Tag: staff

  • ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಗೆಟ್ಟ ಹುಬ್ಬಳ್ಳಿ ವಿಮಾನ ನಿಲ್ದಾಣ ಸಿಬ್ಬಂದಿ

    ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಗೆಟ್ಟ ಹುಬ್ಬಳ್ಳಿ ವಿಮಾನ ನಿಲ್ದಾಣ ಸಿಬ್ಬಂದಿ

    ಹುಬ್ಬಳ್ಳಿ: ಪಾಗಲ್ ಪ್ರೇಮಿಯೊಬ್ಬನ ಹುಚ್ಚಾಟಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ಸಿಬ್ಬಂದಿ ಕಂಗೆಟ್ಟು ಹೋಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಿರಂತರವಾಗಿ ಫೋನ್ ಮಾಡಿ ವಿಮಾನ ನಿಲ್ದಾಣ ಉಡಾಯಿಸುವ ಬೆದರಿಕೆ ಹಾಕುತ್ತಿದ್ದಾನೆ.

    ಇಂದು ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯ ಬೆದರಿಕೆ ಕರೆಗೆ ಭದ್ರತಾ ಸಿಬ್ಬಂದಿಗೆ ಆತಂಕ ಹೆಚ್ಚಿಸಿತ್ತು.

    ಏನಿದು ಹುಚ್ಚಾಟ:
    ರಾಯ್ ಪ್ರೇಯಸಿ ಗೋವಾ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ರಾಯ್ ಕಾಟ ತಾಳಲಾರದೇ ಯುವತಿ ಗೋವಾದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ವರ್ಗಾವಣೆಗೊಂಡು ಬಂದಿದ್ದಾರೆ. ಆಗಿನಿಂದ ರಾಯ್‍ನ ಹುಚ್ಚಾಟ ತಪ್ಪಿಲ್ಲ. ರಾಯ್ ಈಗ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ ತನ್ನ ಮಾಜಿ ಪ್ರೇಯಸಿಗಾಗಿ ಕರೆ ಮಾಡಿ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದಾನೆ.

    ಲವ್ ಬ್ರೇಕ್ ಆದ ಹಿನ್ನೆಲೆಯಲ್ಲಿ ಕರೆ ಮಾಡುತ್ತಿರುವ ರಾಯ್ ಡಿಯಾಸ್, ಏರ್ ಟ್ರಾಫಿಕ್ ಕಂಟ್ರೋಲ್ ರೂಮಿಗೂ ಕರೆ ಮಾಡುತ್ತಿದ್ದಾನೆ. ಇದರಿಂದ ಕಿರಿಕಿರಿಗೊಳಗಾದ ಸಿಬ್ಬಂದಿ ಏರ್ ಟ್ರಾಫಿಕ್ ಕಂಟ್ರೋಲ್ ನಂಬರ್ ಬದಲಿಸಿದ್ದಾರೆ. ಆದರೆ ಹೇಗೋ ಮತ್ತೆ ನಂಬರ್ ತೆಗೆದುಕೊಂಡು ರಾಯ್ ಕರೆ ಮಾಡುತ್ತಿದ್ದಾನೆ.

    ಗೋವಾ ಮೂಲದ ರಾಯ್ ಡಿಯಾಸ್ ಕಳೆದ 2 ವರ್ಷದಿಂದ ಪ್ರತಿದಿನ ಕರೆ ಮಾಡುತ್ತಾನೆ. ದುಬೈನಿಂದ ಇಂಟರ್ ನೆಟ್ ಕರೆ ಅಲ್ಲದೆ ಬೇರೆ ಬೇರೆ ನಂಬರ್ ನಿಂದ ಕರೆ ಮಾಡಿ ತನ್ನ ಪ್ರೇಯಸಿಗೆ ಫೋನ್ ಕೊಡುವಂತೆ ತೊಂದರೆ ಕೊಡುತ್ತಿದ್ದಾನೆ.

    ರಾಯ್ ಕರೆಯಿಂದಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಸಿಬ್ಬಂದಿ ಫೋನ್ ಎಂಗೇಜ್ ಆಗಿರುವ ಹಿನ್ನೆಲೆಯಲ್ಲಿ ಹಲವು ಸಾರಿ ವಿಮಾನ ಹಾರಾಟಕ್ಕೆ ತೊಂದರೆಯಾಗಿದೆ. ಈ ಬಗ್ಗೆ ಅಕ್ಟೋಬರ್ 6, 2018 ರಂದು ಗೋಕುಲ್ ಠಾಣೆ ಹಾಗೂ ಆಗಷ್ಟ್ 14, 2018ರಂದು ಸೈಬರ್ ಕ್ರೈಂನಲ್ಲಿ ದೂರು ದಾಖಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ.

  • ಚೆಕ್‌ಪೋಸ್ಟ್‌ನಲ್ಲಿ ಸಿಎಂ ಕಾರು ತಡೆದು ಪರಿಶೀಲನೆ

    ಚೆಕ್‌ಪೋಸ್ಟ್‌ನಲ್ಲಿ ಸಿಎಂ ಕಾರು ತಡೆದು ಪರಿಶೀಲನೆ

    ಹಾಸನ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕಾರನ್ನು ಹಾಸನ ಗಡಿ ಹಿರೀಸಾವೆ ಚೆಕ್ ಪೋಸ್ಟ್ ನಲ್ಲಿ ತಡೆದು ಚುನಾಚಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

    ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಚನ್ನರಾಯಪಟ್ಟಣಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಹಿರೀಸಾವೆ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ಬರುತ್ತಿದ್ದಂತೆಯೇ, ಅದನ್ನು ತಡೆದು ಪೊಲೀಸ್ ಹಾಗೂ ಚುನಾವಣಾ ಸಿಬ್ಬಂದಿ ವಾಹನವನ್ನು ತಪಾಸಣೆ ಮಾಡಿದ್ದಾರೆ.

