Tag: state chief

  • ಕಗ್ಗಂಟಾಗಿದೆ ಜೆಡಿಎಸ್ ನೂತನ ಸಾರಥಿಯ ನೇಮಕ

    ಕಗ್ಗಂಟಾಗಿದೆ ಜೆಡಿಎಸ್ ನೂತನ ಸಾರಥಿಯ ನೇಮಕ

    ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ಅವರು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದು, ಇದೀಗ ಜೆಡಿಎಸ್‍ನ ಹೊಸ ಸಾರಥಿ ಆಯ್ಕೆ ಮಾಡುವಲ್ಲಿ ಪಕ್ಷ ನಿರತವಾಗಿದೆ.

    ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಅಪ್ಪ-ಮಗನ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ. ತಂದೆ ದೊಡ್ಡಗೌಡ್ರು ಒಬ್ಬರ ಪರ ಬ್ಯಾಟಿಂಗ್ ಮಾಡಿದರೆ ಸಿಎಂಗೆ ಮತ್ತೊಬ್ಬರ ಮೇಲೆ ಪ್ರೀತಿ. ಈ ಹಿನ್ನೆಲೆಯಲ್ಲಿ ಪಕ್ಷದ ಹೊಸ ಸಾರಥಿ ನೇಮಕ ಮಾಡಲು ವರಿಷ್ಠರಿಗೆ ಕಗ್ಗಂಟಾಗಿದೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ.

    ಪಕ್ಷದ ವರಿಷ್ಠ ದೇವೇಗೌಡ, ವಿಶ್ವನಾಥ್ ಸೇರಿದಂತೆ ದಳದ ಬಹುತೇಕ ನಾಯಕರಿಗೆ ಹಿಂದುಳಿದ ವರ್ಗದ ನಾಯಕ ಮಧು ಬಂಗಾರಪ್ಪ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕೆಂಬ ಹಂಬಲವಿದೆ. ಆದರೆ ಸಚಿವ ಸ್ಥಾನ ವಂಚಿತ ಅಲ್ಪಸಂಖ್ಯಾತ ನಾಯಕ ಫಾರೂಖ್ ಅವರನ್ನು ಮಾಡಬೇಕು ಎಂಬುವುದು ಸಿಎಂ ವಾದವಾಗಿದೆ. ಹೀಗಾಗಿ ದೇವೇಗೌಡರು ಯಾರನ್ನು ರಾಜ್ಯಾಧ್ಯಕ್ಷ ಮಾಡೋದು ಅನ್ನೋ ಚಿಂತೆಯಲ್ಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಇತ್ತೀಚೆಗೆ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ದೇವೇಗೌಡರು ಮಧು ಬಂಗಾರಪ್ಪ ಅವರ ಅಭಿಪ್ರಾಯ ಕೇಳಿದ್ದರು. ಈ ವೇಳೆ ಮಧು ನಿಮ್ಮ ಮಾತಿನಂತೆ ನಡೆಯುತ್ತೇನೆ ಎಂದಿದ್ದರು. ವಿಶ್ವನಾಥ್ ಕೂಡ ಬಹಿರಂಗವಾಗಿಯೇ ಮಧು ಬಂಗಾರಪ್ಪ ಪರ ಬ್ಯಾಟಿಂಗ್ ಮಾಡಿದ್ದರು. ಆದರೆ ಸಿಎಂಗೆ ಫಾರೂಖ್ ಮೇಲಿನ ಪ್ರೀತಿಗೆ ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಗೊಂದಲವುಂಟಾಗಿದೆ. ಒಟ್ಟಿನಲ್ಲಿ ದೇವೇಗೌಡರು ಪಕ್ಷ ಸಂಘಟನೆ, ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ರಾಜ್ಯಾಧ್ಯಕ್ಷರನ್ನ ನೇಮಕ ಮಾಡಲಿದ್ದಾರೆ ಎನ್ನಲಾಗಿದೆ.

    ಇತ್ತ ಇಬ್ಬರ ಜಗದಲ್ಲಿ ಮೂರನೆಯವರಿಗೆ ಲಾಭ ಎಂಬಂತೆ ದಲಿತ ಶಾಸಕ ಎಚ್.ಕೆ ಕುಮಾರಸ್ವಾಮಿ ಹೆಸರು ರೇಸ್‍ನಲ್ಲಿದೆ. ಒಟ್ಟಿನಲ್ಲಿ ಜೆಡಿಎಸ್‍ಗೆ ನೂತನ ಸಾರಥಿ ಯಾರಾಗ್ತಾರೆ ಅನ್ನೋದು ಸದ್ಯದ ಕುತೂಹಲವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯಾಧ್ಯಕ್ಷ ನೇಮಕ ಬಹುತೇಕ ಖಚಿತವಾಗಲಿದೆ.

  • ಯಡಿಯೂರಪ್ಪರಿಗೆ ಅಮಿತ್ ಶಾ ಖಡಕ್ ಸೂಚನೆ

    ಯಡಿಯೂರಪ್ಪರಿಗೆ ಅಮಿತ್ ಶಾ ಖಡಕ್ ಸೂಚನೆ

    ನವದೆಹಲಿ: ಎಚ್ ಡಿ ಕುಮಾರಸ್ವಾಮಿ ಸರ್ಕಾರ’ ಬೀಳಿಸಲು ಬಿಜೆಪಿಯಿಂದ ಮತ್ತೊಂದು ಪ್ಲಾನ್ ಮಾಡ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

    ಬಿಎಸ್‍ವೈ ಅವರಿಗೆ ದೂರವಾಣಿ ಕರೆಮಾಡಿರುವ ಶಾ, ಆಪರೇಷನ್ ಕಮಲದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಕುಮಾರಸ್ವಾಮಿ ಸರ್ಕಾರ ಬೀಳಿಸಲು ಶಾಸಕರನ್ನು ಸೆಳೆಯೋ ಬಗ್ಗೆ ನಾಲ್ಕೂವರೆ ನಿಮಿಷ ಚರ್ಚೆ ಮಾಡಿದ್ದಾರೆ. `ಆಪರೇಷನ್ ಕಮಲ’ ಬಗ್ಗೆ ಯಾವ ಬಿಜೆಪಿ ಮುಖಂಡರೂ ಬಹಿರಂಗ ಹೇಳಿಕೆ ಕೊಡಬಾರದು. ಏನೇ ತಂತ್ರಗಾರಿಕೆ ಇದ್ದರೂ ಎಲ್ಲವೂ ಒಳಗೊಳಗೇ ನಡೆಯಬೇಕು ಅಂತ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಾಲ್ಕು ಹಂತಗಳಲ್ಲಿ ನಡೆಯಲಿದೆ ಆಪರೇಷನ್ ಕಮಲ..?

    `ಆಪರೇಷನ್ ಕಮಲ’ವನ್ನು ನಾನು, ರಾಮುಲು ಇಬ್ಬರೂ ಸೇರಿ ಆಪರೇಟ್ ಮಾಡುತ್ತಿದ್ದೇವೆ. ಆದ್ರೆ ಆಪರೇಷನ್ ಕಮಲ ಮಾಡ್ತಿಲ್ಲ ಅಂತ ಬಹಿರಂಗವಾಗಿ ಬಿಂಬಿಸಿಕೊಳ್ತಿದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶ ಪ್ರವಾಸದಿಂದ ವಾಪಸ್ ಬರಲಿ. ಪ್ರವಾಸದಿಂದ ಸಿದ್ದರಾಮಯ್ಯ ವಾಪಸ್ ಆದ ಬಳಿಕ ಸೋಮವಾರದಷ್ಟೊತ್ತಿಗೆ ಎಲ್ಲವೂ ಸ್ಪಷ್ಟ ಆಗುತ್ತದೆ. `ಆಪರೇಷನ್ ಕಮಲ’ದ ಪ್ರತಿ ಮಾಹಿತಿಯನ್ನು ನಾವು ನಿಮಗೆ ಕೊಡ್ತಾ ಇರುತ್ತೇವೆ ಅಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶಾಗೆ ಮಾಜಿ ಸಿಎಂ ಯಡಿಯೂರಪ್ಪ ಉತ್ತರಿಸಿದ್ದಾರೆ ಅಂತ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಇದನ್ನು ಓದಿ: ಆಪರೇಷನ್ ಕಮಲಕ್ಕೆ ಗಣಿ ಧನಿ ರೆಡ್ಡಿಯಿಂದ 300 ಕೋಟಿ ಬಂಡವಾಳ-ಹೈಕಮಾಂಡ್ ಮುಂದಿಟ್ರು ಒಂದು ಷರತ್ತು!!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್ ಹೀನಾಯ ಸೋಲು ಕಂಡ್ರೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಯತ್ನ- ಬಿಎಸ್‍ವೈ

    ಕಾಂಗ್ರೆಸ್ ಹೀನಾಯ ಸೋಲು ಕಂಡ್ರೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಯತ್ನ- ಬಿಎಸ್‍ವೈ

    ಬೆಂಗಳೂರು: ತಮ್ಮ ಸ್ವಂತ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯನವರು ದಯನೀಯ ಸೋಲನ್ನು ಅನುಭವಿಸಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂದಾಳತ್ವದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕದ ಕಡೆಗೆ ಜನ ಓಗೊಟ್ಟಿದ್ದಾರೆ. ರಾಜ್ಯದ ಮತದಾರ ಬದಲಾವಣೆಗೆ ತನ್ನ ಜನಾದೇಶವನ್ನು ನೀಡಿದ್ದಾರೆ ಅಂತ ಹೇಳಿದ್ರು.

    ಕಾಂಗ್ರೆಸ್ ಕುತಂತ್ರಗಳನ್ನು ಮಾಡುತ್ತಿದೆ. ಇವುಗಳನ್ನು ತೀವ್ರವಾಗಿ ನಾವು ಖಂಡಿಸುತ್ತೇವೆ. ರಾಷ್ಟ್ರೀಯ ನಾಯಕರುಗಳ ಜೊತೆ ಸಮಾಲೋಚನೆಯನ್ನು ಮಾಡಿ ನಮ್ಮ ಮುಂದಿನ ನಿಲುವು ಏನಿರಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇವೆ. ಹಗಲು-ರಾತ್ರಿ ಎನ್ನದೇ ದುಡಿದ ಲಕ್ಷಾಂತರ ಜನ ನಮ್ಮ ಕಾರ್ಯಕರ್ತ ಹಾಗೂ ರಾಜ್ಯದ ಮತದಾರರಿಗೆ ಮತ್ತೊಮ್ಮೆ ಅಭಿನಂದನೆ ಸಲ್ಲಿಸಿದ್ರು.

    ಕಾಂಗ್ರೆಸ್ ವಿರೋಧ ಅಲೆಯಿಂದಾಗಿ ಜೆಡಿಎಸ್ ಗಣನೀಯ ಪ್ರಮಾಣದಲ್ಲಿ ತನ್ನ ಸ್ಥಾನಗಳನ್ನು ಗಳಿಸಿದೆ. ಎಲ್ಲಕ್ಕೂ ಮಿಗಿಲಾಗಿ ಕರ್ನಾಟಕ ರಾಜ್ಯದ ಆರೂವರೆ ಕೋಟಿ ಜನ ಬಿಜೆಪಿಗೆ ಕೊಟ್ಟಿರುವಂತಹ ಬೆಂಬಲಕ್ಕಾಗಿ ತಲೆಬಾಗಿ ವಂದಿಸುತ್ತೇನೆ ಅಂದ್ರು.

    ಕಾಂಗ್ರೆಸ್ ದಯನೀಯ ಸೋಲನ್ನುಭವಿಸದ ಮೇಲೆಯೂ, ತಿಸ್ಕಾರಗೊಂಡ ಬಳಿಕವೂ ಹಿಂಬಾಗಿಲಿನಿಂದ ಅಧಿಕಾರ ಹಿಡಿಯೋದನ್ನು ಪ್ರಯತ್ನ ಮಾಡಿರುವುದನ್ನು ಬಿಎಸ್‍ವೈ ಮತ್ತೊಮ್ಮೆ ಖಂಡಿಸಿದ್ರು.