Tag: street

  • ಆಟವಾಡ್ತಿದ್ದ ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿನಾಯಿಗಳು ದಾಳಿ; ಮುಂದೇನಾಯ್ತು ನೋಡಿ…

    ಆಟವಾಡ್ತಿದ್ದ ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿನಾಯಿಗಳು ದಾಳಿ; ಮುಂದೇನಾಯ್ತು ನೋಡಿ…

    ಲಕ್ನೋ: ಲಕ್ನೋದ ಠಾಕೂರ್‌ಗಂಜ್‌ನ ಮುಸಾಹಿಬ್‌ಗಂಜ್‌ನಲ್ಲಿರುವ ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

    ಈ ದಾಳಿಯಲ್ಲಿ 8 ವರ್ಷದ ಹುಡುಗ ಮೃತಪಟ್ಟಿದ್ದು, ಮೃತನ ಸಹೋದರಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ಅಣ್ಣ-ತಂಗಿಯನ್ನು ಕೆಜಿಎಂಯುನ ಟ್ರಾಮಾ ಸೆಂಟರ್‌ಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಆದರೆ ಬಾಲಕ ಮೊಹಮ್ಮದ್ ಹೈದರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಅವರ 5 ವರ್ಷದ ಸಹೋದರಿ ಜನ್ನತ್ ಸ್ಥಿತಿ ಗಂಭೀರವಾಗಿದ್ದು, ICUಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಕಬಡ್ಡಿ ಆಟಗಾರ ಧರ್ಮಿಂದರ್ ಸಿಂಗ್ ಮನೆಗೆ ಭೇಟಿ ಕೊಟ್ಟ ನವಜೋತ್ ಸಿಂಗ್ ಸಿಧು

    dogs

    ಮೃತ ಬಾಲಕನ ಪೋಷಕರು ಲಕ್ನೋದ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ಧ ಧ್ವನಿ ಎತ್ತಿದ್ದಾರೆ. ಬೀದಿ ನಾಯಿಗಳನ್ನು ಹಿಡಿಯಲು ಆದೇಶ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಈ ಹಿಂದೆಯೇ ಮನವಿ ಮಾಡಿದ್ದರು. ಪದೇ – ಪದೇ ಸ್ಥಳಿಯರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರು ನೀಡಿ ಮನವರಿಕೆ ಮಾಡಿಕೊಡಲಾಗಿತ್ತು. ಆದರೂ, ಲಕ್ನೋ ಮಹಾನಗರ ಪಾಲಿಕೆ (LMC) ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

    ಸರ್ಕಾರೇತರ ಸಂಸ್ಥೆಗಳು (NGO) ನಾಯಿಗಳನ್ನು ಹಿಡಿಯಲು ವಿರೋಧ ವ್ಯಕ್ತಪಡಿಸಿರುವುದರಿಂದ ನಾಯಿಗಳನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಎಲ್‌ಎಂಸಿ ನಿರಾಕರಿಸಿತ್ತು. ಸಂತ್ರಸ್ತೆಯ ತಂದೆ ಮುನ್ಸಿಪಲ್ ಕಾರ್ಪೊರೇಷನ್ ವಲಯ 6ರ ಅಧಿಕಾರಿಗಳು ಮತ್ತು ಇತರರ ವಿರುದ್ಧ ಠಾಕೂರ್‌ಗಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

  • ಐ ಲವ್ ಯೂ, ಐ ಮಿಸ್ ಯೂ – 2.5 ಕಿ.ಮೀ ರಸ್ತೆಯುದ್ದಕ್ಕೂ ಬರೆದ ಪಾಗಲ್ ಪ್ರೇಮಿ

    ಐ ಲವ್ ಯೂ, ಐ ಮಿಸ್ ಯೂ – 2.5 ಕಿ.ಮೀ ರಸ್ತೆಯುದ್ದಕ್ಕೂ ಬರೆದ ಪಾಗಲ್ ಪ್ರೇಮಿ

    ಮುಂಬೈ: ಸಾಮಾನ್ಯವಾಗಿ ಪ್ರೀತಿ ಮಾಡುವವರು ತಮ್ಮ ಸಂಗಾತಿಯನ್ನು ಆಕರ್ಷಿಸಲು ಸರ್ ಪ್ರೈಸ್‍ಗಳನ್ನು ನೀಡುವುದು, ಗಿಫ್ಟ್ ನೀಡುವುದು ಹೀಗೆ ಹಲವಾರು ರೀತಿಯ ಸರ್ಕಸ್‍ಗಳನ್ನು ಮಾಡುತ್ತಾರೆ. ಆದರೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ವ್ಯಕ್ತಿಯೋರ್ವ ತನ್ನ ಭಾವನೆಗಳನ್ನು ಗೆಳತಿ ಮುಂದೆ ವಿಭಿನ್ನ ಶೈಲಿಯಲ್ಲಿ ವ್ಯಕ್ತಪಡಿಸಿದ್ದಾನೆ.

    ಕೊಲ್ಹಾಪುರದ ಶಿರೋಲ್ ತಹಸಿಲ್‍ನ ಧರಂಗುಟ್ಟಿಯಲ್ಲಿ ವ್ಯಕ್ತಿಯೋರ್ವ ಸಿನಿಮಾ ಮಾದರಿ 2.5 ಕಿ.ಮೀ ವಿಸ್ತಾರದ ಹಳ್ಳಿಯ ಮುಖ್ಯ ರಸ್ತೆಯುದ್ದಕ್ಕೂ ಪೇಯಿಂಟ್‍ನಲ್ಲಿ ‘ಐ ಲವ್ ಯೂ’ ಹಾಗೂ ‘ಐ ಮಿಸ್ ಯೂ’ ಎಂದು ಬರೆದಿದ್ದಾನೆ. ಅಲ್ಲದೆ ‘ಐ ಮಿಸ್ ಯೂ’ ಜೀವನದೊಂದಿಗೆ, ಜೀವನದ ನಂತರವೂ ಎಂಬ ಸಂದೇಶವೊಂದನ್ನು ಬರೆದಿದ್ದಾನೆ.

    ಈ ಸಂದೇಶವನ್ನು ಬಿಳಿಯ ಆಯಿಲ್ ಪೇಯಿಂಟ್‍ನಲ್ಲಿ ಜೈಸಿಂಗ್‍ಪುರದಿಂದ ಧರಂಗುಟ್ಟಿದ 2.5ಕಿ.ಮೀ ಮಾರ್ಗದವರೆಗೂ ಬರೆಯಲಾಗಿದೆ. ಘಟನೆ ಕುರಿತಂತೆ ಗ್ರಾಮಸ್ಥರು ಮುಖ್ಯ ರಸ್ತೆಯಲ್ಲಿ ಹಿಂದೆ ಎಂದೂ ಕಾಣಿಸದ ಈ ಬರಹಗಳನ್ನು ಬರೆದಿರುವ ಪಾಗಲ್ ಪ್ರೇಮಿ ಯಾರಿರಬಹುದು ಎಂದು ಅಚ್ಚರಿಗೊಂಡಿದ್ದಾರೆ. ಜೊತೆಗೆ ಈ ಕಿಡಿಗೇಡಿ ಕೃತ್ಯದ ಹಿಂದೆ ಗ್ರಾಮದ ಕೆಲವು ಯುವಕರು ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

  • ರಸ್ತೆಯಲ್ಲಿ ಸೀನಿದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಜನರು

    ರಸ್ತೆಯಲ್ಲಿ ಸೀನಿದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಜನರು

    ಕೊಲ್ಲಾಪುರ: ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವೈರಸ್ ಭೀತಿ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿನಿಂದ ಆತಂಕಕ್ಕೆ ಜನರು ಒಳಗಾಗಿದ್ದು, ಮಹಾರಾಷ್ಟ್ರದಲ್ಲಿ ಕರ್ಚೀಫ್ ಇಲ್ಲದೇ ಸೀನಿದವನಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಹೊಡೆದಿದ್ದಾರೆ.

    ಕೊರೊನಾ ಭೀತಿಯಿಂದ ಯಾರಾದರೂ ನೆಗಡಿ ಬಂದು ಸೀನಿದರೆ, ಕೆಮ್ಮಿದರೆ ಸಾಕು ಅವರನ್ನು ಅಪರಾಧಿ ಎನ್ನುವ ರೀತಿ ಜನರು ನೋಡುತ್ತಿದ್ದಾರೆ. ಇದಕ್ಕೆ ಉದಾಹರಣೆ ಎನ್ನುವಂತೆ ಮಹಾರಾಷ್ಟ್ರದಲ್ಲಿ ಒಂದು ಘಟನೆ ನಡೆದಿದೆ. ರಸ್ತೆಯಲ್ಲಿ ಕರ್ಚೀಫ್ ಇಲ್ಲದೇ ಸೀನಿದ ವ್ಯಕ್ತಿಯನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೊಲ್ಲಾಪುರದಲ್ಲಿ ಈ ಘಟನೆ ನಡೆದಿದೆ. ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಸೀನಿದ್ದಾನೆ. ಆದರೆ ಸೀನುವಾಗ ಆತ ಮುಖಕ್ಕೆ ಅಡ್ಡಲಾಗಿ ಕರ್ಚೀಫ್ ಇಟ್ಟುಕೊಂಡಿರಲಿಲ್ಲ. ಹೀಗಾಗಿ ವ್ಯಕ್ತಿ ಸೀನುತ್ತಿದ್ದದನ್ನು ನೋಡಿದ ಸ್ಥಳೀಯರು ಆತನ ಬೈಕನ್ನು ಅಡ್ಡಗಟ್ಟಿದ್ದಾರೆ.

    ‘ಕೊರೊನಾ ಎಲ್ಲೆಡೆ ಹರಡುತ್ತಿದೆ. ಸೀನುವಾಗ ಮುಖಕ್ಕೆ ಅಡ್ಡಲಾಗಿ ಏನಾದರೂ ಇಟ್ಟುಕೊಳ್ಳಬೇಕು ಎನ್ನುವ ಸಾಮಾನ್ಯ ಜ್ಞಾನವೂ ಇಲ್ವಾ? ನಿಮ್ಮಂಥವರಿಂದಲೇ ಕೊರೊನಾ ಸೋಂಕು ಹೆಚ್ಚು ಹರಡುತ್ತಿದೆ,’ ಎಂದು ಜನರು ಸೀನಿದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ವ್ಯಕ್ತಿ ಹಾಗೂ ಜನರ ನಡುವೆ ವಾಗ್ವಾದ ನಡೆದಿದ್ದು, ಸಿಟ್ಟಿಗೆದ್ದ ಜನರು ಸೀನಿದವನಿಗೆ ಮನಬಂದಂತೆ ಥಳಿಸಿದ್ದಾರೆ.

    ರಸ್ತೆ ಮಧ್ಯೆ ಈ ಘಟನೆ ನಡೆದ ಪರಿಣಾಮ ಕೆಲ ಕಾಲ ಟ್ರಾಫಿಕ್ ಜ್ಯಾಮ್ ಕೂಡ ಉಂಟಾಗಿತ್ತು. ಬಳಿಕ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯ್ತು.

    ಮೊದಲೇ ಮಹಾರಾಷ್ಟ್ರದಲ್ಲಿ ಡೆಡ್ಲಿ ಕೊರೊನಾ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದರಿಂದ ಜನರು ಭಯಗೊಂಡಿದ್ದಾರೆ. ಸದ್ಯ 48 ಮಂದಿಗೆ ಕೊರೊನಾ ಸೋಂಕು ತಟ್ಟಿರುವುದು ದೃಢಪಟ್ಟಿದ್ದು, ಅಲ್ಲಿನ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಲದೇ ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಕೂಡ ಮೂಡಿಸಲಾಗುತ್ತಿದೆ.

  • ನನ್ ಎಕ್ಡ ಎನ್ನುತ್ತಿದ್ದ ಹುಚ್ಚ ವೆಂಕಟ್ ಈಗ ಬರಿಗಾಲಲ್ಲಿ ಓಡಾಟ!

    ನನ್ ಎಕ್ಡ ಎನ್ನುತ್ತಿದ್ದ ಹುಚ್ಚ ವೆಂಕಟ್ ಈಗ ಬರಿಗಾಲಲ್ಲಿ ಓಡಾಟ!

    ಬೆಂಗಳೂರು: ಯಾವಾಗಲೂ ಒಂದಲ್ಲ ಒಂದು ಹೇಳಿಕೆಯ ಮೂಲಕವೇ, ವಿವಾದಗಳ ಮೂಲಕವೇ ಜನಪ್ರಿಯತೆ ಗಳಿಸಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಚೆನ್ನೈನ ಬೀದಿ ಬೀದಿಗಳಲ್ಲಿ ಚಪ್ಪಲಿಯೇ ಇಲ್ಲದೇ ಓಡಾಡುತ್ತಿರೋ ದೃಶ್ಯ ಕಂಡುಬಂದಿದೆ.

    ಮಾತು ಮಾತಿಗೂ ‘ನನ್ ಎಕ್ಡ’ ಅನ್ನೋ ಡೈಲಾಗ್ ಹೊಡೆದುಕೊಂಡು ಪಂಚಿಂಗ್ ಮಾತುಗಳನ್ನು ಹುಚ್ಚ ವೆಂಕಟ್ ಹೇಳುತ್ತಿದ್ದರು. ಬಾಯಿ ಬಿಟ್ಟರೆ `ನನ್ ಎಕ್ಡ’ ಎಂದು ಹೇಳುತ್ತಿದ್ದ ವೆಂಕಟ್ ಈಗ ಚೆನ್ನೈ ಬೀದಿಯಲ್ಲಿ ಬರಿಗಾಲಲ್ಲಿ ಓಡಾಟ ನಡೆಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಕೆಲ ದಿನಗಳ ಹಿಂದೆ `ದುರಹಂಕಾರಿ ಹುಚ್ಚ ವೆಂಕಟ್’ ಚಿತ್ರದ ಪ್ರೋಮೋ ರಿಲೀಸ್ ಮಾಡಿ ಸಿನಿಮಾ ಮಾಡುತ್ತಿರುವುದಾಗಿ ಮಾಧ್ಯಮಗಳ ಮುಂದೆ ಹುಚ್ಚ ವೆಂಕಟ್ ಹೇಳಿಕೆ ನೀಡಿದ್ದರು. ಆದರೆ ಚೆನ್ನೈನ ಬೀದಿ ಬೀದಿಗಳಲ್ಲಿ ಚಪ್ಪಲಿ ಇಲ್ಲದೆ ಬರಿಗಾಲಿನಲ್ಲಿ ಅಲೆಯುತ್ತಿರುವುದನ್ನು ಕಂಡ ಕೆಲವರು ಅವರ ಫೋಟೋ ಕ್ಲಿಕ್ಕಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚುಡಾಯಿಸಿ ಬಾಲಕಿಯ ತಲೆ ಕತ್ತರಿಸಿ ರೋಡ್‍ನಲ್ಲಿ ಬಿಸಾಡ್ದ!

    ಚುಡಾಯಿಸಿ ಬಾಲಕಿಯ ತಲೆ ಕತ್ತರಿಸಿ ರೋಡ್‍ನಲ್ಲಿ ಬಿಸಾಡ್ದ!

    ಚೆನ್ನೈ: 13 ವರ್ಷದ ಬಾಲಕಿಯ ತಲೆಯನ್ನು ಕತ್ತರಿಸಿ ಬೀದಿಯಲ್ಲಿ ಎಸೆದ 27 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಸೋಮವಾರ ಈ ಘಟನೆ ನಡೆದಿದ್ದು, ರಾಜಲಕ್ಷ್ಮೀ(13) ಕಾಮುಕನಿಗೆ ಬಲಿಯಾದ ಬಾಲಕಿ. ದಿನೇಶ್ ಕುಮಾರ್ ಬಾಲಕಿಗೆ ಕಿರುಕುಳವನ್ನು ನೀಡಿದ ಆರೋಪಿ. ತಲವಾಯಪಟ್ಟಿ ನಿವಾಸಿಯಾದ ರಾಜಲಕ್ಷ್ಮೀ 8 ನೇ ತರಗತಿ ಓದುತ್ತಿದ್ದಳು. ಪ್ರತಿನಿತ್ಯ ಬಾಲಕಿ ರಾಜಲಕ್ಷ್ಮೀಗೆ ದಿನೇಶ್ ಚುಡಾಯಿಸುತ್ತಿದ್ದ. ಇದೇ ವೇಳೆ ಸೋಮವಾರ ರಾಜಲಕ್ಷ್ಮೀ ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡು ಮನೆಯೊಳಗೆ ನುಗ್ಗಿ ಅವಳನ್ನು ಮತ್ತಷ್ಟು ಚುಡಾಯಿಸಿದ್ದಾನೆ ಎಂದು ಅತ್ತೆರ್ ಪೊಲೀಸರು ಹೇಳಿದ್ದಾರೆ.

    ಇದೇ ವೇಳೆ ದಿನೇಶ್ ಮನೆಯೊಳಗೆ ನುಗ್ಗಿದಾಗ ರಾಜಲಕ್ಷ್ಮೀ ಕಿರುಚಿಕೊಂಡಿದ್ದಾಳೆ. ರಾಜಲಕ್ಷ್ಮೀಯ ಕಿರುಚಾಟವನ್ನು ಕೇಳಿಸಿಕೊಂಡು ತಾಯಿ ಸ್ಥಳಕ್ಕೆ ಆಗಮಿಸುತ್ತಿದ್ದರು. ಇದನ್ನು ಕಂಡ ಕಾಮುಕ ಬಾಲಕಿ ಮೇಲೆ ಹಲ್ಲೆ ಮಾಡಿ ಆಕೆಯ ತಲೆಯನ್ನು ಕತ್ತರಿಸಿ ಬೀದಿಯಲ್ಲಿ ಎಸೆದು ಹೋಗಿದ್ದಾರೆ.

    ಈ ಘಟನೆಯ ವೇಳೆ ಆರೋಪಿ ದಿನೇಶ್ ಮದ್ಯಪಾನ ಸೇವನೆ ಮಾಡಿದ್ದು, ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿಯಂತೆ ವರ್ತಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಡು ರಸ್ತೆಯಲ್ಲೇ ಉದ್ಯಮಿಗೆ ಗನ್ ತೋರಿಸಿ 70 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

    ನಡು ರಸ್ತೆಯಲ್ಲೇ ಉದ್ಯಮಿಗೆ ಗನ್ ತೋರಿಸಿ 70 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

    ನವದೆಹಲಿ: ಉದ್ಯಮಿಯೊಬ್ಬರನ್ನು ಸಂಚಾರ ದಟ್ಟಣೆಯಿಂದ ಕೂಡಿದ ಫೈಓವರ್ ಮೇಲಿಯೇ ಅಡ್ಡಗಟ್ಟಿ ಹಣ ದೋಚಿದ ಘಟನೆ ಪಶ್ಚಿಮ ದೆಹಲಿಯ ನರೈನ್ ಫೈಓವರ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    40 ವರ್ಷದ ಕಾಶಿಶ್ ಬನ್ಸಾಲ್ ಹಣ ಕಳೆದುಕೊಂಡ ಉದ್ಯಮಿಯಾಗಿದ್ದಾರೆ. ಇವರು ಗುರುವಾರ ತಮ್ಮ ನಿವಾಸದಿಂದ ಗುರುಗಾವ್ ಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಪಶ್ಚಿಮ ದೆಹಲಿಯ ನರೈನ್ ಫೈಓವರ್ ಬಳಿ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೌಶಿಶ್ ರನ್ನು ಅಡ್ಡಗಟ್ಟಿದ್ದಾರೆ. ಅಲ್ಲದೇ ಉದ್ಯಮಿಗೆ ಗನ್ ತೋರಿಸಿ, ಅವರ ಬಳಿಯಿದ್ದ 70 ಲಕ್ಷ ರೂಪಾಯಿಯನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

    ದಟ್ಟಣೆಯಿರುವ ರಸ್ತೆಯಲ್ಲೇ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ದಾಳಿಮಾಡಿರುವುದನ್ನು ಬೇರೊಂದು ವಾಹನದ ಸವಾರರು ವಿಡಿಯೋ ಮಾಡಿದ್ದು, ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಘಟನೆ ಸಂಬಂಧ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಉದ್ಯಮಿಯನ್ನು ಬಹಳ ದಿನದಿಂದ ಗಮನಿಸಿ ಕೃತ್ಯ ಎಸಗಿರುವುದು ಕಂಡುಬಂದಿದ್ದು, ನಡು ರಸ್ತೆಯಲ್ಲೇ ಗನ್ ತೋರಿಸಿ ಹಣ ದೋಚಿಕೊಂಡು ಹೋಗಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದ್ದು, ವ್ಯಾಪಕ ಶೋಧಕಾರ್ಯ ನಡೆಯುತ್ತಿದೆ. ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ.

    ಸಂಚಾರ ದಟ್ಟಣೆಯಿರುವ ರಸ್ತೆಯಲ್ಲೇ ವ್ಯಕ್ತಿಯನ್ನು ಹಲ್ಲೆ ಮಾಡಿ ಹಣ ದೋಚಿದರೂ, ಅವರ ಸಹಾಯಕ್ಕೆ ಯಾರೊಬ್ಬರೂ ಬಾರದೇ ಇರುವುದು ಶೋಚನಿಯ ಸಂಗತಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews