Tag: Sterlite

  • ತೂತುಕುಡಿ  ಸ್ಟರ್ಲೈಟ್  ತಾಮ್ರ ಘಟಕ ಮುಚ್ಚುವಂತೆ ತಮಿಳುನಾಡು ಸರ್ಕಾರದಿಂದ ಆದೇಶ

    ತೂತುಕುಡಿ ಸ್ಟರ್ಲೈಟ್ ತಾಮ್ರ ಘಟಕ ಮುಚ್ಚುವಂತೆ ತಮಿಳುನಾಡು ಸರ್ಕಾರದಿಂದ ಆದೇಶ

    ಚೆನ್ನೈ: ಸಾಕಷ್ಟು ಪ್ರತಿಭಟನೆ ಗೋಲಿಬಾರ್ ನಂತರ ತೂತುಕುಡಿ ಸ್ಟರ್ಲೈಟ್ ತಾಮ್ರ ಘಟಕವನ್ನು ಮುಚ್ಚುವಂತೆ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ.

    ಕಳೆದ ಕೆಲವು ತಿಂಗಳಿನಿಂದ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪೊಲೀಸರ ಗೋಲಿಬಾರ್ ನಿಂದ 13 ಜನ ಸಾವಿಗೀಡಾಗಿದ್ದರು. ಇದರ ಬೆನ್ನಲ್ಲೆ ಜನತೆಯ ಆಗ್ರಹದಂತೆ ವೇದಾಂತ ಸಮೂಹ ಸಂಸ್ಥೆಗೆ ಸೇರಿರುವ ಸ್ಟರ್ಲೈಟ್ ತಾಮ್ರ ಘಟಕವನ್ನು ಸಂಪೂರ್ಣವಾಗಿ ಮುಚ್ಚುವಂತೆ ತಮಿಳುನಾಡು ಉಪ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಧೃಢವಾದ ನಿರ್ಧಾರ ತೆಗೆದುಕೊಂಡಿದ್ದಾರೆ.

    ತೂತುಕುಡಿ ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟ ಅವರು ಮೇ 22 ರ ಪೊಲೀಸ್ ಕಾರ್ಯಾಚರಣೆ ವೇಳೆ ಗಾಯಗೊಂಡಿರುವವರ ಆರೋಗ್ಯ ವಿಚಾರಿಸಿದರು. ನಂತರ ಮಾತನಾಡಿದ ಅವರು ಅಮ್ಮ ಸರ್ಕಾರ ಘಟಕವನ್ನು ಮುಚ್ಚಿಸುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ:ತಾಮ್ರದ ಕುಲುಮೆ ಘಟಕ ಮುಚ್ಚುವಂತೆ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಗೋಲಿಬಾರ್: 9 ಸಾವು

    ಪೊಲೀಸ್ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರನ್ನು ನೆನೆದು ಅವರುಗಳ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಸಾಂತ್ವಾನವನ್ನು ಹೇಳಿದರು. 2013ರಲ್ಲಿ ಮಾಜಿ ಸಿಎಂ ಜೆ ಜಯಲಲಿತಾ ಘಟಕ ಮುಚ್ಚಿಸಿದ್ದನ್ನು ನೆನಪಿಸಿದರು.

    ಕೇಂದ್ರ ಹಸಿರು ಪೀಠದಿಂದ ಸ್ಟರ್ಲೈಟ್ ಕಂಪೆನಿ ಘಟಕವನ್ನು ನಡೆಸಲು ಅನುಮತಿ ತಂದಿದೆ. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮಾಡಿರುವ ದೂರಿನ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ಬಾಕಿ ಇದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಂಪೆನಿಯ ಪರವಾನಗಿಯನ್ನು ನವೀಕರಿಸುವುದಿಲ್ಲ ಹಾಗಾಗಿ ಘಟಕವನ್ನು ನಡೆಸಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

     

     

     

  • ತಾಮ್ರದ ಕುಲುಮೆ ಘಟಕ ಮುಚ್ಚುವಂತೆ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಗೋಲಿಬಾರ್: 9 ಸಾವು

    ತಾಮ್ರದ ಕುಲುಮೆ ಘಟಕ ಮುಚ್ಚುವಂತೆ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಗೋಲಿಬಾರ್: 9 ಸಾವು

    ಚೆನೈ: ಸ್ಟೆರ್‍ಲೈಟ್ ತಾಮ್ರದ ಕುಲುಮೆ ಘಟಕ ಮುಚ್ಚುವಂತೆ ತಮಿಳುನಾಡಿನ ಟ್ಯುಟಿಕಾರಿನ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರ ಗೋಲಿಬಾರ್ ನಿಂದಾಗಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.

    ಸುಮಾರು 20 ಸಾವಿರ ಜನರು ಜಿಲ್ಲಾಧಿಕಾರಿ ಕಚೇರಿ ಬಳಿ ಜನರು ಪ್ರತಿಭಟನೆಗೆ ಇಳಿದಿದ್ದರು. ಸ್ಟೆರ್‍ಲೈಟ್ ಕಂಪೆನಿಯನ್ನು ಮುಚ್ಚಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದರು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದರಿಂದ ಪೊಲೀಸರಿಗೆ ಗೋಲಿಬಾರ್ ಮಾಡದೆ ಬೇರೆ ದಾರಿ ಇರಲಿಲ್ಲ ಎಂದು ಸಚಿವ ಜಯಕುಮಾರ್ ಹೇಳಿದ್ದಾರೆ.

    ಸ್ಥಳೀಯರು ಕಳೆದ ಮೂರು ತಿಂಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರದ ಗಮನಕ್ಕೆ ಸುಮಾರು ಬಾರಿ ತಂದರೂ ಗಂಭೀರವಾಗಿ ಪರಿಗಣಿಸಿಲ್ಲ. ಕಂಪೆನಿಯ 25 ವರ್ಷಗಳ ಪರವಾನಗಿ ಮುಗಿಯುವ ಹಂತದಲ್ಲಿದ್ದು, ನವೀಕರಣಕ್ಕೆ ಸರ್ಕಾರವನ್ನು ಒತ್ತಾಯಿಸುತ್ತಿದೆ ಎಂದು ತಿಳಿದ ಪ್ರತಿಭಟನಾಕಾರರು ಪ್ರತಿಭಟನೆಯ ತೀವ್ರತೆಯನ್ನು ಹೆಚ್ಚಿಸಿದ್ದಾರೆ. ಉದ್ರೇಕಗೊಂಡ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಒಳಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.

    ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಮಾತನಾಡಿ, ಕೆಲವು ತಿಂಗಳಿನಿಂದ ಸ್ಟೆರ್‍ಲೈಟ್ ಕಂಪೆನಿಯನ್ನು ಮುಚ್ಚಿಸುವಂತೆ ಜನರು ಪ್ರತಿಭಟನೆ ಮಾಡುತ್ತಿದ್ದಾರೆ. ಎಐಎಡಿಎಂಕೆ ಆಡಳಿತಾರೂಢ ಸರ್ಕಾರ ಜನರ ಅಹವಾಲನ್ನು ಪೂರೈಸುವಲ್ಲಿ ನಿರ್ಲಕ್ಷ ವಹಿಸಿದೆ. ಘಟಕವನ್ನು ಮುಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

    ಈ ಹಿಂದೆ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸದ್ದ ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಮಾತನಾಡಿ, ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸಾರ್ವಜನಿಕರು ಕ್ರಿಮಿನಲ್ ಗಳಲ್ಲ. ಇದು ಸರ್ಕಾರದ ನಿರ್ಲಕ್ಷ. ಶಾಂತಿಯುತ ಪ್ರತಿಭಟನೆಗೆ ಸರ್ಕಾರ ಬೆಲೆ ಕೊಡಲಿಲ್ಲ ಅಂತಾ ವಾಗ್ದಾಳಿ ನಡೆಸಿದ್ದಾರೆ.

    2013ರಲ್ಲಿ ನೂರಾರು ಜನ ಉಸಿರಾಟದ ತೊಂದರೆಗೀಡಾಗಿದ್ದರು. ಅನಿಲ ಸೋರಿಕೆಯಿಂದ ಬಹಳಷ್ಟು ಮಂದಿ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳಿಂದ ಬಳಲಿದ್ದಾರೆ. ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಕಂಪೆನಿ ಪಾಲಿಸುತ್ತಿಲ್ಲ ಹಾಗಾಗಿ ಘಟಕವನ್ನು ಮುಚ್ಚುವಂತೆ ಜನರು ಆಗ್ರಹಿಸಿದ್ದರು.

    ಇದೇ ವರ್ಷ ಎಂಡಿಎಂಕೆ ಮುಖ್ಯಸ್ಥ ವೈಕೋ, ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಿಸಿದರು. ಮಾಲಿನ್ಯ ನಿಯಂತ್ರಣದ ನಿಯಮಗಳನ್ನು ಕಂಪೆನಿ ಪಾಲಿಸದೆ ಹಲವಾರು ವರ್ಷಗಳಿಂದ ಪರಿಸರವನ್ನು ಹಾಳುಮಾಡಿರುವುದಕ್ಕೆ 100 ಕೋಟಿ ದಂಡವನ್ನು ಕೋರ್ಟ್ ವಿಧಿಸಿತು. ಆ ಸಮಯದಲ್ಲಿ ವೇದಾಂತ ಸಂಸ್ಥೆಗಳ ಅಡಿಯಲ್ಲಿ ಸ್ಟೆರ್‍ಲೈಟ್ ನಡೆಯುತ್ತಿತ್ತು. ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಪಾಲಿಸುತ್ತಿದ್ದೇವೆ ಎಂದು ಕಂಪೆನಿ ವಾದಿಸಿತ್ತು.

    1996ರಲ್ಲಿ ಸ್ಟೆರ್‍ಲೈಟ್ ಕಾರ್ಯವನ್ನು ಆರಂಭಿಸಿದೆ. 1000 ಪೂರ್ಣ ಪ್ರಮಾಣದ ನೌಕರರನ್ನು, 2000 ಗುತ್ತಿಗೆ ನೌಕರರನ್ನು ಹೊಂದಿದೆ. 25 ಸಾವಿರ ಪರೋಕ್ಷ ಉದ್ಯೋಗವನ್ನು ಸೃಷ್ಟಿಸಿದೆ.