Tag: State Government

  • ದೋಸ್ತಿ ಸರ್ಕಾರದ ನಿರ್ಧಾರದ ವಿರುದ್ಧವೇ ಬಿಸಿ ಪಾಟೀಲ್ ಕಿಡಿ

    ದೋಸ್ತಿ ಸರ್ಕಾರದ ನಿರ್ಧಾರದ ವಿರುದ್ಧವೇ ಬಿಸಿ ಪಾಟೀಲ್ ಕಿಡಿ

    ಹಾವೇರಿ: ಬೆಂಗಳೂರಿಗೆ ಶಿವಮೊಗ್ಗ ಜಿಲ್ಲೆಯ ಶರಾವತಿ ನದಿ ನೀರು ಹರಿಸುವ ಯೋಜನೆಯನ್ನು ವಿರೋಧಿಸುತ್ತೇವೆ. ಬೆಂಗಳೂರು ಬೆಳೆಯುವುದನ್ನು ನಿಲ್ಲಿಸಿ, ಉತ್ತರ ಕರ್ನಾಟಕವನ್ನು ಬೆಳೆಸಿ ಎಂದು ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಟ್ವೀಟ್ ಮೂಲಕ ದೊಸ್ತಿ ಸರ್ಕಾರದ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ.

    ಬೆಂಗಳೂರಿಗೆ ಶರಾವತಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಲೆನಾಡು ಜನತೆ ಮತ್ತು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈಗ ಬಿಸಿ ಪಾಟೀಲ್ ಟ್ವೀಟ್ ಮಾಡುವ ಮೂಲಕ ನೇರವಾಗಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

    ಈ ಯೋಜನೆಗೆ ವಿರೋಧವಿದೆ. ಬೆಂಗಳೂರು ಬೆಳೆಯುವುದನ್ನ ನಿಲ್ಲಿಸಿ, ಉತ್ತರ ಕರ್ನಾಟಕವನ್ನ ಬೆಳೆಸಿ. ಇಲ್ಲಿ ಸಾಕಷ್ಟು ನದಿಗಳಿವೆ. ಅವುಗಳನ್ನ ಅಭಿವೃದ್ಧಿ ಮಾಡಿ. ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ವಹಿಸಿ ಎಂದು ಪರೋಕ್ಷವಾಗಿ ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಬೆಂಗಳೂರಿಗೆ ಶರಾವತಿ ನದಿಯ ನೀರನ್ನು ತೆಗೆದುಕೊಂಡು ಹೋಗಲು ನಮ್ಮ ವಿರೋಧ. ಬೆಂಗಳೂರು ಬೆಳೆಯುವುದನ್ನು ನಿಲ್ಲಿಸಿ, ಉತ್ತರ ಕರ್ನಾಟಕವನ್ನು ಬೆಳೆಸಿ ಇಲ್ಲಿ ಸಾಕಷ್ಟು ನದಿಗಳಿವೆ ಎಂದು ಬರೆದು, ಹೆಚ್.ಡಿ ಕುಮಾರಸ್ವಾಮಿ ಹಾಗೂ ಸಿಎಂ ಆಫ್ ಕರ್ನಾಟಕ ಟ್ಯಾಗ್ ಮಾಡಿ ಟ್ವೀಟ್ ಮೂಲಕ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

    ಶಿವಮೊಗ್ಗ ಬಂದ್‍ಗೆ ಕರೆ: ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಹರಿಸುವ ಯೋಜನೆಯಿಂದ ಅಪಾರ ಪರಿಸರ ನಾಶವಾಗುತ್ತದೆ. ಅದ್ದರಿಂದ ಈ ಯೋಜನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಜುಲೈ 10 ರಂದು ಶರಾವತಿ ಉಳಿಸಿ ಹೋರಾಟ ಒಕ್ಕೂಟದ ಸಭೆ ಶಿವಮೊಗ್ಗ ಬಂದ್‍ಗೆ ಕರೆ ನೀಡಿದೆ.

    ಶನಿವಾರ ಜಿಲ್ಲೆಯ ನೌಕರರ ಭವನದಲ್ಲಿ ತಾಲೂಕು ಒಕ್ಕೂಟದ ವತಿಯಿಂದ ನಡೆದ ಸಮಾಲೋಚನಾ ಸಭೆಯಲ್ಲಿ ಶಿವಮೊಗ್ಗದ ವಿವಿಧ ಸಂಘ, ಸಂಸ್ಥೆಗಳ ಮತ್ತು ಜನಪ್ರತಿನಿಧಿಗಳು ಸೇರಿ ಈ ಯೋಜನೆ ಜಾರಿ ಆದರೆ ಮಲೆನಾಡಿನ ಜನರಿಗೆ ತೊಂದರೆಯಾಗುತ್ತದೆ ಎಂದು ಈ ತೀರ್ಮಾನ ಕೈಗೊಂಡಿದೆ.

  • ಭ್ರಷ್ಟ ಅಧಿಕಾರಿಗೆ ರಾಜ್ಯ ಸರ್ಕಾರದಿಂದ ಗೇಟ್‌ಪಾಸ್‌

    ಭ್ರಷ್ಟ ಅಧಿಕಾರಿಗೆ ರಾಜ್ಯ ಸರ್ಕಾರದಿಂದ ಗೇಟ್‌ಪಾಸ್‌

    ದಾವಣಗೆರೆ: ಹರಪನಹಳ್ಳಿಯ ಸಾಮಾಜಿಕ ಅರಣ್ಯ ವಿಭಾಗದಲ್ಲಿ ನಡೆದಿದ್ದ ಅಕ್ರಮಗಳು ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ವಲಯ ಅರಣ್ಯಾಧಿಕಾರಿ ಕೆ.ಶಂಕರ್ ನಾಯ್ಕ್‍ಗೆ ರಾಜ್ಯ ಸರ್ಕಾರ ಗೇಟ್‍ಪಾಸ್ ನೀಡಿದೆ.

    ಹರಪನಹಳ್ಳಿಯ ಸಾಮಾಜಿಕ ಅರಣ್ಯ ವಿಭಾಗದಲ್ಲಿ ನಡೆದಿದ್ದ ಅಕ್ರಮಗಳು ಸಾಬೀತಾದ ಹಿನ್ನೆಲೆಯಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಉದ್ಯೋಗ ಖಾತ್ರಿ ಕಾಮಗಾರಿಗೇ ಖಾತ್ರಿ ಹಾಕಿದ್ದ ಆರ್‍ಎಫ್‍ಒ ಶಂಕರ್ ನಾಯ್ಕ್ ಸೇರಿ 5 ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿತ್ತು. ಈ ಹಿನ್ನೆಲೆ ಶಂಕರ್ ನಾಯ್ಕಗೆ ಸೇವೆಯಿಂದ ಕಡ್ಡಾಯ ನಿವೃತ್ತಿಯ ದಂಡನೆ ವಿಧಿಸುವಂತೆ ಸರ್ಕಾರ ಆದೇಶಿಸಿತ್ತು. ಹೀಗಾಗಿ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಉಪ ಕಾರ್ಯದರ್ಶಿ ಎಚ್.ಸಿ ರಾಜೇಂದ್ರ ಕುಮಾರ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

    ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮದನ್ವಯ ಕಠಿಣ ಕ್ರಮ ಕೈಗೊಂಡಿದೆ. ಈ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ಗಂಟೆ ಬಾರಿಸಿದೆ. 2010ರಲ್ಲಿ ವಿವಿಧ ಅಳತೆಯ 16.45 ಲಕ್ಷ ಸಸಿ ಬೆಳೆಸಿರುವುದಾಗಿ ವರದಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆ ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಕೇವಲ 1.89 ಲಕ್ಷ ಸಸಿಗಳು ಕಂಡು ಬಂದಿದ್ದವು. ರಾಗಿ, ಮಸಲವಾಡ ಮತ್ತು ಸಿಂಗ್ರಿಹಳ್ಳಿಯಲ್ಲಿ 8 ಲಕ್ಷ ಸಸಿ ತೋರಿಸಿ 64 ಲಕ್ಷ ರೂಪಾಯಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದರು.

    ಅಲ್ಲದೆ ಹರಪನಹಳ್ಳಿ ಸಾಮಾಜಿಕ ಅರಣ್ಯದಲ್ಲಿ 2.50 ಲಕ್ಷ ಸಸಿ ಬೆಳೆಸಿದ್ದೇವೆ ಎಂದು ಸುಳ್ಳು ದಾಖಲಾತಿ ಸೃಷ್ಟಿಸಿ 6.79 ಲಕ್ಷ ರೂ. ಹಣ ಲೂಟಿ ಮಾಡಿದ್ದರು. ಮಂಜೂರಾತಿ ಇಲ್ಲದೇ 5,500 ಕೆ.ಜಿ. ಹೆಚ್ಚುವರಿ ಪಾಲಿಥೀನ್ ಚೀಲವನ್ನು 7.43 ಲಕ್ಷ ರೂಪಾಯಿಗೆ ಖರೀದಿಸಿದ್ದರು ಎನ್ನಲಾಗಿದೆ.

    ಸಸ್ಯ ಕ್ಷೇತ್ರದಲ್ಲಿ ಟೆಂಡರ್ ಕರೆಯದೇ ದರಪಟ್ಟಿಯ ಮೂಲಕ 78.54 ಲಕ್ಷ ರೂಪಾಯಿ ವೆಚ್ಚ ಮಾಡಿ ಕರ್ತವ್ಯ ಲೋಪ ಎಸಗಿ, ಯರಬಳ್ಳಿ ಸರ್ವೆ ನಂ. 264ರಲ್ಲಿ ನಾಲಾಬದು ಹಾಗೂ ಗೋಕಟ್ಟೆ ನಿರ್ಮಾಣದಲ್ಲಿ 5.35 ಲಕ್ಷ ರೂಪಾಯಿ ಹೆಚ್ಚುವರಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

    2009-10ನೇ ಸಾಲಿನಲ್ಲಿ ಮಣ್ಣು ತೇವಾಂಶ ರಕ್ಷಣೆ ಕೆಲಸ ಮಾಡುವ ಸಂಬಂಧ ಆರು ಅಂದಾಜು ಪಟ್ಟಿ ತಯಾರಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸಲ್ಲಿಸದೇ ಶಿಷ್ಟಾಚಾರ ಉಲ್ಲಂಘಿಸಿರುವ ಆರೋಪಗಳು ಸಾಬೀತಾಗಿದೆ. ಒಟ್ಟು 25 ಆರೋಪ ಪಟ್ಟಿಗಳ ಪೈಕಿ 7 ಕಾರ್ಯ ನಿರ್ವಹಣಾ ಲೋಪ, 6 ಸರ್ಕಾರಕ್ಕೆ ಆರ್ಥಿಕ ನಷ್ಟಕ್ಕೆ ಸಂಬಂಧಿಸಿದ್ದು ಸಾಬೀತಾಗಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಚೆನ್ನೈನಲ್ಲಿ ನೀರಿಗೆ ಹಾಹಾಕಾರ – ಮಳೆಗಾಗಿ ತಮಿಳುನಾಡು ಸರ್ಕಾರದಿಂದ ಯಜ್ಞ

    ಚೆನ್ನೈನಲ್ಲಿ ನೀರಿಗೆ ಹಾಹಾಕಾರ – ಮಳೆಗಾಗಿ ತಮಿಳುನಾಡು ಸರ್ಕಾರದಿಂದ ಯಜ್ಞ

    ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನೀರಿನ ಹಾಹಾಕಾರ ಮುಂದುವರಿದಿದ್ದು, ರಾಜ್ಯ ಸರ್ಕಾರ ವರುಣನ ಮೊರೆ ಹೋಗಿದೆ.

    ತಮಿಳುನಾಡು ಸರ್ಕಾರ ಪೆರೂರಿನ ಪಟ್ಟೀಶ್ವರ ದೇವಸ್ಥಾನದಲ್ಲಿ ಹಾಗೂ ಎಐಎಡಿಎಂಕೆ ನಾಯಕರು ಪುರಸವಾಲ್ಕಂನಲ್ಲಿರುವ ಅರುಲ್ಮಿಗು ಗಂಗಾದೀಶ್ವರ ದೇವಸ್ಥಾನದಲ್ಲಿ ವರುಣನಿಗಾಗಿ ಯಜ್ಞ ನಡೆಸುತ್ತಿವೆ.

    ಚೆನ್ನೈ ನಗರದಲ್ಲಿ ಅನೇಕ ಕೆರೆಗಳನ್ನು ಒತ್ತುವರಿ ಮಾಡಲಾಗಿದೆ. ಅಷ್ಟೇ ಅಲ್ಲದೆ ಕೆಲವು ಕೆರೆಗಳನ್ನು ನೆಲಸಮಗೊಳಿಸಿ ಐಟಿ ಕಂಪನಿಗಳನ್ನು ತೆರೆಯಲಾಗಿದೆ. ಇದರಿಂದಾಗಿ ನೀರಿನ ಸಂಗ್ರಹಿಸಲು ಸೂಕ್ತ ವ್ಯವಸ್ಥೆಯಿಲ್ಲ ಸರ್ಕಾರ ಭಾರೀ ಸವಾಲುಗಳನ್ನು ಎದುರಿಸುತ್ತಿದೆ. ಹೀಗಾಗಿ ನೀರಿನ ಹಾಹಾಕಾರವನ್ನು ಚೆನ್ನೈ ಎದುರಿಸುತ್ತಿದೆ ಎಂದು ವರದಿಯಾಗಿದೆ.

    2400 ಎಕರೆ ಕಣ್ಮರೆ:
    ಚೆನ್ನೈ ಕಳೆದ ನಾಲ್ಕು ದಶಕಗಳಲ್ಲಿ ವೆಲಾಚೇರಿ ಸರೋವರದ ಹತ್ತು ಪಟ್ಟು ಪ್ರಮಾಣದಲ್ಲಿ ಜಲಮೂಲಗಳನ್ನು ಕಳೆದುಕೊಂಡಿದೆ. ಹೀಗಾಗಿ ದೀರ್ಘಕಾಲಿಕ ನೀರಿನ ಮೂಲಗಳಿಂದ ಚೆನ್ನೈ ಪರದಾಡುವಂತಾಗಿದೆ.

    ವೇಗವಾಗಿ ಬೆಳೆದ ನಗರೀಕರಣದಿಂದ ಚೆನ್ನೈನ ನಗರದ ವ್ಯಾಪ್ತಿಯ ಕೆರೆಗಳು ಮತ್ತು ಗದ್ದೆಗಳು ನಿಧಾನವಾಗಿ ಮುಚ್ಚಲ್ಪಟ್ಟವು. ಈ ನಿರ್ಲಕ್ಷ್ಯದ ಅತ್ಯಂತ ಭೀಕರವಾದ ದೋಷಾರೋಪಣೆಯು ಪ್ರವಾಹದ ನಂತರ ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಲಾದ ಮಹಾಲೇಖಪಾಲರ (ಸಿಎಜಿ) ವರದಿಯಲ್ಲಿ ಬೆಳಕಿಗೆ ಬಂದಿತ್ತು.

    ಈ ವರದಿಯಲ್ಲಿ ನಿಯಮಗಳನ್ನು ಪಾಲಿಸದೆ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಚೆನ್ನೈ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ (ಸಿಎಂಡಿಎ) ಲೋಪವನ್ನು ಎತ್ತಿ ತೋರಿಸಿದೆ. ಸಿಎಂಡಿಎ ನಿರ್ಲಕ್ಷ್ಯದಿಂದಾಗಿ 1979 ಮತ್ತು 2016ರ ನಡುವೆ ಜಲಮೂಲಗಳ ಪ್ರದೇಶವು 2389 ಎಕರೆಗಳಷ್ಟು ಕುಗ್ಗಿದೆ ಎಂದು ತಿಳಿಸಿತ್ತು.

    ಮೊಗಪ್ಪೈರ್ ಸರೋವರ, ಅಂಬತ್ತೂರು ಟ್ಯಾಂಕ್ ಮತ್ತು ಪಲ್ಲಿಕರಾನೈ ಮಾರ್ಷ್ ಇತರ ಜಲಮೂಲಗಳು ಕುಗ್ಗುತ್ತಿರುವ ಬಗ್ಗೆಯೂ ವರದಿಯಲ್ಲಿ ತಿಳಿಸಲಾಗಿದೆ.

    ನಗರದಲ್ಲಿನ ಜಲಾಶಯಗಳು, ಸರೋವರಗಳು, ಟ್ಯಾಂಕ್‍ಗಳ ಪುನಃಸ್ಥಾಪನೆ ಮತ್ತು ಸರಿಯಾದ ನಿರ್ವಹಣೆ ಕಳೆದ ಎರಡು ದಶಕಗಳಿಂದ ನಿರ್ಲಕ್ಷ್ಯೆಗೆ ಒಳಗಾಗಿದೆ. ಜಲಮೂಲಗಳನ್ನು ನಿರ್ಮಿಸಲು ಮತ್ತು ಪುನಃಸ್ಥಾಪಿಸಲು ಕಳಪೆ ಪ್ರಯತ್ನಗಳು ನಡೆದಿವೆ.

    ಜಲಮೂಲಗಳ ಪುನಃಸ್ಥಾಪನೆಗೆ ಸಂಬಂಧಿಸಿದಂತೆ, ನೀರಿನ ಕೊರತೆ ಕುರಿತು ಮದ್ರಾಸ್ ಹೈಕೋರ್ಟ್ ಗೆ ಚೆನ್ನೈ ಮೆಟ್ರೋ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಎಂಜಿನಿಯರ್ ಮಾಹಿತಿ ನೀಡಿ, ನಗರದ 210ರ ಜಲಮೂಲಗಳ ಪೈಕಿ ಐದು ಮಾತ್ರ ಪುನಃಸ್ಥಾಪಿಸಲಾಗಿದೆ. ಇದು 2017 ರಲ್ಲಿ ಪ್ರಾರಂಭವಾದ ಸಹಕಾರಿ ನೀರು ನಿರ್ವಹಣಾ ಯೋಜನೆಗೆ ಸಂಬಂಧಿಸಿದೆ. ಅನೇಕ ಪ್ರದೇಶಗಳಲ್ಲಿನ ಸಮುದಾಯಗಳು ಸ್ವಯಂಸೇವಾ ಸಂಸ್ಥೆಗಳು ಸ್ವಯಂ ಪ್ರೇರಣೆಯಿಂದ ಕೆರೆಗಳ ಅಭಿವೃದ್ಧಿಗೆ ಶ್ರಮಿಸುತ್ತಿವೆ ಎಂದು ತಿಳಿಸಿದ್ದಾರೆ.

    ಸಾಮರ್ಥ್ಯ ಇಳಿಕೆ:
    ಪೂಂಡಿ, ರೆಡ್ ಹಿಲ್ಸ್, ಚೋಲವರಂ ಮತ್ತು ಚೆಂಬರಂಬಕ್ಕಂ ನಾಲ್ಕು ಪ್ರಮುಖ ಜಲಾಶಯಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಹೀಗಾಗಿ ಅವುಗಳ ಶೇಖರಣಾ ಸಾಮರ್ಥ್ಯದಲ್ಲಿ ಶೇ.20 ರಷ್ಟು ಇಳಿಕೆಯಾಗಿದೆ. ಚೆನ್ನೈಗೆ ನೀರು ಸರಬರಾಜಿಗಾಗಿ 1944ರಲ್ಲಿ ಪೂಂಡಿ ಜಲಾಶಯ ನಿರ್ಮಿಸಲಾಯಿತು. ಥರ್ವೊಯ್ ಕಂಡಿಗೈನಲ್ಲಿ ದೀರ್ಘಾವಧಿಯ ಐದನೇ ಜಲಾಶಯವನ್ನು 2013ರಲ್ಲಿ ಕಾರ್ಯಾರಂಭ ಮಾಡಲಾಯಿತು. ಆದರೆ ಭೂಸ್ವಾಧೀನ ವಿಳಂಬದಿಂದಾಗಿ ಈ ವರ್ಷದ ಅಂತ್ಯದವರೆಗೂ ಜಲಾಶಯವು ಕಾರ್ಯನಿರ್ವಹಿಸದಂತಾಗಿದೆ.

    ನಗರದಲ್ಲಿ ಹರಿಯುವ ಮೂರು ನದಿಗಳು ಹೆಚ್ಚು ಕಲುಷಿತಗೊಂಡಿದ್ದು, ಅವುಗಳ ಶುದ್ಧಿಕರಣಕ್ಕೆ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಸಿಎಜಿ ವರದಿಯು ರಾಜ್ಯದ ಕಡೆಯಿಂದ ಈ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಕೊಸಸ್ಥಲಿಯಾರ್ ನದಿಯಲ್ಲಿ ಕೈಗಾರಿಕಾ ತಾಜ್ಯವನ್ನ ಹರಿಬಿಡಲಾಗುತ್ತಿದೆ. ಅಡ್ಯಾರ್ ನದಿಯಲ್ಲೂ ಕಸದ ರಾಶಿ ಹೆಚ್ಚಾಗಿತ್ತು. ರಾಷ್ಟ್ರೀಯ ಹಸಿರು ನ್ಯಾಯಪೀಠ ಈ ವಿಚಾರಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯಲ್ಲಿ ರಾಜ್ಯ ಸರ್ಕಾರಕ್ಕೆ 100 ಕೋಟಿ ರೂ. ದಂಡ ವಿಧಿಸಿತ್ತು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡ್ತೀವಿ:ಹೆಚ್.ಡಿ ರೇವಣ್ಣ

    ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡ್ತೀವಿ:ಹೆಚ್.ಡಿ ರೇವಣ್ಣ

    – ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ

    ಹಾಸನ: ಒಂದು ವರ್ಷದಿಂದ ಸರ್ಕಾರ ಆಗ ಬೀಳುತ್ತೆ ಈಗ ಬೀಳುತ್ತೆ ಎಂದು ಎಲ್ಲಾ ಹೇಳಿದರು. ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ. ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡಿತ್ತೀವಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

    ಜಿಲ್ಲೆಯಲ್ಲಿ ತಣ್ಣೀರುಹಳ್ಳದಲ್ಲಿರುವ ಚೆಸ್ಕಾಂ ಮುಖ್ಯ ಕಾರ್ಯಪಾಲನಾ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2006ರಲ್ಲಿ ನಮ್ಮ ಸರ್ಕಾರದಲ್ಲಿ ಗ್ಯಾಂಗ್ ಮ್ಯಾನ್ ಗಳನ್ನು ನೇಮಕ ಮಾಡಿದ್ದೇವು. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದೆ ಶೋಭಕ್ಕ ಸೇರಿ ಇವರೆಲ್ಲರೂ ರೇವಣ್ಣನ ಕಡೆಯವರು ಎಂದು ಲೈನ್‍ಮೆನ್ ನೇಮಕಾತಿಯನ್ನು ವಜಾ ಮಾಡಿದರು ಎಂದು ಆರೋಪಿಸಿದರು.

    2006ರಲ್ಲಿ ನಮ್ಮ ಸರ್ಕಾರದಲ್ಲಿ 450 ಚೆಸ್ಕಾಂ ಸಬ್ ಸ್ಟೇಷನ್ ಮಾಡಿದ್ದೆ. ಈಗ ಎಲ್ಲಾ ಆನ್ ಲೈನ್ ಗೀನ್ ಲೈನ್ ಅಂತಾರೆ ಆಗ ಯಾವುದೂ ಇರಲಿಲ್ಲ. ಈ ವಿಚಾರವಾಗಿ ಹಿಂದಿನ ಸರ್ಕಾರ ಏನು ಮಾಡಿದೆ ಎಂದು ಹೇಳಲಿ ನೋಡೋಣ. ಈ ಹಿಂದೆ ಕೆಇಬಿಗೆ 200 ಕೋಟಿ ಅನುದಾನ ಕೊಡಿಸಿದ್ದಕ್ಕೆ ನನಗೆ 10 ಕೋಟಿ ಲಂಚ ಕೊಡೋಕೆ ಬಂದಿದ್ದರು. ನಾನು ಲಂಚ ತೆಗೆದುಕೊಳ್ಳಲಿಲ್ಲಾ ಆದರ ಬದಲಾಗಿ ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಬ್ಲಾಕ್ ಮಾಡಿ ಎಂದು ಮಾಡಿಸಿದ್ದೀನಿ ಎಂದು ತಿಳಿಸಿದರು.

    ಕಳೆದ 2006ರಲ್ಲಿ ನಾವು ಚನ್ನರಾಯಪಟ್ಟಣ, ಹೊಳೆನರಸೀಪುರಕ್ಕೆ 35 ಸಾವಿರ ಟ್ರಾನ್ಸ್ ಫಾರ್ಮರ್‍ ಗಳನ್ನು ತರಿಸಿದ್ದೇವು. ಸರ್ಕಾರ ಬಿದ್ದ ತಕ್ಷಣ ಎಲ್ಲಾ ಟ್ರಾನ್ಸ್ ಫಾರ್ಮರ್‍ ಗಳನ್ನು ತುಂಬಿಕೊಂಡು ಹೋಗಿದ್ದರು. ಈಗ ರೈತರು ಯಾರೆಲ್ಲ ಟ್ರಾನ್ಸ್ ಫಾರ್ಮರ್ ಕೇಳಿದರೆ ಎಲ್ಲರಿಗೂ ಕೊಡಿ ಎಂದು ಹೇಳಿದರು.

    ತುಮಕೂರಿಗೆ 25 ಟಿಎಂಸಿ ನೀರು ಮೊದಲು ನೀಡಿದ್ದು ನಾವು ಈಗ ಹೊಸ ಎಂಪಿ ಬಂದಿದ್ದಾರೆ ಹೇಗೆ ನೀರು ಕೊಡಿಸುತ್ತಾರೆ ನೋಡೋಣ. ಇಡೀ ರಾಜ್ಯದಲ್ಲಿ ನನ್ನ ಮೇಲೆ ತನಿಖೆ ಮಾಡಿ ಎಂದು ಸರ್ಕಾರಕ್ಕೆ ಪತ್ರ ಬರೆದ ಏಕೈಕ ಪ್ರತಿನಿಧಿ ನಾನು, ಯಡಿಯೂರಪ್ಪ ಸರ್ಕಾರದಲ್ಲಿ ನನ್ನ ಮೇಲೆ ತನಿಖೆ ಮಾಡಿದರು. ನನ್ನ ಜೊತೆ ಕೆಲ ಒಳ್ಳೆಯ ಅಧಿಕಾರಿಗಳ ಮೇಲೆ ತನಿಖೆ ಮಾಡಿಸಿದರಿ ಎಂದು ಕಿಡಿಕಾರಿದರು.

    ಖಾಸಗಿಯವರ ಪೈಪೋಟಿ ಮೇಲೆ ನಾವು ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸುತ್ತಿದ್ದೇವೆ. ಈ ಬಾರಿ 1000 ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭ ಮಾಡಿದ್ದೇವೆ. ಕಳೆದ ಐದು ವರ್ಷದಲ್ಲಿ ಕೇಂದ್ರ ಸರ್ಕಾರ ಜನರಿಗೆ ಏನು ಮಾಡಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸರ್ಕಾರಕ್ಕೂ ಮುನ್ನ ಕೊಡಗು ಸಂತ್ರಸ್ತರಿಗೆ ಸೂರು ಕೊಟ್ಟ ರೋಟರಿ

    ಸರ್ಕಾರಕ್ಕೂ ಮುನ್ನ ಕೊಡಗು ಸಂತ್ರಸ್ತರಿಗೆ ಸೂರು ಕೊಟ್ಟ ರೋಟರಿ

    ಮಡಿಕೇರಿ: ಕಳೆದ ಬಾರಿ ಕೊಡಗಿನಲ್ಲಾದ ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಮನೆ ಕೊಡುವ ಮುನ್ನವೇ ರೋಟರಿ ಸಂಸ್ಥೆ ಸೂರು ನಿರ್ಮಿಸಿ ಕೊಟ್ಟಿದೆ.

    ಕಳೆದ ವರ್ಷ ಕೊಡಗಿನಲ್ಲಿ ಮಳೆರಾಯನ ಆರ್ಭಟಕ್ಕೆ ಇಡೀ ಜಿಲ್ಲೆಯೇ ತತ್ತರಿಸಿ ಹೋಗಿತ್ತು. ಜಿಲ್ಲೆಯಲ್ಲಿ ನಡೆದ ಪ್ರಾಕೃತಿಕ ವಿಕೋಪದಿಂದ ಸಾವಿರಾರು ಮಂದಿ ಮನೆ ಕಳೆದುಕೊಂಡಿದ್ದರು. ಹೀಗಾಗಿ ಕೊಡಗು ಸಂತ್ರಸ್ಥರಿಗೆ ರೋಟರಿ ಸಂಸ್ಥೆ ರಿ ಬಿಲ್ಡ್ ಕೊಡಗು ಯೋಜನೆಯಡಿ 25 ಮನೆಗಳ ನಿರ್ಮಾಣ ಮಾಡಿಕೊಟ್ಟಿದೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಇಗ್ಗೋಡ್ಲುವಿನಲ್ಲಿ ಪುನರ್ವಸತಿ ಕಲ್ಪಿಸಿಕೊಟ್ಟಿದೆ.

    ನಿರಾಶ್ರಿತರು ಮನೆ ಕಳೆದುಕೊಂಡು ವರ್ಷ ತುಂಬುತ್ತಿದ್ದರೂ, ರಾಜ್ಯ ಸರ್ಕಾರ ಅವರಿಗೆ ಸೂರು ನೀಡಿಲ್ಲ. ಆದರೆ ಸರ್ಕಾರಕ್ಕೆ ಸೆಡ್ಡು ಹೊಡೆದು 25 ಸಂತ್ರಸ್ತ ಕುಟುಂಬಗಳಿಗೆ ಸಿಂಗಲ್ ಬೆಡ್ ರೂಮ್ ಮನೆ ನಿರ್ಮಿಸಿಕೊಟ್ಟು ರೋಟರಿ ಸಂಸ್ಥೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

    ಸಂತ್ರಸ್ತರ ಜಾಗದಲ್ಲೇ ತಲಾ 5 ಲಕ್ಷ ವೆಚ್ಚದಲ್ಲಿ ಮನೆಗಳ ನಿರ್ಮಾಣ ಮಾಡಲಾಗಿದೆ. ಅಷ್ಟೇ ಅಲ್ಲದೆ ಮನೆ ಜೊತೆಗೆ ಮೂಲಭೂತ ಸೌಕರ್ಯ ವ್ಯವಸ್ಥೆಯನ್ನೂ ಕೂಡ ರೋಟರಿ ಸಂಸ್ಥೆಯ ಕಲ್ಪಸಿದ್ದು, ಈ ಕಾರ್ಯಕ್ಕೆ ಸಂತ್ರಸ್ತ ಕುಟುಂಬಗಳು ಫುಲ್ ಖುಷ್ ಆಗಿವೆ.

  • ಕೊಡಗು ಸಂತ್ರಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ: ಹರ್ಷಿಕಾ ಪೂಣಚ್ಚ

    ಕೊಡಗು ಸಂತ್ರಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ: ಹರ್ಷಿಕಾ ಪೂಣಚ್ಚ

    ಕೊಡಗು: ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.

    ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

    ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ ವಿತರಣೆ ಮಾಡುವುದಾಗಿ ಹೇಳಿತ್ತು. ಆದರೆ ಇದುವರೆಗೂ ಮನೆ ಹಂಚಿಕೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇದೇ ವೇಳೆ ಕೊಡಗಿಗೆ ಸುಸಜ್ಜಿತವಾದ ಒಂದು ಆಸ್ಪತ್ರೆ ಬೇಕು ಎಂದು ಕೊಡಗಿನ ಜನತೆ ಆರಂಭಿಸಿದ ಟ್ವಿಟ್ಟರ್ ಅಭಿಯಾನದ ಬಗ್ಗೆ ಮಾತನಾಡಿ, ಅಪಘಾತ ಅಥವಾ ತುರ್ತು ಸಂದರ್ಭವಿದ್ದರೆ ರೋಗಿಗಳನ್ನು ನಾವು 100-200 ಕಿ.ಮೀ. ಕರೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಇತ್ತೀಚೆಗೆ ನನ್ನ ತಂದೆ ಕೂಡ ಅನಾರೋಗ್ಯಕ್ಕೀಡಾಗಿದ್ದರು. ಆ ಸಮಯದಲ್ಲಿ ನಮ್ಮ ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ಇಲ್ಲದ ಕಾರಣ ಅನಿವಾರ್ಯವಾಗಿ ನಾವು ಬೆಂಗಳೂರಿಗೆ ಕರೆದೊಯ್ಯಬೇಕಾಯಿತು. ಕೊಡಗು ಜಿಲ್ಲೆಯಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾದರೆ ಜಿಲ್ಲೆಯ ಜನತೆಗೆ ತುಂಬಾ ಅನುಕೂಲವಾಗುತ್ತದೆ ಎಂದು ಹೇಳಿದರು.

    https://twitter.com/actressharshika/status/1139493122834964480

    ಶಿವಣ್ಣ ನಂತರ ಅಭಿಯಾನ ಬೆಂಬಲಿಸಿ ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದೇನೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ ಮುಂದಿನ ದಿನದಲ್ಲಿ ನಮ್ಮ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.

  • ರಾಯಚೂರಲ್ಲಿ ರೈತರಿಗೆ ಬರುತ್ತಲೇ ಇದೆ ಬ್ಯಾಂಕ್ ನೋಟಿಸ್ – ಕಂಗಾಲಾದ ಅನ್ನದಾತರು

    ರಾಯಚೂರಲ್ಲಿ ರೈತರಿಗೆ ಬರುತ್ತಲೇ ಇದೆ ಬ್ಯಾಂಕ್ ನೋಟಿಸ್ – ಕಂಗಾಲಾದ ಅನ್ನದಾತರು

    ರಾಯಚೂರು: ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಈಗಾಗಲೇ ಘೋಷಣೆ ಮಾಡಿದೆ. ಅಲ್ಲದೆ ರೈತರಿಗೆ ಸಾಲ ಮನ್ನಾ ಬಗ್ಗೆ ಪತ್ರಗಳನ್ನೂ ನೀಡಿದೆ. ಆದರೆ ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಮಾತ್ರ ಬೆಳೆ ಸಾಲವನ್ನು ಸೆಟ್ಲ್ ಮೆಂಟ್ ಮಾಡಿಕೊಳ್ಳುವಂತೆ ಎಸ್‍ಬಿಐ ಬ್ಯಾಂಕ್ ರೈತರಿಗೆ ನೋಟಿಸ್ ನೀಡಿದೆ.

    ಜಿಲ್ಲೆಯ ಜಾಗೀರ್ ತಾಲೂಕಿನ ವೆಂಕಟಾಪುರ ಗ್ರಾಮದ ರೈತರಾದ ಭೀಮಣ್ಣ, ದೇವೇಂದ್ರಪ್ಪ, ಕೆ. ಶರಣಪ್ಪ, ನಾರಾಯಣಪ್ಪ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ರೈತರಿಗೆ ಬೆಳೆ ಸಾಲವನ್ನು ಒಂದೇ ಬಾರಿ ಕಂತಿನಲ್ಲಿ ಕಟ್ಟುವಂತೆ ಎಸ್‍ಬಿಐ ಕಲ್ಮಲಾ ಶಾಖೆ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಒಂದೆಡೆ ಭೀಕರ ಬರಗಾಲಕ್ಕೆ ತತ್ತರಿಸಿರುವ ರೈತರು ಈಗ ಬ್ಯಾಂಕ್ ನೋಟಿಸ್ ನಿಂದ ಕಂಗಾಲಾಗಿದ್ದಾರೆ.

    ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿರುವುದಾಗಿ ಘೋಷಣೆ ಮಾಡಿದೆ. ಮುಖ್ಯಮಂತ್ರಿಯಿಂದ ರೈತರಿಗೆ ಸಾಂತ್ವಾನ ಪತ್ರಗಳು ಕೂಡ ಬಂದಿವೆ. ಆದರೆ ರಾಯಚೂರಿನಲ್ಲಿ ಒಂದೆಡೆ ಸರ್ಕಾರ ಸಾಲಮನ್ನಾ ಪತ್ರ ಕಳುಹಿಸಿದರೆ ಅದೇ ರೈತರಿಗೆ ಬ್ಯಾಂಕ್ ಸಾಲ ಕಟ್ಟಲು ನೋಟಿಸ್ ನೀಡಿದ್ದು ಅದಾಲತ್‍ಗೆ ಹಾಜರಾಗಿ ಒಂದೇ ಬಾರಿ ಉಳಿಕೆ ಎಲ್ಲಾ ಹಣವನ್ನು ಕಟ್ಟಬೇಕು ಎಂದು ಹೇಳಿದೆ. ಹೀಗಾಗಿ ಸರ್ಕಾರದಿಂದ ನಮ್ಮ ಸಾಲಮನ್ನಾ ಆಗಿದೆ ಎಂದುಕೊಂಡಿದ್ದ ರೈತ ಈಗ ಕಷ್ಟಪಡುವಂತೆ ಆಗಿದೆ.

    ಇದರ ಬಗ್ಗೆ ಬ್ಯಾಂಕ್‍ನವರನ್ನು ಕೇಳಿದರೆ “ಸಹಕಾರಿ ಬ್ಯಾಂಕ್‍ನಲ್ಲಿ ಸಾಲಮನ್ನಾ ಆದವರಿಗೆ ಮಾತ್ರ ನೋಟಿಸ್ ಕಳುಹಿಸಿದ್ದೇವೆ. ಒಂದು ವೇಳೆ ಬೇರೆ ರೈತರಿಗೆ ನೋಟಿಸ್ ಹೋಗಿದ್ದರೆ ಸಾಲಮನ್ನಾ ಆಗಿಯೂ ಉಳಿದ ಸಾಲವನ್ನು ಒಂದೇ ಬಾರಿ ಕಟ್ಟಲು ಅವಕಾಶ ನೀಡಿದ್ದೇವೆ. ಬಡ್ಡಿ ವಿನಾಯಿತಿ ನೀಡುತ್ತಿದ್ದೇವೆ” ಎಂದು ಹೇಳುತ್ತಾರೆ. ಆದರೆ ಮಳೆ ಬೆಳೆ ಇಲ್ಲದೆ ಸಂಕಷ್ಟಪಡುತ್ತಿರುವ ರೈತರು ಬ್ಯಾಂಕ್ ನೋಟಿಸ್ ವಿಚಲಿತರಾಗಿದ್ದು, ಯಾವುದೇ ಕಾರಣಕ್ಕೂ ಸಾಲ ಕಟ್ಟಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ.

    ಕಳೆದ ತಿಂಗಳ ಮೇ 18 ಹಾಗೂ 24 ರಂದು ನಡೆದ ಅದಾಲತ್‍ಗೆ ಭಾಗವಹಿಸುವಂತೆ ಬ್ಯಾಂಕ್ ನೋಟಿಸ್ ನೀಡಿತ್ತು. ಆದರೆ ಸರ್ಕಾರದಿಂದ ಸಾಲಮನ್ನಾ ಆಗುತ್ತೆ ಎಂಬ ಭರವಸೆಯಲ್ಲಿ ರೈತರು ಯಾರೂ ಸಾಲ ಕಟ್ಟುವ ಗೋಜಿಗೆ ಹೋಗಿರಲಿಲ್ಲ. ಈಗ ಮತ್ತೆ ನೊಟೀಸ್ ಬಂದಿರುವುದರಿಂದ ರೈತರು ಕಾಂಗಾಲಾಗಿದ್ದಾರೆ.

  • ಭಾನುವಾರ ಸಿಎಂ ಮನೆಗೆ ಮುತ್ತಿಗೆ ಹಾಕ್ತೀವಿ: ಶೋಭಾ ಕರಂದ್ಲಾಜೆ

    ಭಾನುವಾರ ಸಿಎಂ ಮನೆಗೆ ಮುತ್ತಿಗೆ ಹಾಕ್ತೀವಿ: ಶೋಭಾ ಕರಂದ್ಲಾಜೆ

    -ಐಎಎಂ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಯತ್ನ

    ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ಪ್ರಕರಣದಲ್ಲಿ ರಾಜ್ಯ ಸರ್ಕಾರ ಈ ವಿಚಾರವನ್ನು ಉಪಸಮಿತಿಗೆ ನೀಡಿರೋದನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ. ಭಾನುವಾರ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ. ರಾಜ್ಯ ಸರ್ಕಾರ ಜನಕ್ಕೆ ಮೋಸ ಮಾಡುವುದನ್ನು ಮುಂದುವರೆಸಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

    ಸಿಎಂ ಜಿಂದಾಲ್ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾರೆ. ಆದರೆ ಈ ಸಭೆಯಲ್ಲಿ ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರವನ್ನು ಜೀವಂತವಾಗಿಡುವ ಕೆಲಸ ನಡೆದಿದೆ. ಮುಖ್ಯಮಂತ್ರಿ, ಸಿದ್ದರಾಮಯ್ಯ, ಕೆ.ಜೆ ಜಾರ್ಜ್ ಮತ್ತು ಡಿ.ಕೆ ಶಿವಕುಮಾರ್ ಸೇರಿ ಸರ್ಕಾರದ ಜಮೀನನ್ನು ಹಾಗೂ ರೈತರ ಜಮೀನಿನ ಶುದ್ಧ ಕ್ರಯಪತ್ರ ಜಿಂದಾಲ್‍ಗೆ ನೀಡಲು ಮುಂದಾಗಿದ್ದನ್ನು ಬಿಜೆಪಿ ವಿರೋಧಿಸುತ್ತದೆ ಎಂದರು.

    ಇದೇ ವೇಳೆ ಐಎಂಎ ಪ್ರಕರಣದ ಬಗ್ಗೆ ಮಾತನಾಡಿ, ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್‍ಐಟಿಗೆ ನೀಡಿ ಮುಚ್ಚಿಹಾಕಲು ಮುಂದಾಗಿದೆ. ಪ್ರಮುಖ ಆರೋಪಿ ದೇಶದಲ್ಲೇ ಇಲ್ಲ ಎಂಬ ಮಾಹಿತಿ ಇದೆ. ಎಸ್‍ಐಟಿ ಹೊರದೇಶಕ್ಕೆ ಹೋಗಿ ತನಿಖೆ ಮಾಡುತ್ತಾ? ಈ ಕೇಸ್ ನ್ನು ಸಿಬಿಐಗೆ ಅಥವಾ ಇಡಿಗೆ ನೀಡಬೇಕು. ರಾಜ್ಯ ಸರ್ಕಾರ ಎಸ್‍ಐಟಿಗೆ ತನಿಖೆ ಮಾಡಲು ನೀಡಿ ಲಕ್ಷಾಂತರ ಮುಸ್ಲಿಂ ಜನರಿಗೆ ಅನ್ಯಾಯ ಮಾಡುತ್ತಿದೆ. ಜಮೀರ್ ಹಾಗೂ ರೋಷನ್ ಬೇಗ್ ಮಾತ್ರ ಈ ಪ್ರಕರಣದಲ್ಲಿ ಇಲ್ಲ ಇನ್ನೂ ಅನೇಕ ನಾಯಕರಿದ್ದಾರೆ ಎಂದು ಆರೋಪಿಸಿದರು.

    ನಾನು ಮುಸ್ಲಿಂ ಬಾಂಧವರಲ್ಲಿ ವಿನಂತಿ ಮಾಡುತ್ತೇನೆ. ನೀವು ಈ ಸರ್ಕಾರದ ವಿರುದ್ಧ ಹೋರಾಟ ಮಾಡಿ. ಈ ಪ್ರಕರಣವನ್ನು ಸಮಗ್ರ ತನಿಖೆ ಮಾಡಲು ಸಿಬಿಐಗೆ ನೀಡವಂತೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

  • ಮಂಡ್ಯ ಬಸ್ ದುರಂತಕ್ಕೆ ಕೇಂದ್ರದ ಪರಿಹಾರ- ಶಿವರಾಮೇಗೌಡರಿಗೆ ಕ್ರೆಡಿಟ್ ನೀಡಿದ ಸಚಿವ ಪುಟ್ಟರಾಜು

    ಮಂಡ್ಯ ಬಸ್ ದುರಂತಕ್ಕೆ ಕೇಂದ್ರದ ಪರಿಹಾರ- ಶಿವರಾಮೇಗೌಡರಿಗೆ ಕ್ರೆಡಿಟ್ ನೀಡಿದ ಸಚಿವ ಪುಟ್ಟರಾಜು

    ಕೋಲಾರ: ಮಂಡ್ಯ ಬಸ್ ದುರಂತಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಬಂದ ಕ್ರೆಡಿಟ್ ಮಾಜಿ ಸಂಸದ ಶಿವರಾಮೇಗೌಡರಿಗೆ ಸಲ್ಲುತ್ತದೆ ಎಂದು ಸಣ್ಣ ನೀರಾವರಿ ಸಚಿವ ಪುಟ್ಟರಾಜು ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಂಡ್ಯ ಬಸ್ ದುರಂತದ ಬಗ್ಗೆ ಕೇಂದ್ರಕ್ಕೆ ಪರಿಹಾರ ಹಣಕ್ಕಾಗಿ ಒತ್ತಾಯಿಸಿದ್ದು ನಾನು ಎಂದು ಟ್ವೀಟ್ ಮಾಡಿದ್ದ ಶಿವರಾಮೇಗೌಡರನ್ನು ಸಮರ್ಥಿಸಿಕೊಂಡು, ಆ ಕ್ರೆಡಿಟ್ ಅವರಿಗೆ ಸಲ್ಲಬೇಕು. ಈ ದುರಂತದ ಬಗ್ಗೆ ಕೇಂದ್ರ ಸರ್ಕಾರದಿಂದ ಪರಿಹಾರದ ಕುರಿತು ಅಂದಿನ ಜಿಲ್ಲಾಧಿಕಾರಿಗಳು ವಿಸ್ತೃತ ವರದಿ ನೀಡಿದ್ದರು. ಅವರ ವರದಿ ಆಧಾರದ ಮೇಲೆ ಫೆಬ್ರವರಿಯಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಅದರಂತೆ ಕಳೆದ ಫೆಬ್ರವರಿಯಲ್ಲಿಯೇ ಪರಿಹಾರ ಬಂದಿತ್ತು. ಆ ಸಮಯದಲ್ಲಿ ಲೋಕಸಭಾ ಚುನಾವಣೆಯಾದ ಕಾರಣ ಚೆಕ್ ವಿತರಣೆ ಮಾಡಲಾಗಲಿಲ್ಲ. ಈಗ ಆ ಪ್ರಕ್ರಿಯೆ ಡಿಸಿ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಈ ಕ್ರೆಡಿಟ್ ಆಗಿನ ಲೋಕಸಭಾ ಸದಸ್ಯರಿಗೆ ಸಲ್ಲುತ್ತದೆ. ಇನ್ನು ಹೆಚ್ಚಿನ ಪರಿಹಾರ ಕೊಡಿಸಲು ಆಗುವಂತಿದ್ದರೆ ಕೊಡಿಸಲಿ ಎಂದು ಸಂಸದೆ ಸುಮಲತಾರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

    ಇದೇ ವೇಳೆ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡಿ, ಬಹುತೇಕ ಸೋತವರು ಸರ್ಕಾರ ಉಳಿಯುವುದಿಲ್ಲ ಎಂದು ಹೇಳುತ್ತಿದ್ದಾರಷ್ಟೆ. ಆದರೆ ಐದು ವರ್ಷ ಸಿಎಂ ನೇತೃತ್ವದಲ್ಲಿ ನೂರಕ್ಕೆ ನೂರರಷ್ಟು ಮೈತ್ರಿ ಸರ್ಕಾರ ನಡೆಯುತ್ತದೆ. ಯಾರು ಯಾವ ಬ್ಲಾಕ್‍ಮೇಲ್‍ಗೂ ನಾವು ಮಣಿದಿಲ್ಲ. ಸರ್ಕಾರಕ್ಕೆ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಪಕ್ಷೇತರರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

    ಜೆಡಿಎಸ್‍ನಲ್ಲಿ ಮತ್ತಷ್ಟು ಜನರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಚಿಂತನೆ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ಖೋಟಾದ ಖಾಲಿ ಇರೋ ಸಚಿವ ಸ್ಥಾನ ಮುಸ್ಲಿಂ ಸಮುದಾಯದವರಿಗೆ ನೀಡಲಾಗುತ್ತದೆ. ಎಲ್ಲಾ ಸಮುದಾಯಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಮುಸ್ಲಿಂ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು.

  • ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

    ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

    ಮಂಡ್ಯ: 2018 ನವೆಂಬರ್ 24ರಂದು ಜಿಲ್ಲೆಯ ಪಾಂಡವಪುರದ ಕನಗನಮರಡಿ ಎಂಬ ಗ್ರಾಮದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 30 ಜನರು ಸಾವನ್ನಪಿದ್ದರು. ಈ ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂ. ಹಣ ಬಂದಿದೆ. ಆದರೆ ಈ ವಿಚಾರ ಈಗ ರಾಜಕೀಯ ತಿರುವು ಪಡೆದು ಚರ್ಚೆಗೆ ಕಾರಣವಾಗಿದೆ. ಇದೀಗ ಎಲ್ಲ ಗೊಂದಲಗಳಿಗೆ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.

    https://www.facebook.com/permalink.php?story_fbid=2502437746650334&id=100006523990844

    ಮಂಡ್ಯದಲ್ಲಿ ಈ ಹಣ ಕೇಂದ್ರ ಸರ್ಕಾರದಿಂದ ಬರಲು ನೂತನ ಸಂಸದೆ ಸುಮಲತಾ ಕಾರಣ ಎಂದು ಸುಮಲತಾ ಬೆಂಬಲಿಗರು ಮತ್ತು ಈ ನೆರವು ಬರಲು ಕಾರಣ ರಾಜ್ಯ ಸರ್ಕಾರದ ಸಿಎಂ ಕಾರಣ ಎಂದು ಜೆಡಿಎಸ್ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅವರು ನನಗೆ ಆ ಕ್ರೆಡಿಟ್ ಬೇಡ ಎಂದು ಹೇಳಿದ್ದಾರೆ.

    ಇಂದು ಜಿಲ್ಲೆಯ ಮಾಚಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪಿರೋದು ಮುಖ್ಯ. ಯಾರು ಕೊಟ್ಟಿದ್ದಾರೆ, ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ, ನೀವು ಕೊಟ್ಟಿಲ್ಲ ಅನ್ನೋದು ತುಂಬಾ ತಪ್ಪಾಗುತ್ತೆ. ಆ ರೀತಿ ತಪ್ಪು ಯಾರೂ ಮಾಡಬಾರದು ನಾನಂತೂ ಆ ತಪ್ಪು ಮಾಡೋದಿಲ್ಲ ಎಂದು ಹೇಳಿದ್ದಾರೆ.

    ಬಸ್ ದುರಂತವನ್ನು ಪ್ರಚಾರಕ್ಕೆ ಬಳಸೋದು ನನಗಿಷ್ಟ ಇಲ್ಲ. ಹಿಂದೆಯಿಂದಲೂ ನಾನು ಸಾಕಷ್ಟು ಬಾರಿ ಹೇಳಿದ್ದೀನಿ ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕು. ನಾವು ನಮ್ಮ ಸಾಧನೆಗಳ ಬಗ್ಗೆ ಮಾತಾಡಬಾರದು. ಯಾರೇ ಮಾಡಿರಲಿ ಅದನ್ನು ಹೇಳಿಕೊಳ್ಳಬಾರದು. ಈ ವಿಚಾರದಲ್ಲಿ ಯಾರು ಬೇಕಾದರೂ ಕ್ರೆಡಿಟ್ ತೆಗೆದುಕೊಳ್ಳಲಿ ನನಗೆ ಆ ಬಗ್ಗೆ ಬೇಜಾರ್ ಏನೂ ಇಲ್ಲ. ನನ್ನ ಕೆಲಸ ಈಗಷ್ಟೇ ಆರಂಭವಾಗಿದೆ. ಅದನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗುವ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಸಂಸತ್ ಅಧಿವೇಶನದ ಬಳಿಕ ಕ್ಷೇತ್ರ ಪ್ರವಾಸ ಮಾಡುತ್ತೇನೆ. ಬಜೆಟ್‍ನಲ್ಲಿ ಸಾಕಷ್ಟು ನಿರೀಕ್ಷೆ ಇದೆ, ಸಾಕಷ್ಟು ಕೊಡುಗೆ ನೀಡೋ ವಿಶ್ವಾಸ ಇದೆ. ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ಮಾಡುತ್ತೇನೆ. ಮಂಡ್ಯದ ಸಮಸ್ಯೆ ಬಗೆಹರಿಸಲು ಮತ್ತು ಮಂಡ್ಯ ರೈತರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡುತ್ತೇನೆ. ಮಂಡ್ಯದ ಶುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣ ರೈತರಿಗೆ ಒಳ್ಳೆಯದಾಗುವಂತ ನಿರ್ಧಾರ ತೆಗೆದುಕೊಂಡರೆ ಸಹಕಾರ ನೀಡುತ್ತೇನೆ. ಇದರ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡಿ ಮಾಹಿತಿ ಪಡೆದು ಯಾವುದು ಸೂಕ್ತ ಅನ್ನೋದನ್ನು ನಂತರ ತೀರ್ಮಾನ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.

    https://www.youtube.com/watch?v=XpZzL4RaCWk

    ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರದಿಂದ ಮಂಡ್ಯ ನಿರ್ಲಕ್ಷ್ಯ ವಿಚಾರದ ಬಗ್ಗೆ ಕೇಳಿದಾಗ, ಈ ವಿಚಾರದ ಬಗ್ಗೆ ಅವರನ್ನೇ ಕೇಳಬೇಕು. ಈಗಷ್ಟೇ ಚುನಾವಣೆ ಮುಗಿದಿದೆ. ಆ ವೇಳೆ ಸಾಕಷ್ಟು ಭರವಸೆ ಕೂಡ ಕೊಟ್ಟಿದ್ದರು. ಎಲ್ಲಾ ಭರವಸೆ ಈಡೇರಿಸೋ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಏನ್ ಮಾಡುತ್ತಾರೆ ಅನ್ನೋದನ್ನು ಕಾದು ನೋಡೋಣ ಎಂದರು. ಮಣಿಗೆರೆಯಲ್ಲಿ ಮೂವರ ದುರ್ಮರಣ ಪ್ರಕರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಯಾರಿಂದ ಪರಿಹಾರ ಕೊಡಿಸಬೇಕೋ ಅವರಿಂದ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.