Tag: Stone Throwing Case

  • ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – ಕೆಲಕಾಲ ಪರಿಸ್ಥಿತಿ ಉದ್ವಿಗ್ನ

    ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – ಕೆಲಕಾಲ ಪರಿಸ್ಥಿತಿ ಉದ್ವಿಗ್ನ

    ಶಿವಮೊಗ್ಗ: ಈದ್ ಮಿಲಾದ್ (Eid Milad Procession) ಮೆರವಣಿಗೆ ವೇಳೆ ಘರ್ಷಣೆಯಾಗಿ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಪೊಲೀಸರು ತೆರಳು ಗುಂಪು ಚದುರಿಸಿದ್ದಾರೆ.

    ಮೆರವಣಿಗೆ ವೇಳೆ ಎರಡು ಕೋಮುಗಳಿಂದ ಪರಸ್ಪರ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಇಬ್ಬರಿಗೆ ಗಾಯವಾಗಿದೆ. ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಂದು ಓಮಿನಿ ಕಾರು ಮತ್ತು ಮೂರು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಎಚ್ಚರಿಕೆಯಿಂದಿರಿ, ಮತಕ್ಕಾಗಿ ಒಂದು ಸಮಾಜವನ್ನು ಓಲೈಕೆ ಮಾಡುವ ಅವಶ್ಯಕತೆ ನನಗಿಲ್ಲ: HDK

    ಗಾಂಧಿ ಬಜಾರಿನ ಜಾಮಿಯಾ ಮಸೀದಿಯಿಂದ ಮುಸ್ಲಿಂ ಬಾಂಧವರು ಭಾನುವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಮೆರವಣಿಗೆ ಆರಂಭಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಈ ವಿಚಾರವಾಗಿ ಗೊಂದಲ ಸೃಷ್ಟಿಯಾಗಿತ್ತು. ಪರಿಣಾಮವಾಗಿ ಸ್ಥಳದಲ್ಲಿ ಮುಸ್ಲಿಂ ಬಾಂಧವರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.

    ಶಿವಮೊಗ್ಗ ಹೊನ್ನಾಳಿ ರಸ್ತೆ ತಡೆದು ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಸ್ಲಿಂ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು. ಮಾತುಕತೆ ಬಳಿಕ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: 350 ವರ್ಷಗಳ ಬಳಿಕ ಭಾರತಕ್ಕೆ ಮರಳಲಿದೆ ಶಿವಾಜಿ ಮಹಾರಾಜರ `ವ್ಯಾಘ್ರ ನಖ’

    ಶಿವಮೊಗ್ಗದಲ್ಲಿ ಭಾನುವಾರ ಈದ್ ಮಿಲಾದ್ ಹಬ್ಬದ ಮೆರವಣಿಗೆ ನಡೆಸಲಾಯಿತು. ಕಳೆದ ಗುರುವಾರ ನಡೆದಿದ್ದ ಈದ್ ಮಿಲಾದ್ ಹಬ್ಬ ನಡೆದಿತ್ತು. ಗುರುವಾರ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಈದ್ ಮಿಲಾದ್ ಮೆರವಣಿಗೆ ಮುಂದೂಡಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಹಸಿರು ಬಾವುಟ, ಟಿಪ್ಪು ಭಾವಚಿತ್ರ ಇರುವ ಧ್ವಜ ರಾರಾಜಿಸಿತು. ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.

    ಮೆರವಣಿಗೆ ರಾಗಿಗುಡ್ಡದಲ್ಲಿ ಗಲಾಟೆ ಹಿನ್ನೆಲೆ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಿ ಎಸ್‌ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಗುಂಪು ಸೇರದಂತೆ ಪೊಲೀಸರು ಮನವಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿ ಗಲಭೆ ಕಲ್ಲು ತೂರಾಟ ಕೇಸ್‍ನಲ್ಲಿ ಉಮರ್ ಖಾಲಿದ್ ಖುಲಾಸೆ, ಬಿಡುಗಡೆ ಭಾಗ್ಯವಿಲ್ಲ

    ದೆಹಲಿ ಗಲಭೆ ಕಲ್ಲು ತೂರಾಟ ಕೇಸ್‍ನಲ್ಲಿ ಉಮರ್ ಖಾಲಿದ್ ಖುಲಾಸೆ, ಬಿಡುಗಡೆ ಭಾಗ್ಯವಿಲ್ಲ

    ನವದೆಹಲಿ: 2020ರ ದೆಹಲಿ ಗಲಭೆಗೆ ಸಂಬಂಧಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ (Former  JNU Student) ಉಮರ್ ಖಾಲಿದ್‍ಗೆ (Umar Khalid) ಬಿಗ್ ರಿಲೀಫ್ ಸಿಕ್ಕಿದ್ದು, ದೆಹಲಿ ನ್ಯಾಯಾಲಯ (Delhi Court) ಖುಲಾಸೆಗೊಳಿಸಿದೆ.

    ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಈ ತೀರ್ಪನ್ನು ನೀಡಿದ್ದಾರೆ. ಉಮರ್ ಖಾಲಿದ್ ಹಾಗೂ ಮತ್ತೋರ್ವ ಜೆಎನ್‍ಯು ಮಾಜಿ ವಿದ್ಯಾರ್ಥಿ ಹಾಗೂ ಯುನೈಟೆಡ್ ಅಗೈನ್ಸ್ಟ್‍ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಎರಡು ವರ್ಷದ ಹಿಂದೆ ದೆಹಲಿಯ ಚಾಂದ್‍ಬಾಗ್‍ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ (Stone-Throwing Case) ಭಾಗಿಯಾಗಿದ್ದಾರೆ ಎಂಬ ಆರೋಪದ ಮೇರೆಗೆ ಬಂಧಿಸಲಾಗಿತ್ತು.

    ಈ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯ ಇಂದು ತೀರ್ಪು ನೀಡಿದ್ದು, ದೆಹಲಿಯ ಚಾಂದ್‍ಬಾಗ್‍ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಖಾಲಿದ್ ಮತ್ತು ಸೈಫಿ ವಿರುದ್ಧ ಸಾಕ್ಷ್ಯಾಧಾರಗಳ ಕೊರೆತೆಯಿಂದಾಗಿ ಅವರನ್ನು ಖುಲಾಸೆಗೊಳಿಸಿದೆ. ಆದರೆ ದೆಹಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಉಮರ್ ಖಾಲಿದ್‍ಗೆ ಜಾಮೀನು ಸಿಕ್ಕಿದ್ದರೂ, ಬಿಡುಗಡೆ ಭಾಗ್ಯ ಇನ್ನು ದೊರೆತಿಲ್ಲ.

    ಉಮರ್ ಖಲೀದ್ ಈಗಾಗಲೇ ದೆಹಲಿ ಕಲ್ಲು ತೂರಾಟ ಪ್ರಕರಣವೊಂದೇ ಅಲ್ಲದೇ ಭಯೋತ್ಪಾದನಾ ಚಟುವಟಿಕೆಯಲ್ಲೂ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ಬಿಜೆಪಿ, ಆರ್‌ಎಸ್‍ಎಸ್ ವಿರುದ್ಧ ರಾಹುಲ್ ಸೀತಾ ಅಸ್ತ್ರ

    2020ರ ಫೆಬ್ರವರಿ 20 ರಂದು ದೆಹಲಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ ಬಂಧನವಾಗಿತ್ತು. ಪ್ರಕರಣದಲ್ಲಿ ಒಳಸಂಚು ಮಾಡಿರುವುದಾಗಿ ಆರೋಪಿಸಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಪ್ರಕರಣ ದಾಖಲಿಸಲಾಗಿತ್ತು. ಗಲಭೆ ವೇಳೆ 53 ಜನ ಮೃತಪಟ್ಟಿದ್ದು, 700 ಹೆಚ್ಚು ಜನರಿಗೆ ಗಾಯಗಳಾಗಿತ್ತು.  ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ- ಮದುವೆಯಾಗಿ ಒಂದೂವರೆ ವರ್ಷಕ್ಕೆ ಗೃಹಿಣಿ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]