Tag: stray dogs

  • ಅಧಿಕಾರಿಗಳು ಪತ್ರಿಕೆ ಓದಿಲ್ಲವೇ? – ಬೀದಿ ನಾಯಿಗಳ ವಿಚಾರದಲ್ಲಿ ಪ್ರತಿಕ್ರಿಯೆ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂ ಚಾಟಿ

    ಅಧಿಕಾರಿಗಳು ಪತ್ರಿಕೆ ಓದಿಲ್ಲವೇ? – ಬೀದಿ ನಾಯಿಗಳ ವಿಚಾರದಲ್ಲಿ ಪ್ರತಿಕ್ರಿಯೆ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂ ಚಾಟಿ

    – ನ.3 ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಸ್‌ಗೆ ಸಮನ್ಸ್
    – ವಿಚಾರಣೆಗೆ ಗೈರಾದ್ರೆ ಕ್ರಮದ ಎಚ್ಚರಿಕೆ

    ನವದೆಹಲಿ: ಬೀದಿ ನಾಯಿಗಳ (Stray Dogs) ಸಮಸ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರತಿಕ್ರಿಯೆ ದಾಖಲಿಸದ ರಾಜ್ಯಗಳನ್ನು ಸುಪ್ರೀಂಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ಅಫಿಡವಿಟ್‌ಗಳನ್ನು ಸಲ್ಲಿಸಲು ವಿಫಲವಾದ ಕಾರಣ ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ಹೊರತುಪಡಿಸಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು (Chief Secretaries) ತಮ್ಮ ಮುಂದೆ ಹಾಜರಿರುವಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

    ನ್ಯಾಯಮೂರ್ತಿ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಮುಂದಿನ ವಿಚಾರಣೆಯ ದಿನಾಂಕದಂದು ಅಧಿಕಾರಿಗಳು ಗೈರಾದರೆ ದಂಡ ವಿಧಿಸಲಾಗುವುದು ಅಥವಾ ಬಲವಂತದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೀಠ ಎಚ್ಚರಿಕೆ ನೀಡಿದೆ.

    ಅಧಿಕಾರಿಗಳು ಪತ್ರಿಕೆ ಓದಿಲ್ಲವೇ ಅಥವಾ ಸಾಮಾಜಿಕ ಮಾಧ್ಯಮಗಳನ್ನು ನೋಡಿಲ್ಲವೇ? ನವೆಂಬರ್ 3 ರಂದು ಎಲ್ಲಾ ಮುಖ್ಯ ಕಾರ್ಯದರ್ಶಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು. ಈ ಬಗ್ಗೆ ವಿಚಾರಣೆ ನಡೆಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

    ನಾಯಿಗಳ ಜನನ ನಿಯಂತ್ರಣ ನಿಯಮಗಳ ಬಗ್ಗೆ ಅಭಿಪ್ರಾಯ ತಿಳಿಸುವಂತೆ ನ್ಯಾಯಾಲಯವು ಈ ಹಿಂದೆ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳು ಮಾತ್ರ ಅಫಿಡವಿಟ್‌ಗಳನ್ನು ಸಲ್ಲಿಸಿವೆ. ಉಳಿದಂತೆ ಎಲ್ಲಾ ರಾಜ್ಯಗಳು ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿವೆ. ಅದಕ್ಕಾಗಿ ನ್ಯಾಯಾಲಯ ಚಾಟಿ ಬೀಸಿದೆ.

    ಬೀದಿ ನಾಯಿಗಳ ದಾಳಿಯಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ವಿದೇಶಗಳಲ್ಲಿ ದೇಶದ ಚಿತ್ರಣವನ್ನು ಕೆಟ್ಟದಾಗಿ ತೋರಿಸಲಾಗುತ್ತಿದೆ ಇಂತಹ ವರದಿಗಳನ್ನು ನಾವು ಓದುತ್ತಿದ್ದೇವೆ ಎಂದು ಸರ್ಕಾರಗಳನ್ನು ನ್ಯಾಯಮೂರ್ತಿ ವಿಕ್ರಮ್ ನಾಥ್ ಟೀಕಿಸಿದರು.

  • ಉತ್ತರ ಪ್ರದೇಶ | ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷೆ!

    ಉತ್ತರ ಪ್ರದೇಶ | ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷೆ!

    – ಮೊದಲ ಸಲ ಕಚ್ಚಿದ್ರೆ 10 ದಿನ ಬಂಧನ, 2ನೇ ಬಾರಿ ಕಚ್ಚಿದ್ರೆ ಜೀವಾವಧಿ ಶಿಕ್ಷೆ!

    ಲಕ್ನೋ: ಉತ್ತರ ಪ್ರದೇಶ (Uttar Pradesh) ಸರ್ಕಾರ ಬೀದಿ ನಾಯಿಗಳ (Stray Dogs) ದಾಳಿಯನ್ನು ತಡೆಯಲು ದಿಟ್ಟ ಕ್ರಮಕೈಗೊಂಡಿದೆ. ಪ್ರಚೋದನೆ ಇಲ್ಲದೆ ಮನುಷ್ಯರನ್ನು ಮೊದಲ ಸಲ ಕಚ್ಚಿದ್ರೆ ಅದನ್ನು 10 ದಿನಗಳವರೆಗೆ ಪ್ರಾಣಿ ಕೇಂದ್ರದಲ್ಲಿ ಇರಿಸಲಾಗುತ್ತದೆ. ಮತ್ತೆ ಅದೇ ತಪ್ಪನ್ನು ಅದು ಮುಂದುವರಿಸಿದರೆ ಅದಕ್ಕೆ ಜೀವಾವಧಿ ಶಿಕ್ಷೆ  (Life Imprisonment) ವಿಧಿಸಲು ಸರ್ಕಾರ ನಿರ್ಧರಿಸಿದೆ.

    ಶಿಕ್ಷೆಗೆ ಗುರಿಯಾದ ನಾಯಿಗಳಿಗೆ ಬಚಾವ್‌ ಆಗಲು ಇರುವ ಏಕೈಕ ಮಾರ್ಗವೆಂದರೆ ಯಾರಾದರೂ ಅವುಗಳನ್ನು ದತ್ತು ತೆಗೆದುಕೊಳ್ಳಬೇಕು. ದತ್ತು ತೆಗೆದುಕೊಳ್ಳಬೇಕಾದರೆ ಮತ್ತೆ ಅವುಗಳನ್ನು ಬೀದಿಗಳಲ್ಲಿ ಬಿಡುವುದಿಲ್ಲ ಎಂದು ಅಫಿಡವಿಟ್ ಸಲ್ಲಿಸಬೇಕು. ಈ ಬಗ್ಗೆ ಗ್ರಾಮೀಣ ಮತ್ತು ನಗರ ನಾಗರಿಕ ಸಂಸ್ಥೆಗಳಿಗೆ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜತ್ ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬೀದಿ ನಾಯಿಗಳನ್ನ ಹಿಡಿಯಿರಿ, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

    ಬೀದಿ ನಾಯಿ ಕಚ್ಚಿದ ನಂತರ ಯಾರಾದರೂ ರೇಬೀಸ್‌ ತಡೆಗೆ ಲಸಿಕೆಯನ್ನು ತೆಗೆದುಕೊಂಡರೆ, ತನಿಖೆ ಮಾಡಲಾಗುತ್ತದೆ. ಬಳಿಕ ನಾಯಿಯನ್ನು ಪತ್ತೆ ಮಾಡಿ ಹತ್ತಿರದ ಪ್ರಾಣಿ ಜನನ ನಿಯಂತ್ರಣ ಕೇಂದ್ರಕ್ಕೆ ಕರೆದೊಯ್ಯಲಾಗುತ್ತದೆ. ಅದರ ಮೇಲೆ 10 ದಿನಗಳವರೆಗೆ ನಿಗಾ ಇಡಲಾಗುತ್ತದೆ. ಅದರ ನಡವಳಿಕೆಯನ್ನು ಗಮನಿಸಿ, ಮೈಕ್ರೋಚಿಪ್ ಅಳವಡಿಸಿ ಬಿಡುಗಡೆ ಮಾಡಲಾಗುತ್ತದೆ. ಈ ಮೈಕ್ರೋಚಿಪ್‌ ನಾಯಿಯ ಎಲ್ಲಾ ವಿವರಗಳನ್ನು ಹೊಂದಿರುತ್ತದೆ. ಇದರಿಂದಾಗಿ ಸ್ಥಳವನ್ನು ಪತ್ತೆಹಚ್ಚಲು ಅನುಕೂಲವಾಗುತ್ತದೆ ಎಂದು ಪ್ರಯಾಗ್‌ರಾಜ್ ಪುರಸಭೆಯ ಪಶುವೈದ್ಯ ಅಧಿಕಾರಿ ಡಾ. ಬಿಜಯ್ ಅಮೃತ್ ರಾಜ್ ತಿಳಿಸಿದ್ದಾರೆ.

    ಇನ್ನೂ ಅದೇ ನಾಯಿ ಎರಡನೇ ಬಾರಿಗೆ ಪ್ರಚೋದನೆಗೆ ಒಳಗಾಗದೆ ಮನುಷ್ಯನನ್ನು ಕಚ್ಚಿದರೆ, ಅದನ್ನು ಜೀವಿತಾವಧಿಯವರೆಗೆ ಕೇಂದ್ರದಲ್ಲಿ ಇಡಲಾಗುತ್ತದೆ. ನಾಯಿ ಪ್ರಚೋದನೆಯಿಂದ ಕಚ್ಚಿದೆಯೇ ಇಲ್ಲವೇ ಎಂಬುದ್ದನ್ನು ಅರಿಯಲು ಆ ಪ್ರದೇಶದ ಪಶುವೈದ್ಯರು, ಪ್ರಾಣಿಗಳ ಬಗ್ಗೆ ಅನುಭವ ಹೊಂದಿರುವ ಮತ್ತು ಅವುಗಳ ನಡವಳಿಕೆಯನ್ನು ಅರ್ಥಮಾಡಿಕೊಳ್ಳುವ ಮೂರು ಜನರ ಸಮಿತಿಯನ್ನು ರಚಿಸಲಾಗುತ್ತದೆ. ದಾಳಿಯು ಅಪ್ರಚೋದಿತವಾಗಿದೆಯೇ ಎಂದು ಅವರು ಪರಿಶೀಲಿಸುತ್ತಾರೆ. ಯಾರಾದರೂ ಕಲ್ಲು ಎಸೆದ ನಂತರ ಪ್ರಾಣಿ ಕಚ್ಚಿದರೆ, ಅದನ್ನು ಅಪ್ರಚೋದಿತ ದಾಳಿ ಎಂದು ಪರಿಗಣಿಸಲಾಗುವುದಿಲ್ಲ ಎಂದಿದ್ದಾರೆ.

    ಶಿಕ್ಷೆಗೆ ಗುರಿಯಾದ ನಾಯಿಗಳನ್ನು ದತ್ತು ಪಡೆಯಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ. ದತ್ತು ಪಡೆಯುವ ವ್ಯಕ್ತಿಯ ಹೆಸರು, ವಿಳಾಸ ಇತ್ಯಾದಿಗಳ ಎಲ್ಲಾ ವಿವರಗಳನ್ನು ಒದಗಿಸಬೇಕು. ನಾಯಿಯನ್ನು ಬೀದಿಗಳಲ್ಲಿ ಬಿಡುವುದಿಲ್ಲ ಎಂದು ಅಫಿಡವಿಟ್ ಸಲ್ಲಿಸಬೇಕು. ಅದನ್ನು ದತ್ತು ಪಡೆದ ವ್ಯಕ್ತಿಗೆ ಒಪ್ಪಿಸಬೇಕಾದರೆ ನಾಯಿಯ ಮೈಕ್ರೋಚಿಪ್ ವಿವರಗಳನ್ನು ದಾಖಲಿಸಿಕೊಳ್ಳಲಾಗುತ್ತದೆ. ಅದನ್ನು ಬಿಡುಗಡೆ ಮಾಡಿದರೆ, ದತ್ತು ಪಡೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದನ್ನೂ ಓದಿ: ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ

  • ಗದಗ | ಬೀದಿನಾಯಿ ದಾಳಿ – 4 ವರ್ಷದ ಬಾಲಕನಿಗೆ ಗಂಭೀರ ಗಾಯ

    ಗದಗ | ಬೀದಿನಾಯಿ ದಾಳಿ – 4 ವರ್ಷದ ಬಾಲಕನಿಗೆ ಗಂಭೀರ ಗಾಯ

    ಗದಗ: ಬೀದಿನಾಯಿ ದಾಳಿ (Stray dog attack) ಮಾಡಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwara) ಪಟ್ಟಣ ಮ್ಯಾಗೇರಿ ಓಣಿಯಲ್ಲಿ ನಡೆದಿದೆ.

    ಮನೋಜ್ ಬನ್ನಿ (4) ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿದೆ. ಬಾಲಕನ ತಲೆ, ಬೆನ್ನು ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಬಾಲಕನನ್ನು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಹನಿಮೂನ್ ಮರ್ಡರ್‌ ಕೇಸ್ | 790 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ – ಕೊಲೆಯಾದ ರಘುವಂಶಿ ಪತ್ನಿಯೇ ಪ್ರಮುಖ ಆರೋಪಿ

     ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಮಕ್ಕಳನ್ನು ಮನೆಯಿಂದ ಹೊರಬಿಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ ಮುಂದೆ ಆಟ ಆಡುತ್ತಿರುವ ಚಿಕ್ಕ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ಮಾಡುತ್ತಿದ್ದರೂ ಸುಮ್ಮನೆ ಕುಳಿತಿರುವ ಲಕ್ಷ್ಮೇಶ್ವರ ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಹೆಚ್ಚುತ್ತಿರುವ ಬೀನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ.

  • ಬೀದಿ ನಾಯಿಗಳನ್ನ ಹಿಡಿಯಿರಿ, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

    ಬೀದಿ ನಾಯಿಗಳನ್ನ ಹಿಡಿಯಿರಿ, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

    – ಆಕ್ರಮಣಕಾರಿ, ಅನಾರೋಗ್ಯ ನಾಯಿಗಳನ್ನ ಮಾತ್ರ ಸ್ಥಳಾಂತರಿಸಿ
    – ಸಾರ್ವಜನಿಕವಾಗಿ ಆಹಾರ ಕೊಟ್ರೆ ಕಟ್ಟುನಿಟ್ಟಿನ ಕ್ರಮ

    ನವದೆಹಲಿ: ದೆಹಲಿ ಮತ್ತು‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ‌ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂ ತನ್ನದೇ ಸುಪ್ರೀಂ ಕೋರ್ಟ್‌ (Supreme Court) ತಿದ್ದುಪಡಿ ತಂದಿದೆ. ಬೀದಿ ನಾಯಿಗಳನ್ನು (Stray Dogs) ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಕೋರ್ಟ್‌ ನಿರ್ದೇಶನ ನೀಡಿದೆ. ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

    ನ್ಯಾ. ವಿಕ್ರಮ್ ನಾಥ್, ನ್ಯಾ. ಸಂದೀಪ್ ಮೆಹ್ತಾ ಮತ್ತು ನ್ಯಾ. ಎನ್‌.ವಿ ಅಂಜಾರಿಯಾ ನೇತೃತ್ವದ ತ್ರಿಸದಸ್ಯ ಪೀಠವು ಈ ಆದೇಶ ಪ್ರಕಟಿಸಿದ್ದು, ಆಗಸ್ಟ್‌ 11ರಂದು ಹೊರಡಿಸಿದ್ದ ತೀರ್ಪಿನಲ್ಲಿ ತಿದ್ದುಪಡಿ ಮಾಡಿದೆ. ನ್ಯಾ. ಪಾರ್ದಿವಾಲಾ ಪೀಠದ ಆದೇಶಕ್ಕೆ ಶ್ವಾನಪ್ರಿಯರಿಂದ ಅಸಮಾಧಾನ ವ್ಯಕ್ತವಾದ ಹಿನ್ನೆಲೆ ಪ್ರಕರಣ ವಿಚಾರಣೆಯನ್ನ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿತ್ತು. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ 6 ಪೊಲೀಸರು ಅರೆಸ್ಟ್‌

    ಈ ಮೊದಲು ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ (ಶೆಡ್‌) ಸ್ಥಳಾಂತರಿಸಬೇಕು ಎಂದು ಹೇಳಿದ್ದ ಸುಪ್ರೀಂ ಈಗ, ಅನಾರೋಗ್ಯ ಮತ್ತು ಆಕ್ರಮಣಕಾರಿ ಬೀದಿ ನಾಯಿಗಳನ್ನು ಮಾತ್ರ ಆಶ್ರಯ ತಾಣಗಳಲ್ಲಿ ಇರಿಸುವಂತೆ ಸೂಚಿಸಿದೆ. ಉಳಿದ ನಾಯಿಗಳನ್ನು ಹಿಡಿದು, ಸಂತಾನಹರಣ ಚಿಕಿತ್ಸೆ, ಜಂತುಹುಳು ನಿವಾರಣಾ ಲಸಿಕೆ ಹಾಕಿದ ಬಳಿಕ ಅವುಗಳನ್ನು ಹಿಡಿದ ಪ್ರದೇಶದಲ್ಲೇ ಬಿಡುವಂತೆ ತಿಳಿಸಿದೆ.  ಇದನ್ನೂ ಓದಿ: ಮತಗಳವು ಆರೋಪ – ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

    ಮುಂದುವರಿದು… ರೇಬೀಸ್ ಅಥವಾ ಅನಾರೋಗ್ಯವುಳ್ಳ ನಾಯಿಗಳು ಹಾಗೂ ಆಕ್ರಮಣಕಾರಿ ನಾಯಿಗಳನ್ನ ಮಾತ್ರ ಲಸಿಕೆ ಹಾಕಿ ಪ್ರತ್ಯೇಕ ಆಶ್ರಯತಾಣಗಳಲ್ಲಿ ಇರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದೆ. ಇದನ್ನೂ ಓದಿ: ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ

    ಸಾರ್ವಜನಿಕವಾಗಿ ಆಹಾರ ನೀಡುವಂತಿಲ್ಲ
    ಮುಂದುವರಿದು… ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡುವುದಕ್ಕೆ ಸುಪ್ರೀಂ ನಿಷೇಧ ಹೇರಿದೆ. ನಿಮಯ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದೆ. ಸಾರ್ವಜನಿಕವಾಗಿ ಅವುಗಳಿಗೆ ಆಹಾರ ನೀಡುವುದಕ್ಕೆ ಅನುಮತಿಯಿಲ್ಲ, ಪ್ರತ್ಯೇಕ ಮೀಸಲಾದ ಆಹಾರ ಸ್ಥಳಗಳನ್ನ ರಚಿಸಲಾಗುವುದು, ಅಲ್ಲಿ ಮಾತ್ರ ಆಹಾರ ನೀಡಬೇಕು ಎಂದು ಕೋರ್ಟ್‌ ಹೇಳಿದೆ.

    ಇನ್ನೂ ಪ್ರಾಣಿ ಪ್ರಿಯರು ನಾಯಿಗಳನ್ನು ದತ್ತು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕೋರ್ಟ್‌, ದತ್ತು ಪಡೆದ ನಾಯಿಗಳನ್ನು ಮರಳಿ ಬೀದಿಗಳಿಗೆ ಹಿಂತಿರುಗಿಸದಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿ. ಅದಕ್ಕಾಗಿ ಪ್ರತಿ ಅರ್ಜಿದಾರ 25,000 ರೂ. ಮತ್ತು ಎನ್‌ಜಿಒಗಳು 2 ಲಕ್ಷ ರೂ. ಠೇವಣಿ ಇಡಬೇಕು ಎಂದು ನಿರ್ದೇಶಿಸಿತು. ಮುಖ್ಯವಾಗಿ ಈ ಕುರಿತು ರಾಷ್ಟ್ರೀಯ ನೀತಿ ರೂಪಿಸಲು ಸೂಚಿಸಿತು. ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

  • ಬೀದಿ ನಾಯಿಗಳ ಸ್ಥಳಾಂತರ ಸಂಬಂಧ ಎಂಸಿಡಿ ಅಧಿಸೂಚನೆ – ಅರ್ಜಿಯ ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ

    ಬೀದಿ ನಾಯಿಗಳ ಸ್ಥಳಾಂತರ ಸಂಬಂಧ ಎಂಸಿಡಿ ಅಧಿಸೂಚನೆ – ಅರ್ಜಿಯ ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ

    ನವದೆಹಲಿ: ಬೀದಿ ನಾಯಿಗಳನ್ನು (Street Dogs) ಆಶ್ರಯ ತಾಣಗಳಿಗೆ ಸ್ಥಳಾಂತರ ಸಂಬಂಧ ದೆಹಲಿ ಮಹಾನಗರ ಪಾಲಿಕೆ (MCD) ಹೊರಡಿಸಿದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ.

    ಈ ಸಂಬಂಧ ಅರ್ಜಿ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದ ನಂತರ, ನ್ಯಾ.ಜೆ.ಕೆ ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರಿದ್ದ ಪೀಠವು ತುರ್ತು ವಿಚಾರಣೆಯನ್ನು ನಡೆಸಲು ನಿರಾಕರಿಸಿದೆ.ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆಗೆ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ನ್ಯಾ. ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

    ನ್ಯಾ.ಜೆಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರನ್ನೊಳಗೊಂಡ ಪೀಠವು, ಆ.11ರಂದು ದೆಹಲಿ-ಎನ್‌ಸಿಆರ್ ಸುತ್ತಮುತ್ತಲಿನ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತ್ತು. ಈ ನಿರ್ದೇಶನಗಳಿಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಮಧ್ಯಂತರ ಅರ್ಜಿಯ ಆದೇಶವನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಕಾಯ್ದಿರಿಸಿತ್ತು. ಬೀದಿ ನಾಯಿಗಳ ಸಂಪೂರ್ಣ ಸಮಸ್ಯೆಗೆ ಸ್ಥಳೀಯ ಅಧಿಕಾರಿಗಳ ನಿಷ್ಕ್ರಿಯತೆಯೇ ಕಾರಣ ಎಂದು ಹೇಳಿತ್ತು.

    ರಾಷ್ಟ್ರ ರಾಜಧಾನಿಯಲ್ಲಿ ಬೀದಿ ನಾಯಿ ಕಡಿತವು ವಿಶೇಷವಾಗಿ ಮಕ್ಕಳಲ್ಲಿ ರೇಬೀಸ್‌ಗೆ ಕಾರಣವಾದ ಬಗ್ಗೆ ದಾಖಲಾದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ಜು.28 ರಂದು ಪ್ರಾರಂಭವಾಗಿತ್ತು. ಈ ವೇಳೆ ಸುಪ್ರೀಂ ಕೋರ್ಟ್ ಹಲವಾರು ನಿರ್ದೇಶನಗಳನ್ನು ನೀಡಿತ್ತು.ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಆರಂಭ

  • ಬೀದಿ ನಾಯಿಗಳ ಜನನ ನಿಯಂತ್ರಣ ವಿಫಲವಾಗಿದ್ದೇಕೆ? – ಸಂತಾನಹರಣ ನಾಯಿಗಳಿಗೆ ಟ್ರ್ಯಾಕಿಂಗ್‌ಗೆ ಚಿಪ್‌ ಅಳವಡಿಸಬೇಕೆ?

    ಬೀದಿ ನಾಯಿಗಳ ಜನನ ನಿಯಂತ್ರಣ ವಿಫಲವಾಗಿದ್ದೇಕೆ? – ಸಂತಾನಹರಣ ನಾಯಿಗಳಿಗೆ ಟ್ರ್ಯಾಕಿಂಗ್‌ಗೆ ಚಿಪ್‌ ಅಳವಡಿಸಬೇಕೆ?

    ನಾಯಿ ದಾಳಿಯ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಲೇ ಇರುತ್ವೆ. ರಸ್ತೆಯಲ್ಲಿ ಓಡಾಡುವವರ ಮೇಲೆ, ಶಾಲಾ ಮಕ್ಕಳ ಮೇಲೆ ಅದ್ರಲ್ಲೂ ಬೆಳಗ್ಗಿನ ಜಾವ, ಮಟ ಮಟ ಮಧ್ಯಾಹ್ನ, ತಡರಾತ್ರಿಗಳಲ್ಲಿ ಒಬ್ಬಂಟಿಗರು ಸಿಕ್ಕಿಬಿಟ್ರೆ ಕಥೆ ಮುಗಿಯಿತು. ಐದಾರು ನಾಯಿಗಳು (Stray Dogs) ಒಟ್ಟಿಗೆ ಮೈಮೇಲೆ ಎರಗಿಬಿಡುತ್ತವೆ. ಇದಕ್ಕೆ ಗ್ರಾಮೀಣ ಪ್ರದೇಶಗಳೂ ಹೊರತಾಗಿಲ್ಲ. ಬೆಂಗಳೂರಿನ ಮಹಾನಗರಗಳಲ್ಲಂತೂ ಕೇಳಂಗೇ ಇಲ್ಲ. ಇದೆಲ್ಲ ಕ್ವಾಟ್ಲೆಗಳಿಗೆ ಕಡಿವಾಣ ಹಾಕಬೇಕು ಅಂತಾನೇ ಸುಪ್ರೀಂ ಕೋರ್ಟ್‌ (Supreme Court) ಹೊಸ ನೀತಿಯೊಂದನ್ನ ರೂಪಿಸಿದೆ.

    ಹಾವಳಿ ತಡೆಗೆ ನಿರ್ದಿಷ್ಟ ನೀತಿ ರೂಪಿಸಿ ರಾಜಧಾನಿ ದೆಹಲಿ ಮತ್ತು NCR (ರಾಷ್ಟ್ರ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶ) ವಲಯದ ಎಲ್ಲ ಪ್ರದೇಶದಿಂದ ಬೀದಿ ನಾಯಿಗಳನ್ನು ಹಿಡಿದು ಶೆಡ್‌ಗೆ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಪ್ರಾಣಿಗಳ ಕ್ರೌರ್ಯ ತಡೆ ಕಾಯ್ದೆ-1960 ಹಾಗೂ ಪ್ರಾಣಿಗಳ ಜನನ ನಿಯಂತ್ರಣ ನಿಯಮಗಳು-2023 (ABC) ರೀತಿಯ ಕಾನೂನುಗಳು, ಪ್ರಾಣಿಗಳು ಮತ್ತು ಸಾಕು ಪ್ರಾಣಿಗಳನ್ನು ನಾವು ಹೇಗೆ ನಡೆಸಿಕೊಳ್ಳಬೇಕೆಂಬುದನ್ನು ಸ್ಪಷ್ಟಪಡಿಸುತ್ತವೆ. ಈ ಕಾನೂನು ಮನುಷ್ಯರ ಹಿತರಕ್ಷಣೆ ಮತ್ತು ಪ್ರಾಣಿಗಳ ಹಕ್ಕುಗಳ ನಡುವೆ ಸಮತೋಲನ ಸಾಧಿಸುವುದು ಹೇಗೆ ಎನ್ನುವ ಬಗ್ಗೆಯೂ ತಿಳಿಸುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ನ್ಯಾ. ಜೆ.ಬಿ ಪಾರ್ದಿವಾಲಾ ಮತ್ತು ಆರ್.‌ ಮಹಾದೇವನ್‌ ಅವರನ್ನೊಳಗೊಂಡ ವಿಭಾಗೀಯ ಪೀಠ ಬೀದಿನಾಯಿಗಳ ನಿಯಂತ್ರಣಕ್ಕೆ ಈ ಆದೇಶ ಕೊಟ್ಟಿದೆ.

    ಇನ್ನೂ ಕರ್ನಾಟಕದ ಬೆಂಗಳೂರಿನಲ್ಲಿ (Bengaluru) ಬೀದಿ ನಾಯಿಗಳ ಸಂಖ್ಯೆ ಶೇ.10ರಷ್ಟು ತಗ್ಗಿದ್ದರೂ, ಕಡಿತ ಪ್ರಕರಣಗಳ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇವೆ. 2023ರ ಗಣತಿ ಪ್ರಕಾರ, ನಗರದಲ್ಲಿ ಶೇ 71.85ರಷ್ಟು ಬೀದಿ ನಾಯಿಗಳಿಗೆ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆದರೆ, ಪ್ರಸಕ್ತ ವರ್ಷ ಜನವರಿಯಿಂದ ಜೂನ್‌ವರೆಗೆ 13,000ಕ್ಕೂ ಹೆಚ್ಚು ಬೀದಿ ನಾಯಿ ಕಡಿತ ಪ್ರಕರಣಗಳು ದಾಖಲಾಗಿರುವುದು ಆಘಾತಕಾರಿಯಾಗಿದೆ. ಕಳೆದ 60 ವರ್ಷಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಜನನ ನಿಯಂತ್ರಣ ವೈಫಲ್ಯಕ್ಕೆ ಕಾರಣವೇನು? ಎಂಬುದನ್ನ ತಿಳಿಯಬೇಕಿದ್ರೆ ಮುಂದೆ ಓದಿ…

    ಸಂತಾನಹರಣ ಚಿಕಿತ್ಸೆ ಕಾರ್ಯಕ್ರಮ ಶುರುವಾಗಿದ್ದು ಹೇಗೆ?
    1966ರಲ್ಲಿ ಚೆನ್ನೈನಲ್ಲಿ ಪ್ರಾಣಿಗಳಿಗೆ ಮೊದಲ ಉಚಿತ ಸಂತಾನಹರಣ ಚಿಕಿತ್ಸಾಲಯ ತೆರೆಯಲಾಯಿತು. ಅದಾದ 30 ವರ್ಷಗಳ ನಂತ್ರ ಬ್ಲೂ ಕ್ರಾಸ್‌ ಎಂಬ ಪ್ರಾಣಿ ಕಲ್ಯಾಣ ದತ್ತಿ ಸಂಸ್ಥೆಯು ಚೆನ್ನೈ ನಗರ ಪಾಲಿಕೆಗೆ ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ಕಾರ್ಯಕ್ರಮ ಆರಂಭಿಸುವಂತೆ ಮನವೊಲಿಸಿತು. ಈ ಕಾರ್ಯಕ್ರಮ ಯಶಸ್ವಿಯಾದ ನಂತರ 2001ರಲ್ಲಿ ಇದನ್ನ ರಾಷ್ಟ್ರೀಯ ಕಾರ್ಯಕ್ರಮವಾಗಿ ರೂಪಿಸಲಾಯಿತು. ಆದಗ್ಯೂ ಬೀದಿನಾಯಿಗಳ ಸಂಖ್ಯೆ ಬೆಳೆಯುತ್ತಾ ಹೋಯ್ತು.. ಅದರಂತೆ ಕಡಿತದ ಪ್ರಕರಣಗಳು ಹೆಚ್ಚಾಗುತ್ತಲೇ ಹೋಯ್ತು.

    ಜನನ ನಿಯಂತ್ರಣ ವಿಫಲವಾಗಿದ್ದೇಕೆ?
    WHO ನ ಮಾಜಿ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಅವರು ಹೇಳುವಂತೆ, ಈ ಕಾರ್ಯಕ್ರಮ ಯಾರನ್ನೂ ನಿರ್ದಿಷ್ಟ ಹೊಣೆಗಾರರನ್ನಾಗಿ ಮಾಡೋದಿಲ್ಲ. ಏಕೆಂದರೆ, ಈ ಕೆಲಸಕ್ಕೆ ಪಶುವೈದ್ಯರು, ಮೌಲ ಸೌಕರ್ಯ, ಹಣಕಾಸು ಹಾಗೂ ಮಾನವಶಕ್ತಿಯ ಕೊರತೆಯಿದೆ. ಲಸಿಕೆಗಳ ಸಂಖ್ಯೆ, ಶಸ್ತ್ರಚಿಕಿತ್ಸೆಗಳ ಸಂಖ್ಯೆ. ಅದರ ಪರಿಣಾಮದ ಬಗ್ಗೆ ಯಾವುದೇ ರಾಷ್ಟ್ರೀಯ ದತ್ತಾಂಶಗಳಿಲ್ಲ. ಹಣವನ್ನ ವಿವೇಚನೆಯಿಂದ ಬಳಸಲಾಗಿದೆಯೇ ಎಂಬುದನ್ನ ತೋರಿಸಲು ಫಲಿತಾಂಶ, ಅಧ್ಯಯನಗಳಿಲ್ಲ ಎಂದು ಹೇಳಿದ್ದಾರೆ.

    ಇನ್ನೂ ಸೆಂಟ್ರಲ್ ಡ್ರಗ್ಸ್ ಕಂಟ್ರೋಲ್ ಲ್ಯಾಬೊರೇಟರಿಯ ಮಾಜಿ ಮುಖ್ಯಸ್ಥ ಸುರಿಂದರ್ ಸಿಂಗ್ ಮಾತನಾಡ್ತಾ, ಈ ಕೆಲಸ ಶುರುವಾದಾಗ ಚೆನ್ನಾಗಿತ್ತು. ಕನಿಷ್ಠ 1 ದಶಕದ ಕಾಲ ಬೀದಿ ನಾಯಿಗಳಿಗೆ ನಿರಂತರ ಸಂತಾನಹರಣ ಚಿಕಿತ್ಸೆ ಮಾಡಿದ್ದಿದ್ದರೆ ಭಾರತವು ರೇಬಿಸ್‌ನಂತಹ ಕಾಯಿಲೆಯನ್ನು ತೊಡೆದುಹಾಕಬಹುದಿತ್ತು. ಆದ್ರೆ ಮೊದಲ 2 ವರ್ಷಗಳ ನಂತ್ರ ಅವುಗಳನ್ನು ಮೂಲ ಸೌಕರ್ಯವನ್ನು ಕೊಳ್ಳಲು ಹಣಕಾಸಿನ ಸಮಸ್ಯೆ ಎದುರಾಯ್ತು. ಆ ಬಳಿಕ ಕೆಲಸದ ವೇಗವು ಕುಂಟಿತಗೊಂಡದ್ದರಿಂದ ಜನನ ನಿಯಂತ್ರಣ ಕ್ರಮವು ವಿಫಲವಾಯ್ತು ಎಂದಿದ್ದಾರೆ.

    ದೇಶದಲ್ಲೇ ಅತಿಹೆಚ್ಚು ಬೀದಿ ನಾಯಿಗಳಿರುವ ಟಾಪ್‌-10 ಜಿಲ್ಲೆಗಳಾವುವು?
    ದೇಶದಲ್ಲೇ ಅತಿಹೆಚ್ಚು ನಾಯಿಗಳಿರುವ 10 ಜಿಲ್ಲೆಗಳ ಪಟ್ಟಿಯಲ್ಲಿ ಕರ್ನಾಟಕದ ಬೆಂಗಳೂರು ನಗರ ಹಾಗೂ ಮೈಸೂರು ಸ್ಥಾನ ಪಡೆದುಕೊಂಡಿವೆ. ಒಡಿಶಾದ ಕಲಾಹಂಡಿಯಲ್ಲಿ 10.6 ಲಕ್ಷ ನಾಯಿಗಳಿದ್ದರೆ ಮಹಾರಾಷ್ಟ್ರದಲ್ಲಿ 2.1 ಲಕ್ಷ ನಾಯಿಗಳಿವೆ. ಇನ್ನೂ 3ನೇ ಸ್ಥಾನದಲ್ಲಿ ಬೆಂಗಳೂರು ನಗರ ಇದ್ದು, 1.4 ಲಕ್ಷ ಬೀದಿನಾಯಿ ಹೊಂದೆ. ಇನ್ನುಳಿದಂತೆ ಪ.ಬಂಗಾಳದ ಮುರ್ಷಿದಾಬಾದ್‌ 1.1 ಲಕ್ಷ, ಪಶ್ಚಿಮ ಮಿಡ್ನಾಪುರ್‌, ಪಶ್ಚಿಮ ಬುರ್ದ್ವಾನ್‌, ಪೂರ್ವ ಬುರ್ದ್ವಾನ್‌ನಲ್ಲಿ ತಲಾ 1 ಲಕ್ಷ, ಕರ್ನಾಟಕದ ಮೈಸೂರು ಜಿಲ್ಲೆಯಲ್ಲಿ 90 ಸಾವಿರ, ಪ.ಬಂಗಳದ ಉತ್ತರ 24 ಪರಗಣಗಳಲ್ಲಿ 90 ಸಾವಿರ ಮತ್ತು ಜಮ್ಮುವಿನಲ್ಲಿ 90 ಸಾವಿರ ಬೀದಿ ನಾಯಿಗಳಿವೆ ಎಂದು ತಿಳಿದುಬಂದಿದೆ.

    ಮಹಾರಾಷ್ಟ್ರದಲ್ಲೇ ನಾಯಿ ಕಡಿತ ಕೇಸ್‌ ಹೆಚ್ಚು 
    ದೇಶದ ಹಲವು ರಾಜ್ಯಗಳಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. 2024ರಲ್ಲಿ ಮಹಾರಾಷ್ಟ್ರದಲ್ಲಿ 4.85 ಲಕ್ಷ, ತಮಿಳುನಾಡಿನಲ್ಲಿ 4.80 ಲಕ್ಷ, ಗುಜರಾತ್‌ನಲ್ಲಿ 3.92 ಲಕ್ಷ, ಕರ್ನಾಟಕದಲ್ಲಿ 3.61 ಲಕ್ಷ, ಬಿಹಾರದಲ್ಲಿ 2.63 ಲಕ್ಷ, ಆಂಧ್ರಪ್ರದೇಶದಲ್ಲಿ 2.45 ಲಕ್ಷ, ಅಸ್ಸಾಂನಲ್ಲಿ 1.66 ಲಕ್ಷ, ಉತ್ತರ ಪ್ರದೇಶದಲ್ಲಿ 1.64 ಲಕ್ಷ, ರಾಜಸ್ಥಾನದಲ್ಲಿ 1.40 ಲಕ್ಷ, ಬಿಹಾರದಲ್ಲಿ ಪ್ರಕರಣಗಳು ವರದಿಯಾಗಿವೆ.

    2025ರ ಅಂಕಿಅಂಶ ಗಮನಿಸುವುದಾದ್ರೆ, ಕಳೆದ 6 ತಿಂಗಳಲ್ಲಿ ಕರ್ನಾಟಕದಲ್ಲಿ 2.3 ಲಕ್ಷಕ್ಕೂ ಹೆಚ್ಚು ನಾಯಿ ಕಡಿತ ಪ್ರಕರಣಗಳು ಮತ್ತು 19 ರೇಬಿಸ್ ಸಾವುಗಳು ದಾಖಲಾಗಿವೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ತೀವ್ರ ಹೆಚ್ಚಳವನ್ನು ಸೂಚಿಸುತ್ತದೆ. 2024 ರಲ್ಲಿ, ರಾಜ್ಯದಲ್ಲಿ 3.6 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 42 ರೇಬಿಸ್ ಸಾವುಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆಯ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮ (IDSP) ಮಾಹಿತಿಯ ಪ್ರಕಾರ, ಈ ವರ್ಷ ಜನವರಿ 1 ರಿಂದ ಜೂನ್ 30 ರವರೆಗೆ ಕರ್ನಾಟಕದಲ್ಲಿ 2,31,091 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಅವರ ಪೈಕಿ 19 ಮಂದಿ ರೇಬಿಸ್‌ಗೆ ಬಲಿಯಾಗಿದ್ದಾರೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,69,672 ನಾಯಿ ಕಡಿತ ಪ್ರಕರಣಗಳು ಮತ್ತು 18 ರೇಬಿಸ್ ಸಾವುಗಳು ವರದಿಯಾಗಿದ್ದವು.

    ಜನನ ನಿಯಂತ್ರಣಕ್ಕೆ ಏನು ಮಾಡಬೇಕು?
    ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ಕಾರ್ಯಕ್ರಮಕ್ಕೆ ಸೂಕ್ತ ಹಣಕಾಸು ಒದಗಿಸದೇ ಇರುವುದೇ ಕಳವಳಕ್ಕೆ ಕಾರಣವಾಗಿದೆ. ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ಪ್ರತಿ ನಾಯಿಗೆ 1,650 ರೂ.ಗಳ ವರೆಗೆ ಶಿಫಾರಸು ಮಾಡಿದೆ. ಇದರಲ್ಲಿ ನಾಯಿ ಹಿಡಿಯುವವರಿಗೆ, ಸಂತಾನಹರಣ ಚಿಕಿತ್ಸೆ, ಶಸ್ತ್ರಚಿಕಿತ್ಸೆ ನಂತರದ ನಿರ್ವಹಣೆ ಮತ್ತು ಲಸಿಕೆಗಾಗಿ ಪ್ರತಿ ನಾಯಿಗೆ ನಿಗದಿಪಡಿಸಿರುವ 200 ರೂ. ಇದರಲ್ಲೇ ಬರುತ್ತದೆ. ಅಂದಾಜಿನ ಪ್ರಕಾರ ದೇಶಾದ್ಯಂತ 6 ಕೋಟಿ ಬೀದಿ ನಾಯಿಗಳಿದ್ದು, ಮಂಡಳಿ ನಿಗದಿ ಮಾಡಿದ ಹಣದಿಂದ ಜನನ ನಿಯಂತ್ರಣಕ್ಕೆ ಕಡಿವಾಣ ಹಾಕುವುದು ಕಷ್ಟಕರ ಹೀಗಾಗಿ ಸ್ಮಾರ್ಟ್‌ ನವೀನ ವಿದಾನಗಳನ್ನು ಹುಡುಕಬೇಕಿದೆ ಎನ್ನುತ್ತಾರೆ ತಜ್ಞರು.

    ಜನನ ನಿಯಂತ್ರಣಕ್ಕೆ ತಜ್ಞರ ಸಲಹೆಗಳೇನು?
    * ಹೆಣ್ಣು ನಾಯಿಗಳ ಸಂತಾನಹರಣ ಚಿಕಿತ್ಸೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಜೊತೆಗೆ ಜನರು ಮತ್ತು ಸಂಘಸಂಸ್ಥೆಗಳು ನಾಯಿಗಳನ್ನು ದತ್ತು ತೆಗೆದುಕೊಳ್ಳಬೇಕು. ಅವುಗಳ ಜವಾಬ್ದಾರಿ ನಿರ್ವಹಿಸುವಂತೆ ಸರ್ಕಾರ ಮಾಡಬೇಕು.
    * ಬಹಳ ಜನಕ್ಕೆ ತಮ್ಮ ಸ್ಥಳೀಯ ನಾಯಿಗಳ ಮೌಲ್ಯ ತಿಳಿದಿರುವುದಿಲ್ಲ. ಸ್ವಲ್ಪ ಮಟ್ಟಿಗೆ ಅವುಗಳ ಮೌಲ್ಯ ಕಂಡುಕೊಂಡ್ರೆ ಭದ್ರತೆ ಅಥವಾ ಬಾಂಬ್‌ ಸ್ಕ್ವಾಡ್‌ಗಳಿಗೆ ಬಳಸಬಹುದಲ್ಲವೇ?
    * ದೆಹಲಿ, ಚೆನ್ನೈ ಮತ್ತು ಬೆಂಗಳೂರಿನಂತಹ ಮಹಾನಗರಗಳಲ್ಲಿ ಸಂತಾನಹರಣಗೊಂಡ ಪ್ರಾಣಿಗಳನ್ನು ಟ್ರ್ಯಾಕಿಂಗ್‌ ಮೂಲಕ ಖಚಿಪಡಿಸಿಕೊಳ್ಳಬೇಕು. ಅದಕ್ಕಾಗಿ ಮೈಕ್ರೋಚಿಪ್‌ಗಳಂತಹ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. RFID ಸಾಧನವಾದ ಮೈಕ್ರೋಚಿಪ್ ಶಾಶ್ವತ ID ಯಾಗಿ ಕಾರ್ಯನಿರ್ವಹಿಸುತ್ತದೆ. ನಾಯಿಯ ಚರ್ಮದ ಅಡಿಯಲ್ಲಿ ಈ ಚಿಪ್‌ ಅಳವಡಿಸಬಹುದಾಗಿದೆ.
    * ಹ್ಯೂಮನ್ ಸೊಸೈಟಿ ಇಂಟರ್ನ್ಯಾಷನಲ್ (HSI) ನಂತಹ ಸಂಸ್ಥೆಗಳು ಸಂಪೂರ್ಣ ABC ಪ್ರಕ್ರಿಯೆ ಸುಗಮಗೊಳಿಸಲು ಮೊಬೈಲ್ ಮತ್ತು ವೆಬ್ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಿದ್ದು, ಇದನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರಬೇಕಿದೆ ಅನ್ನೋದು ತಜ್ಞರ ಸಲಹೆ. ಇದರೊಂದಿಗೆ ಸಂತಾನೋತ್ಪತ್ತಿ ಪ್ರಕ್ರಿಯೆ ತಡೆಯುವ ಪ್ರತಿಕಾಯಗಳನ್ನು ಉತ್ಪಾದಿಸುವ ಇಮ್ಯುನೊಕಾಂಟ್ರಾಸೆಪ್ಷನ್ ಸೇರಿದಂತೆ ಶಸ್ತ್ರಚಿಕಿತ್ಸೆಯಲ್ಲದ ಗರ್ಭನಿರೋಧಕಗಳ ಪತ್ತೆ ಕಾರ್ಯದಲ್ಲಿ ಹೆಚ್‌ಎಸ್‌ಐ ತೊಡಗಿದೆ.

  • ಈ ದೇಶಗಳಲ್ಲಿ ಬೀದಿ ನಾಯಿಗಳಿಗೆ ಗ್ಯಾಸ್‌ ಚೇಂಬರ್‌, ದಯಾಮರಣ ಶಿಕ್ಷೆ – ಯಾವ ದೇಶದಲ್ಲಿ ಏನು ಕಾನೂನು?

    ಈ ದೇಶಗಳಲ್ಲಿ ಬೀದಿ ನಾಯಿಗಳಿಗೆ ಗ್ಯಾಸ್‌ ಚೇಂಬರ್‌, ದಯಾಮರಣ ಶಿಕ್ಷೆ – ಯಾವ ದೇಶದಲ್ಲಿ ಏನು ಕಾನೂನು?

    – ಭಾರತದಲ್ಲಿನ ಕಾನೂನು ಏನು ಹೇಳುತ್ತೆ?

    ದೇಶಾದ್ಯಂತ ಬೀದಿ ನಾಯಿಗಳ (Stray Dogs) ಹುಚ್ಚಾಟ, ಕಡಿತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ರಸ್ತೆ ಬದಿಯಲ್ಲಿ ಓಡಾಡುವವರ ಮೇಲೆ ನಾಯಿಗಳ ದಾಳಿ ದಿನೇ ದಿನೆ ಏರಿಕೆ ಕಾಣುತ್ತಿದೆ. ಎಲ್ಲಾ ವಯೋಮಾನದವರು ಈ ಪ್ರಕರಣದಲ್ಲಿ ಸಂತ್ರಸ್ತರು. ಮಕ್ಕಳು ಮತ್ತು ವಯೋವೃದ್ಧರು ಹೆಚ್ಚು ಸಂತ್ರಸ್ತರು. ನಿರ್ಭೀತಿಯಿಂದ ಓಡಾಡುವುದಿರಲಿ, ರಸ್ತೆಗೆ ಕಾಲಿಡಲು ಹೆದರುವಂತಹ ವಾತಾವರಣ ಸೃಷ್ಟಿಯಾಗಿದೆ. ಹಳ್ಳಿಗಳಿಗಿಂತ ನಗರ ಪ್ರದೇಶಗಳಲ್ಲೇ ಬೀದಿ ನಾಯಿ ದಾಳಿಯಂತಹ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಯೇ ಇಲ್ಲ ಎಂಬಂತಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಬೀದಿ ನಾಯಿಗಳು ಜನವಸತಿ ಇಲ್ಲದ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಆದೇಶ ಹೊರಡಿಸಿತು. ಆದರೆ, ಕೋರ್ಟ್ ತೀರ್ಪು ಈಗ ಪರ-ವಿರೋಧ ಚರ್ಚೆಗೆ ನಾಂದಿ ಹಾಡಿದೆ. ಪ್ರಗತಿಪರ ಚಿಂತಕರು, ಪ್ರಾಣಿ ಪ್ರಿಯರು, ನಟ-ನಟಿಯರು, ರಾಜಕಾರಣಿಗಳು ಕೋರ್ಟ್ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದೇಶದ ಪರವಾಗಿಯೂ ಅಭಿಪ್ರಾಯಗಳು ವ್ಯಕ್ತವಾಗಿವೆ. ಈಗ ಆದೇಶವನ್ನು ಮರುಪರಿಶೀಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸಿಜೆಐ ತಿಳಿಸಿದ್ದಾರೆ.

    ಅದೇನೇ ಇರಲಿ ಭಾರತದಲ್ಲಿ ಬೀದಿ ನಾಯಿಗಳ ಬಗೆಗೆ ಇರುವ ಕಾನೂನುಗಳೇನು? ವಿದೇಶಗಳಲ್ಲಿ ಯಾವ ರೀತಿಯ ಕಾನೂನುಗಳಿವೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕೆಲವು ದೇಶಗಳಲ್ಲಿ ನಾಯಿಗಳಿಗೂ ಹಿಟ್ಲರ್ ಮಾದರಿಯ ಗ್ಯಾಸ್ ಚೇಂಬರ್, ಮರಣದಂಡನೆಯಂಥ ಶಿಕ್ಷೆಗಳಿರುವುದು ಕುತೂಹಲಕಾರಿ. ಎಲ್ಲೆಲ್ಲಿ ಯಾವ್ಯಾವ ಕಾನೂನುಗಳಿವೆ ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಬೀದಿ ನಾಯಿಗಳ ಹಾವಳಿ ಕೇಸ್‌ – ಹೊಸ ತ್ರಿಸದಸ್ಯ ಪೀಠ ರಚಿಸಿದ ಸಿಜೆಐ ಗವಾಯಿ

    ಭಾರತದಲ್ಲಿ ಬೀದಿ ನಾಯಿಗಳ ದಾಳಿಯಲ್ಲಿ ಹೆಚ್ಚಳ?
    ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಬೀದಿ ನಾಯಿಗಳ ದಾಳಿ ಸಂಖ್ಯೆ ಹೆಚ್ಚಾಗುತ್ತಿವೆ. 2023ರಲ್ಲಿ 30.5 ಲಕ್ಷದಷ್ಟಿದ್ದ ಪ್ರಕರಣಗಳು 2024ಕ್ಕೆ 37 ಲಕ್ಷಕ್ಕೆ ಏರಿಕೆ ಕಂಡಿದೆ. ಅಷ್ಟೆ ಅಲ್ಲದೇ, ನಾಯಿ ಕಡಿತದಿಂದ ಉಂಟಾಗುವ ರೇಬಿಸ್‌ನಿಂದ ಸಾವಿಗೀಡಾಗುವವ ಸಂಖ್ಯೆ ಹೆಚ್ಚಾಗಿದೆ. 2022ರಲ್ಲಿ ರೇಬಿಸ್‌ನಿಂದ ಸಾಯುವವರ ಸಂಖ್ಯೆ 21 ಇತ್ತು. 2023ಕೆ ಅದು 50ಕ್ಕೆ ಏರಿತು. 2024ಕ್ಕೂ ಇದೇ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

    ಅತಿ ಹೆಚ್ಚು ಕೇಸ್ ಹೊಂದಿರುವ ರಾಜ್ಯಗಳ್ಯಾವುವು?
    ದೇಶದ ಹಲವು ರಾಜ್ಯಗಳಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. 2024ರಲ್ಲಿ ಮಹಾರಾಷ್ಟ್ರದಲ್ಲಿ 4.85 ಲಕ್ಷ, ತಮಿಳುನಾಡಿನಲ್ಲಿ 4.80 ಲಕ್ಷ, ಗುಜರಾತ್‌ನಲ್ಲಿ 3.92 ಲಕ್ಷ, ಕರ್ನಾಟಕದಲ್ಲಿ 3.61 ಲಕ್ಷ, ಬಿಹಾರದಲ್ಲಿ 2.63 ಲಕ್ಷ, ಆಂಧ್ರಪ್ರದೇಶದಲ್ಲಿ 2.45 ಲಕ್ಷ, ಅಸ್ಸಾಂನಲ್ಲಿ 1.66 ಲಕ್ಷ, ಉತ್ತರ ಪ್ರದೇಶದಲ್ಲಿ 1.64 ಲಕ್ಷ, ರಾಜಸ್ಥಾನದಲ್ಲಿ 1.40 ಲಕ್ಷ, ಬಿಹಾರದಲ್ಲಿ ಪ್ರಕರಣಗಳು ವರದಿಯಾಗಿವೆ.

    2025ರ ಅಂಕಿಅಂಶ ಗಮನಿಸುವುದಾದರೆ, ಕಳೆದ ಆರು ತಿಂಗಳಲ್ಲಿ ಕರ್ನಾಟಕದಲ್ಲಿ 2.3 ಲಕ್ಷಕ್ಕೂ ಹೆಚ್ಚು ನಾಯಿ ಕಡಿತ ಪ್ರಕರಣಗಳು ಮತ್ತು 19 ರೇಬಿಸ್ ಸಾವುಗಳು ದಾಖಲಾಗಿವೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ತೀವ್ರ ಹೆಚ್ಚಳವನ್ನು ಸೂಚಿಸುತ್ತದೆ. 2024 ರಲ್ಲಿ, ರಾಜ್ಯದಲ್ಲಿ 3.6 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 42 ರೇಬಿಸ್ ಸಾವುಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆಯ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮ (IDSP) ಮಾಹಿತಿಯ ಪ್ರಕಾರ, ಈ ವರ್ಷ ಜನವರಿ 1 ರಿಂದ ಜೂನ್ 30 ರವರೆಗೆ ಕರ್ನಾಟಕದಲ್ಲಿ 2,31,091 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಅವರ ಪೈಕಿ 19 ಮಂದಿ ರೇಬಿಸ್‌ಗೆ ಬಲಿಯಾಗಿದ್ದಾರೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,69,672 ನಾಯಿ ಕಡಿತ ಪ್ರಕರಣಗಳು ಮತ್ತು 18 ರೇಬಿಸ್ ಸಾವುಗಳು ವರದಿಯಾಗಿದ್ದವು. ಇದನ್ನೂ ಓದಿ: ಬೀದಿ ನಾಯಿಗಳನ್ನು ಆಶ್ರಯ ತಾಣಕ್ಕೆ ಸೇರಿಸೋ ತೀರ್ಪನ್ನು ಪರಿಶೀಲಿಸುತ್ತೇನೆ: ಸಿಜೆಐ

    ಭಾರತದಲ್ಲಿ ಬೀದಿ ನಾಯಿಗಳಿಗೆ ಇರುವ ಕಾನೂನೇನು?
    ದೇಶದಲ್ಲಿ ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಕೆಲವು ಕಾನೂನುಗಳಿವೆ. ಬೀದಿ ನಾಯಿಗಳನ್ನು ಹಿಂಸಿಸುವುದು, ಕೊಲ್ಲುವುದು ಅಥವಾ ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸುವುದು ಕಾನೂನು ಬಾಹಿರ. ಬದಲಿಗೆ, ಅವುಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆ ನೀಡುವುದು, ತಪಾಸಣೆಗೆ ಒಳಪಡಿಸುವುದು ಮತ್ತು ಲಸಿಕೆ ಹಾಕಿ ಅವುಗಳ ಮೂಲಸ್ಥಾನಗಳಿಗೆ ಬಿಡುವುದು ಕ್ರಮವಾಗಿದೆ. ಬೀದಿ ನಾಯಿಗಳಿಗೆ ಆಹಾರ ನೀಡುವ ಬಗ್ಗೆಯೂ ಕೆಲವು ಮಾರ್ಗಸೂಚಿಗಳಿವೆ. ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ತಪ್ಪಿಸಬೇಕು ಎಂದಿದೆ.

    * ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟಲು ಮತ್ತು ರಕ್ಷಿಸಲು ಕಾನೂನನ್ನು ಈ ಕಾಯ್ದೆ ಒಳಗೊಂಡಿದೆ. ಬೀದಿ ನಾಯಿಗಳನ್ನು ಹಿಂಸಿಸುವುದು, ಕೊಲ್ಲುವುದು ಅಥವಾ ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸುವುದು ಈ ಕಾಯ್ದೆಯಡಿ ಅಪರಾಧ.
    * ಅನಿಮಲ್ ಬರ್ತ್ ಕಂಟ್ರೋಲ್ (ನಾಯಿಗಳು) ನಿಯಮಗಳು, 2001: ಬೀದಿ ನಾಯಿಗಳ ಸಂಖ್ಯೆ ನಿಯಂತ್ರಿಸಲು ಸಂತಾನಹರಣ ಮತ್ತು ಲಸಿಕೆ ಹಾಕುವ ಕಾರ್ಯಕ್ರಮಗಳನ್ನು ಜಾರಿಗೆ ತರಲು ಈ ನಿಯಮ ರೂಪಿಸಲಾಗಿದೆ.
    ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993: ಬೀದಿ ನಾಯಿಗಳ ಸಂತಾನ ನಿಯಂತ್ರಣ ಮತ್ತು ರೋಗಗಳ ಚಿಕಿತ್ಸೆಗೆ ಗ್ರಾಮ ಪಂಚಾಯಿತಿಗಳು ಜವಾಬ್ದಾರವಾಗಿರುತ್ತವೆ.
    ಬಿಬಿಎಂಪಿ ಮಾರ್ಗಸೂಚಿಗಳು: BBMP ಬೀದಿ ನಾಯಿಗಳಿಗೆ ಆಹಾರ ನೀಡುವ ಬಗ್ಗೆ ಕೆಲವು ಮಾರ್ಗಸೂಚಿಗಳನ್ನು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ನೀಡುವುದನ್ನು ತಪ್ಪಿಸಲು ಮತ್ತು ಆಹಾರ ನೀಡಿದ ನಂತರ ಸ್ವಚ್ಛಗೊಳಿಸಲು ಸೂಚಿಸಲಾಗಿದೆ.

    ಬೀದಿ ನಾಯಿಗಳಿಗೆ ಇತರೆ ದೇಶಗಳಲ್ಲಿರೋ ಕಾನೂನುಗಳೇನು?

    ಟರ್ಕಿ: ‘ಹತ್ಯಾಕಾಂಡ ಕಾನೂನು’
    2024 ರ ಜುಲೈನಲ್ಲಿ ಟರ್ಕಿ ದೇಶ ಪುರಸಭೆಗಳು ನಗರ ಬೀದಿಗಳಿಂದ ಸುಮಾರು 40 ಲಕ್ಷ ಬೀದಿ ನಾಯಿಗಳನ್ನು ತೆರವುಗೊಳಿಸಬೇಕು ಎಂದು ಕಾನೂನನ್ನು ಜಾರಿಗೆ ತಂದಿತು. ಈ ಶಾಸನದ ಅಡಿಯಲ್ಲಿ, ಸ್ಥಳೀಯ ಅಧಿಕಾರಿಗಳು ನಾಯಿಗಳನ್ನು ಸೆರೆಹಿಡಿಯಬೇಕು, ರೋಗಗಳ ವಿರುದ್ಧ ಲಸಿಕೆ ಹಾಕಬೇಕು, ಅವುಗಳನ್ನು ಸಂತಾನಹರಣ ಮಾಡಬೇಕು ಮತ್ತು ದತ್ತು ಸ್ವೀಕಾರಕ್ಕಾಗಿ ಇಡಬೇಕು. ಅನಾರೋಗ್ಯ, ಆಕ್ರಮಣಕಾರಿ, ನೋವಿನಿಂದ ಬಳಲುತ್ತಿರುವ, ಮಾರಕ ಕಾಯಿಲೆ ಅಥವಾ ಮಾನವರಿಗೆ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುವ ನಾಯಿಗಳಿಗೆ ದಯಾಮರಣ ಕಾನೂನನ್ನು ಅನುಮತಿಸುತ್ತದೆ. ಇದನ್ನೂ ಓದಿ: ಬೀದಿ ನಾಯಿಗಳ ಸ್ಥಳಾಂತರ; ಸುಪ್ರೀಂ ಆದೇಶಕ್ಕೆ ರಾಹುಲ್ ಗಾಂಧಿ ಆಕ್ಷೇಪ

    ಮೊರಾಕೊ: ‘TNVR ಕಾರ್ಯಕ್ರಮ’
    ಮೊರಾಕೊ ತನ್ನ ವಿಸ್ತೃತ ಟ್ರ್ಯಾಪ್-ನ್ಯೂಟರ್-ಲಸಿಕೆ-ರಿಟರ್ನ್ (TNVR) ಕಾರ್ಯಕ್ರಮದ ಮೂಲಕ ಬೀದಿ ನಾಯಿಗಳನ್ನು ನಿರ್ವಹಿಸಲು ಮಾನವೀಯ ವಿಧಾನವನ್ನು ಅಳವಡಿಸಿಕೊಂಡಿದೆ. ಬೀದಿ ನಾಯಿಗಳನ್ನು ಬಲೆಗೆ ಬೀಳಿಸುವುದು, ಸಂತಾನಹರಣ ಮಾಡುವುದು, ರೇಬಿಸ್ ವಿರುದ್ಧ ಲಸಿಕೆ ಹಾಕಿ ನಂತರ ಅವುಗಳನ್ನು ಮೂಲ ಸ್ಥಳಗಳಿಗೆ ಬಿಡುವುದನ್ನು ಈ ಕಾನೂನು ಪ್ರತಿಪಾದಿಸುತ್ತದೆ. ಅನಾರೋಗ್ಯದಿಂದ ಬಳಲುತ್ತಿರುವ ಅಥವಾ ಜನರಿಗೆ ಅಪಾಯವನ್ನುಂಟುಮಾಡುವ ನಾಯಿಗಳನ್ನು ಮಾನವೀಯವಾಗಿ ದಯಾಮರಣಕ್ಕೆ ಗುರಿ ಪಡಿಸಲಾಗುತ್ತದೆ. ಐದು ವರ್ಷಗಳಲ್ಲಿ ಸರ್ಕಾರವು ಈ ಕಾರ್ಯಕ್ರಮಕ್ಕಾಗಿ ಸುಮಾರು 201 ಕೋಟಿಗೂ ಹೆಚ್ಚು ಹಣ ಹೂಡಿಕೆ ಮಾಡಿದೆ.

    ಯುಕೆ: ದಯಾಮರಣ & ಕಠಿಣ ಕ್ರಮ
    ಯುಕೆಯಲ್ಲಿ ಬೀದಿಗೆ ಬಿಟ್ಟ ಪ್ರಾಣಿಗಳನ್ನು ಹಿಡಿಯಲಾಗುತ್ತದೆ. ಮಾಲೀಕರ ಪತ್ತೆಗೆ ಕ್ರಮವಹಿಸಲಾಗುತ್ತದೆ. ಎಂಟು ದಿನಗಳಲ್ಲಿ ಮಾಲೀಕರು ಪತ್ತೆಯಾಗದಿದ್ದರೆ ಆಶ್ರಯಗಳಿಗೆ ವರ್ಗಾಯಿಸಲಾಗುತ್ತದೆ. ಈ ದೇಶದಲ್ಲಿ ಸಾಕುಪ್ರಾಣಿಗಳನ್ನು ತ್ಯಜಿಸುವುದು ಕಾನೂನುಬಾಹಿರವಾಗಿದೆ. ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 45,000 ಪೌಂಡ್‌ಗಳು (53 ಲಕ್ಷ ರೂ.ಗಿಂತ ಹೆಚ್ಚು) ದಂಡ ವಿಧಿಸಬಹುದು. ದತ್ತು ಪಡೆಯದ ನಾಯಿಗಳನ್ನು ಒಂದು ವಾರದೊಳಗೆ ಆಶ್ರಯಗಳಲ್ಲಿ ದಯಾಮರಣ ಮಾಡಲಾಗುತ್ತದೆ. ಕೆಲವು ಪುರಸಭೆಯ ಆಶ್ರಯಗಳು ಬೀದಿ ನಾಯಿಗಳನ್ನು ಏಳು ದಿನಗಳವರೆಗೆ ಇಟ್ಟುಕೊಳ್ಳುತ್ತವೆ. ಇದರಿಂದ ಮಾಲೀಕರು ಅವುಗಳನ್ನು ವಾಪಸ್‌ ಪಡೆಯಲು ಅವಕಾಶ ಇರುತ್ತದೆ. ಆದರೆ, ಅನೇಕ ಪ್ರಾಣಿ ಕಲ್ಯಾಣ ಸಂಸ್ಥೆಗಳು ಕೊಲ್ಲಬಾರದೆಂಬ ನೀತಿಗಳನ್ನು ಅನುಸರಿಸುತ್ತವೆ. ಈ ಸಂಸ್ಥೆಗಳು ನಾಯಿಗಳ ತೀವ್ರ ಅನಾರೋಗ್ಯ ಮತ್ತು ವರ್ತನೆಯಲ್ಲಿನ ಸಮಸ್ಯೆಗಳನ್ನು ಪರಿಗಣಿಸಿ ಮಾತ್ರ ದಯಾಮರಣ ನೀಡುತ್ತವೆ. ಸಾಧ್ಯವಾದಲ್ಲೆಲ್ಲಾ ಪುನರ್ವಸತಿಗೆ ಆದ್ಯತೆ ನೀಡುತ್ತವೆ.

    ಜಪಾನ್: ದಯಾಮರಣ ಗ್ಯಾಸ್ ಚೇಂಬರ್‌
    ಜಪಾನ್ ಕಟ್ಟುನಿಟ್ಟಾದ ಪ್ರಾಣಿ ಕಲ್ಯಾಣ ಕ್ರಮಗಳನ್ನು ಅನುಸರಿಸುತ್ತದೆ. ಅಲ್ಲಿ ಬೀದಿ ನಾಯಿಗಳನ್ನು ಸೆರೆಹಿಡಿದು, ಕ್ವಾರಂಟೈನ್‌ನಲ್ಲಿ ಇರಿಸಿ ಮತ್ತು ದತ್ತು ಪಡೆಯಲು ಇಡಲಾಗುತ್ತದೆ. ಹೆಚ್ಚುತ್ತಿರುವ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಪಶುವೈದ್ಯರು ಸಂತಾನಹರಣ ಕಾರ್ಯಕ್ರಮಗಳನ್ನು ನಡೆಸುತ್ತಾರೆ. ಆದರೆ, ಟೋಕಿಯೊ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಗ್ಯಾಸ್ ಚೇಂಬರ್‌ಗಳನ್ನು ಬಳಸಿ ದಯಾಮರಣ ನಡೆಸಲಾಗುತ್ತದೆ. ಈ ವಿಧಾನವು ಅಮಾನವೀಯ ಮತ್ತು ದೀರ್ಘಕಾಲದ ನೋವನ್ನು ಉಂಟುಮಾಡುತ್ತದೆ ಎಂಬ ಟೀಕೆಗಳು ಇವೆ. ಇದನ್ನೂ ಓದಿ: ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸೇರಿಸೋದು ಅವೈಜ್ಞಾನಿಕ – ಸುಪ್ರೀಂ ತೀರ್ಪಿಗೆ PETA ಪ್ರತಿಕ್ರಿಯೆ

    ಸ್ವಿಟ್ಜರ್ಲೆಂಡ್: ಪ್ರಾಣಿ ಸಂರಕ್ಷಣಾ ಕಾನೂನುಗಳು
    ಸ್ವಿಟ್ಜರ್ಲೆಂಡ್ ಕಠಿಣ ಪ್ರಾಣಿ ಸಂರಕ್ಷಣಾ ಕಾನೂನುಗಳನ್ನು ಹೊಂದಿದೆ. ಸಾಕುಪ್ರಾಣಿಗಳನ್ನು ತ್ಯಜಿಸುವುದು ಕಾನೂನುಬಾಹಿರ. ಮೂರು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗಬಹುದು. ನಾಯಿ ಮಾಲೀಕರು ತಮ್ಮ ಸಾಕುಪ್ರಾಣಿಗಳನ್ನು ಕ್ಯಾಂಟೋನಲ್ ಅಧಿಕಾರಿಗಳ ಮೂಲಕ ನೋಂದಾಯಿಸಿಕೊಳ್ಳಬೇಕು. ಕೆಲವು ಕ್ಯಾಂಟನ್‌ಗಳಲ್ಲಿ, ನಾಯಿಯನ್ನು ಖರೀದಿಸುವ ಮೊದಲು ಪ್ರಮಾಣೀಕೃತ ಕೋರ್ಸ್ ಅನ್ನು ಪೂರ್ಣಗೊಳಿಸುವುದು ಕಡ್ಡಾಯ.

    ಯುರೋಪಿಯನ್‌ ಒಕ್ಕೂಟ
    ಯುರೋಪಿಯನ್ ಒಕ್ಕೂಟವು ಬೀದಿ ಪ್ರಾಣಿಗಳ ನಿರ್ವಹಣೆಗೆ ಏಕೀಕೃತ ಶಾಸನವನ್ನು ಹೊಂದಿಲ್ಲ. ಬದಲಾಗಿ, ಪ್ರತ್ಯೇಕ ಸದಸ್ಯ ರಾಷ್ಟ್ರಗಳು ತಮ್ಮ ಬೀದಿ ಪ್ರಾಣಿಗಳ ಸಂಖ್ಯೆಯನ್ನು ನಿಯಂತ್ರಿಸುತ್ತವೆ. ಅನೇಕ ದೇಶಗಳಲ್ಲಿ ಪುರಸಭೆಗಳು ಬೀದಿ ಪ್ರಾಣಿಗಳ ನಿಯಂತ್ರಣವನ್ನು ನಿರ್ವಹಿಸುತ್ತವೆ.

  • ಸುಪ್ರೀಂ ಕೋರ್ಟ್ ಆವರಣದಲ್ಲೇ ಶ್ವಾನ ಪ್ರಿಯನ ಕೆನ್ನೆಗೆ ಬಾರಿಸಿದ ಲಾಯರ್‌

    ಸುಪ್ರೀಂ ಕೋರ್ಟ್ ಆವರಣದಲ್ಲೇ ಶ್ವಾನ ಪ್ರಿಯನ ಕೆನ್ನೆಗೆ ಬಾರಿಸಿದ ಲಾಯರ್‌

    ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಆವರಣದಲ್ಲೇ ವಕೀಲರೊಬ್ಬರು (Lawyer) ಶ್ವಾನ ಪ್ರಿಯನ ಕೆನ್ನೆಗೆ ಬಾರಿಸಿದ ಘಟನೆ ನಡೆದಿದೆ.

    ದೆಹಲಿಯಲ್ಲಿನ ಬೀದಿ ನಾಯಿಗಳನ್ನು (Stray Dogs) ವಸತಿ ಪ್ರದೇಶಗಳಿಂದ ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಆದೇಶದ ವಿರುದ್ಧ ಅ.11 ರಂದು ಸುಪ್ರೀಂ ಕೋರ್ಟ್ ಹೊರಗೆ ಶ್ವಾನ ಪ್ರಿಯರು ಮತ್ತು ವಕೀಲರ ನಡುವೆ ವಾಗ್ವಾದ ವಾಗಿದೆ. ಈ ವೇಳೆ, ವಕೀಲರೊಬ್ಬರು ವ್ಯಕ್ತಿಯೊಬ್ಬನನ್ನು ಎಳೆದುಕೊಂಡು ಕೆನ್ನೆಗೆ ಬಾರಿಸಿದ್ದಾರೆ. ಈ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಬೀದಿ ನಾಯಿಗಳನ್ನು ಆಶ್ರಯ ತಾಣಕ್ಕೆ ಸೇರಿಸೋ ತೀರ್ಪನ್ನು ಪರಿಶೀಲಿಸುತ್ತೇನೆ: ಸಿಜೆಐ

    ವೈರಲ್‌ ಆದ ವಿಡಿಯೋ ಆದೇಶ ಬಂದ ದಿನದ್ದು ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನೂ ವಿಡಿಯೋದಲ್ಲಿ, ಶ್ವಾನಪ್ರಿಯರು ವಕೀಲರನ್ನು ನಿಂದಿಸುವುದು ಸಹ ದಾಖಲಾಗಿದೆ. ಈ ವೇಳೆ ಕೋಪಗೊಂಡ ವಕೀಲರು ಹಲ್ಲೆ ನಡೆಸಿದ್ದಾರೆ.

    ಸೋಮವಾರ ಸುಪ್ರೀಂ ಕೋರ್ಟ್‌ ದೆಹಲಿಯಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಅಲ್ಲದೇ ಮಕ್ಕಳು ಮತ್ತು ವೃದ್ಧರ ಮೇಲೆ ಬೀದಿ ನಾಯಿಗಳು ದಾಳಿ ನಡೆಸುತ್ತಿವೆ. ಮಕ್ಕಳು ಹೆದರಿಕೆ ಇಲ್ಲದೇ ಹೊರಗೆ ಓಡಾಡಬೇಕು ಎಂದರೆ ಸೂಕ್ತ ಕ್ರಮಕೈಗೊಳ್ಳಬೇಕು. ಯಾವ ಮಕ್ಕಳು ರೇಬಿಸ್‌ಗೆ ತುತ್ತಾಗಬಾರದು. 2 ತಿಂಗಳೊಳಗಾಗಿ ನಾಯಿಗಳನ್ನು ಆಶ್ರಯತಾಣಗಳಿಗೆ ಸೇರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿತ್ತು. ಈ ತೀರ್ಪಿನ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

    ಈ ತೀರ್ಪು ಹೊರಬೀಳುತ್ತಿದ್ದಂತೆ ಪ್ರಾಣಿಪ್ರಿಯರು, ಸೆಲೆಬ್ರಿಟಿಗಳು ತೀರ್ಪಿನ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು. ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿಯವರು ಸಹ ಈ ಆದೇಶವನ್ನು ತೀವ್ರವಾಗಿ ಟೀಕಿಸಿದ್ದರು. 3 ಲಕ್ಷ ನಾಯಿಗಳಿವೆ ಅವುಗಳನ್ನು ಆಶ್ರಯ ತಾಣಕ್ಕೆ ಸಾಗಿಸಲು, ನಿರ್ವಹಿಸಲು ಸುಮಾರು 15,000 ಕೋಟಿ ರೂ. ವೆಚ್ಚವಾಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದರು.

    ಹಲವಾರು ಆಕ್ಷೇಪಗಳು ಕೇಳಿಬಂದ ಬೆನ್ನಲ್ಲೇ ಆದೇಶವನ್ನು ಮರುಪರಿಶೀಲಿಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ತಿಳಿಸಿದ್ದಾರೆ. ಇದನ್ನೂ ಓದಿ: 2 ತಿಂಗಳಲ್ಲಿ ಇಡೀ ದೆಹಲಿಯನ್ನ ಬೀದಿನಾಯಿಗಳಿಂದ ಮುಕ್ತಗೊಳಿಸಬೇಕು – ಸುಪ್ರೀಂ ಆದೇಶ

  • ಬೀದಿ ನಾಯಿಗಳನ್ನು ಆಶ್ರಯ ತಾಣಕ್ಕೆ ಸೇರಿಸೋ ತೀರ್ಪನ್ನು ಪರಿಶೀಲಿಸುತ್ತೇನೆ: ಸಿಜೆಐ

    ಬೀದಿ ನಾಯಿಗಳನ್ನು ಆಶ್ರಯ ತಾಣಕ್ಕೆ ಸೇರಿಸೋ ತೀರ್ಪನ್ನು ಪರಿಶೀಲಿಸುತ್ತೇನೆ: ಸಿಜೆಐ

    ನವದೆಹಲಿ: ದೆಹಲಿಯಲ್ಲಿರುವ (Delhi) ಬೀದಿ ನಾಯಿಗಳನ್ನು (Stray Dogs) ಆಶ್ರಯ ತಾಣಕ್ಕೆ ಸೇರಿಸುವ ಸುಪ್ರಿಂಕೋರ್ಟ್‌ನ (Supreme Court) ದ್ವಿಸದಸ್ಯ ಪೀಠದ ತೀರ್ಪನ್ನು ಪರಿಶೀಲಿಸುವುದಾಗಿ ಸಿಜೆಐ ಬಿ.ಆರ್. ಗವಾಯಿಯವರು (Chief Justice of India BR Gavai) ತಿಳಿಸಿದ್ದಾರೆ.

    ಹೆಚ್ಚುತ್ತಿರುವ ನಾಯಿ ಕಡಿತ ಮತ್ತು ರೇಬೀಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸರ್ವೋಚ್ಚ ನ್ಯಾಯಾಲಯ ಸೋಮವಾರ ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿತ್ತು. ಇದಕ್ಕೆ ಪರ – ವಿರೋಧದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದ್ವಿಸದಸ್ಯ ಪೀಠದ ತೀರ್ಪಿಗೆ ಕಳವಳ ವ್ಯಕ್ತವಾಗುತ್ತಿರುವ ವಿಚಾರ ಬುಧವಾರ ಸಿಜೆಐ ಮುಂದೆ ಚರ್ಚೆಗೆ ಬಂತು. ಈ ವೇಳೆ, ತೀರ್ಪನ್ನು ಮರುಪರಿಶೀಲಿಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ಸಿಜೆಐ ಹೇಳಿಕೆಯಿಂದ ಸುಪ್ರೀಂ ಕೋರ್ಟ್‌ನ ತೀರ್ಪಿನೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಸಾವಿರಾರು ಪ್ರಾಣಿ ಪ್ರಿಯರಲ್ಲಿ ಭರವಸೆ ಮೂಡಿದೆ. ಇದನ್ನೂ ಓದಿ: 2 ತಿಂಗಳಲ್ಲಿ ಇಡೀ ದೆಹಲಿಯನ್ನ ಬೀದಿನಾಯಿಗಳಿಂದ ಮುಕ್ತಗೊಳಿಸಬೇಕು – ಸುಪ್ರೀಂ ಆದೇಶ

    ಇನ್ನೂ ಸುಪ್ರೀಂ ಕೋರ್ಟ್‌ ಆದೇಶಕ್ಕೆ ರಾಜಕಾರಣಿಗಳು ಮತ್ತು ಸೆಲೆಬ್ರಿಟಿಗಳು ಸೇರಿದಂತೆ ನಾಗರಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದೇಶವನ್ನು ಪರಿಶೀಲಿಸುವಂತೆ ನಟ ಜಾನ್ ಅಬ್ರಹಾಂ ಅವರು ಸಿಜೆಐಗೆ ತುರ್ತು ಮೇಲ್ಮನವಿ ಸಲ್ಲಿಸಿದ್ದರು.

    ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ, ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಅವೈಜ್ಞಾನಿಕ ಮತ್ತು ಆರ್ಥಿಕವಾಗಿ ಇದು ಸಾಧ್ಯವಾಗದ ಕೆಲಸವಾಗಿದೆ ಎಂದಿದ್ದರು. ಇದು ದೆಹಲಿ ಪ್ರದೇಶದ ಪರಿಸರ ಸಮತೋಲನಕ್ಕೆ ಹಾನಿಕಾರಕ ಎಂದು ಟೀಕಿಸಿದ್ದರು.

    ದೇಶದಲ್ಲಿ ಪ್ರಾಣಿಗಳ ಹಕ್ಕುಗಳ ರಕ್ಷಣೆಗೆ ಪ್ರಮುಖ ಧ್ವನಿಯಾಗಿರುವ ಪೆಟಾ ಸಂಸ್ಥೆ ಕೂಡ ಇದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿತ್ತು. ನಾಯಿಗಳ ಸ್ಥಳಾಂತರ ಅವೈಜ್ಞಾನಿಕ ಮತ್ತು ನಿಷ್ಪರಿಣಾಮಕಾರಿಯಾಗಿದೆ. ಸ್ಥಳಾಂತರದಿಂದ ನಾಯಿಗಳ ಸಂಖ್ಯೆ ಕಡಿಮೆ ಆಗುತ್ತದೆಯೇ ಹೊರತು, ರೇಬೀಸ್ ಕಡಿಮೆ ಮಾಡಲು ಅಥವಾ ನಾಯಿ ಕಡಿತದ ಘಟನೆಗಳನ್ನು ತಡೆಯುವುದು ಅಸಾಧ್ಯ ಎಂದು ಪೆಟಾದ ಹಿರಿಯ ನಿರ್ದೇಶಕಿ ಡಾ. ಮಿನಿ ಅರವಿಂದನ್ ಹೇಳಿದ್ದರು. ಇದನ್ನೂ ಓದಿ: ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸೇರಿಸೋದು ಅವೈಜ್ಞಾನಿಕ – ಸುಪ್ರೀಂ ತೀರ್ಪಿಗೆ PETA ಪ್ರತಿಕ್ರಿಯೆ

  • ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸೇರಿಸೋದು ಅವೈಜ್ಞಾನಿಕ – ಸುಪ್ರೀಂ ತೀರ್ಪಿಗೆ PETA ಪ್ರತಿಕ್ರಿಯೆ

    ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸೇರಿಸೋದು ಅವೈಜ್ಞಾನಿಕ – ಸುಪ್ರೀಂ ತೀರ್ಪಿಗೆ PETA ಪ್ರತಿಕ್ರಿಯೆ

    ನವದೆಹಲಿ: ದೆಹಲಿಯಲ್ಲಿ (Delhi) ಬೀದಿ ನಾಯಿಗಳ (Stray Dogs) ಹಾವಳಿ ನಿಯಂತ್ರಿಸಲು 2 ತಿಂಗಳೊಳಗೆ ಆಶ್ರಯತಾಣಗಳಿಗೆ ಅವುಗಳನ್ನು ಸೇರಿಸುವಂತೆ ಸುಪ್ರೀಂ ಕೋರ್ಟ್‌ (Supreme Court) ನೀಡಿದ್ದ ಆದೇಶಕ್ಕೆ ʻಪೆಟಾʼ (PETA) ಸಂಸ್ಥೆ ಪ್ರತಿಕ್ರಿಯಿಸಿದೆ. ಬೀದಿನಾಯಿಗಳನ್ನು ಆಶ್ರಯ ತಾಣಗಳಿಗೆ ಸೇರಿಸೋ ಕ್ರಮ ಅವೈಜ್ಞಾನಿಕವಾಗಿದೆ ಎಂದು ಹೇಳಿದೆ.

    ಸುಪ್ರೀಂ ಕೋರ್ಟ್ ದೆಹಲಿ, ಗುರುಗ್ರಾಮ್, ನೋಯ್ಡಾ ಮತ್ತು ಗಾಜಿಯಾಬಾದ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ, ಬೀದಿ ನಾಯಿಗಳನ್ನು 2 ತಿಂಗಳೊಳಗೆ ಆಶ್ರಯ ತಾಣಗಳಿಗೆ ಸಾಗಿಸಲು ಆದೇಶಿಸಿತ್ತು. ಅಲ್ಲದೇ ಅವುಗಳು ಮತ್ತೆ ರಸ್ತೆಗೆ ಬರದಂತೆ ಸೂಕ್ತ ಕ್ರಮಕೈಗೊಳ್ಳಬೇಕು. ಈ ಕ್ರಮಕ್ಕೆ ಯಾರಾದರೂ ಅಡ್ಡ ಬಂದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿತ್ತು. ಈ ತೀರ್ಪಿನ ಬೆನ್ನಲ್ಲೇ ಪೆಟಾ ಇಂಡಿಯಾದ ಪಶುವೈದ್ಯಕೀಯ ವ್ಯವಹಾರಗಳ ಹಿರಿಯ ನಿರ್ದೇಶಕಿ ಡಾ. ಮಿನಿ ಅರವಿಂದನ್ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: 2 ತಿಂಗಳಲ್ಲಿ ಇಡೀ ದೆಹಲಿಯನ್ನ ಬೀದಿನಾಯಿಗಳಿಂದ ಮುಕ್ತಗೊಳಿಸಬೇಕು – ಸುಪ್ರೀಂ ಆದೇಶ

    ನಾಯಿಗಳನ್ನು ಸ್ಥಳಾಂತರಿಸುವುದು ಮತ್ತು ಅವುಗಳನ್ನು ಬಂಧನದಲ್ಲಿಡುವುದು ವೈಜ್ಞಾನಿಕವಲ್ಲ. 2022-23 ರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ದೆಹಲಿಯಲ್ಲಿ ಸುಮಾರು 10 ಲಕ್ಷ ನಾಯಿಗಳಿವೆ. ಅವುಗಳಲ್ಲಿ ಅರ್ಧ ಭಾಗಕ್ಕಿಂತಲೂ ಕಡಿಮೆ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲಾಗಿದೆ. ನಾಯಿಗಳನ್ನು ಆಶ್ರಯ ತಾಣಗಳಲ್ಲಿಡುವ ಕ್ರಮ, ಅಂತಿಮವಾಗಿ ನಾಯಿಗಳ ಸಂಖ್ಯೆ ಕಡಿಮೆ ಆಗುವಂತೆ ಮಾಡುತ್ತದೆಯೇ ಹೊರತು, ರೇಬೀಸ್ ಅಥವಾ ನಾಯಿ ಕಡಿತದ ಘಟನೆಗಳನ್ನು ತಡೆಯಲು ಏನನ್ನೂ ಮಾಡುವುದಿಲ್ಲ. 2001ರಲ್ಲಿ ನಾಯಿಗಳಿಗೆ ಸಂತಾನಹರಣ ಮತ್ತು ಲಸಿಕೆ ಹಾಕುವ ಯೋಜನೆಯನ್ನು ರೂಪಿಸಲಾಗಿತ್ತು. ಈ ಯೋಜನೆ ಸರಿಯಾಗಿ ಜಾರಿಗೆ ತಂದಿದ್ದರೆ, ಇಂದು ರಸ್ತೆಯಲ್ಲಿ ಯಾವುದೇ ನಾಯಿಗಳು ಇರುತ್ತಿರಲಿಲ್ಲ ಎಂದಿದ್ದಾರೆ.

    ಕೆಲವರು ನೆರೆಹೊರೆಯ ನಾಯಿಗಳನ್ನು ಕುಟುಂಬದ ಭಾಗದಂತೆ ಭಾವಿಸುತ್ತಾರೆ. ಈ ರೀತಿ ಲಕ್ಷಾಂತರ ನಾಯಿಗಳನ್ನು ಬಲವಂತವಾಗಿ ಬಂಧನದಲ್ಲಿಡುವುದು ಶ್ವಾನಪ್ರಿಯರಲ್ಲಿ ಬೇಸರ ಉಂಟುಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ಪರಿಣಾಮಕಾರಿಯಲ್ಲದ ಮತ್ತು ಅಮಾನವೀಯ ಸ್ಥಳಾಂತರದಿಂದ ಸಮಯ, ಶ್ರಮ ಮತ್ತು ಸಾರ್ವಜನಿಕರ ಹಣ ವ್ಯರ್ಥ ಮಾಡುವ ಬದಲು, ಪರಿಣಾಮಕಾರಿ ಸಂತಾನಹರಣದಂತಹ ತುರ್ತು ಕ್ರಮಗಳು ಅಗತ್ಯವಾಗಿದೆ. ಅಲ್ಲದೇ ಪ್ರಾಣಿಗಳನ್ನು ತ್ಯಜಿಸಲು ಕಾರಣವಾಗುವ ಅಕ್ರಮ ಸಾಕುಪ್ರಾಣಿ ಅಂಗಡಿಗಳು ಮತ್ತು ತಳಿಗಾರರ ವಿರುದ್ಧ ಕ್ರಮಕೈಗೊಳ್ಳಬೇಕು. ಪ್ರಾಣಿಗಳ ಆಶ್ರಯ ಅಥವಾ ಬೀದಿಯಿಂದ ಅಗತ್ಯವಿರುವ ನಾಯಿಯನ್ನು ಸಾಕಲು ಸಾರ್ವಜನಿಕರನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ | ಯಾವುದೇ ಕಾರಣಕ್ಕೂ ಚಿಕ್ಕ ಮಕ್ಕಳು ರೇಬಿಸ್‌ನಿಂದ ಸಾಯಬಾರದು: ಸುಪ್ರೀಂ ಕೋರ್ಟ್‌