Tag: State Chief Secretary

  • ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ಬಿಸಿ ಮುಟ್ಟಿಸಿದ ರೋಹಿಣಿ ಸಿಂಧೂರಿ

    ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ಬಿಸಿ ಮುಟ್ಟಿಸಿದ ರೋಹಿಣಿ ಸಿಂಧೂರಿ

    ಹಾಸನ: ಭ್ರಷ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಬಿಗಿ ಕ್ರಮ ಮುಂದುವರಿದಿದ್ದು, ಅಕ್ರಮ ಸಾಗುವಳಿ ಚೀಟಿ ಮಂಜೂರಾತಿಗೆ ಸಹಕರಿಸಿದ ಆರೋಪ ಹೊತ್ತಿರುವ ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದಾರೆ.

    ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ವಿರುದ್ಧ ರಾಜ್ಯ ಮುಖ್ಯಕಾರ್ಯದರ್ಶಿಗೆ ರೋಹಿಣಿ ಸಿಂಧೂರಿ ಪತ್ರ ಬರೆದಿದ್ದಾರೆ. ಪ್ರಸನ್ನಮೂರ್ತಿ ಹಾಲಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದರು. ಜುಲೈ 4 ರಂದೇ ಪ್ರಸನ್ನಮೂರ್ತಿ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದರು.

    ಮಾಜಿ ಸಚಿವ ಬಗರ್ ಹುಕುಂ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವಾಗ, ಸಾಗುವಳಿ ಚೀಟಿ ಫಲಾನುಭವಿಗಳ ಆಯ್ಕೆ ವಿಚಾರವಾಗಿ ಸಭೆ ನಡೆಸದೇ ಸಾವಿರಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡುವ ಕಡತಕ್ಕೆ ಸಹಿ ಮಾಡಿದ್ದರು. ಈ ವೇಳೆ ಪ್ರಸನ್ನಮೂರ್ತಿ ಕೂಡ ಸಹಾಯ ಮಾಡಿದ್ದರು. ಸಚಿವರಿಗೆ ತಹಶೀಲ್ದಾರ್ ಪ್ರಸನ್ನಮೂರ್ತಿ ಸಹಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಸಿಂಧೂರಿ ಅವರು ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

    ಮಾಜಿ ಉಸ್ತುವಾರಿ ಸಚಿವ ಎ.ಮಂಜುರಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿ ಬಂದಿತ್ತು. ಅಧಿಕಾರಿ ವಿರುದ್ಧ ಆರೋಪ ಸಾಬೀತಾಗಿರೋದು ಇದೀಗ ಮಾಜಿ ಸಚಿವರಿಗೂ ಸಂಕಷ್ಟ ತಂದೊಡ್ಡುವ ಆತಂಕ ಶುರುವಾಗಿ. ಸಚಿವ ಎ. ಮಂಜು ಮೇಲೂ ಕಾನೂನು ಕ್ರಮ ಸಾಧ್ಯತೆ ಇದೆ.

    ವಾರದ ಹಿಂದೆಯಷ್ಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೌಕರನನ್ನ ಅಮಾನತು ಮಾಡಿ ಓರ್ವ ಅಧಿಕಾರಿ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದರು. ಇದೀಗ ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ರೋಹಿಣಿ ಬಿಸಿ ಮುಟ್ಟಿಸಿದ್ದಾರೆ.

  • ರಾಜಭವನದ ಅಧಿಕಾರಿಗಳ ವಿರುದ್ಧ ಖಾರವಾಗಿ ಪತ್ರ ಬರೆದು ಪ್ರತಿಭಟಿಸಿದ ಸ್ಪೀಕರ್

    ರಾಜಭವನದ ಅಧಿಕಾರಿಗಳ ವಿರುದ್ಧ ಖಾರವಾಗಿ ಪತ್ರ ಬರೆದು ಪ್ರತಿಭಟಿಸಿದ ಸ್ಪೀಕರ್

    ಬೆಂಗಳೂರು: ರಾಜಭವನದ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಸರ್ಕಾರ ಮುಖ್ಯ ಕಾರ್ಯದರ್ಶಿ ಅವರಿಗೆ ಖಾರವಾಗಿ ಪತ್ರ ಬರೆದಿದ್ದಾರೆ.

    ಈ ಕುರಿತು ಪತ್ರದಲ್ಲಿ ಅಸಮಾಧಾನ ಹೊರ ಹಾಕಿರುವ ಸ್ಪೀಕರ್, ರಾಜ್ಯ ಮುಖ್ಯ ಕಾರ್ಯದರ್ಶಿಗಳಾದ ನಿಮ್ಮ ಆಹ್ವಾನದ ಮೇಲೆ ಸಚಿವ ಸಂಪುಟ ಸಚಿವರ ಪ್ರಮಾಣ ವಚನ ಹಾಗೂ ಪ್ರತಿಜ್ಞಾ ವಿಧಿ ಸಮಾರಂಭಕ್ಕೆ ಆಗಮಿಸಿದ್ದೆ. ಆದರೆ ಈ ವೇಳೆ ರಾಜಭವನದ ಮುಂದೆ ಅರ್ಧ ಗಂಟೆ ಕಾದಿದ್ದು, ಅಸಹಾಯಕನಾಗಿ ಹಿಂದಿರುತ್ತೇನೆ, ಈ ಪರಿಸ್ಥಿತಿಗೆ ಯಾರು ಕಾರಣ ಎಂಬುವುದು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

    ಅಧಿಕಾರಿಗಳ ವಿರುದ್ಧ ಆಕ್ರೋಶ: ಮಾನ್ಯ ಮುಖ್ಯ ಮಂತ್ರಿಗಳು, ಉಪ ಮುಖ್ಯಮಂತಿಗಳು, ವಿಧಾನಸಭಾ ಪರಿಷತ್ ಸಭಾಪತಿಗಳ ಹೊರತಾಗಿ ಮತ್ತೊಂದು ಸಾಂವಿಧಾನಿಕ ಸ್ಥಾನ ವಿಧಾನಸಭಾಧ್ಯಕ್ಷರದ್ದು ಮಾತ್ರ. ಮುಖ್ಯ ಮಂತ್ರಿಗಳು ಹಾಗೂ ಸಭಾಪತಿಗಳಿಗೆ ಒಂದು ಗೌರವಯುತ ವ್ಯವಸ್ಥೆ ಮಾಡುವುದು ಜವಾಬ್ದಾರಿಯಾಗಿರುತ್ತದೆ. ನಿಮ್ಮ ಅಧಿಕಾರಿಗಳ ದುರಹಂಕಾರ, ಅಜ್ಞಾನ ಹಾಗೂ ರಾಜಭವನದ ಒಳಗಿರತಕ್ಕಂತಹ ಅಧಿಕಾರಿಗಳ ದುರಂಹಾರ ಇದಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ರಾಜಭವನದ ಒಳಗೂ ಹಾಗೂ ಹೊರಗೂ ತುಂಬಿದ್ದಂತಹ ವಾಹನಗಳು ಯಾರದ್ದು ಎಂದು ಪ್ರಶ್ನಿಸಿರುವ ರಮೇಶ್ ಕುಮಾರ್, ಯಾರು ಅವರಿಗೆ ಅನುಮತಿ ನೀಡಿದರು ಹಾಗೂ ಸಾರ್ವಜನಿಕ ಜೀವನದಲ್ಲಿ ಇವರ ಸ್ಥಾನಮಾನ ಏನೆಂದು ತಿಳಿದುಕೊಳ್ಳಲು ಕುತೂಹಲನಾಗಿದ್ದೇನೆ. ಈ ಅಪರಾಧಕ್ಕೆ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.