Tag: Srinagar

  • ಪಾಕ್‌ನಿಂದ ಶೆಲ್ ದಾಳಿ – ಸ್ಥಳಾಂತರಗೊಂಡ ಜನರೊಂದಿಗೆ ಕ್ರಿಕೆಟ್ ಆಡಿದ ಜಮ್ಮು ಸಿಎಂ

    ಪಾಕ್‌ನಿಂದ ಶೆಲ್ ದಾಳಿ – ಸ್ಥಳಾಂತರಗೊಂಡ ಜನರೊಂದಿಗೆ ಕ್ರಿಕೆಟ್ ಆಡಿದ ಜಮ್ಮು ಸಿಎಂ

    ಶ್ರೀನಗರ: ಎಲ್‌ಒಸಿಯಲ್ಲಿ ಪಾಕಿಸ್ತಾನ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯಿಂದ ಹಾನಿಗೊಳಗಾದ ನಿವಾಸಿಗಳಿಗೆ ಆಶ್ರಯ ನೀಡಲು ಸ್ಥಾಪಿಸಲಾದ ನಿರಾಶ್ರಿತರ ಕೇಂದ್ರದಲ್ಲಿ ಜಮ್ಮು ಮತ್ತು ಕಾಶ್ಮೀರದ(Jammu and Kashmir) ಸಿಎಂ ಒಮರ್ ಅಬ್ದುಲ್ಲಾ(Omar Abdullah) ಕ್ರಿಕೆಟ್ ಆಡಿದರು.

    ಸಾಂಬಾದಲ್ಲಿನ(Samba)  ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ಸ್ಥಳೀಯರನ್ನು ಭೇಟಿಯಾದ ಸಂದರ್ಭದಲ್ಲಿ ಒಮರ್ ಅಬ್ದುಲ್ಲಾ ಅವರು ಪುಟ್ಟ ಬಾಲಕನೊಂದಿಗೆ ಕ್ರಿಕೆಟ್ ಆಡಿದ್ದು, ಅವರು ಬ್ಯಾಟ್ ಬೀಸಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಇದೀಗ ಹರಿದಾಡುತ್ತಿವೆ. ಇದನ್ನೂ ಓದಿ: ಭಾರತ-ಪಾಕ್ ಯುದ್ಧ ಭೀತಿ – ಕುತುಬ್ ಮಿನಾರ್ ಸೇರಿ ದೆಹಲಿಯ ಹಲವು ಐತಿಹಾಸಿಕ ತಾಣಗಳಿಗೆ ಬಿಗಿಭದ್ರತೆ

    ಗುರುವಾರ, ಜಮ್ಮು ಮತ್ತು ಪೂಂಚ್ ಜಿಲ್ಲೆಗಳಲ್ಲಿ ಪಾಕ್ ನಡೆಸಿದ ಡ್ರೋನ್, ಕ್ಷಿಪಣಿ ಹಾಗೂ ಶೆಲ್ ದಾಳಿಯನ್ನು ಒಮರ್ ಅಬ್ದುಲ್ಲಾ ಅವರು ತೀವ್ರವಾಗಿ ಖಂಡಿಸಿದರು. ಈ ಕುರಿತು ಮಾಧ್ಯಮಳೊಂದಿಗೆ ಮಾತನಾಡಿದ ಅವರು, ನಾವು ಈ ಪರಿಸ್ಥಿತಿಯನ್ನು ಸೃಷ್ಟಿಸಲಿಲ್ಲ. ಪಹಲ್ಗಾಮ್‌ನಲ್ಲಿ(Pahalgam Attack) ಪಾಕ್ ಉಗ್ರರು ನಮ್ಮ ಜನರ ಮೇಲೆ ದಾಳಿ ನಡೆಸಿ ಅಮಾಯಕರನ್ನ ಕೊಂದರು. ಅವರ ಈ ದಾಳಿಗೆ ನಾವು ಪ್ರತಿಕ್ರಿಯಿಸಬೇಕಾಯಿತು ಎಂದರು. ಇದನ್ನೂ ಓದಿ: ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್

    ಗುರುವಾರ ರಾತ್ರಿ ಪಾಕಿಸ್ತಾನದ ಸಶಸ್ತ್ರ ಪಡೆಗಳು ಡ್ರೋನ್ ಹಾಗೂ ಕ್ಷಿಪಣಿ ದಾಳಿಗೆ ಮುಂದಾಗಿತ್ತು. ಈ ವೇಳೆ ನಮ್ಮ ಸೇನೆಯು ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಪಂಜಾಬ್ ಮತ್ತು ಗುಜರಾತ್‌ನ ಪಟ್ಟಣಗಳಲ್ಲಿ ಸೈರನ್ ಮೊಳಗಿಸಿ ಜನರಿಗೆ ಮುನ್ನೆಚ್ಚರಿಕೆ ನೀಡಿತು. ಅಲ್ಲದೇ ಪಾಕ್‌ನ ಡ್ರೋನ್‌ಗಳನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಯಿತು ಎಂದು ಹೇಳಿದರು.

     

  • ಕಾಶ್ಮೀರದ ಹಲವೆಡೆ ಭದ್ರತಾ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ – ಇದುವರೆಗೆ 175ಕ್ಕೂ ಹೆಚ್ಚು ಮಂದಿ ವಶಕ್ಕೆ

    ಕಾಶ್ಮೀರದ ಹಲವೆಡೆ ಭದ್ರತಾ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ – ಇದುವರೆಗೆ 175ಕ್ಕೂ ಹೆಚ್ಚು ಮಂದಿ ವಶಕ್ಕೆ

    – ಉಗ್ರರಿಗೆ ಸ್ಥಳೀಯ ಮಟ್ಟದಲ್ಲಿ ಸಹಾಯ ಮಾಡುತ್ತಿದ್ದ ಹಿನ್ನೆಲೆ ವಶಕ್ಕೆ
    – 24 ಗಂಟೆಯಲ್ಲಿ ಐವರು ಉಗ್ರರ ಮನೆ ಧ್ವಂಸ

    ಶ್ರೀನಗರ: ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನೆತ್ತರು ಹರಿಸಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆಯ (Indian Army) ಕಾರ್ಯಾಚರಣೆ ಶುರುವಾಗಿದೆ. ಕುಲ್ಗಾಮ್ ಜಿಲ್ಲೆಯ ಮುತಲ್ಹಾಮಾ ಗ್ರಾಮದಲ್ಲಿ ಉಗ್ರ ಝಾಕೀರ್ ಅಹ್ಮದ್ ಗಣಿ, ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ. ಪುಲ್ವಾಮಾದ ಮರ‍್ರಾನ್ ಪ್ರದೇಶದಲ್ಲಿ ಅಹ್ಸಾನ್ ಉಲ್ ಹಕ್ ಮನೆ ಸ್ಫೋಟಿಸಿ ನಿನ್ನೆಯಷ್ಟೇ ನೆಲಸಮ ಮಾಡಲಾಗಿತ್ತು.

    ಇನ್ನೂ ಉಗ್ರರಿಗೆ ಹಣಕಾಸು ಸಹಾಯ ಮಾಡಿರುವ ಶಂಕೆಯಲ್ಲಿ ಅನಂತನಾಗ್ (Anantnag) ಜಿಲ್ಲೆಯಲ್ಲಿ 175 ಮಂದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದೇ ವೇಳೆ ಕುಪ್ವಾರದಲ್ಲಿ ಕೂಂಬಿಂಗ್ ವೇಳೆ 8 ಎಕೆ 47 ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಲಂಡನ್‌ನಲ್ಲಿ ಭಾರತೀಯರ ಪ್ರತಿಭಟನೆ ವೇಳೆ ಕತ್ತು ಕೊಯ್ಯುವ ಸನ್ನೆ ಮಾಡಿದ ಪಾಕ್ ಅಧಿಕಾರಿ

    ಇನ್ನೂ ಪಾಕಿಸ್ತಾನ ಪ್ರಜೆಗಳು ದೇಶ ತೊರೆಯಲು ಕೇಂದ್ರ ಸರ್ಕಾರ 48 ಗಂಟೆ ಗಡುವು ನೀಡಿತ್ತು. ಈ ಬೆನ್ನಲ್ಲೇ ಭಾರತಕ್ಕೆ ಭೇಟಿ ನೀಡಿದ ಒಟ್ಟು 191 ಪಾಕಿಸ್ತಾನಿ ಪ್ರಜೆಗಳು ಪಂಜಾಬ್‌ನ ಅಮೃತಸರದ ಅಟ್ಟಾರಿ-ವಾಘಾ ಭೂಮಾರ್ಗದ ಮೂಲಕ ವಾಪಸ್ ಮರಳಿದ್ದಾರೆ. ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ 287 ಭಾರತೀಯ ಪ್ರಜೆಗಳು ಸಹ ಹಿಂತಿರುಗಿದ್ದಾರೆ ಎಂದು ಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದಲ್ಲಿರುವ 98 ಜನ ಪಾಕಿಸ್ತಾನ ಪ್ರಜೆಗಳಿಗೂ ದೇಶ ತೊರೆಯುವಂತೆ ಸೂಚಿಸಲಾಗಿದೆ.

    ಈ ಮಧ್ಯೆ, ವಾಘಾ ಗಡಿ ಬಂದ್ ಆದ ಕಾರಣ ಪಾಕ್ ವಧು-ರಾಜಸ್ಥಾನದ ವರ ಮದುವೆ ಅತಂತ್ರಗೊಂಡಿದೆ. ಈ ಮಧ್ಯೆ, ಉಗ್ರರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿವೆ. ಇದನ್ನೂ ಓದಿ: ಪಾಕಿಸ್ತಾನದ ಲಾಹೋರ್‌ ಏರ್‌ಪೋರ್ಟ್‌ನಲ್ಲಿ ಭಾರೀ ಅಗ್ನಿ ದುರಂತ – ರನ್‌ವೇ ಬಂದ್‌, ವಿಮಾನಗಳ ಹಾರಾಟ ಸ್ಥಗಿತ

  • ಪಹಲ್ಗಾಮ್ ದಾಳಿಕೋರನ ಮನೆ ಧ್ವಂಸ – 24 ಗಂಟೆಗಳಲ್ಲಿ 3ನೇ ಮನೆ ಉಡೀಸ್

    ಪಹಲ್ಗಾಮ್ ದಾಳಿಕೋರನ ಮನೆ ಧ್ವಂಸ – 24 ಗಂಟೆಗಳಲ್ಲಿ 3ನೇ ಮನೆ ಉಡೀಸ್

    ಶ್ರೀನಗರ: ಪಹಲ್ಗಾಮ್ ದಾಳಿಯಲ್ಲಿ (Pahalgam Attack) ಭಾಗಿಯಾಗಿರುವ ಶಂಕೆಯ ಮೇಲೆ ಮತ್ತೊಬ್ಬ ಭಯೋತ್ಪಾದಕ (Terrorist) ಎಹ್ಸಾನ್ ಉಲ್ ಹಕ್‌ನ ಮನೆಯನ್ನು ಭದ್ರತಾ ಪಡೆಯು ಧ್ವಂಸ ಮಾಡಿದೆ. ಸೇನೆಯು ಈವರೆಗೆ 24 ಗಂಟೆಯಲ್ಲಿ ಮೂವರು ಉಗ್ರರ ಮನೆಯನ್ನು ಉಡೀಸ್ ಮಾಡಿದೆ.

    ಪುಲ್ವಾಮದಲ್ಲಿರುವ (Pulwama) ಜೈಶ್-ಎ-ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ಎಹ್ಸಾನ್‌ನ ಮನೆಯನ್ನು ಸೇನೆಯು ಕೆಡವಿದೆ. ಪೆಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಮನೆ ನಾಶ ಮಾಡಲಾಗಿದೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲಿ ನಡೆದಿದ್ದು ಘೋರ ದುರಂತ – ಭಾರತ, ಪಾಕ್‌ ಉದ್ವಿಗ್ನತೆ ಬಗೆಹರಿಸಿಕೊಳ್ಳಲಿವೆ: ಟ್ರಂಪ್

    ಉಗ್ರ ಎಹ್ಸಾನ್ 2018ರಲ್ಲಿ ಪಾಕಿಸ್ತಾನದಿಂದ ತರಬೇತಿ ಪಡೆದಿದ್ದನೆಂದು ಹೇಳಲಾಗಿದ್ದು, ಇತ್ತೀಚೆಗೆ ಕಾಶ್ಮೀರದ ಕಣಿವೆಯನ್ನು ಮತ್ತೆ ಪ್ರವೇಶಿಸಿದ್ದನು. ಇದನ್ನೂ ಓದಿ: ಬಲೂಚ್ ಲಿಬರೇಶನ್ ಆರ್ಮಿಯಿಂದ ಐಇಡಿ ದಾಳಿ – ಆಕ್ರಮಿತ ಪಾಕಿಸ್ತಾನಿ ಸೇನೆಯ 10 ಸಿಬ್ಬಂದಿ ಹತ್ಯೆ

    ಶುಕ್ರವಾರ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾದ ಟ್ರಾಲ್‌ನ ಗೋರಿ ಪ್ರದೇಶದಲ್ಲಿ ಸೇನೆಯು ಸಕ್ರಿಯ ಭಯೋತ್ಪಾದಕನ ಮನೆಯನ್ನು ಬಾಂಬ್‌ನಿಂದ ಸ್ಫೋಟಿಸಿತ್ತು. ಮತ್ತೊಬ್ಬ ಶಂಕಿತ ಉಗ್ರನ ಮನೆಯನ್ನು ಬುಲ್ಡೋಜರ್‌ನಿಂದ ಕೆಡವಲಾಗಿತ್ತು. ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ – ಜಮ್ಮು ಸರ್ಕಾರ ಅಲರ್ಟ್; ವೈದ್ಯಕೀಯ ಸಿಬ್ಬಂದಿ ರಜೆ ರದ್ದು

    ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ನಿವಾಸಿ ಲಷ್ಕರ್ ಭಯೋತ್ಪಾದಕ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟಾಯ ಮನೆಯನ್ನೂ ಸಹ ಧ್ವಂಸ ಮಾಡಲಾಗಿದೆ. ಈತ ಕಳೆದ ನಾಲ್ಕು ವರ್ಷಗಳಿಂದ ಉಗ್ರ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದ. ಅಲ್ಲದೇ ದೇಶ ವಿರೋಧಿ ಕಾರ್ಯಗಳಿಗೆ ಬೆಂಬಲಿಸುತ್ತಿದ್ದನು ಎಂದು ಮೂಲಗಳು ತಿಳಿಸಿವೆ.

  • ಶ್ರೀನಗರಕ್ಕೆ ಹೆಚ್ಚುವರಿ ವಿಮಾನ ಸೇವೆ ನೀಡುವಂತೆ ಕಂಪನಿಗಳಿಗೆ DGCA ಸೂಚನೆ

    ಶ್ರೀನಗರಕ್ಕೆ ಹೆಚ್ಚುವರಿ ವಿಮಾನ ಸೇವೆ ನೀಡುವಂತೆ ಕಂಪನಿಗಳಿಗೆ DGCA ಸೂಚನೆ

    ನವದೆಹಲಿ: ಶ್ರೀನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿಮಾನ ಸೇವೆಯನ್ನು ನಿಯೋಜಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ವಿಮಾನಯಾನ ಕಂಪನಿಗಳಿಗೆ ಸೂಚಿಸಿದೆ.

    ಪಹಲ್ಗಾಮ್‌ ದಾಳಿ ನಂತರ ಸಾವಿರಾರು ಸಂಖ್ಯೆಯ ಪ್ರವಾಸಿಗರು ಜಮ್ಮು ಕಾಶ್ಮೀರದಲ್ಲಿ ಸಿಲುಕಿದ್ದಾರೆ. ಇವರನ್ನು ಸುರಕ್ಷಿತವಾಗಿ ಕರೆ ತರಲು ಹೆಚ್ಚಿನ ಸಂಖ್ಯೆಯಲ್ಲಿ ವಿಮಾನಗಳನ್ನು ನಿಯೋಜಿಸಬೇಕು ಮತ್ತು ಪ್ರಯಾಣ ರದ್ದುಗೊಳಿಸಿದರೆ ಟಿಕೆಟ್‌ ಶುಲ್ಕವನ್ನು ಮರುಪಾವತಿಸುವಂತೆ ಸೂಚಿಸಿದೆ. ಇದನ್ನೂ ಓದಿ: ರೈಫಲ್‌ ಕಸಿದುಕೊಳ್ಳಲು ಹೋಗಿ ಉಗ್ರರ ಗುಂಡೇಟಿಗೆ ಕುದುರೆ ರೈಡರ್‌ ಬಲಿ

     

    ಹೆಚ್ಚಿದ ಬೇಡಿಕೆಗೆ ಪ್ರತಿಕ್ರಿಯೆಯಾಗಿ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಶ್ರೀನಗರದಿಂದ ಭಾರತದಾದ್ಯಂತ ವಿವಿಧ ಸ್ಥಳಗಳಿಗೆ ಪ್ರವಾಸಿಗರನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ವಿಮಾನಯಾನ ಸಂಸ್ಥೆಗಳು ತ್ವರಿತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಡಿಜಿಸಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?

    ಡಿಜಿಸಿಎ ಸೂಚನೆ ಬೆನ್ನಲ್ಲೇ ಏರ್ ಇಂಡಿಯಾ ಮತ್ತು ಇಂಡಿಗೋ ಬುಧವಾರ ಶ್ರೀನಗರದಿಂದ ಹೆಚ್ಚುವರಿ ವಿಮಾನ ಸೇವೆ ಆರಂಭಿಸಿದೆ.

    ಈ ಸಂದರ್ಭದಲ್ಲಿ ಲಾಭ ಪಡೆಯಲು ವಿಮಾನಯಾನ ಕಂಪನಿಗಳು ಟಿಕೆಟ್‌ ದರವನ್ನು ಏರಿಕೆ ಮಾಡಿದರೆ ಆನ್‌ಲೈನ್‌ನಲ್ಲಿ ದೂರು ನೀಡುವಂತೆ DGCA ಜನರಲ್ಲಿ ಮನವಿ ಮಾಡಿದೆ.

  • ಅಮರನಾಥ ಯಾತ್ರೆಗೆ ಇಂದಿನಿಂದ ನೋಂದಣಿ ಶುರು – ಅರ್ಜಿ ಸಲ್ಲಿಕೆ ಹೇಗೆ? ದರ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ

    ಅಮರನಾಥ ಯಾತ್ರೆಗೆ ಇಂದಿನಿಂದ ನೋಂದಣಿ ಶುರು – ಅರ್ಜಿ ಸಲ್ಲಿಕೆ ಹೇಗೆ? ದರ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ

    ಶ್ರೀನಗರ: ಈ ಸಾಲಿನ ಅಮರನಾಥ ಯಾತ್ರೆಯ (Amaranath Yatra) ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಹಾಗೂ ಅವಶ್ಯ ದಾಖಲೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    2025ರ ಅಮರನಾಥ ಯಾತ್ರೆ ಜೂ.29 ರಿಂದ ಪ್ರಾರಂಭವಾಗಿ ಆ.19 ರವೆರೆಗೆ ನಡೆಯಲಿದ್ದು, ಇಂದಿನಿಂದ ನೋಂದಣಿ ಪ್ರಕ್ರಿಯೆ ಶುರುವಾಗಿದೆ. ಸಮುದ್ರಮಟ್ಟದಿಂದ 12,756 ಅಡಿ ಎತ್ತರದ ಗುಹೆಯಲ್ಲಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಶಿವಲಿಂಗದ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

    ಅಮರನಾಥ ಯಾತ್ರೆಗೆ ನೋಂದಣಿ ಹೇಗೆ?
    ಯಾತ್ರಿಕರು ಶ್ರೀ ಅಮರನಾಥ ದೇವಾಲಯ ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅಥವಾ ದೇಶಾದ್ಯಂತ ಗೊತ್ತುಪಡಿಸಿದ 540 ಬ್ಯಾಂಕ್ ಶಾಖೆಗಳ ಮೂಲಕ ಆಫ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜಾತಿ ಗಣತಿ ದಂಗಲ್‌ – ಒಕ್ಕಲಿಗ ಶಾಸಕರ ಸಭೆ ಕರೆದ ಡಿಸಿಎಂ

    ಆನ್‌ಲೈನ್ ನೋಂದಣಿ ಹಂತಗಳು:
    1.https://jksasb.nic.in/ಗೆ ಭೇಟಿ ನೀಡಿ.
    2. 2025ರ ಯಾತ್ರಾ ನೋಂದಣಿ ಮೇಲೆ ಕ್ಲಿಕ್ ಮಾಡಿ.
    3. ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ:
    – ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ
    – ಇದೇ ಏ.15ರ ನಂತರ ನೀಡಲಾದ ಕಡ್ಡಾಯ ಆರೋಗ್ಯ ಪ್ರಮಾಣಪತ್ರ
    – ಗುರುತಿನ ಚೀಟಿ
    4. ನೋಂದಣಿಯನ್ನು ಪೂರ್ಣಗೊಳಿಸಲು 220 ರೂ. ಪಾವತಿಸಬೇಕು.

    ಆಫ್‌ಲೈನ್ ಮೋಡ್:
    ಪಂಜಾಬ್ ನ್ಯಾಷನಲ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ ಮತ್ತು ಇತರ ಬ್ಯಾಂಕ್‌ಗಳ ನಿರ್ದಿಷ್ಟ ಶಾಖೆಗಳಲ್ಲಿ ಆಫ್‌ಲೈನ್ ನೋಂದಣಿಯನ್ನು ಮಾಡಿಕೊಳ್ಳಬಹುದು. ವೈಯಕ್ತಿಕವಾಗಿ ನೋಂದಾಯಿಸುವಾಗ ಮೂಲ ದಾಖಲೆಗಳು ಮತ್ತು ಕಡ್ಡಾಯವಾಗಿ ಆರೋಗ್ಯ ಪ್ರಮಾಣಪತ್ರವನ್ನು ಕೊಂಡೊಯ್ಯಬೇಕು. ಅಧಿಕೃತವಾಗಿ ವೈದ್ಯರು ಅಥವಾ ಸಂಸ್ಥೆಗಳು ನೀಡುವ ಕಡ್ಡಾಯ ಆರೋಗ್ಯ ಪ್ರಮಾಣಪತ್ರವಿಲ್ಲದೆ ಯಾರಿಗೂ ಯಾತ್ರೆಗೆ ತೆರಳಲು ಅವಕಾಶವಿರುವುದಿಲ್ಲ. ಈ ಪ್ರಮಾಣಪತ್ರವು ನೀವು ಎತ್ತರದ ಚಾರಣವನ್ನು ತಡೆದುಕೊಳ್ಳಲು ದೈಹಿಕವಾಗಿ ಸದೃಢರಾಗಿದ್ದೀರಿ ಎಂಬುವುದನ್ನು ಖಚಿತಪಡಿಸುತ್ತದೆ.

    ಆರೋಗ್ಯ ಪ್ರಮಾಣಪತ್ರವು ಇದೇ ಏ.15ರ ನಂತರದ್ದಾಗಿರಬೇಕು. 13 ವರ್ಷಕ್ಕಿಂತ ಕಡಿಮೆ ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟ ಯಾತ್ರಿಕರಿಗೆ ಅವಕಾಶವಿಲ್ಲ.

    ಯಾತ್ರಿಕರಿಗೆ ಅನುಸರಿಸಬೇಕಾದ ಕೆಲವು ನಿಯಮಗಳು:
    ಕನಿಷ್ಠ ಒಂದು ತಿಂಗಳ ಮೊದಲು ದೈಹಿಕವಾಗಿ ಸದೃಢರಾಗಿರಲು ತರಬೇತಿಯನ್ನು ಪ್ರಾರಂಭಿಸಿ.
    ಉಣ್ಣೆ ಬಟ್ಟೆ, ವಾಟರ್‌ಪ್ರೂಫ್ ಶೂ, ರೇನ್‌ಕೋಟ್ ಮತ್ತು ಟಾರ್ಚ್ ಅನ್ನು ಕೊಂಡೊಯ್ಯಿರಿ.
    ಯಾತ್ರಾ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ನೀಡುವ ಸೂಚನೆಗಳನ್ನು ಅನುಸರಿಸಿ.
    ಪ್ಲಾಸ್ಟಿಕ್ ಚೀಲಗಳನ್ನು ಕೊಂಡೊಯ್ಯುವುದು ಬೇಡ.
    ಯಾತ್ರೆಯ ಸಮಯದಲ್ಲಿ ಧೂಮಪಾನ, ಮದ್ಯಪಾನ ಮಾಡುವುದನ್ನು ತಪ್ಪಿಸಿ.
    ಕೆಟ್ಟ ಹವಾಮಾನದ ಸಮಯದಲ್ಲಿ ಯಾತ್ರೆಯನ್ನು ಕೈಗೊಳ್ಳಬೇಡಿ.

    ಯಾತ್ರೆಯ ದಿನಾಂಕ
    ಪ್ರಾರಂಭ: ಜೂನ್ 29, 2025
    ಅಂತಿಮ ದಿನಾಂಕ: ಆಗಸ್ಟ್ 19, 2025
    ಮಾರ್ಗಗಳು: ಪಹಲ್ಗಾಮ್ ಮಾರ್ಗ, ಬಾಲ್ಟಾಲ್ ಮಾರ್ಗ

    ಅಮರನಾಥ ಯಾತ್ರೆಗೆ ಹೆಲಿಕಾಪ್ಟರ್ ಸೇವೆ ಲಭ್ಯವಿದ್ದು, ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದು. ಹೆಲಿಕಾಪ್ಟರ್ ಸೇವೆಗಾಗಿ ಕಳೆದ ವರ್ಷ ವಿಧ-ವಿಧವಾದ ದರ ನಿಗದಿ ಮಾಡಲಾಗಿತ್ತು. ಈ ಬಾರಿಯೂ ಕೂಡ ಒಂದೊಂದು ದರ ನಿಗದಿ ಮಾಡಲಾಗಿದ್ದು, ಶ್ರೀನಗರ ಏರ್‌ಪೋರ್ಟ್‌ನಿಂದ ಸ್ಟ್ಯಾಂಡರ್ಡ್‌ ಪ್ಯಾಕೇಜ್ 36,000 ರೂ. ಹಾಗೂ ಡಿಲಕ್ಸ್ ಪ್ಯಾಕೇಜ್ 41,000 ರೂ. ನಿಗದಿ ಮಾಡಲಾಗಿದೆ.ಇದನ್ನೂ ಓದಿ: ಚಂದನ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ‘ಸೀತಾ ವಲ್ಲಭ’ ನಟಿ

  • ಚಳಿ ತಡೆಯದೆ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಸಾವು

    ಚಳಿ ತಡೆಯದೆ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಸಾವು

    ಶ್ರೀನಗರ: ಚಳಿ ತಡೆಯದೆ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಶ್ರೀನಗರ (Srinagar) ಜಿಲ್ಲೆಯ ಪಂದ್ರಾಥಾನ್ ಪ್ರದೇಶದಲ್ಲಿ (Pandrathan Area) ನಡೆದಿದೆ.

    ಮೃತರನ್ನು ಮೂಲತಃ ಬಾರಾಮುಲ್ಲಾ ಜಿಲ್ಲೆಯವರು ಎನ್ನಲಾಗಿದ್ದು, ದಂಪತಿ ಸೇರಿದಂತೆ 3 ಮಕ್ಕಳು ಒಟ್ಟು ಐವರು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಇಬ್ಬರ ದುರ್ಮರಣ

    ಬಾರಮುಲ್ಲಾ ಜಿಲ್ಲೆಯಿಂದ ಬಂದಿದ್ದ ಕುಟುಂಬ ಪಂದ್ರಾಥಾನ್ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜಿಲ್ಲೆಯಲ್ಲಿರುವ ಚಳಿಯ ಪರಿಣಾಮದಿಂದ ಉಸಿರುಗಟ್ಟಿದ್ದು, ಪ್ರಜ್ಞಾಹೀನರಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ರವಾನಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ದುಃಖ ವ್ಯಕ್ತಪಡಿಸಿದ್ದು, ಆಪ್ತರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ದೇವರು ನೋವನ್ನು ಭರಿಸುವ ಶಕ್ತಿ ನೀಡಲಿ. ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಚಳಿಗಾಲದ ತಿಂಗಳುಗಳಲ್ಲಿ ಬಿಸಿಮಾಡುವ ಸಾಧನಗಳನ್ನು ಬಳಸುವಾಗ ಅತ್ಯಂತ ಜಾಗರೂಕರಾಗಿರಿ. ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಬಿಸಿ ಉಪಕರಣಗಳ ಸುರಕ್ಷಿತ ಬಳಕೆಯ ಸಲಹೆಗಳನ್ನು ಪಾಲಿಸಿ. ವಿವೇಚನೆಯಿಲ್ಲದೇ ಯಾವುದನ್ನು ಕೂಡ ಬಳಸಬೇಡಿ. ಈ ಗ್ಯಾಜೆಟ್‌ಗಳು ಕಾರ್ಬನ್ ಮಾನಾಕ್ಸೈಡ್ ಅನ್ನು ಉತ್ಪಾದಿಸುತ್ತವೆ ಮತ್ತು ಸಂಪೂರ್ಣವಾಗಿ ಮುಚ್ಚಿದ ಕೋಣೆಯಲ್ಲಿ ಈ ಉಪಕರಣಗಳನ್ನು ಬಳಸುವುದು ಮಾರಕ ಎಂದು ತಿಳಿಸಿದರು.ಇದನ್ನೂ ಓದಿ: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು – ಸಾವಿನ ಸಂಖ್ಯೆ 12ಕ್ಕೆ ಏರಿಕೆ

  • ಜಮ್ಮು-ಕಾಶ್ಮೀರ | ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆ

    ಜಮ್ಮು-ಕಾಶ್ಮೀರ | ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದಾಚಿಗಂ ಅರಣ್ಯ ಪ್ರದೇಶದಲ್ಲಿ (Dachigam Forest) ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಉಗ್ರರಿರುವ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಸೋಮವಾರ (ಡಿ.01) ಎನ್‌ಕೌಂಟರ್ ಪ್ರಾರಂಭವಾಗಿದ್ದು, ಮಂಗಳವಾರ ಬೆಳಿಗ್ಗೆ ಓರ್ವ ಉಗ್ರ ಹತನಾಗಿದ್ದಾನೆ.ಇದನ್ನೂ ಓದಿ: UI ರಿಲೀಸ್‌ಗೂ ಮುನ್ನ ಉಪೇಂದ್ರ & ಟೀಮ್‌ ಟೆಂಪಲ್‌ ರನ್

    ದಾಚಿಗಂ ಅರಣ್ಯ ಪ್ರದೇಶಕ್ಕೂ ಮುನ್ನ ಶ್ರೀನಗರದ ಹರ್ವಾನ್ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಬಳಿಕ ಉಗ್ರರ ಅಡಗುತಾಣ ಸುತ್ತುವರಿದಾಗ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಎನ್‌ಕೌಂಟರ್ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದಕ್ಕೂ ಮುನ್ನ ನ.23 ರಂದು, ಬಾರಾಮುಲ್ಲಾ ಪೊಲೀಸರು ಹಾಗೂ ಭದ್ರತಾ ಪಡೆಗಳೊಂದಿಗೆ ನಡೆಸಿದ್ದ ಜಂಟಿ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕುಂಜರ್ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಭೇದಿಸುವ ಮೂಲಕ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಂಡರು.ಇದನ್ನೂ ಓದಿ: ಬಿಜೆಪಿಯಲ್ಲಿ ಬಣ ಫೈಟ್ – ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೇಟಿ

     

  • ಗುಲ್ಮಾರ್ಗ್‌ನಲ್ಲಿ ಈ ಸೀಸನ್ನಿನ ಮೊದಲ ಹಿಮಪಾತ, ಶ್ರೀನಗರದಲ್ಲಿ ಮಳೆ

    ಗುಲ್ಮಾರ್ಗ್‌ನಲ್ಲಿ ಈ ಸೀಸನ್ನಿನ ಮೊದಲ ಹಿಮಪಾತ, ಶ್ರೀನಗರದಲ್ಲಿ ಮಳೆ

    ಶ್ರೀನಗರ: ಕಾಶ್ಮೀರದ (Kashmir) ಪ್ರವಾಸಿ ತಾಣವಾದ ಗುಲ್ಮಾರ್ಗ್‌ನಲ್ಲಿ ಶನಿವಾರದಂದು ಮೊದಲ ಹಿಮಪಾತವಾಗಿದೆ. ಬಯಲು ಪ್ರದೇಶಗಳಲ್ಲಿ ಮಳೆ ಸುರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಣಿವೆಯ ಬಹುತೇಕ ಬಯಲು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಇನ್ನು ಕೆಲವೆಡೆ ಹಗುರದಿಂದ ಸಾಧಾರಣ ಹಿಮಪಾತವಾಗುತ್ತಿದೆ. ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಮತ್ತು ಗುಲ್ಮಾರ್ಗ್ ಮತ್ತು ಗುರೇಜ್ ಕಣಿವೆಯಲ್ಲಿ ಮುಂಜಾನೆ ಹಿಮಪಾತವಾಗಿದೆ. ಗುಲ್ಮಾರ್ಗ್ನಲ್ಲಿ ಲಘು ಹಿಮಪಾತ ದಾಖಲಾಗಿದ್ದರೆ, ಗುರೇಜ್ ಕಣಿವೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗಿದೆ. ಮಧ್ಯಾಹ್ನದ ನಂತರ ಹವಾಮಾನದಲ್ಲಿ ಸುಧಾರಣೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಸಾಲ ಬಾಧೆ – ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ

    ಗುಲ್ಮಾರ್ಗ್‌ನಲ್ಲಿ (Gulmarg) ಶನಿವಾರ ಬೆಳಗ್ಗೆ ಒಂದು ಇಂಚು ಹಿಮಪಾತವಾಗಿದ್ದು, ಬಂಡಿಪೋರಾ ಗುರೇಜ್ ರಸ್ತೆ ಸಂಚಾರವನ್ನು ಸದ್ಯಕ್ಕೆ ಮುಚ್ಚಲಾಗಿದೆ. ನ.17ರಿಂದ 23ರವರೆಗೆ ಸಾಮಾನ್ಯವಾಗಿ ಶುಷ್ಕ ವಾತಾವರಣದಿಂದ ಕೂಡಿರುವ ಸಾಧ್ಯತೆ ಇರುತ್ತದೆ. ನ.24 ರಂದು ಕೆಲವು ಸ್ಥಳಗಳಲ್ಲಿ ಸ್ವಲ್ಪ ಮಳೆ ಮತ್ತು ಹಿಮಪಾತ ಆಗುವ ಸಾಧ್ಯತೆಯಿದೆ. ಪ್ರವಾಸಿಗರು ಮತ್ತು ಪ್ರಯಾಣಿಕರು ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ತಮ್ಮ ಪ್ರಯಾಣ ಮಾಡುವಂತೆ ಹವಾಮಾನ ಇಲಾಖೆಯ ಉಪನಿರ್ದೇಶಕ ಡಾ. ಮುಖ್ತಾರ್ ಅಹ್ಮದ್ ಸೂಚಿಸಿದ್ದಾರೆ. ಇದನ್ನೂ ಓದಿ: ಕಬ್ಬು ಕಟಾವು ಹಿನ್ನೆಲೆ, ಮೆಟ್ರಿಕ್ ಟನ್ ಕಬ್ಬಿಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ- ಬಿ.ಫೌಜಿಯಾ ತರನ್ನುಮ್

    ಶ್ರೀನಗರ ಮತ್ತು ಕಾಶ್ಮೀರ ಕಣಿವೆಯ ಕೆಲವು ಭಾಗಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಹಿಮಪಾತವಾಗುತ್ತಿದೆ. ಹಿಮದ ತೆಳುವಾದ ಪದರವು ಮನೆಗಳ ಮೇಲ್ಛಾವಣಿ, ಕಾರು, ಮೈದಾನ, ಹುಲ್ಲು ಪ್ರದೇಶ, ಮರ-ಗಿಡ, ಹೂವು-ಬಳ್ಳಿಗಳ ಮೇಲೆ ಆವರಿಸಿದೆ. ಕಣಿವೆ ರಾಜ್ಯದ ಕೆಲವು ಭಾಗಗಳಲ್ಲಿ ಎಡಬಿಡದೇ ಮಂಜು ಸುರಿತುತ್ತಿರುವ ಕಾರಣ ನಗರದ ಬೀದಿಗಳು ಕೂಡ ಹಿಮದಿಂದ ಆವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 20 ವರ್ಷಗಳ ಬಳಿಕ ರಿಂಗ್‌ನಲ್ಲಿ ಘರ್ಜಿಸಿದ ಮೈಕ್‌ ಟೈಸನ್‌ – ಜೇಕ್ ಪಾಲ್ ವಿರುದ್ಧ ಸೋಲು

  • Articles 370 Row | ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಮೂರನೇ ದಿನ ಮಾರಾಮಾರಿ

    Articles 370 Row | ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಮೂರನೇ ದಿನ ಮಾರಾಮಾರಿ

    ಶ್ರೀನಗರ: ಸಂವಿಧಾನದ ಆರ್ಟಿಕಲ್‌ 370 (Articles 370) ಮರುಸ್ಥಾಪನೆ ವಿಚಾರವಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ (Jammu Kashmir Assembly) ಆಡಳಿತಾರೂಢ ನ್ಯಾಷನಲ್‌ ಕಾನ್ಪರೆನ್ಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ಸದಸ್ಯರ ನಡುವೆ 3ನೇ ದಿನವೂ ಗದ್ದಲ ಮುಂದುವರಿದಿದೆ.

    ಮೂರನೇ ದಿನವಾದ ಶುಕ್ರವಾರವೂ ಗದ್ದಲ ಮುಂದುವರಿದಿದ್ದು, ಬಿಜೆಪಿ ಶಾಸಕರು (BJP MLAs) ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಭಟನೆ ಆರಂಭಿಸಿದರು. ಇದನ್ನೂ ಓದಿ: 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ- ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ತಾರಕಕ್ಕೇರಿದ ಗದ್ದಲ

    ಕಣಿವೆಗೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ಪುನರ್‌ ಸ್ಥಾಪಿಸುವಂತೆ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿದ್ದ ನಿರ್ಣಯ ಹಿಂದಕ್ಕೆ ಪಡೆಯಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಈ ವೇಳೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರನ್ನು ಸದನದದಿಂದ ಹೊರ ಹಾಕುವಂತೆ ಸ್ಪೀಕರ್‌ ಅಬ್ದುಲ್‌ ರಹೀಂ ರಾಥರ್‌ ಆದೇಶ ನೀಡುತ್ತಿದ್ದತೆ ವಿಧಾನಸಭೆ ರಣರಂಗವಾಯಿತು. ಇದನ್ನೂ ಓದಿ: ಅಮೆರಿಕ ಉಪಾಧ್ಯಕ್ಷನಾಗಿ ಜೆಡಿ ವ್ಯಾನ್ಸ್ ಆಯ್ಕೆ – ಆಂಧ್ರದ ವಡ್ಲೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಸದನದಿಂದ ಹೊರಹಾಕಲು ಯತ್ನಿಸಿದ ಮಾರ್ಷಲ್‌ಗಳ ಜೊತೆ ಶಾಸಕರು ಸಂಘರ್ಷಕ್ಕಿಳಿದರು. ಈ ವೇಳೆ ತಳ್ಳಾಟ, ನೂಕಾಟವೂ ಉಂಟಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದ ಹಿನ್ನೆಲೆಯಲ್ಲಿ ಸ್ಪೀಕರ್‌ ಕಲಾಪವನ್ನು ಮುಂದೂಡಿದರು.

    ಇದಕ್ಕೂ ಮುನ್ನ ಗುರುವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ 370ನೇ ವಿಧಿ ಕುರಿತು ಚರ್ಚೆ ಆರಂಭವಾಯಿತು. ನಿರ್ಣಯದ ಮೇಲೆ ಬಿಜೆಪಿ ಶಾಸಕ ಹಾಗೂ ಪ್ರತಿಪಕ್ಷ ನಾಯಕ ಸುನಿಲ್‌ ಶರ್ಮಾ ಮಾತನಾಡುತ್ತಿದ್ದ ವೇಳೆ ಅವಾಮಿ ಇತ್ತೆಹಾದ್‌ ಪಕ್ಷದ ಶಾಸಕ ಲಂಗೈಟ್‌ ಶೇಖ್‌ ಖುರ್ಷೀದ್‌, ಸಂವಿಧಾನದ 370ನೇ ವಿಧಿ ಹಾಗೂ 35ಎ ಕಲಂ ಮರು ಸ್ಥಾಪಿಸುವಂತೆ ಆಗ್ರಹಿಸಿ ಬ್ಯಾನರ್‌ ಪ್ರದರ್ಶಿಸಿದರು.

    ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದರಲ್ಲದೆ, ಶಾಸಕ ಪ್ರದರ್ಶಿಸಿದ ಬ್ಯಾನರ್‌ ಕಸಿಯಲು ಮುಂದಾದರು. ಈ ವೇಳೆ ಕೋಲಾಹಲ ಉಂಟಾಯಿತು. ಪರಿಸ್ಥಿತಿ ನಿಭಾಯಿಸಲು ಕಲಾಪವನ್ನು ಸ್ಪೀಕರ್‌ 15 ನಿಮಿಷ ಮುಂದೂಡಿದರು. ಕಲಾಪ ಪುನಾರಂಭಗೊಂಡ ಬಳಿಕ ತಮ್ಮ ಸ್ಥಾನಗಳಿಗೆ ತೆರಳುವಂತೆ ಸದಸ್ಯರಿಗೆ ಸ್ಪೀಕರ್‌ ಸೂಚನೆ ನೀಡಿದರು. ಸಭಾಧ್ಯಕ್ಷರ ಮಾತು ಆಲಿಸದ ಬಿಜೆಪಿ ಸದಸ್ಯರು ಹೋರಾಟ ಮುಂದುವರಿಸಿದರು. ʻನೀವು ಸದನದ ನಿಯಮಗಳನ್ನು ಮೀರುತ್ತಿದ್ದೀರಿ, ಕೆಲ ಸದಸ್ಯರ ವರ್ತನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಹೀಗೆ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆʼ ಎಂದು ಎಚ್ಚರಿಸಿದ ಸ್ಪೀಕರ್‌ ಅಬ್ದುಲ್‌ ರಹೀಂ ರಾಥರ್, ಶುಕ್ರವಾರಕ್ಕೆ ಕಲಾಪ ಮುಂದೂಡಿದ್ದರು.

  • 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ- ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ತಾರಕಕ್ಕೇರಿದ ಗದ್ದಲ

    370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ- ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ತಾರಕಕ್ಕೇರಿದ ಗದ್ದಲ

    ಶ್ರೀನಗರ: ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ  (Jammu Kashmir) ವಿಧಾನಸಭೆಯಲ್ಲಿ ಭಾರೀ ಗದ್ದಲ ನಡೆಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬ್ಯಾನರ್ ಕಿತ್ತುಕೊಳ್ಳಲು ಮುಂದಾದ ಬಿಜೆಪಿ (BJP) ಶಾಸಕರು, ಪಿಡಿಪಿ, ಎನ್‌ಸಿ ಶಾಸಕರ ನಡುವೆ ಹೊಡೆದಾಟ ನಡೆಯಿತು.

    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಮರು ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಗೊತ್ತುವಳಿಯನ್ನು ಭಾರಿ ಗದ್ದಲದ ನಡುವೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಅಂಗೀಕರಿಸಿತು. ಇದನ್ನೂ ಓದಿ: ಕೊಲೆ ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ – ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ

    ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಗೊತ್ತುವಳಿ ಮಂಡಿಸಿದ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಅವರು, ವಿಶೇಷ ಸ್ಥಾನಮಾನದ ಮಹತ್ವ ಮತ್ತು ರಾಜ್ಯದ ಜನರ ಹೆಗ್ಗುರುತು, ಸಂಸ್ಕೃತಿ ಹಾಗೂ ಹಕ್ಕುಗಳನ್ನು ರಕ್ಷಿಸುವ ಸಾಂವಿಧಾನಿಕ ಗ್ಯಾರಂಟಿಯನ್ನು ಈ ವಿಧಾನಸಭೆ ದೃಢೀಕರಿಸುತ್ತದೆ. ಇಂತಹ ವಿಶೇಷ ಸ್ಥಾನಮಾನವನ್ನು ಏಕಪಕ್ಷೀಯವಾಗಿ ರದ್ದುಗೊಳಿಸಿದ ಕ್ರಮದ ಕುರಿತು ಕಳವಳ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ರಾಜಿಯಾದ ಮಾತ್ರಕ್ಕೆ ಲೈಂಗಿಕ ಕಿರುಕುಳ ಕೇಸ್‌ ರದ್ದು ಮಾಡಲು ಸಾಧ್ಯವಿಲ್ಲ: ಸುಪ್ರೀ

    ವಿಪಕ್ಷ ಬಿಜೆಪಿ ಸದಸ್ಯರು ಗೊತ್ತುವಳಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪದ ಪಟ್ಟಿಯಲ್ಲಿ ಇರದ ವಿಷಯವನ್ನು ಮಂಡಿಸಲಾಗಿದೆ. ನಾವು ಇದನ್ನು ವಿರೋಧಿಸುತ್ತೇವೆ ಎಂದು ತಿಳಿಸಿದ್ದಾರೆ. ಸಂಸತ್ ಕೈಗೊಂಡ ನಿರ್ಧಾರವನ್ನು ಬದಲಾಯಿಸಲಾಗದು ಎಂದು ತಿಳಿದಿದ್ದರೂ ಪ್ರಚಾರಕ್ಕಾಗಿ ಸುಮ್ಮನೆ ಗದ್ದಲ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಈ ವೇಳೆ ಗದ್ದಲ ಉಂಟಾಗಿದೆ. ಇದಾದ ನಂತರ ವಿರೋಧ ಪಕ್ಷದ ನಾಯಕ ಸುನೀಲ್ ಶರ್ಮಾ ಬ್ಯಾನರ್ ತೋರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಗದ್ದಲದ ನಂತರ ಮಾರ್ಷಲ್‌ಗಳು ಮಧ್ಯಪ್ರವೇಶಿಸಿ ಶಾಸಕರನ್ನು ಗದ್ದಲದಿಂದ ಪ್ರತ್ಯೇಕಿಸಿದರು. ಇದನ್ನೂ ಓದಿ: ವಕ್ಫ್ ವಿವಾದ; ಹುಬ್ಬಳ್ಳಿಗೆ ವಕ್ಫ್ ಜಂಟಿ ಸಂಸದೀಯ ಮಂಡಳಿ ಅಧ್ಯಕ್ಷ ಭೇಟಿ – ರೈತರಿಂದ ಅಹವಾಲು ಸ್ವೀಕಾರ