    ಕುಮಾರಸ್ವಾಮಿ ಅವರು ಶಿವಮೊಗ್ಗಕ್ಕೆ ಹೋಗುವ ಮಾರ್ಗದಲ್ಲಿ ಚನ್ನರಾಯಪಟ್ಟಣದಲ್ಲಿರುವ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಮನೆಗೆ ಹೋಗಿದ್ದರು. ಅಲ್ಲಿ ಉಪಹಾರ ಸೇವನೆ ಬಳಿಕ ಕಾರ್ಯಕರ್ತರೊಂದಿಗೆ ಚುನಾವಣೆ ಸಂಬಂಧ ಚರ್ಚೆ ನಡೆಸಿದ್ದಾರೆ. ಬಳಿಕ ಅರಸೀಕೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ.

    ಚನ್ನರಾಯಪಟ್ಟಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಇಂದು ಶಿವಮೊಗ್ಗದಲ್ಲಿ ಮದುಭಂಗಾರಪ್ಪ ನಾಮಪತ್ರ ಸಲ್ಲಿಸಲಿದ್ದಾರೆ. ಅಲ್ಲಿಂದ ಕುಂದಾಪುರದಲ್ಲಿ ಮೀನುಗಾರರ ಸಮಾವೇಶ ಇದೆ. ಹೀಗಾಗಿ ಗೋಕರ್ಣದಲ್ಲಿ ವಾಸ್ತವ್ಯ ಮಾಡುತ್ತೇನೆ. ಇಂದಿನ ಲೋಕಸಭಾ ಚುನಾವಣೆಯಲ್ಲಿ ನಮ್ಮೆಲ್ಲ ಅಭ್ಯರ್ಥಿಗಳು ಯಾರು ಕಣದಲ್ಲಿದ್ದಾರೆ. ಅವರೆಲ್ಲರ ಕ್ಷೇತ್ರಗಳಿಗೂ ಭೇಟಿ ನೀಡುತ್ತೇನೆ. ನಮಗೆ ಹೆಲಿಕಾಪ್ಟರ್ ಭೇಟಿ ಬಳಸುವುದಕ್ಕೆ ಬಿಜೆಪಿ-ಕೇಂದ್ರ ಸರ್ಕಾರ ತಡೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

  • ಪೊಲೀಸ್ ಕ್ವಾಟರ್ಸ್ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೇದೆ ಮಗಳು ಬಲಿ

    ಪೊಲೀಸ್ ಕ್ವಾಟರ್ಸ್ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೇದೆ ಮಗಳು ಬಲಿ

    ಬೆಂಗಳೂರು: ಶಿವಾಜಿನಗರದ ಪೊಲೀಸ್ ಕ್ವಾಟರ್ಸ್ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೇದೆಯೊಬ್ಬರು ಮಗಳು ಬಲಿಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಹರ್ಷಾಲಿ(4) ಮೃತ ದುರ್ದೈವಿ. ಹರ್ಷಾಲಿ ಕಬ್ಬನ್ ಪಾರ್ಕ್ ಸಂಚಾರಿ ಠಾಣೆ ಪೇದೆ ಲೋಕೇಶಪ್ಪ ಮಗಳಾಗಿದ್ದು, ಇದೇ ತಿಂಗಳು 5ನೇ ತಾರೀಖಿನಂದು ಆಟವಾಡಲು ಪಾರ್ಕಿಗೆ ಹೋಗಿದ್ದಳು. ಈ ವೇಳೆ ಶಿವಾಜಿನಗರ ಕ್ವಾಟರ್ಸ್ ನಲ್ಲಿ ಒಣಗಿದ್ದ ಮರಕ್ಕೆ ಬೆಂಕಿ ಹಾಕಲಾಗಿತ್ತಿ. ಒಣಗಿದ್ದ ಮರಕ್ಕೆ ಬೆಂಕಿ ಹಾಕಿದ್ದನ್ನ ಗಮನಿಸದೆ ಅಲ್ಲಿಯೇ ಆಟವಾಡುತ್ತಿದ್ದ ಹರ್ಷಾಲಿ ಬೆಂಕಿಗೆ ಬಿದ್ದಿದ್ದಳು.

    ಬೆಂಕಿಗೆ ಬಿದ್ದ ಹರ್ಷಾಲಿಯನ್ನು ಸಾರ್ವಜನಿಕರು ಕಾಪಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಒಂದು ವಾರ ಚಿಕಿತ್ಸೆ ನೀಡಿದರೂ ಹರ್ಷಾಲಿ ಬದುಕುಳಿಯಲಿಲ್ಲ. ಇಷ್ಟಾದರೂ ಈ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಕ್ವಾಟರ್ಸ್ ಸಿಬ್ಬಂದಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಬಂಡೀಪುರ ಆಯ್ತು, ಈಗ ಮೈಸೂರಿನ ಚಾಮುಂಡಿಬೆಟ್ಟದಲ್ಲೂ ಕಾಡ್ಗಿಚ್ಚು!

    ಬಂಡೀಪುರ ಆಯ್ತು, ಈಗ ಮೈಸೂರಿನ ಚಾಮುಂಡಿಬೆಟ್ಟದಲ್ಲೂ ಕಾಡ್ಗಿಚ್ಚು!

    ಮೈಸೂರು: ಕಳೆದ ಆರು ದಿನಗಳಿಂದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು ತನ್ನ ರೌದ್ರಾವತಾರ ಮೆರೆಯುತ್ತಿರುವ ಬೆನ್ನಲ್ಲೇ ಈಗ ಮೈಸೂರಿನ ಚಾಮುಂಡಿ ಬೆಟ್ಟದಲ್ಲೂ ಕಾಡ್ಗಿಚ್ಚು ಕಾಣಿಸಿಕೊಂಡಿದೆ.

    ಜಿಲ್ಲೆಯ ರಿಂಗ್ ರಸ್ತೆಯ ಸಮೀಪವಿರುವ ಬಂಡಿಪಾಳ್ಯ ಗ್ರಾಮದ ಹತ್ತಿರದಲ್ಲಿರುವ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಆಕಸ್ಮಿಕ ಬೆಂಕಿಯಿಂದ ಅಪಾರ ಪ್ರಮಾಣದಲ್ಲಿ ಕಾಡು ನಾಶವಾಗಿದ್ದು, ಬೆಂಕಿಯನ್ನು ಆರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇದರಿಂದ ಬಂಡಿಪಾಳ್ಯ ಗ್ರಾಮಕ್ಕೆ ಹೊಂದಿಕೊಂಡಿರುವ ಚಾಮುಂಡಿಬೆಟ್ಟದಲ್ಲೂ ಕೂಡ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಸುಮಾರು 1 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

    ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನ ಪಡುತ್ತಿದ್ದರೂ ಕೂಡ ಬೆಂಕಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಗಾಳಿಯ ರಭಸಕ್ಕೆ ಬೆಂಕಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    https://www.youtube.com/watch?v=YyCqkT3m5EM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಳಗಾವಿ ಬಿಮ್ಸ್‌ನಲ್ಲಿ ಉನ್ನತಾಧಿಕಾರಿಗಳ ಕಿತ್ತಾಟ – ಆಸ್ಪತ್ರೆ ಸಿಬ್ಬಂದಿಗೆ ಸಂಬಳ ಸಂಕಟ

    ಬೆಳಗಾವಿ ಬಿಮ್ಸ್‌ನಲ್ಲಿ ಉನ್ನತಾಧಿಕಾರಿಗಳ ಕಿತ್ತಾಟ – ಆಸ್ಪತ್ರೆ ಸಿಬ್ಬಂದಿಗೆ ಸಂಬಳ ಸಂಕಟ

    ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಪ್ರತಿಷ್ಠಿತ ಹಾಗೂ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸೇವೆ ಅಲ್ಲಿ ಸಿಗುತ್ತೆ. ಆದ್ರೆ ಈ ಮೆಡಿಕಲ್ ಕಾಲೇಜು ಹಿರಿಯ ಅಧಿಕಾರಿ ಹಾಗೂ ಸರ್ಕಾರಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ಮುಸುಕಿನ ಗುದ್ದಾಟಕ್ಕೆ ಇಂದು ಅಲ್ಲಿನ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ನಿರ್ದೇಶಕ ಕಳಸದ ಹಾಗೂ ಜಿಲ್ಲಾಸ್ಪತ್ರೆ ಸರ್ಜನ್ ಹುಸೇನ್ ಖಾಜಿಯ ಮಧ್ಯೆಯ ಹೊಂದಾಣಿಕೆ ಕೊರತೆ ಹಾಗೂ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಸರ್ಕಾರಿ ಸಿಬ್ಬಂದಿಗೆ ಸಂಬಳ ಸಿಕ್ತಿಲ್ವಂತೆ. ಬಿಮ್ಸ್‍ನಲ್ಲಿ 170ಕ್ಕೂ ಅಧಿಕ ಸಿಬ್ಬಂದಿ ಕೆಲಸ ಮಾಡ್ತಿದ್ದು, ಕಳೆದ 9 ತಿಂಗಳಿನಿಂದ ಪರಿಷ್ಕೃತ ಸಂಬಳ ಸಿಗ್ತಿಲ್ಲ. ಇದೇ ಕಾರಣಕ್ಕೆ ಇಂದು ಆಸ್ಪತ್ರೆಯ ಸಿಬ್ಬಂದಿ ಇಬ್ಬರು ಅಧಿಕಾರಿಗಳನ್ನು ಸೇರಿಸಿ ಕೊಠಡಿಯಲ್ಲಿ ತರಾಟೆ ತೆಗೆದುಕೊಂಡ್ರು.

    ಸಂಬಳಕ್ಕಾಗಿ ಅರ್ಜಿ ಕೊಡಿ ಎಂದು ಆಸ್ಪತ್ರೆಯ ಸರ್ಜನ್ ಹುಸೇನ್ ಸಾಬ್ ಖಾಜಿ ಸಿಬ್ಬಂದಿಗೆ ಹೇಳಿದ್ರು. ಇದ್ರಿಂದ ರೊಚ್ಚಿಗೆದ್ದ ಸಿಬ್ಬಂದಿ ನಾವು ಕಳೆದ ಹದಿನೈದು ದಿನಗಳಿಂದ ಹೇಳುತ್ತಿದ್ದೇವೆ ಅರ್ಜಿ ಕೊಡಲು ನಾವು ಬಂದಿಲ್ಲ ಅಂದ್ರು. ಇದಕ್ಕೆ ಸರ್ಜನ್ ಖಾಜಿ ಆಸ್ಪತ್ರೆಗೆ ಬೀಗ ಹಾಕಿ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ರು. ಇದರಿಂದ ಸಿಟ್ಟಿಗೆದ್ದ ಸಿಬ್ಬಂದಿ ಆಸ್ಪತ್ರೆಗೆ ಬೀಗ ಹಾಕಿ ಎನ್ನುತ್ತಿದ್ದಿರಾ..? ನಿಮಗೆ ಕಾಳಜಿ ಇಲ್ವಾ ಎಂದು ಗರಂ ಆದ್ರು ಎಂದು ಸರ್ಕಾರಿ ನೌಕರ ಸಂಘದ ಸದಸ್ಯ ಜಗದೀಶ್ ಹೇಳಿದ್ದಾರೆ.

    ಈ ಬಗ್ಗೆ ಬಿಮ್ಸ್ ನಿರ್ದೇಶಕರನ್ನ ಕೇಳಿದ್ರೆ ಪರಿಷ್ಕೃತ ಸಂಬಳ ನೀಡಲು ನಮ್ಮ ಬಳಿ ಹಣವಿರಲಿಲ್ಲ. ಈಗ ನಾಲ್ಕು ಕೋಟಿ ಬಂದಿದೆ ಅಂತೆ. ಇನ್ನೂ ನಾಲ್ಕು ಕೋಟಿ ಬರಬೇಕಿದೆ ಅದು ಬಂದ ಕೂಡಲೇ ಹದಿನೈದು ದಿನಗಳ ಒಳಗಾಗಿ ಸಂಬಳ ನೀಡ್ತೇವೆ ಎನ್ನುತ್ತಿದ್ದಾರೆ.

    ಆಸ್ಪತ್ರೆಯ ಸಿಬ್ಬಂದಿಯ ಕಥೆ ಹೀಗಾದ್ರೆ ರೋಗಿಗಳ ಕಥೆಯೇನು. ಇಬ್ಬರು ಮೇಲಾಧಿಕಾರಿಗಳ ಸಣ್ಣತನದಿಂದ ಕಾರ್ಮಿಕರ ಈ ಸ್ಥಿತಿ ಬಂದಿದ್ದು, ಸರ್ಕಾರ ಎಚ್ಚೆತ್ತುಕೊಂಡು ಇದಕ್ಕೊಂದು ಪರಿಹಾರ ನೀಡಬೇಕಿದೆ ಎಂದು ಸಿಬ್ಬಂದಿ ಆಗ್ರಹಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅರ್ಧ ಮುಖಕ್ಕೆ ಮಸಿ, ಎರಡು ಕಿವಿಗೂ ಹೂವು- ಉಡುಪಿಯಲ್ಲಿ ವಿಭಿನ್ನ ಪ್ರತಿಭಟನೆ

    ಅರ್ಧ ಮುಖಕ್ಕೆ ಮಸಿ, ಎರಡು ಕಿವಿಗೂ ಹೂವು- ಉಡುಪಿಯಲ್ಲಿ ವಿಭಿನ್ನ ಪ್ರತಿಭಟನೆ

    ಉಡುಪಿ: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಕೈಗೊಂಡಿರುವ ಭಾರತ್ ಬಂದ್ ನ ಎರಡನೇ ದಿನ ಉಡುಪಿಯಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆದಿದೆ.

    ಜಿಲ್ಲಾ ಕೇಂದ್ರದಲ್ಲಿರುವ ಹೆಡ್ ಪೋಸ್ಟ್ ಆಫೀಸ್ ಆವರಣದಲ್ಲಿ ಅಂಚೆ ಇಲಾಖೆ ಸಿಬ್ಬಂದಿಯೊಬ್ಬರು ಪುಟ್ಗೋಸಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದಾರೆ. ಪ್ಯಾಂಟಿನ ಮೇಲೆ ಪುಟ್ಗೋಸಿ ತೊಟ್ಟು ವಿನೂತನ ರೀತಿಯಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿದರು. ಅರ್ಧ ಮುಖಕ್ಕೆ ಮಸಿ ಬಳಿದುಕೊಂಡು, ಎರಡೂ ಕಿವಿಗೆ ಹೂವು ಇಟ್ಟು ತಮ್ಮ ಆಕ್ರೋಶ ಹೊರಹಾಕಿದರು.

    ಸರ್ಕಾರ ನಮ್ಮನ್ನು ಪುಟ್ಗೋಸಿಯಲ್ಲಿ ನಿಲ್ಲಿಸಿದೆ. ಕಿವಿಗೆ ಹೂವಿಟ್ಟಿದೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ನಮ್ಮ ಹಿರಿಯ ಅಧಿಕಾರಿಗಳು ಅಂಚೆ ಕಚೇರಿಯೊಳಗೆ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಮೂಲಕ ಸಂದೇಶ ಸಾರುವುದು ಈ ಪುಟ್ಗೋಸಿ ಪ್ರತಿಭಟನೆಯ ಉದ್ದೇಶವಾಗಿತ್ತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಅಲ್ಲದೇ ಪ್ರಧಾನಿ ಮೋದಿಯವರನ್ನು ಕಟು ಮಾತಿನಲ್ಲಿ ಟೀಕಿಸಿದರು.

    ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಪ್ರತಿಭಟನಾಕಾರ ರಾಘವೇಂದ್ರ ಬೆಳ್ವೆ, ಅಂಚೆ ಇಲಾಖೆಯಲ್ಲಿ 20 ವರ್ಷ ಸೇವೆ ಸಲ್ಲಿಸಿದ್ದೇನೆ. 2004ರ ಇಲಾಖಾ ನಿಯಮದನ್ವಯ ಹಳೆಯ ಪಿಂಚಣಿಯನ್ನು ರದ್ದುಗೊಳಿಸಿ ಅದು ಬರೀ ಸಂಸದ ಹಾಗೂ ಶಾಸಕರಿಗೆ ಇನ್ನೂ ಕೂಡ ಅನ್ವಯವಾಗಿದೆ. ನಮಗೆಲ್ಲ ಬಿಕಾರಿಗಳಂತೆ ಹೊಸ ಪಿಂಚಣಿ ಸೇವೆಯನ್ನು ಆರಂಭಿಸಿದ್ದಾರೆ. ನಾವು ನಿವೃತ್ತಿ ಹೊಂದಿದ ಬಳಿಕ ಅದು ಜಾರಿಗೆ ಬರುವಾಗ ಅದರ ಬಿಸಿ ನಮಗೆ ತಟ್ಟಿತ್ತು. ಆಗಲೇ ನಮ್ಮ ಹಾಗೂ ವಿವಿಧ ಸಂಘಟನೆಗಳು ಹಳೆಯ ಪಿಂಚಣಿ ಬೇಕು ಅಂತ ಕೇಂದ್ರ ಸರ್ಕಾರದ ವಿರುದ್ಧ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಕಿವುಡು ಧೋರಣೆ ತೋರುತ್ತಿದೆ ಅಂತ ಕಿಡಿಕಾರಿದ್ದಾರೆ.

    ನಾಲ್ಕೂವರೆ ವರ್ಷದಲ್ಲಿ ನಮಗೆ ಕೇಂದ್ರ ಸರ್ಕಾರ ನಮ್ಮ ಎರಡು ಕಿವಿಗೆ ಬಣ್ಣ ಬಣ್ಣದ ಹೂವಿಟ್ಟಿದೆ. ತಿಂಗಳಿಗೆ 500-600 ಪಿಂಚಣಿ ನೀಡಿದ್ರೆ ನಾವು ಹೆಂಡತಿ ಮಕ್ಕಳನ್ನು ಸಾಕುವುದು ಹೇಗೆ? ಅವರಿಗೂ ಜೀವನ ಭದ್ರತೆಯಿಲ್ಲ. ಹೀಗಾಗಿ ಮಿನಿಮಮ್ ಹಳೆಯ ಪಿಂಚಣಿ ಏನಿದೆಯೋ ಅದನ್ನೇ ದಯಪಾಲಿಸಿ ಅಂತ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ರು.

    https://www.youtube.com/watch?v=-N2AwKLSx9g

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗುತ್ತಿಗೆದಾರನ ಲಕ್ಷಾಂತರ ರೂ. ಹಣ ಆಸ್ಪತ್ರೆ ಸಿಬ್ಬಂದಿಯಿಂದಲೇ ಕಳ್ಳತನ?

    ಗುತ್ತಿಗೆದಾರನ ಲಕ್ಷಾಂತರ ರೂ. ಹಣ ಆಸ್ಪತ್ರೆ ಸಿಬ್ಬಂದಿಯಿಂದಲೇ ಕಳ್ಳತನ?

    – ಅಪಘಾತದಲ್ಲಿ ಗಾಯಗೊಂಡು ಕಾಡೇ ಆಸ್ಪತ್ರೆಗೆ ಚಿಕಿತ್ಸೆ ದಾಖಲು
    – ದೂರು ನೀಡಿದ್ರೂ ಪ್ರಕರಣ ದಾಖಲಾಗಿಲ್ಲ
    – ಆಸ್ಪತ್ರೆಯ ಜೊತೆ ಪೊಲೀಸ್ ಸಿಬ್ಬಂದಿ ಭಾಗಿ ಆರೋಪ

    ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಗುತ್ತಿಗೆದಾರರೊಬ್ಬರ ಲಕ್ಷಾಂತರ ರೂ. ಹಣವನ್ನು ರಾಜಧಾನಿಯ ಆಸ್ಪತ್ರೆ ಸಿಬ್ಬಂದಿ ಕದ್ದಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

    ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದೆ. ಆಸ್ಪತ್ರೆಗೆ ದಾಖಲಾಗುವಾಗ ನನ್ನ ಬಳಿ 6 ಲಕ್ಷ ರೂ. ಹಣವಿತ್ತು. ಆದರೆ ಚಿಕಿತ್ಸೆ ನೀಡುವ ಸಮಯದಲ್ಲಿ 1 ಲಕ್ಷ ರೂ. ಹಣವನ್ನು ಕಾಡೇ ಆಸ್ಪತ್ರೆಯ ನರ್ಸ್ ಗಳು ಕದ್ದಿದ್ದಾರೆ ಎಂದು ಗುತ್ತಿಗೆದಾರ ಲಿಂಗಮೂರ್ತಿ ಆರೋಪಿಸಿದ್ದಾರೆ.

    ಲಿಂಗಮೂರ್ತಿ ಆರೋಪ ಏನು?
    ಕೆಲಸದ ನಿಮಿತ್ತ 6 ಲಕ್ಷ ಹಣ ತೆಗೆದುಕೊಂಡು ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಮಂಜುನಾಥ್ ನಗರದ ಬಳಿ ಅಪಘಾತ ನಡೆದಿತ್ತು. ಅಪಘಾತದಿಂದ ತಲೆಗೆ ಪೆಟ್ಟು ಬಿದ್ದು ನಾನು ಗಾಯಗೊಂಡಿದ್ದೆ. ಕೂಡಲೇ ಪರಿಚಯಸ್ಥರು ನಗರದ ಕಾಡೇ ಆಸ್ಪತ್ರೆಗೆ ನನ್ನನ್ನು ದಾಖಲಿಸಿದ್ದರು.

    ಚಿಕಿತ್ಸೆ ವೇಳೆ ನನ್ನ ಬನಿಯನ್ ಒಳಗೆ ಇದ್ದ ಒಂದು ಲಕ್ಷ ರೂಪಾಯಿಯನ್ನು ಸಿಬ್ಬಂದಿ ಕದ್ದಿದ್ದಾರೆ. ಆಸ್ಪತ್ರೆಗೆ ಮಗ ಸಂತೋಷ್ ಬಂದಾಗ 6 ಲಕ್ಷದಲ್ಲಿ 5 ಲಕ್ಷ ಮಾತ್ರ ಇತ್ತು, ಬ್ಯಾಗ್‍ನಲ್ಲಿ 3 ಲಕ್ಷ ಹಾಗೂ ಜೇಬಿನಲ್ಲಿ 2 ಲಕ್ಷ ಇದೆ ಎಂದು ಸಿಬ್ಬಂದಿ ಹಣ ನೀಡಿ ಹೋಗಿದ್ದಾರೆ. ನಂತರ ನನಗೆ ಪ್ರಜ್ಞೆ ಬಂದು ಹಣದ ಬಗ್ಗೆ ಮಗನನ್ನು ವಿಚಾರಿಸಿದೆ. ಈ ಸಮಯದಲ್ಲಿ ಆಗ ಬನಿಯನ್‍ನಲ್ಲಿದ್ದ ಒಂದು ಲಕ್ಷ ರೂ. ಕಾಣೆಯಾಗಿದ್ದು ಅರಿವಿಗೆ ಬಂದಿದೆ.

    ಬಳಿಕ ಹಣದ ಕುರಿತು ಆಸ್ಪತ್ರೆ ಸಿಬ್ಬಂದಿಗೆ ಕೇಳಿದಾಗ ಗೊತ್ತಿಲ್ಲ ಎಂದು ಹೇಳಿದ್ದಾರೆ. ಕದ್ದ ವಿಚಾರ ಬಹಿರಂಗವಾದ ಬಳಿಕ ನನಗೆ ಗೊತ್ತಾಗದಂತೆ ಬೆಡ್ ಮೇಲೆ 50 ಸಾವಿರ ರೂ.ಗಳನ್ನು ಯಾರೋ ಎಸೆದು ಹೋಗಿದ್ದಾರೆ. ಉಳಿದ 50 ಸಾವಿರ ರೂ. ಕೇಳಿದ್ದಕ್ಕೆ ಸಿಬ್ಬಂದಿ ನಮಗೆ ಗೊತ್ತಿಲ್ಲ ಅಂತ ಹೇಳುತ್ತಿದ್ದಾರೆ.

    ನನ್ನ ಪುತ್ರ ಸಂತೋಷ್ ಬಸವೇಶ್ವರ ನಗರ ಠಾಣೆಗೆ ಈ ಕುರಿತು ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ದೂರು ಸ್ವೀಕರಿಸದೇ ಸಂಧಾನ ಮಾಡಿಕೊಳ್ಳಿ ಅಂತ ಪೊಲೀಸರು ಹೇಳಿದ್ದಾರೆ. ಪೊಲೀಸರಿಗೆ ಹಣ ನೀಡಿ ಕೇಸ್ ಮುಚ್ಚಿ ಹಾಕಲು ಆಸ್ಪತ್ರೆ ಸಿಬ್ಬಂದಿ ಯತ್ನಸುತ್ತಿದ್ದಾರೆ ಎಂದು ಲಿಂಗಮೂರ್ತಿ ಈಗ ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಪ್ಪು ಮಾಡಿದಳೆಂದು ಬಾಲಕಿಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿದ್ರು..!

    ತಪ್ಪು ಮಾಡಿದಳೆಂದು ಬಾಲಕಿಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿದ್ರು..!

    ನವದೆಹಲಿ: ಸರ್ಕಾರೇತರ ಸಂಸ್ಥೆಯೊಂದು(ಎನ್‍ಜಿಓ) ನಡೆಸುವ ಬಾಲಕಿಯರ ಆಶ್ರಯ ನಿವಾಸದಲ್ಲಿ ಸಿಬ್ಬಂದಿ ತಪ್ಪು ಮಾಡಿದಳು ಅಂತ ಬಾಲಕಿಯೊಬ್ಬಳ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಶಿಕ್ಷೆ ಕೊಟ್ಟ ಅಮಾನವಿಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಶುಕ್ರವಾರದಂದು ದೆಹಲಿಯ ಮಹಿಳಾ ಆಯೋಗದ(ಡಿಡಬ್ಲ್ಯೂಸಿ) ಅಧಿಕಾರಿಗಳು ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಎನ್‍ಜಿಓವೊಂದು ನೋಡಿಕೊಳ್ಳುವ ಬಾಲಕಿಯರ ಆಶ್ರಯ ನಿವಾಸಕ್ಕೆ ದಿಢೀರ್ ಪರಿಶೀಲನೆ ನಡೆಸಲು ತೆರೆಳಿದ್ದರು. ಈ ವೇಳೆ ಆಶ್ರಯ ನಿವಾಸದಲ್ಲಿ ಇರುವ ಬಾಲಕಿಯರಿಗೆ ಅಲ್ಲಿನ ಸಿಬ್ಬಂದಿ ಕಿರುಕುಳ ಕೊಡುತ್ತಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

    ಈ ಆಶ್ರಯ ನಿವಾಸದಲ್ಲಿ 6 ವರ್ಷದಿಂದ 15 ವರ್ಷ ವಯಸ್ಸಿನ ಒಟ್ಟು 22 ಬಾಲಕಿಯರು ಇರುತ್ತಾರೆ. ಇಲ್ಲಿ ಇರುವ ಬಾಲಕಿಯರ ಕೈಯಲ್ಲಿ ಸಿಬ್ಬಂದಿ ಮನೆಯ ಎಲ್ಲಾ ಕೆಲಸ ಮಾಡಿಸುತ್ತಾರೆ. ಅಲ್ಲದೆ ಕೋಣೆಗಳನ್ನು ನಾವು ಸ್ವಚ್ಛವಾಗಿ ಇಟ್ಟುಕೊಳ್ಳದೆ ಇದ್ದರೆ ನಮಗೆ ಶಿಕ್ಷೆ ನೀಡುತ್ತಾರೆ. ಸ್ಕೇಲ್‍ನಿಂದ ಹೊಡೆಯುತ್ತಾರೆ, ರಜಾ ದಿನಗಳಲ್ಲಿ ಪೋಷಕರ ಬಳಿ ಹೋಗಲು ಬಿಡುವುದಿಲ್ಲ. ಹಾಗೆಯೆ ಇಲ್ಲಿ ಸಿಬ್ಬಂದಿ ಕಡಿಮೆ ಇರುವುದರಿಂದ ಮಕ್ಕಳ ಕೈಯಲ್ಲೇ ಅಡುಗೆ ಮಾಡಸ್ತಾರೆ. ಶೌಚಾಲಯ ಹಾಗೂ ಮನೆಯನ್ನು ಸ್ವಚ್ಛ ಮಾಡಿಸ್ತಾರೆ. ಸರಿಯಾದ ಗುಣಮಟ್ಟದ ಊಟ ಕೂಡ ನೀಡಲ್ಲ ಅಂತ ಬಾಲಕಿಯರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

    ಅಷ್ಟೆ ಅಲ್ಲದೆ ಕೆಲವು ದಿನಗಳ ಹಿಂದೆ ಬಾಲಕಿಯೊಬ್ಬಳು ಹೇಳಿದ ಮಾತನ್ನು ಕೇಳಿಲ್ಲ ಅಂತ ಸಿಬ್ಬಂದಿ ಅವಳ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಕಿರುಕುಳ ಕೊಟ್ಟಿದ್ದಾರೆ. ಈ ವಿಷಯ ತಿಳಿಯುತ್ತಿದಂತೆ ಡಿಡಬ್ಲ್ಯೂಸಿ ಅಧಿಕಾರಿಗಳು ಆರೋಪಿಗಳ ಮೇಲೆ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸದ್ಯ ಮಕ್ಕಳ ರಕ್ಷಣೆ ಹಾಗೂ ಲೈಂಗಿಕ ಅಪರಾಧ ಕಾಯ್ದೆ ಹಾಗೂ ಜುವೆನೈಲ್ ನ್ಯಾಯಾಂಗ ಕಾಯ್ದೆ (Juvenile Justice Act) ಅಡಿಯಲ್ಲಿ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂತ್ರಿ ಮಾಲ್ ಸಿಬ್ಬಂದಿಯಿಂದ ಬಾಲಕನ ಮೇಲೆ ಹಲ್ಲೆ!

    ಮಂತ್ರಿ ಮಾಲ್ ಸಿಬ್ಬಂದಿಯಿಂದ ಬಾಲಕನ ಮೇಲೆ ಹಲ್ಲೆ!

    -ಗೇಮ್ ಆಡಲು ಬಂದವನನ್ನ ಕಳ್ಳ ಎಂದ ಸಿಬ್ಬಂದಿ!

    ಬೆಂಗಳೂರು: ಗೇಮ್ ಆಡಲು ಹೋದ ಬಾಲಕನ ಮೇಲೆ ಮಂತ್ರಿ ಮಾಲ್ ಸಿಬ್ಬಂದಿ ಕಳ್ಳ ಎಂದು ಆರೋಪಿಸಿ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ.

    ವಿಜಯ್ ಕುಮಾರ್(15) ಹಲ್ಲೆಗೊಳಗಾದ ಬಾಲಕ. ಡಿಸೆಂಬರ್ 21ರ ಸಂಜೆ ವಿಜಯ್ ಕುಮಾರ್ ಮಂತ್ರಿ ಮಾಲ್‍ಗೆ ಗೇಮ್ ಆಡಲು ಹೋಗಿದ್ದು, ಮಾಲ್‍ನ 2ನೇ ಮಹಡಿಯಲ್ಲಿ ತನ್ನ ಮೊಬೈಲ್ ಚಾರ್ಜ್‍ಗೆ ಹಾಕಿ ಮೊಬೈಲ್ ಬಳಸುತ್ತಿದ್ದ. ಅದೇ ವೇಳೆ ಅದೇ ಚಾರ್ಜಿಂಗ್ ಪಾಯಿಂಟ್‍ನಲ್ಲಿ ಬೇರೆಯವರು ತಮ್ಮ ಮೊಬೈಲ್ ಫೋನ್‍ಗಳನ್ನು ಚಾರ್ಜ್ ಗೆ ಹಾಕಿದ್ದರು. ಆಗ ಅಲ್ಲಿಗೆ ಬಂದಿದ್ದ ಮಂತ್ರಿ ಮಾಲ್‍ನ ನಾಲ್ವರು ಸಿಬ್ಬಂದಿ ಬಾಲಕನ ಬಳಿ ಬಂದು ಮೊಬೈಲ್ ಕಳ್ಳತನ ಮಾಡುತ್ತಿಯಾ ಎಂದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

    ಬಾಲಕನನ್ನು ಪಾರ್ಕಿಂಗ್ ಸ್ಥಳಕ್ಕೆ ಕರೆದೊಯ್ದು ದೊಣ್ಣೆ ಮತ್ತು ವೈರ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಕುರಿತು ಬಾಲಕನ ಪೋಷಕರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೃದ್ಧ ದಂಪತಿಗೆ ಬ್ಯಾಂಕ್ ಸಿಬ್ಬಂದಿಯಿಂದ 10 ಲಕ್ಷ ರೂ. ಮೋಸ!

    ವೃದ್ಧ ದಂಪತಿಗೆ ಬ್ಯಾಂಕ್ ಸಿಬ್ಬಂದಿಯಿಂದ 10 ಲಕ್ಷ ರೂ. ಮೋಸ!

    – ನಕಲಿ ಸಹಿ ಮಾಡಿ ಹಣ ಡ್ರಾ ಮಾಡಿದ್ನಾ ಕ್ಯಾಶಿಯರ್?

    ಬಳ್ಳಾರಿ: ಬ್ಯಾಂಕ್ ನಲ್ಲಿ ಹಣ ಇಟ್ರೆ ಫುಲ್ ಸೇಫ್ ಆಗಿರುತ್ತೆ ಅಂತಾರೆ. ಆದ್ರೆ ಬ್ಯಾಂಕ್ ನಲ್ಲಿಟ್ಟ 10 ಲಕ್ಷ ಹಣವನ್ನ ಬ್ಯಾಂಕ್ ಸಿಬ್ಬಂದಿಯೇ ಡ್ರಾ ಮಾಡಿ ವೃದ್ಧ ದಂಪತಿಗೆ ಮೋಸ ಮಾಡಿರುವ ಆರೋಪವೊಂದು ಕೇಳಿ ಬಂದಿದೆ.

    80 ವರ್ಷ ಇಳಿವಯಸ್ಸಿನ ಕೆಟಿ ಹನುಮಂತಪ್ಪ ಹಾಗೂ ಝಾನ್ಸಿ ಲಕ್ಷಿಭಾಯಿ ಬಳ್ಳಾರಿಯ ಇಂಡಿಯನ್ ಬ್ಯಾಂಕ್ ನಲ್ಲಿ ಕಳೆದ 25 ವರ್ಷಗಳಿಂದ ವ್ಯವಹಾರ ನಡೆಸುತ್ತಿದ್ದಾರೆ. 2017ರ ಸಪ್ಟೆಂಬರ್ 6ರಂದು ಬ್ಯಾಂಕಿನ ತಮ್ಮ ಅಕೌಂಟಗೆ ಹತ್ತು ಲಕ್ಷ ರೂಪಾಯಿ ಡೆಪಾಸಿಟ್ ಮಾಡಿದ್ದಾರೆ. ಆದ್ರೆ ಇವರು ಮಾಡಿದ ಡಿಪಾಸಿಟ್ ಹಣವನ್ನು ಬ್ಯಾಂಕ್ ಸಿಬ್ಬಂದಿಯೊಬ್ರು ನಕಲಿ ಸಹಿ ಮಾಡಿ ಸೆಪ್ಟೆಂಬರ್ 19ರಂದು ಹಣ ವಿತ್ ಡ್ರಾ ಮಾಡಿದ್ದಾರೆ ಅಂತ ವಕೀಲ ರವೀಂದ್ರ ಆರೋಪಿಸಿದ್ದಾರೆ.

    ಈ ವೃದ್ಧ ದಂಪತಿ ಬ್ಯಾಂಕಿಗೆ ಹೋದಾಗೆಲ್ಲಾ ಬ್ಯಾಂಕ್ ಕ್ಯಾಶಿಯರ್ ಚಂದ್ರಪ್ಪ ಎಂಬಾತ ಇವರ ಚೆಕ್ ಬುಕ್ ಪಡೆದು ಹಣ ವಿತ್ ಡ್ರಾ ಮಾಡಿಕೊಡುತ್ತಿದ್ದರಂತೆ. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ಚಂದ್ರಪ್ಪ ಚೆಕ್ ಪಡೆದು ನಕಲಿ ಸಹಿ ಮಾಡಿ ಹಣ ವಿತ್ ಮಾಡಿದ್ದಾನೆ ಅನ್ನೋದು ದಂಪತಿ ಆರೋಪವಾಗಿದೆ.

    ಈಗ ಹಣಕ್ಕಾಗಿ ಬಳ್ಳಾರಿ ಎಸ್‍ಪಿ ಮೊರೆ ಹೋಗಿರುವ ವೃದ್ಧ ದಂಪತಿ ಬ್ಯಾಂಕ್ ಸಿಬ್ಬಂದಿ ವಿರುದ್ಧ ದೂರು ಕೊಟ್ಟಿದ್ದಾರೆ. ಈ ಬಗ್ಗೆ ಮ್ಯಾನೇಜರ್ ಶಿವಕುಮಾರ್ ನನ್ನು ಕೇಳಿದ್ರೆ, ಬ್ಯಾಂಕಿನಲ್ಲಿ ಈ ರೀತಿ ಮೋಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಇಷ್ಟೇ ಅಲ್ಲ, ಬ್ಯಾಂಕ್‍ನಲ್ಲಿ ಉಳಿದ ಎಫ್‍ಡಿ ಹಣ ಡ್ರಾ ಮಾಡಲು ಹೋದರೆ `ವಯಸ್ಸಾಗಿದೆ ನಮ್ಮ ಕೈ ನಡುಗುತ್ತೆ ಹೀಗಾಗಿ ಸಹಿ ವ್ಯತ್ಯಾಸವಾಗಿರಬಹುದು’ ಅನ್ನೋ ಪತ್ರಕ್ಕೆ ಸಹಿ ಕೇಳ್ತಿದ್ದಾರಂತೆ. ಇನ್ನಾದ್ರೂ ಇಳಿವಯಸ್ಸಿನ ಈ ದಂಪತಿಗೆ ಆಗ್ತಿರೋ ಮೋಸವನ್ನು ತಡೆಗಟ್ಟಲು ಪೊಲೀಸರು ಮುಂದಾಗಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv