Tag: state

  • ರಾಜ್ಯದೆಲ್ಲೆಡೆ ಶುರುವಾಗಿದೆ ಮೈಕೊರೆಯುವ ಚಳಿ!

    ರಾಜ್ಯದೆಲ್ಲೆಡೆ ಶುರುವಾಗಿದೆ ಮೈಕೊರೆಯುವ ಚಳಿ!

    – ಕೊಡಗಿನಲ್ಲಿ ಸಂಜೆ 5.30ಕ್ಕೆ ಆವರಿಸುತ್ತೆ ಕತ್ತಲು
    – ಮಂಡ್ಯದಲ್ಲಿ ರಸ್ತೆ ಬದಿ ಬೆಂಕಿ ಕಾಯಿಸಿ ಕುಳಿತ ಜನ

    ಮಡಿಕೇರಿ/ಮಂಡ್ಯ/ಕೋಲಾರ: ದಕ್ಷಿಣ ಕಾಶ್ಮೀರ ಕೊಡಗು ಜಿಲ್ಲೆಯಲ್ಲಿಗ ಮೈಕೊರೆಯುವ ಚಳಿ ಶುರುವಾಗಿದೆ. ಮುಂಜಾನೆಯ ಮಂಜಿನ ಮುಸುಕು, ತಣ್ಣನೆಯ ಗಾಳಿ ಕೊಡಗಿನವರ ಜೀವನ ಶೈಲಿಯನ್ನೇ ಈಗ ಬದಲಾಯಿಸಿದೆ.

    ಗಿರಿ ಪ್ರದೇಶದಲ್ಲಿರುವ ಮಡಿಕೇರಿಯಲ್ಲಿ ದಿನವಿಡೀ ಚಳಿಯ ಅನುಭವ ಹೆಚ್ಚಾಗಿದೆ. ಬೆಳಗ್ಗೆ 7 ಗಂಟೆಯಾದರೂ ಬೆಳಕಾಗುತ್ತಿಲ್ಲ. ಸಂಜೆ 5:30ಗಂಟೆಗೆ ಕತ್ತಲು ಆವರಿಸುತ್ತಿದೆ. ಸಾಮಾನ್ಯವಾಗಿ ಮಡಿಕೇರಿಯಲ್ಲಿ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಚಳಿ ಆರಂಭಗೊಂಡು ಫೆಬ್ರವರಿ ತಿಂಗಳವರೆಗೂ ಮುಂದುವರಿಯುತ್ತದೆ. ಕನಿಷ್ಟ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿದಿರುತ್ತದೆ.

    ಅತಿಯಾದ ಮೈ ಕೊರೆಯುವ ವಾತಾವರಣ ಪ್ರವಾಸಿಗರಿಗೆ ಮೋಜು ಮಸ್ತಿಯ ಸುಖಾನುಭವ ನೀಡಿದ್ದರೆ, ಕೆಲಸಕ್ಕೆ ತೆರಳುವ ಸ್ಥಳಿಯರಿಗೆ, ವ್ಯಾಪಾರಿಗಳಿಗೆ ಅನಾನುಕೂಲವಾಗಿದೆ. ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರೆಲ್ಲ ಕೋಟು, ಶಾಲು ಹೊದ್ದು ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ.

    ಇತ್ತ ಮಂಡ್ಯದಲ್ಲೂ ಚಳಿ ಹೆಚ್ಚಾಗಿದೆ. ಚಳಿಗೆ ಜನರು ರಸ್ತೆ ಬದಿ ಬೆಂಕಿ ಕಾಯಿಸುತ್ತ ಕುಳಿತಿರುವ ದೃಶ್ಯ ಈಗ ಕಂಡುಬರುತ್ತಿದೆ. ಕಳೆದ ದಿನಗಳಿಗೆ ಹೋಲಿಸಿದರೆ ಬುಧವಾರ ಚಳಿಯ ಪ್ರಮಾಣ ಏರಿಕೆಯಾಗಿದೆ. ಜನರು ಈ ಚಳಿಗೆ ನಡುಗುತ್ತಿದ್ದು, ಚಳಿ ಕಡಿಮೆ ಮಾಡಿಕೊಳ್ಳಲು ರಸ್ತೆ ಬದಿ ಬೆಂಕಿ ಕಾಯಿಸುತ್ತಿದ್ದಾರೆ.

    ಮಳೆರಾಯನ ಶಾಪದಿಂದ ಮಳೆಯಿಲ್ಲದೆ ಕೊರಗುತ್ತಿರುವ ಕೋಲಾರ ಜನತೆ ಕಳೆದ ಒಂದು ವಾರದಿಂದ ಚಳಿಯಿಂದ ನಡುಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ದಟ್ಟವಾದ ಇಬ್ಬನಿ ಈ ಭಾಗದ ಗಿರಿ ಶಿಖರಗಳನ್ನ ಆವರಿಸಿಕೊಂಡಿದೆ. ಇಲ್ಲಿನ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿ ಜೊತೆಗೆ ಬೆಟ್ಟದ ತಪ್ಪಿಲಿನ ರಸ್ತೆಗಳಂತೂ ಊಟಿಯ ವಾತಾವರಣವನ್ನೇ ನಿರ್ಮಾಣ ಮಾಡಿವೆ.

    ಚಳಿ ಜೊತೆಗೆ ದಟ್ಟ ಮಂಜು ಆವರಿಸಿ ಇಡೀ ಕೋಲಾರ ಜಿಲ್ಲೆಯನ್ನ ಸುತ್ತುವರಿದಿದೆ. ನಗರದ ಸುತ್ತ ದಟ್ಟವಾದ ಮಂಜು ಆವರಿಸಿದ ಪರಿಣಾಮ ಗಿಡ-ಮರಗಳ ಎಲೆಗಳಿಂದ ನೀರು ತೊಟ್ಟಿಕ್ಕುತ್ತಿದೆ. ದಟ್ಟಣೆಯ ಹಿಮ ಕಾಣಿಸಿಕೊಳ್ಳುವ ಮೂಲಕ ವಾಹನ ಸವಾರರು ಪರದಾಡುವ ಪರಿಸ್ಥಿತಿಯೂ ಕೂಡ ಜಿಲ್ಲೆಯಲ್ಲಿ ನಿರ್ಮಾಣವಾಗಿತ್ತು.

    ಚುಮು ಚುಮು ಚಳಿಗೆ ಮನೆ ಬಿಟ್ಟು ಹೊರ ಬಾರದ ನಗರ ಪ್ರದೇಶದ ಜನ ಚಳಿಗೆ 9 ಗಂಟೆಯ ಒಳಗಡೆ ಗೂಡು ಸೇರುತ್ತಿದ್ದಾರೆ. ದಟ್ಟ ಇಬ್ಬನಿಯಿಂದಾಗಿ ಬೈಕ್ ಸವಾರರು, ವಿದ್ಯಾರ್ಥಿಗಳು ಸೇರಿದಂತೆ ಜನರು ಬೆಚ್ಚನೆಯ ಉಡುಪುಗಳ ಮೊರೆ ಹೋಗುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಮ್ಮ ರಾಜ್ಯದ ಸಂಸ್ಕೃತಿ ನಮ್ಮ ಹೆಮ್ಮೆ- ಸುನೀಲ್ ಶೆಟ್ಟಿ

    ನಮ್ಮ ರಾಜ್ಯದ ಸಂಸ್ಕೃತಿ ನಮ್ಮ ಹೆಮ್ಮೆ- ಸುನೀಲ್ ಶೆಟ್ಟಿ

    ಬೆಳಗಾವಿ: ತುಳುನಾಡು ಹಾಗೂ ಕರ್ನಾಟಕ ಜನತೆಗೆ ಪ್ರೀತಿ ಇರಲಿ. ನಮ್ಮ ರಾಜ್ಯದ ಸಂಸ್ಕೃತಿ ನಮ್ಮ ಹೆಮ್ಮೆ. ನಾನು ಹೆಮ್ಮೆಯ ಕನ್ನಡಿಗ ಎಂದು ಬಾಲಿವುಡ್ ನಟ, ಆ್ಯಕ್ಷನ್ ಹೀರೋ ಸುನೀಲ್ ಶೆಟ್ಟಿ ಹೇಳಿದ್ದಾರೆ.

    ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿಗೆ ಬಂದಾಗ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನಾನು 25 ವರ್ಷದಿಂದ ಬಾಲಿವುಡ್‍ನಲ್ಲಿದ್ದೇನೆ. ಇಂದು ನನಗೆ ತುಂಬಾ ಖುಷಿಯಾಗುತ್ತಿದೆ. ಏಕೆಂದರೆ ನಾನು ಚಿಕ್ಕ ವಯಸ್ಸಿನಲ್ಲಿದ್ದಾಗ ಮಂಗಳೂರಿಗೆ ಬಂದಾಗ ನಾನು ಬೆಳಗಾವಿಗೆ ಹೋಗುತ್ತಿದ್ದೆ. ಇಲ್ಲಿ ನನ್ನ ಬಾಲ್ಯದ ನೆನಪು ಸಾಕಷ್ಟಿದೆ. ನಾನು ಸಂಜೆ ಹೊತ್ತು ಬೆಳಗಾವಿಗೆ ಬರುತ್ತಿದ್ದೆ. ಬೆಳಗಾವಿ ಏರ್ ಕಂಡಿಶನ್ ಸಿಟಿ ಎಂದು ಕರೆಯುತ್ತಿದ್ದೇವು. ರಾಮ್‍ದೇವ್ ಹೋಟೆಲ್‍ನಲ್ಲಿ ಯಾವಾಗಲೂ ವಾಸಿಸುತ್ತಿದ್ದೇವು. ಇಲ್ಲಿ ನನ್ನ ಬಾಲ್ಯದ ನೆನಪು ಸಾಕಷ್ಟಿದೆ ಎಂದರು.

    ‘ಬಲವಾನ್’ ಸಿನಿಮಾದಿಂದ ‘ಪೈಲ್ವಾನ್’ ಸಿನಿಮಾವರೆಗಿನ ನನ್ನ ಪಯಾಣ ಚೆನ್ನಾಗಿದೆ. 26-27 ವರ್ಷದಿಂದ ಜನರು ನನಗೆ ಸಾಕಷ್ಟು ಗೌರವ ಹಾಗೂ ಪ್ರೀತಿ ನೀಡಿದ್ದಾರೆ. ಜನರ ಈ ಪ್ರೀತಿ ಹಾಗೂ ಗೌರವ ಪಡೆಯುತ್ತಿರುವುದ್ದಕ್ಕೆ ನನ್ನನ್ನು ನಾನು ಅದೃಷ್ಟವಂತ ಎಂದು ಭಾವಿಸುತ್ತೇನೆ. ಪೈಲ್ವಾನ್ ಚಿತ್ರ ಬಗ್ಗೆ ಈಗ ಮಾತನಾಡುವುದು ಬೇಡ. ಪೈಲ್ವಾನ್ ಚಿತ್ರ ಬಿಡುಗಡೆಯಾದಾಗ ಮಾತನಾಡಿದ್ದರೆ ಚೆನ್ನಾಗಿರುತ್ತದೆ. ಕೃಷ್ಣ ಹಾಗೂ ಸುದೀಪ್ ಶೂಟಿಂಗ್‍ನಲ್ಲಿದ್ದಾರೆ. ಶೂಟಿಂಗ್ ಮುಗಿದ್ದಾಗ ಈ ಚಿತ್ರದ ಬಗ್ಗೆ ಮಾತನಾಡೋಣ ಎಂದು ತಿಳಿಸಿದರು.

    ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಾವು ಕ್ರಿಕೆಟ್‍ಗಾಗಿ ಆಡುವುದಿಲ್ಲ. ನಾವು ಒಂದು ಒಳ್ಳೆಯ ಉದ್ದೇಶಕ್ಕಾಗಿ ಆಡುತ್ತೇವೆ. 100 ಮಕ್ಕಳಿಗೆ 100 ಸರ್ಜರಿಗಾಗಿ ಯಂಗ್ ಹಾರ್ಟ್‍ಗಾಗಿ ನಾವು ಕ್ರಿಕೆಟ್ ಆಡುತ್ತೇವೆ. ಚಾರಿಟಿಗಾಗಿ ಹಾಗೂ ಸ್ನೇಹವನ್ನು ಬೆಳೆಸಲು ನಾವು ಕ್ರಿಕೆಟ್ ಆಡುತ್ತೇವೆ. 8 ರಾಜ್ಯದ ಕಲಾವಿದರು ಒಟ್ಟಿಗೆ ಬಂದು ಒಂದು ಒಳ್ಳೆಯ ಉದ್ದೇಶಕ್ಕಾಗಿ ಕ್ರಿಕೆಟ್ ಆಡುತ್ತಾರೆ ಎಂದು ಹೇಳಿದರು.

    ನಾನು ಒಬ್ಬ ಸ್ಪೋಟ್ಸ್ ಪರ್ಸನ್ ಆಗಿದ್ದು, ನಾನು ನನ್ನ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡುತ್ತೇನೆ. ನನ್ನ ಆರೋಗ್ಯ, ಫಿಸಿಕ್ ನನಗೆ ಆ್ಯಕ್ಷನ್ ಹೀರೋ ಎಂಬ ಪಟ್ಟ ನೀಡಿದೆ. ಸಿಎಸ್‍ಆರ್ ನನ್ನ ಜೀವನದ ಒಂದು ಭಾಗ. ನಾವು ಜೀವನದಲ್ಲಿ ಏನಾದರೂ ಸಾಧಿಸಿದ್ದಾಗ ನಾವು ಅದನ್ನು ವಾಪಸ್ ನೀಡುವುದು ತುಂಬಾನೇ ಮುಖ್ಯ. ನಮ್ಮ ಮುಖ್ಯ ಗುರಿ ಮಕ್ಕಳಿಗೆ ಶಿಕ್ಷಣ ನೀಡುವುದು. ಈ ಗುರಿ ಎಂದಿಗೂ ಬದಲಾಗುವುದಿಲ್ಲ. ಹಾಗಾಗಿ ನಾನು ಒಂದೇ ಗುರಿಯಲ್ಲಿ ನಡೆಯುತ್ತೇನೆ. 10 ಜನ ಅದು ಮಾಡು ಇದು ಮಾಡು ಎಂದು ಹೇಳುತ್ತಾರೆ. ಆದರೆ ಎಲ್ಲಿ ಉತ್ತಮ ಫಲಿತಾಂಶ ಸಿಗುತ್ತೋ ಅಲ್ಲಿ ನಾನು ಗಮನ ನೀಡುತ್ತೇನೆ ಎಂದರು.

    ನನಗೆ ಕನ್ನಡ ಸ್ವಲ್ಪ ಸ್ವಲ್ಪ ಬರುತ್ತೆ. ನಾನು ಹೆಚ್ಚು ತುಳು ಮಾತನಾಡುವುದು. ಹಾಗಾಗಿ ತುಳುನಾಡು ಹಾಗೂ ಕರ್ನಾಟಕ ಜನತೆಗೆ ಪ್ರೀತಿ ಇರಲಿ. ನಮ್ಮ ರಾಜ್ಯದ ಸಂಸ್ಕೃತಿ ನಮ್ಮ ಹೆಮ್ಮೆ. ನಾನು ಹೆಮ್ಮೆಯ ಕನ್ನಡಿಗ. ಈ ರಾಜ್ಯದಲ್ಲಿ ಮಹಿಳೆಯರಿಗೆ ಹೆಚ್ಚು ಗೌರವ ನೀಡುತ್ತಾರೆ. ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಹಾಗಾಗಿ ನನಗೆ ಈ ರಾಜ್ಯ ಇಷ್ಟವಾಗುತ್ತದೆ. ಬೆಳಗಾವಿಗೆ ಬರಲು ನನಗೆ ಇಷ್ಟವಾಗುತ್ತದೆ. ಬೆಳಗಾವಿ ಹೆಚ್ಚು ಅಭಿವೃದ್ಧಿ ಹೊಂದಿದೆ. ಕಳೆದ ವರ್ಷ ಕರ್ನಾಟಕ ಪ್ರೀಮಿಯರ್ ಲೀಗ್‍ಗೆ ಬಂದಿದ್ದೆ. ಬೆಳಗಾವಿಯಿಂದ ಹುಬ್ಬಳ್ಳಿಗೆ ಹೋಗಿದ್ದೆ ಎಂದು ಸುನೀಲ್ ಶೆಟ್ಟಿ ನೆನಪನ್ನು ಹಂಚಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜ್ಯಕ್ಕೆ ಹಿಂಗಾರು ಮಳೆ ಎಂಟ್ರಿ- ವರ್ಷಧಾರೆ ಅಬ್ಬರ ಶುರು

    ರಾಜ್ಯಕ್ಕೆ ಹಿಂಗಾರು ಮಳೆ ಎಂಟ್ರಿ- ವರ್ಷಧಾರೆ ಅಬ್ಬರ ಶುರು

    ಬೆಂಗಳೂರು: ರಾಜ್ಯಕ್ಕೆ ಹಿಂಗಾರು ಮಳೆ ಎಂಟ್ರಿಯಾಗಿದ್ದು ಇಂದಿನಿಂದ ರಾಜ್ಯದಲ್ಲಿ ವರ್ಷಧಾರೆಯ ಅಬ್ಬರ ಶುರುವಾಗಲಿದೆ.

    ಅಕ್ಟೋಬರ್ ಎರಡನೇ ವಾರವೇ ಬರಬೇಕಾಗಿದ್ದ, ಈಶಾನ್ಯ ಮುಂಗಾರು ಈ ವರ್ಷ ವಿಳಂಬವಾಗಿದೆ. ಚೆನ್ನೈನಲ್ಲಿ ಈಗಾಗಲೇ ವರುಣನ ಅಬ್ಬರ ಶುರುವಾಗಲಿದ್ದು, ರಾಜ್ಯದಲ್ಲಿ ನವೆಂಬರ್ ಮೂರು ಹಾಗೂ ನಾಲ್ಕರವರೆಗೂ ಮಳೆ ಇರಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

    ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ತುಸು ಹೆಚ್ಚೆ ಅನಿಸುವಷ್ಟು ಮಳೆ ಇರಲಿದೆ. ಬೆಂಗಳೂರಿನಲ್ಲೂ ಮೇಘಸ್ಫೋಟದ ಅಬ್ಬರ ಇರಲಿದೆ. ಈಶಾನ್ಯ ಮಾರುತದ ಆಗಮನದ ವಿಳಂಬದಿಂದ ಬೆಳೆಗಳಿಗೆ ನೀರಿಲ್ಲದೇ ಒದ್ದಾಡುತ್ತಿದ್ದ ರೈತರಿಗೆ ಕೊಂಚ ಸಂತಸ ಮೂಡುವಂತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯ, ದೇಶದಲ್ಲಿ ಮುಂದುವರೆದ ವರುಣನ ಆರ್ಭಟ- ಮಳೆಯಲ್ಲೂ ಸ್ವಾತಂತ್ರ್ಯ ದಿನಾಚರಣೆ ಆಚರಣೆ

    ರಾಜ್ಯ, ದೇಶದಲ್ಲಿ ಮುಂದುವರೆದ ವರುಣನ ಆರ್ಭಟ- ಮಳೆಯಲ್ಲೂ ಸ್ವಾತಂತ್ರ್ಯ ದಿನಾಚರಣೆ ಆಚರಣೆ

    ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಈ ಮಹಾಮಳೆಯಲ್ಲೂ ಕರಾವಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ.

    ಕರಾವಳಿಯಲ್ಲಿ ಮಹಾಮಳೆ ಹಿನ್ನೆಲೆ ಜಿಲ್ಲಾಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಾಂಕೇತಿವಾಗಿ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೆಂಥಿಲ್ ಸೂಚಿಸಿದ್ದಾರೆ. ಮಂಗಳೂರಿನ ನೆಹರು ಮೈದಾನದಲ್ಲಿ ಸ್ವಾತಂತ್ರ ದಿನಾಚರಣೆ ನಡೆಯಲಿದ್ದು, ಭಾರೀ ಮಳೆ ಹಿನ್ನೆಲೆ ಕಾರ್ಯಕ್ರಮಕ್ಕೆ ಮಕ್ಕಳ ಹಾಜರಾತಿ ಬೇಡ, ಎನ್‍ಸಿಸಿ, ಪೊಲೀಸ್ ಪಥಸಂಚಲನ ಮಾತ್ರ ನಡೆಸುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದಾರೆ.

    ಧಾರಾಕಾರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಭದ್ರಾನದಿ ಉಕ್ಕಿ ಹರಿಯುತಿದೆ, ಭದ್ರಾ ಬ್ರಿಡ್ಜ್‍ವರೆಗೂ ನೀರು ನುಗ್ಗಿದೆ. ಬ್ರಿಡ್ಜ್ ಕೆಳಗಿರುವ ಪೆಟ್ರೋಲ್ ಬಂಕ್‍ಗೂ ನೀರು ನುಗ್ಗಿ 5 ಸಾವಿರ ಲೀಟರ್ ಪೆಟ್ರೋಲ್ ನೀರುಪಾಲಾಗಿದ್ದು, ನೀರಿನೊಂದಿಗೆ ಪೆಟ್ರೋಲ್ ಹರೀತಿದೆ. ಕವಲಗುಂದಿ, ಕೋಟೆ, ಅಂಬೇಡ್ಕರ್ ನಗರ, ಗುಂಡೂರಾವ್, ಎಕಿನ್ ಷಾ ಕಾಲೋನಿ, ಸುಣ್ಣದಹಳ್ಳಿ ಬಡಾವಣೆ ಸೇರಿ ಒಟ್ಟು 250ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು ಆರು ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ, ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

    ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳದಲ್ಲಿರಬೇಕೆಂದು ಜಿಲ್ಲಾಡಳಿತ ಸೂಚಿಸಿದೆ. ಮಳೆಯ ತೀವ್ರತೆಗೆ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ವಿರಾಜಪೇಟೆ-ಮಡಿಕೇರಿ ನಡುವಿನ ಸಂಪರ್ಕಿಸಲು ಸೇತುವೆ ಮುಳುಗಡೆ ಹಂತದಲ್ಲಿದೆ. ನದಿ ದಡದ 50ಕ್ಕೂ ಹೆಚ್ಚಿನ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಕರಡಿಗೋಡು ಸೇರಿದಂತೆ ತಗ್ಗು ಪ್ರದೇಶಗಳಲ್ಲಿರುವ ಗ್ರಾಮಗಳಿಗೆ ನೀರು ನುಗ್ಗುವ ಸಾಧ್ಯತೆ ಇರೋದ್ರಿಂದ ಮುನ್ನೆಚ್ಚರಿಕೆ ವಹಿಸಲಾಗಿದೆ.

    ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದಿಂದ ನದಿಗೆ 45 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಎಚ್ಚರಿಕೆ ಸಂದೇಶ ರವಾನೆ ಮಾಡಲಾಗಿದ್ದು, ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ. ತಗ್ಗು ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಮತ್ತು ಸಮಸ್ಯೆ ಎದುರಾಗುವ ಸನ್ನಿವೇಶ ಬಂದಲ್ಲಿ ಗಂಜಿಗಳ ಕೇಂದ್ರ ಕಡೆಗೆ ತ್ವರಿತವಾಗಿ ತೆರಳಲು ಸೂಚನೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಎಡೆಬಿಡೆದೆ ಮಳೆ ಸುರಿಯುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಹೀಗಾಗಿ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಸಮೀಪದ ಇರ್ಪು ಜಲಪಾತಕ್ಕೆ ತೆರಳದಂತೆ ಶ್ರೀಮಂಗಲ ವನ್ಯಜೀವಿ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

    ಇತ್ತೀಚೆಗೆ ಭಾರೀ ಮಳೆಯಾಗ್ತಿರೋದ್ರಿಂದ ತುಂಗಭದ್ರಾ ಜಲಾಶಯದಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಮತ್ತು ಬಳ್ಳಾರಿ ಜಿಲ್ಲೆ ಕಂಪ್ಲಿ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ಅಪಾಯದ ಮಟ್ಟ ಮೀರಿ ನೀರು ಹರಿದು ಬರುತ್ತಿದೆ. ಸೇತುವೆ ಮುಳುಗಡೆ ಆಗಲು ಇನ್ನೂ ಕೇವಲ ಅರ್ಧ ಅಡಿ ಅಷ್ಟೇ ಬಾಕಿ ಇದೆ. ಆದರೂ ಸಹ ಇಲ್ಲಿ ಯಾವುದೇ ಮುಂಜಾಗೃತೆ ಇಲ್ಲದೆ ಸೇತುವೆ ಮೇಲೆ ಬಾರಿ ವಾಹನಗಳ ಸಂಚಾರ ಇದೆ.

    ವರುಣನ ಆರ್ಭಟಕ್ಕೆ ನೀರಿನಲ್ಲಿ ವ್ಯಕ್ತಿ ಕೊಚ್ಚಿಹೋದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ದಾಪುರದ ಐರಬೈಲು ಗ್ರಾಮದಲ್ಲಿ ನಡೆದಿದೆ. ಶಂಕರ ಪೂಜಾರಿ ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ, ಕೃಷಿ ಚಟುವಟಿಕೆಗೆ ತೆರಳಿದ್ದಾಗ, ಕಿರಿದಾದ ಕಾಲುವೆಯಲ್ಲಿ ಶಂಕರ್ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಬಂದ ಶಂಕರನಾರಾಯಣ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಶಂಕರ್‍ಗಾಗಿ ಶೋಧಕಾರ್ಯ ನಡೆಸಿದ್ದಾರೆ.

    ಇತ್ತ ಧಾರಾಕಾರ ಮಳೆಯಿಂದಾಗಿ ಶಿರಾಡಿಘಾಟ್‍ನಲ್ಲಿ ಸಂಚಾರ ದಟ್ಟಣೆ ಮುಂದುವರಿದಿತ್ತು. ಅಲ್ಲಲ್ಲಿ ಗುಡ್ಡ ಕುಸಿತಗೊಂಡಿದ್ದು, ವಾಹನ ಸವಾರರು ಪರದಾಡಿದರು. ಸತತ ಮೂರು ಗಂಟೆಗಳ ಕಾಲ ಟ್ರಾಫಿಕ್‍ಜಾಮ್‍ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಬೇಕಾಯಿತು. ಅಲ್ಲದೇ ವಾಹನ ಸಂಚಾರ ಸುಗಮಗೊಳಿಸಲು ಸ್ಥಳೀಯರು ಹಾಗೂ ಪ್ರಯಾಣಿಕರು ಹರಸಾಹಸಪಟ್ಟರು.

    ಕಾವೇರಿ ನದಿ ಪಾತ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣರಾಜ ಸಾಗರಕ್ಕೆ ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳವಾಗಿದೆ. ಇನ್ನು ಮುಂದಿನ 24 ಗಂಟೆಯೊಳಗೆ ಕೆಆರ್‍ಎಸ್ ಜಲಾಶಯದಿಂದ 1,20,000 ರಿಂದ 1,50,000 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡುವ ಸಾಧ್ಯತೆ ಇದ್ದು, ನದಿಯ ದಂಡೆ ಹಾಗೂ ತಗ್ಗು ಪ್ರದೇಶದಲ್ಲಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಸೂಚನೆ ನೀಡಿದ್ದಾರೆ.

    ಮಲೆನಾಡಿನ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ, ಭದ್ರಾ ಡ್ಯಾಂನ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಭದ್ರಾ ಡ್ಯಾಂ ನಿಂದ 90 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಡ್ಯಾಂನ ವ್ಯಾಪ್ತಿಯ, ಸೋಂಪಾಪುರ, ಕರಕುಚಗಿ, ಕೆಸರುಕೊಪ್ಪ ಗ್ರಾಮದ ಅಡಿಕೆ ತೋಟ, ಗದ್ದೆಗಳಿಗೆ ನೀರು ನುಗ್ಗಿ ಜಲಾವೃತವಾಗಿವೆ. ಇನ್ನು ಸ್ಥಳಕ್ಕೆ ಬಂದ ತರೀಕೆರೆ ಉಪವಿಭಾಗಾಧಿಕಾರಿ ರೂಪಾ, ತಹಶೀಲ್ದಾರ್ ಧಮೋಜಿರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

    ಕೇರಳದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಗೆ ಅಪಾಯದ ಮಟ್ಟ ಮೀರಿ ನದಿಗಳು ಹರಿಯುತ್ತಿದೆ. ಸರಣಿ ಭೂ ಕುಸಿತಗಳು ಕೇರಳಿಗರಿಗೆ ದುಃಸ್ವಪ್ನವಾಗಿ ಕಾಡುತ್ತಿವೆ. ನಿನ್ನೆ ವಯನಾಡು, ಕಲ್ಲಿಕೋಟೆ, ಮಳಪ್ಪುರಂ, ಕಣ್ಣೂರು, ಕಾಸರಗೋಡಿನಲ್ಲಿ ಭೂಕುಸಿತ ಸಂಭವಿಸಿದ್ದು 144 ಗ್ರಾಮಗಳನ್ನು ಪ್ರವಾಹಪೀಡಿತ ಅಂತ ಘೋಷಿಸಲಾಗಿದೆ. ಧಾರಾಕಾರ ಮಳೆಯ ಹಿನ್ನೆಲೆ ಈ ಬಾರಿ ಓಣಂ ಆಚರಣೆಯನ್ನು ಸರ್ಕಾರ ರದ್ದುಗೊಳಿಸಿದ್ದು, ಓಣಂಗಾಗಿ ಮೀಸಲಿಟಿದ್ದ ಹಣವನ್ನು ಪರಿಹಾರ ಕಾರ್ಯಾಚರಣೆಗೆ ಬಳಸುವುದಾಗಿ ಸಿಎಂ ಪಿಣರಾಯ್ ವಿಜಯನ್ ಘೋಷಿಸಿದ್ದಾರೆ.

    ಇಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಜ್ಯಪಾಲ ಸದಾಶಿವಂ ಏರ್ಪಡಿಸಿದ್ದ ಔತಣಕೂಟವನ್ನೂ ರದ್ದುಗೊಳಿಸಿದ್ದಾರೆ. ಮುಲ್ಲಪೆರಿಯಾರ್ ಡ್ಯಾಂನಲ್ಲಿ ನೀರಿನ ಮಟ್ಟ ತೀವ್ರ ಏರಿಕೆಯಾಗಿರುವುದು ಸ್ಥಳೀಯರ ನಿದ್ದೆಗೆಡಿಸಿದೆ. ಗರಿಷ್ಠ ನೀರಿನ ಮಟ್ಟ 142 ಅಡಿ ಇದ್ದು ಈಗಾಗಲೇ 136.10 ಅಡಿ ತಲುಪಿದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಗ್ರಾಮಸ್ಥರಿಗೆ ಸೂಚಿಸಲಾಗಿದೆ.

    ಉತ್ತರ ಭಾರತದಲ್ಲೂ ಭಾರೀ ಮಳೆಯಾಗುತ್ತಿದ್ದು ಜಮ್ಮುವಿನಲ್ಲಿ ಸಂಭವಿಸಿದ ದಿಢೀರ್ ಪ್ರವಾಹಕ್ಕೆ ನಾಲ್ವರು ಬಲಿಯಾಗಿದ್ದಾರೆ. 24ಕ್ಕೂ ಹೆಚ್ಚು ಮನೆಗಳು, ವಾಹನಗಳು ಹಾನಿಯಾಗಿವೆ. ಹಿಮಾಚಲ ಪ್ರದೇಶದಲ್ಲಿ 5 ವರ್ಷದ ಬಾಲಕ ನೀರಿನಲ್ಲಿ ಮುಳುಗಿದ್ದು ಮೃತರ ಸಂಖ್ಯೆ 2 ದಿನಗಳಲ್ಲಿ 19ಕ್ಕೇರಿದೆ. ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿ ಘಟನೆಗಳಿಂದ ನಾಲ್ವರು ಮೃತಪಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ!

    ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ!

    ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದು, ರಾಜ್ಯದ ಹಲವೆಡೆ ನದಿ, ಕೊಳ್ಳಗಳು ತುಂಬಿ, ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇನ್ನು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಈ ಹಿನ್ನೆಲೆಯಲ್ಲಿ ನದಿಪಾತ್ರದ ಪ್ರದೇಶ, ಫಾಲ್ಸ್ ಇರುವ ಕಡೆ, ಕರಾವಳಿ ಭಾಗದ ಕಡೆ ವೀಕೆಂಡ್ ಪ್ರವಾಸವನ್ನು ಕೈಬಿಡುವುದು ಒಳ್ಳೆಯದು ಅಂತಾ ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಸೇರಿದಂತೆ ಒಟ್ಟು ಒಂಬತ್ತು ರಾಜ್ಯಗಳಿಗೆ ಪ್ರವಾಹ ಭೀತಿ ಇದೆ.

    ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಒಳ ಹರಿವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಜಲಾಶಯ ಭರ್ತಿ ಆಗಿರೋ ಕಾರಣ ಒಳಹರಿವಿನ ಪ್ರಮಾಣದಷ್ಟೆ ಹೊರಹರಿವು ಹೆಚ್ಚಿಸಲಾಗಿದೆ. ಇದರಿಂದ ಮೈಸೂರು ಭಾಗದ ಬಹುತೇಕ ಪ್ರದೇಶಗಳು ಜಲಾವೃತವಾಗಿವೆ. ಇತ್ತ ಕಪಿಲೆ ತುಂಬಿ ಹರಿಯುತ್ತಿರುವ ಕಾರಣ ಸುತ್ತೂರು ಮಠದ ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ನದಿಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದ್ರು. ನದಿ ತುಂಬಿ ಹರಿಯುತ್ತಿರುವುದು ಸಂತಸದ ವಿಚಾರ. ಆದ್ರೆ, ಅತಿಯಾದ ಮಳೆಯಿಂದಾಗಿ ರೈತರಿಗೆ, ಜನರಿಗೆ ಕಷ್ಟವಾಗಿದೆ ಅಂತ ಹೇಳಿದ್ರು.

    ಕಬಿನಿ ಹಾಗೂ ಕೆಆರ್ ಎಸ್‍ನಿಂದ ಅಧಿಕ ಪ್ರಮಾಣದಲ್ಲಿ ನೀರು ಹರಿಸುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವ್ಯಾಪ್ತಿಯ ನದಿ ಪಾತ್ರದ ಗ್ರಾಮಗಳಿಗೆ ಮುಳುಗಡೆಯ ಭೀತಿ ಎದುರಾಗಿದೆ. ಅಲ್ಲದೇ ಧಾರಾಕಾರ ಮಳೆಯಿಂದಾಗಿ ಅನೇಕ ಬೆಳೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಇತ್ತ ಕರಾವಳಿಯಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದ ನದಿ ನೀರಿನ ಪ್ರಮಾಣ ಕಡಿಮೆಯಾಗಿದೆ.

    ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ತಿಂಗಳಿಂದ ನಿರಂತರ ಮಳೆಯಿಂದಾಗಿ ಕಾವೇರಿ ನದಿ ತುಂಬಿ ಹರಿಯುತ್ತಿದೆ. ತಲಕಾವೇರಿಯಲ್ಲಿ ಹುಟ್ಟಿ ದಕ್ಷಿಣ ಭಾರತದಲ್ಲಿ ಹರಿಯೋ ಕಾವೇರಿ ಯಾರಿಗೂ ತೊಂದರೆ ನೀಡದೇ, ಯಾವುದೇ ಅನಾಹುತಗಳನ್ನು ಮಾಡದೆ ಶಾಂತಸ್ವರೂಪಿಣಿಯಾಗಿ ಹರಿಯುತ್ತಿದ್ದಾಳೆ. ಇನ್ನು ಕಾವೇರಿ ಮಾತೆಗೆ ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಶ್ರದ್ದಾಭಕ್ತಿಯಿಂದ ಬಾಗಿನ ಅರ್ಪಿಸಲಾಯಿತು.

    ಕಂಡು ಕೇಳರಿಯದ ಭಾರೀ ಮಳೆಗೆ ದೇವರನಾಡು ಕೇರಳ ತತ್ತರಿಸಿ ಹೋಗಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ ಮರಣ ಮಳೆಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಮಳೆಗೆ 54 ಸಾವಿರ ಮಂದಿ ನಿರಾಶ್ರಿತರಾಗಿದ್ದಾರೆ. ವಯನಾಡ್ ಜಿಲ್ಲೆಯಲ್ಲಿ ಆಗಸ್ಟ್ 14ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಡುಕ್ಕಿ, ಅಲಪುಜ್ಜಾ, ಕೊಟ್ಟಾಯಂ, ಪಾಲಕ್ಕಾಡ್, ಮಲಪ್ಪುರಂ ಮತ್ತು ಕೋಝೀಕೋಡ್‍ನಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಒಟ್ಟಿನಲ್ಲಿ ಮಳೆರಾಯನ ಆಗಮನದಿಂದ ಒಂದು ಕಡೆ ಸಂತಸ ಮೂಡಿದ್ರೆ, ಮತ್ತೊಂದು ಕಡೆ ಅವಾಂತರಗಳನ್ನು ಸೃಷ್ಟಿ ಮಾಡಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಪ್ರತ್ಯೇಕ ರಾಜ್ಯ ಕೇಳುವ ನಾಯಕರು ಉ.ಕರ್ನಾಟಕದ ಮುಖ್ಯಮಂತ್ರಿ ಆಕಾಂಕ್ಷಿಗಳು: ಸೊಬರದಮಠ

    ಪ್ರತ್ಯೇಕ ರಾಜ್ಯ ಕೇಳುವ ನಾಯಕರು ಉ.ಕರ್ನಾಟಕದ ಮುಖ್ಯಮಂತ್ರಿ ಆಕಾಂಕ್ಷಿಗಳು: ಸೊಬರದಮಠ

    ಗದಗ: ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿರುವ ನಾಯಕರು ಉತ್ತರ ಕರ್ನಾಟಕ ರಚನೆಯಾದ ಮೇಲೆ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದಾರೆ ಎಂದು ರೈತಸೇನಾ ರಾಜ್ಯಾಧ್ಯಕ್ಷ ವೀರೇಶ್ ಸೊಬರದಮಠ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತ್ಯೇಕ ರಾಜ್ಯದ ಕೂಗಿಗೆ ಮಹದಾಯಿ ಹೋರಾಟವನ್ನು ಬಳಸುವುದು ಸೂಕ್ತವಲ್ಲ. ಮಹದಾಯಿ ಹೋರಾಟಕ್ಕೂ ಹಾಗೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಯಾಗಿಲ್ಲ ಎನ್ನುವ ಬಗ್ಗೆ ನಮಗೂ ನೋವಿದೆ. ಅಭಿವೃದ್ಧಿ ಕೂಗಿಗೆ ನಮ್ಮ ರೈತಸೇನಾ ಧ್ವನಿಗೂಡಿಸುತ್ತದೆ. ಆದರೆ ಮಹದಾಯಿ ಹೋರಾಟ ಅಖಂಡ ಕರ್ನಾಟಕದ ಹೋರಾಟ ಎಂದು ತಿಳಿಸಿದರು.

    ಮಹದಾಯಿ ಹೋರಾಟ ಉತ್ತರ ಕರ್ನಾಟಕ್ಕೆ ಸೀಮಿತವಾದ ಹೋರಾಟವಲ್ಲ. ದೇಶದಲ್ಲಿ ಪ್ರಚಲಿತವಿರುವ ಹೋರಾಟವಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕಾದರೆ ಜನಪ್ರತಿನಿಧಿಗಳ ಮನೆ ಮುಂದೆ ಪ್ರತಿಭಟಿಸಬೇಕು. ಜಾತಿ ಹೋಗಲಾಡಿಸಿ ನಾವೆಲ್ಲ ಒಗ್ಗಟ್ಟು ತೋರಿಸಿದರೆ ರಾಜಕಾರಣಿಗಳು ಅಭಿವೃದ್ಧಿಗೆ ಮುಂದಾಗುತ್ತಾರೆ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದ ಮಹದಾಯಿ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿ ಕಂಡಿಲ್ಲ ಎಂದು ಹೇಳಿದರು.

    ಉತ್ತರ ಕರ್ನಾಟಕ ಅಭಿವೃದ್ಧಿಗೆ ಎಲ್ಲ ಸಂಘ, ಸಂಟನೆಗಳು ಒಂದಾಗಬೇಕು. ಇದಕ್ಕೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಪೂರಕ ಬೆಂಬಲ ಸಿಕ್ಕಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

  • `ಬಾಂಗ್ಲಾ’ ಆಗಲಿದೆ `ಪಶ್ಚಿಮ ಬಂಗಾಳ’ – ಹೆಸರು ಬದಲಾವಣೆಗೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಶಿಫಾರಸ್ಸು

    `ಬಾಂಗ್ಲಾ’ ಆಗಲಿದೆ `ಪಶ್ಚಿಮ ಬಂಗಾಳ’ – ಹೆಸರು ಬದಲಾವಣೆಗೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಶಿಫಾರಸ್ಸು

    ಕೋಲ್ಕತ್ತಾ: ಪಶ್ಚಿಮ ಬಂಗಾಳ ಹೆಸರು ಬದಲಾವಣೆಗೆ ರಾಜ್ಯದ ವಿಧಾನಸಭೆಯಲ್ಲಿ ಇಂದು ಒಪ್ಪಿಗೆ ಸಿಕ್ಕಿದ್ದು, ಕೇಂದ್ರದ ಅಂತಿಮ ಸಮ್ಮತಿಗೆ ಶಿಫಾರಸ್ಸು ಮಾಡಲಾಗಿದೆ.

    ಪಶ್ಚಿಮ ಬಂಗಾಳ ಹೆಸರು ಎಲ್ಲಾ ಭಾಷೆಗಳಲ್ಲಿ ಬಾಂಗ್ಲಾ ಎಂದು ರೂಢಿಗೆ ಬರಲಿದೆ. ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ಹೆಸರು ಬದಲಿಸಲು ಮುಂದಾಗಿದ್ದು, ಈ ನಡೆಗೆ ಎಲ್ಲ ಪಕ್ಷಗಳು ಬೆಂಬಲ ನೀಡಿದೆ. 1999 ರಲ್ಲೇ ಹೆಸರು ಪಶ್ಚಿಮ ಬಂಗಾಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದನ್ನು ನೆನಪು ಮಾಡಬಹುದಾಗಿದೆ.

    ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಕಳೆದ 2 ವರ್ಷಗಳ ಹಿಂದೆ ರಾಜ್ಯದ ಹೆಸರು ಬದಲಿಸುವ ಪ್ರಸ್ತಾವನೆ ಸಲ್ಲಿಸಿತ್ತು. ಈ ವೇಳೆ ಪಶ್ಚಿಮ ಬಂಗಾಳ ಹೆಸರನ್ನು ಆಂಗ್ಲ ಭಾಷೆಯಲ್ಲಿ ಬೆಂಗಾಲ್, ಹಿಂದಿಯಲ್ಲಿ ಬಂಗಾಳ ಹಾಗೂ ಬಾಂಗ್ಲಾ ಭಾಷೆಯಲ್ಲಿ ಬೆಂಗಾಳ ಎಂದು ಬದಲಿಸಲು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿತ್ತು. ಈ ವೇಳೆ ಕೇಂದ್ರ ಸರ್ಕಾರ, ಎಲ್ಲಾ ಭಾಷೆಗಳಲ್ಲಿ ಒಂದು ಹೆಸರು ಮಾತ್ರ ಬರುವಂತೆ ಸೂಚಿಸಿ ಎಂದು ಸಲಹೆ ನೀಡಿತ್ತು.

    ರಾಜ್ಯದ ಹೆಸರು ಬದಲಾವಣೆಗೆ ಮಮತಾ ಬ್ಯಾನರ್ಜಿ ಸರ್ಕಾರ ನಿರಂತರವಾಗಿ ಪ್ರಯತ್ನ ನಡೆಸಿತ್ತು. ಆಂಗ್ಲ ಭಾಷೆಯಲ್ಲಿ ಎಲ್ಲ ರಾಜ್ಯಗಳ ಕ್ರಮಾಂಕ ಬಂದಾಗ ವೆಸ್ಟ್ ಬೆಂಗಾಲ್ ಹೆಸರು ಕೊನೆಯಲ್ಲಿ ಪ್ರಕಟಗೊಳ್ಳುತ್ತದೆ. ಈ ಕಾರಣಕ್ಕೆ ಹೆಸರು ಬದಲಾವಣೆ ಮಾಡಲು ಮುಂದಾಗಿತ್ತು.

    ಸ್ಥಳೀಯವಾಗಿ ಸಿಗುವ ಮದ್ಯಕ್ಕೆ ಪಶ್ಚಿಮ ಬಂಗಾಳದಲ್ಲಿ ‘ಬಾಂಗ್ಲಾ’ ಎಂದು ಕರೆಯಲಾಗುತ್ತದೆ. ಹೀಗಾಗಿ ಸರ್ಕಾರ ಸೂಚಿಸಿರುವ ಹೊಸ ಹೆಸರು ಸಹ ಬೆಂಗಾಲಿ ಭಾಷಿಕರಿಗೆ ಕಷ್ಟವಾಗಲಿದೆ ಎನ್ನಲಾಗಿದೆ.

  • ಕೇವಲ 1 ನಿಮಿಷದಲ್ಲಿ ದೇಶದ ಎಲ್ಲಾ ರಾಜ್ಯಗಳ ರಾಜಧಾನಿ ಹೆಸರು ಹೇಳ್ತಾಳೆ 2ರ ಕಂದಮ್ಮ!- ವಿಡಿಯೋ

    ಕೇವಲ 1 ನಿಮಿಷದಲ್ಲಿ ದೇಶದ ಎಲ್ಲಾ ರಾಜ್ಯಗಳ ರಾಜಧಾನಿ ಹೆಸರು ಹೇಳ್ತಾಳೆ 2ರ ಕಂದಮ್ಮ!- ವಿಡಿಯೋ

    ಚಂಡೀಗಢ: 2 ವರ್ಷದ ಪುಟ್ಟ ಬಾಲಕಿಯೊಬ್ಬಳು ಭಾರತದ ದೇಶದ ಎಲ್ಲಾ ರಾಜ್ಯದ ರಾಜಧಾನಿಗಳನ್ನು ಪಟಾ ಪಟಾಂತ ಹೇಳೋ ಮೂಲಕ ಸುದ್ದಿಯಾಗಿದ್ದಾಳೆ.

    ಹೌದು, ಹರ್ಯಾಣ ಪಂಚಕುಲಾದ ಅಮಾರ್ಯಾ ಗುಲಾಟಿ ಎಂಬ ಬಾಲಕಿ ಕೇವಲ 1 ನಿಮಿಷದಲ್ಲಿ ಎಲ್ಲಾ ರಾಜ್ಯದ ರಾಜಧಾನಿಗಳ ಹೆಸರನ್ನು ಹೇಳುವಲ್ಲಿ ಯಶಸ್ವಿಯಾಗುತ್ತಾಳೆ. ಸದ್ಯ ಈಕೆ ರಾಜಧಾನಿಗಳ ಹೆಸರನ್ನು ಹೇಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈಕೆಯ ತೊದಲು ಮಾತುಗಳಿಂದ ಎಲ್ಲರೂ ಪ್ರಭಾವಿತರಾಗಿದ್ದಾರೆ.

    ತೊದಲು ಮಾತಾಡುತ್ತಿರುವ ಈ ಪುಟ್ಟ ಬಾಲಕಿ ರಾಜ್ಯದ ರಾಜಧಾನಿಗಳ ಹೆಸರನ್ನು ಅಸ್ಪಷ್ಟವಾಗಿಯೇ ಹೇಳುತ್ತಾಳೆ. ಈಕೆಯ ಈ ಮಾತುಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರನ್ನು ಆಕರ್ಷಿಸಿದ್ದಾಳೆ. ಅಮಾರ್ಯಾ 7 ತಿಂಗಳ ಮಗುವಿದ್ದಾಗಲೇ ಆಕೆಯ ತಾಯಿ ರಾಜಧಾನಿಗಳು ಹಾಗೂ ಕೆಲವೊಂದು ಸ್ಥಳಗಳ ಹೆಸರನ್ನು ಹೇಳಿಕೊಡಲು ಆರಂಭಿಸಿದ್ದರು. ಹೀಗಾಗಿ ಈಕೆ ಇಂದು ಇಷ್ಟೊಂದು ಸುಲಲಿತವಾಗಿ ರಾಜಧಾನಿಗಳ ಹೆಸರನ್ನು ಹೇಳಬಲ್ಲವಳಾಗಿದ್ದಾಳೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಇಷ್ಟು ಮಾತ್ರವಲ್ಲದೇ ಈಕೆ ಈಗಾಗಲೇ ದೇಶದ ವಿವಿಧ ನಗರಗಳ ಹೆಸರನ್ನು ಹೇಳುವ ಸ್ಥರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾಳೆ. ಒಟ್ಟಿನಲ್ಲಿ ಸದ್ಯ ಅಮಾರ್ಯ ತನ್ನ ತೊದಲು ಮಾತುಗಳಿಂದ ಸಾಮಾಜಿಕ ಜಾಲತಾಣಿಗರ ಮನಸ್ಸನ್ನು ಗೆದ್ದಿದ್ದಾಳೆ.

  • ಬೆಂಗ್ಳೂರು ಸೇರಿ ರಾಜ್ಯದ ವಿವಿಧೆಡೆ ಮಳೆ – ಬಿರುಗಾಳಿಯಿಂದ ಹತ್ತಾರು ಮರಗಗಳು ಧರೆಗೆ

    ಬೆಂಗ್ಳೂರು ಸೇರಿ ರಾಜ್ಯದ ವಿವಿಧೆಡೆ ಮಳೆ – ಬಿರುಗಾಳಿಯಿಂದ ಹತ್ತಾರು ಮರಗಗಳು ಧರೆಗೆ

    ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ನಾನಾ ಕಡೆ ಬಿರುಗಾಳಿ ಸಹಿತ ಮಳೆ ಮುಂದುವರೆದಿದೆ.

    ಬೆಂಗಳೂರಿನಲ್ಲಿ ರಾತ್ರಿಯಿಡಿ ಬಿರುಗಾಳಿ, ಗುಡುಗು ಸಹಿತ ಮಳೆ ಆಗಿ, ಹಲವೆಡೆ ಮರಗಳು ಉರುಳಿದ್ದಿವೆ. ಶಿವಮೊಗ್ಗ, ಮಂಡ್ಯದಲ್ಲಿ ಧಾರಕಾರ ಮಳೆ ಆಗಿದೆ.

    ರಾಯಚೂರಿನಲ್ಲಿ ಬಿರುಗಾಳಿ ಬೀಸಿದ ರಭಸಕ್ಕೆ ಹಲವು ಮರಗಳು ಬಿದ್ದಿವೆ. ಜೊತೆಗೆ ಗಾಳಿಗೆ ಆಕಸ್ಮಿಕ ಬೆಂಕಿ ತಗುಲಿ 1 ಗುಡಿಸಲು, 4 ಹುಲ್ಲಿನ ಬಣವೆ ಸುಟ್ಟು ಭಸ್ಮವಾಗಿವೆ. ಹಲವು ಜಾನುವಾರು ಗಾಯಗೊಂಡಿವೆ. ತುಮಕೂರಿನ ಮಧುಗಿರಿ ಬಳಿ ಸಿಡಿಲು ಬಡಿದು 12 ಕುರಿ ಸಾವನ್ನಪ್ಪಿವೆ ಎಂಬುದಾಗಿ ತಿಳಿದುಬಂದಿದೆ.

  • ರಾಜ್ಯಾದ್ಯಂತ ನಾಳೆ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ!

    ರಾಜ್ಯಾದ್ಯಂತ ನಾಳೆ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ!

    ಬೆಂಗಳೂರು: ತೆಲಂಗಾಣದಿಂದ ತಮಿಳುನಾಡಿನವರೆಗೂ ಮೋಡಗಳ ಸಾಲು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದ್ದಾರೆ.

    ಮಳೆಯ ಜೊತೆ ಗುಡುಗು, ಮಿಂಚು, ಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕೂಡ ಮೋಡ ಕವಿದ ವಾತಾವರಣವಿರಲಿದ್ದು. ಅಲ್ಲಲ್ಲಿ ಚುದುರಿದ ಮಳೆಯಾಗಲಿದೆ ಎಂದು ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.