Tag: Stamp

  • RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

    RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

    ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) 100 ವರ್ಷ ತುಂಬಿದ ಹಿನ್ನೆಲೆ ಅ.1ರಂದು ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯುವ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

    ಕಾರ್ಯಕ್ರಮದಲ್ಲಿ ಮೋದಿ ಆರ್‌ಎಸ್‌ಎಸ್ ಕೊಡುಗೆಗಳನ್ನು ಎತ್ತಿ ತೋರಿಸುವ, ವಿಶೇಷವಾಗಿ ವಿನ್ಯಾಸಗೊಳಿಸಲಾದ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ದಸರಾ ನೋಡಲು ಹೋಗಿದ್ದ ಉದ್ಯಮಿ ಮನೆಯಲ್ಲಿ ಕಳ್ಳತನ – 12 ಲಕ್ಷ ಮೌಲ್ಯದ ಚಿನ್ನ, 29 ಲಕ್ಷ ಕ್ಯಾಶ್ ಕಳವು

    1925ರ ವಿಜಯದಶಮಿಯಂದು ಆರ್‌ಎಸ್‌ಎಸ್ ಸ್ಥಾಪನೆಗೊಂಡಿದ್ದು, 2025ರ ವಿಜಯದಶಮಿಗೆ 100 ವರ್ಷಗಳನ್ನು ಪೂರೈಸಲಿದೆ. ಇತ್ತೀಚಿಗೆ ನಡೆದ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಆರ್‌ಎಸ್‌ಎಸ್ ಸಾಧನೆಯನ್ನು ಹಾಡಿಹೊಗಳಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಕಮಿಷನ್ ದಂಧೆಯಲ್ಲಿ ತೊಡಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ: ಪ್ರಹ್ಲಾದ್ ಜೋಶಿ ಕಿಡಿ

    ತಮ್ಮ 126ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಆರ್‌ಎಸ್‌ಎಸ್ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ. ಈ ಬಾರಿಯ ವಿಜಯದಶಮಿ ಮತ್ತೊಂದು ಕಾರಣದಿಂದ ಬಹಳ ವಿಶೇಷವೆನಿಸುತ್ತದೆ. ಇದೇ ದಿನದಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪನೆಯ 100ನೇ ವರ್ಷವೂ ಆಗಿದೆ. ಒಂದು ಶತಮಾನದ ಈ ಪ್ರಯಾಣವು ಎಷ್ಟು ಅದ್ಭುತ, ಅಭೂತಪೂರ್ವವಾಗಿದೆ ಮತ್ತು ಅಷ್ಟೇ ಸ್ಫೂರ್ತಿದಾಯಕವಾಗಿದೆ ಎಂದಿದ್ದರು. ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ

    100 ವರ್ಷಗಳ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನೆಯಾದಾಗ, ದೇಶವು ಶತಮಾನಗಳ ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಸಲ್ಪಟ್ಟಿತ್ತು. ಶತಮಾನಗಳ ಈ ಗುಲಾಮಗಿರಿಯು ನಮ್ಮ ಸ್ವಾಭಿಮಾನ ಮತ್ತು ಆತ್ಮವಿಶ್ವಾಸಕ್ಕೆ ಆಳವಾದ ಗಾಯವುಂಟು ಮಾಡಿತ್ತು. ವಿಶ್ವದ ಅತ್ಯಂತ ಪ್ರಾಚೀನ ನಾಗರಿಕತೆಯ ಮುಂದೆ ಸ್ವಯಂ ಗುರುತು ಇಲ್ಲದಂತಹ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ದೇಶವಾಸಿಗಳು ಕೀಳರಿಮೆಯ ಬಲಿಪಶುಗಳಾಗುತ್ತಿದ್ದರು. ಆದ್ದರಿಂದಲೇ ದೇಶದ ಸ್ವಾತಂತ್ರ‍್ಯದೊಂದಿಗೆ ಸೈದ್ಧಾಂತಿಕ ಗುಲಾಮಗಿರಿಯಿಂದಲೂ ಮುಕ್ತವಾಗುವುದು ಅಗತ್ಯವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಪರಮಪೂಜ್ಯ ಡಾ. ಹೆಡ್ಗೆವಾರ್ ಅವರು ಈ ವಿಷಯ ಕುರಿತು ಚಿಂತಿಸಲಾರಂಭಿಸಿದರು ಮತ್ತು ಈ ಭಗೀರಥ ಕಾರ್ಯಕ್ಕಾಗಿ ಅವರು 1925ರಲ್ಲಿ ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ‘ರಾಷ್ಟ್ರೀಯ ಸ್ವಯಂಸೇವಕ ಸಂಘ’ ಸ್ಥಾಪಿಸಿದರು ಎಂದು ಹೇಳಿದ್ದರು. ಇದನ್ನೂ ಓದಿ: ವಿಶ್ವಕರ್ಮ ಮಂಡಳಿ ಮಾಡಿ ಸರ್ಕಾರ ಮರೆತಂತಿದೆ: ಶಂಕರಾತ್ಮಾನಂದ ಸರಸ್ವತಿ ಶ್ರೀ ಕಿಡಿ

    ಡಾಕ್ಟರ್ ಹೆಡ್ಗೆವಾರ್ ಅವರ ನಿಧನಾನಂತರ, ಪರಮಪೂಜ್ಯ ಗುರೂಜಿ ಅವರು ರಾಷ್ಟ್ರ ಸೇವೆಯ ಈ ಮಹಾಯಜ್ಞವನ್ನು ಮುನ್ನಡೆಸಿದರು. ಪರಮ ಪೂಜ್ಯ ಗುರೂಜಿಯವರು ‘ರಾಷ್ಟ್ರಾಯ ಸ್ವಾಹಾ, ರಾಷ್ಟ್ರಾಯ ಇದಂ ನ ಮಮ’ ಎನ್ನುತ್ತಿದ್ದರು. ಅಂದ್ರೆ, ಇದು ನನ್ನದಲ್ಲ, ಇದು ರಾಷ್ಟ್ರದ್ದು ಎಂದರ್ಥ. ಇದರಲ್ಲಿ ಸ್ವಾರ್ಥವನ್ನು ತೊರೆದು ರಾಷ್ಟ್ರಕ್ಕಾಗಿ ಸಮರ್ಪಣಾ ಭಾವದಿಂದ ಕೆಲಸ ಮಾಡುವಂತಹ ಪ್ರೇರಣೆ ಅಡಗಿದೆ. ಗುರೂಜಿ ಗೋಲ್ವಾಲ್ಕರ್ ಅವರ ಈ ವಾಕ್ಯವು ಲಕ್ಷಾಂತರ ಸ್ವಯಂ ಸೇವಕರಿಗೆ ತ್ಯಾಗ ಮತ್ತು ಸೇವೆಯ ಹಾದಿ ತೋರಿಸಿತು. ಏಕೆಂದ್ರೆ ತ್ಯಾಗ ಮತ್ತು ಸೇವಾ ಭಾವನೆ ಹಾಗೂ ಶಿಸ್ತಿನ ಬೋಧನೆಯ ಸಂಘದ ನಿಜವಾದ ಶಕ್ತಿಯಾಗಿದೆ. ಇಂದು ಆರ್‌ಎಸ್‌ಎಸ್ ನೂರು ವರ್ಷಗಳಿಂದ ಅವಿಶ್ರಾಂತವಾಗಿ, ಅವಿರತವಾಗಿ ರಾಷ್ಟ್ರದ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದೆ. ಆದ್ದರಿಂದಲೇ ದೇಶದಲ್ಲಿ ಯಾವುದೇ ನೈಸರ್ಗಿಕ ವಿಕೋಪ ಎಲ್ಲಿಯೇ ಎದುರಾಗಲಿ, ಆರ್‌ಎಸ್‌ಎಸ್‌ನ ಸ್ವಯಂಸೇವಕರು ಎಲ್ಲರಿಗಿಂತ ಮೊದಲು ಅಲ್ಲಿಗೆ ತಲುಪುತ್ತಾರೆ ಎಂದು ಶ್ಲಾಘಿಸಿದ್ದರು. ಇದನ್ನೂ ಓದಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

  • ವಿದೇಶದಿಂದ ಬಂದವರಿಗೆ ಸ್ಟಾಂಪ್, 15 ದಿನ ಕಡ್ಡಾಯ ಗೃಹಬಂಧನ: ಸುಧಾಕರ್

    ವಿದೇಶದಿಂದ ಬಂದವರಿಗೆ ಸ್ಟಾಂಪ್, 15 ದಿನ ಕಡ್ಡಾಯ ಗೃಹಬಂಧನ: ಸುಧಾಕರ್

    – ಜನರ ಬೆಂಬಲ ಸಿಕ್ಕರೆ ನಿಯಂತ್ರಣ ಆಗುತ್ತೆ
    – ಎಲ್ಲ ಜಿಲ್ಲೆಗಳಲ್ಲಿ ಲ್ಯಾಬ್ ತೆರೆಯುತ್ತೇವೆ

    ಬೆಂಗಳೂರು: ವಿದೇಶದಿಂದ ಬಂದವರ ಬಲಗೈಗೆ ಸ್ಟಾಂಪ್ ಹಾಕುತ್ತೇವೆ ಹಾಗೂ 15 ದಿನ ಕಡ್ಡಾಯವಾಗಿ ಪ್ರತ್ಯೇಕಗೊಳಿಸಲು ತೀರ್ಮಾನ ಮಾಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ.

    ವಿಧಾನಸಭೆಯಲ್ಲಿ ಮಾತನಡಿದ ಅವರು, ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದೆ. ವೈದ್ಯಕೀಯ ಶಿಕ್ಷಣ, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಿಎಂ ಸೂಚನೆ ಕೊಟ್ಟಿದ್ದರು. ಇವತ್ತು ಎರಡು ತಿಂಗಳನಿಂದ ವಿಮಾನ ನಿಲ್ದಾಣ, ಬಂದರುಗಳಲ್ಲಿ ತಪಾಸಣೆ ಮಾಡುತ್ತಿದ್ದೇವೆ. ಎ,ಬಿ,ಸಿ ಗ್ರೂಪ್‍ಗಳನ್ನು ಮಾಡಿ ಪ್ರತ್ಯೇಕಗೊಳಿಸಿ ತಪಾಸಣೆ ಮಾಡಿದ್ದೇವೆ ಎಂದರು.

    ಕೊರೊನಾ ತಡೆಗಟ್ಟಲು 200 ಕೋಟಿ ಹಣವನ್ನು ರಾಜ್ಯ ಸರ್ಕಾರ ತೆಗೆದು ಇಟ್ಟಿದೆ. ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕ ಹಣವನ್ನ ಇಟ್ಟಿದೆ. ವಿದೇಶಗಳಿಂದ ಬರುವವರನ್ನು 15 ದಿನ ಕಡ್ಡಾಯವಾಗಿ ಪ್ರತ್ಯೇಕಗೊಳಿಸಲಾಗುವುದು. ಖಾಸಗಿ ರೆಸಾರ್ಟ್ಸ್, ಹೋಟೆಲ್ಸ್, ಆಸ್ಪತ್ರೆಗಳಲ್ಲಿ 15 ದಿನ ಗೃಹ ಬಂಧನದಲ್ಲಿ ಇಡುತ್ತೇವೆ. ಮದುವೆ ಸಮಾರಂಭಗಳಲ್ಲಿ 150 ಜನರಿಗೆ ಮಾತ್ರ ಅಡುಗೆ ಮಾಡಬೇಕು. ವಿಧಾನಸೌಧ, ವಿಕಾಸಸೌಧಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಇದನ್ನು ಓದಿ: ಮಾರ್ಚ್ 31ರವರೆಗೆ ಬಂದ್ ವಿಸ್ತರಣೆ – 4 ಮಂದಿ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್

    ಅಮೆರಿಕ, ಇಟಲಿ, ಸ್ಪೇನ್ ದೇಶಗಳು ಎಚ್ಚರ ತಪ್ಪಿದ್ದವು. ಹಾಗಾಗಿ ಆ ದೇಶಗಳಲ್ಲಿ ಕೊರೊನಾ ಕೇಸ್‍ಗಳು ತುಂಬಾ ಇವೆ. ಆ ದೇಶಗಳಲ್ಲಿ ಫಸ್ಟ್ ಸ್ಟೇಜ್ ಬಂದ ಬಳಿಕ ರಜೆ ಘೋಷಣೆಯಾಗಿತ್ತು. ರಜೆ ಘೋಷಣೆಯಿಂದ ಸೋಂಕಿತ ಮಂದಿ ಮಾಲ್‍ಗಳಿಗೆಲ್ಲ ಓಡಾಡಿದರು. ನಂತರ ದಿಢೀರನೇ ಆ ದೇಶಗಳಲ್ಲಿ ಕೊರೊನಾ ಹಬ್ಬಿತ್ತು. ಆ ದೇಶಗಳು ಮಾಡಿದ ತಪ್ಪು ನಾವು ಮಾಡಿಲ್ಲ. ನಮ್ಮಲ್ಲಿ ಇನ್ನು ಎರಡು ಮೂರು ವಾರ ಕೊರೊನಾ ನಿಗ್ರಹಕ್ಕೆ ಮುಂದಾಗಬೇಕು. ಜನರ ಬೆಂಬಲ ಸಿಕ್ಕಿದರೆ ಕೊರೊನಾ ತಡೆಗಟ್ಟುವುದು ಯಶಸ್ವಿ ಆಗಲಿದೆ ಎಂದು ಸುಧಾಕರ್ ಹೇಳಿದರು.

    ನಾಲ್ವರು ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಹೊರದೇಶದಿಂದ ಬರುವ ಜನರಿಗೆ ಬಲಗೈಗೆ ಸ್ಟಾಂಪ್ ಹಾಕುತ್ತೇವೆ. 15 ದಿನ ಅವರು ಯಾರನ್ನೂ ಸಂಪರ್ಕ ಮಾಡಬಾರದು ಎಂಬ ಆದೇಶ ಮಾಡಿದ್ದೇವೆ. ಇದುವರೆಗೆ 1,17,306 ಪ್ರಯಾಣಿಕರನ್ನು ರಾಜ್ಯದಲ್ಲಿ ತಪಾಸಣೆ ಮಾಡಿದ್ದೇವೆ. ಬೆಂಗಳೂರಲ್ಲಿ 82,276 ಪ್ರಯಾಣಿಕರು, ಮಂಗಳೂರಲ್ಲಿ 29,477 ಪ್ರಯಾಣಿಕರನ್ನು ತಪಾಸಣೆ ಮಾಡಿದ್ದೇವೆ. ಪ್ರಪಂಚದಲ್ಲಿ ಒಟ್ಟು 88,881 ಪಾಸಿಟಿವ್ ಕೊರೊನಾ ಪ್ರಕರಣಗಳು ಇದ್ದವು. ಇದರಲ್ಲಿ 68,798 ಕೊರೊನಾ ಪೀಡಿತರು ಗುಣಮುಖರಾಗಿದ್ದಾರೆ. ಹಾಗಾಗಿ ಕೊರೊನಾ ಸೋಂಕು ಬಂದ ತಕ್ಷಣ ಸತ್ತು ಹೋಗುತ್ತಾರೆ ಎಂದು ಭಯ ಬೀಳುವುದು ಬೇಡ ಎಂದು ಸ್ಪಷ್ಟಪಡಿಸಿದರು.

    ದೇಶದಲ್ಲಿ 54 ಲ್ಯಾಬ್ ಇವೆ. ಕರ್ನಾಟಕದಲ್ಲಿ 5 ಲ್ಯಾಬ್, ಬೇರೆ ರಾಜ್ಯಗಳಿಗೆ ಹೋಲಿಸಿದಾಗ ಕರ್ನಾಟಕದಲ್ಲಿಯೇ ಹೆಚ್ಚು ಲ್ಯಾಬ್ ಇವೆ. ಪ್ರಾದೇಶಿಕ ವಿಭಾಗವಾರು ಲ್ಯಾಬ್‍ಗಳನ್ನು ಹೆಚ್ಚಳ ಮಾಡುತ್ತೇವೆ. ಲ್ಯಾಬ್‍ಗಳನ್ನು ಜಿಲ್ಲೆಗಳಿಗೂ ವಿಸ್ತರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಇವತ್ತು ತುರ್ತು ಸಂಪುಟ ಸಭೆ ಕರೆದು ಸಿಎಂ ಚರ್ಚೆ ಮಾಡಿ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ ಎಂದರು.

    ವೈದ್ಯರು, ವೈದ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿಗೆ ಮತ್ತು ಎನ್‍ಜಿಒಗಳಿಗೆ ಇನ್‍ಸೆಂಟಿವ್ ಕೊಡಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

  • ದೇಶ ನಡೆಸಲು ದುಡ್ಡಿಲ್ಲದಿದ್ದರೂ ಪಾಕ್‍ನಿಂದ ಉಗ್ರ ಬುರ್ಹಾನ್ ವಾನಿ ಸ್ಟ್ಯಾಂಪ್ ಬಿಡುಗಡೆ

    ದೇಶ ನಡೆಸಲು ದುಡ್ಡಿಲ್ಲದಿದ್ದರೂ ಪಾಕ್‍ನಿಂದ ಉಗ್ರ ಬುರ್ಹಾನ್ ವಾನಿ ಸ್ಟ್ಯಾಂಪ್ ಬಿಡುಗಡೆ

    ಇಸ್ಲಾಮಬಾದ್: ದೇಶ ನಡೆಸಲು ದುಡ್ಡಿಲ್ಲ, ದೇವರೇ ನಮಗೆ ಈ ಬಿಕ್ಕಟ್ಟು ನೀಡಿದ್ದಾನೆ ಎಂದು ಬಹಿರಂಗವಾಗಿ ಮಾಧ್ಯಮಗಳ ಎದುರು ಹೇಳಿಕೆ ನೀಡಿದ್ದ ಪಾಕ್ ಭಾರತೀಯ ಯೋಧರಿಂದ ಎನ್‍ಕೌಂಟರ್ ನಲ್ಲಿ ಹತ್ಯೆಯಾಗಿದ್ದ ಉಗ್ರ ಬುರ್ಹಾನ್ ವಾನಿಯನ್ನು ಸ್ವಾತಂತ್ರ್ಯ ಹೋರಾಟಗಾರನಾಗಿ ಬಿಂಬಿಸಿ ಅಂಚೆಚೀಟಿಯನ್ನು ಬಿಡುಗಡೆಗೊಳಿಸಿದೆ.

    ಈ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, `ಕಾಶ್ಮೀರದಲ್ಲಿ ಭಾರತೀಯ ಪಡೆಗಳ ದೌರ್ಜನ್ಯಕ್ಕೆ ಬಲಿಯಾದ ಬಲಿಪಶು’ ಎಂಬ ಅರ್ಥದಲ್ಲಿ ಪಾಕ್ ಸರ್ಕಾರ ಆತನಿಗೆ ಸ್ವಾತಂತ್ರ್ಯ ಹೋರಾಟಗಾರನ ಸ್ಥಾನ ನೀಡಲು ಮುಂದಾಗಿದೆ. ಇದಕ್ಕಾಗಿ ಬುರ್ಹಾನ್ ಹೆಸರಿನಲ್ಲಿ ಅಂಚೆಚೀಟಿ ಬಿಡುಗಡೆ ಮಾಡಿದೆ.

    ಬುರ್ಹಾನ್ ಅಂಚೆಚೀಟಿ ಆನ್‍ಲೈನ್‍ನಲ್ಲೂ ಮಾರಾಟ ಮಾಡಲು ಪಾಕ್ ಯೋಜನೆ ರೂಪಿಸಿದ್ದು, ಒಂದು ಚೀಟಿಗೆ 6.99 ಯುಎಸ್ ಡಾಲರ್ (ಸುಮಾರು 500 ರೂ.) ನಿಗದಿ ಪಡಿಸಿದೆ. ಆದರೆ ಪಾಕಿಸ್ತಾನದಲ್ಲಿ ಬುರ್ಹಾನ್ ಅಂಚೆಚೀಟಿ 8 ಪಾಕ್ ರೂಪಾಯಿಗೆ ಲಭಿಸಲಿದೆ ಎಂದು ಮಾಧ್ಯಮ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನು ಓದಿ :  ವಿಶ್ವಸಂಸ್ಥೆಯಲ್ಲಿ ಪಾಕ್ ಮಾನ ಹರಾಜು ಹಾಕಿದ ಭಾರತದ ಈನಂ ಗಂಭೀರ್ 

    ಕೇವಲ ಬುರ್ಹಾನ್ ವಾಲಿ ಮಾತ್ರವಲ್ಲದೇ ಕಾಶ್ಮೀರದಲ್ಲಿ ಭಾರತೀಯ ಯೋಧರಿಂದ ಎನ್‍ಕೌಂಟರ್ ಆದ 19 ಉಗ್ರರ ಸ್ಟ್ಯಾಂಪ್ ಬಿಡುಗಡೆ ಮಾಡಿದೆ. ಹಿಬ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಮುಖ್ಯಸ್ಥನಾಗಿದ್ದ ಬುರ್ಹಾನ್ ವಾನಿ ಜಮ್ಮು ಕಾಶ್ಮೀರ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಭಯೋತ್ಪಾದನ ಕೃತ್ಯ ನಡೆಸಲು ಸಂಚು ರೂಪಿಸಿದ್ದ. ಆದರೆ 2016ರ ಜುಲೈ 8ರಂದು ಕಾರ್ಯಾಚರಣೆ ನಡೆಸಿದ್ದ ಭಾರತದ ಯೋಧರು ಉಗ್ರ ಬುರ್ಹಾನ್ ವಾನಿಯನ್ನು ದಕ್ಷಿಣ ಕಾಶ್ಮೀರದಲ್ಲಿ ಕೊಂದು ಹಾಕಿದ್ದರು. ಬಳಿಕ ಈ ಘಟನೆ ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಎಡೆಮಾಡಿಕೊಟ್ಟಿತ್ತು. ಈ ಹಿಂಸಾಚಾರದಲ್ಲಿ 85 ಮಂದಿ ಸಾವನ್ನಪ್ಪಿದ್ದರು.

    ಪಾಕ್ ಸರ್ಕಾರ ಉಗ್ರ ಬುರ್ಹಾನ್‍ನ್ನು ಸ್ವಾತಂತ್ರ್ಯ ಹೋರಾಟಗಾರರ ರೀತಿ ಬಿಂಬಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2017 ರಲ್ಲಿ ಪಾಕ್ ಸೇನಾ ಮುಖ್ಯಸ್ಥರು ತಮ್ಮ ಭಾಷಣದಲ್ಲಿ ಬುರ್ಹಾನ್ ಹೆಸರು ಪ್ರಸ್ತಾಪಿಸಿ, ಕಾಶ್ಮೀರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಿರುವ ಇತರೇ ಯುವಕರಿಗೆ ಕಾಶ್ಮೀರ ಯುವರಿಗೆ ಸ್ಫೂರ್ತಿ ಆಗಲಿದ್ದಾರೆ ಎಂದು ಹೇಳಿದ್ದರು. ಇದನ್ನು ಓದಿ : ಬುರ್ಹಾನ್ ವಾನಿ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿದ ಯೋಧರು

    ಸದ್ಯ ಪಾಕ್ ಸರ್ಕಾರ ಉಗ್ರರನ್ನು ವಿರುದ್ಧ ಕಾರ್ಯಾಚರಣೆ ನಡೆಸಲು ಅಮೆರಿಕ ಹೆಚ್ಚಿನ ಒತ್ತಡ ಹಾಕಿದೆ. ಈ ನಡುವೆಯೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಶಾಂತಿ ಮಾತುಕತೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಇದನ್ನು ಓದಿ:  ದೇಶ ನಡೆಸಲು ದುಡ್ಡಿಲ್ಲ, ನಮ್ಮನ್ನ ಬದಲಿಸಲು ದೇವರೇ ಬಿಕ್ಕಟ್ಟು ಸೃಷ್ಟಿಸಿದ್ದಾನೆ-ಇಮ್ರಾನ್ ಖಾನ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv