Tag: Sudarshan Patnaik

  • ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸಿ – ಕಲೆ ಮೂಲಕ ಸುದರ್ಶನ್ ಪಟ್ನಾಯಕ್ ಮನವಿ

    ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸಿ – ಕಲೆ ಮೂಲಕ ಸುದರ್ಶನ್ ಪಟ್ನಾಯಕ್ ಮನವಿ

    ಭುವನೇಶ್ವರ: ಒಡಿಶಾ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ತಮ್ಮ ಅದ್ಭುತ ಶಿಲ್ಪಕಲೆಗಳಿಂದ ನೆಟ್ಟಿಗರ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ. ತಮ್ಮ ಕಲೆಯಿಂದಲೇ ಎಲ್ಲರ ಗಮನ ಸೆಳೆಯುವುದರ ಜೊತೆಗೆ ವಿಶೇಷ ಗೌರವಗಳನ್ನು ಸ್ವೀಕರಿಸಿದ್ದಾರೆ.

    ಸದ್ಯ ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿಹೋಗಿದೆ ಮತ್ತು ಅಲ್ಲಿನ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದು, ಉಕ್ರೇನ್‍ನಲ್ಲಿ ಅನೇಕ ಸಾವು-ನೋವುಗಳು ಸಂಭವಿಸಿವೆ. ಈ ನಡುವೆ ಸುದರ್ಶನ್ ಪಟ್ನಾಯಕ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಅವರ ಭಾವಚಿತ್ರವನ್ನು ಮರಳಿನಲ್ಲಿ ರಚಿಸಿದ್ದಾರೆ. ಇದರ ಜೊತೆಗೆ ಯುದ್ಧ ನಿಲ್ಲಿಸಿ ಎಂಬ ಸಂದೇಶವನ್ನು ಬರೆದಿದ್ದಾರೆ.

    ಈ ಶಿಲ್ಪಕಲೆಯ ಫೋಟೋವನ್ನು ಸುದರ್ಶನ್ ಪಟ್ನಾಯಕ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಸ್ಟಾಪ್ ವಾರ್ ಎಂಬ ಸಂದೇಶದೊಂದಿಗೆ STOP WAR ಸಂದೇಶದೊಂದಿಗೆ ಪುರಿ ಬೀಚ್‍ನಲ್ಲಿರುವ ನನ್ನ ಸ್ಯಾಂಡ್‍ಆರ್ಟ್ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಲ್ಲಿಯವರೆಗೂ 4,000 ಕ್ಕೂ ಹೆಚ್ಚು ಲೈಕ್ಸ್ ಮತ್ತು ಕಾಮೆಂಟ್‍ಗಳು ಹರಿದುಬಂದಿದೆ. ಫೆಬ್ರವರಿ 24 ರಿಂದ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲು ಆರಂಭಿಸಿದ್ದು, ಇಲ್ಲಿಯವರೆಗೂ ಸುಮಾರು 28 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಯೂರೋಪ್‌ನಲ್ಲಿ ಸೈಬರ್ ಅಟ್ಯಾಕ್ – ಇಂಟರ್‌ನೆಟ್ ಇಲ್ಲದೇ ಸಾವಿರಾರು ಜನ ಪರದಾಟ

  • ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.2

    ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.2

    – 2 ಹುಲಿಗಳ ಅಂತರದಲ್ಲಿ ಮೊದಲ ಸ್ಥಾನ ತಪ್ಪಿಸಿಕೊಂಡ ಕರ್ನಾಟಕ
    – ಮಧ್ಯಪ್ರದೇಶದಲ್ಲಿವೆ ಹೆಚ್ಚು ಹುಲಿಗಳು

    ನವದೆಹಲಿ: ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕೆಲವೇ ಸಂಖ್ಯೆಗಳ ಅಂತರದಲ್ಲಿ ಕರ್ನಾಟಕ ನಂ.1 ಪಟ್ಟ ಕೈತಪ್ಪುತ್ತಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಎರಡನೇ ಸ್ಥಾನದಲ್ಲಿಯೇ ಮುಂದುವರಿದಿದೆ.

    ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಮಧ್ಯ ಪ್ರದೇಶ 526 ಹುಲಿಗಳನ್ನು ಹೊಂದುವ ಮೂಲಕ ಮೊದಲ ಸ್ಥಾನ ಪಡೆದಿದೆ. ಕರ್ನಾಟಕ 524 ಹುಲಿಗಳನ್ನು ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದೆ. ಇನ್ನು 442 ಹುಲಿಗಳನ್ನು ಹೊಂದಿರುವ ಉತ್ತರಾಖಂಡ್ ಮೂರನೇ ಸ್ಥಾನದಲ್ಲಿದೆ. ಅಂತರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹುಲಿಗಳ ಅಂಕಿ ಸಂಖ್ಯೆಗಳ ವರದಿಯನ್ನು ಬಿಡುಗಡೆ ಮಾಡಿದ್ದಾರೆ.

    ಉತ್ತರಾಖಂಡ್‍ನ ಜಿಮ್ ಕಾರ್ಬೆಟ್‍ನಲ್ಲಿ 231 ಹುಲಿಗಳಿಗಳಿದ್ದು, ನಾಗರಹೊಳೆ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 127 ಹಾಗೂ 126 ಹುಲಿಗಳಿವೆ. ದೇಶದಲ್ಲಿ ಒಟ್ಟು 50 ಸಂರಕ್ಷಿತ ಪ್ರದೇಶಗಳಲ್ಲಿ 2,967 ಹುಲಿಗಳಿವೆ ಎಂದು ಜಾವಡೇಕರ್ ಅವರು ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ.

    ರಾಜ್ಯದಲ್ಲಿ ಪ್ರಸ್ತುತ ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿಳಿಗಿರಿ ರಂಗನ ಬೆಟ್ಟ ಸಂರಕ್ಷಿತ ಧಾಮಗಳಿವೆ. ರಾಜ್ಯದಲ್ಲಿ ಒಟ್ಟು 524 ಹುಲಿಗಳಿವೆ. ಪ್ರಕಾಶ್ ಜಾವಡೇಕರ್ ಹುಲಿಗಳ ಅಂಕಿ ಸಂಖ್ಯೆಗಳ ವರದಿ ಬಿಡುಗಡೆ ಮಾಡಿದರೆ, ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಅಂತಾರಾಷ್ಟ್ರೀಯ ಹುಲಿ ದಿನಕ್ಕೆ ವಿಶೇಷ ಕಲೆ ಮೂಲಕ ಜಾಗೃತಿ ಮೂಡಿಸಿದ್ದಾರೆ.

    ಪೂರಿ ಬೀಚ್‍ನಲ್ಲಿ ಮರಳಿನಲ್ಲಿ ಹುಲಿಯ ಚಿತ್ರ ಬಿಡುಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಕುರಿತು ಚಿತ್ರವನ್ನು ಟ್ವೀಟ್ ಮಾಡಿ ಸಾಲುಗಳನ್ನು ಬರೆದಿರುವ ಅವರು, ಹುಲಿಗಳ ಆವಾಸಸ್ಥಾನಗಳನ್ನು ರಕ್ಷಿಸುವ ಮೂಲಕ ಅವುಗಳ ಸಂರಕ್ಷಣೆಗಾಗಿ ಎಲ್ಲರೂ ಒಟ್ಟಾಗೋಣ. ಪೂರಿ ಬೀಚ್‍ನಲ್ಲಿ ಬಿಡಿಸಿದಿ ಚಿತ್ರವೊಂದನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.