವರಿಷ್ಠರಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಆದ್ರೆ ಸಂಸದರ ಬೇಡಿಕೆಗೆ ಸೊಪ್ಪು ಹಾಕದ ವರಿಷ್ಠರು, ಸದ್ಯಕ್ಕೆ ಎಂಪಿಗಳಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

    ಯಾರಿಗೆ ಯಾವ ಕ್ಷೇತ್ರ ಬೇಕಂತೆ?
    > ಶೋಭಾ ಕರಂದ್ಲಾಜೆ – ಪುತ್ತೂರು ಕ್ಷೇತ್ರ
    > ಅನಂತಕುಮಾರ್ ಹೆಗಡೆ- ಯಲ್ಲಾಪುರ ಕ್ಷೇತ್ರ
    > ಕರಡಿಸಂಗಣ್ಣ – ಕೊಪ್ಪಳ ಕ್ಷೇತ್ರ
    > ಶ್ರೀರಾಮುಲು- ಬಳ್ಳಾರಿ ಗ್ರಾಮಾಂತರ ಕ್ಷೇತ್ರ, ಸಂಡೂರು ಕ್ಷೇತ್ರ
    > ಪಿ.ಸಿ.ಮೋಹನ್- ಗಾಂಧಿನಗರ ಕ್ಷೇತ್ರ