Tag: stab

  • 1ನೇ ತರಗತಿ ಬಾಲಕನ ಹೊಟ್ಟೆಗೆ ಚಾಕು ಇರಿದ 6ನೇ ಕ್ಲಾಸ್ ವಿದ್ಯಾರ್ಥಿನಿ- ಪ್ರಿನ್ಸಿಪಲ್ ಅರೆಸ್ಟ್

    1ನೇ ತರಗತಿ ಬಾಲಕನ ಹೊಟ್ಟೆಗೆ ಚಾಕು ಇರಿದ 6ನೇ ಕ್ಲಾಸ್ ವಿದ್ಯಾರ್ಥಿನಿ- ಪ್ರಿನ್ಸಿಪಲ್ ಅರೆಸ್ಟ್

    ಲಕ್ನೋ: ಶಾಲೆಯ ಟಾಯ್ಲೆಟ್‍ನಲ್ಲಿ 1ನೇ ತರಗತಿ ವಿದ್ಯಾರ್ಥಿ ಮೇಲೆ ಹಿರಿಯ ವಿದ್ಯಾರ್ಥಿನಿ ಚಾಕುವಿನಿಂದ ಹಲ್ಲೆ ಮಾಡಿರೋ ಆಘಾತಕಾರಿ ಘಟನೆ ಉತ್ತರಪ್ರದೇಶ ರಾಜಧಾನಿ ಲಕ್ನೋದಲ್ಲಿ ನಡೆದಿದೆ.

    ಬಾಲಕನ ಮೇಲೆ 6ನೇ ತರಗತಿಯ ವಿದ್ಯಾರ್ಥಿನಿ ಹಲ್ಲೆ ಮಾಡಿದ್ದಾಳೆಂದು ಪೊಲೀಸರು ಹೇಳಿದ್ದಾರೆ. ವಿಷಯವನ್ನು ಒಂದು ದಿನದವರೆಗೆ ಮುಚ್ಚಿಟ್ಟ ಶಾಲೆಯ ಮುಖ್ಯೋಪಾಧ್ಯಾಯರನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

    ಮಂಗಳವಾರ ಬೆಳಗ್ಗೆ ಇಲ್ಲಿನ ಬ್ರೈಟ್‍ಲ್ಯಾಂಡ್ ಶಾಲೆಯಲ್ಲಿ ಬಾಲಕನ ಮೇಲೆ ವಿದ್ಯಾರ್ಥಿನಿ ಟಾಯ್ಲೆಟ್‍ನಲ್ಲಿ ದಾಳಿ ಮಾಡಿದ್ದಾಳೆಂದು ಪೋಷಕರು ಹೇಳಿದ್ದಾರೆ. ಬುಧವಾರದಂದು ಪೋಷಕರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಬಾಲಕನಿಗೆ ಎದೆ ಹಾಗೂ ಹೊಟ್ಟೆಯ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ನನ್ನ ಮಗನಿಗೆ ಗಾಯವಾಗಿದೆ ಎಂದು ಶಾಲೆಯವರು ತಿಳಿಸಿದ್ರು. ಆತನ ಮೇಲೆ ಹುಡುಗಿಯೊಬ್ಬಳು ಚಾಕುವಿನಿಂದ ಹಲ್ಲೆ ಮಾಡಿದ್ದಾಳೆ ಎಂದು ಬಾಲಕನ ತಂದೆ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ. ಬ್ಲೂ ವೇಲ್ ಗೇಮ್‍ನ ಭಾಗವಾಗಿ ಈ ಕೃತ್ಯ ನಡೆದಿರಬಹುದು ಎಂದು ಶಾಲೆಯ ಅಧಿಕಾರಿಗಳು ಶಂಕಿಸಿದ್ದಾರೆ.

    ಶಾಲೆಯವರು ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದು, ಚಾಕುವಿನಂತಹ ಚೂಪಾದ ವಸ್ತುವಿನಿಂದ ಇರಿಯಲಾಗಿದೆ ಎಂದು ಬಾಲಕನಿಗೆ ಚಿಕಿತ್ಸೆ ನೀಡ್ತಿರೋ ವೈದ್ಯರಾದ ಸಂದೀಪ್ ತಿವಾರಿ ಹೇಳಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಇಂದು ಆಸ್ಪತ್ರೆಯಲ್ಲಿ ಬಾಲಕನನ್ನು ಭೇಟಿಯಾಗಿದ್ದಾರೆ.

