Tag: srirangapattana

  • ʻಆಪರೇಷನ್‌ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ

    ʻಆಪರೇಷನ್‌ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ

    ಮಂಡ್ಯ: ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ (Operation Sindoor) ಯಶಸ್ವಿಯಾಗಿ ನಡೆಸಿದೆ. ಇದರ ಬೆನ್ನಲ್ಲೆ, ಕರ್ನಾಟಕ ಸರ್ಕಾರವು (Karnataka Government) ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಮತ್ತು ಸಂಕಲ್ಪ ಮಾಡಲು ಆದೇಶಿಸಿದೆ.

    ಸಚಿವ ರಾಮಲಿಂಗಾರೆಡ್ಡಿ ಅವರು ಭಾರತೀಯ ಸೇನೆಗೆ ಶುಭ ಹಾರೈಸಿದ್ದಾರೆ ಮತ್ತು ಯೋಧರಿಗೆ ಒಳಿತಾಗಲೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲು ಸೂಚಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇಗುಲದಲ್ಲಿ (Nimishambha Temple) ಸೈನಿಕರ ಹೆಸರಲ್ಲಿ ಪೂಜೆ ಸಲ್ಲಿಸಲಾಗಿದೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

    ರಾಜ್ಯದ ಪ್ರಸಿದ್ಧ ದೇಗುಲದಲ್ಲಿ ಒಂದಾದ ಮಂಡ್ಯ ಜಿಲ್ಲೆಯ ನಿಮಿಷಾಂಭ ದೇಗುಲದಲ್ಲಿ ಇಂದು ಮುಂಜಾನೆ ಸೈನಿಕರಿಗಾಗಿ ದೇವಿಗೆ ಮೊದಲ ಪೂಜೆ ಸಲ್ಲಿಕೆ ಮಾಡಲಾಗಿದೆ. ದೇವಸ್ಥಾನದ ಮುಖ್ಯ ಅರ್ಚಕರು ಸೈನಿಕರಿಗಾಗಿ ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: Operation Sindoor | ಪಾಕ್ ಉಗ್ರ ತಾಣಗಳ ಮೇಲೆ ಏರ್‌ಸ್ಟ್ರೈಕ್‌ – ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

    ದೇಶಕಾಯುವ ಯೋಧರಿಗೆ ಯಾವುದೇ ತೊಂದರೆ ಆಗದಂತೆ ಕಾಪಾಡುವಂತೆ ಪ್ರಾರ್ಥಿಸಿ ಸಂಕಲ್ಪ ಮಾಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್‌ – ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ

  • ಅಪ್ಪು ಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಯುವಕ ಆತ್ಮಹತ್ಯೆಗೆ ಶರಣು

    ಅಪ್ಪು ಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಯುವಕ ಆತ್ಮಹತ್ಯೆಗೆ ಶರಣು

    ಮಂಡ್ಯ: ಅಭಿಮಾನಿಗಳ ಆರಾಧ್ಯ ದೈವವಾಗಿರುವ ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ (Puneeth Rajkumar) ಅಗಲಿ ಒಂದು ವರ್ಷ ಕಳೆದಿದೆ. ಈ ನಡುವೆ ಅಪ್ಪು ಸ್ಮರಣೆಯಲ್ಲಿ ಭಾಗವಹಿಸಿದ್ದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ (SrirangaPattana) ನಡೆದಿದೆ.

    ಕೇವಲ ಬೆಂಗಳೂರಷ್ಟೇ ಅಲ್ಲದೇ ರಾಜ್ಯದ ಎಲ್ಲ ಭಾಗಗಳಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಪುನೀತ್‍ರನ್ನು ಅಭಿಮಾನಿಗಳು ನಿನ್ನೆ ಸ್ಮರಿಸಿದ್ದಾರೆ. ಈ ನಡುವೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ಅಪ್ಪು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಸಿಗರೇಟು ಸೇದೋಕೆ ಕಾರು ನಿಲ್ಲಿಸಿದ ಮಾಲೀಕ – 75 ಲಕ್ಷ ಹಣದೊಂದಿಗೆ ಚಾಲಕ ಎಸ್ಕೇಪ್

    ಹೊಸ ಆನಂದೂರು ಗ್ರಾಮದ ಕಿರಣ್(22) ಮೃತ ಯುವಕ. ಶನಿವಾರ ಗ್ರಾಮದಲ್ಲಿ ನಡೆದ ಅಪ್ಪು ಸ್ಮರಣೆಯಲ್ಲಿ ಭಾಗವಹಿಸಿ, ಅನ್ನಸಂತರ್ಪಣೆ ಕೂಡ ನಡೆಸಿದ್ದ. ಆದರೆ ಕಾರ್ಯಕ್ರಮದ ಬಳಿಕ ಮನೆಗೆ ರಾತ್ರಿ 10 ಗಂಟೆಯಲ್ಲಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಹುಭಾಷಾ ಹಿರಿಯ ನಟಿ ವಿನಯ ಪ್ರಸಾದ್ ಮನೆ ದೋಚಿದ ಖದೀಮರು

    ಶನಿವಾರ ನಗರದ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಮೊದಲ ವರ್ಷದ ಪುಣ್ಯಸ್ಮರಣೆ ನಡೆಯಿತು. ಅಪ್ಪು ಅಗಲಿ ಒಂದು ವರ್ಷಗಳೆದರೂ ಅಭಿಮಾನಿಗಳ ಮನಸ್ಸಿನಲ್ಲಿ ಹಾಗೆಯೇ ಉಳಿದಿದ್ದಾರೆ. ಅವರ ನೆನಪುಗಳು ಅಭಿಮಾನಿಗಳನ್ನು ಕಾಡುತ್ತಲೇ ಇದೆ. ಇಂದಿಗೂ ಪುನೀತ್ ಇಲ್ಲ ಎಂಬ ಸತ್ಯವನ್ನು ಎಷ್ಟೋ ಮಂದಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಈ ಮಧ್ಯೆ ಪುನೀತ್ ಸಮಾಧಿಗೆ ರಾಜ್ಯದ ನಾನಾ ಕಡೆಯಿಂದ ಆಗಮಿಸಿ ಜನ ಶನಿವಾರ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಅಪ್ಪು ಹೆಸರಲ್ಲಿ ಅನ್ನ ಸಂತರ್ಪಣೆ, ರಕ್ತದಾನ ಶಿಬಿರ ಹೀಗೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಅಭಿಮಾನಿಗಳು ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾವೇರಮ್ಮನ ಮಡಿಲಿಗೆ ಅಂಬಿ – ಶ್ರೀರಂಗಪಟ್ಟಣದ ಸಂಗಮದಲ್ಲಿ ಅಭಿಯಿಂದ ಅಸ್ಥಿ ವಿಸರ್ಜನೆ

    ಕಾವೇರಮ್ಮನ ಮಡಿಲಿಗೆ ಅಂಬಿ – ಶ್ರೀರಂಗಪಟ್ಟಣದ ಸಂಗಮದಲ್ಲಿ ಅಭಿಯಿಂದ ಅಸ್ಥಿ ವಿಸರ್ಜನೆ

    – ದರ್ಶನ್, ರಾಕ್‍ಲೈನ್, ದೊಡ್ಡಣ್ಣ ಸೇರಿ ಹಲವರು ಭಾಗಿ

    ಮಂಡ್ಯ: ಮಂಡ್ಯದ ಗಂಡು ಅಂಬರೀಶ್ ಅವರ ಅಸ್ಥಿಯನ್ನು ಶ್ರೀರಂಗಪಟ್ಟಣದಲ್ಲಿರುವ ಸಂಗಮದಲ್ಲಿ ವಿಸರ್ಜನೆ ಮಾಡಲಾಗಿದೆ. ಮೂರು ಮಡಿಕೆಗಳಲ್ಲಿದ್ದ ಅಸ್ಥಿಯನ್ನು ಶಾಸ್ತ್ರೋಕ್ತವಾಗಿ ಪುತ್ರ ಅಭಿಷೇಕ್ ವಿಸರ್ಜನೆ ಮಾಡಿದರು.

    ಒಟ್ಟು ಆರು ಮಡಿಕೆಗಳಲ್ಲಿ ಅಂಬರೀಶ್ ಅಸ್ಥಿಯನ್ನ ಸಂಚಯನ ಮಾಡಲಾಗಿದೆ. ಇದರಲ್ಲಿ ಮೂರು ಮಡಿಕೆಗಳಲ್ಲಿರುವ ಅಸ್ಥಿಯನ್ನ ಶ್ರೀರಂಗಪಟ್ಟಣದ ಸಂಗಮದಲ್ಲಿ ವಿಸರ್ಜನೆ ಮಾಡಲಾಗಿದೆ. ಇನ್ನೊಂದು ಮಡಿಕೆಯಲ್ಲಿರುವ ಅಸ್ಥಿಯನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಇಡಲಾಗುತ್ತದೆ. ಮತ್ತೊಂದು ಮಡಿಕೆಯಲ್ಲಿರುವ ಅಸ್ಥಿಯನ್ನು ನಿರ್ಮಾಪಕರ ಸಂಘದ ಕಚೇರಿಯಲ್ಲಿ ಇಡಲಾಗುತ್ತದೆ. ಮಗದೊಂದು ಮಡಿಕೆಯಲ್ಲಿರುವ ಅಸ್ಥಿಯನ್ನು ಕಂಠೀರವ ಸ್ಟುಡಿಯೋದಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ಬಳಸಲಾಗುತ್ತದೆ.

    ಇದಕ್ಕೂ ಮೊದಲು ಶನಿವಾರ ಕರುನಾಡನ್ನೇ ಅಗಲಿದ ಕಲಿಯುಗದ ಕರ್ಣ, ಮಂಡ್ಯದ ಗಂಡು ಅಂಬರೀಶ್ ಸಮಾಧಿಯಲ್ಲಿ ಅಸ್ಥಿ ಸಂಚಯನ ನಡೆಯಿತು. ಪುತ್ರ ಅಭಿಷೇಕ್, ಪತ್ನಿ ಸುಮಲತಾ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಅಂಬಿ ಆಪ್ತರಾದ ಶ್ರೀನಿವಾಸ್, ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟ ದೊಡ್ಡಣ್ಣ, ಶಾಸಕ ಮುನಿರತ್ನ, ಸಾರಾ ಗೋವಿಂದು ಸೇರಿದಂತೆ ಹಲವಾರು ಭಾಗಿಯಾಗಿದ್ದರು.

    ರೆಬೆಲ್ ಸ್ಟಾರ್ ಗೆ ತಾವು ಬದುಕಲ್ಲ ಅನ್ನೋ ಸುಳಿವು ಮೊದಲೇ ಸಿಕ್ಕಿತ್ತಾ..? ಎಂಬ ಪ್ರಶ್ನೆಯೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಯಾಕಂದ್ರೆ ನಾಲ್ಕು ತಿಂಗಳ ಹಿಂದೆಯಷ್ಟೇ ಅಂಬರೀಶ್ ಮಗನ ಹೆಸರಿಗೆ ತಮ್ಮ ಆಸ್ತಿಯನ್ನು ವರ್ಗಾಯಿಸಿದ್ದರು. ಹುಟ್ಟೂರು ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆ ಗ್ರಾಮದಲ್ಲಿದ್ದ 7 ಎಕರೆಯಷ್ಟು ಪ್ರಿತಾರ್ಜಿತ ಆಸ್ತಿಯನ್ನು ಮಗನ ಹೆಸರಲ್ಲಿ ನೋಂದಣಿ ಮಾಡಿಸಿದ್ದರು. ಮದ್ದೂರು ಪಟ್ಟಣದಲ್ಲಿರುವ ಸಬ್‍ರಿಜಿಸ್ಟ್ರಾರ್ ಕಚೇರಿಯಲ್ಲಿ ಪುತ್ರ ಅಭಿಷೇಕ್ ಜೊತೆಗೆ ಆಗಮಿಸಿ ಆಸ್ತಿ ವರ್ಗಾವಣೆ ಮಾಡಿದ್ದರು.

    https://www.youtube.com/watch?v=IkWFM7AVeI4

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ದೇವಾಲಯಕ್ಕೆ ತೆರಳುತ್ತಿದ್ದ ಮಹಿಳೆಯನ್ನ ಅಪಹರಿಸಿ ಗ್ಯಾಂಗ್ ರೇಪ್

    ದೇವಾಲಯಕ್ಕೆ ತೆರಳುತ್ತಿದ್ದ ಮಹಿಳೆಯನ್ನ ಅಪಹರಿಸಿ ಗ್ಯಾಂಗ್ ರೇಪ್

    ಮಂಡ್ಯ: ದೇವಾಲಯಕ್ಕೆ ತೆರಳುತ್ತಿದ್ದ ಗೃಹಿಣಿಯನ್ನು ಕಾರಿನಲ್ಲಿ ಅಪಹರಿಸಿ ಮೂವರು ದುಷ್ಕರ್ಮಿಗಳು ಅತ್ಯಾಚಾರಗೈದಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 4ರಂದು ಘಟನೆ ನಡೆದಿದ್ದು, ಬುಧವಾರ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಸಂಜಯ್, ಬಿಡ್ಡಾ ಮತ್ತು ರಮೇಶ್ ಅತ್ಯಾಚಾರ ಪ್ರಕರಣದ ಆರೋಪಿಗಳು. ಎಲ್ಲ ಆರೋಪಿಗಳು ಹಾಗು ಸಂತ್ರಸ್ತ ಮಹಿಳೆ ಒಂದೇ ಗ್ರಾಮದವರಾಗಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಜೂನ್ 4ರಂದು ಮಹಿಳೆ ಕರಿಘಟ್ಟ ದೇವಾಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಮಹಿಳೆಯನ್ನು ಅಡ್ಡಗಟ್ಟಿದ ಕಾಮುಕರು ಅಪಹರಿಸಿ, ಗೌತಮಕ್ಷೇತ್ರದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಿದ್ದಾರೆ. ಅತ್ಯಾಚಾರದ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಇನ್ನೊಮ್ಮೆ ಕರೆದಾಗ ನೀನಾಗಿಯೇ ಬರಬೇಕು, ಇಲ್ಲವಾದ್ರೆ ವಿಡಿಯೋ ತೋರಿಸಿ ಮಾನ ಹರಾಜು ಹಾಕಲಾಗುವುದು. ಒಂದು ವೇಳೆ ವಿಷಯವನ್ನು ಯಾರಿಗಾದ್ರೂ ತಿಳಿಸಿದ್ರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

    ಸಂತ್ರಸ್ತೆ ಬುಧವಾರ ರಾತ್ರಿ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ದೂರು ದಾಖಲಾಗುತ್ತಿದ್ದಂತೆ ಮೂವರು ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

  • ಶ್ರೀರಂಗಪಟ್ಟಣದಲ್ಲಿ ರಂಗೇರುತ್ತಿದೆ ಚುನಾವಣೆ ಕಾವು- ಮತದಾರರ ಸೆಳೆಯಲು ಕೈ ನಾಯಕರಿಂದ ಭರ್ಜರಿ ಬಾಡೂಟ

    ಶ್ರೀರಂಗಪಟ್ಟಣದಲ್ಲಿ ರಂಗೇರುತ್ತಿದೆ ಚುನಾವಣೆ ಕಾವು- ಮತದಾರರ ಸೆಳೆಯಲು ಕೈ ನಾಯಕರಿಂದ ಭರ್ಜರಿ ಬಾಡೂಟ

    ಮಂಡ್ಯ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತದಾರರನ್ನು ಸೆಳೆಯಲು ಮಂಡ್ಯದಲ್ಲಿ ಭರ್ಜರಿ ಬಾಡೂಟದ ವ್ಯವಸ್ಥೆಯನ್ನು ನಾಯಕರು ಜೋರಾಗಿ ಮಾಡುತ್ತಿದ್ದಾರೆ.

    ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ಇಂದು ಇಂಡವಾಳು ಗ್ರಾಮದಲ್ಲಿ ಸಾವಿರಾರು ಕಾರ್ಯಕರ್ತರಿಗೆ ಬಾಡೂಟ ಹಾಕಿಸುವ ಮೂಲಕ ಭರ್ಜರಿ ಚುನಾವಣೆ ಪ್ರಚಾರ ಮಾಡಿದ್ರು. ಮೊಟ್ಟೆ, ಚಿಕನ್, ಮಟನ್, ಗೀರೈಸ್ ಸೇರಿದಂತೆ ಬಗೆ ಬಗೆಯ ಭಕ್ಷ್ಯ ಭೋಜನದ ವ್ಯವಸ್ಥೆಯನ್ನು ಕಾರ್ಯಕರ್ತರಿಗೆ ಮಾಡಲಾಗಿತ್ತು.

    ಶ್ರೀರಂಪಟ್ಟಣ ಕ್ಷೇತ್ರದ ಶಾಸಕರಾಗಿರುವ ರಮೇಶ್‍ಬಾಬು ಬಂಡಿಸಿದ್ದೇಗೌಡ ಜೆಡಿಎಸ್‍ನಿಂದ ಈಗಾಗಲೇ ಅಮಾನತ್ತಾಗಿದ್ದಾರೆ. ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಖಚಿತ ಎಂಬ ಮಾತು ಕೇಳಿಬರುತ್ತಿದೆ.

    ಆದ್ರೆ ಎಲ್ಲಾ ಊಹಾಪೋಹವನ್ನು ನಿರಾಕರಿಸುತ್ತಿರುವ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ, ರಮೇಶ್‍ಬಾಬು ಬಂಡಿಸಿದ್ದೇಗೌಡ ಅವರಿಗೆ ಕಾಂಗ್ರೆಸ್‍ನಿಂದ ಎಲ್ಲಾ ರೀತಿಯ ಲೆಕ್ಕ ಚುಕ್ತಾ ಮಾಡಲಾಗಿದೆ. ಅವರಿಗೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವುದಿಲ್ಲ. ನಾನೂ ಕೂಡ ಕಾಂಗ್ರೆಸ್ ಪಕ್ಷದ ವರಿಷ್ಠರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಅವರೂ ಕೂಡ ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರಚಾರ ಶುರು ಮಾಡಿದ್ದೇನೆ ಅಂತಿದ್ದಾರೆ.

    ಪ್ರಚಾರದಲ್ಲಿ ಪಾಲ್ಗೊಂಡು ಭರ್ಜರಿ ಬಾಡೂಟ ಸವಿದ ಕಾರ್ಯಕರ್ತರು ನಮ್ಮ ಸಚ್ಚಿಯಣ್ಣ ಚುನಾವಣೆಯಲ್ಲಿ ಗೆಲ್ಲೋದು ಗ್ಯಾರಂಟಿ ಅಂತಿದ್ದಾರೆ. ಒಟ್ಟಾರೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ.

  • ನಿಮಿಷಾಂಬಾ ದೇವಿ ಸನ್ನಧಿಯಲ್ಲೇ ಸೀರೆ ಗೋಲ್ಮಾಲ್ – ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ

    ನಿಮಿಷಾಂಬಾ ದೇವಿ ಸನ್ನಧಿಯಲ್ಲೇ ಸೀರೆ ಗೋಲ್ಮಾಲ್ – ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂನಲ್ಲಿರುವ ನಿಮಿಷಾಂಬಾ ದೇವಾಲಯ ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದಿದೆ. ನಿಮಿಷಾಂಬಾ ದೇವಿ ಯಾವುದೇ ಭಕ್ತರು ವರ ಕೇಳಿದ್ರೆ ನಿಮಿಷದಲ್ಲಿ ನೆರವೇರಿಸುತ್ತಾಳೆ ಎಂಬುದು ಭಕ್ತರ ನಂಬಿಕೆ. ಆದ್ರೆ ದೇವಿಗೆ ಭಕ್ತರು ನೀಡುವ ಕಾಣಿಕೆ ಸೀರೆಗಳೇ ಕಳ್ಳತನವಾಗುತ್ತಿದ್ದು, ದೇವಾಲಯದ ಸಿಸಿಟಿವಿ ದೃಶ್ಯಗಳು ಕೂಡ ಅನುಮಾನಕ್ಕೆ ಸಾಕ್ಷಿ ಎಂಬಂತಿವೆ.

    ನಿಮಿಷಾಂಬಾ ದೇವಾಲಯಕ್ಕೆ ದೇಶ ವಿದೇಶಗಳಿಂದ ಬರುವ ಭಕ್ತರು ತಾಯಿ ನಮಗೆ ಒಳ್ಳೆಯದು ಮಾಡು ಎಂದು ಸೀರೆ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಭಕ್ತರು ನೀಡಿದ ಸೀರೆಗಳನ್ನು ಸಾರ್ವಜನಿಕರು ಖರೀದಿಸಲು ಅವಕಾಶವಿದೆ. ಸೀರೆ ಮಾರಾಟದ ಮೂಲಕ ದೇವಾಲಯದ ಆದಾಯವನ್ನು ಹೆಚ್ಚಿಸಿಕೊಳ್ಳುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ಧತಿ.

    ಈ ಹಿಂದೆ ದೇವಾಲಯದ ಅರ್ಚಕರಾಗಿದ್ದ ಸೂರ್ಯನಾರಾಯಣ ಭಟ್ ಮೇಲೆ ಸೀರೆ ಕಳವು ಆರೋಪ ಕೇಳಿಬಂದಿತ್ತು. ಆದ್ರೆ ಆರೋಪ ನಿರಾಕರಿಸಿರುವ ಸೂರ್ಯನಾರಾಯಣ ಭಟ್, ನಾನು ದೇವಾಲಯದ ಸೀರೆಯನ್ನು ದುಡ್ಡು ಕೊಟ್ಟು ತೆಗೆದುಕೊಂಡು ಹೋಗಿದ್ದೇನೆ. ಅದಕ್ಕೆ ನನ್ನ ಬಳಿ ಬಿಲ್ ಇದೆ. ಆದ್ರೆ ಬೇರೆಯವರ ತಪ್ಪನ್ನು ಮುಚ್ಚಿಹಾಕಲು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ತಮ್ಮ ಮೇಲೆ ಸುಳ್ಳು ಆರೋಪ ಮಾಡಿ ಪ್ರಕರಣದ ದಿಕ್ಕು ತಪ್ಪಿಸಲು ಹೊರಟವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ರು.

    ಅರ್ಚಕ ಸೂರ್ಯನಾರಾಯಣ ಭಟ್ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ನಡುವೆಯೇ ದೇವಾಲಯದ ಸಿಸಿಟಿವಿ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ದೇವಸ್ಥಾನದಲ್ಲಿ ಕೆಲಸ ಮಾಡುವವರಲ್ಲಿ ಕೆಲವರು ತಮ್ಮ ಪಾಡಿಗೆ ತಾವು ಸೀರೆಯನ್ನು ಬಿಲ್ ಹಾಕಿಸದೇ ತೆಗೆದುಕೊಂಡು ಹೋಗುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ.

    ಅದರ ಜೊತೆಗೆ ಈ ಹಿಂದೆ ಸೀರೆ ಕಳ್ಳತನದ ಆರೋಪದ ಮೇಲೆ ಪುಟ್ಟು ಎಂಬವರನ್ನು ದೇವಾಲಯದ ಕೆಲಸದಿಂದ ವಜಾ ಮಾಡಲಾಗಿತ್ತು. ಆದ್ರೆ ಸಿಸಿಟಿವಿಯಲ್ಲಿ ದಾಖಲಾಗಿರುವ ದೃಶ್ಯದಲ್ಲಿ ಕೆಲಸದಿಂದ ವಜಾಗೊಂಡ ಪುಟ್ಟುವಿನ ರೀತಿ ಹಲವರು ದೇವಾಲಯದ ಸೀರೆ ಕದಿಯುತ್ತಿರಬಹುದೆಂಬ ಅನುಮಾನ ಮೂಡಿದೆ.

    ದೇವಾಲಯದಲ್ಲಿ ಸೀರೆ ಕಳುವಾಗುತ್ತಿದೆ ಎಂಬ ಮಾತು ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಅಧಿಕಾರಿಗಳು ಈ ಕೂಡಲೇ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆ ಮೂಲಕ ದೇವಾಲಯದ ಪಾವಿತ್ರ್ಯತೆ ಕಾಪಾಡಬೇಕೆಂದು ಭಕ್ತರು ಆಗ್ರಹಿಸುತ್ತಿದ್ದಾರೆ.

  • ಮನೆಯಲ್ಲಿ ಮುದ್ದು ಕಂದಮ್ಮನ ಬಿಟ್ಟು ಅವಿವಾಹಿತ ಮಹಿಳೆಯೊಂದಿಗೆ ತಾಯಿ ಎಸ್ಕೇಪ್!

    ಮನೆಯಲ್ಲಿ ಮುದ್ದು ಕಂದಮ್ಮನ ಬಿಟ್ಟು ಅವಿವಾಹಿತ ಮಹಿಳೆಯೊಂದಿಗೆ ತಾಯಿ ಎಸ್ಕೇಪ್!

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀನಿವಾಸ ಅಗ್ರಹಾರದಲ್ಲಿ ಗೃಹಿಣಿಯೊಬ್ಬರು ಅವಿವಾಹಿತ ಮಹಿಳೆಯೊಂದಿಗೆ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಪ್ರಿಯದರ್ಶಿನಿ(22) ಮತ್ತು ಮಾಹಾದೇವಿ(21) ಕಾಣೆಯಾದ ಮಹಿಳೆಯರು. ಪ್ರಿಯದರ್ಶಿನಿ ಅವರಿಗೆ ಮದುವೆಯಾಗಿದ್ದು, ಒಂದು ಮಗುವನ್ನು ಸಹ ಹೊಂದಿದ್ದಾರೆ. ಆಗಸ್ಟ್ 22ರಿಂದ ಇಬ್ಬರೂ ಮಹಿಳೆಯರೂ ಅನುಮಾನಸ್ಪದವಾಗಿ ನಾಪತ್ತೆಯಾಗಿದ್ದಾರೆ.

    ಮಾಹಾದೇವಿ ಅವರು ಕೆಲವು ದಿನಗಳಿಂದ ಪ್ರಿಯದರ್ಶಿನಿ ಮನೆಗೆ ಬಂದು ಹೋಗುತ್ತಿದ್ದರು. ಅಗಸ್ಟ್ 22ರಂದು ಮಾಹಾದೇವಿ ಬಟ್ಟೆ ತರುವುದಾಗಿ ಹೇಳಿ ಪ್ರಿಯದರ್ಶಿನಿಯರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ಅಂದು ಬಟ್ಟೆ ತರಲು ಹೋದವರು ಮರಳಿ ಮನೆಗೆ ಬಂದಿಲ್ಲ. ಈ ಬಗ್ಗೆ ಅನುಮಾನಗೊಂಡ ಪ್ರಿಯದರ್ಶಿನಿ ತಾಯಿ ಮಹಾದೇವಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ನನ್ನ ಪತ್ನಿಗೆ ಮಾಟ-ಮಂತ್ರ ಮಾಡಿಸಿ ಮಹಾದೇವಿ ಕರೆದುಕೊಂಡು ಹೋಗಿದ್ದಾಳೆ ಎಂದು ಪ್ರಿಯದರ್ಶಿನಿ ಪತಿ ನವೀನ್‍ಕುಮಾರ್ ಆರೋಪಿಸುತ್ತಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಪತ್ತೆಯಾಗಿರುವ ಮಹಾದೇವಿ ಮತ್ತು ಪ್ರಿಯದರ್ಶಿನಿಯ ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.

     

  • ಹಣ್ಣಿನ ತೋಟದ ರಕ್ಷಣೆಗೆ ಹಾಕಿದ್ದ ಬಲೆಗೆ ಸಿಲುಕಿ ನೂರಾರು ಪಕ್ಷಿಗಳ ಸಾವು- ಶ್ರೀರಂಗಪಟ್ಟಣದಲ್ಲಿ ಮನಕಲಕುವ ಘಟನೆ

    ಹಣ್ಣಿನ ತೋಟದ ರಕ್ಷಣೆಗೆ ಹಾಕಿದ್ದ ಬಲೆಗೆ ಸಿಲುಕಿ ನೂರಾರು ಪಕ್ಷಿಗಳ ಸಾವು- ಶ್ರೀರಂಗಪಟ್ಟಣದಲ್ಲಿ ಮನಕಲಕುವ ಘಟನೆ

    ಮಂಡ್ಯ: ಹಣ್ಣಿನ ತೋಟಗಳ ರಕ್ಷಣೆಗೆ ಹಾಕಿದ್ದ ಬಲೆಗೆ ಸಿಲುಕಿ ನೂರಾರು ಪಕ್ಷಿಗಳು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕಿನ, ಗಂಜಾಂ ಬಳಿ ನಡೆದಿದೆ.

    ಟಿಪ್ಪು ಸುಲ್ತಾನ್ ಸಮಾಧಿ ಸ್ಥಳ ಗುಂಬಸ್‍ಗೆ ಕೂಗಳತೆ ದೂರದಲ್ಲಿರುವ ತೋಟದಲ್ಲಿ ಅಂದಾನಯ್ಯ ಎಂಬವರು ಸೀಬೆ ಮತ್ತು ಪನ್ನೇರಳೆ ಬೆಳೆ ಬೆಳೆದಿದ್ದಾರೆ. ಬೆಳೆಗೆ ಪ್ರಾಣಿ ಪಕ್ಷಿಗಳಿಂದ ತೊಂದರೆ ಆಗದಂತೆ ಹಣ್ಣಿನ ತೋಟದ ಸುತ್ತ ಬಲೆ ಕಟ್ಟಿದ್ದಾರೆ. ಇದೀಗ ತೋಟದ ಸುತ್ತ ಹರಡಿರುವ ಬಲೆಗೆ ಪಕ್ಷಿಗಳು ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿವೆ.

    ಕೋಗಿಲೆ, ಬಿಳಿಚುಕ್ಕೆ ಗೂಬೆ, ಕಿಂಗ್ ಫಿಷರ್, ಹಸಿರು ಗಿಳಿ, ಮರಕುಟಿಕ, ಸನ್ ಬರ್ಡ್, ಬುಲ್ ಬುಲ್ ಇನ್ನಿತರ ಜಾತಿಯ ಪಕ್ಷಿಗಳ ದೇಹಗಳು ಬಲೆಗೆ ಸಿಲುಕಿ ನೇತಾಡುತ್ತಿರುವ ದೃಶ್ಯ ಮನಕಲಕುವಂತಿದೆ. ಸುಮಾರು 2 ಎಕರೆ ವಿಸ್ತೀರ್ಣದ ತೋಟದಲ್ಲಿ ಆರೇಳು ತಿಂಗಳುಗಳಿಂದಲೂ ಪಕ್ಷಿಗಳು ಬಲೆಗೆ ಸಿಲುಕಿರುವ ಕುರುಹುಗಳಿವೆ. ಪಕ್ಷಿಗಳ ಮೂಳೆ, ರೆಕ್ಕೆ, ಪುಕ್ಕಗಳ ಅವಶೇಷಗಳು ಅಲ್ಲಲ್ಲಿ ಬಿದ್ದಿವೆ.

    ಆಹಾರ ಅರಸಿಕೊಂಡು ಬಂದ ಪಕ್ಷಿಗಳು ಗಟ್ಟಿಯಾದ ಬಲೆಗೆ ಸಿಲುಕಿ, ಅದರಿಂದ ಬಿಡಿಸಿಕೊಳ್ಳಲಾಗದೆ ಪ್ರಾಣ ಕಳೆದುಕೊಂಡಿವೆ. ಪನ್ನೇರಳೆ ಮರಕ್ಕೆ ಕೋತಿಗಳ ಹಾವಳಿ ನಿಯಂತ್ರಿಸಲು ಬಲೆ ಹಾಕಲಾಗಿತ್ತು. ಬಲೆಗೆ ಪಕ್ಷಿಗಳು ಸಿಲುಕಿ ಮೃತ ಪಟ್ಟಿವೆ. ಇದು ಉದ್ದೇಶಪೂರ್ವಕವಲ್ಲ ಅಂತಿದ್ದಾರೆ ತೋಟದ ಮಾಲೀಕ ಅಂದಾನಯ್ಯ.