Tag: Sri Vishwaprasanna Theertha Swamiji

  • ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತನ್ನಿ: ಪೇಜಾವರ ಶ್ರೀ ಒತ್ತಾಯ

    ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತನ್ನಿ: ಪೇಜಾವರ ಶ್ರೀ ಒತ್ತಾಯ

    ಉಡುಪಿ: ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು. ಒಂದು ಕಡೆ ಆಮೀಷವೊಡ್ಡಿ ಬಲವಂತವಾಗಿ ಮತಾಂತರ ಮಾಡುತ್ತಿಲ್ಲ ಅಂತಾರೆ. ಮತ್ತೊಂದು ಕಡೆ ಮತಾಂತರ ಮಾಡುತ್ತಿದ್ದ ಮಿಷನರಿ ಅವರನ್ನು ಬಂಧಿಸಿದ್ದಾರೆ ಎನ್ನುವ ಸುದ್ದಿಗಳು ವರದಿಯಾಗಿವೆ ಎಂದರು. ಇದನ್ನೂ ಓದಿ: ಅ.2ರಂದು ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ನಿರ್ಣಾಯಕ ಪಾದಾಯಾತ್ರೆ- ಎಸ್‍ಆರ್ ಪಾಟೀಲ್

    ಮತಾಂತರ ಮುಂದುವರಿದರೆ ಸಮಾಜದಲ್ಲಿ ದೊಡ್ಡ ಅಶಾಂತಿ, ಗೊಂದಲ ಉಂಟಾಗಬಹುದು. ಸರ್ಕಾರ ಬಲವಾದ ಕಾನೂನು ಜಾರಿಗೆ ತರುವ ಮೂಲಕ ಮತಾಂತರ ನಿರ್ಬಂಧ ಮಾಡಬೇಕು. ರಾಜ್ಯ ಸರ್ಕಾರ ಈ ವಿಷಯದ ಕುರಿತಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.

    ರಾಜ್ಯದಲ್ಲಿ ಕ್ರೈಸ್ತ ಮಿಷನರಿಗಳು ಹಿಂದೂ ಧರ್ಮವನ್ನು ಗುರಿಯಾಗಿಸಿ ಮತಾಂತರ ಮಾಡುತ್ತಿವೆ. ನಾವು ಒತ್ತಾಯದ ಮತಾಂತರ ಮಾಡುವುದಿಲ್ಲ ಎಂದರೂ ಮತಾಂತರ ಪ್ರಕ್ರಿಯೆ ನಿರಂತರವಾಗಿ ಎಗ್ಗಿಲ್ಲದೆ ರಾಜ್ಯದ ಎಲ್ಲ ಕಡೆ ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಒತ್ತಾಯ ಕೇಳಿಬರುತ್ತಿದೆ.

    ಆರ್ಥಿಕ ಪರಿಸ್ಥಿತಿ, ಅನಾರೋಗ್ಯ ಮತ್ತು ಮಾನಸಿಕ ಸಮಸ್ಯೆಯನ್ನು ಇಟ್ಟುಕೊಂಡು ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ಮತಾಂತರದ ದಾಳ ಹೂಡುತ್ತಿವೆ. ಕಳೆದ ಒಂದು ತಿಂಗಳಿಂದ ರಾಜ್ಯದ ಎಲ್ಲ ಕಡೆ ಮತಾಂತರ ಕೇಂದ್ರ, ಪ್ರಾರ್ಥನಾ ಮಂದಿರದ ಮೇಲೆ ಹಿಂದೂ ಸಂಘಟನೆಗಳು ದಾಳಿ ಮಾಡುತ್ತಿವೆ.

  • ಅಯೋಧ್ಯೆಯಲ್ಲಿ ರಾಮಮಂದಿರ ಅಡಿಪಾಯ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ

    ಅಯೋಧ್ಯೆಯಲ್ಲಿ ರಾಮಮಂದಿರ ಅಡಿಪಾಯ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ

    ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮನಗರಿಗೆ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.

    ರಾಮಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ ಪೇಜಾವರ ಶ್ರೀಗಳು ದರ್ಶನ ಪಡೆದರು. ದೇವರಿಗೆ ಪುಷ್ಪಾರ್ಚನೆ ಮತ್ತು ಚಾಮರ ಸೇವೆ ಮಾಡಿದರು. ಕೆಲಕಾಲ ಗುಡಿ ಮುಂದೆ ಕುಳಿತು ಜಪಗೈದರು. ಬಳಿಕ ಅಲ್ಲಿಂದ ಮಂದಿರ ನಿರ್ಮಾಣ ಮಾಡುವ ಬುನಾದಿ ತುಂಬಿಸುವ ಸ್ಥಳಕ್ಕೆ ತೆರಳಿದರು. ಇದನ್ನೂ ಓದಿ: ರಾಮಮಂದಿರ ನಿಧಿ ಸಂಗ್ರಹ – ಪೇಜಾವರ ಶ್ರೀಗಳ ನೇತೃತ್ವದಲ್ಲಿ ಭಾರೀ ದೇಣಿಗೆ ಸಂಗ್ರಹ

    ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಅಡಿಪಾಯ ತುಂಬಿಸುವ ಕಾಮಗಾರಿ ಆರಂಭವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಅಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ, ಈವರೆಗೆ ನಡೆದ ಕಾಮಗಾರಿಯ ಪ್ರಗತಿಯನ್ನು ಎಂಜಿನಿಯರ್ ಗಳು ಸ್ವಾಮೀಜಿಗೆ ವಿವರಿಸಿದರು. ತಳಹದಿ ಕಾಮಗಾರಿ, ಅದರ ಸಾಮರ್ಥ್ಯದ ಬಗ್ಗೆ ವಿವರಣೆ ನೀಡಿದರು. ಇದನ್ನೂ ಓದಿ: ರಾಮಮಂದಿರಕ್ಕಾಗಿ 28 ವರ್ಷಗಳಿಂದ ಉಪವಾಸ ಮಾಡ್ತೀರೋ 82ರ ವೃದ್ಧೆ

    ಈ ವೇಳೆ ಟ್ರಸ್ಟ್ ನ ವಿಶ್ವಸ್ಥ ಡಾ. ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್‍ಆಯಂಡ್‍ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಎಂಜಿನಿಯರ್‍ ಗಳಿಂದಲೂ ಮಾಹಿತಿ ಪಡೆದರು. ಪೇಜಾವರ ಮಠದ ಆಪ್ತ ಕಾರ್ಯದರ್ಶಿ ವಿಷ್ಣು ಮತ್ತು ಕೃಷ್ಣ ಜೊತೆಗಿದ್ದರು.