Tag: srilanka

  • Asia Cup 2023: ಮಳೆ ಬಿಡುವು – ನಿರ್ಣಾಯಕ ಪಂದ್ಯದಲ್ಲಿ ಲಂಕಾ-ಪಾಕ್‌ಗೆ ಶಾಕ್‌

    Asia Cup 2023: ಮಳೆ ಬಿಡುವು – ನಿರ್ಣಾಯಕ ಪಂದ್ಯದಲ್ಲಿ ಲಂಕಾ-ಪಾಕ್‌ಗೆ ಶಾಕ್‌

    ಕೊಲಂಬೊ: 2023ರ ಏಕದಿನ ಏಷ್ಯಾಕಪ್‌ (Asia Cup 2023) ಟೂರ್ನಿ ನಿರ್ಣಾಯಕ ಹಂತಕ್ಕೆ ತಲುಪಿದೆ. ಇಂದಿನ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವಿನ ಪಂದ್ಯಕ್ಕೆ ಮಳೆ ಬಿಡುವು ನೀಡಿದ್ದು ತಡವಾಗಿದ್ದರಿಂದ ಓವರ್‌ ಕಡಿತಗೊಳಿಸಲಾಗಿದೆ.

    ಮಳೆಯಿಂದ (Rain) ಮೈದಾನವನ್ನು ಒಣಗಿಸುವ ಕಾರ್ಯಾಚರಣೆ ಮುಕ್ತಾಯಗೊಂಡ ನಂತರ ಪಂದ್ಯವನ್ನು 45 ಓವರ್‌ಗಳಿಗೆ ಸೀಮಿತಗೊಳಿಸಲಾಗಿದೆ. ಇತ್ತಂಡಗಳಿಗೂ ತಲಾ 45 ಓವರ್‌ ನಿಗದಿಪಡಿಸಲಾಗಿದ್ದು, 9 ಓವರ್‌ಗೆ ಪವರ್‌ ಪ್ಲೇ ಮುಕ್ತಾಯವಾಗಲಿದೆ. ಮಳೆಯ ಕಾಟ ಮುಂದುವರಿದರೆ, ಮತ್ತಷ್ಟು ಓವರ್‌ ಕಡಿತಗೊಳಿಸುವ ಬಗ್ಗೆ ಮಾತುಕತೆ ನಡೆಯುತ್ತದೆ. ಒಂದು ವೇಳೆ ಪಂದ್ಯ ರದ್ದಾದರೆ ರನ್‌ರೇಟ್‌ ಮೇಲೆ ಫೈನಲ್‌ಗೆ ತಂಡವನ್ನ ಆಯ್ಕೆ ಮಾಡಲು ನಿರ್ಧರಿಸಲಾಗಿದೆ.

    ಸದ್ಯ ಪಾಕಿಸ್ತಾನ (Pakistan) ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದೆ. ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ನಲ್ಲಿ ಭಾರತದ ವಿರುದ್ಧ ಸೆಣಸಲಿದೆ. ಇದನ್ನೂ ಓದಿ: Asia Cup – ಇಂದಿನ ಪಂದ್ಯ ರದ್ದಾದ್ರೆ ಫೈನಲಿಗೆ ಹೋಗುವವರು ಯಾರು?

    ಪಂದ್ಯ ರದ್ದಾದರೆ ಮುಂದೇನು?
    ಒಂದು ವೇಳೆ ಮಳೆ ಕಾಟ ಮುಂದುವರಿದು ಪಂದ್ಯ ರದ್ದಾದ್ರೆ ಶ್ರೀಲಂಕಾ (SriLanka) ಫೈನಲ್‌ ಪ್ರವೇಶಿಸಲಿದೆ. ಈಗಾಗಲೇ ಭಾರತ ಮತ್ತು ಪಾಕಿಸ್ತಾನದ ಸೂಪರ್‌-4 ಪಂದ್ಯಕ್ಕೆ ಮೀಸಲು ದಿನ ನಿಗದಿಯಾಗಿತ್ತು. ಹೀಗಾಗಿ 2ನೇ ದಿನ ಆಟ ಮುಂದುವರಿದ ಪರಿಣಾಮ ಭಾರತ ಪಾಕ್‌ ವಿರುದ್ಧ 228 ರನ್‌ಗಳ ಅಂತರದಿಂದ ಗೆದ್ದುಕೊಂಡಿತ್ತು. ಆದರೆ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯಕ್ಕೆ ಯಾವುದೇ ಮೀಸಲು ದಿನ ನಿಗದಿಯಾಗಿಲ್ಲ. ಸೂಪರ್‌-4ನಲ್ಲಿ ಆಡಿದ ಎರಡು ಪಂದ್ಯಗಳನ್ನೂ ಗೆದ್ದಿರುವ ಭಾರತ 4 ಅಂಕದೊಂದಿಗೆ 2.690 ನೆಟ್‌ ರನ್‌ ರೇಟ್‌ನೊಂದಿಗೆ ಈಗಾಗಲೇ ಫೈನಲ್‌ ಪ್ರವೇಶ ಮಾಡಿದೆ. ಇದನ್ನೂ ಓದಿ: Asia Cup 2023ː ಬಿಗಿ ಬೌಲಿಂಗ್‌ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ

    ಶ್ರೀಲಂಕಾ ಎರಡು ಪಂದ್ಯಗಳಿಂದ 2 ಅಂಕ ಸಂಪಾದಿಸಿದೆ -0.200 ನೆಟ್‌ ರನ್‌ ರೇಟ್‌ ಹೊಂದಿದ್ದರೆ ಪಾಕಿಸ್ತಾನ 2 ಪಂದ್ಯಗಳಿಂದ 2 ಅಂಕ ಸಂಪಾದಿಸಿ -1.892 ನೆಟ್‌ ರನ್‌ ರೇಟ್‌ನೊಂದಿಗೆ 3ನೇ ಸ್ಥಾನ ಪಡೆದಿದೆ. ನೆಟ್‌ ರನ್‌ ರೇಟ್‌ ಉತ್ತಮವಾಗಿರುವ ಕಾರಣ ಮಳೆಯಿಂದಾಗಿ ಪಂದ್ಯ ರದ್ದಾದರೆ, ಶ್ರೀಲಂಕಾ ತಂಡ ಸುಲಭವಾಗಿ ಫೈನಲ್‌ ಪ್ರವೇಶ ಮಾಡಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asia Cup 2023ː ಬಿಗಿ ಬೌಲಿಂಗ್‌ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ

    Asia Cup 2023ː ಬಿಗಿ ಬೌಲಿಂಗ್‌ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ

    ಕೊಲಂಬೊ: ಇಲ್ಲಿನ ಆರ್‌ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯವು ಬೌಲರ್‌ಗಳ ಆಟಕ್ಕೆ ಸೀಮಿತವಾಗಿತ್ತು. ಇತ್ತಂಡಗಳಿಂದಲೂ ಸ್ಪಿನ್‌ ಬೌಲರ್‌ಗಳ ಕೈಚಳಕ ಜೋರಾಗಿತ್ತು. ಆದ್ರೆ ಚೇಸಿಂಗ್‌ನಲ್ಲಿ ಲಂಕಾ ವಿರುದ್ಧ ಬಿಗಿ ಹಿಡಿತ ಸಾಧಿಸಿದ ರೋಹಿತ್‌ ಪಡೆ 41 ರನ್‌ಗಳ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು.

    ರೋಹಿತ್‌ ಶರ್ಮಾ ಅರ್ಧಶತಕ ಬ್ಯಾಟಿಂಗ್‌ ನೆರವು ಹಾಗೂ ಕುಲ್ದೀಪ್‌ ಯಾದವ್‌ ಸ್ಪಿನ್‌ ಬೌಲಿಂಗ್‌ ದಾಳಿ ನೆರವಿನಿಂದ ಭಾರತ, ಶ್ರೀಲಂಕಾ ವಿರುದ್ಧ 41 ರನ್‌ಗಳ ಜಯ ಸಾಧಿಸಿದ್ದು, ಫೈನಲ್‌ ಕನಸು ಜೀವಂತವಾಗಿಸಿಕೊಂಡಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 49.1 ಓವರ್‌ಗಳಲ್ಲಿ 213 ರನ್‌ಗಳಿಗೆ ಆಲೌಟ್‌ ಆಯಿತು. 214 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಟೀಂ ಇಂಡಿಯಾ ಸ್ಪಿನರ್‌ಗಳ ದಾಳಿಗೆ ನಲುಗಿತು. 41.3 ಓವರ್‌ಗಳಲ್ಲಿ 172 ರನ್‌ಗಳಗೆ ಸರ್ವಪತನ ಕಂಡಿತು.

    ಚೇಸಿಂಗ್‌ ಆರಂಭಿಸಿದ ಲಂಕಾ ತಂಡ ಟೀಂ ಇಂಡಿಯಾ ಸ್ಪಿನ್‌ ಬೌಲಿಂಗ್‌ ದಾಳಿಗೆ ನಲುಗಿಹೋಗಿತ್ತು. 7 ಓವರ್‌ಗಳಲ್ಲಿ 26 ರನ್‌ಗಳಿಸಿ ಪ್ರಮುಖ 3 ವಿಕೆಟ್‌ಗಳನ್ನ ಕಳೆದುಕೊಂಡಿತ್ತು. 26 ಓವರ್‌ಗಳಲ್ಲಿ 104 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಪಾತುಮ್ ನಿಸ್ಸಾಂಕ 6 ರನ್‌, ದಿಮುತ್ ಕರುಣಾರತ್ನೆ 2 ರನ್‌, ಕುಸಲ್ ಮೆಂಡಿಸ್ 15 ರನ್‌, ಸದೀರ ಸಮರವಿಕ್ರಮ 17 ರನ್‌, ಚರಿತ್ ಅಸಲಂಕಾ 22 ರನ್‌ ಹಾಗೂ ದಸುನ್‌ ಶನಾಕ 9 ರನ್‌ಗಳಿಸಿ ವಿಕೆಟ್‌ ಕೈಚೆಲ್ಲಿದರು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಧನಂಜಯ ಡಿ ಸಿಲ್ವಾ ಹಾಗೂ ದುನಿತ್ ವೆಲ್ಲಲಾಗೆ ತಂಡಕ್ಕೆ ನೆರವಾದರು.

    ಧನಂಜಯ ಹಾಗೂ ದುನಿತ್‌ ಜೋಡಿ 7ನೇ ವಿಕೆಟ್‌ಗೆ 75 ಎಸೆತಗಳಲ್ಲಿ 63 ರನ್‌ಗಳ ಜೊತೆಯಾಟ ನೀಡಿತ್ತು. ಕೊನೆಯ ಹಂತ ತಲುಪುತ್ತಿದ್ದಂತೆ ಸ್ಪೋಟಕ ಆಟಕ್ಕೆ ಪ್ರಯತ್ನಿಸಿತ್ತು. ಅಷ್ಟರಲ್ಲೇ ಜಡೇಜಾ ಧನಂಜಯ್‌ ಸೆಲ್ವಾ ಆಟಕ್ಕೆ ಬ್ರೇಕ್‌ ಹಾಕಿದರು. ಸಿಲ್ವಾ 66 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ 41 ರನ್‌ ಗಳಿಸಿ ಔಟಾಗುತ್ತಿದ್ದಂತೆ ಮಹೀಶ್‌ ತೀಕ್ಷಣ, ಕಸುನ್‌ ರಜಿತ ಹಾಗೂ ಮಹೇಶ್‌ ಪಥಿರಣ ವಿಕೆಟ್‌ ಒಪ್ಪಿಸಿದ್ರು. ಕೊನೆಯವರೆಗೂ ಹೋರಾಟ ನಡೆಸಿದ ದುನಿತ್‌ 46 ಎಸೆತಗಳಲ್ಲಿ 42 ರನ್‌ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಶ್ರೀಲಂಕಾ 41.3 ಓವರ್‌ಗಳಲ್ಲಿ 172 ರನ್‌ಗಳಿಗೆ ಸರ್ವಪತನ ಕಂಡಿತು.

    ಟೀಂ ಇಂಡಿಯಾ ವಿರುದ್ಧ ಕುಲ್ದೀಪ್‌ ನಾಲ್ಕು ವಿಕೆಟ್‌ ಕಿತ್ತರೆ, ಜಸ್ಪ್ರೀತ್‌ ಬುಮ್ರಾ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ಹಾರ್ದಿಕ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕರಾದ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಜೋಡಿ 15.1 ಓವರ್‌ಗಳಲ್ಲಿ 91 ರನ್‌ಗಳ ಜೊತೆಯಾಟ ನೀಡಿತು. ಶುಭಮನ್‌ ಗಿಲ್‌ 19‌ ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೇ ಪಾಕ್‌ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ್ದ ಕೊಹ್ಲಿ ಕೇವಲ 3 ರನ್‌ಗಳಿಗೆ ಔಟಾದರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್‌ ಕಿಶನ್‌ 61 ಎಸೆತಗಳಲ್ಲಿ 33 ರನ್ ಹಾಗೂ ಕೆ.ಎಲ್‌ ರಾಹುಲ್‌ 44 ಎಸೆತಗಳಲ್ಲಿ 39 ರನ್‌ ಬಾರಿಸುವ ಮೂಲಕ ಛೇರಿಕೆ ನೀಡಿದ್ದರು. ಇವರಿಬ್ಬರ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಒಂದೊಂದೇ ವಿಕೆಟ್‌ ಕಳೆದುಕೊಂಡಿತು. ಕೊನೆಯಲ್ಲಿ ಅಕ್ಷರ್‌ ಪಟೇಲ್‌ 26 ರನ್‌ಗಳ ನೆರವಿನಿಂದ ಟೀಂ ಇಂಡಿಯಾ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಮೊದಲ 15 ಓವರ್‌ಗಳಲ್ಲಿ 91 ರನ್‌ ಗಳಿಸಿದ್ದ ಭಾರತ 25 ಓವರ್‌ಗಳಲ್ಲಿ 128 ರನ್‌ ಗಳಿಸಿತ್ತು. ಬಳಿಕ ನಿಧಾನ ಗತಿ ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ 43 ಓವರ್‌ಗಳಲ್ಲಿ 186 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿತ್ತು. ಇದರಿಂದ 200 ರನ್‌ ಗಳಿಸುವುದೂ ಕಷ್ಟವಾಗಿತ್ತು. ಈ ವೇಳೆ ಅಕ್ಷರ್‌ ಪಟೇಲ್‌ ಜವಾಬ್ದಾರಿಯುತ ಆಟದಿಂದ 200ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಶ್ರೀಲಂಕಾ ಪರ ದುನಿತ್ ವೆಲ್ಲಲಾಗೆ 10 ಓವರ್‌ಗಳಲ್ಲಿ 40 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಕಿತ್ತರೆ, ಚರಿತ್‌ ಹಸಲಂಕಾ 9 ಓವರ್‌ಗಳಲ್ಲಿ ಕೇವಲ 18 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಉರುಳಿಸಿದರು. ಮಹೀಶ್‌ ತೀಕ್ಷಣ ಒಂದು ವಿಕೆಟ್‌ ಪಡೆದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇವಲ 10 ರನ್‌ ಜೊತೆಯಾಟವಾಡಿ ಹೊಸ ದಾಖಲೆ ಬರೆದ ಕೊಹ್ಲಿ-ಹಿಟ್‌ಮ್ಯಾನ್‌

    ಕೇವಲ 10 ರನ್‌ ಜೊತೆಯಾಟವಾಡಿ ಹೊಸ ದಾಖಲೆ ಬರೆದ ಕೊಹ್ಲಿ-ಹಿಟ್‌ಮ್ಯಾನ್‌

    ಕೊಲಂಬೊ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ (Virat Kohli) ಜೋಡಿಯು ಶ್ರೀಲಂಕಾ (SriLanka) ವಿರುದ್ಧ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯ ಸೂಪರ್-4 ಪಂದ್ಯದಲ್ಲಿ ಕೇವಲ 10 ರನ್‌ ಗಳಿಸಿದ್ರೂ ಹೊಸ ದಾಖಲೆಯೊಂದನ್ನ ನಿರ್ಮಿಸಿದ್ದಾರೆ.

    ಹೌದು. ಕಿಂಗ್‌ ಕೊಹ್ಲಿ ಹಾಗೂ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ ಜೋಡಿ ಲಂಕಾ ವಿರುದ್ಧ 16 ಎಸೆತಗಳಲ್ಲಿ 10 ರನ್‌ ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 5 ಸಾವಿರ ರನ್‌ಗಳ ಜೊತೆಯಾಟ ಪೂರೈಸಿದ ದಾಖಲೆ ಮಾಡಿದ್ದಾರೆ. ಇದನ್ನೂ ಓದಿ: ಕೊಹ್ಲಿ, ರಾಹುಲ್‌ ಬೆಂಕಿ ಬ್ಯಾಟಿಂಗ್‌, ಕುಲ್ದೀಪ್‌ ಮಿಂಚಿನ ಬೌಲಿಂಗ್‌ – ಭಾರತಕ್ಕೆ 228 ರನ್‌ಗಳ ಜಯ, ಪಾಕ್‌ಗೆ ಹೀನಾಯ ಸೋಲು

    ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಮಂಗಳವಾರ (ಸೆ.12) ಅತಿಥೇಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 2 ರನ್ ಗಳಿಸುತ್ತಿದ್ದಂತೆ 5 ಸಾವಿರ ರನ್ ಜೊತೆಯಾಟ ಪೂರೈಸಿದ ರೋಹಿತ್- ಕೊಹ್ಲಿ ಜೋಡಿ ವೆಸ್ಟ್ ಇಂಡೀಸ್‌ ದಿಗ್ಗಜರಾದ ಗಾರ್ಡನ್ ಗ್ರೀನಿಡ್ಜ್ ಹಾಗೂ ಡಿಸ್ಮೆಂಡ್ ಹೇನ್ಸ್ ಅವರ ಹೆಸರಿನಲ್ಲಿದ್ದ ಸುದೀರ್ಘ ಕಾಲದ ಜೊತೆಯಾಟದ ದಾಖಲೆಯನ್ನ ಹಿಂದಿಕ್ಕಿದ್ದಾರೆ. ಇದನ್ನೂ ಓದಿ: ಹೈವೋಲ್ಟೇಜ್‌ ಕದನಕ್ಕೆ ಮತ್ತೆ ಮಳೆ ಕಾಟ – ಪಾಕ್‌ ತಂಡದ ಹಾದಿ ಇನ್ನಷ್ಟು ಕಠಿಣವಾಗುತ್ತಾ?

    ವೇಗದ 5 ಸಾವಿರ ರನ್ ಪೂರೈಸಿದ ಜೋಡಿ: ಇದರೊಂದಿಗೆ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಜೋಡಿ ಅತಿ ವೇಗವಾಗಿ 5 ಸಾವಿರ ರನ್‌ ಜೊತೆಯಾಟ ನೀಡಿದ ಹೆಗ್ಗಳಿಕೆಗೂ ಪಾತ್ರವಾಗಿದೆ. ಗಾರ್ಡನ್ ಗ್ರೀನಿಡ್ಜ್- ಡೇಸ್ಮಂಡ್‌ ಹೇನೆಸ್‌ 97 ಇನ್ನಿಂಗ್ಸ್‌ನಲ್ಲಿ, ಆಡಂ ಗಿಲ್ ಕ್ರಿಸ್ಟ್-ಮ್ಯಾಥ್ಯೂ ಹೇಡನ್ ಮತ್ತು ತಿಲಕರತ್ನೆ ದಿಲ್ಷಾನ್-ಕುಮಾರ ಸಂಗಾಕ್ಕರ ಜೋಡಿ ತಲಾ 104 ಇನ್ನಿಂಗ್ಸ್‌ಗಳಲ್ಲಿ, ಶಿಖರ್ ಧವನ್-ರೋಹಿತ್ ಶರ್ಮಾ ಜೋಡಿ 112 ಇನ್ನಿಂಗ್ಸ್‌ಗಳಲ್ಲಿ, ಸಚಿನ್ ತೆಂಡೂಲ್ಕರ್ – ಸೌರವ್ ಗಂಗೂಲಿ ಜೋಡಿ 116 ಇನ್ನಿಂಗ್ಸ್‌ಗಳಲ್ಲಿ, ಮಹೇಲಾ ಜಯವರ್ಧನೆ-ಕುಮಾರ ಸಂಗಾಕ್ಕರ ಜೋಡಿ 123 ಇನ್ನಿಂಗ್ಸ್‌ಗಳಲ್ಲಿ ಹಾಗೂ ಮಾರ್ವನ್ ಅಟ್ಟಪಟ್ಟು-ಸನತ್ ಜಯಸೂರ್ಯ 124 ಇನ್ನಿಂಗ್ಸ್‌ಗಳಲ್ಲಿ 5 ಸಾವಿರ ರನ್‌ ಪೂರೈಸಿದ ಸಾಧನೆ ಮಾಡಿದರೆ, ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ ಜೋಡಿ ಕೇವಲ 86 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: Asia Cup 2023ː ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಿಂಗ್‌ ಕೊಹ್ಲಿ ಮತ್ತೊಂದು ಮೈಲುಗಲ್ಲು

    ಒಡಿಐನಲ್ಲಿ ಅತಿ ಹೆಚ್ಚು ರನ್ ಗಳ ಜೊತೆಯಾಟ: ಇನ್ನೂ ಅತಿಹೆಚ್ಚು ರನ್‌ಗಳ ಜೊತೆಯಾಟ ನೀಡಿದವರ ಪೈಕಿ 8227 ರನ್ ಜೊತೆಯಾಟ ನೀಡಿದ ಸಚಿನ್ ತೆಂಡೂಲ್ಕರ್ – ಸೌರವ್ ಗಂಗೂಲಿ ಮೊದಲ ಸ್ಥಾನದಲ್ಲಿದ್ದರೆ, ಮಹೇಲಾ ಜಯವರ್ಧನೆ-ಕುಮಾರ ಸಂಗಾಕ್ಕರ ಜೋಡಿ (5992 ರನ್ ), ತಿಲಕರತ್ನೆ ದಿಲ್ಷಾನ್-ಕುಮಾರ ಸಂಗಾಕ್ಕರ (5475 ರನ್), ಮಾರ್ವನ್ ಅಟ್ಟಪಟ್ಟು-ಸನತ್ ಜಯಸೂರ್ಯ (5462 ರನ್), ಆಡಂ ಗಿಲ್ ಕ್ರಿಸ್ಟ್-ಮ್ಯಾಥ್ಯೂ ಹೇಡನ್ (5409 ರನ್), ರೋಹಿತ್ ಶರ್ಮಾ-ಶಿಖರ್ ಧವನ್ (5193 ರನ್ ), ಗಾರ್ಡನ್ ಗ್ರೀನಿಡ್ಜ್-ಡೇಸ್ಮಂಡ್ ಹೇನೆಸ್‌ (5150 ರನ್), ಇದೀಗ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ (5008 ರನ್‌) ನಂತರದ ಸ್ಥಾನಗಳಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೀಂ ಇಂಡಿಯಾ ವಿನಾಶದತ್ತ ಸಾಗುತ್ತಿದೆ – ನಾಲಿಗೆ ಹರಿಬಿಟ್ಟ ಪಾಕ್‌ ಮಾಜಿ ಕ್ರಿಕೆಟಿಗ, ಅಭಿಮಾನಿಗಳು ಕೆಂಡ

    ಟೀಂ ಇಂಡಿಯಾ ವಿನಾಶದತ್ತ ಸಾಗುತ್ತಿದೆ – ನಾಲಿಗೆ ಹರಿಬಿಟ್ಟ ಪಾಕ್‌ ಮಾಜಿ ಕ್ರಿಕೆಟಿಗ, ಅಭಿಮಾನಿಗಳು ಕೆಂಡ

    ಇಸ್ಲಾಮಾಬಾದ್‌: ಪ್ರತಿಷ್ಠಿತ ಏಕದಿನ ಏಷ್ಯಾಕಪ್‌ (AsiaCup 2023) ಟೂರ್ನಿಗೆ ಇನ್ನೂ ಮೂರು ವಾರಗಳಷ್ಟೇ ಬಾಕಿಯಿದ್ದು, ಸೆ.2ರಂದು ನಡೆಯಲಿರುವ ಇಂಡೋಪಾಕ್‌ ರೋಚಕ ಕದನಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಈ ನಡುವೆ ಪಾಕ್‌ ತಂಡದ ಮಾಜಿ ವೇಗಿ ಸರ್ಫರಾಜ್‌ ನವಾಜ್‌, ಟೀಂ ಇಂಡಿಯಾ (Team India) ವಿನಾಶದತ್ತ ಸಾಗುತ್ತಿದೆ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ. ಟೀಂ ಇಂಡಿಯಾ ಕ್ರಿಕೆಟ್‌ ಅಭಿಮಾನಿಗಳಿಂದಲೂ ಟೀಕೆಗೆ ಗುರಿಯಾಗಿದ್ದಾರೆ.

    ಪಾಕಿಸ್ತಾನ (Pakistan) ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸರ್ಫರಾಜ್‌ ನವಾಜ್‌, ಟೀಂ ಇಂಡಿಯಾ ಇತ್ತೀಚೆಗೆ ವಿಂಡೀಸ್‌ (West Indies) ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ನಡೆಸಿದ ಪ್ರಯೋಗಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಭಾರತ ತಂಡಕ್ಕೆ ಹೋಲಿಸಿದ್ರೆ ಪಾಕಿಸ್ತಾನ ತಂಡ 100% ಸ್ಥಿರವಾಗಿದೆ. ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್​ ಟೂರ್ನಿಗಳಿಗೆ ಅತ್ಯಂತ ಸ್ಥಿರವಾದ ತಂಡವನ್ನ ಹೊಂದಿದೆ. ಆದ್ರೆ ಭಾರತ ಇನ್ನೂ ಅಂತಿಮ ತಂಡವನ್ನ ಸಂಯೋಜನೆ ಮಾಡೋದಕ್ಕೆ ಹೆಣಗಾಡುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಇನ್ಸ್ಟಾದಿಂದ ಅತಿ ಹೆಚ್ಚು ಹಣ – ಜಸ್ಟ್ 1 ಪೋಸ್ಟ್‌ಗೆ ಕೊಹ್ಲಿಗೆ ಸಿಗುತ್ತೆ ಕೋಟಿ ಕೋಟಿ

    ವೆಸ್ಟ್​ ಇಂಡೀಸ್​ ಸರಣಿಯಲ್ಲಿ ಭಾರತ ತಂಡದ ಪರಿಸ್ಥಿತಿ ಅರ್ಥವಾಗುತ್ತಿದೆ. ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್​ಗೆ ತಮ್ಮ ತಂಡವನ್ನು ಸಂಯೋಜಿಸಲು ಪರದಾಡುತ್ತಿದೆ. ಯಾರನ್ನ ಯಾವ ಜಾಗದಲ್ಲಿ ಆಡಿಸಿದ್ರೆ ಉತ್ತಮ ಅನ್ನೋದೇ ಗೊಂದಲವಾಗಿ ಕಾಡುತ್ತಿದೆ. ಪದೆ ಪದೇ ನಾಯಕರು ಬದಲಾಗುತ್ತಿದ್ದಾರೆ. ಹೊಸ ಆಟಗಾರರನ್ನ ಕರೆ ತರುತ್ತಿದ್ದಾರೆ. ಮತ್ತೊಂದೆಡೆ ಆಟಗಾರರಿಗೆ ಗಾಯದ ಸಮಸ್ಯೆಗಳು. ಇದೆಲ್ಲಾ ನೋಡುತ್ತಿದ್ದರೆ, ಸರಿಯಾದ ಸಂಯೋಜನೆಗೆ ಸಿದ್ಧವಾಗಲು ಕಷ್ಟವಾಗುತ್ತಿದೆ ಎಂದೆನಿಸುತ್ತದೆ ಎಂದಿದ್ದಾರೆ.

    ಇದೇ ವೇಳೆ ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ ಕಂಬ್ಯಾಕ್‌ ಕುರಿತು ಕಳವಳ ವ್ಯಕ್ತಪಡಿಸಿದ ನವಾಜ್‌, ಟೀಂ ಇಂಡಿಯಾ ತನ್ನ ಅಭಿವೃದ್ಧಿಗೆ ಯಾವುದೇ ಪ್ರಯತ್ನ ನಡೆಸುತ್ತಿಲ್ಲ. ಬೆಂಚ್​ ಬಲವನ್ನ ಹೆಚ್ಚಿಸುವಲ್ಲಿ ವಿಫಲವಾಗುತ್ತಿದ್ದು, ವಿನಾಶದತ್ತ ಸಾಗುತ್ತಿದೆ. ಪ್ರಮುಖ ಟೂರ್ನಿಗಳು ಹತ್ತಿರದಲ್ಲಿರುವಾಗ ಯಾವ ರೀತಿ ಸಂಯೋಜನೆ ಮಾಡಬೇಕು ಎಂಬುದೇ ತಿಳಿದಿಲ್ಲ. ಈ ಅವಧಿಯಲ್ಲೂ ಪ್ರಯೋಗಗಳು ಅಗತ್ಯವೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ICC WorldCup 2023: ಭಾರತ-ಪಾಕ್‌ ಸೇರಿದಂತೆ ಪ್ರಮುಖ ಪಂದ್ಯಗಳ ವೇಳಾಪಟ್ಟಿ ಬದಲು

    ಐಸಿಸಿ ಟ್ರೋಫಿ ಗೆಲ್ಲುವ ಒತ್ತಡಕ್ಕೂ ಭಾರತ ಸಿಲುಕಿದೆ. ಏಕೆಂದರೆ ಕಳೆದ 10 ವರ್ಷಗಳಲ್ಲಿ ಟೀಂ ಇಂಡಿಯಾ ಐಸಿಸಿಯ ಯಾವುದೇ ಟ್ರೋಫಿ ಗೆದ್ದಿಲ್ಲ ಎಂದು ನವಾಜ್ ವಿವರಿಸಿದ್ದಾರೆ.

    ಇದೇ ಆಗಸ್ಟ್‌ 30 ರಿಂದ ಪಾಕಿಸ್ತಾನ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಏಕದಿನ ಏಷ್ಯಾಕಪ್‌ ಟೂರ್ನಿ ಆಯೋಜನೆಗೊಂಡಿದೆ. ಆ ನಂತರ ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ಭಾರತದಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ICC WorldCup 2023: ಪಾಕಿಸ್ತಾನ ತಂಡ ಭಾರತಕ್ಕೆ ಬರೋದು ಫಿಕ್ಸ್

    ICC WorldCup 2023: ಪಾಕಿಸ್ತಾನ ತಂಡ ಭಾರತಕ್ಕೆ ಬರೋದು ಫಿಕ್ಸ್

    ಇಸ್ಲಾಮಾಬಾದ್: ಪಾಕಿಸ್ತಾನ ಪುರುಷರ ಕ್ರಿಕೆಟ್ ತಂಡವು (Pakistan Cricket Team) 2023ರ ವಿಶ್ವಕಪ್ ಟೂರ್ನಿಗೆ ಭಾರತಕ್ಕೆ ಪ್ರಯಾಣಿಸಲಿದೆ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ಖಚಿತಪಡಿಸಿದೆ.

    2023ರ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಗಾಗಿ ಪಾಕಿಸ್ತಾನ ತಂಡವು ಭಾರತಕ್ಕೆ ಪ್ರಯಾಣಿಸಲಿದೆ. ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ಕ್ರೀಡೆಗೆ ಅಡ್ಡಿಯಾಗುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಪಂದ್ಯದಲ್ಲಿ ಪಾಕ್ ತಂಡ ಭಾರತದ ವಿರುದ್ಧ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಆದ್ರೆ ಅಕ್ಟೋಬರ್ 15 ರಂದು ನವರಾತ್ರಿ ಉತ್ಸವದ ಆರಂಭದ ದಿನ ಆಗಿರುವುದರಿಂದ ದಿನಾಂಕ ಬದಲಾಯಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾರು ಅಪಘಾತ – ಇಬ್ಬರು ಮಕ್ಕಳು ಸೇರಿ 6 ಮಂದಿ ನೇಪಾಳಿ ಪ್ರಜೆಗಳು ದುರ್ಮರಣ

    ಕ್ರೀಡೆಯನ್ನು (Sports) ರಾಜಕೀಯದಿಂದೊಗೆ ಬೆರಸಬಾರದು ಎಂಬುದನ್ನ ಪಾಕಿಸ್ತಾನ ನಿರಂತರವಾಗಿ ಸಮರ್ಥಿಸಿಕೊಂಡಿದೆ. ಆದ್ದರಿಂದ ಮುಂಬರುವ ಐಸಿಸಿ ಟೂರ್ನಿಯಲ್ಲಿ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಲು ನಿರ್ಧರಿಸಿದೆ ಎಂದು ಹೇಳಿದೆ.

    ಏಕದಿನ ಏಷ್ಯಾಕಪ್ (ODI AsiaCup) ಟೂರ್ನಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದ್ರೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ನಿರಾಕರಿಸಿತು. ಆದ್ದರಿಂದ ಶ್ರೀಲಂಕಾದಲ್ಲಿ ನಿಗದಿಯಾಗಿದೆ. ಭಾರತ ಕಠಿಣ ನಿರ್ಧಾರ ತೋರಿದ ಹೊರತಾಗಿಯೂ ಪಾಕಿಸ್ತಾನದ ಈ ನಿರ್ಧಾರ ತನ್ನ ಜವಾಬ್ದಾರಿಯನ್ನ ತೋರಿಸಿದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಕಳೆದ ಕೆಲವು ದಿನಗಳಲ್ಲಿ ಪಾಕಿಸ್ತಾನದ ಅಧಿಕಾರಿಗಳ ಸಮಿತಿ ಭಾರತಕ್ಕೆ ಭೇಟಿ ನೀಡಿತ್ತು. ಇಲ್ಲಿ ಪಾಕ್ ತಂಡಕ್ಕೆ ನೀಯೋಜಿಸಲಾದ ಭದ್ರತಾ ವ್ಯವಸ್ಥೆಯ ಬಗ್ಗೆ ಪರಿಶೀಲಿಸಲು ವಿವಿಧ ಸ್ಥಳಗಳಿಗೆ ಅಧಿಕಾರಿಗಳ ತಂಡ ಪ್ರಯಾಣಿಸಿತ್ತು. 2016ರಲ್ಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಈಡನ್ ಗಾರ್ಡನ್‌ನಲ್ಲಿ ಸೆಣಸಾಟ ನಡೆಸಿತ್ತು. ಆ ನಂತರ ಇದೇ ಮೊದಲಿಗೆ ಭಾರತಕ್ಕೆ ಪಾಕ್ ತಂಡ ಪ್ರಯಾಣಿಸುತ್ತಿದೆ.


    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…

    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಾರ ಜೊತೆ, ಎಲ್ಲಿ ಬೇಕಾದ್ರೂ ಆಡೋಕೆ ನಾವ್‌ ರೆಡಿ – ಪಾಕ್‌ ತಂಡ ಭಾರತಕ್ಕೆ ಬರೋದು ಖಚಿತ; ಬಾಬರ್‌ ಆಜಂ

    ಯಾರ ಜೊತೆ, ಎಲ್ಲಿ ಬೇಕಾದ್ರೂ ಆಡೋಕೆ ನಾವ್‌ ರೆಡಿ – ಪಾಕ್‌ ತಂಡ ಭಾರತಕ್ಕೆ ಬರೋದು ಖಚಿತ; ಬಾಬರ್‌ ಆಜಂ

    ಇಸ್ಲಾಮಾಬಾದ್:‌ ಪ್ರಸಕ್ತ ಸಾಲಿನ ಐಸಿಸಿ ವಿಶ್ವಕಪ್‌ (ICC World Cup 2023) ಟೂರ್ನಿಯಲ್ಲಿ ಭಾರತದ ಯಾವುದೇ ಮೈದಾನದಲ್ಲಿ ಯಾವ ತಂಡವನ್ನ ಬೇಕಾದ್ರೂ ಎದುರಿಸಲು ಪಾಕಿಸ್ತಾನ ತಂಡ ಸಿದ್ಧವಾಗಿದೆ ಎಂದು ಪಾಕ್‌ ಕ್ರಿಕೆಟ್‌ ತಂಡದ ನಾಯಕ ಬಾಬರ್‌ ಆಜಂ (Babar Azam) ಹೇಳಿದ್ದಾರೆ. ಈ ಮೂಲಕ ಪಾಕ್‌ ತಂಡ ಭಾರತಕ್ಕೆ ಎಂಟ್ರಿ ಕೊಡುವುದನ್ನ ಖಚಿತಪಡಿಸಿದ್ದಾರೆ.

    ಹೌದು. ಟೀಂ ಇಂಡಿಯಾ (Team India) ಆತಿಥ್ಯದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿ ಈಗಾಗಲೇ ನಿಗದಿಯಾಗಿದ್ದು, ಅಕ್ಟೋಬರ್‌ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ, ಪಾಕ್‌ ತಂಡವನ್ನ ಎದುರಿಸಲಿದೆ. 1.32 ಲಕ್ಷ ಪ್ರೇಕ್ಷಕರನ್ನ ಒಳಗೊಳ್ಳುವ ಸಾಮರ್ಥ್ಯ ಹೊಂದಿರುವ ಮೋದಿ ಕ್ರೀಡಾಂಗಣದಲ್ಲಿ ಬದ್ಧವೈರಿಗಳ ಹೈವೋಲ್ಟೇಜ್‌ ಕದನ ನಡೆಯಲಿದೆ. ಇದನ್ನೂ ಓದಿ: ICC World Cup 2023: ಟೀಂ ಇಂಡಿಯಾ ಪರಿಷ್ಕೃತ ವೇಳಾಪಟ್ಟಿ ರಿಲೀಸ್‌ – ಇಲ್ಲಿದೆ ಡಿಟೇಲ್ಸ್‌

    ಕಳೆದ ವರ್ಷ T20 ಏಷ್ಯಾಕಪ್‌ (Asia Cup )ಹಾಗೂ ಆಸ್ಟ್ರೇಲಿಯಾದಲ್ಲಿ ನಡೆದ T20 ವಿಶ್ವಕಪ್‌ ಟೂರ್ನಿಗಳಲ್ಲಿ ಕಾಣಿಸಿಕೊಂಡಿದ್ದ ಸಾಂಪ್ರದಾಯಿಕ ಎದುರಾಳಿಗಳು ಮತ್ತೊಮ್ಮೆ ಮುಖಾಮುಖಿಯಾಗುತ್ತಿರುವುದು ಕ್ರಿಕೆಟ್‌ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (PCB) ಪ್ರಧಾನಿ ಶೆಹಬಾಜ್ ಷರೀಫ್, ಆಂತರಿಕ ಮತ್ತು ವಿದೇಶಾಂಗ ಸಚಿವಾಲಯಗಳಿಗೆ ಪತ್ರ ಬರೆದು ಟೂರ್ನಿಯಲ್ಲಿ ಪಾಲ್ಗೊಳ್ಳಲು ಅನುಮತಿ ಕೇಳಿದೆ. ಈ ನಡುವೆ ಬಾಬರ್‌ ಆಜಂ ಭಾರತಕ್ಕೆ ಬರುವುದನ್ನ ಖಚಿತಪಡಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಬರ್‌ ಆಜಂ, ಯಾರು ಎಲ್ಲಿ ಆಡ್ತಾರೆ ಅನ್ನೋದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಲ್ಲ. ಆದ್ರೆ ನಾವು ವಿಶ್ವಕಪ್‌ ಟೂರ್ನಿಯನ್ನು ಆಡಲಿದ್ದೇವೆ. ಭಾರತದ ವಿರುದ್ಧ ಮಾತ್ರವಲ್ಲ. ಒಂದು ತಂಡವನ್ನು ಕೇಂದ್ರೀಕರಿಸೋದಿಲ್ಲ. ಇನ್ನೂ 9 ತಂಡಗಳಿವೆ, ಎಲ್ಲಾ ತಂಡಗಳನ್ನ ಸೋಲಿಸಿದ್ರೆ ಮಾತ್ರ ನಾವು ಫೈನಲ್‌ ತಲುಪುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Justice For Rinku Singh – ಟೀಂ ಇಂಡಿಯಾದಲ್ಲಿ ಸ್ಥಾನ ನೀಡುವಂತೆ ಫ್ಯಾನ್ಸ್ ಆಗ್ರಹ

    ವೃತ್ತಿಪರರಾಗಿ ನಾವು ಎಲ್ಲದಕ್ಕೂ ಸಿದ್ಧರಾಗಿರಬೇಕು. ಎಲ್ಲೆಲ್ಲೆ ಕ್ರಿಕೆಟ್‌ ಟೂರ್ನಿ ನಡೆಯುತ್ತೆ, ನಾವು ಅಲ್ಲೇ ಹೋಗಿ ಆಡ್ತೀವಿ. ಪ್ರತಿ ದೇಶದಲ್ಲೂ ನಾವು ಪ್ರದರ್ಶನ ನೀಡಲು ಬಯಸುತ್ತೇವೆ. ಅಹಮದಾಬಾದ್‌ ಮಾತ್ರವಲ್ಲ ಹೈದರಾಬಾದ್ ಡೆಕ್ಕನ್, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ಪಾಕಿಸ್ತಾನ ತಂಡ ತನ್ನ ಪಂದ್ಯಗಳನ್ನಾಡಲು ನಿರ್ಧರಿಸಿದೆ ಎಂದು ಖಡಕ್ಕಾಗಿ ಹೇಳಿದ್ದಾರೆ.

    ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಪಾಕಿಸ್ತಾನ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಶ್ರೀಲಂಕಾದೊಂದಿಗೆ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನಾಡಲಿದೆ. ಇದು 2023-2025ರ ನಡುವಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಭಾಗವೂ ಆಗಿದೆ. ಜುಲೈ 16 ರಿಂದ ರಂದು ಗಾಲೆಯಲ್ಲಿ ಮೊದಲ ಟೆಸ್ಟ್ ಮತ್ತು ಜುಲೈ 24 ರಿಂದ 2ನೇ ಟೆಸ್ಟ್‌ ಕೊಲಂಬೊದಲ್ಲಿ ಪ್ರಾರಂಭವಾಗಲಿದೆ. ಅಲ್ಲದೇ ಮುಂದಿನ ಆಗಸ್ಟ್‌ 31 ರಿಂದ ಸೆಪ್ಟೆಂಬರ್ 17 ರವರೆಗೆ 6 ರಾಷ್ಟ್ರಗಳ ಏಷ್ಯಾ ಕಪ್‌ ಟೂರ್ನಿಯಲ್ಲೂ ಪಾಕಿಸ್ತಾನ ಆಡಲಿದೆ.

    ಮೊದಲ ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಅಂತಿಮ ಪಂದ್ಯ ಸೇರಿದಂತೆ ಉಳಿದ 9 ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯ ವಹಿಸಲಿದೆ. ಇದನ್ನೂ ಓದಿ: ಟೀಂ ಇಂಡಿಯಾ ಬೌಲಿಂಗ್‌ ಯಾವಾಗ್ಲೂ ಕಳಪೆ, ನಾವ್‌ ತಲೆ ಕೆಡಿಸಿಕೊಳ್ಳಲ್ಲ – ಪಾಕ್‌ ಮಾಜಿ ಕ್ರಿಕೆಟಿಗ ವ್ಯಂಗ್ಯ

    ಟೀಂ ಇಂಡಿಯಾ ವಿಶ್ವಕಪ್‌ ಪರಿಷ್ಕೃತ ವೇಳಾಪಟ್ಟಿ:

    ಭಾರತ vs ಆಸ್ಟ್ರೇಲಿಯಾ, ಅಕ್ಟೋಬರ್ 8, ಚೆನ್ನೈ
    ಭಾರತ vs ಅಫ್ಘಾನಿಸ್ತಾನ, ಅಕ್ಟೋಬರ್ 11, ದೆಹಲಿ
    ಭಾರತ vs ಪಾಕಿಸ್ತಾನ, ಅಕ್ಟೋಬರ್ 15, ಅಹಮದಾಬಾದ್
    ಭಾರತ vs ಬಾಂಗ್ಲಾದೇಶ, ಅಕ್ಟೋಬರ್ 19, ಪುಣೆ
    ಭಾರತ vs ನ್ಯೂಜಿಲೆಂಡ್, ಅಕ್ಟೋಬರ್ 22, ಧರ್ಮಶಾಲಾ
    ಭಾರತ vs ಇಂಗ್ಲೆಂಡ್, ಅಕ್ಟೋಬರ್ 29, ಲಕ್ನೋ
    ಭಾರತ vs ಶ್ರೀಲಂಕಾ, ನವೆಂಬರ್ 2, ಮುಂಬೈ
    ಭಾರತ vs ದಕ್ಷಿಣ ಆಫ್ರಿಕಾ, ನವೆಂಬರ್ 5, ಕೋಲ್ಕತ್ತಾ
    ಭಾರತ vs ನೆದರ್ಲೆಂಡ್‌, ನವೆಂಬರ್ 11, ಬೆಂಗಳೂರು

    ಭಾರತದಲ್ಲಿ ಪಾಕ್ ತಂಡದ ವೇಳಾಪಟ್ಟಿ:

    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ICC World Cup 2023: ಟೀಂ ಇಂಡಿಯಾ ಪರಿಷ್ಕೃತ ವೇಳಾಪಟ್ಟಿ ರಿಲೀಸ್‌ – ಇಲ್ಲಿದೆ ಡಿಟೇಲ್ಸ್‌

    ICC World Cup 2023: ಟೀಂ ಇಂಡಿಯಾ ಪರಿಷ್ಕೃತ ವೇಳಾಪಟ್ಟಿ ರಿಲೀಸ್‌ – ಇಲ್ಲಿದೆ ಡಿಟೇಲ್ಸ್‌

    ಮುಂಬೈ: ಏಕದಿನ ವಿಶ್ವಕಪ್‌ (ICC World Cup 2023) ಟೂರ್ನಿಯ ಅರ್ಹತಾ ಸುತ್ತಿನ ಬಳಿಕ ವಿಶ್ವಕಪ್‌ ಆಡುವ 10 ತಂಡಗಳನ್ನ‌ ಫೈನಲ್‌ ಮಾಡಿದ್ದು, BCCI ಟೀಂ ಇಂಡಿಯಾದ ಪರಿಷ್ಕೃತ ವೇಳಾಪಟ್ಟಿಯನ್ನ ಪ್ರಕಟಿಸಿದೆ.

    ವಿಶ್ವಕಪ್‌ ಟೂರ್ನಿಗೆ 8 ತಂಡಗಳು ನೇರ ಪ್ರವೇಶ ಪಡೆದುಕೊಂಡಿದ್ದರಿಂದ ಉಳಿದ ಎರಡು ತಂಡಗಳ ಆಯ್ಕೆಗೆ ಹಣಾಹಣಿ ನಡೆದಿತ್ತು. ಅದರಂತೆ ವಿಶ್ವಕಪ್‌ ಟೂರ್ನಿಯ ಅರ್ಹತಾ ಸುತ್ತಿನ ಬಳಿಕ ಶ್ರೀಲಂಕಾ (SriLanka) ಹಾಗೂ ನೆದರ್ಲೆಂಡ್‌ (Netherlands) ತಂಡಗಳು ವಿಶ್ವಕಪ್‌ ಟೂರ್ನಿಗೆ ಆಯ್ಕೆಯಾಗಿವೆ. ಹಾಗಾಗಿ ಬಿಸಿಸಿಐ (BCCI) ಪರಿಷ್ಕೃತ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ.

    ಅಕ್ಟೋಬರ್‌ 5 ರಿಂದ ನವೆಂಬರ್‌ 19 ರವರೆಗೆ ಟೂರ್ನಿ ನಡೆಯಲಿದೆ. ದೇಶದ 10 ನಗರಗಳಲ್ಲಿ ಟೂರ್ನಿ ನಡೆಯಲಿದ್ದು, ಟೂರ್ನಿಯ ಉದ್ಘಾಟನಾ ಮ್ಯಾಚ್‌ ಹಾಗೂ ಫೈನಲ್‌ ಪಂದ್ಯವು ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಆಯೋಜನೆಗೊಳ್ಳಲಿದೆ.

    ನವೆಂಬರ್ 2 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆತಿಥೇಯ ಭಾರತ, ಶ್ರೀಲಂಕಾ ತಂಡವನ್ನ ಎದುರಿಸಲಿದ್ದು, ನವೆಂಬರ್‌ 11 ರಂದು ಬೆಂಗಳೂರಿನ ನಡೆಯಲಿರುವ ಗ್ರೂಪ್‌ ಲೀಗ್‌ ಹಂತದ ಪಂದ್ಯದಲ್ಲಿ ಟೀಂ ಇಂಡಿಯಾ ನೆದರ್ಲೆಂಡ್‌ ತಂಡದ ಎದುರು ಕಣಕ್ಕಿಳಿಯಲಿದೆ. 1983ರಲ್ಲಿ ಮೊದಲ ಬಾರಿಗೆ ಏಕದಿನ ವಿಶ್ವಕಪ್‌ ಟೂರ್ನಿ ಗೆದ್ದುಕೊಂಡಿದ್ದ ಟೀಂ ಇಂಡಿಯಾ 2011ರಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಕೊನೆಯದ್ದಾಗಿ ವಿಶ್ವಚಾಂಪಿಯನ್‌ ಆಗಿತ್ತು. ಆದ್ರೆ ಇದೇ ಮೊದಲಬಾರಿಗೆ ಟೀಂ ಇಂಡಿಯಾ ಪೂರ್ಣ ಆತಿಥ್ಯದೊಂದಿಗೆ ವಿಶ್ವಕಪ್‌ ಟೂರ್ನಿ ಆಯೋಜಿಸಿದ್ದು, ದಶಕಗಳ ಬಳಿಕ ಪ್ರಶಸ್ತಿ ಗೆಲ್ಲುವ ಉತ್ಸಾಹದಲ್ಲಿದೆ.

    ಗುರುವಾರ ಸ್ಕಾಟ್‌ಲೆಂಡ್‌ ವಿರುದ್ಧ ನಡೆದ ಪಂದ್ಯದಲ್ಲಿ ನೆದರ್ಲೆಂಡ್‌ 4 ವಿಕೆಟ್‌ಗಳ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್‌ ಮಾಡಿದ ನೆದರ್ಲೆಂಡ್‌ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 277 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ನೆದರ್ಲೆಂಡ್‌ 42.5 ಓವರ್‌ಗಳಲ್ಲೇ 278 ರನ್‌ಗಳಿಸಿ ಜಯ ಸಾಧಿಸಿತು. ಈ ಮೂಲಕ ನೆದರ್ಲೆಂಡ್‌ ವಿಶ್ವಕಪ್‌ ಟೂರ್ನಿಗೆ ಅರ್ಹತೆ ಪಡೆದುಕೊಂಡರೆ, ವಿಶ್ವಕಪ್‌ ಟೂರ್ನಿ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಕನಸುಕಂಡಿದ್ದ ಸ್ಕಾಟ್‌ಲೆಂಡ್‌ ಸೋತು ನಿರಾಸೆ ಅನುಭವಿಸಿದೆ.

    ಟೀಂ ಇಂಡಿಯಾ ವಿಶ್ವಕಪ್‌ ಪರಿಷ್ಕೃತ ವೇಳಾಪಟ್ಟಿ:

    ಭಾರತ vs ಆಸ್ಟ್ರೇಲಿಯಾ, ಅಕ್ಟೋಬರ್ 8, ಚೆನ್ನೈ
    ಭಾರತ vs ಅಫ್ಘಾನಿಸ್ತಾನ, ಅಕ್ಟೋಬರ್ 11, ದೆಹಲಿ
    ಭಾರತ vs ಪಾಕಿಸ್ತಾನ, ಅಕ್ಟೋಬರ್ 15, ಅಹಮದಾಬಾದ್
    ಭಾರತ vs ಬಾಂಗ್ಲಾದೇಶ, ಅಕ್ಟೋಬರ್ 19, ಪುಣೆ
    ಭಾರತ vs ನ್ಯೂಜಿಲೆಂಡ್, ಅಕ್ಟೋಬರ್ 22, ಧರ್ಮಶಾಲಾ
    ಭಾರತ vs ಇಂಗ್ಲೆಂಡ್, ಅಕ್ಟೋಬರ್ 29, ಲಕ್ನೋ
    ಭಾರತ vs ಶ್ರೀಲಂಕಾ, ನವೆಂಬರ್ 2, ಮುಂಬೈ
    ಭಾರತ vs ದಕ್ಷಿಣ ಆಫ್ರಿಕಾ, ನವೆಂಬರ್ 5, ಕೋಲ್ಕತ್ತಾ
    ಭಾರತ vs ನೆದರ್ಲೆಂಡ್‌, ನವೆಂಬರ್ 11, ಬೆಂಗಳೂರು

  • ಯಾರಾದ್ರು ಕೊಟ್ರೆ ನಾವೂ ತಿರುಗಿಸಿ ಕೊಡ್ತೀವಿ – ಮತ್ತೆ ಗಂಭೀರ್‌ಗೆ ಕೌಂಟರ್‌ ಕೊಟ್ಟ ಕಿಂಗ್‌ ಕೊಹ್ಲಿ

    ಯಾರಾದ್ರು ಕೊಟ್ರೆ ನಾವೂ ತಿರುಗಿಸಿ ಕೊಡ್ತೀವಿ – ಮತ್ತೆ ಗಂಭೀರ್‌ಗೆ ಕೌಂಟರ್‌ ಕೊಟ್ಟ ಕಿಂಗ್‌ ಕೊಹ್ಲಿ

    ಲಕ್ನೋ: ಲಕ್ನೋ: ಆರ್‌ಸಿಬಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಮೆಂಟರ್‌ ಗೌತಮ್‌ ಗಂಭೀರ್‌ (Gautam Gambhir) ಸದ್ಯ ಸುದ್ದಿಯಲ್ಲಿದ್ದಾರೆ. ಸೋಮವಾರ ಅಟಲ್‌ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ಇತ್ತಂಡಗಳ ನಡುವಿನ ಪಂದ್ಯದ ಬಳಿಕ ನಡೆದ ಜಗಳ ದೇಶಾದ್ಯಂತ ಭಾರೀ ಚರ್ಚೆಯಲ್ಲಿದೆ.

    ಮೊದಲು ಈ ಘಟನೆಗೆ ಕಾರಣವಾಗಿದ್ದು, ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೌತಮ್‌ ಗಂಭೀರ್‌ ಮಾಡಿದ್ದ ವರ್ತನೆ. ಅಂದು ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತ್ತು. ಈ ಗೆಲುವಿನ ಸಂಭ್ರಮದಲ್ಲಿ ಲಕ್ನೋ ತಂಡದ ಮೆಂಟರ್ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳಿಗೆ ಸೈಲೆಂಟಾಗಿರಬೇಕು ಎಂದು ಕೈಸನ್ನೆ ಮಾಡಿದ್ದರು. ಇದನ್ನೂ ಓದಿ: ನವೀನ್ ವಿರುದ್ಧ ಕಿತ್ತಾಡಿದ್ದಕ್ಕೆ ಕೊಹ್ಲಿಗೆ 1.07 ಕೋಟಿ ಲಾಸ್ – ಕೊಹ್ಲಿ, ಗಂಭೀರ್ ಕಿರಿಕ್‌ಗೆ ಕಾರಣ ಏನು?

    ಇದಕ್ಕೆ ಪ್ರತ್ಯುತ್ತರವಾಗಿ ವಿರಾಟ್ ಕೊಹ್ಲಿ ಕೂಡ ಲಕ್ನೋ ಸೂಪರ್ ಜೈಂಟ್ಸ್ ಅನ್ನು ಟಾರ್ಗೆಟ್ ಮಾಡಿ ಸಂಭ್ರಮಿಸಿದ್ದರು. ಪ್ರತಿ ವಿಕೆಟ್‌ ಪಡೆದಾಗಲೂ ಫುಲ್‌ ಜೋಶ್‌ನಿಂದ ಸಂಭ್ರಮಿಸಿದರು. ಆದರೆ ಪಂದ್ಯದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೆಂಟರ್ ಗೌತಮ್ ಗಂಭೀರ್ ಹಾಗೂ ಕೊಹ್ಲಿ ನಡುವೆ ವಾಗ್ವಾದ ನಡೆಯಿತು. ಇದರಿಂದಾಗಿ ಐಪಿಎಲ್‌ ಮಂಡಳಿ ದಂಡದ ಬಿಸಿ ಮುಟ್ಟಿಸಿತು. ಬಳಿಕ ಆರ್‌ಸಿಬಿ ತಂಡದ ಡ್ರೆಸ್ಸಿಂಗ್‌ ರೂಂ ನಲ್ಲಿ ಕಾಣಿಸಿಕೊಂಡ ಕೊಹ್ಲಿ, ಗಂಭೀರ್‌ಗೆ ಕೌಂಟರ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ನೆನಪಿದೆಯಾ.. ಅಂದು ಕೊಹ್ಲಿಗಾಗಿ ತನ್ನ ಪ್ರಶಸ್ತಿಯನ್ನೇ ಬಿಟ್ಟುಕೊಟ್ಟಿದ್ದರು ಗಂಭೀರ್‌

    ನಿಮಗೆ ಕೊಡೋಕೆ ಗೊತ್ತಿದ್ರೆ, ಅದನ್ನ ಇಸ್ಕೋಳ್ಳೋಕು ಗೊತ್ತಿರಬೇಕು. ಇಲ್ಲದಿದ್ರೆ ಕೊಡೋಕೆ ಬರಬಾರದು, ಕೊಟ್ಟರೆ, ನಾವು ತಿರುಗಿಸಿ ಕೊಡ್ತೀವಿ, ಇಲ್ಲದಿದ್ರೆ ನೀವು ಕೊಡೋಕೆ ಬರಬಾರದು ಎಂದು ಪರೋಕ್ಷವಾಗಿ ಡಿಚ್ಚಿಕೊಟ್ಟಿದ್ದಾರೆ.

  • ನೆನಪಿದೆಯಾ.. ಅಂದು ಕೊಹ್ಲಿಗಾಗಿ ತನ್ನ ಪ್ರಶಸ್ತಿಯನ್ನೇ ಬಿಟ್ಟುಕೊಟ್ಟಿದ್ದರು ಗಂಭೀರ್‌

    ನೆನಪಿದೆಯಾ.. ಅಂದು ಕೊಹ್ಲಿಗಾಗಿ ತನ್ನ ಪ್ರಶಸ್ತಿಯನ್ನೇ ಬಿಟ್ಟುಕೊಟ್ಟಿದ್ದರು ಗಂಭೀರ್‌

    ಲಕ್ನೋ: ಆರ್‌ಸಿಬಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಮೆಂಟರ್‌ ಗೌತಮ್‌ ಗಂಭೀರ್‌ (Gautam Gambhir) ಸದ್ಯ ಸುದ್ದಿಯಲ್ಲಿದ್ದಾರೆ. ಸೋಮವಾರ ಅಟಲ್‌ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ಇತ್ತಂಡಗಳ ನಡುವಿನ ಪಂದ್ಯದ ಬಳಿಕ ನಡೆದ ಜಗಳ ದೇಶಾದ್ಯಂತ ಭಾರೀ ಚರ್ಚೆಯಲ್ಲಿದೆ.

    ಈ ನಡುವೆ ವಿರಾಟ್‌ ಕೊಹ್ಲಿ ಹಾಗೂ ಗೌತಮ್‌ ಗಂಭೀರ್‌ ನಡುವಿನ ಪಾಟ್ನರ್‌ಶಿಪ್‌ ಈ ಹಿಂದೆ ಹೇಗಿತ್ತು ಎನ್ನುವ ವೀಡಿಯೋ ತುಣುಕೊಂದು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಕೆಲವರು ಗೌತಮ್‌ ಗಂಭೀರ್‌ ಪರ ಬ್ಯಾಟ್‌ ಬೀಸಿದರೆ, ಇನ್ನೂ ಕೆಲವರು ವಿರಾಟ್‌ ಕೊಹ್ಲಿಯನ್ನ ಬೆಂಬಲಿಸಿದ್ದಾರೆ. ಇದನ್ನೂ ಓದಿ: ನವೀನ್ ವಿರುದ್ಧ ಕಿತ್ತಾಡಿದ್ದಕ್ಕೆ ಕೊಹ್ಲಿಗೆ 1.07 ಕೋಟಿ ಲಾಸ್ – ಕೊಹ್ಲಿ, ಗಂಭೀರ್ ಕಿರಿಕ್‌ಗೆ ಕಾರಣ ಏನು?

    ಗಂಭೀರ್‌ ಪ್ರಶಸ್ತಿ ಬಿಟ್ಟುಕೊಟ್ಟಿದ್ದರು: ಈ ಹಿಂದೆ 2009ರಲ್ಲಿ ಶ್ರೀಲಂಕಾ (SriLanka) ವಿರುದ್ಧ ನಡೆದ ಪಂದ್ಯದಲ್ಲಿ ಗೌತಮ್‌ ಗಂಭೀರ್‌ ತಮ್ಮ ಮ್ಯಾನ್‌ ಆಫ್‌ದಿ ಮ್ಯಾಚ್‌ (ಪಂದ್ಯಶ್ರೇಷ್ಠ) ಪ್ರಶಸ್ತಿಯನ್ನ ಕೊಹ್ಲಿಗೆ ಬಿಟ್ಟುಕೊಟ್ಟಿದ್ದರು.

    ಹೌದು. 2009ರ ಡಿಸೆಂಬರ್‌ 24 ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ (Team India) 7 ವಿಕೆಟ್‌ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತ್ತು. ಈ ಪಂದ್ಯದಲ್ಲಿ ಭಾರತ 316 ರನ್‌ಗಳ ಗುರಿ ಬೆನ್ನಟ್ಟಿತ್ತು. ಸಚಿನ್‌ ತೆಂಡೂಲ್ಕರ್‌, ವೀರೇಂದ್ರ ಸೆಹ್ವಾಗ್‌ ಬೇಗನೆ ನಿರ್ಗಮಿಸಿದರು. ನಂತರ ಸುರಂಗ ಲಕ್ಮಲ್ ಉತ್ತಮ ಆರಂಭ ನೀಡಿದ್ದರು. ಇದಾದ ಬಳಿಕ ಜೊತೆಗೂಡಿದ ವಿರಾಟ್‌ ಕೊಹ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ್ದರು.

    3ನೇ ವಿಕೆಟ್‌ ಜೊತೆಯಾಟಕ್ಕೆ ಈ ಜೋಡಿ 35.4 ಓವರ್‌ಗಳಲ್ಲಿ 224 ರನ್‌ ಜೊತೆಯಾಟ ನೀಡಿತ್ತು. ಗಂಭೀರ್‌ 137 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 150 ರನ್‌ ಗಳಿಸಿ, ಅಜೇಯರಾಗುಳಿದಿದ್ದರು. ಆದ್ರೆ ವಿರಾಟ್‌ ಕೊಹ್ಲಿ 114 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್‌ನೊಂದಿಗೆ 107 ರನ್‌ ಗಳಿಸಿ ಔಟಾಗಿದ್ದರು. ಅದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಅವರ ಚೊಚ್ಚಲ ಶತಕವಾಗಿತ್ತು. ಇದನ್ನೂ ಓದಿ: ಬೊಂಬಾಟ್‌ ಬೌಲಿಂಗ್‌, ಮ್ಯಾಜಿಕ್‌ ಫೀಲ್ಡಿಂಗ್‌ – RCBಗೆ 18 ರನ್‌ಗಳ ಭರ್ಜರಿ ಜಯ

    ಆ ಸಮಯದಲ್ಲಿ ವಿರಾಟ್‌ ಕೊಹ್ಲಿ ಹೊಸಬರಾಗಿದ್ದರು, ಆದ್ರೆ ಗಂಭೀರ್‌, ವಿರಾಟ್‌‌ ಟೀಂ ಇಂಡಿಯಾಗೆ ಬರುವುದಕ್ಕೂ ಮುನ್ನವೇ 6 ವರ್ಷಗಳ ಕಾಲ ಆಡಿದ್ದರು. ಅಂದು ಗಂಭೀರ್ ಅವರು ಕೋಲ್ಕತ್ತಾದ ಐಕಾನಿಕ್ ಸ್ಥಳದಲ್ಲಿ ಆಡಿದ ನಂತರ ಪಂದ್ಯಶ್ರೇಷ್ಠರಾಗಿ ಆಯ್ಕೆಯಾದರು. ಆದರೆ, ಗಂಭೀರ್ ತಮ್ಮ ಪ್ರಶಸ್ತಿಯನ್ನ ಕೊಹ್ಲಿಗೆ ನೀಡಲು ನಿರ್ಧರಿಸಿದರು. ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಈ ವಿಷಯ ಪ್ರಕಟಿಸಿದ್ದರು. ಈ ವಿಚಾರ ಇದೀಗ ಮುನ್ನೆಲೆಗೆ ಬಂದಿದ್ದು, ಕೆಲವರು ವಿರಾಟ್‌ ಕೊಹ್ಲಿಗೆ ಗಂಭೀರ್‌ ಪ್ರೋತ್ಸಾಹಿಸಿದ್ದನ್ನು ನೆನಪಿಟ್ಟುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

  • ಬಹುಕಾಲದ ಗೆಳತಿಯನ್ನ ವರಿಸಿದ ಲಂಕಾ ಕ್ರಿಕೆಟಿಗ ಹಸರಂಗ

    ಬಹುಕಾಲದ ಗೆಳತಿಯನ್ನ ವರಿಸಿದ ಲಂಕಾ ಕ್ರಿಕೆಟಿಗ ಹಸರಂಗ

    ಕೊಲೊಂಬೊ: ಶ್ರೀಲಂಕಾ ತಂಡದಲ್ಲಿ ಸ್ಪಿನ್ ಮಾಂತ್ರಿಕ ಎಂದೇ ಖ್ಯಾತಿಯಾಗಿರುವ ಕ್ರಿಕೆಟಿಗ ವಾನಿಂದು ಹಸರಂಗ (Wanindu Hasaranga) ತನ್ನ ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಆರ್‌ಸಿಬಿ (RCB) ತಂಡದ ಆಲ್‌ರೌಂಡರ್ ಸಹ ಆಗಿರುವ ವಾನಿಂದು ಹಸರಂಗ, ಗೆಳತಿ ವಿಂದ್ಯಾ (Vindya) ವಿವಾಹದ ಫೋಟೋಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: WPL 2023: ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು – ಗುಜರಾತ್ ಜೈಂಟ್ಸ್‌ಗೆ 11 ರನ್ ರೋಚಕ ಜಯ

    ಶ್ರೀಲಂಕಾ (SriLanka) ತಂಡದಲ್ಲಿ ತನ್ನ ಸ್ಪಿನ್ ಬೌಲಿಂಗ್ ಹಾಗೂ ಸ್ಫೋಟಕ ಆಟದಿಂದ ಕ್ರಿಕೆಟ್ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಸರಂಗ. ಆರ್‌ಸಿಬಿ ತಂಡದಲ್ಲಿ ಆಲ್‌ರೌಂಡರ್ ಆಗಿಯೂ ಮಿಂಚಿದ್ದಾರೆ. ಇದನ್ನೂ ಓದಿ: Ind Vs Aus: ಆಸ್ಟ್ರೇಲಿಯಾದ ಪ್ರಧಾನಿ‌ ಜೊತೆ ಮೋದಿ ಮ್ಯಾಚ್ ವೀಕ್ಷಣೆ

    ಮಾರ್ಚ್ 9 ರಂದು ಆತ್ಮೀಯರ ಸಮ್ಮುಖದಲ್ಲಿ ಹಸರಂಗ-ವಿಂದ್ಯಾ ಜೋಡಿಯ ವಿವಾಹ (Marriage) ಮಹೋತ್ಸವ ಜರುಗಿದೆ. ನವ ಜೋಡಿಯ ಫೋಟೋಗಳು ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಶುಭಕೋರಿದ್ದಾರೆ. ಇತ್ತ ಆರ್‌ಸಿಬಿ ತಂಡ ಕೂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ನವದಂಪತಿಗೆ ಶುಭ ಹಾರೈಸಿದೆ. ಇದನ್ನೂ ಓದಿ: ಜೊನಾಸೆನ್‌ ಆಲ್‌ರೌಂಡರ್‌ ಆಟ, ತಾಲಿಯಾ ಏಕಾಂಗಿ ಹೋರಾಟ – ಡೆಲ್ಲಿ ಕ್ಯಾಪಿಟಲ್ಸ್‌ಗೆ 42 ರನ್‌ಗಳ ಭರ್ಜರಿ ಜಯ

    2022ರ ಏಷ್ಯಾಕಪ್ (AisaCup 2022) ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಆಲ್‌ರೌಂಡರ್ ಪ್ರದರ್ಶನ ನೀಡಿದ್ದ ಹಸರಂಗ ತಂಡದ ಗೆಲುವಿಗೆ ಕಾರಣರಾಗಿದ್ದರು. ಇದರೊಂದಿಗೆ 2022ರ ಟಿ20 ವಿಶ್ವಕಪ್‌ನಲ್ಲಿ (T20 WorldCup) 15 ವಿಕೆಟ್ ಪಡೆಯುವ ಮೂಲಕ ಅತಿಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದರು.