Tag: State Government

  • ನಾವು ಎಲ್ಲದ್ದಕ್ಕೂ ದಾಖಲೆ ಕೊಡುತ್ತೇವೆ – ಸಿದ್ದುಗೆ ಹೆಬ್ಬಾರ್ ತೀರುಗೇಟು

    ನಾವು ಎಲ್ಲದ್ದಕ್ಕೂ ದಾಖಲೆ ಕೊಡುತ್ತೇವೆ – ಸಿದ್ದುಗೆ ಹೆಬ್ಬಾರ್ ತೀರುಗೇಟು

    – ಬೆಂಗ್ಳೂರಿನಲ್ಲಿ ಭಯಪಡುವ ವಾತಾವರಣವಿಲ್ಲ

    ಹಾಸನ: ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಾರೆ. ನಾವು ಎಲ್ಲದ್ದಕ್ಕೂ ದಾಖಲೆ ಕೊಡುತ್ತೇವೆ ಎಂದು ಸಚಿವ ಶಿವರಾಮ ಹೆಬ್ಬಾರ್ ತಿರುಗೇಟು ನೀಡಿದ್ದಾರೆ.

    ಹಾಸನದಲ್ಲಿ ಮಾತನಾಡಿದ ಅವರು ಮಾಧ್ಯಮದ ವಿರುದ್ಧವೂ ವ್ಯಂಗ್ಯವಾಡಿದ್ದು, ಟಿವಿ ನೋಡುವುದನ್ನು ಪಾಲಕರು ಬಂದ್ ಮಾಡಿದರಿಂದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿಯಿತು. ಇಲ್ಲವಾದರೆ ಕಷ್ಟವಾಗುತ್ತಿತ್ತು ಎಂದು ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಏನೋ ಆಗಿಬಿಡುತ್ತೆ ಎಂದು ದೂರದರ್ಶನದಲ್ಲಿ ತೋರಿಸುತ್ತಾರೆ. ಅದನ್ನು ನೋಡಿದ ನಿಮಗೆಲ್ಲ ಬೆಂಗಳೂರಿನಲ್ಲಿದ್ದವರ ನಿಮ್ಮ ಸಂಬಂಧಿಕರ ಬಗ್ಗೆ ಭಯ ಆಗುತ್ತೆ. ಅಂತಹ ಯಾವುದೇ ಭಯಪಡುವ ವಾತಾವರಣ ಬೆಂಗಳೂರಿನಲ್ಲಿ ಇಲ್ಲ. ಬೆಂಗಳೂರಿನಲ್ಲಿ ವ್ಯವಸ್ಥಿತವಾದ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಬರುತ್ತೆ ಎಂಬುದು ಗೊತ್ತಿಲ್ಲದ ಕಾರಣ ಸಿದ್ಧತೆ ಮಾಡಿಕೊಳ್ಳಲು ವಿಳಂಬವಾಗಿತ್ತು. ಈಗ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

    ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಕೊರೊನಾಗೆ ಕಡಿವಾಣ ಹಾಕುವ ಪ್ರಯತ್ನ ಆಗಿದೆ. ಜೊತೆಗೆ ಕೋವಿಡ್-19 ಜೊತೆಗೆ ನಾವು ಬದುಕುವುದನ್ನು ಅಭ್ಯಾಸ ಮಾಡಿಕೊಳ್ಳಬೇಕಿದೆ ಎಂದು ಸಚಿವ ಹೆಬ್ಬಾರ್ ತಿಳಿಸಿದರು.

  • ಸಿದ್ದರಾಮಯ್ಯ ಎಲ್ಲೂ ಹೋಗಿಲ್ಲ, ಮನೆಯಲ್ಲಿ ಕುಳಿತಿದ್ದಾರೆ: ಬೈರತಿ ಬಸವರಾಜು

    ಸಿದ್ದರಾಮಯ್ಯ ಎಲ್ಲೂ ಹೋಗಿಲ್ಲ, ಮನೆಯಲ್ಲಿ ಕುಳಿತಿದ್ದಾರೆ: ಬೈರತಿ ಬಸವರಾಜು

    ಹಾವೇರಿ: ಮತ್ತೆ ಲಾಕ್‍ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲೆಲ್ಲಿ ಕೊರೊನಾ ಪ್ರಕರಣಗಳು ಜಾಸ್ತಿ ಆಗಿವೆ ಅಲ್ಲಿ ಮಾತ್ರ ಸೀಲ್‍ಡೌನ್ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದ್ದಾರೆ.

    ಹಾವೇರಿಯ ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗಿಯಾಗಿ ನಂತರ ಮಾತನಾಡಿದ ಸಚಿವರು, ಕೋವಿಡ್-19 ವಿಚಾರದಲ್ಲಿ ಅವ್ಯವಹಾರ ಆಗಿದೆ ಎಂಬುವುದು ಮಾಜಿ ಸಿಎಂ ಸಿದ್ದರಾಮಯ್ಯನವರ ಆರೋಪ ಆಧಾರ ರಹಿತವಾಗಿವೆ. ಎಲ್ಲೆಲ್ಲಿ ಏನಾಗಿದೆ ಎಂಬುದರ ದಾಖಲೆ ಇದ್ದರೆ ಕೊಡಲಿ. ಆ ಬಳಿಕ ಟೀಕೆ ಮಾಡಲಿ ಎಂದರು.

    ಸಿದ್ದರಾಮಯ್ಯ ದಾಖಲೆ ನೀಡಿದರೆ ಅದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಅಲ್ಲದೆ ಕೋವಿಡ್-19 ನಿಯಂತ್ರಣಕ್ಕೆ ತರುವ ವಿಚಾರದಲ್ಲಿ ನಮ್ಮ ಸರ್ಕಾರ ಹಿಂದೆ ಬಿದ್ದಿಲ್ಲ. ಇಡೀ ದೇಶದಲ್ಲಿ ಕರ್ನಾಟಕ ಸರ್ಕಾರಕ್ಕೆ ಕೊರೊನಾ ವಿಚಾರದಲ್ಲಿ ಮೆಚ್ಚುಗೆ ಸಿಕ್ಕಿದೆ. ಕೊರೊನಾ ಸಮಯದಲ್ಲಿ ವಿರೋಧ ಪಕ್ಷದವರು ಕೆಲಸ ಮಾಡಬೇಕಿತ್ತು. ಆದರೆ ಸಿದ್ದರಾಮಯ್ಯ ಎಲ್ಲೂ ಹೋಗಿಲ್ಲ, ಮನೆಯಲ್ಲಿ ಕುಳಿತಿದ್ದಾರೆ. ಹೀಗಾಗಿ ಕೇವಲ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದು ವಿರುದ್ಧ ಬೈರತಿ ವಾಗ್ದಾಳಿ ಮಾಡಿದರು.

  • 290 ಕೋಟಿಯನ್ನು ಯಾವುದಕ್ಕೆ ಖರ್ಚು ಮಾಡಿದ್ದೀರಾ?- ಬಿಎಸ್‍ವೈಗೆ ಸಿದ್ದು ಪ್ರಶ್ನೆ

    290 ಕೋಟಿಯನ್ನು ಯಾವುದಕ್ಕೆ ಖರ್ಚು ಮಾಡಿದ್ದೀರಾ?- ಬಿಎಸ್‍ವೈಗೆ ಸಿದ್ದು ಪ್ರಶ್ನೆ

    – ಹಳೆ ಶಿಷ್ಯನ ಪರ ಮಾಜಿ ಸಿಎಂ ಬ್ಯಾಟಿಂಗ್

    ಬೆಂಗಳೂರು: ಸಿಎಂ ಫಂಡ್‍ಗೆ ಬಂದ 290 ಕೋಟಿಯಲ್ಲಿ ಒಂದು ರೂಪಾಯಿಯನ್ನಾದರೂ ಖರ್ಚು ಮಾಡಿದ್ದೀರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪನವರಿಗೆ ಪ್ರಶ್ನೆ ಮಾಡಿದ್ದಾರೆ.

    ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಾಕ್‍ಡೌನ್‍ಗಿಂತ ಮುಂಚಿತವಾಗಿ ನಮ್ಮ ದೇಶದಲ್ಲಿ ಕಡಿಮೆ ಸೋಂಕಿತ್ತು. ಕಡಿಮೆ ಸೋಂಕು ಇದ್ದಾಗ ನಮಗೆ ಸಿದ್ಧತೆ ಮಾಡಿಕೊಳ್ಳಲು ದೇಶದಲ್ಲಿ ಮತ್ತು ರಾಜ್ಯದಲ್ಲಿ ಸಮಯ ಇತ್ತು. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ, ತಪ್ಪು ನಿರ್ಧಾರಗಳಿಂದ ಸೋಂಕು ಹೆಚ್ಚಾಗಿದೆ. ಜಗತ್ತಿನಲ್ಲಿ ನಾವು ನಾಲ್ಕನೇ ಸ್ಥಾನದಲ್ಲಿ ಇದ್ದೇವೆ ಎಂದು ವಾಗ್ದಾಳಿ ಮಾಡಿದರು.

    ಇದೇ ವೇಳೆ ತನ್ನ ಹಳೇ ಶಿಷ್ಯನ ಪರವಾಗಿ ಬ್ಯಾಟಿಂಗ್ ಮಾಡಿದ ಸಿದ್ದು, ರಾಜ್ಯ ಸರ್ಕಾರದಲ್ಲಿ ಸಚಿವರುಗಳ ನಡುವೆಯೇ ಸಮನ್ವಯತೆ ಇಲ್ಲ. ಶ್ರೀರಾಮುಲು ಮತ್ತು ಸುಧಾಕರ್ ಇಬ್ಬರಿಗೂ ಸೋಂಕು ನಿರ್ವಹಹಣೆಯ ಜವಾಬ್ದಾರಿ ಕೊಟ್ಟರು. ಈಗ ಸುಧಾಕರ್ ಬಿಟ್ಟು ಅಶೋಕ್‍ಗೆ ಕೊಟ್ಟಿದ್ದಾರಂತೆ. ಸುಧಾಕರ್ ನಿಂದ ಕಿತ್ತು ಅಶೋಕ್‍ಗೆ ಏಕೆ ಕೊಟ್ಟರು? ಬೆಸಿಕಲ್ ಸುಧಾಕರ್ ಡಾಕ್ಟರ್, ಪ್ರಾಕ್ಟೀಸ್ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಮೆಡಿಕಲ್ ಬೆಸಿಕ್ ಗೊತ್ತಿರುತ್ತೆ ಎಂದು ಸುಧಾಕರ್ ಪರವಾಗಿ ಮಾತನಾಡಿದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೋಂಕನ್ನು ತಡೆಯಲು ಸರಿಯಾದ ರೀತಿ ಸಿದ್ಧತೆ ಮಾಡಿಕೊಂಡಿಲ್ಲ. ನಮ್ಮಲ್ಲಿ ಸಾವಿನ ಸಂಖ್ಯೆ ಕಡಿಮೆ ಅಂತಾರೆ, ನಮ್ಮ ದೇಶದ ಪ್ರಾಕೃತಿಕ ಗುಣ ಲಕ್ಷಣಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿದೆ. ಆ ಕಾರಣದಿಂದ ಸಾವಿನ ಸಂಖ್ಯೆ ನಮ್ಮಲ್ಲಿ ಕಡಿಮೆ ಇದೆ. ಬೇರೆ ದೇಶಗಳಿಂತ ಗರಿಷ್ಠ ಶೇ.3 ಮಾತ್ರ ಸಾವಿನ ಸಂಖ್ಯೆ ಇದೆ. ಕರ್ನಾಟಕದಲ್ಲೂ ಶೇಕಡಾ ಶೇ.2ರಿಂದ ಶೇ.3ರಷ್ಟು ಸಾವಿನ ಸಂಖ್ಯೆ ಇದೆ ಎಂದು ಸಿದ್ದು ಮಾಹಿತಿ ನೀಡಿದರು.

    ಶವಸಂಸ್ಕಾರ ಮಾಡಲು ಹೆದರುತ್ತಿದ್ದಾರೆ. ಶವ ಸುಟ್ಟ ಬಳಿಕ ಬೂದಿಯನ್ನ ತೆಗೆದುಕೊಳ್ಳುವುದಕ್ಕೆ ಕುಟುಂಬದವರು ಹೆದರುತ್ತಿದ್ದಾರೆ. ಅಗತ್ಯ ಕ್ರಮ ತೆಗೆದುಕೊಂಡು ಶವ ಮುಟ್ಟಿದರೆ ಏನೂ ಆಗಲ್ಲ. ಆರೋಗ್ಯ ಸಚಿವರ ಜಿಲ್ಲೆ ಬಳ್ಳಾರಿಯಲ್ಲಿ ನಡೆದ ಘಟನೆ ಅಮಾನುಷವಾಗಿದೆ. ಸೋಂಕಿತರ ಮೃತದೇಹವನ್ನು ತಿಪ್ಪೆಗೆ ಎಸೆದಾಗೇ ಎಸೆದಿದ್ದಾರೆ. ಹೀಗೇ ಮಾಡಿದರವನ್ನು ಸಸ್ಪೆಂಡ್ ಮಾಡಿದ್ದೇವೆ ಅನ್ನೋದು ಪರಿಹಾರನಾ? ಇಷ್ಟು ಸಾವಿನ ನಂತರವೂ ಶವ ಸಂಸ್ಕಾರ ಹೇಗೆ ಮಾಡುವುದು ಎಂದು ತಿಳಿದುಕೊಳ್ಳಬಾರದ ಎಂದು ಸಿದ್ದು ಪ್ರಶ್ನೆ ಮಾಡಿದರು.

    ಯಡಿಯೂರಪ್ಪ ಅಸಹಾಯಕರಾಗಿದ್ದಾರೆ. ಮಂತ್ರಿಗಳಲ್ಲಿ ಸಮನ್ವಯತೆ ಇಲ್ಲ. ಇವತ್ತಿನ ತನಕ ಯಾರೊಬ್ಬರಿಗೂ ಪರಿಹಾರ ತಲುಪಿಲ್ಲ. ಕ್ಷೌರಿಕರು, ಆಟೋ ಡ್ರೈವರ್ ಗಳಿಗೆ ಪರಿಹಾರ ತಲುಪಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ. ಇದರಲ್ಲಿ ಎಷ್ಟು ಬೆಡ್? ವೆಂಟಿಲೇಟರ್ ಎಷ್ಟು? ಎಷ್ಟರ ಮಟ್ಟಿಗೆ ಚಿಕಿತ್ಸೆಯಾಗಿದೆ? ಅಂಬ್ಯುಲೆನ್ಸ್ ಎಷ್ಟಿವೆ? ಎಷ್ಟು ಖರ್ಚು ಮಾಡಿದ್ದೇವೆ ಎಂಬುದರ ಬಗ್ಗೆ ಜನರಿಗೆ ಮಾಹಿತಿ ನೀಡಲಿ ಎಂದು ಒತ್ತಾಯ ಮಾಡಿದರು.

  • ಸಿಎಂ ಸೇರಿದಂತೆ ಸಚಿವರು ಮಾತಿನ ಮಂಟಪ ಕಟ್ತಿದ್ದಾರೆ- ಸರ್ಕಾರಕ್ಕೆ ಹೆಚ್‍ಡಿಕೆ ಟ್ವೀಟೇಟು

    ಸಿಎಂ ಸೇರಿದಂತೆ ಸಚಿವರು ಮಾತಿನ ಮಂಟಪ ಕಟ್ತಿದ್ದಾರೆ- ಸರ್ಕಾರಕ್ಕೆ ಹೆಚ್‍ಡಿಕೆ ಟ್ವೀಟೇಟು

    ಬೆಂಗಳೂರು: ಕೊರೊನಾವನ್ನು ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗದೆ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ಈ ಸಮಯದಲ್ಲಿ ಸೋಂಕಿತನ ಚಿಕಿತ್ಸೆಗೆ ಬೆಡ್‍ಗಳು ಇಲ್ಲದೇ ರೋಗಿಗಳು ಮನೆಯಲ್ಲಿ ಸಾಯುತ್ತಿದ್ದಾರೆ. ಇನ್ನೊಂದೆಡೆ ಶವ ಸಂಸ್ಕಾರ ಮಾಡಲು ಸ್ಥಳವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ.

    ಟ್ವೀಟ್‍ನಲ್ಲೇನಿದೆ?
    ಕೊರೊನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು ಎಂದು ವಾಗ್ದಾಳಿ ಮಾಡಿದ್ದಾರೆ.

    ಜೊತೆಗೆ ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ. ನೆರೆಯ ಕೇರಳ ಸರ್ಕಾರ ಕೊರೊನಾ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ಧ’ ಮಾದರಿ ಕಣ್ಣೆದುರಿಗಿದೆ. ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಕೊರೊನಾ ಸೋಂಕು ಶರವೇಗದಲ್ಲಿ ಎಲ್ಲೆಡೆ ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ. ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಲಿ ಕೊರೊನಾ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಹೇಳಿದ್ದಾರೆ.

  • ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಹೊಸ ರೂಲ್ಸ್

    ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಹೊಸ ರೂಲ್ಸ್

    ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗದ ಹಿನ್ನೆಲೆ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

    ಯಾವಾಗ ಕೆಲಸಕ್ಕೆ ಹೋಗಬೇಕು? ಯಾವಾಗ ಹೋಗಬಾರದು? ಸರ್ಕಾರಿ ನೌಕರರು ವಾರಕ್ಕೆ ಎಷ್ಟು ದಿನ ಕೆಲಸ ಮಾಡಬೇಕು ಎಂಬ ನಿಯಮಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

    ನಿಯಮಗಳೇನು?:
    ಸರ್ಕಾರಿ ನೌಕರರಿಗೆ ಇನ್ಮುಂದೆ ಐಟಿ-ಬಿಟಿ ಉದ್ಯೋಗಿಗಳ ರೀತಿ ಕೆಲಸ ನೀಡಲಾಗುತ್ತದೆ. ಅಂದ್ರೆ ವಾರಕ್ಕೆ 6 ದಿನ ಕೆಲಸ ಮಾಡಂಗಿಲ್ಲ, ವಾರಕ್ಕೆ ಬರೀ 5 ದಿನ ಮಾತ್ರ ಕೆಲಸ ಇರುತ್ತದೆ. ಸರ್ಕಾರಿ ನೌಕರರಿಗೆ ಶನಿವಾರ, ಭಾನುವಾರ ರಜೆ ಎರಡು ದಿನ ರಜೆ ಇರಲಿದೆ. ಜುಲೈ 10ರಿಂದ ತಿಂಗಳ ನಾಲ್ಕೂ ಶನಿವಾರಗಳೂ ಸರ್ಕಾರಿ ರಜೆ ಸಿಗಲಿದೆ. ಎಲ್ಲ ಶನಿವಾರ ರಜೆಯು ಸದ್ಯಕ್ಕೆ ಜುಲೈ ತಿಂಗಳಲ್ಲಿ ಅನ್ವಯವಾಲಿದೆ.

    ಸರ್ಕಾರಿ ನೌಕರರು ಆಯಾ ಏರಿಯಾಗಳಿಗೆ ಅನುಗುಣವಾಗಿ ಒಂದು ದಿನ ಬಿಟ್ಟು ಒಂದು ದಿನ ಕೆಲಸ ಮಾಡಬೇಕು. ಈ ನಿರ್ಧಾರವನ್ನು ಆಯಾ ಸ್ಥಳೀಯ ಕಚೇರಿಗಳ ಮುಖ್ಯಸ್ಥರೇ ತೆಗೆದುಕೊಳ್ಳಬಹುದು. ವಾರದ 5 ದಿನಗಳು ಕಚೇರಿ ಇರಬೇಕು. ಆದರೆ ನೌಕರರಿಗೆ ಒಂದು ದಿನ ಬಿಟ್ಟು ಒಂದು ದಿನ ಕೆಲಸ ನೀಡಬೇಕು.

    ವಿಶೇಷ ಸೂಚನೆ ನೀಡಿರುವ ರಾಜ್ಯ ಸರ್ಕಾರವು, ವಾರಕ್ಕೆ 2 ದಿನ ರಜೆ ಎಲ್ಲ ಸರ್ಕಾರಿ ಕಚೇರಿಗಳಿಗೆ ಅನ್ವಯವಾಗಲ್ಲ. ಸೋಂಕು ಹೆಚ್ಚಾದ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಮುಖ್ಯಸ್ಥರು ಕ್ರಮ ಕೈಗೊಳ್ಳಬಹುದು. ದಿನಕ್ಕೆ ಶೇ.50ರಷ್ಟು ನೌಕರರು ಮಾತ್ರ ಕಾರ್ಯ ನಿರ್ವಹಿಸಬೇಕು. ಇವತ್ತು ಬಂದವರು, ನಾಳೆ ಬರುವಂತಿಲ್ಲ. ಒಂದು ದಿನ ಗ್ಯಾಪ್ ಮಾದರಿಯಲ್ಲಿ ಕೆಲಸ ನಿರ್ಹಹಿಸಬೇಕು ಎಂದು ತಿಳಿಸಲಾಗಿದೆ.

  • ಸರ್ಕಾರಕ್ಕೆ ಕ್ವಾರಂಟೈನ್‍ನಲ್ಲಿರೋರಿಗೆ ಸರಿಯಾದ ಊಟ ಕೊಡೋ ಯೋಗ್ಯತೆ ಇಲ್ಲ: ಡಿ.ಕೆ.ಸುರೇಶ್

    ಸರ್ಕಾರಕ್ಕೆ ಕ್ವಾರಂಟೈನ್‍ನಲ್ಲಿರೋರಿಗೆ ಸರಿಯಾದ ಊಟ ಕೊಡೋ ಯೋಗ್ಯತೆ ಇಲ್ಲ: ಡಿ.ಕೆ.ಸುರೇಶ್

    – ಸರ್ಕಾರದ ಬಳಿ ಬೆಡ್ಡು, ದುಡ್ಡು, ಸ್ಟಾಪ್ ಏನೂ ಇಲ್ಲ

    ಆನೇಕಲ್: ಸರ್ಕಾರಕ್ಕೆ ಕ್ವಾರಂಟೈನ್‍ನಲ್ಲಿ ಇರುವವರಿಗೆ ಸರಿಯಾದ ಊಟ ಕೊಡುವ ಯೋಗ್ಯತೆ ಇಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಅವರು ರಾಜ್ಯ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದಾರೆ.

    ಇಂದು ಆನೇಕಲ್ ತಾಲೂಕಿನ ಕಾಡು ಜಕ್ಕನಹಳ್ಳಿಯ ಸೂರ್ಯ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸುರೇಶ್ ಅವರು, ಒಂದಿನ ಬೆಂಗಳೂರಿಗೆ ರಾಮುಲು ಉಸ್ತುವಾರಿ ಇನ್ನೊಂದಿನ ಅಶ್ವಥ್ ನಾರಾಯಣ್ ಉಸ್ತುವಾರಿ ಮತ್ತೊಂದಿನ ಸುಧಾಕರ್ ಹಾಗೂ ಅಶೋಕ್ ನೋಡಿಕೊಳ್ಳುತ್ತಾರೆ ಅಂತಾರೆ ಇವರಲ್ಲೇ ಗೊಂದಲ ಇದೆ ಎಂದರು.

    ಕೊರೊನಾ ವೈರಸ್ ಹರಡದಂತೆ ತಡೆಯಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ಬಳಿ ಕೋವಿಡ್-19 ತಡೆಗಟ್ಟಲು ಬೆಡ್ಡು, ದುಡ್ಡು, ಸ್ಟಾಪ್ ಮತ್ತು ಆಸ್ಪತ್ರೆಗಳು ಇಲ್ಲ. ಕೋವಿಡ್ ಆಸ್ಪತ್ರೆ ಕ್ವಾರಂಟೈನ್‍ನಲ್ಲಿರೋರಿಗೆ ಸರಿಯಾದ ಊಟ ಕೊಡುವ ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ. ಇದು ಜವಾಬ್ದಾರಿ ಇಲ್ಲದ ಸರ್ಕಾರ ಬೇಜವಾಬ್ದಾರಿ ಉತ್ತರ ನೀಡಿಕೊಂಡೇ ಕಾಲ ಕಳೆಯುತ್ತಿದ್ದಾರೆ. ಈ ಸರ್ಕಾರ ಮಾಧ್ಯಮಗಳಲ್ಲಿ ಜನರನ್ನು ನಂಬಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.

