Tag: Subramanya Prasad

  • ಸೋಲಿನ ಸುಳಿಗೆ ಸಿಕ್ಕವರ ಬಡಿದೆಬ್ಬಿಸೋ ‘ಹುಡುಕಾಡು ಅಲೆದಾಡು’ ಹಾಡು

    ಸೋಲಿನ ಸುಳಿಗೆ ಸಿಕ್ಕವರ ಬಡಿದೆಬ್ಬಿಸೋ ‘ಹುಡುಕಾಡು ಅಲೆದಾಡು’ ಹಾಡು

    ಷ್ಟದಲ್ಲಿದ್ದಾಗ ಕಣ್ಣೀರು ಒರೆಸಲು, ನೋವು, ಸಂಕಟ, ಹತಾಷೆಯಲಿ ಮುಳುಗಿದಾಗ ತಲೆ ನೇವರಿಸಲು, ಕುಸಿದು ಬಿದ್ದಾಗ ಕೈ ಹಿಡಿದು ಮೇಲಕ್ಕೆತ್ತಲು ಎಲ್ಲರಿಗೂ ಎಲ್ಲರೂ ಇರುವುದಿಲ್ಲ. ಅದರಲ್ಲೂ ಈ ಸೋಲೆಂಬ ಸುಳಿಗೆ ಸಿಕ್ಕಿ ಒದ್ದಾಡುವಾಗ್ಲಂತೂ, ನಷ್ಟದಲ್ಲಿ ನಲುಗುತ್ತಿರುವಾಗ್ಲಂತೂ, ಯಾರೊಬ್ಬರೂ ಹತ್ತಿರಕ್ಕೂ ಸುಳಿಯಲ್ಲ. ಅಂತಹ ಪರಿಸ್ಥಿತಿಯಲ್ಲಿ ಯಾರೊಬ್ಬರ ಸಹಾಯಹಸ್ತ ಬೇಡದೇ ಯಾವ ರೀತಿ ಸೋಲಿಗೆ ಸೆಡ್ಡು ಹೊಡೆದು ನಿಲ್ಲಬಹುದು? ಗುರಿ ಮುಟ್ಟೋಕೆ, ಗೆದ್ದು ಗಹಗಹಿಸೋಕೆ ಯಾವ ದಾರಿಯಲ್ಲಿ ಸಾಗಬಹುದು ಎಂಬುದಕ್ಕೆ ಈ ‘ಕೊಡೆಮುರುಗನೇ’ ಸಾಕ್ಷಿ.  ಕೊಡೆಮುರುಗ (Kodemuruga) ಈ ಹೆಸರು ಕಿವಿಗೆ ಬಿದ್ದಾಕ್ಷಣ ಎಲ್ಲೋ ಕೇಳಿದ್ದೀವಲ್ಲ ಎಂದೆನಿಸೋದು ಸತ್ಯ. ಆದರೆ, ಎಲ್ಲರ ಕಣ್ಣಮುಂದೆ ಕೊಡೆಮುರುಗ ಬಂದು ನಿಲ್ಲುವುದಿಲ್ಲ. ಯಾಕಂದ್ರೆ, ಆ ಕೀಚಕಿ ಕೊರೋನಾನೇ ಅದಕ್ಕೆ ಆಸ್ಪದ ಮಾಡಿಕೊಡಲಿಲ್ಲ. ಕೇಳಿ ಪ್ರೇಮಿಗಳೇ ಅಂತ ಆ ಕೊಡೆಮುರುಗ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದೇನೋ ಸತ್ಯ. ಆದರೆ ಅಷ್ಟರಲ್ಲಿ ಅಟ್ಟಹಾಸ ಶುರುವಿಟ್ಟುಕೊಂಡಿದ್ದ ರಣರಕ್ಕಸಿ ಕೊರೋನಾ, ಕೊಡೆಮುರುಗನ ಆಟಕ್ಕೆ ಕಡಿವಾಣ ಹಾಕಿಬಿಟ್ಟಳು. ಮೂರೇ ದಿನಕ್ಕೆ ಥಿಯೇಟರ್‌ ನಿಂದ ಎತ್ತಂಗಡಿ ಮಾಡಿಸಿಬಿಟ್ಟಳು.

    ಇಷ್ಟು ಹೇಳಿದ್ಮೇಲೆ ಇದು ಸಿನಿಮಾದ ಕಥೆ-ವ್ಯಥೆ ಎಂಬುದು ನಿಮಗೆ ಗೊತ್ತಾಗಿರುತ್ತೆ. ಹಂಡ್ರೆಂಡ್ ಪರ್ಸೆಂಟ್ ಇದು ಕೊಡೆಮುರುಗ ಎನ್ನುವ ಚಿತ್ರದ ಕಥೆ. ಸುಬ್ರಮಣ್ಯ ಪ್ರಸಾದ್ ಅನ್ನೋರು ಈ ಚಿತ್ರದ ನಿರ್ದೇಶಕ ಕಂ ನಾಯಕ. ಕೆ.ರವಿಕುಮಾರ್ ಮತ್ತು ಅಶೋಕ್ ಶಿರಾಲಿ ನಿರ್ಮಾಪಕರು. ಕರೋನಾ ಕಾಲದಲ್ಲಿ ನಲುಗಿದ ನಮ್ಮ ಚಿತ್ರ ಈಗ ಬಿಡುಗಡೆ ಮಾಡಿದರೆ ಬೆಳ್ಳಿತೆರೆ ಮೇಲೆ ನಳನಳಿಸಬಹುದು ಅಂತ ರಿರಿಲೀಸ್ ಮಾಡಿದ್ರು. ಆದರೆ ಪ್ರಯೋಜನವಾಗಲಿಲ್ಲ.  ಒಂದು ಸಿನಿಮಾ ಗೆದ್ದರೆ ಮತ್ತೊಂದು ಸಿನಿಮಾಗೆ ಸ್ಪೂರ್ತಿ ಕೊಡುತ್ತೆ. ಅದೇ ಸೋಲಾದರೆ ಈ ಸಿನಿಮಾನೂ ಬೇಡ, ಇದರ ಸಹವಾಸವೂ ಬೇಡ ಎಂದೆನಿಸೋದು ಸತ್ಯ. ಆದರೆ, ಕೊಡೆಮುರುಗ ಚಿತ್ರದ ಸಾರಥಿ ಸುಬ್ರಮಣ್ಯ ಪ್ರಸಾದ್ ಸೋಲಿಗೆ ಶರಣಾಗದೇ ಸೆಡ್ಡು ಹೊಡೆದು ನಿಂತಿದ್ದಾರೆ. ಕನಸುಗಳು ನನಸಾಗಬೇಕು ಎಂದರೆ ಹೋರಾಡಬೇಕು. ನಮ್ಮ ಹಣೆಬರಹವನ್ನು ನಾವೇ ಬದಲಾಯಿಸಿಕೊಳ್ಳಬೇಕು. ಪ್ರಯತ್ನಪಟ್ಟರೆ ಇಡೀ ಜಗತ್ತನ್ನೇ ನಿಮ್ಮತ್ತ ತಿರುಗಿ ನೋಡುವಂತೆ ಮಾಡಬಹುದು ಎನ್ನುತ್ತಿರೋ ಸುಬ್ರಮಣ್ಯ, ಸೋಲಿನ ಸುಳಿಗೆ ಸಿಕ್ಕವರನ್ನ, ಕೈ ಚೆಲ್ಲಿ ಕುಳಿತವರನ್ನು ಬಡಿದೆಬ್ಬಿಸೋ ಕೆಲಸ ಮಾಡಿದ್ದಾರೆ. ‘ಹುಡುಕಾಡು ಅಲೆದಾಡು’ ಎನ್ನುವ ಹಾಡು ಕಟ್ಟಿಕೊಟ್ಟು ಭರವಸೆಯ ಬೆಳಕು ಮೂಡಿಸಿದ್ದಾರೆ.

    ಕಷ್ಟದಲ್ಲಿದ್ದಾಗ ಕಣ್ಣೀರು ಒರೆಸಲು, ನೋವು, ಸಂಕಟ, ಹತಾಷೆಯಲಿ ಮುಳುಗಿದಾಗ ತಲೆ ನೇವರಿಸಲು, ಕುಸಿದು ಬಿದ್ದಾಗ ಕೈ ಹಿಡಿದು ಮೇಲಕ್ಕೆತ್ತಲು ಎಲ್ಲರಿಗೂ ಎಲ್ಲರು ಇರುವುದಿಲ್ಲ. ಅದರಲ್ಲೂ ಈ ಸೋಲೆಂಬ ಸುಳಿಗೆ ಸಿಕ್ಕಿ ಒದ್ದಾಡುವಾಗ್ಲಂತೂ, ನಷ್ಟದಲ್ಲಿ ನಲುಗುತ್ತಿರುವಾಗ್ಲಂತೂ, ಯಾರೊಬ್ಬರೂ ಹತ್ತಿರಕ್ಕೂ ಸುಳಿಯಲ್ಲ. ಇಂತವರಿಗೆ ಸುಬ್ರಮಣ್ಯ ಪ್ರಸಾದ್ ಅಂಥವರು ಸ್ಪೂರ್ತಿಯಾಗುತ್ತಾರೆ. ಕೊಡೆಮುರುಗ ಚಿತ್ರದ ಹುಡುಕಾಡು ಅಲೆದಾಡು (Hudukaadu Aledaadu) ತರಹದ ಹಾಡುಗಳು (Song) ಮೈಕೊಡವಿಕೊಂಡು ಅಖಾಡಕ್ಕಿಳಿಯಲು ಎನರ್ಜಿ ನೀಡುತ್ತವೆ. ಈ ಹಾಡಿಗೆ ಸುಬ್ರಮಣ್ಯ ಅವರೇ ಸಾಹಿತ್ಯ ರಚಿಸಿದ್ದು, ರಾಪರ್ ಚಂದನ್ ಶೆಟ್ಟಿ ಧ್ವನಿಯಾಗಿದ್ದಾರೆ. ಎಂ ಎಸ್ ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಪೇಜ್‍ನಲ್ಲಿ ಈ ಹಾಡು ಲಭ್ಯವಿದೆ.  ಹುಡುಕಾಡು ಅಲೆದಾಡು ಹಾಡು ನೋಡಿದ್ಮೇಲೆ ಸುಬ್ರಮಣ್ಯ ಪ್ರಸಾದ್‍ರನ್ನ ನೀವೆಲ್ಲರೂ ಮಲ್ಟಿಟ್ಯಾಲೆಂಟೆಡ್ ಅಂತ ಒಪ್ಪಿಕೊಳ್ಳುತ್ತೀರಿ. ಇವರ ಸಿನಿಮಾಗಳು ಗೆಲ್ಲಬೇಕು, ಇವರಿಗೆ ಯಶಸ್ಸು ಸಿಗಬೇಕು ಅಂತ ಭಾವಿಸ್ತೀರಿ. ಇದೇ ಭಾವನೆ ಸಿನಿಮಾ ಮಂದಿಯಲ್ಲೂ ಬರಬೇಕು. ನಿರ್ದೇಶನ ಹಾಗೂ ನಟನೆಯ ಎರಡನ್ನೂ ಬ್ಯಾಲೆನ್ಸ್ ಮಾಡುವ ತಾಕತ್ತಿರೋ ಸುಬ್ರಮಣ್ಯ ಪ್ರಸಾದ್‍ಗೆ (Subramanya Prasad) ಅವಕಾಶಗಳು ಸಿಗಬೇಕು. ಅದು ನಟನೆಯಾದ್ರೂ ಸೈ, ನಿರ್ದೇಶನವಾದರೂ ಜೈ ಅಂತಿರೋ ಕೊಡೆಮುರುಗ ಕ್ಯಾಪ್ಟನ್‍ಗೆ ಒಳ್ಳೆದಾಗಬೇಕು.

    ಅಷ್ಟಕ್ಕೂ, ಈ ಸುಬ್ರಮಣ್ಯ ಪ್ರಸಾದ್ ಏಕಾಏಕಿ ಡೈರೆಕ್ಟರ್ ಹ್ಯಾಟ್ ತೊಟ್ಟವರಲ್ಲ. ಮುಖಕ್ಕೆ ಮೇಕಪ್ ಹಾಕ್ಕೊಂಡು ನೇರವಾಗಿ ಕ್ಯಾಮೆರಾ ಮುಂದೆ ಬಂದು ನಿಂತವರಲ್ಲ. ದಶಕಗಳಿಂದ ತೆರೆಮರೆಯಲ್ಲಿ ದುಡಿದು ದಣಿದಿದ್ದಾರೆ. ಬಾಲಾಜಿ ಟೆಲಿಫಿಲಂಸ್ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟು ಪುಣ್ಯಕೋಟಿಯಂತಹ ಸೀರಿಯಲ್  ಗಳಿಗೆ ಎಪಿಸೋಡ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಗಾಳಿಪಟ, ಒಂದೇ ಗೂಡಿನ ಹಕ್ಕಿಗಳು, ರಾಧಾ ಕಲ್ಯಾಣ, ಆನಂದ್ ಭೈರವಿ ಧಾರಾವಾಹಿಗಳಿಗೆ ಪ್ರಧಾನ ನಿರ್ದೇಶನ ಇವ್ರದ್ದೆ.

    ಹೀಗೆ, ಒಂದೊಂದೆ ಹೆಜ್ಜೆ ಇಡುತ್ತಾ ಕಿರುತೆರೆಯಲ್ಲಿ ಗುರ್ತಿಸಿಕೊಂಡಿದ್ದ ಸುಬ್ರಮಣ್ಯ ಪ್ರಸಾದ್, ಕೊಡೆಮುರುಗ ಚಿತ್ರದ ಮೂಲಕ ಬೆಳ್ಳಿತೆರೆ ಮೇಲೆ ಕಮಾಲ್ ಮಾಡೋದಕ್ಕೆ ಬಂದರು. ಆದರೆ, ಈ ಕೊರೋನಾ ಅನ್ನೋ ಮಹಾಮಾರಿ ಅದಕ್ಕೆ ಕತ್ತರಿಹಾಕಿದಳು. ಹಾಗಂತ ಕೊಡೆಮುರುಗ ಕಂಗಾಲಾಗಿಲ್ಲ. ಕೈಚೆಲ್ಲಿ ಕುಳಿತಿಲ್ಲ. ಬದಲಾಗಿ ಸೋಲಿಗೆ ಸೆಡ್ಡುಹೊಡೆದು ನಿಂತಿದ್ದಾನೆ. ಗೆಲುವೆಂಬ ಕುದುರೆಯನ್ನೇರಿ ಸವಾರಿ ಹೊರಟೇ ತೀರುತ್ತೇನೆ ಎನ್ನುವ ಆತ್ಮವಿಶ್ವಾಸದಲ್ಲಿ ಹೊಸ ಹೆಜ್ಜೆ ಹಾಕಲು ರೆಡಿಯಿದ್ದಾನೆ. ಈಗಾಗಲೇ ಎರಡನೇ ಚಿತ್ರದ ತಯಾರಿಯಲ್ಲಿ ತೊಡಗಿಸಿಕೊಂಡು, 50 ಪರ್ಸೆಂಟ್ ಸ್ಕ್ರಿಪ್ಟ್ ವರ್ಕಿಂಗ್ ಕೆಲಸ ಮುಗಿಸಿರುವ ಸುಬ್ರಮಣ್ಯ ಪ್ರಸಾದ್, ಜುಲೈ ಅಥವಾ ಆಗಸ್ಟ್ ನಲ್ಲಿ ಸಿನಿಮಾಗೆ ಚಾಲನೆ ನೀಡೋದಕ್ಕೆ ರೆಡಿಯಾಗಿದ್ದಾರೆ.

  • ‘ಕೊಡೆಮುರುಗ’ನಿಗೆ ತಟ್ಟಿದ ಕೋವಿಡ್-19 ಬಿಸಿ – ಜುಲೈನಲ್ಲಿ ಮರು ಬಿಡುಗಡೆಗೆ ಚಿತ್ರತಂಡ ನಿರ್ಧಾರ

    ‘ಕೊಡೆಮುರುಗ’ನಿಗೆ ತಟ್ಟಿದ ಕೋವಿಡ್-19 ಬಿಸಿ – ಜುಲೈನಲ್ಲಿ ಮರು ಬಿಡುಗಡೆಗೆ ಚಿತ್ರತಂಡ ನಿರ್ಧಾರ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರ ಕೋವಿಡ್ 19 ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊರೊನಾ ಎರಡನೇ ಅಲೆಯ ಪರಿಣಾಮ ಹೆಚ್ಚಾಗದಂತೆ ಮುನ್ನೆಚ್ಚರಿಕೆಯ ನಿರ್ಬಂಧಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಜಾರಿಗೊಳಿಸಲಾಗುತ್ತಿದೆ. ಈ ನಿರ್ಬಂಧಗಳಿಗೆ ಚಿತ್ರರಂಗ ಕೂಡ ಹೊರತಾಗಿಲ್ಲ.

    ಕೊರೊನಾ ಹರಡುವಿಕೆ ತಡೆಯಲು ಚಿತ್ರಮಂದಿರಗಳಲ್ಲಿ ಶೇಕಡಾ 50ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ನೈಟ್ ಕಫ್ರ್ಯೂ ಜಾರಿಗೆ ತಂದು ಜನರ ರಾತ್ರಿ ಓಡಾಟಕ್ಕೇ ಬ್ರೇಕ್ ಹಾಕಿದ್ರೂ ಕೂಡ ಕೊರೊನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗೆ ದಿನದಿಂದ ದಿನಕ್ಕೆ ಕೋವಿಡ್ 19 ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಚಿತ್ರಮಂದಿರಗಳೂ ಕೂಡ ಜನರಿಲ್ಲದೆ ಬಣಗುಟ್ಟತ್ತಿವೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಸಿನಿಮಾಗಳಿಗೆ ಪ್ರೇಕ್ಷಕರ ಕೊರತೆ ಎದುರಾಗಿದೆ. ಈ ಕಾರಣಕ್ಕಾಗಿ ಕಳೆದ ವಾರ ತೆರೆಕಂಡ `ಕೊಡೆಮುರುಗ’ ಸಿನಿಮಾವನ್ನು ಹಿಂಪಡೆದು ಮರು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

    ಈ ಬಗ್ಗೆ ಮಾತನಾಡಿರುವ `ಕೊಡೆಮುರುಗ’ ಚಿತ್ರದ ನಿರ್ದೇಶಕ ಸುಬ್ರಮಣ್ಯ ಪ್ರಸಾದ್, ಸಿನಿಮಾ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಶೇಕಡಾ 50ರಷ್ಟು ಆಸನಕ್ಕೆ ಅವಕಾಶ ನೀಡಿದ್ದರು ಕೂಡ ಸಿನಿಮಾ ಬಗ್ಗೆ ಒಳ್ಳೆಯ ಅಭಿಪ್ರಾಯ ಇದ್ದಿದ್ದರಿಂದ ಜನ ಬರುತ್ತಿದ್ದರು. ಆದರೆ ಕೊರೊನಾ ಎರಡನೇ ಅಲೆ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜನ ಚಿತ್ರಮಂದಿರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬೆಳಗಿನ ಶೋಗಳಿಗೆ ಬರುವ ಪ್ರೇಕ್ಷಕರ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಆದುದರಿಂದ ಕೋವಿಡ್ 19 ಸುಧಾರಣೆಗೆ ಬಂದ ಮೇಲೆ ಸಿನಿಮಾ ಮರು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎಂದಿದ್ದಾರೆ.

    ನಿರ್ದೇಶಕ ಸುಬ್ರಮಣ್ಯ ಪ್ರಸಾದ್. ಸರ್ಕಾರದ ಆದೇಶವನ್ನು ಗೌರವಿಸುತ್ತ, ಸಾರ್ವಜನಿಕರ ಹಿತದೃಷ್ಟಿಯನ್ನೂ ಗಮನದಲ್ಲಿಟ್ಟುಕೊಂಡು `ಕೊಡೆಮುರುಗ’ ಸಿನಿಮಾವನ್ನು ಚಿತ್ರಮಂದಿರದಿಂದ ಹಿಂಪಡೆದಿದ್ದು, ಜುಲೈ ತಿಂಗಳಲ್ಲಿ ಮರು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧಾರ ಮಾಡಿದೆ. `ಕೊಡೆಮುರುಗ’ ಸುಬ್ರಮಣ್ಯ ಪ್ರಸಾದ್ ನಿರ್ದೇಶನದ ಚೊಚ್ಚಲ ಸಿನಿಮಾ. ಮುನಿಕೃಷ್ಣ ಹಾಗೂ ನಿರ್ದೇಶಕ ಸುಬ್ರಮಣ್ಯ ಪ್ರಸಾದ್, ಪಲ್ಲವಿ ಗೌಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಇದೊಂದು ಕಾಮಿಡಿ ಎಂಟಟೈನ್ಮೆಂಟ್ ಸಿನಿಮಾವಾಗಿದ್ದು ಕೆ. ರವಿಕುಮಾರ್ ಹಾಗೂ ಅಶೋಕ್ ಶಿರಾಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಎಂ ಎಸ್ ತ್ಯಾಗರಾಜ್ ಸಂಗೀತ ಸಂಯೋಜನೆ ರುದ್ರಮುನಿ ಬೆಳಗೆರೆ ಛಾಯಾಗ್ರಹಣ ಚಿತ್ರಕ್ಕಿದೆ.

  • ‘ಮುರುಗ ನಾನು ಮುರುಗಿ ನೀನು’ ಅಂತ ಇಂಪ್ರೆಸ್ ಮಾಡ್ತಿದೆ ‘ಕೊಡೆ ಮುರುಗ’ ಸಾಂಗ್!

    ‘ಮುರುಗ ನಾನು ಮುರುಗಿ ನೀನು’ ಅಂತ ಇಂಪ್ರೆಸ್ ಮಾಡ್ತಿದೆ ‘ಕೊಡೆ ಮುರುಗ’ ಸಾಂಗ್!

    ಕಿರುತೆರೆಯಲ್ಲಿ ಈಗಾಗಲೇ ಹೆಸರು ಮಾಡಿರುವ ಸುಬ್ರಮಣ್ಯ ಪ್ರಸಾದ್ ನಿರ್ದೇಶನದ ಸಿನಿಮಾ ‘ಕೊಡೆ ಮುರುಗ’. ಈಗಾಗಲೇ ಪೋಸ್ಟರ್, ಟ್ರೇಲರ್, ಹಾಡಿನಿಂದ ಸಾಕಷ್ಟು ಸದ್ದು ಮಾಡಿದ್ದ ಸಿನಿಮಾ ಇದೀಗ ಮತ್ತೊಂದು ಹಾಡನ್ನು ಬಿಡುಗಡೆ ಮಾಡಿದೆ. ‘ಮುರುಗ ನಾನು ಮುರುಗಿ ನೀನು’ ಎಂಬ ಹಾಡಿಗೆ ಜೋಡಿಹಕ್ಕಿ, ಸೇವಂತಿ ಖ್ಯಾತಿ ಪಲ್ಲವಿ ಕುಣಿದಿದ್ದಾರೆ. ಜೊತೆಗೆ ಮುರುಗ, ಸುಬ್ರಮಣಿ ಸೇರಿದಂತೆ ಅನೇಕರು ಹಾಡಿ ಹೆಜ್ಜೆ ಹಾಕಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಈ ಹಾಡು ರಿಲೀಸ್ ಆಗಿದ್ದು, ಸಖತ್ ರೆಸ್ಪಾನ್ಸ್ ಪಡೆದುಕೊಂಡಿದೆ. ಯೋಗರಾಜ್ ಭಟ್ ಬರೆದಿರುವ ಸಾಹಿತ್ಯಕ್ಕೆ ವಿಜಯ್ ಪ್ರಕಾಶ್ ಹಾಗೂ ಶಾಶ್ವತಿ ಹಾಡಿದ್ದಾರೆ.

    ಈ ಸಿನಿಮಾದಲ್ಲಿ ವಿಲನ್ ನನ್ನೇ ಒಂದು ರೀತಿಯಲ್ಲಿ ಹೀರೋ ಆಗಿ ಮಾಡಲು ಹೊರಟಿರುತ್ತಾರೆ. ಖಳನಾಯಕನ ಹೆಸರನ್ನೇ ಟೈಟಲ್ ಇಟ್ಟಿರುವುದು ಇದಕ್ಕೆ ಇಂಬು ನೀಡಿದೆ. ಹೀರೋ ಆಗಬೇಕು ಎಂದು ಕನಸು ಕಾಣುವ ಮುರುಗನ ನಾನಾ ಅವತಾರಗಳು ಈ ಹಾಡಿನಲ್ಲಿ ವ್ಯಕ್ತವಾಗುತ್ತಿವೆ. ಅವನ ಸುತ್ತಲಿನವರು ಬೈದರು ನಗುತ್ತಾ, ವಿನಮ್ರದಿಂದ ಬೈದಾಗ ಹೀರೋ ಗುಂಗಲ್ಲಿರುವ ಮುರುಗನಿಗೆ ಅರ್ಥವೇ ಆಗುವುದಿಲ್ಲ. ಇಡೀ ಹಾಡಲ್ಲಿ ಮನರಂಜನೆ ಇರುವುದು ಎದ್ದು ಕಾಣುತ್ತಿದೆ. ಸಿನಿಮಾದಲ್ಲೂ ಕೂಡ ಹಾಸ್ಯ ತುಂಬಿರುವುದು ಈಗಾಗಲೇ ಟ್ರೇಲರ್ ನಿಂದ ಗೊತ್ತಾಗಿತ್ತು. ಇದೀಗ ಹಾಸ್ಯಮಯ ಹಾಡೊಂದು ರಿಲೀಸ್ ಆಗಿದ್ದು, ಮುರುಗ ನಾನು ಮುರುಗಿ ನೀನು ಎಂಬ ಹಾಡಿಗೆ ಜನ ತಮ್ಮದೇ ವಾಕ್ಯ ಸೇರಿಸಿ ಹಾಡಲು ಶುರು ಮಾಡಿದ್ದಾರೆ. ಅಷ್ಟು ಸಖತ್ತಾಗಿದೆ ‘ಕೊಡೆ ಮುರುಗ’ ಸಿನಿಮಾದ ಈ ಹಾಡು.

    ಈ ಹಿಂದೆ ಮಮ್ಮಿ ಎಂಬ ಸೂಪರ್ ಸಿನಿಮಾ ನೀಡಿದ್ದ ಕೆ.ಆರ್.ಕೆ ಬ್ಯಾನರ್ ನಲ್ಲಿ ಕೆ ರವಿಕುಮಾರ್ ಅವರೇ ‘ಕೊಡೆ ಮುರುಗ’ ಸಿನಿಮಾವನ್ನು ನಿರ್ಮಿಸಿದ್ದಾರೆ. ರವಿಕುಮಾರ್ ಗೆ ಅಶೋಕ್ ಶಿರಾಲಿ ಸಾಥ್ ನೀಡಿದ್ದಾರೆ. ಸುಬ್ರಮಣ್ಯ ಪ್ರಸಾದ್ ನಾಯಕರಾಗಿದ್ದು, ಕಥೆ ಬರೆದು ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿಯ ಮುರುಗ ಮತ್ತೊಬ್ಬ ನಟನಾಗಿ ಸಿನಿಮಾದಲ್ಲಿ ಮಿಂಚಿದ್ದಾರೆ. ಉಳಿದಂತೆ ಪಲ್ಲವಿ ಗೌಡ, ಸ್ವಾತಿ ಗುರುದತ್, ತುಮಕೂರು ಮೋಹನ್, ರಂಗಿತರಂಗ ಅರವಿಂದ್, ಕುರಿ ಪ್ರತಾಪ್ ಸೇರಿದಂತೆ ಅನೇಕರು ತಾರಾಬಳಗದಲ್ಲಿದ್ದಾರೆ. ಎಲ್ಲಾ ಅಂದುಕೊಂಡಂತೆ ಆದರೆ ಮಾರ್ಚ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

  • ಭರಪೂರ ಮನೋರಂಜನೆ ಜೊತೆಗೆ ಮೆಸೇಜ್ ನೀಡೋಕೆ ಬರ್ತಿದ್ದಾನೆ ‘ಕೊಡೆಮುರುಗ’!

    ಭರಪೂರ ಮನೋರಂಜನೆ ಜೊತೆಗೆ ಮೆಸೇಜ್ ನೀಡೋಕೆ ಬರ್ತಿದ್ದಾನೆ ‘ಕೊಡೆಮುರುಗ’!

    ಸ್ಯಾಂಡಲ್‍ವುಡ್‍ನಲ್ಲಿ ಭಿನ್ನ, ವಿಭಿನ್ನ ಪ್ರಯತ್ನಗಳು ನಡೆಯುತ್ತನೆ ಇರುತ್ತೆ. ಹಲವಾರು ಪ್ರತಿಭಾವಂತ ನಿರ್ದೇಶಕರು ಹೊಸತನದೊಂದಿಗೆ ಪ್ರಯೋಗಗಳನ್ನು ಮಾಡ್ತಾನೆ ಇರ್ತಾರೆ. ಆದ್ರೆ ಎಲ್ಲಾ ಪ್ರಯತ್ನಗಳನ್ನು ಪ್ರೇಕ್ಷಕ ಒಪ್ಪಿದ್ರೆ ಮಾತ್ರ ಗೆಲುವು ಸಿಗೋದು. ಆ ರೀತಿಯ ವಿಭಿನ್ನ ಪ್ರಯತ್ನದಲ್ಲಿ ಆರಂಭದಲ್ಲೇ ಗೆದ್ದ ಚಿತ್ರ ‘ಕೊಡೆಮುರುಗ’.

    ಸೋಶಿಯಲ್ ಮೀಡಿಯಾದಲ್ಲಿ ಈ ‘ಕೊಡೆಮುರುಗ’ನ ಹವಾ ಜೋರಾಗಿದೆ. ಈಗಾಗಲೇ ಕೈಲಾಶ್ ಖೇರ್ ಹಾಡಿರುವ ಕೋಳಿ ಕಾಲಿಗೆ ಗೆಜ್ಜೆ ಕಟ್ಟಿದ್ರೆ ಲಿರಿಕಲ್ ಸಾಂಗ್ ವಿಡಿಯೋ ಯುಟ್ಯೂಬ್‍ನಲ್ಲಿ ಮೂರು ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದ್ದು, ಟ್ರೈಲರ್ ಕೂಡ ಸೂಪರ್ ಹಿಟ್ ಆಗಿದೆ. ಈ ಚಿತ್ರದ ವೆರಿ ಇಂಟ್ರಸ್ಟಿಂಗ್ ಸಂಗತಿಯೊಂದಿದೆ. ಅದೇನಪ್ಪಾ ಅಂದ್ರೆ, ಎಲ್ರೂ ತಮ್ಮ ಸಿನಿಮಾ ನಾಯಕನ ಹೆಸ್ರನ್ನು ಟೈಟಲ್ ಆಗಿ ಇಟ್ರೆ ಈ ಚಿತ್ರತಂಡ ಮಾತ್ರ ಚಿತ್ರದ ಖಳನಟನ ಹೆಸ್ರನ್ನೆ ಟೈಟಲ್ ಆಗಿ ಇಟ್ಟಿರೋದು ಕೊಡೆಮುರುಗ ಚಿತ್ರದ ಸ್ಪೆಷಾಲಿಟಿ.

    ‘ಕೊಡೆಮುರುಗ’ ಚಿತ್ರಕ್ಕೆ ಸುಬ್ರಮಣ್ಯ ಪ್ರಸಾಧ್ ಕಥೆ ಹೆಣೆದು ನಿರ್ದೇಶನ ಮಾಡಿದ್ದಾರೆ. ಕಿರುತೆರೆ, ಹಿರಿತೆರೆಯಲ್ಲಿ ಸಾಕಷ್ಟು ಅನುಭವ ಇರುವ ಇವ್ರಿಗೆ ಇದು ಮೊದಲನೇ ಸಿನಿಮಾ. ಮಾಮೂಲಾಗಿ ಸಿನಿಮಾ ಶೂಟಿಂಗ್ ಆದ್ಮೇಲೆ ಟ್ರೈಲರ್ ರಿಲೀಸ್ ಮಾಡೋ ನಿರ್ದೇಶಕರನ್ನ ನೋಡಿರ್ತೀವಿ ಆದ್ರೆ ಸುಬ್ರಮಣ್ಯ ಪ್ರಸಾಧ್ ಮಾತ್ರ ಮೊದ್ಲು ಟ್ರೈಲರ್ ರಿಲೀಸ್ ಮಾಡಿ ಆಮೇಲೆ ಚಿತ್ರ ನಿರ್ದೇಶನ ಮಾಡಿ ಅಚ್ಚರಿ ಮೂಡಿಸಿದ್ರು.

    ಅಗ್ನಿ ಸಾಕ್ಷಿ ಧಾರವಾಹಿಯಲ್ಲಿ ಖಳನಟನಾಗಿ ಗುರುತಿಸಿಕೊಂಡಿದ್ದ ಮುರುಗ ಅಲಿಯಾಸ್ ಮುನಿಕೃಷ್ಣ ಹಾಗೂ ಚಿತ್ರದ ನಿರ್ದೇಶಕ ಸುಬ್ರಮಣ್ಯ ಪ್ರಸಾದ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಮುನಿಕೃಷ್ಣ ಚಿತ್ರದಲ್ಲಿ ಖಳನಟನಾಗಿ ಸಮಾಜದ ಕೆಟ್ಟ ಮುಖಗಳನ್ನು ಪ್ರತಿನಿಧಿಸುವ ಕೊಡೆಮುರುಗ ಪಾತ್ರದಲ್ಲಿ ಬಣ್ಣಹಚ್ಚಿದ್ರೆ, ನಿರ್ದೇಶಕ ಸುಬ್ರಮಣ್ಯ ಪ್ರಸಾಧ್ ಸಮಾಜದಲ್ಲಿರುವ ಪಾಸಿಟಿವ್ ವ್ಯಕ್ತಿಗಳ ಪಾತ್ರವನ್ನು ಚಿತ್ರದಲ್ಲಿ ನಿಭಾಯಿಸಿದ್ದಾರೆ. ಇನ್ನು ನಾಯಕಿಯಾಗಿ ಪಲ್ಲವಿ ಗೌಡ ಚಿತ್ರದಲ್ಲಿ ಅಭಿನಯಿಸಿದ್ದಾರೆ.

    ಹೀರೋ, ಹೀರೋಯಿಸಂ ಇದ್ಯಾವುದು ಇಲ್ಲದೆ ಕಥೆಯೇ ಹೀರೋ ಆಗಿರೋ ಕೊಡೆಮುರುಗ ಚಿತ್ರ ಕೆ.ಆರ್.ಕೆ ಬ್ಯಾನರ್ ನಡಿ ನಿರ್ಮಾಣವಾಗಿದೆ. ಮಮ್ಮಿ ಚಿತ್ರ ಖ್ಯಾತಿಯ ನಿರ್ಮಾಪಕ ಕೆ.ರವಿಕುಮಾರ್ ಹಾಗೂ ಅಶೋಕ್ ಶಿರಾಲಿ ಬಂಡವಾಳ ಹೂಡಿದ್ದಾರೆ. ಭರಪೂರ ಮನೋರಂಜನೆ ಜೊತೆ ಒಂದೊಳ್ಳೆ ಮೆಸೇಜ್ ಕೊಡೋಕೆ ಸಜ್ಜಾಗಿರೋ ಈ ಚಿತ್ರ ಮಾರ್ಚ್ ತಿಂಗಳಲ್ಲಿ ಚಿತ್ರಮಂದಿರಕ್ಕೆ ಬರುವ ಸಾಧ್ಯತೆ ಇದೆ.