ಬೆಂಗಳೂರು: ನಗರದ ಸಿಲ್ಕ್ ಬೋರ್ಡ್ ಬಳಿಯ ನಮ್ಮ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಬೇಕಾಗಿದ್ದ ಭಾರೀ ಅನಾಹುತ ತಪ್ಪಿದೆ.
ನಮ್ಮ ಮೆಟ್ರೋ ಫೇಸ್ -2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಮೆಟ್ರೋ ಸಗ್ಮೆಂಟ್ಸ್ ಜೋಡಿಸುವ ಯಂತ್ರ ಅರ್ಧಕ್ಕೆ ತುಂಡಾಗಿ ನಲವತ್ತು ಅಡಿ ಎತ್ತರದಿಂದ ಕ್ರೇನ್ ಕೆಳಗೆ ಬಿದ್ದಿದೆ. ಬೆಳಗ್ಗೆ 6:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಭಾರೀ ಅನಾಹುದಿಂದ ನೂರಾರು ಮೆಟ್ರೋ ಕಾರ್ಮಿಕರು ಪಾರಾಗಿದ್ದಾರೆ. ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ
ಸಿಲ್ಕ್ ಬೋರ್ಡ್, ಕೆ ಆರ್ ಪುರಂ ಮಾರ್ಗವಾಗಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ಇದಾಗಿದ್ದು, ಲಾಂಚಿಂಗ್ ಗಾರ್ಡ್ ಎಂಬ ಬೃಹತ್ ಯಂತ್ರ ಆಯ ತಪ್ಪಿ ದಿಢೀರ್ ಕೆಳಗೆ ಬಿದ್ದಿದೆ. ಇದೀಗ ಯಂತ್ರವನ್ನು ಮೇಲೆತ್ತಲು ಕಾರ್ಮಿಕರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬ್ರದರ್ ಅಂತ ಕತ್ತು ಕೊಯ್ಯುತ್ತಾನೆ: ಜಮೀರ್ ಅಹ್ಮದ್
ಸದ್ಯ ಈ ಅವಘಡ ಕುರಿತಂತೆ ಬಿಎಂಆರ್ಸಿಎಲ್, ಘಟನೆ ಮೆಕ್ಯಾನಿಕಲ್ ಫೇಲ್ಯೂರ್ನಿಂದ ಸಂಭವಿಸಿದ್ದು ಮತ್ತು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇದೀಗ ಲಾಂಚಿಂಗ್ ಗರ್ಡರ್ ಅನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.
-ಡಿಸಿ, ಎಸಿ, ತಹಶೀಲ್ದಾರ್ ಬಂದರೂ ನಾನು ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ
ಯಾದಗಿರಿ: ಜನರಲ್ಲಿ ಕೋವಿಡ್ ವ್ಯಾಕ್ಸಿನ್ ಬಗ್ಗೆ ಮೌಢ್ಯತೆ ಮತ್ತೆ ಮುಂದುವರಿದಿದ್ದು, ಲಸಿಕೆ ನೀಡಲು ಮನೆಗೆ ತೆರಳಿದ್ದ ಅಧಿಕಾರಿಗಳ ಕೈಯಲ್ಲಿದ್ದ ಲಸಿಕೆ ಕಸಿದು, ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಲಾಗಿದೆ.
ಯಾದಗಿರಿ ತಾಲೂಕಿನ ವಿಶ್ವಾಸಪುರ ತಾಂಡದಲ್ಲಿ ಈ ಘಟನೆ ನಡೆದಿದ್ದು, ತಾಂಡ ನಿವಾಸಿ ಸೋಮಲಾಲ್ ಈ ಕೃತ್ಯ ಎಸಗಿದ ವ್ಯಕ್ತಿಯಾಗಿದ್ದಾರೆ. ಆರೋಗ್ಯ ಇಲಾಖೆ ಕಂದಾಯ ಇಲಾಖೆ ಸಿಬ್ಬಂದಿಗೆ ನಿಂದಿಸಿದ ಸೋಮ್ ಲಾಲ್, ಕೆಟ್ಟ, ಕೆಟ್ಟ ಪದಗಳನ್ನು ಬಳಸಿ ಬಾಯಿಗೆ ಬಂದ ಹಾಗೆ ಬೈದಿದ್ದಾನೆ. ನನ್ನ ಮೇಲೆ ಕೇಸ್ ಹಾಕಿ, ನಾನು ಕೋರ್ಟ್ಗೆ ಬಂದು ಮಾತನಾಡುತ್ತೇನೆ. ಯಾವುದೇ ಕಾರಣಕ್ಕೂ ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ. ಡಿಸಿ, ಎಸಿ, ತಹಶೀಲ್ದಾರ್ ಬಂದರೂ ನಾನು ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ ಎಂದಿದ್ದಾರೆ. ಇದನ್ನೂ ಓದಿ: ಮಗನ ಆರೋಗ್ಯ ವಿಚಾರಿಸುತ್ತಾ ರಾತ್ರಿಯಿಡೀ ನಿದ್ದೆಗೆಟ್ಟ ಶಾರೂಖ್ ದಂಪತಿ!
ನೀವು ಯಾದಗಿರಿಯಿಂದಾನೂ ಬನ್ನಿ ದಿಲ್ಲಿಯಿಂದಾದರೂ ಬನ್ನಿ ನಾ ಹಾಕಿಸಿಕೊಳ್ಳಲ್ಲ ಎಂದು ಸೋಮ್ ಲಾಲ್ ಅಸಭ್ಯ ವರ್ತನೆ ತೋರಿದ್ದಾನೆ. ಸೋಮ್ ಲಾಲ್ ವರ್ತನೆಯಿಂದ ಬೇಸರಗೊಂಡ ಅಧಿಕಾರಿಗಳು ಲಸಿಕೆ ನೀಡದೇ ವಾಪಸಾಗಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್
ಸದ್ಯ ಸ್ಥಳೀಯ ಅಧಿಕಾರಿಗಳೊಂದಿಗೆ ರೈಲು ನಿರ್ವಾಹಕ ಅಮ್ಟ್ರಾಕ್ ಗಾಯಗೊಂಡ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸುವ ಕೆಲಸವನ್ನು ಮಾಡುತ್ತಿದ್ದಾರೆ ಮತ್ತು ರೈಲಿನಲ್ಲಿ ಸುಮಾರು 147 ಮಂದಿ ಪ್ರಯಾಣಿಕರು ಹಾಗೂ 13 ಸಿಬ್ಬಂದಿ ಇದ್ದರು ಎನ್ನಲಾಗುತ್ತಿದೆ.
ಉತ್ತರ ಮೊಂಟಾನಾದ ಜೋಪ್ಲಿನ್ ಬಳಿ ಸಂಜೆ 4 ಗಂಟೆಗೆ ರೈಲು ಹಳಿ ತಪ್ಪಿದ್ದು, ಘಟನೆ ಕುರಿತ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಘಟನಾ ಸ್ಥಳದಲ್ಲಿ ಲಗೇಜ್ಗಳು ಚೆಲ್ಲಾಪಿಲ್ಲಿಯಾಗಿದೆ ಮತ್ತು ಹಲವಾರು ರೈಲಿನ ಬೋಗಿಗಳು ಹಳಿಯಿಂದ ಪಕ್ಕಕ್ಕೆ ಸರಿದಿರುವುದನ್ನು ನೋಡಬಹುದಾಗಿದೆ.
ಮಡಿಕೇರಿ: ನಗರಸಭೆಯ ವಿವಿಧ ಕರ ವಸೂಲಾತಿಯಲ್ಲಿ 60 ಲಕ್ಷ ರೂಪಾಯಿಗೂ ಹೆಚ್ಚು ಹಣ ದುರುಪಯೋಗವಾಗಿರುವುದು ಸಾಬೀತಾಗಿ, ಅದನ್ನು ವಸೂಲಿ ಮಾಡುವಂತೆ ಪೌರಾಡಳಿತ ಇಲಾಖೆಯಿಂದ ನಿರ್ದೇಶನ ಬಂದು ಮೂರು ತಿಂಗಳೇ ಕಳೆದಿದೆ. ಆದರೆ ಇಂದಿಗೂ ನಯಾಪೈಸೆ ವಸೂಲಾಗಿಲ್ಲ. ಹೀಗಾಗಿ ಸಿಬ್ಬಂದಿ ಅಷ್ಟೂ ಹಣ ವಾಪಸ್ ಮಾಡದಿದ್ದರೆ ಅದೇ ಮೌಲ್ಯದ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆಗೆ ನಿರ್ದೇಶಿಸಲಾಗಿದೆ.
ಮಡಿಕೇರಿ ನಗರಸಭೆಯಲ್ಲಿ 2015 ರಿಂದ 2017 ರವರೆಗೆ ಕರ ವಸೂಲಾತಿಯಲ್ಲಿ ಬರೋಬ್ಬರಿ ಒಂದು ಕೋಟಿಗೂ ಹೆಚ್ಚು ಹಣ ಅಂದಿನ ಕರವಸೂಲಾತಿ ಸಿಬ್ಬಂದಿಯಾದ ಸಜೀತ್ ಮತ್ತು ಸ್ವಾಮಿ ಇಬ್ಬರಿಂದ ದುರ್ಬಳಕೆಯಾಗಿತ್ತು. ಬಳಿಕ ಸ್ಥಳೀಯ ಲೆಕ್ಕ ಪರಿಶೋಧನೆಯಲ್ಲಿ 60,56,860 ರೂಪಾಯಿ ಅವ್ಯವಹಾರ ನಡೆದಿರುವುದು ಸಾಬೀತಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಪೌರಾಡಳಿತ ಇಲಾಖೆ, ಇಬ್ಬರಿಂದ ಅಷ್ಟೂ ಹಣದ ಜೊತೆಗೆ ಇದುವರೆಗೆ ಶೇ.8ರ ಬಡ್ಡಿಯಂತೆ ಎಷ್ಟು ಹಣವಾಗುತ್ತದೆಯೋ ಅಷ್ಟನ್ನು ವಾಪಸ್ ಪಡೆದುಕೊಳ್ಳಬೇಕು. ಅಷ್ಟು ಹಣ ವಾಪಸ್ ಮಾಡದಿದ್ದರೆ ಅದೇ ಮೌಲ್ಯದ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆಗೆ ನಿರ್ದೇಶನ ನೀಡಿ ಮೂರು ತಿಂಗಳು ಕಳೆದಿದೆ. ಇಂದಿಗೂ ಒಂದೇ ಒಂದು ರೂಪಾಯಿ ವಾಪಸ್ ಸಂಗ್ರಹವಾಗಿಲ್ಲ. ಅಥವಾ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ. ಇದನ್ನೂ ಓದಿ: ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್
ಈ ಕುರಿತು ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ಅವರನ್ನು ಕೇಳಿದರೆ ಅವ್ಯವಹಾರ ನಡೆಸಿದ್ದ ಇಬ್ಬರಿಗೂ ಎರಡು ನೋಟಿಸ್ ನೀಡಿ ಒಂದು ವಾರವಾಗಿದೆ. ಆದರೆ ಇಂದಿಗೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮತ್ತೊಂದು ನೋಟಿಸ್ ನೀಡಿ, ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
ನಗರಸಭೆ ಸದಸ್ಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಕೋಟಿಗೂ ಹೆಚ್ಚು ಹಣ ದುರ್ಬಳಕೆ ಆಗಿತ್ತು. ಅದನ್ನು ಸ್ಥಳೀಯ ಲೆಕ್ಕ ಪರಿಶೋಧನೆ ಮಾಡಿಸಿ ಕೇವಲ 60,56,860 ರೂಪಾಯಿ ಅವ್ಯವಹಾರ ಆಗಿದೆ ಎಂಬುದಾಗಿ ವರದಿ ನೀಡಲಾಗಿದೆ. ಅಲ್ಲದೆ ನಗರಸಭೆಯ ಇತರೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದು, ಅವರನ್ನೂ ತನಿಖೆಗೆ ಒಳಪಡಿಸಬೇಕು. ಆ ಕೆಲಸ ಮಾಡದೆ ಅವ್ಯವಹಾರದಲ್ಲಿ ಭಾಗಿಯಾದವರನ್ನೇ ತನಿಖಾ ಸಮಿತಿಯಲ್ಲಿ ಸದಸ್ಯರನ್ನಾಗಿ ಮಾಡಿ ಅವರನ್ನೆಲ್ಲಾ ರಕ್ಷಿಸಲಾಗಿದೆ. ಕೇವಲ ಕರ ವಸೂಲುಗಾರರನ್ನು ತಪ್ಪಿಸ್ಥರೆಂದು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರಗಳು ಜಿಎಸ್ಟಿಗೆ ಸೇರಿಸಲು ಒಪ್ಪದ ಹೊರತು ಪೆಟ್ರೋಲ್ ಬೆಲೆ ಇಳಿಯಲ್ಲ: ಹರ್ದೀಪ್ ಸಿಂಗ್ ಪುರಿ
ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಅಲ್ಲಿಯಾದರೂ ಎಲ್ಲಾ ಹಗರಣಗಳು ಬೆಳಕಿಗೆ ಬರಲಿ ಎನ್ನೋದು ನಗರಸಭೆ ಸದಸ್ಯರ ಆಗ್ರಹ. ನಗರಸಭೆಯಲ್ಲಿ ನಡೆದ ಅವ್ಯವಾರದ ಹಣ ವಸೂಲಿ ಮಾಡಲು ಅಧಿಕಾರಿಗಳು ಇಂದಿಗೂ ಮನಸ್ಸು ಮಾಡಿಲ್ಲ. ಇತ್ತ ತಪ್ಪು ಮಾಡಿದ ನಗರಸಭೆಯ ಸಿಬ್ಬಂದಿಗೂ ಯಾವುದೇ ಶಿಕ್ಷೆ ಅಗದೇ ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬ ಪರಿಸ್ಥಿತಿ ನಗರಸಭೆಯದು ಎಂದು ಸಾರ್ವನಿಕರು ಪ್ರಶ್ನೆ ಮಾಡುತ್ತಿದ್ದಾರೆ.
ವಾಷಿಂಗ್ಟನ್: ಕೋವಿಡ್-19 ಸಾಂಕ್ರಮಿಕ ರೋಗವನ್ನು ತಡೆಗಟ್ಟವ ಸಲುವಾಗಿ ಜನರು ತಮ್ಮ ದೈನಂದಿನ ಜೀವನದಲ್ಲಿ ಮಾಸ್ಕ್ ಧರಿಸವುದು ಸರ್ವೇಸಾಮಾನ್ಯವಾಗಿದೆ. ಕೊರೊನಾದಿಂದ ಹಲವಾರು ನಿಯಮಗಳನ್ನು ಜಾರಿಗೊಳಿಸಿದ್ದರೂ, ಅವುಗಳನ್ನು ಉಲ್ಲಂಘಿಸಿ ಜನರು ಅಜ್ಞಾನಿಗಳಂತೆ ವರ್ತಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯಂಬಂತೆ ವಿಮಾನದಲ್ಲಿ ಮಾಸ್ಕ್ ಧರಿಸದೇ ಇರುವ ದಂಪತಿಯನ್ನು ಪ್ರಶ್ನಿಸಿದ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮಾಸ್ಕ್ ಧರಿಸಲು ನಿರಾಕರಿಸಿದ ದಂಪತಿ ಮತ್ತು ಅವರ ಮಕ್ಕಳನ್ನು ಜೆಟ್ ಬ್ಲೂ ವಿಮಾನದಲ್ಲಿದ್ದ ಸಿಬ್ಬಂದಿ ಹೊರಹಾಕಿದ್ದಾರೆ. ಈ ವಿಮಾನ ಫ್ಲೋರಿಡಾ ಫೋರ್ಟ್ ಲಾಡರ್ನಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದತ್ತ ಹೊರಡಬೇಕಿತ್ತು. ಈ ವೀಡಿಯೋವನ್ನು ಆಲಿಸ್ ರುಸೋ ಎಂಬವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಮಹಿಳೆಯನ್ನು ನಗ್ನ ಮಾಡಿ ಪೈಶಾಚಿಕ ಹಲ್ಲೆ ನಡೆಸಿದ ಕಿರಾತಕರು
ಈ ಕುರಿತಂತೆ ಆಲಿಸ್ ರುಸೋ, ಮದ್ಯದ ಅಮಲಿನಲ್ಲಿದ್ದ ದಂಪತಿಗಳು ಸರಿಯಾಗಿ ಮಾಸ್ಕ್ ಧರಿಸದೇ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಈ ವೀಡಿಯೋವನ್ನು ಪೋಸ್ಟ್ ಮಾಡಬೇಕೆಂದು ರೆಕಾರ್ಡ್ ಮಾಡಿಕೊಂಡೆ. ಅವರನ್ನು ನಿಭಾಯಿಸಿದ ಸಿಬ್ಬಂದಿಗೆ ನಿಜಕ್ಕೂ ಧನ್ಯವಾದ ತಿಳಿಸುತ್ತಾ ಮೆಚ್ಚುಗೆ ವ್ಯಕ್ತಪಡಿಸಬೇಕು. ಸದ್ಯ ಈ ಕುಟುಂಬ ವಿಮಾನವನ್ನು ಹತ್ತಿದ ನಂತರ ನಾನು ವಿಮಾನ ಹತ್ತಿದೆ. ಮಹಿಳೆ ಸೀಟ್ ಬಳಿ ಹೋಗುವ ವೇಳೆ ಬೂಮರಾಂಗ್ ತೆಗೆದುಕೊಂಡಳು. ವಿಮಾನದಲ್ಲಿ ಪದೇ, ಪದೇ ಓಡಾಡುತ್ತಿದ್ದಳು. ಆಗ ಅವಳು ಮದ್ಯಪಾನ ಮಾಡಿದ್ದಾಳೆಂದು ಅಂದುಕೊಂಡೆ. ಆಕೆಯ ಬ್ಯಾಗ್ನಲ್ಲಿದ್ದ ನೀರಿನ ಬಾಟಲ್ನಲ್ಲಿ ಕ್ಯಾಪ್ ತೆರೆದಿತ್ತು, ಆಗ ಆಕೆಗೆ ನಾನು ತಿಳಿಸಿದ್ದೆ. ಫ್ಲೈಟ್ ಸಿಬ್ಬಂದಿ ಮಹಿಳೆ ಮ್ಕಕಳೊಂದಿಗೆ ಬರುವಾಗ ಪ್ರವೇಶ ದ್ವಾರದಲ್ಲಿ ಮಾಸ್ಕ್ನನ್ನು ಸರಿಯಾಗಿ ಧರಿಸುವಂತೆ ತಿಳಿಸಿದ್ದಾರೆ. ಆದರೆ ಮಹಿಳೆ ಅವರ ಮಾತನ್ನು ಕೇಳಲಿಲ್ಲ. ಮಹಿಳೆ ಮತ್ತು ಆಕೆಯ ಪತಿ ಮೂಗಿನಿಂದ ಕೆಳಗೆ ಮಾಸ್ಕ್ನನ್ನು ಧರಿಸಿದ್ದರು ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಳ್ಳುವ ಮೂಲಕ ವಿವರಿಸಿದ್ದಾರೆ. ಇದನ್ನೂ ಓದಿ: ರುಚಿಯಾದ ಮೊಟ್ಟೆ ಗ್ರೇವಿ ಮಾಡಿ ಮನೆ ಮಂದಿ ಕುಳಿತು ಸವಿಯಿರಿ
ಉಡುಪಿ: ಇಂಧನ, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಮೆಸ್ಕಾಂನ ಲೈನ್ ಮ್ಯಾನ್ ಗಳ ಜೊತೆ ಹುಟ್ಟುಹಬ್ಬದ ಸಿಹಿ ಊಟವನ್ನು ಸವಿದು ಖುಷಿಪಟ್ಟಿದ್ದಾರೆ.
ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಈ ಬಾರಿ ಕ್ಯಾಬಿನೆಟ್ ದರ್ಜೆಯ ನೂತನ ಸಚಿವರಾಗಿ ಎರಡು ಇಲಾಖೆಗಳ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸ್ವಾತಂತ್ರೋತ್ಸವವಾದ ಇಂದೇ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಮೆಸ್ಕಾಂನ ಸಿಬ್ಬಂದಿ ಜೊತೆ ಸಿಹಿಯೂಟ ಮಾಡಿದರು. ಈ ಮೂಲಕ 47ನೇ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿದರು.
ಲೈನ್ ಮ್ಯಾನ್ ಗಳ ಜೊತೆ ಮನೆಯಂಗಳದಲ್ಲಿ ಕೂತು ಊಟ ಮಾಡಿದರು. ಊಟದ ಜೊತೆ ತಮ್ಮ ಇಲಾಖೆಯಲ್ಲಿರುವ ಸಮಸ್ಯೆಗಳು, ನಿಮ್ಮ ಬೇಡಿಕೆಗಳು ಏನು ಎಂದು ಲೈನ್ಮ್ಯಾನ್ಗಳನ್ನು ಕೇಳಿದರು. ಈ ಪೈಕಿ ಸಾಧ್ಯವಾದಷ್ಟನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಚಿವ ಸುನೀಲ್ ಕುಮಾರ್, ನನ್ನ ಇಲಾಖೆ ಸರಿಯಾಗಿ ಕಾರ್ಯ ನಿರ್ವಹಿಸಬೇಕಾದರೆ ಫೀಲ್ಡಿನಲ್ಲಿ ದುಡಿಯುವ ಮೆಸ್ಕಾಂನ ಸಿಬ್ಬಂದಿ ಬಹುಮುಖ್ಯ. ಅವರ ಜೊತೆ ಹುಟ್ಟುಹಬ್ಬದ ದಿನ ಊಟ ಮಾಡುತ್ತಾ ಸಮಸ್ಯೆ ಆಲಿಸಿದ್ದೇನೆ. ಅದೇ ಇಂದಿನ ವಿಶೇಷ ಎಂದರು.
ಮಾಸ್ಕೋ: ಮೂವರು ಸಿಬ್ಬಂದಿ ಹಾಗೂ 13 ಮಂದಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ Mi-8 ಹೆಲಿಕಾಪ್ಟರ್ ರಷ್ಯಾದ ಕಮ್ಚಟ್ಕಾ ಪ್ರದೇಶದಲ್ಲಿ ಪತನಗೊಂಡಿದೆ.
ಮೂಲಗಳ ಪ್ರಕಾರ ಹೆಲಿಕಾಪ್ಟರ್ನಲ್ಲಿದ್ದ 8 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಮತ್ತು ಉಳಿದ ಎಂಟು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ತಕ್ಷಣಕ್ಕೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.
ಆಗಸ್ಟ್ 12ರ ಬುಧವಾರ ಕ್ರೊನೊಟ್ಸ್ಕಿ ನೇಚರ್ ರೀಸರ್ವ್ ಬಳಿ ವಿಟಜ್-ಏರೋ ವಿಮಾನಯಾನ ಸಂಸ್ಥೆಯ Mi-8 ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ದೊರೆತಿದೆ ಎಂದು ರಷ್ಯಾದ ತುರ್ತು ಸಚಿವಾಲಯ ತಿಳಿಸಿದೆ. ಸದ್ಯ ಕಮ್ಚಟ್ಕಾದ ಗವರ್ನರ್ ವ್ಲಾಡಿಮಿರ್ ಸೊಲೊಡೋವ್ ಅಪಘಾತ ಸ್ಥಳಕ್ಕೆ ವೈದ್ಯಕೀಯ ಹಾಗೂ ತುರ್ತು ಸೇವಾ ಸಿಬ್ಬಂದಿಯೊಟ್ಟಿಗೆ ಭೇಟಿ ನೀಡಿದ್ದರು. ಜೊತೆಗೆ ಪ್ರಾದೇಶಿಕ ಅಭಿಯೋಜಕರು ವಿಮಾನ ಸುರಕ್ಷತಾ ನಿಯಮಗಳ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಅಪಘಾತಕ್ಕೀಡಾದ ಹೆಲಿಕಾಪ್ಟರ್ನನ್ನು 37 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದು, ಇತ್ತೀಚೆಗಷ್ಟೇ ಈ ಹೆಲಿಕಾಪ್ಟರ್ ನಿರ್ವಹಿಸಲು ಉತ್ತಮ ಸ್ಥಿತಿಯಲ್ಲಿದೆ ಎಂದು ತಿಳಿಸಲಾಗಿತ್ತು. ಇದನ್ನೂ ಓದಿ:ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲಿಯೇ ಸಾವು
ಬಳ್ಳಾರಿ: ತೋಟದ ಮನೆಯಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರದು, ಕೊರೊನಾ ಲಸಿಕೆ ಹಾಕಿಸಿ ಕೊಳ್ಳದ ಜನರ ಮನವೊಲಿಸಿಜನರಿಗೆ ಲಸಿಕೆ ಹಾಕುವಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಬಳ್ಳಾರಿಯಲ್ಲಿ ಯಶಸ್ವಿಯಾಗಿದ್ದಾರೆ.
ಗಣಿ ನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕುರೇಕೊಪ್ಪಾ ಗ್ರಾಮದಲ್ಲಿ ಬಹುತೇಕ ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತಿದ್ದರು. ಮನೆ ಮನೆಗೆ ಲಸಿಕೆ ಹಾಕಲು ಬಂದವರನ್ನು ಊಹಾಪೋಹಗಳಿಗೆ ಕಿವಿಗೊಟ್ಟು ಕೋವಿಡ್ ಲಸಿಕೆ ಪಡೆಯದೇ ಇದ್ದರು. ಬಹುತೇಕ ಜನರು ಕೃಷಿಕರಾಗಿದ್ದು, ಕೃಷಿ ಚಟುವಟಿಕೆಯಲ್ಲಿ ಲಸಿಕೆ ಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ, ಅವರ ಗ್ರಾಮದ ಹೊರವಲಯದಲ್ಲಿ ಇರುವ ತೋಟದ ಮನೆಯಲ್ಲಿ ಕೋವಿಡ್ ಲಸಿಕಾ ಕೇಂದ್ರವನ್ನು ತೆರೆದು, ರೈತರಿಗೆ ಅಲ್ಲಿಗೆ ಬಂದು ಲಸಿಕೆ ಹಾಕಿ ಕೊಳ್ಳವಂತೆ ಮಾಡಿದ್ದರು. ಇದನ್ನೂ ಓದಿ: ಮರಗಳನ್ನು ರಕ್ಷಿಸುವ ಬುದ್ಧಿಮಾಂದ್ಯನಾಗಿ ತೆರೆ ಮೇಲೆ ಬಂದ ವಿಜಯ್
ಸಂಡೂರು ತಾಲೂಕು ಆರೋಗ್ಯ ಇಲಾಖೆ ವಿಶೇಷ ಪ್ರಯತ್ನದಿಂದಾಗಿ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ 100ಕ್ಕೂ ಅಧಿಕ ರೈತರಿಗೆ ಲಸಿಕೆ ಹಾಕಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ ಡಾ. ಕುಶಾಲ್ ರಾಜ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಲಸಿಕೆ ಕುರಿತು ಜಾಗೃತಿ ಮೂಡಿಸಿ, ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತಿದ್ದ ರೈತರಿಗೆ ಲಸಿಕೆ ಹಾಕಿದ್ದಾರೆ.
ಚಾಮರಾಜನಗರ: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 189 ಜನ ಸಿಬ್ಬಂದಿ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಲಾಕ್ಡೌನ್ ನಿಂದಾಗಿ ನಿರೀಕ್ಷಿತ ಆದಾಯ ಬರದಿರುವುದರಿಂದ ಬೆಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಾಸೋಹ ವಿಭಾಗ, ಸ್ವಚ್ಛತೆ, ಲಾಡು ತಯಾರಿಕಾ ವಿಭಾಗ, ಸೆಕ್ಯೂರಿಟಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ 189 ನೌಕರರನ್ನು ಜೂನ್ 4 ರಿಂದಲೇ ಪೂರ್ವಾನ್ವಯವಾಗುವಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಆದೇಶಿಸಿದ್ದಾರೆ.
ದೇವಾಲಯಕ್ಕೆ ಭಕ್ತಾದಿಗಳ ಪ್ರವೇಶ, ವಿವಿಧ ಸೇವೆಗಳಿಗೆ ಆಗಿಂದಾಗ್ಗೆ ನಿಷೇಧ ಹೇರುತ್ತಿರುವ ಹಿನ್ನೆಲೆಯಲ್ಲಿ ಹಾಗೂ ದಾಸೋಹ ಸೇವೆಯೂ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗುವ ಸಾಧ್ಯತೆಗಳಿಲ್ಲದಿರುವುದರಿಂದ, ಲಾಡು ಮಾರಾಟ ಸಹ ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾಗಿರುವುದರಿಂದ ಆದಾಯ ಕುಸಿದಿದೆ. ಧಾರ್ಮಿಕ ದತ್ತಿ ಇಲಾಖೆಯ ಕಾಯ್ದೆಯನ್ವಯ ದೇವಾಲಯದ ಆದಾಯದಲ್ಲಿ ಶೇ.35ರಷ್ಟು ಭಾಗವನ್ನು ಮಾತ್ರ ಬಳಸಿಕೊಳ್ಳಲು ಅವಕಾಶವಿದ್ದು, ಇದರಿಂದಾಗಿ ಖಾಯಂ ನೌಕರರಿಗೆ ಸಂಬಳ ಪಾವತಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ದೇವಾಲಯ ಸಂಪೂರ್ಣವಾಗಿ ತೆರೆಯುವ ವರೆಗೆ 189 ನೌಕರರನ್ನು ಸೇವೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಕೋವಿಡ್ ಕರ್ತವ್ಯಕ್ಕಾಗಿ ನಿಯೋಜಿಸಲ್ಪಟ್ಟಿದ್ದ ನೌಕರರ ಪೈಕಿ 26 ಮಂದಿ ಸೇವೆಗೆ ಹಾಜರಾಗಿರಲಿಲ್ಲ. ಇವರ ಸೇವೆಯನ್ನು ಸಹ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ( ತಾಯಿ ಹಾಗೂ ಮಕ್ಕಳ ಆಸ್ಪತ್ರೆಯ ವೈದ್ಯರು) ನರ್ಸ್ ಸೇರಿದಂತೆ ಸಿಬ್ಬಂದಿ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಮುಷ್ಕರ ಆರಂಭಿಸಿದ್ದಾರೆ. ಆಸ್ಪತ್ರೆಗೆ ಬಂದು ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ನಡೆಸುತ್ತಿದ್ದರು. ಮೂರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ನಮಗೆ ಬಹಳ ಸಮಸ್ಯೆ ಆಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದಿದೆ ಎಂದು ಸಿಬ್ಬಂದಿ ಸಮಸ್ಯೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ವೀಡಿಯೋ- ತನ್ನದೇ ನೆರಳು ನೋಡಿ ಹಾಯ್ ಅನ್ನುತ್ತಾ ಖುಪಿ ಪಟ್ಟಿದ್ದ ಐರಾ..!
ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊರೊನಾ ಸಮಯ ಅಂತ ಮೂರು ತಿಂಗಳು ಸಂಬಳ ಇಲ್ಲದೆ ಕೆಲಸ ಮಾಡಿದ್ದೇವೆ. ನಾವು ಮನೆ ಸಂಸಾರ ಇರುವವರು ನಮಗೂ ಕಷ್ಟ ಇದೆ ಎಂದು ಹೆಸರು ಹೇಳಲು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಇದನ್ನೂ ಓದಿ: ಡಿಸಿ ಮನೆ ಕರೆಂಟ್ ಬಿಲ್ ತಿಂಗಳಿಗೆ 50 ಸಾವಿರ ರೂ.: ಸಾರಾ ಮಹೇಶ್ ಆರೋಪ
ಕಳೆದ ಅಕ್ಟೋಬರ್ ನಿಂದ ಪಿಎಫ್ ಹಣವನ್ನೂ ಕೂಡ ತಡೆಹಿಡಿದಿದ್ದಾರೆ. ಬಾಕಿ ವೇತನವನ್ನು ಪಾವತಿಸುವ ಬಗ್ಗೆ ಯಾವ ಮಾಹಿತಿಯನ್ನು ನೀಡುತ್ತಿಲ್ಲ. ವೈದ್ಯರು, ಸಿಬ್ಬಂದಿ ಮುಷ್ಕರದಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿಯರು, ರೋಗಿಗಳು ತೊಂದರೆಗೊಳಗಾಗಿದ್ದಾರೆ.
ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾಕ್ಟರ್ ಮಧುಸೂದನ್ ನಾಯ್, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ಕೊಟ್ಟು ಸಿಬ್ಬಂದಿ ಜೊತೆ ಸಭೆ ನಡೆಸುತ್ತಿದ್ದಾರೆ. ಉಡುಪಿ ನಗರ ಠಾಣೆಯ ಪೊಲೀಸರು ಆಗಮಿಸಿ ಸಿಬ್ಬಂದಿ ಮನವೊಲಿಸಲು ಪ್ರಯತ್ನಿಸಿದರು. ಎಮರ್ಜೆನ್ಸಿರುವ ರೋಗಿಗಳಿಗೆ ಚಿಕಿತ್ಸೆ ಕೊಡಿ ಎಂದು ಹೇಳಿ ಕಳುಹಿಸಿದ್ದಾರೆ.