Tag: Street vendors

  • ಯುಪಿ ಬಳಿಕ ಹಿಮಾಚಲದಲ್ಲೂ ಆಹಾರ ಮಳಿಗೆಗಳ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ!

    ಯುಪಿ ಬಳಿಕ ಹಿಮಾಚಲದಲ್ಲೂ ಆಹಾರ ಮಳಿಗೆಗಳ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ!

    ನವದೆಹಲಿ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಇನ್ಮುಂದೆ ಆಹಾರ ಮಳಿಗೆ, ಹೊಟೇಲ್ ಹಾಗೂ ಬೀದಿ ವ್ಯಾಪಾರಿಗಳ ಮಳಿಗೆಗಳ ಹೆಸರು ಪದರ್ಶನ ಕಡ್ಡಾಯ ಎಂದು ಇಲ್ಲಿನ ನಗರಾಭಿವೃದ್ಧಿ ಸಚಿವ ವಿಕ್ರಮಾದಿತ್ಯ ಸಿಂಗ್ (Vikramaditya Singh) ಆದೇಶ ಹೊರಡಿಸಿದ್ದಾರೆ.

    ಇತ್ತೀಚಿಗಷ್ಟೇ ಉತ್ತರ ಪ್ರದೇಶ (Uttara Pradesh) ಸರ್ಕಾರವು ಬೀದಿ ಬದಿಯ ವ್ಯಾಪಾರಿಗಳು ತಮ್ಮ ಹೆಸರು ಹಾಗೂ ವ್ಯಾಪಾರದ ಗುರುತನ್ನು ಅಳವಡಿಸುವುದು ಕಡ್ಡಾಯವೆಂದು ಕಟ್ಟುನಿಟ್ಟಾದ ಆದೇಶವನ್ನು ಹೊರಡಿಸಿತ್ತು.ಇದನ್ನೂ ಓದಿ: ಸೆ.27ರಂದು ತುಮಕೂರು- ಯಶವಂತಪುರ ಮೆಮು ರೈಲಿಗೆ ಚಾಲನೆ

    ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ವಿಕ್ರಮಾದಿತ್ಯ ಸಿಂಗ್ ಮಾತಾನಾಡಿ, ಇತ್ತೀಚಿಗೆ ರಾಜಾದ್ಯಂತ ಜನರು ಇದಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ವ್ಯಕ್ತಪಡಿಸಿದ್ದರು. ಅವುಗಳನ್ನು ಗಮನದಲ್ಲಿಟ್ಟುಕೊಂಡು ಮಂಗಳವಾರ ನಡೆದ ನಗರಾಭಿವೃದ್ಧಿ ಇಲಾಖೆ (Urban Development Department) ಹಾಗೂ ಶಿಮ್ಲಾ ಮಹಾನಗರ ಪಾಲಿಕೆ (Shimla Municipal Corporation) ಸಭೆಯಲ್ಲಿ ನಿರ್ಧಾರಿಸಿದೆ. ಸರಕು ಸಾಮಗ್ರಿಗಳ ವ್ಯಾಪಾರಿಗಳು, ಹೋಟೆಲ್ ಮಾಲೀಕರು, ಆಹಾರ ಪದಾರ್ಥ ಮಾರಾಟಗಾರರು ತಮ್ಮ ಗುರುತನ್ನು ಪ್ರದರ್ಶಿಸಬೇಕೆಂದು ಸಚಿವರು ಆದೇಶದಲ್ಲಿ ತಿಳಿಸಿದ್ದಾರೆ.

    ತಿನ್ನುವ ಆಹಾರವು ಶುಚಿಯಾಗಿದೆಯಾ? ಗುಣಮಟ್ಟವಾಗಿದೆಯಾ? ಎನ್ನುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳುತ್ತದೆ. ಜೊತೆಗೆ ಇದನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (Food and Civil Supplies Department) ಪರಿಶೀಲಿಸುತ್ತದೆ ಎಂದು ತಿಳಿಸಿದ್ದಾರೆ.

    ತಮ್ಮ ಗುರುತನ್ನು ಪ್ರದರ್ಶಿಸುವಾಗ ನೋಂದಣಿ ಸಂಖ್ಯೆ ಹಾಗೂ ವ್ಯಾಪಾರಿಯ ಭಾವಚಿತ್ರವನ್ನು ಪದರ್ಶಿಸಬೇಕೆಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆಯಾದಾಗ ಕ್ರಮ ಕೈಗೊಳ್ಳುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.ಇದನ್ನೂ ಓದಿ: ಸಿಎಂ, ಪುತ್ರ ಯತೀಂದ್ರ, ಪತ್ನಿ ಪಾರ್ವತಿ ಮೇಲೆ ಎಫ್‌ಐಆರ್‌ ದಾಖಲಿಸಿ: ಪ್ರದೀಪ್‌ ಕುಮಾರ್‌ ದೂರು

  • ಬೆಂಗಳೂರಿನಲ್ಲಿ ಆಪರೇಷನ್ ಶಾಪಿಂಗ್ ಹಬ್ – ತೆರವು ಖಂಡಿಸಿ ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ

    ಬೆಂಗಳೂರಿನಲ್ಲಿ ಆಪರೇಷನ್ ಶಾಪಿಂಗ್ ಹಬ್ – ತೆರವು ಖಂಡಿಸಿ ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ

    ಬೆಂಗಳೂರು: ಕಳೆದ ಒಂದು ವಾರದಿಂದ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮುಂದುವರೆದಿದೆ. ಈ ಬಿಸಿ ಈಗ ಮಲ್ಲೇಶ್ವರಂ ಮಾರ್ಕೆಟ್‌ಗೂ (Malleshwaram Market) ತಟ್ಟಿದ್ದು, ಬೀದಿಬದಿ ವ್ಯಾಪಾರಿಗಳ (Street Vendors) ಗೋಳು ಹೇಳತೀರದಂತಿದೆ.

    ಬೆಂಗಳೂರಿನಲ್ಲಿ (Bengaluru) ಕಳೆದ ಒಂದು ವಾರದಿಂದ ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿರುವ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮಲ್ಲೇಶ್ವರಂ ಮಾರ್ಕೆಟ್‌ಗೂ ಕಾಲಿಟ್ಟಿದೆ. ಮಲ್ಲೇಶ್ವರಂ 8ನೇ ಕ್ರಾಸ್‌ನಲ್ಲಿ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರ ಮಾಡದಂತೆ ಅಂಗಡಿಗಳನ್ನು ಎತ್ತಿಸಲಾಗಿದ್ದು, ವ್ಯಾಪಾರಿಗಳು ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ಬಿಲ್ ಹೆಸರಲ್ಲಿ ಸೈಬರ್ ಹ್ಯಾಕ್ – ಬಿಲ್ ಕಟ್ಟೋಕೆ ಹೋದ್ರೆ ಅಕೌಂಟ್‌ನಲ್ಲಿದ್ದ ಹಣ ಮಾಯ

    ನಗರದ ಬೇರೆ ಬೇರೆ ಕಡೆ ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳ ತೆರವು ಆರಂಭಿಸಿರುವ ಬಿಬಿಎಂಪಿ ಬುಧವಾರ ಸಂಜೆ ದಿಢೀರ್ ಅಂತಾ ಮಲ್ಲೇಶ್ವರಂ 8ನೇ ಕ್ರಾಸ್‌ನ ಮಾರ್ಕೆಟ್‌ನಲ್ಲೂ ಕಾರ್ಯಚರಣೆ ಆರಂಭಿಸಿತ್ತು. ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ಮತ್ತು ಮಾರ್ಷಲ್‌ಗಳ ಸಹಾಯದಿಂದ ತೆರವು ಮಾಡಲಾಯಿತು. ಆರಂಭದಲ್ಲಿ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಆದರೆ ಪೊಲೀಸರು ದೊಡ್ಡ ಮಟ್ಟದ ವಿರೋಧಕ್ಕೆ ಆಸ್ಪದ ನೀಡದೆ ಸಂಪೂರ್ಣ ವ್ಯಾಪಾರವನ್ನು ಸ್ಥಗಿತಗೊಳಿಸಿದರು. ಇದೇ ಸಂದರ್ಭದಲ್ಲಿ ಮಹಿಳಾ ವ್ಯಾಪಾರಿಗಳು ಕೂಡ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದರು. ಇದನ್ನೂ ಓದಿ: ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ – ಅಧಿಕಾರಿ ಅರೆಸ್ಟ್

    ಈ ಮಧ್ಯೆ ವ್ಯಾಪಾರಿಗಳ ತೆರವು ವಿಚಾರ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ಜಿಎಸ್‌ಟಿ ವ್ಯಾಪ್ತಿಗೆ ಬರುವ ವಸ್ತುಗಳನ್ನು ಫುಟ್‌ಪಾತ್‌ನಲ್ಲಿ ಮಾರುತ್ತಿದ್ದಾರೆ. ತಾವು ಬೀದಿಬದಿ ವ್ಯಾಪಾರಿ ಅಂತಾ ಗುರುತಿನ ಚೀಟಿ ಇದ್ದರೆ ವ್ಯಾಪಾರ ಮಾಡಬಹುದು. ರಸ್ತೆಯಿಂದ 10 ಮೀಟರ್ ದೂರದಲ್ಲಿ ಪಾದಚಾರಿಗಳಿಗೆ ತೊಂದರೆ ಆಗದಂತೆ ಮಾಡಬಹುದು ಎಂದಿದ್ದಾರೆ. ಆದರೆ, ಈ ಮಧ್ಯೆ ಕಾರ್ಡ್ ಇರುವ ಭಾಗಗಳಲ್ಲೂ ತೆರವು ಕಾರ್ಯ ನಡೆಯುತ್ತಿದ್ದು, ಬಿಬಿಎಂಪಿ ಕಮಿಷನರ್ ಹುಸಿ ಭರವಸೆ ನೀಡುತ್ತಿದ್ದಾರಾ ಎಂಬ ಅನುಮಾನ ಕೂಡ ವ್ಯಕ್ತವಾಗ್ತಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರೀ ಮಳೆ – 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

    ಮಲ್ಲೇಶ್ವರಂ, ಜಯನಗರ (Jayanagar), ಸೇರಿ ಹಲವೆಡೆ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿಸುತ್ತಿರುವುದನ್ನು ಖಂಡಿಸಿ ಇಂದು ಬೀದಿಬದಿ ವ್ಯಾಪಾರಿಗಳ ಸಂಘ ಪ್ರತಿಭಟನೆ ನಡೆಸುತ್ತಿದೆ. ಬೆಳಗ್ಗೆ 11 ಘಂಟೆಗೆ ಜಯನಗರ 4 ಬ್ಲಾಕ್‌ನಲ್ಲಿ ಬಿಡಿಎ ಮಾರ್ಕೆಟ್ ಕಾಂಪ್ಲೆಕ್ಸ್ ಹತ್ತಿರ ಬಿಬಿಎಂಪಿಯ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಒಟ್ಟಾರೆ ಬಿಬಿಎಂಪಿ ನಿರ್ಧಾರ ಬೀದಿಬದಿಯಲ್ಲಿ ಜೀವನ ಮಾಡುತ್ತಿದ್ದ ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದಿರುವುದಂತು ಸತ್ಯ. ಇದನ್ನೂ ಓದಿ: ಎಫ್‍ಡಿಎ ಪರೀಕ್ಷೆ ಅಕ್ರಮ ತನಿಖೆ ಚುರುಕು – ಕಿಂಗ್‍ಪಿನ್‍ನಿಂದ ಜಾಮೀನಿನ ಮೊರೆ

  • ಕೊರೊನಾ ಮೂರನೇ ಅಲೆ ಭೀತಿ- ಬೀದಿ ಬದಿ ವ್ಯಾಪಾರಸ್ಥರ ಸ್ಥಳಾಂತರ

    ಕೊರೊನಾ ಮೂರನೇ ಅಲೆ ಭೀತಿ- ಬೀದಿ ಬದಿ ವ್ಯಾಪಾರಸ್ಥರ ಸ್ಥಳಾಂತರ

    ಹಾಸನ: ಕೊರೊನಾ ಮೂರನೇ ಅಲೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಹಾಗೂ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ನಿಯಮ ಮೀರಿ ರಸ್ತೆ ಬದಿ ಹಾಕಿರುವ ಅಂಗಡಿಗಳನ್ನು ಚೆನ್ನರಾಯಪಟ್ಟಣದಲ್ಲಿ ಇಂದು ಬೆಳಗ್ಗೆ ತೆರವುಗೊಳಿಸಲಾಯಿತು.

    ವರಮಹಾಲಕ್ಷ್ಮಿ ಹಬ್ಬದ ಸಮಯದಲ್ಲಿ ಹೆಚ್ಚು ಜನ ಖರೀದಿಗೆ ಮುಗಿಬೀಳುತ್ತಾರೆ. ಆದ್ದರಿಂದ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾಲೂಕು ಆಡಳಿತದ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: 100 ಕರುಗಳನ್ನು ಸಾಗಿಸ್ತಿದ್ದ ವಾಹನ ಪಲ್ಟಿ – 50 ಕರುಗಳು ಸಾವು, 50 ಕರುಗಳ ರಕ್ಷಣೆ

    ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಹಣ್ಣು, ತರಕಾರಿ, ಹೂವಿನ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳದಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ತಾಲೂಕು ಆಡಳಿತದ ಆದೇಶ ಪಾಲಿಸದ ಕೆಲವು ವ್ಯಾಪಾರಸ್ಥರು, ರಸ್ತೆ ಬದಿಯಲ್ಲಿ ವ್ಯಾಪಾರ ವಹಿವಾಟು ಮುಂದುವರಿಸಿದ್ದಾರೆ. ಇದರಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಅಲ್ಲದೆ ಕೊರೊನಾ ಭೀತಿ ಇದೆ ಎಂದು ಅಂಗಡಿ ತೆರವುಗೊಳಿಸಿ, ನಿಗದಿತ ಸ್ಥಳದಲ್ಲಿ ಅಂಗಡಿ ಹಾಕಲು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

  • ಬೀದಿಬದಿ ವ್ಯಾಪಾರಿಗಳಿಗೆ ಸಾಲ – 5 ಸಾವಿರ ಕೋಟಿ ರೂ. ಪ್ಯಾಕೇಜ್ ಪ್ರಕಟ

    ಬೀದಿಬದಿ ವ್ಯಾಪಾರಿಗಳಿಗೆ ಸಾಲ – 5 ಸಾವಿರ ಕೋಟಿ ರೂ. ಪ್ಯಾಕೇಜ್ ಪ್ರಕಟ

    ನವದೆಹಲಿ: ಕೋವಿಡ್ 19 ನಿಂದ ಸಂಕಷ್ಟಕ್ಕೆ ಸಿಲುಕಿದ ಬೀದಿಬದಿ ವ್ಯಾಪಾರಿಗಳ ನೆರವಿಗೆ ಕೇಂದ್ರ ಸ್ಪಂದಿಸಿದ್ದು 5 ಸಾವಿರ ಕೋಟಿ ರೂ. ಸಾಲ ನೀಡಲಾಗುವುದು ಎಂದು ಹೇಳಿದೆ.

    ನರೇಂದ್ರ ಮೋದಿ ಪ್ರಕಟಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ಗೆ ಸಂಬಂಧಿಸಿದಂತೆ ಎರಡನೇ ದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿ ನಡೆಸಿ  ಹಲವು ಪ್ಯಾಕೇಜ್ ಗಳನ್ನು ಪ್ರಕಟಿಸಿದರು.

    ಮುಂದಿನ 1 ತಿಂಗಳ ಒಳಗಡೆ ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲ ನೀಡಲು ವಿಶೇಷ ಯೋಜನೆಯನ್ನು ತರಲಾಗುವುದು. ಕನಿಷ್ಟ 10 ಸಾವಿರ ರೂ. ಬಂಡವಾಳ ಹೂಡುವ ಬೀದಿ ಬದಿಯ ವ್ಯಾಪಾರಿಗಳಿಗೆ ಇದು ನೆರವು ನೀಡಲಿದೆ.

    ಒಟ್ಟಿ 50 ಲಕ್ಷ ಬೀದಿ ವ್ಯಾಪಾರಿಗಳಿಗೆ ನೆರವು ನೀಡಲು 5 ಸಾವಿರ ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

  • ಮಹಿಳೆಯರಿಗೆ ಲಕ್ಷಾಂತರ ರೂ. ಟೋಪಿ – ಮಾನವ ಹಕ್ಕುಗಳ ಅಧ್ಯಕ್ಷ ಅರೆಸ್ಟ್

    ಮಹಿಳೆಯರಿಗೆ ಲಕ್ಷಾಂತರ ರೂ. ಟೋಪಿ – ಮಾನವ ಹಕ್ಕುಗಳ ಅಧ್ಯಕ್ಷ ಅರೆಸ್ಟ್

    ಮಡಿಕೇರಿ: ಮಾನವ ಹಕ್ಕುಗಳ ಸಂಸ್ಥೆಯ ಅಧ್ಯಕ್ಷ ಎಂದು ಹೇಳಿಕೊಂಡು ಮಹಿಳೆಯರಿಗೆ ಲಕ್ಷಾಂತರ ರೂ. ಟೋಪಿ ಹಾಕಿದ್ದ ಆರೋಪಿಯನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ.

    ಮಂಜಿನ ನಗರಿ ಮಡಿಕೇರಿಯಲ್ಲಿ ಘಟನೆ ನಡೆದಿದ್ದು, ಬೆಂಗಳೂರಿನ ಹೆಣ್ಣೂರಿನವನಾದ ರಸೂಲ್ ಖಾನ್, ನಾನು ಮಾನವ ಹಕ್ಕುಗಳ ಸಂಸ್ಥೆಯ ಮುಖಂಡ ವ್ಯಾಪಾರ ಮಾಡಲು ನಿಮಗೆ ಸಾಲ ಕೊಡಿಸುತ್ತೇನೆ ಎಂದು ಹೇಳಿಕೊಂಡು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ. ಸಾಲ ಕೊಡಿಸಬೇಕಾದಲ್ಲಿ ನೀವು ಒಂದು ಕಾರ್ಯಕ್ರಮ ಮಾಡಬೇಕು ಎಂದು ಅದ್ಧೂರಿ ಕಾರ್ಯಕ್ರಮ ಮಾಡಿಸಿದ್ದಾನೆ. ಬಳಿಕ ಹತ್ತಾರು ಮಹಿಳೆಯರಿಗೆ ಲಕ್ಷಾಂತರ ರೂ. ಟೋಪಿಹಾಕಿ ಪರಾರಿಯಾಗಿದ್ದ, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    ಒಬ್ಬೊಬ್ಬರಿಗೂ ಒಂದುವರೆ ಲಕ್ಷ ರೂ. ಸಾಲ ಕೊಡಿಸುತ್ತೇನೆ ಎಂದು ಬೀದಿ ಬದಿ ವ್ಯಾಪಾರಿಗಳನ್ನು ನಂಬಿಸಿದ್ದಾನೆ. ಅಲ್ಲದೆ ಸಂಸ್ಥೆಗೆ ಜನರನ್ನು ಸದಸ್ಯರನ್ನಾಗಿಸಬೇಕು, ಅದಕ್ಕೂ ಮುನನ್ನ ಮಡಿಕೇರಿ ನಗರದಲ್ಲಿ ಒಂದು ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂದು ಬೀದಿ ಬದಿ ವ್ಯಾಪಾರ ಮಾಡುವ ಮಹಿಳಿಯರಿಗೆ ತಿಳಿಸಿದ್ದಾನೆ. ಇದನ್ನೇ ನಂಬಿದ್ದ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಕುಶಾಲನಗರದ ಮಹಿಳಾ ವ್ಯಾಪಾರಿಗಳು ಮೋಸ ಹೋಗಿದ್ದಾರೆ. 15ಕ್ಕೂ ಹೆಚ್ಚು ಮಹಿಳೆಯರು ಸೇರಿ ಮಡಿಕೇರಿಯಲ್ಲಿ ಕಾರ್ಯಕ್ರಮವನ್ನೂ ಮಾಡಿದ್ದಾರೆ. ಬಳಿಕ ಮಹಿಳೆಯರಿಗೆ ಅನುವಂಶೀಯ ವೈದ್ಯರ ಪರಿಷತ್ತು ಹೆಸರಿನ ಸರ್ಟಿಫಿಕೇಟ್‍ಗಳನ್ನು ವಿತರಣೆ ಮಾಡಿದ್ದಾನೆ.

    ಇದನ್ನು ನಂಬಿದ ಮಹಿಳೆಯರು ತಲಾ ಹದಿನೈದು ಸಾವಿರದಂತೆ ಹಣ ನೀಡಿದ್ದಾರೆ. ಹೀಗೆ ಒಬ್ಬೊಬ್ಬರಿಂದಲೂ ಹದಿನೈದು ಸಾವಿರ ರೂ. ಹಣ ಪಡೆದಿದ್ದ ಬಾಬು ಅಲಿಯಾಸ್ ರಸೂಲ್ ಖಾನ್, ಬಳಿಕ ವ್ಯಾಪಾರಿ ಮಹಿಳೆಯರನ್ನು ಬೆಂಗಳೂರಿಗೂ ಕರೆದೊಯ್ದು ಇದೇ ತನ್ನ ಕಚೇರಿ ಎಂದು ಪರಿಚಯಿಸಿದ್ದಾನೆ. ನಂತರ ಹಲವು ದಿನ ಕಳೆದರೂ ಸಾಲ ಕೊಡಿಸುವ ಕುರಿತು ಮಾತನಾಡದಿದ್ದಾಗ ಮಹಿಳೆಯರು ಫೋನ್ ಮಾಡಿ ಪ್ರಶ್ನಿಸಿದ್ದಾರೆ. ಈ ವೇಳೆ ನೀವು ಯಾರು ಅಂತಾನೆ ಗೊತ್ತಿಲ್ಲ. ನೀವು ನನಗೆ ಯಾವುದೇ ಹಣವನ್ನೂ ಕೊಟ್ಟಿಲ್ಲ ಎಂದು ಉಲ್ಟಾ ಹೊಡೆದಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆಯರು, ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಮಡಿಕೇರಿ ನಗರ ಪೊಲೀಸರು, ಆರೋಪಿ ರಸೂಲ್ ಖಾನ್‍ನನ್ನು ಬಂಧಿಸಿ ಜೈಲಿಗೆ ದಬ್ಬಿದ್ದಾರೆ.