Tag: stepmother

  • ಊಟ ಕೇಳಿದ್ದಕ್ಕೆ 4 ವರ್ಷದ ಮಗುವಿನ ಕೈ ಸುಟ್ಟ ಮಲತಾಯಿ

    ಊಟ ಕೇಳಿದ್ದಕ್ಕೆ 4 ವರ್ಷದ ಮಗುವಿನ ಕೈ ಸುಟ್ಟ ಮಲತಾಯಿ

    ಕಲಬುರಗಿ: ಊಟ ಕೇಳಿದ 4 ವರ್ಷದ ಮುಗ್ಧ ಮಗುವಿನ ಕೈಯನ್ನು ಕೆಂಡದ ಕಿಡಿಯಿಂದ ಮಲತಾಯಿ ಮನಬಂದಂತೆ ಸುಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ತಾಂಡಾ ಗ್ರಾಮದಲ್ಲಿ ನಡೆದಿದೆ.

    ತಾಲೂಕಿನ ನಾಲವಾರ ತಾಂಡಾದ ತಿಪ್ಪಣ್ಣ ಎಂಬುವರು ಪತ್ನಿ ಮರಣ ನಂತರ ಪುತ್ರಿ ಸೋನಾಲಿಕಾಗೆ ಅಮ್ಮನ ಪ್ರೀತಿ ಸಿಗಬೇಕೆಂದು ಮರೆಮ್ಮಳನ್ನು 2ನೇ ಮದುವೆ ಆಗಿದ್ದರು. ಆದರೆ, ಕೆಲಸದ ನಿಮಿತ್ತ ತಿಪ್ಪಣ್ಣ ಪೂನಾಗೆ ಹೋಗಿದ್ದು, ಇತ್ತ ಸೋನಾಲಿಕಾಗೆ ಮರೆಮ್ಮ ಮನಬಂದಂತೆ ಹಿಂಸಿಸುತ್ತಿದ್ದಾಳೆ. ಇದನ್ನೂ ಓದಿ: ಧರ್ಮ ದಂಗಲ್‌ಗೆ ತೆರೆ ಎಳೆಯಲು ಮುಂದಾದ ಬಿಜೆಪಿ – ರಾಜ್ಯ ಘಟಕಗಳಿಗೆ ಹೈಕಮಾಂಡ್‌ ವಾರ್ನಿಂಗ್‌

    ನಾಲ್ಕು ವರ್ಷ ಸೋನಲಿಕ ಮಲತಾಯಿಗೆ ಊಟ ಕೇಳಿದರೆ ಹೊಡೆಯುವುದು, ಬಡಿಯುವುದು, ಮಂಚಕ್ಕೆ ಕಟ್ಟಿ ಹಾಕುವುದು, ಮೈ ಕೈ ಸುಡುವುದು ಮಾಡಿದ್ದಾಳೆ. ದಿನನಿತ್ಯ ಹೀಗೆ ಕಿರುಕುಳ ನೀಡುತ್ತಿದ್ದನ್ನು ನೋಡುತ್ತಿದ್ದ ಜನ ಕಳೆದ 3-4 ದಿನಗಳಿಂದ ಆಟವಾಡಲು ಮಗು ಹೊರಗೆ ಬರದೇ ಇರುವುದರಿಂದ ಸಂಶಯಗೊಂಡು ಮನೆಗೆ ಹೋಗಿದ್ದಾರೆ. ಇದನ್ನೂ ಓದಿ: ಭಾರತ ಮತಾಂಧರನ್ನು ಪ್ರಶಂಸಿಸುವುದಿಲ್ಲ: ಪಾಕ್ ಪ್ರಧಾನಿಗೆ ಭಾರತ ಸರ್ಕಾರ ತೀವ್ರ ತರಾಟೆ

    ಈ ವೇಳೆ ಮಂಚಕ್ಕೆ ಮಗುವನ್ನು ಕಟ್ಟಿ ಹಾಕಿರುವುದನ್ನು ಗಮನಿಸಿ ನಂತರ ಕಟ್ಟಿದ್ದ ಹಗ್ಗವನ್ನು ಬಿಚ್ಚಿ ಮಗುವನ್ನು ಎತ್ತಿಕೊಂಡು ಹೊರಗೆ ಬಂದಾಗ ಮಗುವಿನ ಎರಡು ಕೈಗಳನ್ನು ಕೆಂಡದ ಕಿಡಿಯಿಂದ ಸುಟ್ಟಿರುವುದು ಬೆಳಕಿಗೆ ಬಂದಿದೆ. ನಂತರ ಮಲತಾಯಿಯನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು ಇದೀಗ ಈ ಸಂಬಂಧ ವಾಡಿ ಠಾಣೆಗೆ ಮರೆಮ್ಮ ವಿರುದ್ಧ ದೂರು ಕೊಟ್ಟಿದ್ದಾರೆ.

  • ಮೊಬೈಲ್ ಚಾರ್ಜರ್ ವೈರ್‌ನಿಂದ ಮಗುವಿನ ಕತ್ತು ಹಿಸುಕಿ ಹತ್ಯೆಗೈದ ಮಲತಾಯಿ!

    ಮೊಬೈಲ್ ಚಾರ್ಜರ್ ವೈರ್‌ನಿಂದ ಮಗುವಿನ ಕತ್ತು ಹಿಸುಕಿ ಹತ್ಯೆಗೈದ ಮಲತಾಯಿ!

    ವಿಜಯಪುರ: ಮೊಬೈಲ್ ಚಾರ್ಜರ್ ವೈರ್‌ನಿಂದ ಮಗುವಿನ ಕತ್ತು ಹಿಸುಕಿ ಮಲತಾಯಿಯೇ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

    ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಈ ಘಟನೆ ನಡೆದಿದೆ. ಮೊಬೈಲ್ ಚಾರ್ಜರ್‌ನಿಂದ ಕತ್ತು ಹಿಸುಕಿ ಹತ್ಯೆಗೈಯಲು ಮಲತಾಯಿ ಪ್ರಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳಲ್ಲಿ ಸುಮಿತ್ ವಿನೋದ ಚವ್ಹಾಣ್ (5) ಅಸುನೀಗಿದ್ದಾನೆ. ಸಂಪತ್ ವಿನೋದ್ ಚವ್ಹಾಣ್ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಇವರು ಯಾರೆಂದು ಗುರುತಿಸಿ- ಹಳೇ ಫೋಟೋ ಹಂಚಿಕೊಂಡು ಹರ್ಭಜನ್ ಪ್ರಶ್ನೆ

    ಮಲತಾಯಿ ಸವಿತಾ ಹತ್ಯೆ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿನೋದ್ ಮೊದಲನೆ ಹೆಂಡತಿ ಶಾರುಬಾಯಿ ಕಳೆದ ನಾಲ್ಕು ತಿಂಗಳ ಹಿಂದೆ ಮೃತಪಟ್ಟಿದ್ದಳು. ನಂತರ ವಿನೋದ್, ಸವಿತಾಳನ್ನು ಎರಡನೇ ಮದುವೆಯಾಗಿದ್ದರು. ಇದನ್ನೂ ಓದಿ:  ಬುಡಕಟ್ಟು ಮಹಿಳೆಯರೊಂದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಡಾನ್ಸ್- ವೀಡಿಯೋ ವೈರಲ್

    ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • 8 ವರ್ಷದ ಬಾಲಕನಿಗೆ ಮಲತಾಯಿಯಿಂದ ಕಿರುಕುಳ – ಮಹಿಳಾ ಆಯೋಗದಿಂದ ರಕ್ಷಣೆ

    8 ವರ್ಷದ ಬಾಲಕನಿಗೆ ಮಲತಾಯಿಯಿಂದ ಕಿರುಕುಳ – ಮಹಿಳಾ ಆಯೋಗದಿಂದ ರಕ್ಷಣೆ

    ದೆಹಲಿ: ಮಲತಾಯಿಯಿಂದ ಕಿರುಕುಳಕ್ಕೆ ಒಳಗಾಗಿದ್ದ 8 ವರ್ಷದ ಬಾಲಕನನ್ನು ದೆಹಲಿ ಮಹಿಳಾ ಆಯೋಗ ರಕ್ಷಿಸಿದೆ.

    ಈ ವಿಚಾರವಾಗಿ ಮಾಹಿತಿ ದೊರೆತ ದೆಹಲಿ ಮಹಿಳಾ ಆಯೋಗ ತಂಡ, ಪಶ್ಚಿಮ ದೆಹಲಿಯ ಹರಿ ನಗರದಲ್ಲಿರುವ ಬಾಲಕನ ನಿವಾಸಕ್ಕೆ ತಲುಪಿ ಆತನನ್ನು ತನ್ನ ಮಲತಾಯಿಯಿಂದ ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

    ಬಳಿಕ ವಿಚಾರಣೆ ವೇಳೆ ಬಾಲಕ ಮಲತಾಯಿ ಹೊರಗೆ ಹೋಗುವಾಗ ಹಗ್ಗಗಳಿಂದ ತನ್ನ ಕೈಗಳನ್ನು ಕಟ್ಟಿ ಹೋಗುತ್ತಿದ್ದರು. ತನ್ನನ್ನು ಹೊರಗೆ ಹೋಗಲು ಮತ್ತು ಯಾರೊಂದಿಗೂ ಬೆರೆಯಲು ಬಿಡುತ್ತಿರಲಿಲ್ಲ. ನನ್ನನ್ನು ನೆಲದ ಮೇಲೆ ಮಲಗಿಸುತ್ತಿದ್ದರು. ಅಲ್ಲದೆ ಸರಿಯಾಗಿ ಊಟ ಕೂಡ ನೀಡುತ್ತಿರಲಿಲ್ಲ ಎಂದು ದೂರಿದ್ದಾನೆ.

    ಬಾಲಕನ ದೇಹದಲ್ಲಿ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆತನ ಬೆನ್ನಿನ ಮೇಲೆ ಕೆಲವು ಗೀರುಗಳ ಗುರುತುಗಳು ಪತ್ತೆಯಾಗಿದೆ. ನಂತರ ಬಾಲಕನನ್ನು ದೆಹಲಿ ಮಹಿಳಾ ಆಯೋಗ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ.

  • ಮಲಮಗನನ್ನು ವಿವಾಹವಾಗಿ ಮಗುವಿಗೆ ಜನ್ಮ ನೀಡಿದ ಮಹಿಳೆ

    ಮಲಮಗನನ್ನು ವಿವಾಹವಾಗಿ ಮಗುವಿಗೆ ಜನ್ಮ ನೀಡಿದ ಮಹಿಳೆ

    ಮಾಸ್ಕೋ: ರಷ್ಯಾದ 35 ವರ್ಷದ ಮಹಿಳೆ ತನ್ನ ಮೊದಲ ಮಗುವಿಗೆ ಮಲಮಗನೊಂದಿಗೆ ಜನ್ಮ ನೀಡಿರುವುದಾಗಿ ಘೋಷಿಸಿದ್ದಾಳೆ. ಗಂಡನನ್ನು ತೊರೆದು ಮಲಮಗನನ್ನೇ ವಿವಾಹವಾಗಿ ಮಗುವಿಗೆ ಜನ್ಮ ನೀಡುತ್ತಿರುವ ಈ ಸುದ್ದಿ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

    ಮರೀನಾ ಮಾಜಿ ಗಂಡನ ಹೆಣ್ಣು ಮಗುವಿಗೆ ಜನ್ಮ ನೀಡುವ ಮುನ್ನವೇ ಆತನ ಪುತ್ರ ವ್ಲಾಡಿಮಿರ್ ನನ್ನು ವಿವಾಹವಾಗಿದ್ದಾಳೆ. ಇದೀಗ ಮಾಜಿ ಗಂಡನ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆ ಮಗು 3 ಕೆಜಿ ತೂಕವಿದೆ.

    10 ವರ್ಷದಿಂದ ಜೊತೆಗಿದ್ದ ಮಾಜಿ ಪತಿಗೆ ಇದೀಗ ಮರೀನಾ ವಿಚ್ಛೇದನ ನೀಡಿದ್ದಾಳೆ. ವ್ಲಾಡಿಮಿರ್ ರಜೆಯ ದಿನಗಳಲ್ಲಿ ಮನೆಗೆ ಬರುತ್ತಿದ್ದಾಗ ಆಕೆಗೆ ಆತನ ಮೇಲೆ ಪ್ರೇಮವಾಗಿದ್ದು ಈಗ ಆತನನ್ನೆ ಗಂಡನೆಂದು ಘೋಷಿಸಿದ್ದಾಳೆ.

    7 ವರ್ಷದಿಂದ ಮರೀನಾ ತನ್ನ ತಂದೆ ಅಲೆಕ್ಸಿ ಶಾವಿರಿನ್(45)ನನ್ನು ಮದುವೆಯಾಗಿದ್ದಳು ಮತ್ತು ಅವರಿಬ್ಬರು 5 ದತ್ತು ಮಕ್ಕಳನ್ನು ನೋಡಿಕೊಳ್ಳುತ್ತಿದ್ದರು ಎಂಬ ವಿಚಾರ ಮಲಮಗನಾದ ವ್ಲಾಡಿಮಿರ್ ತಿಳಿದಿತ್ತು.

    ಇನ್ ಸ್ಟಾಗ್ರಾಮ್ ನಲ್ಲಿ 5 ಲಕ್ಷ ಫಾಲೋವರ್ ಹೊಂದಿರುವ ಮರೀನಾ ವ್ಲಾಡಿಮಿರ್ ಸೂಚನೆ ಮೇರೆಗೆ ಮಗುವಿನ ಮುಖ ಕಾಣಿಸದಂತೆ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾಳೆ. ತನ್ನ ಹೊಸ ಸಂಗಾತಿಯನ್ನು ಆಕರ್ಷಿಸಲು ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆ ಮಾಡಿಸಿಕೊಂಡಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾಳೆ ಮತ್ತು ವಿಶ್ವದಲ್ಲಿಯೇ ತಾನು ಆಕರ್ಷಿತ ನೀಲಿ ಕಣ್ಣುಗಳನ್ನು ಹೊಂದಿರುವುದಾಗಿ ಹೇಳಿಕೊಂಡಿದ್ದಾಳೆ.

    ಈ ಹಿಂದೆ ನನಗೆ ಬಹಳಷ್ಟು ಜನರು ಹೊಸ ಸಂಗಾತಿಯನ್ನು ಆಕರ್ಷಿಸಲು ಮೇಕಪ್ ಮಾಡಿಕೊಳ್ಳುವುದಾಗಿ ಸಲಹೆ ನೀಡಿದ್ದರು. ಆದರೆ ಅದರ ಅವಶ್ಯಕತೆ ಇಲ್ಲ. ತನ್ನ ಪ್ಲಾಸ್ಟಿಕ್ ಸರ್ಜರಿ, ಚರ್ಮ ಮತ್ತು ವ್ಯಕ್ತಿತ್ವವನ್ನು ನನ್ನ ಈಗಿನ ಪತಿಯಾಗಿರುವ ವ್ಲಾಡಿಮಿರ್ ಪ್ರೀತಿಸುತ್ತಾನೆ. ನಾನು ಹೀಗೆಯೇ ಇರಲು ಬಯಸುತ್ತೇನೆ ಇದ್ದಕ್ಕಿಂತ ಸುಂದರವಾಗಿ ಕಾಣಲು ಬಯಸುವುದಿಲ್ಲ ಎಂದು ಹೇಳಿಕೊಂಡಿದ್ದಾಳೆ.

