Tag: State Government

  • ಈ ಬಾರಿ ಹಂಪಿ ಉತ್ಸವ ಕೈಬಿಡಲು ಸರ್ಕಾರ ನಿರ್ಧಾರ: ಡಿ.ಕೆ.ಶಿವಕುಮಾರ್

    ಈ ಬಾರಿ ಹಂಪಿ ಉತ್ಸವ ಕೈಬಿಡಲು ಸರ್ಕಾರ ನಿರ್ಧಾರ: ಡಿ.ಕೆ.ಶಿವಕುಮಾರ್

    ಬೆಂಗಳೂರು: ಹಂಪಿ ಉತ್ಸವವನ್ನು ಈ ವರ್ಷ ಆಚರಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದ ನೂರು ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಹಂಪಿ ಉತ್ಸವವನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ವರ್ಷ ವಿಜೃಂಭನೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದರು.

    ಇದೇ ವೇಳೆ ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಸಚಿವರು, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ಕೇಂದ್ರ ಜಲ ಸಂಪನ್ಮೂಲ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ. ಆದರೂ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ಅವರಿಗೆ ಯಾವುದೇ ಸಮಸ್ಯೆಯಾಗದಂತೆ ಯೋಜನೆ ಜಾರಿಗೆ ತರುತ್ತೇವೆ. ಗಡಿ ಭಾಗದಲ್ಲಿ ಯೋಜನೆ ರೂಪಿಸಿದ್ದು, ಈ ನೀರನ್ನು ಕೃಷಿಗೆ ಬಳಕೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನು ಓದಿ: ಮೇಕೆದಾಟು ಡ್ಯಾಂ – ಕರ್ನಾಟಕಕ್ಕೆ ಆರಂಭಿಕ ಗೆಲುವು, ತಮಿಳುನಾಡಿಗೆ ಮುಖಭಂಗ

    ಕಾವೇರಿ ಜಲ ವಿವಾದದಲ್ಲಿ ಈಗಾಗಲೇ ನ್ಯಾಯಾಲಯದ ಆದೇಶ ನೀಡಿದಂತೆ ತಮಿಳುನಾಡಿಗೆ ನೀರು ಬಿಡುತ್ತೇವೆ. ಇದರಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ. ತಮಿಳುನಾಡು ಬಯಸಿದರೆ ಮಾತುಕತೆಗೆ ನಾವು ಸಿದ್ಧರಿದ್ದೇವೆ. ಸಿಎಂ ಕುಮಾರಸ್ವಾಮಿ ಅವರೊಂದಿಗೆ ಡಿಸೆಂಬರ್ 6ರಂದು ಸಭೆ ನಡೆಸಿ, ಚರ್ಚಿಸಲಾಗುತ್ತದೆ. ಇದಾದ ಬಳಿಕ ಮುಂದಿನ ನಿರ್ಧಾರಕ್ಕೆ ಕೈ ಹಾಕಲಿದ್ದೇವೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಕಲ ಸರ್ಕಾರಿ ಗೌರವಗಳೊಂದಿಗೆ ಜಾಫರ್ ಶರೀಫ್‍ಗೆ ವಿದಾಯ

    ಸಕಲ ಸರ್ಕಾರಿ ಗೌರವಗಳೊಂದಿಗೆ ಜಾಫರ್ ಶರೀಫ್‍ಗೆ ವಿದಾಯ

    ಬೆಂಗಳೂರು: ಕೇಂದ್ರ ಮಾಜಿ ಸಚಿವ ಜಾಫರ್ ಶರೀಫ್‍ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಅಂತಿಮ ನಮನ ಸಲ್ಲಿಸಲಾಯಿತ್ತು.

    ಇಂದು ಬೆಳಗ್ಗೆ ಜಾಫರ್ ಶರೀಫ್ ನಿವಾಸದಿಂದ ಹೊರಟ ಅವರ ಪಾರ್ಥಿಕ ಶರೀರವನ್ನು ಕೆಪಿಸಿಸಿ ಕಚೇರಿಯಲ್ಲಿ ಕೆಲಕಾಲ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡುರಾವ್ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಅಜಾದ್ ಸೇರಿದಂತೆ ಮುಸ್ಲಿಂ ಸಮುದಾಯದ ಹಲವು ಮುಖಂಡರು ಅಂತಿಮ ದರ್ಶನ ಪಡೆದರು.

    ಬಳಿಕ ಮೆರವಣಿಗೆಯಲ್ಲಿ ಕೊಂಡ್ಯೊಯುದು ಸಕಲ ಸರ್ಕಾರಿ ಗೌರವನ್ನು ಸಲ್ಲಿಸಲಾಯಿತು. ನಗರದ ನಂದಿದುರ್ಗ ರಸ್ತೆಯಲ್ಲಿರುವ ಜುಮ್ಮಾ ಮಸೀದಿಯಲ್ಲಿ ಮುಸ್ಲಿಂ ಸಾಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ನಂತರ ಮಸೀದಿಯಿಂದ ಮೆರವಣಿಗೆ ಮೂಲಕ ಮಿಲ್ಲರ್ಸ್ ರಸ್ತೆಯಲ್ಲಿರುವ ಖಬರಸ್ತಾನ ಸ್ಮಶಾನಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತ್ತು. ಅಂತ್ಯಕ್ರಿಯೆಯಲ್ಲಿ ಶಾಸಕ ಹ್ಯಾರೀಸ್, ರೋಷನ್‍ಬೇಗ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಜಾಫರ್ ಷರೀಫ್ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ ಎಚ್‍ಡಿಕೆ ಭೇಟಿ

    ಮಂಡ್ಯ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ ಎಚ್‍ಡಿಕೆ ಭೇಟಿ

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.

    ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಘಟನೆ ಬಗ್ಗೆ ಮಾಹಿತಿ ಪಡೆದು ಇಂದಿನ ಅವರ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಗೊಳಿಸಿ ಬಸ್ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಅವರು ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿ ಮೃತ ದೇಹಗಳನ್ನು ನೋಡುತ್ತಿದ್ದಂತೆ ಸಿಎಂ ಕಣ್ಣೀರು ಹಾಕಿದ್ದು, ನಿಮ್ಮೊಂದಿಗೆ ನಾನಿದ್ದೇನೆ, ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಡಿ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದರು.

    ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ನಾಯಕರು ಸಂತಾಪ ಸೂಚಿಸಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಶಾಸಕ ರವೀಂದ್ರ ಶ್ರೀಕಂಠಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟಸ್ವಾಮಿ ಸೇರಿದಂತೆ ಹಲವು ನಾಯಕರು ಆಗಮಿಸಿ ನೊಂದ ಕುಟುಂಬಗಳಿಗೆ ಸಾಂತ್ವನ ಹೇಳುವ ಕಾರ್ಯ ಮಾಡಿದರು. ಅಲ್ಲದೇ ಮೃತ ದೇಹಗಳನ್ನ ಗುರುತಿಸುವ ಕಾರ್ಯ ಸೇರಿದಂತೆ, ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸುವ ಬಗ್ಗೆ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಿಎಂ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ – ಸಂಚಲನ ಮೂಡಿಸಿದೆ ಡಿಸಿಎಂ ಹೇಳಿಕೆ

    ಸಿಎಂ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ – ಸಂಚಲನ ಮೂಡಿಸಿದೆ ಡಿಸಿಎಂ ಹೇಳಿಕೆ

    ಬೆಳಗಾವಿ: ಪಕ್ಷದ ಹೈಕಮಾಂಡ್ ಇದುವರೆಗೂ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಿದ್ದು, ಮುಂದೇ ಸಿಎಂ ಸ್ಥಾನ ಕೊಟ್ಟರೆ ಅದನ್ನು ನಿಭಾಯಿಸಲು ಸಿದ್ಧ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಶಕ್ತಿ ಮೀರಿ ನಿರ್ವಹಣೆ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕಾರ್ಯನಿರ್ವಹಿಸಿದ್ದು, ಎರಡು ಚುನಾವಣೆಗಳಲ್ಲಿ ನಾನು ಪಕ್ಷ ಕಟ್ಟುವ ಕಾರ್ಯ ಮಾಡಿದ್ದೇನೆ. ಈ ಬಾರಿ ನಮ್ಮ ಮೈತ್ರಿ ಸರ್ಕಾರ ರಚನೆ ಆಗಿದ್ದು, ನನಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಆದ್ದರಿಂದ ನಾನು ಈ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ಜವಾಬ್ದಾರಿ ನೀಡಿಲ್ಲವೆಂದರೂ ನಾನು ಸುಮ್ಮನೆ ಇರುತ್ತೇನೆ. ಕೆಲಸ ನೀಡುವುದು ಬಿಡುವುದು ಅವರ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದರು.

    ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸುಗಮ ಆಗಿರುವ ವೇಳೆ ಡಿಸಿಎಂ ಪರಮೇಶ್ವರ್ ಅವರ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮುಂದಿನ ದಿನಗಳಲ್ಲಿ ಮೈತ್ರಿ ಸರ್ಕಾರದಲ್ಲಿ ಬದಲಾವಣೆ ಉಂಟಾದರೆ ಸಿಎಂ ಸ್ಥಾನ ನಮಗೇ ನೀಡಲಿ ಎಂ ಹಿನ್ನೆಲೆಯಲ್ಲಿ ಈ ರೀತಿ ಮಾತನಾಡಿದ್ದಾರೆ ಎಂಬ ಮಾತು ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಿಬಿಐಗೆ ಶಾಕ್ ನೀಡಿದ ಚಂದ್ರಬಾಬು ನಾಯ್ಡು

    ಸಿಬಿಐಗೆ ಶಾಕ್ ನೀಡಿದ ಚಂದ್ರಬಾಬು ನಾಯ್ಡು

    ಹೈದರಾಬಾದ್: ಕೇಂದ್ರ ಸರ್ಕಾರವೂ ರಾಜ್ಯಗಳಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಒಪ್ಪಿಗೆಯ ಅನುಮತಿಯನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹಿಂತೆಗೆದುಕೊಂಡಿದ್ದು, ಈ ಮೂಲಕ ಕೇಂದ್ರ ಸರ್ಕಾರ ರಾಜ್ಯದಲ್ಲಿ ನಡೆಸುತ್ತಿದ್ದ ತನಿಖೆಗಳಿಗೆ ಬ್ರೇಕ್ ಹಾಕಿದ್ದಾರೆ.

    ದೆಹಲಿ ವಿಶೇಷ ಪೊಲೀಸ್ ಸಂಸ್ಥೆಯ ಕಾಯಿದೆ (1946) ಅಡಿಯಲ್ಲಿ ಬರುವ ಸೆಕ್ಷನ್ 6ರ ಅನುಸಾರ ರೂಪಿಸಲಾಗಿರುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಸಿಬಿಐ ಗೆ ನೀಡಿದ್ದ ಅಧಿಕಾರವನ್ನು ಹಿಂಪಡೆಯಲಾಗಿದ್ದು, ಆಂಧ್ರ ಪ್ರದೇಶದಲ್ಲಿ ಸಿಬಿಐ ಅಧಿಕಾರಿಗಳು ಇನ್ನು ಮುಂದೆ ಯಾವುದೇ ರೀತಿಯ ತನಿಖೆ, ದಾಳಿ ನಡೆಸಿದರೂ ಅದಕ್ಕೆ ರಾಜ್ಯ ಸರ್ಕಾರದ ಅನುಮತಿ ಪಡೆಯವುದು ಕಡ್ಡಾಯವಾಗಿದೆ. ಇದರ ಪರಿಣಾಮ ಆಂಧ್ರಪ್ರದೇಶದಲ್ಲಿ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

    ಆಂಧ್ರಪ್ರದೇಶದ ಮುಖ್ಯಮಂತ್ರಿಯಾದ ಚಂದ್ರಬಾಬು ನಾಯ್ಡು ಅವರು ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ), ಅದಾಯ ತೆರಿಗೆ ಇಲಾಖೆ (ಐಟಿ) ತನಿಖಾಧಿಕಾರಿಗಳು ತಮ್ಮ ಅಧಿಕಾರವನ್ನ ದುರುಪಯೋಗ ಪಡಿಸಿಕೊಂಡು, ತಮ್ಮ ರಾಜಕೀಯ ವೈರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಸಿಬಿಐ ಅಧೀನದಲ್ಲಿರುವ ಎಲ್ಲಾ ಪ್ರಕರಣಗಳ ತನಿಖೆಯನನ್ನು ನಡೆಸಲು ಸಿಬಿಐ ಬದಲಾಗಿ ಎಸಿಬಿ (ಭ್ರಷ್ಟಚಾರ ನಿಗ್ರಹ ದಳ)ಗೆ ಜವಾಬ್ದಾರಿಯನ್ನ ವರ್ಗಾವಣೆ ಮಾಡಲಾಗಿದೆ ಎಂದು ಆಂಧ್ರ ಪ್ರದೇಶ ಸರ್ಕಾರ ಅಧಿಸೂಚನೆ ಹೊರಡಿಸಿದೆ.

    ಇದೇ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ನಡೆಸುವ ದಾಳಿಗಳಿಗೆ ರಾಜ್ಯ ಸರ್ಕಾರವೂ ಯಾವುದೇ ಪೊಲೀಸ್ ಭದ್ರತೆಯನ್ನು ಒದಗಿಸುವುದಿಲ್ಲ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರಾಜಕೀಯ ಸೇಡಿಗೆ ಪೊಲೀಸ್ ವ್ಯವಸ್ಥೆ ದುರುಪಯೋಗ – ರೆಡ್ಡಿ ಪರ ಬಿಎಸ್‍ವೈ ಬ್ಯಾಟಿಂಗ್

    ರಾಜಕೀಯ ಸೇಡಿಗೆ ಪೊಲೀಸ್ ವ್ಯವಸ್ಥೆ ದುರುಪಯೋಗ – ರೆಡ್ಡಿ ಪರ ಬಿಎಸ್‍ವೈ ಬ್ಯಾಟಿಂಗ್

    ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜಕೀಯ ಸೇಡು ತೀರಿಸಿಕೊಳ್ಳಲು, ಎಸಿಬಿ ಮತ್ತು ಇತರ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪ ಮಾಡಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಎಸ್‍ವೈ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಯಾರು ಯಾರ ಮಾತನ್ನೂ ಕೇಳದ ಪರಿಸ್ಥಿತಿಯಲ್ಲಿ ಆಡಳಿತ ಯಂತ್ರ ದುರುಪಯೋಗವಾಗುತ್ತಿದೆ. ರಾಜ್ಯದಲ್ಲಿ ಅದರಲ್ಲೂ ಬೆಂಗಳೂರು ನಗರದಲ್ಲಿ ಹಾಡಹಗಲೇ ಸಮಾಜಘಾತುಕ ಶಕ್ತಿಗಳು ಕತ್ತಿ ಝಳಪಿಸುತ್ತಿವೆ. ಪೊಲೀಸ್ ಇಲಾಖೆಯಲ್ಲಿ ರಾಜಕೀಯ ಶಕ್ತಿಗಳ ಹಸ್ತಕ್ಷೇಪವಾಗುತ್ತಿದ್ದು, ಇದಕ್ಕೆ ಜನಾರ್ದನ ರೆಡ್ಡಿಯವರನ್ನು ಬಂಧಿಸಿ ಬಿಡುಗಡೆಗೊಳಿಸಿರುವುದು ತಾಜಾ ಉದಾಹರಣೆಯಾಗಿದೆ. ರಾಜಕೀಯ ಸೇಡು ತೀರಿಸಿಕೊಳ್ಳಲು, ಎಸಿಬಿ ಮತ್ತು ಇತರ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ. ಇದು ಅಧಿಕಾರ ದುರುಪಯೋಗ ಅಲ್ಲದೇ ಮತ್ತೇನು ಎಂದು ಪ್ರಶ್ನೆ ಮಾಡಿದ್ದಾರೆ.

    ನಗರದ ವಿಜಯನಗರದಲ್ಲಿ ಸಿಗರೇಟ್ ವಿಚಾರದಲ್ಲಿ ನಡೆದ ಕೊಲೆಯನ್ನು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖ ಮಾಡಿರುವ ಬಿಎಸ್ ಯಡಿಯೂರಪ್ಪ ಅವರು, ಘಟನೆಯ ವೀಡಿಯೋ ವೈರಲ್ ಆಗಿದ್ದು ಅಮಾನವೀಯ. ಇದು ಬೆಂಗಳೂರಿನಲ್ಲಿ ಇರುವ ಪೊಲೀಸ್ ಕಾನೂನು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಒಂದು ತಿಂಗಳಿನ ಹಿಂದೆ ಮಂಡ್ಯದಲ್ಲಿ ಸಾಲದ ಹಣ ಮರುಪಾವತಿಸಲಿಲ್ಲ ಎಂದು ಹೆಣ್ಣು ಮಗಳನ್ನು ಎಳೆದುಕೊಂಡು ಜೀಪ್‍ನಲ್ಲಿ ತೆಗೆದುಕೊಂಡು ಹೋದ ಪ್ರಕರಣ ಹಾಗೇ ಮುಚ್ಚಿಹೋಗಿದ್ದು, ಅಭಿವೃದ್ಧಿ ಕಾರ್ಯವಲ್ಲದೇ ಸರ್ಕಾರದ ಎಲ್ಲಾ ಅಂಗಗಳೂ ಮುರಿದು ಬಿದ್ದಿವೆ ಎಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟರೆ ಯಾವುದೇ ಉದ್ದಿಮೆದಾರ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವುದಿಲ್ಲ. ಈ ಎಲ್ಲ ಅಪರಾಧ ಘಟನೆಗಳು ರಾಜ್ಯದ ಅಭಿವೃದ್ಧಿ ಮತ್ತು ಹೂಡಿಕೆ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದೆಲ್ಲಕ್ಕೂ ಪೊಲೀಸ್ ವ್ಯವಸ್ಥೆಯಲ್ಲಿ ರಾಜಕೀಯ ಶಕ್ತಿಗಳ ಹಸ್ತಕ್ಷೇಪವೇ ಕಾರಣವಾಗಿದೆ ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮನಸೋ ಇಚ್ಛೆ ನಾಡಗೀತೆ ಹಾಡುವುದಕ್ಕೆ ಕಡಿವಾಣ – ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕಸಾಪ

    ಮನಸೋ ಇಚ್ಛೆ ನಾಡಗೀತೆ ಹಾಡುವುದಕ್ಕೆ ಕಡಿವಾಣ – ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕಸಾಪ

    ಬೆಂಗಳೂರು: ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಮನಬಂದಂತೆ ನಾಡಗೀತೆ ಹಾಡುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸಾಹಿತ್ಯ ಪರಿಷತ್ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

    ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಸಪಾ ಅಧ್ಯಕ್ಷರಾದ ಮನು ಬಳಿಗಾರ್, ಎರಡೂವರೆ ನಿಮಿಷಗಳ ಕಾಲ ನಾಡಗೀತೆ ಹಾಡಲು ಸಮಯ ನಿಗದಿ ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇವೆ. ಈಗಾಗಲೇ 8 ನಿಮಿಷ, 9 ನಿಮಿಷ ನಾಡಗೀತೆ ಹಾಡುತ್ತಿದ್ದಾರೆ. ಸಾಹಿತಿ ನಿಸ್ಸಾರ್ ಅಹಮದ್ ಸೇರಿದಂತೆ ಹಲವು ಹಿರಿಯ ಸಾಹಿತಿಗಳು ನಾಡಗೀತೆಯನ್ನು 2.30 ನಿಮಿಷ ಹಾಡಬೇಕು ಒತ್ತಾಯ ಮಾಡಿದ್ದರು. ಈ ಕರಿತು ಕನ್ನಡ ಸಾಹಿತ್ಯ ಪರಿಷತ್ತಿಗೆ ಮನವಿ ಮಾಡಿ ಪತ್ರ ಕೂಡ ಬರೆದಿದ್ದರು. ಅದ್ದರಿಂದ ಕಸಪಾ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದೆ ಎಂದರು.

    ಅಂತರರಾಷ್ಟ್ರೀಯ ಖ್ಯಾತ ಹಿನ್ನೆಲೆ ಗಾಯಕರು ಕೂಡ ಎರಡೂವರೆ ನಿಮಿಷ ಕಾಲ ನಾಡಗೀತೆಯನ್ನು ಹಾಡಿದ್ದಾರೆ. ಹಾಗಾಗಿ ಈ ಸಮಯವನ್ನು ನಿಗದಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದು, ಸರ್ಕಾರ ಇದನ್ನು ಜಾರಿಗೆ ತರಬೇಕು ಎಂದು ಹೇಳಿದರು.

    ಕಸಾಪ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹಲವು ಸಾಹಿತಿಗಳು, ಕನ್ನಡಪರ ಚಿಂತಕರು, ಹೋರಾಟಗಾರರು ಮತ್ತು ಹಾಡುಗಾರರು ಭಾಗಿಯಾಗಿದ್ದರು. ಈ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು. ಸುದ್ದಿಗೋಷ್ಠಿಗೂ ಮುನ್ನ ನಡೆದ ಸಭೆಯಲ್ಲಿ ಸಾಹಿತಿ ಚಂದ್ರಶೇಖರ್ ಕಂಬಾರ್, ಸಿದ್ದಲಿಂಗಯ್ಯ, ಕಮಲಾ ಹಂಪನಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹಾಲಿನ ದರ ಏರಿಕೆ ಆಲೋಚನೆ ಸರ್ಕಾರದ ಮುಂದಿಲ್ಲ – ಪಶುಸಂಗೋಪನ ಸಚಿವರ ಸ್ಪಷ್ಟನೆ

    ಹಾಲಿನ ದರ ಏರಿಕೆ ಆಲೋಚನೆ ಸರ್ಕಾರದ ಮುಂದಿಲ್ಲ – ಪಶುಸಂಗೋಪನ ಸಚಿವರ ಸ್ಪಷ್ಟನೆ

    ಬೆಂಗಳೂರು: ರಾಜ್ಯ ಸರ್ಕಾರವು ಹಾಲಿನ ದರ ಹೆಚ್ಚಳ ಮಾಡುವ ಯಾವುದೇ ಚಿಂತನೆಯನ್ನು ನಡೆಸಿಲ್ಲ ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಸರ್ಕಾರ ನೀಡುತ್ತಿರುವ 5 ರೂ. ಸಹಾಯ ಧನ ಸರಿಯಾದ ಸಮಯಕ್ಕೆ ತಲುಪುತ್ತಿದೆ. ಹಾಲಿನ ದರ ಏರಿಕೆ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ. ದರ ಹೆಚ್ಚಳ ಹಾಗೂ ಕಡಿಮೆ ಮಾಡುವ ಕುರಿತು ಯಾವುದೇ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಮೈಕ್ರೋ ಚಿಪ್: ಪಶು ಭಾಗ್ಯ ಯೋಜನೆ ಅಡಿ ನೀಡುವ ಹಸುಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡಲಾಗುತ್ತಿದೆ. ಹಾಲು ಕರೆಯುವ ಹಸುಗಳಿಗೆ ಮಾತ್ರ ಚಿಪ್ ಆಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಚಿಪ್ ಮೂಲಕ ಹಸುವಿನ ಸಂಪೂರ್ಣ ಮಾಹಿತಿ ಟ್ರಾಕ್ ಮಾಡಲಾಗುತ್ತಿದೆ. ಇದರಿಂದ ಹಸುವಿನ ಆರೋಗ್ಯ ಬಗ್ಗೆ ಮಾಹಿತಿ ಪಡೆಯಲು ಸಹಾಯಕವಾಗುತ್ತದೆ. ಚಿಪ್ ಅಳವಡಿಸುವ ಕಾರ್ಯ ಶೇ.60 ರಷ್ಟು ಕಾರ್ಯ ಪೂರ್ಣಗೊಂಡಿದ್ದು, ಇದುವರೆಗೂ 1.8 ಲಕ್ಷ ಹಸುಗಳಿಗೆ ಚಿಪ್ ಆಳವಡಿಕೆ ಮಾಡಲಾಗಿದೆ. ಒಂದು ಚಿಪ್ಪಿನ ಬೆಲೆ 6 ರೂ. 20 ಪೈಸೆ ಎಂದು ವಿವರಿಸಿದರು.

    ರೇವಣ್ಣ ಹಸ್ತಕ್ಷೇಪವಿಲ್ಲ: ಕೆಎಂಎಫ್ ಹೆಚ್ಚಿನ ಅಭಿವೃದ್ಧಿ ಆಗುತ್ತಿಲ್ಲ ಎಂವ ಸಚಿವ ರೇವಣ್ಣ ಹೇಳಿಕೆ ವಿಚಾರವಾಗಿ ಪ್ರಕ್ರಿಯೆ ನೀಡಿದ ಅವರು, ಲೋಕೋಪಯೋಗಿ ಇಲಾಖೆ ಸಚಿವ ರೇವಣ್ಣ ಅವರು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಆದರೆ ಕೆಎಂಎಫ್ ಅಭಿವೃದ್ಧಿಗೆ ರೇವಣ್ಣ ಅವರ ಕೊಡುಗೆ ಅಪಾರ. ಯಾರೇ ಆದ್ರು ಕಟ್ಟಿದ ಸಂಸ್ಥೆಗೆ ಸಮಸ್ಯೆ ಮಾಡಿದರೆ ಎಲ್ಲರಿಗೂ ನೋವಾಗುತ್ತೆ. ಆ ವೇಳೆ ಹೇಳಿಕೆ ನೀಡಿರಬಹುದು ಅಷ್ಟೇ ಎಂದರು.

    ಇದೇ ವೇಳೆ ಟಿಪ್ಪು ಕಾರ್ಯಕ್ರಮಕ್ಕೆ ಆಗಮಿಸದ ಕುರಿತು ಸ್ಪಷ್ಟನೆ ನೀಡಿದ ನಾಡಗೌಡ ಅವರು, ಟಿಪ್ಪು ಜಯಂತಿಗೆ ಕಾರ್ಯಕ್ರಮಕ್ಕೆ ಆಗಮಿಸಲು ನಾನು ಟಿಕೆಟ್ ಬುಕ್ ಮಾಡಿದ್ದೆ, ಆದರೆ ಸಚಿವ ರೇವಣ್ಣ ನಾನು ಹೋಗುತ್ತೆನೆ ಎಂದು ಹೇಳಿದ್ದರು. ಅದ್ದರಿಂದ ನಾನು ಆಗಮಿಸಲಿಲ್ಲ ಎಂದರು.

    ರಾಜ್ಯದಿಂದ ತೆಲಂಗಾಣ ಹಾಗೂ ಆಂಧ್ರಪ್ರದೇಶಕ್ಕೆ ಸರಬರಾಜು ಆಗುತ್ತಿದ್ದ ಮೇವು ತಡೆಯಲು ಆದೇಶ ಮಾಡಲಾಗಿದೆ. ಬೇಸಿಗೆ ವೇಳೆ ಮೇವಿನ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ದೊರೆಯುವ ಮೇವನ್ನು ವೈಜ್ಞಾನಿಕವಾಗಿ ಸಂರಕ್ಷಣೆ ಮಾಡಲಾಗುವುದು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟಿಪ್ಪು ಜಯಂತಿಗೆ ಗೈರಾಗಿದ್ದು ಸಮುದಾಯಕ್ಕೆ ಮಾಡಿದ ಅಪಮಾನ : ತನ್ವೀರ್ ಸೇಠ್

    ಟಿಪ್ಪು ಜಯಂತಿಗೆ ಗೈರಾಗಿದ್ದು ಸಮುದಾಯಕ್ಕೆ ಮಾಡಿದ ಅಪಮಾನ : ತನ್ವೀರ್ ಸೇಠ್

    ಮೈಸೂರು: ಸರ್ಕಾರ ಆಚರಿಸುವ ಜಯಂತಿಗಳಿಗೆ ತೋರಿರುವ ಉತ್ಸಾಹ ಟಿಪ್ಪು ಜಯಂತಿಯಲ್ಲೂ ತೋರಬೇಕು ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅನಾರೋಗ್ಯದ ಕಾರಣ ನೀಡಿ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಗೈರಾಗಿದ್ದಾರೆ. ಉಪಮುಖ್ಯ ಮಂತ್ರಿಗಳು ವಿದೇಶ ಪ್ರವಾಸದಲ್ಲಿದ್ದಾರೆ. ಬಿಗಿ ಪೊಲೀಸ್ ಭದ್ರತೆಯ ನಡುವೆ ಜಯಂತಿ ಆಚರಣೆ ಮಾಡಲಾಗುತ್ತಿದೆ. ಇದು ನಮ್ಮ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.

    ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಟಿಪ್ಪು ಜಯಂತಿಯ ವಿಚಾರವಾಗಿ ಇಷ್ಟೊಂದು ನಿರ್ಬಂಧ ವಿಧಿಸುವ ಅಗತ್ಯ ಇರಲಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಮ್ಮ ಸಮುದಾಯದ ಬಗ್ಗೆ ಗೌರವ ಇದ್ದಿದ್ದರೆ ಟಿಪ್ಪು ಜಯಂತಿಯಲ್ಲಿ ಭಾಗವಹಿಸಬೇಕಿತ್ತು. ಸರ್ಕಾರಕ್ಕೆ ನಾನು ಸವಾಲು ಹಾಕುತ್ತೇನೆ. ಸರ್ಕಾರ ಟಿಪ್ಪು ಜಯಂತಿ ಮಾಡದೇ ಇದ್ದರೆ ನಮಗೆ ಮಾಡಲು ಯೋಗ್ಯತೆ ಇಲ್ಲ ಎಂದು ಅಲ್ಲ. ಸರ್ಕಾರ ಮಾಡದೇ ಇದ್ದರೂ ನಾವು ಮಾಡುತ್ತೇವೆ ಎಂದರು. ಇದೇ ವೇಳೆ ಕೇವಲ ರಾಜಕೀಯ ಕಾರಣಕ್ಕೆ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಮಹಾತ್ಮ ಗಾಂಧಿಯ ಪ್ರಾಣವನ್ನೇ ತೆಗೆದ ಜನ ರಾಷ್ಟ್ರ ಪ್ರೇಮದ ವಿಚಾರ ಮಾತನಾಡುತ್ತಾರೆ. ಟಿಪ್ಪು ಕುರಿತ ಚರ್ಚೆಗೆ ನಾನು ಸಿದ್ಧನಿದ್ದೇನೆ, ಯಾರು ಬೇಕಾದರೂ ಚರ್ಚೆಗೆ ಬರಲಿ ಎಂದು ಸವಾಲು ಎಸೆದರು.

    ಟಿಪ್ಪು ಜಯಂತಿಯನ್ನು ಪೊಲೀಸ್ ಭದ್ರತೆಯಲ್ಲಿ ಮಾಡುತ್ತಿರುವುದು ನಮಗೆ ಅಪಮಾನ ಮಾಡಿದಂತೆ ಆಗಿದೆ. ಮೈಸೂರು ನಗರದಲ್ಲೂ ಕೂಡ ಇಂತಹದ್ದೇ ಘಟನೆ ನಡೆದಿದೆ. ಪೊಲೀಸರನ್ನು ನೇಮಕ ಮಾಡಿದರೆ ಎಲ್ಲವೂ ಸರಿಯಾಗುತ್ತದೆ ಎಂಬ ಅರ್ಥವಲ್ಲ. ನಮ್ಮ ಜನಾಂಗಕ್ಕೆ ಟಿಪ್ಪು ಜಯಂತಿ ಆಚರಣೆ ಮಾಡಿಕೊಳ್ಳುವ ಸಾಮಥ್ರ್ಯ ಇದೆ. ಆದರೆ ಟಿಪ್ಪು ಜಯಂತಿ ಮುಕ್ತ ವಾತಾವರಣದಲ್ಲಿ ಆಚರಣೆ ಮಾಡಬೇಕಿದೆ. ನಾವೇನೂ ಟಿಪ್ಪು ಜಯಂತಿ ಮಾಡಿ ಎಂದು ಅರ್ಜಿ ಹಾಕಿಲ್ಲ. ಆದರೆ ಸರ್ಕಾರಿ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರತಿನಿಧಿಗಳು ಹಾಜರಿ ಆಗಬೇಕಿತ್ತು. ಸಿಎಂ ಅವರು ಅನಾರೋಗ್ಯದ ಕಾರಣ ಗೈರಾದ ಸಂದರ್ಭದಲ್ಲಿ ಅವರ ಸಂದೇಶವನ್ನಾದರು ನೀಡಬೇಕಿತ್ತು. ಈ ಕುರಿತು ಸಿಎಂ ಹಾಗೂ ಡಿಸಿಎಂ ಅವರಿಗೆ ಪತ್ರ ಬರೆದು ಉತ್ತರ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟಿಪ್ಪು ವೀರ, ಶೂರ, ಜಾತ್ಯಾತೀತ, ಸಹೃದಯಿ – ಹಾಡಿ ಹೊಗಳಿದ ಸಚಿವೆ ಜಯಮಾಲಾ

    ಟಿಪ್ಪು ವೀರ, ಶೂರ, ಜಾತ್ಯಾತೀತ, ಸಹೃದಯಿ – ಹಾಡಿ ಹೊಗಳಿದ ಸಚಿವೆ ಜಯಮಾಲಾ

    ಬೆಂಗಳೂರು: ಟಿಪ್ಪು ಸುಲ್ತಾನ್ ಬಗ್ಗೆ ವಿರೋಧಿ ಪಕ್ಷದ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಟಿಪ್ಪು ಒಬ್ಬ ವೀರ, ಶೂರ, ಜ್ಯಾತ್ಯಾತೀತ, ಸಹೃದಯಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಹಾಡಿ ಹೊಗಳಿದ್ದಾರೆ.

    ವಿಧಾನಸೌಧದಲ್ಲಿ ಇಂದು ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಸಚಿವೆ ಜಯಮಾಲಾ ಅವರು ಮಾತನಾಡಿ, ಪುಲಿಕೇಶಿ, ಕೃಷ್ಣದೇವರಾಯರ ಸಾಲಿನಲ್ಲಿ ಟಿಪ್ಪು ಸುಲ್ತಾನರನ್ನು ಸೇರಿಸಿ ಗೌರವಿಸುವುದು ನಮ್ಮ ಸರ್ಕಾರದ ಉದ್ದೇಶ. ಮಸೀದಿ, ದೇವಸ್ಥಾನ, ಶಾರದಾಂಬೆ, ನಂಜನಗೂಡು ಉಳಿಸಿದವರು ಟಿಪ್ಪು ಸುಲ್ತಾನ್. ಅಲ್ಲದೇ ಶ್ರೀರಂಗನಾಥನ ಮೊದಲ ಪೂಜೆ ಮಾಡುತ್ತಿದ್ದ ವ್ಯಕ್ತಿ ಟಿಪ್ಪು ಸುಲ್ತಾನ್ ಆಗಿದ್ದು, ಇಂತಹ ವೀರನ ಬಗ್ಗೆ ವಿರೋಧ ಪಕ್ಷದವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ವಿರೋಧ ಮಾಡುವ ಮೊದಲಿಗೆ ಬಿಜೆಪಿ ನಾಯಕರು ಶೃಂಗೇರಿಯ ಶಾರದಾಂಬೆ ದೇವಾಲಯದ ದಾಖಲೆ ಓದಲಿ ಎಂದು ಕಿಡಿಕಾರಿದರು.

    ಭಾರತ ಚರಿತ್ರೆಯನ್ನು ಜಾಗತಿಕ ಮಟ್ಟದಲ್ಲಿ ಹೆಸರು ಮಾಡುವಂತೆ ಮಾಡಿದವರು ಟಿಪ್ಪು ಸುಲ್ತಾನ್. ಇಂತಹ ಟಿಪ್ಪು ಜಯಂತಿ ವಿಚಾರವಾಗಿ ಅನಗತ್ಯವಾಗಿ ಗೊಂದಲ ಮೂಡಿಸಿ ಬೇರೆ ಅರ್ಥ ಬರುವಂತೆ ವರ್ತಿಸಬಾರದು. ಶ್ರೀರಂಗಪಟ್ಟಣವನ್ನ ಕರ್ಮಭೂಮಿ ಮಾಡಿಕೊಂಡಿದ್ದ ಟಿಪ್ಪುವಿನ ಸೌಹಾರ್ದ, ಸಹಿಷ್ಣುತೆಯನ್ನ ಇವತ್ತಿನ ರಾಜಕಾರಣಿಗಳಿಗೆ ಕಲಿಸಬೇಕು. ಶಾರದಾಂಬೆ, ಶ್ರೀರಂಗಪಟ್ಟಣದ ಇತಿಹಾಸ ಬಿಜೆಪಿ ಅವರು ತಿಳಿದುಕೊಳ್ಳಲಿ. ಇತಿಹಾಸ ತಿಳಿಯದೇ ಬಿಜೆಪಿ ವಿರೋಧ ಮಾಡುತ್ತಿದೆ ಎಂದು ಆರೋಪಿಸಿದರು.

    ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಟಿಪ್ಪು ಜಯಂತಿ ಆಚರಣೆ ಜಾರಿಗೆ ತಂದಿದ್ದಾರೆ. ಜಯಂತಿ ವ್ಯಕ್ತಿ ಪೂಜೆಯಾಗಿ ಮಾಡದೆ, ಧರ್ಮ, ಸಹಿಷ್ಣುತೆ ಸಂಕೇತವಾಗಿ ಆಚರಣೆ ಮಾಡುತ್ತಿದ್ದೇವೆ. ಸಾಮಾನ್ಯ ಜನರ ಅಭಿವೃದ್ಧಿಗೆ ಕೆಲಸ ಮಾಡಿದ ಟಿಪ್ಪು ಸುಲ್ತಾನ್, ಪ್ರಜೆಗಳಿಗಾಗಿ ಪ್ರಾಣ ಕೊಟ್ಟ ಹಾಗೂ ರಾಜ್ಯಕ್ಕಾಗಿ ತನ್ನ ಮಕ್ಕಳ ಪ್ರಾಣವನ್ನ ತ್ಯಾಗ ಮಾಡಿದ. ಕೃಷಿ ಕ್ರಾಂತಿ ಮಾಡಿ ಮೈಸೂರನ್ನ ಶ್ರೀಮಂತ ರಾಜ್ಯ ಮಾಡಿದ್ದಾರೆ. ರೈತರ ಬೆವರಿಗೆ ಬೆಲೆ ಕೊಟ್ಟ ಟಿಪ್ಪು, ಬಡವರಿಗೆ ಮನೆ, ಕ್ಷಿಪಣಿ ತಂತ್ರಜ್ಞಾನ ನೀಡಿದ್ದಾರೆ ಎಂದು ಟಿಪ್ಪು ಜಯಂತಿ ಮಾಡುವುದನ್ನು ಸಮರ್ಥಿಸಿಕೊಂಡರು.

    ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ಜಮೀರ್ ಅಹಮದ್, ಶಾಸಕ ರೋಷನ್ ಬೇಗ್, ಶಾಸಕ ಹ್ಯಾರಿಸ್, ಪರಿಷತ್ ಸದಸ್ಯ ರಿಜ್ವಾನ್ ಹರ್ಷದ್ ಸೇರಿದಂತೆ ಹಲವು ಮುಸ್ಲಿಂ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews