Tag: Sugar

  • ಮೋದಿಗೆ ಬೆಲ್ಲದ ಉಡುಗೊರೆ ನೀಡಿ ಮುಖದಲ್ಲಿ ಮಂದಹಾಸ ತರಿಸಿದ ಸಂಸದೆ ಸುಮಲತಾ

    ಮೋದಿಗೆ ಬೆಲ್ಲದ ಉಡುಗೊರೆ ನೀಡಿ ಮುಖದಲ್ಲಿ ಮಂದಹಾಸ ತರಿಸಿದ ಸಂಸದೆ ಸುಮಲತಾ

    ನ್ನಡದ ಹಿರಿಯ ನಟಿ, ಮಂಡ್ಯ (Mandya) ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ (Sumalata Ambarish), ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಉಡುಗೊರೆಯಾಗಿ ಬೆಲ್ಲ (Organic Jaggery) ನೀಡಿದರು. ಇಂದು ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿಗೆ ಉಡುಗೊರೆಯಾಗಿ ಬೆಲ್ಲ ನೀಡಿದಾಗ, ಪ್ರಧಾನಿ ಮುಖದಲ್ಲಿ ಮಂದಹಾಸವಿತ್ತು. ಅಲ್ಲದೇ, ಪಕ್ಕದಲ್ಲೇ ಇದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ಕ್ಷಣ ಹೊತ್ತು ಉಡುಗೊರೆ ಬಗ್ಗೆ ವಿವರಿಸಿದ್ದು ವಿಶೇಷವಾಗಿತ್ತು.

    ಈ ಕುರಿತಾಗಿ ಸುಮಲತಾ ಅಂಬರೀಶ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ, ‘ನನ್ನ ಸ್ವಾಭಿಮಾನಿ ಮಂಡ್ಯ ಕ್ಷೇತ್ರದಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ, ಮಂಡ್ಯದ ಗುರುತಾಗಿರುವ ‘ಬೆಲ್ಲ’ವನ್ನು ಉಡುಗೊರೆಯಾಗಿ ನೀಡಿದೆ. ಮಾನ್ಯ ಪ್ರಧಾನ ಮಂತ್ರಿಗಳು ಅತ್ಯಂತ ಪ್ರೀತಿ ಮತ್ತು ಗೌರವದಿಂದ ಈ ನೆಲದ ಅಸ್ಮಿತೆಯಾಗಿರುವ ಬೆಲ್ಲದ ಉಡುಗೊರೆಯನ್ನು ಸ್ವೀಕರಿಸಿದ್ದು ಸಂಭ್ರಮ ತಂದಿದೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಲಿಂಗಭೈರವಿ ದೇವಿಯ ಮೋರೆ ಹೋದ ಸಮಂತಾ

    ಮಂಡ್ಯ ಸಕ್ಕರೆ ಮತ್ತು ಬೆಲ್ಲದ ನಾಡು. ಕಬ್ಬು ಈ ಭಾಗದ ಪ್ರಮುಖ ಬೆಳೆಯೂ ಹೌದು. ಸುಮಲತಾ ಸಂಸದೆಯಾದ ನಂತರ ಮಂಡ್ಯದಲ್ಲಿ ತಯಾರಾಗುವ ಬೆಲ್ಲದ ಬಗ್ಗೆ ಸಂಸತ್ತಿನಲ್ಲೂ ಮಾತನಾಡಿದ್ದರು. ಬೆಲ್ಲದ ಹಿರಿಮೆಯನ್ನು ಎತ್ತಿ ಹಿಡಿದಿದ್ದರು. ಅಲ್ಲದೇ, ಸಾವಯವ ಬೆಲ್ಲಕ್ಕೆ ಬೆಂಬಲ ಬೆಲೆ ಘೋಷಿಸಿಬೇಕೆಂದು ಸಂಸತ್ತಿನಲ್ಲಿ ಮನವಿ ಕೂಡ ಮಾಡಿದ್ದರು. ಕಬ್ಬು ಬೆಳೆಗಾರರ ಅನೇಕ ಹೋರಾಟಗಳಲ್ಲಿ ಭಾಗಿಯಾದವರು. ಹಾಗಾಗಿ ರೈತರ ಪರವಾಗಿ ಬೆಲ್ಲವನ್ನು ಪ್ರಧಾನಿಗೆ ನೀಡಿದ್ದಾರೆ.

    ಪ್ರಧಾನಿಗೆ ಇಂದು ನೀಡಿದ ಉಡುಗೊರೆಯಲ್ಲಿ ಬೆಲ್ಲದುಡುಗೊರೆ ವಿಶೇಷವಾಗಿತ್ತು. ಅಲಂಕೃತ ಬುಟ್ಟಿಯಲ್ಲಿ ಬೆಲ್ಲದ ಚೌಕಾಕೃತಿಯ ತುಂಡುಗಳನ್ನು ಹಾಕಿ, ಸಾವಯವಬೆಲ್ಲವನ್ನೂ ಮೋದಿ ಅವರಿಗೆ ಉಡುಗೊರೆಯಾಗಿ ನೀಡಿದರು. ಈ ಬೆಲ್ಲದ ಕುರಿತು ಕೆಲ ಹೊತ್ತು ಮಾತೂ ಆಡಿದರು. ಈ ಸಂದರ್ಭದಲ್ಲಿ ಅಭಿಮಾನಿಗಳಿಂದ ಜೋರಾದ ಚಪ್ಪಾಳೆ ಕೂಡ ಕೇಳಿ ಬಂತು.

     

  • ನಿರಾಣಿ ಬೆಂಬಲಿಗರಿಂದ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್- ಸಕ್ಕರೆ ತಿರಸ್ಕರಿಸಿದ ಮತ್ತೊಬ್ಬ ವ್ಯಕ್ತಿ!

    ನಿರಾಣಿ ಬೆಂಬಲಿಗರಿಂದ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್- ಸಕ್ಕರೆ ತಿರಸ್ಕರಿಸಿದ ಮತ್ತೊಬ್ಬ ವ್ಯಕ್ತಿ!

    ಬಾಗಲಕೋಟೆ: ಸಚಿವ ಮುರಗೇಶ್ ನಿರಾಣಿ (Murugesh Nirani) ಬೆಂಬಲಿಗರಿಂದ ಗಿಫ್ಟ್ ಪಾಲಿಟಿಕ್ಸ್ ಮುಂದುವರಿದಿದೆ. ಮಹಿಳೆ ಸಕ್ಕರೆ ವಾಪಸ್ ಮಾಡಿದ ಸುದ್ದಿಯ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ವೀಡಿಯೋ ವೈರಲ್ ಆಗಿದೆ.

    ಹೌದು. ಬೀಳಗಿ ವಿಧಾನಾಸಭಾ ಕ್ಷೇತ್ರದ ಉದಗಟ್ಟಿ ಗ್ರಾಮದಲ್ಲಿ ರಾತ್ರಿ ಹೊತ್ತು ಸಕ್ಕರೆ ಪ್ಯಾಕೆಟ್ ಹಂಚುತ್ತಿರುವ ವೀಡಿಯೋ ವೈರಲ್ ಆಗಿದೆ. ಸಚಿವರ ಬೆಂಬಲಿಗರು ಮನೆಮನೆಗಳಿಗೆ ತೆರಳಿ ಸಕ್ಕರೆ ಪ್ಯಾಕೆಟ್ (Sugar Packet) ವಿತರಿಸುತ್ತಿರುವುದು ಬಯಲಾಗಿದೆ. ಸದ್ಯ ಗಿಫ್ಟ್ ಪಾಲಿಟಿಕ್ಸ್ ಗೆ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಬೆಂಬಲಿಗರು ಹಂಚಿದ ಸಕ್ಕರೆ ತಿರಸ್ಕರಿಸಿದ ಮಹಿಳೆಗೆ ಭಾರೀ ಬೆಂಬಲ

    ಏನಿದು ಘಟನೆ..?: ಕೆಲ ದಿನಗಳ ಹಿಂದೆ ಗಲಗಲಿ ಗ್ರಾಮದಲ್ಲಿ ಸಕ್ಕರೆ ಪ್ಯಾಕೆಟ್ ಹಂಚಿಕೆ ವೇಳೆ ಮಹಿಳೆಯೊಬ್ಬರು ಸಕ್ಕರೆಯನ್ನ ತಿರಸ್ಕರಿಸಿದ್ದರು. ಈ ಘಟನೆ ಬೆನ್ನಲ್ಲೇ ಮತ್ತೆ ಸಕ್ಕರೆ ಹಂಚಿಕೆ ಮುಂದುವರಿದಿದೆ. ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಮತ್ತೊಬ್ಬರು ಸಕ್ಕರೆ ಪ್ಯಾಕೆಟ್ ತಿರಸ್ಕರಿಸಿದ್ದಾರೆ. ಶುಕ್ರವಾರ ರಾತ್ರಿ ನಾರಾಯಣ ಉಪ್ಪಾರ ಮನೆ ಹೊರಗಡೆ ನಿರಾಣಿ ಬೆಂಬಲಿಗರು ಸಕ್ಕರೆ ಪ್ಯಾಕೆಟ್ ಇಟ್ಟು ಹೋಗಿದ್ದಾರೆ.

    ಉಪ್ಪಾರ ಅವರು ತಡರಾತ್ರಿ ಎದ್ದು ಬಂದು ಹೊರಗಡೆ ನೋಡಿದಾಗ ಸಕ್ಕರೆ ಪ್ಯಾಕೆಟ್ ಇರುವುದು ಬೆಳಕಿಗೆ ಬಂದಿದೆ. ನಾವು ಮನೆಯಲ್ಲಿ ಇಲ್ಲದ ವೇಳೆ ಯಾರೋ ಬಂದು ಇಟ್ಟಿದ್ದಾರೆ ನಮಗೆ ಸಕ್ಕರೆ ಬೇಕಾಗಿಲ್ಲ. ಪ್ರತಿ ತಿಂಗಳು ಕೊಡಬೇಕಾಗಿತ್ತಲ್ಲ. ಈಗ ಬಂದ ಯಾಕೆ ಸಕ್ಕರೆ ಕೊಡುತ್ತಿದ್ದಾರೆ. ನಮಗೆ ನಿರಾಣಿಯವರ ಐದು ಕೆಜಿ ಸಕ್ಕರೆ ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಚಿವ ಮುರುಗೇಶ್ ನಿರಾಣಿ ಬೆಂಬಲಿಗರು ಹಂಚಿದ ಸಕ್ಕರೆ ತಿರಸ್ಕರಿಸಿದ ಮಹಿಳೆಗೆ ಭಾರೀ ಬೆಂಬಲ

    ಸಚಿವ ಮುರುಗೇಶ್ ನಿರಾಣಿ ಬೆಂಬಲಿಗರು ಹಂಚಿದ ಸಕ್ಕರೆ ತಿರಸ್ಕರಿಸಿದ ಮಹಿಳೆಗೆ ಭಾರೀ ಬೆಂಬಲ

    ಬಾಗಲಕೋಟೆ: ಸಚಿವ ಮುರುಗೇಶ್ ನಿರಾಣಿ (Murugesh Nirani) ಹಂಚಿದ ಸಕ್ಕರೆಯನ್ನು ಮಹಿಳೆಯೊಬ್ಬರು ತಿರಸ್ಕರಿಸಿದ ಪ್ರಸಂಗವೊಂದು ನಡೆದಿದೆ.

    ಬಾಗಲಕೋಟೆ ಜಿಲ್ಲೆಯ ಬೀಳಗಿ ಮತಕ್ಷೇತ್ರದ ಗಲಗಲಿಯಲ್ಲಿ ಸಕ್ಕರೆ ಚೀಲ (Sugar Packet) ತಿರಸ್ಕರಿಸಿದ ಮಹಿಳೆ ವೀಡಿಯೋ ಇದೀಗ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್ ಆಗಿದೆ.

    ಏಮಿದು ಘಟನೆ..? ಸಚಿವ ನಿರಾಣಿ ಬೆಂಬಲಿಗರು ಮನೆ ಮನೆಗೂ ಸಕ್ಕರೆ ಹಂಚುತ್ತಿದ್ದರು. ಅಂತೆಯೇ ಗಲಿಗಲಿಯ ಮನೆಯೊಂದಕ್ಕೆ ಸಕ್ಕರೆ ಚೀಲ ಹಂಚಿದ ವೇಳೆ ಮಹಿಳೆ ಅದನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಕೊನೆಗೆ ಬೆಂಬಲಿಗರು ಒತ್ತಾಯವಾಗಿ ಸಕ್ಕರೆ ಚೀಲ ಮನೆಯೊಳಗೆ ಹೋಗಿ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸೇರಿದ್ರೆ 50 ಸಾವಿರ ಲೀಡ್‌ನಲ್ಲಿ ಗೆಲ್ತೀನಿ – ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್

    ಒತ್ತಾಯಪೂರ್ವಕವಾಗಿ ನೀಡಿದ ಸಕ್ಕರೆ ಚೀಲವನ್ನು ಮಹಿಳೆ ಬಾಗಿಲು ಹೊರಗೆ ಇಟ್ಟರು. ಈ ದೃಶ್ಯವೆಲ್ಲಾ ವೀಡಿಯೋದಲ್ಲಿ ಸೆರೆಯಾಗಿದೆ. ಮಹಿಳೆಯರ ವರ್ತನೆ ಬೆಂಬಲಿಸಿ ವೀಡಿಯೋವನ್ನು ಸಾಮಾಜಿಕ ಕಾರ್ಯಕರ್ತ ಯಲ್ಲಪ್ಪ ಹೆಗಡೆ ಸೋಶಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದೀಗ ಮಹಿಳೆಯರ ವರ್ತನೆಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.

    ಈ ತಾಯಿಗಿರುವ ನಿಯತ್ತಿಗೆ ಜನತೆಯಿಂದ ಧನ್ಯವಾದಗಳು. ಆಸೆ, ಆಮಿಷಗಳಿಗೆ ಬಲಿಯಾಗದೆ ಪ್ರಬುದ್ಧತೆ ತೋರುವ ಇಂತಹ ಜನರಿಂದ ಮಾತ್ರ. ಪ್ರಜಾಪ್ರಭುತ್ವ ಉಳಿಯಲು ಸಾಧ್ಯ, ಇಂತಹ ಆಲೋಚನೆ ಎಲ್ಲ ಮತದಾರರಿಗೂ ಬರಬೇಕಿದೆ ಎಂದು ವೀಡಿಯೋ ಜೊತೆಗೆ ಪೋಸ್ಟ್ ಕೂಡ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಐಸಿಯುನಲ್ಲಿ ಸ್ಯಾಂಟ್ರೋ ರವಿಗೆ ಚಿಕಿತ್ಸೆ- ಸಂಜೆ ಡಿಸ್ಚಾರ್ಜ್?

    ಐಸಿಯುನಲ್ಲಿ ಸ್ಯಾಂಟ್ರೋ ರವಿಗೆ ಚಿಕಿತ್ಸೆ- ಸಂಜೆ ಡಿಸ್ಚಾರ್ಜ್?

    ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸ್ಯಾಂಟ್ರೋ ರವಿ (Santro Ravi) ಗೆ ಸದ್ಯ ಐಸಿಯು (ICU) ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ಸ್ಯಾಂಟ್ರೋ ರವಿ ಶುಗರ್ ಲೋ ಆಗೋದಕ್ಕೆ ಮಾತ್ರೆಯನ್ನ ತೆಗೆದುಕೊಳ್ತಾರೆ. ಆದರೆ ಸ್ಯಾಂಟ್ರೋ ರವಿ ಏಕಕಾಲಕ್ಕೆ 10 ಮಾತ್ರೆ ತೆಗದುಕೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಇಂದು ಸಂಜೆ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.

    ಸ್ಯಾಂಟ್ರೋ ರವಿ ಹೆಚ್ಚು ಮಾತ್ರೆ ನುಂಗಿದ್ದಾನೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ವಿಕ್ಟೋರಿಯಾ (Victoria Hospital) ವೈದ್ಯಕೀಯ ಅಧಿಕ್ಷಕರಿಂದ ಅಧಿಕೃತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಏನಿದು ಘಟನೆ..?: ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಗುರುವಾರ ಸಂಜೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಶುಗರ್ 400 ಕ್ಕೂ ಅಧಿಕವಾಗಿತ್ತು. ಈ ಹಿನ್ನೆಲೆ ವಿಕ್ಟೋರಿಯಾಗೆ ದಾಖಲಿಸಲಾಗಿತ್ತು.

    ಶುಗರ್, ಬಿಪಿ ಸೇರಿ ಹಲವು ಸಮಸ್ಯೆಯಿಂದ ಬಳಲುತ್ತಿರುವ ಸ್ಯಾಂಟ್ರೋ ರವಿ, ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ನಾ ಎಂಬ ಅನುಮಾನ ಮೂಡಿದೆ. ಸ್ಯಾಂಟ್ರೋ ರವಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲು ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆ ಬಳಿ ಭದ್ರತೆ ಹೆಚ್ಚಿಸಿದ್ದಾರೆ. ಭದ್ರತೆಗೆ ಕೆಎಸ್ ಆರ್ ಪಿ ತುಕಡಿ ಪೊಲೀಸರ ನಿಯೋಜನೆ ಮಾಡಲಾಗಿದೆ.

    ಸ್ಯಾಂಟ್ರೋ ರವಿಯನ್ನು ಜನವರಿ 30 ರವರೆಗೂ ಸಿಐಡಿ ಕಸ್ಟಡಿಗೆ ನ್ಯಾಯಾಲಯ ಅದೇಶ ಮಾಡಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಹಾಗೆ ಸಕ್ಕರೆ ಹಾಕಿಲ್ಲ ಎಂದು ಹೋಟೆಲ್ ಮಾಲೀಕನಿಗೆ ಚಾಕು ಇರಿದ

    ಚಹಾಗೆ ಸಕ್ಕರೆ ಹಾಕಿಲ್ಲ ಎಂದು ಹೋಟೆಲ್ ಮಾಲೀಕನಿಗೆ ಚಾಕು ಇರಿದ

    ತಿರುವನಂತಪುರಂ: ಚಹಾಕ್ಕೆ (Tea) ಸಕ್ಕರೆ (Sugar) ಹಾಕಿಲ್ಲ ಎಂದು ವ್ಯಕ್ತಿಯೊಬ್ಬ ಹೋಟೆಲ್ (Hotel) ಮಾಲೀಕನಿಗೆ (Owner) ಚಾಕು ಇರಿದ ಘಟನೆ ಕೇರಳದ ಮಲಪ್ಪುರಂನ ತಾನೂರ್‌ನಲ್ಲಿ ನಡೆದಿದೆ.

    ಆರೋಪಿಯನ್ನು ಸುಬೈರ್ ಎಂದು ಗುರುತಿಸಲಾಗಿದ್ದು, ಈತ ತನೂರಿನ ಟಿಎ ಹೋಟೆಲ್‌ಗೆ ಚಹಾ ಕುಡಿಯಲು ಹೋಗಿದ್ದ. ಈ ವೇಳೆ ಹೋಟೆಲ್ ಸಿಬ್ಬಂದಿ ನೀಡಿದ್ದ ಚಹಾದಲ್ಲಿ ಸಕ್ಕರೆ ಸ್ವಲ್ಪ ಕಡಿಮೆ ಇತ್ತು. ಇದರಿಂದಾಗಿ ಸುಬೈರ್ ಹೋಟೆಲ್ ಮಾಲೀಕ ಮನಾಫ್‍ನೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಮನಾಫ್‍ಗೆ ಸುಬೈರ್ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಮಹಿಳಾ ಕಾರ್ಯಕರ್ತೆಯರು – ಇಬ್ಬರ ಬಂಧನ

    ತಕ್ಷಣ ಅಲ್ಲಿದ್ದ ಸಿಬ್ಬಂದಿ ಮನಾಫ್‍ನನ್ನು ಕೊಯಿಕ್ಕೋಡ್‍ನಲ್ಲಿರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಮನಾಫ್ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನೂ ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡುಮ ಸುವೈರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತ- ಜ. 9ಕ್ಕೆ ಅಧಿಕೃತ ಘೋಷಣೆ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಕ್ಕರೆ ರಫ್ತಿನ ಮೇಲಿನ ನಿರ್ಬಂಧ ಇನ್ನೊಂದು ವರ್ಷ ವಿಸ್ತರಣೆ

    ಸಕ್ಕರೆ ರಫ್ತಿನ ಮೇಲಿನ ನಿರ್ಬಂಧ ಇನ್ನೊಂದು ವರ್ಷ ವಿಸ್ತರಣೆ

    ನವದೆಹಲಿ: ಭಾರತವು (India) ಸಕ್ಕರೆ (Sugar) ರಫ್ತಿನ (Exports) ಮೇಲಿನ ನಿರ್ಬಂಧಗಳನ್ನು (Restriction) 2023ರ ಅ.31 ರವರೆಗೆ ವಿಸ್ತರಿಸಿದೆ ಎಂದು ಡೈರಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್‍ ಅಧಿಸೂಚನೆ ನೀಡಿದೆ.

    ಆರಂಭದಲ್ಲಿ, ಈ ವರ್ಷದ ಜೂನ್ 1 ರಿಂದ ಅಕ್ಟೋಬರ್ 31 ರವರೆಗೆ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಆದರೆ ಸಿಎಕ್ಸ್‌ಎಲ್ ಹಾಗೂ ಟಿಆರ್‌ಕ್ಯೂ ಕೋಟಾದ ಅಡಿಯಲ್ಲಿ ಯುರೋಪಿಯನ್ ಯೂನಿಯನ್‌ಗೆ ಸಕ್ಕರೆಯ ಈ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಡಿಜಿಎಫ್‍ಟಿ ಸೂಚಿಸಿದೆ.

    ಇನ್ನೆರಡೂ ದಿನಗಳಲ್ಲಿ ರಫ್ತು ನಿರ್ಬಂಧ ಮುಗಿಯುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಮತ್ತೆ ತೆಗೆದುಕೊಂಡಿರುವ ಸರ್ಕಾರ ರಫ್ತಿಗೆ ಸಂಬಂಧಿಸಿದ ಇಲಾಖೆಯಿಂದ ಕಡ್ಡಾಯ ಅನುಮತಿಯಂತಹ ಇತರ ಷರತ್ತುಗಳು ಬದಲಾಗದೇ ಉಳಿಯುತ್ತವೆ ಎಂದು ತಿಳಿಸಿದೆ. ಇದನ್ನೂ ಓದಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತ – ಬಿಜೆಪಿಯಿಂದಲ್ಲ: ಮುತಾಲಿಕ್

    ನಿರ್ಬಂಧವನ್ನು ವಿಧಿಸುವಾಗ ಭಾರತದಲ್ಲಿ ಸಾಕಷ್ಟು ಸಕ್ಕರೆ ದಾಸ್ತಾನು ಲಭ್ಯತೆಯಿದೆಯೇ ಎಂಬುದರ ಕುರಿತಾಗಿ ಖಚಿತಪಡಿಸಿಕೊಳ್ಳಲು ಸರ್ಕಾರ ಬಯಸಿದೆ ಮತ್ತು ದೇಶೀಯ ಪೂರೈಕೆಯ ಹಿತಾಸಕ್ತಿಗಳನ್ನು ಕಾಪಾಡಲು ರಫ್ತು ನಿರ್ಬಂಧವನ್ನು ಸಂಪೂರ್ಣವಾಗಿ ವಿಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: `ಆಪರೇಷನ್ ಕಮಲ’ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿ- ಸುಪ್ರೀಂಗೆ ಡಿಕೆಶಿ ಮನವಿ

    Live Tv
    [brid partner=56869869 player=32851 video=960834 autoplay=true]

  • 4 ವರ್ಷಗಳಿಂದ ಸ್ಥಗಿತವಾಗಿದ್ದ ಮೈ ಶುಗರ್‌ ಕಾರ್ಖಾನೆ ಇಂದಿನಿಂದ ಆರಂಭ

    4 ವರ್ಷಗಳಿಂದ ಸ್ಥಗಿತವಾಗಿದ್ದ ಮೈ ಶುಗರ್‌ ಕಾರ್ಖಾನೆ ಇಂದಿನಿಂದ ಆರಂಭ

    ಮಂಡ್ಯ: ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮಂಡ್ಯದ ಮೈ ಶುಗರ್ ಇಂದಿನಿಂದ ಕಾರ್ಯಾಚರಣೆ ನಡೆಸಲಿದೆ.

    2017-18 ನೇ ಸಾಲಿನಲ್ಲಿ ಬಾಯ್ಲರ್, ಟರ್ಬೈನ್ ಸಮಸ್ಯೆ ಸೇರಿದಂತೆ ನೂರಾರು ಕೋಟಿ ರೂಪಾಯಿ ಸಾಲದ ಹೊಣೆಗಾರಿಕೆಯಿಂದ ನಷ್ಟಕ್ಕೆ ಸಿಲುಕಿ ಕಾರ್ಖಾನೆ ಬಂದ್ ಆಗಿತ್ತು. ಇದಾದ ಬಳಿಕ ಸರ್ಕಾರ ಖಾಸಗಿಯವರಿಗೆ ನೀಡಲು ಮುಂದಾಗಿತ್ತು. ಆದರೆ ರೈತರ ಪ್ರತಿಭಟನೆಯಿಂದ ಈ ನಿರ್ಧಾರ ಕೈ ಬಿಟ್ಟಿತು. ಇದನ್ನೂ ಓದಿ: ಮೋದಿ ಗೆದ್ದಿರೋದು 2024ರಲ್ಲಿ ಅಲ್ಲ, ಮೈತ್ರಿ ಮುರಿದ ಬಳಿಕ ಸಿಎಂ ನಿತೀಶ್ ವಾಗ್ದಾಳಿ

    ಈಗ ಸರ್ಕಾರ ಮೈ ಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ಸರ್ಕಾರಿ ಸ್ವಾಮ್ಯದಲ್ಲೇ ನಡೆಸಲು ನಿರ್ಧಾರ ಮಾಡಿದೆ. ಈ ಇಂದು ಮೈ ಶುಗರ್ ಕಾರ್ಖಾನೆಯ ಬಾಯ್ಲರ್‌ಗೆ ಸಚಿವರಾದ ಗೋಪಾಲಯ್ಯ, ಶಂಕರ್ ಪಾಟೀಲ್ ಹಾಗೂ ನಾರಾಯಣಗೌಡ ಅಗ್ನಿ ಸ್ಪರ್ಶ ಮಾಡುವ ಮೂಲಕ ನಾಲ್ಕು ವರ್ಷಗಳ ಬಳಿಕ ಮೈ ಶುಗರ್ ಆರಂಭಕ್ಕೆ ಚಾಲನೆ ನೀಡಲಿದ್ದಾರೆ.

    ಮೈ ಶುಗರ್ ಕಾರ್ಖಾನೆಯ ಪುನಾರಂಭದ ಸುದ್ದಿ ಕೇಳಿರುವ ಮಂಡ್ಯದ ರೈತರ ಮುಖದಲ್ಲಿ ಸಂತಸ ಮನೆ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಮಾರುಕಟ್ಟೆಗಳಲ್ಲಿ ಸಕ್ಕರೆಗಾಗಿ ರಷ್ಯನ್ನರ ಕಿತ್ತಾಟ- ವೀಡಿಯೋ ವೈರಲ್‌

    ಮಾರುಕಟ್ಟೆಗಳಲ್ಲಿ ಸಕ್ಕರೆಗಾಗಿ ರಷ್ಯನ್ನರ ಕಿತ್ತಾಟ- ವೀಡಿಯೋ ವೈರಲ್‌

    ಮಾಸ್ಕೋ: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವುದು ರಷ್ಯಾದ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರಿದೆ. ರಷ್ಯಾದ ಸೂಪರ್‌ ಮಾರುಕಟ್ಟೆಗಳಲ್ಲಿ ಸಕ್ಕರೆಗಾಗಿ ಜನರು ಪರಸ್ಪರ ಕಿತ್ತಾಡುತ್ತಿರುವ ವೀಡಿಯೋ ಎಲ್ಲೆಡೆ ವೈರಲ್‌ ಆಗಿದೆ.

    ಉಕ್ರೇನ್‌ ವಿರುದ್ಧದ ಯುದ್ಧದ ಪರಿಣಾಮ ಆರ್ಥಿಕ ಕುಸಿತದಿಂದಾಗಿ ದೇಶದ ಕೆಲವು ಮಳಿಗೆಗಳು ಪ್ರತಿ ಗ್ರಾಹಕನಿಗೆ 10 ಕೆ.ಜಿ. ಸಕ್ಕರೆ ಕೊಳ್ಳಲು ಮಿತಿಯನ್ನು ವಿಧಿಸಿವೆ. 2015ರ ನಂತರ ರಷ್ಯಾದಲ್ಲಿ ವಾರ್ಷಿಕ ಹಣದುಬ್ಬರವು ಗರಿಷ್ಠ ಮಟ್ಟವನ್ನು ತಲುಪಿರುವುದರಿಂದ ಸಕ್ಕರೆಯ ಬೆಲೆ ಗಗನಕ್ಕೇರಿದೆ. ಇದನ್ನೂ ಓದಿ: ಆರ್ಥಿಕ ಅವನತಿಯತ್ತ ಶ್ರೀಲಂಕಾ – ಸಕ್ಕರೆ, ಬೇಳೆಗೆ ಚಿನ್ನದ ಬೆಲೆ, 1 ಟೀಗೆ 100 ರೂ.

    ಶಾಪ್‌ಗಳಲ್ಲಿ ಗುಂಪುಗೂಡಿರುವ ಜನರು, ಸಕ್ಕರೆ ಪೊಟ್ಟಣಗಳಿಗಾಗಿ ಪರಸ್ಪರ ಕಿತ್ತಾಡುತ್ತಿರುವುದು ಹಾಗೂ ಒಬ್ಬರ ಮೇಲೊಬ್ಬರು ಮುಗಿಬಿದ್ದು ಪೊಟ್ಟಣಗಳನ್ನು ತೆಗೆದುಕೊಳ್ಳುತ್ತಿರುವ ದೃಶ್ಯ ವೀಡಿಯೋದಲ್ಲಿದೆ. ಉಕ್ರೇನ್‌ ವಿರುದ್ಧ ರಷ್ಯಾ ಯುದ್ಧ ನಡೆಸುತ್ತಿರುವುದರಿಂದ ಸಾಮಾನ್ಯ ಜನತೆ ಎದುರಿಸುತ್ತಿರುವ ತೊಂದರೆಯನ್ನು ಈ ವೀಡಿಯೋ ಪ್ರತಿಬಿಂಬಿಸಿದೆ.

    ರಷ್ಯಾದ ಸರ್ಕಾರಿ ಅಧಿಕಾರಿಗಳು, ಸಕ್ಕರೆ ಕೊರತೆ ಇಲ್ಲ ಎಂದು ಹೇಳಿದ್ದಾರೆ. ಗ್ರಾಹಕರು ಅಂಗಡಿಗಳಲ್ಲಿ ಖರೀದಿಸುವ ಭೀತಿಯಿಂದ ಬಿಕ್ಕಟ್ಟು ಹುಟ್ಟುತ್ತಿದೆ ಎಂದು ತಿಳಿಸಿದ್ದಾರೆ. ಆದರೂ ಸರ್ಕಾರವು ದೇಶದಿಂದ ಸಕ್ಕರೆ ರಫ್ತಿನ ಮೇಲೆ ತಾತ್ಕಾಲಿಕ ನಿಷೇಧ ವಿಧಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧದ ನಡುವೆಯೇ ಸುದ್ದಿಯಾಗ್ತಿದ್ದಾರೆ ಪುಟಿನ್‌ ಗರ್ಲ್‌ಫ್ರೆಂಡ್‌- ಯಾರೀಕೆ?

    ಸಕ್ಕರೆಯ ಬೆಲೆಯು ಶೇ.31ರಷ್ಟು ಹೆಚ್ಚಾಗಿದೆ. ಆದರೆ ಪಾಶ್ಚಿಮಾತ್ಯ ನಿರ್ಬಂಧಗಳಿಂದಾಗಿ ಇತರೆ ಉತ್ಪನ್ನಗಳು ಸಹ ದುಬಾರಿಯಾಗಿವೆ. ಕಾರುಗಳು, ಗೃಹೋಪಯೋಗಿ ವಸ್ತುಗಳು ಮತ್ತು ಟಿ.ವಿ ಮೊದಲಾದ ವಿದೇಶದಿಂದ ಆಮದು ಮಾಡುತ್ತಿದ್ದ ಸರಕುಗಳ ಕೊರತೆ ಉಂಟಾಗಿದೆ. ಬೆಲೆಗಳು ದೇಶದಾದ್ಯಂತ ಏರುತ್ತಿರುವುದರಿಂದ ನಾಗರಿಕರು ಇದರ ಎದುರಿಸುತ್ತಿದ್ದಾರೆ.

  • ಸುಮಲತಾ Vs ಕುಮಾರಸ್ವಾಮಿ – ಮೈ ಶುಗರ್ ವಿವಾದ ಈಗ ಎದ್ದಿದ್ದು ಯಾಕೆ?

    ಸುಮಲತಾ Vs ಕುಮಾರಸ್ವಾಮಿ – ಮೈ ಶುಗರ್ ವಿವಾದ ಈಗ ಎದ್ದಿದ್ದು ಯಾಕೆ?

    ಬೆಂಗಳೂರು: ರಾಜ್ಯದಲ್ಲಿರುವ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈ ಶುಗರ್ ವಿಚಾರದಲ್ಲಿ ವಿವಾದ ಎದ್ದಿದೆ. ಇದನ್ನು ಖಾಸಗೀಕರಣ ಮಾಡಲು ಸರ್ಕಾರ ಹೊರಟಿದೆ ಎಂಬ ಕೂಗೆದ್ದಿದೆ.

    1933ರಲ್ಲಿ ಮಂಡ್ಯದಲ್ಲಿ ಮೈ ಶುಗರ್ ಕಾರ್ಖಾನೆ ಆರಂಭಗೊಂಡಿದ್ದು ಮಂಡ್ಯ ಭಾಗದ ಜೀವನಾಡಿಯಾಗಿತ್ತು. ಮೊದಲ 50 ವರ್ಷ ಲಾಭದಾಯಕವಾಗಿದ್ದರೆ ನಂತರ ಕೆಟ್ಟ ಆಡಳಿತದಿಂದ ನಷ್ಟ. ಪುನಶ್ಚೇತನಕ್ಕಾಗಿ 2004ರಿಂದ ಈವರೆಗೆ 504 ಕೋಟಿ ಅನುದಾನ ನೀಡಲಾಗಿದೆ. ಇದನ್ನೂ ಓದಿ: ಆಡಿಯೋ, ವೀಡಿಯೋ, ಫೋನ್ ಟ್ಯಾಪಿಂಗ್ ಕುಮಾರಸ್ವಾಮಿಗೆ ಅಭ್ಯಾಸ ಆಗಿದೆ: ಸುಮಲತಾ

     

    ಸರ್ಕಾರದಿಂದ ಕೋಟಿ ಕೋಟಿ ಸುರಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಪೂರ್ಣ ಬಂದ್ ಆಗಿದೆ, ಈಗ ಖಾಸಗಿಯವರಿಗೆ 40 ವರ್ಷ ಗುತ್ತಿಗೆ ನೀಡಲು ಸರ್ಕಾರ ಪ್ಲಾನ್ ಮಾಡಿದೆ. 2021-22ರ ಸಾಲಿನ ಹಂಗಾಮಿನಿಂದ ಗುತ್ತಿಗೆ ನೀಡಲು ಟೆಂಡರ್ ಕರೆಯಲು ಸಿದ್ಧತೆ ನಡೆಸಿದೆ.

    ಸರ್ಕಾರದ ನಿಲುವಿಗೆ ರೈತರು, ಹೋರಾಟಗಾರರ ತೀವ್ರ ವಿರೋಧ ವ್ಯಕ್ತವಾಗಿದೆ. ಖಾಸಗೀಕರಣಕ್ಕೆ ಕುಮಾರಸ್ವಾಮಿ ವಿರೋಧ, ಸಿಎಂಗೆ ಮನವಿ ಮಾಡಿದ್ದರೆ ಸರ್ಕಾರವೇ ಆಗಲಿ, ಖಾಸಗಿಯೇ ಆಗಲಿ ಒಟ್ಟಿನಲ್ಲಿ ಕಾರ್ಖಾನೆ ಆರಂಭವಾಗಬೇಕು ಎನ್ನುವುದು ಸುಮಲತಾ ಅವರ ಮನವಿ.

  • ಸಕ್ಕರೆ, ಹತ್ತಿಗಾಗಿ ಭಾರತದ ಕದ ತಟ್ಟಿದ ಇಮ್ರಾನ್ ಖಾನ್

    ಸಕ್ಕರೆ, ಹತ್ತಿಗಾಗಿ ಭಾರತದ ಕದ ತಟ್ಟಿದ ಇಮ್ರಾನ್ ಖಾನ್

    ನವದೆಹಲಿ: ಪಾಕಿಸ್ತಾನ ಹತ್ತಿ ಮತ್ತು ಸಕ್ಕರೆಗಾಗಿ ಭಾರತದ ಕದ ತಟ್ಟಿದೆ. ಇಮ್ರಾನ್ ಖಾನ್ ಸರ್ಕಾರ ಭಾರತದ ಜೊತೆ ವ್ಯಾಪಾರಕ್ಕೆ ಮುಂದಾಗಿದ್ದು, ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

    2021 ಜೂನ್ ವರೆಗೆ ಭಾರತದ ಹತ್ತಿ ಆಮದು ಮಾಡಿಕೊಳ್ಳಲು ಪಾಕಿಸ್ತಾನ ಮುಂದಾಗಿದೆ. ಶೀಘ್ರದಲ್ಲಿಯೇ ಸಕ್ಕರೆ ಆಮದು ಮಾಡಿಕೊಳ್ಳುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪಾಕ್ ಮಾಧ್ಯಮಗಳ ವರದಿ ಮಾಡಿವೆ.

    ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ತಜ್ಞರ ವರದಿ ಸಲ್ಲಿಕೆಯ ಬೆನ್ನಲ್ಲೇ ಇಮ್ರಾನ್ ಖಾನ್ ಸರ್ಕಾರ ಭಾರತದ ಜೊತೆ ವ್ಯಾಪರಕ್ಕೆ ಮುಂದಾಗಿದೆ. ಸಕ್ಕರೆ ಮತ್ತು ಹತ್ತಿಗೆ ಪಾಕಿಸ್ತಾನ ಕೊರತೆ ಅನುಭವಿಸುತ್ತಿದ್ದು. ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳೋದು ದುಬಾರಿ ಆಗಲಿದೆ. ಹಾಗಾಗಿ ತನ್ನ ಒಣಜಂಬವನ್ನ ಬದಿಗಿರಿಸಿ ಭಾರತದ ಮುಂದೆ ತಲೆ ಬಾಗಿದೆ.

    19 ತಿಂಗಳಿನಿಂದ ವ್ಯಾಪಾರ ಸ್ಥಗಿತ
    ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಎಲ್ಲರಿಗೂ ತಿಳಿದಿರುವ ವಿಚಾರ. 2019ರಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದುಗೊಳಿಸಲಾಗಿತ್ತು. ಆದ್ರೆ ಪಾಕಿಸ್ತಾನ ಈ ವಿಷಯದಲ್ಲಿ ಮೂಗಿ ತೂರಿಸಿ ವಿಶ್ವದಲ್ಲಿ ನಗೆಪಾಟಲಾಗಿತ್ತು. ಆರ್ಟಿಕಲ್ 370 ರದ್ದುಗೊಳಿಸಿದ್ದ ದಿನದಿಂದ ಪಾಕಿಸ್ತಾನ ಭಾರತದಿಂದ ಸಕ್ಕರೆ ಮತ್ತು ಹತ್ತಿಯನ್ನ ಆಮದು ಮಾಡಿಕೊಳ್ಳೋದನ್ನ ನಿಲ್ಲಿಸಿತ್ತು.

    ಇದೀಗ ಆರ್ಥಿಕ ತಜ್ಞರ ಸಲಹೆ ಮೇರೆಗೆ ಭಾರತದ ಮುಂದೆ ಬಂದು ಪಾಕಿಸ್ತಾನ ನಿಂತಿದೆ. ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನದ ವಸ್ತುಗಳ ಮೇಲೆ ಶೇ.200ರಷ್ಟು ಆಮದು ಶುಲ್ಕ ವಿಧಿಸುತ್ತಿದೆ. ಇದರ ಜೊತೆಗೆ ಪಾಕಿಸ್ತಾನದ ಜೊತೆಗಿನ ಹಲವು ವ್ಯವಹಾರಿಕ ಸಂಬಂಧವನ್ನ ಕಡಿತಗೊಳಿಸಿಕೊಂಡಿತ್ತು.