Tag: statement

  • ಹಿಂದೂಗಳ ಕಡೆಗಣನೆಯೇ ಕಾಂಗ್ರೆಸ್ ಸೋಲಿಗೆ ಕಾರಣವೆಂದ ಜೆಡಿಎಸ್- ಸಚಿವ ಖಾದರ್ ತಿರುಗೇಟು

    ಹಿಂದೂಗಳ ಕಡೆಗಣನೆಯೇ ಕಾಂಗ್ರೆಸ್ ಸೋಲಿಗೆ ಕಾರಣವೆಂದ ಜೆಡಿಎಸ್- ಸಚಿವ ಖಾದರ್ ತಿರುಗೇಟು

    ಮಂಗಳೂರು: ಹಿಂದೂಗಳನ್ನು ಕಡೆಗಣಿಸಿದ್ದಕ್ಕೆ ಕಾಂಗ್ರೆಸ್ ಗೆ ಸೋಲುಂಟಾಗಿದೆ ಎನ್ನುವ ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಭೋಜೇಗೌಡರ ಹೇಳಿಕೆ ಆಶ್ಚರ್ಯ ತಂದಿದೆ ಎಂದು ವಸತಿ ಹಾಗೂ ನಗರ ಪಾಲಿಕೆಗಳ ಸಚಿವರಾದ ಯು.ಟಿ. ಖಾದರ್ ಹೇಳಿದ್ದಾರೆ.

    ನಗರದಲ್ಲಿ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಭೋಜೇಗೌಡರ ಹೇಳಿಕೆ ಅಚ್ಚರಿ ತಂದಿದೆ. ಭೋಜೇಗೌಡರು ಮೂಲತಃ ನಮ್ಮ ಜಿಲ್ಲೆಯವರಲ್ಲ. ಹೀಗಾಗಿ ನಮ್ಮ ಜಿಲ್ಲೆಯ ಬಗ್ಗೆ ಅವರಿಗೆ ಗೊತ್ತಿಲ್ಲ. ಕಾಂಗ್ರೆಸ್ ನಲ್ಲಿ ಹಿಂದೂಗಳನ್ನು ಕಡೆಗಣಿಸಿಲ್ಲ. ಒಬ್ಬ ಜನಪ್ರತಿನಿಧಿಯಾಗಿ ಅವರು ಈ ಹೇಳಿಕೆ ನೀಡಬಾರದು ಎಂದು ಗರಂ ಆದ್ರು.

    ಕಾಂಗ್ರೆಸ್ ಧರ್ಮದ ಆಧಾರದಲ್ಲಿ ಅಭಿವೃದ್ಧಿಯನ್ನು ಮಾಡಿಲ್ಲ. ಇಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ. ಈ ಹೇಳಿಕೆ ಅವರಿಗೆ ಕಪ್ಪು ಚುಕ್ಕೆ ತಂದಿದೆ. ಜನರ ಪರ ಕೆಲಸ ಮಾಡಿದರೆ ಮಾತ್ರ ಪಕ್ಷ ಸಂಘಟನೆಯಾಗುತ್ತದೆ ಎಂದು ಅವರು ಹೇಳಿದ್ರು.

    ಭೋಜೇಗೌಡರು ಹೇಳಿದ್ದೇನು?
    ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನನಾಡಿದ ಭೋಜೇಗೌಡ, ಕರಾವಳಿಯಲ್ಲಿ ಹಿಂದೂಗಳನ್ನು ಕಡೆಗಣಿಸಿದ್ದಕ್ಕೆ, ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ ಹೀನಾಯ ಸೋಲುಂಡಿದ್ದಕ್ಕೆ ಕಾರಣ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳನ್ನು ಕಡೆಗಣಿಸಲಾಗಿದೆ. ಹಾಗಾಗಿ ಕಾಂಗ್ರೆಸ್ ಈ ಭಾಗದಲ್ಲಿ ಸೋತಿದೆ. ಆದರೆ, ಬಹುಸಂಖ್ಯಾತ ಹಿಂದೂಗಳನ್ನು ಕಡೆಗಣಿಸದಂತೆ ಜೆಡಿಎಸ್ ಮುಖಂಡರಿಗೆ ಹೇಳಿದ್ದೇನೆ. ಹಿಂದೂಗಳನ್ನು ಕಡೆಗಣಿಸಿದ್ರೆ ಸರ್ಕಾರ ಉಳಿಯಲ್ಲ. ಅಲ್ಪಸಂಖ್ಯಾತರ ವಿಶ್ವಾಸ ಗಳಿಸಿ ಹಿಂದೂಗಳನ್ನು ಕಡೆಗಣಿಸದೆ ಪಕ್ಷ ಸಂಘಟನೆ ಮಾಡುತ್ತೇವೆ ಅಂತ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ರಾಜಕೀಯ ಲಾಭಕ್ಕಾಗಿ ಏಕೀಕೃತ ಕರ್ನಾಟಕ ಒಡೆಯಲು ಜೆಡಿಎಸ್ ಷಡ್ಯಂತ್ರ: ಬಿಎಸ್‍ವೈ

    ರಾಜಕೀಯ ಲಾಭಕ್ಕಾಗಿ ಏಕೀಕೃತ ಕರ್ನಾಟಕ ಒಡೆಯಲು ಜೆಡಿಎಸ್ ಷಡ್ಯಂತ್ರ: ಬಿಎಸ್‍ವೈ

    ಬೆಂಗಳೂರು: ಸಿಎಂ ಕುಮಾರಸ್ವಾಮಿಯವರ ಹೇಳಿಕೆಗಳನ್ನು ಗಮನಿಸಿದರೆ ತಮ್ಮ ರಾಜಕೀಯ ಲಾಭಕ್ಕಾಗಿ ಏಕೀಕೃತ ಕರ್ನಾಟಕ ಒಡೆಯಲು ಷಡ್ಯಂತ್ರ ರೂಪಿಸಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಆರೋಪಿಸಿದ್ದಾರೆ.

    ಸಿಎಂ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಖಂಡ ಕರ್ನಾಟಕಕ್ಕೆ ಹಿರಿಯರು ರಕ್ತ ಹರಿಸಿದ್ದಾರೆ. ಉತ್ತರ ಕರ್ನಾಟಕದ ಜನತೆಯನ್ನ ಸವತಿ ಮಕ್ಕಳಂತೆ ಸಿಎಂ ಕಾಣುತ್ತಿದ್ದಾರೆ. ನಿಮ್ಮ ಸಾಲಮನ್ನಾ ಮಾಡಲು ನೀವೇನು ನಮಗೆ ವೋಟ್ ಹಾಕಿದ್ದೀರಾ ಅಂತಾ ಪ್ರಶ್ನೆ ಮಾಡಿದ್ದು, ಸಿಎಂ ಅವರ ದುರಂಹಕಾರದ ಮಾತಾಗಿದೆ. ಸಿಎಂರವರ ಹೇಳಿಕೆಗಳನ್ನು ಗಮನಿಸಿದರೆ, ಏಕೀಕೃತ ಕರ್ನಾಟಕ ಒಡೆಯಲು ಷಡ್ಯಂತ್ರ ರೂಪಿಸಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ದೂರಿದರು. ಇದನ್ನೂ ಓದಿ: ಮತ್ತೆ ಮಾಧ್ಯಮಗಳ ಮೇಲೆ ಸಿಎಂ ಎಚ್‍ಡಿಕೆ ಉಗ್ರ ಪ್ರತಾಪ

    ಮಾಜಿ ಪ್ರಧಾನಿ ದೇವೆಗೌಡರ ವಿರುದ್ಧ ಹರಿಹಾಯ್ದ ಅವರು, ಈ ಹಿಂದೆ ವೀರಶೈವ – ಲಿಂಗಾಯತ ಪ್ರತ್ಯೇಕತೆ ಮಾಡಲು ಕಾಂಗ್ರೆಸ್ ಕೈ ಹಾಕಿತ್ತು. ಈಗ ಜೆಡಿಎಸ್ ರಾಜ್ಯ ಪ್ರತ್ಯೇಕ ಮಾಡುವ ಹುನ್ನಾರ ಮಾಡ್ತಿದೆ. ದೇವೇಗೌಡರ ಈ ತಂತ್ರವನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಪ್ರತ್ಯೇಕ ರಾಜ್ಯ ಹೋರಾಟ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಮೌನವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ ಎಂದು ತಿಳಿಸಿದರು.

    ಮಂಗಳವಾರ ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸಲು ಹೋರಾಟಗಾರರು ಮುಂದಾಗಿದ್ದಾರೆ. ಹೀಗಾಗಿ ಹೋರಾಟಗಾರರ ಮನವೊಲಿಸಲು ನಾನು ಬೆಳಗಾವಿಗೆ ತೆರಳುತ್ತೇನೆ. ರಾಜ್ಯವನ್ನು ವಿಭಜಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

  • ಸರ್ಕಾರ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಲೇ ಇರು ಎಂದು ಪತ್ನಿಗೆ ಹೇಳಿದ್ದೀನಿ: ಬಿಜೆಪಿ ಶಾಸಕ

    ಸರ್ಕಾರ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಲೇ ಇರು ಎಂದು ಪತ್ನಿಗೆ ಹೇಳಿದ್ದೀನಿ: ಬಿಜೆಪಿ ಶಾಸಕ

    ಮುಜಾಫರ್ ನಗರ್ : ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರ ನಿರ್ದಿಷ್ಟ ಕಾನೂನು ರೂಪಿಸುವವರೆಗೂ ನೀನು ಮಕ್ಕಳನ್ನು ಹಡೆಯುವುದನ್ನು ನಿಲ್ಲಿಸಬೇಡ ಎಂದು ಪತ್ನಿಗೆ ಹೇಳಿದ್ದೇನೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಬಿಜೆಪಿ ಶಾಸಕರೊಬ್ಬರು ವಿವಾದಕ್ಕೆ ಕಾರಣರಾಗಿದ್ದಾರೆ.

    ಖತೌಲಿ ಕ್ಷೇತ್ರದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಶುಕ್ರವಾರ ಈ ಹೇಳಿಕೆಯನ್ನು ನೀಡಿದ್ದಾರೆ. ಮುಜಾಫರ್ ನಗರದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮಗೆ ಇಬ್ಬರು ಮಕ್ಕಳು ಸಾಕು ಎಂದು ನನ್ನ ಪತ್ನಿ ಹೇಳಿದ್ದಾಳೆ. ಆದರೆ ಸರ್ಕಾರ ಜನಸಂಖ್ಯಾ ನಿಯಂತ್ರಣ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಾ ಇರಲು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

    ನಾವು ಇಬ್ಬರು ಮಕ್ಕಳು ಸಾಕು ಎಂಬ ನಿಯಮವನ್ನು ಒಪ್ಪಿಕೊಂಡಿದ್ದೇವೆ. ಆದರೆ ಇತರರು ಅದನ್ನು ಒಪ್ಪಿಕೊಂಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಹಿಂದೂಗಳು ಮಕ್ಕಳಿಗೆ ಜನ್ಮ ನೀಡುವುದನ್ನು ನಿಲ್ಲಿಸಬಾರದು. ನನ್ನ ಪತ್ನಿ ನಮಗೆ ಮೂರನೇ ಮಗು ಬೇಡವೆಂದು ಹೇಳಿದ್ದಳು. ಆದರೆ ನಾನು 4 ರಿಂದ 5 ಮಕ್ಕಳನ್ನು ಪಡೆಯೋಣವೆಂದು ಹೇಳಿದ್ದೇನೆ ಎಂದು ಜನಸಂಖ್ಯಾ ನಿಯಂತ್ರಣ ವಿಷಯದ ಕುರಿತು ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

    ಶಾಸಕರು ವಿವಾದತ್ಮಾಕ ಹೇಳಿಕೆ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದು, ಕಳೆದ ವರ್ಷ ಜನವರಿಯಲ್ಲಿ ಹಿಂದೂಸ್ತಾನ ಹಿಂದೂಗಳದ್ದು ಮಾತ್ರ, ಇತರರು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿದ್ದರು. ಅಲ್ಲದೇ ಹೊಸ ವರ್ಷದ ಆಚರಣೆ ಕ್ರೈಸ್ತ ಸಮುದಾಯದ ಹಬ್ಬ. ಇದರಿಂದ ಹಿಂದೂಗಳು ದೂರವಿರಿ ಎಂದು ಹೇಳಿದ್ದರು. ಫೆಬ್ರವರಿ 14ರ ಪ್ರೇಮಿಗಳ ದಿನವನ್ನು ಆಚರಿಸಬೇಡಿ ಎಂದು ಯುವಕರಿಗೆ ಕರೆ ನೀಡಿದ್ದರು.

     

  • ನಾನು ಅಂಬೇಡ್ಕರ್ ಗೆ ಅವಮಾನ ಮಾಡಿಲ್ಲ: ಪೇಜಾವರಶ್ರೀ

    ನಾನು ಅಂಬೇಡ್ಕರ್ ಗೆ ಅವಮಾನ ಮಾಡಿಲ್ಲ: ಪೇಜಾವರಶ್ರೀ

    ಉಡುಪಿ: ನಾನು ಸಂವಿಧಾನ ಬದಲಿಸಿ ಎಂದು ಧರ್ಮ ಸಂಸದ್ ನಲ್ಲಿ ಹೇಳಿಲ್ಲ. ಅಂಬೇಡ್ಕರ್ ಗೆ ಅಪಮಾನ ಮಾಡಿಲ್ಲ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ಸಂವಿಧಾನದಲ್ಲಿ ತಿದ್ದುಪಡಿ ಆಗಬೇಕೆಂದು ನಾನು ಹೇಳಿದೆ. ಆದರೆ ದಲಿತರ ಮೀಸಲಾತಿ ವಿಚಾರ ನಾನು ಮಾತನಾಡಲೇ ಇಲ್ಲ. ದಲಿತರಿಗೆ ಮೀಸಲಾತಿ ವಿಸ್ತರಿಸಬೇಕು ಎಂದು ಹೇಳುವವರಲ್ಲಿ ನಾನು ಒಬ್ಬ. ಸಂವಿಧಾನಕ್ಕೆ ಅಪಮಾನ ಮಾಡಿದರೆ ದೇಶಕ್ಕೆ ಅಪಮಾನ ಮಾಡಿದಂತೆ ಎಂದರು.

    ವೇದಿಕೆಯಲ್ಲಿದ್ದ ಸಾಹಿತಿಗಳಿಗೂ ಇದು ಅರ್ಥವಾಗಲಿಲ್ಲವಲ್ಲ ಅನ್ನುವುದೇ ವಿಪರ್ಯಾಸ. ಸಂವಿಧಾನ ಅಂಬೇಡ್ಕರ್ ಒಬ್ಬರೇ ರಚನೆ ಮಾಡಿದ್ದಲ್ಲ. ಸಂವಿಧಾನ ರಚನಾ ಸಮಿತಿಯಲ್ಲಿ ದೇಶದ ಎಲ್ಲಾ ಪ್ರತಿನಿಧಿಗಳು ಇದ್ದರು. ಸಂವಿಧಾನ ರಚನಾ ಸಮಿತಿಯಲ್ಲಿ ಅಲ್ಲಾಡಿ ಕೃಷ್ಣಸ್ವಾಮಿ, ಅಯ್ಯರ್, ಕೆ.ಎಂ ಮುನ್ಶಿ, ಬೆನಗಲ್, ಅಂಬೇಡ್ಕರ್ ಕೆಲಸಕ್ಕೆ ಕೈಜೋಡಿಸಿದ್ದ ಪ್ರಮುಖರು. ತಮ್ಮ ಹೇಳಿಕೆ ಹೋರಾಟಗಾರ ದ್ವಾರಕನಾಥ್ ರಂತ ದೊಡ್ಡ ವಕೀಲರಿಗೂ ಅರ್ಥವಾಗಲಿಲ್ಲ ಎಂಬುವುದೇ ವಿಪರ್ಯಾಸ ಎಂದು ಹೇಳಿದರು.

    ಧರ್ಮದ ಹೆಸರಲ್ಲಿ ವಿಭಜನೆ ಬೇಡ. ಚರ್ಚ್-ಮಸೀದಿಗಿರುವ ಸ್ವಾಯತ್ತತೆ ಎಲ್ಲರಿಗೂ ಬರಲಿ. ಶಾದಿಭಾಗ್ಯ ದಲಿತರಿಗೆ ಯಾಕಿಲ್ಲ, ದಲಿತರಲ್ಲಿ ಬಡವರು ಇಲ್ವಾ ಎಂದು ಇದೇ ವೇಳೆ ಪ್ರಶ್ನಿಸಿದರು.

    ಉಡುಪಿ ಧರ್ಮ ಸಂಸದ್ ಯಶಸ್ವಿಯಾಗಿದೆ. ಧರ್ಮ ಸಂಸದ್ ಯಶಸ್ವಿಯಾದದ್ದನ್ನು ಬುದ್ಧಿ ಜೀವಿಗಳಿಗೆ, ಸಾಹಿತಿಗಳಿಗೆ ಸಹಿಸಲಾಗುತ್ತಿಲ್ಲ. ಸಾಹಿತಿಗಳಿಂದ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವಾಗುತ್ತಿದೆ. ಪಾಪದ ದಲಿತರನ್ನು ಇವರು ವಿವಾದವೆಂದು ಹೇಳಿ ಎಳೆದು ತರುತ್ತಿದ್ದಾರೆ ಎಂದು ಆರೋಪಿಸಿದರು.

    ಪೇಜಾವರ ಶ್ರೀ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಾದ್ಯಂತ ಹಲವು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.