Tag: stream

  • ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು – ಯುವತಿ ಸೇರಿ ಮೂವರ ದುರ್ಮರಣ

    ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು – ಯುವತಿ ಸೇರಿ ಮೂವರ ದುರ್ಮರಣ

    ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಳೆಗೆ ಬಿದ್ದು, ಮೂವರು ಮೃತಪಟ್ಟಿರುವ ಘಟನ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಡ್ನಮನೆಯಲ್ಲಿ ನಡೆದಿದೆ.

    ಕಾರಿನ ನಿಯಂತ್ರಣ ತಪ್ಪಿ ಉಂಚಳ್ಳಿ ಜಲತಾಪಕ್ಕೆ ಹೋಗಿ ವಾಪಾಸ್ ಬರುತ್ತಿದ್ದ ಇಬ್ಬರು ಯುವಕರು ಹಾಗೂ ಓರ್ವ ಯುವತಿ ಸೇರಿ ಒಟ್ಟು ಮೂವರು ಕಾರಿನ ಸಮೇತ ಹೊಳೆಗೆ ಬಿದ್ದು ಮೃತಪಟ್ಟಿದ್ದಾರೆ. ಬುಧವಾರ ಸಂಜೆಯ ವೇಳೆಗೆ ಘಟನೆ ಜರುಗಿದ್ದು, ಕಾರು ಹೊಳೆಗೆ ಬಿದ್ದ ಸಮಯದಲ್ಲಿ ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾರೂ ಕಾರನ್ನು ಗಮನಿಸಿಲ್ಲ. ಇದರಿಂದ ಇಂದು ಸಂಜೆ ಈ ಘಟನೆ ಬೆಳಕಿಗೆ ಬಂದಿದೆ.

    ಕಾರು ಧಾರವಾಡದ ನೋಂದಣಿ ಸಂಖ್ಯೆಯಿದ್ದು, ಹುಬ್ಬಳ್ಳಿಯವರು ಎನ್ನಲಾಗಿದೆ. ಮೂವರೂ 25 ವರ್ಷದ ಒಳಗಿನವರಾಗಿದ್ದು, ಸಿದ್ದಾಪುರದ ಉಂಚಳ್ಳಿ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಿಂದ ಹಿಂತಿರುಗಿ ಬರುವಾಗ ಕೋಡ್ನಗದ್ದೆ ಸಮೀಪದ ತಿರುವಿನಲ್ಲಿ ಆಯತಪ್ಪಿ ಕೋಡ್ನಗದ್ದೆ ಹೊಳೆಗೆ ಕಾರು ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  • ಕಾಲು ಜಾರಿ ತೊರೆಯೊಳಗೆ ಬಿದ್ದ ಕೈ ಶಾಸಕ – ಬೆಂಬಲಿಗರಿಂದ ರಕ್ಷಣೆ

    ಕಾಲು ಜಾರಿ ತೊರೆಯೊಳಗೆ ಬಿದ್ದ ಕೈ ಶಾಸಕ – ಬೆಂಬಲಿಗರಿಂದ ರಕ್ಷಣೆ

    ಡೆಹರಡೂನ್: ಪ್ರವಾಹ ವೀಕ್ಷಣೆಗೆ ತೆರಳಿದ ಕಾಂಗ್ರೆಸ್ ಶಾಸಕರೊಬ್ಬರು ಕಾಲು ಜಾರಿ ತೊರೆಯೊಳಗೆ ಬಿದ್ದಿರುವ ಘಟನೆ ನೇಪಾಳ ಗಡಿ ಸಮೀಪದ ಪಿತ್ತೋರ್ಗಢದ ಧಾರ್ಚಾಲ್ ಪ್ರದೇಶದಲ್ಲಿ ನಡೆದಿದೆ.

    ಉತ್ತರಖಂಡದ ಕಾಂಗ್ರೆಸ್ ಶಾಸಕ ಹರೀಶ್ ಧಾಮಿ ಅವರು, ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ವಾಪಸ್ ಬರುತ್ತಿರುವಾಗ ಈ ಘಟನೆ ನಡೆದಿದೆ. ಕಾಲು ಜಾರಿ ತೊರೆಯೊಳಗೆ ಬಿದ್ದಿದ್ದಾರೆ. ನಂತರ ಸ್ವಲ್ಪ ದೂರ ನೀರಿನಲ್ಲಿ ತೇಲಿಕೊಂಡು ಹೋಗಿದ್ದಾರೆ. ಆದರೆ ತಕ್ಷಣ ಜೊತೆಗಿದ್ದ ಬೆಂಬಲಿಗರು ಅವರನ್ನು ನೀರಿನಿಂದ ಮೇಲೆ ಎತ್ತಿ ರಕ್ಷಿಸಿದ್ದಾರೆ.

    ಧಾಮಿಯವರು ಹೋಗಿದ್ದ ಪಿತ್ತೋರ್ಗಢದ ಧಾರ್ಚಾಲ್ ಪ್ರದೇಶ ಭಾರೀ ಮಳೆಗೆ ತುತ್ತಾಗಿ ಜಲಾವೃತವಾಗಿತ್ತು. ಇದನ್ನು ಪರಿಶೀಲನೆ ಮಾಡಲು ಹರೀಶ್ ಧಾಮಿ ಹೋಗಿದ್ದಾರೆ. ಪ್ರವಾಹ ಸ್ಥಳ ವೀಕ್ಷಿಸಿ ಅಲ್ಲಿನ ಜನರಿಗೆ ಧೈರ್ಯ ಹೇಳಿ ವಾಪಸ್ ಬರುತ್ತಿದ್ದರು. ಜೊತೆಗೆ ಮಳೆ ಬಂದು ಅವರು ಬರುವ ದಾರಿ ಕೆಸರು ತುಂಬಿಕೊಂಡಿತ್ತು. ಈ ದಾರಿಯಲ್ಲಿ ಬರುವಾಗ ಹರೀಶ್ ಅವರ ಆಯತಪ್ಪಿ ನೀರಿನೊಳಗೆ ಬಿದ್ದಿದ್ದಾರೆ. ಈ ವೇಳೆ ಅವರು ನೀರಿನಲ್ಲಿ ತೇಲಿಕೊಂಡು ಹೋಗಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಶಾಸಕ ಹರೀಶ್ ಧಾಮಿಯವರು, ರಸ್ತೆ ತುಂಬಾ ಕೆಸರಿನಿಂದ ಕೂಡಿತ್ತು. ಜೊತೆಗೆ ನೀರು ಕೂಡ ಹೆಚ್ಚಾಗಿತ್ತು. ಇದರಿಂದ ನಾನು ಸ್ವಲ್ಪ ಆಯತಪ್ಪಿ ಬಿದ್ದೆ. ನೀರು ರಭಸವಾಗಿ ಹರಿಯುತ್ತಿದ್ದ ಕಾರಣ ಸ್ವಲ್ಪ ದೂರು ನೀರಿನಲ್ಲಿ ಕೊಚ್ಚಿಕೊಂಡು ಹೋದೆ. ಆದರೆ ಅಷ್ಟರಲ್ಲಿ ನನ್ನ ಜೊತೆಯಲ್ಲಿದ್ದ ಬೆಂಬಲಿಗರು ಸಹಾಯಕ್ಕೆ ಬಂದರು. ಅವರು ಬಂದು ನನ್ನ ದಡಕ್ಕೆ ಕರೆ ತಂದರು. ಈ ವೇಳೆ ನನಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ಹೇಳಿದ್ದಾರೆ.

  • ಶವ ಸಂಸ್ಕಾರಕ್ಕೆ ತುಂಬಿದ ಹಳ್ಳ ದಾಟಿ ಹೋಗುವ ದುಸ್ಥಿತಿ

    ಶವ ಸಂಸ್ಕಾರಕ್ಕೆ ತುಂಬಿದ ಹಳ್ಳ ದಾಟಿ ಹೋಗುವ ದುಸ್ಥಿತಿ

    ಬಳ್ಳಾರಿ: ಶವ ಸಂಸ್ಕಾರಕ್ಕೂ ಸರಿಯಾದ ವ್ಯವಸ್ಥೆಯಿಲ್ಲದೆ ತುಂಬಿದ ಹಳ್ಳ ದಾಟಿ, ಶವ ಸಂಸ್ಕಾರ ಮಾಡಲು ಜನರು ತೆರಳಿದ ಹೃದಯ ವಿದ್ರಾವಕ ಘಟನೆ ಬಳ್ಳಾರಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.

    ಅಸುಂಡಿ ಗ್ರಾಮದ ನಿವಾಸಿ ಪರಶುರಾಮ್(45) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅಸುಂಡಿ ಗ್ರಾಮದಲ್ಲಿದ್ದ ಹಳ್ಳ ತುಂಬಿ ಹರಿಯುತ್ತಿದ್ದ ಪರಿಣಾಮ ಸ್ಮಶಾನಕ್ಕೆ ಶವಗಳನ್ನ ತೆಗೆದುಕೊಂಡು ಹೋಗಲು ಆಗದೆ, ನಿನ್ನೆಯಿಂದ ಶವವನ್ನು ಇಡಲಾಗಿತ್ತು. ಕೊನೆಗೆ ಬೇರೆ ಮಾರ್ಗವಿಲ್ಲದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ಇಂದು ಶವವನ್ನು ಶವದ ಪೆಟ್ಟಿಗೆಯಲ್ಲಿ ಹೊತ್ತುಕೊಂಡು ಹಳ್ಳ ದಾಟಿ ಶವ ಸಂಸ್ಕಾರ ಮಾಡಿದ್ದಾರೆ.

    ಈ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿದ್ದು, ಇದನ್ನು ದಾಟುವಾಗ ಸ್ವಲ್ಪ ಯಾಮಾರಿದರೂ ಅಂತ್ಯಸಂಸ್ಕಾರಕ್ಕೆ ಹೋದವರು ಕೊಚ್ಚಿ ಹೋಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಗ್ರಾಮದಲ್ಲಿ ಮೇಲ್ವರ್ಗಕ್ಕೊಂದು, ಕೆಳ ವರ್ಗದವರಿಗೊಂದು ಸ್ಮಶಾನವಿದೆ. ಆದರೆ ಕೆಳ ವರ್ಗದ ಸ್ಮಶಾನ ಹಳ್ಳದಾಚೆ ಇರುವುದರಿಂದ ಗ್ರಾಮಸ್ಥರು ಶವ ಸಂಸ್ಕಾರ ಮಾಡಲು ಪರದಾಡುತ್ತಿದ್ದಾರೆ.

    ಈ ಬಗ್ಗೆ ಪಿಡಿಒ, ತಹಶಿಲ್ದಾರ್, ಡಿಸಿವರೆಗೂ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ಶಾಸಕ ನಾಗೇಂದ್ರ ಕೂಡಾ ಚುನಾವಣೆ ವೇಳೆ ಸ್ಮಶಾನಕ್ಕೆ ಜಾಗ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಇದಾದ ನಂತರ ನಮ್ಮ ಗ್ರಾಮದ ಕಡೆ ತಲೆ ಹಾಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಮಾನವ ಸರಪಳಿ ನಿರ್ಮಿಸಿ ನೀರಿನಲ್ಲಿ ಕೊಚ್ಚಿ ಹೋಗ್ತಿದ್ದವರ ರಕ್ಷಣೆಗೆ ನಿಂತ ಜನ

    ಮಾನವ ಸರಪಳಿ ನಿರ್ಮಿಸಿ ನೀರಿನಲ್ಲಿ ಕೊಚ್ಚಿ ಹೋಗ್ತಿದ್ದವರ ರಕ್ಷಣೆಗೆ ನಿಂತ ಜನ

    ಭೋಪಾಲ್: ಮಧ್ಯಪ್ರದೇಶದ ಇಂದೋರಿನ ಗೌತಮಪುರದಲ್ಲಿ ತುಂಬಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಕೊಚ್ಚಿ ಹೋಗುತ್ತಿದ್ದರು. ಈ ವೇಳೆ ಸ್ಥಳೀಯರು ಮಾನವ ಸರ್ಪಳಿ ನಿರ್ಮಿಸಿ, ತಮ್ಮ ಪ್ರಾಣ ಪಣಕ್ಕಿಟ್ಟು ಅವರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

    ಗುರುವಾರ ಗೌತಮಪುರದಲ್ಲಿನ ಹೊಳೆಯಲ್ಲಿ ಇಬ್ಬರು ಕೊಚ್ಚಿ ಹೋಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಅವರ ರಕ್ಷಣೆ ಮಾಡಲು ಮುಂದಾದರು. ಈ ವೇಳೆ 10ರಿಂದ 15 ಮಂದಿ ಸೇರಿ ಒಬ್ಬರ ಕೈ ಮತ್ತೊಬ್ಬರು ಹಿಡಿದು ಮಾನವ ಸರಪಳಿ ನಿರ್ಮಿಸಿಕೊಂಡು ಹೊಳೆಗೆ ಇಳಿದಿದ್ದಾರೆ. ಸದ್ಯ ಕೊಚ್ಚಿ ಹೋಗುತ್ತಿದ್ದ ಓರ್ವನನ್ನು ಸ್ಥಳೀಯರೇ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ರಕ್ಷಣಾ ತಂಡ ಆಗಮಿಸಿದ್ದು, ಇನ್ನೋರ್ವ ಪತ್ತೆಯಾಗದ ಹಿನ್ನೆಲೆ ರಕ್ಷಣಾ ಕಾರ್ಯಚರಣೆ ಮುಂದುವರಿಸಿದ್ದಾರೆ. ಅವರಿಗೆ ಸ್ಥಳೀಯರು ಕೂಡ ಸಾಥ್ ನೀಡುತ್ತಿದ್ದಾರೆ. ಹೊಳೆಯಲ್ಲಿ ಕೊಚ್ಚಿಹೋಗಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೆ ಈ ವ್ಯಕ್ತಿಗಳು ಹೊಳೆ ಬಳಿ ಏಕೆ ಹೋಗಿದ್ದರು? ಹೇಗೆ ನೀರಿಗೆ ಬಿದ್ದರು ಎನ್ನುವ ಬಗ್ಗೆ ಕೂಡ ಯಾವುದೇ ಮಾಹಿತಿ ದೊರಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.