Tag: Studio

  • ನಾಗಾ ಸಾಧುಗಳ ಸೋಗಿನಲ್ಲಿ ಬಂದು ಸ್ಟುಡಿಯೋ ಮಾಲೀಕನ ಉಂಗುರ ಎಗರಿಸಿದ ಕಳ್ಳರು

    ನಾಗಾ ಸಾಧುಗಳ ಸೋಗಿನಲ್ಲಿ ಬಂದು ಸ್ಟುಡಿಯೋ ಮಾಲೀಕನ ಉಂಗುರ ಎಗರಿಸಿದ ಕಳ್ಳರು

    ತುಮಕೂರು: ನಾಗಾ ಸಾಧುಗಳ (Naga sadhu) ಸೋಗಿನಲ್ಲಿ ಬಂದ ಇಬ್ಬರು ಆಸಾಮಿಗಳು ಫೋಟೋ ಸ್ಟುಡಿಯೋ (Studio) ಮಾಲೀಕನ ಕೈ ಬೆರಳಲ್ಲಿದ್ದ ಉಂಗುರವನ್ನು(Ring) ಸಿನಿಮೀಯ ಸ್ಟೈಲ್‌ನಲ್ಲಿ ದೋಚಿ ಪರಾರಿಯಾದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ಎಮ್‌ಜಿ ರಸ್ತೆಯಲ್ಲಿ ಇರುವ ಫೋಟೋ ಸ್ಟುಡಿಯೊವೊಂದರ ಮಾಲೀಕನಿಗೆ ನಕಲಿ ಸಾಧುಗಳು ಮಂಕುಬೂದಿ ಎರಚಿದ್ದು, ಸ್ಟುಡಿಯೋ ಮಾಲೀಕನ ಬೆರಳಲ್ಲಿದ್ದ ಉಂಗುರ ದೋಚಿದ್ದಾರೆ. ನಾಗಾ ಸಾಧುಗಳು ಎಂದು ಹೇಳಿಕೊಂಡು ಬಂದಿದ್ದ ಇಬ್ಬರಿಗೂ ಸ್ಟುಡಿಯೋ ಮಾಲೀಕ ಬಾಳೆ ಹಣ್ಣು, ನೀರು ಕೊಟ್ಟು ಸತ್ಕಾರ ಮಾಡಿದ್ದಾರೆ. ಆ ಬಳಿಕ ನಕಲಿ ಸಾಧುಗಳು ಮಾಲೀಕನ ಕೈಯಲ್ಲಿ ರುದ್ರಾಕ್ಷಿ ಕೊಟ್ಟು ಕಣ್ಣು ಮುಚ್ಚಿಸಿ ಜಪ ಮಾಡಿಸಿದ್ದಾರೆ. ಇದನ್ನೂ ಓದಿ: ಭೀಕರ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ

    ಮಾಲೀಕನ ಎರಡೂ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಧಾನವಾಗಿ ಬೆರಳಿನ ಉಂಗುರವನ್ನು ಎಗರಿಸಿದ್ದಾರೆ. ಇನ್ನೂ ಎರಡು ನಿಮಿಷ ಧ್ಯಾನ ಮಾಡಿ ಎಂದು ಹೇಳಿ ನಾಗಾಸಾಧುಗಳು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಧ್ಯಾನದಿಂದ ಹೊರ ಬಂದು ನೋಡಿದಾಗ ಸ್ಟುಡಿಯೋ ಮಾಲೀಕನ ಕೈಯಲ್ಲಿದ್ದ ಉಂಗುರ ಮಾಯವಾಗಿರುವುದು ಕಂಡುಬಂದಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಧರ್ಮಸ್ಥಳದಿಂದ ವಾಪಾಸ್ ಆಗುತ್ತಿದ್ದಾಗ ಅಪಘಾತ – ತಾಯಿ, ಮಗ ಸ್ಥಳದಲ್ಲೇ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ತುನಿಶಾ ಶರ್ಮಾ ಆತ್ಯಹತ್ಯೆ ಪ್ರಕರಣ: ತನಿಖೆಗೂ ಮುನ್ನ ಸ್ಟುಡಿಯೋಗೆ ಬೆಂಕಿ

    ನಟಿ ತುನಿಶಾ ಶರ್ಮಾ ಆತ್ಯಹತ್ಯೆ ಪ್ರಕರಣ: ತನಿಖೆಗೂ ಮುನ್ನ ಸ್ಟುಡಿಯೋಗೆ ಬೆಂಕಿ

    ಹಿಂದಿಯ ಖ್ಯಾತ ಕಿರುತೆರೆ ನಟಿ ತುನಿಶಾ ಶರ್ಮಾ (Tunisha Sharma) ಆತ್ಯಹತ್ಯೆ (Suicide) ಪ್ರಕರಣ ತೀವ್ರಗತಿಯಲ್ಲಿ ತನಿಖೆ ನಡೆದಿದೆ. ಇದೇ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಟುಡಿಯೋಗೆ ಬೆಂಕಿ (Fire) ಬಿದ್ದಿದ್ದು, ಹಲವು ಅನುಮಾನಗಳನ್ನು ಮೂಡಿಸಿದೆ. ಇನ್ನೂ ಪ್ರಕರಣದ ತನಿಖೆ ಅಂತ್ಯವಾಗಿಲ್ಲ, ಅದಕ್ಕೂ ಮುನ್ನವೇ ಸ್ಟುಡಿಯೋಗೆ ಬೆಂಕಿ ಬಿದ್ದಿರುವುದು ಸಾಕಷ್ಟು ಚರ್ಚೆಗಳನ್ನೂ ಹುಟ್ಟು ಹಾಕಿದೆ.

    ತುನಿಶಾ ಶರ್ಮಾ ಶೂಟಿಂಗ್ ವೇಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಹಿಂದಿಯ ಜನಪ್ರಿಯ ಧಾರಾವಾಹಿ ಅಲಿ ಬಾಬಾ ಚಿತ್ರೀಕರಣ ವೇಳೆ ಈ ಘಟನೆ ನಡೆದಿತ್ತು. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ತುನಿಶಾ ಕುಟುಂಬ ಆರೋಪಿಸಿತ್ತು. ಹಾಗಾಗಿ ತನಿಖೆಯನ್ನು ಚುರುಕುಗೊಳಿಸಿದ್ದರು ಪೊಲೀಸ್ ಅಧಿಕಾರಿಗಳು. ಇನ್ನೂ ತನಿಖೆ ಮುಗಿದಿಲ್ಲ. ಈ ನಡುವೆ ಆತ್ಮಹತ್ಯೆ ಮಾಡಿಕೊಂಡ ಸ್ಥಳ ಸೇರಿದಂತೆ ಹಲವು ಜಾಗಗಳು ಬೆಂಕಿಗೆ ಆಹುತಿಯಾಗಿವೆ. ಇದನ್ನೂ ಓದಿ:ಬಂದೂಕಿನೊಂದಿಗೆ ಆಟವಾಡಿದ ‘ಬಿಗ್ ಬಾಸ್’ ಅಬ್ದು ರೋಜಿಕ್‌ ವಿರುದ್ಧ ಪ್ರಕರಣ ದಾಖಲು

    ಮುಂಬೈನ (Mumbai) ಹೊರ ವಲಯದಲ್ಲಿರುವ ದಿ ಬಂಜನ್ ಲಾಲ್ ಸ್ಟುಡಿಯೋ (The Banjan Lal Studio) ಧಾರಾವಾಹಿಗಳ ಚಿತ್ರೀಕರಣಕ್ಕೆ ಫೇಮಸ್. ಈ ಸ್ಟುಡಿಯೋಗೆ ಶುಕ್ರವಾರ ತಡರಾತ್ರಿ ಬೆಂಕಿ ಬಿದ್ದಿದೆ. ಇದಕ್ಕೆ ಕಾರಣ ಏನು ಎನ್ನುವುದರ ಕುರಿತು ತನಿಖೆ ನಡೆಯಬೇಕಿದೆ. ಆತ್ಮಹತ್ಯೆ ನಡೆದ ಸ್ಥಳವೂ ಸುಟ್ಟು ಹೋಗಿರುವುದರಿಂದ ಈ ಪ್ರಕರಣ ಅನುಮಾನವನ್ನು ಮೂಡಿಸಿದೆ.

  • Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ

    Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ

    ನ್ನಡ ಸಿನಿಮಾ ರಂಗದ ಮೇರುನಟ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆಗುತ್ತಾ? ಇಂತಹ ಆತಂಕದ ಮಾಹಿತಿಯನ್ನು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೊರಹಾಕಿದ್ದಾರೆ. ಈ ಕುರಿತು ಅವರು ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಯಾವುದೇ ಕಾರಣಕ್ಕೂ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ಯಜಮಾನರ (ವಿಷ್ಣುವರ್ಧನ್) ಸಮಾಧಿಯನ್ನು ನೆಲಸಮ ಮಾಡುವುದಕ್ಕೆ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.

    ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಯ ಜಾಗದ ಕುರಿತು ಕಳೆದ ಹದಿಮೂರು ವರ್ಷಗಳಿಂದ ವಿವಾದ ಕೋರ್ಟ್ ನಲ್ಲಿದೆ. ಹಾಗಾಗಿ ಹಿರಿಯ ನಟ ಬಾಲಣ್ಣ ಕುಟುಂಬ ಹಾಗೂ ವಿಷ್ಣು ಅಭಿಮಾನಿಗಳ ನಡುವೆ ತಿಕ್ಕಾಟವೂ ಹಲವು ವರ್ಷಗಳಿಂದ ನಡೆಯುತ್ತಾ ಬಂದಿದೆ. ಕೋರ್ಟ್ ನಲ್ಲಿರುವ ಕೇಸ್ ಅಂತಿಮ ಹಂತಕ್ಕೆ ತಲುಪಿದ್ದು, ಬಾಲಣ್ಣ ಕುಟುಂಬದವರು ವಿಷ್ಣು ಸಮಾಧಿಯನ್ನು ನೆಲಸಮ ಮಾಡುವಂತೆ ಮಾನ್ಯ ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಷಯವನ್ನೇ ವೀರಕಪುತ್ರ ಶ್ರೀನಿವಾಸ್ ತಮ್ಮ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

    ವೀರಕಪುತ್ರ ಶ್ರೀನಿವಾಸ್ ವಿಡಿಯೋದಲ್ಲಿ ಹೇಳಿದಂತೆ, ‘ಬಾಲಣ್ಣ ಕುಟುಂಬದವರಾದ ಕಾರ್ತಿಕ್ ಯಜಮಾನರ ಪುಣ್ಯಭೂಮಿಗೆ ಸಾಕಷ್ಟು ತೊಂದರೆ ಕೊಡುತ್ತಿದ್ದಾರೆ. ವಿಷ್ಣುವರ್ಧನ್ ಕುಟುಂಬದವರಿಗೆ ಈ ಜಾಗವೇ ಇಷ್ಟವಿಲ್ಲವೆಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅಭಿಮಾನಿಗಳು ಪುಣ್ಯಭೂಮಿಗೆ ಕಾಲಿಡದಂತೆ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇಲ್ಲಿಗೆ ನೂರು ಜನರೂ ಬರುವುದಿಲ್ಲ ಎಂದು ಸುಳ್ಳುಗಳನ್ನು ಹರಡುತ್ತಿದ್ದಾರೆ. ಹೀಗೆಯೇ ಸುಳ್ಳು ಹೇಳಿದರೆ, ನಾವೂ ಕೂಡ ಅವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಹಾಗಂತ ಅಭಿಮಾನ ಸ್ಟುಡಿಯೋದ ಜಾಗ, ಅವರ ಪಿತ್ರಾರ್ಜಿತ ಆಸ್ತಿಲ್ಲ. ಸರಕಾರ ನೀಡಿದ್ದು. ಈ ಕುರಿತು ನಾವೂ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

    ಮುಂದುವರೆದು ಮಾತನಾಡಿರುವ ಶ್ರೀನಿವಾಸ್, ‘ವಿಷ್ಣುವರ್ಧನ್ ಪುಣ್ಯಭೂಮಿಗೆ ಕೇಳುತ್ತಿರುವುದು ಕೇವಲ ಹತ್ತು ಗುಂಟೆ ಜಾಗ. ಈ ಹಿಂದೆ ಬಾಲಣ್ಣ ಕುಟುಂಬದವರು ಜಿಲ್ಲಾಧಿಕಾರಿಗಳ ಎದುರು ಹತ್ತು ಗುಂಟೆ ಜಾಗ ಕೊಡುವುದಾಗಿ ಹೇಳಿದ್ದರು. ಪತ್ರವನ್ನೂ ಕೊಟ್ಟಿದ್ದರು. ಈಗ ಬೇರೆ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ನಾವು ಪುಣ್ಯಭೂಮಿಯನ್ನು ಉಳಿಸಿಕೊಳ್ಳಲು ಎಂತಹ ಹೋರಾಟಕ್ಕೂ ಸಿದ್ಧ. ಈ ಕುರಿತು ಬೃಹತ್ ಪ್ರತಿಭಟನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದ್ದಾರೆ.

    ಇದೇ ವಿಷಯವಾಗಿ ವಿಷ್ಣುವರ್ಧನ್ ಅಳಿಯ ಅನಿರುದ್ಧ ಕೂಡ ವಿಡಿಯೋ ಸಂದೇಶವೊಂದನ್ನು ಕಳುಹಿಸಿದ್ದು, ‘ಅಭಿಮಾನ ಸ್ಟುಡಿಯೋದಲ್ಲೇ ಸಮಾಧಿ ಇರಬೇಕು ಎನ್ನುವುದು ನಮ್ಮ ಕುಟುಂಬದ ಆಸೆ. ಅಭಿಮಾನಿಗಳಿಗೆ ಪೂಜೆ ಸಲ್ಲಿಸಲು, ಅಲ್ಲಿಗೆ ಭೇಟಿ ನೀಡಲು ಬಾಲಣ್ಣ ಕುಟುಂಬ ಅನುಮತಿ ಕೊಡಬೇಕು. ಯಾವುದೇ ಕಾರಣಕ್ಕೂ ನೆಲಸಮ ಮಾಡುವಂತಹ ನಿರ್ಧಾರ ತಗೆದುಕೊಳ್ಳಬಾರದು. ನಮ್ಮ ಕುಟುಂಬ ಕೂಡ ಈ ವಿಷಯದಲ್ಲಿ ಅಭಿಮಾನಿಗಳ ಜೊತೆ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

    ಅಭಿಮಾನಿ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಉಳಿಸಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮತ್ತು ವಿಷ್ಣುವರ್ಧನ್ ಕುಟುಂಬ ಪಣತೊಟ್ಟಿದೆ. ಆದರೆ, ಬಾಲಣ್ಣ ಕುಟುಂಬ ಇದಕ್ಕೆ ಅವಕಾಶ ಕೊಡುತ್ತಾ? ಮತ್ತು ಕೋರ್ಟ್ ಈ ಕುರಿತು ಯಾವ ರೀತಿಯ ತೀರ್ಪು ಕೊಡಬಹುದು ಎನ್ನುವ ಕುತೂಹಲ ಎಲ್ಲರದ್ದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಮ್ಮ ಹುಡುಗರಿಗೆ ಶಕ್ತಿಯಿದೆ, ಸ್ವಲ್ಪ ಹುರಿದುಂಬಿಸಬೇಕು: ಯಶ್

    ನಮ್ಮ ಹುಡುಗರಿಗೆ ಶಕ್ತಿಯಿದೆ, ಸ್ವಲ್ಪ ಹುರಿದುಂಬಿಸಬೇಕು: ಯಶ್

    – ನಾವು ಇಂಡಿಯನ್ ಸಿನಿಮಾವನ್ನು ಆಳುತ್ತೇವೆ
    – ಸಿನಿಮಾ ಚಿಕ್ಕ ವಯಸ್ಸಿನಲ್ಲೇ ನನ್ನನ್ನು ಆವರಿಸಿತು

    ಬೆಂಗಳೂರು: ನಮ್ಮ ಹುಡುಗರಿಗೆ ಶಕ್ತಿಯಿದೆ, ಸ್ವಲ್ಪ ಹುರಿದುಂಬಿಸಬೇಕು ಎಂದು ರಾಕಿಂಗ್ ಸ್ಟಾರ್ ಯಶ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

    ಇಂದು ನಗರದಲ್ಲಿ ನಡೆದ ಚಲನ ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ವೇದಿಕೆ ಮೇಲೆಯಿಂದ ಯಡಿಯೂರಪ್ಪ ಅವರಿಗೆ ನಮಗೆ ಇಲ್ಲೇ ಒಂದು ಸ್ಟುಡಿಯೋ ಮಾಡಿಕೊಡಿ. ನಮ್ಮ ಹುಡುಗರಿಗೆ ಶಕ್ತಿಯಿದೆ. ಸ್ವಲ್ಪ ಹುರಿದುಂಬಿಸಬೇಕು. ಅದಕ್ಕೆ ನಿಮ್ಮ ಸಹಕಾರ ಬೇಕು ಎಂದರು.

    ಸಿನಿಮಾ ಚಿಕ್ಕ ವಯಸ್ಸಿನಲ್ಲೇ ನನ್ನನ್ನು ಆವರಿಸಿತು. ಸಿನಿಮಾ ಸಮಾಜದಲ್ಲಿ ಸ್ಥಾನ ಕೊಡ್ತು, ಅನ್ನ ಕೊಡ್ತು ಎಲ್ಲವನ್ನು ಕೊಡ್ತು. ಸಿನಿಮಾ ಜೀವನಕ್ಕೆ ಸ್ಫೂರ್ತಿ, ಸಿನಿಮಾ ಬದುಕಲು ನನಗೆ ರೀಸನ್. ಅಂಥ ಸಿನಿಮಾವನ್ನು ಆಚರಣೆ ಮಾಡಲು ನಾವು ಸೇರಿದ್ದೇವೆ. ಬಹಳ ಅದ್ಧೂರಿಯಾಗಿ ಆಚರಣೆ ಮಾಡೋಣ. ಇದು ಮೊದಲಿಗೆ ಪಲ್ಲವಿ ಥೀಯೇಟರ್‍ನಲ್ಲಿ ನಡೆಯುತ್ತಿತ್ತು. ಆ ಸಮಯದಲ್ಲಿ ನಾನು ಬಂದು ಸಿನಿಮಾ ನೋಡುತ್ತಿದ್ದೆ ಎಂದು ತಿಳಿಸಿದರು.

    ಈ ವೇಳೆ ವೇದಿಕೆಯ ಮೇಲೆ ಇದ್ದ ಸಿಎಂ ಯಡಿಯೂರಪ್ಪಗೆ ಕರ್ನಾಟಕದಲ್ಲೇ ಒಂದು ಸ್ಟುಡಿಯೋ ಮಾಡಿಕೊಡಿ, ನಮ್ಮ ಹುಡುಗರಿಗೆ ಶಕ್ತಿಯಿದೆ. ಮಾಡಬೇಕು ಎಂಬ ಛಲ ಇದೆ. ಅದಕ್ಕೆ ನೀವು ಸಹಕಾರ ನೀಡಬೇಕು. ಕಾಲಕಾಲದಿಂದ ಈ ಸ್ಟುಡಿಯೋ ವಿಚಾರ ಮುಂದೆ ಹೋಗುತ್ತಲೇ ಇದೆ. ನಾವು ಬೇರೆ ಊರಿಗೆ ಹೋಗಿ ಕೆಲಸ ಮಾಡಬೇಕು. ಹಾಗಾಗಿ ನಮ್ಮ ಹುಡುಗರಿಗೆ ಶಕ್ತಿ ಕೊಡಿ ಇಲ್ಲಿನ ಹುಡುಗರ ಜೊತೆ ಈ ಉದ್ಯಮವು ಬೆಳೆಯುತ್ತೆ ಎಂದು ಮನವಿ ಮಾಡಿದರು.

    70 ದಶಕದಿಂದಲೂ ಚೆನ್ನೈನಲ್ಲೇ ಸಿನಿಮಾರಂಗದ ಎಲ್ಲಾ ಕೆಲಸ ನಡೆಯುತ್ತಿತ್ತು. ಹಾಗಾಗಿ ಅವರಿಗೆ ಕಲಿಯಲು ಅವಕಾಶ ಇತ್ತು. ಆದರೆ ನಾವು ಏಕಲವ್ಯನ ತರ ನಾವೇ ಎಲ್ಲೋ ನೋಡಿ ಕಲಿತು ನಂತರ ಸಿನಿಮಾ ಮಾಡಿ ಬೇರೆಯವರಿಗೆ ಸ್ಪರ್ಧೆ ನೀಡುತ್ತಿದ್ದೇವೆ. ಆದ್ದರಿಂದ ನಮ್ಮ ಹುಡುಗರಿಗೆ ಒಳ್ಳೆಯ ಸಿನಿಮಾ ಸಂಸ್ಥೆಗಳು ಹಾಗೂ ಶಿಕ್ಷಣ ಕೊಡಬೇಕು. ಹಾಗೇ ಅದರೆ ನಮ್ಮಲ್ಲೂ ಒಳ್ಳೆಯ ನಿರ್ದೇಶಕ ಹಾಗೂ ಕ್ಯಾಮೆರಾಮ್ಯಾನ್‍ಗಳು ಬರುತ್ತಾರೆ. ನಾವು ಇಂಡಿಯನ್ ಸಿನಿಮಾವನ್ನು ಆಳುತ್ತೇವೆ. ನಮಗೆ ಒಂದು ಸ್ಟುಡಿಯೋ ಮಾಡಿ ಕೊಡಿ, ನಮ್ಮವರು ಇಂಡಸ್ಟ್ರೀಯನ್ನು ಬೇರೆ ಲೆವೆಲ್ ಗೆ ತೆಗೆದುಕೊಂಡು ಹೋಗುತ್ತಾರೆ ಎಂದು ಹೇಳಿದರು.

    ಚಲನ ಚಿತ್ರೋತ್ಸವದ ಮೊದಲ ದಿನದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಯಶ್, ನಟಿ ಅದಿತಿ, ನಿರ್ಮಾಪಕ ಬೋನಿ ಕಪೂರ್, ಗಾಯಕ ಸೋನು ನಿಗಂ, ಹಿರಿಯ ನಟಿ ಜಯಪ್ರದಾ ಅವರು ಉಪಸ್ಥಿತರಿದ್ದರು.

  • ಆರತಕ್ಷತೆಯ ಸಂಭ್ರಮದಲ್ಲಿದ್ದ ನಾಗಾರ್ಜುನ್ ಕುಟುಂಬಕ್ಕೆ ಮರುದಿನವೇ ದೊಡ್ಡ ಶಾಕ್: ಹೊತ್ತಿ ಉರಿದ ಸ್ಟುಡಿಯೋ

    ಆರತಕ್ಷತೆಯ ಸಂಭ್ರಮದಲ್ಲಿದ್ದ ನಾಗಾರ್ಜುನ್ ಕುಟುಂಬಕ್ಕೆ ಮರುದಿನವೇ ದೊಡ್ಡ ಶಾಕ್: ಹೊತ್ತಿ ಉರಿದ ಸ್ಟುಡಿಯೋ

    ಹೈದರಾಬಾದ್: ನಗರದ ಬಂಜಾರ ಹಿಲ್ಸ್ ನಲ್ಲಿರುವ ತೆಲುಗು ನಟ ಅಕ್ಕಿನೇನಿ ನಾಗಾರ್ಜುನ್ ಒಡೆತನದ ಅನ್ನಪೂರ್ಣ ಸ್ಟುಡಿಯೋ ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದೆ.

    ಸುಮಾರು 14 ಸಾವಿರ 800 ಚದರ ಅಡಿ ವಿಸ್ತೀರ್ಣ ಹೊಂದಿರುವ ಸ್ಟುಡಿಯೋ ಬೆಂಕಿಗಾಹುತಿ ಆಗಿದೆ. ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡ ಕೇವಲ ಎರಡು ಗಂಟೆಗಳಲ್ಲಿ ಅಗ್ನಿಶಾಮಕ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾದರೂ, ಬೆಂಕಿಯ ಕೆನ್ನಾಲಿಗೆಗೆ ಸ್ಟುಡಿಯೋದಲ್ಲಿದ್ದ ಎಲ್ಲಾ ಸಾಮಗ್ರಿಗಳು ಭಸ್ಮವಾಗಿವೆ.

    1975 ರಲ್ಲಿ ನಾಗಾರ್ಜುನ್ ತಂದೆ ನಾಗೇಶ್ವರ್ ರಾವ್ ಸ್ಟುಡಿಯೋವನ್ನು ನಿರ್ಮಾಣ ಮಾಡಿದ್ದರು. ಅಕ್ಕಿನೇನಿ ಕುಟುಂಬದವರ ಸಿನಿಮಾ ಸೇರಿದಂತೆ ಅನೇಕ ನಟರ ಸಿನಿಮಾಗಳ ಚಿತ್ರೀಕರಣ ನಡೆದಿವೆ.

    ಸಂಜೆ ಸುಮಾರು 6 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಟುಡಿಯೋದಲ್ಲಿದ್ದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೂ ಬೆಂಕಿ ಸ್ಟುಡಿಯೋದ ಎಲ್ಲ ಭಾಗಗಳಲ್ಲಿ ವ್ಯಾಪಿಸಿದ್ದು, ಭಯಭೀತರಾದ ಸಿಬ್ಬಂದಿ ಹೊರಗಡೆ ಓಡಿ ಬಂದಿದ್ದಾರೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ನಾಗಾರ್ಜುನ್ ಭಾನುವಾರ ಮಗನ ಆರತಕ್ಷತೆಯನ್ನು ಅದ್ಧೂರಿಯಾಗಿ ಮಾಡಿ ಸಂಭ್ರಮಿಸಿದ್ದರು. ನಾಗಾರ್ಜುನ ಕುಟುಂಬಕ್ಕೆ ಆರತಕ್ಷತೆಯ ಮರುದಿನವೇ ದೊಡ್ಡ ಶಾಕ್ ಎದುರಾಗಿದೆ. ಆರತಕ್ಷತೆಯ ಸಂಭ್ರಮದಲ್ಲಿ ನಿರತವಾಗಿದ್ದ ಅಕ್ಕಿನೇನಿ ಕುಟುಂಬಕ್ಕೆ ಈ ಘಟನೆ ಅತೀವ ನೋವುಂಟು ಮಾಡಿದೆ.

    https://twitter.com/BCC_movienews/status/930084452016910336

  • ಮಂಗ್ಳೂರಿನ ಕಿನ್ನಿಗೋಳಿಯಲ್ಲಿ ಸ್ಟುಡಿಯೋಗೆ ಬೆಂಕಿ- ಮಹಡಿ ಕುಸಿದು ಐವರಿಗೆ ಗಾಯ

    ಮಂಗ್ಳೂರಿನ ಕಿನ್ನಿಗೋಳಿಯಲ್ಲಿ ಸ್ಟುಡಿಯೋಗೆ ಬೆಂಕಿ- ಮಹಡಿ ಕುಸಿದು ಐವರಿಗೆ ಗಾಯ

    ಮಂಗಳೂರು: ಅಗ್ನಿ ಅವಘಡದಿಂದಾಗಿ ಮಂಗಳೂರಿನ ಕಿನ್ನಿಗೋಳಿ ಜಂಕ್ಷನ್ ನಲ್ಲಿದ್ದ ಸ್ಟುಡಿಯೋವೊಂದು ಸಂಪೂರ್ಣ ಬೆಂಕಿಗಾಹುತಿಯಾಗಿರೋ ಘಟನೆ ಕಳೆದ ತಡರಾತ್ರಿ ನಡೆದಿದೆ.

    ಪ್ರತಿಮಾ ಹೆಸರಿನ ಸ್ಟುಡಿಯೋವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆಯೇ ಬೆಂಕಿಯ ಜ್ವಾಲೆ ಮೊದಲ ಮಹಡಿಗೂ ಪಸರಿಸಿ ಸ್ಟುಡಿಯೋದಲ್ಲಿದ್ದ ಎಲೆಕ್ಟ್ರಾನಿಕ್ಸ್ ಹಾಗೂ ಇನ್ನಿತರ ಪರಿಕರಗಳು ಸಂಪೂರ್ಣ ಸುಟ್ಟುಕರಕಲಾಗಿದೆ. ಸ್ಟುಡಿಯೋ ಸಮೀಪವಿರುವ ಬೇಕರಿಯೊಂದಕ್ಕೂ ಸ್ವಲ್ಪ ಪ್ರಮಾಣದ ಬೆಂಕಿ ತಗುಲಿದ್ದು, ಭಾಗಶಃ ಹಾನಿಯಾಗಿದೆ.

    ಇದೇ ವೇಳೆ ಕಟ್ಟಡದಲ್ಲಿದ್ದ ಗ್ಯಾಸ್ ಸಿಲಿಂಡರ್‍ವೊಂದು ದೊಡ್ಡದಾದ ಶಬ್ದದೊಂದಿಗೆ ಸ್ಫೋಟಗೊಂಡಿದ್ದು ಬೆಂಕಿ ಹರಡಲು ಇನ್ನಷ್ಟು ಕಾರಣವಾಯಿತು. ಇದರಿಂದ ಅವಘಡ ಸಂಭವಿಸುತ್ತಿದ್ದಂತೆಯೇ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದ ಸಾರ್ವಜನಿಕರು ಭಯಭೀತರಾದರು. ಸುಮಾರು ಒಂದು ಗಂಟೆಗಳ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಇನ್ನು ಬೆಂಕಿ ನಂದಿಸುವ ವೇಳೆ ಮೊದಲ ಮಹಡಿ ಕುಸಿದಿದ್ದು, ಪರಿಣಾಮ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಹಿತ ಐದು ಮಂದಿ ಗಾಯಗೊಂಡಿದ್ದಾರೆ.

    ಸದ್ಯ ಗಾಯಾಳುಗಳಿಗೆ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಮೂಲ್ಕಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.