  • ಕೋಲಿನಿಂದ ಬಡಿದು, 15 ಬಾರಿ ಚುಚ್ಚಿ ಚಿಕ್ಕಮ್ಮಳಿಂದ ಮಲಮಗಳ ಹತ್ಯೆ

    ಕೋಲಿನಿಂದ ಬಡಿದು, 15 ಬಾರಿ ಚುಚ್ಚಿ ಚಿಕ್ಕಮ್ಮಳಿಂದ ಮಲಮಗಳ ಹತ್ಯೆ

    – ಕ್ರೂರವಾಗಿ ಕೊಂದು ಮನೆಯಲ್ಲೇ ಸಮಾಧಿ

    ಲಕ್ನೋ: ಕೋಲಿನಿಂದ ಬಡಿದು, 15 ಬಾರಿ ಚುಚ್ಚಿ ಮಲತಾಯಿಯೊಬ್ಬಳು ಮಲಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

    ದಿನ ಮಗುವಿಗೆ ಮಲತಾಯಿ ದೈಹಿಕ ಕಿರುಕುಳ ನೀಡುತ್ತಿದ್ದಳು. ಒಂದು ದಿನ ಮನೆಗೆಲಸವನ್ನು ಮಾಡದೇ ಮಲಗಿದ್ದ ಮಗುವನ್ನು ಮಲತಾಯಿ ಕಾಲಿನಿಂದ ಮುಖಕ್ಕೆ ಒದ್ದು, ಹಿಂಸೆ ನೀಡಿದ್ದಳು. ಆದರೆ ಕೆಲ ದಿನಗಳಿಂದ ಬಾಲಕಿ ಕಾಣೆಯಾಗಿದ್ದಳು. ಇದನ್ನು ಗಮನಿಸಿದ ಪಕ್ಕದ ಮನೆಯವರಾದ ಕಪೂರ್ ಚಂದ್ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು.

    ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರಿಗೆ ಬಾಲಕಿ ತಂದೆ, ಆಕೆ ನಮ್ಮ ಸಂಬಂಧಿಕರ ಮನೆಗೆ ಹೋಗಿದ್ದಾಳೆ. ಮತ್ತೆ ಕೆಲ ದಿನಗಳ ನಂತರ ವಾಪಸ್ ಬರುತ್ತಾಳೆ ಎಂದು ಹೇಳಿದ್ದಾರೆ. ಆದರೆ ಮೃತ ಬಾಲಕಿಯ ಸಹೋದರಿ ಮಾತ್ರ ಇಲ್ಲ ಆಕೆಯನ್ನು ಅಮ್ಮ ಹೊಡೆದು ಕೊಂದು ಹಾಕಿದರು ಎಂದು ಹೇಳಿದ್ದಾಳೆ. ಆಗ ತಂದೆ ಇಲ್ಲ ಆಕೆ ಮನೆಯ ಮೇಲ್ಚಾವಣಿ ಮೇಲಿಂದ ಬಿದ್ದು ಸಾವನ್ನಪ್ಪಿದಳು ಎಂದು ಕಥೆ ಕಟ್ಟಲು ಆರಂಭಿಸಿದ್ದಾರೆ.

    ಇದರಿಂದ ಅನುಮಾನಗೊಂಡ ಪೊಲೀಸರು, ತಂದೆಯನ್ನು ಠಾಣೆಗೆ ಕರೆಸಿ ತೀವ್ರ ವಿಚಾರಣೆ ಒಳಪಡಿಸಿದ್ದಾರೆ. ಈ ವೇಳೆ ನಾವೇ ಮಗುವನ್ನು ಕೊಲೆ ಮಾಡಿದ್ದೇವೆ ಎಂದು ಒಪ್ಪಿಕೊಂಡಿದ್ದಾನೆ. ಆಕೆಯ ಮಲತಾಯಿ ಆಕೆಯನ್ನು ಹತ್ಯೆ ಮಾಡಿದ್ದಾರೆ. ನಂತರ ಈ ವಿಚಾರವನ್ನು ತಂದೆಗೆ ಹೇಳಿದ್ದಾರೆ. ಆಗ ಇಬ್ಬರು ಸೇರಿ ಮಗುವನ್ನು ಮನೆಯಲ್ಲೇ ಗುಂಡಿ ತೋಡಿ ಸಮಾಧಿ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಪೊಲೀಸರು ಮೃತದೇಹವನ್ನು ಸಮಾಧಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಬಾಲಕಿಯನ್ನು ದೊಣ್ಣೆಯಿಂದ ಹೊಡೆದು ಮತ್ತು 15 ಬಾರಿ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅತ್ಯಂತ ಕ್ರೂರವಾಗಿ ಕೊಂದು ಮನೆಯಲ್ಲೆ ಸಮಾಧಿ ಮಾಡಿದ್ದಾರೆ. ಕೊಲೆ ಮಾಡಿದ ಮಲತಾಯಿ ಪರಾರಿಯಾಗಿದ್ದಾಳೆ ಎಂದು ಬರೇಲಿ ಠಾಣೆಯ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.

  • ‘ನಾನಲ್ಲ ದೆವ್ವ ಕೊಲೆ ಮಾಡಿದ್ದು’ – ಮಗನ ಕತ್ತು ಹಿಸುಕಿ ಕೊಂದು ಭೂತಗಳ ಕಥೆ ಕಟ್ಟಿದ ಮಲತಾಯಿ

    ‘ನಾನಲ್ಲ ದೆವ್ವ ಕೊಲೆ ಮಾಡಿದ್ದು’ – ಮಗನ ಕತ್ತು ಹಿಸುಕಿ ಕೊಂದು ಭೂತಗಳ ಕಥೆ ಕಟ್ಟಿದ ಮಲತಾಯಿ

    – ಮಲತಾಯಿ, ತಂದೆಯನ್ನು ಬಂಧಿಸಿದ ಪೊಲೀಸರು

    ಲಕ್ನೋ: 5 ವರ್ಷದ ಬಾಲಕನನ್ನು ಕತ್ತು ಹಿಸುಕಿ ಕೊಂದ ಮಲತಾಯಿ ಪೊಲೀಸರ ಬಳಿ ದೆವ್ವಗಳು ಕೊಲೆ ಮಾಡಿದೆ ಎಂದು ಕಥೆ ಕಟ್ಟಿದ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

    ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಗಿರಿಯಾ ಖಲ್ಸಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೃತ್ಯವೆಸಗಿದ ಮಲತಾಯಿ ಹಾಗೂ ತಂದೆ ಚಂದನ್ ಮೇಹ್ತಾನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನ ಮೃತದೇಹ ಮಹಿಳೆಯ ಕೋಣೆಯಲ್ಲಿ ಪತ್ತೆಯಾಗಿತ್ತು. ಆತನ ದೇಹದ ಮೇಲೆ, ಮುಖದ ಮೇಲೆ ಗಾಯಗಳು ಆಗಿದ್ದವು. ಈ ಬಗ್ಗೆ ವಿಚಾರಣೆ ವೇಳೆ ಮಹಿಳೆಯನ್ನು ಕೇಳಿದರೆ, ನಾನು ಕೊಲೆ ಮಾಡಿಲ್ಲ. ದೆವ್ವ, ಭೂತಗಳು ಬಾಲಕನನ್ನು ಕೊಲೆ ಮಾಡಿದೆ ಎಂದು ಕಥೆ ಕಟ್ಟಿದ್ದಾಳೆ.

    ಮಹಿಳೆಯ ದೆವ್ವದ ಕಥೆ ಕೇಳಿ ಗ್ರಾಮಸ್ಥರು ಭಯಗೊಂಡಿದ್ದಾರೆ. ಈಗಾಗಲೇ ಬಾಲಕನ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

    ಈ ಕೊಲೆ ಬಗ್ಗೆ ಗ್ರಾಮಸ್ಥರನ್ನು ವಿಚಾರಿಸಿದಾಗ, ಕೊಲೆಯಾದ ಬಾಲಕ ಮಹಿಳೆಯ ಎರಡನೇ ಪತಿ ಚಂದನ್ ಮೇಹ್ತಾನ ಮಗ. ಮೊದಲನೇ ಪತಿ ಬಿಟ್ಟುಹೋದ ಬಳಿಕ ಮಹಿಳೆ ಎರಡನೇ ಮದುವೆ ಆಗಿದ್ದಳು. ಚಂದನ್ ಮೇಹ್ತಾನ ಪತ್ನಿ 4 ವರ್ಷದ ಹಿಂದೆ ಮೃತಪಟ್ಟಿದ್ದಳು. ಆತನಿಗೆ 5 ವರ್ಷದ ಮಗ ಹಾಗೂ 7 ವರ್ಷದ ಮಗಳಿದ್ದಳು. ಆತನಿಗೂ ಕೂಡ ಇದು ಎರಡನೇ ಮದುವೆ ಆಗಿದೆ. ಮೊದ ಮೊದಲು ಮಹಿಳೆ ಮಕ್ಕಳನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದಳು.

    ಆದರೆ ಸಮಯ ಕಳೆಯುತ್ತಿದ್ದಂತೆ ಆಕೆಯ ವರ್ತನೆ ಬದಲಾಗಿತ್ತು. ಮಕ್ಕಳನ್ನು ಆಕೆ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಬಹುಶಃ ಮಕ್ಕಳನ್ನು ಸಾಕಬೇಕಲ್ಲ ಎಂಬ ಕಾರಣಕ್ಕೆ ಮಹಿಳೆ ಬಾಲಕನನ್ನು ಕೊಲೆ ಮಾಡಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

  • 9 ವರ್ಷದ ಮಗಳನ್ನು ಕೊಂದ ಮಲತಾಯಿಗೆ ಜೀವಾವಧಿ ಶಿಕ್ಷೆ!

    9 ವರ್ಷದ ಮಗಳನ್ನು ಕೊಂದ ಮಲತಾಯಿಗೆ ಜೀವಾವಧಿ ಶಿಕ್ಷೆ!

    ನ್ಯೂಯಾರ್ಕ್: 9 ವರ್ಷದ ಮಗಳನ್ನು ಕೊಂದ ಭಾರತದ ಪಂಜಾಬ್ ಮೂಲದ ಮಲತಾಯಿಗೆ ಅಮೇರಿಕದ ಕ್ವೀನ್ಸ್ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

    ನ್ಯೂಯಾರ್ಕ್‍ನ ಕ್ವೀನ್ಸ್ ನಲ್ಲಿ ನೆಲೆಸಿದ್ದ ಶಾಂದೈ ಅರ್ಜುನ್ (55 ) ತನ್ನ 9 ವರ್ಷದ ಅಶ್‍ದೀಪ್ ಕೌರ್‍ನನ್ನು ಬಾತ್‍ರೂಮಿನಲ್ಲಿ ಹೊಡೆದು ಕೊಲೆ ಮಾಡಿದ್ದಳು.

    ಭಾರತದಿಂದ ತಂದೆಯನ್ನು ನೋಡಲು ಬಂದಿದ್ದ ಬಾಲಕಿಯನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅಮೇರಿಕ ನ್ಯಾಯಾಲಯದ ನ್ಯಾಯಮೂರ್ತಿ ಕೆನ್ನೆತ್ ಹೋಲ್ಡರ್ ಅವರು ಶಾಂದೈ ಅರ್ಜುನ್‍ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

    ಈ ಪ್ರಕರಣ ತುಂಬಾ ಭಯಾನಕವಾಗಿದೆ. ತನ್ನ ಮಗಳನ್ನು ರಕ್ಷಿಸಬೇಕಾದ ಮಲತಾಯಿಯೇ ಆಕೆಯನ್ನು ಘೋರವಾಗಿ ಕೊಲೆ ಮಾಡಿರುವುದು ತುಂಬಾ ದೊಡ್ಡ ಅಪರಾಧ. ಈ ಮಹಿಳೆಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದು ಕ್ವೀನ್ಸ್ ಜಿಲ್ಲೆಯಾ ವಕೀಲರಾದ ಜಾನ್ ರಾಯಾನ್ ಅವರು ಹೇಳಿದ್ದಾರೆ.

    ಏನಿದು ಪ್ರಕರಣ?
    2016ರಲ್ಲಿ ಭಾರತದಿಂದ ತನ್ನ ತಂದೆಯನ್ನು ನೋಡಲು ಅಮೇರಿಕಕ್ಕೆ ಬಂದಿದ್ದ ಅಶ್‍ದೀಪ್ ಕೌರ್ ಎಂಬ 9 ವರ್ಷದ ಬಾಲಕಿಯನ್ನು ಬಾತ್‍ರೂಮಿನಲ್ಲಿ ಕೊಲೆ ಮಾಡಲಾಗಿತ್ತು. ಅಮೇರಿಕದ ಕ್ವೀನ್ಸ್ ನಲ್ಲಿ ಅಪಾಟ್ರ್ಮೆಂಟ್‍ವೊಂದಲ್ಲಿ ವಾಸವಿದ್ದ ಶಾಂದೈ ಅರ್ಜುನ್ ಅವರು ತಮ್ಮ ಮನೆಯ ಬಾತ್‍ರೂಮಿನಲ್ಲಿ ಮಲಮಗಳನ್ನು ಹತ್ಯೆ ಮಾಡಿದ್ದಳು. ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಮಾಡಲಾಗಿದೆ ಎನ್ನುವ ಫಲಿತಾಂಶ ಪ್ರಕಟವಾಗಿತ್ತು. ಶಾಂದೈ ಅರ್ಜುನ್ ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದಳು.

  • 9ರ ಬಾಲಕಿ ಮೇಲೆ ಮಲ ಸಹೋದರ, ಸ್ನೇಹಿತರಿಂದ ಗ್ಯಾಂಗ್‍ರೇಪ್, ಕೊಲೆ

    9ರ ಬಾಲಕಿ ಮೇಲೆ ಮಲ ಸಹೋದರ, ಸ್ನೇಹಿತರಿಂದ ಗ್ಯಾಂಗ್‍ರೇಪ್, ಕೊಲೆ

    ಶ್ರೀನಗರ: 9 ವರ್ಷದ ಬಾಲಕಿ ಮೇಲೆ ಮಲ ಸಹೋದರ ಸೇರಿದಂತೆ ಆತನ ಸ್ನೇಹಿತರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಆಕೆಯನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ ತಾಯಿ ಮತ್ತು ಮಲ ಸಹೋದರ ಸೇರಿದಂತೆ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

    ಅಗಸ್ಟ್ 23 ರಂದು ಉರಿ ನಿವಾಸಿಯಾಗಿರುವ ತಂದೆ ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಭಾನುವಾರ ಬಾಲಕಿಯ ಮೃತದೇಹ ಹತ್ತಿರದ ಅರಣ್ಯ ಪ್ರದೇಶದ ಪತ್ತೆಯಾಗಿದ್ದು, ಈ ಸಂಬಂಧ ಈ ಪ್ರಕರಣ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಬಾರಾಮುಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಮ್ತಿಯಾಜ್ ಹುಸೇನ್ ಮಿರ್ ಹೇಳಿದ್ದಾರೆ.

    ಎಸ್‍ಐಟಿ ಈ ಕುರಿತು ಮಲ ತಾಯಿಯನ್ನು ನಿರಂತರ ವಿಚಾರಣೆಗೆ ಒಳಪಡಿಸಿದಾಗ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಿರುವ ವಿಚಾರ ಬಳಕಿಗೆ ಬಂದಿದೆ.

    ಪತಿಯ ಎರಡನೆಯ ಹೆಂಡತಿ ಮತ್ತು ಆಕೆಯ ಮಕ್ಕಳ ಮೇಲೆ ಮಲತಾಯಿ ದ್ವೇಷ ಹೊಂದಿದ್ದಳು. ಹರಿತವಾದ ಚಾಕುವನ್ನು ತಯಾರಿ ಮಾಡಿ ಬಾಲಕಿಯನ್ನು ಹತ್ತಿರವಾದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಮಲ ತಾಯಿಯ 14 ವರ್ಷದ ಮಗ ಹಾಗೂ ಆತನ ಸ್ನೇಹಿತರು ಸೇರಿ ಆಕೆಯನ್ನು ಅತ್ಯಾಚಾರ ಮಾಡಿದ್ದಾರೆ. ಕೃತ್ಯ ಎಸಗಿದ ನಂತರ ಬಾಲಕಿಯನ್ನು ಕಟ್ಟಿ ಹಾಕಿ ಸಹೋದರ ಕೊಡಲಿಯಿಂದ ತಲೆ ಹೊಡೆದಿದ್ದಾನೆ. ಮತ್ತೊಬ್ಬ ಆರೋಪಿ ಬಾಲಕಿಯ ಕಣ್ಣುಗಳ ಮೇಲೆ ಚಾಕುವಿನಿಂದ ಇರಿದಿದ್ದಾನೆ. ನಂತರ ಮೃತ ದೇಹವನ್ನು ಪೊದೆಯೊಳಗೆ ಎಸೆದು ಕೊಂಬೆಗಳಿಂದ ಮರೆಮಾಡಿದ್ದಾರೆ. ಈ ಎಲ್ಲ ಕೃತ್ಯ ನಡೆಯುವಾಗ ಸ್ಥಳದಲ್ಲೇ ಮಲತಾಯಿ ನಿಂತಿದ್ದಳು ಎಂದು ಪೊಲೀಸರು ತಿಳಿಸಿದರು.

    ಕೃತ್ಯಕ್ಕೆ ಬಳಸಿದ್ದ ಕೊಡಲಿ ಮತ್ತು ಚಾಕುವನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದು, ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗಳನ್ನು ಮನೆಗೆ ಕರೆದೊಯ್ಯಲೊಪ್ಪದ ತಂದೆ: ಯುವತಿಯ ಜೊತೆ ಪೊಲೀಸರ ಅಮಾನವೀಯತೆ

    ಮಗಳನ್ನು ಮನೆಗೆ ಕರೆದೊಯ್ಯಲೊಪ್ಪದ ತಂದೆ: ಯುವತಿಯ ಜೊತೆ ಪೊಲೀಸರ ಅಮಾನವೀಯತೆ

    ಕಾರವಾರ: ಮೂರು ದಿನಗಳ ಹಿಂದೆ ಸ್ವೀಕಾರ ಕೇಂದ್ರದಿಂದ ತಪ್ಪಿಸಿಕೊಂಡು ಹೋಗಿದ್ದ ಯುವತಿಯನ್ನು ಪೊಲೀಸರು ಬಂಧಿಸಿ ಅಮಾನವೀಯವಾಗಿ ಎಳೆದುಕೊಂಡು ಹೋದ ಘಟನೆ ನಗರದಲ್ಲಿ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮದ ಚಾಂದಿನಿ (17) (ಹೆಸರು ಬದಲಾಯಿಸಲಾಗಿದೆ) ಸ್ವೀಕಾರ ಕೇಂದ್ರದಿಂದ ತಪ್ಪಿಸಿಕೊಂಡು ಬಂದಿದ್ದ ಯುವತಿ. ಚಾಂದಿನಿಯ ತಂದೆ ಜಗದೀಶ್ ಆಕೆಯನ್ನು ಸಾಕಲಾಗದೆ ಏಳು ತಿಂಗಳ ಹಿಂದೆಯೇ ಸ್ವೀಕಾರ ಕೇಂದ್ರದಲ್ಲಿ ಬಿಟ್ಟು ಹೋಗಿದ್ದರು. ಕಾಣೆಯಾಗಿದ್ದ ಮಗಳು ಪತ್ತೆಯಾಗಿದ್ದರೂ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ಜಗದೀಶ್ ಹಿಂದೇಟು ಹಾಕಿದ್ದಾರೆ.

    ನಡೆದದ್ದು ಏನು?: ಚಾಂದಿನಿ, ಜಗದೀಶ್ ನ ಮೊದಲ ಪತ್ನಿಯ ಮಗಳು. ಚಾಂದಿನಿ ಚಿಕ್ಕವಳಿದ್ದಾಗ ತಾಯಿ ಮೃತಪಟ್ಟಿದ್ದಳು. ತಂದೆ ಜಗದೀಶ್ ಮತ್ತೊಂದು ಮದುವೆ ಆಗಿದ್ದಾರೆ. ಇದರಿಂದಾಗಿ ಚಾಂದಿನಿ ನಿಷ್ಕಾಳಜಿಗೆ ಒಳಗಾಗಿದ್ದು, ಮಲತಾಯಿ ಧೋರಣೆಗೆ ತುತ್ತಾದ ಅವಳನ್ನು ಜಗದೀಶ್ 9ನೇ ತರಗತಿಯಲ್ಲಿಯೇ ಬೆಂಗಳೂರಿನ ಬಾಲ ಮಂದಿರಕ್ಕೆ ಸೇರಿಸಿದ್ದರು. ಅಲ್ಲಿ ದೈಹಿಕ ಹಿಂಸೆ ನೀಡುತ್ತಿದ್ದರು ಅಂತಾ ಚಾಂದಿನಿ ತಪ್ಪಿಸಿಕೊಂಡು, ಪುನಃ ಮನೆಗೆ ಬಂದಿದ್ದಾಳೆ.

    ಮನೆಯಲ್ಲಿಯೇ ಇದ್ದು ವ್ಯಾಸಂಗ ಮಾಡುತ್ತಿದ್ದ ಚಾಂದಿನಿ ಜಗದೀಶ್ ನನ್ನು ದ್ವೇಷಿಸಲು ಪ್ರಾರಂಭಿಸಿದ್ದಳು. ನಿತ್ಯವೂ ಮಲತಾಯಿ ಜೊತೆಗೆ ಜಗಳವಾಡುತ್ತಿದ್ದಳು. ಅಷ್ಟೇ ಅಲ್ಲದೆ ಮನೆ ಬಿಟ್ಟು ಸುಮಾರು ದಿನ ಸ್ನೇಹಿತೆಯರ ಮನೆಯಲ್ಲಿ ತಂಗುತ್ತಿದ್ದಳು. ಇದರಿಂದ ಬೇಸತ್ತ ದಂಪತಿ ಆಕೆಗೆ ಮಾನಸಿಕ ಕಾಯಿಲೆಯಿದೆ, ನಮ್ಮಿಂದ ಸಾಕಲು ಆಗುವುದಿಲ್ಲವೆಂದು ಕಾರವಾರದ ಸ್ವೀಕಾರ ಕೇಂದ್ರಕ್ಕೆ ತಂದು ಬಿಟ್ಟಿದ್ದರು. ಪಿಯುಸಿ ಪೂರ್ಣಗೊಳಿಸಿದ್ದು, ಮನೆಯಲ್ಲಿ ಇರುವ ಇಚ್ಛೆಯನ್ನು ತಂದೆಗೆ ಹೇಳಿದ್ದರೂ, ಜಗದೀಶ್ ಆಕೆಯನ್ನು ಮನೆಗೆ ಕರೆದುಕೊಂಡೊಯ್ಯಲು ಒಪ್ಪುತ್ತಿರಲಿಲ್ಲ. ಹೀಗಾಗಿ ಮೂರು ದಿನಗಳ ಹಿಂದೆ ಆಕೆ ಸ್ವೀಕಾರ ಕೇಂದ್ರದಿಂದ ತಪ್ಪಿಸಿಕೊಂಡು ಹೋಗಿದ್ದಾಳೆ.

    ಚಾಂದಿನಿ ಕಾಣೆಯಾಗಿರುವ ಕುರಿತು ತಂದೆ ಜಗದೀಶ್ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬುಧವಾರ ರಾತ್ರಿ ಕಾರವಾರದ ಎಂ.ಜಿ.ರೋಡ್‍ನಲ್ಲಿ ಚಾಂದಿನಿ ಪತ್ತೆಯಾಗಿದ್ದಾಳೆ. ಸ್ಥಳಕ್ಕೆ ಬಂದ ಸ್ವೀಕಾರ ಕೇಂದ್ರದ ಅಧಿಕಾರಿಗಳು, ಮಲ್ಲಾಪುರ ಪೊಲೀಸರು ಹಾಗೂ ಜಗದೀಶ್ ಚಾಂದಿನಿಯನ್ನು ಸ್ವೀಕಾರ ಕೇಂದ್ರಕ್ಕೆ ಕರೆದೊಯ್ಯಲು ಮುಂದಾಗಿದ್ದಾರೆ. ಈ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಚಾಂದಿನಿ ಚರಂಡಿಯಲ್ಲಿ ಅರ್ಧ ಗಂಟೆ ಬಚ್ಚಿಟ್ಟುಕೊಂಡಿದ್ದಳು. ಅವಳ ಮನವೊಲಿಕೆಗಾಗಿ ಪೊಲೀಸರು ನಾವು ನಿನ್ನನ್ನು ಸ್ವೀಕಾರ ಕೇಂದ್ರಕ್ಕೆ ಕಳುಹಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಜಗದೀಶ್ ಮಾತ್ರ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ಸಿದ್ಧರಿರಲಿಲ್ಲ. ಯುವತಿಯ ಪ್ರತಿರೋಧದ ನಡುವೆಯೇ ಮಳೆಯನ್ನು ಲೆಕ್ಕಿಸದೇ ಸ್ವೀಕಾರ ಕೇಂದ್ರದ ಮಹಿಳಾ ಅಧಿಕಾರಿ ಹಾಗೂ ಮಹಿಳಾ ಪೊಲೀಸ್ ಅಮಾನವೀಯವಾಗಿ ಎಳೆದು ಆಟೋದಲ್ಲಿ ಸ್ವೀಕಾರ ಕೇಂದ್ರಕ್ಕೆ ಬಿಟ್ಟಿದ್ದಾರೆ. ಈ ದೃಶ್ಯವನ್ನು ಕಂಡ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.