    ಕೊರೊನಾ ಪಾಸಿಟಿವ್ ಬಂದವರು ರೋಡಿನಲ್ಲಿ ನಿಲ್ಲುವಂತ ಪರಿಸ್ಥಿತಿ ಬಂದಿದೆ. ಪಾಸಿಟಿವ್ ಬಂದವರನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳದೆ ರೋಗದ ಲಕ್ಷಣಗಲಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಕೇವಲ ಪ್ರಚಾರಕ್ಕಾಗಿ ಮೀಡಿಯಾ ಮುಂದೆ ಮಾತನಾಡುತ್ತಾರೆ. ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ಪತ್ರೆಯ ಟಾಯ್ಲೆಟ್ ಶುಚಿಗೊಳಿಸಲು ಇವರ ಬಳಿ ಸಿಬ್ಬಂದಿಯಿಲ್ಲ ಎಂದು ಸುರೇಶ್ ಅವರು ಆರೋಪ ಮಾಡಿದ್ದಾರೆ.

  • ರಾಜ್ಯದಲ್ಲಿ ಕೊರೊನಾ ರೌದ್ರತೆ- ಸರ್ಕಾರಕ್ಕೆ ತಜ್ಞರ ‘ಸಪ್ತ’ ಪ್ರಶ್ನೆ

    ರಾಜ್ಯದಲ್ಲಿ ಕೊರೊನಾ ರೌದ್ರತೆ- ಸರ್ಕಾರಕ್ಕೆ ತಜ್ಞರ ‘ಸಪ್ತ’ ಪ್ರಶ್ನೆ

    ಬೆಂಗಳೂರು: ಕೊರೊನಾ ಸೋಂಕಿತರು ಹೆಚ್ಚಾಗುವದರ ಜೊತೆಗೆ ಸಾವನ್ನಪ್ಪಿದವರ ಸಂಖ್ಯೆಯೂ ಶರವೇಗ ಪಡೆದುಕೊಳ್ಳುತ್ತಿದೆ. ಸರ್ಕಾರ ನಿರ್ಲಕ್ಷ್ಯ ಮತ್ತು ಗೊಂದಲದ ನಿರ್ಧಾರಗಳೇ ಈ ಸಂಖ್ಯೆ ಹೆಚ್ಚಳವಾಗಲು ಕಾರಣ ಎನ್ನಲಾಗುತ್ತಿದೆ. ಸರ್ಕಾರ ಮೊದಲಿನಿಂದಲೂ ತಜ್ಞರ ಸಲಹೆಗಳನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಶುಕ್ರವಾರದ ಬುಲೆಟಿನ್ ಬೆಂಗಳೂರಿಗರು ಬೆಚ್ಚಿ ಬೀಳುವಂತೆ ಮಾಡಿದೆ.

    ಶುಕ್ರವಾರ ಪತ್ತೆಯಾದ 138 ಪ್ರಕರಣಗಳಲ್ಲಿ ನಿಗೂಢ ಕೇಸ್ 41 ಆಗಿದೆ. ಅಂದರೆ ಇವರಿಗೆ ಸೋಂಕಿನ ಮೂಲವೇ ಇಲ್ಲ. ಇದು ಬೆಂಗಳೂರು ಪಾಲಿಗೆ ಡೆಡ್ಲಿ ಡೇಂಜರ್ ಆಗಿದೆ. ಇದರ ಜೊತೆ ಉಸಿರಾಟ ತೊಂದರೆಯಿಂದ 30 ಜನ, ವಿಷಮಶೀತ ಜ್ವರದಿಂದ 30 ಜನ ಕೊರೊನಾ ಪೀಡಿರಾಗಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೊರ ರಾಜ್ಯಗಳು ಕಂಟಕವಾದರೆ ಬೆಂಗಳೂರಿಗೆ ನಿಗೂಢ, ಐಎಲ್‍ಐ ಹಾಗೂ ಸಾರಿ ಕೇಸ್‍ಗಳು ಕಂಟಕವಾಗಿ ಕಾಡ್ತಿದೆ. ಇದು ಸಮುದಾಯಗಳಿಗೆ ಸೋಂಕು ಹಬ್ಬಲು ದಾರಿ ಮಾಡಿಕೊಡುತ್ತಿದೆ.

    ಜೂನ್ ತಿಂಗಳಲ್ಲೇ ಬೆಂಗಳೂರಲ್ಲಿ ಕೊರೊನಾ ಸಾವು 4 ಪಟ್ಟು ಏರಿಕೆಯಾಗಿದೆ. ಕೇವಲ 19 ದಿನದಲ್ಲಿ ಬೆಂಗಳೂರಲ್ಲಿ 48 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಸರ್ಕಾರದ ನಡೆಯ ಬಗ್ಗೆ ತಜ್ಞರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಕೊರೊನಾಗೆ ಸಂಬಂಧಿಸಿದಂತೆ ಸರ್ಕಾರವನ್ನು ತಜ್ಞರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

    ತಜ್ಞರ ಸಪ್ತ ಪ್ರಶ್ನೆ:
    1. ಬೆಂಗಳೂರಿನಲ್ಲಿ ಐಎಲ್‍ಐ, ಸಾರಿ ಪ್ರಕರಣಗಳು ಉಲ್ಬಣಿಸಿವೆ. ಸೋಂಕಿನ ಮೂಲ ಸಿಗುತ್ತಿಲ್ಲ. ಅಂದ್ರೆ ಅದು ಸಮುದಾಯಕ್ಕೆ ಹಬ್ಬಿರುವ ಸಂಕೇತ. ಆದ್ರೂ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಯಾಕೆ?
    2. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಳ ಆಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಏಕೆ?
    3. ಕೊರೊನಾ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಖಾಲಿ ಇಲ್ಲ. ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಿಲ್ಲ ಯಾಕೆ?
    4. ಕೋವಿಡ್ ಕೇರ್ ಸೆಂಟರ್ ಬಗ್ಗೆ ಕೇವಲ ಮಾಧ್ಯಮದಲ್ಲಿ ಮಾತ್ರ ಮಾತನಾಡುತ್ತಿದ್ದೀರಾ? ಎಲ್ಲಿದೆ ಇದರ ಬ್ಲ್ಯೂ ಪ್ರಿಂಟ್? ಕೇಸ್ ಜಾಸ್ತಿಯಾದ ಬಳಿಕ ಶುರುಮಾಡ್ತೀರಾ?
    5. ಇಡೀ ಬೆಂಗಳೂರಿಗೆ ಇರೋದು ಬೆರಳಣಿಕೆಯ ಆಂಬ್ಯುಲೆನ್ಸ್, ಬೆರಳಣಿಕೆಯ ಐಸಿಯು ಹೇಗೆ ಮ್ಯಾನೇಜ್ ಮಾಡ್ತೀರಾ?
    6. ತರಕಾರಿ ಮಾರೋರಿಗೆ, ಪೊಲೀಸರಿಗೆ, ಹೆಲ್ತ್ ಕೇರ್ ವರ್ಕರ್ಸ್ ಗೆ ಕೊರೊನಾ ಸೋಂಕು ತಗುಲಿದೆ. ಇದೂ ಡೇಂಜರಸ್ ಅಂತಾ ಗೊತ್ತಿದ್ರೂ ಸುಮ್ಮನಿದ್ದೀರಾ ಏಕೆ? ಎಲ್ಲಾ ಕಡೆ ಸಮುದಾಯಗಳ ಪರೀಕ್ಷೆ ಮುಂದಾಗುತ್ತಿಲ್ಲ ಏಕೆ?
    7. ದಿನದಿಂದ ದಿನಕ್ಕೆ ಟೆಸ್ಟಿಂಗ್ ಕಡಿಮೆ ಮಾಡಲಾಗ್ತಿದೆ ಏಕೆ? ಇದು ಅಪಾಯಕಾರಿ ಅಲ್ವಾ?

  • ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ಪ್ರಸ್ತಾಪ- ಟಾಸ್ಕ್‌ಫೋರ್ಸ್‌ ಶಿಫಾರಸಿಗೆ ಅಪಸ್ವರ

    ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ಪ್ರಸ್ತಾಪ- ಟಾಸ್ಕ್‌ಫೋರ್ಸ್‌ ಶಿಫಾರಸಿಗೆ ಅಪಸ್ವರ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಆಗುತ್ತಿರುವ ಸಮಯದಲ್ಲೇ ಕೋವಿಡ್ ಟೆಸ್ಟ್ ಗೆ ಖಾಸಗಿ ಆಸ್ಪತ್ರೆಗಳು ಜನರ ರಕ್ತಹೀರುತ್ತಿವೆ ಎಂದು ಪಬ್ಲಿಕ್ ಟಿವಿ ಮೆಗಾ ಅಭಿಯಾನ ಮಾಡಿ ಜನರ ಮುಂದಿಟ್ಟಿತ್ತು. ಈ ಬೆನ್ನಲ್ಲೇ ಕೋವಿಡ್ ಚಿಕಿತ್ಸೆಗೆ ದರ ನಿಗದಿಗೆ ಟಾಸ್ಕ್ ಫೋರ್ಸಿಗೆ ರಾಜ್ಯ ಸರ್ಕಾರ ಸೂಚಿಸಿತ್ತು. ಇದೀಗ ಟಾಸ್ಕ್ ಫೋರ್ಸ್, ಕೊರೊನಾ ಟೆಸ್ಟ್ ಗೆ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿ ಮಾಡಿ ಶಿಫಾರಸು ಮಾಡಿದೆ.

    ಸರ್ಕಾರಿ ಹೆಲ್ತ್ ಕಾರ್ಡ್ ಇರುವವರಿಗೆ ಒಂದು ದರ ಹಾಗೂ ಹೆಲ್ತ್ ಕಾರ್ಡ್ ಇಲ್ಲದವರಿಗೆ ಮತ್ತೊಂದು ದರ ಆಗುವ ಸಾಧ್ಯತೆ ದಟ್ಟವಾಗುತ್ತಿದೆ. ಈ ಸಂಬಂಧ, ಕ್ಯಾಬಿನೆಟ್‍ನಲ್ಲಿ ಚರ್ಚೆ ಆಗಿ ಅಂತಿಮ ನಿರ್ಧಾರ ಹೊರಬೀಳಬೇಕಿದೆ. ಹಾಗಾದರೆ, ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟ್, ಚಿಕಿತ್ಸೆಗೆ ಒಂದು ದಿನಕ್ಕೆ ಟಾಸ್ಕ್ ಫೋರ್ಸ್ ಶಿಫಾರಸು ಮಾಡಿರುವ ದರದ ಪಟ್ಟಿದೆ ಇಂತಿದೆ.

    ಕೊರೊನಾ ಟೆಸ್ಟ್ ಗೆ 2,600 ರೂ., ಕೊರೊನಾ ಚಿಕಿತ್ಸೆಗೆ ಜನರಲ್ ವಾರ್ಡ್ 5,200 ರೂ., ಐಸೋಲೇಷನ್ ವಾರ್ಡ್ 8,500 ರೂ., ಜನರಲ್ ವಾರ್ಡ್ ವಿತ್ ಆಕ್ಸಿಜನ್ 7,500 ರೂ., ಐಸಿಯು ವಿತ್ ವೆಂಟಿಲೇಟರ್ 12,000 ರೂ.ಗಳನ್ನು ದಿನವೊಂದಕ್ಕೆ ನಿಗದಿ ಮಾಡಲಾಗಿದೆ.

    ಟಾಸ್ಕ್ ಫೋರ್ಸ್ ಈ ದರವನ್ನು ಏಕಾಏಕಿ ನಿಗದಿ ಮಾಡಿಲ್ಲ. ಮಹಾರಾಷ್ಟ್ರ, ಗುಜರಾತ್, ದೆಹಲಿ, ತೆಲಂಗಾಣದಂತ ರಾಜ್ಯಗಳಲ್ಲಿ ಕೊರೊನಾ ಚಿಕಿತ್ಸೆಗೆ ಎಷ್ಟು ದರ ಇದೆ ಎಂಬುವುದನ್ನು ಪರಿಶೀಲಿಸಿಯೇ ಮಾಡಿದಂತಿದೆ. ಯಾವ ರಾಜ್ಯದಲ್ಲಿ ಎಷ್ಟೆಷ್ಟು ಚಿಕಿತ್ಸಾ ದರ ನಿಗದಿಯಾಗಿದೆ ಎಂಬ ಮಾಹಿತಿ ಇಂತಿದೆ.

    ಮಹಾರಾಷ್ಟ್ರದಲ್ಲಿ ಗಂಟಲು ದ್ರವ ಪರೀಕ್ಷೆ 2,200 ರೂ, ಜನರಲ್ ವಾರ್ಡಿಗೆ 4,000 ರೂ., ಐಸೋಲೇಷನ್ ವಾರ್ಡಿಗೆ 7,500 ರೂ., ಐಸಿಯು ವಿತ್ ವೆಂಟಿಲೇಟರ್ 9,000 ರೂ., ನಿಗದಿ ಮಾಡಲಾಗಿದೆ. ತೆಲಂಗಾಣದಲ್ಲಿ ಗಂಟಲು ದ್ರವ ಪರೀಕ್ಷೆಗೆ 2,200 ರೂ., ಜನರಲ್ ವಾರ್ಡಿಗೆ 4,000 ರೂ., ಐಸಿಯು ವಿತ್ ವೆಂಟಿಲೇಟರ್ ಚಿಕಿತ್ಸೆಗೆ 9,000 ಸಾವಿರ ರೂ. ನಿಗದಿ ಮಾಡಲಾಗಿದೆ. ಉಳಿದಂತೆ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಆಸ್ಪತ್ರೆಯಲ್ಲಿ 2,200, ಮನೆಯಲ್ಲೇ ಆದರೆ 2,800 ರೂ.ಗಳನ್ನು ಗಂಟಲು ದ್ರವ ಪರೀಕ್ಷೆ ನಿಗದಿ ಮಾಡಲಾಗಿದೆ.

    ಇತ್ತ ತೆಲಂಗಾಣ, ಮಹಾರಾಷ್ಟ್ರ ನಿಗದಿತ ದರದಲ್ಲಿ ವೈಜ್ಞಾನಿಕವಾಗಿ ಎಲ್ಲಾ ರೋಗಿಗಳಿಗೆ ಕೊರೊನಾ ಚಿಕಿತ್ಸೆ ನೀಡುವುದು ಸಾಧ್ಯವೇ ಇಲ್ಲ ಎಂದು ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಅಧ್ಯಕ್ಷ ಪ್ರಸನ್ನ ಹೇಳಿದ್ದಾರೆ. ಆಯುಷ್ಮಾನ್ ಭಾರತ್‍ನಂತ ಹೆಲ್ತ್ ಕಾರ್ಡ್ ಇರುವವರಿಗೆ ಈ ದರ ಅನ್ವಯ ಆಗಬಹುದು. ಸರ್ಕಾರದ ಪ್ರಸ್ತಾವಿತ ದರದಲ್ಲಿ ಚಿಕಿತ್ಸೆ ನೀಡುತ್ತೇವೆ ಎಂದಿದ್ದರೆ.

    ಹೆಲ್ತ್ ಕಾರ್ಡ್ ಇಲ್ಲದ ರೋಗಿಗಳ ಚಿಕಿತ್ಸೆಗೆ ಸರ್ಕಾರದ ಮುಂದೆ ಎರಡು ದರ ಪಟ್ಟಿ ಕೊಟ್ಟಿದ್ದೇವೆ. ಕೇಂದ್ರದ ನಿರ್ದೇಶನದಂತೆ ಖಾಸಗಿ ಇನ್ಸೂರೆನ್ಸ್‍ನಲ್ಲಿ ಈಗ ಕೊರೊನಾಗೆ ಕವರೇಜ್ ಸಿಗುತ್ತೆ. ಅದರ, ಜವಾಬ್ದಾರಿ ನಾವು ಹೊರುತ್ತೇವೆ. ಈಗಾಗಲೇ ವಿಮೆ ಕಂಪನಿಗಳ ಜೊತೆ ಮಾತಾನಾಡಿದ್ದೇವೆ. ಹೀಗಾಗಿ, ಸರ್ಕಾರ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡೋದು ಬೇಡ. ಏಕಪಕ್ಷೀಯ ನಿರ್ಧಾರ ಮಾಡೋದು ಬೇಡ ಎಂದು ಪ್ರಸನ್ನ ಅವರು ಹೇಳಿದ್ದಾರೆ. ಹೆಲ್ತ್ ಕಾರ್ಡ್ ಇಲ್ಲದವರಿಗೆ ಖಾಸಗಿ ಆಸ್ಪತ್ರೆಗಳು ಹೇಳುವ ಪ್ರಕಾರ ದರ ಎಷ್ಟಿದೆ ಎಂಬ ಮಾಹಿತಿ ಇಂತಿದೆ.

    ಹೆಲ್ತ್ ಕಾರ್ಡ್ ಇಲ್ಲದ ಕೊರೊನಾ ರೋಗಿಗಳ ಚಿಕಿತ್ಸೆಗೆ ಜನರಲ್ ವಾರ್ಡಿಗೆ 15,000 ರೂ., ಸ್ಪೆಷಲ್ ವಾರ್ಡಿಗೆ 25,000 ರೂ., ಐಸಿಯು ಬೆಡ್ 35,000 ರೂ., ಐಸಿಯು ವಿತ್ ವೆಂಟಿಲೇಷನ್‍ಗೆ 45,000 ರೂ.ಗಳ ಪ್ರಸ್ತಾಪ ನೀಡಲಾಗಿದೆ.

    ಇತ್ತ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡುವ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು ಅವರು, ಖಾಸಗಿ ಆಸ್ಪತ್ರೆಗಳ ಅಸೋಷಿಯೇಷನ್ ಜೊತೆ ಮಾತನಾಡಿ ನಿರ್ಧಾರಕ್ಕೆ ಬಂದಿದ್ದೇವೆ. ಬೇರೆ ಬೇರೆ ರಾಜ್ಯಗಳ ಕೊರೊನಾ ಚಿಕಿತ್ಸೆ ವೆಚ್ಚವನ್ನು ನೋಡಿ ನಿರ್ಧರಿಸಲಾಗಿದೆ. ಸಿಎಂ ಬಿಎಸ್‍ವೈ ಅವರೊಂದಿಗೆ ಚರ್ಚೆ ನಡೆಸಿ ಅಂತಿಮವಾಗಿ ವೆಬ್‍ಸೈಟ್‍ನಲ್ಲಿ ಮಾಹಿತಿ ಪ್ರಕಟಿಸುತ್ತೇವೆ ಎಂದರು. ಇನ್ನು ಜೂನ್ 25ಕ್ಕೆ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

    ಅಲ್ಲದೇ, ಕೊರೊನಾ ರೋಗಿಗಳು ಯಾರು ಆತಂಕ ಪಡುವ ಅಗತ್ಯವಿಲ್ಲ. ಹೆಲ್ತ್ ಕಾರ್ಡ್ ಇಲ್ಲದಿದ್ದರೂ ಇದೆ ದರ ಅನ್ವಯಿಸುತ್ತೆ ಎಂಬ ಆಶ್ವಾಸನೆಯನ್ನು ಸಚಿವರು ನೀಡಿದರು. ಈ ನಡುವೆ ಕೊರೊನಾ ಟೆಸ್ಟ್‍ಗೆ ಇಡೀ ದೇಶಾದ್ಯಂತ ಒಂದೇ ದರ ನಿಗದಿ ಮಾಡಿ ಅಂತಾ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

  • ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

    ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

    ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಲಾಕ್‍ಡೌನ್ ವೇಳೆ ಮದ್ಯ ಮಾರಾಟದ ಸಮಯವಾಕಾಶವನ್ನು 2 ಗಂಟೆ ವಿಸ್ತರಣೆ ಮಾಡಲಾಗಿದೆ.

    ಈ ಹಿಂದೆ ಕೊರೊನಾ ಲಾಕ್‍ಡೌನ್‍ನಿಂದ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆ ನಂತರ ಮೇ 4ರಂದು ಷರತ್ತು ವಿಧಿಸಿ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಒಪನ್ ಮಾಡಲಾಗಿತ್ತು. ಆಗ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಓಪನ್ ಮಾಡುವಂತೆ ಸೂಚಿಸಲಾಗಿತ್ತು. ಈಗ ಈ ಸಮಯವನ್ನು ವಿಸ್ತರಣೆ ಮಾಡಲಾಗಿದೆ.

    ಈ ವಿಚಾರವಾಗಿ ರಾಜ್ಯ ಅಬಕಾರಿ ಇಲಾಖೆ ಇಂದು ಸುತ್ತೋಲೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಬೆಳಗ್ಗೆ 9ರಿಂದ ಸಂಜೆ 9ರವರಗೆ ಮದ್ಯದಂಗಡಿಗಳನ್ನು ತೆರೆಯಬಹುದು ಎಂದು ಹೇಳಿದೆ. ಈ ಮೂಲಕ ಇರುವ ಸ್ಟಾಕ್‍ಗಳನ್ನು ಖಾಲಿ ಮಾಡುವಂತೆ ಸೂಚಿಸಿ ಎರಡು ಗಂಟೆಗಳ ಹೆಚ್ಚುವರಿ ಸಮಯವನ್ನು ನೀಡಿದೆ.

  • ನಾಳೆ ರಾಜ್ಯದಲ್ಲಿ ಕರ್ಫ್ಯೂ ಇಲ್ಲ

    ನಾಳೆ ರಾಜ್ಯದಲ್ಲಿ ಕರ್ಫ್ಯೂ ಇಲ್ಲ

    – ಮದ್ಯದಂಗಡಿ ಕೂಡ ಓಪನ್

    ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ನಾಳೆ ಕರ್ಫ್ಯೂವನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ.

    ಭಾನುವಾರ ರಾಜ್ಯದಲ್ಲಿ ಯಾವುದೇ ಸಂಪೂರ್ಣ ಲಾಕ್‍ಡೌನ್ ಇಲ್ಲ. ಎಂದಿನಂತೆ ಎಲ್ಲಾ ಚಟವಟಿಕೆಗಳು ಇರಲಿದೆ ಎಂದು ಸಿಎಂ ಕಚೇರಿಯಿಂದ ಅಧಿಕೃತವಾಗಿ ಘೋಷಣೆಯಾಗಿದೆ.

    ಪ್ರತಿ ದಿನದಂತೆ ಭಾನುವಾರ ಬಸ್ ಸಂಚಾರ ಇರುತ್ತೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಎಂದಿನಂತೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಸಂಚಾರ ಮಾಡಲಿದೆ. ಅಲ್ಲದೇ ಅಂತರ ರಾಜ್ಯ ಸಂಚಾರ ಕೂಡ ಇರುತ್ತದೆ. ಜೊತೆಗೆ ಆಟೋ, ಕ್ಯಾಬ್ ಎಲ್ಲ ಸಂಚಾರ ವ್ಯವಸ್ಥೆ ಕೂಡ ಇರುತ್ತದೆ.

    ಹೋಟೆಲ್, ಸಲೂನ್, ತರಕಾರಿ, ದಿನಸಿ, ಬ್ಯೂಟಿ ಪಾರ್ಲರ್ ಸೇರಿದಂತೆ ಎಲ್ಲಾ ಅಂಗಡಿಗಳು ತೆರೆದಿರುತ್ತದೆ. ಅದೇ ರೀತಿ ಹೋಟೆಲ್‍ನಲ್ಲಿ ಪಾರ್ಸೆಲ್‍ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೂ ಪಾರ್ಕ್ ತೆರೆದಿರುತ್ತದೆ. ಜೊತೆಗೆ ಮದ್ಯದಂಗಡಿ ಕೂಡ ಓಪನ್ ಆಗುತ್ತದೆ.