Tag: stone throwing

  • ಎಣ್ಣೆ ಏಟಲ್ಲಿ ದೇವಸ್ಥಾನದ ಮೇಲೆ ಕಲ್ಲು – ಕಂಬಕ್ಕೆ ಕಟ್ಟಿಹಾಕಿದ ಜನ

    ಎಣ್ಣೆ ಏಟಲ್ಲಿ ದೇವಸ್ಥಾನದ ಮೇಲೆ ಕಲ್ಲು – ಕಂಬಕ್ಕೆ ಕಟ್ಟಿಹಾಕಿದ ಜನ

    ಬೆಳಗಾವಿ: ಎಣ್ಣೆ ಏಟಲ್ಲಿ ವ್ಯಕ್ತಿಯೋರ್ವ ದೇವಸ್ಥಾನದ ಮೇಲೆ ಕಲ್ಲು ಎಸೆದಿರುವ ಘಟನೆ ಬೆಳಗಾವಿ (Belagavi) ನಗರದ ಪಾಂಗುಳ ಗಲ್ಲಿಯಲ್ಲಿ ಅಶ್ವತ್ಥಾಮ ದೇವಸ್ಥಾನದಲ್ಲಿ ನಡೆದಿದೆ.

    ಕಲ್ಲೆಸೆದ ವ್ಯಕ್ತಿಯನ್ನು ಉಜ್ವಲ್ ನಗರದ ನಿವಾಸಿ ಯಾಶೀರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಕಾಣೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ

    ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಯಾಶೀರ್‌ನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದರು. ಈ ವೇಳೆ ಸ್ಥಳೀಯರು ಆತನನ್ನು ಕಂಬಕ್ಕೆ ಕಟ್ಟಿ ಹಾಕಿ ಪ್ರಶ್ನೆ ಮಾಡಿದಾಗ ನನ್ನಿಂದ ತಪ್ಪಾಗಿದೆ. ಕ್ಷಮಿಸಿ ಬಿಡಿ ಎಂದು ಕೇಳಿಕೊಂಡಿದ್ದ. ಸ್ಥಳೀಯರು ಮತ್ತೆ ಪ್ರಶ್ನೆ ಮಾಡಿದಾಗ ಈ ಹಿಂದೆ ಕೆಲವರು ಬುರ್ಖಾ ಧರಿಸಿ ಡಾನ್ಸ್ ಮಾಡಿದ್ದರು ಎಂದು ಹೇಳಿದನು. ಇದನ್ನೂ ಓದಿ: ಪರೀಕ್ಷಾ ದಿನವೇ ಕರ್ನಾಟಕ ಬಂದ್‌ – ಆತಂಕದಲ್ಲಿ ವಿದ್ಯಾರ್ಥಿಗಳು, ಪೋಷಕರು

    ಭಾಷಾ ವೈಷಮ್ಯದಿಂದ ಆಗಾಗ ಸುದ್ದಿಯಲ್ಲಿರುವ ಬೆಳಗಾವಿ ಇಂತಹ ಕಿಡಿಗೇಡಿಗಳು ಮಾಡುವ ಕೃತ್ಯಗಳಿಂದ ಕೋಮು ವೈಷಮ್ಯದತ್ತ ವಾಲುತ್ತಿದೆಯಾ ಎನ್ನುವ ಪ್ರಶ್ನೆಗಳು ಉದ್ಭವವಾಗುತ್ತಿವೆ. ಯಾರೋ ಒಬ್ಬ ಕಿಡಿಗೇಡಿ ಬುರ್ಖಾ ಹಾಕಿಕೊಂಡು ಡಾನ್ಸ್ ಮಾಡಿದರೆ, ಮತ್ತೊಬ್ಬ ಕಿಡಿಗೇಡಿ ದೇವಸ್ಥಾನದ ಮೇಲೆ ಕಲ್ಲು ತೂರಿ ಎರಡೂ ಸಮಾಜಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಯುರೋಪ್‌ನಿಂದ ಹೆಚ್ಚಿನ ವಾಯು ರಕ್ಷಣೆ ಪಡೆಯಲು ಝೆಲೆನ್ಸ್ಕಿಗೆ ಟ್ರಂಪ್ ಸಹಾಯ: ಶ್ವೇತಭವನ ಮಾಹಿತಿ

    ಇಂತಹ ಕಿಡಿಗೇಡಿಗಳ ಕೃತ್ಯಗಳನ್ನು ಪ್ರಜ್ಞಾವಂತ ಸಮಾಜ ಸೂಕ್ಷ್ಮವಾಗಿ ಗಮನಿಸಬೇಕಿದೆ. ಅಲ್ಲದೆ ಪೊಲೀಸರು ಸಹ ಇಂತವರಿಗೆ ಬಿಸಿ ಮುಟ್ಟಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

  • Davanagere Violence | ಕಲ್ಲು ತೂರಾಟ – ಗಣೇಶ ಸಮಿತಿ 8 ಜನ ಸೇರಿ 18 ಮಂದಿಗೆ ನ್ಯಾಯಾಂಗ ಬಂಧನ

    Davanagere Violence | ಕಲ್ಲು ತೂರಾಟ – ಗಣೇಶ ಸಮಿತಿ 8 ಜನ ಸೇರಿ 18 ಮಂದಿಗೆ ನ್ಯಾಯಾಂಗ ಬಂಧನ

    ದಾವಣಗೆರೆ: ಜಿಲ್ಲೆಯ ಬೇತೂರು ರಸ್ತೆಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ (Davanagere Stone Pelting Case) ಸಂಬಂಧಿಸಿದಂತೆ 18 ಜನರಿಗೆ ನ್ಯಾಯಾಧೀಶರಾದ ಪ್ರಶಾಂತ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ ಸಮಿತಿಯ 8 ಜನ ಸೇರಿ ಎರಡು ಕೋಮಿನ ಒಟ್ಟು 18 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿ ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ದಾವಣಗೆರೆಯ ಎಂಸಿಸಿ ʻಎʼ ಬ್ಲಾಕ್‌ನಲ್ಲಿರುವ ನ್ಯಾಯಾಧೀಶರಾದ ಪ್ರಶಾಂತ್ ಅವರ ನಿವಾಸದಲ್ಲಿ ಆರೋಪಿಗಳನ್ನು ಹಾಜರುಪಡಿಸಿದ್ದರು. ಆರೋಪಿಗಳ ವಿಚಾರಣೆ ಬಳಿಕ 18 ಜನರಿಗೆ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿದರು.

    ಏನಿದು ಗಲಭೆ ಪ್ರಕರಣ?
    ದಾವಣಗೆರೆಯ ಮುದ್ದ ಬೋವಿ ಕಾಲೋನಿ ಹಾಗೂ ವೆಂಕಬೋವಿ ಕಾಲೋನಿಯ ಗಣೇಶ ಮೆರವಣಿಗೆ (Ganesh Procession) ನಡೆಯುವಾಗ ಕಲ್ಲು ತೂರಾಟ (Stone Pelting) ನಡೆದಿತ್ತು. ಘಟನೆಯಲ್ಲಿ ಪೊಲೀಸರೂ ಗಾಯಗೊಂಡಿದ್ದರು. ಕೂಡಲೇ ಮುಸ್ಲಿಂ ಮುಖಂಡರು ಪರಿಸ್ಥಿತಿಯನ್ನು ನಿಯಂತ್ರಣಗೊಳಿಸಿದ್ದರು. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿದ ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಕೂಡಲೇ ಪೊಲೀಸರು ಇಡೀ ನಗರದಲ್ಲಿ ಸಂಚಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ಶುಕ್ರವಾರ ಬೆಳಗ್ಗಿನ ವೇಳೆಗೆ ಘಟನೆಗೆ ಕಾರಣರಾದವರನ್ನ ಬಂಧಿಸಿದ್ದರು.

    ಕಲ್ಲು ತೂರಾಟಕ್ಕೆ ಕಾರಣ ಏನು?
    ಕಳೆದ ಎರಡು ದಿನಗಳ ಹಿಂದೆ ಹಿಂದೂ ಮುಖಂಡರು ನಾಗಮಂಗಲ ಕಲ್ಲುತೂರಾಟ ಪ್ರಕರಣ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ್ಯ ಸಂಚಾಲಕ ಸತೀಶ್ ಪೂಜಾರ್ ವಿವಾದಾತ್ಮಕ ಹೇಳಿಕೆ‌ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಮುಸ್ಲಿಂ ಮುಖಂಡನೊಬ್ಬ ತಾಕತ್ ಇದ್ದರೆ ಬೇತೂರು ರಸ್ತೆಗೆ ಬಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಗುರುವಾರ ಗಣೇಶ ಮೆರವಣಿಗೆಯಲ್ಲಿ ಸತೀಶ್ ಪೂಜಾರಿ ಭಾಗವಹಿಸಿದ್ದರು. ಮೆರವಣಿಗೆ ಸಾಗುವ ಅರಳಿಮರ ಸರ್ಕಲ್ ಬಳಿ ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಸೇರಿದ್ದರು. ಗಣೇಶನ ಮೆರವಣಿಗೆ ಹೋಗುತ್ತಿದ್ದಾಗ ಇಸ್ಲಾಂ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.

    ಈ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮುಸ್ಲಿಂ ಮುಖಂಡರೇ ಜನಸಂದಣಿಯನ್ನು ನಿಯಂತ್ರಣ ಮಾಡಿದ್ದಾರೆ. ನಂತರ ಕೆ ಅರ್ ರಸ್ತೆ ಹಂಸಭಾವಿ ಸರ್ಕಲ್ ನಲ್ಲಿ ಕಲ್ಲು ತೂರಾಟ ನಡೆದಿದೆ.

  • ದಾವಣಗೆರೆಯಲ್ಲಿ ಸದ್ಯಕ್ಕೆ ನಿಷೇಧಾಜ್ಞೆ ಅಗತ್ಯವಿಲ್ಲ – ಐಜಿಪಿ ರಮೇಶ್ ಬಾನೋತ್

    ದಾವಣಗೆರೆಯಲ್ಲಿ ಸದ್ಯಕ್ಕೆ ನಿಷೇಧಾಜ್ಞೆ ಅಗತ್ಯವಿಲ್ಲ – ಐಜಿಪಿ ರಮೇಶ್ ಬಾನೋತ್

    – ಪ್ರಚೋದನಾತ್ಮಕ ಆಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ

    ದಾವಣಗೆರೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟದಿಂದಾಗಿ ನಗರದಲ್ಲಿ ಆತಂಕ ಮನೆಮಾಡಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಈಗಾಗಲೇ ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಜಿಲ್ಲೆಯ ಪೂರ್ವವಲಯ ಐಜಿಪಿ ರಮೇಶ್ ಬಾನೋತ್ (IGP Ramesh Banoth) ಮಾತನಾಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ (ಸೆ.19)ರಂದು ಸಂಜೆ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ ನಡೆದಿದ್ದು, ದಾವಣಗೆರೆ ಎಸ್ಪಿ (Davanagere) ತಕ್ಷಣ ಸ್ಥಳಕ್ಕೆ ಧಾವಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಶಾಂತಿ, ಸೌಹಾರ್ದತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಪ್ರಕರಣ ಸಂಬಂಧ ಕಿಡಿಗೇಡಿಗಳನ್ನು ಪತ್ತೆಹಚ್ಚಿ 30 ಜನರ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಮನೆಗಳ ಮೇಲೆ ಕಲ್ಲು ತೂರಾಟ, ಸಾರ್ವಜನಿಕರ ಮೇಲೆ ಕಲ್ಲೆಸೆತ ಸೇರಿ ಒಟ್ಟು ಐದು ಕೇಸನ್ನು ದಾಖಲಿಸಲಾಗಿದೆ ಎಂದರು.ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಹೆಸರು ಹೇಳಿಕೊಂಡು ಸಲ್ಮಾನ್ ಖಾನ್ ತಂದೆಗೆ ಬೆದರಿಕೆ- ಇಬ್ಬರ ಬಂಧನ

    ನಗರದಲ್ಲಿ ಇದೀಗ ವಾತಾವರಣ ಸಾಮಾನ್ಯ ಸಹಜ ಸ್ಥಿತಿಗೆ ಮರಳಿದ್ದು, ಗಣೇಶ ವಿಸರ್ಜನೆ ಸಮಯದಲ್ಲಿ ಠಾಣೆಯ ನಾಲ್ಕು ಸಿಬ್ಬಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಸ್ಥಳೀಯರಲ್ಲಿ ಒಬ್ಬರಿಗೆ ಗಾಯವಾಗಿರುವ ದೂರು ಬಂದಿದ್ದು, ಪ್ರಕರಣ ದಾಖಲಾಗಿದೆ. ಬೇರೆಕಡೆಗಳಲ್ಲಿ ಭದ್ರತಾ ದೃಷ್ಟಿಯಿಂದ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದ್ದು, ಕಲ್ಲು ತೂರಾಟ ಮಾಡಿದವರ ಪತ್ತೆಗೆ ಕಾರ್ಯಾಚರಣೆ ಚುರುಕು ಮಾಡಲಾಗಿದೆ ಎಂದು ತಿಳಿಸಿದರು.

    ನಗರದಲ್ಲಿ ಶಾಂತಿಸಭೆ ನಡೆಸಲು ಸಿದ್ಧತೆ ನಡೆದಿದ್ದು, ಸಾಮಾಜಿಕ ಜಾಲಾಣತಾಣಗಳಲ್ಲಿ ಪ್ರಚೋದನಾತ್ಮಕ ಆಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ 144 ನಿಷೇಧಾಜ್ಞೆ ಅಗತ್ಯವಿಲ್ಲ. ಈ ಘಟನೆ ಬಳಿಕ ಎಲ್ಲರೂ ಸಹಕರಿಸಿ ಶಾಂತವಾಗಿ ಗಣೇಶ ವಿಸರ್ಜನೆ ಆಗಿದೆ. ಕೆಲ ಕಿಡಿಗೇಡಿಗಳ ಅರೆಸ್ಟ್ ಬಳಿಕ ಅಮಾಯಕರೆಂಬ ಹೇಳಿಕೆ ನೀಡುತ್ತಿದ್ದಾರೆ. ಆದರೆ ಪಕ್ಕ ಮಾಹಿತಿ ಮೇರೆಗೆ ಕಿಡಿಗೇಡಿಗಳನ್ನು ಗುರುತಿಸಿ ವಶಕ್ಕೆ ಪಡೆದಿದ್ದೇವೆ ಎಂದು ಹೇಳಿದರು.ಇದನ್ನೂ ಓದಿ: Mysuru Dasara: ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ

    ಬೀಯರ್ ಬಾಟಲಿ ಸಂಗ್ರಹ ವಿಚಾರ:
    ಖಾಲಿ ಬೀಯರ್ ಬಾಟಲಿ ಸಂಗ್ರಹಿಸಿದ್ದ ಹತ್ತು ಜನರನ್ನು ಬಂಧಿಸಲಾಗಿದೆ. ತಪ್ಪಿತಸ್ತರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳುಲಾಗುವುದು. ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಧಗಧಗ – ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡ!

    ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಧಗಧಗ – ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡ!

    ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣದಿಂದಾಗಿ ದಾವಣಗೆರೆ ನಗರ ಬೂದಿ ಮುಚ್ಚಿದ ಕೆಂಡದಂತಾಗಿದೆ. ದಾವಣಗೆರೆ ನಗರಾದಾದ್ಯಂತ ಭಯದ ವಾತಾವರಣಮನೆ ಮಾಡಿದ್ದು,ಕಲ್ಲು ತೂರಾಟ ನಡೆದ ಇಮಾಂನಗರದಲ್ಲಿ ರಸ್ತೆಯುದ್ದಕ್ಕು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್ ಪೊಲೀಸ್ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ರಾತ್ರಿಯಿಡೀ ನಿದ್ರೆಗಟ್ಟು ಗಸ್ತು ನಡೆಸಿವೆ. ಮತ್ತೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ದಾವಣಗೆರೆ ಎಸ್ಪಿ ಉಮಾ ಅವರು, ಪರಿಸ್ಥಿತಿ ಹತೋಟಿಗೆ ತರಲು ಮುಂದಾಗಿದ್ದಾರೆ.

    ಈ ಘಟನೆಯಿಂದಾಗಿ ಬೆಳ್ಳಂಬೆಳಿಗ್ಗೆ ಜನಜಂಗುಲಿಯಿಂದ ತುಂಬಿರ್ತಿದ್ದ ಇಮಾಂ ನಗರದ ಜನನಿಬಿಡ ರಸ್ತೆಗಳು ಖಾಲಿಖಾಲಿಯಾಗಿದ್ದು ಬಿಕೊ ಎನ್ನುತ್ತಿವೆ. ಇಲ್ಲಿರುವ ಮಸೀದಿ ಬಳಿ 10ಕ್ಕೂ ಹೆಚ್ಚು ಪೊಲೀಸ್ ವಾಹನಗಳನ್ನು ನಿಲ್ಲಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಬೆಳಗಿನ ಜಾವ 5 ಗಂಟೆಗೆ ವ್ಯಾಪಾರ ವಹಿವಾಟಿಗೆ ತೆರಳುತಿದ್ದ ಜನರು ತಡವಾಗಿ ಹೊರಬರ್ತಿದ್ದು, ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಚಿಕಿತ್ಸೆ ಪಡೆಯುತ್ತಿದ್ದ 27ರ ಒಡಿಶಾ ಗಾಯಕಿ ರುಕ್ಸಾನಾ ಬಾನೊ ಆಸ್ಪತ್ರೆಯಲ್ಲೇ ಸಾವು!

    ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆಸಿದ್ದು, ಏಕಾಏಕಿ ಮೆರವಣೆಗೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ನಗರದ ಅರಳಿಮರ ಸರ್ಕಲ್ ಬಳಿ ಮೊದಲು ಕಲ್ಲು ತೂರಾಟ ಶುರುವಾಗಿದ್ದು, ಬಳಿಕ ಕೆ.ಆರ್ ರಸ್ತೆ, ಹಂಸಬಾವಿ ಸರ್ಕಲ್, ಕೆಆರ್ ಮಾರ್ಕೇಟ್ ಸೇರಿದಂತೆ ಬಂಬೂ ಬಜಾರ್ ರಸ್ತೆ, ಮಟ್ಟಿಕಲ್ಲು ಏರಿಯಾದಲ್ಲಿಯೂ ಕಲ್ಲುತೂರಾಟ ನಡೆದಿದೆ. ತಕ್ಷಣವೇ ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸರು ಎಷ್ಟೇ ನಿಯಂತ್ರಿಸಿದರೂ ಕಿಡಿಗೇಡಿಗಳು ಕಲ್ಲು ತೂರಾಟ ಮುಂದುವರಿಸಿದ್ದು, ಪೊಲೀಸರ ಎದುರೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಕೂಡ ಕಲ್ಲಿನಿಂದ ರಕ್ಷಿಸಿಕೊಳ್ಳಲು ಬೋರ್ಡ್ ಹಿಡಿದುಕೊಂಡು ತಿರುಗಾಡುವಂತಾಗಿದೆ.

    ಸ್ಥಳಕ್ಕೆ ಪೊಲೀಸರು ಆಗಮಿಸುತ್ತಲೇ ಕಿಡಿಗೇಡಿಗಳು ಅಲ್ಲಿಂದ ಪಾರಾಗಿ, ಏರಿಯಾಗಳಿಗೆ ನುಗ್ಗಿ, ಮಟ್ಟಿಕಲ್ಲು, ಅನೆಕೊಂಡಗಳಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪುಂಡರ ಕಲ್ಲು ತೂರಾಟಕ್ಕೆ ಮಟ್ಟಿಕಲ್ಲು ನಿವಾಸಿಗಳು ದೊಣ್ಣೆ ಹಿಡಿದು ಓಡಿಸಿಕೊಂಡು ಹೋಗಿದ್ದಾರೆ.

    60 ರಿಂದ 70 ಯುವಕರ ಗುಂಪು ಮಟ್ಟಿಕಲ್ಲು, ಅನೆಕೊಂಡದ ಹಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಿದ್ದು, ಜೊತೆಗೆ ಮನೆ ಮುಂಭಾಗದಲ್ಲಿ ಇರುವ ವಾಹನಗಳಿಗೆ ಹಾನಿ ಮಾಡಿದ್ದಾರೆ. ಅಲ್ಲದೆ ಏಕಾಎಕಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆ ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಗಳಿಗೂ ಕೂಡ ಬೀಗ ಹಾಕಿಕೊಂಡು ಹೋಗಿದ್ದಾರೆ. ಇದರಿಂದಾಗಿ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ʻಉಪೇಂದ್ರʼ ಸಿನಿಮಾ ವೀಕ್ಷಿಸಿದ ಉಪೇಂದ್ರ!

    ಸದ್ಯ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು, ಇದುವರೆಗೂ ಎರಡು ಕಡೆಯಿಂದ 20ಕ್ಕೂ ಹೆಚ್ಚು ಜನರನ್ನು ಸೆರೆಹಿಡಿದಿದ್ದಾರೆ. ಇಡೀ ರಾತ್ರಿ ಹಳೇ ದಾವಣಗೆರೆಯನ್ನು ಪೊಲೀಸರು ಗಸ್ತು ಹೊಡೆದಿದ್ದಾರೆ. ಬೆಳ್ಳಂಬೆಳಿಗ್ಗೆ ಜನಜಂಗುಳಿಯಿಂದ ತುಂಬಿರುತ್ತಿದ್ದ ರಸ್ತೆಗಳು ಖಾಲಿಯಾಗಿದ್ದು, ಬಿಕೊ ಎನ್ನುತ್ತಿವೆ. ಹಾಲು ಖರೀದಿಸಲು ಕೂಡ ಅರಳಿಮರ ಸರ್ಕಲ್ ಜನ ಮನೆಯಿಂದ ಹೊರಬರುತ್ತಿಲ್ಲ. ಒಟ್ಟಿನಲ್ಲಿ ದಾವಣಗೆರೆಯ ಇಮಾಂನಗರ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ.

  • ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ, ಹಿಂದೂಗಳು ಭಯದಲ್ಲಿ ಬದುಕುವಂತಾಗಿದೆ: ವೇದವ್ಯಾಸ್ ಕಾಮತ್

    ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ, ಹಿಂದೂಗಳು ಭಯದಲ್ಲಿ ಬದುಕುವಂತಾಗಿದೆ: ವೇದವ್ಯಾಸ್ ಕಾಮತ್

    ಮಂಗಳೂರು: ಶಿವಮೊಗ್ಗ (Shivamogga) ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ, ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಜಿಹಾದಿ ಮಾನಸಿಕತೆಯ ಕಿಡಿಗೇಡಿಗಳು ಹಾಗೂ ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರವೇ (Congress Government) ಇದಕ್ಕೆಲ್ಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದೆ. ಘಟನೆ ನಂತರ ಹಿಂದೂಗಳು (Hindu) ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಆತಂಕಪಟ್ಟಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ

    ಕಳೆದ ವಾರ ಗಣೇಶ ವಿಸರ್ಜನೆ ವೇಳೆ ಯಾವುದೇ ಗಲಭೆ ನಡೆದಿರಲಿಲ್ಲ. ಆದ್ರೆ ಈದ್‌ ಮೆರವಣಿಗೆಯಲ್ಲಿ ಕೋಮುದಳ್ಳುರಿ ಹೊತ್ತಿಸಲಾಗಿದೆ. ಇದಕ್ಕೆಲ್ಲ ಕಾರಣ ಜಿಹಾದಿ ಮಾನಸಿಕತೆಯ ಕಿಡಿಗೇಡಿಗಳು ಹಾಗೂ ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರ. ಔರಂಗಜೇಬನಂತಹ ಮತಾಂಧನ ಬ್ಯಾನರ್ ಅಳವಡಿಸುವುದು, ಕೈಯಲ್ಲಿ ತಲ್ವಾರ್ ಹಿಡಿದು ಪ್ರಚೋದಕಾರಿ ಘೋಷಣೆಗಳನ್ನು ಕೂಗುವುದು, ಕೊನೆಗೆ ಹಿಂದೂಗಳ ಮೇಲೆಯೇ ಕಲ್ಲೆಸೆಯುವುದು ಇವೆಲ್ಲ ವ್ಯವಸ್ಥಿತ ಗಲಭೆಯ ಷಡ್ಯಂತ್ರದ ಭಾಗವಾಗಿದೆ. ಟಿಪ್ಪು ಸುಲ್ತಾನ್‌ ಕಾಲಡಿಯಲ್ಲಿ ಕೇಸರಿ ಬಣ್ಣದ ಪಗಡೆ ತೊಟ್ಟ ವ್ಯಕ್ತಿ ಮಲಗಿರುವ ಕಟೌಟ್‌ ಅಳವಡಿಸಿದ್ದು ವಿವಾದವಾಗುತ್ತಿದ್ದಂತೆ ಸ್ವತಃ ಎಸ್ಪಿ ನೇತೃತ್ವದಲ್ಲಿ ಕಟೌಟ್‌ಗೆ ಬಿಳಿ ಬಣ್ಣ ಬಳಿಯಲಾಗಿತ್ತು. ಹಾಗಾಗಿಯೇ ಕಿಡಿಗೇಡಿಗಳು ಪೊಲೀಸರ ಮೇಲೆಯೂ ದಾಳಿ ನಡೆಸಿದ್ದು ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಮಾದರಿಯಲ್ಲಿ ಗಲಭೆಗೆ ಸಂಚು ರೂಪಿಸಿದ್ದಿರಬಹುದು. ಆದರೂ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಎನ್‌ಐಎ ತನಿಖೆಯಲ್ಲಿ ಇದೇ ಶಿವಮೊಗ್ಗದ ತೀರ್ಥಹಳ್ಳಿಯ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದು ಗಮನಿಸಬೇಕಾದ ಅಂಶ. ಇವರ ಷಡ್ಯಂತ್ರದ ಎಲ್ಲಾ ಮಾಹಿತಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದ್ದರೂ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವುದು ರಾಜ್ಯದ ದುರಂತ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – ಕೆಲಕಾಲ ಪರಿಸ್ಥಿತಿ ಉದ್ವಿಗ್ನ

    ಈಗಾಗಲೇ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣದ ಕೇಸುಗಳನ್ನು ಹಿಂಪಡೆಯುವ ಬಗ್ಗೆ ಕಾಂಗ್ರೆಸ್ ಸರ್ಕಾರವು ತೀರ್ಮಾನಿಸಿದೆ. ಅದಕ್ಕೆ ಪೂರಕವಾಗಿ ಸ್ವತಃ ಗೃಹ ಸಚಿವರೇ ಟಿಪ್ಪಣಿ ಬರೆದಿದ್ದು ಮಾಧ್ಯಮಗಳ ಮೂಲಕ ಪ್ರಸಾರವಾಗಿದೆ. ಸರ್ಕಾರದ ಮಟ್ಟದಲ್ಲಿಯೇ ಇಂತಹ ಕಿಡಿಗೇಡಿಗಳಿಗೆ ವ್ಯವಸ್ಥಿತ ವಾತಾವರಣ ನಿರ್ಮಾಣವಾದಾಗ ಸಹಜವಾಗಿ ಇಂತಹ ಗಲಭೆಗಳು ಹೆಚ್ಚಾಗುತ್ತವೆ. ಏನೇ ಆದರೂ ಈ ಕಾಂಗ್ರೆಸ್ ಸರ್ಕಾರ ನಮ್ಮ ಪರ ಇದೆ ಎಂದುಕೊಂಡು ಗಲಭೆ ಸೃಷ್ಟಿಸಿ ಜನರಲ್ಲಿ ಭಯದ ವಾತಾವರಣ ಮೂಡಿಸುವ ಇಂತಹ ಕಿಡಿಗೇಡಿಗಳಿಗೆ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಹೆಡೆಮುರಿ ಕಟ್ಟಬೇಕು. ಕೂಡಲೇ ಅಲ್ಲಿನ ಹಿಂದೂಗಳ ಹಿತರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ

    ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ

    ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ (Eid Milad Procession) ವೇಳೆ ಘರ್ಷಣೆಯಾಗಿ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದಿದೆ. ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಸ್ಥಳೀಯ ಶಾಸಕ ಎಸ್.ಎನ್.ಚನ್ನಬಸಪ್ಪ, ಈದ್ ಮಿಲಾದ್ ಮೆರವಣಿಗೆ ಹೋಗುತ್ತಿದ್ದ ವೇಳೆ ಹಿಂಭಾಗದಿಂದ ಬಂದಂತಹ ಅನ್ಯಗುಂಪೊಂದು ಕಲ್ಲು ತೂರಾಟ (Stone Throwing) ನಡೆಸಿದ್ದು, ಉದ್ವಿಗ್ನತೆಗೆ ಕಾರಣವಾಗಿದೆ. ಘಟನೆಯಲ್ಲಿ ಎಸ್ಪಿ ಗನ್‌ಮ್ಯಾನ್ ಹಾಗೂ ಓರ್ವ ಪೊಲೀಸ್ ಅಧಿಕಾರಿಗೆ ಪೆಟ್ಟಾಗಿದೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – ಕೆಲಕಾಲ ಪರಿಸ್ಥಿತಿ ಉದ್ವಿಗ್ನ

    ಹಬ್ಬ ಶಾಂತಿಯುತವಾಗಿ ನಡೆದಿದೆ. ಆದ್ರೆ ಘಟನೆ ನಡೆದಂತಹ ಸಂದರ್ಭದಲ್ಲಿ ಉತ್ತರ ಪ್ರದೇಶದಿಂದ ಬಂದ ವಾಹನಗಳು ಕಂಡುಬಂದಿವೆ. ಅವು ಏಕೆ ಬಂದಿದ್ದವು ಅನ್ನೋ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ. ಈ ರೀತಿಯ ವಾಹನಗಳನ್ನ ಹೊರಗೆ ಹೋಗದ ರೀತಿ ನೋಡಿಕೊಳ್ಳಬೇಕು. ಕಲ್ಲು ತೂರಾಟ ಯಾರು ಮಾಡಿದ್ರು? ಏಕೆ ಮಾಡಿದ್ರು ಅನ್ನೋದು ಗೊತ್ತಾಗಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

    ಗಣೇಶ ವಿಸರ್ಜನೆ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆ ಚೆನ್ನಾಗಿ ಆಗಿದೆ. ಇನ್ನೇನು ಮುಕ್ತಾಯ ಹಂತದ ಸಂರ್ಭದಲ್ಲಿ ಈ ರೀತಿ ಘಟನೆ ಸಂಭವಿಸಿದೆ. ಈ ಘಟನೆಯಿಂದ ಅನೇಕ ಮನೆಗಳು ಹಾಗೂ ವಾಹನಗಳು ಜಖಂ ಆಗಿವೆ. ಭಯದ ವಾತಾವರಣ ಸೃಸ್ಟಿಯಾಗಿದೆ. ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಕೊಂಡು ಬಿಡ್ತು ಅನಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Asian Games 2023: ಕೊನೇ ಪ್ರಯತ್ನದಲ್ಲಿ ಗುಂಡು ಎಸೆದು ಚಿನ್ನ ಗೆದ್ದ ಗಂಡುಗಲಿ – ಭಾರತಕ್ಕೆ ಒಂದೇ ದಿನ 15 ಪದಕ

    ಪೊಲೀಸ್ ಇಲಾಖೆ ಸಕಲ ಬಂದೋಬಸ್ತ್ ಮಾಡಿದೆ. ಹೊರನಿಂದ ಬಂದವರೇ ಈ ಕೃತ್ಯ ಎಸಗಿದ್ದಾರೆ. ಇಂದರಿಂದ ನಾಗರಿಕರು ಭಯಪಡುವ ಅವಶ್ಯಕತೆಯಿಲ್ಲ. ನಿಮಗೇನಾದರೂ ತೊಂದರೆಯಾಗಿದ್ದರೆ ನಮ್ಮ ಗಮನಕ್ಕೆ ತನ್ನಿ. ನಾವು ನಿಮ್ಮ ಜೊತೆಗಿದ್ದೇವೆ ಎಂದು ಅಭಯ ನೀಡಿದ್ದಾರೆ.

    ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ: ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆಯಾಗಿ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಪೊಲೀಸರು ತೆರಳು ಗುಂಪು ಚದುರಿಸಿದ್ದಾರೆ. ಮೆರವಣಿಗೆ ವೇಳೆ ಎರಡು ಕೋಮುಗಳಿಂದ ಪರಸ್ಪರ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಇಬ್ಬರಿಗೆ ಗಾಯವಾಗಿದೆ. ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಂದು ಓಮಿನಿ ಕಾರು ಮತ್ತು ಮೂರು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

    ಗಾಂಧಿ ಬಜಾರಿನ ಜಾಮಿಯಾ ಮಸೀದಿಯಿಂದ ಮುಸ್ಲಿಂ ಬಾಂಧವರು ಭಾನುವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಮೆರವಣಿಗೆ ಆರಂಭಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಈ ವಿಚಾರವಾಗಿ ಗೊಂದಲ ಸೃಷ್ಟಿಯಾಗಿತ್ತು. ಪರಿಣಾಮವಾಗಿ ಸ್ಥಳದಲ್ಲಿ ಮುಸ್ಲಿಂ ಬಾಂಧವರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಮೂವರ ಬಂಧನ

    ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಮೂವರ ಬಂಧನ

    ಕೋಲಾರ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೂವರು ಅರೋಪಿಗಳನ್ನು ಕೋಲಾರ ನಗರದ ಗಲ್‍ಪೇಟೆ ಪೊಲೀಸರು ಬಂಧಿಸಿದ್ದಾರೆ.

    ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುವ ಪೊಲೀಸರು ಮೂರು ಜನರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಗಂಗಮ್ಮನ ಪಾಳ್ಯದಲ್ಲಿ ಇರಿಸಿದ್ದ ಗಣೇಶನ ಮೆರವಣಿಗೆ ವೇಳೆ ಬಿಲ್ಲಾಲ್ ಪ್ರಾರ್ಥನ ಮಂದಿರದ ಬಳಿ ಕಲ್ಲು ತೂರಾಟ ನಡೆದಿತ್ತು, ಈ ವೇಳೆ ಇಬ್ಬರು ಯುವಕರಿಗೆ ಗಾಯಗಳಾಗಿತ್ತಲ್ಲದೆ, ಗಣೇಶ ಮೂರ್ತಿಗೆ ಹಾನಿಯಾಗಿತ್ತು.

    ಈ ಸಂಬಂಧ ಹಿಂದೂಪರ ಸಂಘಟನೆ ಮುಖಂಡರು ಪ್ರಕರಣ ದಾಖಲು ಮಾಡಿ ಆರೋಪಿಗಳನ್ನು ಬಂಧಿಸುವವರೆಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವುದಿಲ್ಲ ಎಂದು ಕುರುಬರ ಪೇಟೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಸ್ಥಳಕ್ಕೆ ಬಂದ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.

    ಸದ್ಯ ಮೂರು ಜನ ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು, ಐಪಿಸಿ ಸೆಕ್ಷನ್ 506, 324, 295, 149 ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಕೂಡ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

  • ಕುಡಿದ ಮತ್ತಿನಲ್ಲಿ ಸಿಬ್ಬಂದಿಯೊಂದಿಗೆ ಜಗಳ- ಕಲ್ಲುತೂರಾಟಕ್ಕೆ ಬಾರ್ ಪುಡಿ-ಪುಡಿ

    ಕುಡಿದ ಮತ್ತಿನಲ್ಲಿ ಸಿಬ್ಬಂದಿಯೊಂದಿಗೆ ಜಗಳ- ಕಲ್ಲುತೂರಾಟಕ್ಕೆ ಬಾರ್ ಪುಡಿ-ಪುಡಿ

    ಬೆಳಗಾವಿ: ಕುಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಬಾರ್ ಮಾಲೀಕ ಹಾಗೂ ಗ್ರಾಮಸ್ಥರ ನಡುವಿನ ಜಗಳ ತಾರಕಕ್ಕೇರಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ತಲ್ಲೂರು ಗ್ರಾಮದಲ್ಲಿ ನಡೆದಿದೆ.

    ನಡೆದಿದ್ದೇನು?: ಐಎಸ್ ಇರಕಾರ ಮಾಲೀಕತ್ವದ ಬಾರ್ ಗೆ ಭಾನುವಾರ ರಾತ್ರಿ ತಲ್ಲೂರು ಗ್ರಾಮದ ನಾಲ್ವರು ಬಂದಿದ್ದು, ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿಯೊಂದಿಗೆ ಜಗಳ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಗ್ರಾಮಕ್ಕೆ ಬಂದ ಬಾರ್ ಸಿಬ್ಬಂದಿ ನಾಲ್ವರ ಮನೆಗೆ ಹೋಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಕೋಪಗೊಂಡ ಗ್ರಾಮಸ್ಥರು ಬಾರ್‍ಗೆ ಬಂದು ಕಲ್ಲು ತೂರಾಟ ನಡೆಸಿದ್ದಾರೆ. ಗ್ರಾಮಸ್ಥರು ಕಲ್ಲು ತೂರಾಟ ಮಾಡುವುದರ ಜೊತೆಗೆ ಬಾರ್‍ನಲ್ಲಿದ್ದ ಮದ್ಯದ ಬಾಟಲಿಗಳನ್ನು ಒಡೆದು ಹಾಕಿದ್ದಾರೆ.

    ಗ್ರಾಮಸ್ಥರ ಆಕ್ರೋಶದ ಕಲ್ಲು ತೂರಾಟಕ್ಕೆ ಬಾರ್ ಅಂಗಡಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಲಾಟೆಯಲ್ಲಿ ನೂರಾರು ಸಂಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರಿಂದ ಗ್ರಾಮದಲ್ಲಿ ಇದೀಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

    ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    https://www.youtube.com/watch?v=Ocie8qPInnE