    ಬಾಲಕನ ಮೇಲಿನ ದಾಳಿಯ ಬಗ್ಗೆ ಬುಧವಾರದಂದು ಶಾಲೆಯಲ್ಲಿ ಸುದ್ದಿ ಹರಡಿದ ನಂತರ ಹಲವಾರು ಪೋಷಕರು ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಕಳೆದ ವರ್ಷ ಗುರಗಾಂವ್‍ನ ರಯಾನ್ ಅಂತರಾಷ್ಟ್ರೀಯ ಶಾಲೆಯ ಟಾಯ್ಲೆಟ್‍ನಲ್ಲಿ 2ನೇ ಕ್ಲಾಸ್ ಬಾಲಕ ಪ್ರದ್ಯುಮನ್ ಎಂಬಾತನ ಮೇಲೆ 11ನೇ ಕ್ಲಾಸ್ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಕುತ್ತಿಗೆ ಕುಯ್ದು ಕೊಲೆ ಮಾಡಿದ್ದ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪರೀಕ್ಷೆ ಹಾಗೂ ಪೇರೆಂಟ್ಸ್ ಮೀಟಿಂಗ್ ಮುಂದೂಡುವ ಸಲುವಾಗ ವಿದ್ಯಾರ್ಥಿ ಈ ಕೃತ್ಯವೆಸಗಿದ್ದ ಎಂದು ಪೊಲೀಸರು ಹೇಳಿದ್ದರು.

  • ಕೊಕಟನೂರು ಯಲ್ಲಮ್ಮನ ಜಾತ್ರೆಯಲ್ಲಿ ಭಕ್ತರಿಗೆ ಚಾಕುವಿನಿಂದ ಇರಿದು ದರೋಡೆ

    ಕೊಕಟನೂರು ಯಲ್ಲಮ್ಮನ ಜಾತ್ರೆಯಲ್ಲಿ ಭಕ್ತರಿಗೆ ಚಾಕುವಿನಿಂದ ಇರಿದು ದರೋಡೆ

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಯಲ್ಲಮ್ಮನ ಜಾತ್ರೆಯಲ್ಲಿ ಭಕ್ತರಿಗೆ ಚಾಕುವಿನಿಂದ ಇರಿದು ದರೋಡೆ ಮಾಡಲಾಗಿದೆ.

    ಉತ್ತರ ಕರ್ನಾಟಕ-ದಕ್ಷಿಣ ಮಹಾರಾಷ್ಟ್ರ ರಾಜ್ಯದ ಲಕ್ಷಾಂತರ ಭಕ್ತರು ಭಾಗವಹಿಸುವ ಜಾತ್ರೆಯಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರ ನಿವಾಸಿಗಳಾದ ಸತೀಶ ಪಾಟೀಲ ಹಾಗೂ ಪ್ರವೀಣ ಸ್ವಾಮಿ ಬಹಿರ್ದೆಸೆಗೆ ಹೋದ ವೇಳೆ ಚಾಕುವಿನಿಂದ ಇರಿದಿದ್ದಾರೆ.

    20ಕ್ಕೂ ಹೆಚ್ಚು ದರೋಡೆಕೋರರ ತಂಡ ಈ ಕೃತ್ಯವೆಸಗಿದ್ದು, ಕೊರಳಲ್ಲಿನ ಚಿನ್ನದ ಸರ, ಕೈಯಲ್ಲಿನ ರಿಂಗ್, ಮೊಬೈಲ್, ನಗದು ಹಣ ದೋಚಿ ಪರಾರಿಯಾಗಿದೆ.

    ಅಥಣಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಭಕ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

     

  • ವೃದ್ಧೆಗೆ ಚಾಕುವಿನಿಂದ 10 ಬಾರಿ ಇರಿದ ಮನೆಕೆಲಸದವಳು

    ವೃದ್ಧೆಗೆ ಚಾಕುವಿನಿಂದ 10 ಬಾರಿ ಇರಿದ ಮನೆಕೆಲಸದವಳು

    ನವದೆಹಲಿ: ವೃದ್ಧೆಯೊಬ್ಬರಿಗೆ ಮನೆ ಕೆಲಸದವಳು 10 ಬಾರಿ ಚಾಕುವಿನಿಂದ ಇರಿದ ಘಟನೆ ಗುರುವಾರ ಮಧ್ಯಾಹ್ನ ದೆಹಲಿಯಲ್ಲಿ ನಡೆದಿದೆ.

     

    ಇಲ್ಲಿನ ಗ್ರೇಟರ್ ಕೈಲಾಶ್-1 ರ ಅಪಾರ್ಟ್‍ಮೆಂಟ್‍ನಲ್ಲಿ ಎರಡನೇ ಮಹಡಿಯಲ್ಲಿ ವಾಸವಿದ್ದ ನೀರಜಾ ಗುಪ್ತಾ ಇರಿತಕ್ಕೊಳಗಾದ ವೃದ್ಧೆ. ಸದ್ಯ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಾಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಮನೆಕೆಲಸಕ್ಕಾಗಿ 23 ವರ್ಷದ ತುಳಸಿಯನ್ನು ಇತ್ತೀಚೆಗಷ್ಟೇ ಕೆಲಸಕ್ಕೆ ತೆಗೆದುಕೊಳ್ಳಲಾಗಿತ್ತು. ಆಕೆ ಮಾಲೀಕರ ಬಳಿ 5 ಲಕ್ಷ ರೂ. ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಳೆಂದು ವರದಿಯಾಗಿದೆ.

    ಇರಿತಕ್ಕೊಳಗದ ನೀರಜಾ ಅವರು ಅದೇ ಚಾಕು ಬಳಸಿ ತುಳಸಿ ಮೇಲೆ ದಾಳಿ ಮಾಡಿದ್ದಾರೆ. ನಂತರ ಆಟೋ ರಿಕ್ಷಾ ಏರಿ ಸ್ವಲ್ಪ ದೂರ ಬಂದು ಪೊಲೀಸರಿಗೆ ಕರೆ ಮಾಡಿ, ತನಗೆ ಚಾಕುವಿನಿಂದ ಇರಿದು ಹಣ ದೋಚಿರುವುದಾಗಿ ದೂರು ನೀಡಿದ್ದಾರೆ.

    ಸದ್ಯ ತುಳಸಿಯನ್ನ ಪೊಲಿಸರು ಬಂಧಿಸಿದ್ದಾರೆ.

  • ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲಿ ಪತಿಯಿಂದ ಪತ್ನಿಗೆ ಚಾಕು ಇರಿತ

    ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲಿ ಪತಿಯಿಂದ ಪತ್ನಿಗೆ ಚಾಕು ಇರಿತ

    ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿಯೊರ್ವ ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.

    ನಗರದ ಆದರ್ಶ ಚಿತ್ರಮಂದಿರದ ಬಳಿ ಘಟನೆ ನಡೆದಿದ್ದು, ಅಂಬೇಡ್ಕರ್ ಕಾಲೋನಿ ನಿವಾಸಿ ನಾಗರತ್ನಮ್ಮಗೆ ಗಂಡ ಗುಡ್ಡಿ ಲಕ್ಷಣ (ರೌಡಿಶೀಟರ್) ಚಾಕುವಿನಿಂದ ಇರಿದಿದ್ದಾನೆ. ನಾಗರತ್ನಮ್ಮ ಅವರ ಕುತ್ತಿಗೆ ಹಾಗೂ ಹೊಟ್ಟೆ ಮೇಲೆ ನಾಲ್ಕೈದು ಬಾರಿ ಇರಿದು ಗಂಡ ಲಕ್ಷಣ ಕೊಲೆ ಮಾಡಲು ಯತ್ನಿಸಿದ್ದಾನೆ.

    ನಾಗರತ್ನಮ್ಮ ಗುಡ್ಡಿ ಲಕ್ಷಣನ ಎರಡನೇ ಹೆಂಡತಿಯಾಗಿದ್ದು, ಪೆಟ್ಟಿಗೆ ಚಿಲ್ಲರೆ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಸದ್ಯ ಗಾಯಾಳು ನಾಗರತ್ನಮ್ಮ ಅವರಿಗೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದೆ.

    ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

     

  • ಗಂಡನಿಂದ ಇರಿತಕ್ಕೊಳಗಾದ ಮಹಿಳೆ ನೋವಿನಿಂದ ನರಳುತ್ತಿದ್ರೆ ನೆರೆಹೊರೆಯವರು ವಿಡಿಯೋ ಮಾಡ್ತಿದ್ರು!

    ಗಂಡನಿಂದ ಇರಿತಕ್ಕೊಳಗಾದ ಮಹಿಳೆ ನೋವಿನಿಂದ ನರಳುತ್ತಿದ್ರೆ ನೆರೆಹೊರೆಯವರು ವಿಡಿಯೋ ಮಾಡ್ತಿದ್ರು!

     

    ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನ ಮರ ಕಡಿಯುವ ಸಾಧನದಿಂದ ಇರಿದಿದ್ದು, ಆಕೆ ನೋವಿನಿಂದ ನರಳುತ್ತಿದ್ದರೆ ಅಕ್ಕಪಕ್ಕದ ಮನೆಯವರು ಆಕೆಯ ರಕ್ಷಣೆಗೆ ಬಾರದೆ ವಿಡಿಯೋ ಮಾಡುತ್ತಿದ್ದ ಅಮಾನವೀಯ ಘಟನೆ ಹರಿಯಾಣಾದಲ್ಲಿ ನಡೆದಿದೆ.

    ಇಲ್ಲಿನ ಜಿಂದ್ ಜಿಲ್ಲೆಯಲ್ಲಿ ಜೂನ್ 30ರಂದು ಈ ಘಟನೆ ನಡೆದಿದೆ. ಮಹಿಳೆ ನೋವಿನಿಂದ ನರಳಾಡುತ್ತಿದ್ದರೆ ನೆರೆಹೊರೆಯವರು ವಿಡಿಯೋ ಮಾಡಿದ್ದಾರೆ. ಇರಿತಕ್ಕೊಳಗಾದ ಮಹಿಳೆಯನ್ನು ಇಲ್ಲಿನ ಬರೋಲಿ ಗ್ರಾಮದ ನಿವಾಸಿಯಾದ ಸಂಜು ಎಂದು ಗುರುತಿಸಲಾಗಿದೆ. ಸಂಜು ಅನೈತಿಕ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ ಆಕೆಯ ಗಂಡ ನರೇಶ್ ಮರ ಕಡಿಯುವ ಸಾಧನ(ಆರಿ)ಯಿಂದ ಹೊಟ್ಟೆ, ಭುಜ ಹಾಗೂ ಮಣಕಾಲಿಗೆ ಇರಿದಿದ್ದಾನೆ.

    ಅಂದು ನರೇಶ್ ಕುಡಿದು ಮನೆಗೆ ಬಂದಿದ್ದ. ಹೆಂಡತಿಯ ಕಣ್ಣಿಗೆ ಖಾರದ ಪುಡಿ ಎರಚಿ, ಮರ ಕಡಿಯುವ ಸಾಧನದಿಂದ ಪತ್ನಿ ಮೇಲೆ ದಾಳಿ ಮಾಡಿದ್ದಾನೆ. ಪತ್ನಿ ಸಂಜು ನೋವಿನಿಂದ ಕಿರುಚಾಡಿದಾಗ ನೆರೆಹೊರೆಯವರು ಮನೆಯ ಮುಂದೆ ಜಮಾಯಿಸಿದ್ದಾರೆ. ಈ ವೇಳೆ ನರೇಶ್, ಮತ್ತೊಂದು ಅವಕಾಶ ಸಿಕ್ಕರೆ ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ .

    ಈ ಬಗ್ಗೆ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿರೋ ಸಬ್ ಇನ್ಸ್ ಪೆಕ್ಟರ್ ರಾಮ್ ಮೆಹರ್, ಓರ್ವ ಮಹಿಳೆಗೆ ಇರಿಯಲಾಗಿದೆ ಎಂದು ಕರೆ ಬಂತು. ನಾನು ಕೂಡಲೇ ನನ್ನ ಬೈಕ್‍ನಲ್ಲಿ ಗ್ರಾಮಕ್ಕೆ ತೆರಳಿದೆ. ಮಹಿಳೆ ನೋವಿನಿಂದ ನರಳುತ್ತಿರುವುದನ್ನು ನೋಡಿದೆ. ಈ ವೇಳೆ ನೆರೆಮನೆಯ ವ್ಯಕ್ತಿಯೊಬ್ಬ ವಿಡಿಯೋ ಮಾಡುತ್ತಿದ್ದ. ನಾನು ಆತನಿಗೆ ವಿಡಿಯೋ ಮಾಡುವುದನ್ನು ನಿಲ್ಲಿಸುವಂತೆ ಹೇಳಿದೆ ಎಂದಿದ್ದಾರೆ.

    ನಂತರ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಸೋನಿಪತ್‍ನ ಖಾನ್ಪುರ್ ಕಲನ್‍ನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರಗೆ ದಾಖಲಿಸಲಾಗಿದೆ. ಸದ್ಯ ಆಕೆ ಚೇತರಿಸಿಕೊಂಡಿದ್ದು, ಡಿಸ್ಚಾರ್ಚ್ ಮಾಡಲಾಗಿದೆ ಎಂದು ವರದಿಯಾಗಿದೆ.

    ಆರೋಪಿ ಪತಿಯನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 323, 324 ಹಾಗೂ 506ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ ಅಸ್ತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.