Tag: Suburban Railway Project

  • ಸಬ್‌ ಅರ್ಬನ್ ರೈಲ್ವೇ ಯೋಜನೆಗೆ ದಿ.ಅನಂತ್ ಕುಮಾರ್ ಹೆಸರು: ಸೋಮಣ್ಣ

    ಸಬ್‌ ಅರ್ಬನ್ ರೈಲ್ವೇ ಯೋಜನೆಗೆ ದಿ.ಅನಂತ್ ಕುಮಾರ್ ಹೆಸರು: ಸೋಮಣ್ಣ

    ಬೆಂಗಳೂರು: ಸಬ್‌  ಅರ್ಬನ್ ರೈಲ್ವೇ ಯೋಜನೆಗೆ ದಿವಂಗತ ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ (Ananth Kumar) ಹೆಸರು ಇಡುವುದಾಗಿ ಸಚಿವ ವಿ. ಸೋಮಣ್ಣ (Somanna) ಘೋಷಣೆ ಮಾಡಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಸಬ್‌  ಅರ್ಬನ್ ರೈಲ್ವೇ ಯೋಜನೆ (Suburban Railway Project) ಬಗ್ಗೆ ಬಿಜೆಪಿ (BJP) ಸದಸ್ಯ ಗೋಪಿನಾಥ್ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಸಚಿವ ಸೋಮಣ್ಣ, ಸಬ್‌  ಅರ್ಬನ್ ರೈಲ್ವೇ ಅನಂತ್ ಕುಮಾರ್ ಅವರ ಕನಸನ ಯೋಜನೆ. ನಾನು ಬಿಜೆಪಿ ಬರಲು ಅವರೇ ಮುಖ್ಯ ಕಾರಣ. ಈ ಯೋಜನೆ ಬೆಂಗಳೂರಿಗೆ ಬರಲು ಸಾಕಷ್ಟು ಶ್ರಮ ಹಾಕಿದ್ದಾರೆ. ಹೀಗಾಗಿ ಅವರಿಗೆ ಗೌರವ ಕೊಡುವುದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ಸಬರ್ಬನ್ ರೈಲ್ವೇ ಯೋಜನೆಗೆ ಅನಂತ್ ಕುಮಾರ್ ಹೆಸರು ಇಡುವ ಚಿಂತನೆ ಇದೆ ಎಂದರು.

    ಯೋಜನೆಗೆ ಕೇಂದ್ರ ಸರ್ಕಾರದ ಅನುದಾನವೂ ಇರುವುದರಿಂದ ಕೇಂದ್ರದ ಅನುಮತಿ ಇದಕ್ಕೆ ಬೇಕಾಗುತ್ತದೆ. ಸಿಎಂ ಜೊತೆ ಈ ಬಗ್ಗೆ ಚರ್ಚೆ ಮಾಡಿ ಅನಂತ್ ಕುಮಾರ್ ಹೆಸರು ಇಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಅಂತ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್ ಕುಮಾರ್ ಕಟೀಲ್

    ಇನ್ನು ಸಬ್‌  ಅರ್ಬನ್ ರೈಲ್ವೇ ಯೋಜನೆಗೆ ಈಗಾಗಲೇ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ಮಾಡಿದ್ದಾರೆ. 4 ಭಾಗಗಳಾಗಿ ಯೋಜನೆ ಕೈಗೆತ್ತುಕೊಳ್ಳಲಾಗುತ್ತಿದೆ. ಈಗಾಗಲೇ ಮೊದಲ ಹಂತಕ್ಕೆ ಟೆಂಡರ್ ಪ್ರಕ್ರಿಯೆ ಆಗಿ, ಸಿವಿಲ್ ಕೆಲಸ ಪ್ರಾರಂಭ ಆಗಬೇಕು. ಶೀಘ್ರವೇ ಕೆಲಸ ಪ್ರಾರಂಭ ಮಾಡುತ್ತೇವೆ. ಇನ್ನು ಉಳಿದ 3 ಭಾಗಗಳ ಕಾಮಗಾರಿ ಕೂಡಾ ಶೀಘ್ರವೇ ಪ್ರಾರಂಭ ಮಾಡಿ, ನಿಗದಿತ ಸಮಯಕ್ಕೆ ಯೋಜನೆ ಮುಗಿಸುವ ಕೆಲಸ ಮಾಡುತ್ತೇನೆ ಅಂತ ಭರವಸೆ ನೀಡಿದರು. ಇದನ್ನೂ ಓದಿ: ರತನ್‌ ಟಾಟಾ ಈಗ PM CARES Fund ಟ್ರಸ್ಟಿ- ಸುಧಾಮೂರ್ತಿಗೆ ಸಲಹಾ ಮಂಡಳಿಯಲ್ಲಿ ಸ್ಥಾನ

    Live Tv
    [brid partner=56869869 player=32851 video=960834 autoplay=true]

  • ಕೇಂದ್ರದಿಂದ ರಾಜ್ಯಕ್ಕೆ ಮಹಾಮೋಸ- ಸಬ್ ಅರ್ಬನ್ ರೈಲು ಯೋಜನೆಗೆ ಕೊಟ್ಟಿದ್ದು 1 ಕೋಟಿ ಮಾತ್ರ

    ಕೇಂದ್ರದಿಂದ ರಾಜ್ಯಕ್ಕೆ ಮಹಾಮೋಸ- ಸಬ್ ಅರ್ಬನ್ ರೈಲು ಯೋಜನೆಗೆ ಕೊಟ್ಟಿದ್ದು 1 ಕೋಟಿ ಮಾತ್ರ

    ನವದೆಹಲಿ: ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಪ್ರತಿ ಬಾರಿ ತಾರತಮ್ಯ ಮಾಡುವ ಕೇಂದ್ರ ಸರ್ಕಾರವು ಈ ಬಾರಿ ಬಜೆಟ್‍ನಲ್ಲೂ ಮಲಧೋರಣೆ ತಾಳಿದೆ. 18,618 ಕೋಟಿ ರೂ. ವೆಚ್ಚದಲ್ಲಿ ಸಬ್ ಅರ್ಬನ್ ರೈಲು ಯೋಜನೆ ಅನುಷ್ಠಾನಗೊಳಿಸುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಪಿಂಕ್‍ಬುಕ್‍ನಲ್ಲಿ ಈ ಯೋಜನೆಗೆ ಕೇವಲ 1 ಕೋಟಿ ಮೊತ್ತವನ್ನು ಮೀಸಲಿಟ್ಟಿದೆ.

    ಸಬ್ ಅರ್ಬನ್ ರೈಲು ಯೋಜನೆ ಆರಂಭಕ್ಕಾಗಿ ಕೇಂದ್ರ ರಾಜ್ಯ ಸರ್ಕಾರ 20+20 ಹಾಗೂ ಖಾಸಗಿ ಬ್ಯಾಂಕುಗಳ ಸಹಭಾಗಿತ್ವದಲ್ಲಿ ಶೇ. 60 ಹೂಡಿಕೆ ಮಾಡಬೇಕಿದೆ. ಈ ಪೈಕಿ ಕೇಂದ್ರ ಸರ್ಕಾರದಿಂದ ಶೇ. 20 ಅಂದರೆ ಅಂದಾಜು ಮೂರೂವರೆ ಸಾವಿರ ಕೋಟಿ ರೂ. ಕಾಮಗಾರಿಗೆ ನೀಡಬೇಕಿತ್ತು. ಆದರೆ ಅನುದಾನ ಘೋಷಿಸಿದ್ದ ಕೇಂದ್ರ ಪಿಂಕ್ ಬುಕ್‍ನಲ್ಲಿ ಒಂದು ಕೋಟಿ ನೀಡಿದ್ದು, ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ಕೇಂದ್ರ ಸರ್ಕಾರದ ಈ ನಿಲುವಿನಿಂದ ಬೆಂಗಳೂರಿನ ಬಹುದಿನಗಳ ಕನಸು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: 7 ವರ್ಷದಿಂದ ಕನ್ನಡಿಗರ ಮೂಗಿಗೆ ತುಪ್ಪ- ಅನುಷ್ಠಾನಕ್ಕೆ ಬರಲೇ ಇಲ್ಲ ಕೋಲಾರ ರೈಲ್ವೇ ಕೋಚ್ ಫ್ಯಾಕ್ಟರಿ

    ಪ್ರಸ್ತುತ ವರ್ಷದಲ್ಲಿ ಬಜೆಟ್‍ನಲ್ಲಿ ಕನಿಷ್ಠ 500 ಕೋಟಿ ರೂಪಾಯಿಯಾದ್ರು ನೀಡಬೇಕಿದ್ದ ಸರ್ಕಾರ ಕೇವಲ ಯೋಜನೆ ಘೋಷಿಸಿ ಹಣ ನೀಡದೆ ವಂಚನೆ ಮಾಡಿದೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಸದ್ಯ ಒಂದು ಕೋಟಿ ರೂ. ನೀಡಿದ್ದು ಡಿಪಿಆರ್ ಬಳಿಕ ಅನುದಾನ ನೀಡುವ ಭರವಸೆಯನ್ನು ಕೇಂದ್ರದ ಅಧಿಕಾರಿಗಳು ನೀಡುತ್ತಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ಯೋಜನೆ ಆರಂಭಿದರೆ ಕೇಂದ್ರ ಸರ್ಕಾರ ಬಳಿಕ ಅನುದಾನ ನೀಡಲಿದೆ ಎಂದು ಕೆಲ ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.