Tag: srujan

  • ಹುಟ್ಟುಹಬ್ಬದಂದು ಧನ್ವಂತರಿ ಹೋಮ – ಬಂಡಿ ಮಹಾಕಾಳಿ ದೇವಸ್ಥಾನಕ್ಕೆ ಸೃಜನ್ ರಿಂದ ವಿಶೇಷ ಉಡುಗೊರೆ

    ಹುಟ್ಟುಹಬ್ಬದಂದು ಧನ್ವಂತರಿ ಹೋಮ – ಬಂಡಿ ಮಹಾಕಾಳಿ ದೇವಸ್ಥಾನಕ್ಕೆ ಸೃಜನ್ ರಿಂದ ವಿಶೇಷ ಉಡುಗೊರೆ

    ಬೆಂಗಳೂರು: ಇಂದು ನಟ ಸೃಜನ್ ಲೋಕೇಶ್ 38ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

    ಬೆಂಗಳೂರಿನ ಗವಿಪುರಂ ಗುಟ್ಟಳ್ಳಿಯ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಸೃಜನ್ ಮತ್ತು ಪತ್ನಿ ಗ್ರೀಷ್ಮಾ ಧನ್ವಂತರಿ ಹೋಮವನ್ನು ಮಾಡಿದ್ದಾರೆ. ಈ ಹೋಮದಲ್ಲಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು.

    ಈ ಹಿಂದೆ ಈ ದೇವಸ್ಥಾನಕ್ಕೆ ಸೃಜನ್ ಬಂದಿದ್ದರು. ಆಗ ದೇವಾಲಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಆಗ ಸೃಜನ್ ಬಂಡಿ ಮಹಾಕಾಳಿ ದೇವಸ್ಥಾನದ ಪೂರ್ವ ದಿಕ್ಕಿನ ಮಹಾದ್ವಾರವನ್ನು ಕಟ್ಟಿಸಿಕೊಡುವುದಾಗಿ ಹೇಳಿದ್ದರು. ಅದರಂತೆಯೇ ಇಂದು ಸೃಜನ್ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದ ದ್ವಾರದ ಉದ್ಘಾಟನೆಯನ್ನು ಮಾಡಿದ್ದಾರೆ. ವಿಶೇಷ ಎಂದರೆ ಈ ದ್ವಾರಕ್ಕೆ ನಟ ದರ್ಶನ್ ಪೇಂಟಿಂಗ್ ಮಾಡಿಸುವುದಾಗಿ ಒಪ್ಪಿಕೊಂಡಿದ್ದರು. ಅವರು ಕೂಡ ಸೃಜನ್ ಬರ್ತ್ ಡೇ ದಿನದೊಳಗೆ ದ್ವಾರದ ಉದ್ಘಾಟನೆ ಮಾಡಬೇಕು ಅಷ್ಟರಲ್ಲಿ ಬೇಗ ಕೆಲಸ ಮುಗಿಸಬೇಕು ಎಂದು ತಿಳಿಸಿದ್ದರು.

    ಹೋಮ ಮಾಡಿ, ದೇವಾಲಯದ ದ್ವಾರವನ್ನು ಉದ್ಘಾಟನೆ ಮಾಡಿ ಬಳಿಕ ಸೃಜ ಮತ್ತು ಗಜ ಎಂಬ ಹೆಸರಲ್ಲಿ ಸಾಂಕೇತಿಕವಾಗಿ ದೇವಸ್ಥಾನದ ಹಿಂಬದಿಯಲ್ಲಿ ಶ್ರೀ ಗಂಧದ ಎರಡು ಗಿಡವನ್ನು ನೆಟ್ಟಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸೃಜನ್, ನನಗೆ ಬಂಡಿ ಮಹಾಕಾಳಿ ದೇವಸ್ಥಾನದ ಮೇಲೆ ತುಂಬಾ ನಂಬಿಕೆ ಇದೆ. ಬಂಡಿ ಮಹಾಕಾಳಿ ದೇವಿಯನ್ನು ನಾನು ನಂಬಿದ್ದೇನೆ. ನಾನು ಅಂದುಕೊಂಡಿದ್ದೆಲ್ಲ ಇಲ್ಲಿ ಬಂದು ಹೋದ ಮೇಲೆ ಸಲೀಸಾಗಿ ಆಗಿದೆ. ಕೆಲ ದಿನದ ಹಿಂದೆ ಬಂದಾಗ ದೇವಸ್ಥಾನದ ನಿರ್ಮಾಣ ಕಾರ್ಯ ನಡೆಯುತಿತ್ತು. ಅವಾಗ ನಾನು ಪೂರ್ವ ದ್ವಾರ ಮಾಡಿಕೊಡುವುದಾಗಿ ಹೇಳಿದ್ದೆ. ಹೀಗಾಗಿ ಈ ಮಹಾತ್ಕಾರ್ಯ ನಡೆದಿದೆ ಎಂದು ಹೇಳಿದ್ದಾರೆ.

    ದರ್ಶನ್ ಕೂಡ ಇದಕ್ಕೆ ಕೈ ಜೋಡಿಸಿದ್ದು ಬಹಳ ಖುಷಿ ಇದೆ. ದರ್ಶನ್ ಕೂಡ ಈ ದೇವಸ್ಥಾನಕ್ಕೆ ಬಂದರೆ ರಿಫ್ರೆಶ್ ಆಗುತ್ತಾರೆ. ಬರ್ತ್ ಡೇ ಹಿನ್ನೆಲೆಯಲ್ಲಿ ಸುಮಾರು 500 ಗಿಡಗಳನ್ನ ಉಚಿತವಾಗಿ ನೀಡುತ್ತಿದ್ದೇವೆ. ದರ್ಶನ್ ಕೂಡ ಗಿಡಗಳನ್ನು ನೀಡಿದ್ದಾರೆ. ನಗರದಲ್ಲಿ ಮರಗಳು ಕಮ್ಮಿ ಆಗಿದೆ. ಇದರಿಂದ ತುಂಬಾ ಬೇಸರ ಮೂಡಿಸಿದೆ. ಮನೆಗೆ ಹೋದ ಮೇಲೆಯೂ ಅಕ್ಕ ಪಕ್ಕದ ಮನೆಯವರಿಗೆಲ್ಲ ಸ್ವತಃ ನಾವೇ ಹೋಗಿ ಗಿಡಗಳನ್ನ ಹಂಚಲಿದ್ದೇವೆ ಎಂದು ತಿಳಿಸಿದರು.

    ಲೋಕೇಶ್ ಪ್ರೊಡಕ್ಷನ್ ನಿಂದ ಈ ವರ್ಷದಿಂದ ಸಾಕಷ್ಟು ಕೆಲಸಗಳು ನಡೆಯಲಿದೆ. ಹೊಸಬರಿಗೆ ಹೆಚ್ಚಿನ ಅವಕಾಶ ಇದೆ. ಹಾಗೆ ಸ್ಟಾರ್ ನಟರ ಸಿನಿಮಾಗಳು ಕೂಡ ಈ ಪ್ರೊಡಕ್ಷನ್ ಹೌಸ್ ನಿಂದ ನಡೆಯಲಿದೆ. ಸದ್ಯದಲ್ಲಿಯೇ ಖಾಸಗಿ ವಾಹಿನಿಯ ಮತ್ತೊಂದು ರಿಯಾಲಿಟಿ ಶೋ ನಡೆಯಲಿದೆ. ಅದರಿಂದ ಸಾಕಷ್ಟು ಜನರಿಗೆ ಸಹಾಯ ಆಗಲಿದೆ. ದರ್ಶನ್ ಜೊತೆ ಸಿನಿಮಾ ಆದಷ್ಟು ಬೇಗ ಮಾಡುತ್ತೇನೆ. ದರ್ಶನ್ ನನ್ನ ಜೋತೆಯಲ್ಲಿ ಇರುವುದೆ ನನ್ನ ಉಡುಗೊರೆ ಎಂದು ಸಂತಸದಿಂದ ಹೇಳಿದರು.

  • ಹೂವಿನ ಅಂಗಿ ತೊಟ್ಟರು ದರ್ಶನ್

    ಹೂವಿನ ಅಂಗಿ ತೊಟ್ಟರು ದರ್ಶನ್

    ಬೆಂಗಳೂರು: ಯಜಮಾನ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿರುವ ದರ್ಶನ್ ಅದರ ನಡುವೆಯೂ ಮೈಸೂರಿನ ಹಳೆಯ ಸ್ನೇಹಿತರೊಂದಿಗೆ ಒಂದಿಷ್ಟು ಕಾಲ ಕಳೆದರು. ಬೆಳೆದು ದೊಡ್ಡವರಾಗುತ್ತಲೇ ಜೊತೆಗಿದ್ದವರನ್ನು ಮರೆತುಬಿಡುವ ಕಾಲಿವಿದೆ. ಆದರೆ ಅಂಥಾ ಕೆಟ್ಟ ಮರೆವು ನಮಗೆ ಬೇಡ ಅಂತಾ ತೀರ್ಮಾನಿಸಿರುವವರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಒಬ್ಬರು.

    ಇವತ್ತಿಗೆ ನಾವೆಲ್ಲಾ ಏನೇ ಆಗಿರಬಹುದು ಆದರೆ ಹಳೆಯದನ್ನು ಮರೆಯಬಾರದು. ಕಡೇ ಪಕ್ಷ ವರ್ಷಕ್ಕೊಮ್ಮೆಯಾದರೂ ಜೊತೆ ಸೇರಿ ಹಳೆಯ ನೆನಪುಗಳನ್ನು ಮೆಲುಕು ಹಾಕಬೇಕು. ಒಬ್ಬರಿಗೊಬ್ಬರು ಕಷ್ಟ ಸುಖ ಹಂಚಿಕೊಳ್ಳಬೇಕು. ಭವಿಷ್ಯದ ಪ್ಲಾನುಗಳನ್ನು ಚರ್ಚಿಸಬೇಕು ಅನ್ನೋದು ದರ್ಶನ್ ಅವರ ಅಭಿಪ್ರಾಯ. ಈ ಕಾರಣದಿಂದಲೇ ಸುಮಾರು ವರ್ಷಗಳಿಂದ ಸ್ಕೂಲ್ ಮತ್ತು ಕಾಲೇಜಲ್ಲಿ ಜೊತೆಗೆ ಬೆಳೆದ ಸ್ನೇಹಿತರೊಂದಿಗೆ ಒಂದು ಔತಣಕೂಟವನ್ನು ಏರ್ಪಡಿಸಲಾಗುತ್ತಿದೆ. ದರ್ಶನ್ ಅವರ ಜೊತಗೆ ಸಂಪರ್ಕದಲ್ಲಿರುವ ಎಲ್ಲ ಗೆಳೆಯ-ಗೆಳತಿಯರೂ ಒಂದೆಡೆ ಸೇರುತ್ತಾರೆ.

    ಹಾಗೆ ನಿನ್ನೆ ಕೂಡಾ ರೀಯೂನಿಯನ್ ಸಭೆ ಏರ್ಪಾಡಾಗಿತ್ತು. ಅಲ್ಲಿಗೆ ಬಂದ ದರ್ಶನ್ ಗೆಳೆಯರು ಹೂವಿನಿಂದ ಸಿಂಗರಿಸಿದ ಅಂಗಿಯೊಂದನ್ನು ತೊಡಿಸಿದ್ದು ವಿಶೇಷವಾಗಿತ್ತು. ಮಲ್ಲಿಗೆ ಗುಲಾಬಿಗಳಿಂದ ತಯಾರಿಸಿದ್ದ ಆ ಅಂಗಿ ದರ್ಶನ್ ಅವರನ್ನು ಪೂರ್ತಿಯಾಗಿ ಆವರಿಸಿತ್ತು.

    ಈ ಸಂದರ್ಭದಲ್ಲಿ ದರ್ಶನ್ ಅವರ ಚಿತ್ರರಂಗದ ಗೆಳೆಯರಾದ ಸೃಜನ್, ಧರ್ಮ ಕೀರ್ತಿ ಮತ್ತು ಯಶಸ್ ಸೂರ್ಯ ಸೇರಿದಂತೆ ಹಲವಾರು ಮಂದಿ ಹಾಜರಿದ್ದರು.