Tag: Stock Exchange

  • Infosys ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ

    Infosys ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ

    ನವದೆಹಲಿ: 22 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದ ಮೋಹಿತ್ ಜೋಶಿ (Mohit Joshi) ಇನ್ಫೋಸಿಸ್ (Infosys) ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಜೋಶಿ ಮುಂದಿನ ಡಿಸೆಂಬರ್ 20 ರಿಂದ ಟೆಕ್ ಮಹೀಂದ್ರಾ (Tech Mahindra) ಕಂಪನಿಯ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ 22 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಇನ್ಫೋಸಿಸ್ ಸಂಸ್ಥೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿ ಹೇಳಿದೆ.

    ಮೋಹಿತ್ ಜೋಶಿ ಟೆಕ್ ಮಹೀಂದ್ರಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಕಂಪನಿಗಳ ಕಾಯಿದೆ 2013ರ ಅಡಿಯಲ್ಲಿ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿಯಾಗಿ 5 ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ. 2023ರ ಡಿಸೆಂಬರ್ 20 ರಿಂದ ಜಾರಿಗೆ ಬರುವಂತೆ 2028ರ ಡಿಸೆಂಬರ್ 19 ರವರೆಗೆ ನೇಮಕ ಮಾಡಲಾಗಿದೆ’ ಎಂದು ಟೆಕ್ ಮಹೀಂದ್ರಾ ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಹಾಲಿ ಸಿಇಒ ಸಿ.ಪಿ ಗುರ್ನಾಸಿ ಅವರ ಅವಧಿ ಡಿಸೆಂಬರ್ 19ಕ್ಕೆ ಕೊನೆಗೊಳ್ಳಲಿದ್ದು, ನಂತರ ಜೋಶಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ಕೋವಿಡ್‌ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಬೆಲೆ ಭಾರೀ ಇಳಿಕೆ

    2000 ಇಸವಿಯಲ್ಲಿ ಇನ್ಫೋಸಿಸ್‌ಗೆ ಸೇರಿದ್ದ ಜೋಶಿ ನಂತರ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿ ತಮ್ಮ ಸಾಮರ್ಥ್ಯ ತೋರಿದ್ದರು. ಅಲ್ಲದೇ ಯುರೋಪ್‌ನಲ್ಲಿ ಹಣಕಾಸು ಸೇವೆಗಳ ವ್ಯವಹಾರ ಮುನ್ನಡೆಸುವ ಜವಾಬ್ದಾರಿ ಹೊಂದಿದ್ದರು. 2007ರಲ್ಲಿ ಇನ್ಫೋಸಿಸ್ ಮೆಕ್ಸಿಕೋದ ಸಿಇಒ ಆಗಿ ನೇಮಕಗೊಂಡಿದ್ದ ಜೋಶಿ, ಲ್ಯಾಟಿನ್ ಅಮೆರಿಕಾದಲ್ಲಿ ಮೊದಲ ಅಂಗಸಂಸ್ಥೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದನ್ನೂ ಓದಿ: ಚೀನಾದ ಟಿಕ್‌ಟಾಕ್ ಅನ್ನು 30 ದಿನದೊಳಗೆ ಡಿವೈಸ್‌ಗಳಿಂದ ಡಿಲೀಟ್ ಮಾಡಿ – ಸರ್ಕಾರಿ ನೌಕರರಿಗೆ ಯುಎಸ್ ಸೂಚನೆ

    ಇನ್ಫೋಸಿಸ್ ಸಂಸ್ಥೆಯೂ ಸಹ ಪ್ರತ್ಯೇಕವಾಗಿ ಹೇಳಿಕೆ ನೀಡಿದ್ದು, ಜೋಶಿ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 1 ರಿಂದ ಅವರು ರಜೆಯಲ್ಲಿರಲಿದ್ದಾರೆ. ಜೂನ್ 9ಕ್ಕೆ ಅವರು ಸಂಸ್ಥೆಯಿಂದ ಹೊರನಡೆಯಲಿದ್ದಾರೆ ಎಂದು ನಿರ್ದೇಶಕರ ಮಂಡಳಿ ತಿಳಿಸಿದೆ.

  • NSE ವಂಚನೆ ಪ್ರಕರಣ – ಮಾಜಿ CEO ಚಿತ್ರಾ ರಾಮಕೃಷ್ಣ ಬಂಧನ

    NSE ವಂಚನೆ ಪ್ರಕರಣ – ಮಾಜಿ CEO ಚಿತ್ರಾ ರಾಮಕೃಷ್ಣ ಬಂಧನ

    ನವದೆಹಲಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಷೇರುಪೇಟೆಯ(ಎನ್‍ಎಸ್‍ಇ)ಯ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಭಾನುವಾರ ಸಿಬಿಐ ಬಂಧಿಸಿದೆ.

    ಚಿತ್ರಾ ರಾಮಕೃಷ್ಣ ಅವರನ್ನು ನಿನ್ನೆ ದೆಹಲಿಯಲ್ಲಿ ಬಂಧಿಸಿ ನಂತರ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಯಿತು. ನಂತರ ಅವರನ್ನು ಸಿಬಿಐ ಕೇಂದ್ರ ಕಚೇರಿಯ ಲಾಕಪ್ ನಲ್ಲಿ ಇರಿಸಲಾಯಿತು.

    ಚಿತ್ರಾ ರಾಮಕೃಷ್ಣ ಅವರು 2013 ಮತ್ತು 2016ರ ನಡುವೆ ಎನ್‍ಎಸ್‍ಇಯ ಸಿಇಒ ಆಗಿ ಸೇವೆ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಶಾಮೀಲಾಗಿರುವ ಮಾಜಿ ಎನ್‍ಎಸ್‍ಇ ಉದ್ಯೋಗಿ ಆನಂದ್ ಸುಬ್ರಮಣ್ಯಂ ಅವರನ್ನು ಸಹ ಸಿಬಿಐ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧ – 14 ವರ್ಷದ ಬಳಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ

    ಚಿತ್ರಾ ರಾಮಕೃಷ್ಣ ಅವರು ಹಿಮಾಲಯದಲ್ಲಿ ವಾಸಿಸುವ ನಿಗೂಢ ಯೋಗಿಯೊಂದಿಗೆ ಇಮೇಲ್ ಮೂಲಕ ರಾಷ್ಟ್ರೀಯ ಸ್ಟಾಕ್ ಎಕ್ಸ್‍ಚೇಂಜ್ ಬಗ್ಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ. ಫೆಬ್ರವರಿ 25ರಂದು ಎನ್‍ಎಸ್‍ಇಯ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಅವರನ್ನು ಸಿಬಿಐ ಬಂಧಿಸಿತ್ತು.

    2010 ಮತ್ತು 2015 ರ ನಡುವೆ ಎನ್‍ಎಸ್‍ಇಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸೆಕ್ಯುರಿಟೀಸ್ ಅಂಡ್ ಎಕ್ಸ್‍ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ) ಆಂತರಿಕ ತನಿಖೆ ನಡೆಸಿತ್ತು. ಇದನ್ನೂ ಓದಿ: ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

    ಚಿತ್ರಾ ರಾಮಕೃಷ್ಣ ಅವರು 2014 ರಿಂದ 2016ರ ಅವಧಿಯಲ್ಲಿ ಇಮೇಲ್ ಮೂಲಕ ಪತ್ರವ್ಯವಹಾರ ಕುರಿತಂತೆ ಅಪರಿಚಿತ ವ್ಯಕ್ತಿಯೊಂದಿಗೆ ಎನ್‍ಎಸ್‍ಇಯ ಆಂತರಿಕ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದು, ಈ ಸಂಬಂಧ ಸಾಕ್ಷ್ಯಗಳು ಸಿಕ್ಕಿವೆ ಸೆಬಿ ತಿಳಿಸಿದೆ. ಚಿತ್ರಾ ರಾಮಕೃಷ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶನಿವಾರ ನ್ಯಾಯಾಲಯವು ತಿರಸ್ಕರಿಸಿತ್ತು.

  • ಪಾಕ್‌ ಷೇರು ಮಾರುಕಟ್ಟೆಯ ಮೇಲೆ ಉಗ್ರರ ದಾಳಿ – ವಿಡಿಯೋ

    ಪಾಕ್‌ ಷೇರು ಮಾರುಕಟ್ಟೆಯ ಮೇಲೆ ಉಗ್ರರ ದಾಳಿ – ವಿಡಿಯೋ

    – ನಾಲ್ವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ
    – ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಂಭೀರ ಗಾಯ

    ಇಸ್ಲಾಮಾಬಾದ್‌: ಪಾಕಿಸ್ತಾನದ ಕರಾಚಿಯಲ್ಲಿರುವ ಷೇರು ಮಾರುಕಟ್ಟೆಯ ಮೇಲೆ ಉಗ್ರರು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.

    ಕಾರಿನಲ್ಲಿ ಆಗಮಿಸಿದ ನಾಲ್ವರು ಉಗ್ರರು ಆರಂಭದಲ್ಲಿ ಮುಖ್ಯ ದ್ವಾರದಲ್ಲಿ ಗ್ರೆನೇಡ್‌ ಎಸೆದು ಒಳ ಪ್ರವೇಶಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

    https://twitter.com/RT_com/status/1277485379998932994

    ಕೂಡಲೇ ಭದ್ರತಾ ಸಿಬ್ಬಂದಿ ಕಟ್ಟಡವನ್ನು ಸುತ್ತುವರಿದು ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಮೃತ ಉಗ್ರರಿಂದ ಆಯುಧ ಮತ್ತು ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ ಯಾವುದೇ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.

    ಕಳೆದ ವಾರ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಂಸತ್‍ನಲ್ಲೇ ಅಮೆರಿಕ ಸೈನಿಕರು ಹತ್ಯೆ ಮಾಡಿದ ಅಲ್ ಖೈದಾ ಮುಖ್ಯಸ್ಥ, ಉಗ್ರ ಒಸಾಮಾ ಬಿನ್ ಲಾಡೆನ್‍ಗೆ ಹುತಾತ್ಮ ಪಟ್ಟವನ್ನು ನೀಡಿ ಗೌರವಿಸಿದ್ದರು. ಈ ಹೇಳಿಕೆ ನೀಡಿದ ಐದು ದಿನದ ಒಳಗಡೆ ಈ ದಾಳಿ ನಡೆದಿದೆ. ಉಗ್ರರನ್ನು ಪೋಷಣೆ ಮಾಡಿದ್ದಕ್ಕೆ ಈಗ ಉಗ್ರರೇ ಪಾಕ್‌ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

    https://twitter.com/RT_com/status/1277492471900094464

    ಯಾವುದೇ ಮಾಹಿತಿ ನೀಡದೆ ಅಮೆರಿಕ ಸೈನಿಕರು ಪಾಕಿಸ್ತಾನಕ್ಕೆ ನುಗ್ಗಿ ಒಸಾಮಾ ಬಿನ್ ಲಾಡೆನ್‍ನನ್ನು ಹತ್ಯೆ ಮಾಡಿದರು. ಬಳಿಕ ವಿಶ್ವದ ಪ್ರತಿಯೊಬ್ಬರೂ ಪಾಕಿಸ್ತಾನವನ್ನು ನಿಂದಿಸಲು ಪ್ರಾರಂಭಿಸಿದರು. ಈ ಮೂಲಕ ಮುಜುಗರಕ್ಕೀಡು ಮಾಡಿದರು ಎಂದು ಇಮ್ರಾನ್‌ ಖಾನ್‌ ದೂರಿದ್ದರು.

    ಭಯೋತ್ಪಾದನೆ ವಿರುದ್ಧ ಯುಎಸ್ ನಡೆಸಿದ ಯುದ್ಧದಲ್ಲಿ 70 ಸಾವಿರ ಪಾಕಿಸ್ತಾನಿಗಳು ಸಾವನ್ನಪ್ಪಿದರು ಎಂದು ಖಾನ್ ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಒಸಾಮಾ ಬಿನ್ ಲಾಡೆನ್ ಹುತಾತ್ಮನೇ ಎಂದು ಜನ ಪ್ರಶ್ನಿಸುತ್ತಿದ್ದಾರೆ.