Tag: St. Mary’s Island

  • ನಿರ್ಬಂಧ ಉಲ್ಲಂಘಿಸಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ- ಕೇಸ್ ದಾಖಲು

    ನಿರ್ಬಂಧ ಉಲ್ಲಂಘಿಸಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ- ಕೇಸ್ ದಾಖಲು

    ಉಡುಪಿ: ಇಡೀ ಜಗತ್ತೇ ಕೊರೋನಾ ಮಹಾಮಾರಿಯಿಂದ ತತ್ತರಿಸುತ್ತಿದ್ದರೆ, ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ರಾತ್ರಿ ಪಾರ್ಟಿ ನಡೆದಿದೆ ಅನ್ನೋ ಆರೋಪ ಕೇಳಿಬಂದಿದೆ. ಕರಾವಳಿ ಕಾವಲುಪಡೆ ಪೊಲೀಸ್ ಠಾಣೆಯಲ್ಲಿ ಕೇಸ್ ಆಗಿದೆ.

    ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಸುದೇಶ್ ಶೆಟ್ಟಿ, ನಿರ್ಮಿತಿ ಕೇಂದ್ರದ ಕೆಲ ಸಿಬ್ಬಂದಿಗಳ ಸಹಿತ ಏಳು ಮಂದಿ ಮಲ್ಪೆಯಿಂದ 8 ಕಿ.ಮೀ. ದೂರದಲ್ಲಿ ಸಮುದ್ರದ ಮಧ್ಯೆ ಇರುವ ಸೈಂಟ್ ಮೇರಿಸ್ ದ್ವೀಪದಲ್ಲಿ ಶನಿವಾರ ರಾತ್ರಿ ಗುಂಡು ಪಾರ್ಟಿ ನಡೆಸಿದ್ದಾರೆ ಎಂಬ ಆರೋಪವೂ ಇದೆ. ಶನಿವಾರ ರಾತ್ರಿ 9.30ಕ್ಕೆ ದ್ವೀಪದಲ್ಲಿ ವಿದ್ಯುತ್ ದೀಪಗಳ ಬೆಳಕು ಕಾಣುತ್ತಿತ್ತು. ಬೆಳಕು 11 ಗಂಟೆಯವರೆಗೂ ಒಂದೇ ಸ್ಥಳದಲ್ಲಿರುವುದನ್ನು ಗಮನಿಸಿದ ಸ್ಥಳೀಯರು, ಈ ಮಾಹಿತಿಯನ್ನು ಮಲ್ಪೆ ಪೊಲೀಸ್ ಠಾಣೆ ಹಾಗೂ ಕರಾವಳಿ ಕಾವಲು ಪೊಲೀಸರಿಗೆ ನೀಡಿದ್ದಾರೆ.

    ಪೊಲೀಸರು ಅಲರ್ಟ್ ಆಗುತ್ತಿದ್ದಂತೆ ದ್ವೀಪದಲ್ಲಿ ಉರಿಯುತ್ತಿದ್ದ ದೀಪ ಆರಿಸಲಾಯಿತು. ಎರಡು ಕಾರುಗಳಲ್ಲಿ ಬಂದಿರುವವರು ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳಿದ್ದರು. ಕಾರುಗಳನ್ನು ಪ್ರವಾಸಿ ಬೋಟುಗಳ ಜೆಟ್ಟಿಯ ಸಮೀಪ ನಿಲ್ಲಿಸಲಾಗಿತ್ತು. ಅದರಲ್ಲಿ ಒಂದು ಕಾರು ಮಲ್ಪೆ ಬೀಚ್ ನಿರ್ವಾಹಕ ಸುದೇಶ್ ಶೆಟ್ಟಿ ಅವರಿಗೆ ಸೇರಿದ್ದಾದರೆ, ಇನ್ನೊಂದು ನಿರ್ಮಿತಿ ಕೇಂದ್ರದ ಸಚಿನ್ ಅವರದ್ದಾಗಿತ್ತು. ಕರಾವಳಿ ಕಾವಲು ಪಡೆಯ ಪೊಲೀಸರು ಪರಿಶೀಲಿಸಿ, ಸುದೇಶ್ ಅವರಿಗೆ ದೂರವಾಣಿ ಕರೆ ಮಾಡಿದಾಗ, ತಾನು ಸೈಂಟ್ ಮೇರಿಸ್ ದ್ವೀಪದಲ್ಲಿ ಇರುವುದನ್ನು ಸುದೇಶ್ ಒಪ್ಪಿಕೊಂಡಿದ್ದರು. ತನ್ನೊಂದಿಗೆ ನಾಲ್ಕೈದು ಜನರಿದ್ದು, ದ್ವೀಪದಲ್ಲಿರುವ ಪರಿಕರಗಳನ್ನು ಸಾಗಿಸಲು ಬಂದಿದ್ದೆವು. ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಿದ್ದು ಕಡಿಮೆ ಆದಾಗ ವಾಪಸ್ ಬರುವುದಾಗಿ ತಿಳಿಸಿದ್ದರು. ದ್ವೀಪಕ್ಕೆ ತೆರಳಿದ ಪೊಲೀಸರು ಅಲ್ಲಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಈ ಕುರಿತು ನಗರಸಭೆ ವಡಭಾಂಡೇಶ್ವರ ವಾರ್ಡ್ ಚುನಾಯಿತ ಸದಸ್ಯ ಯೋಗೀಶ್ ಸಾಲ್ಯಾನ್ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾನೂನು ಮೀರಿದವರು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ನಿರ್ವಾಹಕರೇ ಆಗಿರುವುದರಿಂದ ಸಮಿತಿಯ ಕರಾರಿನಲ್ಲಿ ಏನು ಅವಕಾಶ ಅವರಿಗಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು. ವಶಕ್ಕೆ ಪಡೆದವರನ್ನು ವಿಚಾರಣೆ ನಡೆಸಿ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಅವರಿಗೆ ವರದಿ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಜಿಲ್ಲಾಧಿಕಾರಿಗಳು ಏನು ಕ್ರಮ ಜರಗಿಸಲಿದ್ದಾರೆ ಎಂಬ ಕುತೂಹಲ ಸಾರ್ವಜನಿಕರಲ್ಲಿದೆ.

  • ಸೈಂಟ್ ಮೇರೀಸ್ ಭೂಲೋಕದ ಮೇಲಿನ ಸ್ವರ್ಗ- ಸಮುದ್ರದ ಒಡಲಲ್ಲಿ ದಿನಪೂರ್ತಿ ಖುಷಿ

    ಸೈಂಟ್ ಮೇರೀಸ್ ಭೂಲೋಕದ ಮೇಲಿನ ಸ್ವರ್ಗ- ಸಮುದ್ರದ ಒಡಲಲ್ಲಿ ದಿನಪೂರ್ತಿ ಖುಷಿ

    ದು ಭೂಲೋಕದ ಮೇಲಿನ ಸ್ವರ್ಗ..! ಕಳೆದ ನಾಲ್ಕು ತಿಂಗಳಿಂದ ಆ ಸ್ವರ್ಗಕ್ಕೆ ಬಾಗಿಲು ಹಾಕಲಾಗಿತ್ತು. ಸ್ವರ್ಗಕ್ಕೆ ಹೋಗಲಾಗದೆ, ಜನರೆಲ್ಲಾ ಭೂಮಿ ಮೇಲೆಯೇ ಅಲೆದಾಡುತ್ತಿದ್ದರು. ಇದೀಗ ಸ್ವರ್ಗದ ಬಾಗಿಲು ತೆರೆದಿದ್ದು ಜನ ಹಾಡುತ್ತಾ.. ಕುಣಿಯುತ್ತಾ ಮಸ್ತ್ ಮಜಾ ಮಾಡುತ್ತಾ ಸುಂದರ ಸ್ವರ್ಗಕ್ಕೆ ಟ್ರಿಪ್ ಶುರು ಮಾಡಿದ್ದಾರೆ.

    ಕಣ್ಣು ಹಾಯಿಸಿದಲ್ಲೆಲ್ಲಾ ನೀಲಿ ನೀರು.., ರಭಸವಾಗಿ ಬೀಸೋ ತಂಗಾಳಿ.., ಆಕಾಶದಲ್ಲಿ ಹಾರಾಡೋ ಅನುಭವ..
    ಈ ಖುಷಿ ಒಟ್ಟಿಗೆ ಒಂದೇ ಕಡೆ ಸಿಗಬೇಕಾದ್ರೆ ನೀವು ಉಡುಪಿಗೆ ಬರಬೇಕು. ಮಲ್ಪೆಗೆ ಬಂದು ಸೈಂಟ್ ಮೇರೀಸ್ ದ್ವೀಪಕ್ಕೆ ಹೋಗುವ ಬೋಟ್ ಹತ್ತಬೇಕು. ಬೋಟ್ ಹತ್ತುತ್ತಿದ್ದಂತೆ ಕಿವಿಗೆ ಡೀಜೆ ಮ್ಯೂಸಿಕ್ ಅಪ್ಪಳಿಸುತ್ತದೆ. ಕೆಳಗೆ ಸಮುದ್ರ.. ಮೇಲೆ ಆಗಸ ಕಿವಿಗಪ್ಪಳಿಸೋ ಹಾಡು ಯಾರಿಗುಂಟು ಯಾರಿಗಿಲ್ಲ ಅಷ್ಟು ಎಂಜಾಯ್ ಮಾಡಬಹುದು.

    ಮಳೆಗಾಲದಲ್ಲಿ ಮೂರೂವರೆ ತಿಂಗಳು ಸಂಪೂರ್ಣ ಬಂದ್ ಆಗಿದ್ದ ಉಡುಪಿಯ ಸೈಂಟ್ ಮೇರೀಸ್ ಪ್ರವಾಸ ಇದೀಗ ಮತ್ತೆ ಆರಂಭವಾಗಿದೆ. ಬೆಳಗ್ಗೆ 10 ಗಂಟೆಯಿಂದ ಟ್ರಿಪ್ ಶುರುವಾಗುತ್ತದೆ. ಸಂಜೆಯ ತನಕ ನಾಲ್ಕು ಸುತ್ತ ನೀರು ನಡುವೆ ಇರುವ ಭೂಲೋಕದ ಸ್ವರ್ಗಕ್ಕೆ ಹೋಗಿ ಎಂಜಾಯ್ ಮಾಡಬಹುದು. ಮಲ್ಪೆ ಬೋಟ್ ಪಾಯಿಂಟ್ ನಿಂದ ಆರೂವರೆ ಕಿಲೋಮೀಟರ್ ದೂರವಿರುವ ಸೈಂಟ್ ಮೇರೀಸ್ ದ್ವೀಪದ ಕೂಗಳತೆ ದೂರದಲ್ಲಿ ದೊಡ್ಡ ಬೋಟನ್ನು ನಿಲ್ಲಿಸಲಾಗುತ್ತದೆ. ಸಮುದ್ರದ ಮಧ್ಯೆಯೇ ಮತ್ತೊಂದು ಚಿಕ್ಕ ಬೋಟ್‍ಗೆ ಎಲ್ಲಾ ಪ್ರವಾಸಿಗರನ್ನು ಶಿಫ್ಟ್ ಮಾಡಲಾಗುತ್ತದೆ. ಆ ಬೋಟ್ ದ್ವೀಪ ತಲುಪುತ್ತದೆ. ದೊಡ್ಡ ಬೋಟ್ ಮಲ್ಪೆಗೆ ವಾಪಾಸ್ಸಾಗುತ್ತದೆ

    ಫೋಟೋಗಳಲ್ಲಿ ಸೈಂಟ್ ಮೇರೀಸನ್ನು ಕಣ್ತುಂಬಿಕೊಂಡಿದ್ದ ಮೈಸೂರಿನ ಮಾಲಿನಿ ಮತ್ತು ಅವರ ಕುಟುಂಬ ಉಡುಪಿಗೆ ಬಂದಿತ್ತು. ಸೈಂಟ್ ಮೆರೀಸ್ ಗೂ ಭೇಟಿ ನೀಡಿದೆ. ಜೀವನದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಯಾನ ಮಾಡಿದ ಅನುಭವ ಈ ಕುಟುಂಬಕ್ಕೆ ಸಿಕ್ಕಿದೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಾಲಿನಿ, ನಾನು ಗಾಳಿಯಲ್ಲಿ ತೇಲಾಡುತ್ತಿರುವ ಅನುಭವವಾಗುತ್ತಿದೆ. ಅದ್ಭುತ ಅನ್ನೋದನ್ನು ನಾನಿಲ್ಲಿ ಕಂಡುಕೊಂಡೆ ಎಂದು ಹೇಳಿದರು. ಸುಮಾರು 15 ಕಿಲೋಮೀಟರ್ ಅರಬ್ಬಿ ಸಮುದ್ರದಲ್ಲಿ ಯಾನ ಮಾಡಿ ಬಹಳ ಖುಷಿಯಾಯ್ತು ಅಂತ ಹೇಳಿದರು.

    ಪ್ರವಾಸಿಗ ನಿರಂಜನ್ ಮಾತನಾಡಿ, ಎರಡನೆ ಬಾರಿಗೆ ಸೈಂಟ್ ಮೆರೀಸ್ ನೋಡ್ತಾಯಿದ್ದೇನೆ. ಮಕ್ಕಳೂ ಬಹಳ ಎಂಜಾಯ್ ಮಾಡಿದ್ದಾರೆ. ಮತ್ತೆ ಮತ್ತೆ ಸೈಂಟ್ ಮೇರೀಸ್‍ಗೆ ಬರಬೇಕೆಂದು ಡಿಸೈಡ್ ಮಾಡಿದ್ದೇವೆ ಎಂದರು.

    ಭಾರತವನ್ನು ಕಂಡು ಹಿಡಿದ ಕಲ್ಲಿಕೋಟೆಗೆ ಹೋಗುವ ಮೊದಲು ಸೈಂಟ್ ಮೇರೀಸ್ ದ್ವೀಪಕ್ಕೆ ಬಂದಿದ್ದ. ಇಲ್ಲಿನ ಸೌಂದರ್ಯವನ್ನು ಆತ ಬಹಳ ವರ್ಣಿಸಿದ್ದ. ಸೈಂಟ್ ಮೇರೀಸ್ ದ್ವೀಪದಲ್ಲಿ ಕಾಣಸಿಗುವ ವಿಭಿನ್ನಾಕಾರದ ಕಲ್ಲುಗಳು ಎಲ್ಲರನ್ನು ಸೆಳೆಯುತ್ತದೆ. ಕಲ್ಲಿನ ಮೇಲೆ ಅಪ್ಪಳಿಸೋ ತೆರೆಗಳನ್ನು ಅನುಭವಿಸೋದೆ ಚಂದ. ಸೂರ್ಯಾಸ್ತದ ಸಂದರ್ಭದಲ್ಲಿ ಇದ್ರಂತೂ ಇಡೀ ಸಮುದ್ರ ಬಂಗಾರದ ಬಣ್ಣದಲ್ಲಿ ಹೊಳೆಯುತ್ತದೆ. ಈ ಬಾರಿ ಸೇಫ್ಟಿ ದೃಷ್ಟಿಯಿಂದ ದೊಡ್ಡ ಬೋಟ್, ಅದರಲ್ಲೊಂದು ವಾಶ್ ರೂಮನ್ನೂ ನಿರ್ಮಾಣ ಮಾಡಲಾಗಿದೆ. ದೇಶ ವಿದೇಶದ ಪ್ರವಾಸಿಗರಿಗೆ ಇದು ಬಹಳ ಇಷ್ಟವಾಗಿದೆ.

    ಬೋಟ್ ಮಾಲೀಕ ಪ್ರಕಾಶ್ ಕೊಡವೂರು, ಮಾತನಾಡಿ ಬೋಟ್‍ನಲ್ಲಿ ಲೈಫ್ ಜಾಕೆಟ್- ಕುಡಿಯುವ ನೀರಿನ ವ್ಯವಸ್ಥೆ ಎಲ್ಲವನ್ನೂ ಮಾಡಲಾಗಿದೆ. 250 ರುಪಾಯಿ ಟಿಕೆಟ್‍ನಲ್ಲಿ ಸೈಂಟ್ ಮೇರೀಸ್ ಕಣ್ತುಂಬಿಕೊಳ್ಳಬಹುದು. ಮಕ್ಕಳಿಗೆ 150 ರುಪಾಯಿ ಟಿಕೆಟ್ ನಿಗದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಮಳೆಗಾಲ ಆರಂಭವಾಗುವವರೆಗೆ ಸೈಂಟ್ ಮೇರೀಸ್ ಎಂಬ ಭೂಲೋಕದ ಮೇಲಿನ ಸ್ವರ್ಗ ಓಪನ್ ಇರುತ್ತದೆ. ಅರ್ಧಗಂಟೆ ದೊಡ್ಡ ಬೋಟ್‍ನಲ್ಲಿ ಪಯಣ, ಅಲ್ಲಿಂದ ಸಣ್ಣ ಬೋಟ್ ಮೂಲಕ ದ್ವೀಪಕ್ಕೆ ಶಿಫ್ಟ್, ಅಲ್ಲಿ ಬೇಕಾದಷ್ಟು ಸುತ್ತಾಟ, ಮತ್ತೆ ಎರಡು ಬೋಟ್‍ಗಳಲ್ಲಿ ಮಲ್ಪೆಗೆ ವಾಪಾಸ್. ಇಷ್ಟಕ್ಕೆ ತಗಲುವ ವೆಚ್ಚ 250 ರೂಪಾಯಿ ಮಾತ್ರ. ತಮಗೆ ಬೇಕಾದ ತಿಂಡಿ- ಊಟ ಕೊಂಡೊಯ್ದು ಫ್ಯಾಮಿಲಿ.. ಫ್ರೆಂಡ್ಸ್ .., ಲವ್ವರ್ಸ್ ಸಿಕ್ಕಾಪಟ್ಟೆ ಎಂಜಾಯ್ ಮಾಡಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv