Tag: Stone Pelt

  • ಮನೆಗೆ ಕಲ್ಲು ತೂರಿ ಕಾಲ್ಕಿತ್ತ ಸ್ನೇಹಿತರು!

    ಮನೆಗೆ ಕಲ್ಲು ತೂರಿ ಕಾಲ್ಕಿತ್ತ ಸ್ನೇಹಿತರು!

    – ಸಿಸಿಟಿವಿಯಲ್ಲಿ ವಿಡಿಯೋ ಸೆರೆ

    ಮಡಿಕೇರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ರವೀಂದ್ರ ಎಂಬವರ ಮನೆಯ ಕಿಟಕಿ ಗಾಜುಗಳನ್ನು ಪುಡಿ ಮಾಡಿ ದುಷ್ಕರ್ಮಿಗಳು ಕಾಲ್ಕಿತ್ತಿರುವ ಘಟನೆ ಮಡಿಕೇರಿ ನಗರದ ಪುಟಾಣಿ ನಗರದಲ್ಲಿ ರಾತ್ರಿ ನಡೆದಿದೆ.

    ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ರವೀಂದ್ರರ ಮಗ ಕೀರ್ತನ್ ಸ್ನೇಹಿತರಾದ ಯಶವಂತ್ ಎಂಬಾತನನ್ನು ಮಡಿಕೇರಿ ನಗರ ಪೋಲಿಸ್ ಠಾಣೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

    ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಇಬ್ಬರು ರವೀಂದ್ರ ಅವರ ಮನೆಗೆ ಕಲ್ಲುಗಳನ್ನು ತೂರಿ ಸ್ಥಳದಿಂದ ಓಡಿದ್ದಾರೆ. ರೂಮ್‍ನಲ್ಲಿ ಮಲಗಿದ್ದ ರವೀಂದ್ರರ ಮಗ ಕೀರ್ತನ್ ಮೇಲೆ ಗಾಜುಗಳು ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

    ವ್ಯಾನ್ ಚಾಲಕ ವೃತ್ತಿ ನಿರ್ವಹಿಸುತ್ತಿರುವ ರವೀಂದ್ರ ಅವರ ಮಗ ಕೀರ್ತನ್ ಮೇಲೆ ಸ್ನೇಹಿತರು ಸಾಕಷ್ಟು ಬಾರಿ ಹಲ್ಲೆ ನಡೆಸಿದ್ದರು ಎನ್ನುವ ಆರೋಪಗಳು ಕೇಳಿ ಬಂದಿವೆ.

    ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 2 ತಿಂಗಳಲ್ಲಿ 3ನೇ ಬಾರಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಲ್ಲೆಸೆತ!

    2 ತಿಂಗಳಲ್ಲಿ 3ನೇ ಬಾರಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಲ್ಲೆಸೆತ!

    ನವದೆಹಲಿ: ಮೇಕ್ ಇನ್ ಇಂಡಿಯಾ ಯೋಜನೆ ಅಡಿ ತಯಾರಿಸಲಾಗಿದ್ದ ದೇಶದ ಮೊದಲ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್‍ಗೆ 2 ತಿಂಗಳಲ್ಲಿ 3ನೇ ಬಾರಿಗೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ.

    ರೈಲು ಅಧಿಕೃತ ಓಡಾಟ ಆರಂಭಿಸಿದ ಕೆಲವೇ ದಿನಗಳಲ್ಲಿ ಮತ್ತೆ ಕಲ್ಲು ಎಸೆಯಲಾಗಿದ್ದು, ಇಂದು ತುಂಡ್ಲಾ ಜಂಕ್ಷನ್ ಬಳಿ ಕಲ್ಲು ತೂರಾಟ ನಡೆದಿದೆ. ಪರಿಣಾಮ ರೈಲಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ರೈಲು ಪರೀಕ್ಷಾರ್ಥ ಓಡಾಟ ಆರಂಭ ನಡೆಸಿದ ಸಂದರ್ಭದಲ್ಲಿ 2 ಬಾರಿ ಕಲ್ಲೆಸೆದು ಹಾನಿ ಮಾಡಲಾಗಿತ್ತು.

    ಫೆಬ್ರವರಿ ಮೊದಲ ವಾರದಲ್ಲಿ ಅಲಹಾಬಾದ್ ಪರೀಕ್ಷಾರ್ಥ ಓಡಾಟಕ್ಕಾಗಿ ಶಾಕೂರ್ ಬಸ್ತಿಯಿಂದ ದೆಹಲಿಗೆ ರೈಲು ಆಗಮಿಸುತ್ತಿದ್ದಾಗ ದೆಹಲಿಯ ಲಹೋರಿ ಗೇಟ್ ಬಳಿ ದುಷ್ಕರ್ಮಿಗಳು ಕಲ್ಲು ಎಸೆದಿದ್ದರು. ಎರಡನೇ ಬೋಗಿಗೆ ಕಲ್ಲು ಎಸೆದ ಪರಿಣಾಮ ಕಿಟಕಿಯ ಗ್ಲಾಸ್ ಒಡೆದು ಹೋಗಿತ್ತು. ಈ ಘಟನೆಯಲ್ಲಿ ಯಾರೂ ಗಾಯಗೊಳ್ಳದ ಕಾರಣ ದೂರು ದಾಖಲಿಸಿಕೊಂಡಿರಲಿಲ್ಲ. ಕಳೆದ ಡಿಸೆಂಬರ್ ನಲ್ಲಿ ದೆಹಲಿ ಮತ್ತು ಆಗ್ರಾ ನಡುವಿನ ಪರೀಕ್ಷಾರ್ಥ ಓಡಾಟದ ಸಮಯದಲ್ಲೂ ಕಲ್ಲು ತೂರಾಟ ನಡೆದಿತ್ತು.

    ಪುಲ್ವಾಮಾ ಭಯೋತ್ಪಾದಕರ ದಾಳಿ ನಡೆದ ಮರುದಿನ ಪ್ರಧಾನಿ ನರೇಂದ್ರ ಮೋದಿ ಅವರು ಫೆ.15 ರಂದು ರೈಲಿಗೆ ಹಸಿರು ನಿಶಾನೆ ತೋರಿದ್ದರು. ಫೆ. 17 ರಿಂದ ರೈಲಿನ ವಾಣಿಜ್ಯ ಓಡಾಟ ಆರಂಭವಾಗಿತ್ತು. ಸಂಚಾರ ಆರಂಭಿಸಿದ ಮೊದಲ ದಿನವೇ 2 ವಾರಗಳ ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿತ್ತು. ಈ ಕುರಿತು ಸಚಿವ ಪಿಯೂಷ್ ಗೋಯಲ್ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

    ದೆಹಲಿ ಮತ್ತು ವಾರಣಾಸಿ ಮಧ್ಯೆ ಈ ರೈಲು ಸಂಚರಿಸುತ್ತಿದೆ. 850 ಕಿ.ಮೀ ದೂರದ ಪ್ರಯಾಣಕ್ಕೆ ಈ ಮೊದಲು 14 ಗಂಟೆ ಬೇಕಿದ್ದರೆ ಈ ರೈಲಿನಲ್ಲಿ ಕೇವಲ 8 ಗಂಟೆಯಲ್ಲಿ ಕ್ರಮಿಸಬಹುದು. ಸೋಮವಾರ ಮತ್ತು ಗುರುವಾರ ಹೊರತುಪಡಿಸಿ ವಾರದ 5 ದಿನ ಈ ರೈಲು ಸಂಚರಿಸುತ್ತದೆ.

    ರೈಲಿನ ವಿಶೇಷತೆ ಏನು?
    ಭಾರತೀಯ ರೈಲ್ವೇ ವ್ಯವಸ್ಥೆ ಹಳೆ ಕಾಲದ್ದು ಎನ್ನುವ ಟೀಕೆಗೆ ಉತ್ತರ ಎನ್ನುವಂತೆ ಚೆನ್ನೈ ಮೂಲದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ(ಐಸಿಎಫ್) ಟಿ-18 ರೈಲನ್ನು ಅಭಿವೃದ್ಧಿ ಪಡಿಸಿದೆ. ವಿದೇಶಿ ರೈಲುಗಳಲ್ಲಿ ಇರುವಂತೆ ಇದು ಸಂಪೂರ್ಣ ಹವಾ ನಿಯಂತ್ರಣ ಹಾಗೂ ಸಿಸಿಟಿವಿ ವ್ಯವಸ್ಥೆ ಹೊಂದಿದೆ. ರೈಲಿನಲ್ಲಿ 78 ಆಸನಗಳ ಸಾಮಾನ್ಯ ಬೋಗಿಗಳಿದ್ದರೆ, ಮಧ್ಯದಲ್ಲಿ ತಲಾ 52 ಆಸನಗಳ ಎರಡು ಎಕ್ಸಿಕ್ಯುಟಿವ್ ಬೋಗಿಯನ್ನು ನೀಡಲಾಗಿದೆ.

    2018 ರಲ್ಲಿ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ಈ ರೈಲುಗಳಿಗೆ `ಟ್ರೈನ್ 18′ ಎಂದು ಆರಂಭದಲ್ಲಿ ಹೆಸರಿಡಲಾಗಿತ್ತು. ಈಗಿನ ರೈಲುಗಳಂತೆ ಈ ರೈಲು ಪ್ರತ್ಯೇಕ ಎಂಜಿನ್ ಹೊಂದಿರುವುದಿಲ್ಲ. ಬದಲಿಗೆ ಮೆಟ್ರೋ ರೈಲುಗಳಂತೆ ವಿದ್ಯುತ್ ಶಕ್ತಿ ಪ್ರತಿ ಚಕ್ರಕ್ಕೂ ಮೋಟಾರುಗಳ (ಟ್ರಾಕ್ಷನ್ ಮೋಟಾರ್) ಮೂಲಕ ವರ್ಗಾವಣೆಯಾಗುತ್ತದೆ. ಇದನ್ನು ವಿಮಾನದಲ್ಲಿರುವಂತೆ ಕಾಕ್‍ಪಿಟ್‍ನಲ್ಲಿ ನಿಯಂತ್ರಿಸಲಾಗುತ್ತದೆ. ಇದರಿಂದಾಗಿ ವೇಗವಾಗಿ ರೈಲು ಸಂಚರಿಸುತ್ತದೆ.

    https://twitter.com/shubhranshuu/status/1098190472005148674

    ಅಲ್ಯುಮೀನಿಯಂ ಬಾಡಿ ಇರುವ ಕಾರಣ ಕಡಿಮೆ ಭಾರ ಹೊಂದಿದ್ದರಿಂದ ಹೆಚ್ಚಿನ ವೇಗದಲ್ಲಿ ಹೋಗುತ್ತದೆ. ಇದು ಸೆಮಿ ಹೈ ಸ್ಪೀಡ್ ರೈಲಾಗಿರುವ ಕಾರಣ ಗಂಟೆಗೆ 220 ಕಿ.ಮೀ. ವೇಗದವರೆಗೆ ಸಂಚರಿಸುವ ಸಾಮಥ್ರ್ಯವನ್ನು ಪಡೆದಿದೆ. ವಿದೇಶದ ರೈಲುಗಳಲ್ಲಿರುವಂತೆ ವೈಫೈ ಸೌಲಭ್ಯ, ಜಿಪಿಎಸ್ ಆಧರಿತ ಮಾಹಿತಿ ವ್ಯವಸ್ಥೆ, ತಿರುಗಿಸಬಹುದಾದ ಸೀಟುಗಳು, ಚಾರ್ಜರ್ ವ್ಯವಸ್ಥೆ, ವೃದ್ಧರಿಗೆ, ಅಂಗವಿಕಲರಿಗೆ ಅನುಕೂಲವಾಗುವಂತೆ ಮಡಚುವ ಮೆಟ್ಟಿಲುಗಳು ಈ ರೈಲಿನಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಿತ್ರದುರ್ಗದಲ್ಲಿ ಇಂದಿರಾ ಕ್ಯಾಂಟೀನ್‍ಗೆ ಕಲ್ಲು – ಧಾರವಾಡದಲ್ಲಿ ಬಸ್ ಮೇಲೆ ಕಲ್ಲು ತೂರಾಟ

    ಚಿತ್ರದುರ್ಗದಲ್ಲಿ ಇಂದಿರಾ ಕ್ಯಾಂಟೀನ್‍ಗೆ ಕಲ್ಲು – ಧಾರವಾಡದಲ್ಲಿ ಬಸ್ ಮೇಲೆ ಕಲ್ಲು ತೂರಾಟ

    – ದಾವಣಗೆರೆಯಲ್ಲಿ ಪೊಲೀಸರ ಜೊತೆ ಬಿಜೆಪಿ ಜಟಾಪಟಿ

    ಚಿತ್ರದುರ್ಗ/ ಧಾರವಾಡ / ದಾವಣಗೆರೆ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರದ 24 ಗಂಟೆಯೊಳಗೆ ಸಾಲಮನ್ನಾ ಮಾಡ್ತೀನಿ ಅಂತಾ ಹೇಳಿ ಈಗ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಇಂದು ಬಿಜೆಪಿ ಕರ್ನಾಟಕ ಬಂದ್‍ಗೆ ಕರೆ ನೀಡಿತ್ತು. ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವಡೆ ಕಲ್ಲು ತೂರಾಟ ಸಹ ನಡೆದಿದೆ.

    ಧಾರವಾಡದಲ್ಲಿ ಒತ್ತಾಯಪೂರ್ವಕವಾಗಿ ಬಿಜೆಪಿ ಕಾರ್ಯಕರ್ತರು ಬಂದ್ ಮಾಡಿಸಲು ಯತ್ನಿಸಿದ್ದಾರೆ. ಮೂರು ಬಸ್‍ಗಳ ಮೇಲೆ ಕಲ್ಲು ತೂರಿ ಗಾಜುಗಳನ್ನ ಪುಡಿ ಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲ, ಬಸ್‍ಗಾಗಿ ಕಾಯುತ್ತಾ ನಿಂತಿದ್ದ ಪ್ರಯಾಣಿಕರ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ಈ ವೇಳೆ ನಗರದ ಕೋರ್ಟ್ ವೃತ್ತದಲ್ಲಿ ಪ್ರಯಾಣಿಕರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

    ಕೋಟೆ ನಾಡು ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಜಕರ್ತರು ದಾಂಧಲೆ ನಡೆಸಿದ್ದಾರೆ. ಇಲ್ಲಿನ ಯೂನಿಯನ್ ಪಾರ್ಕ್ ನಲ್ಲಿರುವ ಇಂದಿರಾ ಕ್ಯಾಂಟೀನ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂಬಂಧ ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಿಜೆಪಿ ಕಾರ್ಯಕರ್ತರಾದ ಶಂಭು, ಮಂಜು, ರವಿ ಎಂಬವರನ್ನ ವಶಕ್ಕೆ ಪಡೆದಿದ್ದಾರೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಎಸ್ಪಿ ಶ್ರೀನಾಥ್ ಎಂ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ದಾವಣಗೆರೆಯಲ್ಲಿ ಸಹ ಒತ್ತಾಯಪೂರ್ವಕ ಬಂದ್ ಮಾಡಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಬಂದ್ ಮಾಡದಂತೆ ಸೂಚನೆ ನೀಡಿದ ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರು ಮುಗಿಬಿದ್ದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.