Tag: Sudhamurthy

  • ಅದ್ಧೂರಿಯಾಗಿ ನಡೆಯಿತು ವೈರಮುಡಿ ಉತ್ಸವ

    ಅದ್ಧೂರಿಯಾಗಿ ನಡೆಯಿತು ವೈರಮುಡಿ ಉತ್ಸವ

    – ಉತ್ಸವದಲ್ಲಿ ಭಾಗಿಯಾದ ಸುಧಾಮೂರ್ತಿ, ಯದುವೀರ್

    ಮಂಡ್ಯ: ವರ್ಷಕ್ಕೊಮ್ಮೆ ನಡೆಯುವ ವಿಶ್ವ ವಿಖ್ಯಾತ ವೈರಮುಡಿ ಉತ್ಸವದ ವೈಭವವನ್ನ ಕಣ್ತುಂಬಿಸಿಕೊಳ್ಳಲು ಸಾವಿರಾರು ಭಕ್ತ ಸಮೂಹವೇ ಹರಿದು ಬಂದಿತ್ತು. ಅಕ್ಷರಶಃ ಮೇಲುಕೋಟೆ ವೈರಮುಡಿ ಉತ್ಸವ ಮತ್ತೊಮ್ಮೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯ್ತು.

    ಮೇಲುಕೋಟೆಯ ವಿಶ್ವ ವಿಖ್ಯಾತ ಶ್ರೀ ಚಲುವ ನಾರಾಯಣಸ್ವಾಮಿಯ ಶ್ರೀ ವೈರಮುಡಿ ಕಿರೀಟ ಧಾರಣಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಸಾವಿರಾರು ಭಕ್ತರು ಉತ್ಸವ ಮೂರ್ತಿಯ ದರ್ಶನ ಪಡೆದು ಪುಣಿತರಾದರು. ಶನಿವಾರ ಬೆಳಗ್ಗೆ ಜಿಲ್ಲಾ ಖಜಾನೆಯಿಂದ ವೈರಮುಡಿ ಮತ್ತು ರಾಜಮುಡಿ ಕಿರೀಟಗಳನ್ನು ಮೇಲುಕೋಟೆಗೆ ತೆಗೆದುಕೊಂಡು ಬಂದರು. ನಂತರ ವೈರಮುಡಿ ಕಿರೀಟ, ಶಂಕ, ಗಧಾ, ಸೇರಿದಂತೆ ಪ್ರಮುಖ 14 ಆಭರಣಗಳಿಂದ ಉತ್ಸವ ಮೂರ್ತಿಗೆ ಅಲಂಕಾರ ಮಾಡಿ, ಮೆರವಣಿಗೆ ಮಾಡಲಾಯ್ತು.

    ಮೇಲುಕೋಟೆ ಉತ್ಸವ ಅಭಿವೃದ್ಧಿಗೆ ಇನ್ಫೋಸಿಸ್ ಫೌಂಡೇಶನ್ ಮುಂದಾಗಿತ್ತು. ಇದೇ ಮೊದಲ ಬಾರಿಗೆ ಉತ್ಸವದಲ್ಲಿ ಭಾಗಿಯಾಗದ ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ, ಈ ಉತ್ಸವ ತುಂಬಾ ಚೆನ್ನಾಗಿದೆ. ಉತ್ಸವದಲ್ಲಿ ಹಬ್ಬದ ವಾತಾವರಣ ಅನಾವರಣಗೊಂಡಿದೆ ಅಂದರು. ಇನ್ನು ಯದುವೀರ್ ಒಡೆಯರ್ ಕೂಡ, ಈ ಉತ್ಸವ ಕುರಿತು ಸಂತಸ ವ್ಯಕ್ತಪಡಿಸಿದರು. ಈ ಕ್ಷೇತ್ರ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಮೈಸೂರು ಅರಮನೆಗೂ ಈ ದೇವಸ್ಥಾನಕ್ಕೂ ಅವಿನಭಾವ ಸಂಬಂಧ ಇದೆ ಎಂದು ಹೇಳಿದರು.

    ಐತಿಹಾಸಿಕ ಹಿನ್ನೆಲೆಯುಳ್ಳ ವೈರಮುಡಿ ಉತ್ಸವ ಭಾರೀ ಪೊಲೀಸ್ ಬಿಗಿ ಭದ್ರತೆಯಲ್ಲಿ ಸುಸೂತ್ರವಾಗಿ ನಡೆಯಿತು. ಆದರೆ ಉತ್ಸವ ಆರಂಭಕ್ಕೂ ಮುನ್ನ ಕೆಲವು ಪೊಲೀಸರು ಮಾಧ್ಯಮದವರ ಮೇಲೆ ಅಂಧಾ ದರ್ಬಾರ್ ನಡೆಸಿದರು. ನಂತರ ಎಸ್‍ಪಿ ಶಿವ ಪ್ರಕಾಶ್ ಮಧ್ಯೆ ಪ್ರವೇಶಿಸಿ, ಮಾಧ್ಯಮದವರಿಗೆ ಮುಕ್ತ ವರದಿ ಮಾಡೋದಕ್ಕೆ ಅವಕಾಶ ಮಾಡಿಕೊಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಂದಿಗಿರಿಧಾಮಕ್ಕೆ ಕೊಡುಗೆ ನೀಡಿದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ

    ನಂದಿಗಿರಿಧಾಮಕ್ಕೆ ಕೊಡುಗೆ ನೀಡಿದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ

    ಚಿಕ್ಕಬಳ್ಳಾಪುರ: ಸಮಾಜಸೇವೆಯಲ್ಲಿ ಸದಾ ಮುಂದಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಯವರು ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಪ್ರವಾಸಿಗರ ಕಾಲು ದಾರಿ ಹಾಗೂ ತಡೆಗೋಡೆಗಳ ಕಾಮಾಗಾರಿಗಳನ್ನು ಲೋಕಾರ್ಪಣೆ ಮಾಡಿದ್ದಾರೆ.

    ಸುಧಾಮೂರ್ತಿಯವರು ತಮ್ಮ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಅಭಿವೃದ್ಧಿ ಕಾರ್ಯಕೈಗೊಂಡಿದ್ದರು. ಸುಮಾರು 70 ರಿಂದ 60 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಾಲುದಾರಿಗಳು ಹಾಗೂ ತಡೆಗೋಡೆಯ ನವೀಕರಣ ಸೇರಿದಂತೆ ಇತರೆ ಕಾಮಗಾರಿಗಳನ್ನು ಇಂದು ಲೋಕಾರ್ಪಣೆ ಮಾಡಿದ್ದಾರೆ. ಸುಧಾಮೂರ್ತಿಯವರಿಗೆ ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಹಾಗೂ ಅರಣ್ಯ ಸಚಿವ ಶಂಕರ್ ಸಾಥ್ ನೀಡಿದ್ದರು.

    ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ನಾನು ನಂದಿಗಿರಿಧಾಮಕ್ಕೆ ಭೇಟಿ ನೀಡಿದ್ದೇ. ಈ ವೇಳೆ ನಂದಿಗಿರಿಧಾಮದ ವಾಕಿಂಗ್ ಫುಟ್‍ಪಾತ್ ನ ಸ್ಥಿತಿ ನೋಡಿ ಬೇಸರವಾಗಿತ್ತು. ಅಲ್ಲದೇ ನಮ್ಮ ಫೌಂಡೇಷನ್ ವತಿಯಿಂದಲೇ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ನಿರ್ಧಾರ ಮಾಡಿದ್ದೆ. ಈಗ 70 ರಿಂದ 80 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಲು ದಾರಿ ಹಾಗೂ ತಡೆಗೋಡೆಗಳ ನವೀಕರಣ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ಹೇಳಿದರು.

    ಬೆಂಗಳೂರಿಗೆ ಹತ್ತಿರವಿರುವ ಈ ನಂದಿಗಿರಿಧಾಮ ಊಟಿ ಎಂದೇ ಪ್ರಖ್ಯಾತಿ ಪಡೆದಿದೆ. ಹೀಗಾಗಿ ನಾನು ಬಹಳಷ್ಟು ಬಾರಿ ಇಲ್ಲಿಗೆ ಭೇಟಿ ನೀಡಿದ್ದೇನೆ. ವಿಕೇಂಡ್‍ನಲ್ಲಿ ಇಲ್ಲಿ ಕಾಲಿಡೋಕೆ ಜಾಗ ಇರಲ್ಲ. ಹೀಗಾಗಿ ಸರ್ಕಾರ ಸುತ್ತಮುತ್ತಲೂ ಇರುವ ಇತರೆ ಬೆಟ್ಟಗಳನ್ನ ಇದೇ ರೀತಿ ಅಭಿವೃದ್ಧಿಪಡಿಸಿದರೆ ಎಷ್ಟು ಚೆನ್ನಾಗಿರುತ್ತದೆಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಸರಾ ವೇಳೆ ಮಾರುಕಟ್ಟೆಗೆ ಭೇಟಿ ನೀಡಿ ಸರಳತೆ ಮೆರೆದ ಸುಧಾಮೂರ್ತಿ

    ದಸರಾ ವೇಳೆ ಮಾರುಕಟ್ಟೆಗೆ ಭೇಟಿ ನೀಡಿ ಸರಳತೆ ಮೆರೆದ ಸುಧಾಮೂರ್ತಿ

    ಮೈಸೂರು: ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿಯವರು ನಗರದ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ.

    ಹೌದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿಯವರು ಇಂದು ನಗರದ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿದ್ದರು. ಮಾರುಕಟ್ಟೆಯಲ್ಲಿ ಸರಳವಾಗಿ ನಡೆದುಕೊಂಡು ಬಂದ ಅವರನ್ನು ನೋಡಿದ ಜನ ಅಚ್ಚರಿಗೊಂಡರು.

    ಸುಧಾಮೂರ್ತಿಯವರು ನಡೆದುಕೊಂಡು ಹೋಗುತ್ತಿದ್ದಾಗ ಸಾರ್ವಜನಿಕರು ಕೈ ಮುಗಿದು ಗೌರವ ಸೂಚಿಸಿದರು. ಸಾಮಾನ್ಯರಂತೆ ಮಾರುಕಟ್ಟೆಯಲ್ಲಿ ಓಡಾಡಿ, ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದ ಅವರ ಸರಳತೆಗೆ ಜನ ಮಾರುಹೋದರು. 2018ರ ಮೈಸೂರು ದಸರಾಗೆ ಚಾಲನೆ ನೀಡಿದ್ದ ಅವರನ್ನು ಜನ ವಂದಿಸುತ್ತಾ ಹರ್ಷ ವ್ಯಕ್ತಪಡಿಸಿದರು.

    ಸುಧಾಮೂರ್ತಿ ಮೊದಲಿನಿಂದಲೂ ಸರಳತೆ ಬೆಳೆಸಿಕೊಂಡು ಬಂದಿದ್ದಾರೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಬಳಿಕ ಛಾಯಾಗ್ರಾಹರೊಬ್ಬರು ಸುಧಾಮೂರ್ತಿ ಅವರಿಗೆ ಪುಸ್ತಕವನ್ನು ಕೊಟ್ಟಿದ್ದರು. ಈ ವೇಳೆ ಸುಧಾಮೂರ್ತಿ “ಈ ಪುಸ್ತಕ ನನಗೆ ಉಚಿತವಾಗಿ ನೀಡುತ್ತಿದ್ದೀರಾ” ಎಂದು ಪ್ರಶ್ನಿಸಿದರು. ಇದಕ್ಕೆ ಛಾಯಾಗ್ರಾಹಕರು ಹೌದು ಎಂದು ಉತ್ತರಿಸಿದಾಗ ಸುಧಾಮೂರ್ತಿ,”ನೀವು ಇಷ್ಟು ಕಷ್ಟಪಟ್ಟು ಸಿದ್ಧಪಡಿಸಿದ ಪುಸ್ತಕವನ್ನು ಉಚಿತವಾಗಿ ಪಡೆಯುವುದು ನನಗೆ ಶೋಭೆ ತರುವುದಿಲ್ಲ. ಉಚಿತವಾಗಿ ಪಡೆದರೆ ಪುಸ್ತಕಕ್ಕೆ ನಾನು ಮಾಡಿದ ಅವಮಾನವಾಗುತ್ತದೆ” ಎಂದು ಹೇಳಿದರು. ಅಷ್ಟೇ ಅಲ್ಲದೇ ಪುಸ್ತಕದ ಬೆಲೆಯಾದ 4,500 ರೂ. ಅನ್ನು ಛಾಯಾಗ್ರಾಹಕರ ಬ್ಯಾಂಕ್ ಖಾತೆಗೆ ಹಾಕಿ ಎಂದು ತನ್ನ ಸಿಬ್ಬಂದಿಗೆ ಸೂಚಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸುಧಾಮೂರ್ತಿ ಚಾಲನೆ

    ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸುಧಾಮೂರ್ತಿ ಚಾಲನೆ

    – ಎಂದೆಂದಿಗೂ ಕನ್ನಡವೇ ನನ್ನ ತಾಯಿ ಅಂದ್ರು ಇನ್ಫೋಸಿಸ್ ಮುಖ್ಯಸ್ಥೆ

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ನಾಡದೇವತೆ ಚಾಮುಂಡೇಶ್ವರಿಗೆ ತುಲಾ ಲಗ್ನದಲ್ಲಿ ಅಗ್ರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದ್ರು.

    ಬಳಿಕ ಮಾತನಾಡಿದ ಅವರು, ಪಂಪ ಕವಿ ಹೇಳುವ ಹಾಗೆ ನನಗೆ ಕನ್ನಡ ಎಂದರೆ ತುಂಬಾ ಇಷ್ಟ. ಕನ್ನಡ ನಾಡಲ್ಲಿ ಮತ್ತೆ ಮತ್ತೆ ಹುಟ್ಟಬೇಕು ಅಂತಾ ನನಗೆ ಆಸೆ ಇದೆ. ಅವಿರೋಧವಾಗಿ ನಾನು ದಸರಾ ಉದ್ಘಾಟಕಿಯಾಗಿ ಆಯ್ಕೆ ಆಗಿದ್ದು ನನಗೆ ಬಹಳ ಸಂತೋಷ ತಂದಿದೆ. ಸರ್ಕಾರ ಮಾಡುವ ಕೆಲಸಕ್ಕೆ ನಮ್ಮಂತಹ ಸಂಸ್ಥೆಗಳು ನೆರವಾಗಬೇಕು ಅಂದ್ರು.

    ಕೊಡಗಿನ ಜನಕ್ಕೆ 25 ಕೋಟಿ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿಸಿ ಕೊಡುತ್ತೇವೆ. ಇದು ದಾನವಲ್ಲ, ಸಮಾಜದಿಂದ ಗಳಿಸಿದ್ದನ್ನು ಸಮಾಜಕ್ಕೆ ನೀಡುತ್ತಿದ್ದೇವೆ ಅಷ್ಟೇ. ಮೈಸೂರಿನ ಹೆಬ್ಬಾಳ ಕೆರೆ ಅಭಿವೃದ್ದಿಗೆ ನಮ್ಮ ಫೌಂಡೇಷನ್ ಬದ್ಧವಾಗಿದೆ. ನಾವು ನಿಂತ ಜಾಗವೇ ನಮ್ಮ ನೆಲೆ. ಹೀಗಾಗಿ ನಾವು ಎಲ್ಲೆ ಇದ್ದರೂ ಅವರು ಪಕ್ಕದ ಮನೆ ಆಂಟಿ ಅಷ್ಟೆ ನಮ್ಮ ತಾಯಿ ಆಗೋಲ್ಲ. ಎಂದೆಂದಿಗೂ ಕನ್ನಡವೇ ನನ್ನ ತಾಯಿ ಅಂತ ಅವರು ತಿಳಿಸಿದ್ರು.

    ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಜಿ. ಟಿ ದೇವೆಗೌಡ, ಸಚಿವ ಸಾರಾ ಮಹೇಶ್ ಸೇರಿದಂತೆ ಹಲವು ಸಚಿವರು ಹಾಗೂ ಗಣ್ಯಾತಿಗಣ್ಯರು ಉಪಸ್ಥಿತರಿದ್ರು. ಇದಕ್ಕೂ ಮುನ್ನ ಸುಧಾಮೂರ್ತಿ ಕುಟುಂಬ ಸಮೇತರಾಗಿ ಚಾಮುಂಡಿ ದೇವಿಗೆ ಬಾಗೀನ ಅರ್ಪಿಸಿದ್ರು. ಇನ್ನು, ಅರಮನೆಯಲ್ಲೂ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಗ್ಗೆ 11 ಗಂಟೆಗೆ ಖಾಸಗಿ ದರ್ಬಾರ್ ಪ್ರಾರಂಭವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/kpEHP6BsOoM

  • ಇನ್ಫಿ ಫೌಂಡೇಶನ್‍ನಿಂದ ಜೀರ್ಣೋದ್ಧಾರಗೊಂಡ ವಸಂತಪುರ ಕಲ್ಯಾಣಿ ಉದ್ಘಾಟನೆ

    ಇನ್ಫಿ ಫೌಂಡೇಶನ್‍ನಿಂದ ಜೀರ್ಣೋದ್ಧಾರಗೊಂಡ ವಸಂತಪುರ ಕಲ್ಯಾಣಿ ಉದ್ಘಾಟನೆ

    ಬೆಂಗಳೂರು: ಇನ್ಫೋಸಿಸ್ ಫೌಂಡೇಷನ್ ಸಂಸ್ಥೆಯು ಜೀರ್ಣೋದ್ಧಾರ ಮಾಡಿದ್ದ ಐತಿಹಾಸಿಕ ವಸಂತಪುರ ಕಲ್ಯಾಣಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟನೆ ಮಾಡಿದ್ದಾರೆ.

    ಉತ್ತರಹಳ್ಳಿಯ ವಸಂತಪುರದಲ್ಲಿರುವ ಐತಿಹಾಸಿಕ ಕಲ್ಯಾಣಿಯನ್ನು ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕರಾದ ಶ್ರೀಮತಿ ಸುಧಾಮೂರ್ತಿಯವರ ಸಹಾಯ ಹಸ್ತದಿಂದ ಅಭಿವೃದ್ಧಿ ಪಡಿಸಲಾಗಿತ್ತು. ಈ ಐತಿಹಾಸಿಕ ಕಲ್ಯಾಣಿಗೆ ಮರುಜೀವ ನೀಡಲು ಇನ್ಫೋಸಿಸ್ ಫೌಂಡೇಷನ್ ಸುಮಾರು 8.5 ಕೋಟಿ ರೂಪಾಯಿ ವೆಚ್ಚ ಮಾಡಿತ್ತು.

    ಸಂಸ್ಥೆಯು ಜೀರ್ಣೋದ್ಧಾರ ಮಾಡಿದ ಕಲ್ಯಾಣಿಯನ್ನು ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಉದ್ಘಾಟನೆ ಮಾಡಿದ್ದಾರೆ. ಈ ಸಮಾರಂಭದಲ್ಲಿ ಸಂಸದ ಡಿ.ಕೆ.ಸುರೇಶ್, ಶಾಸಕ ಎಂ.ಕೃಷ್ಣಪ್ಪ, ಡಿಸಿ ಶೈಲಜಾ ಸೇರಿದಂತೆ ಸುಧಾಮೂರ್ತಿಯವರು ಪಾಲ್ಗೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ: ಸುಧಾಮೂರ್ತಿ ಆಯ್ಕೆಗೆ ಅಪಸ್ವರ ಎತ್ತಿದ್ದ ಚಿಂತಕಿಗೆ ಸುರೇಶ್ ಕುಮಾರ್ ಟಾಂಗ್

    ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ: ಸುಧಾಮೂರ್ತಿ ಆಯ್ಕೆಗೆ ಅಪಸ್ವರ ಎತ್ತಿದ್ದ ಚಿಂತಕಿಗೆ ಸುರೇಶ್ ಕುಮಾರ್ ಟಾಂಗ್

    ಬೆಂಗಳೂರು: ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕ ನಾರಾಯಣ ಮೂರ್ತಿ ಪತ್ನಿ ಸುಧಾಮೂರ್ತಿಯವರ ದಸರಾ ಉದ್ಘಾಟನೆಗೆ ಅಪಸ್ವರ ಎತ್ತಿದ್ದ ಪ್ರಗತಿಪರ ಚಿಂತಕಿ ಪ್ರಭಾ ಬೆಳವಂಗಲ ಹೇಳಿಕೆಗೆ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ.

    ಪ್ರಗತಿಪರ ಚಿಂತಕಿ ಪ್ರಭಾ ಬೆಳವಂಗಲ ಮಾಡಿದ್ದ ಫೇಸ್ಬುಕ್ ಪೋಸ್ಟ್ ಗೆ ವ್ಯಂಗ್ಯವಾಗಿ ತಿರುಗೇಟು ನೀಡಿದ ಸುರೇಶ್ ಕುಮಾರ್ ತಮ್ಮ ಟ್ವಿಟ್ವರ್ ಖಾತೆಯಲ್ಲಿ, ಎಲ್ಲರೂ ಒಪ್ಪುವ ಸುಧಾಮೂರ್ತಿಯವರು ದಸರಾ ಉತ್ಸವವನ್ನು ಉದ್ಘಾಟಿಸುತ್ತಿರುವುದನ್ನು, ಯಾರನ್ನೂ ಒಪ್ಪದ “ಬುದ್ದಿವಂತೆ”ಯೊಬ್ಬರು ತಾಳಲಾರದ ಸಂಕಟದಿಂದ ಟೀಕಿಸಿದ್ದಾರೆ. ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ ಎಂದು ಬರೆಯುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

    ರಾಜ್ಯ ಸರ್ಕಾರ ಈ ಬಾರಿ ದಸರಾ ಉದ್ಘಾಟನೆಗೆ ಸುಧಾಮೂರ್ತಿಯವರನ್ನು ಆಯ್ಕೆಮಾಡಿದ್ದಕ್ಕೆ ಪ್ರಭಾ ಬೆಳವಂಗಲರವರು ಅಪಸ್ವರ ತೋರಿ ತಮ್ಮ ಫೇಸ್ಬುಕ್ ಖಾತೆಯಲ್ಲಿ “ದುಡ್ಡು ಮಾಡಿ ನಾಜೂಕಿನ ಮಾತು ಕಲಿತುಬಿಟ್ಟರೆ ದಸರಾ ಉದ್ಘಾಟನೆ ಮಾಡಬಹುದೆಂದು” ಪೋಸ್ಟ್ ಮಾಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv