Tag: State Government

  • ಚಡ್ಡಿ ಹಾಕೋರಿಂದ ಹಿಡಿದು ಪ್ಯಾಂಟ್, ಕಚ್ಚೆ ತೊಡುವವರು ನನ್ನ ಕಚೇರಿಗೆ ಬರಬಹುದು: ಸಿದ್ದರಾಮಯ್ಯ

    ಚಡ್ಡಿ ಹಾಕೋರಿಂದ ಹಿಡಿದು ಪ್ಯಾಂಟ್, ಕಚ್ಚೆ ತೊಡುವವರು ನನ್ನ ಕಚೇರಿಗೆ ಬರಬಹುದು: ಸಿದ್ದರಾಮಯ್ಯ

    ಬಾಗಲಕೋಟೆ: ಸತತ ಮೂರನೇ ದಿನವೂ ಕ್ಷೇತ್ರ ಪ್ರವಾಸದಲ್ಲಿ ಇರುವ ಸಿಎಂ ಸಿದ್ದರಾಮಯ್ಯ ಅವರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಯಾರು ಸಂಕೋಚ ಪಡದೆ ತಮ್ಮ ಬಳಿ ಊರಿನ ಸಮಸ್ಯೆ ಹೇಳಿಕೊಳ್ಳಬಹುದು. ಚಡ್ಡಿ ಹಾಕೋರಿಂದ ಹಿಡಿದು ಪ್ಯಾಂಟ್, ಕಚ್ಚೆ ತೊಡುವವರು ನನ್ನ ಕಚೇರಿಗೆ ಬರಬಹುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಟಾಂಗ್ ನೀಡಿದ್ದಾರೆ.

    ಕ್ಷೇತ್ರ ಪ್ರವಾಸದ ವೇಳೆ ಮಾತನಾಡಿದ ಅವರು, ಸದ್ಯ ನಾನು ಈ ಕ್ಷೇತ್ರದ ಪ್ರತಿನಿಧಿ. ಮತ ಹಾಕಿದವರು ಹಾಕದೇ ಇರುವವರು ಸಹ ತಮ್ಮ ಕೆಲಸಕ್ಕಾಗಿ ನನ್ನ ಬಳಿ ಬರಬಹುದು. ಸದ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷೇತ್ರ ಪ್ರವಾಸ ನಡೆಸುತ್ತಿದ್ದು. ಮುಂದಿನ ದಿನಗಳಲ್ಲಿ ಹಳ್ಳಿಗೆ ಭೇಟಿ ನೀಡುತ್ತೇನೆ ಎಂದರು.

    ಕ್ಷೇತ್ರ ಪ್ರವಾಸದ ಭಾಗವಾಗಿ ಮಂಗಳೂರು ಗ್ರಾಮ ಪಂಚಾಯಿತಿ, ಹೊಸೂರು ಗ್ರಾಮಕ್ಕೆ ಮಾಜಿ ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಸಮ್ಮಿಶ್ರ ಸರ್ಕಾರದ ಕುರಿತು ಮಾತನಾಡಿ, ಈ ಬಾರಿ ಆತಂತ್ರ ಪರಿಸ್ಥಿತಿ ನಿರ್ಮಾಣವಾಯಿತು. ಅದಕ್ಕಾಗಿ ಜೆಡಿ ಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆ ಮಾಡಲಾಯಿತು. ನಮ್ಮ ಸರ್ಕಾರದ ವೇಳೆ ಜಾರಿಗೆ ಮಾಡಲಾಗಿರುವ ಯೋಜನೆಗಳನ್ನು ನಿಲ್ಲಿಸದೆ ಮುಂದುವರೆಸಲಾಗುವುದು. ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷನಿದ್ದು, ನಮ್ಮ ಎಲ್ಲ ಯೋಜನೆಗಳು ಸಮ್ಮಿಶ್ರ ಸರಕಾರದಿಂದ ಜಾರಿಯಾಗಲಿದೆ. ಪಕ್ಷ ಸೋತರೂ ಬಡವರಿಗೆ ಕೆಲಸ ಮಾಡಿದೆ ತೃಪ್ತಿ ಇದೆ ಎಂದು ತಿಳಿಸಿದರು.

    ನಮಗೆ ಚಿಕ್ಕವರಿದ್ದಾಗ ಅನ್ನ ಸಿಗುತ್ತಿರಲಿಲ್ಲ. ಬರಿ ಮುದ್ದೆ ತಿಂದು ಬದುಕಿದ್ದೇವೆ. ಬೀಗರು ಬಂದರೆ ಮಾತ್ರ ಅನ್ನ ಸಿಗುತ್ತಿತ್ತು. ಆದ್ದರಿಂದ ಭಾಗ್ಯ ಯೋಜನೆ ಜಾರಿ ಮಾಡಿದೆ. ಮುಂದೆ ಪ್ರತಿ ಹಳ್ಳಿ ಹಳ್ಳಿಗೂ ಭೇಟಿ ನೀಡುತ್ತೇನೆ. ಚುನಾವಣೆ ನಂತರ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದರು.

    ಸದ್ಯ ಸಿದ್ದರಾಮಯ್ಯ ಪ್ರವಾಸದ ವೇಳೆ ಮಾಜಿ ಸಚಿವರಾದ ಎಸ್ ಆರ್ ಪಾಟಿಲ್, ಆರ್ ಬಿ ತಿಮ್ಮಾಪುರ, ಮಾಜಿ ಶಾಸಕರಾದ ಹೆಚ್ ವೈ ಮೇಟಿ, ಬಿಬಿ ಚಿಮ್ಮನಕಟ್ಟಿ, ಮುಖಂಡ ದೇವರಾಜ ಪಾಟಿಲ್ ಸಾಥ್ ನೀಡಿದರು. ಕ್ಷೇತ್ರ ಪ್ರವಾಸದ ವೇಳೆ ಎಂಬಿ ಪಾಟಿಲ್ ಸಚಿವ ಸ್ಥಾನಕ್ಕೆ ಹೆಚ್ಚಿದ್ದು, ಹಲವು ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡರು.

    ಸಮ್ಮಿಶ್ರ ಸರ್ಕಾರದಲ್ಲಿ ಹಲವು ಶಾಸಕರು ಸಚಿವ ಸ್ಥಾನ ಹಂಚಿಕೆ ಕುರಿತು ರಾಜ್ಯ ರಾಜಧಾನಿಯಲ್ಲಿ ಬಿರುಸಿನ ಚಟುವಟಿಕೆ ನಡೆಸುತ್ತಿದ್ದರೆ ಇತ್ತರ ಸಿಎಂ ಸಿದ್ದರಾಮಯ್ಯ ಅವರು ಮಾತ್ರ ಕ್ಷೇತ್ರ ಪ್ರವಾಸದಲ್ಲಿ ತೊಡಗಿದ್ದಾರೆ. ಆದರೆ ಇದೇ ವೇಳೆ ಕ್ಷೇತ್ರ ಪ್ರವಾಸದಲ್ಲಿದ್ದರು ಅವರ ಮೊಬೈಲ್ ನಲ್ಲಿ ಹೆಚ್ಚು ಮಾತನಾಡುತ್ತಿದದ್ದು ಕಂಡು ಬಂತು.

    https://www.youtube.com/watch?v=hXCaa3lu7ho

  • ನನ್ನನ್ನು, ನನ್ನ ಆಪ್ತರನ್ನು ಮೂಲೆಗುಂಪು ಯಾರೂ ಮಾಡಿಲ್ಲ: ಸಿದ್ದರಾಮಯ್ಯ

    ನನ್ನನ್ನು, ನನ್ನ ಆಪ್ತರನ್ನು ಮೂಲೆಗುಂಪು ಯಾರೂ ಮಾಡಿಲ್ಲ: ಸಿದ್ದರಾಮಯ್ಯ

    ಬಾಗಲಕೋಟೆ: ವಿಧಾನ ಸಭೆ ಚುನಾವಣೆಯ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾರು ಮೂಲೆಗುಂಪು ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಸಮ್ಮಿಶ್ರ ಸರ್ಕಾರ ರಚನೆ ಬಳಿಕ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದ ಪ್ರಶ್ನೆಗೆ ಉತ್ತಿರಿಸಿದ ಅವರು, ನನ್ನನ್ನು ಹಾಗೂ ನನ್ನ ಆಪ್ತರನ್ನು ಮೂಲೆಗುಂಪು ಮಾಡಿಲ್ಲ. ಸಚಿವ ಸ್ಥಾನ ಸಿಕ್ಕವರು, ಸಿಗದೇ ಇರುವವರು ಎಲ್ಲರೂ ನನ್ನ ಪರಮ ಆಪ್ತರೇ. ಸದ್ಯ ನಾನೇ ಶಾಸಕಾಂಗ ಪಕ್ಷದ ನಾಯಕ. ನನ್ನನ್ನು ಕಡೆಗಣಿಸಿದ್ದಾರೆ ಎಂದು ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದರು.

    ಇದೇ ವೇಳೆ ಕ್ಷೇತ್ರದ ಭೇಟಿ ಕುರಿತು ಉತ್ತರಿಸಿದ ಅವರು, ಕ್ಷೇತ್ರದಿಂದ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಆಗಮಿಸಿದ್ದು, ಬಾದಾಮಿಯಲ್ಲಿ ನನ್ನ ಗೆಲುವಿಗೆ ಶ್ರಮಿಸಿದ್ದಕ್ಕೆ ಜನರಿಗೆ ಧನ್ಯವಾದ ಹೇಳಲು ಇಲ್ಲಿಗೆ ಬಂದಿದ್ದೇನೆ. ಕ್ಷೇತ್ರದುದ್ದಕ್ಕೂ ಸಂಚರಿಸಿ, ನನ್ನ ಗೆಲುವಿಗೆ ಕಾರಣರಾದ ಅಭಿಮಾನಿಗಳು, ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸುತ್ತೇನೆ. ಬಾದಾಮಿ ಒಂದು ಐತಿಹಾಸಿಕ ಪ್ರವಾಸಿ ತಾಣ, ಇದನ್ನು ಹೆಚ್ಚು ಅಭಿವೃದ್ಧಿ ಮಾಡುವುದು ನನ್ನ ಕನಸು ಎಂದು ಹೇಳಿದರು.

    ಅಸಮಾಧಾನ ಸಾಮಾನ್ಯ: ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ ಸಾಮಾನ್ಯ, ಸದ್ಯ ಸಾಮಾಜಿಕ ನ್ಯಾಯದ ಅಡಿ ಎಲ್ಲರಿಗೂ ಸಚಿವ ಸ್ಥಾನ ಸಿಕ್ಕಿದ್ದು, ಇನ್ನೂ ಆರು ಸ್ಥಾನ ಬಾಕಿ ಇವೆ. ಅವುಗಳನ್ನು ಸಾಮಾಜಿಕ ನ್ಯಾಯದಡಿ ಹಂಚಿಕೆ ಮಾಡಲಾಗುವುದು ಎಂದು ಹೇಳಿ ಜಿಲ್ಲೆಗೆ ಒಂದು ಸಚಿವ ಸ್ಥಾನ ಸಿಗಬಹುದು ಎಂದು ಸುಳಿವು ನೀಡಿದರು.

    ಕಾಂಗ್ರೆಸ್ ಸಚಿವ ಸ್ಥಾನದ ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ವಂಚಿತರಾಗಿರುವ ಎಸ್ ಆರ್ ಪಾಟೀಲ್ ಅಸಮಾಧಾನದ ಕುರಿತು ಉತ್ತರಿಸಿ, ಎಸ್ ಆರ್ ಪಾಟೀಲ್ ಹಾಗೂ ಸತೀಶ್ ಜಾರಕಿಹೊಳಿ ಸಹ ನನ್ನ ಆಪ್ತರೇ. ಎಸ್ ಆರ್ ಪಾಟೀಲ್ ಬರುವ 11 ರಂದು ಇಲ್ಲಿಗೆ ಬರುತ್ತಾರೆ. ಹೀಗಾಗಿ ನಮ್ಮ ನಡುವೆ ಯಾವುದೇ ಅಸಮಾಧಾನವಿಲ್ಲ. ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತೇನೆ ಎನ್ನುವುದು ಸುಳ್ಳು ಸುದ್ದಿಯಾಗಿದ್ದು, ಕ್ಷೇತ್ರದ ಅಭಿವೃದ್ಧಿಯ ಕಡೇ ಗಮನಹರಿಸುವುದಾಗಿ ತಿಳಿದರು.

  • ಸಚಿವ ಸ್ಥಾನ ಆಯ್ಕೆ ಮಾನದಂಡ – `ಕೈ’ ನಾಯಕರ ವಿರುದ್ಧ ಎಸ್ ಆರ್ ಪಾಟೀಲ್ ಗರಂ

    ಸಚಿವ ಸ್ಥಾನ ಆಯ್ಕೆ ಮಾನದಂಡ – `ಕೈ’ ನಾಯಕರ ವಿರುದ್ಧ ಎಸ್ ಆರ್ ಪಾಟೀಲ್ ಗರಂ

    ಪಬ್ಲಿಕ್ ಟಿವಿ
    ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಚಿವ ಖಾತೆಯ ಪಟ್ಟಿ ಅಂತಿಮವಾಗುತ್ತಿದಂತೆ ಅಸಮಾಧಾನ ಸ್ಫೋಟಗೊಂಡಿದ್ದು, ಪಕ್ಷದ ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಎಸ್ ಆರ್ ಪಾಟೀಲ್ ಸಹ ಅಸಮಾಧಾನ ಹೊರ ಹಾಕಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಎಸ್ ಆರ್ ಪಾಟೀಲ್, ಇದೇ ವೇಳೆ ಜಾತ್ಯಾತೀತ ತತ್ವವನ್ನು ಹೊಂದಿರುವ ದೇಶದಲ್ಲಿ ಸಚಿವ ಖಾತೆಗಳನ್ನು ಜಾತಿ ಆಧಾರದ ಮೇಲೆ ಹಂಚಿಕೆ ಮಾಡುತ್ತಿರುವುದು ಉತ್ತಮವಲ್ಲ. ಆದರೆ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಖಾತೆ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಉತ್ತಮ ನಾಯಕರನ್ನು ಆಯ್ಕೆ ಮಾಡಿರುತ್ತಾರೆ. ಅದ್ದರಿಂದ ಯಾವುದೇ ಜವಾಬ್ದಾರಿ ನೀಡಿದರೂ ಮಾಡಬೇಕು ಎಂಬ ಅಭಿಪ್ರಾಯಪಟ್ಟರು.

    ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪಕ್ಷ ವಿಫಲವಾಗಿದೆ. ಹೆಚ್ಚು ಸ್ಥಾನ ಪಡೆದಿದ್ದರೆ ನಮ್ಮ ಪಕ್ಷವೇ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುತಿತ್ತು. ಆದರೆ ಇದು ಸಾಧ್ಯವಾಗಿಲ್ಲ. ಅದ್ದರಿಂದ ಉತ್ತರ ಕರ್ನಾಟಕದಲ್ಲಿ ಪಕ್ಷ ಮುಂದಾಳತ್ವ ವಹಿಸಿದ್ದ ನಾನು ನೈತಿಕ ಹೊಣೆ ಹಾಗೂ ಜವಾಬ್ದಾರಿ ಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

    ಇಂಧನ ಖಾತೆ ಹಗ್ಗ ಜಗ್ಗಾಟ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಪ್ರಮುಖ ನಾಯಕರೇ ಏಕೆ ಖಾತೆಗಾಗಿ ಕಿತ್ತಾಟ ನಡೆಸಿದ್ದಾರೆ ಎಂಬುವುದು ತಿಳಿದು ಬಂದಿಲ್ಲ. ಜನರ ಸೇವೆ ಮಾಡಲು ಸಚಿವ ಸ್ಥಾನವೇ ಅಗತ್ಯವಿಲ್ಲ. ಯಾವುದೇ ಸ್ಥಾನ ಪಡೆದರು ಸೇವೆ ಮಾಡಬಹುದು. ಮಂತ್ರಿ ಆಗದೇ ಇದ್ದರೆ ಏಕೆ ನಿರಾಸೆಯಾಗಬೇಕು ಎಂದು ಪ್ರಶ್ನಿಸಿದರು.

    ಕ್ಷೇತ್ರದ ಜನರು ನಾಲ್ಕು ಬಾರಿ ನನ್ನನು ಆಯ್ಕೆ ಮಾಡಿದ್ದಾರೆ. ಅವರ ಸೇವೆ ಮಾಡುವುದು ನನ್ನ ಕರ್ತವ್ಯ. ಇದಕ್ಕಾಗಿ ಮಂತ್ರಿ ಸ್ಥಾನದ ಅಗತ್ಯವಿಲ್ಲ. ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭಕ್ಕೆ ತಮಗೂ ಆಹ್ವಾನ ನೀಡಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ ನಾನು ಹೋಗುತ್ತೇನೆ ಎಂದು ತಿಳಿಸಿದರು.

  • ಬುಧವಾರ ಶಾಸಕರ ಪ್ರಮಾಣ ವಚನ – ಸಂಪುಟಕ್ಕೆ ಯಾರು ಇನ್?

    ಬುಧವಾರ ಶಾಸಕರ ಪ್ರಮಾಣ ವಚನ – ಸಂಪುಟಕ್ಕೆ ಯಾರು ಇನ್?

    ಬೆಂಗಳೂರು: ಸರ್ಕಾರ ರಚನೆಯಾಗಿ ಎರಡು ವಾರವಾದರೂ ಇನ್ನೂ ಗಜ ಪ್ರಸವದಂತಾಗಿರೋ ರಾಜ್ಯ ಸಚಿವ ಸಂಪುಟ ಬುಧವಾರ ರಚನೆಯಾಗಲಿದೆ. ರಾಜಭವನದ ಗಾಜಿನ ಮನೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಪ್ರಮಾಣವಚನ ಸಮಾರಂಭ ನಡೆಯಲಿದೆ.

    ಕಾಂಗ್ರೆಸ್‍ನಿಂದ ಕನಿಷ್ಠ 14 ಶಾಸಕರು ಹಾಗೂ ಜೆಡಿಎಸ್‍ನಿಂದ 8 ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನ ಸ್ಫೋಟಗೊಳ್ಳುವ ಲಕ್ಷಣಗಳು ದಟ್ಟವಾಗಿರುವ ಕಾರಣ, ಪರಿಸ್ಥಿತಿ ಅವಲೋಕಿಸಿ 2ನೇ ಹಂತದ ವಿಸ್ತರಣೆಗೆ ಮೈತ್ರಿಕೂಟ ಸರ್ಕಾರ ನಿರ್ಧರಿಸಿದೆ. ಜೆಡಿಎಸ್‍ಗೆ ಹೋಲಿಸಿದರೆ, ಕಾಂಗ್ರೆಸ್‍ನಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿವೆ. ದೆಹಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆದಿವೆ. ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಅಂತಿಮ ಪಟ್ಟಿ ಹೊರಬೀಳಲಿದೆ. ಕಾಂಗ್ರೆಸ್ ಜೊತೆಗೆ ಜೆಡಿಎಸ್ ಪಟ್ಟಿ ಕೂಡ ಬಹುತೇಕ ಅಂತಿಮವಾಗಿದೆ.

    ಕಾಂಗ್ರೆಸ್ ಸಂಭಾವ್ಯ ಪಟ್ಟಿ :
    ಒಕ್ಕಲಿಗ ಕೋಟಾ – 3 ಸ್ಥಾನ
    * ಡಿ.ಕೆ. ಶಿವಕುಮಾರ್, ಕನಕಪುರ
    * ಎಂ. ಕೃಷ್ಣಪ್ಪ, ವಿಜಯನಗರ
    * ಕೃಷ್ಣ ಬೈರೇಗೌಡ, ಬ್ಯಾಟರಾಯನಪುರ

    ಲಿಂಗಾಯತರ ಕೋಟಾ – 3 ಸ್ಥಾನ
    * ಎಂ.ಬಿ. ಪಾಟೀಲ್, ಬಬಲೇಶ್ವರ
    * ರಾಜಶೇಖರ ಪಾಟೀಲ್, ಹುಮ್ನಾಬಾದ್
    * ಶಾಮನೂರು ಶಿವಶಂಕರಪ್ಪ, ದಾವಣಗೆರೆ ದಕ್ಷಿಣ

    ಎಸ್‍ಸಿ ಕೋಟಾ – 2 ಸ್ಥಾನ
    * ಪ್ರಿಯಾಂಕ ಖರ್ಗೆ, ಚಿತ್ತಾಪುರ
    * ರೂಪಾ ಶಶಿಧರ್, ಕೆಜಿಎಫ್

    ಎಸ್‍ಟಿ ಕೋಟಾ – 2 ಸ್ಥಾನ
    * ಸತೀಶ್ ಜಾರಕಿಹೊಳಿ, ಯಮಕನಮರಡಿ
    * ಟಿ. ರಘುಮೂರ್ತಿ, ಚಳ್ಳಕೆರೆ

    ಹಿಂದುಳಿದ ವರ್ಗ ಕೋಟಾ – 2 ಸ್ಥಾನ
    * ಹೆಚ್.ಎಂ. ರೇವಣ್ಣ, ಮೇಲ್ಮನೆ ಸದಸ್ಯ
    * ಪ್ರತಾಪ್‍ಚಂದ್ರ ಶೆಟ್ಟಿ, ಮೇಲ್ಮನೆ ಸದಸ್ಯ

    ಅಲ್ಪಸಂಖ್ಯಾತರ ಕೋಟಾ – 2 ಸ್ಥಾನ
    * ರೋಷನ್ ಬೇಗ್, ಶಿವಾಜಿನಗರ
    * ಕೆ.ಜೆ. ಜಾರ್ಜ್, ಸರ್ವಜ್ಞನಗರ

    ಜೆಡಿಎಸ್ ಸಂಭಾವ್ಯ ಪಟ್ಟಿ
    ಒಕ್ಕಲಿಗ ಕೋಟಾ – 4 ಸಚಿವ ಸ್ಥಾನ
    * ಎಚ್.ಡಿ. ರೇವಣ್ಣ, ಹೊಳೆನರಸೀಪುರ
    * ಜಿ.ಟಿ. ದೇವೇಗೌಡ, ಚಾಮುಂಡೇಶ್ವರಿ
    * ಸಿ.ಎಸ್. ಪುಟ್ಟರಾಜು, ಮೇಲುಕೋಟೆ
    * ಸತ್ಯನಾರಾಯಣ, ಶಿರಾ

    ಕುರುಬ ಕೋಟಾ – 2 ಸ್ಥಾನ
    ಎಚ್. ವಿಶ್ವನಾಥ್, ಹುಣಸೂರು
    ಬಂಡೆಪ್ಪ ಕಾಶೆಂಪುರ್, ಬೀದರ್ ದಕ್ಷಿಣ

    ಲಿಂಗಾಯತರ ಕೋಟಾ – 1 ಸ್ಥಾನ
    * ವೆಂಕಟರಾವ್ ನಾಡಗೌಡ – ಸಿಂಧನೂರು

    ಎಸ್‍ಸಿ ಕೋಟಾ – 1 ಸ್ಥಾನ
    ಎನ್. ಮಹೇಶ್- ಕೊಳ್ಳೇಗಾಲ

  • ಮೋದಿ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ – ಪೇಜಾವರ ಶ್ರೀ

    ಮೋದಿ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ – ಪೇಜಾವರ ಶ್ರೀ

    ಮೈಸೂರು: ಕೇಂದ್ರ ಸರ್ಕಾರದ ನಾಲ್ಕು ವರ್ಷದ ಆಡಳಿತದ ಬಗ್ಗೆ ಅತೃಪ್ತಿ ವ್ಯಕ್ತಪಡಿಸುವಂತಹ ಹೇಳಿಕೆ ನೀಡಿದ್ದ ಪೇಜಾವರ ಶ್ರೀಗಳು ಇಂದು ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಆಡಳಿತದ ವಿಚಾರವಾಗಿ ನಾನು ಉಡುಪಿಯಲ್ಲಿ ಮಾತನಾಡಿದ್ದೆ, ಆದರೆ ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ. ಅಂದು ಮಾತನಾಡುವಾಗ ಸರಿಯಾಗಿ ಮೈಕ್ ಇರಲಿಲ್ಲ. ಅದು ಕೆಲವರಿಗೆ ಸರಿಯಾಗಿ ಕೇಳಿಸದೆ ತಪ್ಪಾಗಿ ಅರ್ಥೈಸಲಾಗಿದೆ. ಪತ್ರಕರ್ತರು ಮೋದಿ ಆಡಳಿತದ ಬಗ್ಗೆ ಅಭಿಪ್ರಾಯ ಕೇಳಿದ ವೇಳೆ ನಾನು ಎಲ್ಲಿಯೂ ಅತೃಪ್ತಿ ಆಗಿದೆ ಎಂದು ಎಲ್ಲಿಯೂ ಹೇಳಿಲ್ಲ. ಅವರ ಮೇಲೆ ಅಸಮಾಧಾನವನ್ನು ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಿಕರಣ ನೀಡಿದ್ದಾರೆ.  ಇದನ್ನು ಓದಿ: ಕುಮಾರಸ್ವಾಮಿ ಪೂರ್ಣಾವಧಿ ಸರ್ಕಾರ ಮಾಡಲಿ – ಪೇಜಾವರಶ್ರೀ ಹಾರೈಕೆ

    ಇದೇ ವೇಳೆ ಗಂಗಾ ನದಿ ಹೇಳಿಕೆ ಕುರಿತು ಮಾತನಾಡಿದ ಅವರು, ಗಂಗಾನದಿ ಶುಚಿತ್ವ ಹಾಗೂ ವಿದೇಶದಲ್ಲಿನ ಕಪ್ಪು ಹಣದ ಬಗ್ಗೆ ಉತ್ತಮ ಸಾಧನೆ ಆಗಿಲ್ಲ ಎಂದು ಹೇಳಿದ್ದೇನೆ. ಈ ಬಗ್ಗೆ ಮಾತ್ರ ನಾನು ಅತೃಪ್ತಿಯನ್ನು ವ್ಯಕ್ತಪಡಿಸಿದ್ದೇನೆ. ಆದರೆ ಅವರ ಸರ್ಕಾರದ ಎಲ್ಲ ಕೆಲಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲ. ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದರು.

    ನನ್ನ ಹೇಳಿಕೆಯಿಂದ ಹೊಸ ಚರ್ಚೆ ಆರಂಭವಾಗಿತ್ತು. ಆ ಕಾರಣದಿಂದ ತರಾತುರಿಯಲ್ಲಿ ಸ್ಪಷ್ಟೀಕರಣ ನೀಡುತ್ತಿದ್ದೇನೆ. ನಾನು ಒಂದು ಪಕ್ಷ ಅಥವಾ ವ್ಯಕ್ತಿಯ ಪರವಾಗಿ ನಾನು ಇಲ್ಲ. ಪಕ್ಷಾತೀತವಾಗಿ ನಾನು ಸಲಹೆ ಸೂಚನೆಗಳನ್ನ ಕೊಡುತ್ತೇವೆ. ಅದೆ ರೀತಿ ಮೋದಿ ಸರ್ಕಾರಕ್ಕೂ ಸಲಹೆ ಸೂಚನೆ ನೀಡಿದ್ದೇವೆ. ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಎರಡು ಕೆಲಸಗಳು ಇನ್ನು ಉತ್ತಮವಾಗಿ ಆಗಬೇಕಿತ್ತು. ಅದರ ಬಗ್ಗೆ ಸಲಹೆ ನೀಡಿದ್ದೇವೆ ಅಷ್ಟೇ ಎಂದರು. ಇದನ್ನು ಓದಿ: ಪೇಜಾವರ ಶ್ರೀ ಸನ್ಯಾಸಿಗಳು, ಅವರು ಟಿವಿ ನೋಡದ ಕಾರಣ ಕೇಂದ್ರದ ಯೋಜನೆಗಳ ಅರಿವಿಲ್ಲ: ಕರಂದ್ಲಾಜೆ

    ಇದೇ ವೇಳೆ ಸರ್ಕಾರದ ಸಲಹೆ ನೀಡುವ ಕುರಿತು ಮಾತನಾಡಿದ ಅವರು ರಾಜ್ಯದ ಮೈತ್ರಿ ಸರಕಾರಕ್ಕೆ ಇನ್ನೂ ರೆಸಾರ್ಟ್ ರಾಜಕೀಯದ ಭಯವಿದೆ. ಆರು ತಿಂಗಳ ನಂತರ ಅವಿಶ್ವಾಸ ನಿರ್ಣಯ ಮಂಡಿಸಿಬಿಟ್ಟರೆ ಹೇಗೆ ಎಂಬ ಆತಂಕ ಆಡಳಿತ ನಡೆಸುವವರಿಗೆ ಇದೆ. ಇದುವರೆಗೂ ಸಚಿವ ಸಂಪುಟವೇ ರಚನೆ ಆಗಿಲ್ಲ. ಪರಸ್ಪರ ಆರೋಪ ಮಾಡಿಕೊಂಡವರು ಜೊತೆಯಾಗಿ ಸರಕಾರ ಮಾಡಿದ್ದಾರೆ. ಅಪ್ಪನಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯ ಅವರೇ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಮೂರು ಪಕ್ಷಗಳು ಸೇರಿ ಸರಕಾರ ರಚಿಸಿ ಬಿಡಲಿ. ಆಗ ಯಾವುದೇ ಅಸ್ಥಿರತೆ ಭಯ ಇರುವುದಿಲ್ಲ ಎಂದು ಸಲಹೆ ನೀಡಿದರು.

  • ರೇವಣ್ಣಗೆ ಇಲ್ಲ ಇಂಧನ ಖಾತೆ- ಕೊನೆಗೂ ಗೆದ್ದ ಡಿಕೆ ಶಿವಕುಮಾರ್?

    ರೇವಣ್ಣಗೆ ಇಲ್ಲ ಇಂಧನ ಖಾತೆ- ಕೊನೆಗೂ ಗೆದ್ದ ಡಿಕೆ ಶಿವಕುಮಾರ್?

    ಬೆಂಗಳೂರು: ಫುಟ್‍ಬಾಲ್ ಆಡಲ್ಲ, ನಾನು ಚೆಸ್ ಪ್ಲೇಯರ್. ಚೆಸ್ ಆಡಿ ಚೆಕ್ ಕೊಡುವವನು ಎಂದು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ತೋರಿಸಿದ್ದ ಡಿಕೆಶಿ ಕೊನೆಗೂ ತಮ್ಮ ಪ್ರೀತಿಯ ಇಂಧನ ಖಾತೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ಹೌದು. ಇಂಧನ ಖಾತೆಗಾಗಿ ಎಚ್‍ಡಿ ರೇವಣ್ಣ ಮತ್ತು ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದರು. ಇಬ್ಬರು ಘಟಾನುಘಟಿ ನಾಯಕರಾದ ಕಾರಣ ಇಬ್ಬರ ಮನ ಒಲಿಸುವುದು ಕಷ್ಟವಾಗಿತ್ತು. ಈ ಮಧ್ಯೆ ರೇವಣ್ಣ ಅವರು ಇಂಧನದ ಜೊತೆ ಪಿಡಬ್ಲ್ಯೂಡಿ ಖಾತೆಯನ್ನು ನೀಡುವಂತೆ ಮಾಜಿ ಪ್ರಧಾನಿ ದೇವೇಗೌಡರ ಜೊತೆ ಪಟ್ಟು ಹಿಡಿದಿದ್ದರು.

    ರೇವಣ್ಣ ಎರಡು ಖಾತೆಗೆ ಪಟ್ಟು ಹಿಡಿದಿದ್ದು ಜೆಡಿಎಸ್ ನವರಿಗೆ ತಲೆನೋವಾಗಿತ್ತು. ಇಂದು ಎಚ್‍ಡಿ ದೇವೇಗೌಡರು ಮಗ ರೇವಣ್ಣ ಅವರನ್ನು ಮನ ಒಲಿಸಿದ್ದಾರೆ. ಪರಿಣಾಮ ಡಿಕೆ ಶಿವಕುಮಾರ್ ಅವರಿಗೆ ಇಂಧನ ಖಾತೆಯನ್ನು ಬಿಟ್ಟುಕೊಡಲು ರೇವಣ್ಣ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಸೋಮವಾರ ದೇವೇಗೌಡರು ತಮ್ಮ ನಿವಾಸದಲ್ಲಿ ಮೂರು ಗಂಟೆ ನಡೆಸಿದ ಮಾತುಕತೆ ಕೊನೆಗೂ ಫಲಪ್ರದವಾಗಿದೆ. ದೇವೇಗೌಡರ ನಿರ್ಧಾರದಂತೆ ಡಿಕೆ ಶಿವಕುಮಾರ್ ಅವರಿಗೆ ಇಂಧನ ಖಾತೆ ಹಾಗೂ ರೇವಣ್ಣ ಅವರಿಗೆ ಲೋಕೋಪಯೋಗಿ ಖಾತೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

    ಸಂಧಾನದ ವೇಳೆ ದೇವೇಗೌಡರು ಒಕ್ಕಲಿಗ ಒಗ್ಗಟ್ಟಿನ ಬಗ್ಗೆ ಪ್ರಸ್ತಾಪ ಮಾಡಿದ್ದು, ಎರಡು ಖಾತೆಗಳು ಒಬ್ಬರೇ ಪಡೆದರೆ ಒಕ್ಕಲಿಗ ಸಮುದಾಯದಿಂದ ಉತ್ತಮ ಸಂದೇಶ ರವಾನೆಯಾಗುವುದಿಲ್ಲ. ಅಲ್ಲದೇ ಡಿಕೆ ಶಿವಕುಮಾರ್ ಅವರ ಶಕ್ತಿಯನ್ನು ಲಘುವಾಗಿ ಪರಿಗಣಿಸಬಾರದು. ಎರಡು ಖಾತೆಗಳನ್ನು ನೀಡುವುದರಿಂದ ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಬಹುದು ಎಂಬುವುದನ್ನು ರೇವಣ್ಣ ಅವರಿಗೆ ಮನವರಿಗೆ ಮಾಡಿಕೊಟ್ಟಿದ್ದಾರೆ.

    8 ಜನರಿಷ್ಟೇ ಸಚಿವ ಸ್ಥಾನ: ಇದೇ ವೇಳೆ ಜೆಡಿಎಸ್‍ನ ಎಂಟು ನಾಯಕರಿಗೆ ಮಾತ್ರ ಸಚಿವ ಸ್ಥಾನ ನೀಡಲು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಉಳಿದ ಮೂರು ಸಚಿವ ಸ್ಥಾನಗಳನ್ನು ಹಾಗೆಯೇ ಉಳಿಸಿಕೊಳ್ಳುವ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ. ಇದನ್ನು ಓದಿ: ಮುಜರಾಯಿ ಖಾತೆ ಕೊಡಿ, ದೇವಸ್ಥಾನ ಸುತ್ಕೊಂಡು ಇರ್ತೀನಿ – ಡಿಕೆಶಿ

    ಸದ್ಯ ಜಿಲ್ಲಾ ಹಾಗೂ ಜಾತಿವಾರು ಸಚಿವ ಸ್ಥಾನವನ್ನು ಹಂಚಿಕೆ ಮಾಡಲು ದೇವೇಗೌಡ ಅವರು ನಿರ್ಧರಿಸಿದ್ದು, ಈ ಸೂತ್ರದಲ್ಲಿ ಒಕ್ಕಲಿಗ ಸಮುದಾಯವನ್ನು ದೂರ ಉಳಿಸಿದ್ದಾರೆ ಎನ್ನಲಾಗಿದೆ. ಇದರಂತೆ ಮೈಸೂರು, ಮಂಡ್ಯ, ಹಾಸನ, ತುಮಕೂರು ಜಿಲ್ಲೆಗೆ ತಲಾ ಒಂದು ಸಚಿವ ಸ್ಥಾನ ಲಭಿಸಲಿದ್ದು, ಎಸ್‍ಸಿ ಮತ್ತು ಎಸ್‍ಟಿ, ಲಿಂಗಾಯತ, ಕುರುಬ ಸಮುದಾಯದಗಳಿಗೆ ತಲಾ ಒಂದು ಸ್ಥಾನ ನೀಡಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ. ಆದರೆ ಮೊದಲ ಪಟ್ಟಿಯಲ್ಲಿ ಅಲ್ಪಸಂಖ್ಯಾತರಿಗೆ ಸ್ಥಾನದ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎನ್ನಲಾಗಿದೆ. ಇದನ್ನು ಓದಿ: ನಾನು ಫುಟ್ಬಾಲ್ ಆಡೋನಲ್ಲ, ಚೆಸ್ ಆಡಿ ಚೆಕ್ ಕೊಡುವವನು: ಹೈಕಮಾಂಡ್‍ಗೆ ಡಿಕೆಶಿ ಟಾಂಗ್

    ಇಂಧನ ಖಾತೆ ಸೇರಿದಂತೆ ನಾನು ಯಾವುದೇ ಖಾತೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಎಚ್‍ಡಿ ರೇವಣ್ಣ ಜೊತೆ ಮಾತುಕತೆ ನಡೆಸಿಲ್ಲ. ಅವರು ದೊಡ್ಡ ಕುಟುಂಬದ ಮಕ್ಕಳು. ರೇವಣ್ಣ ಜೊತೆ ಮಾತನಾಡಲು ನನಗೆ ಹುಚ್ಚು ಹಿಡಿದಿಲ್ಲ. ಅವರು ದೊಡ್ಡ ನಾಯಕರು ಎಂದು ಡಿಕೆಶಿ ಶುಕ್ರವಾರ ಪ್ರತಿಕ್ರಿಯಿಸಿದ್ದರು. ಇದನ್ನು ಓದಿ: ಡಿಕೆಶಿಯನ್ನು ಸಮಾಧಾನಪಡಿಸಲು ಮುಂದಾದ ಹೈಕಮಾಂಡ್!

  • ತಿರುವಳ್ಳೂರಿನ ವಿಷ್ಣುದೇವರ ಮೊರೆಹೋದ ಮಾಜಿ ಸಚಿವ ಡಿಕೆಶಿ!

    ತಿರುವಳ್ಳೂರಿನ ವಿಷ್ಣುದೇವರ ಮೊರೆಹೋದ ಮಾಜಿ ಸಚಿವ ಡಿಕೆಶಿ!

    ಬೆಂಗಳೂರು: ಮಾಜಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರು ತಮಿಳುನಾಡಿನ ತಿರವಳ್ಳೂರಿನ ವಿಷ್ಣುದೇವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ರಾಜ್ಯದ ಮೈತ್ರಿ ಸರ್ಕಾರ ಸಂಪುಟ ರಚನೆ ಹಗ್ಗಜಗ್ಗಾಟದ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಸಿಎಂ ಕುಮಾರಸ್ವಾಮಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಸಂಪುಟ ವಿಸ್ತರಣೆ ಹಾಗೂ ಲೋಕಸಭಾ ಚುನಾವಣೆಯ ಮೈತ್ರಿ ಕುರಿತು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ಶುಕ್ರವಾರವೇ ದೇವಾಲಯಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್ ಅವರು ವಿಶೇಷ ಪೂಜೆ ಹಾಗೂ ಹೋಮ ಹವನ ನಡೆಸಿದ್ದಾರೆ.

    ದೇವಾಲಯಕ್ಕೆ ಕುಟುಂಬದ ಸದಸ್ಯರು ಹಾಗೂ ಆಪ್ತರು ಮಾತ್ರ ಭೇಟಿ ನೀಡಿದ್ದಾರೆ. ಹಿರಿಯ ಜ್ಯೋತಿಷಿಗಳ ಮುಂದಾಳತ್ವದಲ್ಲಿ ಪೂಜೆ ಹಾಗೂ ಹೋಮ ಕಾರ್ಯ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭಿಸಿದ್ದು, ಈ ವೇಳೆ ಯಾರೊಂದಿಗೂ ಮಾತನಾಡದೆ ಪೂಜೆ ಕಾರ್ಯದಲ್ಲಿ ಡಿಕೆಶಿ ಮಗ್ನರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಸಮ್ಮಿಶ್ರ ಸರ್ಕಾರದ ರಚನೆ ಹಾಗೂ ಸಂಪುಟ ವಿಸ್ತರಣೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮುಖ ಕಾರ್ಯನಿರ್ವಹಿಸಿದ್ದರು. ಇದೇ ವೇಳೆ ಸಿಬಿಐ ಅಧಿಕಾರಿಗಳು ಡಿಕೆಶಿ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

    ಸಂಪುಟ ವಿಸ್ತರಣೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಇಂಧನ ಖಾತೆಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಅಂಶ ಕಾಂಗ್ರೆಸ್ ವಲಯದಿಂದ ಕೇಳಿ ಬಂದಿತ್ತು. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿ ತಾನು ಯಾವುದೇ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಪಕ್ಷದ ನಾಯಕರು, ಹೈಕಮಾಂಡ್ ನೀಡುವ ಜವಾಬ್ದಾರಿ ನಿರ್ವಹಿಸುವುದಾಗಿ ತಿಳಿಸಿದ್ದರು. ಅಲ್ಲದೇ ಈ ವೇಳೆ ಮಾತನಾಡಿದ್ದ ಸಿಎಂ ಕುಮಾರಸ್ವಾಮಿ ಅವರು ಬುಧವಾರ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಮಾಹಿತಿಯನ್ನು ನೀಡಿದ್ದರು.

  • ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ – ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ : ಡಿಸಿಎಂ ಪರಮೇಶ್ವರ್

    ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ – ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ : ಡಿಸಿಎಂ ಪರಮೇಶ್ವರ್

    ತುಮಕೂರು: ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿಯಲಿದ್ದು, ಸರ್ಕಾರದ ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಂತ್ರಿ ಪರಮೇಶ್ವರ್ ಅವರು ಹೇಳಿದ್ದಾರೆ.

    ಸ್ವಕ್ಷೇತ್ರ ಕೊರಟಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಯಾರಿಗೆ ಎಷ್ಟು ಖಾತೆ ಎಂಬುದು ತೀರ್ಮಾನ ಆಗಿದೆ. ಪಕ್ಷದ ವರಿಷ್ಠರು ಮುಂದಿ ರಾಜಕೀಯ ಬೆಳವಣಿಗೆ ನೋಡಿ ತೀರ್ಮಾನ ಕೈಗೊಳ್ಳಲಿದ್ದಾರೆ. ಆದರೆ ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ ನಿಯಮವಿದ್ದು, ಹಾಗೆಯೇ ಇನ್ನು ಮುಂದೆಯೂ ನಡೆಯುತ್ತದೆ ಎಂದರು.

    ಈ ಹಿಂದೆ ಸರ್ಕಾರದಲ್ಲಿ ಗೃಹಸಚಿವ ಸ್ಥಾನ ಪಡೆದಿದ್ದೆ ಆ ವೇಳೆ ಪಕ್ಷದ ಜವಾಬ್ದಾರಿ ನೀಡಲಾಯಿತು. ಈಗಲೂ ಪಕ್ಷದ ವರಿಷ್ಠರು ಯಾವ ಜವಾಬ್ದಾರಿಯನ್ನ ಕೊಟ್ಟರು ನಿಭಾಯಿಸುತ್ತೇನೆ. ಅಲ್ಲದೇ ನಮ್ಮ ಸರ್ಕಾರದ ಅವಧಿಯಲ್ಲಿ ನಿಗಧಿಯಾಗಿರುವ ಎಲ್ಲಾ ಯೋಜನೆಗಳು ಮೈತ್ರಿ ಸರಕಾರದಲ್ಲೂ ಮುಂದುವರೆಸುತ್ತೇವೆ ಎಂದು ತಿಳಿಸಿದರು.

    ಇದೇ ವೇಳೇ ರೈತರ ಸಾಲ ಮನ್ನಾ ಕುರಿತು ಪ್ರತಿಕ್ರಿಯೆ ನೀಡಿ, ಸಾಲ ಮನ್ನಾ ವಿಚಾರದಲ್ಲಿ ಎರಡೂ ಪಕ್ಷಗಳಲ್ಲಿ ಯಾವುದೇ ಗೊಂದಲ ಇಲ್ಲ. ಮನ್ನಾ ಅಂದರೆ ಎಲ್ಲವನ್ನೂ ಮನ್ನಾ ಮಾಡಲು ಸಾಧ್ಯವಿಲ್ಲ. ಬೆಳೆ ಸಾಲ, ಒಡವೆ ಸಾಲ, ಮದುವೆ ಸಾಲ, ಬೇರೆ ಬೇರೆ ರೀತಿ ವರ್ಗಗಗಳಿದೆ. ಹೀಗಾಗಿ ಸಾಲ ಮನ್ನಾ ರೈತನಿಗೆ ನೇರವಾಗಿ ಸಿಗುವ ಹಾಗೇ ಮಾಡಲಾಗುವುದು ಎಂದರು.

  • ಕೇರಳದಲ್ಲಿ ಪೆಟ್ರೋಲ್, ಡೀಸೆಲ್ ದರ 1 ರೂ. ಇಳಿಕೆ!

    ಕೇರಳದಲ್ಲಿ ಪೆಟ್ರೋಲ್, ಡೀಸೆಲ್ ದರ 1 ರೂ. ಇಳಿಕೆ!

    ತಿರುವನಂತಪುರಂ: ಕೇರಳ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 1 ರೂ. ಕಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

    ಈ ಕುರಿತು ಮಾಹಿತಿ ನೀಡಿದ ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್, ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 1 ರೂ. ಕಡಿತಗೊಳಿಸುತ್ತಿದ್ದು, ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ 500 ಕೋಟಿ ರೂ. ಅಧಿಕ ಹೊರೆ ಆಗಲಿದೆ. ರಾಜ್ಯದ ಆದಾಯದಲ್ಲಿ ಇಂಧನ ಮಾರಾಟದಿಂದ ಬರುವ ತೆರಿಗೆ ಮೂರನೇ ಸ್ಥಾನದಲ್ಲಿದೆ. ಜೂನ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.

    ಬುಧವಾರ ಕೇರಳ ರಾಜಧಾನಿ ತಿರುವನಂತಪುರಂ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 82.61 ರೂ. ಇದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 75.10 ರೂ. ಇದೆ. ತೈಲ ಬೆಲೆ ಹೆಚ್ಚಳ ದಿಂದ ರಾಜ್ಯ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗಿತ್ತು. ಹಲವರು ಬೆಲೆ ಕಡಿತಗೊಳಿಸುವಂತೆ ಸಲಹೆ ನೀಡಿದ್ದರು. ಅದ್ದರಿಂದ ತಕ್ಷಣದ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಕೇಂದ್ರ ಸರ್ಕಾರ 2014ರ ರಿಂದ ಇದುವರೆಗೂ 9 ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದು, 2016 ರಲ್ಲಿ ಎರಡು ಬಾರಿ ಮಾತ್ರ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು.

    ಯಾವ ರಾಜ್ಯದಲ್ಲಿ ವ್ಯಾಟ್ ಎಷ್ಟಿದೆ?
    ಕರ್ನಾಟಕ: ಪೆಟ್ರೋಲ್ – ಶೇ.30, ಡೀಸೆಲ್ – ಶೇ.19
    ಮಹಾರಾಷ್ಟ್ರ: ಪೆಟ್ರೋಲ್ – ಶೇ.47.64, ಡೀಸೆಲ್ – ಶೇ.28.39
    ಆಂಧ್ರ ಪ್ರದೇಶ: ಪೆಟ್ರೋಲ್ – ಶೇ. 38.83, ಡೀಸೆಲ್ – ಶೇ. 30.82
    ಮಧ್ಯಪ್ರದೇಶ: ಪೆಟ್ರೋಲ್ – ಶೇ. 38.79, ಡೀಸೆಲ್ – ಶೇ. 30.22
    ತೆಲಂಗಾಣ: ಪೆಟ್ರೋಲ್ – ಶೇ. 35.20, ಡೀಸೆಲ್ – ಶೇ.27.00

    ಪೆಟ್ರೋಲ್ ಹಾಗೂ ಡೀಸೆಲ್ ಮೂಲಕ ಆದಾಯ ಸಂಗ್ರಹ ಮಾಡುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ದೇಶದಲ್ಲೇ ಐದನೇ ಸ್ಥಾನವಿದೆ. ದೇಶದಲ್ಲೇ ಅತಿ ಹೆಚ್ಚು ತೆರಿಗೆ ವಿಧಿಸೋ ಮಹಾರಾಷ್ಟ್ರ ಸರ್ಕಾರ ಆದಾಯ ಸಂಗ್ರಹದಲ್ಲಿ ಮೊದಲ ಸ್ಥಾನವಿದೆ. ಸೇವಾ ತೆರಿಗೆ, ಪ್ರವೇಶ ತೆರಿಗೆಗಳ ಮೂಲಕ ರಾಜ್ಯಗಳು ಸಂಗ್ರಹ ಮಾಡುವ ಹಣ ಈ ಕೆಳಗಿನಂತಿದೆ.

    ತೆರಿಗೆ ಸಂಗ್ರಹದಲ್ಲಿ ಯಾರು ಮೊದಲು:
    ನಂ.1 ಮಹಾರಾಷ್ಟ್ರ: 23,160 ಕೋಟಿ ರೂ.
    ನಂ.2 ಗುಜರಾತ್: 15,958 ಕೋಟಿ ರೂ.
    ನಂ.3 ಉತ್ತರಪ್ರದೇಶ: 15, 850 ಕೋಟಿ ರೂ.
    ನಂ.4 ತಮಿಳುನಾಡು: 12, 563 ಕೋಟಿ ರೂ.
    ನಂ.5 ಕರ್ನಾಟಕ: 11,103 ಕೋಟಿ ರೂ.

    ಯಾರಿಗೆ ಎಷ್ಟು?
    ಪೆಟ್ರೋಲ್ ಮೇಲೆ ಅಬಕಾರಿ ಸುಂಕ: 21.48 ಪೈಸೆ (ಲೀಟರ್ ಗೆ)
    ಪೆಟ್ರೋಲ್ ಮೇಲೆ ವ್ಯಾಟ್: ಶೇ.27
    ಡೀಲರ್ಸ್‍ಗಳ ಕಮಿಷನ್: 3.23 (ಲೀಟರ್ ಗೆ)

    ಡೀಸೆಲ್ ಮೇಲೆ ಅಬಕಾರಿ ಸುಂಕ: 17.33 (ಲೀಟರ್ ಗೆ)
    ಡೀಸೆಲ್ ಮೇಲಿನ ವ್ಯಾಟ್: ಶೇ.27
    ಡೀಲರ್ಸ್‍ಗಳ ಕಮಿಷನ್: 2.17 (ಲೀಟರ್ ಗೆ)

  • ಸಂಪೂರ್ಣ ಸಾಲಮನ್ನಾಕ್ಕೆ ಆರ್ಥಿಕ ಇಲಾಖೆಯಿಂದ ಕೊಕ್ಕೆ: ಷರತ್ತು ವಿಧಿಸಿ ಎಂದ ಅಧಿಕಾರಿಗಳು

    ಸಂಪೂರ್ಣ ಸಾಲಮನ್ನಾಕ್ಕೆ ಆರ್ಥಿಕ ಇಲಾಖೆಯಿಂದ ಕೊಕ್ಕೆ: ಷರತ್ತು ವಿಧಿಸಿ ಎಂದ ಅಧಿಕಾರಿಗಳು

    ಬೆಂಗಳೂರು: ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸಂಪೂರ್ಣ ಸಾಲ ಮನ್ನಾ ಮಾಡಲು ಆಸಕ್ತಿ ತೋರಿಸಿದರೆ ರಾಜ್ಯದ ಆರ್ಥಿಕ ಇಲಾಖೆ ಈ ಆಸೆಗೆ ಕೊಕ್ಕೆ ಹಾಕಿದೆ.

    ಹೌದು, ರೈತರ ಸಂಪೂರ್ಣ ಸಾಲಮನ್ನಾ ಮಾಡಿದರೆ ಆರ್ಥಿಕ ಸಂಕಷ್ಟ ಎದುರಾಗುತ್ತದೆ ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ಸಿಎಂ ಎಚ್‍ಡಿ ಕುಮಾರಸ್ವಾಮಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸಾಲಮನ್ನಾ ಮಾಡುವ ಸಂಬಂಧ ಆರ್ಥಿಕ ಇಲಾಖೆಯ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಈ ವೇಳೆ 54 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲು ಸಾಧ್ಯವಿಲ್ಲ. ಸಾಲಮನ್ನಾಗೆ ಷರತ್ತುಗಳನ್ನು ಹಾಕಬೇಕು, ಸಂಪೂರ್ಣ ಸಾಲಮನ್ನಾ ಮಾಡಲು ಹೋದರೆ ಸರ್ಕಾರ ನಡೆಸುವುದು ಕಷ್ಟ. ಕಳೆದ ಸರ್ಕಾರದ ವೇಳೆಯೂ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ತಿಳಿಸಿರುವ ಅಧಿಕಾರಿಗಳು ಈಗಲೂ ವಿತ್ತೀಯ ಶಿಸ್ತಿದೆ. ಆದರೆ ಸದ್ಯದ ಆರ್ಥಿಕ ಸ್ಥಿತಿಯೊಳಗೆ 54 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

    ಹಣಕಾಸು ಅಧಿಕಾರಿಗಳ ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿರುವ ಎಚ್‍ಡಿಕೆ ಸಾಲಮನ್ನಾಕ್ಕೆ ಹಲವು ಷರತ್ತುಗಳನ್ನು ವಿಧಿಸುವ ಸಾಧ್ಯತೆಗಳಿದೆ. ಸಂಪೂರ್ಣ ಸಾಲ ಮನ್ನಾದ ವ್ಯಾಪ್ತಿಯನ್ನು 1 ಲಕ್ಷ ರೂ.ಗೆ ಮಿತಿಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯ ಸರ್ಕಾರದ ಸಾಲಮನ್ನಾ ವಿಷಯವನ್ನು ಪ್ರಮುಖ ಅಸ್ತ್ರವನ್ನಾಗಿ ಪ್ರಯೋಗಿಸುತ್ತಿರುವ ಬಿಜೆಪಿಗೆ ಟಾಂಗ್ ನೀಡಲು ಇಂದು ಸಂಜೆ ಅಥವಾ ನಾಳೆಯೊಳಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

    ಗರಿಷ್ಟ 1 ಲಕ್ಷ ಯಾಕೆ?
    ಬಿಎಸ್ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದ ಬಳಿಕ 1 ಲಕ್ಷ ರೂ.ವರೆಗಿನ ರೈತರ ಸಹಕಾರಿ ಮತ್ತು ರಾಷ್ಟ್ರಿಕೃತ ಬ್ಯಾಂಕ್ ಗಳ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತಿಳಿಸಿದ್ದರು. ಹೀಗಾಗಿ ಒಂದು ಲಕ್ಷ ಮಿತಿ ಹಾಕಿದರೆ ಬಿಜೆಪಿಯ ಟೀಕೆಯಿಂದಲೂ ಪಾರಾಗಬಹುದು ಎನ್ನುವ ನಿರ್ಧಾರಕ್ಕೆ ಸರ್ಕಾರ ಬಂದಿದೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಈ ಹಿಂದೆ ಮಹಾರಾಷ್ಟ್ರ, ಉತ್ತರ ಪ್ರದೇಶ, ಪಂಜಾಬ್ ಸರ್ಕಾರಗಳು ಒಂದು ಲಕ್ಷ ರೂ. ಸಾಲವನ್ನು ಮನ್ನಾ ಮಾಡಿತ್ತು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ 50 ಸಾವಿರ ರೂ. ಸಹಕಾರಿ ಸಂಘದಿಂದ ಪಡೆದ ಸಾಲವನ್ನು ಮನ್ನಾ ಮಾಡಿದ್ದರು. ನಾವು 50 ಸಾವಿರ ರೂ. ಮನ್ನಾ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳ ರೈತರ ಸಾಲವನ್ನು ಮಾಡಲಿ ಎಂದು ಅಂದು ಪ್ರತಿಕ್ರಿಯಿಸಿದ್ದರು.