Tag: sriharikota

  • EOS-09 ಉಪಗ್ರಹ ಉಡಾವಣೆ ವಿಫಲ – ನಿರ್ದಿಷ್ಟ ಕಕ್ಷೆ ಸೇರುವಲ್ಲಿ ಫೇಲ್

    EOS-09 ಉಪಗ್ರಹ ಉಡಾವಣೆ ವಿಫಲ – ನಿರ್ದಿಷ್ಟ ಕಕ್ಷೆ ಸೇರುವಲ್ಲಿ ಫೇಲ್

    ಅಮರಾವತಿ: ಇಂದು ಬೆಳಗ್ಗೆ ಉಡಾವಣೆಯಾಗಿದ್ದ ಇಸ್ರೋದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ.

    ಇಸ್ರೋದ 101ನೇ ರಾಕೆಟ್ ಉಡಾವಣೆ ಇದಾಗಿದ್ದು, ಇಂದು ಬೆಳಗ್ಗೆ 5:59ರ ಸುಮಾರಿಗೆ ಶ್ರೀಹರಿಕೋಟಾದ (Sriharikota) ಸತೀಶ್ ಧವನ್ ಉಡಾವಣಾ ಕೇಂದ್ರದಿಂದ (Satish Dhawan Space Centre) EOS-09 ರೆಡಾರ್ ಇಮೇಜಿಂಗ್ ಉಪಗ್ರಹ ನಭಕ್ಕೆ ಚಿಮ್ಮಿತ್ತು. 1,696 ಕಿಲೋಗ್ರಾಂ ತೂಕದ EOS-09 ರೆಡಾರ್ ಇಮೇಜಿಂಗ್ ಉಪಗ್ರಹವು ಭೂಮಿಯ ಮೇಲ್ಮೈಯಿಂದ 500 ಕಿಲೋಮೀಟರ್‌ಗಳಿಗಿಂತ ಹೆಚ್ಚು ಎತ್ತರದಲ್ಲಿ ನೆಲೆಗೊಳ್ಳಬೇಕಿತ್ತು. ಆದರೆ 3ನೇ ಹಂತದ ಸಂಪರ್ಕ ಕಳೆದುಕೊಂಡ ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ.ಇದನ್ನೂ ಓದಿ: ಪಾಕ್‌ ಹೈಕಮಿಷನ್‌ ಅಧಿಕಾರಿ ಜೊತೆ ಜ್ಯೋತಿ ಫೋಟೊ ರಿವೀಲ್ – ಪಾಕಿಸ್ತಾನಕ್ಕೆ ಬರ್ತೀನಿ ಎನ್ನುತ್ತಿದ್ದ ಯೂಟ್ಯೂಬರ್‌

    ಈ ಕುರಿತು ಇಸ್ರೋ ಅಧ್ಯಕ್ಷ ವಿ.ನಾರಾಯಣ (V Narayanan) ಮಾಹಿತಿ ನೀಡಿದ್ದು, ರಾಕೆಟ್ ಉಡಾವಣೆಯ ನಾಲ್ಕು ಹಂತಗಳ ಪೈಕಿ, ಮೂರನೇ ಹಂತದಲ್ಲಿ ಒತ್ತಡ ಕುಸಿತಗೊಂಡಿದ್ದು, ಕಕ್ಷೆ ಸೇರುವಲ್ಲಿ ವಿಫಲವಾಗಿದೆ ಎಂದಿದ್ದಾರೆ.

    ಬೆಂಗಳೂರಿನಲ್ಲಿರುವ (Bengaluru) ಇಸ್ರೋದ ಯುಆರ್ ರಾವ್ ಉಪಗ್ರಹ ಕೇಂದ್ರವು ಗೂಢಚಾರ ಉಪಗ್ರವನ್ನು ನಿರ್ಮಿಸಿದೆ. ಸಿ-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರೇಡಾರ್ ಅನ್ನು ಉಪಗ್ರಹ ಹೊಂದಿದ್ದು, ಇದು ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಮತ್ತು ಕಡಿಮೆ ಬೆಳಕಿನಲ್ಲೂ ಭೂಮಿಯ ಮೇಲ್ಮೈಯ ಹೆಚ್ಚಿನ ರೆಸಲ್ಯೂಶನ್ ಚಿತ್ರಗಳನ್ನು ಸೆರೆಹಿಡಿಯಲು ಅನುವು ಮಾಡಿಕೊಡುತ್ತದೆ.

    ಉಪಗ್ರಹದ ವಿಶೇಷತೆ ಏನು?
    ಸಾಧಾರಣವಾಗಿ ಮೋಡಗಳು, ಬಿರುಗಾಳಿ, ರಾತ್ರಿಯ ವೇಳೆ ಹೆಚ್ಚಿನ ಉಪಗ್ರಹಗಳಿಗೆ ಸರಿಯಾಗಿ ಚಿತ್ರಗಳನ್ನು ಸೆರೆ ಹಿಡಿಯಲು ಸಾಧ್ಯವಾಗುವುದಿಲ್ಲ. ಆದರೆ ಈ ಉಪಗ್ರಹ ಮೋಡಗಳು, ಮಳೆ, ಮಂಜು ಸೇರಿದಂತೆ ಎಲ್ಲಾ ರೀತಿಯ ಹವಾಮಾನದಲ್ಲೂ ಹಗಲು ಮತ್ತು ರಾತ್ರಿ ಸ್ಷಷ್ಟವಾದ ಚಿತ್ರಗಳನ್ನು ಸೆರೆ ಹಿಡಿಯವ ಸಾಮರ್ಥ್ಯ ಹೊಂದಿತ್ತು.

    ಇಔS-09 ನಲ್ಲಿರುವ Synthetic Aperture Radar ಎಷ್ಟು ಶಕ್ತಿಶಾಲಿ ಎಂದರೆ ಭೂಪ್ರದೇಶ, ಸಸ್ಯಗಳು ಮತ್ತು ಮಾನವ ನಿರ್ಮಿತ ಡೇರೆಗಳನ್ನು ಸಹ ವರ್ಗೀಕರಣ ಮಾಡಿ ಫಲಿತಾಂಶ ನೀಡುವ ಗುರಿ ಹೊಂದಿತ್ತು. ಹೀಗಾಗಿ ಇನ್ನು ಮುಂದೆ ಗಡಿಯಲ್ಲಿ ಯಾವುದೇ ಸಮಯದಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆದರೂ ಅದರ ಸಂಪೂರ್ಣ ಚಿತ್ರಗಳು ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಿತ್ತು.

    10 ರಿಂದ 225 ಕಿಮೀ ವರೆಗಿನ ವಿಶಾಲವಾದ ಜಾಗಗಳನ್ನು ಸ್ಕ್ಯಾನ್ ಹಾಗೂ ದೊಡ್ಡ ಪ್ರಮಾಣದ ವಿಪತ್ತು ನಡೆದಾಗ ಅಂದರೆ ಪ್ರವಾಹ, ಚಂಡಮಾರುತಗಳು, ಭೂಕುಸಿತ ನಡೆದಾಗ ಅದರ ನೈಜ ಚಿತ್ರಣವನ್ನು ವೀಕ್ಷಿಸಬಹುದಾಗಿತ್ತು.

    ಈ ಉಪಗ್ರಹ ಗಡಿಯನ್ನು ಕಾಯುತ್ತದೆ ಎಂದು ಹೇಳಿದರೂ ತಪ್ಪಾಗಲಾರದು. ಅಕ್ರಮ ಸಮುದ್ರ ಚಟುವಟಿಕೆಯನ್ನು ಮೇಲ್ವಿಚಾರಣೆ, ತೈಲ ಸೋರಿಕೆಗಳನ್ನು ಪತ್ತೆ, ಭಾರತದ 7,500 ಕಿಮೀ ಉದ್ದದ ಕರಾವಳಿಯಲ್ಲಿ ಹಡಗುಗಳನ್ನು ಪತ್ತೆ ಹಚ್ಚುವ ಪ್ರಮುಖ ಕಾರ್ಯನಿರ್ವಹಿಸುವ ಗುಣ ಹೊಂದಿತ್ತು.ಇದನ್ನೂ ಓದಿ: ಪಾಕ್‌, ಉಗ್ರರ ಮೇಲೆ ಕಣ್ಣು – ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ!

  • ಶ್ರೀಹರಿಕೋಟಾದಲ್ಲಿ 3ನೇ ಉಡಾವಣಾ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು

    ಶ್ರೀಹರಿಕೋಟಾದಲ್ಲಿ 3ನೇ ಉಡಾವಣಾ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು

    ಅಮರಾವತಿ: ಆಂಧ್ರಪ್ರಧೇಶದ (Andhra Pradesh) ಸತೀಶ್ ಧವನ್ (Satish Dhawan Space Centre) ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಕೇಂದ್ರದ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

    ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಕೇಂದ್ರದ ಸ್ಥಾಪನೆಗೆ ಒಪ್ಪಿಗೆ ಸೂಚಿಸಿದೆ. ಈ ಉಡಾವಣಾ ಕೇಂದ್ರ ಇಸ್ರೋದ ಎನ್‌ಜಿಎಲ್‌ವಿ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.ಇದನ್ನೂ ಓದಿ: Chhattisgarh| ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ- 12 ಮಾವೋವಾದಿಗಳು ಬಲಿ

    ಈ ಮೂಲಕ ಮೂರನೇ ಉಡಾವಣಾ ಕೇಂದ್ರವು ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಗೆ ಹಾಗೂ 2024ರ ವೇಳೆಗೆ ಮಾನವನನ್ನು ಚಂದ್ರನ ಬಳಿ ಕಳುಹಿಸುವ ಯೋಜನೆಗೆ ಇದು ಸಹಕಾರಿಯಾಗಲಿದೆ. ಉಡಾವಣಾ ಕೇಂದ್ರವನ್ನು 4 ವರ್ಷಗಳ ಅವಧಿಯಲ್ಲಿ 3,984.86 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ನಿರೀಕ್ಷೆಯಿದ್ದು, ಇದು ಉಡಾವಣಾ ಕೇಂದ್ರದ ಸ್ಥಾಪನೆ ಮತ್ತು ವಾಹನ ಜೋಡಣೆ, ಉಪಗ್ರಹ ತಯಾರಿಕೆ ಮತ್ತು ಇಂಧನ ಸೌಲಭ್ಯಗಳನ್ನು ಒಳಗೊಂಡಿರುತ್ತದೆ.

    ಸದ್ಯ ಬಾಹ್ಯಾಕಾಶ ಕೇಂದ್ರದಲ್ಲಿ ಎರಡು ಉಡಾವಣಾ ಕೇಂದ್ರಗಳಿದ್ದು, ಪಿಎಸ್‌ಎಲ್‌ವಿ, ಎಸ್‌ಎಸ್‌ಎಲ್‌ವಿ ರಾಕೆಟ್‌ಗಳ ಉಡಾವಣೆಗಾಗಿ 30 ವರ್ಷಗಳ ಹಿಂದೆ ಮೊದಲ ಉಡಾವಣಾ ಕೇಂದ್ರವನ್ನು ಸ್ಥಾಪಿಸಲಾಯಿತು. ಅದಾದ 20 ವರ್ಷಗಳ ಬಳಿಕ ಎರಡನೇ ಉಡಾವಣಾ ಕೇಂದ್ರವನ್ನು ಸ್ಥಾಪಿಸಲಾಯಿತು. ಇದು ಜಿಎಸ್‌ಎಲ್‌ವಿ ಹಾಗೂ ಎಲ್‌ವಿಎಮ್3 ರಾಕೆಟ್‌ಗಳ ಉಡಾವಣೆಗಾಗಿ ಬಳಸಲಾಗುತ್ತದೆ.

    ಇದೀಗ ಹೊಸ ಉಡಾವಣಾ ಕೇಂದ್ರವು, 2ನೇ ಉಡಾವಣಾ ಕೇಂದ್ರದ ಬ್ಯಾಕಪ್ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ಭಾರವಾದ ರಾಕೆಟ್ ಉಡಾವಣೆಗಾಗಿ ಬಳಸಬಹುದಾಗಿದೆ.ಇದನ್ನೂ ಓದಿ:ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು- ಉಪರಾಷ್ಟ್ರಪತಿ ಜಗದೀಪ್ ಧನಕರ್

     

  • Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷ

    Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷ

    – ಮೋದಿ, ಇಸ್ರೋ ಟೀಂಗೆ ಸಚಿವ ಧನ್ಯವಾದ

    ಶ್ರೀಹರಿಕೋಟಾ: ಇಂದು ಬೆಳಗ್ಗೆ 11.50ಕ್ಕೆ ಆಂಧ್ರಪ್ರದೇಶದ (Andhrapradesh) ಶ್ರೀಹರಿಕೋಟಾದಿಂದ (Sriharikota) ಸೂರ್ಯ ಶಿಕಾರಿಗೆ ಹೊರಟ ಆದಿತ್ಯ ಎಲ್ 1 (Aditya L1) ಮಿಷನ್ ಯಶಸ್ವಿಯಾಗಿದೆ ಎಂದು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ತಿಳಿಸಿದ್ದಾರೆ.

    ಮಿಷನ್ ಯಶಸ್ವಿ ಬಗ್ಗೆ ಘೋಷಣೆ ಮಾಡಿದ ಅವರು, ಯಶಸ್ವಿಯಾಗಿ ಆದಿತ್ಯ ಎಲ್1 ಆರ್ಬಿಟ್ ಗೆ ಇನ್ ಸರ್ಟ್ ಮಾಡಲಾಗಿದೆ ಎಂದರು. ಇದೇ ವೇಳೆ ಆದಿತ್ಯ ಐ1 ಟೀಂಗೆ ಸೋಮನಾಥ್ (S Somanath) ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ

    ಈ ಸಂದರ್ಭದಲ್ಲಿ ಚಂದ್ರಯಾನದ (Chandrayaan-3) ಬಗ್ಗೆ ಮಾಹಿತಿ ನೀಡಿದ ಸೋಮನಾಥ್, ಚಂದ್ರಯಾನದ ಲ್ಯಾಂಡರ್, ರೋವರ್ ಇನ್ನೂ ಯಶಸ್ವಿಯಾಗಿ ಕೆಲಸ ನಿರ್ವಹಣೆ ಮಾಡುತ್ತಿವೆ. ಗುಡ್ ನ್ಯೂಸ್ ಅಂದ್ರೆ ರೋವರ್ 100 ಮೀಟರ್ ವರೆಗೂ ಸಂಚಾರ ಮಾಡಿದೆ. ಚಂದ್ರಯಾನದ ಅಧ್ಯಯನ ಯಶಸ್ವಿಯಾಗಿ ಮುಂದುವರಿದಿದೆ ಎಂದರು.

    ಇತ್ತ ಸಚಿವ ಜೀತೇಂದ್ರ ಸಿಂಗ್ ಅವರು ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಪ್ರಧಾನಿ ಮೋದಿ ಹಾಗೂ ಇಸ್ರೋ ವಿಜ್ಞಾನಿಗಳಿಗೆ ಧನ್ಯವಾದ ಹೇಳ್ತೀನಿ. ಇಸ್ರೋ ವಿಜ್ಞಾನಿಗಳು ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ದೇಶಕ್ಕಾಗಿ ಕೆಲಸ ಮಾಡಿದ್ದಾರೆ. ಚಂದ್ರಯಾನ ಯಶಸ್ವಿ ಬಳಿಕ ಆದಿತ್ಯ ಎಲ್‌ 1 ಯಶಸ್ವಿಯಾಗಿದೆ. ಈ ಸಾಧನೆ ವಿಶ್ವದ ಗಮನ ಸೆಳೆದಿದೆ. ಆದಿತ್ಯ ಎಲ್‌ 1ಗೆ ಉಪಕರಣ ಸಿದ್ಧ ಮಾಡಿಕೊಂಡ ವಿವಿಧ ಸಂಸ್ಥೆಗಳಿಗೆ ಧನ್ಯವಾದಗಳು ಎಂದು ಅವರು ಹೇಳಿದರು.

    ಒಟ್ಟಿನಲ್ಲಿ ಬಾಹ್ಯಾಕಾಶ ಸಂಸ್ಥೆ ಇಸ್ರೋ ಸೂರ್ಯಯಾನ ಯಶಸ್ವಿಯಾಗುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದು, ಭಾರತೀಯರ ಕನಸು ನನಸಾಗಿದೆ. ಇನ್ನು ಮುಂದೆ ಆದಿತ್ಯ ಎಲ್‌ 1 125 ದಿನ ತನ್ನ ಜರ್ನಿ ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3: ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಜು.14, ಮಧ್ಯಾಹ್ನ 2:35ಕ್ಕೆ ಉಡಾವಣೆ

    Chandrayaan-3: ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಜು.14, ಮಧ್ಯಾಹ್ನ 2:35ಕ್ಕೆ ಉಡಾವಣೆ

    ನವದೆಹಲಿ: ಚಂದ್ರಯಾನ-3 (Chandrayaan-3) ಗಗನನೌಕೆಯನ್ನು ಇದೇ ಜು.14 ರಂದು ಮಧ್ಯಾಹ್ನ 2:35 ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ (SDSC) ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಟ್ವೀಟ್‌ ಮಾಡಿ ತಿಳಿಸಿದೆ.

    ಬಹುನಿರೀಕ್ಷಿತ ಚಂದ್ರಯಾನ-3 ಉಡಾವಣೆ ದಿನಾಂಕವನ್ನು ಈ ಮೊದಲು ಜುಲೈ 13 ಕ್ಕೆ ನಿಗದಿಪಡಿಸಲಾಗಿತ್ತು. ಈಗ ಉಡಾವಣೆಯ ದಿನಾಂಕವನ್ನು ಪರಿಷ್ಕರಿಸಿ ಜುಲೈ 14 ರ ಶುಕ್ರವಾರ ಮಧ್ಯಾಹ್ನ 2:35 ಕ್ಕೆ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಟಿಕೆಟ್ ದರ ಇಳಿಕೆ ಸಾಧ್ಯತೆ

    ಚಂದ್ರಯಾನ-3 ಅನ್ನು ಎಲ್‌ಎಂವಿ3 ರಾಕೆಟ್‌ ಮೂಲಕ ಉಡಾವಣೆ ಮಾಡಲಾಗುವುದು. ಚಂದ್ರನ ಮೇಲೆ ನೌಕೆಯನ್ನು ಸುರಕ್ಷಿತವಾಗಿ ಇಳಿಸುವುದು ಮತ್ತು ರೋವರ್‌ ಸಂಚರಿಸುವ ಸಾಮರ್ಥ್ಯ ಪ್ರದರ್ಶಿಸಬೇಕಾಗಿದೆ ಎಂದು ಇಸ್ರೋ ಅಧಿಕಾರಿಗಳು ಈ ಹಿಂದೆ ತಿಳಿಸಿದ್ದರು.

    ಸೂಕ್ಷ್ಮ ತಂತ್ರಜ್ಞಾನ ಬಳಸಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ನೌಕೆ ಇಳಿಸಲಾಗುವುದು. ಪ್ರೊಪಲ್ಷನ್‌ ಮಾಡ್ಯೂಲ್‌, ಲ್ಯಾಂಡರ್‌ ಮತ್ತು ರೋವರ್‌ ಕಾನ್ಫಿಗರೇಶನ್‌ ಅನ್ನು ಚಂದ್ರನ ಕಕ್ಷೆಯಲ್ಲಿ 100 ಕಿಮೀ ವರೆಗೆ ಸಾಗಿಸುತ್ತದೆ. ಇದನ್ನೂ ಓದಿ: ಭಾರತದ ಹೊರಗೆ ಮೊದಲ ಐಐಟಿ ಸ್ಥಾಪನೆ: MEA

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ರಿಟನ್‍ನ 36 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

    ಬ್ರಿಟನ್‍ನ 36 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

    ಶ್ರೀಹರಿಕೋಟಾ: ಭಾರತೀಯ ಬಾಹ್ಯಕಾಶ ಸಂಸ್ಥೆ (ISRO) ಭಾನುವಾರ ಬೆಳಗ್ಗೆ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ 36 ಉಪಗ್ರಹಗಳನ್ನು ಹೊತ್ತ ರಾಕೆಟ್ (Rocket) ಅನ್ನು ಉಡಾವಣೆ ಮಾಡಿದೆ.

    ಒನ್ ವೆಬ್ ಇಂಡಿಯಾ -2 (OneWeb India-2) ಮಿಷನ್‍ನ ಭಾಗವಾಗಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-3 ರಾಕೆಟ್ ಅನ್ನು ಕಕ್ಷೆಗೆ ಹಾರಿಸಿದೆ. ಬ್ರಿಟನ್ ಮೂಲದ ಒನ್‍ವೆಬ್ ಗ್ರೂಪ್‍ಗೆ ಸೇರಿದ 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರವಾದ ಲಾಂಚ್ ವೆಹಿಕಲ್ ಮಾರ್ಕ್ – 3 ಉಡಾವಣಾ ನೌಕೆ ನಭಕ್ಕೆ ಹಾರಿತು.

    ಉಪಗ್ರಹ ಉಡಾವಣೆ ಬೆನ್ನಲ್ಲೇ ಒನ್‍ವೆಬ್ ಟ್ವೀಟ್ ಮಾಡಿದೆ. ಯಶಸ್ವಿ ಉಡಾವಣೆಗಾಗಿ ಇಸ್ರೋ ಹಾಗೂ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್‌ನಲ್ಲಿರುವ ಎಲ್ಲಾ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ತಿಳಿಸಿದೆ. ಇದು ಸರ್ಕಾರಕ್ಕೆ ಹಾಗೂ ಕಂಪನಿಗಳಿಗೆ ಸಂಪರ್ಕವನ್ನು ಸಕ್ರಿಯಗೊಳಿಸುತ್ತದೆ ಎಂದು ಟ್ವೀಟ್‍ನಲ್ಲಿ ತಿಳಿಸಿದೆ.

    ಈ ವರ್ಷ ಇಸ್ರೋ ನಡೆಸಿದ 2ನೇ ರಾಕೆಟ್ ಉಡಾವಣೆ ಇದಾಗಿದೆ. ಈ ಉಡಾವಣೆಯೊಂದಿಗೆ ಒನ್‍ವೆಬ್ ತನ್ನ 616 ಉಪಗ್ರಹಗಳನ್ನು ಕಕ್ಷೆಯಲ್ಲಿ ಹೊಂದಿದೆ. ಈ ಮಿಷನ್ ಭಾರತದಿಂದ ಉಡಾವಣೆ ಮಾಡುತ್ತಿರುವ ಒನ್‍ವೆಬ್‍ನ ಎರಡನೇ ಉಪಗ್ರಹವಾಗಿದೆ. ಬ್ರಿಟನ್ ಮತ್ತು ಭಾರತೀಯ ಬಾಹ್ಯಾಕಾಶ ಉದ್ಯಮಗಳ ನಡುವಿನ ಸಹಯೋಗಕ್ಕೆ ಇದು ಮಾದರಿಯಾಗಿದೆ ಎಂದು ಒನ್‍ವೆಬ್ ಈ ಹಿಂದೆ ಹೇಳಿತ್ತು.

    ಮೊದಲ ಬಾರಿ 2022ರ ಅಕ್ಟೋಬರ್ 23ರಂದು ಇಸ್ರೋನ 36 ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಇದನ್ನೂ ಓದಿ: ದೇಶದಲ್ಲೇ ಮೊದಲ ಉಪಚುನಾವಣೆ ನಡೆದಿದ್ದು ಚಿಕ್ಕಮಗಳೂರಿನ ತರೀಕೆರೆಯಲ್ಲಿ

  • ಓಷನ್‍ಸ್ಯಾಟ್, 8 ಇತರೆ ಉಪಗ್ರಹಗಳನ್ನು ಹೊತ್ತ PSLV-C54 ರಾಕೆಟ್ ಉಡಾಯಿಸಿದ ಇಸ್ರೋ

    ಓಷನ್‍ಸ್ಯಾಟ್, 8 ಇತರೆ ಉಪಗ್ರಹಗಳನ್ನು ಹೊತ್ತ PSLV-C54 ರಾಕೆಟ್ ಉಡಾಯಿಸಿದ ಇಸ್ರೋ

    ಶ್ರೀಹರಿಕೋಟಾ: ಓಷನ್‍ಸ್ಯಾಟ್ 3 (Oceansat), ಆನಂದ್ ಉಪಗ್ರಹಗಳು ಸೇರಿದಂತೆ ಇತರ 8 ನ್ಯಾನೊ ಉಪಗ್ರಹಗಳನ್ನು (Satellite) ಹೊತ್ತ ಪಿಎಸ್‍ಎಲ್‍ವಿ-ಸಿ 54 ರಾಕೆಟ್ (PSLV-C54 Rocket) ಅನ್ನು ಇಸ್ರೋ (Indian Space Research Organisation) (ISRO) ಯಶಸ್ವಿಯಾಗಿ ಉಡಾಯಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆಯಾಗಿದ್ದು, ಉಪಗ್ರಹಗಳನ್ನು ಸನ್-ಸಿಂಕ್ರೋನಸ್ ಧ್ರುವೀಯ ಕಕ್ಷೆಗೆ ಸೇರಿಸಲಾಗುತ್ತದೆ.

    ಎಲ್‍ವಿ-ಸಿ 54 ರಾಕೆಟ್‍ನಲ್ಲಿ ಓಷನ್‍ಸ್ಯಾಟ್ 3, ಆನಂದ್ ಉಪಗ್ರಹಗಳು ಸೇರಿದಂತೆ ಇತರ 8 ನ್ಯಾನೊ ಉಪಗ್ರಹಗಳಿವೆ. ಇವುಗಳ ಪೈಕಿ ಪಿಕ್ಸ್‍ಕ್ಷೆಲ್‍ನ ಭೂತಾನ್‍ಸ್ಯಾಟ್, ಅಮೆರಿಕದ ಸ್ಪೇಸ್‍ಫ್ಲೈಟ್‍ನ ನಾಲ್ಕು ಆ್ಯಸ್ಟ್ರೋಕಾಸ್ಟ್ ಉಪಗ್ರಹಗಳು ಕೂಡ ಸೇರಿವೆ. ಸಾಗರ ವೀಕ್ಷಣೆ, ಭೂ ವೀಕ್ಷಣೆಗಾಗಿ ಇಂಡೊ-ಫ್ರೆಂಚ್ ಸಹಭಾಗಿತ್ವ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಉಪಗ್ರಹಗಳೂ ಇದರಲ್ಲಿ ಸೇರಿವೆ. ಇದನ್ನೂ ಓದಿ: ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದ ದೂರುದಾರನ ತಂದೆ ಹೃದಯಾಘಾತದಿಂದ ಸಾವು

    ಆನಂದ್ ನ್ಯಾನೊ ಉಪಗ್ರಹ ಭೂಮಿಯ ಕೆಳ ಕಕ್ಷೆಯಲ್ಲಿ ಮೈಕ್ರೋಸ್ಯಾಟಲೈಟ್ ಬಳಸಿಕೊಂಡು ಭೂಮಿಯ ವೀಕ್ಷಣೆ ನಡೆಸಲಿದೆ. ಥೈಬೋಲ್ಟ್ ಉಪಗ್ರಹವು ಸಂವಹನಕ್ಕೆ ಸಂಬಂಧಿಸಿದ್ದಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿದೆ. ಇದನ್ನೂ ಓದಿ: ಎರಡರ ಮಗ್ಗಿ ಹೇಳದ್ದಕ್ಕೆ ವಿದ್ಯಾರ್ಥಿ ಕೈಗೆ ಡ್ರಿಲ್ ಮಷಿನ್ ಇಟ್ಟ ಶಿಕ್ಷಕ

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಬಳಿಕ ಉಪಗ್ರಹ ಉಡಾವಣೆ ಯಶಸ್ವಿ- ಇಸ್ರೋಗೆ ಮೋದಿ ಅಭಿನಂದನೆ

    ಕೋವಿಡ್ ಬಳಿಕ ಉಪಗ್ರಹ ಉಡಾವಣೆ ಯಶಸ್ವಿ- ಇಸ್ರೋಗೆ ಮೋದಿ ಅಭಿನಂದನೆ

    ಶ್ರೀಹರಿಕೋಟಾ: ಸರಿ ಸುಮಾರು ಒಂದು ವರ್ಷದ ಬಳಿಕ ಆಂಧ್ರಪ್ರದೇಶದ ಶ್ರೀಹರಿಕೋಟಾ ಉಪಗ್ರಹ ಉಡಾವಣಾ ಕೇಂದ್ರದಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಪಿಎಸ್‍ಎಲ್‍ವಿ ಸಿ49 ರಾಕೆಟ್ ಮೂಲಕ 9 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

    ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿನ ಮೊದಲ ಲಾಂಚ್ ಪ್ಯಾಂಡ್‍ನಿಂದ ಉಪಗ್ರಹಗಳನ್ನು ಶನಿವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಭೂಮಿಯ ಹವಾಮಾನ ಚಿತ್ರಣ ಇಒಎಸ್-1 ಉಪ್ರಗಹ ಸೇರಿದಂತೆ ವಿದೇಶದ 9 ಉಪಗ್ರಹಗಳನ್ನು ಹೊತ್ತ ಪಿಎಸ್‍ಎಲ್‍ವಿ ಸಿ49 ರಾಕೆಟ್ ಯಶಸ್ವಿಯಾಗಿ ನಭಕ್ಕೆ ಜಿಗಿಯಿತು. ಮಾರ್ಚ್ 23ರ ಲಾಕ್‍ಡೌನ್ ಬಳಿಕ ಇಸ್ರೋ ಮಾಡಿದ ಮೊದಲ ಉಡಾವಣೆ ಇದಾಗಿದೆ.

    ಮಧ್ಯಾಹ್ನ 3.02ಕ್ಕೆ ನಿಗದಿಯಾಗಿದ್ದ ಉಡಾವಣೆಯನ್ನು, 10 ನಿಮಿಷಗಳ ಕಾಲ ತಡವಾಗಿ ಅಂದರೆ 3.12ಕ್ಕೆ ಮಾಡಲಾಯಿತು. ಮಿಂಚಿನಿಂದ ರಾಕೆಟ್‍ನಲ್ಲಿ ಅಳವಡಿಸಲಾಗಿದ್ದ ಎಲೆಕ್ಟ್ರಾನಿಕ್ಸ್ ಆನ್‍ಬೊರ್ಡ್ ನಲ್ಲಿ ಹಾನಿಯಾಗಬಹುದಾದ ಸಾಧ್ಯತೆ ಇದ್ದ ಕಾರಣದಿಂದ 10 ನಿಮಿಷ ಉಡಾವಣೆಯನ್ನ ಮುಂದೂಡಲಾಗಿತ್ತು.

    ಈ ಕುರಿತು ಟ್ವೀಟ್ ಮಾಡಿ ಇಸ್ರೋಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪಿಎಸ್‍ಎಲ್‍ವಿ ಸಿ49 ಮಿಷನ್ ಯಶಸ್ವಿಯಾಗಿದ್ದು, ಕೋವಿಡ್ ಸಮಯದಲ್ಲಿ ನಮ್ಮ ವಿಜ್ಞಾನಿಗಳು ಹಲವು ನಿರ್ಬಂಧಗಳನ್ನು ನಿವಾರಿಸಿಕೊಂಡು ಸಾಧನೆ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ಇಸ್ರೋ ಮುಖ್ಯಸ್ಥ ಕೆ.ಶಿವನ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಈ ಮಿಷನ್ ಇಸ್ರೋಗೆ ಬಹಳ ವಿಶೇಷವಾಗಿತ್ತು. ಬಾಹ್ಯಾಕಾಶ ಚಟುವಟಿಕೆಯನು ವರ್ಕ್ ಫ್ರಂ ಹೋಮ್ ಕೆಲಸದಿಂದ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬ ಎಂಜಿನಿಯರ್ ಲ್ಯಾಬ್‍ನಲ್ಲಿ ಹಾಜರಿರಬೇಕು. ಪ್ರತಿಯೊಬ್ಬ ತಂತ್ರಜ್ಞ ಹಾಗೂ ಉದ್ಯೋಗಿ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

    ಇಂದು ನಡೆದ ಉಡಾವಣೆ ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ವರ್ಕ್‍ಹಾರ್ಸ್ ಎಂದು ಕರೆಯುವ ಪಿಎಸ್‍ಎಲ್‍ವಿಯ 51ನೇ ಉಡಾವಣೆ ಇದಾಗಿದ್ದು, ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ 77ನೇ ಉಡಾವಣಾ ಕಾರ್ಯಾಚರಣೆಯಾಗಿದೆ. ಇದುವರೆಗೂ 33 ರಾಷ್ಟ್ರಗಳ 328ಕ್ಕೂ ಹೆಚ್ಚು ಉಪಗ್ರಹಗಳನ್ನು ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗಿದೆ.

  • ಇಸ್ರೋ ಸಾಧನೆ- ಕಾರ್ಟೊಸ್ಯಾಟ್-3, ಅಮೆರಿಕದ 13 ನ್ಯಾನೋ ಉಪಗ್ರಹ ಉಡಾವಣೆ ಯಶಸ್ವಿ

    ಇಸ್ರೋ ಸಾಧನೆ- ಕಾರ್ಟೊಸ್ಯಾಟ್-3, ಅಮೆರಿಕದ 13 ನ್ಯಾನೋ ಉಪಗ್ರಹ ಉಡಾವಣೆ ಯಶಸ್ವಿ

    ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ) ಭೂಮಿ ಚಿತ್ರಣ ಹಾಗೂ ಮ್ಯಾಪ್‍ಗೆ ಸಂಬಂಧಿಸಿದ ಕಾರ್ಟೊಸ್ಯಾಟ್-3 ಸೇರಿದಂತೆ ಅಮೆರಿಕದ 13 ಮೈಕ್ರೋ ಉಪಗ್ರಹಗಳನ್ನು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾಯಿಸಿದೆ.

    ಕಾರ್ಟೊಸ್ಯಾಟ್-3 ಹಾಗೂ ಅಮೆರಿಕದ 13 ಸಣ್ಣ ಉಪಗ್ರಹಗಳು ಸೇರಿ 14 ಉಪಗ್ರಹಗಳನ್ನು ಹೊತ್ತ ಪಿಎಸ್‍ಎಲ್‍ವಿ-ಸಿ47 ರಾಕೆಟ್ ಇಂದು ಬೆಳಗ್ಗೆ 9.28ಕ್ಕೆ ನಭಕ್ಕೆ ಚಿಮ್ಮಿದೆ. ಕಾರ್ಟೊಸ್ಯಾಟ್-3 ಅತ್ಯಂತ ಸ್ಪಷ್ಟವಾಗಿ ಫೋಟೊಗಳನ್ನು ಸೆರೆಹಿಡಿಯುವ ಸಾಮರ್ಥ್ಯದ ಮೂರನೇ ತಲೆಮಾರಿನ ಉಪಗ್ರಹವಾಗಿದೆ. ಒಟ್ಟು 1,625 ಕೆಜಿ ಭಾರವುಳ್ಳ ಉಹಗ್ರಹಗಳನ್ನು ಪಿಎಸ್‍ಎಲ್‍ವಿ-ಸಿ47 ರಾಕೆಟ್ ಹೊತ್ತೊಯ್ದಿದೆ.

    ಉಡಾವಣೆಯಾಗಿ ಅಂತರಿಕ್ಷ ಸೇರಿದ ಬಳಿಕ 27 ನಿಮಿಷಗಳಲ್ಲಿ ಕಾರ್ಟೊಸ್ಯಾಟ್ ಮತ್ತು ಇತರೆ ಉಪಗ್ರಹಗಳನ್ನು ನಿಗದಿತ ಕ್ಷಕೆಗೆ ಇಸ್ರೋ ಸೇರಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಉಡಾವಣೆ ವಲಯದಿಂದ ಪಿಎಲ್‍ಎಲ್‍ವಿ ಉಡಾವಣೆಗೊಂಡಿದೆ. ಇದು ಶ್ರೀಹರಿಕೋಟಾದಿಂದ ಉಡಾವಣೆಗೊಳ್ಳುತ್ತಿರುವ 74ನೇ ಯೋಜನೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ.

    ಈ ಬಗ್ಗೆ ಇಸ್ರೋ ಮುಖ್ಯಸ್ಥ ಡಾ.ಕೆ.ಶಿವನ್ ಮಾತನಾಡಿ. ನನಗೆ ಸಂತೋಷವಾಗಿದೆ, ಪಿಎಸ್‍ಎಲ್‍ವಿ-ಸಿ 47 ಇತರೆ 13 ಉಪಗ್ರಹಗಳೊಂದಿಗೆ ನಿಖರವಾಗಿ ಕಕ್ಷೆಯಲ್ಲಿ ಉಡಾವಣೆಯಾಗಿದೆ. ಕಾರ್ಟೊಸಾಟ್ -3 ಅತ್ಯುನ್ನತ ರೆಸಲ್ಯೂಶನ್ ಹೊಂದಿರುವ ಸಿವಿಲಿಯನ್ ಉಪಗ್ರಹವಾಗಿದೆ. ನಾವು ಮಾರ್ಚ್‍ವರೆಗೆ 13 ಯೋಜನೆಗಳು, 6 ದೊಡ್ಡ ವಾಹನ ಯೋಜನೆಗಳು ಮತ್ತು 7 ಉಪಗ್ರಹ ಯೋಜನೆಗಳ ಮೇಲೆ ನಾವು ಕಾರ್ಯ ನಿರ್ವಹಿಸಬೇಕಿದೆ ಎಂದರು.

    714 ಕೆಜಿ ಭಾರವುಳ್ಳ ಕಾರ್ಟೋಸ್ಯಾಟ್-3 ಉಪಗ್ರಹ, ಹೈ ರೆಸ್ಯೂಲೇಷನ್ ಚಿತ್ರಗಳನ್ನು ಕಳುಹಿಸಿಕೊಡಲಿದೆ. ಭೂ ವಾತಾವರಣ, ಅಂತರ್ಜಲ ಮಟ್ಟ, ನಗರ ಯೋಜನೆ, ವ್ಯವಸಾಯ ಕ್ಷೇತ್ರ, ಇನ್ನಿತರೆ ಕಾರ್ಯಗಳಿಗೆ ಕಾರ್ಪೊಸ್ಯಾಟ್-3 ಉಪಗ್ರಹ ಬಳಕೆಯಾಗಲಿದೆ. ವಿಜ್ಞಾನಿಗಳ ಸಾಧನೆಗೆ ಇಸ್ರೋ ಮುಖ್ಯಸ್ಥ ಅಭಿನಂದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಾಗೂ ತೆಲಂಗಾಣ ಸಿ.ಎಂ ಕೆ.ಸಿ.ಆರ್ ಸೇರಿದಂತೆ ಹಲವು ಗಣ್ಯರು ಶುಭಹಾರೈಸಿ, ವಿಜ್ಞಾನಿಗಳಿಗೆ ಅಭಿನಂದಿಸಿದ್ದಾರೆ.

    ಈ ಉಪಗ್ರಹಗಳ ಬಗ್ಗೆ ಇಸ್ರೋ ನಿರಂತರ ಮಾಹಿತಿಗಳನ್ನು ನೀಡುತ್ತಿರುತ್ತದೆ. ಕಾರ್ಟೊಸ್ಯಾಟ್-3 ಹಾಗೂ ಇತರೆ ಉಪಗ್ರಹಗಳು ಹೇಗೆ ಕಾರ್ಯನಿರ್ವಹಿಸುತ್ತಿದೆ ಎನ್ನುವ ಬಗ್ಗೆ ಅಪ್‍ಡೇಟ್ ನೀಡಲಾಗುತ್ತದೆ ಎಂದು ಇಸ್ರೋ ತಿಳಿಸಿದೆ.

  • ಪ್ರತಿಯೊಬ್ಬ ಭಾರತೀಯರು ಇಂದು ಹೆಮ್ಮೆ ಪಡುವ ದಿನ – ಮೋದಿ

    ಪ್ರತಿಯೊಬ್ಬ ಭಾರತೀಯರು ಇಂದು ಹೆಮ್ಮೆ ಪಡುವ ದಿನ – ಮೋದಿ

    ನವೆದೆಹಲಿ: ಇಂದು ಭಾರತದ ಬಹು ನಿರೀಕ್ಷಿತ ಚಂದ್ರಯಾನ-2 ಯಶಸ್ವಿ ಉಡಾವಣೆಯಾಗಿದ್ದು, ಈ ವಿಚಾರಕ್ಕೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಇಂದು ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡುವ ದಿನ ಎಂದು ಟ್ವೀಟ್ ಮಾಡಿದ್ದಾರೆ.

    ಇಂದು ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ ಮಧ್ಯಾಹ್ನ 2.41ಕ್ಕೆ ನಭಕ್ಕೆ ಚಿಮ್ಮಿದೆ. ಈ ಮೂಲಕ ಈ ಸಾಧನೆ ಮಾಡುತ್ತಿರುವ ಜಗತ್ತಿನ 4ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

    ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಮೆಚ್ಚಿ ಮೋದಿ ಅವರು ಟ್ವೀಟ್ ಮಾಡಿದ್ದು, ಇದು ನಮ್ಮ ದೇಶದ ವಿಶೇಷ ಕ್ಷಣ. ಇದು ಇತಿಹಾಸ ವಾರ್ಷಿಕೋತ್ಸವಗಳಲ್ಲಿ ಕೆತ್ತಲ್ಪಡುತ್ತದೆ! ಚಂದ್ರಯಾನ-2 ರ ಉಡಾವಣೆಯು ನಮ್ಮ ವಿಜ್ಞಾನಿಗಳ ಪರಾಕ್ರಮ ಮತ್ತು ವಿಜ್ಞಾನದ ಹೊಸ ಆವಿಷ್ಕಾರವನ್ನು ವಿವರಿಸುತ್ತದೆ ಮತ್ತು 130 ಕೋಟಿ ಭಾರತೀಯರ ವಿಜ್ಞಾನದ ಹೊಸ ಗಡಿನಾಡುಗಳನ್ನು ಅಳೆಯಲು ಸಹಾಯವಾಗುತ್ತದೆ. ಪ್ರತಿಯೊಬ್ಬ ಭಾರತೀಯನೂ ಇಂದು ಅಪಾರ ಹೆಮ್ಮೆ ಪಡುತ್ತಾನೆ!”ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

    ಚಂದ್ರಯಾನ-2 ನಂತಹ ಪ್ರಯತ್ನಗಳು ನಮ್ಮ ಯುವ ಪೀಳಿಗೆಯನ್ನು ವಿಜ್ಞಾನದ ಕಡೆಗೆ ಮತ್ತಷ್ಟು ಪ್ರೋತ್ಸಾಹಿಸುತ್ತದೆ. ಇದು ಭಾರತದ ಉನ್ನತ ಗುಣಮಟ್ಟದ ಸಂಶೋಧನೆ ಮತ್ತು ಆವಿಷ್ಕಾರ. ಚಂದ್ರಯಾನದ ತಂಡಕ್ಕೆ ಧನ್ಯವಾದಗಳು, ಈ ಕಾರ್ಯಕ್ರಮ ಇನ್ನಷ್ಟು ಉತ್ತೇಜನ ಪಡೆಯಲಿ. ಚಂದ್ರಯಾನ-2 ಏಕೆ ವಿಶಿಷ್ಟ ಎಂದರೆ ಅದು ಚಂದ್ರನ ದಕ್ಷಿಣ ಧ್ರುವಕ್ಕೆ ಹೋಗುತ್ತದೆ. ಈ ಹಿಂದೆ ಯಾವ ದೇಶದ ಉಪಗ್ರಹವು ಕೂಡ ದಕ್ಷಿಣ ಧ್ರುವಕ್ಕೆ ಹೋಗಿಲ್ಲ ಎಂದು ಮೋದಿ ಹೇಳಿದ್ದಾರೆ.

    ಚಂದ್ರನ ದಕ್ಷಿಣ ಧ್ರುವ ಆಯ್ಕೆ ಏಕೆ..?
    ಚಂದ್ರನ ದಕ್ಷಿಣ ಧ್ರುವ ವಿಶಿಷ್ಟವಷ್ಟೇ ಅಲ್ಲದೆ ಕುತೂಹಲಕಾರಿ. ಈ ಭಾಗ ಕತ್ತಲಿನಿಂದ ಕೂಡಿದ್ದು ಉತ್ತರ ಭಾಗಕ್ಕೆ ಹೋಲಿಸಿದರೆ ಇಲ್ಲಿನ ಮೇಲ್ಮೈ ಪ್ರದೇಶದ ವ್ಯಾಪ್ತಿ ದೊಡ್ಡದು. ಶಾಶ್ವತವಾಗಿ ಕತ್ತಲಿನಿಂದ ಕೂಡಿರುವ ಈ ಪ್ರದೇಶದಲ್ಲಿ ನೀರಿನ ಅಸ್ತಿತ್ವ ಇರುವ ಸಾಧ್ಯತೆಯಿದೆ. ದಕ್ಷಿಣ ಧ್ರುವದಲ್ಲಿರುವ ಕುಳಿಗಳು ಬಹಳ ತಂಪಾಗಿವೆ. ಸೌರಮಂಡಲ ವ್ಯವಸ್ಥೆ ಸೃಷ್ಟಿಯ ಹಂತದ ದಾಖಲೆಗಳನ್ನೂ ಹೊಂದಿರುವ ಸಾಧ್ಯತೆ.

    ಚಂದ್ರನ ಆಯ್ಕೆ ಏಕೆ?
    ಚಂದ್ರ ನಮಗೆ ಅತಿ ಹತ್ತಿರದ ಆಕಾಶಕಾಯವಾಗಿದ್ದು ಸಂಶೋಧನೆ ಮತ್ತು ದಾಖಲೀಕರಣ ಸುಲಭ. ಬಾಹ್ಯಾಕಾಶ ತಂತ್ರಜ್ಞಾನ ಪರೀಕ್ಷೆಯ ಭರವಸೆಯ ಪ್ರಯೋಗಾಲಯ. ಹಲವು ಪ್ರಯೋಗಗಳಿಗೆ ಚಂದ್ರಯಾನ ವೇದಿಕೆಯಾಗಲಿದೆ.

    ಚಂದ್ರಯಾನ-2ಗೆ ಮಹಿಳಾ ವಿಜ್ಞಾನಿಗಳ ಮುಂದಾಳತ್ವ
    ಯೋಜನಾ ತಂಡದಲ್ಲಿ ಶೇ.30ರಷ್ಟು ಮಹಿಳೆಯರು ಕಾರ್ಯನಿರ್ವಹಿಸಿದ್ದು, ಇಬ್ಬರು ಮಹಿಳೆಯರು ನೇತೃತ್ವ ವಹಿಸಿಕೊಂಡಿದ್ದಾರೆ. ಯೋಜನಾ ನಿರ್ದೇಶಕಿ ಎಂ. ವನಿತಾ, ಅಭಿಯಾನ ನಿರ್ದೇಶಕಿ ರಿತು ಕರಿಧಾಲ್ ಅವರಿಗೆ ಇಸ್ರೋದಲ್ಲಿ 20 ವರ್ಷ ಸೇವೆಗಳ ಅನುಭವವಿದೆ. ಮಂಗಳಯಾನ ಸೇರಿ ಪ್ರಮುಖ ಯೋಜನೆಗಳಲ್ಲಿ ಇಬ್ಬರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಚಂದ್ರಯಾನ-2 ಗೆ 620 ಸರ್ಕಾರಿ, ಖಾಸಗಿ ಕಂಪನಿಗಳು, ಐಐಎಸ್ಸಿ, ಐಐಟಿ ಸೇರಿದಂತೆ ದೇಶದ ಪ್ರಮುಖ 15 ಶಿಕ್ಷಣಗಳ ಕೇಂದ್ರಗಳು ನಾನಾ ರೀತಿಯಲ್ಲಿ ಕೆಲಸ ಮಾಡಿವೆ.

  • ಚಂದ್ರಯಾನ-2 ಉಡಾವಣೆಗೆ ಸಾಕ್ಷಿಯಾಗಬೇಕೆ? ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಿ

    ಚಂದ್ರಯಾನ-2 ಉಡಾವಣೆಗೆ ಸಾಕ್ಷಿಯಾಗಬೇಕೆ? ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಿ

    ಶ್ರೀಹರಿಕೋಟಾ: ತಾಂತ್ರಿಕ ಕಾರಣದಿಂದ ಜು.15ರಂದು ರದ್ದಾಗಿದ್ದ ಭಾರತ ಮಹತ್ವಾಕಾಂಕ್ಷಿಯ ಬಾಹ್ಯಾಕಾಶ ಯೋಜನೆ ಚಂದ್ರಯಾನ-2 ಉಡಾವಣೆಯ ದಿನಾಂಕವನ್ನು ಜು.22(ಸೋಮವಾರ)ಕ್ಕೆ ನಿಗದಿಪಡಿಸಲಾಗಿದ್ದು, ಉಡಾವಣೆಯ ವೀಕ್ಷಣೆಗಾಗಿ ಆನ್‍ಲೈನ್ ಟಿಕೆಟ್ ಬುಕಿಂಗ್‍ನ್ನು ಇಸ್ರೋ ಪ್ರಾರಂಭಿಸಿದೆ.

    ಈ ತಿಂಗಳ ಕೊನೆಯಲ್ಲಿ ಉಡಾವಣೆಗೆ ಚಂದ್ರಯಾನ-2ನ್ನು ನಿಗದಿ ಪಡಿಸಿದ್ದು, ಇದೀಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಚಂದ್ರಯಾನ-2 ಉಡಾವಣೆಯನ್ನು ನೋಡಲು ಬರುವವರಿಗೆ ಜು.19ರಿಂದ ಆನ್‍ಲೈನ್‍ನಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.

    ಟ್ವಿಟ್ಟರ್ ಮೂಲಕ ಈ ಮಾಹಿತಿ ಖಚಿತಪಡಿಸಿರುವ ಇಸ್ರೋ, ಸತೀಶ್ ಧವನ್ ಸ್ಪೇಸ್ ಸೆಂಟರ್‍ನಿಂದ ಉಡಾವಣೆಗೊಳ್ಳುತ್ತಿರುವ #GSLVMkIII-M1/#Chandrayaan2 ಉಡಾವಣೆಗೆ ನೀವು ಸಾಕ್ಷಿಯಾಗಬೇಕಾದಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಜು.19 ರಂದು ಸಂಜೆ 6ಕ್ಕೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ. ಈ ಹಿಂದೆ ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಜುಲೈ 15ರಂದು ನಸುಕಿನ ಜಾವ 2.51 ಗಂಟೆಗೆ ಚಂದ್ರಯಾನ-2 ಉಡಾವಣೆಯಾಗಬೇಕಿತ್ತು. ಆದರೆ ರಾಕೆಟ್‍ನಲ್ಲಿ ಉಡಾವಣೆಗೆ ನಿಗದಿಪಡಿಸಿದ ಕಾಲಮಾನಕ್ಕಿಂತ 1 ಗಂಟೆ ಮುನ್ನ ತಾಂತ್ರಿಕ ದೋಷ ಕಂಡು ಬಂದು ಉಡಾವಣೆ ರದ್ದುಪಡಿಸಲಾಗಿತ್ತು.