Tag: state

  • ಆರ್ಥಿಕ ಹಿಂಜರಿತ ದೇಶದಲ್ಲಿ ಅಷ್ಟೇ ಅಲ್ಲ, ಜಾಗತಿಕ ಮಟ್ಟದಲ್ಲೂ ಇದೆ: ಶೆಟ್ಟರ್

    ಆರ್ಥಿಕ ಹಿಂಜರಿತ ದೇಶದಲ್ಲಿ ಅಷ್ಟೇ ಅಲ್ಲ, ಜಾಗತಿಕ ಮಟ್ಟದಲ್ಲೂ ಇದೆ: ಶೆಟ್ಟರ್

    – ಕೇಂದ್ರದಿಂದ ಇವತ್ತಲ್ಲ ನಾಳೆ ಪರಿಹಾರ ಬರುತ್ತೆ

    ಬಾಗಲಕೋಟೆ: ಆರ್ಥಿಕ ಹಿಂಜರಿತ ಕೇವಲ ರಾಜ್ಯ ಮತ್ತು ದೇಶದಲ್ಲಿ ಅಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲೂ ಇದೆ. ಇದು ತಾತ್ಕಾಲಿಕ ಕೇಂದ್ರ ಸರ್ಕಾರ ಅನೇಕ ಪ್ಯಾಕೇಜ್ ಘೋಷಣೆ ಮಾಡಿದೆ. ಸ್ವಲ್ಪ ದಿನಗಳಲ್ಲಿ ಎಲ್ಲಾ ಸರಿಯಾಗುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯಿಂದ ಸಾಕಷ್ಟು ಹಾನಿಯಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‍ಡಿಆರ್‍ಎಫ್) ನಿಯಮದ ಅನುದಾನದ ಜೊತೆಗೆ ರಾಜ್ಯ ಸರ್ಕಾರ 6,200 ರೂ. ಸೇರಿಸಿ ತಾತ್ಕಾಲಿಕ ಹತ್ತು ಸಾವಿರ ಪರಿಹಾರ ಕೊಟ್ಟಿದ್ದೇವೆ ಎಂದು ತಿಳಿಸಿದರು.

    ಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ರೂ. ಕೊಡುತ್ತಿದ್ದೇವೆ. ಸರ್ಕಾರ ತಕ್ಷಣಕ್ಕೆ ಸಾವಿರ ಕೋಟಿ ರೂ. ಬಿಡುಗಡೆ ಮಾಡಿದೆ. ಬೆಳೆಹಾನಿಗೂ ಸಹ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಾಗುತ್ತದೆ. ಕೇಂದ್ರದಿಂದ ಇವತ್ತಲ್ಲ ನಾಳೆ ಪರಿಹಾರ ಬರುತ್ತದೆ. ಒಕ್ಕೂಟದ ವ್ಯವಸ್ಥೆ ಅನುದಾನದ ನಿರೀಕ್ಷೆಯಿಂದಲೇ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದರು.

    ಇದೇ ವೇಳೆ 18 ತಿಂಗಳ ನಂತರ ಮತ ಭಿಕ್ಷೆ ಕೇಳಬೇಕಾಗುತ್ತದೆ ಎಂಬ ಕೋಡಿಹಳ್ಳಿ ಮಠದ ಶ್ರೀಗಳ ಭವಿಷ್ಯದ ವಿಚಾರವಾಗಿ ಮಾತನಾಡಿದ ಶೆಟ್ಟರ್, ಭವಿಷ್ಯದ ಮೇಲೆ ಸರ್ಕಾರ ನಡೆಯಲ್ಲ. ಕೆಲವರು ಮೂರು ತಿಂಗಳು ಅಂದರೆ ಮತ್ತೆ ಕೆಲವರು ಐದು ವರ್ಷ ಅಂತಾರೆ ಅದಕ್ಕೇನು ಹೇಳುತ್ತೀರಾ ಎಂದು ಪ್ರಶ್ನೆ ಮಾಡಿದರು.

  • ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಅಶ್ವಾಸನೆ ನೀಡಿದ್ದಾರೆ: ಶ್ರೀರಾಮಲು

    ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಅಶ್ವಾಸನೆ ನೀಡಿದ್ದಾರೆ: ಶ್ರೀರಾಮಲು

    ಬಳ್ಳಾರಿ: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಅಶ್ವಾಸನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ತಾಯಿ ಇದ್ದಂತೆ, ಪಕ್ಷದ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನಾನು ಬದ್ಧ. ವೈಯಕ್ತಿಕ ಅಭಿಪ್ರಾಯ ಬದಿಗೊತ್ತಿ ಕೆಲಸ ಮಾಡಿ. ಯಾವುದೇ ಪ್ರತಿಭಟನೆ ಮಾಡಬೇಡಿ. ಪಕ್ಷಕ್ಕೆ ಮುಜುಗರ ತರೋ ಕೆಲಸ ಯಾರು ಮಾಡಬೇಡಿ. ಪಕ್ಷಕ್ಕಾಗಿ ಎಲ್ಲರೂ ಸೇರಿ ದುಡಿಯೋಣ ಎಂದು ರಾಜ್ಯದ ಜನರಲ್ಲಿ ವಿನಂತಿ ಮಾಡಿಕೊಂಡರು.

    ಎಲ್ಲಾ ಜನರಿಗೆ ನ್ಯಾಯಕೊಡಿಸೋ ಕೆಲಸ ಬಿಜೆಪಿ ಪಕ್ಷ ಸೇರಿದಂತೆ ನಾನು ಮಾಡುತ್ತೇನೆ. ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ನೀಡುವ ಕೆಲಸವಾಗಬೇಕಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಅಶ್ವಾಸನೆ ನೀಡಿದ್ದಾರೆ. ಅದು ಸಿಕ್ಕರೆ ವಾಲ್ಮೀಕಿ ಸಮುದಾಯದಕ್ಕೆ ಎಲ್ಲಾ ಸಿಕ್ಕಂತೆ. ಈ ವಿಚಾರದಲ್ಲಿ ರಮೇಶ್ ಜಾರಕಿಹೊಳಿ, ಬಾಲಚಂದ್ರ, ಶಿವನಗೌಡ ಮತ್ತು ರಾಜುಗೌಡ ಎಲ್ಲಾರು ಒಂದಾಗಿದ್ದೇವೆ ಎಂದು ತಿಳಿಸಿದರು.

    ಈ ವೇಳೆ ಜಿಲ್ಲಾ ಉಸ್ತುವಾರಿ ವಿಚಾರವಾಗಿ ಮಾತನಾಡಿದ ಅವರು, ನಾನು ಈ ವಿಷಯಕ್ಕೆ ಯಾವುದೇ ಬೇಡಿಕೆ ಇಟ್ಟಿಲ್ಲ. ಸದ್ಯ ನಾನು ನೆರೆ ಪೀಡಿತ ಪ್ರದೇಶಾಭಿವೃದ್ಧಿಗೆ ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಉಸ್ತುವಾರಿಯಾಗಿದ್ದೇನೆ. ನನಗೆ ಯಾವುದೇ ಭಿನ್ನಮತ ಇಲ್ಲ ಎಂದು ಸ್ಪಷ್ಟನೆ ನೀಡಿದರು.

  • ರಾಜ್ಯದಲ್ಲಿ ಮತ್ತೆ ದೊಡ್ಡ ಜಲಾಘಾತವಾಗಲಿದೆ- ಕೋಡಿಮಠದ ಶ್ರೀ ಭವಿಷ್ಯ

    ರಾಜ್ಯದಲ್ಲಿ ಮತ್ತೆ ದೊಡ್ಡ ಜಲಾಘಾತವಾಗಲಿದೆ- ಕೋಡಿಮಠದ ಶ್ರೀ ಭವಿಷ್ಯ

    ಗದಗ: ಮಹಾಮಳೆಯಿಂದ ಕರುನಾಡು ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ಮತ್ತೆ ವಿಪತ್ತು ಸಂಭವಿಸುತ್ತದೆ ಎಂದು ಗದಗದಲ್ಲಿ ಕೋಡಿಮಠದ ಶ್ರೀ ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಸ್ವಾಮೀಜಿ, ರಾಜ್ಯ ಅಪಘಾತಕ್ಕೊಳಗಾಗಿದೆ. ಜಲ, ಭೂ, ವಾಯು ಆಘಾತದ ಲಕ್ಷಣಗಳು ಇನ್ನೂ ಬಹಳ ನಡೆಯಲಿವೆ. ಶ್ರಾವಣ ಮಾಸ ಮುಗಿಯುವುದರೊಳಗೆ ಮತ್ತೊಮ್ಮೆ ದೊಡ್ಡ ಜಲ ಆಘಾತವಾಗಲಿದೆ. ಕಾರ್ತಿಕ ಮಾಸದವರೆಗೆ ಅಲ್ಲಲ್ಲಿ ಆಗಾಗ ಅಪಘಾತಗಳು ಬಂದು ಹೋಗುವ ಸಾಧ್ಯತೆ ಎಂದು ಹೇಳಿದ್ದಾರೆ.

    ಅಲ್ಲದೆ ಭೂಕಂಪನದಿಂದ ಭೂ ಕುಸಿತ ನಡೆಯಲಿದೆ. ದೊಡ್ಡ ದೊಡ್ಡ ನಗರಗಳಲ್ಲಿ ಕಟ್ಟಡಗಳು ಆಘಾತವಾಗುತ್ತವೆ. ಈ ಸಂವತ್ಸರದಲ್ಲಿ ವಾಯು ಆಘಾತ ನಡೆಯಲಿದೆ. ಈಗಾಗಲೇ ಗಾಳಿಯಿಂದ ಆಘಾತವಾಗಿದೆ, ಬಹಳ ಎಚ್ಚರದಿಂದ ಇರಬೇಕು. ಜಗತ್ತು ಕಂಡರಿಯದ ಆಘಾತವೊಂದು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

    ಈಗಾಗಲೇ ರಾಜ್ಯದ ಸುಮಾರು 17 ಜಿಲ್ಲೆಗಳಲ್ಲಿ ಜಲಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಶ್ರೀಗಳ ಭವಿಷ್ಯ ಜನರನ್ನು ಮತ್ತೆ ಆತಂಕಕ್ಕೀಡು ಮಾಡಿದೆ.

  • ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು – ಮೋದಿ, ಅಮಿತ್ ಶಾ ಸಭೆ

    ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು – ಮೋದಿ, ಅಮಿತ್ ಶಾ ಸಭೆ

    ಬೆಂಗಳೂರು: ರಾಜ್ಯ ರಾಜಕೀಯದ ಬಿಕ್ಕಟ್ಟು ಅಂತ್ಯವಾಗೋ ಲಕ್ಷಣ ಕಾಣುತ್ತಿಲ್ಲ. ಕಳೆದ ವಾರ ಸ್ವತಃ ವಿಶ್ವಾಸಮತ ಯಾಚಿಸಲು ಅವಕಾಶ ಕೋರಿದ್ದ ಮುಖ್ಯಮಂತ್ರಿಗಳು ಈಗ ವಿಶ್ವಾಸಮತಯಾಚಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ.

    ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿಗೆ ನಿನ್ನೆ ರಾಜ್ಯಪಾಲರು ಎರಡು ಬಾರಿ ಗಡುವು ಕೊಟ್ಟರೂ ಅದನ್ನು ದೋಸ್ತಿ ಸರ್ಕಾರ ಮತ್ತು ಸ್ಪೀಕರ್ ಗಣನೆಗೆ ತೆಗೆದುಕೊಳ್ಳಲಿಲ್ಲ. ಚರ್ಚೆ ಆಗಬೇಕು, ಮಾತನಾಡುವವರು ಸಾಕಷ್ಟು ಮಂದಿ ಇದ್ದಾರೆ ಎಂದು ಹೇಳಿ ದೋಸ್ತಿಗಳು ಪಟ್ಟು ಹಿಡಿದರು.

    ರಾತ್ರಿ 12 ಗಂಟೆ ಆದರೂ ಪರ್ವಾಗಿಲ್ಲ ಚರ್ಚೆ ನಡೆದು, ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕಿ ಎಂದು ಬಿಜೆಪಿ ಕೇಳಿಕೊಂಡರೂ ಯಾರು ಸ್ಪಂದಿಸಲಿಲ್ಲ. ಕೊನೆಗೆ ಸ್ಪೀಕರ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು. ಎಂದಿನಂತೆ ಶಾಸಕರು ರೆಸಾರ್ಟ್ ಸೇರಿಕೊಂಡರು. ಈ ಬೆನ್ನಲ್ಲೇ ರಾಜ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರು ಕೇಂದ್ರ ಗೃಹ ಸಚಿವಾಲಯಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ.

    ಈ ಸಂಬಂಧ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಬಳಿಕ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಂಪುಟ ಸಮಿತಿ ಸಭೆ ಕೂಡ ನಡೆಯಲಿದೆ. ರಾಜ್ಯಪಾಲರ ವರದಿ ಮೇಲೆ ಗೃಹ ಸಚಿವರ ಸಲಹೆ ಪಡೆಯಲಿರುವ ಮೋದಿ ನೇತೃತ್ವದ ಸಮಿತಿ, ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.

    ಆದರೆ ಸೋಮವಾರ ವಿಶ್ವಾಸಮತ ಯಾಚಿಸುವುದಾಗಿ ಸಿಎಂ ಹೇಳಿರುವ ಕಾರಣ ಸದ್ಯದ ಮಟ್ಟಿಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಅತ್ತ ಅತೃಪ್ತರು ಮುಂಬೈನಲ್ಲೇ ಉಳಿದಿದ್ದು, ಎಲ್ಲಾ ಬೆಳವಣಿಗೆಗಳನ್ನು ಅಲ್ಲಿಂದಲೇ ಗಮನಿಸುತ್ತಿದ್ದಾರೆ.

  • ಸಿಎಂ ತನ್ನ ಹೆಸ್ರು ಉಳಿಸಿಕೊಳ್ಳಲು ರೇವಣ್ಣನ ಹೆಸ್ರಿಗೆ ಡ್ಯಾಮೇಜ್ ಮಾಡ್ತಿದ್ದಾರೆ: ಚಲುವರಾಯಸ್ವಾಮಿ

    ಸಿಎಂ ತನ್ನ ಹೆಸ್ರು ಉಳಿಸಿಕೊಳ್ಳಲು ರೇವಣ್ಣನ ಹೆಸ್ರಿಗೆ ಡ್ಯಾಮೇಜ್ ಮಾಡ್ತಿದ್ದಾರೆ: ಚಲುವರಾಯಸ್ವಾಮಿ

    ಮಂಡ್ಯ: ರಾಜ್ಯದಲ್ಲಿ ಮುಖ್ಯಮಂತ್ರಿಗಳು ತನ್ನ ಹೆಸರನ್ನು ಉಳಿಸಿಕೊಳ್ಳಲು ರೇವಣ್ಣನ ಹೆಸರನ್ನು ಡ್ಯಾಮೇಜ್ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಈ ಸ್ಥಿತಿಗೆ ಮುಖ್ಯಮಂತ್ರಿಗಳೇ ಕಾರಣ. ಆದರೆ ರೇವಣ್ಣ ಅವರಿಂದ ಈ ರೀತಿ ಆಗಿದೆ ಅಂತಿದ್ದಾರೆ. ಹಾಗಾದರೆ ಅವರನ್ನೇ ಸಚಿವ ಸ್ಥಾನದಿಂದ ಹೊರಗಿಟ್ಟು ಸರ್ಕಾರ ನಡೆಸಬಹುದಿತ್ತು ಎಂದು ಗರಂ ಆದರು.

    ಮೈತ್ರಿ ಸರ್ಕಾರ ಈ ರೀತಿ ಆಗಲು ಅಣ್ಣ-ತಮ್ಮಂದಿರೇ ಹೊಣೆ ಮುಖ್ಯಮಂತ್ರಿ ಇಲ್ಲದೇ ರೇವಣ್ಣ ಒಬ್ಬರೇ ಹೊಣೆಯಾಗಲು ಸಾಧ್ಯವಿಲ್ಲ. ಅಂತಿಮವಾಗಿ ಸಹಿ ಹಾಕುವವರು, ನಿರ್ಧಾರ ತೆಗೆದುಕೊಳ್ಳುವವರು ಮುಖ್ಯಮಂತ್ರಿ ತಾನೇ. ಮುಖ್ಯಮಂತ್ರಿಗಳು ತನ್ನ ಹೆಸರು ಉಳಿಸಿಕೊಳ್ಳಲು ರೇವಣ್ಣ ಹೆಸರು ಡ್ಯಾಮೇಜ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

    ರಾಜ್ಯದಲ್ಲಿ ನಡೆಯುತ್ತಿರವ ವಿದ್ಯಮಾನಗಳಿಗೆ ನೇರ ಹೊಣೆ ಮುಖ್ಯಮಂತ್ರಿಯೇ ಹೊರತು ರೇವಣ್ಣ ಅಲ್ಲ. ರಾಜಕೀಯ ಅನುಭವ ಇಲ್ಲದವರು ರೇವಣ್ಣ ಎನ್ನುತ್ತಾರೆ ಅಷ್ಟೇ. ರೇವಣ್ಣ ಅವರು ಮುಖ್ಯಮಂತ್ರಿಗಳನ್ನು ಮೀರಿ ಏನು ಮಾಡಲು ಸಾಧ್ಯ. ಹೀಗಾಗಿ ರೇವಣ್ಣ ಅವರ ಹಿಂದೆ ಮುಖ್ಯಮಂತ್ರಿಗಳು ಇದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದರು.

    ದೇವೇಗೌಡರ ಕುಟುಂಬದವರ ಕಿರುಕುಳ ರಾಜೀನಾಮೆಗೆ ಕಾರಣ ಎಂಬ ವಿಚಾರದ ಬಗ್ಗೆ ಮಾತನಾಡಿ, ಹೆಗಡೆಯವರ ಕಾಲದಿಂದ ಇಲ್ಲಿಯವರೆಗೂ ಅದು ಮುಂದುವರಿದಿದೆ ಎಂದು ಪರೋಕ್ಷವಾಗಿ ಕಿರುಕುಳದ ಬಗ್ಗೆ ಚಲುವರಾಯ ಸ್ವಾಮಿ ಒಪ್ಪಿಕೊಂಡರು. ನಾವು ಏಳು ಜನ ತಪ್ಪು ಮಾಡಿ ಪಕ್ಷ ಬಿಟ್ಟು ಬರಲಿಲ್ಲ. ಇಂದು ನಾರಾಯಣಗೌಡ ಪಕ್ಷ ಬಿಟ್ಟು ಬಂದು ಮಾತನಾಡುತ್ತಿದ್ದಾರೆ. ಅದೇ ಸ್ಥಿತಿ ಸಚಿವ ಪುಟ್ಟರಾಜುಗೂ ಬರಬಹುದು ಎಂದು ಭವಿಷ್ಯ ನುಡಿದರು.

  • ಗ್ರಾಮವಾಸ್ತವ್ಯ ಬೆನ್ನಲ್ಲೇ ಸಿಎಂರಿಂದ ಜಲಕ್ರಾಂತಿಯತ್ತ ಹೆಜ್ಜೆ

    ಗ್ರಾಮವಾಸ್ತವ್ಯ ಬೆನ್ನಲ್ಲೇ ಸಿಎಂರಿಂದ ಜಲಕ್ರಾಂತಿಯತ್ತ ಹೆಜ್ಜೆ

    ಬೆಂಗಳೂರು: ಮೊದಲ ಹಂತದ ಗ್ರಾಮ ವಾಸ್ತವ್ಯ ಮುಗಿಸಿ ಶುಕ್ರವಾರ ರಾತ್ರಿ ಅಮೆರಿಕ ವಿಮಾನ ಹತ್ತಿರುವ ಸಿಎಂ, ಅಲ್ಲಿಂದ ಬಂದ ಮೇಲೆ ಜಲಕ್ರಾಂತಿಗಾಗಿ ಹಳ್ಳಿಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದಾರೆ.

    ಮಹಾರಾಷ್ಟ್ರದ ಜಾಲ್ನಾ ಜಲ್ಲೆಯ ಕಡವಂಚಿ ಗ್ರಾಮದ ಜಲಕ್ರಾಂತಿ ನೋಡಿ ಪ್ರೇರಣೆಗೊಂಡಿರುವ ಮುಖ್ಯಮಂತ್ರಿ, ರಾಜ್ಯದಲ್ಲಿ ಅದೇ ಮಾದರಿ ಅಳವಡಿಕೆಗೆ ಮುಂದಾಗಿದ್ದಾರೆ. ರೈತರಲ್ಲಿ ಜಲಕ್ರಾಂತಿ ಜಾಗೃತಿ ಮೂಡಿಸಲು ಹಳ್ಳಿಗಳಿಗೆ ಭೇಟಿ ನೀಡೋದಾಗಿ ಘೋಷಿಸಿದ್ದಾರೆ.

    ಜಲಕ್ರಾಂತಿ ಜೊತೆಗೆ ರೈತರನ್ನು ಸಶಕ್ತಗೊಳಿಸುವ ಕಡವಂಚಿ ಮಾದರಿಯನ್ನು ಶೀಘ್ರ ಪೈಲಟ್ ಯೋಜನೆ ಮೂಲಕ ರಾಜ್ಯದಲ್ಲಿ ಜಾರಿ ಮಾಡಲು ನಿರ್ಧರಿಸಿದ್ದಾರೆ. ಐದು ದಿನದ ಹಿಂದಷ್ಟೇ ತಮ್ಮ ಟ್ವಿಟ್ಟರ್ ಅಕೌಂಟ್‍ನಲ್ಲಿ ಕಡವಂಚಿ ಯಶೋಗಾಥೆ ಕುರಿತ ಸಾಕ್ಷ್ಯ ಚಿತ್ರವನ್ನು ಮುಖ್ಯಮಂತ್ರಿ ಶೇರ್ ಮಾಡಿದ್ದರು.

    ಏನಿದು ಕಡವಂಚಿ ಮಾದರಿ?
    2 ದಶಕಗಳ ಹಿಂದೆ ಮರಾಠವಾಡದ ಕಡವಂಚಿ ಗ್ರಾಮದಲ್ಲಿ ಭೀಕರ ಬರಗಾಲ ಎದುರಾಗಿತ್ತು. ಹೀಗಾಗಿ 1995ರಲ್ಲಿ ನೀರಾವರಿ ತಜ್ಞರ ನೆರವಿನಿಂದ ಜಲಸಂರಕ್ಷಣೆ ಯೋಜನೆ ಜಾರಿಗೆ ತರಲಾಗಿತ್ತು. ಕಡವಂಚಿ ಗ್ರಾಮದ ರೈತರಿಂದ ಸಾಮೂಹಿಕವಾಗಿ ಚೆಕ್‍ಡ್ಯಾಂ ನಿರ್ಮಾಣ ಮಾಡಲಾಗಿತ್ತು. ಚೆಕ್‍ಡ್ಯಾಂ, ಕೃಷಿ ಹೊಂಡದ ಮೂಲಕ ಅಂತರ್ಜಲ ವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು.

    ಹವಾಮಾನ ಮುನ್ಸೂಚನೆ ಪಡೆಯಲು ಗ್ರಾಮದಲ್ಲೇ ಹವಾಮಾನ ಕೇಂದ್ರವನ್ನು ಕೂಡ ಸ್ಥಾಪಿಸಲಾಗಿತ್ತು. ಎಲ್ಲರ ಜಮೀನುಗಳಲ್ಲಿ ಕೃಷಿ ಹೊಂಡ, ಎಲ್ಲರಿಂದಲೂ ದ್ರಾಕ್ಷಿ ಬೆಳೆ ಬೆಳೆಯಲಾಗಿತ್ತು. ಹೀಗಾಗಿ ಬರಗಾಲದಲ್ಲಿಯೂ ಕಡವಂಚಿ ಗ್ರಾಮ ಹಸಿರಿನಿಂದ ನಳನಳಿಸುತ್ತಿದೆ.

  • ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್

    -8ನೇ ಸ್ಥಾನದಲ್ಲಿ ಕರ್ನಾಟಕ

    ನವದೆಹಲಿ: ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.

    ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ.

    23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India” ಎಂಬ ವರದಿಯನ್ನು ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್ ಬಿಡುಗಡೆ ಮಾಡಿದರು. ಈ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ತೀರಾ ಹಿಂದುಳಿದಿದೆ ಎಂದು ಹೇಳಿದೆ.

    ಕೇರಳದ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಉತ್ತಮ ಆರೋಗ್ಯ ಮಟ್ಟವನ್ನು ಕಾಪಾಡಿಕೊಂಡು ಬಂದಿವೆ. ಇವುಗಳನ್ನು ಬಿಟ್ಟರೆ ಹರಿಯಾಣ, ರಾಜಸ್ಥಾನ ಮತ್ತು ಜಾರ್ಖಂಡ್ ಆರೋಗ್ಯ ಗುಣಮಟ್ಟದಲ್ಲಿ ಸುಧಾರಣೆ ಆಗಿದೆ. ಆದರೆ ಛತ್ತೀಸ್‍ಗಢ ಅತಿ ಕಡಿಮೆ ಗುಣಮಟ್ಟ ಸಾಧಿಸಿರುವ ರಾಜ್ಯವಾಗಿದೆ.

    2018ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಮೊದಲ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2014-15 ರಿಂದ 2015-16ರ ಅವಧಿಯ ನಿರ್ವಹಣೆಯನ್ನು ಪರಿಗಣಿಸಲಾಗಿತ್ತು. ಎರಡನೇ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2015-16 ರಿಂದ 2017-18ರ ಅವಧಿಯ ನಿರ್ವಹಣೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

    ಮೊದಲ ಹತ್ತು ಆರೋಗ್ಯಕರ ರಾಜ್ಯಗಳು
    1. ಕೇರಳ
    2. ಆಂಧ್ರ ಪ್ರದೇಶ
    3. ಮಹಾರಾಷ್ಟ್ರ
    4. ಗುಜರಾತ್
    5. ಪಂಜಾಬ್
    6. ಹಿಮಾಚಲ ಪ್ರದೇಶ
    7. ಜಮ್ಮು -ಕಾಶ್ಮೀರ
    8. ಕರ್ನಾಟಕ
    9. ತಮಿಳುನಾಡು
    10. ತೆಲಂಗಾಣ

  • ಗಣ್ಯರ ಜಯಂತಿ ಹೆಸ್ರಲ್ಲಿ ಕೋಟ್ಯಂತರ ರೂ. ಗುಳುಂ- ಆರ್‌ಟಿಐ ಕಾರ್ಯಕರ್ತ ದೂರು

    ಗಣ್ಯರ ಜಯಂತಿ ಹೆಸ್ರಲ್ಲಿ ಕೋಟ್ಯಂತರ ರೂ. ಗುಳುಂ- ಆರ್‌ಟಿಐ ಕಾರ್ಯಕರ್ತ ದೂರು

    ಬೆಂಗಳೂರು: ಗಣ್ಯರ ಜಯಂತಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಯನ್ನು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ಆರ್‌ಟಿಐ ಕಾರ್ಯಕರ್ತರೊಬ್ಬರು ಈ ಬಗ್ಗೆ ಅರೋಪಿಸಿ, ಸೂಕ್ತ ತನಿಖೆ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

    ಆರ್‌ಟಿಐ ಕಾರ್ಯಕರ್ತ ಮರಿಲಿಂಗಗೌಡ ಪಾಟೀಲ್ ಅನ್ಮೋರಿ ಎಂಬವರು ಕೋಟ್ಯಂತರ ರೂ. ವೆಚ್ಚದಲ್ಲಿ ಆಚರಿಸಿದ ವಿವಿಧ ಜಯಂತಿಗಳ ಬಗ್ಗೆ ಮಾಹಿತಿ ಕೊಡಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಗಳ ವಿರುದ್ಧ ದೂರು ನೀಡಿದ್ದಾರೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಹಲವಾರು ಗಣ್ಯರ ಜಯಂತಿ ಹೆಸರಲ್ಲಿ ಬರೋಬ್ಬರಿ 17 ಕೋಟಿ 65 ಲಕ್ಷ ರೂನ್ನು ಖರ್ಚು ಮಾಡಲಾಗಿದೆ. ಅನೇಕರ ಹೆಸರೇ ಗೊತ್ತಿಲ್ಲದ ಜಯಂತಿ ಆಚರಣೆ ಮಾಡಿದ್ದೇವೆ ಎಂದು ಅಧಿಕಾರಿಗಳು ಹಣ ಬಿಡುಗಡೆ ಮಾಡಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಜಯಂತಿ ಆಚರಣೆ ಮಾಡಿದ್ದೇವೆ ಎಂದು ದಾಖಲೆಯಲ್ಲಿ ತೋರಿಸಿದ್ದಾರೆ. ಆದರೆ ನಿಜವಾಗಿಯೂ ಈ ಜಯಂತಿ ಆಚರಣೆಗಳು ನಡೆದಿವೆಯಾ? ಯಾವಾಗ ಆಚರಣೆ ಮಾಡಿದ್ದಾರೆ? ಯಾರು ಅತಿಥಿಯಾಗಿದ್ರು? ಎಲ್ಲಿ ಆಚರಣೆ ಮಾಡಿದ್ದಾರೆ? ಎಂಬುವುದರ ಬಗ್ಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

    2013 ರಿಂದ 2018 ವರೆಗೆ ನಡೆದ ವಿವಿಧ ಗಣ್ಯರ ಜಯಂತಿಗಳ ದಾಖಲೆ ಸಂಗ್ರಹಿಸಿದ ಆರ್ ಟಿ ಐ ಕಾರ್ಯಕರ್ತ ಮರಿಲಿಂಗಗೌಡ ಪಾಟೀಲ್ ಅನ್ಮೋರಿ, ಬೆರಳೆಣಿಕೆಯಷ್ಟು ಜಯಂತಿಗಳ ಆಚರಣೆ ಮಾತ್ರ ನೋಡಿದ್ದೇವೆ. ಕೆಲ ಅಧಿಕಾರಿಗಳು ಜಯಂತಿ ಮಾಡದೆ ಸುಳ್ಳು ದಾಖಲೆ ನೀಡಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಯಾವ ಜಯಂತಿಗೆ ಎಷ್ಟು ಖರ್ಚು?:
    1. ದೇವರ ದಾಸಿಮಯ್ಯ ಜಯಂತಿ – 69 ಲಕ್ಷ
    2. ಭಗವಾನ್ ಮಹವೀರ್ ಜಯಂತಿ – 69 ಲಕ್ಷ
    3. ಅಕ್ಕಮಹಾದೇವಿ ಜಯಂತಿ – 10 ಲಕ್ಷ
    4. ಬಸವ ಜಯಂತಿ – 69 ಲಕ್ಷ
    5. ಶಂಕರ ಜಯಂತಿ – 10 ಲಕ್ಷ
    6. ಭಗೀರಥ ಜಯಂತಿ – 69 ಲಕ್ಷ

    7. ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ – 15 ಲಕ್ಷ
    8. ಶ್ರೀ ಕೃಷ್ಣ ಜಯಂತಿ – 69 ಲಕ್ಷ
    9. ಬ್ರಹ್ಮಶ್ರೀ ನಾರಾಯಣಗುರು ಜಯಂತಿ – 69 ಲಕ್ಷ
    10. ವಿಶ್ವಕರ್ಮ ಜಯಂತಿ – 69 ಲಕ್ಷ
    11. ಟಿಪ್ಪು ಸುಲ್ತಾನ್ ಜಯಂತಿ – 69 ಲಕ್ಷ
    12. ಕನಕ ಜಯಂತಿ – 69 ಲಕ್ಷ

    13. ಸಿದ್ದರಾಮ ಜಯಂತಿ – 69 ಲಕ್ಷ
    14. ಅಂಬಿಗರ ಚೌಡಯ್ಯ ಜಯಂತಿ – 69 ಲಕ್ಷ
    15. ವಾಲ್ಮೀಕಿ ಜಯಂತಿ – 69 ಲಕ್ಷ
    16. ಶಿವಾಜಿ ಜಯಂತಿ – 69ಲಕ್ಷ
    17. ದಲಿತ ವಚನಕಾರರ ಜಯಂತಿ – 69 ಲಕ್ಷ
    18. ಸರ್ವಜ್ಞ ಜಯಂತಿ – 69 ಲಕ್ಷ
    19. ಭಗೀರಥ ಜಯಂತಿ – 69 ಲಕ್ಷ
    20. ವಿವೇಕಾನಂದ ಜಯಂತಿ – 40 ಲಕ್ಷ

  • ಯಾವ ರಾಜ್ಯದಲ್ಲಿ ಎಷ್ಟು ಕ್ಷೇತ್ರಗಳಿವೆ? ಮೀಸಲಾತಿ ಹೇಗಿದೆ?

    ಯಾವ ರಾಜ್ಯದಲ್ಲಿ ಎಷ್ಟು ಕ್ಷೇತ್ರಗಳಿವೆ? ಮೀಸಲಾತಿ ಹೇಗಿದೆ?

    ದೇಶದಲ್ಲಿ ಒಟ್ಟು 543 ಲೋಕಸಭಾ ಕ್ಷೇತ್ರಗಳಿವೆ. ಅವುಗಳಲ್ಲಿ 412 ಸ್ಥಾನಗಳು ಸಾಮಾನ್ಯ ಅಭ್ಯರ್ಥಿಗಳಿಗೆ, 84 ಎಸ್‍ಸಿ ಅಭ್ಯರ್ಥಿಗಳಿಗೆ ಹಾಗೂ ಎಸ್‍ಟಿ ಅಭ್ಯರ್ಥಿಗಳಿಗೆ 47 ಕ್ಷೇತ್ರಗಳು ಅಂತಾ ವಿಭಜಿಸಲಾಗಿದೆ. ಒಟ್ಟು 543 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆ ನಡೆಯುತ್ತಿದೆ.

    ರಾಜ್ಯಗಳ ಲೋಕಸಭಾ ಕ್ಷೇತ್ರಗಳಲ್ಲಿ ಜಾತಿವಾರು ವಿಂಗಡನೆ ನೋಡುವುದಾದರೆ

    1. ಆಂಧ್ರ ಪ್ರದೇಶ:
    ಆಂಧ್ರ ಪ್ರದೇಶದಲ್ಲಿ ಒಟ್ಟು 42 ಲೋಕಸಭಾ ಕ್ಷೇತ್ರಗಳು ಇದೆ. ಅವುಗಳಲ್ಲಿ 32 ಸಾಮಾನ್ಯ ಲೋಕಸಭಾ ಕ್ಷೇತ್ರಗಳಾಗಿದ್ದು, ಎಸ್‍ಸಿ 7 ಮತ್ತು ಎಸ್‍ಟಿ 3 ಕ್ಷೇತ್ರಗಳನ್ನು ಮೀಸಲಿಡಲಾಗಿದೆ.

    2. ಅರುಣಾಚಲ ಪ್ರದೇಶ:
    ಅರುಣಾಚಲ ಪ್ರದೇಶದಲ್ಲಿ ಕೇವಲ ಎರಡು ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಇಲ್ಲಿ ಎರಡು ಕ್ಷೇತ್ರಗಳು ಸಾಮಾನ್ಯ ಅಭ್ಯರ್ಥಿಗಳು ನಿಲ್ಲಲಿದ್ದು, ಎಸ್‍ಸಿ, ಎಸ್‍ಟಿ ಮೀಸಲಾತಿ ಇಲ್ಲ.

    3. ಅಸ್ಸಾಂ:
    ಅಸ್ಸಾಂ ರಾಜ್ಯದಲ್ಲಿ ಒಟ್ಟು 14 ಲೋಕಸಭಾ ಕ್ಷೇತ್ರಗಳಿವೆ. ಅವುಗಳಲ್ಲಿ ಸಾಮಾನ್ಯರು 11 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದರೆ, 1 ಕ್ಷೇತ್ರ ಎಸ್‍ಸಿ ಹಾಗೂ 2 ಕ್ಷೇತ್ರ ಎಸ್‍ಟಿಗೆ ಮೀಸಲಿರಿಸಲಾಗಿದೆ.

    4. ಬಿಹಾರ:
    ಬಿಹಾರ ರಾಜ್ಯದಲ್ಲಿ ಒಟ್ಟು 40 ಲೋಕಸಭಾ ಕ್ಷೇತ್ರಗಳು ಇದೆ. ಅವುಗಳಲ್ಲಿ 34 ಸಾಮಾನ್ಯ ಲೋಕಸಭಾ ಕ್ಷೇತ್ರಗಳಾಗಿದ್ದು, ಎಸ್‍ಸಿ 6 ಕ್ಷೇತ್ರಗಳಾಗಿವೆ. ಈ ರಾಜ್ಯದಲ್ಲಿ ಎಸ್‍ಟಿಗೆ ಯಾವುದೇ ಮೀಸಲಾತಿ ಇಲ್ಲ.

    5. ಗೋವಾ:
    ಗೋವಾ ರಾಜ್ಯದಲ್ಲಿ ಒಟ್ಟು 2 ಲೋಕಸಭಾ ಕ್ಷೇತ್ರಗಳಿವೆ. ಈ ಎರಡು ಕ್ಷೇತ್ರಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ.

    6. ಗುಜರಾತ್
    ಗುಜರಾತ್ ರಾಜ್ಯದಲ್ಲಿ 26 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 20 ಸಾಮಾನ್ಯ, 2 ಎಸ್‍ಸಿ ಮತ್ತು ಎಸ್‍ಟಿ ವರ್ಗಕ್ಕೆ 4 ಕ್ಷೇತ್ರವನ್ನು ಮೀಸಲಿಡಲಾಗಿದೆ.

    8. ಹರಿಯಾಣ:
    ಹರಿಯಾಣ ಒಟ್ಟು 10 ಲೋಕಸಭಾ ಕ್ಷೇತ್ರಗಳು ಇದೆ. ಅವುಗಳಲ್ಲಿ 8 ಸಾಮಾನ್ಯ ಲೋಕಸಭಾ ಕ್ಷೇತ್ರಗಳಾಗಿದ್ದು, 2 ಕ್ಷೇತ್ರ ಎಸ್‍ಸಿ ವರ್ಗಕ್ಕೆ ಮೀಸಲಿಡಲಾಗಿದೆ.

    9. ಹಿಮಾಚಲ ಪ್ರದೇಶ:
    ಹಿಮಾಚಲ ಪ್ರದೇಶದಲ್ಲಿ ಒಟ್ಟು 4 ಲೋಕಸಭಾ ಕ್ಷೇತ್ರಗಳು ಇದೆ. ಅವುಗಳಲ್ಲಿ 3 ಸಾಮಾನ್ಯ ಲೋಕಸಭಾ ಕ್ಷೇತ್ರಗಳಾಗಿದ್ದು, 1 ಕ್ಷೇತ್ರವನ್ನು ಎಸ್‍ಸಿ ವರ್ಗಕ್ಕೆ ನೀಡಲಾಗಿದೆ.

    10. ಜಮ್ಮು ಮತ್ತು ಕಾಶ್ಮೀರ
    ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 6 ಲೋಕಸಭಾ ಕ್ಷೇತ್ರಗಳಿವೆ. ಈ ಆರು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ. ಹೀಗಾಗಿ ಇಲ್ಲಿ ಎಸ್‍ಸಿ ಮತು ಎಸ್‍ಟಿ ಜಾತಿಯವರಿಗೆ ಯಾವುದೇ ಮೀಸಲಾತಿ ನೀಡಿಲ್ಲ.

    11. ಕರ್ನಾಟಕ
    ಕರ್ನಾಟದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿವೆ. ಇವುಗಳಲ್ಲಿ ಸಾಮಾನ್ಯರಿಗೆ 21 ಕ್ಷೇತ್ರ, ಎಸ್‍ಸಿ ಅವರಿಗೆ 5 ಮತ್ತು ಎಸ್‍ಟಿ ಅವರಿಗೆ 2 ಕ್ಷೇತ್ರಗಳಾಗಿ ವಿಂಗಡನೆ ಮಾಡಲಾಗಿದೆ.

    12. ಕೇರಳ
    ಕೇರಳ ರಾಜ್ಯದಲ್ಲಿ ಒಟ್ಟು 20 ಲೋಕಸಭಾ ಕ್ಷೇತ್ರಗಳಿವೆ. ಅವುಗಳಲ್ಲಿ ಸಾಮಾನ್ಯರಿಗೆ 18 ಕ್ಷೇತ್ರ, ಎಸ್‍ಸಿ ಅವರಿಗೆ 2 ಕ್ಷೇತ್ರಗಳು ಎಂದು ವಿಂಗಡನೆ ಮಾಡಲಾಗಿದೆ. ಕೇರಳ ರಾಜದಲ್ಲಿ ಎಸ್‍ಟಿ ಅವರಿಗೆ ಯಾವುದೇ ರೀತಿ ಸ್ಥಾನವನ್ನು ನೀಡಿಲ್ಲ.

    13. ಮಧ್ಯ ಪ್ರದೇಶ
    ಮಧ್ಯ ಪ್ರದೇಶದಲ್ಲಿ 29 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 19 ಸಾಮಾನ್ಯ, 4 ಎಸ್‍ಸಿ ಮತ್ತು ಎಸ್‍ಟಿ ಅವರಿಗೆ 6 ಕ್ಷೇತ್ರಗಳನ್ನು ಮೀಸಲಿಡಲಾಗಿದೆ.

    14. ಮಹಾರಾಷ್ಟ್ರ
    ಮಹಾರಾಷ್ಟ್ರದಲ್ಲಿ 48 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 39 ಸಾಮಾನ್ಯ ಕ್ಷೇತ್ರ, 5 ಎಸ್‍ಸಿ ಕ್ಷೇತ್ರ ಮತ್ತು ಎಸ್‍ಟಿ ಅವರಿಗೆ 4 ಕ್ಷೇತ್ರಗಳಾಗಿ ವಿಂಗಡನೆ ಮಾಡಲಾಗಿದೆ.

    15. ಮಣಿಪುರ: ಮಣಿಪುರದಲ್ಲಿ 2 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 1 ಸಾಮಾನ್ಯ ಕ್ಷೇತ್ರ, ಮತ್ತೊಂದು ಎಸ್‍ಟಿ ಕ್ಷೇತ್ರವಾಗಿದೆ.

    16. ಮೇಘಾಲಯ: ಮೇಘಾಲಯದಲ್ಲಿ ಒಟ್ಟು 2 ಲೋಕಸಭಾ ಕ್ಷೇತ್ರಗಳು ಇದೆ. ಎರಡು ಕ್ಷೇತ್ರವನ್ನು ಎಸ್‍ಟಿ ವರ್ಗಕ್ಕೆ ಮೀಸಲಿಡಲಾಗಿದೆ.

    17. ಓಡಿಶಾ: ಒಡಿಶಾದಲ್ಲಿ 21 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 13 ಸಾಮಾನ್ಯ, 3 ಎಸ್‍ಸಿ ಮತ್ತು ಎಸ್‍ಟಿ ಅವರಿಗೆ 5 ಕ್ಷೇತ್ರಗಳಾಗಿ ವಿಂಗಡನೆ ಮಾಡಲಾಗಿದೆ.

    18. ಪಂಜಾಬ್: ಪಂಜಾಬ್‍ನಲ್ಲಿ ಒಟ್ಟು 13 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 9 ಸಾಮಾನ್ಯ ಕ್ಷೇತ್ರ, 4 ಕ್ಷೇತ್ರ ಎಸ್‍ಸಿ ವರ್ಗಕ್ಕೆ ಮೀಸಲಿಡಲಾಗಿದೆ.

    16. ರಾಜಸ್ಥಾನ: ರಾಜಸ್ಥಾನದಲ್ಲಿ 25 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 18 ಸಾಮಾನ್ಯ ಕ್ಷೇತ್ರ, 4 ಎಸ್‍ಸಿ ಕ್ಷೇತ್ರ ಮತ್ತು ಎಸ್‍ಟಿ ಅವರಿಗೆ 3 ಕ್ಷೇತ್ರಗಳಾಗಿ ವಿಂಗಡನೆ ಮಾಡಲಾಗಿದೆ.

    20. ತಮಿಳುನಾಡು: ಇಲ್ಲಿ ಒಟ್ಟು 39 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತದೆ. ಅವುಗಳಲ್ಲಿ 32 ಸಾಮಾನ್ಯ, ಎಸ್‍ಸಿ ವರ್ಗಕ್ಕೆ 7 ಕ್ಷೇತ್ರಗಳನ್ನು ಮೀಸಲಿರಿಸಲಾಗಿದೆ. ಇಲ್ಲಿ ಎಸ್‍ಟಿ ವರ್ಗಕ್ಕೆ ಯಾವುದೇ ಕ್ಷೇತ್ರವನ್ನು ಮೀಸಲಿಟ್ಟಿಲ್ಲ.

    21. ತ್ರಿಪುರ
    ತ್ರಿಪುರದಲ್ಲಿ ಒಟ್ಟು 2 ಲೋಕಸಭಾ ಕ್ಷೇತ್ರಗಳು ಇದೆ. ಸಾಮಾನ್ಯ ಒಂದು ಮತ್ತು ಮತ್ತೊಂದು ಕ್ಷೇತ್ರದಲ್ಲಿ ಎಸ್‍ಟಿ ವರ್ಗದ ಅಭ್ಯರ್ಥಿ ಸ್ಪರ್ಧೆ ಮಾಡ್ತಾರೆ.

    22. ಉತ್ತರ ಪ್ರದೇಶ
    ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 63 ಸಾಮಾನ್ಯ ಕ್ಷೇತ್ರವಾಗಿದ್ದು 17 ಕ್ಷೇತ್ರ ಎಸ್‍ಸಿ ವರ್ಗಕ್ಕೆ ಮೀಸಲಿಡಲಾಗಿದೆ.

    23. ಪಶ್ಚಿಮ ಬಂಗಾಳ
    ಪಶ್ಚಿಮ ಬಂಗಾಳದಲ್ಲಿ 42 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 30 ಸಾಮಾನ್ಯ ಕ್ಷೇತ್ರ, 10 ಎಸ್‍ಸಿ ಕ್ಷೇತ್ರ ಮತ್ತು ಎಸ್‍ಟಿ ಅವರಿಗೆ 02 ಕ್ಷೇತ್ರಗಳಾಗಿ ವಿಂಗಡನೆ ಮಾಡಲಾಗಿದೆ.

    24. ಛತೀಸ್‍ಗಢ
    ಛತೀಸ್‍ಗಢದಲ್ಲಿ ಒಟ್ಟು 11 ಲೋಕಸಭಾ ಕ್ಷೇತ್ರಗಳು ಇದೆ. ಸಾಮಾನ್ಯರಿಗೆ 6 ಕ್ಷೇತ್ರ, ಎಸ್‍ಸಿಗೆ 1 ಹಾಗೂ ಎಸ್‍ಟಿ ಅವರಿಗೆ 4 ಕ್ಷೇತ್ರಗಳಾಗಿ ವಿಂಗಡನೆ ಮಾಡಲಾಗಿದೆ.

    25. ಜಾರ್ಖಂಡ್
    ಜಾರ್ಖಂಡ್ ನಲ್ಲಿ ಒಟ್ಟು 14 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಸಾಮಾನ್ಯರಿಗೆ 8 ಕ್ಷೇತ್ರ, ಎಸ್‍ಸಿಗೆ 1 ಹಾಗೂ ಎಸ್‍ಟಿ ಅವರಿಗೆ 5 ಕ್ಷೇತ್ರಗಳಾಗಿ ವಿಂಗಡನೆ ಮಾಡಲಾಗಿದೆ.

    26. ಉತ್ತರಾಖಂಡ
    ಉತ್ತರಾಖಂಡದಲ್ಲಿ 5 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಅವುಗಳಲ್ಲಿ 4 ಸಾಮಾನ್ಯ ಕ್ಷೇತ್ರ ಮತ್ತು 1 ಎಸ್‍ಸಿ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಉತ್ತರಾಖಂಡದಲ್ಲಿ ಎಸ್‍ಟಿ ಅವರಿಗೆ ಯಾವುದೇ ಕ್ಷೇತ್ರ ವಿಂಗಡನೆ ಮಾಡಿಲ್ಲ.

    27. ಚಂಡೀಗಢ
    ಚಂಡೀಗಢದಲ್ಲಿ ಒಟ್ಟು 11 ಲೋಕಸಭಾ ಚುನಾವಣಾ ಕ್ಷೇತ್ರಗಳಿವೆ. ಸಾಮಾನ್ಯರಿಗೆ 6 ಕ್ಷೇತ್ರ, ಎಸ್‍ಸಿಗೆ 1 ಹಾಗೂ ಎಸ್‍ಟಿ ಅವರಿಗೆ 4 ಕ್ಷೇತ್ರಗಳಾಗಿ ವಿಂಗಡನೆ ಮಾಡಲಾಗಿದೆ. ಇಲ್ಲಿ ಒಟ್ಟು 11 ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ.

    28. ದೆಹಲಿ
    ದೆಹಲಿಯಲ್ಲಿ ಒಟ್ಟು 7 ಲೋಕಸಭಾ ಕ್ಷೇತ್ರಗಳು ಇದೆ. ಇದರಲ್ಲಿ 6 ಸಾಮಾನ್ಯ ಕ್ಷೇತ್ರವಾಗಿದ್ದರೆ ಒಂದು ಎಸ್‍ಸಿ ಕ್ಷೇತ್ರಕ್ಕೆ ಮೀಸಲಿಡಲಾಗಿದೆ.

    ಒಂದು ಲೋಕಸಭಾ ಚುನಾವಣಾ ಕ್ಷೇತ್ರ:
    ಲಕ್ಷದ್ವೀಪ, ಪುದುಚೇರಿ, ದಮನ್ ಮತ್ತು ದಿಯು, ದಾದ್ರ ಮತ್ತು ನಗರ ಹವೇಲಿ, ನಾಗಾಲ್ಯಾಂಡ್, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಒಂದು ಕ್ಷೇತ್ರವಿದ್ದು, ಸಾಮಾನ್ಯ ವರ್ಗದ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ. ಮೀಜೋರಾಂನಲ್ಲಿ ಒಂದು ಕ್ಷೇತ್ರವಿದ್ದು ಎಸ್‍ಟಿ ವರ್ಗಕ್ಕೆ ಮೀಸಲಿಡಲಾಗಿದೆ.

  • ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗೋರೇ ಹುಷಾರ್- ಪ್ರವಾಸಿಗರ ಮೇಲೆ ಡ್ರೈವರ್ ದರ್ಬಾರ್..!

    ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗೋರೇ ಹುಷಾರ್- ಪ್ರವಾಸಿಗರ ಮೇಲೆ ಡ್ರೈವರ್ ದರ್ಬಾರ್..!

    ಬೆಂಗಳೂರು: ಹಾಲಿಡೇಸ್‍ನಲ್ಲಿ ಕುಟುಂಬದವರ, ಸ್ನೇಹಿತರ ಜೊತೆ ಹೊರ ರಾಜ್ಯದ ಪ್ರವಾಸಿ ತಾಣಗಳಿಗೆ ಹೋಗಲು ಇಷ್ಟಪಡುತ್ತಾರೆ. ಆದರೆ ಹೊರ ರಾಜ್ಯಗಳಲ್ಲಿ ಪ್ರವಾಸಿಗರ ಮೇಲೆ ಡ್ರೈವರ್‍ಗಳು ದರ್ಬಾರ್ ಮಾಡುತ್ತಿದ್ದಾರೆ.

    ಹೌದು. ಬೆಂಗಳೂರಿನ ಬಸವನಗುಡಿ ಹಾಗೂ ಲಗ್ಗರೆಯ ಮಂದಿ ಕಳೆದ ವಾರ ಶಿರಡಿ ಸಾಯಿಬಾಬಾನ ದರ್ಶನಕ್ಕೆ ಎಂದು ಟ್ರೈನ್ ಮೂಲಕ ಹೋಗಿದ್ದಾರೆ. ಸಾಯಿಬಾಬಾನ ದರ್ಶನವಾದ ಮೇಲೆ ಸುತ್ತಮುತ್ತಲಿನ ದೇವಾಲಯಗಳನ್ನು ನೋಡಲು ಕರ್ನಾಟಕ ಭವನದ ಮುಂದೆ ಇದ್ದ ಟ್ರಾವಲ್ಸ್ ನಿಂದ 6 ಸಾವಿರ ರೂಪಾಯಿ ಕೊಟ್ಟು ಟಿಟಿ ಮಾಡಿಕೊಂಡಿದ್ದಾರೆ. ಆದರೆ ಟಿಟಿ ಡ್ರೈವರ್ ಮಾತ್ರ ನಾನು ನಿಲ್ಲಿಸಿದ ಕಡೆ ಊಟ, ತಿಂಡಿ ಮಾಡಬೇಕು ಎಂದು ಕಂಡಿಶನ್ ಹಾಕಿದ್ದಾನೆ. ಗೊತ್ತಿಲ್ಲದ ಊರಲ್ಲಿ ಕಿರಿಕ್ ಯಾಕೆ ಅಂತ ಎಲ್ಲರೂ ಒಪ್ಪಿಕೊಂಡಿದ್ದಾರೆ.

    ಟೆಂಪೋ ಟ್ರಾವೆಲ್ಲರ್ ನಲ್ಲಿ 8 ಜನ ಮಹಿಳೆಯರು, ಇಬ್ಬರು ಯುವಕರು ಮತ್ತಿಬ್ಬರು ಮಕ್ಕಳು ದೇವಾಲಯ ನೋಡಲು ಹೊರಟಿದ್ದೆವು. ದರ್ಶನ ಮುಗಿಸಿ ಬಂದರೂ ಚಾಲಕ ಮಾತ್ರ ಸರಿಯಾಗಿ ಗಾಡಿಯಲ್ಲಿ ಇರದೇ ಕರ್ನಾಟಕದ ಪ್ರವಾಸಿಗರನ್ನ ಕಾಯಿಸಿದ್ದಾನೆ. ಬನ್ನಿ ಸರ್ ಟೈಂ ಆಗುತ್ತೆ ಹೋಗೋಣ ಅಂತ ಕರೆದರೆ, 1 ಸಾವಿರ ಇಸ್ಪೀಟ್‍ ಗೆ ಕಟ್ಟಿದ್ದೇನೆ ಗೆಲ್ಲೋವರೆಗೂ ಬರಲ್ಲ ಅಂತ ಹೇಳಿದ್ದನು ಎಂದು ತೊಂದರೆಗೊಳಗಾದ ವೈಶಾಲಿ ಹೇಳಿದ್ದಾರೆ.

    ತಾನು ಹೇಳಿದ ಕಡೆ ಊಟ ಮಾಡದಿದ್ದರೆ ನಿಮ್ಮ ಲಗೇಜ್‍ ನೆಲ್ಲ ಬೀಸಾಕುತ್ತೇನೆ ಎಂದು ಬ್ಯಾಗ್‍ಗಳನ್ನ ಬಿಸಾಕಲು ಮುಂದಾಗಿದ್ದನು. ಇಷ್ಟೇ ಅಲ್ಲದೇ ಮಾರ್ಗ ಮಧ್ಯೆ ರಾತ್ರಿ 10:30 ಸುಮಾರಿಗೆ ಗಾಡಿ ನಿಲ್ಲಿಸಿ ಹೋದ ಚಾಲಕ ತಡ ರಾತ್ರಿ 2 ಗಂಟೆಯಾದರೂ ಬಾರದೇ ಕನ್ನಡಿಗರು ಪರಡಾಡುವಂತೆ ಮಾಡಿದ್ದನು. ಕೊನೆಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದೆವು. ಆಗ ಪೊಲೀಸರು ಡ್ರೈವರ್ ಗೆ ಬುದ್ಧಿ ಹೇಳಿ ಕಳುಹಿಸಿದ್ದಾರೆ ಎಂದು ಪ್ರವಾಸಿಗರು ತಿಳಿಸಿದ್ದಾರೆ.

    ದೇವರ ದರ್ಶನಕ್ಕೆ ಎಂದು ಹೋದ ಸಿಲಿಕಾನ್ ಸಿಟಿ ಮಂದಿಗೆ ಮಹಾರಾಷ್ಟ್ರದ ಟಿಟಿ ಡ್ರೈವರ್ ದರ್ಪ ತೋರಿಸಿ ಅಯ್ಯೋ ಅನ್ನಿಸಿದ್ದಾನೆ. ಹೀಗಾಗಿ ಹೊರ ರಾಜ್ಯಗಳಿಗೆ ಟ್ರಿಪ್ ಹೋಗುವ ಮೊದಲು ಸರಿಯಾದ ಪ್ಲಾನ್ ಮಾಡಿಕೊಳ್ಳಿ, ಇಲ್ಲವಾದರೆ ಈ ರೀತಿಯಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv