Tag: Srinivas Poojary

  • 9 ವರ್ಷದ ಬಾಲಕಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಕ್ಕೆ ಡಿಕೆಶಿ ಕೈ ಬಲಪಡಿಸಬೇಕಾ?: ಹೆಚ್‍ಡಿಡಿ ವಾಗ್ದಾಳಿ

    9 ವರ್ಷದ ಬಾಲಕಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಕ್ಕೆ ಡಿಕೆಶಿ ಕೈ ಬಲಪಡಿಸಬೇಕಾ?: ಹೆಚ್‍ಡಿಡಿ ವಾಗ್ದಾಳಿ

    ಚಿಕ್ಕಮಗಳೂರು: ಒಂಬತ್ತು ವರ್ಷದ ಹುಡುಗಿಯನ್ನು ಎತ್ತುಕೊಂಡು ಹೋಗಿ ಆಸ್ತಿ ಬರೆಸಿದ್ರಲ್ಲಾ ಅದಕ್ಕೆ ಡಿ.ಕೆ ಶಿವಕುಮಾರ್ (DK Shivakumar) ಅವರ ಕೈಯನ್ನ ಬಲಪಡಿಸಬೇಕಾ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota Srinivas poojary) ಪರ ಮತಯಾಚನೆ ಮಾಡಿದ ದೇವೇಗೌಡರು, ಒಕ್ಕಲಿಗ ಸಮುದಾಯ ಹೆಚ್ಚಿರುವ ಕಡೆ ನನ್ನ ಕೈ ಬಲಪಡಿಸಿ ಎಂದು ಹೇಳುತ್ತಿರುವ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಅವರ ಕೈಯನ್ನ ಏಕೆ ಬಲಪಡಿಸಬೇಕು? 9 ವರ್ಷದ ಹುಡುಗಿಯನ್ನು ಎತ್ತುಕೊಂಡು ಹೋಗಿ ಆಸ್ತಿ ಬರೆಸಿಕೊಂಡರಲ್ಲಾ ಅದಕ್ಕಾ ಎಂದು ಪ್ರಶ್ನಿಸಿದ್ದಾರೆ.

    ರಾಮನಗರದ ಬಿಡದಿ ಬಳಿ ಅಮೆರಿಕದಿಂದ ಹಣ ಸಂಪಾದನೆ ಮಾಡಿಕೊಂಡು ಬಂದ ಮನುಷ್ಯನ ಆಸ್ತಿ ಬರೆಸಿಕೊಂಡಿದ್ದರು. ನನ್ನ ಬಳಿ ಎಲ್ಲಾ ದಾಖಲೆಗಳಿವೆ. ಬಿಡದಿ ಹತ್ರ ರಸ್ತೆ ಪಕ್ಕದಲ್ಲಿ ಅವರು ಒಂದು ಐಟಿ ಕಂಪನಿಯನ್ನ ಸ್ಥಾಪನೆ ಮಾಡಿದರು. ಅದರ ಹಿಂದಿನ ದಿನ ಇವರು ಒಂದು ಸುಳ್ಳು ಕ್ರಯ ಪತ್ರ ಮಾಡುತ್ತಾರೆ. ಆಮೇಲೆ ಅವರ 9 ವರ್ಷದ ಮಗಳನ್ನ ತೆಗೆದುಕೊಂಡು ಹೋಗಿ ಪಕ್ಕದ ಮನೆಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಇಡುತ್ತಾರೆ. ನಿನ್ನ ಮಗಳು ಬೇಕು ಅಂದ್ರೆ ಸಹಿ ಮಾಡು ಎಂದು ಧಮ್ಕಿ ಹಾಕುತ್ತಾರೆ. ಆ ತಾಯಿ ಎಲ್ಲಾ ಬರೆದುಕೊಡು, ನನ್ನ ಮಗಳ ಕರೆದುಕೊಂಡು ಬಾರಪ್ಪಾ ಅಂತ ಆಕೆ ಗಂಡನ ಕಾಲು ಹಿಡಿಯುತ್ತಾಳೆ. ನನ್ನ ಬಳಿ ದಾಖಲೆ ಇದೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಅಲ್ಲಿಗೆ ಹೋದಾಗ, ಆ ಮಗುವನ್ನ ದೂರ ಕೂರಿಸಿ ಕಣ್ಣಿಗೆ ಕಟ್ಟಿದ್ದ ಬಟ್ಟೆ ಬಿಚ್ಚುತ್ತಾರೆ. ಆ ಮಗು ಅಪ್ಪ ಅಂತ ಓಡಿ ಬರುತ್ತೆ, ಮತ್ತೆ ಆ ಮಗುವನ್ನ ಒಳಗೆ ಕರೆದುಕೊಂಡು ಹೋಗುತ್ತಾರೆ. ಇದನ್ನ ಎಲೆಕ್ಷನ್ ನಲ್ಲಿ ಬಳಸಿ ಅಂತ ಲಾಯರ್ ತಂದು ಕೊಟ್ಟರು. ಆ ಪುಣ್ಯಾತ್ಮ ನಾನು ಕರ್ನಾಟಕದಲ್ಲಿ ಯಾರಿಗೂ ಮತ ಹಾಕಲ್ಲ. ನಾನು ವೋಟರ್ ಲಿಸ್ಟ್ ನಲ್ಲಿ ಇಲ್ಲ. ಈ ಕರ್ನಾಟಕದ ಸಹವಾಸ ಸಾಕು ಅಂತಾರೆ. ನನಗೆ ಅವರ ಹೆಸರು ಮರೆತು ಹೋಗಿದೆ. ಆಮೇಲೆ ಅವರು ಜೀವನಕ್ಕಾಗಿ ಬೇರೆಯವರ ಅಧೀನದಲ್ಲಿ ಕೆಲಸ ಮಾಡ್ತಾರೆ ಎಂದು ಹೆಚ್‍ಡಿಡಿ ಗರಂ ಆದರು. ಇದನ್ನೂ ಓದಿ: ಅಮೇಠಿಯಿಂದ ಸ್ಪರ್ಧೆ ಮಾಡ್ತೀರಾ ಎಂದು ಕೇಳಿದ್ದಕ್ಕೆ ಇದು ಬಿಜೆಪಿ ಪ್ರಶ್ನೆಯೆಂದ ರಾಹುಲ್‌

    ಆಮೇಲೆ ಹೇ… ಇದನ್ನ ಹೊರಗೆ ಹೇಳಿದ್ರೆ ಏನಾಗುತ್ತೆ ಗೊತ್ತಾ ಅಂತ ಕಬ್ಬನ್ ಪಾರ್ಕ್ ನಲ್ಲಿ ಅವರಿಗೆ ಹೆದರಿಸುತ್ತಾರೆ. ಅವರಿಗೆ ಚೆಕ್ ಕೊಟ್ಟಿದ್ದರು. 16 ಮತ್ತು 4 ಲಕ್ಷಕ್ಕೆ. ಆದರೆ, ಎರಡೂ ಲ್ಯಾಪ್ಸ್ ಆಗುತ್ತದೆ. ಅವರು ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಗೆಲ್ಲುತ್ತಾರೆ. ಡಿಕೆಶಿ ಅವರಿಗೆ ಮುಖ ಭಂಗ ಆಗುತ್ತೆ. ಹೈಕೋರ್ಟ್, ಸುಪ್ರೀಂಕೋರ್ಟಿಗೆ ಹೋದ್ರು ಮುಖಭಂಗ ಆಯ್ತು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷರು ಅಬ್ಬಾ. ಅವರು, ಸೋನಿಯಾ, ರಾಹುಲ್ ಅವರಿಗೆ ಬಹಳ ಸಮೀಪ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪದ ವಾಗ್ದಾಳಿ ನಡೆಸಿದರು.

  • ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ: ಶ್ರೀನಿವಾಸ್ ಪೂಜಾರಿ

    ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ: ಶ್ರೀನಿವಾಸ್ ಪೂಜಾರಿ

    ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬುದು ಸುಳ್ಳು. ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬ ಆರೋಪದ ಬಗ್ಗೆ ಸಿಎಂ ಹಾಗೂ ಶಿಕ್ಷಣ ಸಚಿವರ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು. ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ವಶಕ್ಕೆ

    Priyankkharge

    ಪ್ರಿಯಾಂಕ್ ಖರ್ಗೆ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ಆರೋಪವನ್ನು ತಳ್ಳಿ ಹಾಕಿದ ಸಚಿವರು, ಎಸ್‍ಸಿ, ಎಸ್‍ಟಿಗಳಿಗೆ ನೀಡುವ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವಾಗಿಲ್ಲ. ಎರಡು ಗುಂಪುಗಳ ನಡುವೆ ಟೆಂಡರ್ ಸಿಕ್ಕಿರೋದೆ ಸಂಘರ್ಷಕ್ಕೆ ಕಾರಣವಾಗಿದೆ. ಕೋರ್ಟ್‍ನಲ್ಲಿ ದಾವೆ ಹೂಡಿದ್ರೂ, ಅವರ ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ಮೂರು ಸಾವಿರ ಕೊಳವೆ ಬಾವಿ ಕೊರೆದಿದ್ದಾರೆ. ಅನೇಕ ಕೊಳವೆಬಾವಿ ಆಗಿಲ್ಲ. ಖರ್ಗೆ ಅವರು ಸದನದಲ್ಲಿ ಕೇಳಿದಾಗ ಉತ್ತರ ನೀಡದ್ದೇನೆ. ಟೆಂಡರ್‌ನಲ್ಲಿ ಯಾವುದೇ ಗೋಲ್ಮಾಲ್ ಆಗಿಲ್ಲ. ಈಗಾಗಲೇ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದೇವೆ. ವರದಿ ಬಂದ ಬಳಿಕ ನನ್ನನ್ನೂ ಸೇರಿದಂತೆ ಎಲ್ಲರನ್ನೂ ತನಿಖೆಗೆ ಒಳಪಡಿಸುತ್ತೇನೆ. ಸುಖಾ ಸುಮ್ಮನೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

  • ಮಕ್ಕಳ ಕೈಯಲ್ಲಿ ಕೇಸರಿ ಶಾಲು ಕೊಡ್ತೀರ, ಕಾಶ್ಮೀರ್ ಫೈಲ್ ಚಿತ್ರ ನೋಡಿ ಅಂತೀರ, ದಲಿತರ ಹಣವನ್ನು ಯಾಕೆ ನುಂಗ್ತಿದ್ದೀರ?: ಪ್ರಿಯಾಂಕ್ ಖರ್ಗೆ

    ಮಕ್ಕಳ ಕೈಯಲ್ಲಿ ಕೇಸರಿ ಶಾಲು ಕೊಡ್ತೀರ, ಕಾಶ್ಮೀರ್ ಫೈಲ್ ಚಿತ್ರ ನೋಡಿ ಅಂತೀರ, ದಲಿತರ ಹಣವನ್ನು ಯಾಕೆ ನುಂಗ್ತಿದ್ದೀರ?: ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಮಕ್ಕಳಿಗೆ ಕಿತಾಬ್ ಕೊಡಿ ಎಂದರೆ ಬಿಜೆಪಿ ಸರ್ಕಾರ ಹಿಜಬ್ ವಿವಾದ ಮಾಡುತ್ತಿದೆ. ಮಕ್ಕಳ ಕೈಯಲ್ಲಿ ಕೇಸರಿ ಶಾಲು ಕೊಡ್ತೀರ, ಕಾಶ್ಮೀರ್ ಫೈಲ್ ಚಿತ್ರ ನೋಡಿ ಅಂತೀರ, ದಲಿತರ ಹಣವನ್ನು ಯಾಕೆ ನುಂಗುತ್ತಿದ್ದೀರ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಖಾವೂಂಗಾ, ನಾ ಖಾನೇದೂಂಗ ಎಂದು ಹೇಳಿದ್ದರು. ಆದರೆ, ಈಗಿನ ಬಿಜೆಪಿ ಸರ್ಕಾರ ಮೈಭೀ ಖಾವೂಂಗಾ, ಸಬ್ ಕೋ ಖಿಲಾವೂಂಗಾ ಎನ್ನುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನೋಡಲು ಒಗ್ಗಟ್ಟಾಗಿ ಹೋಗುವ ಮಂತ್ರಿಗಳು ಮತ್ತು ಸರ್ಕಾರ ಒಗ್ಗಟ್ಟಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಕಾಶ್ಮೀರ್ ಫೈಲ್ಸ್ ಬಗ್ಗೆ ಸಾಕಷ್ಟು ಪ್ರಚಾರ ಮಾಡಿದ್ರು. ಬಿಜೆಪಿಯ ಟೂಲ್ ಕಿಟ್ ಕಾಶ್ಮೀರ್ ಫೈಲ್ಸ್. ರಾಜ್ಯ ಸರ್ಕಾರ ಟ್ಯಾಕ್ಸ್ ಫ್ರೀ ಮಾಡಿತು. ಸ್ಪೀಕರ್ ಸಿನಿಮಾ ನೋಡಿ ಅಂದ್ರು. ಆದರೆ ನಾನು ಕೇಳೋದು ಇಷ್ಟೇ ಕಾಶ್ಮೀರ್ ಫೈಲ್ಸ್‌ಗೆ ಇವರು ಇಷ್ಟೊಂದು ಆಸಕ್ತಿ ನೀಡ್ತಾರೆ. ಆದರೆ ರಾಜ್ಯದ ಬಗ್ಗೆ ಇವರಿಗೆ ಆಸಕ್ತಿಯಿಲ್ಲ. ಕರ್ನಾಟಕ ಫೈಲ್ಸ್ ನೋಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

    ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ಯೋಜನೆ ಇವೆ. ಅದರಲ್ಲಿ ಗಂಗಾಕಲ್ಯಾಣ ಯೋಜನೆ ಒಂದು. 14,777 ಬೋರ್‌ವೆಲ್‌ ಕೊರೆಯಲಾಗಿದೆ ಅದರ ಬಗ್ಗೆ ಮಾಹಿತಿ ಕೇಳಿದ್ದೇನೆ. ಡ್ರಿಲ್ಲಿಂಗ್, ಪಂಪ್ ಅಳವಡಿಕೆ, ಪವರ್ ಮೂರು ಹಂತದಲ್ಲಿ ಯೋಜನೆ ಆಗಬೇಕು ಮೊದಲು ಮೂರು ಟೆಂಡರ್ ಕರೆಯಲಾಗ್ತಿತ್ತು. ನಾನು ಸಚಿವನಾಗಿದ್ದಾಗ ಜಿಲ್ಲಾವಾರು ಪ್ಯಾಕೇಜ್ ನೀಡುತ್ತಿದ್ದೆವು. ಒಬ್ಬ ಕಂಟ್ರಾಕ್ಟರ್‌ ಎರಡಕ್ಕಿಂತ ಹೆಚ್ಚು ಕೊಡುತ್ತಿರಲಿಲ್ಲ. ಆಗ ಜಿಲ್ಲಾಧಿಕಾರಿಗಳು ಇದರ ಬಗ್ಗೆ ನೋಡಿಕೊಳ್ಳುತ್ತಿದ್ದರು. ಆದರೆ ಇದೀಗ ಎಲ್ಲ ಬದಲಾಗಿದೆ. ಬಿಜೆಪಿ ಸರ್ಕಾರ ಕೆಬಿಜೆಎನ್ಎಲ್‌ನವರಿಗೆ ಗುತ್ತಿಗೆ ಕೊಟ್ಟಿದ್ದಾರೆ. ಅವರಿಗೆ ಇದರ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಕೇವಲ 10/15 ಜನರಿಗೆ ಮಾತ್ರ ಅವಕಾಶ ಕೊಟ್ಟಿದ್ದಾರೆ. ಇದರಲ್ಲಿ ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಗುತ್ತಿಗೆದಾರನಿಗೆ ಸಂಪೂರ್ಣ ಅನುಭವವಿರಬೇಕು. ಕನಿಷ್ಠ 70 ಬೋರ್‌ವೆಲ್‌ ಕೊರೆಯಿಸಿರಬೇಕು. ಆದರೆ ಅಂತಹ ಅನುಭವವಿಲ್ಲದವರಿಗೆ ಟೆಂಡರ್ ಕೊಟ್ಟಿದ್ದಾರೆ. ಬೋರ್‌ವೆಲ್‌ ಟೆಂಡರ್‌ನಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ:  ಶಿಕ್ಷಣ ಕೇಸರಿಕರಣಗೊಳಿಸೋದ್ರಲ್ಲಿ ತಪ್ಪೇನಿದೆ: ವೆಂಕಯ್ಯ ನಾಯ್ಡು ಪ್ರಶ್ನೆ

    ಟೆಂಡರ್ ಅಕ್ರಮದ ಬಗ್ಗೆ ನನಗಂತೂ ಆಚ್ಚರಿಯಿಲ್ಲ. ನಮ್ಮ ದೇಶದ ಪ್ರಧಾನಿ ಡಿಗ್ರಿಯೇ ಫೇಕ್ ಸಿಗುತ್ತಿದೆ. ಹಾಗಿರಬೇಕಾದರೆ ಟೆಂಡರ್ ಫೇಕ್ ಮಾಡೋದು ಕಷ್ಟವಲ್ಲ. ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಒಳ್ಳೆಯವರು. ಆದರೆ ಅಧಿಕಾರಿಗಳು ಅವರನ್ನ ದಾರಿತಪ್ಪಿಸುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಲಕ್ಷ್ಮಿ ವೆಂಕಟೇಶ್ವರ್ ಎಂಬವರಿಗೆ ಟೆಂಡರ್ ಕೊಟ್ಟಿದ್ದಾರೆ. ಮೊದಲು ಅವರಿಗೆ ಟೆಂಡರ್ ಕೊಟ್ಟಿಲ್ಲ. ಎರಡನೇ ತಿಂಗಳಿಗೆ ಎಲಿಜಬಲ್ ಸರ್ಟಿಫೀಕೆಟ್ ಕೊಡ್ತಾರೆ. ಇದು ಹೇಗೆ ಸಾಧ್ಯ ಅನ್ನೋದು ನಮ್ಮ ಪ್ರಶ್ನೆ. ವಾಲ್ಮೀಕಿ ನಿಗಮದಲ್ಲಿ ಟೆಂಟರ್ ಕ್ಯಾನ್ಸಲ್ ಆಗುತ್ತೆ. ಆದಿ ಜಾಂಬವ ನಿಗಮದಲ್ಲಿ ಕ್ವಾಲಿಫೈ ಆಗುತ್ತೆ. ಒಂದು ಕಡೆ ಇಲ್ಲದ್ದು ಇನ್ನೊಂದು ಕಡೆ ಹೇಗೆ ಕ್ವಾಲಿಫೈ ಆಯ್ತು ಗಂಗಾಕಲ್ಯಾಣ ಯೋಜನೆಯಲ್ಲಿ ದೊಡ್ಡ ಮಟ್ಟದ ಅಕ್ರಮದ ನಡೆದಿದೆ ಎಂದು ಆರೋಪ ಹೊರಿಸಿದ್ದಾರೆ. ಇದನ್ನೂ ಓದಿ: ನಾ ಖಾವೂಂಗ ನಾ ಖಾನೇದೂಂಗ ಎಲ್ಲಿದ್ದಾರೆ? ಪ್ರಧಾನಿ ಮೋದಿ ವಿರುದ್ಧ ಸಿದ್ಧು ಟೀಕೆ

    ಬಡವರ ಯೋಜನೆ ಹಣ ಹೊಡೆಯುವವರ ವಿರುದ್ಧ ಕ್ರಮಕೈಗೊಳ್ಳಿ. ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ದಲಿತರ ಹಣ ಲೂಟಿ ಹೊಡೆದು ಸರ್ಕಾರ ನಡೆಸ್ಬೇಕಾ?. ಯಾಕೆಂದರೆ ಇದು ಎಸ್‍ಸಿ, ಎಸ್‍ಟಿ ವಿಚಾರ. ಮೊದಲು ನಿಮ್ಮ ಸಚಿವರನ್ನು ಕೈಬಿಡಿ ಇಲ್ಲವೇ ಸಿಎಂ ನೀವೇ ಸ್ಥಾನಕ್ಕೆ ರಾಜೀನಾಮೆ ಕೊಡಿ. ನಿಗಮಗಳಲ್ಲಿನ ಅಕ್ರಮಕ್ಕೆ ಬ್ರೇಕ್ ಹಾಕಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ರಾಮುಲ್ಲಾ ಖಾನ್ ಆಗಿದ್ರೆ ಕಾಶ್ಮೀರದಲ್ಲಿ ಸಿದ್ದರಾಮಯ್ಯ ಉಳಿದುಕೊಳ್ಳುತ್ತಿದ್ದರು: ಸಿ.ಟಿ.ರವಿ

    ಬಿಜೆಪಿಯವರು ಪರಿಶಿಷ್ಟ ಜಾತಿ ಪಂಗಡದ ಜನರ ದುಡ್ಡನ್ನು ಸ್ವಾರ್ಥಕ್ಕೆ ಬಳಸಿಕೊಂಡು ಚುನಾವಣಾ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಗಂಗಾಕಲ್ಯಾಣ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಥವಾ ಸಮಾಜಕಲ್ಯಾಣ ಸಚಿವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

  • ವಿದ್ಯಾರ್ಥಿಗಳೇ, ಸರ್ಕಾರಿ ಹಾಸ್ಟೆಲ್ ಮೆನುವಿನಲ್ಲಿರುವ ಈ ಆಹಾರ ನಿಮಗೆ ಸಿಗ್ತಿದೆಯಾ..?

    ವಿದ್ಯಾರ್ಥಿಗಳೇ, ಸರ್ಕಾರಿ ಹಾಸ್ಟೆಲ್ ಮೆನುವಿನಲ್ಲಿರುವ ಈ ಆಹಾರ ನಿಮಗೆ ಸಿಗ್ತಿದೆಯಾ..?

    ಬೆಳಗಾವಿ: ಸರ್ಕಾರಿ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನಿಗದಿಪಡಿಸಿದ ಮೆನು ಚಾರ್ಟ್ ಪ್ರಕಾರವೇ ಆಹಾರ ಪದ್ಧತಿ ಅಳವಡಿಸಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿದ್ದಾರೆ.

    ವಿಧಾನಸಭೆ ಸದಸ್ಯ ನಾಗೇಂದ್ರ ಎಲ್ ಅವರು ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಸರ್ಕಾರ ನೀಡಿದ ಆಹಾರದ ಮೆನು ಇಂತಿದೆ. ಇದನ್ನೂ ಓದಿ: ಸರ್ಕಾರಿ ನೌಕರರು ಬೇಕಾಬಿಟ್ಟಿ ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಹುಷಾರ್!

    ಬೆಳಗ್ಗೆ ತಿಂಡಿ:
    ಪ್ರತಿದಿನ ಒಂದರಂತೆ ಇಡ್ಲಿ ಸಾಂಬಾರ್, ಚಿತ್ರಾನ್ನ, ದೋಸೆ, ಟೊಮ್ಯಾಟೊ ಬಾತ್, ಪೂರಿ ಮತ್ತು ಸಾಗು, ಚಪಾತಿ ಮತ್ತು ಪಲ್ಯ. ಕಾಫಿ/ಟೀ.

    ಪ್ರತಿ ತಿಂಗಳ 8 ಮತ್ತು 23ರಂದು ಬೆಳಗ್ಗಿನ ತಿಂಡಿಗೆ ಬ್ರೆಡ್ ಆಮ್ಲೆಟ್.

    ಮಧ್ಯಾಹ್ನ ಊಟ:
    ಮುದ್ದೆ, ಅನ್ನ ಮತ್ತು ಪ್ರತಿ ದಿನಕ್ಕೆ ಒಂದು ಬಗೆಯ ಬಸ್ಸಾರು/ಪಲ್ಯ, ಸೊಪ್ಪು ಸಾರು/ಮಿಶ್ರ ತರಕಾರಿ ಸಾಂಬಾರ್, ಮಜ್ಜಿಗೆ ಮತ್ತು ಉಪ್ಪಿನಕಾಯಿ. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

    ರಾತ್ರಿ ಊಟ:
    ಮುದ್ದೆ, ಅನ್ನ ಮತ್ತು ಪ್ರತಿ ದಿನಕ್ಕೆ ಒಂದು ಬಗೆಯ ಬೇಳೆ/ಕಾಳು/ಮೊಳಕೆ ಕಾಳು/ತರಕಾರಿ ಮಿಶ್ರಿತ ಸಾಂಬಾರ್, ಮಜ್ಜಿಗೆ ಮತ್ತು ಉಪ್ಪಿನಕಾಯಿ.  ಇದನ್ನೂ ಓದಿ: ವೇಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ: ಜಾರಕಿಹೊಳಿಗೆ ತಿವಿದ ಸಿದ್ದರಾಮಯ್ಯ

    ವಾರಕ್ಕೆ ಮೂರು ಬಾರಿ ಬಾಳೆಹಣ್ಣು, ವಾರಕ್ಕೆ ಮೂರು ಬಾರಿ ಮೊಟ್ಟೆ. ಪ್ರತಿ ವಾರದ ಶುಕ್ರವಾರ ಒಂದೊಂದು ಬಗೆಯ ಸಿಹಿ ಊಟ (ಜಾಮೂನು, ಗೋದಿ ಪಾಯಸ, ಹುಗ್ಗಿ ಇತ್ಯಾದಿ). ಪ್ರತಿ ತಿಂಗಳ 1 ಮತ್ತು 15ರಂದು ರಾತ್ರಿ ಊಟಕ್ಕೆ ಚಿಕನ್.

    ಲಘು ಉಪಹಾರ:
    ಸಂಜೆ 5ರಿಂದ 5.30ರೊಳಗೆ ಪ್ರತಿದಿನ ಒಂದು ಬಗೆಯ ತಿಂಡಿ. ಅವಲಕ್ಕಿ, ಖಾರಾಪುರಿ, ದೋಸೆ, ಬಜ್ಜಿ, ಮಂಡಕ್ಕಿ ಒಗ್ಗರಣೆ, ಖಾರಾಬಾತ್/ಉಪ್ಪಿಟ್ಟು.

    ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಬೂಸ್ಟ್ ಅಥವಾ ಹಾರ್ಲಿಕ್ಸ್. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಕಾಫಿ/ಟೀ ಮತ್ತು ಬಿಸ್ಕೆಟ್/ರಸ್ಕ್.

     

  • ಕಾಂಗ್ರೆಸ್ ಅಪಪ್ರಚಾರಕ್ಕೆ ಜನ ಉತ್ತರಿಸಿದ್ದಾರೆ: ಕೋಟ

    ಕಾಂಗ್ರೆಸ್ ಅಪಪ್ರಚಾರಕ್ಕೆ ಜನ ಉತ್ತರಿಸಿದ್ದಾರೆ: ಕೋಟ

    ಉಡುಪಿ: ಪಾಲಿಕೆ ಚುನಾವಣೆ ಫಲಿತಾಂಶದ ಮೂಲಕ ರಾಜ್ಯದಲ್ಲಿ ಬಿಜೆಪಿ ವಾತಾವರಣ ಉತ್ತಮವಾಗುತ್ತಿದೆ. ಕಾಂಗ್ರೆಸ್‍ನ ಅಪಪ್ರಚಾರ ರಾಜ್ಯದ ಜನಕ್ಕೆ ಅರ್ಥ ಆಗಿದೆ ಹಾಗಾಗಿ ಸರಿಯಾದ ಉತ್ತರ ನೀಡಿದ್ದಾರೆ ಎಂದು ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಪ್ರಚಾರ ಮತ್ತು ಅಪಪ್ರಚಾರದಲ್ಲಿ ತಿರುಳಿಲ್ಲ ಎಂಬುದು ರಾಜ್ಯದ ಜನಕ್ಕೆ ಗೊತ್ತಾಗಿದೆ. ಜನ ಬಿಜೆಪಿ ಮತ್ತು ಪ್ರಧಾನಿ ಮೋದಿಯ ಕಾರ್ಯಶೈಲಿಗೆ ಮತ ಹಾಕಿದ್ದಾರೆ. ಸಿಎಂ ಬೊಮ್ಮಾಯಿ ಓಡಾಟ, ಸಂಘಟನಾತ್ಮಕ ಚಟುವಟಿಕೆಯನ್ನು ನೋಡಿ ಜನ ನಮ್ಮನ್ನು ಗೆಲ್ಲಿಸಿದ್ದಾರೆ. ಜನಪರವಾಗಿರುವ ಬಿಜೆಪಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ ಎಂದು ಅಭಿಪ್ರಾಯಪಟ್ಟರು.

    ಬಿಜೆಪಿಗೆ ಎಲ್ಲಾ ಕಡೆ ಬಹುಮತ ಬಂದಿದೆ. ಅತಂತ್ರ ಇದ್ದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಗರಾಡಳಿತ ಚುನಾವಣೆ ಫಲಿತಾಂಶ ಬಿಜೆಪಿ ಪರವಾಗಿದೆ. ಇಡೀ ರಾಜ್ಯದಲ್ಲಿ ಬಿಜೆಪಿಯ ವಾತಾವರಣ ಉತ್ತಮ ಆಗುತ್ತಿದ್ದು, ಸಮಸ್ಯೆ ಬಗೆಹರಿಸುವ ಶಕ್ತಿ ಬಿಜೆಪಿಗೆ ಇದೆ. ಉತ್ತಮ ಆಡಳಿತ ಕೊಡಲು ಹೊಸ ಯೋಜನೆಗಳನ್ನು ಹಾಕಿಕೊಳ್ಳುತ್ತೇವೆ, ಎಲ್ಲಾ ಮತದಾರರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಕಲಬುರಗಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ಸಿಕ್ಕರೂ ಬಿಜೆಪಿ ಅಧಿಕಾರಕ್ಕೆ

    ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಯಾಕೆ ಸೈಲೆಂಟ್ ಆಗಿದೆ ಗೊತ್ತಿಲ್ಲ. ಜೆಡಿಎಸ್ ಸ್ಪರ್ಧೆ ಮಾಡದಿರುವಲ್ಲಿ ನಮ್ಮ ಸ್ಥಾನಗಳು ಹೆಚ್ಚಾಗಿದೆ. ಜನ ಈ ಬಾರಿ ಅಭಿವೃದ್ಧಿಗಾಗಿ ಮತ ಹಾಕಿದ್ದಾರೆ. ನಗರವ್ಯಾಪ್ತಿಯ ಸಮಸ್ಯೆಗಳನ್ನು ಸರಿಪಡಿಸುವ ಮೂಲಕ ದೇಶದಲ್ಲಿ ಬಿಜೆಪಿ ಉತ್ತಮ ಆಡಳಿತ ಮಾಡುತ್ತಿದೆ ಎಂದರು. ಇದನ್ನೂ ಓದಿ: ಪಾಲಿಕೆ ಚುನಾವಣಾ ಫಲಿತಾಂಶ- ಮತದಾರರಿಗೆ, ಪಕ್ಷದ ಹಿರಿಯ ನಾಯಕರಿಗೆ ಸಿಎಂ ಧನ್ಯವಾದ

  • ಹಿಂದುತ್ವ ನನ್ನ ಮೊದಲ ಆಯ್ಕೆ ಆಮೇಲೆ ಸಚಿವ, ಶಾಸಕ ಸ್ಥಾನ: ಸುನೀಲ್ ಕುಮಾರ್

    ಹಿಂದುತ್ವ ನನ್ನ ಮೊದಲ ಆಯ್ಕೆ ಆಮೇಲೆ ಸಚಿವ, ಶಾಸಕ ಸ್ಥಾನ: ಸುನೀಲ್ ಕುಮಾರ್

    ಉಡುಪಿ: ಹಿಂದುತ್ವ ಮತ್ತು ಅಭಿವೃದ್ಧಿ ವಿಚಾರದಲ್ಲಿ ರಾಜಿಯೇ ಇಲ್ಲ. ಹಿಂದುತ್ವವೇ ನನ್ನ ಮೊದಲ ಆಯ್ಕೆ. ಸಚಿವ, ಶಾಸಕ ಸ್ಥಾನ ಆ ನಂತರದ ಆಯ್ಕೆ ಎಂದು ಉಡುಪಿ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

    ಹೆಜಮಾಡಿ ಮೂಲಕ ಸುನೀಲ್ ಕುಮಾರ್ ಉಡುಪಿ ಜಿಲ್ಲೆಗೆ ಆಗಮಿಸಿದರು. ಬೆಳ್ಮಣ್ ನಲ್ಲಿ ಸಚಿವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಿಜೆಪಿ ನಾಯಕರು, ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುನೀಲ್ ಕುಮಾರ್ ಅವರು, ಸಚಿವನಾಗಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದೇನೆ. ಉಡುಪಿಗೆ ಬರುತ್ತಿರುವುದು ಸಂತೋಷ, ಭಾವನಾತ್ಮಕ ಕ್ಷಣ. ಕಾರ್ಕಳ ಕ್ಷೇತ್ರದ ಜನ ಮೂರುಬಾರಿ ಆಯ್ಕೆ ಮಾಡಿದ್ದರಿಂದ ಸಚಿವನಾದೆ. ಆದರೆ ಯಾವುದೇ ಹಂತದಲ್ಲೂ ಹಿಂದುತ್ವ ವಿಚಾರದಲ್ಲಿ ರಾಜಿ ಮಾಡುವುದಿಲ್ಲ. ಮೊದಲ ಆಯ್ಕೆ ಹಿಂದುತ್ವ ಮತ್ತು ಅಭಿವೃದ್ಧಿ ಎಂದರು.

    ಪಕ್ಷ ದೊಡ್ಡ ಪ್ರಮಾಣದ ಹೊಣೆಗಾರಿಕೆಯನ್ನು ಹೆಗಲಿಗೇರಿಸಿದೆ. ಸಿಎಂ ಮತ್ತು ಪಕ್ಷದ ಹಿರಿಯರ ನಿರೀಕ್ಷೆಯಿಟ್ಟು ಸ್ಥಾನ ಕೊಟ್ಟಿದ್ದಾರೆ. ಜವಾಬ್ದಾರಿ ನಿಭಾಯಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನಗೆ ಇಷ್ಟದ ಖಾತೆ ಎಂದು ಯಾವುದು ಇಲ್ಲ ಮುಖ್ಯಮಂತ್ರಿಗಳು ಕೊಟ್ಟ ಖಾತೆಯನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆ ಎಂದರು. ಇದನ್ನೂ ಓದಿ: ಅಭಿನಂದಿಸಲು ಹಾರ ತುರಾಯಿ ತರಬೇಡಿ, ಪುಸ್ತಕ ತನ್ನಿ: ಸುನೀಲ್ ಕುಮಾರ್

    ಹಿರಿಯರ ಮಾರ್ಗದರ್ಶನದಲ್ಲಿ ಕೆಲಸ
    ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಪಕ್ಷ ಗೌರವ ಕೊಟ್ಟಿದೆ. ಶ್ರೀನಿವಾಸ್ ಶೆಟ್ಟಿಅವರಿಗೆ ಇನ್ನಷ್ಟು ಗೌರವ ಸಿಗಬೇಕು ಎಂಬ ನಿರೀಕ್ಷೆ ಸಹಜ. ಸಚಿವನಾಗಿ ನಾನು ಮಾಡುವ ಕೆಲಸಕ್ಕೆ ಶ್ರೀನಿವಾಸ್ ಶೆಟ್ಟಿ ಬೆಂಬಲ ಬೇಕು. ಸಚಿವ ಶ್ರೀನಿವಾಸ ಪೂಜಾರಿ, ಅಂಗಾರ ಅವರ ಮಾರ್ಗದರ್ಶನದಲ್ಲಿ ನಾನು ನಡೆಯುತ್ತೇನೆ. ಬಿಜೆಪಿ ಹಾಲಾಡಿಯವರನ್ನು ಖಂಡಿತ ಗುರುತಿಸುತ್ತದೆ. ಪಕ್ಷ ಹಾಲಾಡಿಯನ್ನು ಕರೆದು ಮಾತನಾಡಿಸುತ್ತದೆ ಎಂದು ಸುನೀಲ್ ಕುಮಾರ್ ಹೇಳಿದರು.

    ವಿಜಯೇಂದ್ರ ಅವರಿಗೆ ಸೂಕ್ತ ಸ್ಥಾನಮಾನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಅದನ್ನು ತೀರ್ಮಾನಿಸುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ವಿಚಾರಕ್ಕೆ ಹೆಚ್ಚು ಪ್ರತಿಕ್ರಿಯೆ ನೀಡದ ಅವರು, ನಳಿನ್ ಕುಮಾರ್ ಕಟೀಲ್ ಅವರೇ ನಮ್ಮ ಅಧ್ಯಕ್ಷರು ಎಂದರು.

    ಕಾಪು ಶಾಸಕ ಲಾಲಾಜಿ ಮೆಂಡನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಂಗಳೂರು ಶಾಸಕ ಭರತ್ ಶೆಟ್ಟಿ ಸಚಿವರ ಜೊತೆಗಿದ್ದರು.

  • ಚರ್ಚಾಸ್ಪದ ಧ್ವನಿಸುರುಳಿ ಒಂದು ಕುಚೋದ್ಯ: ಶ್ರೀನಿವಾಸ್ ಪೂಜಾರಿ

    ಚರ್ಚಾಸ್ಪದ ಧ್ವನಿಸುರುಳಿ ಒಂದು ಕುಚೋದ್ಯ: ಶ್ರೀನಿವಾಸ್ ಪೂಜಾರಿ

    ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ ಎನ್ನಲಾಗುತ್ತಿರುವ ಚರ್ಚಾಸ್ಪದ ಧ್ವನಿ ಸುರುಳಿ ಒಂದು ಕುಚೋದ್ಯ, ಸುಳ್ಳು ಆಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.

    ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಕುಂದಾಪುರದಲ್ಲಿ ಪ್ರತಿಕ್ರಿಯೆ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ ಅವರು, ನಳಿನ್ ಕುಮಾರ್ ಕಟೀಲ್ ಸಂಘಟನೆಯಿಂದ ಬಂದವರು. ಸಂಘಟನೆಯ ಸೂತ್ರವನ್ನು ತಿಳಿದಿರುವವರು. ರಾಜ್ಯಾಧ್ಯಕ್ಷ ಕಟೀಲ್ ಬಹಳ ಸೂಕ್ಷ್ಮಮತಿಗಳು. ನನಗೆ ಧ್ವನಿಸುರುಳಿ ಬಗ್ಗೆಯೇ ಸಂಶಯವಿದೆ. ಮೊದಲು ಆಡಿಯೋ ಬಗ್ಗೆ ತನಿಖೆಯಾಗಬೇಕು ಎಂದರು.

    ಸಂಪೂರ್ಣ ತನಿಖೆಗೆ ಮುಖ್ಯಮಂತ್ರಿಗಳಲ್ಲಿ ನಾನು ಆಗ್ರಹಿಸುತ್ತಿದ್ದೇನೆ. ನಳಿನ್ ಕುಮಾರ್ ಕಟೀಲ್ ಅವರ ಸ್ವರಭಾರ ಇದಲ್ಲ. ಹಾಗಾಗಿ ನಾನು ಧ್ವನಿಸುರುಳಿಯ ಬಗ್ಗೆ ನನಗೆ ಸಂಶಯವಿದೆ. ಮೊದಲು ತನಿಖೆಯಾಗಲಿ ಎಂದಿದ್ದಾರೆ.

  • ಕೋಟಾ ಶ್ರೀನಿವಾಸ ಪೂಜಾರಿ ಕಾರು ಅಪಘಾತ

    ಕೋಟಾ ಶ್ರೀನಿವಾಸ ಪೂಜಾರಿ ಕಾರು ಅಪಘಾತ

    ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ.

    ಸಚಿವರು ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ನೈಸ್ ರಸ್ತೆಯ ಕದಂಬ ಹೊಟೇಲ್ ಬಳಿ ಕೆಎಸ್‍ಆರ್‍ಟಿಸಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನಯಿಂದ ಶ್ರೀನಿವಾಸ ಪೂಜಾರಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಿಂದ ಕಾರು ಕೂಡ ಹಾನಿಗೊಳಗಾಗಿದೆ. ಈ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

  • ಮಂಡ್ಯದಲ್ಲಿ ನಿಖಿಲ್ ನೋಟು, ಸುಮಲತಾ ವೋಟಿನ ಮಧ್ಯೆ ಸ್ಪರ್ಧೆ- ಶ್ರೀನಿವಾಸ್ ಪೂಜಾರಿ

    ಮಂಡ್ಯದಲ್ಲಿ ನಿಖಿಲ್ ನೋಟು, ಸುಮಲತಾ ವೋಟಿನ ಮಧ್ಯೆ ಸ್ಪರ್ಧೆ- ಶ್ರೀನಿವಾಸ್ ಪೂಜಾರಿ

    ಮಡಿಕೇರಿ: ಮಂಡ್ಯದಲ್ಲಿ ಮೂವರು ಸುಮಲತಾ ಅವರನ್ನು ನಿಲ್ಲಿಸಲಾಗಿದೆ. ಆದರೆ ಬಿಜೆಪಿಯಿಂದ ಸುಮಲತಾ ಅಂಬರೀಶ್ ಗೆ ಸಂಪೂರ್ಣ ಬೆಂಬಲ ನೀಡುತ್ತಿದೇವೆ. ಈ ಬಾರಿ ಮಂಡ್ಯದಲ್ಲಿ ನಿಖಿಲ್ ನೋಟು ಮತ್ತು ಸುಮಲತಾ ವೋಟಿನ ನಡುವೆ ಸ್ಪರ್ಧೆ ನಡೆಯುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಜನಸಾಮಾನ್ಯರ ಸಲಹೆ ಸೂಚನೆ ಪಡೆದು ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ದೇಶದ ಭದ್ರತೆಗೆ ಪ್ರಥಮ ಸ್ಥಾನ, ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ, ಸೇನೆಗೆ ಬೇಕಾದ ವಿಶೇಷ ಉಪಕರಣಗಳ ಪೂರೈಕೆ ನುಸುಳುಕೋರರನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    2030ರ ವೇಳೆಗೆ ಭಾರತದಲ್ಲಿ ಸಂಪೂರ್ಣ ಬಡತನ ನಿರ್ಮೂಲನೆ ಮಾಡುವುದು ಬಿಜೆಪಿ ಪಕ್ಷದ ಗುರಿಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಖಚಿತ. ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಅಂದ್ರು.

    2022 ರ ಒಳಗೆ ರೈಲ್ವೆ ಟ್ರ್ಯಾಕ್ ಸಂಪೂರ್ಣ ಅಳವಡಿಕೆ ಭಾರತೀಯ ಜನತಾ ಪಕ್ಷದಿಂದ ಸ್ಪಷ್ಟ ನಿಲುವು. ಉಗ್ರವಾದಕ್ಕೆ ಯುಪಿಎ ಸರ್ಕಾರದಿಂದ ಬೆಂಬಲ ನೀಡುತ್ತಿದೆ. ಆದರೆ ಉಗ್ರವಾದದ ವಿರುದ್ಧ ಎನ್ ಡಿಎ ನಿಲುವು ತೆಗೆದುಕೊಳ್ಳಲಿದೆ. ಮಂಗಳವಾರ ಪ್ರಧಾನಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ 22 ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

    ನರೇಂದ್ರ ಮೋದಿಯನ್ನು ಸೋಲಿಸಲು ಕರ್ನಾಟಕದಲ್ಲಿ ಹೊಂದಾಣಿಕೆಯಾಗಿದೆ. ಜನ ನಗುವಂತ ವಾತವರಣ ನಿರ್ಮಾಣ ಮಾಡಿದ್ದಾರೆ. ಗೆದ್ದೆ ಗೆಲ್ಲುತ್ತೇವೆ ಎನ್ನುವ ಮೈತ್ರಿ ಸರ್ಕಾರಕ್ಕೆ ಸೋಲು ಖಚಿತವಾಗಿದೆ.

  • ವಿಧಾನಸೌಧದೊಳಗೆ ಸದಾ ನಿದ್ದೆ ಮಾಡ್ತಿದ್ರೆ ಯಾರ್ ಬಂದ್ ಹೋದ್ರೂ ಗೊತ್ತಾಗಲ್ಲ- ಶ್ರೀನಿವಾಸ ಪೂಜಾರಿ

    ವಿಧಾನಸೌಧದೊಳಗೆ ಸದಾ ನಿದ್ದೆ ಮಾಡ್ತಿದ್ರೆ ಯಾರ್ ಬಂದ್ ಹೋದ್ರೂ ಗೊತ್ತಾಗಲ್ಲ- ಶ್ರೀನಿವಾಸ ಪೂಜಾರಿ

    ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾಗರಿಕ. ನಾಗರೀಕತೆ ಇದ್ದವರ ರೀತಿಯಲ್ಲಿ ಅವರು ಮಾತನಾಡುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.

    ಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆ ಸಂದರ್ಭದಲ್ಲಿ ಕುಂದಾಪುರ ಶಾಸಕ ಹಾಲಾಡಿ ಯಾವಾನೋ ನೋಡೇ ಇಲ್ಲ. ಹಾಲಾಡಿ ಶ್ರೀನಿವಾಸ ಶೆಟ್ಟಿ ನನಗೆ ಗೊತ್ತೇ ಇಲ್ಲ ಎಂದಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದ್ದು, ಹಾಲಾಡಿ ಶ್ರೀನಿವಾಸ ಶೆಟ್ಟಿ 5 ಬಾರಿ ಶಾಸಕರಾಗಿದ್ದಾರೆ. ಹಾಲಾಡಿಯವರ ಮುಖವನ್ನೇ ನೋಡಿಲ್ಲಾಂತ ಸಿದ್ದರಾಮಯ್ಯ ಹೇಳ್ತಾರೆ. ವಿಧಾನಸೌಧಗೊಳಗೆ ನೀವು ಸದಾ ನಿದ್ದೆ ಮಾಡುತ್ತಿದ್ರಾ? ಯಾರು ಬಂದ್ರೂ ಯಾರು ಹೋದ್ರೂ ನಿಮಗೆ ಗೊತ್ತಾಗಲ್ಲ. ಎಚ್ಚರ ಇದ್ದವರಿಗೆ ಎಲ್ಲವೂ ಗೊತ್ತಾಗುತ್ತದೆ ಅಂತ ಛಾಟಿ ಬೀಸಿದ್ರು.

    ಸಿದ್ದರಾಮಯ್ಯ ಖಾಯಂ ನಿದ್ರೆಯಲ್ಲೇ ಇದ್ದವರು. ನೀವು ನಿದ್ದೆಯಿಂದ ಎದ್ದಾಗ ಕಾಲ ಮಿಂಚಿ ಹೋಗಿದೆ. ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಏಕವಚನ ಬಳಸಿದ್ದೀರಿ. ಸಿದ್ದರಾಮಯ್ಯ ಪದಬಳಕೆ ಅವರ ಅನಾಗರೀಕತೆ ತೋರಿಸುತ್ತದೆ. ಅವರಿಗೆ ನಾಗರೀಕತೆ ಇಲ್ಲ ಎಂದು ಶ್ರೀನಿವಾಸ ಪೂಜಾರಿ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಯಾವನೋ ಶ್ರೀನಿವಾಸ ಶೆಟ್ಟಿ ಅಂದ ಸಿದ್ದರಾಮಯ್ಯಗೆ ಹಾಲಾಡಿ ತಿರುಗೇಟು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv