Tag: State Government

  • ಹೇಳಿದ್ದು 520, ವಿತರಣೆಯಾಗಿದ್ದು 257 – ಉಳಿದ ಸೀರೆ ಎಲ್ಲಿ ಹೋಯ್ತು: ಅಧಿಕಾರಿಗಳಿಗೆ ಮಹಿಳೆಯರಿಂದ ತರಾಟೆ

    ಹೇಳಿದ್ದು 520, ವಿತರಣೆಯಾಗಿದ್ದು 257 – ಉಳಿದ ಸೀರೆ ಎಲ್ಲಿ ಹೋಯ್ತು: ಅಧಿಕಾರಿಗಳಿಗೆ ಮಹಿಳೆಯರಿಂದ ತರಾಟೆ

    ದಾವಣಗೆರೆ: ರೇಷ್ಮೆ ಸೀರೆ ಅಂದರೆ ಯಾವ ಮಹಿಳೆಯರಿಗೆ ಇಷ್ಟವಾಗಲ್ಲ ಹೇಳಿ. ಅದರಲ್ಲೂ 15 ಸಾವಿರ ರೂ. ಮೌಲ್ಯದ ಸೀರೆ ಡಿಸ್ಕೌಂಟ್ ಬೆಲೆಯಲ್ಲಿ ಸಿಗುತ್ತೆ ಅಂದರೆ ನಾರಿಮಣಿಯರು ಸುಮ್ಮನಿರುತ್ತರಾ? ನಾ ಮುಂದು ತಾ ಮುಂದೆ ಅಂತ ಸೀರೆಗಾಗಿ ಮುಗಿ ಬೀಳುತ್ತಾರೆ. ಆದರೆ ಇಂದು ದಾವಣಗೆರೆಯಲ್ಲಿ ಡಿಸ್ಕೌಂಟ್ ಸೀರೆಗೆ ಮುಗಿಬಿದ್ದಿದ್ದ ಮಹಿಳೆಯರಿಗೆ ಸಿಕ್ಕಿದ್ದು ಮಾತ್ರ ನಿರಾಸೆ.

    ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್‍ಐಸಿ) ವತಿಯಿಂದ ವರಮಹಾಲಕ್ಷ್ಮಿ ಹಬ್ಬಕ್ಕೆ ಕಡಿಮೆ ಬೆಲೆಗೆ ಸೀರೆ ವಿತರಣೆ ಮಾಡಲಾಗುತಿತ್ತು. ದಾವಣಗೆರೆ ನಗರದ ರೋಟರಿ ಬಾಲ ಭವನದಲ್ಲಿ ರೇಷ್ಮೆ ಸೀರೆ ವಿತರಣೆ ಸಿದ್ಧತೆ ನಡೆಸಲಾಗಿತ್ತು. ಹೀಗಾಗಿ ನೂರಾರು ಮಂದಿ ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದರು. ಆದರೆ ಸರತಿ ಸಾಲಿನಲ್ಲಿ ನಿಂತರೂ ಸೀರೆ ಸಿಗದ ವೇಳೆ ಮಹಿಳೆಯರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ಮಹಿಳೆಯರನ್ನು ನಿಯಂತ್ರಿಸಲು ಹರ ಸಾಹಸ ಪಟ್ಟಿದ್ದಾರೆ.

    ನಗರದಲ್ಲಿ 520 ಸೀರೆ ವಿತರಣೆ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದರು. ಆದರೆ ಇದರಲ್ಲಿ ಕೇವಲ 257 ಸೀರೆ ಮಾತ್ರ ನೀಡಲಾಗಿದೆ. ಉಳಿದ ಸೀರೆಗಳು ಏನಾದವು ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಸಅಧಿಕಾರಿಗಳು ಅವುಗಳನ್ನು ಮಾರಾಟ ಮಾಡಿದ್ದಾರೆ ಎಂದು ಮಹಿಳೆಯರು ಆರೋಪ ಮಾಡಿದ್ದಾರೆ.

    ಸೀರೆ ಪಡೆಯಲು ಆಧಾರ್ ಕಾರ್ಡ್ ನೀಡಿ ನೋಂದಣಿ ಮಾಡಿಸಿಕೊಂಡವರಿಗೆ ಸೀರೆ ವಿತರಣೆಗೆ ಸಿದ್ಧತೆ ಮಾಡಲಾಗಿತ್ತು. ಜೊತೆಗೆ ನೋಂದಣಿ ಮಾಡಿದ ಮಹಿಳೆಯರಿಗೆ ಟೋಕನ್ ನೀಡಿ ಸೀರೆ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಸೀರೆ ವಿತರಣೆಯಲ್ಲಿ ಲೋಪ ಮಾಡಲಾಗಿದೆ ಎಂಬ ಮಹಿಳೆಯರ ಆರೋಪ ಸುಳ್ಳು. ಅಧಿಕಾರಿಗಳು ನಮಗೆ ಕೇವಲ 257 ಸೀರೆಗಳನ್ನು ಮಾತ್ರ ವಿತರಣೆ ಮಾಡಲು ಸೂಚನೆ ನೀಡಿದ್ದಾರೆ. ಅದರಂತೆ ನಾವು ನೀಡಿದ್ದೇವೆ ಎಂದು ಕೆಎಸ್‍ಐಸಿ ವ್ಯವಸ್ಥಾಪಕ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ: ಕೋಡಿ ಶ್ರೀ ಭವಿಷ್ಯ

    ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ: ಕೋಡಿ ಶ್ರೀ ಭವಿಷ್ಯ

    ಹಾಸನ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

    ತಾಳೆಗರಿ ಮೂಲಕ ಭವಿಷ್ಯ ನುಡಿಯುವ ಶ್ರೀಗಳು ಬುಧವಾರ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕವಿದ್ದು, ನವೆಂಬರ್ ತಿಂಗಳವರೆಗೂ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿರುತ್ತದೆ. ಬೆಳಗಾವಿ ಸಹೋದರರಂತೆ ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ ನೋಡುತ್ತಿರಿ ಎಂದು ಹೇಳಿದ್ದಾರೆ.

    ದೇಶದಲ್ಲಿ ಪ್ರಾಕೃತಿಕ ವಿಕೋಪಗಳು ಇನ್ನೂ ಹೆಚ್ಚಾಗಲಿವೆ. ಭೂ-ಕಂಪನದ ಹೊಡೆತಕ್ಕೆ ದೊಡ್ಡ ದೊಡ್ಡ ನಗರಗಳು ತತ್ತರಿಸುತ್ತವೆ. ಸಾವು-ನೋವುಗಳ ಸರಣಿ ಹೆಚ್ಚಾಗಲಿದೆ. ರಾಜ್ಯದಲ್ಲಿಯೂ ಮಳೆಯ ಆರ್ಭಟ ಮುಂದವರಿಯಲಿದೆ ಎಂದು ಭವಿಷ್ಯ ನುಡಿದರು.

    ಈ ಮೊದಲು ಖಗ್ರಾಸ ಚಂದ್ರಗ್ರಹಣದ ವೇಳೆ `ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭ್ರಾತೃ ಬೆಂಕಿ ಹಿಡಿದಾನು. ರಾಜಕೀಯ ವಿಪ್ಲವವಾಗಲಿದೆ’ ಎಂದು ಒಗಟಾಗಿ ತಿಳಿಸಿದ್ದರು. ಅಂದರೆ `ಸಹೋದರ ಬೆಂಕಿ ಹಿಡಿದಾನು ಎಂದರೆ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರಾ ಎನ್ನುವ ವಿಶ್ಲೇಷಣೆ ಕೇಳಿಬಂದಿತ್ತು. ಅಲ್ಲದೇ ಪ್ರಾಕೃತಿಕ ಸಂಪನ್ಮೂಲಗಳು ನಾಶವಾಗಲಿದ್ದು, ಮುಂದಿನ ದಿನಗಳಲ್ಲಿ ಭೂಕಂಪನವಾಗಲಿದೆ. ಇನ್ನೂ ಹೆಚ್ಚು ಮಳೆಯಾಗಲಿದ್ದು, ಬರುವ ವಿಶೇಷ ದಿನಗಳು ಕಷ್ಟಕರವಾಗಲಿದೆ ಎಂದು ಭವಿಷ್ಯ ನುಡಿದಿದ್ದರು. ಇದನ್ನೂ ಓದಿ: ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಕೋಡಿ ಶ್ರೀ ಭವಿಷ್ಯ

    ಶ್ರೀಗಳ ಭವಿಷ್ಯದಂತೆ ದೇಶದಲ್ಲಿ ಮಳೆಯ ರೌದ್ರನರ್ತನ ಹೆಚ್ಚಾಗಿ ಅನೇಕ ಸಾವು-ನೋವುಗಳು ಸಂಭವಿಸಿದ್ದವು. ರಾಜ್ಯದಲ್ಲಿಯೂ ಸಹ ಕಂಡು ಕೇಳರಿಯದ ಭೀಕರ ಮಳೆಗೆ ಕೊಡುಗು ಜಿಲ್ಲೆ ತತ್ತರಿಸಿ ಹೋಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಳೆಯೇ ರಾಜೀನಾಮೆ ಕೊಡಲು ನಾನು ರೆಡಿ: ರಮೇಶ್ ಜಾರಕಿಹೊಳಿ

    ನಾಳೆಯೇ ರಾಜೀನಾಮೆ ಕೊಡಲು ನಾನು ರೆಡಿ: ರಮೇಶ್ ಜಾರಕಿಹೊಳಿ

    ಬೆಂಗಳೂರು: ಸಹೋದರ ಸತೀಶ್ ಜಾರಕಿಹೊಳಿ ಸಚಿವ ಸ್ಥಾನ ಕೇಳಿದರೆ ನಾಳೆಯೇ ನಾನು ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಬಿಡುತ್ತೇನೆ ಎಂಬುವುದು ಸುಳ್ಳು. ನನಗೆ ನೋವಾಗಿರುವುದು ಸತ್ಯ. ಆದರೆ ಪಕ್ಷ ಬಿಡುವುದಿಲ್ಲ. ನಮ್ಮ ನಾಯಕರಾದ ಸಿದ್ದರಾಮಯ್ಯ ವಿದೇಶಿ ಪ್ರವಾಸದಿಂದ ಬಂದ ಬಳಿಕ ಕೂತು ಮಾತನಾಡುತ್ತೇವೆ ಎಂದರು.

    ಇದೇ ವೇಳೆ ಸತೀಶ್ ಜಾರಕಿಹೋಳಿ ಸಿಎಂ ಸ್ಥಾನಕ್ಕೆ ಅರ್ಹರು ಎಂದು ಹೇಳಿದ ರಮೇಶ್, ಅವರು ಮುಂದೆ ಮುಖ್ಯಮಂತ್ರಿಯಾಗಬೇಕು. ಆದರೆ ಆ ಸ್ಥಾನಕ್ಕೆ ನಾನು ಅರ್ಹನಲ್ಲ. ಒಂದೊಮ್ಮೆ ಸಹೋದರ ಸತೀಶ್ ಜಾರಕಿಹೊಳಿ ಸಚಿವ ಸ್ಥಾನ ಕೇಳಿದರೆ ನಾಳೆಯೇ ರಾಜಿನಾಮೆ ನೀಡಿ ಬಿಟ್ಟುಕೊಡುತ್ತೇನೆ ಎಂದು ತಿಳಿಸಿದರು.

    ಸಚಿವ ಡಿಕೆಶಿಗೆ ನೇರ ಟಾಂಗ್: ಈ ಹಿಂದೆಯೂ ಹೇಳಿದ್ದೇನೆ. ಈಗಲೂ ಹೇಳುತ್ತಿದ್ದೇನೆ. ಬೆಳಗಾವಿ ಜಿಲ್ಲಾ ರಾಜಕಾರಣ ವಿಷಯದಲ್ಲಿ ಡಿಕೆ ಶಿವಕುಮಾರ್ ಎಂಟ್ರಿ ಆದರೆ ನಾವು ಸುಮ್ಮನಿರಲ್ಲ. ಅವರು ದೊಡ್ಡ ನಾಯಕರು ಅಗತ್ಯವಿದ್ದರೆ ನಾವೇ ಸ್ವತಃ ಫೋನ್ ಮಾಡಿ ಕರೆಯುತ್ತೇವೆ. ಆಗ ಬರುವುದಾದರೆ ಬರಲಿ. ಅದನ್ನು ಬಿಟ್ಟು ಅವರೇ ಬರಬಾರದು. ಮೊನ್ನೆ ಜಿಲ್ಲೆಯಲ್ಲಿ ನಡೆದ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಎರಡು ಕಡೆಯಿಂದ ತಪ್ಪು ಆಗಿದೆ. ಅದನ್ನು ಸರಿಪಡಿಸಿಕೊಂಡಿದ್ದೇವೆ ಎಂದರು.

    ಬೆಳಗಾವಿ ಟಿಕೆಟ್: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಎಂಎಲ್‍ಸಿ ವಿವೇಕ್ ರಾವ್ ಪಾಟೀಲ್, ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಮೂವರಲ್ಲಿ ಯಾರಿಗೆ ಕೊಟ್ಟರು ಸ್ವೀಕರಿಸುತ್ತೇವೆ. ಈಗಾಗಲೇ ಈ ವಿಚಾರವನ್ನು ನಮ್ಮ ಹೈಕಮಾಂಡ್ ಗಮನಕ್ಕೂ ತಂದಿದ್ದೇವೆ ಎಂದರು.

    ಮಹಾರಾಷ್ಟ್ರದಲ್ಲಿ ಬಿಜೆಪಿ ಸಚಿವರೊಬ್ಬರನ್ನು ಭೇಟಿ ಆಗಿದ್ದೇವೆ. ಅಲ್ಲಿ ನಮ್ಮ ಸಕ್ಕರೆ ಕಾರ್ಖಾನೆ ಇದೆ. ಹಾಗಾಗಿ ಅಲ್ಲಿಗೆ ಭೇಟಿ ನೀಡಿದ್ದ ವೇಳೆ ಬಿಜೆಪಿ ಮಂತ್ರಿಗಳನ್ನು ಭೇಟಿ ಮಾಡಿದ್ದೇವೆ. ಇದರಲ್ಲಿ ತಪ್ಪೇನಿದೆ. ಆದರೆ ರಾಜ್ಯದ ಯಾವುದೇ ಬಿಜೆಪಿ ಮುಖಂಡರು ನನಗೆ ಸಂಪರ್ಕವಿಲ್ಲ. ಯಾರೂ ನಮ್ಮನ್ನ ಸಂಪರ್ಕಿಸಿಲ್ಲ. ಆದರೆ ಎರಡು ದಿನಗಳ ಹಿಂದೆಯಷ್ಟೇ ರೇಣುಕಾಚಾರ್ಯ ಅವರು ಮನೆಗೆ ಭೇಟಿ ನೀಡಿ ಮಾತನಾಡಿದ್ದರು. ಅಲ್ಲದೇ ಕ್ಷೇತ್ರದ ಕೆಲಸಕ್ಕಾಗಿ ಶ್ರೀರಾಮುಲು ಎರಡು ಬಾರಿ ನಮ್ಮ ಮನೆಗೆ ಬಂದಿದ್ದರು. ಹಾಗಂತ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ಹೇಳಲು ಸಾಧ್ಯವೇ? ರಾಜ್ಯ ಸರ್ಕಾರ ಐದು ವರ್ಷ ತನ್ನ ಆಡಳಿವನ್ನು ಪೂರ್ಣಗೊಳಿಸಲಿದ್ದು, ನಮ್ಮಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಾರತ್ ಬಂದ್: ರಾಜ್ಯದಲ್ಲಿ ಎಲ್ಲಿ? ಏನಾಯ್ತು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

    ಭಾರತ್ ಬಂದ್: ರಾಜ್ಯದಲ್ಲಿ ಎಲ್ಲಿ? ಏನಾಯ್ತು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

    ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆಕೊಟ್ಟಿದ್ದ ಭಾರತ್ ಬಂದ್ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯಶಸ್ವಿಯಾಗಿದ್ದು, ಬೆಳಗ್ಗೆಯಿಂದಲೂ ಸಾರಿಗೆ ಸಂಪರ್ಕ, ವಹಿವಾಟು ಇಲ್ಲದೇ ಅಸ್ತವ್ಯಸ್ತ ಗೊಂಡಿದ್ದ ಸಾರ್ವಜನಿಕ ಜೀವನ ಸಂಜೆ ವೇಳೆಗೆ ಸಹಜ ಸ್ಥಿತಿಯತ್ತ ಮರಳಿತು.

    ಬಂದ್ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳು, ಪಟ್ಟಣ ಹಾಗೂ ನಗರದಗಳಲ್ಲಿ ಪೊಲೀಸರು ಬೀಗಿ ಬಂದೋಬಸ್ತ್ ಅಳವಡಿಸಿದ್ದರು. ಇದರ ಹೊರತಾಗಿಯೂ ಕೆಲವೆಡೆ ಕಲ್ಲು ತೂರಾಟ ಸೇರಿದಂತೆ ಕೆಲ ಅಹಿತರಕರ ಘಟನೆಗಳು ವರದಿಯಾಗಿದೆ.

    ಹಲವು ನಗರಗಳಲ್ಲಿ ಬೆಳಂಬೆಳಗ್ಗೆ ಪ್ರತಿಭಟನೆಗಳು ಶುರುವಾದವು. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಬೆಳಗ್ಗೆ 11 ಗಂಟೆಯಾಗುತ್ತಿದ್ದಂತೆ ಪ್ರತಿಭಟನೆಯ ಕಾವು ಏರತೊಡಗಿತು. ರಾಜ್ಯದೆಲ್ಲೆಡೆ ಗಲಾಟೆ, ಪ್ರತಿಭಟನೆಗಳು ನಡೆದವು. ಉಡುಪಿ ಸೇರಿದಂತೆ ಹಲವಡೆ ಗಲಾಟೆ ನಡೆದಿದ್ದು, ಕೆಲವು ಕಡೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಲಾಯಿತು. ಉಡುಪಿಯ ಬನ್ನಂಜೆಯಲ್ಲಿ ಅಂಗಡಿ ಬಂದ್ ಮಾಡಿಸುವ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು, ಬಿಜೆಪಿ ಜಿಲ್ಲಾಧ್ಯಕ್ಷ ಪ್ರಭಾಕರ್ ತಲೆಗೆ ಗಾಯವಾಗಿತ್ತು. ಬಳಿಕ ಗುಂಪು ಚದುರಿಸಲು ಎಸ್ಪಿ ಸೇರಿದಂತೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದರು. ಸದ್ಯ ನಾಳೆ ಬೆಳಗ್ಗೆ 6 ಗಂಟೆವರೆಗೆ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಮೋದಿ ಅಧಿಕಾರಕ್ಕೆ ಬಂದ 4 ವರ್ಷ 5 ತಿಂಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೈಲ ದರ ಏರಿಕೆ ಬಗ್ಗೆ ಒಂದೂ ಮಾತು ಮಾತನಾಡಿಲ್ಲ. ಪೆಟ್ರೋಲ್ ಡೀಸೆಲ್ ಮೇಲೆ ತೆರಿಗೆ ದರ ಏರಿಸಿ 11 ಲಕ್ಷ ಕೋಟಿ ರೂ. ಹಣ ಪಡೆದಿದ್ದೀರಿ ಆ ಹಣ ಎಲ್ಲಿ ಹೋಯಿತು ಎಂದು ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು. ಈ ಹೋರಾಟಕ್ಕೆ ಪ್ರಧಾನಿ ಮೋದಿ ಸ್ಪಂದಿಸದಿದ್ದರೆ ಮತ್ತೊಂದು ಬ್ರಹ್ಮಾಸ್ತ್ರ ಬಿಡಲಿದ್ದೇವೆ ಎಂದು ಮಾಜಿಸ ಸಚಿವ ಎಚ್.ಕೆ.ಪಾಟೀಲ್ ಎಚ್ಚರಿಸಿದರು. ಇಂದು ಕರೆ ನೀಡಿರುವ ಬಂದ್ ಚುನಾವಣೆ ಪ್ರೇರಿತದ ದುರುದ್ದೇಶದ ಬಂದ್ ಬಿಜೆಪಿ ರಾಜ್ಯಾಧ್ಯಲ್ಷ ಬಿಎಸ್ ಯಡಿಯೂರಪ್ಪ, ಉದಾಸಿ, ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.


    ಬೆಂಗಳೂರು ಸ್ತಬ್ಧ: ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಜನರು ಮನೆಯಿಂದ ಹೊರಬಾರದೇ ರಸ್ತೆಗಳು ಬಿಕೋ ಎನ್ನುತ್ತಿತ್ತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿ ಏರಿ ಪ್ರತಿಭಟನೆ ನಡೆಸಿ ಬಳಿಕ ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಟೌನ್‍ಹಾಲ್‍ನಿಂದ ರಾಜಭವನದವರೆಗೆ ಜೆಡಿಎಸ್ ಪಾದಯಾತ್ರೆ ನಡೆಸಲು ಯತ್ನಿಸಿತ್ತು. ಆದರೆ ಈ ಪ್ರತಿಭಟನೆಗೆ ರಾಜ್ಯ ಜೆಡಿಎಸ್ ಅಧ್ಯಕ್ಷರೇ ಗೈರಾಗಿದ್ದರು. ಪ್ರತಿ ಪ್ರತಿಭಟನ ಸ್ಥಳಕ್ಕೆ ಎಂಎಲ್‍ಸಿ ಶರವಣ ಕುದುರೆ ಏರಿ ಬಂದು ಗಮನ ಸೆಳೆದರು. ಮತ್ತೊಂದೆಡೆ ಕನ್ನಡ ಪರ ಸಂಘಟನೆಗಳಾದ ಕರವೇ ನಾರಾಯಣ ಗೌಡ ಬಣ ಮೌರ್ಯ ವೃತ್ತದಲ್ಲಿ, ಪ್ರವೀಣ್ ಕುಮಾಣ ಮೇಖ್ರಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಇಲ್ಲಿಯೂ ಪೊಲೀಸರು ಪ್ರತಿಭಟನಾಕಾರನ್ನು ತಡೆದರು. ಪ್ರತಿಭಟನೆ ವೇಳೆ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಎಮ್ಮೆ ಏರಿ ಪ್ರತಿಭಟಿಸಿದರು.

    ದುಪ್ಪಟ್ಟು ವಸೂಲಿ: ಬಂದ್ ಅನ್ನು ಬಂಡವಾಳ ಮಾಡಿಕೊಂಡ ಖಾಸಗಿ ಬಸ್‍ಗಳು ದುಪ್ಪಟ್ಟು ಹಣ ವಸೂಲಿ ಮಾಡಿದರೆ, ಓಲಾ, ಊಬರ್ ಕ್ಯಾಬ್ ಸಂಘದ ಸದಸ್ಯರು ಕಾರಿಗೆ ಹಗ್ಗ ಕಟ್ಟಿ ಎಳೆದು ಪ್ರತಿಭಟನೆ ನಡೆಸಿದರು. ಭಾರತ್ ಬಂದ್ ಕಾರಣ ಬೇರೆ ಊರಿಂದ ಬಂದ ಸಾರ್ವಜನಿಕರು ಬೆಂಗಳೂರು ಸೇರಿದಂತೆ ಹಲವು ಬಸ್ ಇಲ್ಲದೇ ಪರದಾಡಿದರು. ಮಧ್ಯಾಹ್ನ 3 ಗಂಟೆ ಬಳಿ ನಗರಗಳುಸ ಯಥಾ ಸ್ಥಿತಿಗೆ ತಲುಪಿತ್ತು. ಬಂದ್ ನಿಂದ ಬೆಳಗ್ಗೆ ಇಂದ ರಸ್ತೆಗಳಿಯದ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಂಚಾರ ಆರಂಭವಾಯಿತು. ಮಾಲ್‍ಗಳು, ಚಿತ್ರಮಂದಿರಗಳು ಸಂಜೆ ವೇಳೆಗೆ ಪುನರ್ ಆರಂಭವಾದವು.

    https://www.youtube.com/watch?v=iYMBznDqMeQ

  • ರಾಜಸ್ಥಾನದ ಬಳಿಕ ಪೆಟ್ರೋಲ್ ತೆರಿಗೆ ಇಳಿಸಿದ ಆಂಧ್ರ ಸಿಎಂ

    ರಾಜಸ್ಥಾನದ ಬಳಿಕ ಪೆಟ್ರೋಲ್ ತೆರಿಗೆ ಇಳಿಸಿದ ಆಂಧ್ರ ಸಿಎಂ

    ಹೈದರಾಬಾದ್: ರಾಜಸ್ಥಾನ ಸರ್ಕಾರದ ಬಳಿಕ ಆಂಧ್ರಪ್ರದೇಶ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 2 ರೂ. ಖಡಿತಗೊಳಿಸಿದೆ.

    ಈ ನಿರ್ಧಾರದಿಂದ ಸರ್ಕಾರಕ್ಕೆ 1,120 ಕೋಟಿ ರೂ. ಅಧಿಕ ಹೊರೆ ಆಗಲಿದ್ದು, ಸಿಎಂ ಚಂದ್ರಬಾಬು ನಾಯ್ಡು ಈ ಕುರಿತು ಘೋಷಣೆ ಮಾಡಿದ್ದಾರೆ. ಸದ್ಯ ಸರ್ಕಾರ ನೀಡಿರುವ ಆದೇಶ ನಾಳೆಯಿಂದಲೇ ಜಾರಿ ಆಗಲಿದೆ.

    ರಾಜಸ್ಥಾನ ಸರ್ಕಾರ ಭಾನುವಾರವಷ್ಟೇ ಪೆಟ್ರೋಲ್ ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ಶೇ.4 ರಷ್ಟು ಇಳಿಕೆ ಮಾಡಿತ್ತು. ಇದರಿಂದ ಶೇ.30 ರಷ್ಟಿದ್ದ ಪೆಟ್ರೋಲ್ ಮೇಲಿನ ವ್ಯಾಟ್ ಶೇ.26ಕ್ಕೆ ಇಳಿಕೆಯಾಗಿತ್ತು. ಇತ್ತ ಡೀಸೆಲ್ ಮೇಲಿನ ಶೇ.22 ವ್ಯಾಟ್ ಶೇ. 18 ಇಳಿಕೆಯಾಗಿತ್ತು.

    ಕರ್ನಾಟಕದಲ್ಲೂ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಕೆಯಾಗುವ ಸಾಧ್ಯತೆಯಿದ್ದು, ಇನ್ನು ಈ ಕುರಿತು ಅಧಿಕೃತವಾಗಿ ಸರ್ಕಾರ ಘೋಷಣೆ ಮಾಡದೆ ಇದ್ದರೂ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಕುಮಾರಸ್ವಾಮಿ ದೆಹಲಿಯಲ್ಲಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ಆರೋಗ್ಯ ಕರ್ನಾಟಕ ವಿಲೀನ!

    ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ಆರೋಗ್ಯ ಕರ್ನಾಟಕ ವಿಲೀನ!

    ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಆಯುಷ್ಮಾನ್ ಭಾರತ್ ಯೋಜನೆಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳುವತ್ತ ಹೆಜ್ಜೆ ಹಾಕಿದ್ದು, ರಾಜ್ಯದ ಆರೋಗ್ಯ ಕರ್ನಾಟಕ ಯೋಜನೆಯನ್ನ ಆಯುಷ್ಮಾನ್ ಭಾರತ್ ಯೋಜನೆ ಜೊತೆ ವಿಲೀನ ಮಾಡಲು ನಿರ್ಧರಿಸಲಾಗಿದೆ.

    ನಗರದ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆದ ಆರೋಗ್ಯ ಇಲಾಖೆ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಸರ್ಕಾರ ತೆಗೆದುಕೊಂಡಿದೆ. ಸಿಎಂರೊಂದಿಗೆ ನಡೆದ ಸಭೆಯಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನ ಆಯುಷ್ಮಾನ್ ಭಾರತ್ ಯೋಜನೆ ಜೊತೆ ವಿಲೀನ ಮಾಡುವ ನಿರ್ಧಾರ ಮಾಡಲಾಗಿದ್ದು, ಇದಕ್ಕೂ ಮುನ್ನ ವೈದ್ಯರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.

    ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎರಡು ಮಹತ್ವದ ಯೋಜನೆಗಳ ವಿಲೀನದಿಂದ ಉಂಟಾಗಬಹುದಾದ ಸಾಧಕ ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಿಲು ಸೂಚನೆ ಸಿಎಂ ಸೂಚನೆ ನೀಡಿದ್ದಾರೆ. ಬಡ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗುವಂತೆ ಕಾರ್ಯಕ್ರಮ ರೂಪಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಬಹುತೇಕ ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ರಾಜ್ಯ ಸರ್ಕಾರ ಯೋಜನೆ ವಿಲೀನಗೊಳ್ಳುವುದು ಖಚಿತವಾಗಿದೆ. ಇಂದು ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=H6_XYSZLZu8

  • ಅಕ್ಟೋಬರ್ ನಿಂದ  ನಂದಿನಿ ಹಾಲಿನ ದರ ಹೆಚ್ಚಳ?

    ಅಕ್ಟೋಬರ್ ನಿಂದ ನಂದಿನಿ ಹಾಲಿನ ದರ ಹೆಚ್ಚಳ?

    ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆ ಆಗುತ್ತಿರುವ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಹಾಲಿನ ದರವನ್ನು ಹೆಚ್ಚಳ ಮಾಡಲು ಕೆಎಂಎಫ್ ಚಿಂತನೆ ನಡೆಸಿದೆ.

    ಈ ಕುರಿತು ಇಂದು ನಗರದಲ್ಲಿ ಕೆಎಂಎಫ್ ಬೋರ್ಡ್ ಮೀಟಿಂಗ್ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಅಂತ ಮ್ಯಾನೇಜಿಂಗ್ ಡೈರೆಕ್ಟರ್ ರಾಕೇಶ್ ಸಿಂಗ್ ಪಬ್ಲಿಕ್ ಟಿವಿಗೆ ಮಾಹಿತಿ ನಿಡಿದ್ದಾರೆ.

    ಒಂದು ವೇಳೆ ರಾಜ್ಯ ಸರ್ಕಾರದಿಂದ ಅಂಕಿತ ಸಿಕ್ಕಿದರೆ ದರ ಏರಿಕೆ ಆಗುತ್ತೆ. ಅಕ್ಟೋಬರ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ಬೆಲೆಯಲ್ಲಿ 2 ರೂ. ಹೆಚ್ಚಳವಾಗಲಿದೆ. ಇದರಲ್ಲಿ 1 ರೂಪಾಯಿ ಕೆಎಂಎಫ್ ಗೆ, ಇನ್ನು 1 ರೂಪಾಯಿ ರೈತರಿಗೆ ನೀಡಲು ಕೆಎಂಎಫ್ ಚಿಂತನೆ ನಡೆಸಿದೆ. ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಕೆಎಂಎಫ್ ನಷ್ಟದಲ್ಲಿ ನಡೀತಾ ಇದೆ ಅಂತ ಒಂದು ಕಾರಣವಾದ್ರೆ ಇನ್ನೊಂದು ಹಾಲಿನ ಪೂರೈಕೆ ಹೆಚ್ಚಾಗುತ್ತಿದ್ದು ಬೇಡಿಕೆ ಹೆಚ್ಚಾಗುತ್ತಿಲ್ಲ. ಹೀಗಾಗಿ ರೈತರಿಗೆ ಸಿಗುವ ಪ್ರೋತ್ಸಾಹ ಧನದಲ್ಲಿ 2 ರೂ.ಕಡಿತ ಮಾಡಲಾಗಿದೆ. ದರವನ್ನು ಕಡಿತಗೊಳಿಸಿದ್ದಕ್ಕೆ ಕಳೆದ ತಿಂಗಳು ರೈತರು ಪ್ರತಿಭಟನೆ ನಡೆದಿದ್ದರು. ಈ ನಿಟ್ಟಿನಲ್ಲಿ ಕೆಎಂಎಫ್ ಈ ನಿರ್ಧಾರಕ್ಕೆ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=3lQkr1fwB0I

  • ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ರಾಜ್ಯ ರಾಜಕಾರಣದಲ್ಲಿ ಸದ್ಯ ಫೋನ್ ಕದ್ದಾಲಿಕೆ(ಫೋನ್ ಟ್ಯಾಪಿಂಗ್) ಕುರಿತ ಆರೋಪ ಪ್ರತ್ಯಾರೋಪ ಹೆಚ್ಚಾಗಿದ್ದು, ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ಫೋನ್ ಕದ್ದಾಲಿಕೆ ಕುರಿತ ಗಂಭೀರ ಆರೋಪ ಮಾಡಿದೆ. ಫೋನ್ ಕದ್ದಾಲಿಕೆ ಆರೋಪ ಬರುವುದು ಇದೇ ಮೊದಲೆನಲ್ಲ. ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧವೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇಲ್ಲಿ ಫೋನ್ ಕದ್ದಾಲಿಕೆ ಎಂದರೇನು? ಯಾರು ಮಾಡಬಹುದು? ಹೇಗೆ ಮಾಡುತ್ತಿದ್ದಾರೆ ಎನ್ನುವ ವಿಚಾರವನ್ನು ವಿವರಿಸಲಾಗಿದೆ.

    ಕ್ರಿಮಿನಲ್ ಕೃತ್ಯ ಎಸಗಲಿರುವವರನ್ನು, ಎಸಗಿದವರನ್ನು ಎಲ್ಲೇ ಅಡಗಿದ್ದರೂ ಪತ್ತೆ ಹಚ್ಚಿ ಅವರನ್ನು ಪತ್ತೆ ಹಚ್ಚಲು ಫೋನ್ ಕದ್ದಾಲಿಕೆ ಮಾಡಲಾಗುತ್ತದೆ. ಕಾನೂನಿನ ಅನ್ವಯ ಸರ್ಕಾರದ ಕೆಲವೇ ಇಲಾಖೆಗಳಿಗೆ ಮಾತ್ರ ಫೋನ್ ಕದ್ದಾಲಿಕೆ ಮಾಡಲು ಅವಕಾಶವಿದ್ದು, ಈಗ ಕೆಲವು ಸಮಾಜ ಘಾತುಕ ಶಕ್ತಿಗಳು ಫೋನ್ ಟ್ಯಾಪಿಂಗ್ ಮಾಡಲು ಆರಂಭಿಸಿವೆ. ಇಂದು ರಾಜಕಾರಣಿಗಳು, ಗಣ್ಯ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಹೆಚ್ಚಾಗುತ್ತಿದ್ದು, ಅಡಳಿತ ಪಕ್ಷದ ವಿರುದ್ಧ ವಿರೋಧಿ ಪಕ್ಷಗಳು ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿದೆ.

     

    ಏನಿದು ಫೋನ್ ಪದ್ದಾಲಿಕೆ?
    ವಿಶೇಷ ಎಲೆಕ್ಟ್ರಾನಿಕ್ ಸಾಧನಗಳ ನೆರವಿನಿಂದ ಇಬ್ಬರು ಮಾತನಾಡುತ್ತಿರುವುದನ್ನು ಮೂರನೇಯವರು ಕದ್ದಾಲಿಸುವುದು ಫೋನ್ ಕದ್ದಾಲಿಕೆ. ಫೋನ್ ಕದ್ದಾಲಿಕೆಗೆ ಕಾನೂನಿನಡಿ ಅವಕಾಶವೂ ಇದೆ. ಆದರೆ ಇದಕ್ಕೆ ನಿರ್ದಿಷ್ಟ ರೀತಿ ನೀತಿಗಳಿವೆ. ಅದು ಹೊರತಾಗಿ ಕದ್ದಾಲಿಸಿದರೆ ಅದು ಕಾನೂನಿನ ಅಡಿ ಅಪರಾಧವಾಗುತ್ತದೆ.

    ಆಧುನಿಕ ತಂತ್ರಜ್ಞಾನ ಬೆಳೆದಂತೆ ಫೋನ್ ಕದ್ದಾಲಿಕೆ ಮಾಡಲೆಂದೇ ಹೊಸ ಸಾಧನಗಳು ತಯಾರಾಗಿವೆ. ಅಲ್ಲದೇ ದೇಶ ವಿದೇಶದಿಂದ ಫೋನ್ ಕದ್ದಾಲಿಕೆ ಮಾಡುವ ಸಾಧನಗಳು ಅಕ್ರಮವಾಗಿ ದೇಶದೊಳಗೆ ರವಾನಿಸುವ ಜಾಲವೂ ಹುಟ್ಟಿಕೊಂಡಿದೆ. ತಜ್ಞರ ಪ್ರಕಾರ ಈ ಸಾಧನಗಳು ಸುಮಾರು ಎರಡು ಕಿ.ಮೀ. ದೂರದ ವರೆಗಿನ ವ್ಯಕ್ತಿಗಳ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುವ ಸಾಮರ್ಥ್ಯ ಹೊಂದಿರುತ್ತವೆ.

    ಯಾರಿಗೆ ಅನುಮತಿ ಇದೆ?
    ಸಮಾಜ ಘಾತುಕ ಶಕ್ತಿಗಳ ಚಲನವಲನ, ಕ್ರಿಮಿನಲ್ ಸಂಚು, ದೇಶದ, ಗಣ್ಯರ ವಿರುದ್ಧ ದಾಳಿಯಂತಹ ಚಟುವಟಿಕೆಗಳನ್ನು ತಡೆಯಲು ಗುಪ್ತಚರ ಸಂಸ್ಥೆಗಳು ಫೋನ್ ಕದ್ದಾಲಿಕೆ ಮಾಡುತ್ತವೆ. ಸಿಬಿಐ, ಗುಪ್ತಚರ ಇಲಾಖೆ, ಕಂದಾಯ ಗುಪ್ತಚರ, ಮಾದಕವಸ್ತು ನಿಯಂತ್ರಣ ದಳ, ಆದಾಯ ತೆರಿಗೆ ಇಲಾಖೆ ಮತ್ತು ಪೋಲಿಸ್ ಇಲಾಖೆ ಕದ್ದಾಲಿಕೆಯನ್ನು ಕಾನೂನಿನ ಅಡಿ ಮಾಡಬಹುದು. ಫೋನ್ ಕದ್ದಾಲಿಸಲು ಉಪಗ್ರಹ ಆಧಾರಿತ ವ್ಯವಸ್ಥೆಗಳು, ಟೆಲಿಫೋನ್ ಎಕ್ಸ್ ಚೇಂಜ್‍ನ ನೆರವಿನೊಂದಿಗೆ ಪ್ರತ್ಯೇಕ ಎಲೆಕ್ಟ್ರಾನಿಕ್ ವ್ಯವಸ್ಥೆಗಳ ಮೂಲಕ ಕದ್ದಾಲಿಕೆ ಮಾಡಲಾಗುತ್ತದೆ.

    ನಿಯಮ ಏನು ಹೇಳುತ್ತೆ: 1885ರ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಸೆಕ್ಷನ್ 5 (2)ರಲ್ಲಿ 419ನೇ ಮತ್ತು 419ಎ ನಿಬಂಧನೆಗಳಲ್ಲಿ ಫೋನ್ ಕರೆಗಳ ಮಾಹಿತಿ ಪಡೆಯುವ, ಕೇಳುವ ಬಗ್ಗೆ ಹೇಳಲಾಗಿದೆ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ, ಭದ್ರತೆಗೆ ತೊಂದರೆಯಾಗುವ ವಿಚಾರಗಳಲ್ಲಿ ಫೋನ್ ಕದ್ದಾಲಿಕೆಗೆ ಅವಕಾಶವಿದ್ದು ಕ್ಯಾಬಿನೆಟ್ ಕಾರ್ಯದರ್ಶಿ, ಕಾನೂನು ಕಾರ್ಯದರ್ಶಿ ಈ ಬಗ್ಗೆ ನಿರ್ಧಾರ ಕೈಗೊಂಡು, ಗೃಹ ಇಲಾಖೆಗೆ ಮಾಹಿತಿ ನೀಡಬೇಕು. ಈ ಬಗ್ಗೆ ಗೃಹ ಇಲಾಖೆ 2 ತಿಂಗಳೊಳಗೆ ಪರಿಶೀಲನೆ ನಡೆಸಿ ತೀರ್ಮಾನಿಸಬೇಕು. ಒಂದು ಬಾರಿ ಅನುಮತಿ ನೀಡಿದರೆ ಅದು 6 ತಿಂಗಳ ಅವಧಿಯದ್ದಾಗಿರುತ್ತದೆ. ಹೀಗೆ ಕದ್ದಾಲಿಕೆ ವೇಳೆ ಪಡೆದ ಮಾಹಿತಿಗಳನ್ನು ಬಳಸಿ 2 ತಿಂಗಳೊಳಗೆ ಅವುಗಳನ್ನು ನಾಶಪಡಿಸಬೇಕು. ಇದು ಹೊರತಾಗಿ ಕೋರ್ಟ್ ನಿರ್ದೇಶನದ ಮೇರೆಗೆ ಫೋನ್ ಕದ್ದಾಲಿಕೆಗೆ ಅವಕಾಶವಿದೆ.

    ಒಂದೊಮ್ಮೆ ಫೋನ್ ಕದ್ದಾಲಿಕೆಯಾದರೆ ವ್ಯಕ್ತಿಯ ಖಾಸಗಿ ತನಕ್ಕೆ ಧಕ್ಕೆ ತಂದದ್ದಕ್ಕಾಗಿ ಆತ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಬಹುದು. ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಬಹುದು. ಅಕ್ರಮ ಕದ್ದಾಲಿಕೆ ವಿಚಾರದ ಬಗ್ಗೆ ಭಾರತೀಯ ಟೆಲಿಗ್ರಾಫ್ ಕಾಯ್ದೆಯ ಸೆ26(ಬಿ) ಅಡಿಯಲ್ಲಿ ಕೋರ್ಟ್‍ಗೂ ದೂರು ನೀಡಬಹುದು. ಒಂದು ವೇಳೆ ಕದ್ದಾಲಿಸಿದ್ದು ಸಾಬೀತಾದರೆ ಅಪರಾಧಿಗೆ 3 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶವಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಸರ್ಕಾರ ಬಿದ್ದೋಗುತ್ತೋ ಅನ್ನೋ ಭೀತಿಯಿಂದ ಮುಖಂಡರ ಫೋನ್ ಕದ್ದಾಲಿಕೆ: ಬಿಎಸ್‍ವೈ

    ಸರ್ಕಾರ ಬಿದ್ದೋಗುತ್ತೋ ಅನ್ನೋ ಭೀತಿಯಿಂದ ಮುಖಂಡರ ಫೋನ್ ಕದ್ದಾಲಿಕೆ: ಬಿಎಸ್‍ವೈ

    ಬೆಂಗಳೂರು: ಸಮ್ಮಿಶ್ರ ಸರ್ಕಾರ ಎಲ್ಲಿ ಬಿದ್ದು ಹೋಗುತ್ತದೆಯೋ ಎನ್ನುವ ಭೀತಿಯಿಂದ ರಾಜ್ಯಸರ್ಕಾರ ನನ್ನ ಹಾಗೂ ಸಿದ್ದರಾಮಯ್ಯನವರ ಫೋನ್‍ಗಳನ್ನು ಕದ್ದಾಲಿಕೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು  ಗಂಭೀರವಾಗಿ ಆರೋಪಿಸಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿನ ಮಾಜಿ ಸಚಿವ ಬಾಬುರಾವ್ ಚಿಂಚನೂರು ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿಂಚನಸೂರು ಸೇರ್ಪಡೆಯಿಂದ ಬಿಜೆಪಿ ಆನೆ ಬಲ ಬಂದಂತಾಗಿದೆ. ಇವರಷ್ಟೇ ಅಲ್ಲದೇ ಕಾಂಗ್ರೆಸ್ಸಿನ ಹಿರಿಯ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಲೋಕಸಭಾ ಚುನಾವಣಾ ವೇಳೆಗೆ ಯಾವ ಯಾವ ನಾಯಕರು ಸೇರುತ್ತಾರೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ತಿಳಿಸಿದರು.

    ಇದರಿಂದಾಗಿ ಎಲ್ಲಿ ನಮ್ಮ ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆಯೋ ಎಂಬ ಭಯದಿಂದ, ನನ್ನದೂ ಸೇರಿದಂತೆ ಸಿದ್ದರಾಮಯ್ಯ ಹಾಗೂ ಹಲವು ಪ್ರತಿಪಕ್ಷಗಳ ಮುಖಂಡರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ. ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು. ಹೆಚ್ಚಿನ ರೀತಿಯಲ್ಲಿ ಕದ್ದಾಲಿಕೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದರು.

    ಏನಿದು ಫೋನ್ ಟ್ಯಾಪಿಂಗ್?
    ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಫೋನ್ ಟ್ಯಾಪಿಂಗ್‍ಗೆ ವಿರೋಧದ ನಡುವೆಯೂ ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಅಂದಿನ ಕಾಂಗ್ರೆಸ್ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ ಅತ್ಯಾಧುನಿಕ ತಂತ್ರಜ್ಞಾನದ ದೂರವಾಣಿ ಕರೆ ಹಾಗೂ ಸಂಭಾಷಣೆಗಳ ಸಂಪೂರ್ಣ ಮಾಹಿತಿ ನೀಡುವ ಎರಡು ಸಾಧನಗಳನ್ನು ಖರೀದಿ ಮಾಡಲಾಗಿತ್ತು. ಅವುಗಳಲ್ಲಿ ಒಂದನ್ನು ರಾಜ್ಯ ಗುಪ್ತಚರ ಇಲಾಖೆಯಲ್ಲಿ ಇರಿಸಿದ್ದಾರೆ. ಇಂತಿಷ್ಟು ಮೀಟರ್ ಪರಿಧಿಯಲ್ಲಿ ಈ ಸಾಧನವನ್ನು ಅಳವಡಿಸಿ ಅದರಲ್ಲಿ ನಿಗಧಿತ ಫೋನ್ ನಂಬರ್ ಗಳನ್ನು ನಮೂದಿಸಿದರೆ, ಆ ನಂಬರಿಗೆ ಬರುವ  ಒಳ ಮತ್ತು ಹೊರ ಕರೆಗಳ ಸಂಭಾಷಣೆಗಳನ್ನು ಯಥಾವತ್ತಾಗಿ ಕೇಳಬಹುದಾಗಿದೆ. ಅಲ್ಲದೇ ಅವುಗಳನ್ನು ಧ್ವನಿಮುದ್ರಿಕೆ ಕೂಡ ಮಾಡಬಹುದಾಗಿದೆ.

    ಮಾಹಿತಿಗಳ ಪ್ರಕಾರ ಕಾಂಗ್ರೆಸ್‍ನ 15 ಶಾಸಕರು, ಒಬ್ಬ ಸಚಿವರು ಸೇರಿದಂತೆ ಇಬ್ಬರು ಜೆಡಿಎಸ್ ಹಾಗೂ ಮೂವರು ಮಾಜಿ ಶಾಸಕರ ಫೋನ್ ಕದ್ದಾಲಿಕೆ ನಡೆದಿದೆ. ಸಂಭಾಷಣೆಯಲ್ಲಿ ಸಂಪುಟ ವಿಸ್ತರಣೆ ಗಣೇಶ ಹಬ್ಬಕ್ಕೆ ಮೊದಲು ಆಗದಿದ್ದರೆ, ಲೋಕಸಭಾ ಚುನಾವಣೆಗೂ ಮುನ್ನವೇ ಸರ್ಕಾರಕ್ಕೆ ಆಪತ್ತು ಬರುವ ಸೂಚನೆ ಇದೆ. ಸಾಧ್ಯವಾದರೆ ಬದಲಿ ಸರ್ಕಾರವನ್ನು ರಚನೆ ಮಾಡಿ, ಇಲ್ಲವೇ ಹೊಸದಾಗಿ ಚುನಾವಣೆ ಎದುರಿಸುವ ಕುರಿತ ಮಾಹಿತಿ ದಾಖಲಾಗಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗುಂಡಿ ಮುಚ್ಚಲು ವಿಫಲವಾಗಿರೋ ಸರ್ಕಾರದಿಂದ ಬೆಂಗ್ಳೂರಿಗರ ಮೇಲೆ ಭೂಸಾರಿಗೆ ಕರ: ಹೇಗೆ ವಿಧಿಸಲಾಗುತ್ತೆ?

    ಗುಂಡಿ ಮುಚ್ಚಲು ವಿಫಲವಾಗಿರೋ ಸರ್ಕಾರದಿಂದ ಬೆಂಗ್ಳೂರಿಗರ ಮೇಲೆ ಭೂಸಾರಿಗೆ ಕರ: ಹೇಗೆ ವಿಧಿಸಲಾಗುತ್ತೆ?

    ಬೆಂಗಳೂರು: ಗುಂಡಿ ಮುಕ್ತ ರಸ್ತೆ ಮಾಡಲು ವಿಫಲವಾಗಿರುವ ಸಮ್ಮಿಶ್ರ ಸರ್ಕಾರ, ಈಗ ಬೆಂಗಳೂರು ನಾಗರಿಕರಿಗೆ ಆಘಾತವಾಗುವ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ. ಹದಗೆಟ್ಟ ರಸ್ತೆಗಳಿಂದ ಭಾರೀ ನಷ್ಟವಾಗಿದ್ದು, ಕರ ಸಂಗ್ರಹಕ್ಕೆ ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೀಡಿದ್ದ ಸಲಹೆಗೆ ಸಮ್ಮತಿ ಸೂಚಿಸಿದೆ.

    ನಗರದಲ್ಲಿನ ರಸ್ತೆಗಳು ಗುಂಡಿಗಳಿಂದ ಹದಗೆಟ್ಟಿವೆ. ಇದರಿಂದ ರಸ್ತೆಗಳಲ್ಲಿ ಓಡಾಡುವ ಬಿಎಂಟಿಸಿ ಬಸ್‍ಗಳು ಆಗಾಗ ಹದಗೆಡುತ್ತಿವೆ. ಇದರಿಂದಾಗಿ ಬಿಎಂಟಿಸಿಗೆ ಹೆಚ್ಚಿನ ನಿರ್ವಹಣೆ ಹೊರೆ ಬೀಳುತ್ತಿದೆ. ಬಿಬಿಎಂಪಿಯೇ ಬಿಎಂಟಿಸಿ ಇಲಾಖೆಗೆ ಹಣ ನೀಡಬೇಕೆಂದು ಕೆಲದಿನಗಳ ಹಿಂದೆ ಸಾರಿಗೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು.

    ಸಾರಿಗೆ ಸಚಿವ ಡಿಸಿ ತಮ್ಮಣ್ಣ ಪ್ರಸ್ತಾವನೆ ಪುರಸ್ಕರಿಸಿರುವ ರಾಜ್ಯ ಸರ್ಕಾರ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದು, ಸಾರ್ವಜನಿಕರಿಗೆ 2% ರಷ್ಟು ಭೂ ಸಾರಿಗೆ ಉಪಕರ ವಿಧಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಉಸ್ತುವಾರಿ ಸಚಿವ ಡಾ. ಪರಮೇಶ್ವರ್, ಬಿಬಿಎಂಪಿಗೆ ತನ್ನ ಸಂಪನ್ಮೂಲ ಕ್ರೋಡಿಕರಿಸುವ ಹಕ್ಕಿದೆ. ಕಾನೂನು ಬಾಹಿರವಾಗಿದ್ದರೆ ಮಾತ್ರ ಸರ್ಕಾರ ಮಧ್ಯಪ್ರವೇಶಿಸುತ್ತದೆ ಎಂದು ತಿಳಿಸಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

    ಕರ ವಿಧಿಸುವ ಬಗ್ಗೆ ಸಾರ್ವಜನಿಕರು ಹಾಗೂ ಬಿಬಿಎಂಪಿ ವಿರೋಧ ಪಕ್ಷದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಆಸ್ತಿ ಮಾಲೀಕರು ಹೆಚ್ಚಿನ ತೆರಿಗೆ ಪಾವತಿಸುತ್ತಿದ್ದು, ಮತ್ತೆ ಹೆಚ್ಚುವರಿ ತೆರಿಗೆ ಹೊರೆ ಹಾಕುವುದು ಸರಿಯಲ್ಲ. ಅಲ್ಲದೆ ಎರಡು ವರ್ಷಗಳ ಹಿಂದೆ ಆಸ್ತಿ ತೆರಿಗೆ 20% ರಿಂದ 25% ಹೆಚ್ಚಿಸಿ ಆಸ್ತಿ ಮಾಲೀಕರಿಗೆ ಹೆಚ್ಚಿನ ಹೊರೆ ಹೊರಿಸಿತ್ತು. ಹಾಗಾಗಿ ಮತ್ತೆ ತೆರಿಗೆದಾರರಿಗೆ ಕರದ ಹೊರೆ ಹೊರಿಸಲು ಬಿಡುವುದಿಲ್ಲ ಎಂದು ಬಿಬಿಎಂಪಿ ವಿರೋಧ ಪಕ್ಷ ನಾಯಕ ಪದ್ಮನಾಭ ರೆಡ್ಡಿ ಆಡಳಿತ ಪಕ್ಷದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹೆಚ್ಚುವರಿ ತೆರಿಗೆ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಉಪಕರ ವಿಧಿಸುವ ಜವಾಬ್ದಾರಿ ಬಿಬಿಎಂಪಿ ಹೊತ್ತಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಬೇಕಿದೆ. ನರ್ಮ್ ಯೋಜನೆಯಡಿಯಲ್ಲಿ ತೆರಿಗೆ ಸೆಸ್ ವಿಧಿಸಬೇಕಂಬ ನಿಯಮವಿದೆ. ಅದರ ಪ್ರಕಾರ ಸೆಸ್ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.

    ಒಟ್ಟಾರೆ ಉಪಕರ ವಿಧಿಸಿ ಮತ್ತೆ ತೆರಿಗೆದಾರರಿಗೆ ಹೊರೆ ಹೆಚ್ಚಿಸಲು ಪಾಲಿಕೆ ಮುಂದಾಗಿದ್ದು, ಈ ವಿಷಯವನ್ನು ಮಂಗಳವಾರ ನಡೆಯಲಿರುವ ಕೌನ್ಸಿಲ್ ಸಭೆಯಲ್ಲಿ ಮುಂದಿಡಲಾಗುತ್ತದೆ. ಒಂದೊಮ್ಮೆ ಸಭೆಯಲ್ಲಿ ವಿಷಯ ಅನುಮೋದನೆಗೊಂಡರೆ ತೆರಿಗೆದಾರರ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದೆ.

    ಕಳಪೆ ರಸ್ತೆ ಮಾಡುವ ಗುತ್ತಿಗೆದಾರರ ಬೇಜವಾಬ್ದಾರಿ ಹಾಗೂ ಬಿಎಂಟಿಸಿ ವೆಚ್ಚಕ್ಕೂ ನೇರವಾಗಿ ಜನರೇ ತೆರಿಗೆ ವಾಪತಿಸುವುದು ಎಷ್ಟು ಸರಿ? ರಸ್ತೆಗಳಿಂದ ಬಿಎಂಟಿಸಿಗೆ ಆಗಿರುವ ನಷ್ಟ ತುಂಬಲು ಬಿಬಿಎಂಪಿಯೇನೋ ಜನರಿಗೆ ಹೊರೆ ಹೊರೆಸುತ್ತಿದೆ. ಆದೆ ಇದೇ ಗುಂಡಿಗಳಿಂದ ಸಾರ್ವಜನಿಕರ ವಾಹನಗಳಿಗೆ ಆಗಿರುವ ಹಾನಿಯನ್ನು ಭರಿಸುವವರ್ಯಾರು? ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ಹಾಕಿ ಭಾರೀ ಟೀಕೆಗೆ ಗುರಿಯಾಗಿರುವ ಸರ್ಕಾರ ಈಗ ವಿಶೇಷವಾಗಿ ಬೆಂಗಳೂರಿಗರ ಮೇಲೆ ವಿಶೇಷ ಸೆಸ್ ಹಾಕಲು ಮುಂದಾಗಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಎದ್ದಿದೆ.

    ಭೂಸಾರಿಗೆ ಕರ ಹೇಗೆ ಜಾರಿ?
    ನೇರವಾಗಿ ಭೂ ಸಾರಿಗೆ ಕರ ವಿಧಿಸಲು ಸಾಧ್ಯವಿಲ್ಲ. ಹೀಗಾಗಿ ಈಗಿರುವ ಆಸ್ತಿ ತೆರಿಗೆಯನ್ನು ಜಾಸ್ತಿ ಮಾಡಲಾಗುತ್ತದೆ. ಒಂದೊಂದು ಪ್ರದೇಶಕ್ಕೆ ಒಂದೊಂದು ಆಸ್ತಿ ತೆರಿಗೆ ಇದೆ. ಎಂಜಿ ರಸ್ತೆಯಲ್ಲಿನ ಆಸ್ತಿ ತೆರಿಗೆಯೇ ಬೇರೆ, ಬಗಲಗುಂಟೆಯಲ್ಲಿನ ತೆರಿಗೆಯೇ ಬೇರೆ ಇದೆ. ಸದ್ಯ ಆಸ್ತಿ ತೆರಿಗೆಯಿಂದ ಸುಮಾರು ವರ್ಷಕ್ಕೆ 2 ಸಾವಿರ ಕೋಟಿ ರೂ. ಸಂಗ್ರಹವಾಗುತ್ತಿದೆ. ಈಗ 2% ರಷ್ಟು ಕರ ವಿಧಿಸಿದರೆ ಅಂದಾಜು 40 ಕೋಟಿ ರೂ. ತೆರಿಗೆ ಸಂಗ್ರಹವಾಗಬಹುದು. ಈ ಹಣವನ್ನು ಸಾರಿಗೆ ಸಂಸ್ಥೆ ನೀಡಲಾಗುತ್ತದೆ.

    2011-2012 ರಿಂದ 2016-17ರವರೆಗಿನ ಅವಧಿಯಲ್ಲಿ ಬಿಎಂಟಿಸಿಗೆ 608 ಕೋಟಿ ರೂ. ನಷ್ಟವಾಗಿದೆ. ಒಟ್ಟು ಆದಾಯದಲ್ಲಿ 27.27% ಹಣ ಡೀಸೆಲ್ ಖರೀದಿಗೆ ಖರ್ಚಾದರೆ 53% ಹಣ ಸಿಬ್ಬಂದಿ ಸಂಬಳಕ್ಕೆ ಹೋಗುತ್ತದೆ. ಬಿಎಂಟಿಸಿಗೆ ವಿಶೇಷವಾಗಿ ಮೆಟ್ರೋ ಸಂಚರಿಸುವ ಮಾರ್ಗಗಳಲ್ಲಿ ಕಡಿಮೆ ಆದಾಯ ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv