Tag: stones pelted

  • ಕೇರಳದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ

    ಕೇರಳದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ

    ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಚಾಲನೆ ನೀಡಿದ ಕೇರಳದ (Kerala) ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ (Vande Bharat Express) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

    ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಲ್ಲು ತೂರಾಟ (Stones Pelted) ನಡೆದಿದೆ. ಈ ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು.

    ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಒಂದು ಕೋಚ್‌ನ ವಿಂಡ್‌ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ. ಇದನ್ನೂ ಓದಿ: ಆರಂಭಗೊಂಡ ಕೆಲವೇ ಗಂಟೆಗಳಲ್ಲಿ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ವಿರೂಪಗೊಳಿಸಿದ ‘ಕೈ’ ಕಾರ್ಯಕರ್ತರು

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು. ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟ ನಡೆದ ಮೂರನೇ ಘಟನೆ ಇದಾಗಿದೆ.

    ಈ ಹಿಂದೆ ಏಪ್ರಿಲ್ 6 ರಂದು ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಮಾರ್ಚ್ 12 ರಂದು ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು.

  • ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತೆರಳುತ್ತಿದ್ದ ವಾಹನಕ್ಕೆ ಕಲ್ಲು ತೂರಾಟ!

    ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತೆರಳುತ್ತಿದ್ದ ವಾಹನಕ್ಕೆ ಕಲ್ಲು ತೂರಾಟ!

    ಭೋಪಾಲ್: ಪ್ರತಿಭಟನಾಕಾರರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೆರಳುತ್ತಿದ್ದ ವಾಹನದ ಎದುರು ಕಪ್ಪು ಧ್ವಜವನ್ನು ತೋರಿಸಿ ಬಳಿಕ ಕಲ್ಲು ತೂರಾಟ ನಡೆಸಿದ್ದಾರೆ.

    ಈ ಘಟನೆ ಸಿದ್ಧಿ ಜಿಲ್ಲೆಯಲ್ಲಿ ವಿಧಾನ ಸಭಾ ಚುನಾವಣೆಗೂ ಮುನ್ನವೇ ಪ್ರಯಾಣಿಸುತ್ತಿದ್ದ ವೇಳೆ ನಡೆದಿದೆ. ಘಟನೆಯಲ್ಲಿ ಚೌಹಾಣ್ ಗಾಯಗೊಂಡಿದ್ದಾರೆ ಎಂದು ಚುರ್ಹತ್‍ನ ಪೊಲೀಸ್ ಇನ್ಸ್‌ಪೆಕ್ಟರ್ ರಾಮ್ ಬಾಬು ಚೌಧರಿ ಅವರು ದೂರವಾಣಿ ಮೂಲಕ ರಾಷ್ಟ್ರೀಯ ಸುದ್ದಿಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

    ಜಿಲ್ಲಾ ಕ್ಷೇತ್ರದಿಂದ 25 ಕಿ.ಮೀ ದೂರವಿರುವ ಚುರ್ಹತ್ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಅದು ಪ್ರತಿಪಕ್ಷ ನಾಯಕ ಅಜಯ್ ಸಿಂಗ್ ನ ವಿಧಾನಸಭೆ ಕ್ಷೇತ್ರವಾಗಿದೆ ಎಂದು ಮಧ್ಯಪ್ರದೇಶದ ಬಿಜೆಪಿ ವಕ್ತಾರ ರಜನೀಶ್ ಅಗರ್ವಾಲ್ ಹೇಳಿದ್ದಾರೆ.

    ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್ ಅವರು, ಅಜಯ್ ಸಿಂಗ್ ಅವರೊಂದಿಗೆ ನೇರವಾಗಿ ಹೋರಾಟಕ್ಕೆ ಇಳಿಯುತ್ತೇನೆ. ಅಜಯ್ ಸಿಂಗ್ ನಿನಗೆ ಧೈರ್ಯವಿದ್ದರೆ ಮುಖಾಮುಖಿ ಹೋರಾಡೋಣ. ನಾನು ದೈಹಿಕವಾಗಿ ದುರ್ಬಲನಾಗಿರಬಹುದು ಆದರೆ ನಿಮ್ಮ ಕಾರ್ಯಗಳಿಂದ ನನ್ನನ್ನು ತಳ್ಳಿಹಾಕಲು ಸಾಧ್ಯವಾಗುವುದಿಲ್ಲ ಎಂದರು.

    ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತಾನಾಡಿದ ಅಜಯ್ ಸಿಂಗ್, ಈ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿಲ್ಲ. ತನ್ನ ಪಕ್ಷ ಹಿಂಸೆ ಸಂಸ್ಕೃತಿಯನ್ನು ಅನುಸರಿಸುವುದಿಲ್ಲ. ನನ್ನ ಹಾಗೂ ಚುರ್ಹಾತ್‍ನ ಜನರ ನಡುವೆ ಇರುವ ಒಳ್ಳೆಯ ಸಂಪರ್ಕವನ್ನು ಕೆಡಿಸಲು ಈ ರೀತಿಯ ಪಿತೂರಿ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಅಂತ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv