Tag: staff

  • ಸಾರಿಗೆ ನೌಕರರಿಗೆ ಬಿಗ್ ಶಾಕ್ – ಮಾರ್ಚ್ ತಿಂಗಳ ವೇತನ ತಡೆದ ಸರ್ಕಾರ

    ಸಾರಿಗೆ ನೌಕರರಿಗೆ ಬಿಗ್ ಶಾಕ್ – ಮಾರ್ಚ್ ತಿಂಗಳ ವೇತನ ತಡೆದ ಸರ್ಕಾರ

    ಬೆಂಗಳೂರು: ಸಾರಿಗೆ ನೌಕರರಿಗೆ ಸರ್ಕಾರ ಬಿಗ್ ಶಾಕಿಂಗ್ ನ್ಯೂಸ್ ಒಂದು ನೀಡಿದೆ. ಮುಷ್ಕರಕ್ಕೆ ಮುಂದಾದ ನೌಕರರಿಗೆ ಸರ್ಕಾರ ಹಾಗೂ ಸಂಸ್ಥೆಯಿಂದ ಈ ನ್ಯೂಸ್ ಹೊರ ಬಿದ್ದಿದೆ.

    ಮಾರ್ಚ್ ತಿಂಗಳ ವೇತನವನ್ನು ಸರ್ಕಾರ ತಡೆಹಿಡಿದಿದೆ. ಅಲ್ಲದೆ ಸಾರಿಗೆ ನಿಗಮಗಳಿಗೆ ಸರ್ಕಾರ ಸೂಚನೆ ನೀಡಿದೆ. ಮುಷ್ಕರ ಕೈ ಬಿಡುವಂತೆ ಪರಿಪರಿಯಾಗಿ ಮನವಿ ಮಾಡಿದರೂ ನೌಕರರು ಡೋಂಟ್ ಕೇರ್ ಎನ್ನುತ್ತಿದ್ದು, ಹೀಗಾಗಿ ಮಾರ್ಚ್ ತಿಂಗಳ ಸಂಬಳ ತಡೆಹಿಡಿಯಲು ಸಾರಿಗೆ ನಿಗಮಗಳು ಮುಂದಾಗಿವೆ.

    ತಿಂಗಳ 10 ನೇ ತಾರೀಕು ಒಳಗೆ ನಿಗಮಗಳು ವೇತನ ನೀಡುತ್ತಿದ್ದವು. ಆದರೆ ಈ ಬಾರಿ ಮುಷ್ಕರ ಕೈಬಿಡುವವರೆಗೆ ಸಂಬಳ ಇಲ್ಲ. ಈ ಮೂಲಕ ಸಾರಿಗೆ ನಿಗಮದ ನೌಕರರಿಗೆ ಮಾರ್ಚ್ ತಿಂಗಳ ವೇತನ ತಡೆಗೆ ನಿರ್ಧಾರ ಮಾಡಲಾಗಿದೆ ಎಂದು ಬಿಎಂಟಿಸಿ, ಭದ್ರತಾ ವಿಭಾಗದ ನಿರ್ದೇಶಕ ಡಾ.ಅರುಣ್ ಕುಮಾರ್ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

    ಡ್ರೈವರ್ ಹಾಗೂ ಕಂಡೆಕ್ಟರ್ ಗಳ ಸಂಬಳವನ್ನು ತಡೆಹಿಡಿಯಲಾಗಿದೆ. ಉಳಿದ ವಿಭಾಗಗಳ ಸಂಬಳವಾಗಿದೆ. ಆದಾಯದ ಆಧಾರದ ಮೇಲೆ ಸಂಬಳ ಕೊಡಲಾಗುವುದು. ಸದ್ಯಕ್ಕೆ ಮುಷ್ಕರ ನಿರತ ಸಿಬ್ಬಂದಿಗೆ ಮಾರ್ಚ್ ತಿಂಗಳ ಸಂಬಳವಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

  • ಸಾರಿಗೆ ಸಿಬ್ಬಂದಿಗೆ ನಾಣ್ಯರೂಪದಲ್ಲಿ ಸಂಬಳ

    ಸಾರಿಗೆ ಸಿಬ್ಬಂದಿಗೆ ನಾಣ್ಯರೂಪದಲ್ಲಿ ಸಂಬಳ

    ಮುಂಬೈ: ಎಲೆಕ್ಟ್ರಿಕ್ ಸಪ್ಲೈ ಆ್ಯಂಡ್ ಟ್ರಾನ್ಸ್‍ಪೋರ್ಟ್ ಅಂಡರ್ ಟೇಕಿಂಗ್ ಸಿಬ್ಬಂದಿಗೆ ಕಳೆದ ಕೆಲವು ತಿಂಗಳಿಂದ ನಾಣ್ಯಗಳಲ್ಲಿ ವೇತನವನ್ನು ಮುಂಬೈನಲ್ಲಿ ನೀಡಲಾಗ್ತಿದೆ.

    ಬಸ್ ಪ್ರಯಾಣಿಕರಿಂದ ಪ್ರತಿನಿತ್ಯ ನಾಣ್ಯದ ರೂಪದಲ್ಲಿ ಬೃಹತ್ ಪ್ರಮಾಣದಲ್ಲಿ ಟಿಕೆಟ್ ಹಣ ಸಂಗ್ರಹವಾಗುತ್ತಿದೆ. ನಗರದ ಪ್ರಮುಖ ಖಾಸಗಿ ಬ್ಯಾಂಕ್‍ವೊಂದು ಸಾರಿಗೆ ಸಂಸ್ಥೆಯಿಂದ ಈ ನಾಣ್ಯಗಳನ್ನು ಸಂಗ್ರಹಿಸುತ್ತಿತ್ತು. ಆದರೆ ಇತ್ತೀಚೆಗೆ ಬ್ಯಾಂಕ್‍ನೊಂದಿಗಿನ ಒಪ್ಪಂದದ ಅವಧಿ ಮುಕ್ತಾಯವಾಗಿದೆಯಂತೆ. ಹೀಗಾಗಿ ನಾಣ್ಯಗಳನ್ನು ಪಡೆಯಲು ಖಾಸಗಿ ಬ್ಯಾಂಕ್ ಒಪ್ಪುತ್ತಿಲ್ಲ.

    ಈ ಹಿನ್ನೆಲೆಯಲ್ಲಿ ಸುಮಾರು 40 ಸಾವಿರ ಸಿಬ್ಬಂದಿಯ ವೇತನದ ಬಹುಭಾಗವನ್ನು ನಾಣ್ಯಗಳ ರೂಪದಲ್ಲಿ ನೀಡಲಾಗುತ್ತಿದೆ. ಇದರಿಂದ ಉದ್ಯೋಗಿಗಳು ಅಸಮಾಧಾನಗೊಂಡಿದ್ದಾರೆ. ಹಲವಾರು ಉದ್ಯೋಗಿಗಳು ಅಂಬರ್ನಾಥ್, ಬದ್ಲಾಪುರ, ಪನ್ವೆಲ್ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಸಂಬಳದ ಹಣದ ನಾಣ್ಯಗಳನ್ನು ಕೊಂಡೊಯ್ಯುವುದು ತುಂಬಾ ಕಷ್ಟವಾಗುತ್ತಿದೆ ಎಂದು ಉದ್ಯೋಗಿಯೊಬ್ಬರು ಹೇಳಿದ್ದಾರೆ.

    11 ಸಾವಿರ ನಗದು ನಾಣ್ಯಗಳ ರೂಪದಲ್ಲಿ ದೊರೆಯುತ್ತದೆ. ಸಾಮಾನ್ಯವಾಗಿ ಬಹುತೇಕ ಸಂಬಳವನ್ನು 2, 5, 10 ರೂಪಾಯಿ ಮುಖಬೆಲೆಯ ನಾಣ್ಯಗಳೊಂದಿಗೆ ಕೊಡಲಾಗುತ್ತಿದೆ. ಕೆಲವೊಮ್ಮೆ 10, 50. 100, 500 ರೂಪಾಯಿಗಳ ನೋಟ್ ಪಡೆಯುತ್ತೇವೆ. ಉಳಿದ ಸಂಬಳವನ್ನು ನೇರವಾಗಿ ನಮ್ಮ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ ಎಂದು ಉದ್ಯೋಗಿಯೊಬ್ಬರು ಹೇಳಿದ್ದಾರೆ. ಸಿಬ್ಬಂದಿಗೆ ನಾಣ್ಯಗಳಲ್ಲಿ ಸಂಬಳ ಕೊಡಲಾಗುತ್ತಿದೆ. ಈ ವಿಚಾರವಾಗಿ ಮುಂಬೈ ಬಸ್ ಆಪರೇಟರ್, ನೌಕರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

  • ವಸತಿ ಶಾಲೆ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 19 ಜನ್ರಿಗೆ ಕೊರೊನಾ ಪಾಸಿಟಿವ್

    ವಸತಿ ಶಾಲೆ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 19 ಜನ್ರಿಗೆ ಕೊರೊನಾ ಪಾಸಿಟಿವ್

    ಗದಗ: ಕೊರೊನಾ 2ನೇ ಅಲೆಯ ಆತಂಕ ಈಗ ಶಾಲಾ ಮಕ್ಕಳಿಗೂ ಕಾಡತೊಡಗಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಒಟ್ಟು 19 ಜನ್ರಿಗೆ ಪಾಸಿಟಿವ್ ಕಾಣಿಸಿಕೊಂಡಿದೆ.

    ಎರಡು ದಿನಗಳ ಹಿಂದೆ ಇದೇ ವಸತಿ ಶಾಲೆಯಲ್ಲಿನ ನಾಲ್ಕು ವಿದ್ಯಾರ್ಥಿಗಳು ಹಾಗೂ ಓರ್ವ ಅಡುಗೆ ಸಿಬ್ಬಂದಿ ಸೇರಿ ಒಟ್ಟು 5 ಮಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಆರೋಗ್ಯ ಇಲಾಖೆ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ತಪಾಸಣೆ ಒಳಪಡಿಸಿದಾಗ, ಇಂದು ಮತ್ತೆ 14 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.

    ವಾಜಪೇಯಿ ವಸತಿ ಶಾಲೆಯ 18 ವಿದ್ಯಾರ್ಥಿಗಳು, ಓರ್ವ ಅಡುಗೆ ಸಿಬ್ಬಂದಿ ಸೇರಿ ಒಟ್ಟು 19 ಮಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಶಾಲೆಯಲ್ಲಿ 175ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಬಹುತೇಕ ಮಕ್ಕಳಲ್ಲಿ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿದೆ.

    ರೋಣ ಪುರಸಭೆ ಸಿಬ್ಬಂದಿ ವಸತಿ ಶಾಲೆಯನ್ನು ಸಂಪೂರ್ಣ ಸ್ಯಾನಿಟೈಜೆಷನ್ ಮಾಡಿಸಿದ್ದಾರೆ. ಆರೋಗ್ಯ ಇಲಾಖೆಯಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತಪಾಸಣೆ ಮಾಡಲಾಗುತ್ತಿದ್ದು, 25 ಜನರ ವರದಿ ಬರುವುದು ಬಾಕಿ ಇದೆ. ಸ್ಥಳಕ್ಕೆ ರೋಣ ತಹಶೀಲ್ದಾರ್ ಜಕ್ಕನಗೌಡ್ರ, ಬಿ.ಇ.ಓ ಹಾಗೂ ಅಧಿಕಾರಿಗಳು ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಪಾಲಕರಲ್ಲಿ ಆತಂಕ ಮನೆ ಮಾಡಿದೆ. ವಸತಿ ಶಾಲೆ ಮಕ್ಕಳು ಆ ಏರಿಯಾದ ಅನೇಕ ಕಡೆಗಳಲ್ಲಿ ಓಡಾಡಿರುವುದರಿಂದ, ವಸತಿ ಶಾಲೆಗೆ ಕೊರೊನಾ ಕಂಠಕವಾಗಿ ಪರಿಣಮಿಸುತ್ತಾ ಎಂಬ ಭಯ ಸ್ಥಳೀಯರಲ್ಲಿ ಶುರುವಾಗಿದೆ.

  • ವಸತಿ ಶಾಲೆ ನಾಲ್ವರು ವಿದ್ಯಾರ್ಥಿಗಳು, ಓರ್ವ ಸಿಬ್ಬಂದಿಗೆ ಕೊರೊನಾ

    ವಸತಿ ಶಾಲೆ ನಾಲ್ವರು ವಿದ್ಯಾರ್ಥಿಗಳು, ಓರ್ವ ಸಿಬ್ಬಂದಿಗೆ ಕೊರೊನಾ

    ಗದಗ: ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ನಾಲ್ಕು ಜನ ವಿದ್ಯಾರ್ಥಿಗಳು ಹಾಗೂ ಓರ್ವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿರುವ ಘಟನೆ ಗದಗದ ರೋಣ ಪಟ್ಟಣದಲ್ಲಿ ಕಂಡುಬಂದಿದೆ.

    175ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ ಮಕ್ಕಳಲ್ಲಿ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿದೆ. ಮೊದಲು ಓರ್ವ ಅಡುಗೆ ಸಿಬ್ಬಂದಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ. ಕೂಡಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಕ್ಕಳಿಗೆ ಪರೀಕ್ಷೆ ಮಾಡಿದಾಗ ನಾಲ್ಕು ವಿದ್ಯಾರ್ಥಿಗಳಿಗೆ ಕೊರೊನಾ ಕಾಣಿಸಿಕೊಂಡಿದೆ.

    ನೂರಾರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಈಗ ವಸತಿ ಶಾಲೆಯ ಎಲ್ಲಾ ಸಿಬ್ಬಂದಿ ಹಾಗೂ ಮಕ್ಕಳಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ರೋಣ ಪಟ್ಟಣದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲೇ ಕ್ವಾರಂಟೈನ್ ಮಾಡಲಾಗಿದೆ.

  • ಪಂಚಾಯಿತಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ, ಫುಲ್ ಟೈಟ್, ಬಾಗಿಲು ಹಾಕದೆ ನಿದ್ದೆಗೆ ಜಾರಿದ್ರು

    ಪಂಚಾಯಿತಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ, ಫುಲ್ ಟೈಟ್, ಬಾಗಿಲು ಹಾಕದೆ ನಿದ್ದೆಗೆ ಜಾರಿದ್ರು

    – ಗ್ರಾಮಸ್ಥರೇ ಕಚೇರಿಗೆ ಬೀಗ ಹಾಕಿದ್ರು

    ಚಿಕ್ಕಮಗಳೂರು: ಗ್ರಾಮ ಪಂಚಾಯಿತಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿ ಬಾಗಿಲನ್ನೂ ಹಾಕದೆ ಬಾಗಿಲ ಬಳಿಯೇ ನಿದ್ದೆಗೆ ಜಾರಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ದೇವನೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

    ಮಾರ್ಚ್ 7 ಭಾನುವಾರವಾದ್ದರಿಂದ ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಅರುಣ್ ಹಾಗೂ ಅಟೆಂಡರ್ ಅವಿನಾಶ್ ಗ್ರಾಮ ಪಂಚಾಯಿತಿಯಲ್ಲೇ ಸಂಡೇ ಸ್ಪೆಷಲ್ ಡ್ರಿಂಕ್ಸ್ ಪಾರ್ಟಿ ಮಾಡಿದ್ದಾರೆ. ಪಾರ್ಟಿಯ ಬಳಿಕ ಫುಲ್ ಟೈಟ್ ಆದ ಇಬ್ಬರೂ ಗ್ರಾಮ ಪಂಚಾಯಿತಿ ಕಚೇರಿಯ ಬಾಗಿಲನ್ನೂ ಹಾಕಿಲ್ಲ. ಗ್ರಾಮ ಪಂಚಾಯಿತಿಯ ಆವರಣದಲ್ಲಿ ನಿದ್ದೆಗೆ ಜಾರಿದ್ದಾರೆ.

    ರಾತ್ರಿ 11 ಗಂಟೆಯಾದರೂ ಗ್ರಾಮ ಪಂಚಾಯಿತಿ ಬಾಗಿಲು ಹಾಕದ್ದನ್ನ ಗಮನಿಸಿದ ಸ್ಥಳೀಯರು, ಹೋಗಿ ನೋಡಿದ್ದಾರೆ. ಸಿಬ್ಬಂದಿ ನಶೆಯಲ್ಲಿ ತೇಲುತ್ತಿದ್ದು, ಗಾಢ ನಿದ್ದೆಗೆ ಜಾರಿದ್ದರು. ಇದನ್ನು ಕಂಡ ಸ್ಥಳಿಯರೇ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿಕೊಂಡು ಬಂದಿದ್ದಾರೆ. ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಇಬ್ಬರನ್ನೂ ಕೆಲಸದಿಂದ ವಜಾಗಿಳಿಸುವಂತೆ ಆಗ್ರಹಿಸಿದ್ದಾರೆ.

  • EXCLUSIVE: ಬಿಬಿಎಂಪಿ ಕಸ ದಂಧೆ ಪಬ್ಲಿಕ್ ಟಿವಿ ಕ್ಯಾಮೆರಾದಲ್ಲಿ ಸೆರೆ

    EXCLUSIVE: ಬಿಬಿಎಂಪಿ ಕಸ ದಂಧೆ ಪಬ್ಲಿಕ್ ಟಿವಿ ಕ್ಯಾಮೆರಾದಲ್ಲಿ ಸೆರೆ

    ಬೆಂಗಳೂರು: ಬಿಬಿಎಂಪಿ ವತಿಯು ಕಸದ ಮೂಲಕ ಕಾಸು ಸಂಗ್ರಹಣೆ ಮಾಡುತ್ತಿರುವ ವಿಚಾರ ಪಬ್ಲಿಕ್ ಟಿವಿ ಕ್ಯಾಮೆರಾ ಮುಂದೆ ಬೆಳಕಿಗೆ ಬಂದಿದೆ.

    ಬಿಬಿಎಂಪಿ ಅಪಾರ್ಟ್ ಮೆಂಟ್ ಕಸ ತೆಗೆದುಕೊಂಡು ಹೋಗಲು ಒಬ್ಬೊಬ್ಬರಿಗೆ ಒಂದೊಂದು ರೇಟ್ ಫಿಕ್ಸ್ ಮಾಡುವ ಮೂಲಕ ಕಸದ ದಂಧೆ ನಡೆಸುತ್ತಿದೆ. ಕಸ ಹಾಕಲು ಹೋದವರಿಗೆ ಹಸಿ ,ಒಣ ಕಸ ಬೇರ್ಪಡಿಸಿ ಎಂದು ಹೇಳುತ್ತಾರೆ. ಆದರೆ ಹಣ ನೀಡುವವರಿಗೆ ಮಾತ್ರ ಕಸವನ್ನು ಮಿಕ್ಸ್ ಮಾಡಿ ಕೊಟ್ಟರು ಕೂಡ ಪರವಾಗಿಲ್ಲ ಎಂದು ಹೇಳುವ ಮೂಲಕ ಹಣ ಸಂಗ್ರಹಣೆ ಮಾಡುತ್ತಿದ್ದಾರೆ.

    ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ಕಾಯ್ದೆ ಪ್ರಕಾರ ಬಲ್ಕ್ ಜನರೇಟರ್ ಕಸ ಸಂಗ್ರಹಿಸುವಂತಿಲ್ಲ. 100 ಕೆಜಿ ಗಿಂತ ಹೆಚ್ಚು ಕಸ ಬಿದ್ದರೆ ಅದು ವಾಣಿಜ್ಯ ಕಸ ಆಗುತ್ತದೆ. ಬಿಬಿಎಂಪಿ ವಸತಿ ಕಸಗಳನ್ನು ಮಾತ್ರ ಸಂಗ್ರಹ ಮಾಡಲಿದ್ದು, ಒಂದು ಮನೆಯ ಕಸ 10 ಕೆಜಿಗಿಂತ ಮೀರಬಾರದು. ಆದರೆ ಬೊಮ್ಮನಹಳ್ಳಿ, ಬೆಳ್ಳಂದೂರು ಸಮೀಪದ ಅಪಾರ್ಟ್ ಮೆಂಟ್‍ಗಳಲ್ಲಿ ನಿತ್ಯ 100 ಕೆಜಿಗೂ ಹೆಚ್ಚು ಕಸ ಸಂಗ್ರಹ ಮಾಡುವ ಮೂಲಕ ಕಸದ ದಂಧೆ ನಡೆಯುತ್ತಿದೆ. ಅಲ್ಲದೆ ಈ ಕಸವನ್ನು ನಗರದ ಹೊರವಲಯಗಳಿಗೆ ವಾಣಿಜ್ಯ ಕಸ ಸಂಗ್ರಹಣೆ ಮಾಡಲಾಗುತ್ತದೆ.

    ನಗರದ ಹೊರವಲಯ ಬೆಳ್ಳಂದೂರಿನ ಖಾಸಗಿ ಅಪಾರ್ಟ್‍ಮೆಂಟ್ ಹಿಂಬಾಗಿಲಿನಿಂದ ಕಸ ತೆಗೆದುಕೊಳ್ಳುತ್ತಾರೆ. ಅಲ್ಲದೆ ಬಿನ್ನಿಮಿಲ್ ಅಪಾರ್ಟ್‍ಮೆಂಟ್ ಕಸ ತೆಗೆದುಕೊಂಡು ಹೋಗಲು ಬಿಬಿಎಂಪಿ ಸಿಬ್ಬಂದಿ , ಪಬ್ಲಿಕ್ ಟಿವಿ ಪ್ರತಿನಿಧಿಯೊಂದಿಗೆ ರೇಟ್ ಫಿಕ್ಸ್ ಮಾಡುವ ಅಸಲಿ ಸತ್ಯ ಬಯಲಾಗಿದೆ.

    ಪ್ರತಿನಿಧಿ – ನಮ್ ಅಪಾರ್ಟ್ ಮೆಂಟ್ ಕಸ ತಗೊಳ್ಳಿ
    ಸಿಬ್ಬಂದಿ – ಯಾವ್ ಏರಿಯಾ
    ಪ್ರತಿನಿಧಿ – ಇಲ್ಲಿ 12 ನೇ ಕ್ರಾಸ್ ಸ್ಟಾರ್ ಬಿಲ್ಡಿಂಗ್
    ಸಿಬ್ಬಂದಿ – ಹೌದಾ , ಎಷ್ಟ್ ಅಪಾರ್ಟ್ ಮೆಂಟ್ ಇದೇ ಹೇಳಿ ರೇಟ್ ಫಿಕ್ಸ್ ಮಾಡ್ತಿವಿ
    ಪ್ರತಿನಿಧಿ – 120 ಪ್ಲಾರ್ಟ್ ಇದೆ ,100 ಕೆಜಿಗಿಂತ ಜಾಸ್ತಿ ಕಸ .. 4 ಆಟೋ ಬೇಕೆ ಬೇಕು
    ಸಿಬ್ಬಂದಿ – ಆಗಲಿ ತಿಂಗಳಿಗೆ 100 ರೂ ಒಂದೊಂದು ಮನೆಗೆ ಕೊಡಿಸಿ
    ಪ್ರತಿನಿಧಿ – 50 ಮಾಡಿಕೊಳ್ಳಿ
    ಸಿಬ್ಬಂದಿ – ಆಗಲಿ ಓಕೆ,ಇವತ್ತೆ ಕಸ ತೆಗೆಯಬೇಕಾ
    ಪ್ರತಿನಿಧಿ – ಸೋಮವಾರದಿಂದ ಕಸ ತೆಗೆಯಿರಿ
    ಸಿಬ್ಬಂದಿ – ಹಂಗ ಆಗಲಿ , ಹಸಿ ,ಒಣ ಕಸ ಬೇರೆ ಮಾಡಿ . ಪೊಲೀಸವ್ರೇ ಮಾಡ್ತಾರೆ
    ಪ್ರತಿನಿಧಿ – ಅಯ್ಯೊ ಮಾಡಲ್ಲ ಅಂತಾರೆ
    ಸಿಬ್ಬಂದಿ – ಹೋಗಲಿ ಒಂದೊಂದು ಕವರ್ ನಲ್ಲಂತೂ ಕಟ್ಟಿ ಹಾಕಿರಬೇಕು
    ಪ್ರತಿನಿಧಿ – ಸರಿ ,ಡ್ರಮ್ ಗೆ ತುಂಬಿಸಿ ಇಡ್ತಿವಿ

    ಗುತ್ತಿಗೆದಾರ ಕೆಲಸದವರ ಮೇಲೆ ಹೆಲ್ತ್ ಇನ್ಸ್ ಪೆಕ್ಟರ್ ಇದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಸಿಬ್ಬಂದಿ ಪುಡಿಗಾಸಿನ ಆಸೆಗಾಗಿ ಬಿಬಿಎಂಪಿ ನಿಯಮಗಳನ್ನು ಗಾಳಿಗೆ ತೂರಿ ಕಸದ ದಂಧೆಯ ಮೂಲಕ ಹಣ ಸಂಗ್ರಹಣೆ ಮಾಡುತ್ತಿದ್ದಾರೆ.

  • ಬೆಂಗಳೂರು ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆಗೆ ಬ್ರೇಕ್

    ಬೆಂಗಳೂರು: ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆಗೆ ಬ್ರೇಕ್ ಬಿದ್ದಿದೆ. ಸಿಗ್ನಲ್‍ಗಳಲ್ಲಿ ಭಿಕ್ಷೆ ಬೇಡುವುದು ಹಾಗೂ ಹಣ ವಸೂಲಿ ಮಾಡುವುದು ತಡೆಯುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಪ್ರಕಟಿಸಿದ್ದಾರೆ.

    ಭಿಕ್ಷಾಟನೆಯಿಂದ ಟ್ರಾಫಿಕ್ ಸಮಸ್ಯೆ ಹಾಗೂ ಸಾರ್ವಜನಿಕರ ಜೊತೆ ಅನುಚಿತ ವರ್ತನೆ ನಡೆಯುತ್ತಿದೆ. ಹಣ ನೀಡಲು ನಿರಾಕರಿಸುವ ವೇಳೆ ವಾಹನ ಸವಾರರ ಜೊತೆ ಅನುಚಿತ ವರ್ತನೆ ತೋರಿ ತೊಂದರೆಯಾಗುತ್ತದೆ. ಈ ಕಾರಣದಿಂದಾಗಿ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಕಮಿಷನರ್ ಸೂಚನೆ ನೀಡಿದ್ದಾರೆ.

     

    ಭಿಕ್ಷಾಟನೆ ತಡೆಯಲು ಕಮಿಷನರ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಲಾ ಆಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನೆಡಸಿ ಕ್ರಮ ಕೈಗೊಳ್ಳುಬೇಕು. ಎಲ್ಲಾ ಡಿಸಿಪಿಗಳು ತಮ್ಮ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸ ಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಲಾಗಿದೆ.

  • ಹಳೆಬೀಡಿನಲ್ಲಿ ಉತ್ಕನನದ ವೇಳೆ ಎಡವಟ್ಟು – ಬೆಂಕಿಯಿಂದ ಹಲವು ವಿಗ್ರಹಗಳಿಗೆ ಹಾನಿ

    ಹಳೆಬೀಡಿನಲ್ಲಿ ಉತ್ಕನನದ ವೇಳೆ ಎಡವಟ್ಟು – ಬೆಂಕಿಯಿಂದ ಹಲವು ವಿಗ್ರಹಗಳಿಗೆ ಹಾನಿ

    ಹಾಸನ: ಹಳೆಬೀಡಿನ ಹೊಯ್ಸಳೇಶ್ವರ ದೇಗುಲದ ಆವರಣದಲ್ಲಿ ಒಣಗಿದ್ದ ಗಿಡಗಳಿಗೆ ಬೆಂಕಿ ಹಚ್ಚುವಾಗ ಎಡವಟ್ಟಾಗಿದ್ದು ಹಲವು ವಿಗ್ರಹಗಳಿಗೆ ಹಾನಿಯಾಗಿದೆ.

    ಸ್ಮಾರಕದ ಸುತ್ತ ಬೆಳೆದಿದ್ದ ಅನುಪಯುಕ್ತ ಕಳೆ ತೆಗೆದು ಸ್ವಚ್ಛಗೊಳಿಸುವ ಕೆಲಸವನ್ನು ಸುಲಭ ಮಾಡಿಕೊಳ್ಳುವ ಸಲುವಾಗಿ ಒಣಗಿದ್ದ ಗಿಡಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ವೇಳೆ ಎಡವಟ್ಟಾಗಿದ್ದು, ಅತ್ಯಮೂಲ್ಯ ವಿಗ್ರಹಗಳು ಸುಟ್ಟು ಮಸಿ ಹಿಡಿದು ಮೂಲ ರೂಪ ಕಳೆದುಕೊಂಡಿದೆ.

    ಭಾರತೀಯ ಪುರಾತತ್ವ ವಿಭಾಗದಿಂದ ನಿಯೋಜಿರಾಗಿದ್ದ ಕಾರ್ಮಿಕರು ಈ ಅಚಾತುರ್ಯ ಎಸಗಿದ್ದಾರೆ. ಬಿಸಿಲಿಗೆ ಒಣಗಿದ್ದ ಗಿಡ-ಬಳ್ಳಿಗಳು ಧಗಧಗನೆ ಹೊತ್ತಿಕೊಂಡು ಉರಿದಿದ್ದು ಕೆರೆ ದಂಡೆಯಲ್ಲಿದ್ದ ಹುಚ್ಚೇಶ್ವರ(ಬ್ರಹ್ಮೇಶ್ವರ) ಸ್ಮಾರಕದ ಬಹುಭಾಗ ಬೆಂಕಿಯ ಜ್ವಾಲೆಗೆ ಸಿಲುಕಿ ಕರಕಲಾಗಿದೆ.

    ಘಟನೆಯ ತರುವಾಯ ಸಿಬ್ಬಂದಿ ಹಾಗೂ ಕಾರ್ಮಿಕರು ನೀರು ಹಾಕಿ ಬೆಂಕಿಯನ್ನು ಆರಿಸಿದರೂ ವಿಗ್ರಹಗಳಿಗೆ ಆಗಿರುವ ಹಾನಿಯನ್ನು ಸರಿಪಡಿಸಲು ಆಗಿಲ್ಲ. ಜೈನ ಬಸದಿ ಹಿಂಭಾಗದಲ್ಲಿ ಪುರಾತತ್ವ ವಿಭಾಗದಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಸುತ್ತಲು ಬೆಳೆದಿದ್ದ ಗಿಡಗಂಟೆ ನಾಶಪಡಿಸಲು ಬೆಂಕಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ವಿಗ್ರಹಗಳು ಕರಕಲಾಗಿವೆ. ಉತ್ಖನನ ಕಾರ್ಯದಲ್ಲಿ ಪಾಲ್ಗೊಂಡವರು ವಿಗ್ರಹಗಳ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಉತ್ಖನನ ಮಾಡಿ ಪ್ರಯೋಜನವೇನು ಎಂದು ಸ್ಥಳೀಯರು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಹೋಟೆಲ್‍ನಲ್ಲಿ ದಂಪತಿ ನಿಗೂಢ ಸಾವು

    ಹೋಟೆಲ್‍ನಲ್ಲಿ ದಂಪತಿ ನಿಗೂಢ ಸಾವು

    ಪಾಟ್ನಾ: ಗುಂಡು ತಗುಲಿ ದಂಪತಿ ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ಸೋಮವಾರ ನಡೆದಿದೆ. ತನಿಖೆ ವೇಳೆ ಮೃತಪಟ್ಟವರು ದಂಪತಿಯಾಗಿದ್ದು, ಪರೀಕ್ಷೆಗಾಗಿ ಮುಜಾಫರ್‍ಪುರ್‍ಗೆ ಬಂದಿದ್ದರು ಎಂದು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ.

    ದಂಪತಿ ವಿಚಾರಿಸಲೆಂದು ಹೋಟೆಲ್ ಮ್ಯಾನೇಜರ್ ಚೋಟು ಕುಮಾರ್, ಕೋಣೆ ಬಳಿ ಹೋಗಿ ಬಾಗಿಲು ತಟ್ಟಿದ್ದಾರೆ. ಆದರೆ ದಂಪತಿ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ಹಾಕಿ ಕೋಣೆ ಒಳಗೆ ಪ್ರವೇಶಿಸಿದಾಗ ತಲೆಗೆ ಬುಲೆಟ್ ತಗುಲಿ ದಂಪತಿ ಹಾಸಿಗೆ ಮೇಲೆ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ.

    ಘಟನೆ ಕುರಿತಂತೆ ವಿಚಾರಣೆ ನಡೆಸಲು ಎಫ್‍ಎಸ್‍ಎಲ್ ವಿಶೇಷ ತಂಡವನ್ನು ರಚಿಸಲಾಗಿದ್ದು, ತನಿಖೆ ನಂತರ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಸತ್ಯ ಬಹಿರಂಗಗೊಳ್ಳಲಿದೆ ಎಂದು ಡಿಎಸ್‍ಪಿ ರಾಮ್ನಾರೇಶ್ ಪಾಸ್ವಾನ್ ತಿಳಿಸಿದ್ದಾರೆ.

  • ಸಂಬಳದ ಸಮಸ್ಯೆ – ಕಿಡ್ನಿ ಮಾರಾಟಕ್ಕಿಟ್ಟ ಸಾರಿಗೆ ನೌಕರ

    ಸಂಬಳದ ಸಮಸ್ಯೆ – ಕಿಡ್ನಿ ಮಾರಾಟಕ್ಕಿಟ್ಟ ಸಾರಿಗೆ ನೌಕರ

    ಕೊಪ್ಪಳ: ಸಂಬಳದ ಸಮಸ್ಯೆ ಹಿನ್ನಲೆಯಲ್ಲಿ ಕೊಪ್ಪಳದ ಸಾರಿಗೆ ನೌಕರರೊಬ್ಬರು ತನ್ನ ಕಿಡ್ನಿ ಮಾರಾಟಕ್ಕಿಟ್ಟಿದ್ದಾರೆ.

    ಕುಷ್ಟಗಿಯ ನಿವಾಸಿ ಹನುಮಂತ ಕಳಗೇರ್ ತನ್ನ ಕಿಡ್ನಿಯನ್ನು ಮಾರಾಟಕ್ಕಿಟ್ಟಿವರಾಗಿದ್ದಾರೆ. ಕಳೆದ 20 ವರ್ಷಗಳಿಂದ ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಬಳ ಸರಿಯಾಗಿ ಸಿಗುತ್ತಿಲ್ಲ, ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಕಿಡ್ನಿ ಮಾರಾಟಕ್ಕಿಟ್ಟಿದ್ದಾರೆ.

    ಗಂಗಾವತಿ ಡಿಪೋದಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಲಾಕ್ ಡೌನ್ ನಿಂದ ಸರಿಯಾಗಿ ಸಂಬಳ ಆಗಿಲ್ಲ. ಜೊತೆಗೆ ಕಳೆದ ಎರಡು ತಿಂಗಳಿಂದ ಅರ್ಧ ಸಂಬಳ ಆಗುತ್ತಿದ್ದು, ಇದರಿಂದಾಗಿ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಮನೆ ಬಾಡಿಗೆ ಕಟ್ಟಲಾಗುತ್ತಿಲ್ಲ. ರೇಷನ್ ತರಲು ಆಗುತ್ತಿಲ್ಲ ಕಾರಣ ನನ್ನ ಕಿಡ್ನಿಯನ್ನು ಮಾರಾಟಕ್ಕಿಟ್ಡಿದ್ದೇನೆ ಎಂದು ಹನುಮಂಹ ಕಳಗೇರ್ ಫೇಸಬುಕ್ ನಲ್ಲಿ ಬರೆದುಕೊಂಡಿದ್ದಾರೆ.

    ಹನುಮಂತ ಅವರಿಗೆ ಪ್ರತಿ ತಿಂಗಳು 16 ಸಾವಿರ ಸಂಬಳ ಬರುತ್ತಿತ್ತು, ಆದರೆ ಕಳೆದ ಎರಡು ತಿಂಗಳಿನಿಂದ 3 ಸಾವಿರ ಸಂಬಳ ಬರುತ್ತಿದ್ದು, ಆದರೆ ತಿಂಗಳಿಗೆ 3500 ಸಾವಿರ ಮನೆ ಬಾಡಿಗೆಯೇ ಇದ್ದು, ಮೂರು ಮಕ್ಕಳು, ತಾಯಿ, ಪತ್ನಿಯನ್ನು ಸಾಕಬೇಕಾಗಿದೆ. ಜೀವನ ನಡೆಸಲು ಕಷ್ಟವಾಗುತ್ತಿದ್ದು, ಈಗಾಗಲೇ ಎಲ್ಲಾ ಕಡೆ ಕೈಸಾಲ ತೆಗೆದು ಕೊಂಡಿರುವ ಹನುಮಂತ ಅವರಿಗೆ ಸಾಲ ಮರಳಿ ನೀಡಲು ಹಣ ಇಲ್ಲದಂತಾಗಿದ್ದು ಈ ನಿರ್ಧಾರಕ್ಕೆ ಬಂದಿದ್ದಾರೆ.

    ಸಾಮಾಜಿಕ ಜಾಲತಾಣದ ಮೂಲಕ ತನ್ನ ನೋವನ್ನು ಹನುಮಂತ ಅವರು ತೋಡಿಕೊಂಡಿದ್ದಾರೆ. ಕಡಿಮೆ ಸಂಬಳದಿಂದಾಗಿ ವಯಸ್ಸಾದ ತಾಯಿಗೆ ಆಸ್ಪತ್ರೆಗೆ ತೋರಿಸಲು ಸಾಧ್ಯವಾಗುತ್ತಿಲ್ಲ. ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ತೊಂದರೆ ಆಗುತ್ತಿದ್ದು, ಸರರ್ಕಾರ ಈಗಾಲಾದರೂ ಎಚ್ಚೆತ್ತುಕೊಂಡು ಸಾರಿಗೆ ನೌಕರರಿಗೆ ಪೂರ್ತಿ ಸಂಬಳ ನೀಡಬೇಕು ಎಂದು ಮನವಿ ಮಾಡಿದ್ದಾರೆ.