Tag: Story

  • ಕಾಲೇಜು ದಿನಗಳಲ್ಲೇ ‘ಕಾಂತಾರ’ ಕಥೆ ಹೊಳೆದಿತ್ತು: ನಟ ರಿಷಬ್ ಶೆಟ್ಟಿ

    ಕಾಲೇಜು ದಿನಗಳಲ್ಲೇ ‘ಕಾಂತಾರ’ ಕಥೆ ಹೊಳೆದಿತ್ತು: ನಟ ರಿಷಬ್ ಶೆಟ್ಟಿ

    ಕಾಂತಾರ ಸಿನಿಮಾ ಕುರಿತಂತೆ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ ರಿಷಬ್ ಶೆಟ್ಟಿ (Rishabh Shetty). ಅಮೆಜಾನ್ ಪ್ರೈಂ ಇವೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿರುವ ರಿಷಬ್, ಕಾಂತಾರ ಸಿನಿಮಾದ ಕಥೆ (Story) ಇಂದು ನಿನ್ನೆ ಹೊಳೆದದ್ದು ಅಲ್ಲ. ಕಾಲೇಜು ದಿನಗಳಲ್ಲೇ ಎರಡೂ ಭಾಗದ ಕಥೆಯನ್ನು ನಾನು ಕಲ್ಪಿಸಿಕೊಂಡಿದ್ದೆ. ನನ್ನ ನೆಲದ ಕಥೆಯನ್ನು ಹೇಳಬೇಕು ಅಂತ ಅವತ್ತೆ ಅನಿಸಿತ್ತು ಎಂದು ಮಾತನಾಡಿದ್ದಾರೆ.

    ಸಿನಿಮಾ ರಂಗಕ್ಕೆ ಬಂದ ನಂತರ ಕಾಂತಾರದ ಕಥೆಗೆ ಮತ್ತಷ್ಟು ಶಕ್ತಿ ಬಂದು, ಸಿನಿಮಾ ಮಾಡುವ ಹಾಗಾಯಿತು ಎಂದು ನೆನಪಿಸಿಕೊಂಡಿದ್ದಾರೆ. ಕಾಂತಾರ ಚಾಪ್ಟರ್ 1ಕ್ಕಾಗಿ ಅವರು ಊರ ಹತ್ತಿರವೇ ಸೆಟ್ ಹಾಕಿಸಿದ್ದಾರಂತೆ ರಿಷಬ್. ಮುಂದಿನ ತಿಂಗಳಿಂದ ಚಿತ್ರದ ಚಿತ್ರೀಕರಣ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.

    ಕಾಂತಾರ 1 (Kantara) ಚಿತ್ರದ ಶೂಟಿಂಗ್ ಇನ್ನೂ ಪ್ರಾರಂಭವೇ ಆಗಿಲ್ಲ. ಆಗಲೇ ಒಟಿಟಿಗೆ ಚಿತ್ರವನ್ನು ಮಾರಿಕೊಂಡಿದ್ದಾರೆ ನಿರ್ಮಾಪಕ ವಿಜಯ ಕಿರಗಂದೂರು. ಕಾಂತಾರ ಚಿತ್ರದ ಒಟಿಟಿ (OTT) ಹಕ್ಕನ್ನು ಪ್ರೈಮ್ ವಿಡಿಯೋ ಖರೀದಿಸಿದ್ದು, ಭಾರೀ ಮೊತ್ತಕ್ಕೆ ಸೇಲ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅಂದಾಜಿನ ಪ್ರಕಾರ, ಸಿನಿಮಾದ ಬಜೆಟ್ ನ ಅರ್ಧದಷ್ಟು ದುಡ್ಡು ಒಟಿಟಿಯಿಂದಲೇ ಬಂದಿದೆ ಎನ್ನುವುದು ಸಿಕ್ಕಿರುವ ಮಾಹಿತಿ.

    ಈ ನಡುವೆ ‘ಕಾಂತಾರ’  ಸಿನಿಮಾದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲೂ ರಿಷಬ್ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್ (Jr.Ntr) ನಟಿಸುತ್ತಾರೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲೇ ವೈರಲ್ ಆಗಿದೆ. ರಿಷಬ್ ಶೆಟ್ಟಿ ಸೈಲೆಂಟಾಗಿದ್ದಾರೆ. ಕಾರಣ ಕರಾವಳಿಯಲ್ಲಿ ‘ಕಾಂತಾರ’ ಚಿತ್ರೀಕರಣದ ಸಿದ್ಧತೆ ನಡೆಯುತ್ತಿದೆ. ಹಾಗಾಗಿ ಕಾಣಿಸುತ್ತಿಲ್ಲ ಶಿವ. ಆದರೆ ಮೊನ್ನೆ ಅವರು ಜ್ಯೂ.ಎನ್‌ಟಿಆರ್ ಜೊತೆ ದಿಢೀರ್ ಎಂದು ಪೋಸ್ ಕೊಟ್ಟರು. ಅಲ್ಲಿಂದ ಆರಂಭ ತಲೆಗೊಂದು ಲೆಕ್ಕಾಚಾರ. ಹಾಗಾಗಿ ರಿಷಬ್ ಜೊತೆ ತಾರಕ್ ನಟಿಸುತ್ತಾರೆ ಎಂಬ ಗುಸು ಗುಸು ಶುರುವಾಗಿದೆ.

    ರಿಷಬ್ ಶೆಟ್ಟಿ ಈಗ ಎಲ್ಲೂ ಕಾಣುತ್ತಿಲ್ಲ. ಅದನ್ನು ಅವರೇ ಹೇಳಿದ್ದರು. ಶೂಟಿಂಗ್ ಆರಂಭವಾದ ಮೇಲೆ ನಾಟ್ ರೀಚೆಬಲ್ ಎಂದಿದ್ದರು. ಅದನ್ನು ಮಾಡಿ ತೋರಿಸುತ್ತಿದ್ದಾರೆ. ಈ ನಡುವೆ ಟಾಲಿವುಡ್ ಯಂಗ್ ಟೈಗರ್ ಜ್ಯೂ.ಎನ್‌ಟಿಆರ್ ಜೊತೆ ಪತ್ನಿ ಪ್ರಗತಿ ಸಮೇತ ಕಾಣಿಸಿಕೊಂಡಿದ್ದಾರೆ. ಆಗ ಎಲ್ಲರೂ ಸೇರಿ ಫೋಟೊ ತೆಗೆಸಿಕೊಂಡರು. ಆಗ ಆಕಾಶಕ್ಕೇರಿದ ಗಾಳಿಪಟದ ಹಾರಾಟ ಈಗಲೂ ನಿಂತಿಲ್ಲ. ಇದರ ಪರಿಣಾಮ, ಕಾಂತಾರದಲ್ಲಿ ಜ್ಯೂ.ಎನ್‌ಟಿಆರ್ ಕೂಡ ಬಣ್ಣ ಹಚ್ಚಲಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಕಾಣಿಸಲಿದ್ದಾರೆ. ಇದು ನಿಜವಾ ಸುಳ್ಳಾ? ಗೊತ್ತಿಲ್ಲ. ಈ ಸುದ್ದಿ ಮಾತ್ರ ಈಗ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

     

    ಜ್ಯೂ.ಎನ್‌ಟಿಆರ್ ತಾಯಿ ಮೂಲತಃ ಮಂಗಳೂರಿನವರು. ಅದರಲ್ಲೂ ರಿಷಬ್ ಕುಂದಾಪುರದವರು. ಹೀಗಾಗಿಯೇ ತಾರಕ್ ಸ್ಪಷ್ಟ ಕನ್ನಡ ಮಾತಾಡುತ್ತಾರೆ. ಅದನ್ನಿಟ್ಟುಕೊಂಡು ಕಾಡುಶಿವ ಹಾಗೂ ಟೈಗರ್ ಜುಗಲ್‌ಬಂದಿ ತೋರಿಸಲಿದ್ದಾರೆ ಅನ್ನೋದು ಸದ್ಯದ ತಾಜಾ ಸುದ್ದಿ. ಕಾಂತಾರ ಮುಗಿವಷ್ಟರಲ್ಲಿ ಇನ್ನು ಯಾರ್ ಯಾರು ಇದರಲ್ಲಿ ನಾಮಕಾವಾಸ್ತೆ ಸೇರಲಿದ್ದಾರೊ. ಖುದ್ದು ಕಾಡು ಶಿವನಿಗೂ ಗೊತ್ತಿಲ್ಲ. ಸದ್ಯ ಬ್ರೇಕಿಂಗ್ ನ್ಯೂಸ್ ಆಗಿ ಹರಿದಾಡುತ್ತಿದೆ. ಜ್ಯೂ.ಎನ್‌ಟಿಆರ್ ಕಾಂತಾರ ಸಿನಿಮಾದಲ್ಲಿ ನಟಿಸೋದು ಗಾಸಿಪ್ ಅಥವಾ ನಿಜ ಸಂಗತಿನಾ? ಎಂಬುದನ್ನು ಚಿತ್ರತಂಡವೇ ಸ್ಪಷ್ಟನೆ ನೀಡಬೇಕಿದೆ. ಒಂದು ವೇಳೆ, ಈ ಸುದ್ದಿ ನಿಜವೇ ಆಗಿದಲ್ಲಿ ಪ್ರೇಕ್ಷಕರಿಗೆ ಹಬ್ಬದೂಟ ಗ್ಯಾರಂಟಿ.

  • ‘ಯುವ’ ಸಿನಿಮಾದ ಸ್ಟೋರಿ ಏನು?: ಗುಟ್ಟು ಬಿಚ್ಚಿಟ್ಟ ನಿರ್ದೇಶಕ

    ‘ಯುವ’ ಸಿನಿಮಾದ ಸ್ಟೋರಿ ಏನು?: ಗುಟ್ಟು ಬಿಚ್ಚಿಟ್ಟ ನಿರ್ದೇಶಕ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಯುವ ಸಿನಿಮಾದ ಕಥೆ (Story) ಏನು ಎನ್ನುವುದಕ್ಕೆ ಸಂಕ್ಷಿಪ್ತವಾಗಿ ಉತ್ತರಿಸಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್. ತಂದೆ ಮಗನ ಸೆಂಟಿಮೆಂಟ್ ಜೊತೆಗೆ ಮಧ್ಯಮ ವರ್ಗದ ಕುಟುಂಬದ ಕಥೆಯು ಸಿನಿಮಾದಲ್ಲಿದೆಯಂತೆ. ಅದನ್ನು ಎಲ್ಲ ಜನರಿಗೂ ಮನ ಮುಟ್ಟುವಂತೆ ಹೇಳಿರುವುದಾಗಿ ಅವರು ಹೇಳಿದರು.

    ಈ ನಡುವೆ ಯುವರಾಜ್ ಕುಮಾರ್ (Yuvraj Kumar) ಮುಖ್ಯ ಭೂಮಿಕೆಯಲ್ಲಿ ಮೂಡಿ ಬಂದಿರುವ ಯುವ (Yuva) ಚಿತ್ರದ ಮತ್ತೊಂದು ಹಾಡು ನಿನ್ನೆ ಬಿಡುಗಡೆ ಆಗಿದೆ. ‘ಅಪ್ಪುಗೆ’ (Appuge) ಹೆಸರಿನಲ್ಲಿ ಮೂಡಿ ಬಂದಿರುವ ಈ ಹಾಡಿನ ಲಿರಿಕಲ್ ವಿಡಿಯೋವನ್ನು ಪುನೀತ್ ರಾಜ್ ಕುಮಾರ್ ಪುತ್ರಿ ವಂದಿತಾ ಬಿಡುಗಡೆ ಮಾಡಿದ್ದಾರೆ.

    ಅಪ್ಪುಗೆ ಮೇಲೆ ಚಿತ್ರಿತವಾದ ವಿಶೇಷ ಹಾಡು ಇದಾಗಿದ್ದು, ಸಂತೋಶ್ ಆನಂದ್ ರಾಮ್ (Santhosh Anand Ram) ನಿರ್ದೇಶನದಲ್ಲಿ, ಹೊಂಬಾಳೆ ಫಿಲಂಸ್ ನಲ್ಲಿ ಬ್ಯಾನರ್ ಅಡಿ ವಿಜಯ್ ಕಿರಗಂದೂರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಈ ಹಾಡು ಬಿಡುಗಡೆ ಆಗಿದೆ.

    ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಯುವರಾಜ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ಅಪ್ಪು ಮಗಳು ವಂದಿತಾ (Vandita) ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ತಂದೆ ಮಗನ ಬಾಂಧ್ಯವದ ಹಾಡು ಇದಾಗಿದ್ದು, ಯುವ ಸಿನಿಮಾದ ಬಹುಮುಖ್ಯ ಘಟ್ಟದಲ್ಲಿ ಹಾಡು ಇರಲಿದೆ. ಈ ಹಾಡನ್ನು ಬಿಡುಗಡೆ ಮಾಡಿದ ವಂದಿತಾಗೆ ಚಿತ್ರತಂಡದಿಂದ ಅಪ್ಪು ಫೋಟೋ ಉಡುಗೊರೆಯಾಗಿ ನೀಡಲಾಯಿತು. ಅಪ್ಪನ ಫೋಟೋ ನೋಡಿ ವಂದಿತಾ ಭಾವುಕರಾದರು.

     

    ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿ ಬಂದಿತ್ತು, ವಿಜಯ್ ಪ್ರಕಾಶ್ ಗೀತೆಗೆ ಧ್ವನಿಯಾಗಿದ್ದಾರೆ. ಈ ಹಾಡಿನ ಸಾಹಿತ್ಯ ಸಂತೋಷ್ ಆನಂದ್ ರಾವ್ ಅವರ ಬರವಣಿಗೆಯಲ್ಲಿ ಮೂಡಿ ಬಂದಿದೆ.

  • ‘ಸಲಾರ್’ ಕಥೆ ಏನು?: ರಹಸ್ಯ ಬಿಚ್ಚಿಟ್ಟ ಪ್ರಶಾಂತ್ ನೀಲ್

    ‘ಸಲಾರ್’ ಕಥೆ ಏನು?: ರಹಸ್ಯ ಬಿಚ್ಚಿಟ್ಟ ಪ್ರಶಾಂತ್ ನೀಲ್

    ಭಾರತೀಯ ಸಿನಿಮಾ ರಂಗದಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಲಾರ್ ಸಿನಿಮಾದ ಕಥೆಯ (Story) ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ (Prashant Neel) ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ.

    ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟ ಪಡಿಸಿದರುವ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ.

    ಪ್ರಿರಿಲೀಸ್ ಇವೆಂಟ್ ಮಾಡಲ್ಲ

    ಸದ್ಯ ಚಿತ್ರೋದ್ಯಮದಲ್ಲಿ ಇವೆಂಟ್ ಟ್ರೆಂಡ್ ಹೆಚ್ಚಾಗಿದೆ. ಪೋಸ್ಟ್ ರಿಲೀಸ್ ಇವೆಂಟ್, ಪ್ರಿರಿಲೀಸ್ (Event) ಇವೆಂಟ್ ಹೀಗೆ ಜನರನ್ನು ಸೇರಿಸುವುದಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಇಂಥದ್ದೊಂದು ಯಾವುದೇ ಇವೆಂಟ್ ಸಲಾರ್ ಚಿತ್ರಕ್ಕಾಗಿ ಮಾಡುತ್ತಿಲ್ಲ ಎನ್ನುವ ವಿಷಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಯಾವುದೇ ಇವೆಂಟ್ ಮಾಡದೇ, ಟ್ರೈಲರ್ ಬಿಡುಗಡೆ ನಂತರ ನೇರವಾಗಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆಯಂತೆ ಹೊಂಬಾಳೆ ಸಂಸ್ಥೆ.

    ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ.

    ಸಲಾರ್ (Salaar) ಮೇಲಿನ ನಿರೀಕ್ಷೆ ಎಷ್ಟಿದೆ ಅಂದ್ರೆ ಈಗಾಗಲೇ ಅಮೆರಿಕಾದಲ್ಲಿ ಈಗಾಗಲೇ ಲಕ್ಷ ಡಾಲರ್ ಕಲೆಕ್ಷನ್ ಟಿಕೆಟ್‌ನಿಂದ ಬಂದಿದೆ. ಅದ್ಹೇಗೆ ಅನ್ನೋದು ನಿಮ್ಮ ಅನುಮಾನವೇ? ಅನೇಕ ದೇಶಗಳಲ್ಲಿ ಸಲಾರ್ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಅಮೆರಿಕಾ ಸಮೇತ. ಅದರಲ್ಲೂ ನಾರ್ಥ್ ಅಮೆರಿಕಾದಲ್ಲಿ ಹೆಚ್ಚಿನ ಭಾರತೀಯರಿದ್ದಾರೆ. ಆ ಭಾಗದಲ್ಲಿ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರವನ್ನ ನೋಡುವ ಕುತೂಹಲ. ಇದೇ ಕಾರಣಕ್ಕೆ ಸಲಾರ್ ತಿಂಗಳಿಗೂ ಅಡ್ವಾನ್ಸ್ ಬುಕಿಂಗ್ ಸ್ಟಾರ್ಟ್ ಆಗಿದ್ದು ಮೊದಲ ದಿನವೇ ಲಕ್ಷ ಡಾಲರ್ ಮೊತ್ತದ ಟಿಕೆಟ್ ಸೇಲ್ ಆಗಿದೆ.

     

    ಅಂದಹಾಗೆ ಸರಿಯಾಗಿ ಸಲಾರ್ ತೆರಗಪ್ಪಳಿಸೋದನ್ನ ನೋಡಲು ಇನ್ನೊಂದು ತಿಂಗಳಷ್ಟೇ ಬಾಕಿ ಇದೆ. ಡಿಸೆಂಬರ್ 1 ಟ್ರೈಲರ್ ರಿಲೀಸ್. ಬಳಿಕ ಪ್ರಭಾಸ್ ಅಖಾಡಕ್ಕಿಳಿಯುತ್ತಾರೆ. ಪ್ರಶಾಂತ್ ನೀಲ್ ಹಗಲು ರಾತ್ರಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತಗಾಗಿದ್ದಾರೆ. ಹೊಂಬಾಳೆ ಈ ಚಿತ್ರವನ್ನ ವಿಶ್ವವ್ಯಾಪಿ ಏಕಕಾಲದಲ್ಲಿ 5 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಬೆನ್ನುಮೂಳೆ ಸಮಸ್ಯೆಯಿಂದಾಗಿ ಪ್ರಭಾಸ್ ಟ್ರೀಟ್‌ಮೆಂಟ್ ಪಡೆದು ವಿಶ್ರಾಂತಿಯಲ್ಲಿದ್ದಾರೆ. ಟ್ರೈಲರ್ ರಿಲೀಸ್ ಆದ ಬಳಿಕವೇ ಪ್ರಚಾರದ ಅಖಾಡಕ್ಕೆ ಎಂಟ್ರಿ ಕೊಡ್ತಾರೆ ಪ್ರಭಾಸ್. ಸೋ.. ಇದಿಷ್ಟು ಸಲಾರ್ ಅಖಾಡದ ಬಿಸಿ ಬಿಸಿ ಸುದ್ದಿ.

  • ಹಿಂದೂಗಳಿಗೆ ಮುನ್ನುಡಿ ಹಬ್ಬ ನಾಗರ ಪಂಚಮಿ – ಪುರಾಣ, ಇತಿಹಾಸದಲ್ಲಿ ಸರ್ಪದ ಬಗ್ಗೆ ಇರುವ ಉಲ್ಲೇಖಗಳೇನು?

    ಹಿಂದೂಗಳಿಗೆ ಮುನ್ನುಡಿ ಹಬ್ಬ ನಾಗರ ಪಂಚಮಿ – ಪುರಾಣ, ಇತಿಹಾಸದಲ್ಲಿ ಸರ್ಪದ ಬಗ್ಗೆ ಇರುವ ಉಲ್ಲೇಖಗಳೇನು?

    ಹಿಂದೂ ಪಂಚಾಂಗದ ಪ್ರಕಾರ ಎಲ್ಲ ಹಬ್ಬಗಳಿಗೆ ನಾಗರ ಪಂಚಮಿ ಮುನ್ನುಡಿ ಎಂಬಂತೆ ಬರುತ್ತದೆ. ಶ್ರಾವಣ ಶುದ್ಧ ಪಂಚಮಿಯಿಂದ ಆಚರಿಸಲ್ಪಡುವ ಈ ಹಬ್ಬದ ಬಳಿಕ ಗಣೇಶ ಚತುರ್ಥಿ, ಕೃಷ್ಣ ಜನ್ಮಾಷ್ಟಮಿ, ನವರಾತ್ರಿ ಸೇರಿದಂತೆ ಇತರ ಹಬ್ಬಗಳು ಬರುತ್ತವೆ. ನಾಗರ ಪಂಚಮಿಗೆ ಸಂಬಂಧಿಸಿದಂತೆ ಪುರಾಣ, ಇತಿಹಾಸ ಮಾತ್ರವಲ್ಲದೇ ಜಾನಪದದ ಸಾಕಷ್ಟು ಕಥೆಗಳಿವೆ.

    ನಾಗನ ಪೂಜೆ ಭಾರತದ ಪ್ರಾಚೀನ ಸಂಪ್ರದಾಯ. ನಾಗರ ಪಂಚಮಿಯನ್ನು ಪವಿತ್ರವಾದ ದಿನ ಎಂದು ನಂಬಲಾಗಿದೆ. ಪುರಾಣದಲ್ಲಿ ವಾಸುಕಿ, ತಕ್ಷಕ, ಕಾಳೀಯ, ಮಣಿಭದ್ರ, ಕಾರ್ಕೋಟಕ, ಧನಂಜಯ ನಾಗದೇವರುಗಳಾಗಿ ಕಾಣಿಸಿಕೊಂಡಿದ್ದಾರೆ. ಇವರ ಪ್ರತಿಮೆಗಳಿಗೆ ಕ್ಷೀರಾಭಿಷೇಕ ಮಾಡುವ ಪದ್ಧತಿ ವ್ಯಾಪಕವಾಗಿದೆ.

    ಗಣಪತಿಯ ಹೊಟ್ಟೆಯ ಪಟ್ಟಿಯಾಗಿ, ಶಿವನ ಆಭರಣ ವಾಗಿ, ವಿಷ್ಣುವಿನ ಹಾಸಿಗೆಯಾಗಿ, ಕುಂಡಲಿನೀ ಶಕ್ತಿಯ ಪ್ರತೀಕವಾಗಿ, ತ್ರಿಪುರ ಸಂಹಾರ ಕಾಲದಲ್ಲಿ ಮೇರುವೆಂಬ ಬಿಲ್ಲಿನ ಹೆದೆಯಾಗಿ, ಸಮುದ್ರಮಂಥನ ಕಾಲದಲ್ಲಿ ಮಂದರ ಪರ್ವತವೆಂಬ ಕಡಗೋಲಿಗೆ ಹಗ್ಗವಾಗಿ, ದುರ್ಯೋಧನನ ಧ್ವಜಚಿಹ್ನೆಯಾಗಿ, ಭೂಮಿಯನ್ನು ಹೊತ್ತ ಆದಿಶೇಷನಾಗಿ, ಪಾರ್ಶ್ವನಾಥ ತೀರ್ಥಂಕರನ ಶಿರೋಲಾಂಛನವಾಗಿ, ಲಕ್ಷ್ಮಣ, ಬಲರಾಮ, ಸುಬ್ರಹ್ಮಣ್ಯ ಸ್ವಾಮಿಯ ಅನನ್ಯ ಸ್ವರೂಪವಾಗಿರುವ ನಾಗ ಹಿಂದೂಗಳ ಪಾಲಿನ ದೇವರಾಗಿದ್ದಾನೆ.

    ಸಿಂಧೂ ಸಂಸ್ಕೃತಿಯ ಅವಶೇಷಗಳಲ್ಲಿ ಸರ್ಪಮಿಥುನ ಸಿಕ್ಕಿದ್ದನ್ನು ಗಮನಿಸಿದಾಗ, ಮಾನವ ಜನಾಂಗ ಆದಿಕಾಲದಿಂದಲೂ ಈ ನಾಗಾರಾಧನೆ ನಡೆಸಿಕೊಂಡು ಬಂದಿದ್ದು ತಿಳಿದುಬರುತ್ತದೆ. ಭಾರತದಾದ್ಯಂತ ಶೈವ, ಶಾಕ್ತ, ವೈಷ್ಣವ, ಬೌದ್ಧ, ಜೈನ ಮುಂತಾದ ಎಲ್ಲ ಸಂಪ್ರದಾಯಗಳಲ್ಲೂ ನಾಗನ ಪೂಜೆ ಮಾಡಲಾಗುತ್ತದೆ. ಇಷ್ಟಾರ್ಥ ಸಿದ್ಧಿಗಾಗಿ, ಪುತ್ರಪ್ರಾಪ್ತಿಗಾಗಿ ಪ್ರಾರ್ಥಿಸುವ ನಾಗ ಸತ್ತರೆ ವೈದೀಕ ರೀತಿಯಲ್ಲಿ ಉತ್ತರಕ್ರಿಯೆ ನಡೆಸುಬ ಪದ್ಧತಿಯೂ ಇದೆ.

    ನಾಗಾರಾಧನೆ ಭಾರತಕ್ಕಷ್ಟೇ ಸೀಮಿತವಾಗಿಲ್ಲ. ಜಪಾನ್, ಚೀನಾ, ಈಜಿಪ್ಟ್, ಗ್ರೀಸ್ ಮುಂತಾದ ಪುರಾತನ ಸಂಸ್ಕೃತಿಯ ಜನತೆಯೂ ನಾಗನನ್ನು ಪೂಜಿಸಿಕೊಂಡು ಬಂದಿದೆ. ಭಾರತದ ಇತಿಹಾಸದಲ್ಲಿ ಹಿಂದಿನಿಂದಲೂ ನಾಗವಂಶಗಳಿದ್ದವು. ಇತ್ತೀಚೆಗೆ ನಾಗ ಜನಾಂಗದ ಒಂದು ಪ್ರತ್ಯೇಕ ಪ್ರಾಂತವೇ ಏರ್ಪಟ್ಟಿದೆ. ನಾಗವಂಶೀಯರು ಕೇರಳ, ಅಸ್ಸಾಂ, ನಾಗಾಲ್ಯಾಂಡ್‌ಗಳಲ್ಲಿ ಇದ್ದಾರೆ.

    ನಾಗರ ಪಂಚಮಿ ಆಚರಣೆ ಹೇಗೆ?
    ಶ್ರಾವಣ ಶುದ್ಧ ಪಂಚಮಿಯ ದಿನ, ಗೋಮಯದಿಂದ ಬಾಗಿಲು ಸಾರಿ, ನಾಗನ ಚಿತ್ರಗಳನ್ನು ಬರೆದು ನೇಮನಿಷ್ಠೆಯಿಂದ ಪೂಜೆ ಮಾಡುತ್ತಾರೆ. ಕೆಲವರು ಪ್ರತಿ ಷಷ್ಠಿ ದಿನ ಸುಬ್ರಹ್ಮಣ್ಯನ ಪೂಜೆಮಾಡಿ ಹಾಲೆರೆಯುತ್ತಾರೆ. ಶ್ವೇತಾಂಬರ ಜೈನರು ಶ್ರಾವಣ ಶುದ್ಧ ಪಂಚಮಿಯಲ್ಲಿ ನಾಗಪಂಚಮಿ ವ್ರತವನ್ನೂ, ಮಾರ್ಗಶಿರ ಶುದ್ಧ ಪಂಚಮಿಯಲ್ಲಿ ನಾಗರ ದೀಪಾವಳಿಯನ್ನೂ ಆಚರಿಸುತ್ತಾರೆ.

    ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬತ್ತೀಸ ಶಿರಾಳ್ ಗ್ರಾಮದಲ್ಲಿ ನಾಗರ ಪಂಚಮಿ ದಿನ ಜೀವಂತ ನಾಗರಹಾವುಗಳನ್ನು ಪೂಜಿಸುತ್ತಾರೆ. ಸರ್ಪ ಕುಂಡಲಿನಿ ಶಕ್ತಿಯ ಸಂಕೇತ. ಸರ್ಪದ ಮಂಡಲಾಕಾರವು ಪೂರ್ಣವೃತ್ತ ಅಥವಾ ಶೂನ್ಯ. ಈ ಪೂರ್ಣದಲ್ಲಿ ಪೂರ್ಣವನ್ನು ಕಳೆದರೆ ಶೇಷವೂ ಪೂರ್ಣ. ಈ ಶೇಷನೇ ಆದಿಶೇಷನೆಂದೂ ಹೇಳುವರು. ಆದ್ದರಿಂದ ಅನಂತನೆಂಬ ಪೂರ್ಣವೃತ್ತದಲ್ಲಿ ಶೇಷಶಾಯಿ ವಿಷ್ಣುವಿರುವನು. ಅನಂತನೇ ಶೇಷ, ಶೇಷನೇ ಅನಂತ, ಶೂನ್ಯವು ಕೇವಲ ಶೂನ್ಯವಲ್ಲ. ಅದರ ಮಧ್ಯೆ ಸಚ್ಚಿದಾನಂದ ಸ್ವರೂಪದ ಕುಂಡಲಿನಿ ಶಕ್ತಿಯಿಂದಾವೃತವಾದ ವಿಭುವಿರುವನು ಎಂಬ ದಿವ್ಯ ಬೋಧೆನೆಯನ್ನು ನಾಗಪೂಜೆಯು ತಿಳಿಸುತ್ತದೆ. ಇದನ್ನೂ ಓದಿ: Naga Panchami: ಚಂದನವನದಲ್ಲಿ ನಾಗಾರಾಧನೆ: ಹಿರಿತೆರೆಗೂ ಹರಿದು ಬಂದ ಹಾವು!

    ಈ ದಿನ ಭಯ ಭಕ್ತಿಯಿಂದ ಪೂಜೆ ಮಾಡುವವರಿಗೆ ಯಾವುದೇ ಭಯವಿಲ್ಲ. ಭೂಮಿ, ಅಂತರಿಕ್ಷಗಳಲ್ಲೂ, ಅಶ್ವತ್ಥ ವೃಕ್ಷಗಳಲ್ಲೂ ವಾಸಿಸುವ ಸರ್ಪಗಳಿಗೆ ಸಾಷ್ಟಾಂಗ ನಮಸ್ಕಾರ ಎಂಬರ್ಥದ ಶ್ಲೋಕ ಕೃಷ್ಣ ಯಜುರ್ವೇದ ಸಂಹಿತೆಯಲ್ಲಿ ಬರುತ್ತದೆ.

    ನಾಗಪಂಚಮಿ ಹೆಣ್ಣುಮಕ್ಕಳ ಹಬ್ಬ ಎಂದು ಆಚರಿಸಲಾಗುತ್ತದೆ. ಅದು ಅವರಿಗೆ ಮಾಂಗಲ್ಯಪ್ರದ ಎಂದೂ ಸಂತಾನ ಪ್ರದ ಎಂದೂ ನಂಬಿಕೆ. ಈ ಹಬ್ಬ ತವರಿನ ಸೌಹಾರ್ದ ಸೂಚಕವೂ ಆಗಿದೆ. ಅಣ್ಣತಮ್ಮಂದಿರನ್ನು ಕರೆದು ಬೆನ್ನನ್ನು ಹಾಲಿನಿಂದ ಸವರಿ ಒಳ್ಳೆಯದಾಗಲಿ ಎಂದು ಪ್ರೀತಿಯಿಂದ ಹಾರೈಸುತ್ತಾರೆ.

    ಉತ್ತರ ಕರ್ನಾಟಕದಲ್ಲಿ ಇದನ್ನು ದೊಡ್ಡ ಹಬ್ಬವಾಗಿ ಆಚರಿಸಲಾಗುತ್ತದೆ. ಅಂದು ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸುತ್ತಾರೆ. ಪಂಜಾಬಿನಲ್ಲಿ ಸರ್ಪದೇವತೆಯ ಸೂಚಕವಾಗಿ ಗೋಡೆಯ ಮೇಲೆ ಕಪ್ಪು ಚಿತ್ರ ಬರೆಯುತ್ತಾರೆ. ಇದರಿಂದ ಮನೆಗೆ ಸರ್ಪಬಾಧೆಯಿಲ್ಲ ಎಂಬುದು ನಂಬಿಕೆ. ಆಸ್ತಿಕ ಋಷಿಯ ಹೆಸರು ಬರೆಯುವುದರಿಂದ ಸರ್ಪ ಒಳಗೆ ಬರುವುದಿಲ್ಲ ಎಂಬ ಭಾವನೆ ಸರ್ವತ್ರ ಭಾರತದಲ್ಲಿ ಪ್ರಚಲಿತವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಡು ಜನರ ಪಾತ್ರದಲ್ಲಿ ಶಿವರಾಜ್ ಕುಮಾರ್ : ಕ್ಯಾಪ್ಟನ್ ಮಿಲ್ಲರ್ ಸ್ಟೋರಿ ರೋಚಕ

    ಕಾಡು ಜನರ ಪಾತ್ರದಲ್ಲಿ ಶಿವರಾಜ್ ಕುಮಾರ್ : ಕ್ಯಾಪ್ಟನ್ ಮಿಲ್ಲರ್ ಸ್ಟೋರಿ ರೋಚಕ

    ನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ (Shivraj Kumar) ಏಕಕಾಲಕ್ಕೆ ತಮಿಳಿನ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಒಂದು ಸಿನಿಮಾದಲ್ಲಿ ರಜನಿಕಾಂತ್ ನಾಯಕನಾದರೆ ಮತ್ತೊಂದು ಸಿನಿಮಾದಲ್ಲಿ ರಜನಿ ಅಳಿಯ ಧನುಷ್ (Dhanush) ನಾಯಕ. ಈ ಎರಡೂ ಚಿತ್ರಗಳು ಶೂಟಿಂಗ್ ನಡೆಯುತ್ತಿದ್ದು, ಎರಡಲ್ಲೂ ಶಿವಣ್ಣ ಪಾಲ್ಗೊಂಡಿದ್ದಾರೆ.

    ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ವಿಶೇಷ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ,  ಪಾತ್ರ ಯಾವುದು, ಹಿನ್ನೆಲೆ ಏನು ಎನ್ನುವ ವಿಚಾರ ಈವರೆಗೂ ಚಿತ್ರತಂಡ ಬಿಟ್ಟು ಕೊಟ್ಟಿಲ್ಲ. ಸ್ವತಃ ಶಿವರಾಜ್ ಕುಮಾರ್ ಕೂಡ ಈತನಕ ಹೇಳಿಕೊಂಡಿಲ್ಲ. ಪಾತ್ರ ಮತ್ತು ಕಥೆಯ ಬಗ್ಗೆ ಗೌಪ್ಯತೆ ಕಾಪಾಡಿಕೊಂಡು ಬರಲಾಗುತ್ತಿದೆ. ಇದನ್ನೂ ಓದಿ: ದತ್ತಣ್ಣ ಮದುವೆ ಆಗಲಿಲ್ಲ ಏಕೆ? ಗೆಳೆಯರು ಬಿಚ್ಚಿಟ್ಟ ರಹಸ್ಯ

    ಆದರೆ, ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.

  • ‘ಕಾಂತಾರ’ ಕಥೆಗಾಗಿ ಮೆಗಾ ಪ್ಲ್ಯಾನ್ ಹೆಣೆದಿದ್ದಾರಂತೆ ರಿಷಬ್ ಶೆಟ್ಟಿ

    ‘ಕಾಂತಾರ’ ಕಥೆಗಾಗಿ ಮೆಗಾ ಪ್ಲ್ಯಾನ್ ಹೆಣೆದಿದ್ದಾರಂತೆ ರಿಷಬ್ ಶೆಟ್ಟಿ

    ಕಾಂತಾರ (Kantara) ಮೈದಾನ ಸದ್ಯಕ್ಕೆ ಸೈಲೆಂಟಾಗಿದೆ. ಆದರೆ ಇನ್ನೇನು ಕೆಲವೇ ವಾರಗಳಲ್ಲಿ ಹವಾ ಎಬ್ಬಿಸಲಿದೆ. ಅದುವರೆಗೆ ಒಳಗೊಳಗೆ ಹೊಸದೊಂದು ಮೆಗಾಪ್ಲಾನ್ ತಯಾರಾಗುತ್ತಿದೆ. ಅದು ಕನ್ನಡ ಚಿತ್ರರಂಗಕ್ಕೆ ಹೊಸದು. ಇದಕ್ಕೆಲ್ಲ ಮೂಲ ಕಾರಣ ಒನ್ಸ್ ಅಗೇನ್ ರಿಷಬ್‌ ಶೆಟ್ಟಿ (Rishabh Shetty). ಕಾಂತಾರ ಎರಡನೇ ಭಾಗವನ್ನು ಆರಂಭಿಸುವ ಮುನ್ನ ಅವರು ಹೊಸ ಹೊಸ ಯೋಜನೆ ಹಾಕಿಕೊಂಡಿದ್ದಾರೆ. ಅದನ್ನು ಕಾರ್ಯರೂಪಕ್ಕೆ ತರಲು ಸಜ್ಜಾಗಿದ್ದಾರೆ.

    ಎಲ್ಲರ ಕಣ್ಣು ಈಗ ರಿಷಬ್‌ ಶೆಟ್ಟಿ ಅಂಡ್ ಗ್ಯಾಂಗ್‌ನತ್ತ ನೆಟ್ಟಿವೆ. ಕಾಂತಾರದ ಮಹಾ ಗೆಲುವು ಇಡೀ ತಂಡವನ್ನು ಎಲ್ಲಿಗೋ ಹೋಗಿ ಮುಟ್ಟಿಸಿದೆ. ಆ ಸಂಭ್ರಮವನ್ನು ಅನುಭವಿಸಬೇಕು. ಜೊತೆಗೆ ಅದನ್ನು ಕಾಪಾಡಿಕೊಂಡು ಹೋಗಬೇಕು. ಅದಕ್ಕಾಗಿ ಮುಂದಿನ ದಿನಗಳಲ್ಲಿ ಕಾಂತಾರಕ್ಕಿಂತ ಅದ್ಭುತವನ್ನು ಸೃಷ್ಟಿ ಮಾಡಬೇಕು. ಅದಕ್ಕಾಗಿ ಸಕಲ ಸಿದ್ಧತೆ ನಡೆಸುತ್ತಿದೆ ಕಾಂತಾರ ತಂಡ. ಮೊಟ್ಟ ಮೊದಲಿಗೆ ಅದ್ಭುತ ಕತೆಯನ್ನು (Story) ಹುಡುಕಬೇಕು. ಅದಕ್ಕಾಗಿ ದೃಶ್ಯಗಳನ್ನು ಹೊಸೆಯಬೇಕು. ಹಾಗೆಯೇ ಪ್ರತಿ ದೃಶ್ಯಕ್ಕೆ ದೇವರಂಥ ಸಂಭಾಷಣೆ ಹೊಸೆಯಬೇಕು. ಇಲ್ಲೇ ರಿಷಬ್ ಹೊಸ ಥಿಯರಿ ಅಳವಡಿಕೊಳ್ಳಲಿದ್ದಾರಂತೆ.

    ಏನಿದು ಡಿವೈನ್ ಸ್ಟಾರ್ ಪ್ಲಾನು? ವಿಷಯ ಇಷ್ಟೇ. ಕಾಂತಾರ ಸಿನಿಮಾಕ್ಕಾಗಿ ಮೂರು ಮೂರು ರೈಟರ್ಸ್ ಕೆಲಸ ಮಾಡುತ್ತಿದ್ದಾರೆ. ಶೆಟ್ಟರ ಜೊತೆ ಇನ್ನು ಮೂವರು ಕುಳಿತು ಚರ್ಚೆ ಮಾಡಿದ್ದಾರೆ. ಅಫ್‌ಕೋರ್ಸ್ ಎಲ್ಲವೂ ಶೆಟ್ಟರ ಬತ್ತಳಿಕೆಯಿಂದ ಬಂದ ಅಸ್ತ್ರಗಳೆ. ಆದರೂ ಫೈನಲ್ ಡ್ರಾಫ್ಟ್ ಮಾಡುವಾಗ ಸಹಜವಾಗಿ ಅಂತಿಮ ಸಲಹೆ ಕೊಟ್ಟಿದ್ದಾರೆ. ಅದಕ್ಕೆ ತಕ್ಕಂತೆ ಫೈನಲ್ ವರ್ಶನ್ ಸ್ಕ್ರಿಪ್ಟ್ ಸಿದ್ಧವಾಗಿದೆ. ಈಗ ಕಾಂತಾರದ ಮೇಲಿನ ನಿರೀಕ್ಷೆ ವಿಶ್ವದ ತುಂಬಾ ಹಬ್ಬಿದೆ. ಇದನ್ನೂ ಓದಿ:`ಸಿಟಾಡೆಲ್’ ಫಸ್ಟ್ ಲುಕ್ ಔಟ್: ಆ್ಯಕ್ಷನ್ ಅವತಾರದಲ್ಲಿ ಪ್ರಿಯಾಂಕಾ ಚೋಪ್ರಾ

    ಸಿನಿಮಾದ ಸ್ಕ್ರಿಪ್ಟ್ ಅನ್ನು ಅದ್ಭುತವಾಗಿಸಲು ಒಟ್ಟು ಹದಿನಾರು ಮಂದಿಯ ಬರಹಗಾರರ ತಂಡ ಕಾಂತಾರಕ್ಕಾಗಿ ಒಂದುಗೂಡಿದ್ದಾರೆ ಅನ್ನೋದು ಮಾಹಿತಿ. ಈ ಹಿಂದೆ ಶೆಟ್ಟರ ತಂಡದಲ್ಲಿದ್ದ ಖಾಯಂ ಬರಹಗಾರರು ಇಲ್ಲೂ ಮುಂದುವರೆದಿದ್ದಾರೆ. ಅವರ ಜೊತೆ ಇನ್ನು ಕೆಲವು ಅಕ್ಷರ ಬಲ್ಲವರನ್ನು ಕರೆದುಕೊಂಡು ಬಂದಿದ್ದಾರಂತೆ. ಒಂದೊಂದು ದೃಶ್ಯವನ್ನು ಎಲ್ಲರೂ ಬರೆಯಬೇಕು. ಅದರಲ್ಲಿ ಗ್ರೇಟ್ ಅನ್ನಿಸಿಕೊಳ್ಳುವ ದೃಶ್ಯಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಟಾಲಿವುಡ್‌ನಲ್ಲಿ ಈ ರೀತಿ ಪರಚೂರಿ ಬ್ರದರ್ಸ್ ಮಾಡುತ್ತಿದ್ದರು. ಹಲವು ಹುಡುಗರಿಂದ ಡೈಲಾಗ್ ಬರೆಸುತ್ತಿದ್ದರು. ಅದರಲ್ಲಿ ಬೆಸ್ಟ್ ಡೈಲಾಗ್ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಅದನ್ನೇ ರಿಷಬ್ ಮಾಡಲಿದ್ದಾರಾ ಅಥವಾ ಇದೆಲ್ಲ ಗಾಳಿಸುದ್ದಿಯಾ ? ಶೆಟ್ಟರಿಗೆ ಸಂದೇಶ ಮಾಡಿದ್ದೇವೆ. ಉತ್ತರ ಇನ್ನೂ ಬಂದಿಲ್ಲ.

    ಇನ್ನು ಕೆಲವು ದಿನಗಳಲ್ಲಿ ಶೆಟ್ಟರ ಮೊಬೈಲ್ ಸ್ವಿಚ್  ಆಫ್ ಆಗಲಿದೆ. ಅಲ್ಲಿಂದ ಅವರ ಕಾಡಿನಲ್ಲಿ ಕತೆ ಬೇಟೆ ಶುರುವಾಗಲಿದೆ. ಅದು ಮುಗಿದ ಮೇಲೆ ಚಿತ್ರಕತೆ, ಸಂಭಾಷಣೆ ಇತ್ಯಾದಿ. ಎಲ್ಲವೂ ಕೆಲವು ತಿಂಗಳಲ್ಲಿ ಅಂತಿಮ ರೂಪು ಪಡೆಯಲಿದೆ. ಅದಾದ ಮೇಲೆ ಶೂಟಿಂಗ್‌ಗೆ ಹೊರಡಲು ಸಜ್ಜಾಗಲಿದ್ದಾರೆ. ಈ ಬಾರಿ ಮೊದಲ ಭಾಗಕ್ಕಿಂತ ದೊಡ್ಡ ಮಟ್ಟದಲ್ಲಿ, ದೊಡ್ಡ ಕ್ವಾನ್ವಾಸ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ಕಥಾ ಕಲ್ಪನೆ ಕೂಡ ವಿಶಾಲವಾಗಿರಲಿದೆ. ನಿರ್ಮಾಪಕ ವಿಜಯ್ ಕಿರಗಂದೂರ್ ಈ ಬಾರಿ ಹಿಂದೆ ಮುಂದೆ ಯೋಚಿಸದೆ ಕಾಸು ಸುರಿಯಲಿದ್ದಾರೆ. ಎಷ್ಟು ಕೋಟಿ ಅನ್ನೋದು ಸದ್ಯಕ್ಕೆ ಸಸ್ಪೆನ್ಸ್ ಆಫ್ ಕಾಂತಾರ.

    ಒಂದು ಸಿನಿಮಾ ಅನಿರೀಕ್ಷಿತವಾಗಿ ಗೆದ್ದು ಬಿಟ್ಟರೆ, ಎಲ್ಲರ ಕಲ್ಪನೆ ಮೀರಿ ಕಾಸು ಮಾಡಿದರೆ, ಒಂದು ಚಿತ್ರರಂಗದ ದಿಕ್ಕನ್ನೇ ಹೊಸ ದಾದಿಯತ್ತ ಕರೆದುಕೊಂಡು ಹೋದರೆ ಏನಾಗುತ್ತದೋ ಈಗ ಕಾಂತಾರಕ್ಕೂ ಅದೇ ಆಗಿದೆ. ಕನಸು ಮನಸಲ್ಲೂ ಇಂಥ ದೀಪಾವಳಿ ಮಾಡುತ್ತೇವೆ ಎಂದು ಯಾರೂ ಊಹಿಸಿರಲಿಲ್ಲ. ಅದೀಗ ನಡೆದುಹೋಗಿದೆ. ಈಗ ಎಲ್ಲ ಜವಾಬ್ದಾರಿ ರಿಷಬ್‌ಶೆಟ್ಟಿ ಹಾಗೂ ತಂಡದ ಮೇಲೆ ಬಿದ್ದಿದೆ.

  • ತೆರಿಗೆ ಕಟ್ಟಲು ಆಗ್ತಿಲ್ಲ – ಅಳಲು ತೋಡಿಕೊಂಡ ಕಂಗನಾ

    ತೆರಿಗೆ ಕಟ್ಟಲು ಆಗ್ತಿಲ್ಲ – ಅಳಲು ತೋಡಿಕೊಂಡ ಕಂಗನಾ

    ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್‍ರವರು ತೆರಿಗೆ ಕಟ್ಟಲು ಆಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.

    ಕೊರೊನಾ ವೈರಸ್ ತಡೆಗಟ್ಟಲು ಬಹುತೇಕ ರಾಜ್ಯಗಳಲ್ಲಿ ಲಾಕ್‍ಡೌನ್ ಘೋಷಿಸಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಾಕ್‍ಡೌನ್ ಕೇವಲ ಜನ ಸಾಮಾನ್ಯರ ಮೇಲಷ್ಟೇ ಅಲ್ಲದೆ ಸೆಲೆಬ್ರೆಟಿಗಳ ಜೀವನದ ಮೇಲೂ ಹೊಡೆತ ಬಿದ್ದಿದೆ. ಅನೇಕ ಕಲಾವಿರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

    ಸದ್ಯ ಬಾಲಿವುಡ್ ನಟಿ ಕಂಗನಾ ರಣಾವತ್ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಒಂದು ಸಿನಿಮಾಗೆ ಏನಿಲ್ಲ ಅಂದರೂ ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಹೀಗಿದ್ದರೂ ಕಂಗನಾ ಕಳೆದ ವರ್ಷದ ತೆರಿಗೆಯಲ್ಲಿ ಅರ್ಧದಷ್ಟನ್ನು ಮಾತ್ರ ಪಾವತಿ ಮಾಡಿದ್ದು, ಈ ಬಾರಿ ನನಗೆ ತೆರಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ವಧು ಯಾಮಿಯನ್ನ ರಾಧೆ ಮಾಗೆ ಹೋಲಿಸಿದ ನಟ – ಚಪ್ಪಲಿ ಕೇಳಿದ ಕಂಗನಾ

    ಈ ಕುರಿತಂತೆ ನಟಿ ಕಂಗನಾ ರಣಾವತ್‍ರವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ, ನನ್ನ ಒಟ್ಟು ಆದಾಯದಲ್ಲಿ ಶೇ. 45ರಷ್ಟು ತೆರಿಗೆ ಪಾವತಿಸುತ್ತೇನೆ. ನಾನು ಅತೀ ಹೆಚ್ಚು ತೆರಿಗೆ ಪಾವತಿಸುವ ನಟಿಯಾಗಿದ್ದೇನೆ. ಆದರೆ ಕೆಲಸ ಇಲ್ಲದೆ, ಕಳೆದ ವರ್ಷ ಅರ್ಧದಷ್ಟು ತೆರಿಗೆಯನ್ನು ಪಾವತಿಸಿದ್ದೇನೆ. ಇದೀಗ ತೆರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿದ್ದು, ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಎಂದಿದ್ದಾರೆ.

    ನಾನು ತೆರಿಗೆ ಪಾವತಿಸುವುದು ತಡ ಮಾಡಿದರೆ ಸರ್ಕಾರ ನನಗೆ ಬಡ್ಡಿ ವಿಧಿಸುತ್ತದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಈ ಸಮಯ ನಮ್ಮೆಲ್ಲರಿಗೂ ಕಠಿಣವಾಗಿರಬಹುದು. ಆದರೆ ಎಲ್ಲರೂ ಒಂದಾದರೆ ಸಮಯಕ್ಕಿಂತ ಕಠಿಣವಾಗಬಹುದು ಎಂದು ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ: ಕೊರೊನಾ ವೈರಸ್‍ನ್ನು ನಾನು ಹೊಡೆದೋಡಿಸಿದೆ: ಕಂಗನಾ

  • ಹಾಲಿವುಡ್ ಸಿನಿಮಾ ಮಾಡಲಿದ್ದಾರೆ ರಾಜಮೌಳಿ : ವಿಜಯೇಂದ್ರ ಪ್ರಸಾದ್

    ಹಾಲಿವುಡ್ ಸಿನಿಮಾ ಮಾಡಲಿದ್ದಾರೆ ರಾಜಮೌಳಿ : ವಿಜಯೇಂದ್ರ ಪ್ರಸಾದ್

    ಹೈದರಾಬಾದ್: ಟಾಲಿವುಡ್ ಖ್ಯಾತ ನಿರ್ದೇಶಕ ರಾಜಮೌಳಿ ಹಾಲಿವುಡ್‍ನಲ್ಲಿ ಸಿನಿಮಾ ನಿರ್ದೇಶಿಸಲಿದ್ದಾರೆ ಎಂದು ಅವರ ತಂದೆ ವಿಜಯೇಂದ್ರ ಪ್ರಸಾದ್ ತಿಳಿಸಿದ್ದಾರೆ.

    ಬಾಹುಬಲಿ ಸಿನಿಮಾದ ಮೂಲಕ ಇಡೀ ವಿಶ್ವವೇ ಟಾಲಿವುಡ್ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ ರಾಜಮೌಳಿ ಹಾಲಿವುಡ್‍ನಲ್ಲಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಆಗಾಗ ಹರಿದಾಡುತ್ತಲೇ ಇತ್ತು. ಆದರೀಗ ಈ ಮಾತು ಸತ್ಯ ಆಗುತ್ತಿದೆ. ಹೌದು, ನಿರ್ದೇಶಕ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಸಂದರ್ಶನವೊಂದರಲ್ಲಿ ರಾಜಮೌಳಿ ಹಾಲಿವುಡ್‍ನಲ್ಲಿ ಸಿನಿಮಾ ನಿರ್ದೇಶಿಸಿತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಇದನ್ನು ಓದಿ:ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಗೆ ಯಶ್ ಸಹಾಯ ಹಸ್ತ

    ವಿಶೇಷವೆಂದರೆ ರಾಜಮೌಳಿಯವರು ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರಕ್ಕೆ ವಿಜಯೇಂದ್ರರವರೆ ಕಥೆ ಬರೆಯುತ್ತಿದ್ದು, ಇದು ಐತಿಹಾಸಿಕ ಕತೆ ಆಧಾರಿಸಿದ ಸಿನಿಮಾವಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಚಿತ್ರ ಕುರಿತಂತೆ ಹಾಲಿವುಡ್ ಪ್ರಖ್ಯಾತ ನಿರ್ಮಾಣ ಸಂಸ್ಥೆಯೊಂದಿಗೆ ಮಾತುಕತೆ ಮಗಿದಿದ್ದು, ಈ ಸಿನಿಮಾದಲ್ಲಿ ಯಾವ ನಟರು ಇರುವುದಿಲ್ಲ. ಇದೊಂದು ಅನಿಮೇಷನ್ ಸಿನಿಮಾ ಆಗಿರಲಿದ್ದು, ಚಿತ್ರದ ಕಥೆ ಭಾರತದ ಪರಿಸರದ್ದೇ ಆಗಿರುತ್ತದೆ ಎಂದು ಹೇಳಿದ್ದಾರೆ.

    ಸದ್ಯ ನಿರ್ದೇಶಕ ರಾಜಮೌಳಿ ಟಾಲಿವುಡ್‍ನ ಸ್ಟಾರ್ ನಟರಾದ ರಾಮ್‍ಚರಣ್ ಹಾಗೂ ಎನ್‍ಟಿಆರ್ ಅಭಿನಯಿಸುತ್ತಿರುವ ‘ಆರ್‌ಆರ್‌ಆರ್‌’ ಸಿನಿಮಾದಲ್ಲಿ ಬ್ಯೂಸಿಯಾಗಿದ್ದು, ಈ ಸಿನಿಮಾದಲ್ಲಿ ಬಹುತೇಕ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಬಹು ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಈ ಸಿನಿಮಾದಲ್ಲ ಬಾಲಿವುಡ್ ನಟಿ ಅಲಿಯಾ ಭಟ್ ನಾಯಕಿಯಾಗಿ ಅಭಿನಯಿಸಿದ್ದಾರೆ.

  • 70 ಪೈಸೆ ಕೊಟ್ಟು ಬಂಗಾರದ ಪಂಜರ ಸಿನ್ಮಾ ನೋಡಿದ ಕಥೆ ಬಿಚ್ಚಿಟ್ಟ ಜಗ್ಗೇಶ್

    70 ಪೈಸೆ ಕೊಟ್ಟು ಬಂಗಾರದ ಪಂಜರ ಸಿನ್ಮಾ ನೋಡಿದ ಕಥೆ ಬಿಚ್ಚಿಟ್ಟ ಜಗ್ಗೇಶ್

    ಬೆಂಗಳೂರು: ತಾವು ಚಿಕ್ಕವರಾಗಿದ್ದಾಗ ಕೇವಲ 70 ಪೈಸೆ ಕೊಟ್ಟು ಅಣ್ಣಾವರ ಅಭಿನಯದ ಬಂಗಾರದ ಪಂಜರ ಸಿನಿಮಾ ನೋಡಿದ ಕಥೆಯನ್ನು ನವರಸ ನಾಯಕ ಜಗ್ಗೇಶ್ ಅವರು ನೆನಪಿಸಿಕೊಂಡಿದ್ದಾರೆ.

    ಕೊರೊನಾ ಲಾಕ್‍ಡೌನ್ ನಡುವೆ ಮನೆಯಲ್ಲೇ ಉಳಿದಿರುವ ಜಗ್ಗೇಶ್ ಅವರು, ತಮ್ಮ ಪತ್ನಿ, ಮಕ್ಕಳು, ಮೊಮ್ಮಕ್ಕಳ ಜೊತೆ ಕಾಲಕಳೆಯುತ್ತಿದ್ದಾರೆ. ಜೊತೆಗೆ ಎಂದಿನಂತೆ ಅವರು ತಮ್ಮ ಟ್ವಿಟ್ಟರ್ ನಲ್ಲಿ ಸಕ್ರಿಯವಾಗಿ ಇದ್ದಾರೆ. ನಿನ್ನೇ ತಾನೇ ನನ್ನ ತಾತನೇ ನನ್ನ ಮೊಮ್ಮಗನಾಗಿ ಹುಟ್ಟಿದ್ದಾನೆ ಎಂದು ಟ್ವೀಟ್ ಮಾಡಿದ್ದರು. ಈಗ ತಮ್ಮ ತಾತ ಜೊತೆ ಸಿನಿಮಾ ನೋಡಿದ ಕಥೆಯೊಂದನ್ನು ಹೇಳಿಕೊಂಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಬಂಗಾರದ ಪಂಜರ 1974ರಲ್ಲಿ ತೆರೆಕಂಡಾಗ ನನಗೆ 11 ವರ್ಷ ವಯಸ್ಸು. ತಾತ ಮಾಯಸಂದ್ರದಿಂದ ಬಂದು ನನಗೆ ಈ ಚಿತ್ರ ತೋರಿಸಿದ್ದರು. ಗೀತಾಂಜಲಿ ಚಿತ್ರಮಂದಿರ 70ಪೈಸೆ ಕೊಟ್ಟು ಮುಂದಿನ ಬೆಂಚಿನಲ್ಲಿ ಕುಳಿತು ಮೈಮರೆತು ಕೇಕೆಹಾಕಿ ಸಿನಿಮಾ ನೋಡುತ್ತಿದ್ದ ಕಾಲ ಅದು. ಇದೇ ಚಿತ್ರವನ್ನು ನಾನು ನಟನಾದ ಮೇಲೆ 1995ರಲ್ಲಿ ಕಥೆ ಸ್ವಲ್ಪ ಬದಲು ಮಾಡಿ ಪಟ್ಟಣಕ್ಕೆ ಬಂದ ಪುಟ್ಟ ಸಿನಿಮಾ ಮಾಡಿ ನಾನು ಅದರಲ್ಲಿ ನಟಿಸಿದ್ದೆ. ಈ ಸಿನಿಮಾ ಮೆಗಾ ಹಿಟ್ ಆಯಿತು. ಇಂದು ಈ ಚಿತ್ರದಿಂದ ಅಮರ ಹಳೆ ನೆನಪು ಎಂದು ಬರೆದುಕೊಂಡಿದ್ದಾರೆ.

    ಅಮರವಾಗಿ ಉಳಿದ ಅಣ್ಣಾವರ ನಟನೆ
    1974ರಲ್ಲಿ ಬಿಡುಗಡೆಯಾದ ಬಂಗಾರ ಪಂಜರ ಸಿನಿಮಾದಲ್ಲಿ ಹಳ್ಳಿಯ ಕುರಿಕಾಯುವ ಯುವಕನ ಪಾತ್ರದಲ್ಲಿ ವರನಟ ಡಾ. ರಾಜ್‍ಕುಮಾರ್ ಅವರು ಮನೋಜ್ಞವಾಗಿ ನಟಿಸಿದ್ದರು. ಹಳ್ಳಿ ಮುಗ್ದ ಹುಡುಗ ಸಿಟಿಗೆ ಬಂದು ಅಲ್ಲಿಯ ಜೀವನ ಶೈಲಿಗೆ ಹೊಂದಿಕೊಳ್ಳು ಪರಿತಪಿಸುವ ಕಥೆಯೇ ಬಂಗಾರದ ಪಂಜರ. ವಿ ಸೋಮಶೇಖರ್ ನಿರ್ದೇಶದ ಈ ಚಿತ್ರ ಅಂದು ಸೂಪರ್ ಹಿಟ್ ಆಗಿತ್ತು. ರಾಜಣ್ಣನ ನಟನೆ ಅಮರವಾಗಿ ಉಳಿದಿತ್ತು.

    ಈ ಸಿನಿಮಾವನ್ನು ಆಧಾರವಾಗಿ ಇಟ್ಟುಕೊಂಡೇ 1995ರಲ್ಲಿ ಪಟ್ಟಣಕ್ಕೆ ಬಂದ ಪುಟ್ಟ ಎಂಬ ಸಿನಿಮಾವನ್ನು ಮಾಡಲಾಗಿತ್ತು. ಈ ಸಿನಿಮಾದಲ್ಲಿ ಜಗ್ಗೇಶ್ ಅವರು ನಾಯಕ ನಟನಾಗಿ ನಟಿಸಿದ್ದರು. ಈ ಸಿನಿಮಾ ಕೂಡ ಬ್ಲಾಕ್ ಬಾಸ್ಟರ್ ಹಿಟ್ ಆಗಿ ಜಗ್ಗೇಶ್ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ಒಬ್ಬ ಹಳ್ಳಿಯ ಯುವಕ ಪಟ್ಟಣಕ್ಕೆ ಬಂದು ಕಷ್ಟಪಡುವ ರೀತಿಯನ್ನು ಈ ಸಿನಿಮಾದಲ್ಲಿ ಎಳೆ ಎಳೆಯಾಗಿ ಕಾಮಿಡಿಯೊಂದಿಗೆ ತೋರಿಸಲಾಗಿತ್ತು.

  • ನನ್ನನ್ನು ಯಾಕೆ ದೂಷಿಸುತ್ತೀರಾ, ಉಳಿದ ಮಕ್ಕಳನ್ನು ಯಾಕೆ ಪ್ರಶ್ನಿಸಲ್ಲ: ರಾನು ಪುತ್ರಿ

    ನನ್ನನ್ನು ಯಾಕೆ ದೂಷಿಸುತ್ತೀರಾ, ಉಳಿದ ಮಕ್ಕಳನ್ನು ಯಾಕೆ ಪ್ರಶ್ನಿಸಲ್ಲ: ರಾನು ಪುತ್ರಿ

    ನವದೆಹಲಿ: ರೈಲ್ವೆ ನಿಲ್ದಾಣದಿಂದ ಬಾಲಿವುಡ್ ಅಂಗಳಕ್ಕೆ ಹಾರಿದ ವೈರಲ್ ಸಿಂಗರ್ ರಾನು ಮೊಂಡಲ್ ಈಗ ಸಖತ್ ಫೇಮಸ್. ಇಷ್ಟು ದಿನ ಒಂಟಿಯಾಗಿದ್ದ ರಾನು ಅವರು ವೈರಲ್ ಆಗುತ್ತಿದ್ದಂತೆ ಮಗಳು ಅವರನ್ನು ಭೇಟಿಯಾಗಿದ್ದ ವಿಚಾರ ಎಲ್ಲರಿಗೂ ತಿಳಿದಿದೆ. ಆದರೆ ತಾಯಿ ಹೆಸರು ಗಳಿಸಿದ ಬಳಿಕ ಅವರ ಬಳಿಗೆ ಮಗಳು ಬಂದಿದ್ದಾಳೆ ಎಂದವರಿಗೆ ರಾನು ಪುತ್ರಿ ತಿರುಗೇಟು ನೀಡಿದ್ದಾರೆ.

    ಮಾಧ್ಯಮವೊಂದು ರಾನು ಪುತ್ರಿ ಎಲಿಜಬೆತ್ ಸಾಥಿ ರಾಯ್ ಅವರ ಸಂದರ್ಶನ ಮಾಡಿದಾಗ ತಾಯಿ ಬಗ್ಗೆ ಮಾತನಾಡಿ, ನನ್ನ ತಾಯಿ ರೈಲ್ವೇ ನಿಲ್ದಾಣದಲ್ಲಿ ಹಾಡು ಹೇಳುತ್ತಿದ್ದ ವಿಚಾರ ನನಗೆ ತಿಳಿದಿರಲಿಲ್ಲ. ಈ ಹಿಂದೆ ಸಾಕಷ್ಟು ಬಾರಿ ನಾನು ಆಕೆಯನ್ನು ಭೇಟಿ ಮಾಡಲು ಪ್ರಯತ್ನಿಸಿದ್ದೆ. ಆದರೆ ಸಾಧ್ಯವಾಗಿರಲಿಲ್ಲ. ನನ್ನ ಪತಿ ನನ್ನ ಜೊತೆ ಇಲ್ಲ. ನಾನು ಚಿಕ್ಕ ಅಂಗಡಿ ಇಟ್ಟುಕೊಂಡು ಮಗುವೊಂದಿಗೆ ಜೀವನ ನಡೆಸುತ್ತಿದ್ದೇನೆ. ನನ್ನ ಬದುಕು ಸಾಗಿಸುವುದೆ ಕಷ್ಟವಿದೆ. ಆದರಲ್ಲೂ ನಾನು ನನ್ನ ತಾಯಿಯನ್ನು ಆಗಾಗ ನೋಡಲು ಬರುತ್ತಿದ್ದೆ. ಸಾಕಷ್ಟು ಬಾರಿ ನನ್ನ ಜೊತೆಯೇ ಇರು ಎಂದು ಅಮ್ಮನಿಗೆ ಹೇಳಿದ್ದೆ. ಆದರೆ ಅವರು ನನ್ನ ಮಾತನ್ನು ಕೇಳಿರಲಿಲ್ಲ. ಆಗಾಗ ನಾನು ತಾಯಿಗೆ ಹಣವನ್ನು ಹಾಗೂ ತಿನ್ನಲು ಆಹಾರವನ್ನು ಕೊಂಡೊಯ್ಯುತ್ತಿದ್ದೆ ಎಂದರು. ಇದನ್ನು ಓದಿ:ನಾನು ಫುಟ್‍ಪಾತ್‍ನಲ್ಲಿ ಹುಟ್ಟಿದವಳಲ್ಲ- ಕುಟುಂಬದ ಕಹಾನಿ ಬಿಚ್ಚಿಟ್ಟ ರಾನು

    ನನ್ನ ತಾಯಿ ಎರಡು ಮದುವೆಯಾಗಿದ್ದಾರೆ. ನಾನು ಅವರ ಮೊದಲ ಪತಿಯ ಮಗಳು, ನನಗೆ ಓರ್ವ ಸಹೋದರ ಕೂಡ ಇದ್ದಾನೆ. ಅವರ ಎರಡನೇ ಗಂಡನಿಗೆ ಎರಡು ಮಕ್ಕಳಿದ್ದಾರೆ. ಒಟ್ಟು 4 ಮಕ್ಕಳಿದ್ದೇವೆ. ಆದರೆ ಎಲ್ಲರೂ ಕೂಡ ನನ್ನನ್ನು ಮಾತ್ರ ದೂಷಿಸುತ್ತಿದ್ದಾರೆ. ಉಳಿದ ಮಕ್ಕಳನ್ನು ಯಾಕೆ ಯಾರು ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು. ಕೆಲವು ವರ್ಷಗಳ ಹಿಂದೆಯಷ್ಟೆ ನನ್ನ ತಂದೆ ತೀರಿಹೋದರು. ಆದರೆ ಅಮ್ಮನ ಎರಡನೇ ಪತಿ ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ. ಅವರ ಎರಡನೇ ಪತಿಯ ಮಕ್ಕಳು ಮುಂಬೈನಲ್ಲಿ ವಾಸವಿದ್ದಾರೆ. ಅವರು ಯಾಕೆ ಅಮ್ಮನನ್ನು ನೋಡಲು ಬಂದಿಲ್ಲ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ ಎಂದು ಕಿಡಿಕಾರಿದರು. ಇದನ್ನು ಓದಿ:ರಾನು ಕಂಠದಲ್ಲಿ ಮತ್ತೊಂದು ಹೊಸ ಹಾಡು ತಂದ ಹಿಮೇಶ್

    ಅವರು ಬೀದಿಯಲ್ಲಿ ಹಾಡಿ, ಜೀವನ ನಡೆಸುತ್ತಿದ್ದ ಬಗ್ಗೆ ನನಗೆ ತಿಳಿದಿರಲಿಲ್ಲ. ಅವರನ್ನು ರಣಘಾಟ್‍ನ ಅಮ್ರಾ ಶೋಬಾಯಿ ಶೊಯ್ತಾನ್ ಕ್ಲಬ್ ಅವರು ನೋಡಿಕೊಳ್ಳುತ್ತಿದ್ದರು. ನನ್ನ ಸಹೋದರರು ಕೂಡ ಈ ಕ್ಲಬ್ ಸದಸ್ಯರಾಗಿದ್ದರು. ಅವರೇ ಅಮ್ಮನನ್ನು ಕ್ಲಬ್‍ನಲ್ಲಿ ನೋಡಿಕೊಳ್ಳುತ್ತಿದ್ದರು. ಅವರು ನನಗೆ ಅಮ್ಮನನ್ನು ಭೇಟಿಯಾಗಲು ಬಿಡುತ್ತಿರಲಿಲ್ಲ. ಫೋನ್ ಮಾಡಿದ್ದರು ಕೂಡ ಮಾತನಾಡಲು ಕೊಡುತ್ತಿರಲಿಲ್ಲ. ಅಮ್ಮನ ಜೊತೆ ಮಾತನಾಡಲು ಪ್ರಯತ್ನಿಸಿದಾಗ ನನ್ನ ಮೇಲೆ ಹಲ್ಲೆ ಮಾಡಿದ್ದರು. ಆದ್ದರಿಂದ ನಾನು ಅಮ್ಮನಿಂದ ದೂರವಿದ್ದೆ. ಬಳಿಕ ಅಮ್ಮ ಬಗ್ಗೆ ಏನು ಮಾಹಿತಿ ಇರಲಿಲ್ಲ ಎಂದು ಆರೋಪಿಸಿದರು.

    ಈಗ ಅಮ್ಮನಿಗೆ ಹಣ, ಹೆಸರು ಬರುತ್ತಿರುವುದಕ್ಕೆ ಅವರು ನನ್ನನ್ನು ಮತ್ತೆ ಅಮ್ಮನಿಂದ ದೂರ ಮಾಡುತ್ತಿದ್ದಾರೆ. ಅಮ್ಮನಿಗೆ ನನ್ನ ಬಗ್ಗೆ ತಪ್ಪಾಗಿ ಹೇಳಿ ತಲೆಕೆಡಿಸುತ್ತಿದ್ದಾರೆ. ಇಬ್ಬರು ಸೇರಿ ಇತ್ತೀಚೆಗೆ ತಾಯಿಯ ಬ್ಯಾಂಕ್ ಖಾತೆಯಿಂದ 10 ಸಾವಿರ ತೆಗೆದುಕೊಂಡಿದ್ದಾರೆ. ಮನೆಗೆ ಸಾಮಾಗ್ರಿ ತಂದು ಕೊಡುವುದಾಗಿ ಅಮ್ಮನ ಬಳಿ ಹಣ ಪಡೆದು, ಆಕೆಗೆ 4 ಜೊತೆ ಬಟ್ಟೆ, ಬ್ಯಾಗ್ ತಂದು ಕೊಟ್ಟು, ಉಳಿದ ಹಣವನ್ನು ತಾವೇ ಖಾಲಿ ಮಾಡಿದ್ದಾರೆ. ಎಲ್ಲರು ನನ್ನನ್ನೇ ದೂಷಿಸುತ್ತಿದ್ದಾರೆ. ಆದರು ಕೂಡ ನಾನು ಅಮ್ಮನಿಗೆ ಬೆಂಬಲ ನೀಡುತ್ತೇನೆ. ಅವರ ಮಧುರ ಧ್ವನಿಯ ಮೂಲಕ ಅವಕಾಶವನ್ನು ಅವರೇ ಗಿಟ್ಟಿಸಿಕೊಂಡಿದ್ದಾರೆ. ಅವರ ಮಗಳೆಂದು ಹೇಳಿಕೊಳ್ಳಲು ನನಗೆ ಹೆಮ್ಮೆಯಾಗುತ್ತೆ ಎಂದರು.

    ಈಗಲೂ ನಾನು ನಮ್ಮ ಮನೆಗೆ ಬಾ, ನನ್ನ ಜೊತೆ ಇರು ಎಂದು ಅಮ್ಮನಿಗೆ ಹೇಳುತ್ತಿದ್ದೇನೆ ಆದರೆ ಅವರು ನನ್ನ ಮಾತನ್ನು ಕೇಳುತ್ತಿಲ್ಲ. ಅವರನ್ನು ನಾನು ಒತ್ತಾಯ ಮಾಡಲ್ಲ. ಅವರಿಗೆ ಇಷ್ಟವಿದ್ದರೆ ನನ್ನ ಜೊತೆಯಲ್ಲಿ ಇರಲಿ ನಾನು ನೋಡಿಕೊಳ್ಳುತ್ತೇನೆ ಎಂದು ಎಲಿಜಬೆತ್ ತಿಳಿಸಿದರು.