Tag: Sruthi Hariharan

  • ಅಂಬಿ ಉಪಸ್ಥಿತಿಯಲ್ಲಿ ನಾಳೆ ಅರ್ಜುನ್ ಸರ್ಜಾ-ಶೃತಿ ನಡುವೆ ಸಂಧಾನ ಸಭೆ

    ಅಂಬಿ ಉಪಸ್ಥಿತಿಯಲ್ಲಿ ನಾಳೆ ಅರ್ಜುನ್ ಸರ್ಜಾ-ಶೃತಿ ನಡುವೆ ಸಂಧಾನ ಸಭೆ

    ಬೆಂಗಳೂರು: ಮೀಟೂ ಆರೋಪ ಆರೋಪ ಮಾಡಿರುವ ನಟಿ ಶೃತಿ ಹರಿಹರನ್ ಹಾಗೂ ನಟ ಅರ್ಜುನ್ ಸರ್ಜಾ ಅವರ ನಡುವೆ ನಾಳೆ ಸಂಧಾನ ಸಭೆ ನಡೆಯಲಿದ್ದು, ಹಿರಿಯ ನಟ ಅಂಬರೀಶ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಫಿಲ್ಮ್ ಚೇಂಬರ್ ಕಾರ್ಯಾಧ್ಯಕ್ಷ ಭಾ.ಮಾ ಹರೀಶ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಕಲಾವಿದರ ಸಂಘದ ಅಧ್ಯಕ್ಷರಾಗಿರುವ ಅಂಬರೀಶ್ ಅವರು ಸದ್ಯ ಹೊರ ರಾಜ್ಯದಲ್ಲಿದ್ದು, ಅವರು ಆಗಮಿಸಿದ ಬಳಿಕ ಸಂಧಾನ ಸಭೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇಂದು ನಡೆದ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರ ಚರ್ಚೆಯ ಬಳಿಕ ಸಭೆ ಮುಂದುಡಿದ್ದಾರೆ. ಇದರಂತೆ ನಾಳೆ ಸಂಜೆ 4 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಹಿರಿಯ ನಟಿಯರಾದ ಬಿ.ಸರೋಜಾದೇವಿ, ಜಯಂತಿ, ಪ್ರೇಮಾ ಹಾಗೂ ನಿರ್ದೇಶಕರ ಸಂಘದ ಸದಸ್ಯರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಶೃತಿ ಅವರು ಮೀಟೂ ಆರೋಪ ಮಾಡಿದ ಬಳಿಕ ದೂರು ದಾಖಲಿಸುವುದಾಗಿ ಹೇಳಿದ್ದರು. ಆದರೆ ಇದುವರೆಗೂ ಯಾವುದೇ ದೂರು ದಾಖಲು ಮಾಡಿಲ್ಲ. ಈ ನಡುವೆ ಸಂಧಾನ ಸಭೆಯಲ್ಲಿ ಅರ್ಜುನ್ ಸರ್ಜಾ, ಶೃತಿ ಹರಿಹರನ್ ಭಾಗವಹಿಸಲಿದ್ದು, ಹಿರಿಯರ ನಿರ್ದೇಶನದ ಬಳಿಕ ಯಾವ ನಿರ್ಧಾರ ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ. ಅರ್ಜುನ್ ಸರ್ಜಾ ಅವರು ಕೂಡ ಶೃತಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಕುರಿತು ಹೇಳಿಕೆ ನೀಡಿದ್ದಾರೆ.

    ಮೀಟೂ ಆರೋಪ ಬಳಿಕ ಚಿತ್ರರಂಗದ ಹಲವು ಗಣ್ಯರು ಹಾಗೂ ನಟ, ನಟಿಯರು ಈ ಕುರಿತು ಪ್ರತಿಕ್ರಿಯೆ ನೀಡಿದ್ದರು. ಮೀಟೂ ಅಂದೋಲನವನ್ನು ದೂರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಕೆಲವರು ಆರೋಪ ಮಾಡಿದ್ದರೆ. ಮತ್ತು ಕೆಲವರು ಶೃತಿ ಪರ ನಿಂತು ಬ್ಯಾಟ್ ಬೀಸಿದ್ದರು. ನಾಳೆ ನಡೆಯಲಿರುವ ಸಭೆ ಈ ಎಲ್ಲಾ ಆರೋಪ ಪ್ರತ್ಯಾರೋಪಕ್ಕೆ ಅಂತ್ಯ ಬೀಳುವ ಸಾಧ್ಯತೆ ಇದೆ. ಒಂದೊಮ್ಮೆ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದಿದ್ದರೂ ಹಿರಿಯ ನಟರ ಸಲಹೆಯನ್ನು ಆಲಿಸಲು ಖಂಡಿತ ಇಬ್ಬರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 8 ತಿಂಗ್ಳ ಹಿಂದೆ ಶೃತಿ ನಿಮ್ಮ ಸಂಸ್ಥೆಯ ಮೆಂಬರ್ ಆಗಿದ್ರಾ- ಚೇತನ್‍ಗೆ ಧೃವ ಖಡಕ್ ಪ್ರಶ್ನೆ

    8 ತಿಂಗ್ಳ ಹಿಂದೆ ಶೃತಿ ನಿಮ್ಮ ಸಂಸ್ಥೆಯ ಮೆಂಬರ್ ಆಗಿದ್ರಾ- ಚೇತನ್‍ಗೆ ಧೃವ ಖಡಕ್ ಪ್ರಶ್ನೆ

    – ಪಬ್ಲಿಕ್ ಟಿವಿಯಲ್ಲಿ ಚೇತನ್- ಧೃವ ಸರ್ಜಾ ವಾಕ್ಸಮರ

    ಬೆಂಗಳೂರು: ನಟ ಚೇತನ್ ಅವರನ್ನು ತುಂಬಾನೇ ನಾನು ಗೌರವಿಸುತ್ತೇನೆ. ಯಾಕಂದ್ರೆ ನಮ್ಮ ಅಜ್ಜಿ ಜೊತೆ ಅವರು ಗೌರವದಿಂದಲೇ ಮಾತನಾಡಿದ್ರು ಅಂತ ಮಾತು ಮುಂದುವರಿಸಿದ ನಟ ಧೃವ ಸರ್ಜಾ ಅವರು ನಟ ಚೇತನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯಲ್ಲಿ  ಇಬ್ಬರು ನಟರು ಫೋನ್ ಮೂಲಕ ಪರಸ್ಪರ ಏಕವಚನದಲ್ಲೇ ವಾಕ್ಸಮರ ನಡೆಸಿದ್ದಾರೆ. ಫೈರ್ ಎಂಬ ಸಂಸ್ಥೆ ಆರಂಭವಾಗಿ ಒಂದೂವರೆ ವರ್ಷ ಆಯ್ತಂತೆ. ಶೃತಿ ಅದರ ಮೆಂಬರ್ ಆಗಿ 8 ತಿಂಗಳು ಆಯಿತಂತೆ. ಅದರ ಸದಸ್ಯರಾಗೋದು ಏನಕ್ಕೆ ಅಂದ್ರೆ ಏನಾದ್ರೂ ಒಂದು ಆಪಾದನೆ ಇದ್ದರೆ ಮಾತ್ರ ಅದ್ರ ಮೇಂಬರ್ ಆಗ್ತಾರೆ. ಹೀಗಾಗಿ 8 ತಿಂಗಳ ಹಿಂದೆ ಶೃತಿ ಹರಿಹರನ್ ಮೆಂಬರ್ ಆಗಿರೋದು ಸತ್ಯನಾ ಸುಳ್ಳಾ ಎಂದು ನೇರವಾಗಿ ನಟ ಧೃವ ಅವರು ಚೇತನ್ ಅವರನ್ನು ಪ್ರಶ್ನಿಸಿದ್ದಾರೆ.

    ಈ ವೇಳೆ ಚೇತನ್, ಇಂದು ಶೃತಿ ಹರಿಹರನ್ ಆರೋಪದಿಂದ ನಿಮ್ಮ ಕುಟುಂಬಕ್ಕೆ ತೊಂದರೆಯಾಗಿರುವುದು ನಮಗೆಲ್ಲ ಬೇಜಾರಾಗಿದೆ ಅಂತ ಹೇಳಿದ್ರೆ, ಈ ನಾಟಕಗಳೆಲ್ಲ ಬೇಡ. ನನ್ನ ಪ್ರಶ್ನೆಗೆ ಉತ್ತರಿಸಿ ಅಷ್ಟು ಸಾಕು ಅಂತಾ ಚೇತನ್ ವಿರುದ್ಧ ಧೃವ ವಾಗ್ದಾಳಿ ನಡೆಸಿದರು.

    ಇಬ್ಬರ ಸಂಭಾಷಣೆ ಹೀಗಿತ್ತು
    ಚೇತನ್: ನಮ್ಮ ಫೈರ್ ಸಂಸ್ಥೆಯಿಂದ ಹಲವಾರು ಸಮಾಜಮುಖಿ ಕೆಲಸಗಳನ್ನು ನಾನು ಮಾಡಿಕೊಂಡು ಬಂದಿದ್ದೇವೆ.

    ಧೃವ: ನಿಮ್ಮ ಸಂಸ್ಥೆ ಒಳ್ಳೆಯ ಕೆಲಸಗಳನ್ನು ಮಾಡುತ್ತಿರುವುದು ನಿಜ. ಅದರಲ್ಲಿ ಹೆಣ್ಣು ಮಕ್ಕಳಿದ್ದಾರೆ ಎಂದ್ರೆ ನಾವೆಲ್ಲ ಆ ಸಂಸ್ಥೆಯನ್ನು ಗೌರವಿಸುತ್ತೇವೆ. ನೀನು ಇದ್ದೀಯಾ ಅಂತಾನೂ ಗೌರವಿಸುತ್ತೇನೆ. ಯಾಕಂದ್ರೆ ನಿನಗೆ ಗೊತ್ತು. ಹೇಗೆ ಮಾತಾಡ್ಬೇಕು.. ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ಚೆನ್ನಾಗಿ ಗೊತ್ತು. ಆದ್ರೆ ಮಿಸ್ಟರ್ ಚೇತನ್, ನನ್ನ ಪ್ರಶ್ನೆಗೆ ಉತ್ತರಿಸಿ. ಅನ್ಯಾಯವಾಗಿರುವವರಷ್ಟೇ ನಿಮ್ಮ ಸಂಸ್ಥೆಗೆ ಮೆಂಬರ್ ಆಗ್ತಾರೆ. ಶೃತಿ ಹರಿಹರನ್ ಅವರಿಗೆ ಅನ್ಯಾಯವಾಗಿದೆ ಅಂತಾನೇ ಅವರು ನಿಮ್ಮ ಸಂಸ್ಥೆಯ ಸದಸ್ಯರಾಗಿದ್ದಾರೆ ಅಂದ್ರೆ 8 ತಿಂಗಳಿಂದ ಏನು ಮಾಡುತ್ತಿದ್ರಿ?.

    ಚೇತನ್: ನಾವು ಈಗಷ್ಟೇ ಸಂಸ್ಥೆ ಕಟ್ಟಿಕೊಂಡು ಬರುತ್ತಿದ್ದೇವೆ ಅಷ್ಟೆ. ಅದರಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇವೆ. ಯಾವತ್ತು ಶೃತಿ ಅವರು ದೊಡ್ಡ ಪ್ರಮಾಣದಲ್ಲಿ ನಮ್ಮ ಜೊತೆ ನಿಂತ್ರು ಅಂದ್ರೆ ಯಾವಾಗ ಕನ್ನಡ ಚಿತ್ರರಂಗದಲ್ಲಿ ನಾವು ಒಂದು 50 ಜನರ ಸಹಿ ತೆಗೆದುಕೊಂಡು `ಅಮ್ಮಾ’ ಅನ್ನೋ ಮಲೆಯಾಲಂ ಇಂಡಸ್ಟ್ರಿ ಮೇಲೆ ದಿಲೀಪ್ ಅನ್ನೋ ನಟನ ವಿರುದ್ಧ ಹೋರಾಡಿದ್ವಿ.

    ಧೃವ: ನನಗೆ ಅದ್ಯಾವುದು ಬೇಡ..8 ತಿಂಗಳ ಹಿಂದೆ ಹೇಗೆ ಅವರ(ಅರ್ಜುನ್ ಸರ್ಜಾ) ಮೇಲೆ ದಾಳಿ ಮಾಡೋದು ಅನ್ನೋದನ್ನು ಸ್ಟಡಿ ಮಾಡುತ್ತಿದ್ರಾ ಅಂತ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ರು. ಇದರಿಂದ ನಿನ್ನ ಬಗ್ಗೆ ನಿನಗೆ ನಾಚಿಕೆಯಾಗಲ್ವ? ಒಬ್ಬ ನಟನಾಗಿ ಇಂತಹುದನ್ನೆಲ್ಲಾ ಹೇಗೆ ಮಾಡ್ತಿಯಾ?

    ಒಬ್ಬ ಕಲಾವಿದನಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ನಮ್ಮ ಮನೆಯವರು ನಮಗೆ ಚೆನ್ನಾಗಿಯೇ ಹೇಳಿಕೊಟ್ಟಿದ್ದಾರೆ. ನೀನು ಚೆನ್ನಾಗಿ ನಟಿಸಲಲ್ಲ. ಯೂ ಆರ್ ಅನ್ ಫಿಟ್ ಅಂತ ಒಬ್ಬ ಕಲಾವಿದನಿಗೆ ಹೇಳಿದ್ರೆ ಅದು ಅವಮಾನ ಆಗುತ್ತೆ ಅಂತಾನೇ ಅವರು(ಅರ್ಜುನ್) ನಿಮಗೆ ಮೆಸೇಜ್ ಮಾಡಿದ್ದಾರೆ. ಆದ್ರೆ ನೀವು ಅದಕ್ಕೆ ಉಲ್ಟಾ ಮೆಸೇಜ್ ಮಾಡಿದ್ದೀರಾ. ಹೀಗಾಗಿ ಅವರು ಪ್ರೊಫೆಶನಲಿ ಇ-ಮೇಲ್ ಇ- ಮೇಲ್ ಮಾಡಿದ್ದಾರೆ ಅಂತ ಹೇಳಿದ್ರು.

    ಈ ಇ-ಮೇಲ್ ಗೆ ನಾನೂ ಪ್ರಸ್ತಾಪ ಮಾಡಿದ್ದೇನೆ ಅಂತ ಚೇತನ್ ಹೇಳಿದ್ದಾರೆ. ಅಲ್ಲದೇ ಸರ್ಜಾ ಕುಟುಂಬದ ಮೇಲೆ ನನಗೆ ವೈಯಕ್ತಿಕವಾಗಿ ಯಾವುದೇ ದ್ವೇಷವಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಧೃವ, ವೈಯಕ್ತಿಕವಾಗಿ ದ್ವೇಷ ಇಲ್ಲ ಅಂದ ಮೇಲೆ ಒಂದು ಹುಡುಗಿಯನ್ನು ಹಿಡ್ಕೊಂಡು ಯಾಕೆ ಈ ರೀತಿ ಮಾಡ್ತಿದ್ದೀಯಾ? ಯಾಕೆ ಹುಡುಗರಿಗೆ ಯಾರಿಗೂ ಅನ್ಯಾವಾಗಿಲ್ಲ ಅಂತ ಮರು ಪ್ರಶ್ನೆ ಹಾಕಿದ ಅವರು, ಫೈರ್ ಸಂಸ್ಥೆ ಬದಲು ವಾಟರ್ ಸಂಸ್ಥೆ ಅನ್ನೋದನ್ನು ಓಪನ್ ಮಾಡು.

    ನಮ್ಮ ಅಂಕಲ್ ಮೇಲೆ ನಾಯಿ, ನರಿ, ಕ್ರಿಮಿ, ಕೀಟ ಯಾರು ಏನೇ ಹೇಳಿದ್ರೂ ನಾವು ನಂಬಲ್ಲ. ನಾವು ಏನು ಅನ್ನೋದು ನಮಗೆ ಗೊತ್ತಿದೆ. ಕಾನೂನಿಗಿಂತ ನಿಮ್ಮ ಫೈರ್ ಸಂಸ್ಥೆ ದೊಡ್ಡದಲ್ಲ ಅಂದ್ರು.

    ಚೇತನ್: ನಾವು ಇಲ್ಲಿ ಪ್ರಚಾರಕ್ಕೋಸ್ಕರ ನಿಂತುಕೊಂಡಿಲ್ಲ. ಈ ರೀತಿ ನೀವು ಕೆಟ್ಟದಾಗಿ ಮಾತಾಡೋದು ನಿಜವಾಗಿಯೂ ಸರಿಯಿಲ್ಲ. ಒಂದು ಕಡೆ ನಾನು ಮಹಿಳೆಯರ ಪರವಾಗಿ ಅವರಿಗೆ ಕಷ್ಟಗಳು ಆಗಬಾರದು ಅಂತಾನೂ ಹೇಳುತ್ತೀರಾ. ಇನ್ನೊಂದು ಕಡೆ ಮಹಿಳೆಯರ ಪರ ನಿಂತ್ರೆ ಅದಕ್ಕೂ ಹೇಳುತ್ತೀರಾ. ಇದು ಸರಿಯಲ್ಲ ಅಂದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=5RZ_sBab49c

    https://www.youtube.com/watch?v=7NpriWx6y3k

    https://www.youtube.com/watch?v=o_HWldGMV30

  • ಅರ್ಜುನ್ ಸರ್ಜಾ ಆ ರೀತಿ ಮಾಡೋ ವ್ಯಕ್ತಿಯಲ್ಲ, ನಾನೇ ಗ್ಯಾರಂಟಿ: ಖುಷ್ಬೂ

    ಅರ್ಜುನ್ ಸರ್ಜಾ ಆ ರೀತಿ ಮಾಡೋ ವ್ಯಕ್ತಿಯಲ್ಲ, ನಾನೇ ಗ್ಯಾರಂಟಿ: ಖುಷ್ಬೂ

    ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರಿಗೆ ಖ್ಯಾತ ನಟಿ ಖುಷ್ಬೂ ಬೆಂಬಲ ನೀಡಿದ್ದಾರೆ.

    ಶೃತಿ ಹರಿಹರನ್ ಅವರಿಂದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಖುಷ್ಬೂ ವಿಡಿಯೋ ಬಿಡುಗಡೆ ಮಾಡಿ ಅರ್ಜುನ್ ಸರ್ಜಾ ಅವರು ಆ ರೀತಿ ಎಂದಿಗೂ ಮಾಡಲು ಸಾಧ್ಯವೇ ಇಲ್ಲ. ನಾನೇ ಗ್ಯಾರಂಟಿ ಎಂದು ಹೇಳಿದ್ದಾರೆ. ಇದನ್ನು ಓದಿ: ಶೃತಿ ಹರಿಹರನ್ #MeToo ಹಿಂದಿನ ಅಸಲಿ ಕಹಾನಿ ಬಿಚ್ಚಿಟ್ಟ ಭಾಮಾ ಹರೀಶ್

    ವಿಡಿಯೋ ಹೇಳಿಕೆಯಲ್ಲಿ ಏನಿದೆ?
    34 ವರ್ಷಗಳಿಂದ ನನಗೆ ಅರ್ಜುನ್ ಸರ್ಜಾ ಪರಿಚಯ. ನನ್ನ ಮೊದಲ ಸಿನಿಮಾಗೆ ಅವರು ಹೀರೋ ಆಗಿ ಅಭಿನಯಿಸಿದ್ದರು. ಮೊದಲ ಬಾರಿಗೆ ನನ್ನನ್ನು ರಕ್ಷಣೆ ಮಾಡಿದ್ದೇ ಅವರು. ಎಂದಿಗೂ ಅವರು ನನ್ನ ಜೊತೆ ಅಸಭ್ಯವಾಗಿ ವರ್ತನೆ ಮಾಡಿರಲಿಲ್ಲ.

    ಸರ್ಜಾ ವಿರುದ್ಧ ಮೀಟೂ ಆರೋಪ ಕೇಳಿಬಂದಾಗ ಬಂದಾಗ ನನಗೆ ಆಶ್ಚರ್ಯವಾಯಿತು. ನಾವಿಬ್ಬರೂ ಒಟ್ಟಾಗಿ ತಮಿಳು, ತೆಲುಗು, ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದೇವೆ. ತಂದೆಯಾಗಿರುವ ಅರ್ಜುನ್ ಸರ್ಜಾ ಮೇಲೆ ಈ ಆರೋಪ ಬಂದಾಗ ಅವರ ಇಬ್ಬರು ಹೆಣ್ಣು ಮಕ್ಕಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎನ್ನುವುದು ನನಗೆ ಗೊತ್ತಿದೆ. ನನ್ನ ತಂದೆ ದೊಡ್ಡ ಹೀರೋ ಎಂದುಕೊಂಡಿದ್ದ ಆ ಇಬ್ಬರು ಮಕ್ಕಳನ್ನು ಈ ಮೂಲಕ ನೋಯಿಸುತ್ತಿದ್ದೀರಿ. ಅರ್ಜುನ್ ಅವರು ಈ ರೀತಿ ನಡೆದುಕೊಳ್ಳಲು ಸಾಧ್ಯವಿಲ್ಲ. ನಾನು ಗ್ಯಾರಂಟಿ ನೀಡುತ್ತಿದ್ದೇನೆ. ಇದನ್ನು ಓದಿ: ಸರ್ಜಾ ವಿರುದ್ಧ ಸೇಡಿಗಾಗಿ ಶೃತಿ ಹರಿಹರನ್ ಪರ ನಿಂತ್ರಾ ನಟ ಚೇತನ್?

    ಹಲವು ವರ್ಷಗಳ ಸಿನಿ ಅನುಭವದಿಂದ ನಾನು ಈ ಮಾತನ್ನು ಹೇಳುತ್ತಿದ್ದೇನೆ. ಪ್ರಪಂಚವೇ ಅರ್ಜುನ್ ಅವರತ್ತ ಆರೋಪ ಮಾಡಿದರೂ ನಾನು ನಂಬುವುದಿಲ್ಲ. ಅರ್ಜುನ್ ನಟ, ನಿರ್ದೇಶಕ ಮತ್ತು ಒಳ್ಳೆಯ ಸ್ನೇಹಿತರಾಗಿದ್ದಾರೆ. ಆದರೆ ಈ ಸಮಯದಲ್ಲೂ ನಾನು ಅವರ ಪರವಾಗಿ ಮಾತನಾಡದೇ ಇದ್ದರೇ ನನಗೆ ಶೇಮ್ ಆಗುತ್ತದೆ. ಇದು 34 ವರ್ಷದ ಸ್ನೇಹಕ್ಕೆ ಅವಮಾನ ಮಾಡಿದಂತೆ ಆಗುತ್ತದೆ. ಈ ಕಾರಣಕ್ಕೆ ನಾನು ಇಲ್ಲಿಂದಲೇ ಅರ್ಜುನ್ ಅವರನ್ನು ಬೆಂಬಲಿಸುತ್ತಿದ್ದೇನೆ. ಅರ್ಜುನ್ ಯಾವತ್ತೂ ಮಹಿಳೆಯರನ್ನು ನೋಯಿಸುವ ವ್ಯಕ್ತಿಯಲ್ಲ. ಕುಟುಂಬ ಹೇಗೆ ಅರ್ಜುನ್ ಸರ್ಜಾ ಅವರನ್ನು ನಂಬುತ್ತದೋ ಅದೇ ರೀತಿಯಾಗಿ ನಾನು ಅವರನ್ನು ನಂಬುತ್ತೇನೆ. ನಿನ್ನ ಜೊತೆ ನಾನಿದ್ದೇನೆ ಅರ್ಜುನ್.  ಇದನ್ನು ಓದಿ: ಅರ್ಜುನ್ ಸರ್ಜಾ ಬಳಿ ದುಡ್ಡು, ಹೆಸರಿದೆ- ಶೃತಿ ಹರಿಹರನ್ ಬೆನ್ನಿಗೆ ನಿಂತ ಸಂಯುಕ್ತಾ ಹೆಗ್ಡೆ

    ಮೀಟೂ ಪರ ಧ್ವನಿ ಎತ್ತಿದ್ದ ಖುಷ್ಬೂ ಅವರು ಈ ಹಿಂದೆ ಅಭಿಮಾನಿಯೊಬ್ಬರು ರವಿಚಂದ್ರನ್ ಬಗ್ಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯಿಸಿ ಅಭಿಮಾನಿಯ ಬಾಯಿಯನ್ನು ಖಷ್ಬೂ ಮುಚ್ಚಿಸಿದ್ದರು. ಚಿತ್ರ ರಂಗದ ಪ್ರಕಾಶ್ ರೈ, ಚೇತನ್, ಶೃದ್ಧಾ ಶ್ರೀನಾಥ್, ಸಂಯುಕ್ತ ಹೆಗ್ಡೆ ಅವರು ಶೃತಿ ಹರಿಹರನ್ ಮೀಟೂ ಆರೋಪವನ್ನು ಬೆಂಬಲಿಸಿ ಪ್ರತಿಕ್ರಿಯಿಸಿದ್ದಾರೆ. ಇದನ್ನು ಓದಿ: #MeToo ಅಭಿಯಾನ – ರವಿಚಂದ್ರನ್ ಬಗ್ಗೆ ಸತ್ಯ ಬಿಚ್ಚಿಟ್ಟ ಖುಷ್ಬೂ

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಟಿ ಶೃತಿ ಹರಿಹರನ್ #MeToo ಆರೋಪಕ್ಕೆ ಧರ್ಮದ ನಂಟು..!

    ನಟಿ ಶೃತಿ ಹರಿಹರನ್ #MeToo ಆರೋಪಕ್ಕೆ ಧರ್ಮದ ನಂಟು..!

    ಬೆಂಗಳೂರು: ನಟಿ ಶೃತಿ ಹರಿಹರನ್ ಅವರು ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ `ಲೈಂಗಿಕ ಕಿರುಕುಳ’ ಆರೋಪ ಮಾಡಿರುವುದು ಇದೀಗ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಇದಕ್ಕೆ ಇದೀಗ ಧರ್ಮದ ನಂಟು ಅಂಟಿಸಲಾಗಿದೆ.

    ಅರ್ಜುನಾ ಸರ್ಜಾ ಅವರು ಹನುಮ ಭಕ್ತ, ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ. ಸರ್ಜಾ ಅವರು ಹಿಂದೂಧರ್ಮ ಅನುಸರಿಸುತ್ತಾರೆ. ಅವರು ಚೆನ್ನೈನಲ್ಲಿ ಹನುಮನ ಮೂರ್ತಿ ನಿರ್ಮಿಸಿದ್ದಾರೆ. ಅರ್ಜುನ್ ಸರ್ಜಾ ಅವರ ತಂದೆ ಆರ್‍ಎಸ್‍ಎಸ್‍ನಲ್ಲಿದ್ದವರು ಎಂದು ಅರ್ಜುನ್ ಸರ್ಜಾ ಪರ ಕನ್ನಡ ಹೋರಾಟಗಾರ, ಉದ್ಯಮಿ ಪ್ರಶಾಂತ್ ಸಂಬರ್ಗಿ ನಿಂತಿದ್ದಾರೆ.

    ಶೃತಿ ಹರಿಹರನ್ ತಂದೆ ಕಮ್ಯೂನಿಸ್ಟ್ ಬೆಂಬಲಿಗರು. ಶೃತಿ ಹರಿಹರನ್ ಅವರ ಮೀಟೂ ಆರೋಪದ ಹಿಂದೆ ಮೋದಿ ವಿರೋಧಿ, ಹಿಂದೂ ವಿರೋಧಿ, ಬಿಜೆಪಿ ವಿರೋಧಿ ಅಜೆಂಡಾವಿದೆ. ಕವಿತಾ ಲಂಕೇಶ್, ನಟ ಚೇತನ್, ರೂಪಾ ಅಯ್ಯರ್ ಇವರೆಲ್ಲ ಕನ್ನಡ ಸಿನಿಮಾ ಲೋಕದ ಎಡಪಂಥಿಯರು. ಪ್ರಕಾಶ್ ರೈ ಅಂತ ವುಮೆನೈಜರ್ ಹಿಂದೆ ಮುಂದೆ ನೋಡದೆ ಸಪೋರ್ಟ್ ಮಾಡ್ತಿದ್ದಾರೆ. ಇದು ಸಂಪೂರ್ಣ ವ್ಯವಸ್ಥಿತವಾದ ಪೊಲಿಟಿಕಲ್ ಡ್ರಾಮಾ ಎಂದು ಪ್ರಶಾಂತ್ ಸಂಬರ್ಗಿ ಕಿಡಿಕಾರಿದ್ದಾರೆ. ಇದನ್ನು ಓದಿ: ತಾವೇ ಆಂಜನೇಯ ಮೂರ್ತಿಗೆ ಕೆತ್ತನೆ ಮಾಡಿದ ಅರ್ಜುನ್ ಸರ್ಜಾ – ವಿಡಿಯೋ

    ಶೃತಿ ಹರಿಹರನ್ ಆರೋಪವೇನು?:
    ಮ್ಯಾಗಜೀನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಬಿಚ್ಚಿಟ್ಟಿದ್ದರು. ಕಳೆದ ವರ್ಷ `ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ `ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ `ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು.

    ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. `ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ `ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. `ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟಿದ್ದರು.

    ಅರ್ಜುನ್ ಸರ್ಜಾ ಹೇಳಿದ್ದೇನು?
    ಶೃತಿ ಆರೋಪದಿಂದ ನನಗೆ ತುಂಬಾ ನೋವಾಗಿದೆ. ಇದೂವರೆಗೂ ನಾನು 60 ರಿಂದ 70 ನಟಿಯರ ಜೊತೆ ನಟಿಸಿದ್ದೇನೆ. ಯಾರೂ ಸಹ ಈ ರೀತಿಯ ಆರೋಪ ಮಾಡಿಲ್ಲ. ಜೊತೆಯಲ್ಲಿಯೂ ಕೂರಿಸಿಕೊಂಡು ದೃಶ್ಯದಲ್ಲಿ ಹೇಗೆ ನಟಿಸಬೇಕು? ಡೈಲಾಗ್ ನಲ್ಲಿ ಏನಾದರೂ ಬದಲಾವಣೆ ಮಾಡಬೇಕು ಎಂಬುದರ ಕುರಿತು ಚರ್ಚಿಸುತ್ತೇವೆ. ನಮ್ಮ ವೃತ್ತಿಯನ್ನು ಮುಂದಿಟ್ಟುಕೊಂಡು ಇಂತಹ ಕೆಳಮಟ್ಟದಲ್ಲಿ ನಾನು ಎಂದೂ ಇಳಿದಿಲ್ಲ. ನಮ್ಮ ಪ್ರೊಫೆಶನ್ ಮುಂದೆ ಇಟ್ಟುಕೊಂಡು ಒಂದು ಹೆಣ್ಣಿನ ಮೈ ಮುಟ್ಟಬೇಕು ಎಂಬ ಚೀಪ್ ಮೆಂಟಾಲಿಟಿ ನನ್ನಲ್ಲಿ ಇಲ್ಲ. ನಾನು ಮೀಟೂ ವೇದಿಕೆ ಬಗ್ಗೆ ತುಂಬಾ ಗೌರವ ಹೊಂದಿದ್ದೇನೆ. ಈ ದೊಡ್ಡ ಅಭಿಯಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಶೃತಿ ಮಾತನಾಡುವ ಮಾತುಗಳಿಗೆ ಯಾವುದಾದರೂ ಆಧಾರವಿದೆಯಾ? ಶೃತಿ ಆರೋಪದ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಅಂತ ಹೇಳಿದ್ದರು.

    ನಾನು ಪ್ರತಿಕ್ರಿಯಿಸಬಾರದು ಅಂತಾ ನಿರ್ಧರಿಸಿದ್ದೆ. ಆದ್ರೆ `ಮೌನಂ ಸಮ್ಮತಿ ಲಕ್ಷ್ಮಣಂ’ ಎಂದು ಅರ್ಥವಾಗುತ್ತದೆ ಎಂದು ಪಬ್ಲಿಕ್ ಟಿವಿ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದೇನೆ. ಒಂದೂವರೆ ವರ್ಷದ ಹಿಂದೆ ನಡೆದ ಸಿನಿಮಾ ಮುಗಿದಿದೆ. ಅಂದೇ ನಿರ್ದೇಶಕರಿಗೆ ಅಥವಾ ಚಲನಚಿತ್ರ ಮಂಡಳಿಗೆ ದೂರು ಕೊಡಬೇಕಿತ್ತು. ಇಷ್ಟು ದಿನ ಸುಮ್ಮನಿದ್ದು ಈವಾಗ ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=LFKlX3O1iuM

    https://www.youtube.com/watch?v=CT09s2HQWKY

  • ಶ್ರದ್ಧಾ ಬಳಿಕ ಶೃತಿ ಬೆನ್ನಿಗೆ ನಿಂತ ರಾಗಿಣಿ

    ಶ್ರದ್ಧಾ ಬಳಿಕ ಶೃತಿ ಬೆನ್ನಿಗೆ ನಿಂತ ರಾಗಿಣಿ

    ಮಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಆರೋಪ ಮಾಡಿದ್ದ ಶೃತಿ ಹರಿಹರನ್ ಪರ ಶ್ರದ್ಧಾ ಶ್ರೀನಾಥ್ ಬೆಂಬಲ ನೀಡಿದ ಬೆನ್ನಲ್ಲೇ ನಟಿ ರಾಗಿಣಿ ಕೂಡ ಬೆನ್ನಿಗೆ ನಿಂತಿದ್ದಾರೆ.

    ಮಂಗಳೂರಿನ ಮಂಗಳಾದೇವಿ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ರಾಗಿಣಿ, ಮೀಟೂ ಅಭಿಯಾನದಿಂದ ಸಮಸ್ಯೆ ಹೇಳಿಕೊಳ್ಳುವುದು ಒಳ್ಳೆಯ ವಿಷಯ. ಅದನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆದರೆ ಶ್ರುತಿ ಹರಿಹರನ್ ಒಳ್ಳೆ ಹುಡುಗಿ, ಅನಗತ್ಯವಾಗಿ ಹೇಳಿಕೊಳ್ಳಲ್ಲ. ಶೃತಿ ಅವರಿಗೆ ನಿಜವಾಗಿ ಅಂತಹ ಘಟನೆ ನಡೆದಿದ್ದರೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಅಭಿಪ್ರಾಯ ಪಟ್ಟರು.

    ಮೀಟೂ ಅಭಿಯಾನವನ್ನು ಯಾರು ಕೂಡ ಸ್ವಾರ್ಥಕ್ಕೆ ಬಳಸುವುದು ಸರಿಯಲ್ಲ ಎಂದು ತಿಳಿಸಿದ ರಾಗಿಣಿ, ಪ್ರತಿ ದಿನ ಈ ಅಭಿಯಾನ ಹೆಚ್ಚಾಗುತ್ತಿದೆ. ಇದು ಕೇವಲ ಹುಡುಗಿಯರಿಗೆ ಮಾತ್ರವಲ್ಲ, ಹುಡುಗರಿಗೂ ಅನ್ವಯವಾಗುತ್ತದೆ. ಈ ಅಭಿಯಾನ ಆಗುತ್ತಿರುವುದು ನನಗೆ ಸಂತಸ ತಂದಿದೆ. ನಾನು ಮೀಟೂ ಪರವಾಗಿ ನಿಲ್ಲುತ್ತೇನೆ ಎಂದರು. ಇದನ್ನೂ ಓದಿ: #MeToo ಅಭಿಯಾನವನ್ನ ಕೆಲವರು ಪ್ರಚಾರಕ್ಕೆ ಬಳಸಿಕೊಳ್ತಿದ್ದಾರೆ: ನಟಿ ರಾಗಿಣಿ

    ಇದೇ ವೇಳೆ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ದೇವರ ಪೂಜೆಯಲ್ಲಿ ಯಾವತ್ತೂ ತಾರತಮ್ಯ ಮಾಡಬಾರದು. ಪೂಜೆ, ಭಕ್ತಿ ವಿಚಾರದಲ್ಲಿ ಗಂಡು- ಹೆಣ್ಣೆಂಬ ಭೇದ ಇರಲ್ಲ. ಮಹಿಳೆಯರ ಋತುಚಕ್ರ ಹೆಸರಲ್ಲಿ ಪ್ರವೇಶ ನಿಷೇಧಿಸುವುದು ತಪ್ಪು. ಆದರೆ ಸಂಸ್ಕೃತಿ, ಸಂಪ್ರದಾಯದ ವಿಚಾರ ಇದ್ದರೆ ಚರ್ಚೆ ನಡೆಯುವುದು ಉತ್ತಮ, ಯಾರೂ ಸಂಪ್ರದಾಯವನ್ನು ಪ್ರಶ್ನೆ ಮಾಡಲು ಮುಂದಾಗಬಾರದು ಎಂದರು. ಇದನ್ನೂ ಓದಿ: #MeToo ಅಭಿಯಾನದಲ್ಲಿ ಮಾನ್ವಿತಾ ಹುಡುಗರ ಪರ ಬ್ಯಾಟಿಂಗ್

  • #MeeToo- ನಟಿ ಶೃತಿ ಹರಿಹರನ್ ಬೆನ್ನಿಗೆ ನಿಂತ ಶ್ರದ್ಧಾ ಶ್ರೀನಾಥ್!

    #MeeToo- ನಟಿ ಶೃತಿ ಹರಿಹರನ್ ಬೆನ್ನಿಗೆ ನಿಂತ ಶ್ರದ್ಧಾ ಶ್ರೀನಾಥ್!

    ಬೆಂಗಳೂರು: ನಟಿ ಶೃತಿ ಹರಿಹರನ್ ಬಳಿಕ ಆಪರೇಷನ್ ಅಲಮೇಲಮ್ಮ ನಟಿ ಶ್ರದ್ಧಾ ಶ್ರೀನಾಥ್ ಕೂಡಾ ತಮಗಾದ ಕಹಿ ಅನುಭವ ಹಂಚಿಕೊಂಡಿದ್ದಾರೆ.

    ಬಸ್ ಪ್ರಯಾಣಿಕನೊಬ್ಬನ ಅನುಚಿತ ವರ್ತನೆ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಹಿಂದೆ ನಾನು ಕೊಚ್ಚಿಗೆ ಹೋಗುವಾಗ ಗಾಢ ನಿದ್ರೆಯಲ್ಲಿದ್ದೆ. ಯಾರೋ ಮೈ ಮುಟ್ಟಿದ ಅನುಭವವಾಗಿದ್ದಕ್ಕ ಇದ್ದಕ್ಕಿದ್ದ ಹಾಗೆ ಎಚ್ಚರವಾಯ್ತು. ಸಹ ಪ್ರಯಾಣಿಕ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದನು. ಇದಕ್ಕೆಲ್ಲ ನನ್ನ ಬಳಿ ಸಾಕ್ಷಿ ಇಲ್ಲ. ಆದ್ರೆ ಇವೆಲ್ಲ ಕೆಟ್ಟ ನೆನಪುಗಳು ಎಂದು ನೋವು ತೋಡಿಕೊಂಡಿದ್ದಾರೆ.

    ಅಲ್ಲದೆ ಆತ ನನ್ನ ತೊಡೆಯಲ್ಲಿ ಕೈ ಹಾಕಿದಾಗ ನಾನು ಸೆಲ್ಫಿ ತೆಗೆದುಕೊಳ್ಳಬೇಕಾಗಿತ್ತೋ ಏನೋ.. ನಿಮಗೆ ಎಲ್ಲದಕ್ಕೂ ಸಾಕ್ಷ್ಯ ಬೇಕಲ್ವೆ ಅಂತಾ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಶ್ರುತಿ ಹರಿಹರನ್‍ಗಾದ ಕೆಟ್ಟ ಅನುಭವದ ಬಗ್ಗೆ ನನಗೆ 2016 ನವಂಬರ್‍ನಲ್ಲೆ ಗೊತ್ತಿತ್ತು. ಈ ಹಿಂದೆ ನಾವಿಬ್ಬರು ಶೋನಲ್ಲಿ ಒಟ್ಟಿಗೆ ಪಾಲ್ಗೊಂಡಾಗ ಇಂಡಸ್ಟ್ರಿಯ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿದ್ರು. ಆದ್ರೇ ಅಲ್ಲಿ ಆಕೆ ಯಾರ ಹೆಸರು ಪ್ರಸ್ತಾಪ ಮಾಡಿರಲಿಲ್ಲ ಅಂತ ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ:  ಪಬ್ಲಿಕ್ ಟಿವಿಯಲ್ಲಿ ಶೃತಿ V/S ಅರ್ಜುನ್: ಇಬ್ಬರ ಮಾತುಕತೆಯ ಪೂರ್ಣ ಸಂಭಾಷಣೆ ಓದಿ

    ನಟಿ ಸಂಜನಾ ಗಲ್ರಾಣಿ ಬೆನ್ನಲ್ಲೇ ಶೃತಿ ಹರಿಹರನ್ ಕೂಡ #MeToo ಅಭಿಯಾನಕ್ಕೆ ಬೆಂಬಲ ಸೂಚಿಸಿ, ತಮಗಾದ ಅನುಭವವನ್ನು ಮ್ಯಾಗಜೀನ್ ಒಂದರ ಸಂದರ್ಶನದ ವೇಳೆ ಹಂಚಿಕೊಂಡಿದ್ದರು, ‘ವಿಸ್ಮಯ’ ಚಿತ್ರದ ರಿಹರ್ಸಲ್ ವೇಳೆ ತನಗೆ ಅರ್ಜುನ್ ಸರ್ಜಾ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಈ ಬಗ್ಗೆ ಪೇಸ್ ಬುಕ್ ನಲ್ಲೂ ಕೂಡ ಬರೆದುಕೊಳ್ಳುವ ಮೂಲಕ ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ: ಘಟನೆ ನಡೆದಾಗಲೇ ಚಲನಚಿತ್ರ ಮಂಡಳಿಗೆ ದೂರು ನೀಡಬೇಕಿತ್ತು: ಫಿಲ್ಮಂ ಚೇಂಬರ್ ಅಧ್ಯಕ್ಷ ಚೆನ್ನೇಗೌಡ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಬ್ಲಿಕ್ ಟಿವಿಯಲ್ಲಿ ಶೃತಿ V/S ಅರ್ಜುನ್: ಇಬ್ಬರ ಮಾತುಕತೆಯ ಪೂರ್ಣ ಸಂಭಾಷಣೆ ಓದಿ

    ಪಬ್ಲಿಕ್ ಟಿವಿಯಲ್ಲಿ ಶೃತಿ V/S ಅರ್ಜುನ್: ಇಬ್ಬರ ಮಾತುಕತೆಯ ಪೂರ್ಣ ಸಂಭಾಷಣೆ ಓದಿ

    – ದೌರ್ಜನ್ಯ ಎಸಗಿದ್ದಕ್ಕೆ ಸಾಕ್ಷಿ ಇದೆಯಾ ಅರ್ಜುನ್ ಪ್ರಶ್ನೆ
    – ಕೋರ್ಟ್ ಪರಿಗಣಿಸಬಹುದಾದ ಸಾಕ್ಷ್ಯ ನನ್ನ ಬಳಿ ಇದೆ – ಶೃತಿ

    ಬೆಂಗಳೂರು: ಪಬ್ಲಿಕ್ ಟಿವಿಯಲ್ಲಿ ನಟಿ ಶೃತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಇಬ್ಬರು ಎದುರಾಗಿದ್ದು, ಒಬ್ಬರಿಗೊಬ್ಬರ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದಾರೆ.

     ಅರ್ಜುನ್ ಸರ್ಜಾ, ಶೃತಿ ಹರಿಹರನ್ ಮತ್ತು ಪಬ್ಲಿಕ್ ಟಿವಿ ನಿರೂಪಕಿ ದಿವ್ಯಜ್ಯೋತಿ ನಡುವೆ ನಡೆದ ಸಂಭಾಷಣೆ ಇಲ್ಲಿದೆ.

    ಅರ್ಜುನ್ ಸರ್ಜಾ: ಒಂದೂವರೆ ವರ್ಷದ ಮೇಲೆ ಯಾಕೆ ಈ ಆರೋಪ?
    ಶೃತಿ ಹರಿಹರನ್: ಇವಾಗ ಯಾಕೆ ಪ್ರಶ್ನೆ ಮಾಡೋದು ತಪ್ಪು. ಪ್ರತಿಯೊಂದು ರಂಗದಲ್ಲಿಯೂ ಈ ಕಿರುಕುಳ ನಡೆಯುತ್ತಿರುತ್ತದೆ. ಈಗ ನಮ್ಮ ನೋವು ತೋಡಿಕೊಳ್ಳಲು ಮೀಟೂ ಎಂಬ ವೇದಿಕೆ ಸಿಕ್ಕಿದೆ. ನಾನು ಮಾಡಿರುವ ಆರೋಪಗಳಿಗೆ ಎಲ್ಲ ಸಾಕ್ಷ್ಯಾಧಾರಗಳು ನನ್ನ ಬಳಿ ಇವೆ. ಇದನ್ನೂ ಓದಿ:  ಶೃತಿ ಹರಿಹರನ್ ಆರೋಪಕ್ಕೆ ಅರ್ಜುನ್ ಸರ್ಜಾ ತಿರುಗೇಟು

    ನಿರೂಪಕಿ: ಯಾವ ರೀತಿಯ ಸಾಕ್ಷಿಗಳು ನಿಮ್ಮ ಬಳಿ ಇವೆ?
    ಶೃತಿ: ನ್ಯಾಯಾಲಯ ಒಪ್ಪಿಕೊಳ್ಳುವಂತಹ ಸಾಕ್ಷಿಗಳು ಇವೆ.

    ಅರ್ಜುನ್ ಸರ್ಜಾ: ನಾನು ತಬ್ಬಿಕೊಂಡಿದ್ದೇಕೆ ಪ್ರೂಫ್ ಇದೆಯಾ?
    ಶೃತಿ: ತಬ್ಬಿಕೊ0ಡಿರುವ ಪ್ರೂಫ್ ಸಿನಿಮಾದಲ್ಲಿದೆ. ಅದಕ್ಕೂ ಹೊರತಾಗಿಯೂ ನನ್ನ ಬಳಿ ಬೇರೆ ದಾಖಲೆಗಳಿದ್ದು, ಅಗತ್ಯವಿದ್ದಾಗ ಎಲ್ಲವನ್ನು ಬಿಡುಗಡೆ ಮಾಡುತ್ತೇನೆ. ತಮ್ಮ ಮೇಲಿರುವ ಆರೋಪಗಳನ್ನು ಸುಳ್ಳು ಎಂದು ಸಾಬೀತು ಮಾಡುವ ಅರ್ಜುನ್ ಸರ್ಜಾರ ಮೇಲಿದೆ. ಇದನ್ನೂ ಓದಿ: ಬೆಡ್ ರೂಂ, ಕ್ಲೋಸ್ ಅಪ್ ಸೀನ್ ಇದ್ದ ಚಿತ್ರವನ್ನ ಯಾಕೆ ಮಾಡ್ಬೇಕು – ಶ್ರುತಿ ವಿರುದ್ಧ ಅರ್ಜುನ್ ಸರ್ಜಾ ಅತ್ತೆ ಕಿಡಿ

    ನಿರೂಪಕಿ: ಅಂದು ಯಾಕೆ ನಿರ್ದೇಶಕರಿಗೆ ಹೇಳಲಿಲ್ಲ?
    ಶೃತಿ: ಅಂದು ಸಿನಿಮಾ ರಿಹರ್ಸಲ್ ಮಾಡುವಾಗ ಅರ್ಜುನ್ ಸರ್ ತಬ್ಬಿಕೊಂಡು ನನಗೆ ಇರುಸು-ಮುರುಸು ಉಂಟಾಯಿತು. ಅಂದೇ ನಾನು ನಿರ್ದೇಶಕರಿಗೆ ಮುಂದೆ ರಿಹರ್ಸಲ್ ಗೆ ಬರಲ್ಲ ಅಂತಾ ಹೇಳಿ ಶೂಟಿಂಗ್ ದಿನ ಮಾತ್ರ ಬಂದಿದ್ದೇನೆ.

    ಅರ್ಜುನ್ ಸರ್ಜಾ: ಅವರ ಬಳಿಯಿರುವ ಪ್ರೂಫ್‍ಗಳನ್ನು ಬೇಕಾದ್ರೆ ತೋರಿಸಲಿ. ಮೀಟೂ ಎಂಬ ದೊಡ್ಡ ವೇದಿಕೆಯನ್ನು ಒಳ್ಳೆಯದಕ್ಕೆ ಬಳಕೆ ಮಾಡಿಕೊಳ್ಳಲಿ. ಯಾರೋ ನನ್ನ ಮೇಲೆ ಆರೋಪ ಮಾಡ್ತಾರೆ, ಇಲ್ಲಿ ನಾನು ಇಲ್ಲ ಅನ್ನಬೇಕು, ಅವರು ಸುಳ್ಳು ಅಂತಾ ಹೇಳಬೇಕು. ಇದೊಂದು ಮಕ್ಕಳ ಆಟ ರೀತಿ ಮಾಡಿಕೊಂಡಂತೆ ನನಗೆ ಅನ್ನಿಸುತ್ತಿದೆ. ದಯವಿಟ್ಟು ಈ ವೇದಿಕೆಯನ್ನು ಚೀಪ್ ಆಗಿ ಬಳಕೆ ಮಾಡಿಕೊಳ್ಳಬೇಡಿ. ನಮಸ್ಕಾರ (ಫೋನ್ ಕಟ್)

    ನಿರೂಪಕಿ: ನಿರ್ದೇಶಕರು ನಿಮಗೆ ಇಂಟಿಮೇಟ್ ಸೀನ್ ಇದೇ ಅಂತಾ ಹೇಳಿಲ್ವಾ ಶೃತಿ ಅವ್ರೆ?
    ಶೃತಿ: ನಿರ್ದೇಶಕರು ಸಿನಿಮಾದ ಕಥೆ ಹೇಳುವಾಗ ಕ್ಲೋಸ್ ಸೀನ್ ಇರುತ್ತೆ ಅಂತಾ ಹೇಳಿದ್ದರು. ಆದ್ರೆ ಇದೂವರೆಗೂ ನಾನು ಹಲವು ನಟರೊಂದಿಗೆ ನಟಿಸಿದ್ದೇನೆ. ಆದ್ರೆ ಯಾರೊಂದಿಗೂ ನನಗೆ ಅನ್ ಕಂಫರ್ಟ್ ಫೀಲ್ ಆಗಿಲ್ಲ. ಗುಡ್ ಟಚ್ ಮತ್ತು ಬ್ಯಾಡ್ ಟಚ್ ಅನ್ನೋದು ಇರುತ್ತೆ. ಇದನ್ನೂ ಓದಿ:  #MeToo ಅನ್ನೋದು ದೊಡ್ಡ ರೋಗ-ಶೃತಿ ಹರಿಹರನ್ ವಿರುದ್ಧ ಹಿರಿಯ ನಟ ರಾಜೇಶ್ ಕಿಡಿ

    ನಿರೂಪಕಿ: ಅಂದೇ ಸಿನಿಮಾದಿಂದ ಹೊರ ಬರಲಿಲ್ಲ ಯಾಕೆ?
    ಶೃತಿ: ಅದು ಒಂದು ದೊಡ್ಡ ಸಿನಿಮಾ. ಅಲ್ಲಿ 150ಕ್ಕೂ ಹೆಚ್ಚು ಕಲಾವಿದರು, ತಂತ್ರಜ್ಞರು ಇರುತ್ತಾರೆ. ನನ್ನದು ಕೇವಲ 15 ದಿನದ ಶೂಟಿಂಗ್ ಮಾತ್ರ ಇತ್ತು. 5 ದಿನ ಅಲ್ರೆಡೆ ಶೂಟಿಂಗ್ ಮುಗಿದಿತ್ತು. ನನ್ನಿಂದಾಗಿ ಎಲ್ಲರ ಹೊಟ್ಟೆ ಮೇಲೆ ಹೊಡೆದಂತೆ ಆಗುತ್ತೆ ಎಂದು ನಿರ್ದೇಶಕರ ಬಳಿ ಹೇಳಿ ಶೂಟಿಂಗ್ ದಿನ ಮಾತ್ರ ಹೋಗಿ ಚಿತ್ರ ಮುಗಿಸಿದೆ. (ಫೋನ್ ಕಟ್)

    ಇದಕ್ಕೂ ಮೊದಲು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಅರ್ಜುನ್ ಸರ್ಜಾ, ಶೃತಿ ಆರೋಪದಿಂದ ನನಗೆ ತುಂಬಾ ನೋವಾಗಿದೆ. ಇದೂವರೆಗೂ ನಾನು 60 ರಿಂದ 70 ನಟಿಯರ ಜೊತೆ ನಟಿಸಿದ್ದೇನೆ. ಯಾರೂ ಸಹ ಈ ರೀತಿಯ ಆರೋಪ ಮಾಡಿಲ್ಲ. ಜೊತೆಯಲ್ಲಿಯೂ ಕೂರಿಸಿಕೊಂಡು ದೃಶ್ಯದಲ್ಲಿ ಹೇಗೆ ನಟಿಸಬೇಕು? ಡೈಲಾಗ್ ನಲ್ಲಿ ಏನಾದರೂ ಬದಲಾವಣೆ ಮಾಡಬೇಕು ಎಂಬುದರ ಕುರಿತು ಚರ್ಚಿಸುತ್ತೇವೆ. ನಮ್ಮ ವೃತ್ತಿಯನ್ನು ಮುಂದಿಟ್ಟುಕೊಂಡು ಇಂತಹ ಕೆಳಮಟ್ಟದಲ್ಲಿ ನಾನು ಎಂದೂ ಇಳಿದಿಲ್ಲ. ನಮ್ಮ ಪ್ರೊಫೆಶನ್ ಮುಂದೆ ಇಟ್ಟುಕೊಂಡು ಒಂದು ಹೆಣ್ಣಿನ ಮೈ ಮುಟ್ಟಬೇಕು ಎಂಬ ಚೀಪ್ ಮೆಂಟಾಲಿಟಿ ನನ್ನಲ್ಲಿ ಇಲ್ಲ. ನಾನು ಮೀಟೂ ವೇದಿಕೆ ಬಗ್ಗೆ ತುಂಬಾ ಗೌರವ ಹೊಂದಿದ್ದೇನೆ. ಈ ದೊಡ್ಡ ಅಭಿಯಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಶೃತಿ ಮಾತನಾಡುವ ಮಾತುಗಳಿಗೆ ಯಾವುದಾದರೂ ಆಧಾರವಿದೆಯಾ? ಶೃತಿ ಆರೋಪದ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ಇದನ್ನೂ ಓದಿ: #MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್

    ನಾನು ಪ್ರತಿಕ್ರಿಯಿಸಬಾರದು ಅಂತಾ ನಿರ್ಧರಿಸಿದ್ದೆ. ಆದ್ರೆ ‘ಮೌನಂ ಸಮ್ಮತಿ ಲಕ್ಷ್ಮಣಂ’ ಎಂದು ಅರ್ಥವಾಗುತ್ತದೆ ಎಂದು ಪಬ್ಲಿಕ್ ಟಿವಿ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದೇನೆ. ಒಂದೂವರೆ ವರ್ಷದ ಹಿಂದೆ ನಡೆದ ಸಿನಿಮಾ ಮುಗಿದಿದೆ. ಅಂದೇ ನಿರ್ದೇಶಕರಿಗೆ ಅಥವಾ ಚಲನಚಿತ್ರ ಮಂಡಳಿಗೆ ದೂರು ಕೊಡಬೇಕಿತ್ತು. ಇಷ್ಟು ದಿನ ಸುಮ್ಮನಿದ್ದು ಈವಾಗ ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ ಎಂದು ತಿಳಿಸಿದ್ದರು.  ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು #MeToo- ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/y8BB_452KJE

    https://www.youtube.com/watch?v=VJ3BO-m7Y5Q

    https://www.youtube.com/watch?v=OT35pZGgGtY

    https://www.youtube.com/watch?v=mbR4z3LEx00

    https://www.youtube.com/watch?v=Pvb9crCfEe4

  • ಶೃತಿ ಹರಿಹರನ್ ಆರೋಪಕ್ಕೆ ಅರ್ಜುನ್ ಸರ್ಜಾ ತಿರುಗೇಟು

    ಶೃತಿ ಹರಿಹರನ್ ಆರೋಪಕ್ಕೆ ಅರ್ಜುನ್ ಸರ್ಜಾ ತಿರುಗೇಟು

    ಬೆಂಗಳೂರು: ಚಂದನವನದಲ್ಲಿ #MeToo ಭಾರೀ ಸದ್ದು ಮಾಡುತ್ತಿದೆ. ನಟಿ ಶೃತಿ ಹರಿಹರನ್ ಮ್ಯಾಗಜಿನ್ ಗೆ ನೀಡಿದ ಸಂದರ್ಶನದಲ್ಲಿ, ನಟ ಅರ್ಜುನ್ ಸರ್ಜಾ ಚಿತ್ರೀಕರಣದ ವೇಳೆ ಅಸಭ್ಯವಾಗಿ ನಡೆದುಕೊಂಡಿದ್ದರ ಬಗ್ಗೆ ಹೇಳಿಕೊಂಡಿದ್ದರು. ಇಂದು ಫೇಸ್‍ಬುಕ್ ನಲ್ಲಿಯೂ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಪೋಸ್ಟ್ ಸಹ ಮಾಡಿದ್ದಾರೆ. ಶೃತಿ ಹರಿಹರನ್ ಆರೋಪಗಳ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅರ್ಜುನ್ ಸರ್ಜಾ, ಎಲ್ಲವೂ ಸುಳ್ಳು ಎಂದು ತಿರುಗೇಟು ನೀಡಿದ್ದಾರೆ.

    ಅರ್ಜುನ್ ಸರ್ಜಾ ಹೇಳಿದ್ದೇನು?
    ಶೃತಿ ಆರೋಪದಿಂದ ನನಗೆ ತುಂಬಾ ನೋವಾಗಿದೆ. ಇದೂವರೆಗೂ ನಾನು 60 ರಿಂದ 70 ನಟಿಯರ ಜೊತೆ ನಟಿಸಿದ್ದೇನೆ. ಯಾರೂ ಸಹ ಈ ರೀತಿಯ ಆರೋಪ ಮಾಡಿಲ್ಲ. ಜೊತೆಯಲ್ಲಿಯೂ ಕೂರಿಸಿಕೊಂಡು ದೃಶ್ಯದಲ್ಲಿ ಹೇಗೆ ನಟಿಸಬೇಕು? ಡೈಲಾಗ್ ನಲ್ಲಿ ಏನಾದರೂ ಬದಲಾವಣೆ ಮಾಡಬೇಕು ಎಂಬುದರ ಕುರಿತು ಚರ್ಚಿಸುತ್ತೇವೆ. ನಮ್ಮ ವೃತ್ತಿಯನ್ನು ಮುಂದಿಟ್ಟುಕೊಂಡು ಇಂತಹ ಕೆಳಮಟ್ಟದಲ್ಲಿ ನಾನು ಎಂದೂ ಇಳಿದಿಲ್ಲ. ನಮ್ಮ ಪ್ರೊಫೆಶನ್ ಮುಂದೆ ಇಟ್ಟುಕೊಂಡು ಒಂದು ಹೆಣ್ಣಿನ ಮೈ ಮುಟ್ಟಬೇಕು ಎಂಬ ಚೀಪ್ ಮೆಂಟಾಲಿಟಿ ನನ್ನಲ್ಲಿ ಇಲ್ಲ. ನಾನು ಮೀಟೂ ವೇದಿಕೆ ಬಗ್ಗೆ ತುಂಬಾ ಗೌರವ ಹೊಂದಿದ್ದೇನೆ. ಈ ದೊಡ್ಡ ಅಭಿಯಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಶೃತಿ ಮಾತನಾಡುವ ಮಾತುಗಳಿಗೆ ಯಾವುದಾದರೂ ಆಧಾರವಿದೆಯಾ? ಶೃತಿ ಆರೋಪದ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ.

    ನಾನು ಪ್ರತಿಕ್ರಿಯಿಸಬಾರದು ಅಂತಾ ನಿರ್ಧರಿಸಿದ್ದೆ. ಆದ್ರೆ ‘ಮೌನಂ ಸಮ್ಮತಿ ಲಕ್ಷ್ಮಣಂ’ ಎಂದು ಅರ್ಥವಾಗುತ್ತದೆ ಎಂದು ಪಬ್ಲಿಕ್ ಟಿವಿ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದೇನೆ. ಒಂದೂವರೆ ವರ್ಷದ ಹಿಂದೆ ನಡೆದ ಸಿನಿಮಾ ಮುಗಿದಿದೆ. ಅಂದೇ ನಿರ್ದೇಶಕರಿಗೆ ಅಥವಾ ಚಲನಚಿತ್ರ ಮಂಡಳಿಗೆ ದೂರು ಕೊಡಬೇಕಿತ್ತು. ಇಷ್ಟು ದಿನ ಸುಮ್ಮನಿದ್ದು ಈವಾಗ ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ ಎಂದು ತಿಳಿಸಿದ್ರು.

    ಶೃತಿ ಆರೋಪವೇನು?
    ವಿಸ್ಮಯ ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ ‘ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ ‘ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು.

    ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. ‘ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ ‘ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ‘ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/VJ3BO-m7Y5Q

    https://www.youtube.com/watch?v=Pvb9crCfEe4

    https://www.youtube.com/watch?v=o6ijvgvfrJc

  • #MeToo ಅನ್ನೋದು ದೊಡ್ಡ ರೋಗ-ಶೃತಿ ಹರಿಹರನ್ ವಿರುದ್ಧ ಹಿರಿಯ ನಟ ರಾಜೇಶ್ ಕಿಡಿ

    #MeToo ಅನ್ನೋದು ದೊಡ್ಡ ರೋಗ-ಶೃತಿ ಹರಿಹರನ್ ವಿರುದ್ಧ ಹಿರಿಯ ನಟ ರಾಜೇಶ್ ಕಿಡಿ

    ಬೆಂಗಳೂರು: ದೇಶಾದ್ಯಂತ #MeToo ಗಾಳಿ ಹವಾ ಎದ್ದಿದ್ದು, ಇದೀಗ ಸ್ಯಾಂಡಲ್ ವುಡ್ ನಲ್ಲಿಯೂ #MeToo ಆರೋಪಗಳು ಒಂದೊಂದಾಗಿಯೇ ಹೊರಬರುತ್ತಿದೆ. ಸಂಜನಾ ಗಲ್ರಾಣಿಯ ಬೆನ್ನಲ್ಲೇ ನಟಿ ಶೃತಿ ಹರಿಹರನ್ ಅವರು ಇಂದು ನಟ ಅರ್ಜುನ್ ಸರ್ಜಾ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ. ಈ ಕುರಿತು ಹಿರಿಯ ನಟ ಹಾಗೂ ಅರ್ಜುನ್ ಸರ್ಜಾ ಅವರ ಮಾವ ರಾಜೇಶ್ ಅವರು ಶೃತಿ ಹರಿಹರನ್ ವಿರುದ್ಧ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಜೇಶ್, ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನನಗೆ ತಿಳಿದಿರುವಂತೆ ಅರ್ಜುನ್ ಅವರನ್ನು ಸುಮಾರು ವರ್ಷಗಳಿಂದ ನೋಡುತ್ತಿದ್ದೇನೆ. ಸೌಂದರ್ಯ ಹಾಗೂ ಇನ್ನಿತರ ಕಲಾವಿದರ ಜೊತೆ ಅಭಿನಯಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಇಂದಿನ ಅಲ್ಲ ಹಳೆಯ ಕನ್ನಡ ಹಿರೋಯಿನ್ ಗಳ ಜೊತೆ ಅರ್ಜುನ್ ನಟನೆ ಮಾಡಿದ್ದಾರೆ. ಆದ್ರೆ ಅವರ ವಿರುದ್ಧ ಒಂದೂ ದೂರು ಇಲ್ಲ. ಇದೊಂದು ರೋಗ ಶುರುವಾಗಿದೆ. 8-10 ವರ್ಷದ ಹಿಂದಿನದ್ದನ್ನು ತೆಗೆದು ರಗಳೆ ಮಾಡುವುದು ಸರಿಯೇ? ಈ ಮೂಲಕ ಸಿನಿಮಾ ರಂಗಕ್ಕೆ ಕೆಟ್ಟ ಹೆಸರು. ಸಿನಿಮಾ ಹೀರೋಗಳು ಕೆಟ್ಟವರು ಅಂತ ಆಪಾದನೆ ಮಾಡುವುದು ಯಾವ ನ್ಯಾಯ ಅಂತ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು #MeToo- ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ

    ಅರ್ಜುನ್ ಅಂತ ಹುಡುಗ ಅಲ್ಲ. ಒಳ್ಳೆಯ ಹುಡುಗ. ಸಂಭಾವಿತ ವ್ಯಕ್ತಿ ನಮ್ಮ ಅರ್ಜುನ್. ಇನ್ನೊಬ್ಬರ ಬಗ್ಗೆ ಕೆಣಕೋದಾಗಲಿ, ಆಪಾದನೆ ಮಾಡೋದಾಗಲಿ ಅಥವಾ ಕಾಮುಕ ದೃಷ್ಟಿಯಿಂದ ನೋಡೋದಾಗಲಿ ಸರಿಯಲ್ಲ ಅಂತ ಶೃತಿ ವಿರುದ್ಧ ರಾಜೇಶ್ ಕೆಂಡಾಮಂಡಲರಾಗಿದ್ದಾರೆ.

    ನಿನ್ನೆ-ಮೊನ್ನೆ ಬಂದ ನಟಿಯರು. ಇವರಿಗೆಲ್ಲ ಸರಿಯಾಗಿ ಕನ್ನಡ ಮಾತಾಡೋಕೆ ಬರಲ್ಲ. ಇವರೆಲ್ಲ ಅರ್ಜುನ್ ಮೇಲೆ ಏನು ಆಪಾದನೆ ಮಾಡೋದು. ಇವಳ ಮೇಲೆ ಕೇಸ್ ಹಾಕಿ ಮಾನನಷ್ಟ ಮೊಕದ್ದಮೆ ಹೂಡಲು ಬಾಕಿಯಿದೆ ಅಂತ ಹೇಳಿದ್ರು.

    8-10 ವರ್ಷದ ಹಿಂದಿನ ಕೇಸನ್ನು ಮೆಲುಕು ಹಾಕುವ ಇವರು ಆ ಸಂದರ್ಭಗಳಲ್ಲಿ ಯಾಕೆ ಹೇಳಿಲ್ಲ ಅಂತ ಕಿಡಿಕಾರಿದ್ರು. ಇದನ್ನೂ ಓದಿ: #MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Pvb9crCfEe4

  • #MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್

    #MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್

    ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿದ ಆರೋಪವನ್ನು ನಟಿ ಶೃತಿ ಹರಿಹರನ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

    ಫೇಸ್ ಬುಕ್ ನಲ್ಲಿ ಏನಿದೆ?:
    ನಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳನ್ನು ಹೇಳಿಕೊಳ್ಳಲು #MeToo ಅಭಿಯಾನವೊಂದು ವೇದಿಕೆಯಾಗಿದೆ. ಈ ಮೂಲಕ ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಹೊರಹಾಕಲಾಗುತ್ತಿದೆ.

    ಹಾಗೆಯೇ ನನಗೂ ಇಂದು ನನ್ನ ಮೌನ ಮುರಿಯುವ ಸಮಯವಿದು. ನನ್ನಂತೆ ಸಮಾಜದ ಬಹಳಷ್ಟು ಹೆಣ್ಣು ಮಕ್ಕಳು ಯಾತನೆ ಅನುಭವಿಸಿದ್ದಾರೆ. ಇಲ್ಲಿ ನಾನು ಅನುಭವಿಸಿದ ಯಾತನೆಯನ್ನು ಬಹಿರಂಗಪಡಿಸಿದ್ದೇನೆ. ನನಗೆ ಅರ್ಜುನ್ ಸರ್ಜಾ ಮಾತ್ರವಲ್ಲದೇ ಬಹಳಷ್ಟು ಮಂದಿಯಿಂದ ಮೀಟೂ ಅನುಭವವಾಗಿದೆ. ಈ ಬಗ್ಗೆ ಹೇಳಿಕೊಳ್ಳಲು ಧೈರ್ಯ ಮಾಡಿದ್ದೇನೆ. ಮಾತ್ರವಲ್ಲದೇ ಈ ಬಗ್ಗೆ ಶೀಘ್ರವೇ ಪತ್ರಿಕಾಗೋಷ್ಠಿ ನಡೆಸಿ ಇನ್ನೊಂದಷ್ಟು ವಿಚಾರಗಳನ್ನು ತಿಳಿಸುವುದಾಗಿ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

    18 ವರ್ಷದವಳಿದ್ದಾಗಲೇ ನನಗೆ ಚಿತ್ರರಂಗದ ದೌರ್ಜನ್ಯದ ಬಗ್ಗೆ ಅನುಭವವಾಗಿದೆ. ಚಿತ್ರರಂಗದ ಹಿರಿಯರೊಬ್ಬರು ನನ್ನ ಕಾಲನ್ನೂ ಕೂಡ ಹಿಡಿದಿದ್ರೂ, ನಾನು ಭಯದಿಂದ ಓಡಿಹೋಗಿದ್ದೆ ಅಂತ ಚಿಂತ್ರರಂಗದಲ್ಲಿ ಅನುಭವಿಸಿದ್ದ ಯಾತನೆಗಳನ್ನು ಈ ಹಿಂದೆ ಶೃತಿ ಅವರು ಎಳೆಎಳೆಯಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡುತ್ತಾ ಬಿಚ್ಚಿಟ್ಟಿದ್ದರು.

    ಆರೋಪವೇನು?:
    ಕಳೆದ ವರ್ಷ ‘ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ‘ವಿಸ್ಮಯ’ ಸಿನಿಮಾಕ್ಕೂ ಮೊದಲು ನಾನು ಹಲವು ಸಿನಿಮಾಗಳನ್ನು ಮಾಡಿದ್ದೇನೆ. ಹಲವು ನಟರ ಜೊತೆಯೂ ಅಭಿನಯಿಸಿದ್ದೇನೆ. ಇಂದಿಗೂ ನನಗೆ ಬೇರೆ ನಟರ ಜೊತೆ ನಟಿಸುವಾಗ ಯಾವ ತೊಂದರೆಗಳೂ ಆಗಿಲ್ಲ. ಚಿತ್ರೀಕರಣದ ಸಂದರ್ಭದಲ್ಲಿ ನಾವು ಪರಸ್ಪರ ಗೌರವದಿಂದಲೇ ನಡೆದುಕೊಳ್ಳುತ್ತಿದ್ದೇವು. ನಾಯಕ-ನಾಯಕಿಯ ನಡುವಿನ ಪ್ರಣಯದ ದೃಶ್ಯಗಳನ್ನು ಚಿತ್ರೀಕರಿಸುವ ಸಂದರ್ಭಗಳಲ್ಲಿಯೂ ಕಲಾವಿದರ ನಡುವೆ ಬಹುಸೂಕ್ಷ್ಮವಾದ ಒಂದು ಗಡಿ ರೇಖೆ ಇರುತ್ತದೆ. ಅದನ್ನು ಮೀರಿ ನಾವು ನಡೆದುಕೊಳ್ಳುತ್ತಿರಲಿಲ್ಲ. ಒಂದು ವೇಳೆ ಆ ರೇಖೆಯನ್ನು ದಾಟಿದ್ರೆ ಹೆಣ್ಣಿಗೆ ಇರುಸು ಮುರುಸು ಉಂಟಾಗಲು ಆರಂಭವಾಗುತ್ತದೆ. ‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಆಗಿದ್ದು ಇದೇ. ಚಿತ್ರೀಕರಣದ ವೇಳೆ ನಟ ಅರ್ಜುನ್ ಸರ್ಜಾ ಅವರು ಗಡಿರೇಖೆ ದಾಟಿದ್ದರು ಅಂತ ಅವರು ಮ್ಯಾಗಜಿನ್ ಒಂದು ಸಂದಶನದ ವೇಳೆ ನಡೆದಿದ್ದ ಘಟನೆಯ ಮೆಲುಕು ಹಾಕಿದ್ದರು.

    ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ ‘ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಸಕರ ಬಳಿ ತೆರಳಿ ‘ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು.

    ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. ‘ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ ‘ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ‘ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Pvb9crCfEe4

    https://www.youtube.com/watch?v=uw6_G0ZSGlY

    https://www.youtube.com/watch?v=b38lBhiL-y8