Tag: Srinagar

  • ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ

    ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ

    ಶ್ರೀನಗರ: ಇಂದು ಭಾರತ ಮತ್ತು ಪಾಕ್ ಹೈವೋಲ್ಟೇಜ್ ಕ್ರಿಕೆಟ್ ಮ್ಯಾಚ್ ಹಿನ್ನೆಲೆ ಶ್ರೀನಗರದಲ್ಲಿರುವ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‍ಐಟಿ) ತನ್ನ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಭಾರತ-ಪಾಕಿಸ್ತಾನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸದಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ.

    ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಈ ಕುರಿತಂತೆ ನೋಟಿಸ್ ನೀಡಿದ್ದು, ಮ್ಯಾಚ್ ವೇಳೆ ವಿದ್ಯಾರ್ಥಿಗಳು ನಿಗದಿ ಪಡಿಸಿರುವ ಕೊಠಡಿಗಳಲ್ಲಿಯೇ ಇರಬೇಕು ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಈದ್ಗಾ ಮೈದಾನ ವಿಚಾರವಾಗಿ ಹಿಂದೂ ಸಂಘಟನೆಗಳ ಸವಾಲು – ಎಚ್ಚೆತ್ತ ಪಾಲಿಕೆ ದಶ ದಿಕ್ಕುಗಳಲ್ಲಿ ಹದ್ದಿನ ಕಣ್ಣು

    ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ವಿವಿಧ ರಾಷ್ಟ್ರಗಳನ್ನೊಳಗೊಂಡ ಕ್ರಿಕೆಟ್ ಸರಣಿ ನಡೆಯುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿದಿದೆ. ಹೀಗಾಗಿ ಆಟವನ್ನು ಆಟದ ರೀತಿ ನೋಡುವಂತೆ ತಿಳಿಸಿದ್ದು, ಹಾಸ್ಟೆಲ್‍ನಲ್ಲಿ ಯಾವುದೇ ರೀತಿಯ ಅಶಿಸ್ತು ಸೃಷ್ಟಿಸದಂತೆ ಸೂಚಿಸಿದೆ.

    ಭಾನುವಾರದ ಪಂದ್ಯ ನಡೆಯುವ ವೇಳೆ ವಿದ್ಯಾರ್ಥಿಗಳು ತಮಗೆ ನಿಗದಿಪಡಿಸಿದ ಕೊಠಡಿಗಳಲ್ಲಿಯೇ ಇರಬೇಕು ಮತ್ತು ಇತರ ವಿದ್ಯಾರ್ಥಿಗಳ ಕೊಠಡಿಗಳಿಗೆ ಪ್ರವೇಶಿಸಬಾರದು. ಗುಂಪು ಕಟ್ಟಿಕೊಂಡು ಪಂದ್ಯವನ್ನು ವೀಕ್ಷಿಸಬಾರದು. ಇಂದು ವೇಳೆ ನಿಗದಿ ಪಡಿಸಿರುವ ಕೊಠಡಿಯಲ್ಲಿ ಮ್ಯಾಚ್ ವೀಕ್ಷಿಸಿದರೆ, ಆ ಕೊಠಡಿಯಲ್ಲಿರುವ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಹಾಸ್ಟೆಲ್ ವಸತಿಯಿಂದ ಡಿಬಾರ್ ಮಾಡಲಾಗುತ್ತದೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಕನಿಷ್ಠ 5,000 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ.

    ಪಂದ್ಯಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬಾರದು. ಇದಲ್ಲದೆ ಪಂದ್ಯದ ಸಮಯದಲ್ಲಿ ಅಥವಾ ನಂತರ ಹಾಸ್ಟೆಲ್ ಕೊಠಡಿಗಳಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಇಂಡಿಯಾ, ಪಾಕ್ ಹೈವೋಲ್ಟೇಜ್ ಕ್ರಿಕೆಟ್- ಭಾರತ ಗೆಲುವಿಗೆ ಮುಸ್ಲಿಮರಿಂದ ವಿಶೇಷ ಪೂಜೆ

    2016ರಲ್ಲಿ ಟಿ-20 ವಿಶ್ವಕಪ್ ಸೆಮಿ-ಫೈನಲ್‍ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸೋತ ನಂತರ ಹೊರರಾಜ್ಯ ಮತ್ತು ಸ್ಥಳೀಯ ವಿದ್ಯಾರ್ಥಿಗಳ ನಡುವೆ ನ್ಯಾಷನಲ್ ಇನ್‍ಸ್ಟಿಟ್ಯೂಟ್‍ನಲ್ಲಿ ಘರ್ಷಣೆಗಳು ಸಂಭವಿಸಿತ್ತು. ಇದರಿಂದ ಕೆಲ ದಿನಗಳವರೆಗೆ ಎನ್‍ಐಟಿ ಕಾಲೇಜನ್ನು ಮುಚ್ಚಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಬಾರಿ ಗ್ರೆನೇಡ್ ದಾಳಿ

    ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಬಾರಿ ಗ್ರೆನೇಡ್ ದಾಳಿ

    ಶ್ರೀನಗರ: ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಕಡೆ ಗ್ರೆನೇಡ್ ದಾಳಿಗಳು ನಡೆದಿವೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ನಾಗರಿಕ ಗಾಯಗೊಂಡಿರುವುದಾಗಿ ವರದಿಯಾಗಿದೆ.

    ನಿನ್ನೆ(ಸೋಮವಾರ) ಬುದ್ಗಾಮ್‌ನ ಗೋಪಾಲ್‌ಪೋರಾ ಚದೂರ ಪ್ರದೇಶದಲ್ಲಿ ಭಯೋತ್ಪಾದಕರು ಎಸೆದ ಗ್ರೆನೇಡ್ ಸ್ಥಳೀಯ ಕರಣ್ ಕುಮಾರ್ ಸಿಂಗ್ ಗಾಯಗೊಂಡಿದ್ದರು. ಬಳಿಕ ಶ್ರೀನಗರದ ಕಾಶ್ಮೀರ ಪೊಲೀಸ್ ನಿಯಂತ್ರಣ ಕೊಠಡಿ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಬೇರೆ ಬೇರೆ ಸಂದರ್ಭಗಳಲ್ಲಿ ನಡೆದಿರುವ ದಾಳಿಯಲ್ಲಿ ಗಾಯಗೊಂಡಿರುವ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ. ಇದನ್ನೂ ಓದಿ: 10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ತೆರೆ- ಅಪ್ಪು ಜಾತ್ರೆ ವೀಕ್ಷಣೆಗೆ ಹರಿದು ಬಂತು ಜನಸಾಗರ

    ಭಾನುವಾರವೂ ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಪೊಲೀಸ್ ಕಾನ್‌ಸ್ಟೇಬಲ್ ಸರ್ಫರಾಜ್ ಅಹ್ಮದ್ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ

    Live Tv
    [brid partner=56869869 player=32851 video=960834 autoplay=true]

  • ಹೈಬ್ರಿಡ್ ಉಗ್ರನನ್ನು ಬಂಧಿಸಿದ ಭದ್ರತಾ ಪಡೆ

    ಹೈಬ್ರಿಡ್ ಉಗ್ರನನ್ನು ಬಂಧಿಸಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಲಷ್ಕರ್ ಎ ತೊಯ್ಬಾದ ಹೈಬ್ರಿಡ್ ಉಗ್ರನನ್ನು ಭದ್ರತಾ ಪಡೆಗಳು ಬಂಧಿವೆ.

    ಖಚಿತ ಮಾಹಿತಿಯ ಮೇರೆಗೆ ಶ್ರೀನಗರ ಪೊಲೀಸರು ಹಾಗೂ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗು ತಾಣದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ಎಲ್‍ಇಟಿಯ ಹೈಬ್ರಿಡ್ ಉಗ್ರ ಅರ್ಷಿದ್ ಅಹ್ಮದ್ ಭಟ್‍ನನ್ನು ಬಂಧಿಸಲಾಗಿದೆ. ಈ ಬಗ್ಗೆ ಶ್ರೀನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಬೆಲೆ ಏರಿಕೆ ಬಿಕ್ಕಟ್ಟು – ಚೀನಾ ವಿರುದ್ಧ ಕಿಡಿ

    ಘಟನೆಯಲ್ಲಿ ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರಗಳನ್ನು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. 5 ಪಿಸ್ತೂಲ್‍ಗಳು, 50 ಪಿಸ್ತೂಲ್ ರೌಂಡ್‍ಗಳು ಹಾಗೂ 2 ಹ್ಯಾಂಡ್ ಗ್ರೆನೇಡ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗಲ್ಲು ಶಿಕ್ಷೆಯಿಂದ ಅತ್ಯಾಚಾರ ಸಂತ್ರಸ್ತೆಯರ ಹತ್ಯೆ ಹೆಚ್ಚಳ: ಕ್ಷಮೆ ಯಾಚಿಸುವಂತೆ ಗೆಹ್ಲೋಟ್‌ಗೆ ಬಿಜೆಪಿ ಒತ್ತಾಯ

    Live Tv
    [brid partner=56869869 player=32851 video=960834 autoplay=true]

  • ಭಯೋತ್ಪಾದಕರ ಎನ್‍ಕೌಂಟರ್ ವೇಳೆ ಸೇನಾ ಸಿಬ್ಬಂದಿಗೆ ಗಂಭೀರ ಗಾಯ

    ಭಯೋತ್ಪಾದಕರ ಎನ್‍ಕೌಂಟರ್ ವೇಳೆ ಸೇನಾ ಸಿಬ್ಬಂದಿಗೆ ಗಂಭೀರ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್‌ನಲ್ಲಿ ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಭಯೋತ್ಪಾದಕರಿದ್ದ ಕುಲ್ಗಾಮ್ ಸ್ಥಳಕ್ಕೆ ಪ್ರವೇಶಿಸಿ ಗುಂಡಿನ ದಾಳಿ ಪ್ರಾರಂಭಿಸಿದೆ. ಈ ವೇಳೆ 34 ಆರ್‌ಆರ್‌ನ  ಸೇನಾ ಯೋಧ ಜೈ ಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 2 ಲಡಾಖ್ ಪರ್ವತವನ್ನು ಹತ್ತಿದ 13 ವರ್ಷದ ಪೋರ  

    ದಕ್ಷಿಣ ಕಾಶ್ಮೀರದ ಕುಲ್ಗಾಮ್‍ನ ಯರಿಪೋರಾದ ಬ್ರೈಹಾರ್ಡ್ ಕಥ್ಪೋರಾ ಪ್ರದೇಶದಲ್ಲಿ ಎನ್‍ಕೌಂಟರ್ ನಡೆಯಿತು. ಈ ವೇಳೆ 2 ರಿಂದ 3 ಉಗ್ರರು ಸಿಕ್ಕಿಬಿದ್ದಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜ ಕೊಳ್ಳುವಂತೆ ಸ್ಥಳೀಯ ಆಡಳಿತದಿಂದಲೇ ಜನರಿಗೆ ಒತ್ತಾಯ

    ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜ ಕೊಳ್ಳುವಂತೆ ಸ್ಥಳೀಯ ಆಡಳಿತದಿಂದಲೇ ಜನರಿಗೆ ಒತ್ತಾಯ

    ಶ್ರೀನಗರ: ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಲೇಬೇಕೆಂಬ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ ಅಲ್ಲಿನ ಆಡಳಿತವೇ ಜನರನ್ನು ಒತ್ತಾಯಿಸುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಸಿಎಂ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

    75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದಿಂದ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ಆಗಸ್ಟ್ 13 ರಿಂದ ಆಗಸ್ಟ್ 15ರ ನಡುವೆ ದೇಶದ ನಾಗರಿಕರು ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಾಡುವಂತೆ ಪ್ರೇರೇಪಿಸುತ್ತಿದೆ. ಆದರೆ ಕಾಶ್ಮೀರ ಆಡಳಿತ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ ಜನತೆಗೆ ಒತ್ತಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ಧ್ವಜಕ್ಕೆ 20 ರೂ. ನೀಡಿ ಎಂದು ಘೋಷಣೆ..?
    ಈ ಕುರಿತು ಪ್ರಚಾರದ ವೀಡಿಯೋ ಒಂದನ್ನು ಹಂಚಿಕೊಂಡಿರುವ ಮುಫ್ತಿ ಅವರು, ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹಾರಾದಲ್ಲಿ ನಗರಪಾಲಿಕೆಯೇ ತ್ರಿವರ್ಣ ಧ್ವಜ ಕೊಂಡುಕೊಳ್ಳುವಂತೆ ಒತ್ತಾಯಿಸುತ್ತಿದೆ. ಪ್ರತಿ ಅಂಗಡಿಯವರೂ ಅಭಿಯಾನಕ್ಕಾಗಿ ಒಂದು ಧ್ವಜವನ್ನಾದರೂ ಕೊಂಡುಕೊಳ್ಳಿ. ಅದಕ್ಕಾಗಿ 20 ರೂ. ಡೆಪಾಸಿಟ್ ಮಾಡಿ ಎಂದು ಸಾರ್ವಜನಿಕವಾಗಿ ವಾಹನವೊಂದರ ಮೇಲೆ ಲೌಡ್‌ಸ್ಪೀಕರ್ ಮೂಲಕ ಸಾರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿಎಎ ಬೆಂಬಲಿಸಿ ಗದಗದಲ್ಲಿ ಬೃಹತ್ ತಿರಂಗಾ ರ‍್ಯಾಲಿ

    ವಿದ್ಯಾರ್ಥಿಗಳು, ಅಂಗಡಿಯವರಿಗೆ ಹಾಗೂ ಸಿಬ್ಬಂದಿಗೆ ರಾಷ್ಟ್ರಧ್ವಜ ಹಾರಿಸುವಂತೆ ಜಮ್ಮು ಕಾಶ್ಮೀರ ಆಡಳಿತ ಒತ್ತಾಯಿಸುತ್ತಿರುವ ರೀತಿ ಹೇಗಿದೆ ಎಂದರೆ, ಕಾಶ್ಮೀರ ವಶಪಡಿಸಿಕೊಳ್ಳಬೇಕಾದ ಶತ್ರು ಪ್ರದೇಶ ಎನ್ನುವಂತಿದೆ ಎಂದು ಮುಫ್ತಿ ಟ್ವೀಟ್‌ನಲ್ಲಿ ಕಿಡಿಕಾರಿದ್ದಾರೆ.

    ಸಿಪಿಐಎಂ ನಾಯಕ ಎಂ.ವೈ.ತಾರಿಗಾಮಿ ಸಹ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಧ್ವಜ ಕೊಂಡುಕೊಳ್ಳಲು 20 ರೂ. ಹಣ ಡೆಪಾಸಿಟ್ ಮಾಡಿ ಎಂದು ಆಡಳಿತ ಘೋಷಣೆ ಮಾಡುತ್ತಿದೆ. ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದಡಿ ಧ್ವಜ ಹಾರಾಡಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತುರ್ತು ಭೂಸ್ಪರ್ಶಿಸಿದ 2 ಗೋಫಸ್ಟ್ ವಿಮಾನ

    ತುರ್ತು ಭೂಸ್ಪರ್ಶಿಸಿದ 2 ಗೋಫಸ್ಟ್ ವಿಮಾನ

    ನವದೆಹಲಿ: ಗೋಫಸ್ಟ್‌ನ 2 ವಿಮಾನಗಳು ದೇಶದ ವಿವಿಧ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

    ಮುಂಬೈ- ಲೇಹ್‍ಗೆ ಹೋಗುತ್ತಿದ್ದ ಗೋ ಫಸ್ಟ್ ವಿಮಾನದಲ್ಲಿ ಇಂಜಿನ್ ದೋಷದಿಂದಾಗಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶಿಸಿದೆ. ಮತ್ತೊಂದು ಘಟನೆಯಲ್ಲಿ ಶ್ರೀನಗರದಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲೂ ಇಂಜಿನ್‍ನಲ್ಲಿ ತೊಂದರೆ ಉಂಟಾದ ಕಾರಣ ಶ್ರೀನಗರಲ್ಲೇ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಇದನ್ನೂ ಓದಿ: ಜನಾಕ್ರೋಶಕ್ಕೆ ಮಣಿದ ಕೇಂದ್ರ – ಅಕ್ಕಿ, ಮೊಸರು ಸೇರಿದಂತೆ 14 ವಸ್ತುಗಳ ಮೇಲೆ ಜಿಎಸ್‍ಟಿ ವಿನಾಯಿತಿ

    ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ)ವು ಈ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ತುರ್ತು ಭೂಸ್ಪರ್ಶ ಮಾಡಿದ ಈ ಎರಡೂ ವಿಮಾನಗಳು ಡಿಜಿಸಿಎಯಿಂದ ಅನುಮತಿ ಪಡೆದಾಗ ಮಾತ್ರ ಹಾರಾಟ ನಡೆಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಡಿಕೆಶಿ ಶಾಲೆಗೆ ಬಾಂಬ್ ಬೆದರಿಕೆ!

    Live Tv
    [brid partner=56869869 player=32851 video=960834 autoplay=true]

  • ಹಜ್‍ನಿಂದ ಬಂದ ಯಾತ್ರಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ಕಾಶ್ಮೀರಿ ಹಿಂದೂಗಳು

    ಹಜ್‍ನಿಂದ ಬಂದ ಯಾತ್ರಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ಕಾಶ್ಮೀರಿ ಹಿಂದೂಗಳು

    ಶ್ರೀನಗರ: ಸೌದಿ ಅರೇಬಿಯಾದ ಮೆಕ್ಕಾದ ಹಜ್ ಯಾತ್ರೆಯಿಂದ ಹಿಂದಿರುಗಿರುವ ಯಾತ್ರಾರ್ಥಿಗಳನ್ನು ಸ್ಥಳೀಯ ಕಾಶ್ಮೀರಿ ಹಿಂದೂಗಳು ಹಾಡನ್ನು ಹಾಡಿ ಆರತಿ ಮಾಡುವ ಮೂಲಕ ಶ್ರೀನಗರದಲ್ಲಿ ಅದ್ಧೂರಿಯಾಗಿ ಬರಮಾಡಿಕೊಂಡರು.

    ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹಜ್ ಯಾತ್ರೆ ಮುಗಿಸಿ ಬಂದ ಇಸ್ಲಾಮಿಕ್ ಯಾತ್ರಾರ್ಥಿಗಳನ್ನು ಕಾಶ್ಮೀರಿ ಪಂಡಿತರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದು, ಗುಲಾಬಿ ಹೂವುಗಳನ್ನು ನೀಡಿ ಹಸ್ತಾಲಾಘವ ಮಾಡಿದರು. ಈ ಮೂಲಕ ಧಾರ್ಮಿಕ ಸಾಮರಸ್ಯವನ್ನು ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಪ್ರವಾದಿಯ ಹಾಡನ್ನು ಹಾಕಿ ಆರತಿ ಎತ್ತಿ ಯಾತ್ರಾರ್ಥಿಗಳನ್ನು ಸ್ವಾಗತಿಸಿದರು. ಇದನ್ನೂ ಓದಿ: ಭಾರತದ ಗಡಿಯಲ್ಲಿ ಪಾಕ್‌ನ ಡ್ರೋನ್‍ ಹಾರಾಟ

    ಈ ವೀಡಿಯೋವನ್ನು ಉತ್ತರಪ್ರದೇಶದ ಶಾಸಕ ಅಬ್ಬಾಸ್ ಬಿನ್ ಮುಖ್ತಾರ್ ಅನ್ಸಾರಿ ಟ್ವೀಟ್‍ನಲ್ಲಿ ಹಂಚಿಕೊಂಡಿದ್ದಾರೆ. ಶ್ರೀನಗರ ವಿಮಾನ ನಿಲ್ದಾಣದಿಂದ ಸಣ್ಣ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡ ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಬಿನ್ ಮುಖ್ತಾರ್ ಅನ್ಸಾರಿ, ಕಾಶ್ಮೀರಿ ಪಂಡಿತರು ವಿಮಾನ ನಿಲ್ದಾಣದ ಹೊರಗೆ ಸಾಲಿನಲ್ಲಿ ನಿಂತಿದ್ದರು. ಪ್ರವಾದಿ ಮೊಹಮ್ಮದ್ ಅವರನ್ನು ಶ್ಲಾಘಿಸುವ ನಾತ್ ಕವನವನ್ನು ಹಾಡಿ, ಯಾತ್ರೆಗೆ ಅಭಿನಂದನೆ ಸಲ್ಲಿಸಿದರು ಎಂದು ಶಾಸಕ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಿ – ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಅಮರನಾಥ ಯಾತ್ರೆಗೆ ಕೆಲವೇ ದಿನ – ಗಡಿಯಲ್ಲಿ ಶೋಧ ಕಾರ್ಯ ಚುರುಕು

    ಅಮರನಾಥ ಯಾತ್ರೆಗೆ ಕೆಲವೇ ದಿನ – ಗಡಿಯಲ್ಲಿ ಶೋಧ ಕಾರ್ಯ ಚುರುಕು

    ಶ್ರೀನಗರ: ಅಮರನಾಥ ಯಾತ್ರೆಗೆ ಕೆಲವೇ ದಿನಗಳಿರುವ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ(ಐಬಿ) ಉದ್ದಕ್ಕೂ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

    ಅಮರನಾಥ ಯಾತ್ರೆಯ ಗಡಿಯಾಚೆಗಿನ ಸುರಂಗಗಳಲ್ಲಿ ಭಯೋತ್ಪಾದಕರು ಒಳನುಸುಳುವಿಕೆ ಯತ್ನಗಳನ್ನು ತಡೆಯಲು ಭದ್ರತಾ ಪಡೆ ಐಬಿ ಉದ್ದಕ್ಕೂ ಕಾರ್ಯಾಚರಣೆಯನ್ನು ನಡೆಸುತ್ತಿದೆ.

    ಪೊಲೀಸರು, ಸಿಆರ್‌ಪಿಎಫ್ ಮತ್ತು ಬಿಎಸ್‍ಎಫ್ ಜಂಟಿಯಾಗಿ ಸಾಂಬಾ, ಕಥುವಾ ಮತ್ತು ಜಮ್ಮು ಜಿಲ್ಲೆಗಳ ಗ್ರಾಮಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಮೂವರು ಉಗ್ರರ ಹತ್ಯೆ

    ಯಾತ್ರೆ ಯಾವಾಗ?
    43 ದಿನಗಳ ಅಮರನಾಥ ಯಾತ್ರೆಯು ಜೂನ್ 30 ರಂದು ಎರಡು ಮಾರ್ಗಗಳಿಂದ ಪ್ರಾರಂಭವಾಗಲಿದೆ. ಮೊದಲನೆಯದು ದಕ್ಷಿಣ ಕಾಶ್ಮೀರದ ಪಹಲ್ಗಾಮ್‍ನ 48 ಕಿಮೀ ನುನ್ವಾನ್ ಮತ್ತು ಎರಡನೆಯದು ಮಧ್ಯ ಕಾಶ್ಮೀರದ ಗಂದರ್‍ಬಾಲ್‍ನ ಬಾಲ್ಟಾಲ್‍ನಿಂದ 14 ಕಿಮೀವರೆಗೂ ಭಕ್ತಾದಿಗಳು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

    ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲು ಮುಂದಾಗಿದ್ದ ಕೆಲ ಉಗ್ರರನ್ನು ಈಗಾಗಲೇ ಸೇನೆ ಕಾರ್ಯಾಚರಣೆ ನಡೆಸಿ ಹತ್ಯೆ ಮಾಡಿದೆ. ಹೀಗಿದ್ದರೂ ಯಾತ್ರಿಕರ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಐಬಿ ಉದ್ದಕ್ಕೂ ತೀವ್ರ ಶೋಧ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಭಾರದ್ವಾಜ್ ವಿವರಿಸಿದ್ದಾರೆ.

    ಕೋವಿಡ್ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಅಮರಾನಾಥ ಯಾತ್ರೆಗೆ ಸರ್ಕಾರ ಅನುಮತಿ ನೀಡಿರಲಿಲ್ಲ. ಈಗ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದಕ್ಕೆ ಸರ್ಕಾರ ಮತ್ತೆ ಯಾತ್ರೆಗೆ ಅನುಮತಿ ಕೊಟ್ಟಿದೆ.

    Live Tv

  • ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ 5 ವಸತಿ ಗೃಹ ಜಪ್ತಿ

    ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ 5 ವಸತಿ ಗೃಹ ಜಪ್ತಿ

    ಶ್ರೀನಗರ: ಇಲ್ಲಿಯವರೆಗೆ ಉಗ್ರರಿಗೆ ಬಿಸಿ ಮುಟ್ಟಿಸುತ್ತಿದ್ದ ಪೊಲೀಸರು ಈಗ ಜನರಿಗೂ ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ ಶ್ರೀನಗರ 5 ವಸತಿ ಗೃಹವನ್ನು ಪೊಲೀಸರು ಪತ್ತೆ ಮಾಡಿ ಜಪ್ತಿ ಮಾಡಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಶ್ರೀನಗರ ಪೊಲೀಸರು ಭಯೋತ್ಪಾದಕರಿಗೆ ಆಶ್ರಯ ನೀಡಲು ಬಳಸಲಾಗಿದ್ದ ಐದು ವಸತಿ ಗೃಹಗಳ ಮೇಲೆ ದಾಳಿ ಮಾಡಿದ್ದಾರೆ. ನಂತರ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(ಯುಎಪಿಎ) ಅಡಿ ಆ ಐದು ವಸತಿ ಗೃಹಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

    5 Houses Attached In Srinagar For 'Harbouring' Terrorists: Police

    2022 ಜೂನ್ 21ರಂದು, ಯುಎಪಿಎ ಸೆಕ್ಷನ್ 2(ಜಿ) ಮತ್ತು ಸೆಕ್ಷನ್ 25 ರ ಪ್ರಕಾರ ಭಯೋತ್ಪಾದಕರಿಗೆ ಆಶ್ರಯ ಕೊಡುತ್ತಿದ್ದ ಐದು ವಸತಿ ಮನೆಗಳನ್ನು ಜಪ್ತಿ ಮಾಡಲಾಗಿದೆ. ಈ ಮನೆಗಳನ್ನು ಭಯೋತ್ಪಾದನೆಯ ಉದ್ದೇಶಕ್ಕಾಗಿ ಬಳಸಲಾಗಿದೆ ಎಂದು ಸಾಬೀತಾಗಿದೆ. ಈ ಮನೆಗಳಲ್ಲಿ ಉಗ್ರರಿಗೆ ಆಶ್ರಯವನ್ನು ಸ್ವಯಂಪ್ರೇರಣೆಯಿಂದ ಮತ್ತು ಉದ್ದೇಶಪೂರ್ವಕವಾಗಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:  ನನ್ನ ಮಗನನ್ನು ಉಳಿಸು ದೇವರೇ – ಶಿಲುಬೆ ಮುಂದೆ ಕಂದನನ್ನು ಮಲಗಿಸಿದ ದಂಪತಿ 

    ಪರಿಂಪೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆಗಳು ಸೇರಿ ನೌಹಟ್ಟಾ, ಪಂಥಾ ಚೌಕ್ ಮತ್ತು ಜಕುರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಮನೆಯನ್ನು ಜಪ್ತಿ ಮಾಡಲಾಗಿದೆ. ಅಂತಹ ಇನ್ನೂ ಕೆಲವು ಮನೆಗಳನ್ನು ಗುರುತಿಸಲಾಗಿದೆ ಎಂದಿದ್ದಾರೆ.

    ಭಯೋತ್ಪಾದಕರಿಗೆ ಆಶ್ರಯ ನೀಡದಂತೆ ನಾಗರಿಕರಿಗೆ ಮತ್ತೊಮ್ಮೆ ನಾವು ವಿನಂತಿ ಮಾಡಿಕೊಳ್ಳುತ್ತೇವೆ. ಒಂದು ವೇಳೆ ನಾಗರಿಕರು ನಮ್ಮ ಮಾತನ್ನು ಕೇಳಲು ವಿಫಲವಾದರೆ ನಾವು ಅವರ ಮನೆಗಳನ್ನು ಜಪ್ತಿ ಮಾಡಬೇಕಾಗುತ್ತೆ ಎಂದು ಎಚ್ಚರಿಸಿದ್ದಾರೆ.

    ಯಾವುದೇ ಮನೆಗೆ ಭಯೋತ್ಪಾದಕರು ಬಲವಂತವಾಗಿ ಪ್ರವೇಶಿಸಿದರೆ ತಕ್ಷಣವೇ ಅದನ್ನು ಪೊಲೀಸರ ಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.

    Live Tv

  • ಪಾಕಿಸ್ತಾನಿ ಎಲ್‍ಇಟಿ ಉಗ್ರ ಎನ್‍ಕೌಂಟರ್ – ಮೂವರು ಅರೆಸ್ಟ್

    ಪಾಕಿಸ್ತಾನಿ ಎಲ್‍ಇಟಿ ಉಗ್ರ ಎನ್‍ಕೌಂಟರ್ – ಮೂವರು ಅರೆಸ್ಟ್

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ಭದ್ರತಾ ಪಡೆ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ(ಎಲ್‍ಇಟಿ)ನ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದು, ಮೂವರನ್ನು ಬಂಧಿಸಿದೆ.

    ಕಾಶ್ಮೀರ ವಲಯದ ಪೊಲೀಸರು ಟ್ವಿಟ್ಟರ್‌ನಲ್ಲಿ, ಎನ್‍ಕೌಂಟರ್‌ನಲ್ಲಿ ಹಂತನಾದ ಭಯೋತ್ಪಾದಕನನ್ನು ಪಾಕಿಸ್ತಾನಿಯವನು ಗುರುತಿಸಲಾಗಿದೆ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‍ಇಟಿಯೊಂದಿಗೆ ಸಂಪರ್ಕ ಹೊಂದಿದ್ದ. ಬಂಧಿತ ಭಯೋತ್ಪಾದಕರ ಜೊತೆಗೆ ಇನ್ನೂ 2 ರಿಂದ 3 ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    ಕುಪ್ವಾರದ ಲೋಲಾಬ್ ಪ್ರದೇಶದಲ್ಲಿ ಅಡಗಿರುವ ಬಂಧಿತ ಉಗ್ರಗಾಮಿ ಶೋಕೆಟ್ ಅಹ್ಮದ್ ಶೇಖ್ ಬಗ್ಗೆ ಕುಪ್ವಾರ ಪೊಲೀಸರ ಸೇನೆಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆ ಇವರು 28ಆರ್‌ಆರ್‌ನೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

    ಭದ್ರತಾ ಪಡೆ, ಉಗ್ರಗಾಮಿಗಳು ಅಡಗಿಕೊಂಡಿದ್ದ ಜಾಗವನ್ನು ಶೋಧಿಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಪ್ರಾರಂಭ ಮಾಡಿದ್ದು, ನಮ್ಮ ತಂಡವು ಪ್ರತಿದಾಳಿ ನಡೆಸಿದೆ. ಇದರಲ್ಲಿ ಒಬ್ಬ ಉಗ್ರನನ್ನು ಎನ್‍ಕೌಂಟರ್ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ಹೇಳಿದರು.

    Live Tv