Tag: statue of unity

  • ಗುಜರಾತ್‍ನ ಏಕತಾ ಪ್ರತಿಮೆ ಬಳಿ ಭೂಕಂಪನ

    ಗುಜರಾತ್‍ನ ಏಕತಾ ಪ್ರತಿಮೆ ಬಳಿ ಭೂಕಂಪನ

    ಗಾಂಧಿನಗರ: ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆದಿರುವ ಗುಜರಾತ್‍ನ ಸರ್ದಾರ್ ವಲ್ಲಬಾಯಿ ಪಟೇಲ್‍ರ ಏಕತಾ ಮೂರ್ತಿಯ ಬಳಿ ಭೂಕಂಪನ ಉಂಟಾದ ಘಟನೆ ನಡೆದಿದೆ.

    ಗುಜರಾತ್‍ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರತೆಯ ಕಂಪನ ದಾಖಲಾಗಿದೆ. ಆದರೆ ಯಾವುದೇ ಸಾವು ನೋವು ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ. 182 ಮೀ. ಎತ್ತರದ ಪ್ರತಿಮೆಯು ಈ ಕೆವಾಡಿಯಾ ಗ್ರಾಮದ ಬಳಿ ಇದೆ.

    ಈ ಏಕಾತಾ ಮೂರ್ತಿಯು ಕೆವಾಡಿಯಾದಿಂದ ಪೂರ್ವ-ಆಗ್ನೇಯಕ್ಕೆ 12 ಕಿ.ಮೀ ದೂರದಲ್ಲಿದೆ. ಆದರೆ ಪ್ರಬಲ ಭೂಕಂಪಗಳು ಮತ್ತು ಚಂಡಮಾರುತಗಳನ್ನು ತಡೆದುಕೊಳ್ಳುವ ರೀತಿಯಲ್ಲಿ ನಿರ್ಮಿಸಲಾದ ಏಕತೆಯ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಮಾರಕದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಹುಲ್ ಪಟೇಲ್ ಹೇಳಿದರು. ಇದನ್ನೂ ಓದಿ: ರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಪ್ರಸ್ತಾಪ

    ಸೋಮವಾರ ರಾತ್ರಿ 3.1 ತೀವ್ರತೆಯ ಕಂಪನವು ದಾಖಲಾಗಿದ್ದು, ದಕ್ಷಿಣ ಗುಜರಾತ್‍ನ ಕೆವಾಡಿಯಾದ 12 ಕಿ.ಮೀ ಪೂರ್ವ-ಆಗ್ನೇಯ (ಇಎಸ್‍ಇ) ಕೇಂದ್ರಬಿಂದುವಾಗಿದೆ. ಇದು 12.7 ಕಿ.ಮೀ ಆಳದಲ್ಲಿ ದಾಖಲಾಗಿದೆ ಎಂದು ಐಎಸ್‍ಆರ್ ತಿಳಿಸಿದೆ. ಇದನ್ನೂ ಓದಿ: ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರದಲ್ಲಿದ್ದಾರೆ: ಶ್ರೀರಾಮುಲು

    Live Tv

  • ಒಎಲ್‌ಎಕ್ಸ್‌ನಲ್ಲಿ 30 ಸಾವಿರ ಕೋಟಿಗೆ ಏಕತಾ ಪ್ರತಿಮೆ ಮಾರಾಟಕ್ಕೆ

    ಒಎಲ್‌ಎಕ್ಸ್‌ನಲ್ಲಿ 30 ಸಾವಿರ ಕೋಟಿಗೆ ಏಕತಾ ಪ್ರತಿಮೆ ಮಾರಾಟಕ್ಕೆ

    ಅಹಮದಾಬಾದ್: ವಿಶ್ವದ ಅತೀ ದೊಡ್ಡ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆದಿರುವ ಏಕತಾ ಪ್ರತಿಮೆಯನ್ನು ಕಿಡಿಗೇಡಿಗಳು ಒಎಲ್‌ಎಕ್ಸ್‌ನಲ್ಲಿ ಮಾರಾಟಕ್ಕಿಟ್ಟ ಪ್ರಕರಣ ಬೆಳಕಿಗೆ ಬಂದಿದೆ.

    ಅನಾಮಧೇಯ ವ್ಯಕ್ತಿಯೊಬ್ಬ ಏಕತಾ ಪ್ರತಿಮೆಯ ಫೋಟೋವನ್ನು ಒಎಲ್‌ಎಕ್ಸ್‌ನಲ್ಲಿ ಅಪ್ಲೋಡ್ ಮಾಡಿ ಪ್ರತಿಮೆ 30 ಸಾವಿರ ಕೋಟಿ ರೂಪಾಯಿಗೆ ಮಾರಾಟಕ್ಕಿದೆ ಎಂದು ಹಾಕಿದ್ದನು. ಈ ಜಾಹಿರಾತನ್ನು ಯಾವುದೇ ರೀತಿಯ ಪೂರ್ವಾಪರ ವಿಚಾರಸಿದೆ ಸಾರ್ವಜನಿಕವಾಗಿ ಜಾಹಿರಾತು ಪ್ರಸಾರ ಮಾಡಿದ್ದಾಕ್ಕಾಗಿ ಕೆವಾಡಿಯಾ ಸ್ಥಳೀಯ ಆಡಳಿತ ಒಎಲ್‍ಎಕ್ಸ್ ವಿರುದ್ಧ ಪೊಲೀಸರಿಗೆ ದೂರು ನೀಡಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಕೆವಾಡಿಯಾದ ಉಪ ಆಯುಕ್ತ ನಿಲೇಶ್ ದುಬೆ ಅವರು, ಏಕತಾ ಪ್ರತಿಮೆ ದೇಶದ ಆಸ್ತಿ. ಇದನ್ನು ಯಾರೋ ಒಬ್ಬ ಕಿಡಿಗೇಡಿ ಮಾರಾಟಕ್ಕಿದೆ ಎಂದು ಒಎಲ್‌ಎಕ್ಸ್‌ನಲ್ಲಿ ಜಾಹಿರಾತು ನೀಡಿದ್ದಾನೆ. ಈ ಬಗ್ಗೆ ಪೂರ್ವಾಪರ ವಿಚಾರಿಸದೇ ಒಎಲ್‍ಎಕ್ಸ್ ಕೂಡ ಜಾಹಿರಾತು ಪ್ರಸಾರ ಮಾಡಿದೆ. ಆದ್ದರಿಂದ ಸಂಸ್ಥೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಕಿಡಿಕಾರಿದ್ದಾರೆ.

    ಏಕತಾ ಪ್ರತಿಮೆಯು ಭಾರತದ ಮೊದಲ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸ್ಮರಣಾರ್ಥವಾಗಿ ನಿರ್ಮಿಸಲಾಗಿದೆ. 2018ರ ಅಕ್ಟೋಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆ ಅನಾವರಣ ಮಾಡಿದಾಗಿನಿಂದಲೂ ಲಕ್ಷಾಂತರ ಮಂದಿ ಪ್ರವಾಸಿಗರು ಪ್ರತಿಮೆ ಇರುವ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಇದು ವಿಶ್ವದ ಅತೀ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಕೂಡ ಪಡೆದಿದೆ.

  • ಅಮೆರಿಕದ ಲಿಬರ್ಟಿ ಪ್ರತಿಮೆಯನ್ನು ಹಿಂದಿಕ್ಕಿದ ಏಕತಾ ಪ್ರತಿಮೆ

    ಅಮೆರಿಕದ ಲಿಬರ್ಟಿ ಪ್ರತಿಮೆಯನ್ನು ಹಿಂದಿಕ್ಕಿದ ಏಕತಾ ಪ್ರತಿಮೆ

    ಅಹ್ಮದಾಬಾದ್: ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಏಕತಾ ಪ್ರತಿಮೆ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಮೂಲಕ ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿಯನ್ನು ಹಿಂದಿಕ್ಕಿದೆ.

    ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ವಿಶ್ವಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಸುಮಾರು 133 ವರ್ಷ ಹಳೆಯದಾದ ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿಯನ್ನು ಹಿಂದಿಕ್ಕಿದೆ. ಏಕತಾ ಪ್ರತಿಮೆಯನ್ನು ಕಣ್ತುಂಬಿಕೊಳ್ಳಲು ಪ್ರತಿನಿತ್ಯ ಸರಾಸರಿ 15 ಸಾವಿರ ಜನ ಭೇಟಿ ನೀಡುತ್ತಿದ್ದಾರೆ. ಈ ಮೂಲಕ ಸ್ಥಾಪನೆಯಾದ ಪ್ರಥಮ ವರ್ಷದಲ್ಲೇ ಏಕತಾ ಪ್ರತಿಮೆ ಅತಿ ಹೆಚ್ಚು ಜನರನ್ನು ಆಕರ್ಷಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಪ್ರತಿನಿತ್ಯ ಭೇಟಿ ನೀಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನವೆಂಬರ್ 1, 2018ರಿಂದ ಅಕ್ಟೋಬರ್ 31, 2019ರ ವರೆಗೆ ಪ್ರವಾಸಿಗರ ಭೇಟಿಯಲ್ಲಿ ಸರಾಸರಿ ಶೇ.74 ರಷ್ಟು ಹೆಚ್ಚಿದೆ. ಇದೀಗ ಎರಡನೇ ವರ್ಷದ ಮೊದಲ ತಿಂಗಳಲ್ಲಿ ಪ್ರತಿದಿನ ಸರಾಸರಿ 15,036 ಜನ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

    ಅಲ್ಲದೆ ವಾರಾಂತ್ಯದ ದಿನಗಳಲ್ಲಿ ಇದು ಸುಮಾರು 22,430ಕ್ಕೆ ಏರುತ್ತದೆ. ಅಮೆರಿಕದ ನ್ಯೂಯಾರ್ಕ್‍ನ ಸ್ಟ್ಯಾಚು ಆಫ್ ಲಿಬರ್ಟಿ ಪ್ರತಿಮೆಯು ನಿತ್ಯ 10 ಸಾವಿರ ಪ್ರವಾಸಿಗರನ್ನು ಮಾತ್ರ ಆಕರ್ಷಿಸುತ್ತಿದೆ ಎಂದು ಸರ್ದಾರ್ ಸರೋವರ ನಿಗಮ ಲಿ. ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಏಕತೆಯ ಪ್ರತೀಕವಾಗಿ ಭಾರತದ ಮೊದಲ ಗೃಹ ಸಚಿವರಾಗಿದ್ದ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಪುತ್ಥಳಿಯನ್ನು ನರ್ಮದಾ ನದಿಯ ತಟದಲ್ಲಿ ಸ್ಥಾಪಿಸಲಾಗಿದೆ. ಇದು 182 ಮೀಟರ್ ಎತ್ತರವಿದ್ದು, ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ನರ್ಮದಾ ನದಿಯ ತಟದ ಸರ್ದಾರ್ ಸರೋವರ ಡ್ಯಾಂ ಬಳಿ ಇದ್ದು, ಗುಜರಾತ್‍ನ ಕೇವಾಡಿಯಾ ಕಾಲೋನಿ ಬಳಿ ಸ್ಥಾಪಿತವಾಗಿದೆ.

    ಪ್ರವಾಸಿಗರ ಭೇಟಿಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಅದರಲ್ಲೂ ನವೆಂಬರ್ 2019ರಲ್ಲಿ ಹೆಚ್ಚು ಜನ ಭೇಟಿ ನೀಡಿದ್ದಾರೆ. ಈ ವರ್ಷ ನವೆಂಬರ್ 30ರ ವರೆಗೆ ಒಟ್ಟು 30.91 ಲಕ್ಷ ಪ್ರವಾಸಿಗರು ಕೆವಾಡಿಯಾಗೆ ಭೇಟಿ ನೀಡಿದ್ದಾರೆ. ಒಟ್ಟು 85.57 ಕೋಟಿ ರೂ.ಗಳ ಆದಾಯ ದಾಖಲಾಗಿದೆ ಎಂದು ಸರ್ದಾರ್ ಸರೋವರ ನಿಗಮ ಲಿ. ತಿಳಿಸಿದೆ.

    ಅಲ್ಲದೆ ಪ್ರವಾಸಿಗರನ್ನು ಆಕರ್ಷಿಸಲು ಜಂಗಲ್ ಸಫಾರಿ, ಮಕ್ಕಳ ನ್ಯೂಟ್ರಿಷನ್ ಪಾರ್ಕ್, ಕ್ಯಾಕ್ಟಸ್ ಗಾರ್ಡನ್, ಚಿಟ್ಟೆಗಳ ಗಾರ್ಡನ್, ಎಕತಾ ನರ್ಸರಿ, ದಿನೋ ಟ್ರೈಯಲ್, ರಿವರ್ ರ್ಯಾಫ್ಟಿಂಗ್, ಬೋಟಿಂಗ್ ಅಲ್ಲದೆ ವಿವಿಧ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ.

    ಏಕತಾ ಪ್ರತಿಮೆ ಅಹಮದಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟಿನ ಬಳಿ ನಿರ್ಮಾಣವಾಗಿದೆ. ನರ್ಮದಾ ಜಿಲ್ಲೆಯ ನರ್ಮದಾ ಡ್ಯಾಮ್‍ನಿಂದ 3.2 ಕಿ.ಮೀ ದೂರದಲ್ಲಿರುವ `ಸಾಧು ಬೆಟ್’ ದ್ವೀಪದಲ್ಲಿ ಯೋಜನಾ ಸ್ಥಳವಿದೆ. ಅಕ್ಟೋಬರ್ 31ರಂದು ಸರ್ದಾರ್ ವಲ್ಲಭ್‍ಭಾಯಿ ಪಟೇಲ್ ಅವರ ಜನ್ಮದಿನ. ಹೀಗಾಗಿ ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆಯನ್ನು ಅನಾವರಣ ಮಾಡಿದ್ದರು.

    ಈ ಏಕತಾ ಪ್ರತಿಮೆ 182 ಮೀಟರ್ ಎತ್ತರವಿದ್ದು, ನಿರ್ಮಾಣಕ್ಕೆ 2 ಸಾವಿರದ 300 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. 25 ಸಾವಿರ ಟನ್ ಕಬ್ಬಿಣ ಬಳಕೆ ಮಾಡಲಾಗಿದ್ದು, 90 ಸಾವಿರ ಟನ್ ಸಿಮೆಂಟ್ ಬಳಕೆ ಮಾಡಲಾಗಿದೆ. ಇದಕ್ಕಾಗಿ 250 ಎಂಜಿನಿಯರ್ಸ್, 3,400 ಕಾರ್ಮಿಕರು ಬರೋಬ್ಬರಿ 33 ತಿಂಗಳ ಕಾಲ ಶ್ರಮವಹಿಸಿದ್ದಾರೆ. ಲೋಹ ಅಭಿಯಾನದ ಮೂಲಕ 1.69 ಲಕ್ಷ ಲೋಹದ ತುಣುಕುಗಳನ್ನು ದೇಶದೆಲ್ಲೆಡೆಯಿಂದ ಸಂಗ್ರಹಿಸಲಾಗಿತ್ತು. ಏಕತಾ ಪ್ರತಿಮೆ ಭಾರತದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ತನ್ನ ವಿಶೇಷತೆಯಿಂದ ಇಂದು ಬ್ರಿಟನ್‍ನ ಪ್ರತಿಷ್ಠ ಪ್ರಶಸ್ತಿಯ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

  • ಗುಜರಾತ್ ಪ್ರವಾಸದಲ್ಲಿ ಎಚ್‍ಡಿಡಿ – ಏಕತಾ ಪ್ರತಿಮೆಗೆ ಭೇಟಿ

    ಗುಜರಾತ್ ಪ್ರವಾಸದಲ್ಲಿ ಎಚ್‍ಡಿಡಿ – ಏಕತಾ ಪ್ರತಿಮೆಗೆ ಭೇಟಿ

    ಗಾಂಧಿನಗರ: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಉಕ್ಕಿನ ಪ್ರತಿಮೆ ಇರುವ ಸ್ಥಳಕ್ಕೆ ಭಾರತದ ಮಾಜಿ ಪ್ರಧಾನಿ ದೇವೇಗೌಡ ಅವರು ಭೇಟಿ ನೀಡಿದ್ದಾರೆ.

    ಗುಜರಾತ್‍ನ ಅಹಮದಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಸರ್ದಾರ್ ಸರೋವರದ ಅಣೆಕಟ್ಟಿನ ಬಳಿ ಇರುವ ಸರ್ದಾರ್ ವಲ್ಲಭಬಾಯಿ ಅವರ 182 ಮೀಟರ್ ಉದ್ದದ ಏಕತಾ ಪ್ರತಿಮೆಯನ್ನು ದೇವೇಗೌಡರು ವೀಕ್ಷಿಸಿದ್ದಾರೆ.

    ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಗುಜರಾತ್‍ಗೆ ವಿಮಾನ ಮೂಲಕ ಪ್ರಯಾಣ ಬೆಳೆಸಿರುವ ಗೌಡರು, ಏಕತಾ ಪ್ರತಿಮೆಯ ಜೊತೆಗೆ ಗುಜರಾತ್ ನಲ್ಲಿರುವ ಇತರ ಪ್ರದೇಶಗಳಿಗೂ ಭೇಟಿ ನೀಡಲಿದ್ದಾರೆ. ಇದರ ಜೊತೆಗೆ ಗರುಡೇಶ್ವರ ದೇವಸ್ಥಾನ, ರಂಗ್ ಅವದೂತ್ ಮಹಾರಾಜ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.

    ದೇಶದ ಏಕತೆಗೆ ಶ್ರಮಿಸಿದ, ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಉದ್ದದ ಉಕ್ಕಿನ ಪ್ರತಿಮೆ 2018 ಅಕ್ಟೋಬರ್ 31 ಅನಾವರಣ ಮಾಡಲಾಯಿತು. ಈ ಮೂಲಕ ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಟೇಲರ `ಏಕತಾ ಪ್ರತಿಮೆ’ ಪಾತ್ರವಾಗಿದೆ. ವಲ್ಲಭಭಾಯ್ ಅವರ ಪೂರ್ಣ ಪ್ರತಿಮೆ ಇದಾಗಿದ್ದು ಧೋತಿ ಮತ್ತು ಜುಬ್ಬ ತೊಟ್ಟ ಸ್ಯಾಂಡಲ್ ಚಪ್ಪಲಿ ಧರಿಸಿರುವ ಪಟೇಲ್ ರ ಸರಳ ವ್ಯಕ್ತಿತ್ವವನ್ನು ನಾವು ಪ್ರತಿಮೆಯಲ್ಲಿ ಕಾಣಬಹುದು.

    ಈ ಯೋಜನೆ ಆರಂಭಗೊಂಡಿದ್ದು ಹೇಗೆ?
    2010 ರಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗುಜರಾತ್ ರಾಜ್ಯವನ್ನು ಅಭಿವೃದ್ಧಿ ಪಡಿಸಲು ಈ ಯೋಜನೆಯನ್ನು ಘೋಷಿಸಿದ್ದರು. 2013 ರಲ್ಲಿ ಯೋಜನೆ ನಿರ್ಮಾಣ ಶಂಕುಸ್ಥಾಪನೆ ನಡೆಸಿ ಕಾಮಗಾರಿಯನ್ನು ಆರಂಭಿಸಲಾಯಿತು. 2015 ರಲ್ಲಿ ಹೈಡ್ರಲಾಜಿಕಲ್ ಸಮೀಕ್ಷೆ, ಸುರಂಗ ಪರೀಕ್ಷೆ, ನೆರಳು ಬೆಳಕಿನ ಅಧ್ಯಯನಗಳನ್ನು ಪೂರ್ಣಗೊಳಿಸಿದ ಎಲ್ ಆಂಡ್ ಟಿ ಸಂಸ್ಥೆಯೂ ಈ ಬೃಹತ್ ಯೋಜನೆ ಉಸ್ತುವಾರಿಯನ್ನು ಹೊತ್ತುಕೊಂಡು ಸಂಪೂರ್ಣ ಮಾಡಿದೆ. 182 ಮೀಟರ್ ಎತ್ತರ ಈ ಪ್ರತಿಮೆಗೆ 25 ಸಾವಿರ ಟನ್ ಉಕ್ಕು, 90 ಸಾವಿರ ಟನ್ ಸಿಮೆಂಟ್, ಸುಮಾರು ಏಳು ಕಿಲೋಮೀಟರ್ ತ್ರಿಜ್ಯದಿಂದ ಕಾಣುವ ಹಾಗೇ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ವಿಶೇಷವಾಗಿ ಈ ಪ್ರತಿಮೆ ನಿರ್ಮಾಣಕ್ಕೆ ದೇಶದ ಹಲವು ಕಡೆಯಿಂದ ಕಬ್ಬಿಣವನ್ನು ಸಂಗ್ರಹಿಸಲಾಗಿತ್ತು.

    ಎಷ್ಟು ಖರ್ಚಾಗಿದೆ?
    ವಿಶ್ವದ ಉತ್ಕೃಷ್ಟ ತಂತ್ರಜ್ಞಾನ ಮತ್ತು ವಾಸ್ತುಶಿಲ್ಪವನ್ನು ಏಕತಾ ಮೂರ್ತಿ ನಿರ್ಮಾಣಕ್ಕೆ ಬಳಸಿಕೊಳ್ಳಲಾಗಿದೆ. 2,989 ಕೋಟಿ ರೂ. ವೆಚ್ಚದಲ್ಲಿ ಉಕ್ಕಿನಷ್ಟೇ ಗಟ್ಟಿಯಾಗಿ ಪ್ರತಿಮೆ ನಿರ್ಮಿಸಲಾಗಿದೆ. ಪಿಪಿಪಿ ಮಾದರಿಯಲ್ಲಿ ಈ ಯೋಜನೆ ಪೂರ್ಣಗೊಂಡಿದ್ದು 2012-13ರ ಬಜೆಟ್ ನಲ್ಲಿ 100 ಕೋಟಿ, 2014-15ರ ಬಜೆಟ್ ನಲ್ಲಿ 500 ಕೋಟಿ ಹಣವನ್ನು ಗುಜರಾತ್ ಸರ್ಕಾರ ನೀಡಿತ್ತು. 200 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ 2014-15ರ ಬಜೆಟ್ ನಲ್ಲಿ ನೀಡಿತ್ತು.

    ಏನೆಲ್ಲ ವಿಶೇಷತೆಯಿದೆ?
    ಪ್ರತಿಮೆಯಲ್ಲೇ ಎರಡು ಲಿಫ್ಟ್ ಗಳಿವೆ. ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿ ಹಾಗೂ ಪ್ರವಾಸಿಗರ ವಸತಿಗಾಗಿ 52 ರೂಂಗಳಿರುವ ಶ್ರೇಷ್ಠ ಭಾರತ ಹೆಸರಿನ ತ್ರಿಸ್ಟಾರ್ ಲಾಡ್ಜ್ ನಿರ್ಮಿಸಿದೆ. ಸೆಲ್ಫಿ ಪಾಯಿಂಟ್, ರೆಸ್ಟೋರೆಂಟ್‍ಗಳು, ಫೆರ್ರಿ ಸೇವೆ, ಬೋಟಿಂಗ್ ಸೌಕರ್ಯವಿದೆ. 250 ಟೆಂಟ್‍ಗಳಿರುವ `ಟೆಂಟ್ ಸಿಟಿ’, 306 ಮೀಟರ್ ಉದ್ದದ ಮಾರ್ಬಲ್ ಫ್ಲೋರಿಂಗ್ ವಾಕ್‍ವೇ, ವೀಕ್ಷಣಾ ಗ್ಯಾಲರಿಯೂ ಇದೆ. ಪಟೇಲರಿಗೆ ಸಂಬಂಧಿಸಿದ ಮ್ಯೂಸಿಯಂ. ಆಡಿಯೊ-ವಿಡಿಯೋ ಗ್ಯಾಲರಿ, ಸಂಶೋಧನಾ ಕೇಂದ್ರವನ್ನು ತೆರೆಯಲಾಗಿದೆ. ನಾಲ್ಕು ಹಂತದಲ್ಲಿ ಕಾಮಗಾರಿ ಮಾಡಲಾಗಿದ್ದು ತ್ರೀಡಿ ತಂತ್ರಜ್ಞಾನದ ಮೂಲಕ ಪಟೇಲರ ಚಿತ್ರಗಳನ್ನು ಸೃಷ್ಟಿಸಿ ಅವರ ಸಾಧನೆಗಳನ್ನು ಪ್ರವಾಸಿಗರಿಗೆ ತಿಳಿಸಲಾಗುತ್ತದೆ.

  • ಯುಕೆಯ ಪ್ರತಿಷ್ಠಿತ ಪ್ರಶಸ್ತಿ ರೇಸ್‍ನಲ್ಲಿದೆ ಭಾರತದ ‘ಏಕತಾ ಪ್ರತಿಮೆ’

    ಯುಕೆಯ ಪ್ರತಿಷ್ಠಿತ ಪ್ರಶಸ್ತಿ ರೇಸ್‍ನಲ್ಲಿದೆ ಭಾರತದ ‘ಏಕತಾ ಪ್ರತಿಮೆ’

    ಲಂಡನ್: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ್‍ಭಾಯಿ ಪಟೇಲ್ ಅವರ ‘ಏಕತಾ ಪ್ರತಿಮೆ’ ಬ್ರಿಟನ್ ಮೂಲದ ಇನ್‌ಸ್ಟಿಟ್ಯೂಷನ್ ಆಫ್ ಸ್ಟ್ರಕ್ಚರಲ್ ಇಂಜಿನಿಯರ್ಸ್ ನೀಡುವ ಪ್ರತಿಷ್ಠಿತ ‘ದಿ ಸ್ಟ್ರಕ್ಚರಲ್ ಅವಾರ್ಡ್ 2019’ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

    ಹೌದು, ಪ್ರಪಂಚದ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆದಿರುವ ಏಕತಾ ಪ್ರತಿಮೆ ವಿದೇಶಿ ಪ್ರಶಸ್ತಿ ರೇಸ್‍ನಲ್ಲಿರುವುದು ಹೆಮ್ಮೆಯ ವಿಷಯವಾಗಿದೆ. ನರ್ಮದಾ ನದಿ ಮೇಲೆ ಏಕತಾ ಪ್ರತಿಮೆ ತಲೆಯತ್ತಿ ನಿಂತಿದೆ. ಬೃಹತ್ ಗಾತ್ರ ಹಾಗೂ ನಿರ್ಮಾಣವಾದ ಸ್ಥಳ ಏಕತಾ ಪ್ರತಿಮೆ ವಿಶೇಷತೆಯನ್ನು ಹೆಚ್ಚಿಸಿದೆ. ಈ ಪ್ರತಿಮೆಯನ್ನು ರಚನೆ ಮಾಡಿ, ನಿರ್ಮಿಸಿದ ಇಂಜಿನಿಯರ್ ಗಳು ಕಠಿಣ ಸಲವಾಲುಗಳನ್ನು ಎದುರಿಸಿದ್ದಾರೆ. ಇದು ಅದ್ಭುತ ರಚನೆಯನ್ನು ಹೊಂದಿದೆ ಎಂದು ತೀರ್ಪುಗಾರರ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿದೆ.

    ಸುಮಾರು 52 ವರ್ಷಗಳಿಂದ ಸಂಸ್ಥೆಯು ದಿ ಸ್ಟ್ರಕ್ಚರಲ್ ಅವಾರ್ಡ್ ನೀಡುವ ಪದ್ಧತಿಯನ್ನು ನಡೆಸಿಕೊಂಡು ಬಂದಿದೆ. ಈ ಪ್ರಶಸ್ತಿಯ 2019ರ ಪಟ್ಟಿಯಲ್ಲಿ ಏಕತಾ ಪ್ರತಿಮೆ ಸೇರಿ ಸುಮಾರು 49 ಅದ್ಭುತ ಹಾಗೂ ವಿಶೇಷ ರಚನೆಯುಳ್ಳ ಕಟ್ಟಡ, ಪ್ರತಿಮೆಗಳು ಕೂಡ ಸ್ಥಾನ ಪಡೆದಿದೆ. ಚೀನಾದ ಹಾಂಗ್ಜೌನಲ್ಲಿ ತಿರುಗುವ ಪ್ಯಾನಲ್‍ಗಳಿಂದ ನಿರ್ಮಿಸಿದ ಕ್ರೀಡಾಂಗಣ, ಲಂಡನ್‍ನಲ್ಲಿ ನೆಲದಿಂದ 22 ಮೀಟರ್ ಆಳದಲ್ಲಿ ನಿರ್ಮಿಸಿರುವ ಪಂಚತಾರಾ ಹೋಟೆಲ್ ಸೇರಿದಂತೆ ವಿಶ್ವದೆಲ್ಲೆಡೆಯ 49 ರಚನೆಗಳು ಪ್ರಶಸ್ತಿಯ ರೇಸ್‍ನಲ್ಲಿ ಇದೆ. ಈ ಪ್ರಶಸ್ತಿ ನವೆಂಬರ್ 15ರಂದು ಘೋಷಣೆ ಆಗಲಿದೆ.

    ಏಕತಾ ಪ್ರತಿಮೆ ಅಹಮದಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟಿನ ಬಳಿ ನಿರ್ಮಾಣವಾಗಿದೆ. ನರ್ಮದಾ ಜಿಲ್ಲೆಯ ನರ್ಮದಾ ಡ್ಯಾಮ್‍ನಿಂದ 3.2 ಕಿ.ಮೀ ದೂರದಲ್ಲಿರುವ ‘ಸಾಧು ಬೆಟ್’ ದ್ವೀಪದಲ್ಲಿ ಯೋಜನಾ ಸ್ಥಳವಿದೆ. ಅಕ್ಟೋಬರ್ 31ರಂದು ಸರ್ದಾರ್ ವಲ್ಲಭ್‍ಭಾಯಿ ಪಟೇಲ್ ಅವರ ಜನ್ಮದಿನ. ಹೀಗಾಗಿ ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆಯನ್ನು ಅನಾವರಣ ಮಾಡಿದ್ದರು.

    ಈ ಏಕತಾ ಪ್ರತಿಮೆ 182 ಮೀಟರ್ ಎತ್ತರವಿದ್ದು, ಇದಕ್ಕೆ 2 ಸಾವಿರದ 300 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. 25 ಸಾವಿರ ಟನ್ ಕಬ್ಬಿಣ ಬಳಕೆ ಮಾಡಲಾಗಿದ್ದು, 90 ಸಾವಿರ ಟನ್ ಸಿಮೆಂಟ್ ಬಳಕೆ ಮಾಡಲಾಗಿದೆ. ಇದಕ್ಕಾಗಿ 250 ಎಂಜಿನಿಯರ್ಸ್, 3,400 ಕಾರ್ಮಿಕರು ಬರೋಬ್ಬರಿ 33 ತಿಂಗಳ ಕಾಲ ಶ್ರಮವಹಿಸಿದ್ದಾರೆ. ಲೋಹ ಅಭಿಯಾನದ ಮೂಲಕ 1.69 ಲಕ್ಷ ಲೋಹದ ತುಣುಕುಗಳನ್ನು ದೇಶದೆಲ್ಲೆಡೆಯಿಂದ ಸಂಗ್ರಹಿಸಲಾಗಿತ್ತು. ಏಕತಾ ಪ್ರತಿಮೆ ಭಾರತದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ತನ್ನ ವಿಶೇಷತೆಯಿಂದ ಇಂದು ಬ್ರಿಟನ್‍ನ ಪ್ರತಿಷ್ಠ ಪ್ರಶಸ್ತಿಯ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

  • 3 ಸಾವಿರ ಕೋಟಿ ವೆಚ್ಚದಲ್ಲಿ ಏಕತಾ ಪುತ್ಥಳಿ – ವರ್ಷಕ್ಕೂ ಮೊದ್ಲೇ ಸೋರುತ್ತಿದೆ ವೀಕ್ಷಕರ ಗ್ಯಾಲರಿ

    3 ಸಾವಿರ ಕೋಟಿ ವೆಚ್ಚದಲ್ಲಿ ಏಕತಾ ಪುತ್ಥಳಿ – ವರ್ಷಕ್ಕೂ ಮೊದ್ಲೇ ಸೋರುತ್ತಿದೆ ವೀಕ್ಷಕರ ಗ್ಯಾಲರಿ

    ಗಾಂಧಿನಗರ: ಮೂರು ಸಾವಿರ ಕೋಟಿ ರೂ. ಖರ್ಚು ಮಾಡಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಕಟ್ಟಿಸಲಾಗಿರುವ ಏಕತಾ ಪ್ರತಿಮೆಯ ಕಾಂಪ್ಲೆಕ್ಸ್ ಒಂದೇ ಮಳೆಯಲ್ಲಿ ಸೋರಲು ಆರಂಭಿಸಿದೆ.

    ಕಳೆದ ವರ್ಷದ ಅಕ್ಟೋಬರ್ ನಲ್ಲಿ ವಡೋದಾರದಲ್ಲಿ 182 ಅಡಿಯ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಯನ್ನು ಉದ್ಘಾಟಿಸಿದ್ದರು. ಈ ಪ್ರತಿಮೆಯ ವೀಕ್ಷಣೆಗಾಗಿ 153 ಮೀಟರ್ ಎತ್ತರದಲ್ಲಿ ವೀಕ್ಷಣಾ ಗ್ಯಾಲರಿಯನ್ನು ಕಟ್ಟಿಸಲಾಗಿತ್ತು. ಆ ವೀಕ್ಷಣಾ ಗ್ಯಾಲರಿಯ ಮೇಲ್ಫಾವಣಿಯಲ್ಲಿ ನೀರು ಸೋರಿಕೆ ಆಗುತ್ತಿದೆ.  ಇದನ್ನೂ ಓದಿ:  ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಯ ಯೋಜನೆ ಆರಂಭಗೊಂಡಿದ್ದು ಹೇಗೆ?

    ನಾವು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆ ನೋಡಲು ಹೋಗಿದ್ದೆವು. ಈ ವೇಳೆ ಮಳೆಯಲ್ಲಿ ಪುತ್ಥಳಿ ನೆನೆಯುತ್ತಿರುವುದು ನೋಡಿ ಬೇಸರವಾಯಿತು. ಮಳೆ ಜೋರಾಗಿ ಬರದಿದ್ದರೂ ಮೈನ್ ಹಾಲ್ ಹಾಗೂ ವೀಕ್ಷಣಾ ಗ್ಯಾಲರಿಯಲ್ಲಿ ನೀರು ತುಂಬಿಕೊಂಡಿತ್ತು ಎಂದು ಪ್ರತಿಮೆಯನ್ನು ನೋಡಲು ಹೋಗಿದ್ದ ಪ್ರವಾಸಿಗರೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ:   ಏಕತಾ ಪ್ರತಿಮೆಯ ವಿಶೇಷತೆ ಏನು? ಎಷ್ಟು ಬಲಶಾಲಿಯಾಗಿದೆ? ಖರ್ಚು ಎಷ್ಟಾಗಿದೆ? – ಇಲ್ಲಿದೆ ಪೂರ್ಣ ವಿವರ

    ಈ ಬಗ್ಗೆ ಸ್ಟ್ಯಾಚ್ಯೂ ಆಫ್ ಯೂನಿಟಿ ಟ್ವೀಟ್ ಮಾಡಿ, “ಗಾಳಿ ಜೋರಾಗಿ ಬೀಸಿದ್ದ ಕಾರಣ ಮಳೆ ನೀರು ವೀಕ್ಷಣಾ ಗ್ಯಾಲರಿಯೊಳಗೆ ನುಗ್ಗಿದೆ. ವಿನ್ಯಾಸದ ಮೂಲಕ ಪ್ರವಾಸಿಗರು ಆನಂದಿಸಬಹುದಾದ ಉತ್ತಮ ವೀಕ್ಷಣೆಗಾಗಿ ಅದನ್ನು ತೆರೆದಿಡಬೇಕು. ನೀರಿನ ಸಂಗ್ರಹವನ್ನು ನಿರ್ವಹಣಾ ತಂಡವು ತ್ವರಿತವಾಗಿ ನಿಭಾಯಿಸುತ್ತಿದೆ” ಎಂದು ತಿಳಿಸಿದೆ.

    ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಉದ್ದದ ಉಕ್ಕಿನ ಪ್ರತಿಮೆ ಅಕ್ಟೋಬರ್ 31ರಂದು ಅನಾವರಣಗೊಂಡಿತು. ಈ ಮೂಲಕ ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಟೇಲರ `ಏಕತಾ ಪ್ರತಿಮೆ’ ಪಾತ್ರವಾಗಿದೆ. ಈ ಪ್ರತಿಮೆ ಅಹಮದಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟಿನ ಬಳಿ ನಿರ್ಮಾಣವಾಗಿದೆ. ನರ್ಮದಾ ಜಿಲ್ಲೆಯ ನರ್ಮದಾ ಡ್ಯಾಮ್‍ನಿಂದ 3.2 ಕಿ.ಮೀ ದೂರದಲ್ಲಿರುವ `ಸಾಧು ಬೆಟ್’ ದ್ವೀಪದಲ್ಲಿ ಯೋಜನಾ ಸ್ಥಳವಿದೆ. ಅಕ್ಟೋಬರ್ 31ರಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನ. ಹೀಗಾಗಿ ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ ಮಾಡಿದ್ದರು.

  • ಏಕತಾ ಪ್ರತಿಮೆ ಉದ್ಘಾಟನೆಗೆ ಬರುತ್ತಿರುವ ನಿಮಗೆ ಬಹಿಷ್ಕಾರ: ಮೋದಿಗೆ ಗ್ರಾಮಸ್ಥರ ಪತ್ರ

    ಏಕತಾ ಪ್ರತಿಮೆ ಉದ್ಘಾಟನೆಗೆ ಬರುತ್ತಿರುವ ನಿಮಗೆ ಬಹಿಷ್ಕಾರ: ಮೋದಿಗೆ ಗ್ರಾಮಸ್ಥರ ಪತ್ರ

    ಗಾಂಧಿನಗರ: ಸರ್ದಾರ್ ವಲ್ಲಭಭಾಯಿ ಅವರ ಏಕತಾ ಪ್ರತಿಮೆಯನ್ನು ಲೋರ್ಕಾಪಣೆಗೊಳಿಸಲು ಆಗಮಿಸುತ್ತಿರುವ ಪ್ರಧಾನಿ ಮೋದಿಗೆ 22 ಗ್ರಾಮಗಳ ಬುಡಕಟ್ಟು ಜನಾಂಗದ ಮುಖಂಡರು ಭಾರೀ ಆಕ್ರೋಶ ವ್ಯಕ್ತಪಡಿಸಿ ಬಹಿಷ್ಕಾರ ಹಾಕಿದ್ದಾರೆ.

    ಕೇವಾಡಿಯಾ ಸೇರಿದಂತೆ 22 ಗ್ರಾಮಗಳ ಬುಡಕಟ್ಟು ಜನಾಂಗದ ಮುಖಂಡರು ಪ್ರಧಾನಿ ಮೋದಿಗೆ ಪತ್ರ ಬರೆದು ಪ್ರತಿಮೆ ಹಾಗೂ ಸ್ಮಾರಕ ಅನಾವರಣ ಕಾರ್ಯಕ್ರಮ ನಿಜಕ್ಕೂ ಸಾವಿನ ಸಂಭ್ರಮಾಚರಣೆ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಏಕತಾ ಪ್ರತಿಮೆಯ ವಿಶೇಷತೆ ಏನು? ಎಷ್ಟು ಬಲಶಾಲಿಯಾಗಿದೆ? ಖರ್ಚು ಎಷ್ಟಾಗಿದೆ? – ಇಲ್ಲಿದೆ ಪೂರ್ಣ ವಿವರ

    ಬಹಿರಂಗ ಪತ್ರದಲ್ಲಿ ಏನಿದೆ?:
    ನಿಮ್ಮನ್ನು ನಾವು ಸ್ವಾಗತಿಸುವುದಿಲ್ಲ. ನೀವು ನಮಗೆ ಬೇಡವಾಗಿರುವ ಅತಿಥಿ. ಸರ್ದಾರ್ ಸ್ಮಾರಕ ನಿರ್ಮಾಣಕ್ಕಾಗಿ ಅರಣ್ಯ, ನದಿ, ಜಲಪಾತ, ಭೂಮಿ ಮತ್ತು ಕೃಷಿ ಪ್ರದೇಶಗಳನ್ನು ನಾಶಮಾಡಲಾಗಿದೆ. ನಮ್ಮ ಪೂರ್ವಿಕರ ಕಾಲದಿಂದಲೂ ಇವುಗಳನ್ನೇ ನಂಬಿಕೊಂಡು, ಬದುಕು ಕಟ್ಟಿಕೊಂಡು ಬಂದಿದ್ದೇವೆ. ನಮ್ಮ ಬದುಕನ್ನು ಕಸಿಕೊಂಡು, ಸ್ಮಾರಕ ನಿರ್ಮಾಣ ಮಾಡಲಾಗಿದೆ. ಪ್ರತಿಮೆ ಹಾಗೂ ಸ್ಮಾರಕ ಅನಾವರಣ ಕಾರ್ಯಕ್ರಮ ನಿಜಕ್ಕೂ ಸಾವಿನ ಸಂಭ್ರಮಾಚರಣೆ. ಇದು ನಿಮಗೆ ತೋಚಲಿಲ್ಲವೇ ಎಂದು ಬುಡಕಟ್ಟು ಜನಾಂಗದ ಮುಖಂಡರು ಪ್ರಶ್ನಿಸಿದ್ದಾರೆ.

    ಗುಜರಾತ್ ನಲ್ಲಿ ಅದೆಷ್ಟೋ ಹಳ್ಳಿಗಳಿಗೆ ಶಾಲೆ, ಆಸ್ಪತ್ರೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳೇ ಸಿಗುತ್ತಿಲ್ಲ. ತೆರಿಗೆ ರೂಪದಲ್ಲಿ ಪಡೆದ ಜನರ ಹಣವನ್ನು ಜನರ ಮೂಲ ಅವಶ್ಯಕತೆ ಒದಗಿಸಲು ಬಳಸಬೇಕಿತ್ತು. ಆದರೆ ಹಾಗೆ ಮಾಡಲಿಲ್ಲ. ಒಂದು ವೇಳೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿ ಈಗಲೂ ಬದುಕಿರುತ್ತಿದ್ದರೆ ಇಂತಹ ಪ್ರತಿಮೆ ನಿರ್ಮಾಣಕ್ಕೆ ಯಾರದರೂ ಮುಂದಾಗಿದ್ದರೆ ಅವರು ಕೂಡ ವಿರೋಧ ವ್ಯಕ್ತಪಡಿಸುತ್ತಿದ್ದರು ಎಂದು ಪತ್ರದ ಮೂಲಕ ಕಿಡಿಕಾರಿದ್ದಾರೆ.

    ಏಕತಾ ಪ್ರತಿಮೆ ಯೋಜನೆಗೆ ಕಾಂಗ್ರೆಸ್ ಅಷ್ಟೇ ಅಲ್ಲದೆ, ಹಿರಿಯ ಗುಜರಾತ್ ರಾಜಕಾರಣಿ ಶಂಕರ್ ಸಿಂಗ್ ವಘೇಲಾ ಅವರು ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಭೂಮಿ, ನೆಲೆ ಕಳೆದುಕೊಂಡ 22 ಗ್ರಾಮಗಳ ಬುಡಕಟ್ಟು ಜನಾಂಗದ ನಾಯಕರು ಕಿಡಿ ಹೊರಹಾಕಿದ್ದಾರೆ.

    ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗುಜರಾತ್ ರಾಜ್ಯವನ್ನು ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಈ ಯೋಜನೆಯನ್ನು 2010ರಲ್ಲಿ ಘೋಷಣೆ ಮಾಡಿದ್ದರು. 2010ರಲ್ಲೇ ಘೋಷಣೆ ಮಾಡಿದಾಗಲೇ ಈ ಯೋಜನೆಗೆ ಅಲ್ಲಿನ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಗ್ರಾಮಸ್ಥರ ಪ್ರತಿಭಟನೆಯಿಂದಾಗಿ ವಿಳಂಬವಾಗಿ 2013ರ ಅಕ್ಟೋಬರ್ ನಲ್ಲಿ ನಿರ್ಮಾಣ ಕಾರ್ಯ ಆರಂಭಗೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv