Tag: Srinagar

  • ಕಾಶ್ಮೀರದಲ್ಲಿ ಮತ್ತೆ ಭಯ ಮರಳಿದೆ: ಒಮರ್ ಅಬ್ದುಲ್ಲಾ

    ಕಾಶ್ಮೀರದಲ್ಲಿ ಮತ್ತೆ ಭಯ ಮರಳಿದೆ: ಒಮರ್ ಅಬ್ದುಲ್ಲಾ

    ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಭಯ ಮರಳಿದೆ ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

    ಮಧ್ಯ ಕಾಶ್ಮೀರದ ಗಂದರ್‍ಬಾಲ್ ಜಿಲ್ಲೆಯ ಪಕ್ಷದ ಜಿಲ್ಲಾ ಕೇಂದ್ರದಲ್ಲಿ ನಡೆದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, 370ನೇ ವಿಧಿಯನ್ನು ರದ್ದುಪಡಿಸಿದ ನಂತರ, ಜಮ್ಮು ಮತ್ತು ಕಾಶ್ಮೀರ ಶಾಂತಿ ಮರಳುತ್ತದೆ ಎಂದು ನಾವು ತಿಳಿದುಕೊಂಡಿದ್ದೆವು. ಆದರೆ ಅದು ಸುಳ್ಳು ಆಗಿದೆ. ಕಳೆದ 24 ಗಂಟೆಗಳಲ್ಲಿ, ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಸಿಬ್ಬಂದಿಯ ಮೇಲೆ ಭಯೋತ್ಪದಕರು ದಾಳಿ ಮಾಡಿದ್ದಾರೆ. ಈ ಪರಿಣಾಮ ನಾವು ಮೂವರು ಪೊಲೀಸರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀಗಂಧ ಕಳ್ಳನ ಬಂಧನ – 910 ಕೆಜಿ ಶ್ರೀಗಂಧ ವಶ

    ಜನತೆಗೆ ಭದ್ರತೆಯ ಭಾವನೆ ಮೂಡಿಸುವಲ್ಲಿ ಆಡಳಿತ ವಿಫಲವಾಗಿದೆ. ಸರ್ಕಾರ ಸುಮ್ಮನೆ ಬೇರೆ ರೀತಿಯ ಕೆಲಸಕ್ಕೆ ಕೈ ಹಾಕುವುದರ ಬದಲು ನಮ್ಮ ಜನರಿಗೆ ಭದ್ರತೆಯ ಭಾವನೆಯನ್ನು ನೀಡಲು ಮುಂದಾಗಬೇಕು. ಆದರೆ ಇದರಲ್ಲಿ ಭಾರತ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.

    ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಪಕ್ಷಗಳನ್ನು ಒಗ್ಗೂಡಿಸಿದ್ದಕ್ಕಾಗಿ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಶ್ಲಾಘಿಸಿದ ಒಮರ್, ಎಲ್ಲ ಪಕ್ಷಗಳ ಬಗ್ಗೆ ವಿವರಿಸಿದರು. ಈ ವೇಳೆ ಅಧಿಕಾರದ ಹಿಂದೆ ಎನ್‍ಸಿ ಓಡುತ್ತಿಲ್ಲ. ಬಿಜೆಪಿಯು ಆರ್‍ಎಸ್‍ಎಸ್ ಕೈಯಲ್ಲಿ ಆಡುತ್ತಿರುವ ಪಕ್ಷವಾಗಿದ್ದು, ಪಿಎಜಿಡಿ ಮೈತ್ರಿಯನ್ನು ರಚಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯೋಗ’ಯೋಗಾ’ – ವಿಯೆಟ್ನಾಂ ಯುವತಿಯ ಕೈಹಿಡಿದ ಹಾವೇರಿಯ ಯುವಕ

    ಕೇಂದ್ರವು ಯಾವಾಗಲೂ ಜಮ್ಮು ಮತ್ತು ಕಾಶ್ಮೀರದ ಧ್ವನಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ನಾವು ವಿಭಜನೆಗೊಂಡರೆ ಕೇಂದ್ರದ ಸಂಚು ಯಶಸ್ವಿಯಾಗುತ್ತದೆ ಎಂದು ತಿಳಿಸಿದರು.

  • ಪೊಲೀಸ್ ಬಸ್ ಮೇಲೆ ಭಯೋತ್ಪಾದಕರ ದಾಳಿ – ಮೂವರು ಹುತಾತ್ಮ, 14 ಜನರಿಗೆ ಗಾಯ

    ಪೊಲೀಸ್ ಬಸ್ ಮೇಲೆ ಭಯೋತ್ಪಾದಕರ ದಾಳಿ – ಮೂವರು ಹುತಾತ್ಮ, 14 ಜನರಿಗೆ ಗಾಯ

    ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು ಶ್ರೀನಗರ ಬಳಿ ಪೊಲೀಸ್ ಬಸ್ ಮೇಲೆ ದಾಳಿ ನಡೆಸಿದ್ದಾರೆ. ಪರಿಣಾಮ ಮೂವರು  ಹುತಾತ್ಮರಾಗಿದ್ದು, 14 ಮಂದಿ ಭದ್ರತಾ ಸಿಬ್ಬಂದಿಗೆ ಗಾಯವಾಗಿದೆ.

    ಇಂದು ಸಂಜೆ ಶ್ರೀನಗರದ ಹೊರವಲಯದಲ್ಲಿರುವ ಜೆವಾನ್‍ನಲ್ಲಿರುವ ಪೊಲೀಸ್ ಶಿಬಿರದ ಬಳಿ ಇಬ್ಬರು ಭಯೋತ್ಪಾದಕರು ಪೊಲೀಸ್ ಬಸ್ ಮೇಲೆ ದಾಳಿ ಮಾಡಿದ್ದಾರೆ. ಈ ಪರಿಣಾಮ ಜಮ್ಮು ಮತ್ತು ಕಾಶ್ಮೀರದ ಮೂವರು ಸಶಸ್ತ್ರ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

    ವಿವಿಧ ಭದ್ರತಾ ಪಡೆಗಳ ಹಲವಾರು ಶಿಬಿರಗಳನ್ನು ಹೊಂದಿರುವ ಅತ್ಯಂತ ಸುರಕ್ಷಿತ ಪ್ರದೇಶದಲ್ಲಿ ಭಯೋತ್ಪಾದಕರು ಬಸ್ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಿಬ್ಬಂದಿಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ.

    ಶ್ರೀನಗರದ ಪಂಥಾ ಚೌಕ್ ಪ್ರದೇಶದ ಜೆವಾನ್ ಬಳಿ ಈ ದಾಳಿ ನಡೆದಿದೆ. ಉಗ್ರರ ಪತ್ತೆಗೆ ಶೋಧ ಕಾರ್ಯವನ್ನು ಆರಂಭಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ ಉಸ್ತುವಾರಿ ಬದಲಾಗದಿದ್ದರೆ ಜನವರಿಯಲ್ಲಿ ಸತ್ಯಾಗ್ರಹ ಆರಂಭಿಸುತ್ತೇನೆ: ಸೋಮಶೇಖರ್ ರೆಡ್ಡಿ

    ಜಮ್ಮು-ಕಾಶ್ಮೀರದ ಪೊಲೀಸರು ಟ್ವೀಟ್ ಮಾಡುವ ಮೂಲಕ ಈ ಕುರಿತು ಮಾಹಿತಿಯನ್ನು ತಿಳಿಸಿದ್ದಾರೆ.

  • 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 300 ಸೀಟ್‌ಗಳನ್ನು ಗೆಲ್ಲುವುದಿಲ್ಲ: ಗುಲಾಮ್ ನಬಿ ಆಜಾದ್

    2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 300 ಸೀಟ್‌ಗಳನ್ನು ಗೆಲ್ಲುವುದಿಲ್ಲ: ಗುಲಾಮ್ ನಬಿ ಆಜಾದ್

    ಶ್ರೀನಗರ: 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ 300 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಸ್ವ-ಪಕ್ಷದ ಬಗ್ಗೆಯೇ ಖುಣಾತ್ಮಕವಾಗಿ ಮಾತನಾಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ರ‍್ಯಾಲಿ ವೇಳೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ಕುರಿತು ಮಾತನಾಡಿದ ಅವರು, ರದ್ದಾದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಸುಪ್ರೀಂ ಕೋರ್ಟ್‌ನಿಂದ ಸಾಧ್ಯವಿದೆ. ಇಲ್ಲವಾದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 300 ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ. ಆದರೆ ಕಾಂಗ್ರೆಸ್‌ ಪಕ್ಷ ಅಷ್ಟು ಸ್ಥಾನಗಳನ್ನು ಗೆಲ್ಲುವುದು ಅಸಾಧ್ಯವಾಗಿದೆ. ಕಾಂಗ್ರೆಸ್‌ ಹೆಚ್ಚಿನ ಸೀಟ್‌ಗಳನ್ನು ಗೆಲ್ಲಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

    ಆರ್ಟಿಕಲ್ 370 ಅನ್ನು ಮತ್ತೆ ತರುವುದು ಸುಲಭದ ಮಾತಲ್ಲ. ಈ ಕುರಿತು ಭರವಸೆಗಳನ್ನು ನೀಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮುಂದಿನ ಆದೇಶದವರೆಗೆ ದೆಹಲಿಯ ಎಲ್ಲಾ ಶಾಲೆಗಳನ್ನು ಮುಚ್ಚಲಾಗುವುದು: ಗೋಪಾಲ್ ರೈ

    ಕೇವಲ ಜನರನ್ನು ಮೆಚ್ಚಿಸಲು ನಮ್ಮ ಕೈಯಲ್ಲಿ ಆಗದೇ ಇರುವುದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ನಿಮಗೆ ಸುಳ್ಳು ಭರವಸೆ ನೀಡಲು ಸಾಧ್ಯವಿಲ್ಲ. ನ್ಯಾಯಾಲಯದ ಹೊರತಾಗಿ ನಾವು ಈ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ. ಅದೂ ಅಲ್ಲದೇ ನಮ್ಮಲ್ಲಿ 300 ಸಂಸದರ ಕೊರತೆ ಇದೆ. 2024ರಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲುತ್ತದೆ ಎಂದು ನಾನು ಹೇಳಲಾರೆ. ದೇವರ ಇಚ್ಛೆ ಇದ್ದಾರೆ ನಾವು ಗೆಲ್ಲುತ್ತೇವೆ. ಆದರೆ ಈಗ ನಾನು ಆ ಕುರಿತು ಯಾವುದೇ ರೀತಿಯ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

    ಆಜಾದ್ ಅವರು ಜಿ-23 ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಪ್ರಮುಖ ಧ್ವನಿಯಾಗಿದ್ದಾರೆ. ಕಳೆದ ವರ್ಷ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು, ಸಂಸ್ಥೆಯಲ್ಲಿ ವ್ಯಾಪಕ ಬದಲಾವಣೆಗಳ ಬಗ್ಗೆ ಹೇಳಿದ್ದರು. ಜೊತೆಗೆ ನಾಯಕತ್ವದ ಬದಲಾವಣೆ ಬಗ್ಗೆಯೂ ಮಾತನಾಡಿ ಗಮನಸೆಳೆದಿದ್ದರು.

  • ಲೂಟಿಗೊಳಗಾದ ವೃದ್ಧನ ರಕ್ಷಣೆಗೆ ನಿಂತ ಹಿರಿಯ ಪೊಲೀಸ್ ಅಧಿಕಾರಿ

    ಲೂಟಿಗೊಳಗಾದ ವೃದ್ಧನ ರಕ್ಷಣೆಗೆ ನಿಂತ ಹಿರಿಯ ಪೊಲೀಸ್ ಅಧಿಕಾರಿ

    ಶ್ರೀನಗರ: ದರೋಡೆಕೋರರಿಂದ ಲೂಟಿಗೊಳಗಾದ ವೃದ್ಧರೊಬ್ಬರ ರಕ್ಷಣೆಗೆ ಬಂದ ಹಿರಿಯ ಪೊಲೀಸ್ ಅಧಿಕಾರಿ ಜನರ ಹೃದಯಗಳನ್ನು ಗೆಲ್ಲುತ್ತಿದ್ದಾರೆ.

    ಶ್ರೀನಗರದ ಬೋಹ್ರಿ ಕಡಲ್ ಪ್ರದೇಶದಲ್ಲಿ ರಸ್ತೆ ಬದಿ ‘ಚನ್ನಾ’ ಮಾರಾಟ ಮಾಡುತ್ತಿದ್ದ 90 ವರ್ಷದ ಅಬ್ದುಲ್ ರೆಹಮಾನ್ ಅವರು ಕೂಡಿಟ್ಟಿದ್ದ 1 ಲಕ್ಷ ರೂ.ಗಳನ್ನು ಶನಿವಾರ ಕಳ್ಳರು ದೋಚಿದ್ದಾರೆ. ಅದು ಅಲ್ಲದೇ ಒಂಟಿಯಾಗಿದ್ದ ರೆಹಮಾನ್ ಅವರನ್ನು ಥಳಿಸಿದ್ದಾರೆ. ಈ ಕುರಿತು ರೆಹಮಾನ್ ಪೊಲೀಸರಿಗೆ ನನ್ನ ಅಂತಿಮ ಸಂಸ್ಕಾರಕ್ಕಾಗಿ ಕೂಡಿಟ್ಟಿದ್ದ ಹಣವನ್ನು ಕಳ್ಳರು ದೋಚಿದ್ದಾರೆ ಎಂದು ದೂರು ನೀಡಿದ್ದು, ಸೋಶಿಯಲ್ ಮೀಡಿಯಾದಲ್ಲಿಯೂ ಇವರ ಸುದ್ದಿ ವೈರಲ್ ಆಗಿತ್ತು. ಇದನ್ನೂ ಓದಿ: ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಿದ ಪೊಲೀಸ್ – ವೀಡಿಯೋ ವೈರಲ್

    ರೆಹಮಾನ್ ಅವರ ಸಂಕಟದಿಂದ ಮನನೊಂದ ಹಿರಿಯ ಪೊಲೀಸ್ ಅಧೀಕ್ಷಕ ಸಂದೀಪ್ ಚೌಧರಿ, ವೃದ್ಧನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಅವರು ತಮ್ಮ ಜೇಬಿನಿಂದ 1 ಲಕ್ಷ ರೂ. ನೀಡಿ ರೆಹಮಾನ್ ಮುಖದಲ್ಲಿ ನಗು ತಂದರು. ಇದನ್ನು ನೋಡಿದ ಸೋಶಿಯಲ್ ಮೀಡಿಯಾ ವೀಕ್ಷಕರು ಫುಲ್ ಖುಷ್ ಆಗಿದ್ದು, ಪ್ರಶಂಸೆಯನ್ನು ಮಾಡುತ್ತಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಎಸ್‍ಎಸ್‍ಪಿ ಸಂದೀಪ್, ಕೆಲವೊಮ್ಮೆ ಅಪರಾಧಿಗಳನ್ನು ಹಿಡಿಯಲು ಸಮಯ ಹಿಡಿಯುತ್ತದೆ. ನಾನು ವೀಡಿಯೋದಲ್ಲಿ ಅವರ ಮುಖವನ್ನು ನೋಡಿದೆ. ಅವರಿಗೆ ಸಹಾಯ ಮಾಡಲು ನಿರ್ಧರಿಸಿದೆ. ಹಣವು ದೊಡ್ಡ ಸಮಸ್ಯೆಯಲ್ಲ, ಐಫೋನ್‍ನ ಬೆಲೆ ಒಂದು ಲಕ್ಷಕ್ಕಿಂತ ಹೆಚ್ಚು. ಆದರೆ ಅವರಿಗೆ, ಅದು ಅವರ ಜೀವನದ ಉಳಿತಾಯ ಎಂದು ಹೇಳಿದರು. ಈ ಹೇಳಿಕೆ ಜನರ ಗಮನ ಸೆಳೆದಿದ್ದು, ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

    ರೆಹಮಾನ್ ಅವರು ತನ್ನ ಹಣ ಎಲ್ಲಿ ಕಳ್ಳತನವಾಗುತ್ತೆ ಎಂಬ ಭಯದಲ್ಲಿ ಹಣವನ್ನು ತನ್ನ ಜೊತೆಗೆ ತೆಗೆದುಕೊಂಡು ಹೋಗುತ್ತಿದ್ದರು. ಒಂದು ಲಕ್ಷದ ಅರವತ್ತು ಸಾವಿರ ರೂ. ಉಳಿತಾಯವನ್ನು ಎರಡು ಭಾಗ ಮಾಡಿ ಒಂದು ಲಕ್ಷವನ್ನು ಒಂದು ಜೇಬಿನಲ್ಲಿ ಮತ್ತು 60 ಸಾವಿರವನ್ನು ಇನ್ನೊಂದು ಜೇಬಿನಲ್ಲಿ ಇಟ್ಟುಕೊಂಡಿದ್ದರು. ದರೋಡೆಕೋರರು ಆತನಿಂದ ಒಂದು ಲಕ್ಷ ರೂಪಾಯಿ ದೋಚಿದ್ದಾರೆ. ರಸ್ತೆಬದಿಯಲ್ಲಿ ಅಡಿಕೆ ಮಾರಾಟ ಮಾಡಿ ಇಷ್ಟೊಂದು ಹಣ ಉಳಿತಾಯ ಮಾಡುವುದೇ ದೊಡ್ಡ ಸಂಗತಿ. ಈ ಘಟನೆ ತಿಳಿದ ನಂತರ ನನಗೆ ಬೇಸರವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಖ್, ಬೌದ್ಧರಂತೆ ಲಿಂಗಾಯತಕ್ಕೂ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಬೇಕು: ಎಸ್.ಎಂ.ಜಾಮದಾರ

    ವರದಿಗಳ ಪ್ರಕಾರ, ಈ ಪ್ರಕರಣ ಎಫ್‍ಐಆರ್ ಮಾಡಲಾಗಿದ್ದು, ಆರೋಪಿಗಳನ್ನು ಹಿಡಿಯಲು ತನಿಖೆ ನಡೆಯುತ್ತಿದೆ.

  • ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

    ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

    ಶ್ರೀನಗರ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.

    ತೌಸೀಫ್ ಅಹಮದ್ ಹುತಾತ್ಮ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಶ್ರೀನಗರದ ಬಾಟ್‍ಮಲೂ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ಹುತಾತ್ಮರಾಗಿದ್ದಾರೆ.

    ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್‍ಸ್ಟೆಬಲ್ ತೌಸೀಫ್ ಅಹಮದ್ ಅವರ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕಾನ್‍ಸ್ಟೆಬಲ್ ತೌಸೀಫ್ ಅವರನ್ನು ತಕ್ಷಣವೇ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ಕರೆದೊಯ್ಯವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿಬರ್ಂಧ ಆದೇಶ ಜಾರಿಗೊಳಿಸಲಾಗಿದ್ದು, ಭಯೋತ್ಪಾದಕನ್ನು ಪತ್ತೆಹಚ್ಚಲು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್‍ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ  SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

  • ಗ್ಯಾಂಗ್ ವಾರ್‌ನಲ್ಲಿ ಸೇವಾ ಗನ್ ಬಳಸಿ ಇಬ್ಬರು ಪೊಲೀಸರು ಪರಾರಿ

    ಗ್ಯಾಂಗ್ ವಾರ್‌ನಲ್ಲಿ ಸೇವಾ ಗನ್ ಬಳಸಿ ಇಬ್ಬರು ಪೊಲೀಸರು ಪರಾರಿ

    ಶ್ರೀನಗರ: ಗ್ಯಾಂಗ್ ವಾರ್‌ನಲ್ಲಿ ಕಾನೂನುಬಾಹಿರವಾಗಿ ಇಬ್ಬರು ಪೊಲೀಸರು ಸೇವಾ ಗನ್ ಬಳಸಿ ಪರಾರಿಯಾಗಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ.

    ಶುಕ್ರವಾರ ಜಮ್ಮುವಿನಲ್ಲಿ ನಡೆದ ಗ್ಯಾಂಗ್ ವಾರ್‌ನಲ್ಲಿ ಪೊಲೀಸರು ತಮ್ಮ ಸೇವಾ ಗನ್ ಅನ್ನು ಬಳಸಿ ಇಬ್ಬರನ್ನು ಕೊಲ್ಲಲಾಗಿದೆ. ಇದು ಕಾನೂನುಬಾಹಿರ ಕೃತ್ಯವಾಗಿದ್ದು, ಅವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪೊಲೀಸರ ಶೋಧ ಕಾರ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮುಂದಾಗಿದ್ದಾರೆ.

    ಹಿರಿಯ ಪೊಲೀಸ್ ಅಧಿಕಾರಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಿನ್ನೆ ಜಮ್ಮುವಿನ ಅರ್ನಿಯಾ ಪ್ರದೇಶದಲ್ಲಿ ಇಬ್ಬರು ಪೊಲೀಸರನ್ನು ಒಳಗೊಂಡ ತಂಡ ನಾಲ್ಕು ಜನರ ಗುಂಪನ್ನು ಬೆನ್ನಟ್ಟಿದ್ದರು. ಎಸ್‍ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಗುಂಪಿನ ಮೇಲೆ ಪೊಲೀಸರು ತಮ್ಮ ಸೇವಾ ಆಯುಧದಿಂದ ಗುಂಡು ಹಾರಿಸಿದ್ದು, ಅವರನ್ನು ಕೊಂದಿದ್ದಾರೆ. ಈ ತನಿಖೆಗೆ ವಿಶೇಷ ತನಿಖಾ ತಂಡ ಅಥವಾ ಎಸ್‍ಐಟಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೀಪಾವಳಿಯ ಫ್ಯಾಮಿಲಿ ಫೋಟೋ ಹಂಚಿಕೊಂಡು ಬಿಗ್ ಬಿ ಸಂಭ್ರಮ

    ವಾಹನದೊಳಗೆ ಪೊಲೀಸ್ ಸಮವಸ್ತ್ರ ಕಂಡುಬಂದಿದೆ. ಈ ಹಿನ್ನೆಲೆ ಪೊಲೀಸರು ಜಮ್ಮುವಿನಲ್ಲಿ ಗ್ಯಾಂಗ್ ವಾರ್ ನಲ್ಲಿ ಭಾಗಿಯಾಗಿದ್ದು, ಅವರ ಸೇವಾ ಶಸ್ತ್ರಾಸ್ತ್ರಗಳನ್ನು ಕೃತ್ಯಕ್ಕೆ ಬಳಸಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.

    ಜಮ್ಮು ಜಿಲ್ಲಾ ಪೊಲೀಸ್ ಮುಖ್ಯಸ್ಥ ಎಸ್‍ಎಸ್‍ಪಿ ಚಂದನ್ ಕೊಹ್ಲಿ ಈ ಕುರಿತು ಮಾತನಾಡಿದ್ದು, ನಾವು ಅವರನ್ನು ಶೀಘ್ರದಲ್ಲೇ ಪತ್ತೆ ಹಚುತ್ತೇವೆ. ಆರೋಪಿಗಳಲ್ಲಿ ಓರ್ವ ಪೊಲೀಸ್ ಅನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

    ಮೃತರನ್ನು ಸಬೀರ್ ಚೌಧರಿ ಮತ್ತು ಆರಿಫ್ ಚೌಧರಿ ಎಂದು ಗುರುತಿಸಲಾಗಿದೆ. ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಕೇಶ್ ಸಿಂಗ್ ಈ ಕುರಿತು ಮಾತನಾಡಿ, ಹತ್ಯೆಗೀಡಾದವರಲ್ಲಿ ಒಬ್ಬರು ಮಾದಕ ವ್ಯಸನಿಯಾಗಿದ್ದು, ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣದ ಪೂರ್ತಿ ವಿವರ ಆರೋಪಿಗಳನ್ನು ಬಂಧಿಸಿದ ನಂತರ ತಿಳಿಯುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಜಾನುವಾರುಗಳ ಬಲಿ

    ಅಧಿಕೃತ ಮೂಲಗಳ ಪ್ರಕಾರ ಆರೋಪಿಗಳಾದ ಬೂಪಿಂದರ್ ಸಿಂಗ್ ಮತ್ತು ಸುದಿಕ್ ಅವರನ್ನು ಜಮ್ಮುವಿನ ರಿಸರ್ವ್ ಪೊಲೀಸ್ ಬೆಟಾಲಿಯನ್‍ನಲ್ಲಿ ನಿಯೋಜಿಸಲಾಗಿತ್ತು. ಅಪರಾಧಗಳು ಮತ್ತು ಗ್ಯಾಂಗ್ ವಾರ್‍ಗಳಲ್ಲಿ ಸೇವಾ ಶಸ್ತ್ರಾಸ್ತ್ರಗಳ ಬಳಕೆಯು ಭದ್ರತಾ ಪರಿಸ್ಥಿತಿಗೆ ಗಂಭೀರ ಸವಾಲನ್ನು ಒಡ್ಡುತ್ತಿದೆ. ಈ ಹಿನ್ನೆಲೆ ಅವರನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.

  • ಜನರನ್ನು ನೇರವಾಗಿ ಮಾತನಾಡಿಸಬೇಕು ಎಂದು ಬುಲೆಟ್ ಪ್ರೂಫ್ ಶೀಲ್ಡ್ ತೆಗೆದ ಶಾ

    ಜನರನ್ನು ನೇರವಾಗಿ ಮಾತನಾಡಿಸಬೇಕು ಎಂದು ಬುಲೆಟ್ ಪ್ರೂಫ್ ಶೀಲ್ಡ್ ತೆಗೆದ ಶಾ

    ಶ್ರೀನಗರ: ನಾನು ಜನರನ್ನು ನೇರವಾಗಿ ಮಾತನಾಡಿಸಬೇಕು ಎಂದು ಕೇಂದ್ರದ ಗೃಹ ಸಚಿವ ಅಮಿತ್ ಶಾ ಬುಲೆಟ್ ಪ್ರೂಫ್ ಶೀಲ್ಡ್ ತೆಗೆದು ಶ್ರೀನಗರದಲ್ಲಿ ಜನರನ್ನು ಮಾತನಾಡಿಸಿದ್ದಾರೆ.

    ಅಮಿತ್ ಶಾ ಅವರು ಇಂದು ಶ್ರೀನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೊದಲು ಬುಲೆಟ್ ಪ್ರೂಫ್ ಗ್ಲಾಸ್ ಶೀಲ್ಡ್ ಅನ್ನು ತೆಗೆದು ಜನರನ್ನು ನೇರವಾಗಿ ಮಾತನಾಡಿದರು. ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಶೇರ್-ಎ-ಕಾಶ್ಮೀರ್ ಕನ್ವೆನ್ಷನ್ ಸೆಂಟರ್‍ನಲ್ಲಿ ವೇದಿಕೆಯ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಜನರನ್ನು ನೋಡಿ ಬುಲೆಟ್ ಪ್ರೂಫ್ ಶೀಲ್ಡ್ ಅನ್ನು ತೆಗೆದು ಹಾಕಲು ಆದೇಶಿಸಿದರು. ಲೆಫ್ಟಿನೆಂಟ್ ಗವರ್ನರ್ ಅವರ ಮೇಲ್ವಿಚಾರಣೆಯಲ್ಲಿ ಭದ್ರತಾ ಸಿಬ್ಬಂದಿ ಗಾಜಿನ ಹೊದಿಕೆಯನ್ನು ತೆಗೆದರು. ಈ ವೇಳೆ ಜನರೊಂದಿಗೆ ಶಾ ಮಾತನಾಡಿದರು. ಇದನ್ನೂ ಓದಿ: ತಂದೆ ಹಿಂದೂ, ತಾಯಿ ಮುಸ್ಲಿಂ, ನಾನು ಜಾತ್ಯತೀತ ಕುಟುಂಬಕ್ಕೆ ಸೇರಿದ್ದೇನೆ: ಸಮೀರ್ ವಾಂಖೆಡೆ ತೀಕ್ಷ್ಣ ಪ್ರತಿಕ್ರಿಯೆ

    ಬಳಿಕ ವೇದಿಕೆ ಮೇಲೆ ಬಂದು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ನನ್ನನ್ನು ನಿಂದಿಸಲಾಯಿತು, ಖಂಡಿಸಲಾಯಿತು. ಇಂದು ನಾನು ನಿಮ್ಮೊಂದಿಗೆ ಸ್ಪಷ್ಟವಾಗಿ ಮಾತನಾಡಲು ಬಯಸುತ್ತೇನೆ, ಅದಕ್ಕಾಗಿಯೇ ಇಲ್ಲಿ ಬುಲೆಟ್ ಪ್ರೂಫ್ ಶೀಲ್ಡ್ ಅಥವಾ ಭದ್ರತೆ ಇಲ್ಲ. ನಾನು ನಿಮ್ಮ ಮುಂದೆ ಈ ರೀತಿ ನಿಂತಿದ್ದೇನೆ ಎಂದರು.

    ಕಾಶ್ಮೀರ, ಜಮ್ಮು ಮತ್ತು ಹೊಸದಾಗಿ ಸೃಷ್ಟಿಯಾದ ಲಡಾಖ್ ಅನ್ನು ಅಭಿವೃದ್ಧಿಯ ಹಾದಿಯಲ್ಲಿ ಇರಿಸುವ ಉದ್ದೇಶದಿಂದ 370ನೇ ವಿಧಿಯನ್ನು ರದ್ದು ಮಾಡಲಾಯಿತು. 2024ರ ವೇಳೆಗೆ ನಮ್ಮ ಪ್ರಯತ್ನದ ಫಲವನ್ನು ನೀವು ನೋಡುತ್ತೀರಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕಾಶ್ಮೀರ ಕಣಿವೆಯಲ್ಲಿ 5,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಮ್ಮುವಿನ ಜನರನ್ನು ಬದಿಗೆ ಸರಿಸುವ ಸಮಯ ಕೊನೆಗೊಂಡಿದೆ. ಈಗ ಕಾಶ್ಮೀರ ಮತ್ತು ಜಮ್ಮು ಎರಡನ್ನೂ ಒಟ್ಟಿಗೆ ಅಭಿವೃದ್ಧಿ ಪಡಿಸಲಾಗುವುದು ಎಂದು ಭರವಸೆಯನ್ನು ವ್ಯಕ್ತಪಡಿಸಿದರು.

    ಶನಿವಾರ ಶ್ರೀನಗರಕ್ಕೆ ಬಂದ ನಂತರ, ಅವರು ಈ ವರ್ಷದ ಆರಂಭದಲ್ಲಿ ಭಯೋತ್ಪಾದಕರಿಂದ ಕೊಲ್ಲಲ್ಪಟ್ಟ ಪೊಲೀಸ್ ಅಧಿಕಾರಿಯ ಕುಟುಂಬವನ್ನು ಭೇಟಿ ಮಾಡಿದರು. ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ಶಾ ಅವರು ಗಂದರ್‍ಬಾಲ್‍ನಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅಮಿತ್ ಶಾ ಅವರು ಸಾಂಪ್ರದಾಯಿಕವಾಗಿ ಫೆರಾನ್ ಧರಿಸಿದ್ದರು. ಇದನ್ನೂ ಓದಿ:  ಇಂದು ಕರ್ನಾಟಕದಲ್ಲಿ 290 ಪಾಸಿಟಿವ್, 10 ಸಾವು

    ಜಮ್ಮು ಮತ್ತು ಕಾಶ್ಮೀರಕ್ಕೆ ಮೂರು ದಿನಗಳ ಭೇಟಿ ನೀಡಿದ ಅಮಿತ್ ಶಾ, 2019 ರ ಆಗಸ್ಟ್ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವುದಾಗಿ ಘೋಷಿಸಿದರು. ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಇಳಿಸಿದರು. ಅದಕ್ಕೂ ಮೊದಲು, 2019ರಲ್ಲಿ ಬಿಜೆಪಿ ಅಧಿಕಾರವನ್ನು ಸ್ವೀಕರಿಸಿದ ನಂತರ, ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಇವರು ಕಾಶ್ಮೀರಕ್ಕೆ ಭೇಟಿ ನೀಡಿದ್ದರು.

  • ಕಾಶ್ಮೀರದಲ್ಲಿ ಮನಬಂದಂತೆ ಕಾರ್ಮಿಕರ ಮೇಲೆ ಗುಂಡಿನ ದಾಳಿ – ಇಬ್ಬರು ಬಲಿ

    ಕಾಶ್ಮೀರದಲ್ಲಿ ಮನಬಂದಂತೆ ಕಾರ್ಮಿಕರ ಮೇಲೆ ಗುಂಡಿನ ದಾಳಿ – ಇಬ್ಬರು ಬಲಿ

    ಶ್ರೀನಗರ: ಭಯೋತ್ಪಾದಕರು ಮನಬಂದಂತೆ ಕಾರ್ಮಿಕರ ಮೇಲೆ ಗುಂಡು ಹರಿಸುತ್ತಿದ್ದು, ಪರಿಣಾಮ ಇಬ್ಬರು ಸ್ಥಳೀಯೇತರ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನ ವಾನ್ಪೋಹ್ ಪ್ರದೇಶದಲ್ಲಿ ನಡೆದಿದೆ.

    ಸಿಐಡಿ ಮೂಲಗಳನ್ನು ಪ್ರಕಾರ, ಕಾಶ್ಮೀರಿ ಅಲ್ಲದ ಮೂವರು ಕಾರ್ಮಿಕರಾದ ರಾಜಾ ರೇಶಿ ದೇವ್, ಜೋಗಿಂದರ್ ರೇಶಿ ದೇವ್ ಮತ್ತು ಚುಂಚುನ್ ರೇಶಿ ದೇವ್ ಎಂಬವರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಮೂವರಲ್ಲಿ ರಾಜಾ ರೇಶಿ ದೇವ್, ಜೋಗಿಂದರ್ ರೆಶಿ ದೇವ್ ಮೃತಪಟ್ಟಿದ್ದು, ಚುಂಚುನ್ ರೇಶಿ ದೇವ್ ಅವರಿಗೆ ಗಾಯವಾಗಿದೆ. ಇದನ್ನೂ ಓದಿ: ಬಾಲಕಿ ಅತ್ಯಾಚಾರ ಪ್ರಕರಣ – ಎಸ್‍ಪಿ, ಬಿಎಸ್‍ಪಿ ಜಿಲ್ಲಾ ಅಧ್ಯಕ್ಷ ಸೇರಿ 7 ಮಂದಿ ಅರೆಸ್ಟ್

    ಶನಿವಾರ ಬಿಹಾರ ಮೂಲದ ಗೋಲ್ಗಪ್ಪ ಮಾರಾಟ ಮಾಡುತ್ತಿದ್ದ ಅರವಿಂದ್ ಕುಮಾರ್ ಅವರನ್ನು ಶ್ರೀನಗರದ ಈದ್ಗಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಉತ್ತರ ಪ್ರದೇಶದ ಕಾರ್ಮಿಕ ಸಗೀರ್ ಅಹ್ಮದ್ ಅವರನ್ನು ಪುಲ್ವಾಮಾದಲ್ಲಿ ಹತ್ಯೆಗೈದಿದ್ದರು.

    ಈ ಮೊದಲು ಮೂವರನ್ನು ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದರು. ಇದರಲ್ಲಿ ಪ್ರಮುಖ ನಗರದ ಅತ್ಯಂತ ಪ್ರಸಿದ್ಧ ಔಷಧಾಲಯದ ಮಾಲೀಕ, ಕಾಶ್ಮೀರಿ ಪಂಡಿತ್ ಉದ್ಯಮಿ ಮಖನ್ ಲಾಲ್ ಬಿಂದ್ರೂ ಮತ್ತು ಬಿಹಾರದ ನಿವಾಸಿ ಗೋಲ್ಗಪ್ಪ ಮಾರಾಟ ಮಾಡುವ ಮೂಲಕ ತನ್ನ ದೈನಂದಿನ ಜೀವನ ನಡೆಸುತ್ತಿದ್ದ ಅರವಿಂದ್ ಅವರನ್ನು ಗುಂಡಿಕ್ಕಿ ಕೊಂದಿದ್ದರು. ಇದನ್ನೂ ಓದಿ: ಸಿಲಿಂಡರ್ ಸ್ಪೋಟ – ಮನೆ ಬೆಂಕಿಗಾಹುತಿ

    ಕಾಶ್ಮೀರ ಪೊಲೀಸರ ಉಗ್ರ ನಿಗ್ರಹ ಘಟಕದ ಕೇಂದ್ರ ಕಚೇರಿಯಾದ ಹಿರಿಯ ಪೊಲೀಸ್ ಅಧೀಕ್ಷಕರ ಕಛೇರಿಯಿಂದ ಕೆಲವೇ ಮೀಟರ್ ದೂರದಲ್ಲಿರುವ ಇಕ್ಬಾಲ್ ಪಾರ್ಕ್‍ನಲ್ಲಿ ಔಷಧಾಲಯದಲ್ಲಿ ಔಷಧ ವಿತರಿಸುವಾಗ ಬಿಂದ್ರೂ ಅವರನ್ನು ಸಂಜೆ ಉಗ್ರರು ದಾಳಿ ಮಾಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ.

  • ಪಾಕಿಸ್ತಾನ ನನಗೆ 20 ಸಾವಿರ ನೀಡಿದೆ – ತಪ್ಪೊಪ್ಪಿಕೊಂಡ ಲಷ್ಕರ್ ಉಗ್ರ

    ಪಾಕಿಸ್ತಾನ ನನಗೆ 20 ಸಾವಿರ ನೀಡಿದೆ – ತಪ್ಪೊಪ್ಪಿಕೊಂಡ ಲಷ್ಕರ್ ಉಗ್ರ

    ಶ್ರೀನಗರ: ಪಾಕಿಸ್ತಾನದ ಭಯೋತ್ಪಾದಕ ಅಲಿ ಬಾಬರ್ ಪತ್ರಾ ನಾನು ನಾನು ಲಷ್ಕರ್-ಎ-ತೊಯ್ಬಾ ಮತ್ತು ಪಾಕಿಸ್ತಾನದ ಸೇನೆಯಿಂದ ತರಬೇತಿ ಪಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ.

    ಸೆಪ್ಟೆಂಬರ್ 26 ರಂದು ಉರಿ ಸೆಕ್ಟರ್‍ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯಿಂದ ಜೀವಂತವಾಗಿ ಸೆರೆಹಿಡಿಯಲಾದ ಪಾಕಿಸ್ತಾನಿ ಭಯೋತ್ಪಾದಕನನ್ನು ಬುಧವಾರ ಮಾಧ್ಯಮದವರ ಮುಂದೆ ಹಾಜರುಪಡಿಸಲಾಯಿತು ಈ ವೇಳೆ 19 ವರ್ಷದ ಅಲಿ ಬಾಬರ್ ಪತ್ರಾ ಪ್ರತಿಕ್ರಿಯಿಸಿದ್ದು, ನಾನು ಲಷ್ಕರ್-ಎ-ತೊಯ್ಬಾ ಮತ್ತು ಪಾಕಿಸ್ತಾನದ ಸೇನೆಯಿಂದ ತರಬೇತಿ ಪಡೆದುಕೊಂಡಿದ್ದೇನೆ. ನನಗೆ ಪಾಕಿಸ್ತಾನಿ ಹ್ಯಾಂಡ್ಲರ್‌ಗಳಿಂದ 20 ಸಾವಿರ ರೂ. ನೀಡಲಾಗಿತ್ತು ಎಂದಿದ್ದಾನೆ.

    ಈ ನಡುವೆ ತನ್ನ ತಾಯಿಯನ್ನು ನೆನೆದ ಅಲಿ, ಪಾಕಿಸ್ತಾನದಲ್ಲಿ ತನ್ನ ತಾಯಿಯ ಬಳಿಗೆ ಕರೆದುಕೊಂಡು ಹೋಗುವಂತೆ ಗೋಳಾಡಿದರೂ, ನನ್ನನ್ನು ಭಾರತಕ್ಕೆ ಕಳುಹಿಸಿದರು ಎಂದು ಹೇಳಿಕೊಂಡನು. ಇದನ್ನೂ ಓದಿ:  ವಿದ್ಯಾರ್ಥಿಗಳು ತರಗತಿಗೆ ಚಕ್ಕರ್, ರೊಮ್ಯಾನ್ಸ್​ಗೆ ಹಾಜರ್

    ಭಾರತೀಯ ಸೇನೆಯು ರಕ್ತಪಾತವನ್ನು ನಡೆಸುತ್ತೆ ಎಂದು ನಾವು ತಿಳಿದುಕೊಂಡಿದ್ದೆ. ಆದರೆ ಇಲ್ಲಿ ಎಲ್ಲವೂ ಶಾಂತಿಯುತವಾಗಿವೆ. ಭಾರತೀಯ ಸೇನೆಯು ನನ್ನನ್ನು ಚೆನ್ನಾಗಿ ನೋಡಿಕೊಂಡಿದೆ ಎಂದು ನಾನು ನನ್ನ ತಾಯಿಗೆ ಹೇಳುತ್ತೇನೆ ಎಂದು ಭಾರತೀಯ ಸೇನೆವನ್ನು ಪ್ರಶಂಸಿದ್ದಾನೆ. ಇದನ್ನೂ ಓದಿ:  ವಾಹನ ಸವಾರರ ಮೇಲೆ ಹಿರೇಹಳ್ಳಿ ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ

    ಭಾರತದಲ್ಲಿ ನಾನು ದಿನಕ್ಕೆ ಐದು ಬಾರಿ ಅಜಾನ್(ಪ್ರಾರ್ಥನೆಗಾಗಿ ಕರೆ) ಕೇಳಬಹುದು. ಭಾರತೀಯ ಸೇನೆಯ ನಡವಳಿಕೆ ಪಾಕಿಸ್ತಾನದ ಸೇನೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಇದರಿಂದ ನನಗೆ ಕಾಶ್ಮೀರದಲ್ಲಿ ಶಾಂತಿ ಇದೆ ಎಂದು ಅನಿಸುತ್ತದೆ ಎಂದು ತಿಳಿಸಿದ್ದಾನೆ.

  • ವಿಚ್ಛೇದನದ ಬಳಿಕ ಮಾಜಿ ಪತ್ನಿ ಜೊತೆ ಅಮೀರ್ ಟೇಬಲ್ ಟೆನ್ನಿಸ್

    ವಿಚ್ಛೇದನದ ಬಳಿಕ ಮಾಜಿ ಪತ್ನಿ ಜೊತೆ ಅಮೀರ್ ಟೇಬಲ್ ಟೆನ್ನಿಸ್

    ಶ್ರೀನಗರ: ಬಾಲಿವುಡ್ ಮಿಸ್ಟರ್ ಪರ್ಫೆಕ್ಟ್ ನಟ ಅಮೀರ್ ಖಾನ್ ವಿಚ್ಛೇದನದ ಬಳಿಕ ಮಾಜಿ ಪತ್ನಿ ಕಿರಣ್ ರಾವ್ ಜೊತೆ ಟೇಬಲ್ ಟೆನ್ನಿಸ್ ಆಟವನ್ನು ಆಡಿದ್ದಾರೆ. ಸದ್ಯ ಇವರಿಬ್ಬರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ನಟ ಅಮೀರ್ ಖಾನ್ ವಿಚ್ಛೇದನ ನೀಡಿದ ಬಳಿಕ ಮಾಜಿ ಪತ್ನಿ ಕಿರಣ್ ರಾವ್ ಜೊತೆ ಹೆಚ್ಚಾಗಿ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ವಿಚ್ಛೇದನ ಪಡೆದ ಈ ದಂಪತಿ ಮಗ ಅಜಾದ್‍ಗೆ ಪೋಷಕರಾಗಿ ಮುಂದುವರಿದಿದ್ದಾರೆ. ಸದ್ಯ ಲಾಲ್ ಚಡ್ಡಾ ಸಿನಿಮಾದ ಬ್ಯುಸಿಯಾಗಿರುವ ಅಮೀರ್ ಖಾನ್ ಜೊತೆ ಮಾಜಿ ಪತ್ನಿ ಕಿರಣ್ ರಾವ್ ಹಾಗೂ ಅಜಾದ್ ಕೂಡ ಶೂಟಿಂಗ್ ಸೆಟ್‍ನಲ್ಲಿ ಇದ್ದಾರೆ.

    ಈ ಸಿನಿಮಾದ ಚಿತ್ರೀಕರಣ ಲಡಾಕ್‍ನಲ್ಲಿ ನಡೆಯುತ್ತಿದ್ದು, ಶೂಟಿಂಗ್ ವೇಳೆ ಕೊಂಚ ಫ್ರೀ ಆದ ಅಮೀರ್ ಚಿತ್ರತಂಡದವರಿಗೆ ಟೇಬಲ್ ಟೆನ್ನಿಸ್ ಆಟವನ್ನು ಆಯೋಜಿಸಿದ್ದಾರೆ. ಈ ವೇಳೆ ಅಮೀರ್ ಹಾಗೂ ಕಿರಣ್ ರಾವ್ ಇಬ್ಬರು ಎದುರಾಗಿ ಟೇಬಲ್ ಟೆನ್ನಿಸ್ ಆಟವನ್ನು ಆಡಿ ಸಂಭ್ರಮಿಸಿದ್ದಾರೆ. ಅಲ್ಲದೇ ಲಾಲ್ ಚಡ್ಡಾ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಟಾಲಿವುಡ್ ನಟ ನಾಗಚೈತನ್ಯ ಕೂಡ ಟೇಬಲ್ ಆಟ ಆಡಿದ್ದಾರೆ.

    ಇತ್ತೀಚೆಗಷ್ಟೇ ಕೂಡ ಲಾಲ್ ಚಡ್ಡಾ ಸಿನಿಮಾದ ಶೂಟಿಂಗ್ ವೇಳೆ ಅಮೀರ್, ಕಿರಣ್ ರಾವ್ ಜೊತೆ ಲಡಾಕ್ ಪ್ರಾದೇಶಿಕ ಸಾಂಪ್ರದಾಯಿಕ ಉಡುಪನ್ನು ಧರಿಸಿ ನೃತ್ಯ ಮಾಡಿದ್ದರು. ಒಟ್ಟಾರೆ ವಿಚ್ಛೇದನದ ಬಳಿಕವೂ ಅಮೀರ್ ಹಾಗೂ ಕಿರಣ್ ರಾವ್ ಆಟ ಆಡಿ ಸಂಭ್ರಮಿಸುತ್ತಿರುವುದನ್ನು ಕಂಡು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.  ಇದನ್ನೂ ಓದಿ:‘ಯುವರತ್ನ’ ನಟಿ ಸಯ್ಯೇಶಾ ಹೆಣ್ಣು ಮಗುವಿಗೆ ಜನನ